ಕಾಣದ ಕರಡಿ: ದೊಡ್ಡಮನಿ.ಎಂ.ಮಂಜುನಾಥ

ನೂರೆಂಟು ತೂತು ಬಿದ್ದು ಹರಿದ ಬನಿಯನ್ ಹಾಕಿಕೊಂಡು, ಕಿತ್ತು ಹೋದ ಹವಾಯಿ ಚಪ್ಪಲಿಗೆ ಪಿನ್ನು ಹಾಕುತ್ತ, ಮನೆಯ ಅಂಗಳದಲ್ಲಿ ಕೂತಿದ್ದ ಬಳೆಗಾರ ಶಿವಪ್ಪನಿಗೆ ಕುಂಟ್ಲಿಂಗ ಒಂದೇ ಉಸಿರಿನಲ್ಲಿ ಕುಂಟಿಕೊಂಡು ತನ್ನತ್ತ  ಓಡಿ ಬರುವುದನ್ನು  ಕಂಡೊಡನೆ ಮನಸಿಗೆ  ಗಲಿಬಿಲಿಯಾಯಿತು. ಎದೆ ಉಸಿರು ಬಿಡುತ್ತ ನಿಂತ ಕುಂಟ ಲಿಂಗನನ್ನು ಎದ್ದು ನಿಂತು ಏನಾಯ್ತೋ ಕುಂಟ್ಯ ಹಿಂಗ್ಯಾಕ್ ಓಡಿ ಬಂದಿ ? ಎನ್ನುವಷ್ಟರಲ್ಲಿ ಸರೋಜಳ ಸಾವಿನ ವಿಷಯವನ್ನು ಸರಾಗವಾಗಿ ಕುಂಟ ಲಿಂಗ ಒದರಿಬಿಟ್ಟ, ಇದನೆಲ್ಲ ಕೇಳುತ್ತಾ ಕುಸಿದು ಬೀಳುವಷ್ಟು ನಿಶ್ಯಕ್ತನಾದರು ತಡ ಮಾಡದೆ ಉಕ್ಕಿ ಬರುವ ದುಃಖವನ್ನು ನುಂಗಿ ಇವ ಹೇಳಿದ್ದೆಲ್ಲಾ ಸುಳ್ಳಾಗಲಿ ಎಂದು ಇದ್ದ ಬದ್ದ ದೇವರನೆಲ್ಲ ನೆನಪಿಸಿಕೊಳ್ಳುತ್ತಾ … Read more

ಶಿಫಾರಸು: ಜೆ.ವಿ.ಕಾರ್ಲೊ ಅನುವಾದಿಸಿರುವ ರಶ್ಯನ್ ಕತೆ

  ಜಿಲ್ಲಾ ಪ್ರಾಥಮಿಕ ಶಾಲೆಗಳ ನಿರ್ದೇಶಕರಾದ ಮಾನ್ಯ ಫ್ಯೋಡೊರ್ ಪೆಟ್ರೊವಿಚ್ ತಾವು ನ್ಯಾಯ-ನೀತಿಯ ಮನುಷ್ಯರೆಂದು ಭಾವಿಸಿದ್ದರು. ಅದೊಂದು ದಿನ ಅವರ ಕಛೇರಿಯೊಳಗೆ ಒಂದು ಕುರ್ಚಿಯ ಅಂಚಿನಲ್ಲಿ ಮುಳ್ಳು ಕಂಟಿಗಳ ಮೇಲೆಂಬಂತೆ ರೆಮೆನಿಸ್ಕಿ ಎಂಬ ಹೆಸರಿನ ಶಿಕ್ಷಕರೊಬ್ಬರು ಆಸೀನರಾಗಿದ್ದರು. ಅವರು ತೀರ ಉದ್ವಿಘ್ನ ಮನಸ್ಥಿತಿಯಲ್ಲಿದ್ದರು. “ಕ್ಷಮಿಸು, ರೆಮೆನಿಸ್ಕಿ.” ಫ್ಯೋಡೊರ್ ಪೆಟ್ರೊವಿಚ್ ಕತ್ತೆತ್ತುತ್ತಾ ದುಃಖತಪ್ತ ಸ್ವರದಲ್ಲಿ ಹೇಳಿದರು. “ನಿನಗೆ ನಿವೃತ್ತನಾಗದೆ ಬೇರೆ ದಾರಿಯೇ ಇಲ್ಲ. ನಿನಗೆ ಸ್ವರವೇ ಇಲ್ಲ! ನೀನು ಪಾಠ ಮಾಡುವುದಾದರೂ ಹೇಗೆ? ನನಗೆ ಅರ್ಥವಾಗುತ್ತಿಲ್ಲ. ಒಮ್ಮೆಲೇ ನಿನ್ನ … Read more

