ಮುಸುಕಿನಿಂದ ಬೆಳಕಿಗೆ: ಮಮತಾ ಕೀಲಾರ್

  ತುಂತುರು ಮಳೆ, ಛಳಿ ಗಾಳಿಯಲ್ಲಿ ಒಂದು ಸಣ್ಣ ಬೆಟ್ಟದ ತಪ್ಪಲಲ್ಲಿರುವ ಕೋಟೆಯಂತಿರುವ ಆಶ್ರಮಕ್ಕೆ ಬಂದು ತಲುಪಿದಳು. ಬಹಳಷ್ಟು ಕೊತುಹಲ,ಅಂಜಿಕೆ ಹಾಗೂ ಏನೋ ಅಸ್ಪಷ್ಟ ತವಕ ಅವಳನ್ನು ಕಾಡುತಿತ್ತು. ಬಹಳ ದಿನಗಳ ಆಸೆ, ಹಲವು ಘರ್ಷಣೆಗಳ ಅಂತ್ಯ ಈ ಪ್ರಯಾಣವಾಗಿತ್ತು.ಅಲ್ಲಿಯ ಹೆಬ್ಬಾಗಿಲಿನತ್ತ ಬಂದಾಗ, ಒಂದು ಕ್ಷಣ ಹಿಂದಿನ ನೆನಪಾಯಿತು. ಧ್ಯಾನ, ಪ್ರಾಣಾಯಾಮ, ಗುರುವಿನ ಭಾವ ಚಿತ್ರ,ಪವಾಡಗಳ ಬಗ್ಗೆ ಪ್ರವಚನ, ಭಜನೆಗಳಲ್ಲಿ ತಲ್ಲೀನವಾದ ಕ್ಷಣಗಳೆಲ್ಲಾ ಕಣ್ಣಮುಂದೆ ಒಮ್ಮೆ ಹಾದು ಹೋದವು. ಅಸಹಾಯಕತೆಗೆ ಅಂತ್ಯ ಹೇಳುವ ಕ್ಷಣ ಬಂತೆಂದು ಹರ್ಷಿಸಿದಳು. … Read more

ಮಳೆ, ಕೆರೆ ಮತ್ತು ಕ್ಯಾಬು: ಚೀಮನಹಳ್ಳಿ ರಮೇಶಬಾಬು

ಅದೊಂದು ಜಲಪ್ರಳಯ. ಸಂಜೆ ನಾಲ್ಕು ಗಂಟೆಗೆಲ್ಲಾ ಅಕ್ಷರಶಃ ಕತ್ತಲಾಗಿಬಿಟ್ಟಿತ್ತು. ಸುತ್ತಲೂ ಒತ್ತರಿಸಿ ನಿಂತಿದ್ದ ಕಪ್ಪು ಮೋಡಗಳು ಒಂದು ಗುಹೆಯನ್ನೆ ಸೃಷ್ಟಿಸಿಬಿಟ್ಟಿದ್ದವು. ಬೋರೆಂದು ಸುರಿಯ ಹತ್ತಿದ ಮಳೆಯ ಹನಿಗಳು ಒಂದೇ ಸಮ ರಾತ್ರಿಯೆಲ್ಲಾ ಮುಂದುವರೆಯತೊಡಗಿದವು. ಮಳೆಯ ರಭಸಕ್ಕೆ ವಿದ್ಯುತ್ ಕಡಿತವಾಗಿ ಮಳೆಯ ರೌದ್ರ ನರ್ತನದ ಭೀಕರತೆಯು ಮತ್ತಷ್ಟು ಹೆಚ್ಚಾಗಿ ಇಡೀ ಹಳ್ಳಿ ರಾತ್ರಿ ಏಳು ಗಂಟೆಗೆಲ್ಲಾ ಇದ್ದದ್ದನ್ನು ಉಂಡು ಮುಸುಕೆಳೆದು ಮಲಗಿಬಿಟ್ಟಿತ್ತು. ಅಪ್ಪ “ಈ ಪಾಟಿ ಉಯ್ಯಾಕತ್ತಿದೆ… ಬೆಳಿಗ್ಗೆ ರೋಡಿಗಾಕಿದ ತೆನೇನ ಶಿವನೇ ಕಾಪಾಡ್ಬೇಕು” ಎನ್ನುತ್ತಾ ಮಗ್ಗುಲು ಬದಲಿಸಿದ. … Read more

