ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಭರವಸೆ, ಭಯ, ಜ್ಞಾನ ಸೂಫಿ ಮುಮುಕ್ಷು ಹಸನ್‌ ಮರಣಶಯ್ಯೆಯಲ್ಲಿದ್ದಾಗ ಯಾರೋ ಒಬ್ಬ ಕೇಳಿದ, “ಹಸನ್‌ ನಿನ್ನ ಗುರು ಯಾರು?” “ನೀನು ತುಂಬ ತಡಮಾಡಿ ಈ ಪ್ರಶ್ನೆ ಕೇಳಿರುವೆ. ಈಗ ಸಮಯವಿಲ್ಲ, ನಾನು ಸಾಯುತ್ತಿದ್ದೇನೆ.” “ನೀನೊಂದು ಹೆಸರು ಮಾತ್ರ ಹೇಳಬೇಕಷ್ಟೆ. ನೀನಿನ್ನೂ ಬದುಕಿರುವೆ, ನೀನಿನ್ನೂ ಉಸಿರಾಡುತ್ತಿರುವೆ, ಆದ್ದರಿಂದ ಸುಲಭವಾಗಿ ನನಗೆ ನಿನ್ನ ಗುರುವಿನ ಹೆಸರು ಹೇಳಬಹುದು.” “ಅದು ಅಷ್ಟು ಸುಲಭವಲ್ಲ. ಏಕೆಂದರೆ ನನಗೆ ಸಹಸ್ರಾರು ಗುರುಗಳಿದ್ದರು. ಅವರ ಹೆಸರುಗಳನ್ನು ಹೇಳಲು ನನಗೆ ಅನೇಕ ತಿಂಗಳುಗಳು, ಅಲ್ಲ, ವರ್ಷಗಳು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಡ್ರ್ಯಾಗನ್‌  ಕೊಲ್ಲುವವ ಅಂದುಕೊಳ್ಳುತ್ತಿದ್ದವನ ಕತೆ ತಾನೊಬ್ಬ ಡ್ರ್ಯಾಗನ್‌ ಬೇಟೆಗಾರ ಎಂಬುದಾಗಿ ಹೇಳಿಕೊಳ್ಳುತ್ತಿದ್ದವನೊಬ್ಬ ಡ್ರ್ಯಾಗನ್‌ ಹಿಡಿಯಲೋಸುಗ ಪರ್ವತ ಪ್ರದೇಶಕ್ಕೆ ಹೋದನು. ಪರ್ವತ ಶ್ರೇಣಿಯಲ್ಲೆಲ್ಲ ಡ್ರ್ಯಾಗನ್‌ಗಾಗಿ ಹುಡುಕಾಡತೊಡಗಿದ. ಕೊನೆಗೆ ಅತ್ಯಂತ ಎತ್ತರದ ಪರ್ವತವೊಂದರಲ್ಲಿ ಅತೀ ಎತ್ತರದಲ್ಲಿದ್ದ ಗುಹೆಯೊಂದರಲ್ಲಿ ಬೃಹತ್ ಗಾತ್ರದ ಡ್ರ್ಯಾಗನ್‌ನ ಘನೀಕೃತ ದೇಹವೊಂದನ್ನು ಆವಿಷ್ಕರಿಸಿದ. ಅದನ್ನು ಆತ ಬಾಗ್ದಾದ್‌ಗೆ ತಂದನು. ಅದನ್ನು ತಾನು ಕೊಂದದ್ದಾಗಿ ಘೋಷಿಸಿ ಅಲ್ಲಿನ ನದಿಯ ದಡದಲ್ಲಿ ಪ್ರದರ್ಶನಕ್ಕೆ ಇಟ್ಟನು. ಡ್ರ್ಯಾಗನ್‌ ಅನ್ನು ನೋಡಲು ನೂರುಗಟ್ಟಲೆ ಸಂಖ್ಯೆಯಲ್ಲಿ ಜನ ಬಂದರು.  ಬಾಗ್ದಾದ್‌ನ ಬಿಸಿ ವಾತಾವರಣ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮಂಗಗಳನ್ನು ಹಿಡಿಯುವುದು ಹೇಗೆ? ಒಂದಾನೊಂದು ಕಾಲದಲ್ಲಿ ಚೆರಿ ಹಣ್ಣುಗಳನ್ನು ಬಲು ಇಷ್ಟಪಡುತ್ತಿದ್ದ ಮಂಗವೊಂದಿತ್ತು. ಒಂದು ದಿನ ಅದಕ್ಕೆ ರಸಭರಿತ ಚೆರಿ ಹಣ್ಣೊಂದು ಗೋಚರಿಸಿತು. ಆ ಹಣ್ಣನ್ನು ಪಡೆಯಲೋಸುಗ ಮಂಗ ಮರದಿಂದ ಇಳಿದು ಬಂದಿತು. ಆ ಹಣ್ಣು ಒಂದು