ಪಂಜು ಕಾವ್ಯಧಾರೆ

ಕಂಗೊಳಿಸೋ ಕಣ್ಣಲಿ ಮೂಡಿಸುದೆ ಮುಗುಳ್ನಗೆಯನ್ನ ಬಂಧಿಯಾಗಲು ಕಾಯುತಿರುವೆ ಚಿನ್ನ ನನ್ನ ಚಿನ್ನ   ಕಣ್ಣಂಚಿನ ನೋಟದಲಿ ಸೆರೆ ಹಿಡಿರುವೆ ನನ್ನ ಮನ ಮೋಹಿಸುವ ನಿನ್ನ ಪಿಸು ಮಾತುಗಳೆ  ಚೆನ್ನ ನೀ ತಿರುಗೆ ನೋಡುವ ಆ ನೋಟ ಬಹು ರೋಮಾಂಚನ ಕಂಗೊಳಿಸೋ ಕಣ್ಣಲಿ ಮೂಡಿಸುದೆ ಮುಗುಳ್ನಗೆಯನ್ನ ಸದಾ ನಿನ್ನ ನೋಡುವ ಆಸೆ ಮುಚ್ಚದೆ ಕಣ್ಣ ರೆಪ್ಪೆಯನ್ನ ಸವಿಯಲು ಕಾತುರ ನಿನ್ನ ತುಟಿ ಅಂಚಿನ ಸಿಹಿ ಜೇನನ್ನ ಸೆರೆ ಹಿಡಿದು ಬಂಧಿಸು ನಿನ್ನ ಮನಸಲಿ ನನ್ನ ಬಂಧಿಯಾಗಲು ಕಾಯುತಿರುವೆ ಚಿನ್ನ … Read more

ಪಂಜು ಕಾವ್ಯಧಾರೆ

ಮುಂಜಾನೆ ಮುಂಬಾಗಿಲು ಗುಡಿಸಿ  ಸಾರಿಸಿ ರಂಗೋಲಿ ಬರೆದು ತುಟಿಮೇಲೆ ನಗು ಹೊದ್ದುಕೊಳ್ಳಬೇಕು ಬೈಯ್ಯುವವರ ಮುಂದೆ ಬಿಲ್ಲಾಗಬೇಕು ಮೊಗ್ಗುಮೈಯ್ಯಲ್ಲಿ ಮನೆತುಂಬ ತಿರುಗಬೇಕು ಹೊಗಳಿದರೆ ಹೂವಾಗಬೇಕು ಹಕ್ಕಲ್ಲ ಎಸೆದ ರೊಟ್ಟಿಯ ಚೂರು        ಕತ್ತಲ ಕೊನೆದೀಪ        ಆರುವತನಕ        ತಾನಾಗಿದ್ದುಕೊಂಡು        ನಾನೆಂಬುವರಿಗೆಲ್ಲ ಹೂಂಗುಟ್ಟು        ಅಳಬೇಕೆಂದುಕೊಳ್ಳುತ್ತಲೇ ನಕ್ಕು        ನಗುವಲ್ಲೂ ಕಣ್ಕೊನೆಯುಕ್ಕಿ        ಕತ್ತಲ ಕೊನೆಯಾಟಕ್ಕೂ ಹಾಸಿಕೊಂಡು … Read more

ಪಂಜು ಕಾವ್ಯಧಾರೆ

"ಬಡತನ ಬಂದಿದೆ" ಬೆಳೆದು ನಿಂತಿರುವ ಪೈರು ಸೊರಗುತ್ತಿದೆ, ನೀರಿಲ್ಲದೇ ಇಲ್ಲಿ ಮಳೆಗೆ ಬಡತನ ಬಂದಿದೆ ! ಎರಡು ಹೃದಯಗಳಲ್ಲಿ  ಅರಳಿದ ಪ್ರೀತಿಯು ವೈಮನಸ್ಸಿನ ತಾಪಕ್ಕೆ  ಬೇರೆ-ಬೇರೆ ಆಗಿವೆ ಇಲ್ಲಿ ಪ್ರೀತಿಗೆ ಬಡತನ ಬಂದಿದೆ ! ದಣಿವರಿಯದ ದೇಹಕ್ಕೆ ದಣಿವಾಗಿ ಹಾಸಿಗೆ ಹಿಡಿದು ಮಲಗಿದೆ  ಇಲ್ಲಿ ಆರೋಗ್ಯಕ್ಕೆ ಬಡತನ ಬಂದಿದೆ ! ವೈದ್ಯನಲ್ಲಿ ಕಾಯಿಲೆಗೆ ಅಸ್ತ್ರವಿದೆ ಆ ಅಸ್ತ್ರ ಪಡೆಯಲು ಇಲ್ಲಿ ಬಡವನ ಜೇಬಿಗೆ ಬಡತನ ಬಂದಿದೆ ! ನನ್ನೊಳಗೂ ಕೆಚ್ಚದೆಯ ಕಿಚ್ಚಿದೆ ಹೊತ್ತಿಸಿಬೇಕೆಂದರೇ.. ಮನಸ್ಸು ಕಣ್ಣೀರಲ್ಲಿ ಮುಳುಗಿ … Read more

ಪಂಜು ಕಾವ್ಯಧಾರೆ

ಶಾಂತಿಗೀತೆ ಮುಗಿಲು.. ಕೆಂಡಕಾರುವ ಅಗ್ನಿಪಾತ್ರೆ ನೆಲ.. ಕಿಚ್ಚು ಎಬ್ಬಿಸುವ ಒತ್ತಲು ಗಾಳಿ.. ಕೊಳ್ಳಿಹೊತ್ತಿಸುವ ಕಟುಕ ಮಳೆ.. ಬಾರದೆ ಕಾಡುವ ಇನಿಯ ನಾನು..  ನೆಲವಾಗಬೇಕು ಮಲೆನಾಡ ಕಾಡಂತೆ ಮುಗಿಲಾಗಬೇಕು ಹುಣ್ಣಿಮೆ ಇರುಳಂತೆ ನಾನು.. ಗಾಳಿಯಾಗಬೇಕು.. ಬೆಂದೊಡಲ ತಣಿಸಬೇಕು ಮಳೆಯಾಗಬೇಕು.. ನದಿಯಾಗಿ ಹರಿಯಬೇಕು ನಾನು.. ಹಕ್ಕಿಯಾಗಬೇಕು.. ಗಡಿಗಳಾಚೆ ಹಾರಬೇಕು ಮದ್ದುಗುಂಡು ಬರುವ ದಾರಿಹಾಯ್ದು ಆಚೆ  ಹೋಗಿ ಶಾಂತಿ ಸಾರಿ ಬರಬೇಕು ಸರಹದ್ದಿನಗುಂಟ ಮುಳ್ಳಿನ ಬೇಲಿ ನಿಬಿಡ ಸರಳುಗಳ ಪಂಜರ ಹೇಗೆ ಹಾರಲಿ? ಬೇಡ.. ಬೇಡ.. ಈ ಜೀವಾವಧಿ ಶಿಕ್ಷೆ.. ನೀಡಬೇಡ.. … Read more