ಹೀಗೊಂದು ಕಿಡ್ನಾಪ್:ಪಾರ್ಥಸಾರಥಿ ಎನ್

ಪ್ರಿಯಾ ಸೆಲ್ವರಾಜ್ ಬೆಂಗಳೂರಿನಲ್ಲಿಯೆ ಪ್ರಸಿದ್ದಳಾಗಿದ್ದ ಕ್ರಿಮಿನಲ್ ಅಡ್ವೊಕೇಟ್. ಆಕೆ ಕೊಲೆ ದರೋಡೆಗಿಂತ, ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂದಿಸಿದ ಕೇಸ್ ಗಳನ್ನು ಹ್ಯಾಂಡಲ್ ಮಾಡಿರುವುದೆ ಜಾಸ್ತಿ. ಅದಕ್ಕೆ ಕಾರಣ ಅದರಲ್ಲಿ ಬರುತ್ತಿದ್ದ ಹಣ.  ಆಕೆ ಕೋರ್ಟ್ ನಲ್ಲಿ ಗೆದ್ದ ಕೇಸುಗಳಿಗಿಂತ ಹೊರಗೆ ಸೆಟ್ಲ್ ಮಾಡಿರುವ ಕೇಸ್ ಗಳೆ ಜಾಸ್ತಿ ಇದ್ದವು, ತಾನು ತೆಗೆದುಕೊಂಡ ಕೇಸ್ ಗೆಲ್ಲಲು ಆಕೆ ಎಲ್ಲ ರೀತಿಯಲ್ಲು ಪ್ರಯತ್ನ ಪಡುತ್ತಿದ್ದಳು. ಎದುರು ಪಾರ್ಟಿಯನ್ನು ಹಿಡಿದು ಒಪ್ಪಿಸುವುದು, ಎದುರು ಪಾರ್ಟಿಯ ಲಾಯರ್ ಗಳನ್ನು ಹಣತೋರಿಸಿ ಆಸೆ … Read more

ಅವಳಿಗೆ ಸಾಸಿವೆ ಬೇಕಿಲ್ಲ, ಇವಳಿಗೆ ಸಾಸಿವೆ ಸಿಗಲಿಲ್ಲ: ಚೈತ್ರಾ.ಎನ್.ಭವಾನಿ

ಅರೆ ಬೆಂದ ಸೌದೆ ಅತ್ತ ಬೇಸಿಗೆಯ ಧಗೆಯಲ್ಲಿ ಮೆಲ್ಲಗೆ ವಿಧಾಯ ಹೇಳುತ್ತಿರೋ ಸೌದೆ ಸೀಳುಗಳಿಗೆ ಆರಲೇಬೇಕು ಅನ್ನೋ ಧಾವಂತವಿಲ್ಲ. ಸಣ್ಣಗೆ ಏಳುತಿದ್ದ ಬಿಳಿ ಮಿಶ್ರಿತ ಕಪ್ಪು ಹೊಗೆ ಮುಚ್ಚಿದ ಮೋಡದ ಪ್ರತಿಬಿಂಬ. ಎಂದಿನಂತೆಯೇ  ಮನೆಯ ಬಾಗಿಲಿಗೆ ಒರಗಿ ಮನೆಯ ಮುಂಭಾಗ ಕುಳಿತಿದ್ದ ಮುದುಕಮ್ಮನ ಮುಖದಲ್ಲಿ ಎಂದಿನಂತೆಯೇ ಅದೇ ನಿರ್ಲಿಪ್ತ ಭಾವಗಳು. ಅಲ್ಲೇ ಆಚೆಗೆ  ಕುರ್ಚಿ ಮೇಲೆ ಕುಳಿತಿದ್ದ ಮುದುಕಪ್ಪನಿಗೂ ಅಷ್ಟೇ, ಹೋದವನು ಹೋದ ಅನ್ನೋ ನಿರ್ಲಿಪ್ತ ಭಾವ!? ಸಂತಸದ ಪರಮಾವಧಿಯಲ್ಲಿ ಒಳಗೊಳಗೇ ಬಿಡಿಸಿಕೊಳ್ಳುತ್ತಿರುವ  ನಿರಾಳದ ಮೌನವೇ..!? ದೊರಕಿತೆ ಮುಕ್ತಿ …? … Read more

ಯಾವುದು ತಪ್ಪು? ಯಾವುದು ಸರಿ?: ಸುಬ್ರಹ್ಮಣ್ಯ ಹೆಗಡೆ

ಟಿಪ್ಪಣಿ: ನಮ್ಮ ಜೀವನವೇ ಹಾಗೆ ಅಲ್ಲವೇ, ಜೀವನಪೂರ್ತಿ ನಾವು ಬದುಕುವುದೇ ಹಾಗೆ. ನಮಗೆ ಯಾವುದು ಸರಿಯಾಗಿ ಕಾಣುತ್ತದೆಯೋ ಅದನ್ನೇ ನಾವು ಮಾಡುತ್ತೇವೆ. ನಮಗೆ ಸರಿಯಾಗಿ ಕಂಡ ನಿರ್ಧಾರ ನಮ್ಮೆದುರಲ್ಲಿರುವವರಿಗೆ ಸಹ ಸರಿಯಾಗಿ ಕಾಣಬೇಕೆಂದೇನಿಲ್ಲ. ಅಷ್ಟೇ ಅಲ್ಲ, ಸ್ವಲ್ಪ ಸಮಯದ ನಂತರ ನಮ್ಮ ನಿರ್ಧಾರ ನಮಗೇ ಸರಿಯಾಗಿ ಕಾಣದೇ ಹೋಗಬಹುದು. ಇಬ್ಬರ ನಡುವಿನ ಒಂದು ವಾದದಲ್ಲಿಯೇ ಆಗಲೀ, ಜೀವನದ ಅತಿಮುಖ್ಯ ನಿರ್ಧಾರಗಳಲ್ಲಿಯೇ ಆಗಲೀ, ಇನ್ನೊಬ್ಬರ ಬಗೆಗಿನ ಸರಿತಪ್ಪುಗಳ ನಿರ್ಣಯದಲ್ಲಿಯೇ ಆಗಲೀ, ಒಂದೇ ಸರಿ ಮತ್ತು ಒಂದೇ ತಪ್ಪು ಇರಲು … Read more