ದ್ವಂದ್ವ:ಸಂಯುಕ್ತಾ ಪುಲಿಗಲ್ ಬರೆದ ಸಣ್ಣಕತೆ

“ವಾಟ್ ಅಬೌಟ್ ಯುವರ್ ಪ್ರೋಪೋಸಲ್ಸ್ ಯಾ?”, ಡಬ್ಬಿಯಲ್ಲಿನ ಚಿತ್ರಾನ್ನದ ಸಾಸಿವೆ ಕಾಳನ್ನು ಸ್ಪೂನಿಂದ ಕೆದಕುತ್ತಾ ಕುಳಿತಿದ್ದ ಪೂರ್ಣಿಗೆ ತನ್ನ ಸಹೋದ್ಯೋಗಿ ನಿರ್ಮಲ ಕೇಳಿದ ಪ್ರಶ್ನೆ. ನಿರ್ಮಲ ತನ್ನ ಬಾಳಿನ ಸಾಕಷ್ಟು ಸಿಕ್ಕುಗಳನ್ನು ಈಗಾಗಲೇ ಬಿಡಿಸಿಕೊಂಡು ತಕ್ಕಮಟ್ಟಿಗೆ ನೆಮ್ಮದಿಯ ಬದುಕು ಸಾಗಿಸುತ್ತಿರುವವಳು. ತಮಿಳುನಾಡಿನಿಂದ ಬಂದ ಈಕೆಯದು ಒಟ್ಟು ಕುಟುಂಬ, ಶಾಲೆ ಕಲಿಯುವ ಮಗ, ಈಗೊಮ್ಮೆ ಆಗೊಮ್ಮೆ ಕರೆಮಾಡುವ ಯಜಮಾನ. ಇದು ನಿರ್ಮಲಳ ಪ್ರಪಂಚ. ಸ್ವಲ್ಪ ಮುಂಗೊಪಿಯಾಗಿದ್ದರೂ ಪೂರ್ಣಿಗಿವಳು ಒಳ್ಳೆಯ ಸಹೋದ್ಯೋಗಿ. ನಿರ್ಮಲಳ ಪ್ರಶ್ನೆಗೆ ಪೂರ್ಣಿ ಉತ್ತರಿಸುವಷ್ಟರಲ್ಲೇ ತನ್ನ ಹೊಳಪಿನ … Read more

ಶಾಪ (ಕೊನೆಯ ಭಾಗ):ಪಾರ್ಥಸಾರಥಿ ಎನ್.

ನೋಡಿದರೆ ಖಾಲಿ ಜಾಗ, ಎದುರು ರಾಮಕೃಷ್ಣಯ್ಯ ಹಾಗು  ಅವರ ಪತ್ನಿ ಜಾನಕಿ ನಿಂತಿದ್ದರು, ಅವರ ಎರಡು ವರ್ಷದ ಮಗು  ಅಲ್ಲೆಲ್ಲ ಓಡಿಯಾಡುತ್ತ ಆಡಿಕೊಳ್ಳುತ್ತಿತ್ತು. “ನೋಡು  ಈ ಸೈಟ್ ನಮ್ಮದಾಗುವ ಹೊತ್ತಿಗೆ ಸಾಕು ಸಾಕಾಯಿತು, ಎಂತ ಕಾಲ ಬಂದಿತು, ನನ್ನಿಂದ ಅಡ್ವಾನ್ಸ್ ಹಣವನ್ನು ಪಡೆದ   ಅ ದಲ್ಲಾಳಿ ನಂತರ ಸೈಟ್ ಬೇರೆ ಯಾರಿಗೊ ಆಗಿದೆ ಅನ್ನುತ್ತಾನಲ್ಲ, ಹಾಗೆಂದು ಇಲ್ಲಿ ಸೈಟ್ಗಳಿಗೆ ಅಂತಾ ಬೆಲೆ ಏನು ಇಲ್ಲ, ನಮ್ಮ ಹತ್ತಿರ ನಾಟಕವಾಡಿ ಸೈಟಿನ ಬೆಲೆ ಏರಿಸಲು ಪ್ರಯತ್ನಿಸಿದ, ಹೇಗೊ … Read more

ಶಾಪ (ಭಾಗ-2):ಪಾರ್ಥಸಾರಥಿ ಎನ್.

[ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ] ಲಕ್ಷ್ಮೀಶನ ಮುಖ ಸ್ವಲ್ಪ ಗಂಭೀರವಾಯಿತು. ಅವನು ಏನು ಉತ್ತರ ಕೊಡುತ್ತಿದ್ದನೋ, ಅಷ್ಟರಲ್ಲಿ ಅವನ ತಂದೆ ಶ್ರೀನಿವಾಸ  ಬಂದನು.   ಒಳಗೆ ಬರುವಾಗಲೇ, "ದಯಮಾಡಿ ಕ್ಷಮಿಸಿ, ಬೇಗಬರುವೆ ಅಂತ ಹೋಗಿ ನಿಮ್ಮನ್ನು ಕಾಯಿಸಿದೆ, ನಿಮಗೆ ತೊಂದರೆಯಾಯಿತು ಅನ್ನಿಸುತ್ತೆ" ಅಂದವನು ಅಲ್ಲೆ ಕುಳಿತಿದ್ದ ಅವನ ಮಗನತ್ತ, ಅವನ ಅಮ್ಮನತ್ತ, ನನ್ನತ್ತ ನೋಡಿ, "ಇವನ ಹತ್ತಿರ ಮಾತನಾಡುತ್ತಿದ್ದಿರಾ, ನಿಮಗೆ ಏನು ಬೇಸರವಾಗಲಿಲ್ಲ ತಾನೆ?" ಅಂದನು ಆತಂಕದಿಂದ. ನಾನು ನಕ್ಕುಬಿಟ್ಟೆ. "ಬನ್ನಿ ಕುಳಿತುಕೊಳ್ಳಿ, ಯಾವ ಆತಂಕವು ಬೇಡ, ನನಗೆ ಯಾವ ಬೇಸರವು ಇಲ್ಲ, … Read more

ಶಾಪ (ಭಾಗ-೧):ಪಾರ್ಥಸಾರಥಿ ಎನ್

ನನಗೆ ಆ ಮನೆಗೆ ಬರುವ ಅಗತ್ಯವೇನಿರಲಿಲ್ಲ. ಊರಹೊರಗಿನ ದುರ್ಗಾ ದೇವಾಲಯದಲ್ಲಿ ಕುಳಿತಿದ್ದ ನನ್ನನ್ನು ಅವನಾಗಿಯೇ ಮಾತನಾಡಿಸಿದ. ಅವನ ಹೆಸರು ಶ್ರೀನಿವಾಸ. "ಎಲ್ಲಿಂದ ಬರುತ್ತಿದ್ದೀರಿ?" ಅವನು ನನ್ನನ್ನು ಕುತೂಹಲದಿಂದ ಪ್ರಶ್ನಿಸಿದ. ಪ್ರಶ್ನೆ ಸರಿಯಾಗಿಯೆ ಇತ್ತು, ಹಾಗಾಗಿ ಉತ್ತರಿಸಿದೆ "ಉತ್ತರದ ಹರಿದ್ವಾರದಿಂದ ಹೊರಟವನು ಹಾಗೆಯೆ ಸುತ್ತುತ್ತ ಬಂದೆ, ಈಗ ನಿಮ್ಮ ಊರಿಗೆ ಬಂದಿರುವೆ". ಮತ್ತೆ ಕುತೂಹಲದಿಂದ ಪ್ರಶ್ನಿಸಿದ, "ರಾತ್ರಿ ಉಳಿಯುವ ಏರ್ಪಾಡು ಹೇಗೆ, ಎಲ್ಲಿ ಇಳಿದುಕೊಳ್ಳುವಿರಿ?" ನನಗೆ ಆ ರೀತಿಯ ಪ್ರಶ್ನೆಗಳು ಕಾಡುತ್ತಲೆ ಇರಲಿಲ್ಲ. ಇರುವೆನು ಎನ್ನುವಾಗ ರಾತ್ರಿಯೇನು, ಹಗಲೇನು, ಮುಂದಿನ … Read more

ದೇವರು ಮೆಚ್ಚಿದ ಭಕ್ತ: ಸುಬ್ರಹ್ಮಣ್ಯ ಹೆಗಡೆ

ಅದೊಂದು ಊರು, ಆ ಊರಿನಲ್ಲಿ ಒಂದು ದೇವಸ್ಥಾನ. ಆ ದೇವಸ್ಥಾನಕ್ಕೆ ಒಬ್ಬ ದೇವರು. ಎಲ್ಲಾ ಊರುಗಳ ಎಲ್ಲ ದೇವರುಗಳಂತೆ ಭಕ್ತಗಣಗಳಿಂದ ಸೇವೆ ಮಾಡಿಸಿಕೊಂಡು, ಹಣ್ಣು ಕಾಯಿಗಳನ್ನು ತನ್ನ ಹೆಸರಿನಲ್ಲಿ ಅರ್ಪಿಸಿ ಭ(ಭಂ)ಜಿಸುತ್ತಿರುವ ಜನಸಮೂಹವನ್ನು ಕಂಡು ಒಳಗೊಳಗೆ ನಗುತ್ತಿರುವ ಸರ್ವಜ್ಞ, ಸರ್ವಾಂತರ್ಯಾಮಿ, ಸರ್ವಶಕ್ತ ಆತ. ಎಲ್ಲವೂ ಹೀಗೇ ಇರಲು, ಕಾಲಚಕ್ರ ಸುಮ್ಮನೇ ಉರುಳುತ್ತಿರಲು, ದೇವನಿಗೆ ಒಂದು ದಿನ ಜಗಜ್ಜನಿತವಾದ ತನ್ನ ಮಾಮೂಲು ಮೂಕ ಧಾಟಿಯನ್ನು ಮೀರಿ ತನ್ನೂರಿನ ಒಬ್ಬ ಶ್ರೀಸಾಮಾನ್ಯನ ಬಳಿ ಒಂದಿಷ್ಟು ಸಮಯ ಕಳೆಯುವ ಮನಸ್ಸು ಮೂಡಿತು. … Read more