ಪಂಜು ಕಾವ್ಯಧಾರೆ

ಪಾಣೀಗ್ರಹಣ ಎಲ್ಲೂ ಅವಳಿಗೊಂದು ಹೊಚ್ಚ ಹೊಸ ಸವಿಯಿರುವ ವರ ಸಿಗುತ್ತಿಲ್ಲ ದೇವಾನುದೇವತೆಗಳ ವರಗಳ ಸ್ಟಾಕ್ ಖಾಲಿಯಾಗಿದೆ…… ಹಣ್ಣು ರುಚಿಕಟ್ಟನ್ನು ಕಳೆದುಕೊಳ್ಳುತ್ತಾ ರಾಶಿ ಬಿದ್ದಿರುವ ವಸಂತಗಳ ಎಣಿಸುತ್ತಿದೆ ಮತ್ತೊಂದು ವಸಂತಕ್ಕೆ ಕಾದಿರುವ ಬೂರಗ ಸತ್ತಂತೆ ನಿಂತಿದೆ ತಪೋನಿರತತೆಯಲ್ಲಿ ವಸಂತ ಕಟ್ಟಲು ಬೇಕಿರುವ ಮತ್ತೆರೆಡು ಜತೆ ಕೈಗಳು ಇಲ್ಲೆ ಎಲ್ಲೋ ಅಡಗಿರಬಹುದೆಂದು ಉಳಿ ಸುತ್ತಿಗೆ ತೆಗೆದು ಕಟೆಕಟೆದು ನೋಡುತ್ತಿದ್ದಾಳೆ  ನಿರರ್ಥಕವಾಗಿ ಮನದ ಮಾದರಿ ಮಸಕಾಗುತ್ತಿರುವ ಹೊತ್ತಲ್ಲಿ ಅದು ತನ್ನದೇ ಚಿತ್ರ ! ನಿರಾಶೆಯ ಮಡುವು ಸಂತೋಷದ ಚಿಲುಮೆ ಒಟ್ಟೊಟ್ಟಿಗೆ ಕಣ್ಣಿ … Read more

ಪಂಜು ಕಾವ್ಯಧಾರೆ

"ಶಬ್ದಾರ್ಥ ಶಿಲ್ಪ" ಕಾವ್ಯವೆನುವುದು ಒಂದು ಶಬ್ದಾರ್ಥ ಶಿಲ್ಪ ಕವಿಯ ಕೈಯಲಿ ನುಡಿಗೆ ಕಾಯಕಲ್ಪ      ಸಾಹಿತ್ಯ ಸಂಸ್ಕೃತಿಯ ಶೃತಿನಾದ  ಹಿಮ್ಮೇಳ      ಲಯಬದ್ದ ಪ್ರಾಸವಿಹ ರಸ ಭಾವಗಳ ಮೇಳ ಸಕಲ ಕಲೆಗಳ ಮೂಲ ವೈವಿಧ್ಯತೆಯ ವರ್ಣಜಾಲ    ನವರಸಗಳು ಕೂಡಿ ಆದ ಪದ ವಾಕ್ಯಗಳ ಮೋಡಿ      ಜಗದ ಜನ ಜೀವನದ ನಲಿವು ನೋವಿನ ಕಥನ      ನಾಕ ನರಕದ ಸೃಷ್ಟಿ ವ್ಯಕ್ತಿ-ಸಮಷ್ಠಿಗೆ ಪುಷ್ಟಿ ರವಿ ಕಾಣದೆಡೆಯಲ್ಲು ಕಂಡ ಕವಿಗಳ ಕಾಣ್ಕೆ … Read more

ಪಂಜು ಕಾವ್ಯಧಾರೆ

ಚುಟುಕಗಳು ಚಿಕ್ಕ ಚುಕ್ಕೆಗಳಿಟ್ಟು ಎಳೆಗಳೆಳೆದು  ಬರೆದಿದ್ದಾಳೆ ರಂಗೋಲಿ ಚಡಪಡಿಸುತ್ತಾಳೆ                                 ಮರಳು ಮಾಡುವ ಬಣ್ಣಗಳೊಳಗೆ   ಬಿಡಿಸಿಕೊಳ್ಳಲಾಗದ ಬಂಧಿ **** ಹೊಸದರೆಡೆಗೆ ಪಯಣವೆಂದರೆ ಹಳೆಯದು ಸಲ್ಲದೆಂದಲ್ಲ ಹಳೆಯದ ಒಟ್ಟಿಗಿಟ್ಟುಕೊಂಡೇ  ಹೊಸತರೆಡೆ ಸಾಗುವದು **** ನಡೆದಿದ್ದಾಳೆ ಅವಳು ಎಲ್ಲಿಗೋ  ಅವಳಿಗೇ ಗೊತ್ತಿಲ್ಲ ಮಾತಲ್ಲೇ  ಎದೆಬಗೆವವರ ಹೊತ್ತು ಹೊತ್ತಿಗೆ ನೆತ್ತಿಕುಟ್ಟಿ  ಕರ್ತವ್ಯ ನೆನಪಿಸುವವರನ್ನೆಲ್ಲ ಹಿಂದಕ್ಕೆ ಬಿಟ್ಟು  **** ನಿತ್ಯ … Read more

ಪಂಜು ಕಾವ್ಯಧಾರೆ

ಹಾಯ್ಕುಗಳು.. * ಸೀತೆಯ ಅಶ್ರು ಲಂಕೆಯ ತೊಳೆಯಿತು ಪಾವನಗಂಗೆ                   * ರಾತ್ರಿ ಚಂದಿರ ಶರಧಿಗೆ ಧುಮುಕಿ ಈಜು ಕಲಿತ          * ಲಾಸ್ಯವಾಡಿದೆ ನಂಜು ನುಂಗಿದವನ ವದನ; ತೃಪ್ತಿ          * ಮೂರು ಮೊಳದ ಸೀರೆಯುಟ್ಟವಳೀಗ ಹಾಯ್ಕು ಕನ್ನಿಕೆ!           * ಮೆತ್ತೆ ಸಿಕ್ಕಿದ ಜಗಳಕ್ಕೆ ನಿಂತಿಹ ಸಿಟ್ಟಿಗೋ ಹಬ್ಬ!   … Read more