ಭಾಗಿರಥಿ:ಪಾರ್ಥಸಾರಥಿ ಎನ್

ಗಂಗೋತ್ರಿಯ ಹೋಟೆಲ್ 'ಮಂದಾಕಿನಿ'  ಕೊಠಡಿಯ ಕಿಟಿಕಿಯಿಂದ ಒಮ್ಮೆ ಹೊರಗಡೆ   ನೋಡಿದೆ,  ಹಸಿರು ಬೆಟ್ಟಗಳ ಸಾಲು.  ಕೊರೆಯುವ ಚಳಿ . ಬೆಂಗಳೂರಿನಂತಲ್ಲದೆ ಅಲ್ಲಿಯದೆ ಆದ ಸಂಸ್ಕೃತಿ , ಜನಗಳು,   ಮನೆಗಳು, ರಸ್ತೆ ಎಲ್ಲವು ಹೊಸ ಲೋಕವೊಂದನ್ನು ನನ್ನೊಳಗೆ ಸೃಷ್ಟಿಸಿತ್ತು. "ದ ಗ್ರೇಟ್ ಹಿಮಾಲಯನ್ ಟ್ರಕ್ಕಿಂಗ್ ಅಸೋಸಿಯೇಷನ್"  ನನ್ನ ಹಲವು ವರ್ಷಗಳ ಕನಸಿಗೆ ನಿಜ ರೂಪ ಕೊಡಲು ಸಿದ್ದವಾಗಿದ್ದ ಸಂಸ್ಥೆ.  ಚಿಕ್ಕವಯಸಿನಿಂದಲು ಬೆಟ್ಟಗುಡ್ಡ ಏರುವದರಲ್ಲಿ ಎಂತದೊ ಆಸಕ್ತಿ. ಹೈಸ್ಕೂಲಿನ ಎನ್ ಸಿ ಸಿ ಸಹ ಅದಕ್ಕೆ ಪೂರಕವಾಗಿತ್ತು. ಕಾಲೇಜಿನ … Read more

ವ್ಯೂಹ:ಬೆಳ್ಳಾಲ ಗೋಪಿನಾಥ ರಾವ್

  ೧. ಸಂಶಯ ೧೦.೦೪.೨೦೧೨  "ಮಂಜೂ ನನ್ನ ಡೈರಿ ತೆಗೆದ್ಯಾ…….???" "ಇಲ್ಲ ಸರ್, ನಾನ್ಯಾಕೆ ನಿಮ್ ಡೈರಿ ತೆಗೀಲಿ ಸಾರ್.." "ಅಲ್ಲಪ್ಪಾ .. ಇಲ್ಲೇ ಮೇಜಿನ ಮೇಲೇ ಇಟ್ಟಿದ್ದೆ, ನೀನೇನಾದರೂ ನೋಡಿದ್ಯಾ ಅಂತ ಕೇಳಿದ್ದೆ ಅಷ್ಟೆ. ಅದು ಬೇಕೇ ಬೇಕು ಎಲ್ಲಾ ಡಿಟೈಲ್ಸ್ ಬೇರೆ ಅದರಲ್ಲೇ ಬರೆದಿಟ್ಟಿದ್ದೆ. ಇನ್ನು ಸೀನಿಯರ್ ಕಲ್ಲೂರಾಮ್ ಕರೆದ್ರೆ ಮುಗ್ದೇ ಹೋಯ್ತು ನನ್ನ ಕಥೆ. ಎಲ್ಲಾದರೂ ಸಿಕ್ಕಿದ್ರೆ ಹೇಳು ಆಯ್ತಾ." ಕರೆಕರೆ ವಾಣಿ ಗುರ್ರ್ರೆಂತು. ಹೋಮ್ ಮಿನಿಸ್ಟರ್.ಅರ್ಥಾತ್ ನನ್ನ ಧರ್ಮ ಪತ್ನಿ… "ಏನ್ರೀ..??" "ಆಯ್ತು…. … Read more