ಪರಕಾಯ ಪ್ರವೇಶದ ಒಂದು ಪ್ರಸಂಗ: ಶೈಲಜಾ

ಮನ ಕಲಕ್ಕಿತ್ತು. ನಿತ್ಯವೂ ದಿನಪತ್ರಿಕೆಯಲ್ಲಿ ಹೆಣ್ಣುಮಕ್ಕಳ ಮಾನಪಹರಣವಾಗುವ ಸುದ್ದಿಯನ್ನು ಓದುತ್ತ ಇದಕ್ಕೆಲ್ಲ ಪರಿಹಾರವೇ ಇಲ್ಲವೆ ಎಂದು ನನ್ನೊಳಗೇ ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಹುಟ್ಟುತ್ತಲೇ ಇದ್ದವು. ಮನಸ್ಸಮಾಧಾನ ಕದಡಿ ಹೋಗಿತ್ತು. ಕೊಂಚ ಉಪಶಮನವಾಗಲೆಂದು ಅಮ್ಮನ ಬಳಿಯಲ್ಲಿದ್ದ “ಪಾಂಡವ ಪ್ರತಾಪ” ತಂದು ಓದತೊಡಗಿದೆ. ಹಾಗಂತ ಇಡೀ ದಿನ ಓದಲು ಕುಳಿತರಾಗುತ್ತದೆಯೆ! ಕರ್ತವ್ಯ ಕೈಬೀಸಿ ಕರೆಯಿತು! ಪುಸ್ತಕ ಬದಿಗಿಟ್ಟು ಕೆಲಸವನ್ನೆಲ್ಲಾ ಮುಗಿಸುವ ಹೊತ್ತಿಗೆ ರಾತ್ರಿ ಗಂಟೆ  ಹತ್ತು!  ಸರಿ, ಇನ್ನು ಮಲಗಿದಿದ್ದರೆ ನಾಳೆ ಏಳಲು ಕಷ್ಟವಾಗುವುದು,  ಬೆಳಿಗ್ಗೆ ಬೇಗ ಎದ್ದು ಬೇಗ … Read more

ಅಬಲೆ ಮಂಜುಳಾ: ರುಕ್ಮಿಣಿ ಎನ್.

ಸಂಜೆ ಆರೂ ಮುಕ್ಕಲಾಗಿತ್ತು. ಮಂಜುಳಾಳ ಅತ್ತೆ ಟಿ.ವಿಯಲ್ಲಿ ಚರಣದಾಸಿ ಸಿರಿಯಲ್ ನೋಡುತ್ತಿದ್ದಳು. ಮಂಜುಳಾ, ಸಂಜೆಯಾಯ್ತು. ಕಸ ಗುಡಿಸಿ, ಅಂಗಳಕೆ ನೀರು ಹಾಕಿ ದೀಪ ಹಚ್ಚು ಎಂದು ಕೂಗುತ್ತಿದ್ದರು. ಆ ದೊಡ್ಡದಾದ ಧ್ವನಿ ಕೇಳಿ ಕಪ್ಪು ಮೋಡದಂತೆ ಹೆಪ್ಪುಗಟ್ಟಿದ್ದ ಮಂಜುಳಾಳ ದುಃಖದ ಕಟ್ಟೆಯೊಡೆದು ಬಿಟ್ಟಿತ್ತು.  ಕಿಟಕಿಯ ಪಕ್ಕ ಕೂತು ಆ ಕಪ್ಪು ಮೋಡವನ್ನೇ ದಿಟ್ಟಿಸುತಿದ್ದ ಅವಳ ಕಣ್ಣುಗಳಿಂದ ಗಂಗೆ ಹರಿಯುತ್ತಲೇ ಇದ್ದಳು.  ಗಂಟಲೆಲ್ಲ ಕಟ್ಟಿ ಹೋಗಿತ್ತು. ಕೂಗಿದರೂ ಓಗೊಡದಿರುವಷ್ಟು ಆಕೆ ಕುಗ್ಗಿ ಹೋಗಿದ್ದಳು. ಅಂತಾಹದೇನಾಗಿತ್ತು ಅವಳಿಗೆ ಅಂತೀರಾ? ಬನ್ನಿ, … Read more

ಮೂಕ ಕರು: ಸಂತು

  "ಲೋ ಮಗಾ, ಬಿಸಿಲು ನೆತ್ತಿಗೇರ್ತಾ ಅದೆ, ಕರಾನ ಜಮೀನ್ ತಾವ ಹೊಡ್ಕಂಡ್ ಹೋಗಿ ಮರಕ್ ಕಟ್ಟಾಕಿ ಮೇಯಕ್ ಬುಡು. ಹಾಂ… ಹೋಗಕ್ ಉಂಚೆ ಮನೆತಾವ್ ಒಸಿ ನೀರು ಕುಡುಸ್ಬುಡು. ಬರದ್ ಹೊತ್ತಾಗ್ಬೋದು. ಇಸ್ಕೂಲಿಂದ ಬಂದ್ ಮ್ಯಾಕೆ ಮತ್ತೆ ಹೊಡ್ಕಂಡ್ ಬಂದ್ ಕೊಟ್ಟಿಗೇಲಿ ಕಟ್ಟಾಕ್ ಬುಡು. ಮರಿಬ್ಯಾಡ" ಪೇಟೆಗೆ ಹೊರಟಿದ್ದ ನಮ್ಮಪ್ಪ ಕೂಗಿ ಹೇಳಿದರು. ಒಲ್ಲದ ಮನಸ್ಸಿಂದ ನಾ "ಹೂಂ…..ಸರಿ" ಅಂದಿದ್ದು ಅಪ್ಪಂಗೆ ಕೇಳಿಸಲೇ ಇಲ್ಲ.  ನಮ್ಮದೊಂದು ಚಿಕ್ಕ ಹಳ್ಳಿ. ನಮ್ಮ ಜಮೀನಿದ್ದದ್ದು ಹಳ್ಳಿಯಿಂದ ಹೊರಗೆ. ಮೂರು … Read more