ಪಂಜು ಕಾವ್ಯಧಾರೆ

ಕರೆದೊಡನೆ ಬಂದುದ ಕಂಡು ಯಾಮಾರಿದೆಯಾ.. ನಾ ಕಂದಮ್ಮನಲ್ಲ ಕಣ್ಣ ದಿಟ್ಟಿಸಿ ನೋಡು ಕ್ರೂರ ದೈತ್ಯನು ನಾನು ಎಷ್ಟೋ ತ್ವಚೆಯ ಸೀಳಿ ಹಸಿ ರಕುತವ ಕುಡಿದ ಹಲ್ಲಿನ ಮಸಿ ಕಂಡು ಕರಳು ನಡುಗುತಿದೆಯಾ… ಕಂದನೆಂದ್ ಯಾಮಾರಿದೆಯಾ..! ಅಂದೊಮ್ಮೆ ನೆನಪಿದೆಯಾ ಕತ್ತನು ಮುತ್ತಿಡಲು ಬಂದದು ಸರಸವಲ್ಲವದು ನೆತ್ತರಾಸೆ ತುಟಿಯ ತಾಕಲು ಉಸಿರ ಸೋಕುತ ಪಕ್ಕ ಸುಳಿದದು ರಕುತದಾಸೆ ನಂಬಿ ಕೆಟ್ಟೆ ನೀ ಪಾಪದ್ಹೆಣ್ಣೆ ಓಡಿ ಹೋದರೂ ಬಿಡೆನು ನಾನು ಶರಣು ಎಂದರೆ ಬಿಡುವೆನೇನು..? ಚೂಪು ಕಂಗಳ ನೋಟಗಾತಿ ಹಾಗೆ ನೋಡದಿರು … Read more

ಪಂಜು ಕಾವ್ಯಧಾರೆ

★ಸುತ್ತೋಣ ಬನ್ನಿ ಕರ್ನಾಟಕ★ ಬನ್ನಿರಿ ಗೆಳೆಯರೆ ನಾಡನು ಸುತ್ತಿ ದಸರ ರಜೆಯನು ಕಳೆಯೋಣ|| ಸ್ವಚ್ಛ ನಗರ ಮೈಸೂರಿಗೆ ಹೋಗಿ ದಸರೆಯ ವೈಭವ ನೋಡೋಣ|| ರಾಜಧಾನಿ ಬೆಂಗ್ಳೂರಿಗೆ ಹೋಗಿ ಪ್ರೇಕ್ಷಣೀಯ ಸ್ಥಳ ಸುತ್ತೋಣ|| ಬಡವರ ಊಟಿ ಹಾಸನ ಜಿಲ್ಲೆಯ ಬೇಲೂರು ಹಳೇಬೀಡು ನೋಡೋಣ|| ಬಿಸಿಲು ನಗರಿ ಬಳ್ಳಾರಿಗೆ ಹೋಗಿ ಹಂಪಿಯ ಶಿಲ್ಪಗಳ ಸುತ್ತೋಣ|| ಬೆಳಕ ನೀಡುವ ರಾಯಚೂರಿನಲಿ ಶಕ್ತಿನಗರವನು ನೋಡೋಣ|| ಬಾದಾಮಿ ಐಹೊಳೆ ಪಟ್ಟದ ಕಲ್ಲಿನ ಕಲಾವೈಭವವ ಸವಿಯೋಣ|| ಬಂದರು ನಗರ ಮಂಗಳೂರಿನಲಿ ಕಡಲಿನ ಆರ್ಭಟ ಅರಿಯೋಣ|| ಕರುನಾಡ … Read more

ಪಂಜು ಕಾವ್ಯಧಾರೆ

ತುಂಡು ಬಟ್ಟೆಯ ಮಾನ…..  ನಡೆದು ಹೋಗಲು ಅವಳು ಹಾದಿಯಲಿ  ಹಸಿದ ಮೊಸಳೆಗಳಂತೆ ನಿಂತು  ಕಾಯುವರು ಚುಡಾಯಿಸಲು ……  ಸೂಜಿಯ ಕಣ್ಣೋಟಗಳಿಂದ ಕೊಲ್ಲುವರು  ಅವಳ ಉಡುಗೆಯ ಅಂಚು ಪಾಪ!! ಗಾಳಿಗೆ ಹಾರಲು….  ಸಣ್ಣ ಬಟ್ಟೆ ತೊಡಲೇ ಬೇಕಿಲ್ಲವಳು  ಕ್ಷಣ ಕ್ಷಣ ಒಳಒಳಗೆ ಸಾಯಲು , ಕಾಲು ಭೂಮಿಗೆ ಸೋಕಿದರೆ ಸಾಕು, ಸಿದ್ಧವಾಗಿವೆ ಸಮಾಜ, ಕಟ್ಟುನಿಟ್ಟು, ಲಿಂಗ ತಾರತಮ್ಯ ಗಳು  ಅವಳ ಇರಿಯಲು….  ತುಂಡು ಬಟ್ಟೆ ತೊಟ್ಟ ಮಾತ್ರಕ್ಕೆ ಹೆಣ್ಣು  ಪರವಾನಗಿ ನೀಡಿದಂತೆಯೇ ಮುಟ್ಟಲು?????? ಹೌದೆನ್ನುವವರೇ ಹೇಳಿ ಹಾಯುವಿರಾ ನೀವು  … Read more

ಪಂಜು ಕಾವ್ಯಧಾರೆ

ನಿನ್ನ ಮಾತುಗಳು ಬೇಡುತ್ತಿರುವಾಗ ಬಲಿ ನನ್ನೆದೆಯ ನೋವನ್ನು ಯಾರಲ್ಲಿ ಹೇಳಿಕೊಳ್ಳಲಿ? ಮಾತಿಗೂ ಮೊದಲು ಕೋಪವೇ ಹೆಡೆ ಬಿಚ್ಚಿ ನಿಲ್ಲುತ್ತಿರುವಾಗ ಪಾತಾಳ ಗರುಡದ ಮಂತ್ರ ಕೋಲನ್ನು ಹುಡುಕುತ್ತ ಎಲ್ಲಿ ಹೋಗಲಿ? ಪ್ರೀತಿಯ ಹೂದೋಟದಲ್ಲಿ ಝಳಪಿಸುವ ಕತ್ತಿ ನರ್ತಿಸುವಾಗ ಸಾಣೆ ಹಿಡಿಯುವವರನ್ನು ಎಷ್ಟೆಂದು ಹುಡುಕಿ ಗಡಿಪಾರು ಮಾಡಲಿ? ಮನದ ಗರ್ಭಗುಡಿಯಲ್ಲಿ ನಂದಾದೀಪವೇ ಹೊತ್ತಿ ಪ್ರಜ್ವಲಿಸುವಾಗ ತಣ್ಣಿರು ಸುರಿದು ಬೆಂಕಿ ನಂದಿಸುವವರನ್ನು ಹುಡುಕುತ್ತ ಎಲ್ಲಿ ಹೋಗಲಿ? ಹೃದಯದಲ್ಲಿ ಪ್ರತಿಷ್ಟಾಪಿಸಿ ಮೂರ್ತಿ ತನ್ನನ್ನೇ ಭಗ್ನಗೊಳಿಸಿಕೊಳ್ಳುವಾಗ ಮುಕ್ಕಾಗದಂತೆ ಗರ್ಭಗುಡಿಯನ್ನು ಕಾವಲು ಕಾಯುವ ಕೆಲಸವನ್ನು ಯಾರಿಗೆ … Read more