ಹಣಬು ಸುಡುವುದು: ರಾಜೇಂದ್ರ ಶೆಟ್ಟಿ

ಹತ್ತು ವರ್ಷಗಳು! ಹೇಗೆ ಕಳೆದು ಹೋದವು. ಅಂದು, ಇಂತಹದೇ ಬಸ್ಸಿನಲ್ಲಿ ಮುಂಬಾಯಿಗೆ ಓಡಿ ಹೋಗಿದ್ದೆ. ಇಂದು ರಜಾದಲ್ಲಿ ಹಿಂದೆ ಬರುತ್ತಿದ್ದೇನೆ. ಈ ಹತ್ತು ವರ್ಷಗಳಲ್ಲಿ ಊರಲ್ಲಿ ಏನೇನು ಆಗಿದೆಯೋ, ಯಾರು ಇದ್ದಾರೋ, ಯಾರು ಇಲ್ಲವೋ ಯಾರಿಗೆ ಗೊತ್ತು. ಇಷ್ಟೊಂದು ದಿನಗಳಲ್ಲಿ ಊರಿಗೆ ಪತ್ರವನ್ನೇ ಬರೆದಿಲ್ಲ. ಊರಿಗೆ ಬರುವುದು ಸಹ ಯಾರಿಗೂ ಗೊತ್ತಿಲ್ಲ. ಜೀವನದಲ್ಲಿ ಎಷ್ಟೊಂದು ತಿರುವುಗಳು! ಅಪ್ಪನ ಕಿಸೆಯಿಂದ ಹಣ ತೆಗೆದಿದ್ದೆ –ಐಸ್ ಕ್ಯಾಂಡಿ ತಿನ್ನಲು. ಅದು ಕಳ್ಳತನವೆಂದು ಅಪ್ಪ ಎಷ್ಟು ಹೊಡೆದಿದ್ದ. ಆವಾಗ ನನ್ನ ವಯಸ್ಸಾದರೂ … Read more

ನವೀನ ಕಹಾನಿ: ನವೀನ್ ಮಧುಗಿರಿ

ದೇವರ ದರ್ಶನ  ದೇವರಲ್ಲಿ ನನಗೆನಂಬಿಕೆಯಿಲ್ಲವಾದ್ದರಿಂದ, ಬೆಳಗೆದ್ದ ಕೂಡಲೇ ದೇವರ ಮುಖ ನೋಡಬೇಕು. ಬಲಕ್ಕೆ ಏಳಬೇಕು ಎಂಬೆಲ್ಲಾ ಯಾವ ನಿಯಮ ಮತ್ತು ಕಟ್ಟುಪಾಡುಗಳು ನನಗಿಲ್ಲ. ಇವತ್ತು ನಾನು ಮೇಲೆದ್ದಿದ್ದೇ  ಎಡಮಗ್ಗುಲಿನಲ್ಲಿ! ಎದ್ದು ಕೂತು ಕಣ್ ಬಿಡುವ ವೇಳೆಗೆ ಕಣ್ಣೆದುರಿಗಿದ್ದ ಅಮ್ಮಾ ಹೇಳಿದಳು- "ದೇವರ ಮುಖ ನೋಡು" ನಾನೆಂದೆ- "ಅಮ್ಮಾ, ನೀನೇ ನನ್ನ ದೇವರು!" ಭಾವುಕಳಾದ ಅಮ್ಮಾ ತನ್ನೆರಡೂ ಕೈಗಳಲ್ಲಿ ನನ್ನ ಕೆನ್ನೆ ಸವರಿ ನೆಟಿಗೆ ತೆಗೆದಳು!! ದೃಷ್ಟಿ-ಸೃಷ್ಟಿ  "ಮಾಂಸಾಹಾರಗಳನ್ನ ಯಾರು ಕೊಟ್ಟರೂ ತಿನ್ನಬೇಡ. ಎಲ್ಲಿಯೂ ತಿನ್ನಬೇಡ. ಅದು ನಮ್ಮ ಮನೆ ದೇವರಿಗೆ … Read more

ಮಳೆಯಲ್ಲಿ ಇಳೆಯ ತೊರೆದವಳು: ರಾಮಚ೦ದ್ರ ಶೆಟ್ಟಿ

ಮಳೆ ಜೊರ್ರನೆ ಸದ್ದು ಮಾಡುತ್ತ ಕ೦ಡಕ೦ಡಲ್ಲಿ ಬೀಳತೊಡಗಿತ್ತು….ಎಲ್ಲೆಲ್ಲು ಮಳೆ ಧಾರಾಕಾರ ಮಳೆ….ಅಲ್ಲಿ ಗಾಳಿಯಲ್ಲಿ ತೇಲಾಡುತ್ತ ಓಲಾಡುತ್ತ ನಶೆಯೇರಿದ ಕುಡುಕನ೦ತೆ ಬುವಿಯ ದಾರಿ ಹಿಡಿದು ಅವುಗಳು.. ಮಳೆಹನಿಗಳು ನಡೆದುಬರುತ್ತಿರುವ ನೋಟ ಮೋಹಕವಾಗಿತ್ತು..ಮಲೆನಾಡಿನಲ್ಲಿ ಈ ತರದ ಮಳೆ, ಮಳೆಗಾಲದಲ್ಲಿನ ಈ ತರದ ವಾತಾವರಣ ಹೊಸದೆ..? ಮನದಲ್ಲೆ ಕೇಳಿಕೊ೦ಡನವನು..ಈ ಪ್ರಶ್ನೆಯು ಹೊಸದಲ್ಲ..ಕಳೆದು ಹೋದ ಮಳೆಗಾಲದಲ್ಲೆಲ್ಲ ಮೂಡಿದ್ದು೦ಟು. !ಎದುರಿನ ಆಗು೦ಬೆ ಬೆಟ್ಟ ತನ್ನ ಅಗಾಧವಾದ ರೂಪರಾಶಿಯನ್ನು ಮಳೆಯ ಹಿ೦ದೆ ಮರೆಮಾಚಿದ್ದು ಅಸ್ಪಷ್ಟತೆಯ ದೃಷ್ಟಿ ನೋಟದ ಮೂಲಕ ಅರಿವಿಗೆ  ಬರುತ್ತಿದೆ..ನಿನ್ನೆ ಆಗು೦ಬೆಯ ರಸ್ತೆಯಲ್ಲಿ ದೊಡ್ಡ … Read more

