ಇರುಳಲಿ ಕಂಡವಳು! (ದೆವ್ವದ ಕಥೆಗಳು – ಭಾಗ ೨): ಗುರುಪ್ರಸಾದ ಕುರ್ತಕೋಟಿ

ಬಿದರಕಾನ ಅನ್ನುವ ಮಲೆನಾಡಿನ ಸುಂದರ ಹಳ್ಳಿಗೆ, ನನ್ನ ಮಾವನ ಊರಾದ ಕಿಬ್ಬಳ್ಳಿಯಿಂದ ಒಂದು ಗಂಟೆಯ ದಾರಿ. ಕಿಲೋಮೀಟರುಗಳ ಲೆಕ್ಕದಲ್ಲಿ ಬರಿ ಹದಿನೈದು. ಆದರೆ ಬಳುಕುತ್ತ ಹರಿಯುವ ಮೋಹಕ ನದಿ ಅಘನಾಷಿನಿಯ ಪಕ್ಕಕ್ಕೆ ಚಾಚಿಕೊಂಡ ಏರಿಳಿತದ, ತಿರುವುಗಳಿಂದಲೇ ಭೂಷಿತವಾದ ಘಾಟ್ ರಸ್ತೆಯನ್ನು ಕ್ರಮಿಸುವುದಕ್ಕೆ ಒಂದು ಗಂಟೆ ಬೇಕು. ಆ ರಸ್ತೆಯಲ್ಲಿ ಕಾರು ಓಡಿಸುವುದೇ ಒಂದು ಖುಷಿ, ಎಷ್ಟೋ ಸಲ ಆ ಖುಷಿ ಓಡಿಸುವವರಿಗೆ ಮಾತ್ರ! ಯಾಕೆಂದರೆ ಹಿಂದೆ ಕುಳಿತವರು ರೋಡಿನ ತಿರುವಿಂಗ್ಸ್ ನಲ್ಲಿ ಹೊಟ್ಟೆ ತೊಳಸಿಕೊಳ್ಳುವವರಾಗಿದ್ದರೆ, 'ಗೊಳ್' ಅಂತ … Read more

ದೆವ್ವದ ಮನೆ: ಗುರುಪ್ರಸಾದ ಕುರ್ತಕೋಟಿ

(ಇದು ನನ್ನ ತಂದೆ ಶಶಿಕಾಂತ ಕುರ್ತಕೋಟಿ ಅವರಿಗೆ ಆದ ಒಂದು ಅನುಭವ, ಅವರೇ ಹೇಳಿದ್ದು. ಮೂಲ ಕತೆಗೆ ಧಕ್ಕೆ ಬರದಂತೆ, ಓದಿಸಿಕೊಂಡು ಹೋಗಲಿ ಅಂತ ಸಲ್ಪ ಮಸಾಲೆ ಬೆರೆಸಿದ್ದೇನೆ. ಅದು ಅಜೀರ್ಣಕ್ಕೆ ಕಾರಣವಾಗಲಿಕ್ಕಿಲ್ಲವೆಂಬ ನಂಬಿಕೆ ನನ್ನದು!) ಕಣ್ಣು ತೆರೆದಾಗ ನಾನು ಆಸ್ಪತ್ರೆಯಲ್ಲಿದ್ದೆ. ಕೈಗೆ ಸಲಾಯಿನ್ ಹಚ್ಚಿದ್ದರು. ನನ್ನ ಹೃದಯದ ಬಡಿತ ನನಗೆ ಸ್ಪಷ್ಟವಾಗಿ ಕೇಳುತ್ತಿತ್ತು. ಕಣ್ಣಿಗೆ ಕತ್ತಲೆ ಬಂದಿದ್ದಷ್ಟೆ ನನಗೆ ನೆನಪು. ಆಮೇಲೇನಾಯ್ತು? ಯಾರು ನನ್ನನ್ನಿಲ್ಲಿ ತಂದದ್ದು ಒಂದು ನನಗೆ ಅರ್ಥವಾಗುತ್ತಿಲ್ಲ.  "ಸರ್ ಕಣ್ಣು ತಗದ್ರು!" ಅಂತ … Read more