ಪಂಜು ಕಾವ್ಯಧಾರೆ

ಮೌನಿ, ಗಿಜಿಗಿಡುವಂತೆ ಜನ ಸುತ್ತಲೆಲ್ಲರಿದ್ದರೂ ನಾ ನನ್ನೊಳು ಮಾತ್ರ ಮೌನಿ, ನನಗೆ ನಾನೇ ಮಿತ್ರ ನಾನೇ ಶತ್ರು ಏರಿಳಿತಗಳಲ್ಲೆಲ್ಲಾ ನನ್ನದು ಒಂದೇ ವೇಗ ಏರಿಗೆ ಕುಗ್ಗೇನು ಇಳಿವಿಗೆ ಹಿಗ್ಗೇನು ಜಾರಿದರೂ ಅಷ್ಟೇ ನೇಪಥ್ಯಕ್ಕೆ ಸರಿದರೂ ಅಷ್ಟೇ,, ಒಂಟಿ ದಾರಿಯಲಿ ನನಗೆ ನಾನೇ ಜಂಟಿ  ಒಬ್ಬೊಬ್ಬನೇ ಮಾತನಾಡಿಕೊಳ್ಳುತ್ತೇನೆ ಅಳುತ್ತೇನೆ, ನಗುತ್ತೇನೆ ಒಮ್ಮಮ್ಮೆ  ದು:ಖದಲಿ ಬಿಕ್ಕಿ ಬಿಕ್ಕಿ ಅಳುತ್ತೇನೆ, ಗೊತ್ತು ! ಈ ಜನರೆಲ್ಲ ನನ್ನ ಹಿಂದೆ ಆಡಿಕೊಳ್ಳುವರೆಂದು, ಹುಚ್ಚುಡುಗನೆಂದು ಲೊಚಗುಟ್ಟುವರೆಂದು, ಹರಿದ ಪ್ಯಾಂಟಿಗೆ ದಾರ ಕಟ್ಟಿ ಗೇಲಿ ಮಾಡುವರೆಂದು, … Read more

ಎತ್ತರಕ್ಕೆ ಬೆಳೆಯಲು ಜಾಣನೆಂಬ ಅಹಂಗೆ ಪೆಟ್ಟಾಗಲೇ ಬೇಕು..: ನಾಗರಾಜ್. ಮುಕಾರಿ (ಚಿರಾಭಿ)

        ನಾಲ್ಕನೇ ತರಗತಿಯಲ್ಲಿ ಕ್ಲಾಸ್ ಟೀಚರ್ ಆಗಿ ಇದ್ದಿದ್ದು ಒಬ್ಬರೇ ಮಾಸ್ತರು. ಅವರು ನನ್ನ ಜೀವನದಲ್ಲಿ ನೆನಪಿಟ್ಟು ಕೊಳ್ಳುವಂತಹ ವ್ಯಕ್ತಿತ್ವದವರು. ಅದು ನನ್ನ ನೆಚ್ಚಿನ ಕೊಟ್ರಪ್ಪ ಮಾಸ್ತರು. ಅವರೊಬ್ಬರೇ ಕನ್ನಡ, ವಿಜ್ಞಾನ, ಸಮಾಜ ಮತ್ತು ಗಣಿತ ಪಾಠವನ್ನು ಅತೀ ಸಂತೋಷವಾಗಿ ಹೇಳಿಕೊಡುತ್ತಿದ್ದುದು. ತಿಂಗಳಿಗೊಮ್ಮೆ ಪರೀಕ್ಷೆ, ಗರಿಷ್ಟ ಅಂಕ ಇಪ್ಪತೈದು. ಸರಿಸುಮಾರು ಎಲ್ಲಾ ವಿಷಯಗಳಲ್ಲೂ ಇಪ್ಪತ್ತರ ಮೇಲೆಯೇ ಗಳಿಸಿದ ನೆನಪು ನನಗೆ, ಅದಕ್ಕೆಂದೇ ಒಮ್ಮೆ ತರಗತಿಯ ಮಾನಿಟರ್ ಅದದ್ದೂ ಉಂಟು.  ಹಾಗೆಯೇ ಇರಲು ಒಂದು ದಿನ … Read more

ಪಂಜು ಕಾವ್ಯಧಾರೆ

ಮುಖವಾಡ!  ನಮಗೆ,  ಹುಟ್ಟುತ್ತಲೆ ತೊಡಿಸುತ್ತಾರೆ ಜಾತಿ ಧರ್ಮದ ಮುಖವಾಡ ದೊಡ್ಡವರಾಗುತ್ತಲೆ ಮತ್ತೆ ನಾವೆ ತೊಡುತ್ತೇವೆ ಬಣ್ಣ ಬಣ್ಣದ ಮುಖವಾಡ ನಂಬಿದ ಹೆಂಡತಿಯ ಎದರು ನಂಬದ ಗೆಳತಿಯೆದರೂ ಪ್ರೀತಿಸುವ ಮಿತ್ರನ ಎದರು ದ್ವೇಷಿಸುವ ಶತ್ರುಗಳೆದರೂ ನಮ್ಮ ವೃತ್ತಿಗೊಂದರಂತೆ ಇದೆ ಮುಖವಾಡ ಪ್ರವೃತ್ತಿಯಾಗಿ ಮತ್ತೆ ಬೇರೆ ಮುಖವಾಡ ಸಾರ್ವಜನಿಕ ಬದುಕಿನಲ್ಲಿ ಮುಖವಾಡಗಳದೆ ಮೇಲುಗೈ ಮುಖವಾಡವಿಲ್ಲದೆ ಕ್ಷಣಹೊತ್ತು ಬದುಕಲಾರೆವು ನಾವು ನಾವು ಮುಖವಾಡ ಕಳಚುತ್ತಲೆ ಇಲ್ಲ ಕನ್ನಡಿ ತೋರುವ ಮುಖ ನಮ್ಮದೆಂದು ನಂಬಿರುವೆವು ಎಲ್ಲ ನಿಜವಾಗಿ ನಾವು ನಾವೇ ಅಲ್ಲ ಯಾರು … Read more