ತಮಾಷೆ: ಮಾಲತಿ ಶೆಣೈ

“ಒಂದು ರೊಟ್ಟಿಯ ತುಣುಕು ಕೊಡಿ” “ಏನಾದರೂ ತಿನ್ನಲು ಕೊಡಿ " ಆಕೆ ದೈನ್ಯತೆಯಿಂದ ಬೇಡಿದಳು. ಗಟ್ಟಿ ಕಲ್ಲಿನ ಅಂಗಳದ ಸುಡು ಬಿಸಿಲಿನಲ್ಲಿ ನಿಂತಿದ್ದಳು ಹುಡುಗಿ. ಮೈಯಲ್ಲಿ ಮಾಂಸದ ಹೆಸರೇ ಇರಲಿಲ್ಲ, ಎಲುಬಿನ ಗೂಡು. ಮಕ್ಕಳಿಗೆ  ಅನಾಟಮಿಯ  ಪಾಠ ಕಲಿಸುವಷ್ಟು ಅವಳ ಎಲುಬು ನಿಚ್ಚಳವಾಗಿ ಮೈಯಿಂದ ಕಾಣುತ್ತಿದ್ದವು. “ಅಮ್ಮ ಅವಳಿಗೆ ಸ್ವಲ್ಪ ತಿಂಡಿ ಕೊಡು. ನಿನ್ನೆಯಿಂದ ತಿಂಡಿಗೋಸ್ಕರ ಆಕೆ ಬೀದಿ ಬೀದಿ ಅಲೆಯುತ್ತಿದ್ದಾಳೆ’ ಕನಿಕರದಿಂದ ತನ್ನ ಅಮ್ಮನಿಗೆ ಹೇಳಿದ ಅದಿಲ್. “ಹೋಗಾಚೆ”- ಅಮ್ಮ ಗಟ್ಟಿ ದನಿಯಿಂದ ಗದರಿದರು. “ನಮ್ಮ … Read more

ಹಸ್ತ ಬಲಿ: ಚೀಮನಹಳ್ಳಿ ರಮೇಶಬಾಬು

ಹಸ್ತ ಮಳೆ ಕಾಲಿಟ್ಟಾಗಿನಿಂದ ಒಂದು ದಿನವೂ ಮಳೆ ತಪ್ಪಿದ್ದಲ್ಲ. ಮುಂಜಾನೆ ಚಿಕ್ಕ ಚಿಕ್ಕ ಹತ್ತಿಯ ತುಂಡುಗಳಂತೆ ಗಾಳಿಯಲ್ಲಿ ತೇಲುತ್ತಾ ಸಾಗುವ ಮೋಡಗಳು ಬಿಸಿಲು ಏರಿದಂತೆಲ್ಲಾ ಸಾಂದ್ರವಾಗುತಾ, ಸೂರ್ಯ ಪಶ್ಚಿಮದ ಕಡೆ ಜಾರಿದಂತೆಲ್ಲಾ ಹಿಮಾಲಯದ ಬೆಟ್ಟಗಳ ರೀತಿ ಬೃಹದಾಕಾರ ತಳೆದು, ಪಡುವಣದ ಕೆನ್ನೆ ಕೆಂಪಾಗಾಗುತ್ತಿದ್ದಂತೆ ಕನಿಷ್ಠವೆಂದರೆ ಒಂದು ಹದ ಮಳೆಯಾಗುವುದು ಹಸ್ತ ಮಳೆ ಕಾಲಿಟ್ಟ ಗಳಿಗೆಯಿಂದ ನಡೆದು ಬಂದ ಮಾಮೂಲಿ ಕ್ರಿಯೆ. ಇನ್ನು ಅದರ ಸಮಯಪಾಲನೆಯೋ ಖಚಿತವಾಗಿ ಹೆಚ್ಚು ಕಮ್ಮಿ ಅದೇ ವೇಳೆಗೆ ಸುರಿಯುವ ಅದೂ ಕೂಡ ಒಂದು … Read more

