ನಾಲ್ವರ ಕವನಗಳು: ವಿನಾಯಕ ಭಟ್, ಇಂದುತನಯ, ಯದುನಂದನ್ ಗೌಡ ಎ.ಟಿ., ಶ್ರೀದೇವಿ ಕೆರೆಮನೆ

ಅದೇ ರಾಗ, ಬೇರೆ ಹಾಡು.. (ಧಾಟಿ: ಚೆಂದುಟಿಯ ಪಕ್ಕದಲಿ; ಚಿತ್ರ: ಡ್ರಾಮ) ಕಂಗಳಲಿ ಕೋರೈಸೊ ಬೆಳದಿಂಗಳಾ ಹೊಳಪ ಚಂದಿರನ ಮೊಗದಲ್ಲೂ ನಾ ಕಾಣೆ; ಅಂಗಳದಿ ನೀ ಬರೆದ ರಂಗೋಲಿಯ ಹಾಗೇ ಬಾಳನ್ನು ಸಿಂಗರಿಸು ಓ ಜಾಣೆ; ಬರೆದಿರುವೆ ಈ ಗೀತೆ ನಿನಗಾಗಿ.. ಮೂಡಿರುವೆ ನೀ ಇದರ ಶೃತಿಯಾಗಿ.. ಹಾಡೋಣವೇ ಒಮ್ಮೆ ಜೊತೆಯಾಗಿ? ಎತ್ತರದಿ ಅರಳಿರುವ ಚಾಚೊ ಕೈಯ್ಯಿಗೆ ಸಿಗದ ಪಾರಿಜಾತದ ಹೂವು ಬಲು ಚಂದವಂತೆ; ನೀ ದೂರ ಸರಿದಂತೆ ನೆನಪುಗಳು ಸನಿಹಾಗಿ ಗಾಢವಾಗುವ ಮೋಹಕೆ ಕೊನೆಯೆಂಬುದುಂಟೆ? ಎಡರುಗಳು … Read more

ಮೂವರ ಕವನಗಳು: ವಾಸುದೇವ ನಾಡಿಗ್, ಜ್ಯೋತಿ ಹೆಗಡೆ, ಗಿರಿಯ

ಶಕುಂತಲೆಯ ಪ್ರಾಯ ಕನ್ನಡಿಯಲಿಕಣ್ಣಿರುಕಿಸುವುದ ಬಿಟ್ಟಿದ್ದಾಳೆ ಮೇನಕೆ ಶಕುಂತಲೆಯ ತನುವಿಡಿ ಅವಳದೇ ಪರಿವಿಡಿ ಬಿಂಕಮರೆತ ಹೂಕಂಪುಗಳೆಲ್ಲ ಕಕ್ಕಾಬಿಕ್ಕಿ ಕೂತು  ಒನಪಿನ ತೊರೆಗಳೆಲ್ಲಾ ಮೋರೆಕೆಳಗೆ ಮಾಡಿವೆ ತಾರೆಗಳ ಮಿನುಗು ಬರಿಸೋಗು ಕುಣಿಯದ ಮಂಕು ನವಿಲು ನಡೆ ಮರೆತ ಆಲಸಿ ಹಂಸ  ಒಣಗಿದ ಗಿಣಿಯ ತುಟಿ ಕುಂದಿದ  ಬೆಳದಿಂಗಳು ಜಡ ಹಿಡಿದ ಅಂದುಗೆ ತೊನೆದಾಡದತೆನೆ ತುಳುಕದಕೊಳ ಪ್ರಾಯ ಬಂದವಳ ಎದುರು ಉಳಿದವು ಮುಪ್ಪು ಅಳಿದವು ಉಪಮೆಗಳು ಕೊರಗಿದವು ರೂಪಕಗಳು ಧ್ವನಿಗಿನ್ನು ಬರಿ ದಣಿವು ಅನಾಥ ಅಲಂಕಾರ ಕಣ್ವರ ಕಣ್ಣೆದುರು  ವಸಂತ ಕಟು … Read more

ಮೂವರ ಕವನಗಳು: ಜ್ಯೋತಿ ಹೆಗಡೆ, ಬಿದಲೋಟಿ ರಂಗನಾಥ್, ಜಯಶ್ರೀ ದೇಶಪಾಂಡೆ

 ಗೆಳತಿ.. ನೀ ಜೊತೆಯಿದ್ದಾಗ ನಾನಾಗಿದ್ದೆ ಕೇವಲ ಪ್ರೇಮಿ. ನೀ ದೂರಾಗಿ ನೆನಪುಗಳನೆಲ್ಲ ಬಿಟ್ಟು ಹೋದ ಮೇಲೆ ನಾನಾಗಿರುವೆ ಪ್ರೀತಿಯ ಆರಾಧಕ! ಅದೆಷ್ಟೋ ರಾತ್ರಿ ಗರ್ಭವ ಸೀಳಿ ಬರುವ ಮಳೆಯಲಿ ನೆನೆ ನೆನೆದು.. ಮಿಂಚು ಹುಳುಗಳ ಬೆಳಕನೇ ಸಾಲಾಗಿ ಪೋಣಿಸಿ ಬರೆದಿರುವೆ!! ರಾತ್ರಿ ಚಿಮಣಿಯ ಮಂದ ಬೆಳಕಲಿ ರಾಡಿಯೆಬ್ಬಿಸಿದ ಮಳೆ ನೀರಲಿ ನಿನ್ನ ಪ್ರತಿಬಿಂಬವ ಹುಡುಕಿರುವೆ.. ಎಲ್ಲ ವ್ಯರ್ಥ,, ನೀನಿಲ್ಲದ ಪ್ರತಿಬಿಂಬ ನಿನ್ನದೇ ನೆನಪಾಗಿ ಕಾಡಿದೆ.. ​ಎದೆಯಲೆಲ್ಲ ನೆನಪ ನೀರೊಂದೇ ಉಳಿದಿದೆ ಸಾಲು ಕವನವಾಗಿ ನಿನಗಾಗಿ ಕನವರಿಸಿ ಮಲಗಿರುವ … Read more

ಮೂವರ ಕವನಗಳು: ನೂರುಲ್ಲಾ ತ್ಯಾಮಗೊಂಡ್ಲು, ಅಜ್ಜೀಮನೆ ಗಣೇಶ್, ಬಿದಲೋಟಿ ರಂಗನಾಥ್

ಗೊಹರ್     ಮನದ ಹರಕೆಯು ಕನಸಾಗಿ ಕಾಡಿದೆ ಕಣ್ಣಿನಾಳದಲಿ ಮಗನೆ ನೀ ಬೆಳೆದು ಬಳಕುವ ಬಳ್ಳಿಯೊಡಲಲಿ ಹೂಗಳು ನಗುತಲಿರಲಿ ಘಮ್ಮನೆ. ಬೆಳೆದು ದೊಡ್ಡವನಾಗಿ ಹಾರದಿರು ನಕ್ಷತ್ರದ ಸುಳಿಗೆ  ಇಲ್ಲೆ ಕೂಡಿಬಾಳೊ ಇರುವ ಗುಡಿಯೆ ಸ್ವರ್ಗ  ನಮಗೆ. ಸಾವಿರಾರು ವ್ಯೆಭೋಗದಾಭರಣಗಳು ಸಮುದ್ರ  ದೊಡಲಿನ ಸಿಂಗಾರಕೆ? ಹೃದಯ ಸಮುದ್ರದಲ್ಲಿನ ಮುತ್ತನ್ನು (ಗೊಹರ್) ಹೊತ್ತ ಎನಗೆ ಯಾವುದೇತರಹಂಗೆ? ನಡೆ,ನಿನ್ನ ಅಂಬೆಗಾಲುಗಳಲಿ ಹೊನ್ನಕಿರಣಗಳು ಸೂಸಲಿ ನಾಳಿನಾಸೆಯ ಎಮ್ಮಮನಗಡಲಲಿ ಹರ್ಷದಲೆಗಳು ಏಳಲಿ. -ನೂರುಲ್ಲಾ ತ್ಯಾಮಗೊಂಡ್ಲು         ಜಗತ್ತು …. … Read more