ಪಂಜು ಕಾವ್ಯಧಾರೆ

ಬೆಳಗಲಿ ದೀಪ *** ಹೊತ್ತಲಿ ದೀಪ ಹೊತ್ತಿ ಉರಿಯುತ್ತಿರುವ ಭ್ರಷ್ಟರ ನಡುವೆ ಹೊತ್ತೇರುವದರಲ್ಲಿ ಹೊಸತನವ ಹೊಮ್ಮಿಸಲಿ ಬೆಳಗಲಿ ದೀಪ ಬಡವರ ಬಾಗಿಲಲಿ ಗುಡಿಸಲುಗಳಲಿ ಬೆಳಕಾಗುವದರೊಳಗೆ ಬದುಕು ಕತ್ತಲಿಂದ ದೂರವಾಗಲಿ ವಿಜೃಂಭಿಸಲಿ ದೀಪ ಸೋಲನ್ನುಂಡು ಹತಾಸೆಗೊಳಗಾದ ಮನಸುಗಳಲಿ ಗೆದ್ದು ಬೀಗುವವರ ಸೊಕ್ಕುಮುರಿದು ಬಿದ್ದಲ್ಲೇ ಬಿದ್ದಿರುವ ವೃದ್ಧರ ಬಾಳಲಿ ಝೇಂಕರಿಸಲಿ ದೀಪ ಹಣದ ಆಸೆಗೆ ಹೆಣವ ಕೆಡವಿದವರ ಚಿತೆಯೆದುರು ಹೆಣ್ಣಿನ ದೇಹಕೆ ಕಣ್ಣ ಹಾಕುವ ಕಾಮುಕರ ಶವದೆದುರು ಸುಡುಗಾಡಲಿ ಶೃಂಗಾರಗೊಳ್ಳಲಿ ದೀಪ ಸಿಂಧೂರವಿಲ್ಲದ ಹಣೆಗಳಮೇಲೆ ಕಣ್ಣುಗಳಿಲ್ಲದ ಕುರುಡರೆದೆಯಲಿ ಬಣ್ಣವಿರದ ಬದುಕಿನ … Read more

ಪಂಜು ಕಾವ್ಯಧಾರೆ

ಸಂಕೋಲೆಯೊಳಗಿನ ನೀನು! ನೀನು ಬಂದಾಗ ನಿಜವಾಗಿ ಬೆಳದಿಂಗಳು ಹಾಲಿನಂತೆ ಸುರಿದಿತ್ತು ನೋಡಿದ್ದಷ್ಟೇ ಭಾಗ್ಯ! ಅದನ್ನು ತುಂಬಿಡಲು ಯಾವ  ಬಟ್ಟಲಿಗೂ ಸಾದ್ಯವಾಗಿರಲಿಲ್ಲ ನಿನ್ನ ಕಣ್ಣುಗಳೊಳಗೆ ಅಂತಹುದೇ  ಬೆಳಕಿರಬಹುದೆಂದು ಕಾದಿದ್ದೇ ಬಂತು: ಒಂದು ತಣ್ಣನೆಯ ಸಂಜೆ ನಿನ್ನ ಕಣ್ಣುಗಳಲ್ಲಿ ಕಣ್ಣಿಟ್ಟು ನೋಡಿ ಬೆವೆತು ಹೋದೆ ನಿನ್ನ ಕಣ್ಣುಗಳ ತುಂಬ ಬೆಂಕಿ ಕೆನ್ನಾಲಿಗೆಗಳು ನಿನ್ನ ತುಟಿಗಳಿಗೆ ಬಂದೆ ಹೊರಬಂದದ್ದೆಲ್ಲ ನಿಗಿನಿಗಿ ಕೆಂಡದಂತ ಶಬ್ದಗಳು ನಿನ್ನ  ಎದೆಗೆ ಬಂದೆ ಕೊತಕೊತ ಕುದಿಯುವ ಲಾವಾರಸದ  ಕಡಲು ನಿನ್ನ ಸೊಂಟಕ್ಕೆ ಬಂದೆ ಮಿರಮಿರ ಮಿಂಚುವ ಬಿಳಿ … Read more

ಪಂಜು ಕಾವ್ಯಧಾರೆ

ಸುಡುಗಾಡಿನ ಹಾಡು                                          ಹಾಸಿದ ಹಾಸಿಗೆಯಲಿ ಮುಳ್ಳಿನ ಸಸಿಗಳ ಉದ್ಭವ ಹಾಕಿಕೊಂಡು ತಿರುಗಾಡುವ ಚಪ್ಪಲಿಯಲಿ ಏನೋ ಚುಚ್ಚುತಿರುವ ಅನುಭವ ಮಣ್ಣಲ್ಲಿ ಸಸಿಗಳು ಹುಟ್ಟುವುದೇಕೊ… ಯಾರ್ಯಾರ ಕಾಲಲ್ಲೊ ತುಳಿತಕ್ಕೊಳಗಾಗುವುದೇಕೋ… ಏನೂ ತಿಳಿಯದ ಗೊಂದಲ. ಹುಟ್ಟು ತಿಳಯುತ್ತಿದ್ದಂತೇ ವಿಷಗೊಬ್ಬರದ ಮಜ್ಜನವೇಕಿಲ್ಲೋ… ಬದುಕು ತಿಳಿಯುತ್ತಿದ್ದಂತೇ ತಕ್ಷಣ ಕಿತ್ತುಹಾಕಿಬಿಡುವ ಸಾಹಸವೇಕಿಲ್ಲೋ… ಏನೂ ತಿಳಿಯದ ಗೊಂದಲ. ಎಲ್ಲವೂ … Read more

ಪಂಜು ಕಾವ್ಯಧಾರೆ

ಅವ್ವ ಸಂತಸದಿ ಹೊತ್ತವಳು ನೋವೆಲ್ಲ ನುಂಗುತಲಿ ಕನಸಲ್ಲೆ ಕಳೆಯುವಳು ನವಮಾಸ ತುದಿವರೆಗು ಮರುಜನ್ಮ ಪಡೆದವಳು ಶಿಶುಕೈಗೆ ಜಾರುತಲಿ ನೋವಲ್ಲು ನಕ್ಕವಳು ಅಳುವಿನ ಕರೆಕೇಳಿ ಕೈಹಿಡಿದು ನಡೆಸುವಳು ಅಂಬೆಗಾಲು ತೊಡರಿರಲು ಹಸಿಯದಿರು ಉಣಿಸುವಳು ಕಾಳಜಿಗೂ ತವರಾಗಿ ಒಂದೇಟು ನೀಡುವಳು ತೊದಲಲ್ಲಿ ಪದತಪ್ಪಿರಲು ರಮಿಸುತ್ತ ಮುದ್ದಿಸುವಳು ಕಣ್ಣೀರು ಸುರಿಸುತಲಿ ಆಸೆಗಳ ಹೊತ್ತವಳು ಹೊಸಜೀವ ಚಿಗುರಿರಲು ಅವಳೆನ್ನ ಹೆತ್ತವಳು ಮುಡಿಪಿಡುವೆ ಕೇಳದಿರು ಮಂಜು ಹೆಗಡೆ ಇಚ್ಛಾಶಕ್ತಿ ಬೆಟ್ಟದಮೇಲಿನ ತುದಿಯಲ್ಲಿ ಒಡಲನೋವನ್ನಿಟ್ಟು ಬಿಟ್ಟು ಬರಲು ಮನಸಿಲ್ಲ ಒಲವ ಹಾದಿಯಲಿ ನಡೆವಾಗ ಜಾರಿದರೂ ಬೀಳಲಾರೆನು … Read more