ಮುಸುಕಿನಿಂದ ಬೆಳಕಿಗೆ: ಮಮತಾ ಕೀಲಾರ್

  ತುಂತುರು ಮಳೆ, ಛಳಿ ಗಾಳಿಯಲ್ಲಿ ಒಂದು ಸಣ್ಣ ಬೆಟ್ಟದ ತಪ್ಪಲಲ್ಲಿರುವ ಕೋಟೆಯಂತಿರುವ ಆಶ್ರಮಕ್ಕೆ ಬಂದು ತಲುಪಿದಳು. ಬಹಳಷ್ಟು ಕೊತುಹಲ,ಅಂಜಿಕೆ ಹಾಗೂ ಏನೋ ಅಸ್ಪಷ್ಟ ತವಕ ಅವಳನ್ನು ಕಾಡುತಿತ್ತು. ಬಹಳ ದಿನಗಳ ಆಸೆ, ಹಲವು ಘರ್ಷಣೆಗಳ ಅಂತ್ಯ ಈ ಪ್ರಯಾಣವಾಗಿತ್ತು.ಅಲ್ಲಿಯ ಹೆಬ್ಬಾಗಿಲಿನತ್ತ ಬಂದಾಗ, ಒಂದು ಕ್ಷಣ ಹಿಂದಿನ ನೆನಪಾಯಿತು. ಧ್ಯಾನ, ಪ್ರಾಣಾಯಾಮ, ಗುರುವಿನ ಭಾವ ಚಿತ್ರ,ಪವಾಡಗಳ ಬಗ್ಗೆ ಪ್ರವಚನ, ಭಜನೆಗಳಲ್ಲಿ ತಲ್ಲೀನವಾದ ಕ್ಷಣಗಳೆಲ್ಲಾ ಕಣ್ಣಮುಂದೆ ಒಮ್ಮೆ ಹಾದು ಹೋದವು. ಅಸಹಾಯಕತೆಗೆ ಅಂತ್ಯ ಹೇಳುವ ಕ್ಷಣ ಬಂತೆಂದು ಹರ್ಷಿಸಿದಳು. … Read more

ಮಳೆ, ಕೆರೆ ಮತ್ತು ಕ್ಯಾಬು: ಚೀಮನಹಳ್ಳಿ ರಮೇಶಬಾಬು

ಅದೊಂದು ಜಲಪ್ರಳಯ. ಸಂಜೆ ನಾಲ್ಕು ಗಂಟೆಗೆಲ್ಲಾ ಅಕ್ಷರಶಃ ಕತ್ತಲಾಗಿಬಿಟ್ಟಿತ್ತು. ಸುತ್ತಲೂ ಒತ್ತರಿಸಿ ನಿಂತಿದ್ದ ಕಪ್ಪು ಮೋಡಗಳು ಒಂದು ಗುಹೆಯನ್ನೆ ಸೃಷ್ಟಿಸಿಬಿಟ್ಟಿದ್ದವು. ಬೋರೆಂದು ಸುರಿಯ ಹತ್ತಿದ ಮಳೆಯ ಹನಿಗಳು ಒಂದೇ ಸಮ ರಾತ್ರಿಯೆಲ್ಲಾ ಮುಂದುವರೆಯತೊಡಗಿದವು. ಮಳೆಯ ರಭಸಕ್ಕೆ ವಿದ್ಯುತ್ ಕಡಿತವಾಗಿ ಮಳೆಯ ರೌದ್ರ ನರ್ತನದ ಭೀಕರತೆಯು ಮತ್ತಷ್ಟು ಹೆಚ್ಚಾಗಿ ಇಡೀ ಹಳ್ಳಿ ರಾತ್ರಿ ಏಳು ಗಂಟೆಗೆಲ್ಲಾ ಇದ್ದದ್ದನ್ನು ಉಂಡು ಮುಸುಕೆಳೆದು ಮಲಗಿಬಿಟ್ಟಿತ್ತು. ಅಪ್ಪ “ಈ ಪಾಟಿ ಉಯ್ಯಾಕತ್ತಿದೆ… ಬೆಳಿಗ್ಗೆ ರೋಡಿಗಾಕಿದ ತೆನೇನ ಶಿವನೇ ಕಾಪಾಡ್ಬೇಕು” ಎನ್ನುತ್ತಾ ಮಗ್ಗುಲು ಬದಲಿಸಿದ. … Read more

ಹೀಗೊಂದು ಕಿಡ್ನಾಪ್:ಪಾರ್ಥಸಾರಥಿ ಎನ್

ಪ್ರಿಯಾ ಸೆಲ್ವರಾಜ್ ಬೆಂಗಳೂರಿನಲ್ಲಿಯೆ ಪ್ರಸಿದ್ದಳಾಗಿದ್ದ ಕ್ರಿಮಿನಲ್ ಅಡ್ವೊಕೇಟ್. ಆಕೆ ಕೊಲೆ ದರೋಡೆಗಿಂತ, ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂದಿಸಿದ ಕೇಸ್ ಗಳನ್ನು ಹ್ಯಾಂಡಲ್ ಮಾಡಿರುವುದೆ ಜಾಸ್ತಿ. ಅದಕ್ಕೆ ಕಾರಣ ಅದರಲ್ಲಿ ಬರುತ್ತಿದ್ದ ಹಣ.  ಆಕೆ ಕೋರ್ಟ್ ನಲ್ಲಿ ಗೆದ್ದ ಕೇಸುಗಳಿಗಿಂತ ಹೊರಗೆ ಸೆಟ್ಲ್ ಮಾಡಿರುವ ಕೇಸ್ ಗಳೆ ಜಾಸ್ತಿ ಇದ್ದವು, ತಾನು ತೆಗೆದುಕೊಂಡ ಕೇಸ್ ಗೆಲ್ಲಲು ಆಕೆ ಎಲ್ಲ ರೀತಿಯಲ್ಲು ಪ್ರಯತ್ನ ಪಡುತ್ತಿದ್ದಳು. ಎದುರು ಪಾರ್ಟಿಯನ್ನು ಹಿಡಿದು ಒಪ್ಪಿಸುವುದು, ಎದುರು ಪಾರ್ಟಿಯ ಲಾಯರ್ ಗಳನ್ನು ಹಣತೋರಿಸಿ ಆಸೆ … Read more