ಮೂವರ ಕವನಗಳು: ಅಜ್ಜೀಮನೆ ಗಣೇಶ್, ನಗೆಮಲ್ಲಿಗೆ, ಕಮಿ (ಪುಟ್ಟಕ್ಕ)

ದಿಬ್ಬಣದ ಸೂತಕ ಸೇರನೊದೆಯುವ ಹೊತ್ತಲ್ಲಿ ಹೊಸ್ತಿಲಲ್ಲೇ ಸತ್ತು ಬಿದ್ದಿತ್ತು.. ಸುಡುವ ಮನೆ ಹುಡುಗನಿಗೆ ಹೂಳುವ ವಂಶದ ಹೆಣ್ಣನು ಬೆಸದಿದ್ದ ಪ್ರೇಮ.. ಸಂಭ್ರಮ ಸರಿದಲ್ಲೀಗ ಸೂತಕ ಹೊಕ್ಕಿದೆ, ಮೌನ ಮಿಕ್ಕಿದೆ, ಅನುಕಂಪವೂ ಸಾಕಷ್ಟಿದೆ ದುಃಖವೊಂದೇ ಕಾಣುತ್ತಿಲ್ಲ.. ಅಂಗಳದಿ ಸೌದೆ ಸುಟ್ಟು ಚಪ್ಪರದ ಗಳಕಿತ್ತು ಚಟ್ಟಕ್ಕಿಟ್ಟು ತೋರಣವ ತಳದಿ ತುಂಬಿಟ್ಟು ಅಳುವವರ ಕರೆಸಿ ಡಂಕನಕ ಹಾಡಿತು ಬ್ಯಾಂಡ್ಸೆಟ್ಟು.. ಹೂವಿನ ಖರ್ಚಿಲ್ಲ, ಮೈಲಿಗೆಯ ಹಂಗಿಲ್ಲ ಬರುವವರಿಲ್ಲ,ಬಂಧುಗಳ್ಯಾರಿಲ್ಲ ಏನು ಬಂತು ಫಲ ಸಂಜಿಯೊಳಗೆಲ್ಲಾ, ಮುಗಿವ ಲಕ್ಷಣವಿಲ್ಲ ಹೊತ್ತು ಮೀರಿದೆ ಹೊರಡಬೇಕಿದೆ ಮೆರವಣಿಗೆ ಅರಸುತಿಹರಿನ್ನೂ … Read more

ಮೂವರ ಕವನಗಳು: ಅಜ್ಜೀಮನೆ ಗಣೇಶ್, ಯದುನಂದನ್ ಗೌಡ ಎ.ಟಿ., ಮಂಜುನಾಥ ಹನಮಂತಪ್ಪ ವರಗಾ

ಸಮಾದಿಯ ಹೂವು ಚಂದಿರನ ಕೀಟಲೆಗೆ ಮೈಜುಮ್ಮೆಂದು ಕತ್ತಲ ಹಟ್ಟಿಯಲ್ಲಿ ಮೈನೆರೆದಿದ್ದೆ.. ಮುಂಜಾವಿನ ರವಿ ಮೂಡಿ ಇಬ್ಬನಿಯ ನೀರೇರದು ಹಗಲ ಕಡಲಲಿ ತೇಲಿಬಿಡುವವರೆಗೂ ಮೈಮರೆತೇ ಇದ್ದೆ… ಯೌವ್ವನ ಹರಿವ ಹೊಳೆ ಎದೆಯಲಿ ಒಲವ ಮಳೆ ಕುಡಿಯರಳಿ ನಿಂತವಳಿಗೆ ದಿನದ ಬೆಳಕು ಹಿತವಾದ ಹಗೆ.. ಹಾಡ್ತೀರಿ, ಆಡ್ಕೋತೀರಿ ಸ್ವಂತಕ್ಕೆಂದು ಕಿತ್ತಿಡ್ಕೊತೀರಿ ನಾಚಿಕೆಯಿಲ್ಲ.. ಥೂ.! ನನ್ನ ಹಾದಿಗೆ ನಿಮ್ಮದೇನು ಅಣತಿ.? ಯಾಕೀ..ಮೈಮುಟ್ಟೋ ಸಲುಗೆ,.? ದುಂಬಿ, ಜೇನು, ಚಿಟ್ಟೆ ಮತ್ತು ನೀವು, ಮೈಪರಚೋ ಕಂಬಳಿ ಹುಳಗಳೆ ಎಲ್ಲಾ… ಬಲವಂತದ ಹಾದರಕೆ ನಿಸರ್ಗ ಸೃಷ್ಟಿ … Read more

ಮೂವರ ಕವನಗಳು: ಡಿ.ವಿ.ಪಿ., ಉರ್ಬಾನ್ ಡಿಸೋಜ, ಅನುರಾಧಾ ಪಿ. ಎಸ್.

ಹೀಗೊಂದು ಹಾದಿ.!! ಬಿಮ್ಮನೆ ಧ್ಯಾನಸ್ಥ ಭಂಗಿಯಲ್ಲಿ ಹರವಿಕೊಂಡ ಹಾದಿ., ಅದೆಷ್ಟೋ ಚೈತ್ರಗಳ  ಹೂ ಅರಳುವಿಕೆಯನ್ನು ಕಂಡಿದೆಯಂತೆ. ಮುಳ್ಳುಗಳ ಸೋಕಿ ಸುರಿದ ನೆತ್ತರ ಪಸೆಯನ್ನು ಇಂಗಿಸಿಕೊಂಡಿದೆಯಂತೆ. ಹಾದಿ ಮೀರಿ ಬಂದವರೆಷ್ಟೋ ತಾವಾಗೇ ಉಳಿಯದೇ ಮಾರ್ಪಾಡಾಗಿದ್ದಾರೆ ಎನ್ನುವ ವರ್ತಮಾನ.!! ಮೌನವನ್ನೇ ಮೈಮೇಲೇರಿಕೊಂಡಂತೆ ನಿರ್ಲಿಪ್ತವಾಗಿ ಮಲಗಿದೆ ಹಾದಿ ಬದಲಾವಣೆಗಳಿಗೆ ಸಾಕ್ಷಿಯಾಗಿ.!!  ಉಬುಕಿ ಬಂದ ಹಸಿವ ನುಂಗಿ ಬಸವಳಿದವರೆಷ್ಟೋ ಹಾದಿಯ ಕ್ರಮಿಸಿ ಬಂದು ನೋಡಿದರೆ, ಹಸಿವೇ ರಾಗವಾಗಿದೆಯಂತೆ.!! ಅಳಲುಗಳೊಳಗೆ ತಾ ಮುಳುಗಿ ನಿಶ್ಚಲ ಗೋಡೆಗೊರಗಿ ಬಿಟ್ಟ ನಿಟ್ಟುಸಿರು, ಹಾದಿಯ ಕ್ರಮಿಸಿದೊಡನೆ ಕೊಳಲಾಗಿದೆಯಂತೆ.!! ಯುದ್ಧ … Read more