ಅರ್ಥವಾಗದವರು:ಉಮೇಶ್ ದೇಸಾಯಿ

  ವಾಸುದೇವ ಸುಳ್ಳದ ಗಲಿಬಿಲಿಗೊಂಡಿದ್ದ ಅವನ ಸ್ಥಿತಿಗೆ ಕಾರಣ ಬೆಂಗಳೂರಿನ ಗಿಜಿಗುಡುವ ಟ್ರಾಫಿಕ್ ಮಾತ್ರ ಕಾರಣವಾಗಿರದೇ ಅಂದು ಮುಂಜಾನೇ ಅವ್ವ ಮಾಡಿದ ಫೋನೂ ಕಾರಣವಾಗಿತ್ತು. ಅವ್ವ ಫೋನು ಮಾಡಿ ಅಂದು ಸಂಜೆ ಕಲ್ಯಾಣ ಕಾಕಾನಿಗೆ ಭೇಟಿಯಾಗಬೇಕೆಂದೂ ಹೆಚ್ಚಿನ ವಿಷಯ ಅವನಿಂದಲೇ ತಿಳಿಯುವುದಾಗಿ ಹೇಳಿದ್ದಳು. ವಾಸು ಕೆದಕಿ ಕೇಳಿದರೂ ಅವ್ವ ಬಾಯಿ ಬಿಟ್ಟಿರಲಿಲ್ಲ. ಮಧ್ಯಾಹ್ನ ಲಂಚ ನಲ್ಲಿ ಕಲ್ಯಾಣಕಾಕಾನ ಫೋನು ಬಂದಾಗ ವಾಸು ಅಂದಿನ ಸಂಜೆ ಭೇಟಿಯಾಗುವುದಾಗಿ ಹೇಳಿದ್ದ. ಆ ಕಾರ್ಯಕ್ರಮದ ಅನ್ವಯವೇ ಆಫೀಸಿನಿಂದ ಬೇಗನೆ ಹೊರಟವ ಕಾರ್ಪೊರೇಷನ್ … Read more

ಮೂಕ ಪ್ರೇಮ: ಮಹಾಂತೇಶ್ ಯರಗಟ್ಟಿ

  ಕೌಸಲ್ಯ ರಾಮ ಪೂಜಾ ಸಂಧ್ಯಾ ಪ್ರವ. . . . .! ಎಂದೂ ಸುಪ್ರಭಾತ ಕಿವಿಗೆ ಕೇಳುತ್ತಲೇ ಕಣ್ಣುತೆರೆದು ಗಡಿಯಾರ ಕೈಗೆತ್ತಿಕೊಂಡು ನೋಡಿದರೆ ಬೆಳಿಗ್ಗೆ ೬.೩೦ರ ಸಮಯ ಹೊದ್ದ ಹಾಸಿಗೆಯಲ್ಲ ಬದಿಗೆ ಸರಿಸಿ ಎದ್ದು ಲೈಟ್ ಆನ್ ಮಾಡಿದರೆ ಕರೆಂಟೇ ಇಲ್ಲಾ. ರಾಜ್ಯಧಾನಿಗೂ ತಗುಲಿದ ವಿದ್ಯುತ್ ಶಾಕ್ ಹಳ್ಳಿಗಳಿಗೆ ಒಂಭತ್ತು ಘಂಟೆಗಳ ಕಾಲ ಮಾತ್ರ ವಿದ್ಯುತ್ ಎಲ್ಲೋ ದಿನ ಪತ್ರಿಕೆಯಲ್ಲಿ ಓದಿದ್ದು ನೆನಪಾಯಿತು ಇದ್ಯಾರಪ್ಪ ಟೇಪರೆಕಾರ್ಡ್‌ರು ಅಂತಾ ಬಾಗಿಲು ತೆರೆದು ನೋಡಿದರೆ – ಗುಳಿಕೆನ್ನೆ ಹುಡುಗಿ, … Read more

ಸೊಕ್ಕಿನ ಕೋಗಿಲೆ: ಚೇತನ್ ಕೆ ಹೊನ್ನವಿಲೆ

  ಅವಳು ಇದ್ದದ್ದು ಹಾಗೆ!! ಸೊಕ್ಕಿನ ಕೋಗಿಲೆ ಹಾಗೆ!! ಆ ಕೋಗಿಲೆಯ ಕಂಠಕ್ಕೆ ತೂಗದ ತಲೆಗಳಿಲ್ಲ, ಮಣಿಯದ ಮನಗಳಿಲ್ಲ.   ಹೆಸರು ಪೂರ್ವಿ!!  ಮನೆಯವರು ಪ್ರೀತಿಯಿಂದ ಇಟ್ಟ ಹೆಸರು. ಹಾಡೋದಕ್ಕೆ ಅಂತಲೇ ಹುಟ್ಟಿದವಳು.  ಹಾಡಲು ನಿಂತರೆ ಸಂಧಿಸುತ್ತಿದ್ದುದು, ಕರ್ಣಗಳನ್ನಲ್ಲ!! ತೊಯ್ದ ಆತ್ಮಗಳನ್ನ!! ಆ ತನ್ಮಯತೆಯನ್ನು, ಅವಳು ಅದನ್ನು ಅನುಭವಿಸುವ ಸೊಬಗನ್ನು ನೋಡಲು, ಕಲಾರಸಿಕರು ಹಾತೊರೆಯುವರು. ಸೊಕ್ಕಿನ ಕಂಠದಿಂದ ಬರುತ್ತಿದ್ದ ಧ್ವನಿ , ಹೃದಯ ಕಿತ್ತು ಬಂದಂತೆ. ಸಹಜ ಮಾತಿನಲ್ಲೂ, ದೂರಬೆಟ್ಟದ ದೇವಸ್ಥಾನದ ಗಂಟೆ ಹೊಡೆದಂತೆ. ಕೊರಳಿನ ಮಾಧುರ್ಯ!! … Read more