ಅವಳಿಗೆ ಸಾಸಿವೆ ಬೇಕಿಲ್ಲ, ಇವಳಿಗೆ ಸಾಸಿವೆ ಸಿಗಲಿಲ್ಲ: ಚೈತ್ರಾ.ಎನ್.ಭವಾನಿ

ಅರೆ ಬೆಂದ ಸೌದೆ ಅತ್ತ ಬೇಸಿಗೆಯ ಧಗೆಯಲ್ಲಿ ಮೆಲ್ಲಗೆ ವಿಧಾಯ ಹೇಳುತ್ತಿರೋ ಸೌದೆ ಸೀಳುಗಳಿಗೆ ಆರಲೇಬೇಕು ಅನ್ನೋ ಧಾವಂತವಿಲ್ಲ. ಸಣ್ಣಗೆ ಏಳುತಿದ್ದ ಬಿಳಿ ಮಿಶ್ರಿತ ಕಪ್ಪು ಹೊಗೆ ಮುಚ್ಚಿದ ಮೋಡದ ಪ್ರತಿಬಿಂಬ. ಎಂದಿನಂತೆಯೇ  ಮನೆಯ ಬಾಗಿಲಿಗೆ ಒರಗಿ ಮನೆಯ ಮುಂಭಾಗ ಕುಳಿತಿದ್ದ ಮುದುಕಮ್ಮನ ಮುಖದಲ್ಲಿ ಎಂದಿನಂತೆಯೇ ಅದೇ ನಿರ್ಲಿಪ್ತ ಭಾವಗಳು. ಅಲ್ಲೇ ಆಚೆಗೆ  ಕುರ್ಚಿ ಮೇಲೆ ಕುಳಿತಿದ್ದ ಮುದುಕಪ್ಪನಿಗೂ ಅಷ್ಟೇ, ಹೋದವನು ಹೋದ ಅನ್ನೋ ನಿರ್ಲಿಪ್ತ ಭಾವ!? ಸಂತಸದ ಪರಮಾವಧಿಯಲ್ಲಿ ಒಳಗೊಳಗೇ ಬಿಡಿಸಿಕೊಳ್ಳುತ್ತಿರುವ  ನಿರಾಳದ ಮೌನವೇ..!? ದೊರಕಿತೆ ಮುಕ್ತಿ …? … Read more

ಯಾವುದು ತಪ್ಪು? ಯಾವುದು ಸರಿ?: ಸುಬ್ರಹ್ಮಣ್ಯ ಹೆಗಡೆ

ಟಿಪ್ಪಣಿ: ನಮ್ಮ ಜೀವನವೇ ಹಾಗೆ ಅಲ್ಲವೇ, ಜೀವನಪೂರ್ತಿ ನಾವು ಬದುಕುವುದೇ ಹಾಗೆ. ನಮಗೆ ಯಾವುದು ಸರಿಯಾಗಿ ಕಾಣುತ್ತದೆಯೋ ಅದನ್ನೇ ನಾವು ಮಾಡುತ್ತೇವೆ. ನಮಗೆ ಸರಿಯಾಗಿ ಕಂಡ ನಿರ್ಧಾರ ನಮ್ಮೆದುರಲ್ಲಿರುವವರಿಗೆ ಸಹ ಸರಿಯಾಗಿ ಕಾಣಬೇಕೆಂದೇನಿಲ್ಲ. ಅಷ್ಟೇ ಅಲ್ಲ, ಸ್ವಲ್ಪ ಸಮಯದ ನಂತರ ನಮ್ಮ ನಿರ್ಧಾರ ನಮಗೇ ಸರಿಯಾಗಿ ಕಾಣದೇ ಹೋಗಬಹುದು. ಇಬ್ಬರ ನಡುವಿನ ಒಂದು ವಾದದಲ್ಲಿಯೇ ಆಗಲೀ, ಜೀವನದ ಅತಿಮುಖ್ಯ ನಿರ್ಧಾರಗಳಲ್ಲಿಯೇ ಆಗಲೀ, ಇನ್ನೊಬ್ಬರ ಬಗೆಗಿನ ಸರಿತಪ್ಪುಗಳ ನಿರ್ಣಯದಲ್ಲಿಯೇ ಆಗಲೀ, ಒಂದೇ ಸರಿ ಮತ್ತು ಒಂದೇ ತಪ್ಪು ಇರಲು … Read more