ಚುಟುಕಗಳು: ಮಂಜುನಾಥ ಹನಮಂತಪ್ಪ ವರಗಾ

೧) ನಿನ್ನಷ್ಟು ಸ್ವಾರ್ಥಿಯಲ್ಲ ನೀ ಮುಡಿದ ಮಲ್ಲಿಗೆ! ಸುವಾಸನೆ ಚಲ್ಲುತಿದೆ ನನ್ನೆಡೆಗೆ ಮೆಲ್ಲಗೆ!! ೨) ಮೇಷ್ಟು ಮಾತು! ಮರೆತುಬಿಡು ಎಂದು ಹೇಳಿ  ಹೋದವಳಿಗೇನು ಗೊತ್ತು? ನನಗೆ ನೆನಪಿನ ಶಕ್ತಿ ಜಾಸ್ತಿ ಇದೆ ಎಂದ ನಮ್ಮ ಮೇಷ್ಟ್ರ ಮಾತು!! ೩) ಸಾಂತ್ವನ! ಜೈಲಿಂದ ಬಿಡುಗಡೆಯಾದ ಕಳ್ಳ ರಾಜಕಾರಣಿಗೆ ಊರಿನ ಜನರಿಂದ ಅದ್ಧೂರಿ ಸ್ವಾಗತ ಸನ್ಮಾನ! ದೇಶಕ್ಕಾಗಿ ದುಡಿದು ಮಡಿದ ವೀರಯೋಧನ ಮನೆಯವರಿಗೆ ಸಿಗಲಿಲ್ಲ ಅದೇ ರಾಜಕಾರಣಿಯಿಂದ ಚೂರು ಸಾಂತ್ವನ:-P ೪) ಸೈನಿಕ- ಕೋಟಿ ಜನಗಳ ರಕ್ಷಣೆಯ ದಿಟ್ಟ ನಾಯಕ:-O … Read more

ಮೂವರ ಕವನಗಳು: ಸಂತೋಷಕುಮಾರ ಸೋನಾರ, ನಗರ ಸುಧಾಕರ ಶೆಟ್ಟಿ, ಕಿರಣ್ ಕುಮಾರ್ ಕೆ. ಆರ್.

ವಾಸ್ತವ ಬುದ್ಧ ಜನಿಸಿದಾ ನಾಡಿನಲ್ಲಿ  ಬೃಂದಾವನವ ಕಟ್ಟದೆ  ಬಾಂಬನ್ನು ಸುಟ್ಟರಲ್ಲ! ಬಸವ ಜನಿಸಿದಾ ಭುವಿಯಲ್ಲಿ  ಭಕುತಿಯಿಂದ ಬಾಳದೇ   ಬರ್ಭರ ಹಿಂಸೆಯಾಗುತ್ತಿದೆಯಲ್ಲ! ಗಾಂಧಿ ಜನಿಸಿದ ದೇಶದಲ್ಲಿ  ಗಂಧದ ಪರಿಮಳವ ಸೂಸದೇ  ಗನ್ನನ್ನು ಹಿಡಿದೆವಲ್ಲ! ಬುದ್ಧ, ಬಸವ, ಗಾಂಧಿ ಈಗ ಇದ್ದಿದ್ದರೆ??? ಬುದ್ಧ ಕಲ್ಲಾಗುತ್ತಿದ್ದ! ಗಾಂಧಿ ಮೌನವಾಗುತ್ತಿದ್ದ! ಬಸವ ಮತ್ತೊಮ್ಮೆ ಐಕ್ಯವಾಗುತ್ತಿದ್ದ! **** ಈ ಜಗತ್ತಿನೊಳಗೆ  ಪ್ರತಿಯೊಬ್ಬರಿಗೂ  ಒಂದೂಂದು ದಾರ!  ನನ್ನದೊಂದು ದಾರ  ನಿನ್ನದೊಂದು ದಾರ!  ಅವರದೊಂದು ದಾರ   ಆಗಬೇಕಿದೆ ನಾವು  ಇದರಿಂದ ಉದ್ಧಾರ!  ಬೇಡವೇ ಬೇಡವಂತೆ  … Read more

ಮೂವರ ಕವನಗಳು: ಮಲ್ಲಿಕಾರ್ಜುನ ಗೌಡ್ರು, ರಾಘವೇಂದ್ರ ಇ. ಆಶಾದೀಪ

೧) ಸಾಕ್ಷಿ: ನಾನು ಕೊಟ್ಟ ಕಾಣಿಕೆಗಳಿಗೆ ನಿನ್ನ ನೆನಪುಗಳೇ.. ನನಗೆ ಸಾಕ್ಷಿ.! ನೀನು ಕೊಟ್ಟ ನೆನಪುಗಳಿಗೆ ನನ್ನ ಕಣ್ಣೀರ ಹನಿಗಳೇ.. ನಿನಗೆ ಸಾಕ್ಷಿ..!! ೨) ಶ್ರೀಮಂತ: ನಾನು ನೋವುಗಳ  ಆಗರ್ಭ ಶ್ರೀಮಂತ ನಾ ಬಚ್ಚಿಟ್ಟ ಆಸ್ತಿ.. ಯಾರೂ ಕೇಳದ, ಯಾರೂ ಬೇಡದ, ಯಾರೂ ಕದಿಯದ, 'ಕರಗದ ಕಣ್ಣೀರ ಹನಿಗಳು' ನಾನು ನೋವುಗಳ ಆಗರ್ಭ ಶ್ರೀಮಂತ -ಮಲ್ಲಿಕಾರ್ಜುನ ಗೌಡ್ರು           ಕಾಯುವಿಕೆ ಜಗದ ನಿಯಮ ಕಾಡಿಸದಿರು ಓ ಸಖೀ ನೀ ನನ್ನಿಂದ ದೂರಾಗಿ … Read more

ಮೂರು ಕವಿತೆಗಳು: ಸಂತೋಷಕುಮಾರ ಸೋನಾರ, ಲಕ್ಷ್ಮೀಕಾಂತ ಇಟ್ನಾಳ, ನಳಿನಾಕ್ಷಿ ಹೀನಗಾರ್

ಅಪ್ಪ ಬೆಂಕಿ ಉಗುಳುವ ಕಣ್ಣು| ಘರ್ಜಿಸುವ ದನಿ| ಹೃದಯ ಸೂಕ್ಷ್ಮ | ಒಮ್ಮೊಮ್ಮೆ ಉಗ್ರ ಪ್ರತಾಪಿ | ಮಗದೊಮ್ಮೆ ಮಗುವಿನ ಮನಸ್ಸು|  ಅರ್ಥಕ್ಕೆ ನಿಲುಕದಾ ನನ್ನ ಅಪ್ಪ ನೆನಪಾಗುತ್ತಾರೆ !   ಏನೀ ಪ್ರಶ್ನೆಗಳು? ಈ ಹಳೆಯ ಕಾಲದ ಮಂದಿ| ಏನೇನೋ ಕೇಳುವರು ದೊಡ್ಡ ವೈದ್ಯರಿಗೇ ಪ್ರಶ್ನೆ | ಈ ನರ್ಸುಗಳು |  ಬಿಳಿ ಬಟ್ಟೆ ವೈದ್ಯರು ಕಂಡಾಪಟ್ಟೆ ಓದಿದವರು|  ಆತನ ಪ್ರಶ್ನೆಗಳಿಗೆ ಉತ್ತರಿಸಲಾರರು ಅದಕ್ಕೆ ಅಪ್ಪ ನೆನಪಾಗುತ್ತಾರೆ ! ಇನ್ನೂ ಈ ಮಕ್ಕಳು ಮರಿಗಳು? ಚಿಕ್ಕವರಿದ್ದಾಗ … Read more