ಸರ್ವತ್ರ:’ಪ್ರೀತೀಶ’

ಚಲಂ ನನ್ನ ಬೆನ್ನು ಹತ್ತಿಬಿಟ್ಟಿತ್ತು.  ಯಾವತ್ತೂ ನನ್ನ ಮಾತು ಮೀರದ ಚಲಂ ಇಂದು ಬೇಡಬೇಡವೆಂದರೂ, ನಾನು ಕೋರ್ಟಿಗೆ ಹೋಗುತ್ತಿದ್ದೇನೆ, ಅಲ್ಲಿ ನೀನು ಬರಬಾರದು ಎಂದು ಎಷ್ಟು ಹೇಳಿದರೂ ಕೇಳುತ್ತಿಲ್ಲ. ದಾರಿಯಲ್ಲಿ ಒಂದೆರಡು ಬಾರಿ ಸಿಟ್ಟಿಗೂ ಬಂದೆ.  ನನ್ನ ಸಿಟ್ಟಿಗೆ ಹೆದರಿ ಕಾಲು ಉದ್ದಕ್ಕೆ ಬಿಟ್ಟು ದಾರಿಯಲ್ಲಿ ಕುಳಿತುಕೊಂಡಿತು.  ಹಾಳಾಗಿ ಹೋಗಲಿ, ಮನೆ ದಾರಿ ಅದಕ್ಕೆ ಗೊತ್ತು, ಯಾವಾಗಲಾದರೂ ಮನೆಗೆ ಹೋಗಲಿ ಎಂದು ನಾನು ಬಿರಬಿರನೆ ನಡೆದುಬಿಟ್ಟೆ.  ಮೊದಲೇ ಅದರ ಹಟದಿಂದಾಗಿ ಆಫೀಸಿಗೆ ಹೋಗುವುದು ತಡವಾಗಿತ್ತು. ಕೋರ್ಟಿನ ಗೇಟು … Read more

ಮೆರವಣಿಗೆ: ವೀರೇಂದ್ರ ರಾವಿಹಾಳ್

  ಹಿರಿಗೌಡರ ಮಗನ ಮದುವೆಯ ಮೆರವಣಿಗೆಯು ಅತಿ ವೈಭವದಿಂದ ಸಾಗಿ ಹೊರಟಿತ್ತು. ಹೂವಿನಿಂದ ಅಲಂಕೃತವಾದ ರಥದಲ್ಲಿ ನವದಂಪತಿಗಳು ಯುವರಾಜ-ಯುವರಾಣಿಯರಂತೆ ಕಂಗೊಳಿಸುತ್ತಿದ್ದರು. ರಥದ ಮುಂದೆ ಕಿಕ್ಕಿರಿದ ಭಾರಿ ಜನಸಮೂಹ… ಹಿರಿಗೌಡರ ಸಂಬಂಧಿಗಳು, ಗೆಳೆಯರು, ಪುರಜನರು… ಹೀಗೆ ನಭದಲ್ಲಿ ತಾರೆಗಳ ದಿಬ್ಬಣವೇ ಹೊರಟಂತ್ತಿತ್ತು. ಎಡ-ಬಲದ ಉದ್ದಕ್ಕೂ ದೀಪಾಲಂಕೃತ ಸಾಲುಗಳು ಹಿರಿಗೌಡರ ಮಗನ ಮದುವೆಯ ವೈಭವವನ್ನು ಸಾರಿ ಹೇಳುತ್ತಿದ್ದವು. ಮೆರವಣಿಗೆಯ ಮುಂಚೂಣಿಯಲ್ಲಿ ಬೆಂಗಳೂರು ಬ್ಯಾಂಡ್‌ನ ಸಿನಿಮಾ ಹಾಡು ಭರ್ಜರಿಯಾಗಿ ಸಾಗಿತ್ತು. ಇಡೀ ಊರಿಗೆ ಇದೊಂದು ಉತ್ಸವವೆನಿಸಿತ್ತು. ಕೆಲವು ಜನ ಇದನ್ನೆಲ್ಲಾ ನೋಡಿದ್ರೆ … Read more

