ಹೋರಿ ತಂದ ಕಥೆ: ಅಶೋಕ್ ಕುಮಾರ್ ವಳದೂರ್ (ಅಕುವ)
"ಸುಧೀರಣ್ಣ ತೀರಿ ಕೊಂಡ" ಅಮ್ಮನ ಫೋನ್ ಬಂದಾಗ ತುಂಬಾ ಸಂಕಟ ಪಟ್ಟಿದ್ದೆ. ಬೇಸಾಯವನ್ನು ಪ್ರೀತಿಸಿದ ವ್ಯಕ್ತಿತ್ವ ಅದು.ಬಿಸಿಲು ಮಳೆಗಳು ಎಂದೂ ಆತನನ್ನು ಮುಟ್ಟಿದ್ದಿಲ್ಲ. ಚಳಿ ತಟ್ಟಿದ್ದಿಲ್ಲ. ಅದು ಮನೆಯ ಬೇಸಾಯದ ಕೋಣಗಳೇ ಆಗಲೀ ಕಂಬಳದ ಕೋಣಗಳೇ ಆಗಲಿ ಈತನಿಗೆ ಬಗ್ಗದೆ ಇರಲಿಲ್ಲ. ಕಂಬಳದ ಕೋಣನ ಕೊಂಬು ತಲೆಯ ನೆತ್ತಿಗೆ ಇರಿದಾಗ ರಕ್ತ ಹೋದದ್ದು ತಿಳಿಯಲಿಲ್ಲ. ಲೇಪದಲ್ಲೇ ಗುಣವಾದ ಗಾಯ ಮತ್ತೆ ಒಳಗೊಳಗೆ ಇಳಿದದ್ದು ಗೊತ್ತಾಗಲಿಲ್ಲ. ಮೊದ ಮೊದಲು ತಲೆನೋವಿದ್ದ ಅವರು ಮಣಿಪಾಲ ಆಸ್ಪತ್ರೆ ಸೇರಿದಾಗ ಪರಿಸ್ಥಿತಿ … Read more