ಚುಟುಕಗಳು: ವೀಣಾ ಭಟ್

ವ್ಯರ್ಥ ಸುಂದರಿಯ ನಡೆಯಲ್ಲಿ  ಸುಗುಣವಿಲ್ಲದಿರೆ  ಆ ಸೌಂದರ್ಯ  ಸುಡುಗಾಡು ಹೊಗೆಯಲ್ಲಿ  ಸುರುಗಿ ಹೂ ಕಂಪು   ಚೆಲ್ದಂತೆ ವ್ಯರ್ಥ.  ಗ್ರಹಚಾರ ಈ ರಾಜಕೀಯ ಮಂತ್ರಿಗಳ ಸರ್ಕಾರ  ರಾಕ್ಷಸರ ಅವತಾರ  ಅವರದೇ ದರ್ಬಾರ  ಹೇಳುವರು ಮಾಡುವೆವು ನಮ್ಮ ಉದ್ದಾರ  ಕೇಳಿ ಪ್ರಶ್ನಿಸಿದರೆ ಇಲ್ಲದ  ಟೆಕ್ಸಾಕಿ ಬಿಡಿಸುವರು ನಮ್ಮ ಗ್ರಹಚಾರ ಹಿಂಗಿದೆ ನೋಡಿ ಸ್ವಾಮೀ ಸಮಾಚಾರ   ಪಜೀತಿ  ನನ್ನುಡುಗಿ ಪಾರ್ವತಿ  ನಾ ಮಾಡ್ತಿದ್ದೆ ತುಂಬಾ ಪಿರೂತಿ  ಅವಳ ಚೆಂದದ ಗೆಳತಿ ಮಾಲತಿ   ಕಂಡಾಗಿನಿಂದ ನಾನಾದೆ ಮಾರುತಿ  ನನ್ನುಡುಗಿ … Read more

ಮೂವರ ಕವಿತೆಗಳು: ನವೀನ್ ಮಧುಗಿರಿ, ನಗೆಮಲ್ಲಿಗೆ, ಕು.ಸ.ಮಧುಸೂದನ್

ಕೊಳದ ದಡ ಬೇಟೆ ಸಲುವಾಗಿ ಧ್ಯಾನಸ್ಥ ಕೊಕ್ಕರೆ ಬುದ್ಧನಲ್ಲ ~•~ ತಂಗಾಳಿಯ ಹಾದಿ ಚಲಿಸಿದೆ ಪರಿಮಳ ಹಾರಿತು ಚಿಟ್ಟೆ ಉದುರಿದವು ಹಣ್ಣೆಲೆಯ ~•~ ಪಶ್ಚಿಮ ಶಿಖರದ ಮೇಲೆ ನೇಸರನ ಜಾರುಬಂಡಿ ಮುಂಜಾಗ್ರತೆಗೆ ಮಡಿಲು ತೆರೆದಳು ಇಳೆ ~•~ ಆಷಾಡದ ಗಾಳಿ ತರಗೆಲೆಗೆ ಕಲಿಸಿದೆ ಓಟ ~•~ ಜೇಡದ ಮನೆ ಮುರಿಯಲು ಹೋಗಿ ನೊಣ ಬಲೆಯೊಳಗೆ ಬಲಿ ~•~ ಮಲಗಿರುವ ಸೂರ್ಯನಿಗೆ ಮುಂಜಾನೆ ಸುಪ್ರಭಾತ ಕೊಕ್ ಕೊಕ್ ಕೋ ~•~ ಬೆತ್ತಲೆ ಚಂದಿರ ಬೆತ್ತಲೆ ಮರ ಕತ್ತಲ ಉಡುಗೆ … Read more

ಮೂವರ ಕವನಗಳು: ನವೀನ್ ಮಧುಗಿರಿ, ಶ್ರೀಮಂತ್ ಎಮ್. ಯನಗುಂಟಿ, ಯದುನಂದನ್ ಗೌಡ ಎ.ಟಿ

ನಾವು ಪ್ರೀತಿಯೆಂದರೆ ನಂಬಿಕೆ ನೀನು ನನ್ನೆಷ್ಟು ನಂಬುವೆ? ನಿನ್ನಷ್ಟೇ ನಾನೇಕೆ ನಿನಗಿಷ್ಟವಾದೆ? ಗೊತ್ತಿಲ್ಲ. ಪ್ಲೀಸ್ ನಿಜ ಹೇಳು ಕಾರಣ ಹುಡುಕುವುದು ಕಷ್ಟ ನಾನು ನಿನ್ನೆಷ್ಟು ಪ್ರೀತಿಸಲಿ? ಅದು ನಿನ್ನಿಷ್ಟ ನಿಲ್ಲು ಏನು? ಪದೇ ಪದೇ ನೀನು ನಾನು ಅನ್ನುವುದು ನಿಲ್ಲಿಸು ಮತ್ತೇನನ್ನಲಿ? ನಾವು ಅಂತನ್ನುವುದು ಒಳ್ಳೆಯದು ಯಾಕೆ? ನೀನೆಂದರೆ ನಾನು ನಾನೆಂದರೆ ನೀನು ~•~ ಬೆವರು ನಮ್ಮಪ್ಪ ಕವಿತೆಗಳ ಬರೆಯಲಿಲ್ಲ ಭತ್ತ, ರಾಗಿ, ಜೋಳ ಬೆಳೆದ ಅಕ್ಷರಗಳ ಸ್ಖಲಿಸಿಕೊಂಡ ಕವಿಗೆ ಹಸಿವಾಯ್ತು ಅಪ್ಪನ ಬೆವರು ತಿಂದ ~•~ … Read more

ಮೂರು ಕವನಗಳು: ತಿರುಪತಿ ಭಂಗಿ, ಪ್ರಕಾಶ್ ಬಿ. ಜಾಲಹಳ್ಳಿ, ಸಂದೇಶ್ ಎನ್.