ನವೀನ ಕಹಾನಿ: ನವೀನ್ ಮಧುಗಿರಿ

  ಜವಾಬ್ದಾರಿ ಅವನಿಗಿದ್ದದ್ದು ಅವಳೊಬ್ಬಳೇ ಅಕ್ಕ. ತಂದೆ-ತಾಯಿ ಇಲ್ಲದವನನ್ನು, ಅಕ್ಕನೇ ತಂದೆ ತಾಯಿಯಂತೆ ಸಾಕಿ ಸಲಹಿದಳು. ಜೊತೆಗೆ ಓದಿಸಿದಳು. ಅವನಿಗಿದ್ದ  ಆಸೆಯೆಂದರೆ- 'ಅಕ್ಕ ನನಗಾಗಿ ಎಷ್ಟೋಂದು ಕಷ್ಟಪಟ್ಟಿದ್ದಾಳೆ? ಕಷ್ಟದ ನೆರಳೂ ಕೂಡ ನನ್ನನ್ನು ಹಿಂಬಾಲಿಸದಷ್ಟು ಸುಖವಾಗಿ ಬೆಳೆಸಿದ್ದಾಳೆ. ನಾನೂ ಕೂಡ ಕೆಲಸಕ್ಕೆ ಹೋಗುತ್ತಿದ್ದಂತೆಯೇ, ಅಕ್ಕನನ್ನು ಸುಖವಾಗಿ ನೋಡಿಕೊಳ್ಳಬೇಕು. ಒಳ್ಳೆಯ ಅನುಕೂಲಸ್ಥರ ಮನೆಗೇ ಅಕ್ಕನನ್ನು ಸೊಸೆಯಾಗಿ ಕಳಿ ಸಬೇಕು.'   ಅವನಂದುಕೊಂಡಂತೆಯೇ ಒಳ್ಳೆಯ ಕೆಲಸವೂ ಸಿಕ್ಕಿತು. ಉತ್ತಮ ಮನೆತನದ ಸಭ್ಯಸ್ಥ ಹುಡುಗನೊಂದಿಗೇ  ಅಕ್ಕನ  ಮದುವೆಯನ್ನೂ ಮಾಡಿ ಮುಗಿಸಿದ. ಆಗವನ ಗೆಳೆಯ ಹೇಳಿದ- 'ಅಂತೂ ನೀನಂದುಕೊಂಡಂತೆ … Read more

ಕವಲುದಾರಿ: ಹರ್ಷ ಮೂರ್ತಿ

  ಸಂಜೆಯ ಜಿಟಿಪಿಟಿ ಮಳೆ ಹನಿಯುತ್ತಿತ್ತು. ರಸ್ತೆಯ ಗುಂಡಿಗಳೆಲ್ಲ ನೀರು ತುಂಬಿ ಸಮೃದ್ಧವಾಗಿದ್ದವು, ಅವು ಮೋಟಾರು ವಾಹನಗಳ ಬರುವಿಕೆಗೆ ಕಾಯುತ್ತ ಕೆಸರೆರೆಚಾಟಕ್ಕೆ ಸನ್ನದ್ಧವಾಗಿದ್ದವು. ಗಿಡಮರಗಳೆಲ್ಲವೂ ಮಳೆಯಲ್ಲಿ ತೊಯ್ದು ಹಸುರಿನಿಂದ ಕಂಗೊಳಿಸುತ್ತಿದ್ದವು. ರಸ್ತೆಯಲ್ಲಿ ಜನಸಂಚಾರ ಬಹಳ ವಿರಳವಾಗಿತ್ತು. ಅಲ್ಲೊಂದು ಓಬಿರಾಯನ ಕಾಲದ ಮುರುಕಲು ಬಸ್ ಸ್ಟಾಪ್. ಊರಿಗೆ ಹೊಸ ರಸ್ತೆ ಬಂದ ಮೇಲೆ ಈ ರಸ್ತೆಯಲ್ಲಿ ಊರಿನವರ ಕೆಲ ವಾಹನಗಳ ಬಿಟ್ಟರೆ ಬಸ್ಸುಗಳಾವುವೂ ಓಡುತ್ತಿರಲಿಲ್ಲ. ಹೀಗಾಗಿ ಆ ಬಸ್ ಸ್ಟಾಪನ್ನು ಕೇಳುವರಾರೂ ಇಲ್ಲದೆ ಅವಸಾನದತ್ತ ಸಾಗಿತ್ತು. ಅದೇ ಬಸ್ … Read more