ಪಂಜು ಕಾವ್ಯಧಾರೆ

ಸತ್ತ ನೆನ್ನೆಯ ನೆನಪುಗಳು ಎದೆಯಾಳದಲ್ಲೆಲ್ಲೋ ಗಿರಿಕಿ ಹೊಡೆದಂತಿದೆ ವರ್ಷಗಳು ನಿಮಿಷಗಳುರುಳಿದಂತೆ ಉರುಳುತಿವೆ ಅದೆಂತಹದೋ ಅವ್ಯಕ್ತ ನೋವು ಆವರಿಸಿ ಮರೆಯಾಗುತಿವೆ ನಿರ್ಜೀವ ಶವವಾಗಿ ಹೋಗಿರುವ ಮನದ ಮೂಲೆಯಲೆಲ್ಲೋ  ಸುಟ್ಟು-ಕರಕಲಾದ ಬರೀ ಬೇಡದ ಮಾತುಗಳು ಗೋಚರಿಸಿ ಅತಿರಿಕ್ತ ಭಾವ ನನ್ನೊಳಗೆ ಆವರಸಿ ಬೆಂಬಿಡದೆ ಕೊಲ್ಲುತಿದೆ ನೆನಪುಗಳಿಗೆ ಎಳ್ಳು-ನೀರು ಬಿಟ್ಟು ನಂಬಿಕೆಗೆ ತಿಲಾಂಜಲಿಯಿಟ್ಟು ಸಂಬಂಧಗಳ ಸಮಾಧಿ ಮೇಲೆ  ಹುಸಿ ನಗೆಯ ದಿರಿಸಿನೊಟ್ಟಿಗೆ ಮಾತುಗಳ ಕಳಚಿಟ್ಟು ಮೌನ ಧಾರಿಯಾಗಿ ನಡೆಯುತ್ತಿರುವೆ ಗತಿಸಿದ-ಮನ ಗುಂಡಾಂತರಗೊಳಿಸಿದ ಹಸಿ ಘಟನೆಗಳಿನ್ನು ಸ್ಮೃತಿ ಪಟದಲ್ಲಿ ಬಿಸಿಯಾಗಿ ಕುಂತಿವೆ ಗಿರಗಿಟ್ಲೆಯಂತೆ … Read more

ಪಂಜು ಕಾವ್ಯಧಾರೆ

ಹಿಂದೆಂದಿಗಿಂತಲೂ ಇಂದು ನಿನ್ನ ಅವಶ್ಯಕತೆ ಹೆಚ್ಚಿದೆ ಇಂದೇ ಹೊರಟು ಬಿಡುವ ಹಠ ಇನ್ನೂ ನಿನ್ನಲ್ಲೇಕಿದೆ? ಅಂದಿನ ಈ ನೋವು ಇಂದು ಶಮನಕ್ಕೆ ಕಾದಿದೆ ಬಿಟ್ಟುಹೋಗುವ ಮಾತು ಮರೆತು ಒಮ್ಮೆ ಸಂತೈಸಿ ಬಿಡು ಮುದುಡಿದ ಮೃದು ಮನಸಿಗೆ ಮುಲಾಮು ಲೇಪಿಸ ಬೇಕಿದೆ ಉರಿ ಹೆಚ್ಚಿಸುವ ಅಗಲುವಿಕೆಯ ಮಾತನ್ನು ತೊರೆದು ಬಿಡು ಕಳೆದುಕೊಳ್ಳುವ ಭೀತಿಗೆ ಮನಸು ದೃವಿಸಿ ಹೋಗಿದೆ ಎಂದೂ ಅಗಲದೆ ಉಳಿವ ನಿನ್ನ ಆಣೆಗೆ ಬದ್ಧನಾಗಿ ಬಿಡು ನನ್ನ ಬದುಕಿನ ಪುಸ್ತಕದಲ್ಲಿ ನಿನ್ನದೇ ‘ಸಿರಿ’ನಾಮವಿದೆ ಎದೆಯೊಳಗಿನ ಅಕ್ಷರವ ಅಳಿಸುವ … Read more

ಪಂಜು ಕಾವ್ಯಧಾರೆ

"ಮೇಘ ಶಾಮಲೆ" ಹೊಳಪು ಕಣ್ಣು ನೀಳ ಮೂಗು  ಕೆಂದುಟೀಯ ಸುಂದರಿ ನೀಲ ಮೇಘ ಶಾಮಲೆದೆಗೆ ಕನ್ನ ಹೊಡೆದ ಕಿನ್ನರಿ ನುಣುಪು ಕೇಶ ನೀಳ ಹುಬ್ಬು ನಾಗಜಡೆಯ ಸುಂದರಿ ನೆನೆವ ಮನಕೆ ಕಂಪನೀವ ಮುದ್ದು ಮನದ ಕಿನ್ನರಿ ಜಗದ ಸೊಬಗ ಸೆರೆಯೊಳಿಟ್ಟ ಎದೆಯ ಭಾರ ನಿನ್ನದು ಕೊಂಚ ಕೆಳಗೆ ಬಳುಕುತಿರುವ ನಡುವು ತೀರಾ ಸಣ್ಣದು ನಿನ್ನ ಅಂದ ಹೊಗಳಲಿಕ್ಕೆ ಇಷ್ಟು ಮಾತ್ರ ಸಾಲದು ಪೂರ್ಣ ಬರೆದು ಹೇಳಲಿಕ್ಕೆ ನನ್ನಿಂದಂತೂ ಆಗದು -ಉಶಿರು       ಎರಡು ಸಾಮಾನ್ಯರ … Read more

ಪಂಜು ಕಾವ್ಯಧಾರೆ: ಪ್ರವೀಣಕುಮಾರ್. ಗೋಣಿ, ಈರಣ್ಣ ಬೆಂಗಾಲಿ, ಸುನೀತಾ ಕುಶಾಲನಗರ, ಕು.ಸ.ಮಧುಸೂದನ ನಾಯರ್

ನಾ   ಏನನ್ನಲಿ ? ಬಿಕ್ಕಳಿಸಿ  ಹೊರಹಾಕಿದ ದುಃಖದ  ಕುರುಹೇ ಇರದಂತೆ  ಮಂದಹಾಸ ಬೀರುವ ನಿನ್ನ  ಪರಿಗೆ  ನಾ  ಏನನ್ನಲಿ ? ಹೆಡೆಬಿಚ್ಚಿ  ಕುಣಿವ ನರಳಿಕೆಯ  ಬಚ್ಚಿಟ್ಟು ಅರಳಿದಾ  ಸುಮದಂತೆ ಕಂಗೋಲಿಸುವಾ ನಿನ್ನ  ಪರಿಗೆ  ನಾ  ಏನನ್ನಲಿ ? ಅಲೆಯಾಗಿ  ಬರುವ ವೇದನೆಗಳ ಒಳಗವಿತಿಟ್ಟು ಶಾಂತ  ಸಾಗರದಂತೆ ಸಹನೆಯ ಹೆಪ್ಪಾಗಿಸಿಕೊಂಡ ನಿನ್ನ  ಪರಿಗೆ  ನಾ ಏನನ್ನಲಿ ? -ಪ್ರವೀಣಕುಮಾರ್. ಗೋಣಿ           ಜೀವ ಜಲ ನೀರು ನಮಗೆ ಜೀವನಾಧಾರ ನೀರಿಗಿಲ್ಲ ಯಾವುದೇ … Read more