ಹೀಗೊಂದು ಗೆಳೆಯರ ಬಳಗ! (ಅಳಿದುಳಿದ ಭಾಗ?!): ಗುರುಪ್ರಸಾದ ಕುರ್ತಕೋಟಿ

(ನಮ್ಮ ಗೆಳೆಯರ ಬಳಗ ಹಾಗೂ ಅಗಿನ ನನ್ನ ಅನುಭವಗಳ ಬಗ್ಗೆ  ಹಿಂದೊಮ್ಮೆ ಬರೆದಿದ್ದೆ. ಅದಕ್ಕೆ ಸಿಕ್ಕ ಅಭೂತಪೂರ್ವ ಪ್ರತಿಕ್ರಿಯೆಯಿಂದ ಪುಳಕಿತನಾದೆ. ಅದನ್ನು ಓದಿದ ಕೆಲವು ಗೆಳೆಯರ ಆಗ್ರಹದ ಮೇರೆಗೆ, ಆ ಸಮಯದಲ್ಲಿ ನಮ್ಮ ಜೊತೆಗಿದ್ದ ಇನ್ನೂ ಕೆಲವು ವ್ಯಕ್ತಿಗಳು ಹಾಗೂ ಕೆಲವು ಮೋಜಿನ ಸಂಗತಿಗಳ ಬಗ್ಗೆ ಈಗ ಬರೆದಿದ್ದೇನೆ. ಹಿಂದಿನ ಲೇಖನ ಓದಿಯೇ ಇದನ್ನು ಓದಬೇಕೆಂದೇನು ಇಲ್ಲ. ಆದರೂ ಓದಿದರೆ ನಾನು ಬೇಡ ಅನ್ನುವುದಿಲ್ಲ! 🙂 ಇಲ್ಲಿದೆ ಅದರ ಲಿಂಕ್  ***** ನಮ್ಮ ಬಳಗದ ಇನ್ನೊಂದು ಅವಿಭಾಜ್ಯ … Read more

ಹೀಗೊಂದು ಗೆಳೆಯರ ಬಳಗ!: ಗುರುಪ್ರಸಾದ ಕುರ್ತಕೋಟಿ

ಮುಂಜ ಮುಂಜಾನೆ ಒಳ್ಳೆ ಸಕ್ಕರಿ ನಿದ್ದಿಯೊಳಗ ಕನಸ ಕಾಣ್ಲಿಕತ್ತಾಗ  ನನ್ನ ಫೋನು ಒದರಲಿಕ್ಕೆ ಶುರು ಹಚ್ಚಿಗೊಂಡು ನನಗ ಒದ್ದು ಎಬ್ಬಿಸ್ತು. ಹೊತ್ತಿಲ್ದ ಹೊತ್ತ್ನ್ಯಗ ಫೋನ್ ಮಾಡಾಂವ್ ಅಂದ್ರ ಪ್ರಶಾಂತ ನ್ನ ಬಿಟ್ಟು ಬ್ಯಾರೆ ಯಾರೂ ಇರ್ಲಿಕ್ಕೆ ಸಾಧ್ಯ ಇಲ್ಲ ಅಂತ ಕನಸಿನ್ಯಾಗನ ಡಿಸೈಡ್ ಮಾಡಿ ಎದ್ದು ನೋಡಿದ್ರ, ಅದು ಅವಂದ ಫೋನು!  "ಹೇಳಪಾ…" ಅಂದದ್ದಕ್ಕ, "ಯಾಕ್ರೀ ಸರ್ರ್ ಇನ್ನೂ ಮಲಗಿದ್ರೇನು" ಅಂತ ಹೇಳಿ ನಿದ್ದಿ ಕೆಟ್ಟಿದ್ದಕ್ಕ ಸಿಟ್ಟಿನ್ಯಾಗ ಬುಸಗುಡಕೋತ ಎದ್ದಂವ್ ಗ ಮತ್ತೊಂದಿಷ್ಟು ಸಿಟ್ಟು ಬರ್ಸಿದಾ. "ಇಲ್ಲಪಾ… … Read more