ಪ್ರೇಮ ಪತ್ರ: ಗಣೇಶ್ ಖರೆ

  ನವೀನ ಮೇಘನಳ ಪರಿಚಯ ಸುಮಾರು ಆರೇಳು ವರ್ಷಗಳಷ್ಟು ಹಳೆಯದು. ಕಾಲೇಜಿನಿಂದ ಹಿಡಿದು ಕೆಲಸಕ್ಕೆ ಸೇರಿ ಎರಡು ವರ್ಷಗಳಾಗಿದ್ದವು ಇಬ್ಬರು ಜೊತೆಗಿದ್ದು. ನಿಷ್ಕಲ್ಮಶ ಸ್ನೇಹ ಇಬ್ಬರದು. ಇವರಿಬ್ಬರ ಸ್ನೇಹ ನೋಡಿ ಅಸೂಯೆಪಡದವರಿಲ್ಲ. ನಸುಗೆಂಪು ಬಣ್ಣದ ಉತ್ತಮ ಮೈಕಟ್ಟಿನ ಮಧ್ಯಮ ವರ್ಗದ ಸೀದಾ ಸಾದಾ ಹುಡುಗ ನವೀನ, ಹಾಲ್ಗೆನ್ನೆಯ ಎಲ್ಲರ ನೋಟವನ್ನ ಒಮ್ಮೆಲೇ ತನ್ನೆಡೆಗೆ ಸೆಳೆಯುವ ಶ್ರೀಮಂತರ ಮನೆಯ ಹುಡುಗಿ ಮೇಘನ, ಆದರೂ ಮನೆಯ ಶ್ರೀಮಂತಿಕೆ ಅವಳ ಸ್ವಭಾವದಲ್ಲಿರಲಿಲ್ಲ, ಬಹುಷಃ ಇದೆ ಕಾರಣವಿರಬೇಕು ಇವರಿಬ್ಬರ ಸ್ನೇಹ ಇಷ್ಟು ಗಟ್ಟಿಯಾಗಿರಲು. … Read more

ಉಪದ್ವ್ಯಾಪಿ:ಉಮೇಶ್ ದೇಸಾಯಿ

  ಹುಬ್ಬಳ್ಳಿಯಿಂದ ಬಿಟ್ಟ ರಾಜಹಂಸ ಹರಿಹರಕ್ಕ ಬಂದಾಗ ಲೇಟಾಗಿತ್ತು. ಸೀಟ್ ನಂ೭ರಲ್ಲಿ ಕುಳಿತ ನಮ್ಮ ನಾಯಕನಿಗೆ ಎಚ್ಚರವಾಗಿದ್ದು ಅಲ್ಲಿ ಹತ್ತಿದ ಪ್ರಯಾಣಿಕ ಕಂಡಕ್ಟರ್ ಜೋಡಿ ವಾದಕ್ಕಿಳಿದಾಗ. ಪ್ರಯಾಣಿಕ ಮುಂಗಡ ಟಿಕೆಟ್ ಮಾಡಿಸಿದ್ದ. ಯಶವಂತಪುರದಾಗ ಮುಂದ ಹೋಗಲಿಕ್ಕೆ  ಗಾಡಿ ಹಿಡಿಯುವನಿದ್ದ. ಬಸ್ಸು ಹರಿಹರಕ್ಕ ಮುಟ್ಟಿದ್ದು ಒಂದು ತಾಸು ತಡಾ. ಇದು ಅವನ ಕ್ಷೋಭೆಗೆ ಕಾರಣ. ಆ ಪಯಣಿಗನ ಜೋಡಿ ಹೆಂಡತಿ,ಎರಡು ಮಕ್ಕಳು ಇದ್ರು. ಅಕಿನೂ ಚಾಲಕ/ನಿರ್ವಾಹಕರಿಗೆ ಮಂಗಳಾರತಿ ಎತ್ತಿದ್ಲು. ಬಸ್ಸು ಹುಬ್ಬಳ್ಳಿ ಹತ್ತಿರದ ವರೂರ ಹತ್ರ ಊಟಕ್ಕ ನಿಲ್ಸಿದ್ದು … Read more

ಕೋಡುವಳ್ಳಿಯ ಕರೆ:ಪಾರ್ಥಸಾರಥಿ ಎನ್

  ನಾಲ್ವರು ಗೆಳತಿಯರು ಬೆಂಗಳೂರಿನ ಮೆಜಿಸ್ಟಿಕ್ ಬಸ್ ಸ್ಟಾಪ್ ನಲ್ಲಿ ಸಂತಸದಿಂದ ಹರಟುತ್ತಿದ್ದರು. ರಾತ್ರಿ ಆಗಲೇ ಹತ್ತು ಘಂಟೆ ದಾಟಿದ್ದು, 10:40 ಕ್ಕೆ ಚಿಕ್ಕಮಂಗಳೂರಿಗೆ ಹೊರಡುವ ರಾಜಹಂಸ ಬಸ್ಸಿಗೆ ಕಾಯುತ್ತಿದ್ದರು. ಎಲ್ಲರದ್ದೂ ಹೆಚ್ಚು-ಕಡಿಮೆ ಒಂದೇ ವಯಸ್ಸು. ಹತ್ತೊಂಬತ್ತು ಇಪ್ಪತ್ತರ ಉತ್ಸಾಹದ ಚಿಲುಮೆಗಳು. ಮೈಸೂರು ರಸ್ತೆಯಲ್ಲಿರುವ ಡಾನ್ ಬಾಸ್ಕೋನಲ್ಲಿ ಇಂಜಿನೀಯರಿಂಗ್ ಕಾಲೇಜಿನ ಐ.ಎಸ್ ವಿಭಾಗದ ಮೂರನೆ ಸೆಮಿಸ್ಟರ್ ಪರೀಕ್ಷೆಗಳನ್ನು ಮುಗಿಸಿದ ಎಲ್ಲರೂ, ರಜೆ ಇರುವ ಕಾರಣ ಒಂದು ವಾರ ಸಮಯ ಕಳೆಯಲು ಪ್ರಕೃತಿಯ ಮಡಿಲು ಚಿಕ್ಕಮಗಳೂರಿಗೆ ಹೊರಟಿರುವರು.   … Read more