ಶುಭ್ರವಾದ ಗಾಜಿನ ಸೀಸೆಯೊಳಗಿತ್ತು. ವಿವಿಧ ರೀತಿಯಲ್ಲಿ ಪ್ರಯತ್ನಿಸಿದ ನಂತರ ಸೀಸೆಯ ಕತ್ತಿನೊಳಕ್ಕೆ ಕೈತೂರಿಸಿ ಹಣ್ಣನ್ನು ಹಿಡಿಯಬಹುದು ಎಂಬುದನ್ನು ಅದು ಪತ್ತೆಹಚ್ಚಿತು. ಅಂತೆಯೇ ಕೈತೂರಿಸಿ ಹಣ್ಣನ್ನು ಹಿಡಿದುಕೊಂಡಿತಾದರೂ ಮುಷ್ಟಿಯಲ್ಲಿ ಹಣ್ಣನ್ನು ಹಿಡಿದುಕೊಂಡಾಗ ಅದರ ಗಾತ್ರ ಸೀಸೆಯ ಕತ್ತಿನ ಗಾತ್ರಕ್ಕಿಂತ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಅರಬ್ಬನ ಅಶ್ಲೀಲ ಬಯ್ಗುಳವೂ ದೇವರ ಸಂದೇಶವೂ ಒಂದು ದಿನ ಪ್ರವಾದಿ ಮೊಹಮ್ಮದ್‌ರು ಮಸೀದಿಯೊಂದರಲ್ಲಿ ಬೆಳಗಿನ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅವರೊಂದಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದವರ ಪೈಕಿ ಇಸ್ಲಾಂನಲ್ಲಿ ಮೇಲೇರಬಯಸುತ್ತಿದ್ದ ಅರಬ್ಬನೊಬ್ಬನಿದ್ದ. ಆ ದಿನ ಕೊರಾನ್‌ನಲ್ಲಿ “ನಾನೇ ನಿಮ್ಮ ನಿಜವಾದ ದೇವರು” ಎಂಬ ಅರ್ಥವಿರುವ ಫೆರೋನ ಹೇಳಿಕೆ ಉಳ್ಳ ಶ್ಲೋಕವನ್ನು ಮಹಮ್ಮದ್‌ರು ಪಠಿಸುತ್ತಿದ್ದಾಗ ಅದನ್ನು ಕೇಳಿದ ಅರಬ್ಬನು ಕೋಪೋದ್ರಿಕ್ತನಾಗಿ ಪ್ರಾರ್ಥನೆಯನ್ನು ನಿಲ್ಲಿಸಿ ಬೊಬ್ಬೆ ಹೊಡೆದ: “ಸೂಳೆಮಗ*, ಬಡಾಯಿಕೋರ!” ಪ್ರವಾದಿಗಳು ತಮ್ಮ ಪ್ರಾರ್ಥನೆ ಮುಗಿಸಿದ ಕೂಡಲೆ ಅವರ ಸಹಚರರು ಅರಬ್ಬನಿಗೆ ಛೀಮಾರಿ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನೂರಿ ಬೆ ಎಂಬಾತನ ಪುರಾತನ ಪೆಠಾರಿ ಚಿಂತನಶೀಲ ನೂರಿ ಬೆ ಅಲ್ಬೇನಿಯಾದ ಒಬ್ಬ ಗೌರವಾನ್ವಿತ ನಿವಾಸಿ. ತನಗಿಂತ ಬಹಳಷ್ಟು ಚಿಕ್ಕವಳಾಗಿದ್ದವಳೊಬ್ಬಳನ್ನು ಅವನು ಮದುವೆಯಾಗಿದ್ದ. ಒಂದು ದಿನ ಅವನು ಮಾಮೂಲಿಗಿಂತ ಬೇಗನೆ ಮನೆಗೆ ಹಿಂದಿರುಗಿದಾಗ ಅವನ ಅತ್ಯಂತ ವಿಧೇಯ ಸೇವಕನೊಬ್ಬ ಓಡಿ ಬಂದು ಹೇಳಿದ, “ನಿಮ್ಮ ಹೆಂಡತಿ, ಅರ್ಥಾತ್ ನಮ್ಮ ಯಜಮಾನಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಾರೆ. ಅವರ ಕೊಠಡಿಯಲ್ಲಿ ಒಬ್ಬ ಮನುಷ್ಯ ಹಿಡಿಸಬಹುದಾದಷ್ಟು ದೊಡ್ಡ ಪೆಠಾರಿಯೊಂದಿದೆ. ಅದು