ಭಾಗಿರಥಿ:ಪಾರ್ಥಸಾರಥಿ ಎನ್

ಗಂಗೋತ್ರಿಯ ಹೋಟೆಲ್ 'ಮಂದಾಕಿನಿ'  ಕೊಠಡಿಯ ಕಿಟಿಕಿಯಿಂದ ಒಮ್ಮೆ ಹೊರಗಡೆ   ನೋಡಿದೆ,  ಹಸಿರು ಬೆಟ್ಟಗಳ ಸಾಲು.  ಕೊರೆಯುವ ಚಳಿ . ಬೆಂಗಳೂರಿನಂತಲ್ಲದೆ ಅಲ್ಲಿಯದೆ ಆದ ಸಂಸ್ಕೃತಿ , ಜನಗಳು,   ಮನೆಗಳು, ರಸ್ತೆ ಎಲ್ಲವು ಹೊಸ ಲೋಕವೊಂದನ್ನು ನನ್ನೊಳಗೆ ಸೃಷ್ಟಿಸಿತ್ತು. "ದ ಗ್ರೇಟ್ ಹಿಮಾಲಯನ್ ಟ್ರಕ್ಕಿಂಗ್ ಅಸೋಸಿಯೇಷನ್"  ನನ್ನ ಹಲವು ವರ್ಷಗಳ ಕನಸಿಗೆ ನಿಜ ರೂಪ ಕೊಡಲು ಸಿದ್ದವಾಗಿದ್ದ ಸಂಸ್ಥೆ.  ಚಿಕ್ಕವಯಸಿನಿಂದಲು ಬೆಟ್ಟಗುಡ್ಡ ಏರುವದರಲ್ಲಿ ಎಂತದೊ ಆಸಕ್ತಿ. ಹೈಸ್ಕೂಲಿನ ಎನ್ ಸಿ ಸಿ ಸಹ ಅದಕ್ಕೆ ಪೂರಕವಾಗಿತ್ತು. ಕಾಲೇಜಿನ … Read more

ವ್ಯೂಹ:ಬೆಳ್ಳಾಲ ಗೋಪಿನಾಥ ರಾವ್

  ೧. ಸಂಶಯ ೧೦.೦೪.೨೦೧೨  "ಮಂಜೂ ನನ್ನ ಡೈರಿ ತೆಗೆದ್ಯಾ…….???" "ಇಲ್ಲ ಸರ್, ನಾನ್ಯಾಕೆ ನಿಮ್ ಡೈರಿ ತೆಗೀಲಿ ಸಾರ್.." "ಅಲ್ಲಪ್ಪಾ .. ಇಲ್ಲೇ ಮೇಜಿನ ಮೇಲೇ ಇಟ್ಟಿದ್ದೆ, ನೀನೇನಾದರೂ ನೋಡಿದ್ಯಾ ಅಂತ ಕೇಳಿದ್ದೆ ಅಷ್ಟೆ. ಅದು ಬೇಕೇ ಬೇಕು ಎಲ್ಲಾ ಡಿಟೈಲ್ಸ್ ಬೇರೆ ಅದರಲ್ಲೇ ಬರೆದಿಟ್ಟಿದ್ದೆ. ಇನ್ನು ಸೀನಿಯರ್ ಕಲ್ಲೂರಾಮ್ ಕರೆದ್ರೆ ಮುಗ್ದೇ ಹೋಯ್ತು ನನ್ನ ಕಥೆ. ಎಲ್ಲಾದರೂ ಸಿಕ್ಕಿದ್ರೆ ಹೇಳು ಆಯ್ತಾ." ಕರೆಕರೆ ವಾಣಿ ಗುರ್ರ್ರೆಂತು. ಹೋಮ್ ಮಿನಿಸ್ಟರ್.ಅರ್ಥಾತ್ ನನ್ನ ಧರ್ಮ ಪತ್ನಿ… "ಏನ್ರೀ..??" "ಆಯ್ತು…. … Read more

ಹಣಬು ಸುಡುವುದು: ರಾಜೇಂದ್ರ ಶೆಟ್ಟಿ

ಹತ್ತು ವರ್ಷಗಳು! ಹೇಗೆ ಕಳೆದು ಹೋದವು. ಅಂದು, ಇಂತಹದೇ ಬಸ್ಸಿನಲ್ಲಿ ಮುಂಬಾಯಿಗೆ ಓಡಿ ಹೋಗಿದ್ದೆ. ಇಂದು ರಜಾದಲ್ಲಿ ಹಿಂದೆ ಬರುತ್ತಿದ್ದೇನೆ. ಈ ಹತ್ತು ವರ್ಷಗಳಲ್ಲಿ ಊರಲ್ಲಿ ಏನೇನು ಆಗಿದೆಯೋ, ಯಾರು ಇದ್ದಾರೋ, ಯಾರು ಇಲ್ಲವೋ ಯಾರಿಗೆ ಗೊತ್ತು. ಇಷ್ಟೊಂದು ದಿನಗಳಲ್ಲಿ ಊರಿಗೆ ಪತ್ರವನ್ನೇ ಬರೆದಿಲ್ಲ. ಊರಿಗೆ ಬರುವುದು ಸಹ ಯಾರಿಗೂ ಗೊತ್ತಿಲ್ಲ. ಜೀವನದಲ್ಲಿ ಎಷ್ಟೊಂದು ತಿರುವುಗಳು! ಅಪ್ಪನ ಕಿಸೆಯಿಂದ ಹಣ ತೆಗೆದಿದ್ದೆ –ಐಸ್ ಕ್ಯಾಂಡಿ ತಿನ್ನಲು. ಅದು ಕಳ್ಳತನವೆಂದು ಅಪ್ಪ ಎಷ್ಟು ಹೊಡೆದಿದ್ದ. ಆವಾಗ ನನ್ನ ವಯಸ್ಸಾದರೂ … Read more