ಹೇಗೆ ಹೇಳಲಿ ಗೆಳತಿ  ನಾನೀರವುದೇ ಹೀಗೆ  ಕತ್ತಲಲ್ಲಿ ಮಿರಮಿರನೇ ಮಿನುಗುವ ಮಿಂಚುಳ್ಳಿ ಹಾಗೆ  ಬೆಳಕಿನಲ್ಲಿ ನನಗಿಲ್ಲ ಒಂದಿಷ್ಟು ಬೆಲೆ. ಹೇಗೆ ಹೇಳಲಿ ಗೆಳತಿ  ನಾನೀರವುದೇ ಹೀಗೆ  ಗಂಗೆಯಲಿ ತೇಲಾಡುವ ಮೀನಿನ ಹಾಗೆ  ಮೋಸದಿಂದ ಎಸೆದ ಗಾಳ  ನನಗೆ ಸಾವು ತಂದರೂ ನಾನಂತು  ಅವರಿಗೆ 'ಅನ್ನದೇವಿ' ಯಾಗುತ್ತೇನೆ. ಹೇಗೆ ಹೇಳಲಿ ಗೆಳತಿ  ನಾನೀರವುದೇ ಹೀಗೆ ಬಾನೆತ್ತರಕೆ ಬೆಳೆದು ನಿಂತ  ತೆಂಗಿನ ಮರದ ಹಾಗೆ  ನೂರೆಂಟು ರೋಗಿಗಳಿಗೆ ಎಳೆನೀರ ಔಷಧಿ ಕೊಟ್ಟರೂ ನನ್ನ ಬುಡಕ್ಕೆ ನೀರು ಬಿಡುವವರಿಲ್ಲ  ಗೊಬ್ಬರದ ವಾಸನೆ … Read more

ಪಂಜು ಕಾವ್ಯ

ನೀ ಬಂದು ನಿಂತಾಗ ಎಂದಾದರೊಮ್ಮೆ  ಬಳಿ ನೀನು ಬಂದರೆ  ಕೊಡಲೇನ ನಿನಗಾಗಿ ಹೇಳು ಚಂದದ ಚೆಲುವಿನ   ಮನದಾಗಿನ ಭಾವನೆಗಳ ಸಾರುವ ಅಂದದ ಕಾಣಿಕೆಯು  ನಿನಗಾಗಿ ಕಾದಿಹುದು ಕೇಳು ಪ್ರತಿದಿನವು ಮೂಡಿಹುದು  ಒಲವಿನ ರಂಗವಲ್ಲಿ ನಿನ್ನ ಆಗಮನಕ್ಕಾಗಿ ಕಾದು ಪ್ರತಿಸಾಲು ಸಾರಿಹುದು ಅಭಿಮಾನವ ರಂಗುಚೆಲ್ಲಿ ನನ್ನೆಲ್ಲಾ ಗಮನವ ನಿನ್ನೆಡೆಗೆ ಸೆಳೆದು ತಂಪಾದ ತಂಗಾಳಿ ಚಾಮರವ ಬೀಸಲು ಅಣಿಯಾಗಿದೆ ಬಳಿ ನೀನು ಬರಲು ದಣಿದು ಮುಗಿಲಿನ ಮೋಡವು ಪನ್ನೀರ  ಎರಚಲು ಸುತ್ತೆಲ್ಲಾ ಕವಿದಿದೆ ಖುಷಿಯಿಂದ ಕುಣಿದು ಮತ್ತಷ್ಟು ಉಡುಗೊರೆಗಳು … Read more

ಪಂಜು ಹೋಳಿ ಕಾವ್ಯ ಧಾರೆ

ಹಿಗ್ಗಿನ ಹೋಳಿ ಶೋಭಿಸುತಿದ್ದವು ಮೊಗಗಳು ಬಣ್ಣಗಳ ಸಮ್ಮಿಲನದಿಂದ, ಬೆಳಗುತಿದ್ದವು ಕಣ್ಣುಗಳು ಅಂತರಾಳದಲ್ಲಿರುವ ಆನಂದದಿಂದ, ಥಳಿಥಳಿಸುತಿದ್ದವು ತೊಯ್ದ ಉಡುಪುಗಳು ರಂಗುರಂಗಿನ  ಲೇಪನದಿಂದ. ಎಲ್ಲಾ ದಿನಗಳಲ್ಲಿದ್ದಂತೆ ಆತುರವಿರಲಿಲ್ಲ, ಮಕ್ಕಳಿಗೆ ಶಾಲೆಯ ಗೋಜಿರಲಿಲ್ಲ, ವಯಸ್ಕರಿಗೆ ವೃತ್ತಿಯ ಲಕ್ಷ್ಯವಿರಲಿಲ್ಲ, ವೃದ್ಧರಿಗೆ ಸಂಕೋಚವಿರಲಿಲ್ಲ, ಮಕ್ಕಳಾಗಿದ್ದರು ಎಲ್ಲಾ ಪ್ರಕೃತಿಯ, ಎರಚುತ್ತಾ ರಂಗುರಂಗಿನ ಓಕುಳಿಯ. ಭೇದವಿರಲಿಲ್ಲ ಜಾತಿ, ಮತ, ವರ್ಗಗಳ, ಸುಳಿವಿರಲಿಲ್ಲ ಕಷ್ಟ ಕಾರ್ಪಣ್ಯಗಳ, ಎಲ್ಲರೂ ಭಾಗ್ಯವಂತರು ಅಲ್ಲಿ, ಹಿಗ್ಗಿನ ಸುಗ್ಗಿಯ ಸೊಬಗಿರುವಲ್ಲಿ, ಹಂಚುತಿದ್ದರು ಸಿಹಿ ಸಂತೋಷಗಳ, ಹಚ್ಚುತ್ತಾ ರಂಗುರಂಗಿನ ಬಣ್ಣಗಳ. ಉರಿಸಲಾಗಿತ್ತು ಅಗ್ನಿ ಈಗಾಗಲೇ, ಚಂದಿರನ … Read more

ಮೂರು ಕವಿತೆಗಳು: ಶಿವಕುಮಾರ ಸಿ., ತಿರುಪತಿ ಭಂಗಿ, ಲೋಕೇಶಗೌಡ ಜೋಳದರಾಶಿ

ಕಾವ್ಯದ ಕೂಗು ಅದೆಲ್ಲಿದೆ…… ದುತ್ತನೆ ಸಮುದ್ರದ ತೀರದಲ್ಲಿ ಯಮಯಾತನೆಯ ಹೊತ್ತು , ಮಣಬಾರದ ಹೆಜ್ಜೆಯಿಟ್ಟು ಮಹಲಿನಲ್ಲಿ ಹಲ್ಲುಕಿರಿದು ಕಿಕ್ಕಿರಿದು ಸೇರಿದ್ದ ಸಂದಣಿಯಲ್ಲಿ  ಗುನುಗುನುಗುತ್ತಿತ್ತು. ಆರ್ಭಟದ ಅಳಲಿನಲಿ, ಪಂಚಾಯ್ತಿ, ಗುಡಿಸಲು, ಗುಡಿ ಗುಂಡಾರಗಳಲ್ಲಿ, ಇಲ್ಲಿ ಕಚ್ಚೆ ಕಟ್ಟುವ, ಅಲ್ಲಿ ಸ್ಕರ್ಟ ಹಾಕಿರುವ, ಭೂವಿಸಖಿ, ಗಗನಸಖಿಯರಲ್ಲಿ, ಹುಬ್ಬು, ಹುನ್ನಾರಗಳಲ್ಲಿ, ತೇರು ಹರಿವ ಮಾದಕ ನೋಟಗಳಲ್ಲಿ, ಕುಣಿಕುಣಿದಾಡುತ್ತಿತ್ತು. ಒಮ್ಮೆ ತಿರುಗಿ ನೋಡಬೇಕಿತ್ತು ತೆರಪಿರದೇ ಕಣ್ಣಲ್ಲೇ ಕುಣಿಯುತ್ತಿದ್ದ ಹಗಲುಗನಸುಗಳ ಸೈಡಿಗಿಟ್ಟು ಹಳೇ ಬಸ್ಟಾಂಡಿನ ಚಿಲ್ಲರೆ ಮುದುಕಿಯ  ಕಷ್ಟ ಕೇಳಬಹುದಿತ್ತು ನಾನೇ ನೋಡಬಹುದಿತ್ತು ಪಾಯ, … Read more