ನಿಮ್ಮ ಅಜ್ಜಿಯದ್ದು. ನಿಜವಾಗಿ ಅದರಲ್ಲಿ ಕಸೂತಿ ಕೆಲಸ ಮಾಡಿದ ಪುರಾತನ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ತಂದೆ, ಮಗ ಹಾಗು ಕತ್ತೆ ತಂದೆ ಹಾಗು ಮಗ ತಮ್ಮ ಕತ್ತೆಯೊಂದಿಗೆ ನಡೆದುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದರು. ಅದೇ ದಾರಿಯಲ್ಲಿ ಹೋಗುತ್ತಿದ್ದ ಹಳ್ಳಿಯವನೊಬ್ಬ ಹೇಳಿದ, “ನೀವೆಂಥ ಮೂರ್ಖರು. ಕತ್ತೆ ಇರುವುದೇ ಸವಾರಿ ಮಾಡಲೋಸುಗವಲ್ಲವೆ?” ಇದನ್ನು ಕೇಳಿದ ತಂದೆ ಮಗನನ್ನು ಕತ್ತೆಯ ಮೇಲೆ ಕುಳ್ಳಿರಿಸಿದ. ಇಂತು ಅವರು ಪ್ರಯಾಣ ಮುಂದುವರಿಸಿದರು. ಸ್ವಲ್ಪ ಸಮಯದ ನಂತರ ಅವರು ಒಂದು ಗುಂಪಾಗಿ ಹೋಗುತ್ತಿದ್ದ ಕೆಲವರನ್ನು ಸಂಧಿಸಿದರು. ಅವರ ಪೈಕಿ ಒಬ್ಬ ಹೇಳಿದ, “ನೋಡಿ, ನೋಡಿ. ಆ ಯುವಕ ಎಷ್ಟು ಸೋಮಾರಿ! ತನ್ನ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಹೊಸತಾಗಿ ಮತಾಂತರಗೊಂಡವನು ಒಂದು ಊರಿನಲ್ಲಿ ಒಬ್ಬ ಮುಸಲ್ಮಾನ ಹಾಗು ಒಬ್ಬ ಕ್ರೈಸ್ತಮತೀಯ ಸ್ನೇಹಿತರು ನೆರೆಹೊರೆವಾಸಿಗಳಾಗಿದ್ದರು. ಇವರೀರ್ವರಲ್ಲಿ ಪ್ರತಿಯೊಬ್ಬನಿಗೂ ಇನ್ನೊಬ್ಬನ ಯೋಗಕ್ಷೆಮದ ಕಾಳಜಿ ಇದ್ದದ್ದರಿಂದ ಆರೋಗ್ಯದ ಹಾಗು ಇನ್ನಿತರ ಖಾಸಗಿ ವಿಷಯಗಳ ಕುರಿತು ಆಗಾಗ್ಗೆ ವಿಚಾರವಿನಿಮಯ ಮಾಡಿಕೊಳ್ಳುತ್ತಿದ್ದರು. ಬಲು ಶ್ರದ್ಧೆಯಿಂದ ಇಸ್ಲಾಂ ಮತಾಚರಣೆಗಳನ್ನು ಮಾಡುತ್ತಿದ್ದ ಮುಸಲ್ಮಾನನು ತನ್ನ ಮತದ ಹಿರಿಮೆಯನ್ನು ಬಹುವಾಗಿ ಹೇಳುತ್ತಿದ್ದದ್ದರ ಪರಿಣಾಮವಾಗಿ ಕ್ರೈಸ್ತಮತೀಯನು ಇಸ್ಲಾಂ ಮತಕ್ಕೆ ಮಾತಾಂತರಗೊಂಡನು.  ಮತಾಂತರಗೊಂಡ ಮಾರನೆಯ ದಿನ ಬೆಳಗಿನ ಜಾವದಲ್ಲಿ ಅವನ ಮನೆಯ ಬಾಗಿಲನ್ನು ಯಾರೋ ಜೋರಾಗಿ ಬಡಿಯುತ್ತಿದ್ದದರಿಂದ ಅರೆನಿದ್ದೆಯಲ್ಲಿದ್ದ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮೂವರು ಯಾತ್ರಿಕರ ಕತೆ ಸುದೀರ್ಘವೂ ದಣಿಸಬಲ್ಲದ್ದೂ ಆದ ಯಾತ್ರೆಯ ಅವಧಿಯಲ್ಲಿ ಮೂವರು ಅಪರಿಚಿತರು ಸಂಗಾತಿಗಳಾಗಿ ತಮ್ಮೆಲ್ಲ ಸಂಪನ್ಮೂಲಗಳನ್ನು ಒಟ್ಟುಗೂಡಿಸಿ ಸುಖದುಃಖಗಳನ್ನು ಹಂಚಿಕೊಂಡು ಪಯಣಿಸುತ್ತಿದ್ದರು. ಅನೇಕ ದಿನಗಳು ಪಯಣಿಸಿದ ನಂತರ ಒಂದು ದಿನ ತಮ್ಮ ಹತ್ತಿರ ಒಂದು ತುಣುಕು ಬ್ರೆಡ್‌ ಮತ್ತು ಒಂದು ಗುಟುಕು ನೀರು ಮಾತ್ರ ಉಳಿದಿರುವ ಸಂಗತಿ ಅವರ ಗಮನಕ್ಕೆ ಬಂದಿತು. ಈ ಆಹಾರ ಮೂವರ ಪೈಕಿ ಯಾರಿಗೆ ಸೇರಬೇಕೆಂಬುದರ ಕುರಿತು ಅವರು ಜಗಳವಾಡಲು ಆರಂಭಿಸಿದರು. ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಉಳಿದಿದ್ದ ಬ್ರೆಡ್‌ ಹಾಗು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕೋಡಂಗಿ ಒಬ್ಬಾತ ಮನೋವೈದ್ಯರನ್ನು ಭೇಟಿ ಮಾಡಿ ಹೇಳಿದ, “ ಡಾಕ್ಟರೇ, ನಾನು ಯಾವಾಗಲೂ ಮಂಕಾಗಿರುತ್ತೇನೆ. ನಾನೇನೇ ಮಾಡಿದರೂ ಮಂಕಾಗಿಯೇ ಇರುತ್ತೇನೆ. ಇದಕ್ಕೇನು ಪರಿಹಾರ ಎಂಬುದೇ ತಿಳಿಯುತ್ತಿಲ್ಲ.” ಮನೋವೈದ್ಯರು ಅವನನ್ನು ನೇರವಾಗಿ ನೋಡುತ್ತಾ ಹೇಳಿದರು, “ನನ್ನ ಜೊತೆಯಲ್ಲಿ ಕಿಟಕಿಯ ಹತ್ತಿರ ಬಾ.” ಇಬ್ಬರೂ ಕಿಟಕಿಯನ್ನು ಸಮೀಪಿಸಿದಾಗ ಮನೋವೈದ್ಯರು ಹೊರಗೆ ಒಂದು ದಿಕ್ಕಿನತ್ತ ತೋರಿಸುತ್ತಾ ಹೇಳಿದರು, “ಅಲ್ಲೊಂದು ಡೇರೆ ಕಾಣುತ್ತಿದೆಯಲ್ಲವೇ?. ಅದೊಂದು ಸರ್ಕಸ್ಸಿನ ಡೇರೆ. ಆ ಸರ್ಕಸ್‌ ನಿಜವಾಗಿಯೂ ಬಲು ಚೆನ್ನಾಗಿದೆ. ಅದರಲ್ಲೊಬ್ಬ ನಿಜವಾಗಿಯೂ ಜನಗಳನ್ನು ನಗಿಸಬಲ್ಲ ಕೋಡಂಗಿಯೊಬ್ಬನಿದ್ದಾನೆ. … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ವ್ಯಾಧಿಗ್ರಸ್ತ ರಾಜನ ಕತೆ ರಾಜನೊಬ್ಬ ಭೀಕರ ಕಾಯಿಲೆಯಿಂದ ನರಳುತ್ತಿದ್ದ. ನಿರ್ದಿಷ್ಟ ಲಕಷ್ಣಗಳುಳ್ಳ ವ್ಯಕ್ತಿಯೊಬ್ಬನ ಪಿತ್ತಕೋಶವನ್ನು ಬಿಟ್ಟರೆ ರಾಜ ಅನುಭವಿಸುತ್ತಿದ್ದ ನೋವಿಗೆ ಪರಿಹಾರವೇ ಇಲ್ಲವೆಂಬುದಾಗಿ ವೈದ್ಯರ ತಂಡವೊಂದು ತೀರ್ಮಾನಿಸಿತು. ಅಂಥ ವ್ಯಕ್ತಿಯನ್ನು ಹುಡುಕುವಂತೆ ರಾಜ ತನ್ನ ಸೇವಕರಿಗೆ ಆಜ್ಞಾಪಿಸಿದ. ಪಕ್ಕದ ಹಳ್ಳಿಯಲ್ಲಿಯೇ ಅಗತ್ಯವಾದ ಎಲ್ಲ ಲಕ್ಷಣಗಳೂ ಇದ್ದ ಆದಿಲ್‌ ಎಂಬ ಹುಡುಗನನ್ನು ಅವರು ಪತ್ತೆಹಚ್ಚಿದರು. ರಾಜನು ಅವನ ತಂದೆತಾಯಿಯರನ್ನು ಬರಹೇಳಿ ಅವರನ್ನು