ಪಂಜು ಕಾವ್ಯಧಾರೆ

ಸಾರ್ಥಕತೆ! ನಗರ ವೃತ್ತ ಬದಿಯಲೊಂದು ವೃಕ್ಷ ಒಡಲಲ್ಲಿ ಹೊತ್ತಿತ್ತು ಹೊರಲಾರದ ಹೊರೆ ! ಎಸ್‍ಟಿಡಿ ಬೋರ್ಡು ಪಾರ್ಲರ್ ಕಾರ್ಡು ಜೆರಕ್ಸ್ ಅಂಗಡಿ ಬಾಣ ನೆರಳಲ್ಲೇ ಅಂಗಡಿ ಹೂಡಿದ ಪಾಷಾನ ಪಂಕ್ಚರು ಹತಾರೆ ಟ್ಯೂಬು ಟಯರುಗಳು ಸಿನೀಮಾ ಪೋಸ್ಟರುಗಳು ಮೈತುಂಬಾ ಉಡುಗೆ ಬಣ್ಣಬಣ್ಣದ ತೊಡಿಗೆ! ಮೊಳೆ ಚುಚ್ಚಿದ್ದರು ಹಗ್ಗ ಬಿಗಿದಿದ್ದರು ರೆಂಬೆ ಮುರಿದಿದ್ದರು ನೆತ್ತಿ ತರಿದಿದ್ದರು ಸುಣ್ಣ ಬಳಿದು ಚರ್ಮ ಸುಲಿದು ಕ್ರೌರ್ಯ ಉಣಿಸಿದ್ದರು! ದಟ್ಟ ನೆರಳು ನೀಡಿ ನೂರಾರು ಶುಕಪಿಕಗಳಿಗೆ ನೆಮ್ಮದಿಯ ಗೂಡಾಗಿ ಹಚ್ಚ ಹಸಿರಾಗಿ  ತನ್ನದೆಲ್ಲವ … Read more

ಪಂಜು ಕಾವ್ಯಧಾರೆ: ಸಿರಿ, ಅರುಣ್ ಕುಮಾರ್ ಹೆಚ್ ಎಸ್, ಎಸ್.ಜಿ.ಶಿವಶಂಕರ್

ಬದುಕುವುದು ಕೆಲವೇ ದಿನ ಎಂದ ಮೇಲೆ…. ಬದುಕುವುದು ಇನ್ನು ಕೆಲವೇ ದಿನ ಎನ್ನುವ ಸತ್ಯ ತಿಳಿದ ಮೇಲೆ….. ನೀನು ದೂರವಾದ ದಿನಗಳ  ಲೆಕ್ಕ ಹಾಕುತ್ತ ಕಣ್ಣೀರು ಹಾಕುವುದಿಲ್ಲ ಕೊನೆಯ ಭೇಟಿಯಲ್ಲಿ  ನೀನಾಡಿದ ಮಾತುಗಳನ್ನು ಮೆಲಕು ಹಾಕುತ್ತ  ಮನಸ್ಸನ್ನು ರಾಡಿಯಾಗಿಸಿಕೊಳ್ಳುವುದಿಲ್ಲ ನೀನು ಕೊನೆಯದಾಗಿ ಕಳಿಸಿದ ಸಂದೇಶವನ್ನು ಪುನಃ ಪುನಃ ಓದುತ್ತ ನಿನ್ನ ದ್ವೇಷಕ್ಕೆ ಹೊಸ ಅರ್ಥ ಹುಡುಕುವುದಿಲ್ಲ ಯಾಕೆಂದರೆ, ನಾನು ಬದುಕ ಬೇಕಿದೆ ನಿನ್ನ ಧೂರ್ತ, ಕುತಿತ್ಸ ಮಾತುಗಳನ್ನು ಮರೆತು ಬರೀ ನನ್ನೊಳಗಿನ ಮಾತನ್ನಷ್ಟೇ ಕೇಳಬೇಕಿದೆ ನನ್ನೆದೆಯೊಳಗಿನ ಪ್ರೀತಿಯನ್ನು … Read more

ಎರಡು ಕವಿತೆಗಳು: ನಾ”ನಲ್ಲ”, ವಿನಾಯಕ ಅರಳಸುರಳಿ

ಬಾಳ ದಾರಿಯಲಿ ಬಂದು ಹೋಗುವವರಾರು, ಕೈ ಹಿಡಿದು ಜೊತೆಗೂಡಿ ಮುಂದೆ ಸಾಗುವವರಾರು, ಬರುವೆನೆಂದವರೀಗ ಬಿಟ್ಟು ಹೋಗುತಿರಲು, ಮನದಿ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಪ್ರಾಣ ಪಣವಿಟ್ಟು ನಾ ಹೋರಾಡುತಿರುವಾಗ, ಜನರ ನಿಯಮಕ್ಕೆಂದೂ ಎದೆಗುಂದದಿರುವಾಗ, ನನ್ನನು ತೊರೆದು ಹೋಗುವವರನು ನೋಡಿ, ಮತ್ತೆ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಮನಸೊಂದು ಬಯಸುವುದು ಅಪರಾಧವೇನಲ್ಲ, ಬಯಸಿದ್ದು ಪಡೆಯುವುದು ಹುಡುಗಾಟವೂ ಅಲ್ಲ, ಬಯಸಿ ಪಡೆದವರಿಂದು ಕೇಳುತಿಹರು ನನ್ನನ್ನು, "ಜೊತೆಯಾಗಿ ಉಳಿಯೋಕೆ ನೀನು ನನಗ್ಯಾರು?" ಕಣ್ಣಂಚಿನ ಹನಿ ಕೇಳು, ತುಟಿಯಂಚಿನ ನಗು ಕೇಳು, ಮರೆಯಲ್ಲಿ … Read more

ಮೂವರ ಕವಿತೆಗಳು ಕು.ಸ.ಮಧುಸೂದನರಂಗೇನಹಳ್ಳಿ, ಅನಿತಾ ಕೆ.ಗೌಡ, ರಾಜೇಶ್ವರಿ ಎಂ.ಸಿ.

