ಎಲೆಕ್ಷನ್ನು: ಸಿದ್ದರಾಮ ತಳವಾರ, ದಾಸ್ತಿಕೊಪ್ಪ
ಕೇರಿಯ ಜನ ಕಂಗಾಲಾಗಿದ್ದರು. ಗೋಡೆಯಲ್ಲಿದ್ದ ಗೂಟ ಸುಮ್ಮನೆ ತೆಗೆದು ಅದೆಲ್ಗೋ ಬಡ್ಕೊಂಡ್ರು ಅನ್ನೋ ಹಾಗೆ ಇದೆಲ್ಲಾ ನಮ್ಗೆ ಬೇಕಿತ್ತಾ ಅಂತ ಕೇರಿಯ ಹೆಣ್ಣು ಮಕ್ಕಳೆಲ್ಲಾ ಗುಸು ಗುಸು ಪಿಸು ಪಿಸು ಮಾತಾಡಲು ಶುರು ಮಾಡಿದ್ದರು. ಇರೋದಕ್ಕೆ ಸರಿಯಾದ ಸೂರಿಲ್ಲಾ ಕುಡಿಯೋದಕ್ಕೆ ನೀರಿದ್ರೂ ಕೇರಿಯಾಚೆ ಹೋಗಿ ಹಿಡ್ಕೊಂಡ ಬರೋ ಧೈರ್ಯ ಇಲ್ಲಾ. ಮನೇಲಿರೋ ಮುಟಗಿ ಹಿಟ್ಟು ಖಾಲಿ ಆಗಿರೋದ್ರಿಂದ ಮೂರು ದಿನದ ತಂಗಳ ರೊಟ್ಟಿಯನ್ನೇ ನೆನೆಸಿಕೊಂಡು ತಿನ್ನೋ ಟೈಮ್ ಬಂದೈತಿ. ಕೂಸುಗಳಿಗೆ ಹಾಲು ಕುಡಿದೇವಂದ್ರೂ ನಮ್ಮ ಹೊಟ್ಟೆಗ್ ಹಿಟ್ಟಿದ್ರೇ ತಾನೇ … Read more