ಸಂತೋಷಪಡಿಸಬಲ್ಲ ಅನೇಕ ಉಡುಗೊರೆಗಳನ್ನು ನೀಡಿದ. ಬಲು ಉನ್ನತ ಶ್ರೇಣಿಯ ನ್ಯಾಯಾಧೀಶನೊಬ್ಬ ರಾಜನ ಪ್ರಾಣ ಉಳಿಸಲೋಸುಗ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮಂಗಗಳೂ ಟೊಪ್ಪಿಗಳೂ ಒಂದಾನೊಂದು ಕಾಲದಲ್ಲಿ ಜೀವನೋಪಾಯಕ್ಕಾಗಿ ಊರಿಂದೂರಿಗೆ ತಿರುಗುತ್ತಾ  ಟೊಪ್ಪಿಗಳನ್ನು ಮಾರುತ್ತಿದ್ದ ಔರಂಗಝೇಬ್‌ ಎಂಬ ಯುವಕನಿದ್ದ. ಬೇಸಿಗೆಯ ಒಂದು ಅಪರಾಹ್ನ ವಿಶಾಲವಾದ ಬಯಲಿನಲ್ಲಿ ಪಯಣಿಸಿ ಸುಸ್ತಾಗಿದ್ದ ಔರಂಗಝೇಬನು ಯಾವುದಾದರೂ ತಂಪಾದ ಸ್ಥಳದಲ್ಲಿ ವಿರಮಿಸಿ ಒಂದು ಕಿರುನಿದ್ದೆ ಮಾಡುವ ಆಲೋಚನೆ ಮಾಡಿದ. ಸಮೀಪದಲ್ಲಿಯೇ ಇದ್ದ ಮಾವಿನ ಮರವೊಂದರ ಬುಡದಲ್ಲಿ ತನ್ನ ಚೀಲವನ್ನಿಟ್ಟು ಮಲಗಿ ನಿದ್ದೆ ಮಾಡಿದ. ಕೆಲವೇ ಕ್ಷಣಗಳಲ್ಲಿ ಗಾಢ ನಿದ್ದೆಗೆ ಜಾರಿದ. ಸ್ವಲ್ಪ ಸಮಯದ ನಂತರ ಎಚ್ಚರಗೊಂಡು ನೋಡುವಾಗ ಚೀಲದಲ್ಲಿ ಇದ್ದ ಟೊಪ್ಪಿಗಳೆಲ್ಲವೂ ಮಾಯವಾಗಿದ್ದವು. “ಛೇ, … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ದತ್ತು ಹಕ್ಕಿಮರಿಯ ಕತೆ ಒಂದಾನೊಂದು ಕಾಲದಲ್ಲಿ ಹಾರಲಾರದ ಹೆಣ್ಣು ಪಕ್ಷಿಯೊಂದಿತ್ತು. ಕೋಳಿಯಂತೆ ನೆಲದ ಮೇಲೆ ನಡೆದಾಡುತ್ತಿದ್ದ ಅದಕ್ಕೆ ಕೆಲವು ಪಕ್ಷಿಗಳು ನಿಜವಾಗಿಯೂ ಹಾರುತ್ತಿದ್ದವು ಎಂಬುದು ತಿಳಿದಿತ್ತು. ಒಂದು ದಿನ ಅದು ಹಾರುವ ಪಕ್ಷಿಯ ಪರಿತ್ಯಕ್ತ ಮೊಟ್ಟೆಯೊಂದನ್ನು ನೋಡಿತು. ಮೊಟ್ಟೆಯೊಡೆದು ಮರಿ ಹೊರಬರುವ ವರೆಗೆ ಅದಕ್ಕೆ ಕಾವು ಕೊಡಲು ತೀರ್ಮಾನಿಸಿತು. ಯುಕ್ತ ಸಮಯಾನಂತರ ಮೊಟ್ಟೆಯನ್ನು ಒಡೆದುಕೊಂಡು ಮರಿ ಹೊರಬಂದಿತು. ಅದು ಹಾರುವ ಸಾಮರ್ಥ್ಯವಿದ್ದ ಪಕ್ಷಿಯ ಮೊಟ್ಟಯಿಂದ ಹೊರಬಂದ ಮರಿಯಾದ್ದರಿಂದ ಅದಕ್ಕೂ ಹಾರುವ ಸಾಮರ್ಥ್ಯ ಹುಟ್ಟುವಾಗಲೇ ಇತ್ತು. ತುಸು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕಲಾವಿದರ ಕತೆ ಸುಲ್ತಾನ ಶೋಯೆಬ್‌ನ ಸಮ್ಮುಖದಲ್ಲಿ ಚೀನೀ ಕಲಾವಿದರ ಹಾಗೂ ಗ್ರೀಕ್‌ ಕಲಾವಿದರ ಪುಟ್ಟ ಗುಂಪುಗಳ ನಡುವೆ ಯಾರಲ್ಲಿ ಮೇಲ್ದರ್ಜೆಯ ಕಲಾ ಕುಶಲತೆ ಇದೆ ಎಂಬುದರ ಕುರಿತು ಜಗಳವಾಯಿತು. ಮಹಾನ್‌ ಕುಶಲತೆಗಳು ಅಧಿಕ ಸಂಖ್ಯೆಯಲ್ಲಿ ತಮ್ಮಲ್ಲಿ ಇವೆಯೆಂದು ಚೀನೀ ಕಲಾವಿದರು ಘೋಷಿಸಿದರು, ತಾವು ಕಲೆಯ ಮೇಲೆ ಪ್ರಭುತ್ವ ಸಾಧಿಸಿರುವುದಾಗಿ ಗ್ರೀಕ್‌ ಕಲಾವಿದರು ಘೋಷಿಸಿದರು. ಅವೆರಡೂ ಗುಂಪುಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸುವುದರ ಮೂಲಕ ವಿವಾದವನ್ನು ಪರಿಹರಿಸಲು ಸುಲ್ತಾನ ನಿರ್ಧರಿಸಿದ. ಅರಮನೆಯ ಸಮೀಪದಲ್ಲಿ ಇದ್ದ ಬೆಟ್ಟದ ತುದಿಯಲ್ಲಿ ಎರಡು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಬೋಹ್‌ಲುಲ್‌ ಮತ್ತು ಸೇತುವೆ ನದಿ ನೀರಿನ ಹರಿಯುವಿಕೆಯನ್ನು ನೋಡುತ್ತಾ ಒಂದು ಸೇತುವೆಯ ಮೇಲೆ ಕುಳಿತಿದ್ದ ಬೋಹ್‌ಲುಲ್‌. ರಾಜ ಅವನನ್ನು ನೋಡಿದ, ತಕ್ಷಣ ದಸ್ತಗಿರಿ ಮಾಡಿಸಿದ. ರಾಜ ಹೇಳಿದ, “ಸೇತುವೆ ಇರುವುದು ನದಿಯನ್ನು ದಾಟಲೋಸುಗ, ಅಲ್ಲಿಯೇ ಉಳಿದುಕೊಳ್ಳಲು ಅಲ್ಲ.” ಬೋಹ್‌ಲುಲ್ ಉತ್ತರಿಸಿದ, “ನೀವೊಮ್ಮೆ ನಿಮ್ಮನ್ನೇ ನೋಡಿಕೊಳ್ಳುವುದು ಒಳ್ಳೆಯದು. ಈ ಜೀವನಕ್ಕೆ ಹೇಗೆ ಅಂಟಿಕೊಂಡಿದ್ದೀರಿ ಎಂಬುದನ್ನೊಮ್ಮೆ ಗಮನಿಸುವುದು ಒಳ್ಳೆಯದು.” ***** ೨. ಬಾಸ್ರಾದ ಹಸನ್‌ನಿಗೆ ರಬಿ’ಆ ಳ ಉಡುಗೊರೆಗಳು ರಬಿ’ಆ ಅಲ್‌-ಅದವಿಯ್ಯಾ ಬಾಸ್ರಾದ ಹಸನ್‌ನಿಗೆ ಮೂರು ವಸ್ತುಗಳನ್ನು ಕಳುಹಿಸಿದಳು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮೊಳೆ ಒಂದು ಮೊಳೆ ಮತ್ತು ಒಬ್ಬ ಮನುಷ್ಯನ ನಡುವೆ ನಡೆದ ಸಂಭಾಷಣೆ ಇಂತಿದೆ: ಮೊಳೆ: “ಅನೇಕ ವರ್ಷಗಳಿಂದ ಈ ಫಲಕಕ್ಕೆ ಅಂಟಿಕೊಂಡಿರುವ ನಾನು ಭವಿಷ್ಯದಲ್ಲಿ ನನಗೆ ಏನಾಗಬಹುದೆಂಬುದರ ಕುರಿತು ಅನೇಕ ಸಲ ಕುತೂಹಲದಿಂದ ಆಲೋಚಿಸಿದ್ದೇನೆ.” ಮನುಷ್ಯ: “ನೀನು ಈಗ ಇರುವ ಸನ್ನಿವೇಶದಲ್ಲಿ ಅನೇಕ ಸಾಧ್ಯತೆಗಳು ಹುದುಗಿವೆ. ಯಾರಾದರು ಚಿಮುಟದಿಂದ ನಿನ್ನನ್ನು ಎಳೆದು ಹಾಕಬಹುದು, ನೀನಿರುವ ಫಲಕ ಸುಟ್ಟು ಹೋಗಬಹುದು, ನೀನಿರುವ ಫಲಕವನ್ನು ಹುಳು ತಿನ್ನಬಹುದು – ಹೀಗೆ ಅನೇಕ ಸಾಧ್ಯತೆಗಳಿವೆ. ಮೊಳೆ: “ಇಂಥ ಮೂರ್ಖ ಪ್ರಶ್ನೆಗಳನ್ನು … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕಪ್ಪೆಗಳು ಕಪ್ಪೆಗಳ ಗುಂಪೊಂದು ಕಾಡಿನ ಮೂಲಕ ಎಲ್ಲಿಗೋ ಪಯಣಿಸುತ್ತಿದ್ದಾಗ ಅವುಗಳ ಪೈಕಿ ಎರಡು ಕಪ್ಪೆಗಳು ಒಂದು ಆಳವಾದ ಗುಂಡಿಯೊಳಕ್ಕೆ ಬಿದ್ದವು. ಉಳಿದ ಕಪ್ಪೆಗಳು ಗುಂಡಿಯ ಮೇಲೆ ಸುತ್ತಲೂ ನಿಂತು ಗುಂಡಿ ಎಷ್ಟು ಆಳವಿದೆ ಎಂಬುದನ್ನು ಅಂದಾಜಿಸಿದವು. ತದನಂತರ ಗುಂಡಿಯೊಳಕ್ಕೆ ಬಿದ್ದ ದುರದೃಷ್ಟವಂತ ಕಪ್ಪೆಗಳಿಗೆ ಅವು ಎಂದೆಂದಿಗೂ ಹೊರಬರಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಹೇಳಿದವು. ಆ ಎರಡು ಕಪ್ಪೆಗಳು ಈ ಹೇಳಿಕೆಯನ್ನು ನಿರ್ಲಕ್ಷಿಸಿ ಗುಂಡಿಯಿಂದ ಹೊರಕ್ಕೆ ಹಾರಲು ಪ್ರಯತ್ನಿಸತೊಡಗಿದವು.   ಆ ಗುಂಡಿಯೊಳಗೇ ಸಾಯುವುದು ಖಚಿತವಾದ್ದರಿಂದ ವೃಥಾ ಶ್ರಮ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಸತ್ತ ಹಿರಿಯರಿಗೆ ಗೌರವ ಸೂಚಿಸುವುದು ಚೀನೀ ಮಹಾಶಯನೊಬ್ಬ ತನ್ನ ಹಿರಿಯರ ಸಮಾಧಿಗಳ ಫಲಕಗಳ ಎದುರು ಹಣದ ನೋಟ್‌ಗಳನ್ನು ಸುಡುತ್ತಿರುವುದನ್ನು ಪಾಶ್ಚಾತ್ಯನೊಬ್ಬ ನೋಡಿ ಕೇಳಿದ, “ಕಾಗದದ ಹಣದ ಹೊಗೆಯಿಂದ ನಿಮ್ಮ ಹಿರಿಯರು ಹೇಗೆ ಲಾಭ ಪಡೆಯಲು ಸಾಧ್ಯ?” ಚೀನೀಯನು ಉತ್ತರಿಸಿದ, “ನೀವು ಸಮಾಧಿಯ ಮೇಲೆ ಹೂವುಗಳನ್ನು ಇಟ್ಟಾಗ ಮರಣಿಸಿದ ನಿಮ್ಮ ಹಿರಿಯರು ಹೇಗೆ ಮೆಚ್ಚುಗೆ ವ್ಯಕ್ತ ಪಡಿಸುತ್ತಾರೋ ಅದೇ ರೀತಿ.” ***** ೨. ದಾವಾ ಹಾಕು, ಹಸಿವಿನಿಂದ ಸಾಯಿಸಬೇಡ ರಾಜನೀತಿಜ್ಞ ಡೇನಿಯಲ್‌ ವೆಬ್‌ಸ್ಟರ್‌ ಕುರಿತಾದ ದಂತಕತೆ ಇದು. … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಜಿಪುಣಾಗ್ರೇಸರ ಅಬರ್‌ಡೀನ್‌ವಾಸೀ ಜಿಪುಣನೊಬ್ಬ ಗಾಲ್ಫ್‌ ಕಲಿಯಲೋಸುಗ ಗಾಲ್ಫ್‌ಕ್ಲಬ್‌ನ ಸದಸ್ಯನಾದ. ಅವನು ಆಟವಾಡಲು ಉಪಯೋಗಿಸುವ ಚೆಂಡು ಬೇರೆ ಯಾರಿಗಾದರೂ ಸಿಕ್ಕಿದರೆ ಅವರು ಅದನ್ನು ಕ್ಲಬ್‌ನ ಕಛೇರಿಗೆ ತಲುಪಿಸಲು ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಅದರ ಮೇಲೆ ಅವನ ಹೆಸರಿನ ಆದ್ಯಕ್ಷರಗಳನ್ನು.