ಅದೊಂದು ರಾಜ್ಯದಲ್ಲಿ! ಅಷ್ಟೆತ್ತರದ ಅರಮನೆ ಅಂಬರ ಮುಟ್ಟುವ ಕಳಸಗೋಪುರಗಳು ಸುತ್ತೇಳು ಕೋಟೆ ಗೋಡೆಗಳ ಮೇಲೆ ಫಿರಂಗಿಗಳ  ಹಿಂಡು ಸುತ್ತ ಶಸ್ತ್ರಸಜ್ಜಿತ ಸೈನಿಕರ ದಂಡು ಅಲ್ಲಲ್ಲಿ ವಿಶಾಲ ದೇವಳಗಳು ಸಾಹಿತ್ಯ ಸಂಗೀತ ಸಭಾಭವನಗಳು ಮೀಟಿದರೆ ನಾದ ಹೊಮ್ಮಿಸುವ ತಂತಿವಾದ್ಯಗಳು! ಕಲ್ಯಾಣಮಹೋತ್ಸವಕ್ಕಾಗಿ ಕಟ್ಟಿಸಿದಷ್ಟಗಲದ ಛತ್ರಗಳು ಕಸದ ತೊಟ್ಟಯ ಸುತ್ತ ಕಂತ್ರಿನಾಯಿಗಳು ತಲೆ ಹಿಡಿಯಲು ಗಿರಾಕಿಯನುಡುಕಿ ಹೊರಟ ಛತ್ರಿಗಳು ಬರೆದಿಟ್ಟ ಬೊಗಳೆ ಗ್ರಂಥಗಳು ಆಳುವ ಅರಸರು ಅವರ ಹೆಂಡಂದಿರು ಹೆಂಡಂದಿರ ಮಿಂಡರು ಮನೆಹಾಳು ವಂದಿಮಾಗದಿಗರಿಗಾಗಿ ಕಟ್ಟಿಸಿದ ಮಹಲುಗಳು ಅದರೊಳಗಿನವರ ತೆವಲುಗಳು ಐದು … Read more

ಪಂಜು ಕಾವ್ಯಧಾರೆ

ಮೊದಲ ಸಾಲಿನ ಹುಡುಗಿ ಸರಿಗಮಪದ ಹಿಡಿದು ತಂತಿಯ ಮೇಲೆ   ಹರಿಸಿ ಉಕ್ಕಿಸುವ ಆಲಾಪದಮಲು  ಎದೆಗೆ ಅಪ್ಪದ ಸಿತಾರಿನ ಮೇಲೆ ಸರಿವ ಅವನ ಸಪೂರ ಬೆರಳುಗಳು ಅವಸರದಲ್ಲಿ ತುಡಿವ ಸರಸದಂತೆ ಏನೊ ಮುಚ್ಚಿಟ್ಟ ಗುಟ್ಟುಬಿಚ್ಚಿ ಕಿವಿಗೆ  ಪಿಸುಗುಟ್ಟುತ್ತಿರುವಂತೆ ಅವನ ತೆಳು ತೆರೆದು ಮುಚ್ಚುವ ಎಸಳ ತುಟಿಗಳು ಉದ್ದ ಕೂದಲ ಸರಿಸಿ ಹಿಂದಕ್ಕೊಗೆವ ಠೀವಿಯ ಹೊಳಪಿನ ಭಾವ ಮುಖ ಮುಚ್ಚಿಬಿಡುವ ದಟ್ಟ ಕಪ್ಪು ಕಣ್ಣುಗಳು  ಕಣ್ಣುಮುಚ್ಚಾಲೆಯಲ್ಲಿ ರಾಗದೆಳೆಗಳು ಆಲಾಪಕ್ಕೆ ತಲೆದೂಗುವ ಒಳ ಆಸೆಗಳು ತಾಳ ಲೆಕ್ಕಕ್ಕೆ ಪಕ್ಕಾಗದ ಹಸ್ತ … Read more

ಕಾವ್ಯಧಾರೆ: ಯಲ್ಲಪ್ಪ ಎಮ್ ಮರ್ಚೇಡ್, ಚಾರುಶ್ರೀ ಕೆ.ಎಸ್., ಬಿದಲೋಟಿ ರಂಗನಾಥ್, ರಘು ಕ.ಲ., ರಾಘವೆಂದ್ರ ಹೆಗಡೆಕರ, ಅಮಿತ್ ಭಟ್

ಕಾವ್ಯ ನಮನ  "ಅಮರ ವೀರ:ಹನುಮಂತಪ್ಪ ಕೊಪ್ಪಗೆ ನಮನ" ಕನ್ನಡದ ನೆಲ ವೀರ ಪುತ್ರನೆ ಕನ್ನಡ ಮಣ್ಣಿನ ಧೀರ ಮಿತ್ರನೆ ಭಾರತ ಮಾತೆಯ ಹೆಮ್ಮೆಯ ಪುತ್ರನೆ ಉಕ್ಕಿನ ದೇಹದ ವೀರ ಕನ್ನಡಿಗನೆ ಕನ್ನಡದ ಕೆಚ್ಚೇದೆಯ ಗಂಡಗಲಿಯೆ ಗಂಡೆದೆಯ ಗುಂಡಿಗೆಯ ಮಗಧೀರನೆ ನಿನ್ನ ನಾಮವ ಪುಸ್ತಕದ ಪುಟ ಪುಟದಲಿ ಶತ ಕಾಲ ಅಮರವಾಗಿರಲಿ||1|| ನಿನ್ನ ಸತ್ತಿಲ್ಲದ ವಿಷಯ ಅರಿತ ಇಡೀ ದೇಶವೇ ಸಂತಸದಲಿ ಸಂಭ್ರಮಿಸಿ… ಪ್ರಾರ್ಥನೆ ಮಾಡಿತು, ನಿನ್ನ ಹೆತ್ತ ಮಡಿಲು ಮರೆಯಲ್ಲಿ ನಿಂತು ಬಿಗಿಹಿಡಿದ ನಿಟ್ಟುಸಿರು  ನಿಧಾನಕೆ ಬಿಟ್ಟಳು … Read more

ಕಾವ್ಯ ಧಾರೆ

ಮನೆ ಮಾತು ಮೌನ ಜಂಟಿ ಸದನ ಅನಿವಾರ್ಯತೆ ಖಡಕ್ ಅಧಿಕಾರಿಯೂ  ಸೇವಕನ  ಗುಲಾಮ ಸಮಾಧಾನ ಹಗಲಿನ ನಿರೀಕ್ಷೆಗಳಿಗೆ ರಾತ್ರಿ ಸ್ವಪ್ನ ಸ್ಖಲನ! ತಳ್ಳಾಟ ಹೆಣ್ಣಿನ  ತಾರತಮ್ಯಕ್ಕೆ ತವರು ಮನೆಯೆ ತೊಟ್ಟಿಲು! ಅಲ್ಲಿಂದಲೇ ತಳ್ಳಾಟ ಒಂದೊಂದೆ  ಮೆಟ್ಟಿಲು! ಕರಕುಂಡ ಪುಟಾಣಿ ಕಂದನ ನಗೆಮೊಗ್ಗು ಹೂವಾಯ್ತು ಅಮ್ಮನ ಕರ ಕುಂಡದಲ್ಲಿ ಮರದ ಹನಿ ಮಳೆ ಸುರಿದರೆ ಮರಗಿಡಗಳಿಗೆ ಅದೆಂಥ ಪುಳಕ ಮಳೆ ನಿಂತ ಮೇಲೂ ಹನಿ ಹನಿ ಜಳಕ! ಮೊದಲರಾತ್ರಿ ಮಾತು ಬೆಳ್ಳಿ ಮೌನ ಬಂಗಾರ ಮೊದಲ ರಾತ್ರಿ ಶೃಂಗಾರ … Read more