ನಾಯಿ ನಕ್ಕಿದ್ದು ಯಾಕೆ?!: ಗುರುಪ್ರಸಾದ ಕುರ್ತಕೋಟಿ

ಹೊಟ್ಟೆ ಹಸಿವೆಯಿಂದ ಗುರುಗುಡುತ್ತಿತ್ತು. ಯಾಕಿವತ್ತು ಇನ್ನೂ ತಟ್ಟೆಯ ಸಪ್ಪಳವೇ ಇಲ್ಲಾ? ನಾಲಿಗೆ ಹೊರ ಚಾಚಿ, ಮುಚ್ಚಿರುವ ತಲಬಾಗಿಲನ್ನೊಮ್ಮೆ ದಿಟ್ಟಿಸಿ ನೋಡುತ್ತಾ, ತಲೆಯ ಮೇಲೆ ಸುಡುತ್ತಿರುವ ಸೂರ್ಯನ ಶಾಖವನ್ನು ತಾಳಲಾರದೇ ತನ್ನ ಗೂಡಿನೆಡೆಗೆ ಕುಂಯ್ ಗುಡುತ್ತಾ ರಾಜಾ ವಾಪಸ್ಸಾದ. ಗೂಡಿನಲ್ಲಿ ತಾಪ ಇನ್ನೂ ಜಾಸ್ತಿಯಿತ್ತು. ತಾನು ಆ ಮನೆಯನ್ನು ಸೇರಿದ್ದು ಚಿಕ್ಕ ಕುನ್ನಿಯಾಗಿದ್ದಾಗ. ತನ್ನ ಅಮ್ಮ ಟ್ರಕ್ಕಿನಡಿಯಲ್ಲಿ ಸಿಕ್ಕಿ ಸತ್ತು ತಾನು ತಬ್ಬಲಿಯಾದಾಗ, ಮುದ್ದಾಗಿದ್ದೆನೆಂದೋ ಅಥವಾ ಮುಂದೆ ಮನೆ ಕಾಯುವೆನೆಂದೋ ತನ್ನನ್ನು ಮನೆಗೆ ತಂದು ಸಾಕಿದ್ದು ಈ ಮನೆಯ … Read more

ಕನ್ನಡೋದ್ಧಾರ!: ಗುರುಪ್ರಸಾದ್ ಕುರ್ತಕೋಟಿ

ಮದುವೆಯಾಗಿ ಬೆಂಗಳೂರಿಗೆ ಬಂದಮೇಲೆ ಇನ್ನೂ ಒಂದು ಸಲಾನೂ ಸಿನಿಮಾಗೇ ಕರೆದುಕೊಂಡು ಹೋಗಿಲ್ಲಾ ಅಂತ ಅವತ್ಯಾಕೋ ಅನಿರೀಕ್ಷಿತವಾಗಿ ನೆನಪಾಗಿ ಜಾನು ರಂಪ ಮಾಡಿಕೊಂಡಿದ್ದಳು. ಗಪ್ಪಣ್ಣನಿಗೆ ಅವಳ್ಯಾಕೋ ಸಿಕ್ಕಾಪಟ್ಟೆ ತವರನ್ನು ಮಿಸ್ ಮಾಡಿಕೊಳ್ಳುತ್ತಿರಬಹುದೇ ಎಂದು ಅನಿಸಿತಾದ್ದರಿಂದ, ತಡ ಮಾಡದೇ … "ಅದಕ್ಕೇನಂತ ಇವತ್ತ ಹೋಗೋಣ ನಡಿ" ಅಂದು ಜಾನುನಲ್ಲಿ ಜಾನ್ ತಂದ! ಕೂಡಲೇ ಜಾನು ಕಾರ್ಯಪ್ರವೃತ್ತಳಾಗಿ, ಪಲ್ಲಂಗದ ಕೆಳಗಿನ ಮೂಲೆಯಲ್ಲಿ ಜೋಪಾನವಾಗಿ ಎಸೆದಿದ್ದ ಅವತ್ತಿನ ಪೇಪರ್ ಅನ್ನು ಎತ್ತಿ ತಂದು ಅದರಲ್ಲಿನ ಸಾಪ್ತಾಹಿಕ ಪುರವಣಿಯಲ್ಲಿದ್ದ ಅಸಂಖ್ಯಾತ ಸಿನಿಮಾಗಳ ಯಾದಿಯಲ್ಲಿ ಒಂದಕ್ಕೆ … Read more