ಬರೆಯುವಂತೆ ತರಬೇತುದಾರ ಸೂಚಿಸಿದ. ಚೆಂಡು ಕಛೇರಿಗೆ ತಲುಪಿದರೆ ಅದನ್ನು ಕಛೇರಿಯ ಸಿಬ್ಬಂದಿಯಿಂದ ಆತ ಮರಳಿ ಪಡೆಯಬಹುದಾಗಿತ್ತು. ಈ ಸಲಹೆಯಲ್ಲಿ ಆಟ ಕಲಿಯಬಂದವನಿಗೆ ವಿಶೇಷ ಆಸಕ್ತಿ ಮೂಡಿತು. ಅವನು ತರಬೇತುದಾರನಿಗೆ ಹೇಳಿದ, “ಒಳ್ಳೆಯ ಸಲಹೆ. ನೀವೇ ಅದರ ಮೇಲೆ ನನ್ನ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಾಯಿಗೆ ತಿಳಿದಿದೆಯೇ?  ನನ್ನ ಮಿತ್ರನೊಬ್ಬ ಒಂದು ದೇಶದ ಅಧ್ಯಕ್ಷರನ್ನು ಬೇಟಿ ಮಾಡಲು ಹೋಗಿದ್ದ.  ಆದ್ಯಕ್ಷರ ನಿವಾಸದ ಆವರಣದಲ್ಲಿ ಅವರು ಮಾತನಾಡುತ್ತಾ ಸುತ್ತಾಡುತ್ತಿದ್ದಾಗ ನೋಡಲು ಭಯಂಕರವಾಗಿದ್ದ ದೊಡ್ಡ ನಾಯಿಯೊಂದು ಅಲ್ಲಿಯೇ ಇದ್ದ ಒಬ್ಬ ಹಿಂದೂ ಗುರುವಿನ ಕೌಪೀನವನ್ನು ಕಚ್ಚಿ ಹರಿದದ್ದಲ್ಲದೆ ಜೋರಾಗಿ ಬೊಗಳುತ್ತಾ ಅವನನ್ನು ಒಂದು ಗೋಡೆಯ ಸಮೀಪಕ್ಕೆ ಅಟ್ಟಿಕೊಂಡು ಹೋಯಿತು. ಹುಲಿಗಳನ್ನು ತನ್ನ ನೋಟದಿಂದಲೇ ಪಳಗಿಸುವ ಸಾಮರ್ಥ್ಯ ಉಳ್ಳವನು ಎಂಬುದಾಗಿ ಖ್ಯಾತನಾಗಿದ್ದ ಆ ಗುರುವಿಗೆ ನಾಯಿಗಳನ್ನು ಆ ರೀತಿ ಪಳಗಿಸುವ ಸಾಮರ್ಥ್ಯವಿರಲಿಲ್ಲವಾದ್ದರಿಂದ ಏನಾದರೂ ಮಾಡುವಂತೆ ನನ್ನ … Read more

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಗುರಿಯೇ ಇಲ್ಲ ಫಕೀರರ ಗುಂಪೊಂದು ತಮ್ಮ ಗುರುಗಳ ಆಜ್ಞಾನುಸಾರ ಮಾಂಸ ತಿನ್ನುತ್ತಿರಲಿಲ್ಲ, ಧೂಮಪಾನ ಮಾಡುತ್ತಿರಲಿಲ್ಲ. ಇದನ್ನು ತಿಳಿದ ವ್ಯಕ್ತಿಯೊಬ್ಬ ಆ ಜ್ಞಾನಿಗಳ ಪಾದಗಳ ಬಳಿ ಕುಳಿತುಕೊಳ್ಳಲೋಸುಗ ಆ ಜ್ಞಾನಿಗಳು ಅವರು ಒಟ್ಟಾಗಿ ಸೇರುವ ತಾಣಕ್ಕೆ ಹೋದ. ಅಲ್ಲಿದ್ದವರೆಲ್ಲರೂ ೯೦ ವರ್ಷಕ್ಕೂ ಹೆಚ್ಚಿನ ವಯಸ್ಸಿನವರಾಗಿದ್ದರು. ಅಲ್ಲಿ ತಂಬಾಕಿನ ಸುಳಿವೂ ಇರಲಿಲ್ಲ, ಮಾಂಸದ ಸುಳಿವೂ ಇರಲಿಲ್ಲ. ಹೋದಾತನಿಗೆ ಬಲು ಆನಂದವಾಯಿತು. ಅವರು ನೀಡಿದ ಹುರುಳಿ-ಮೊಸರಿನ ಸೂಪ್‌ನ ರುಚಿ ಆಸ್ವಾದಿಸುತ್ತಾ ಮಾಲಿನ್ಯರಹಿತ ವಾಯು ಸೇವನೆ ಮಾಡುತ್ತಾ ಅಲ್ಲಿ ಕುಳಿತ. ಕನಿಷ್ಠಪಕ್ಷ … Read more