ಕವಿತೆಗಳು: ಸಿಪಿಲೆ ನಂದಿನಿ, ಸಂತೆಬೆನ್ನೂರು ಫೈಜ್ನಟ್ರಾಜ್, ನವೀನ್ ಮಧುಗಿರಿ, ನಾಗರಾಜ ಎಸ್. ಹಣಗಿ

ಕೆಂಪು ನಕ್ಷತ್ರದ ಹೂ ತೇಲುವ  ಬೆಳ್ಳಿ ಮೋಡಗಳ  ಜೀವಗಳಲಿ ಸಂಗ್ರಾಮ ಕೆಂಪುಮಳೆ ಬಿದ್ದರೆ ತರಗೆಲೆ ತುಂತುರ ಹನಿಯೊಳಗೆ ಬೆಳಕು..! ನಕ್ಷತ್ರದ ಹೂಗಳಲಿ ಸಂಭ್ರಮ ಎದೆಯ ನೋವ ರಕ್ತದೊಳಗೆ ಕಾಡು ಜನರಿಗೆ ಹರ್ಷ ಕೆಂಪು ನಕ್ಷತ್ರದ ಹೂವು ಮಳೆ ಇಬ್ಬನಿಗಳ ರಂಬಿಸುವ  ಅನಂತ  ಆಕಾಶವೇಕೆ ಶೂನ್ಯ? ಪ್ರಭುತ್ವ ಜೀವಗಳಲಿ ಬಿನ್ನತೆ ಏತಕೆ?  ಹಸಿರುಬೇಟೆ ಹೆಸರಲಿ ನಿತ್ಯ ಮಾರಣ ಹೋಮ ತರಗಲೆಯೊಳಗೆ  ಬಲಿಯಾದವರೆಲ್ಲ ಮಳೆಕಾಡ ನೆಲದೆದೆಯ ಒಂದೇ  ರಕ್ತದ ಸಹೋದರರು    ಕಾಡು ಮಲೆಗಳಲಿ ವಿಶಿಷ್ಟತೆಯ ಸೊಗಸು ದಮನಿಯೊಳಗೆ ಲುಪ್ತವಾಗಿ … Read more

ಮೂರು ಕವಿತೆಗಳು: ಜಯಶ್ರೀ ದೇಶಪಾಂಡೆ, ಶ್ರೀದೇವಿ ಕೆರೆಮನೆ, ರಮೇಶ್ ನೆಲ್ಲಿಸರ

ಪ್ಯಾರಾಡೈಸ್ ಲಾಸ್ಟ್….!                                                               ಜುಳುಜುಳು ಹರಿದ ಮಳೆಯ ತಿಳಿ ನೀರಲ್ಲಿಳಿದ     ಹಳೇ ಪೇಪರಿನ ಹಡಗು, ಆ ದಂಡೆ ಈ ದಂಡೆ ವಾಲಿ ತೇಲಿ ಕೊನೆಗೆ ಹೊಡೆದ ಗೋತ, ಕಳಕೊಂಡ ಹಡಗಿನ ದ:ಖ ಮರೆಸಲು … Read more

ಮೂವರ ಕವಿತೆಗಳು: ಮುಕುಂದ್ ಎಸ್., ಮೌಲ್ಯ ಎಂ., ಅಕುವ

ಲೋ ಮಾರ್ಕು,  ನೀ ಕಟ್ಟಿದ್ ಜಗ್ಲಿ ಮ್ಯಾಕ್ ಕೂತು,  ದೊಡ್ಡ್ ದೊಡ್ಡ್ವರು ಹೇಳಿದ್ದು  ಅರ್ಥವಾಗ್ದಿದ್ರು ಬೇರೆಯವರಿಗೆ ಷೇರ್ ಗಿರ್ ಮಾಡಿಕ್ಕಂಡು, ರಾಜಕಾರಣಿ ಹಾಕೋ ಥರಾವರಿ  ಟೋಪಿಗಳ್ ನಾವ್ ನಮ್ಮ್  ಗೆಳ್ಯರಿಗು ಹಾಕಿ,  ಪರ್ ವಿರೋಧ ಬಾಯ್ ಬಡ್ಕೊಂಡು, ಫ್ರೆಂಡ್, ಅನ್ ಫ್ರೆಂಡ್ ಅಂತ್ ಆಟ್ಗಳ ಜೊತೆ ಕ್ಯಂಡಿ ಕ್ರಷುಗಳ್ ಬಗ್ಗೆ ಉರ್ಕೊಂಡು,  ನಮ್ಮ್ ನಮ್ಮ್ ಪಟ್ವ ತೆಗೆದು  ಸ್ಚಯಂವರಕ್ಕೆ ರೆಡಿ ಆಗೋ ಪರಿಯಲ್ಲಿ ತೆಗ್ಸಿ, ಲೈಕುಗಳ ಬಿಕ್ಕ್ಸೆಗೆ ಕಾಯ್ಕೊಂಡು, ಅಕ್ಕ ಪಕ್ಕ ಇರೋ ಅಣ್ಣ್ ತಮ್ಮದಿರ್ ದೂರ್ … Read more

ಮೂವರ ಕವಿತೆಗಳು: ಸಾಬಯ್ಯ ಕಲಾಲ್, ನಾಗರಾಜ ವಿ.ಟಿ., ಕಾವ್ಯಪ್ರಿಯ

ಗೋವಿನ ನೋವು ನನ್ನ ಕೊಬ್ಬಿದ ಮಾಂಸವನು ತಿಂದು ತೇಗುವ ನಿನಗೆ.. ಚೀಪಿದ ಮೂಳೆಯನ್ನಾದರು ಸಮಾಧಿ ಮಾಡಿದ್ದರೆ.. ನನ್ನೊಳಗಿರುವ ಮುಕ್ಕೋಟಿ ದೇವರ ಆತ್ಮಕ್ಕಾದರು ಶಾಂತಿ ದೊರಕುತ್ತಿತ್ತು..|| ಹರೆಯದಲ್ಲಿ ಹಾಲು ಕರೆದು ಹಾಲುಣಿಸಿದ ತಾಯಿಗೆ ದ್ರೋಹ ಬಗೆದು ಮುದಿತನದಲ್ಲಿ ಕಟುಕನಿಗೆ ಕೊಡುವ ಬದಲು ನೀನೆ ಜೀವಂತ ಸಮಾಧಿ ಮಾಡಿದ್ದರೆ ಹಾಲುಣಿಸಿದ ಋಣವಾದರು ತೀರುತ್ತಿತ್ತು..|| ನಿನಗಾಗಿ ಹಗಲಿರುಳು ದುಡಿದು ಬಸವಳಿದ ನನಗೆ ಕಸಾಯಿಖಾನೆಗೆ ಕಳಿಸುವ ಬದಲು ದವಾಖಾನೆಗೆ ನನ್ನ ಕಳಿಸಿದ್ದರೆ ಈ ತಾಯಿಯ ಮನದ ನೋವು ಹಗುರವಾಗುತ್ತಿತ್ತು..|| ತಾಯಿಯೆಂದು ಪೂಜಿಸಿದ ನಿನು … Read more

ಮೂರು ಕವಿತೆಗಳು: ಉರ್ಬಾನ್ ಡಿಸೋಜ, ಅಕುವ, ಶಿವಕುಮಾರ ಸಿ.