ನಾನು ಬಡವ?:ಗುರುಪ್ರಸಾದ್ ಕುರ್ತಕೋಟಿ

ಮೂರ್ತಿ ಯಾವುದೋ ಒಂದು ಪುಸ್ತಕದಲ್ಲಿ ಗಹನವಾಗಿ ಮುಳುಗಿದ್ದವರು ನಿಟ್ಟುಸಿರು ಬಿಟ್ಟು ಹೀಗೆ ಅರುಹಿದರು… ಮೂರ್ತಿ: "ಗುರು, ಹಿಂದಿನ ಕಾಲದಲ್ಲಿ ನಮ್ಮ ದೇಶದಲ್ಲಿ ಎಂಥಾ ಸುಭಿಕ್ಷೆ ಇತ್ತಂತೆರೀ… ನಿಮಗೊತ್ತಾ? ಆಗ ವಿಜಯನಗರ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಬಂಗಾರಗಳನ್ನ ತರಕಾರಿಗಳ ತರ ಸಂತೆಲಿ ಮಾರುತ್ತಿದ್ದರಂತೆ!" ಗುರು: "ಹೌದು, ಆದ್ರೆ ಆಗಿನ ಕಾಲಕ್ಕೆ ಈಗಿನ ಕಾಲಕ್ಕೆ ಅಷ್ಟೆಲ್ಲಾ ಡಿಫರನ್ಸು ಇಲ್ಲಾ ಬಿಡ್ರೀ." ಮೂ: "ಅಧೆಂಗ್ರೀಪಾ?" ಗು: "ಈಗ ತರಕಾರಿಗಳನ್ನ ಮುತ್ತು, ರತ್ನ, ಬಂಗಾರಗಳ ರೇಟಿನಲ್ಲಿ ಮಾರ್ತಾರೆ ಅಷ್ಟೆ!!" ಮೂ: "ಹ್ಹ ಹ್ಹ … Read more

ಅವಳು!: ಗುರುಪ್ರಸಾದ ಕುರ್ತಕೋಟಿ

  ಇವತ್ತಿಗೆ ಸರಿಯಾಗಿ ಆರು ವರುಷಗಳ ಹಿಂದೆ ನಾನವಳ ಭೇಟಿಯಾಗಿದ್ದೆ. ಮೊದಲ ನೋಟದಲ್ಲೇ ಅವಳಲ್ಲಿ ಅನುರಕ್ತನಾದೆ. ಅವಳಲ್ಲಿ ತುಂಬಾ ಇಷ್ಟವಾಗಿದ್ದು ಅವಳ ಸ್ನಿಗ್ಧ ಸೌಂದರ್ಯ ಹಾಗು ಅವಳ ಬಣ್ಣ! ಅವತ್ತೇ ಅವಳನ್ನು ಮನೆಗೆ ಕರೆದುಕೊಂಡು ಬಂದಿದ್ದೆ. ಅಪ್ಪ ಎಂದಿನಂತೆ ಬೈದಿದ್ದ. ನಾನವಳನ್ನು ಕರೆದುಕೊಂಡು ಬಂದಿದ್ದು ಅವನಿಗೆ ಸುತಾರಾಮ್ ಇಷ್ಟವಿರಲಿಲ್ಲ. ಆತ ನನ್ನ ಮೇಲೆ ಕೋಪಗೊಂಡಿದ್ದು ಸ್ಪಷ್ಟವಾಗಿತ್ತು. ಆದರೆ ಮುಂದೆ ಎಲ್ಲಾ ಸರಿ ಹೋಗುವುದೆಂಬ ಭರವಸೆ ನನಗೆ. ಅವತ್ತಿಗೆ ಅವನಿಗೆ ಎದುರು ಮಾತನಾಡದೇ ಸುಮ್ಮನಿದ್ದೆ. ಆದರೆ ನನಗಿದ್ದ ದೊಡ್ಡ … Read more