ಹುಡುಕಾಟ ನಾನು ನನ್ನ ಬದುಕನ್ನು ಹೀಗೆಯೇ ಸುಮ್ಮನೆ ನೋಡಿದೆ, ಆಗ೦ತುಕ, ಆಗ೦ತುಕನನ್ನು ಭೇಟಿಯಾದ೦ತಾಯ್ತು. ಇದು ನನ್ನ ಬದುಕೇ? ಉತ್ತರ ಹುಡುಕಾಡಿದೆ. ಒಳ್ಳೇದೇ ಮಾಡಿದೆ,  ಕೋಟಿ ದೇವರನ್ನ ಬೇಡಿದೆ, ಆದರೂ ನನ್ನ ಬದುಕನ್ನು ನಾನೇ ಅರಿಯದಾದೆ. ಇತರ ಚಿ೦ತನೆ, ಮಾತುಗಳೇ ನಾನೆ೦ದುಕೊ೦ಡೆ. ಕಡಿದವನ, ಕುಡಿದವನ, ಅತ್ಯಾಚಾರಿಯ, ಲ೦ಚವಾದಿಯ ಬದುಕು ಯಾವ ರೀತಿಯದು ಎಂದು ನೆನೆದು ನಡುಗಿದೆ. ಸತ್ತ ನ೦ತರದ ಬದುಕನ್ನು ನೆನೆದು ಈಗಿನ ಬದುಕ ಮರೆತೆ? ಹೂವನ್ನೇ ಬಯಸಿದ ಬದುಕಿನೊಳಗೆ ಹರಿತ ಚಾಕುವೇ ತಿವಿಯಿತು. ಬದುಕೇ, ನೀನು ಮತ್ತೆ … Read more

ಮೂವರ ಕವಿತೆಗಳು: ಅಕ್ಷಯ ಕಾಂತಬೈಲು, ಸಿಂಧು ಹೆಗ್ಡೆ, ಸ್ಫೂರ್ತಿ ಗಿರೀಶ್

ಪ್ರಶ್ನೆಯ ಮೇಲೆ ಪ್ರಶ್ನೆ                 ಬಂಧುವೋ ಬಳಗವೋ ಯಾರೊಡೆ ಆನಂದವೋ ಸಂಸಾರದ ಬೇಲಿಯೊಳಗೆ ಮೇಯಿವ, ಬೇಯುವ ಮನಸಿನೊಳು ಎಲ್ಲವೂ ಶೂನ್ಯವು ಮುಂದೆ ಏನೋ ಹಿಂದೆ ಸವೆಸಿದ ಹಾದಿಯೋ ಬೆಟ್ಟ ತಪ್ಪಲು ಕಲ್ಲು ಚಪ್ಪಡಿ ಮೇಲೆ ಗಟ್ಟಿ ಮೆಟ್ಟದ ಪಾದವು ಬರೀ ಚಲಿಸುವ ಕಾಯವು ಹಬ್ಬಿದ ಉರಿ ಧಗೆಗೆ  ಬಸವಳಿದು ಬೆಂಡಾದ  ಸ್ಥಿತಿಯೋ ನದಿ ಮೂಲವ ತಿಳಿಯ ಹೊರಟ  ಜೀವವೇ ಆವಿಯು ಎಂತು ಕಟ್ಟಿತು ಮೋಡವು ಹೋರಾಟದ ಬದುಕೋ? … Read more

ಮೂವರ ಕವಿತೆಗಳು: ಲಕ್ಷ್ಮೀಶ ಜೆ.ಹೆಗಡೆ, ನವೀನ್ ಮಧುಗಿರಿ, ಅಕುವ

ಆತ್ಮ ಸೌಂದರ್ಯ ಕಣ್ಣು ಮಾತ್ರ ಕಂಡರೆ ಸಾಕೇ ಆತ್ಮಕ್ಕೂ ಕಾಣಬೇಡವೇ ಸೌಂದರ್ಯ ರಸಾನುಭೂತಿಯಲಿ ದೇಹ ತೇಲುವುದು ಆತ್ಮ ಪರಿತಪಿಸಿ ನರಳುವುದು ಹಲವು ರೀತಿಯ ನೂರಾರು ಲಹರಿ ಅನಂತಾನಂತ ಈ ಸೌಂದರ್ಯದ ಪರಿ ಕಣ್ಣಿಗೆ ಕಾಣುವುದು ಸಹಸ್ರ ರೀತಿ ಆತ್ಮಾನುಭವದಲಿರುವುದು ಒಂದೇ ಲಹರಿ ದೇಹ ಸೌಂದರ್ಯಕೆ ಮರುಳಾಗುವರು ಆತ್ಮೋನ್ನತಿಯಿಲ್ಲದೆ ನರಳುವರು ನಯನ ನೋಡುವುದು ಲೌಕಿಕ ಸೌಂದರ್ಯ ಆತ್ಮಕ್ಕೆ ಕಾಣುವುದು ಭವ ಮೀರಿದ್ದು ಮಾತ್ರ ಆತ್ಮ ಸಿಕ್ಕಿದ್ದು ವಿಶ್ವತೋಮುಖನಿಂದ ದೇಹ ಲಭಿಸಿದ್ದು ಪ್ರಕೃತಿ ಪುರುಷರಿಂದ ದೇವನೊಬ್ಬ ಆತ್ಮರೂಪಿ ಹಲವು ನಾಮಗಳಿಂದಾತ … Read more

ಮೂವರ ಕವಿತೆಗಳು: ರಘುನಂದನ ಹೆಗಡೆ, ಬಿ. ಸಿ. ಪ್ರಮೋದ, ಗಿರಿ

ನೀನಿಲ್ಲದ ಗೋಕುಲದ ಬೇಸರ ನಿನ್ನ ತುಟಿಯಂಚಿನ ಕೊಳಲಾಗುವೆ ಬಿಸಿಯುಸಿರ ಪುಳಕದಿ ರಾಗವಾಗುವೆ ಅನುರಾಗದ ರವಳಿಯ ತೇಲಿ ಬಿಡು ಶ್ಯಾಮ ಯಮುನಾ ತೀರದಿ ಹಾಡಾಗಿ ಹರಿಯಲಿ ಪ್ರೇಮ ನನ್ನೆದೆಯ ರಾಗ ಕೇಳು ಸಾಕು ಮಾಡೊ ವಿರಹಿ ಬಾಳು ನಿಂತೆ ಇದೆ ಜೀವ ಗೋಕುಲದಲ್ಲಿ ಜೀವಾಮೃತವಿದೆ ಎದೆಯಲ್ಲಿ ದ್ವಾರಕೆ, ಮಧುರೆಗಳು ಸಾಕು ಬಾ ನನ್ನೊಲವ ಬೃಂದಾವನಕೆ ಗೋಧೂಳಿ ದೀಪ ಮನದಲ್ಲಿ ಒಮ್ಮೆ ಹರಿವ ಯಮುನೆ ಕಣ್ಣಲ್ಲಿ ಇನ್ನೊಮ್ಮೆ ಗಿರಿಯ ಭಾರ ಎದೆಯಲ್ಲಿ  ಕಾಯುತ್ತ ನಿಂತೆ ಇದೆ ಜೋಕಾಲಿ ಯಾರಿಗೆ ಹೇಳಲೋ … Read more

ಮೂವರ ಕವಿತೆಗಳು: ಶೋಭಾಶಂಕರ್, ವಿನಾಯಕ ಭಟ್, ಶ್ರೀಕಾಂತ ಧಾರವಾಡ.

ಜಿ ಎಸ್ ಎಸ್ ಎದೆ ತುಂಬಿ ಹಾಡಿದ ಕವಿ ನವೋದಯದ ಸಮನ್ವಯ ಋಷಿ ಕನ್ನಡಿಗರ ಮನಸ ಗೆದ್ದ ಭಾವಜೀವಿ     ಇರುವಷ್ಟು ಕಾಲದಿ ಎದೆ ತುಂಬಿ ಮನತುಂಬಿ ತನು ತುಂಬಿ ಹಾಡಿದಾ ಕವಿ ಇಲ್ಲದ ದೇವರ ಹುಡುಕದೆ ಕಲ್ಲು ಮಣ್ಣುಗಳ ಗುಡಿಯೊಳಗೆ ಇಲ್ಲೇ ಇರುವ ಪ್ರೀತಿ-ಸ್ನೇಹಗಳ ಹೊಸೆದು  ದೇವರ ದರ್ಶನ ತೋರಿದ ದಾರ್ಶನಿಕ ಕವಿ ಹಾಡು ಹಳೆಯದಾದರೇನು ಭಾವ ನವನವೀನ ಎನಿಸಿ ಎಂದೆಂದಿಗೂ ಮರೆಯದ ಕಾವ್ಯ ಸೃಷ್ಟಿಸಿ ತುಂಬಿದರು ಬತ್ತದ ಅನಂತ ಜೀವನೋತ್ಸಾಹ!! ಹೂವು ಅರಳೀತು ಹೇಗೆ ಪ್ರೀತಿ … Read more

ಚುಟುಕಗಳು: ನವೀನ್ ಮಧುಗಿರಿ, ನಗೆಮಲ್ಲಿಗೆ

ಕಿರು ಕವಿತೆಗಳು —————— ಅಪ್ಪನ ನೇಗಿಲ ಕಾವ್ಯಕೆ ಹೊಟ್ಟೆ ತುಂಬಿದವರ ತೇಗುಗಳೇ ಪ್ರಶಸ್ತಿ , ಪುರಸ್ಕಾರ ತಟ್ಟೆಯಲಿ ಬಿಟ್ಟ, ತಿಪ್ಪೆಗೆ ಚೆಲ್ಲಿದ ಅನ್ನ ಅಪ್ಪನ ಬೆವರಿಗೆ ನೀವು ಮಾಡಿದ ಅವಮಾನ — ಮೊನ್ನೆ ಮಹಾನ್ ದೈವಭಕ್ತ ಸಿದ್ರಾಮ ದೇವರಿಗೆ ಕೈ ಮುಗಿದು ಕಾಣಿಕೆ ಸಲ್ಲಿಸಿ ದೇವಸ್ಥಾನದಿಂದ ಹೊರ ಬರುವಷ್ಟರಲ್ಲಿ ಅವನ ಚಪ್ಪಲಿ ಕಳುವಾಗಿದ್ದವು! — ರೈತನ ಬೆವರ ಹನಿ ಹೊಳೆದಿದೆ ಎಳೆ ಬಿಸಿಲಿಗೆ ಪೈರಿನ ನೆತ್ತಿಯ ಮೇಲೆ ತೆನೆ — ಒಂದಷ್ಟು ಪ್ರೀತಿ ಮಣ್ಣಾದ ಮೇಲೆ ಈ … Read more

ಮೂವರ ಕವಿತೆಗಳು: ಗಿರಿ, ರಘುನಂದನ ಹೆಗಡೆ, ಪಾ.ಮು.ಸುಬ್ರಮಣ್ಯ ಬ.ಹಳ್ಳಿ.

ಕಾಡುವ ನೆನಪಿನ ಹಿಂದೆ ನೂರೊಂದು ಚಡಪಡಿಕೆ ಒಂದೊಂದು ತಿರುವಲು ನಿನ್ನ ನಗುವಿನ ಪಳೆಯುಳಿಕೆ ಕಂಡೂ ಕಾಣದೆ ಕತ್ತಲಿನ ಮೂಲೆಯಲಿ ಕಂಪಸೂಸಿದ ನಿನ್ನ ಬೆಳದಿಂಗಳಂತ ನಸುನಗೆ ಸುಮ್ಮನೆ ಪ್ರೇಮಿಸುತಿದ್ದ ನನ್ನ ಕವಿಯನಾಗಿ ಮಾಡಿದ್ದು ನೀನಾ? ನಿನ್ನ ನೆನಪಾ? ಹೇಳು, ದಯವಿಟ್ಟು ಹೇಳು ಕನಸಲಿ ಬಂದು ಕನವರಿಸುವಂತೆ ಮಾಡಿದ್ದು ನೀನಾ? ನಿನ್ನ ಮುಂಗುರಳಾ? – ಗಿರಿ         ಮೂಲ ಮರೆತವನ ಹುಡುಕಾಟ ಅಂಗಳದಿಂದ ಹತ್ತು ಹೆಜ್ಜೆ ಎತ್ತಿಟ್ಟರೆ ನೆರಳು ಬಿಸಿಲು ಆಟವಾಡುವ ಮನೆ ಉಸ್ಸೆಂದು ಹಗುರಾಗಿ … Read more

ಮೂವರ ಕವಿತೆಗಳು

 ನನ್ನ ಅಪ್ಪ ಅಪ್ಪ ಶಬ್ದ ಕೇಳಿದಾಗ ನೆನಪಾಗುವ, ಮೊದಲ ಪ್ರಿಯ ದೇವರು ನೀವು, ನನ್ನ ಬಾಳ ಬಲಹೀನ ಕ್ಷಣಗಳ ಮಳೆಗೆ, ಬಲಿಷ್ಟವಾದ ಆಸರೆಯ ಕೊಡೆ ನೀವು, ನನ್ನ ಎದೆಯ ವೈಭವ ಗೋಪುರದ, ಹೆಮ್ಮೆಯ ಸುವರ್ಣ ಕಳಸವು ನೀವು, ನನ್ನ ಜೀವನದ ಹುಡುಕಾಟದ ಗುರಿ, ನಿಮ್ಮ ಮೊಗದ ಚಿರು ನಗುವಿನಲ್ಲಿ ಅಡಗಿರುವುದು, ನಿಮ್ಮ ಕರುಣೆಯ ಆಳವನು ಹೇಗೆ ಅರಿಯಲಿ, ಅದು ನನಗೆ ಚಿದಂಬರ ರಹಸ್ಯವಾಗಿದೆ. –ಬಿ.ಸಿ.ಪ್ರಮೋದ. ಎಮ್.ಟೆಕ್. ಎನ್.ಐ.ಟಿ.ಕೆ. ಸುರತ್ಕಲ.           ಅವಳು….??? … Read more