ಮೆಂಟಲ್ ಎಬಿಲಿಟಿ ಕೋಡಿಂಗ್ ಭಾಗ – 1: ಪ್ರವೀಣ್‌ ಕೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೋಡಿಂಗ್‌ ಕುರಿತ ಪ್ರಶ್ನೆಗಳನ್ನು ಉತ್ತರಿಸಲು ಈ ವಿಡಿಯೋ ನಿಮಗೆ ತುಂಬಾ ಸಹಕಾರಿ… ಕೋಡಿಂಗ್ ಭಾಗ – 1:    

20ನೇ ಶತಮಾನ ಕಂಡ ಸಂತ ಶ್ರೇಷ್ಠ- ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್: ಶ್ರೀವಲ್ಲಭ ರಾ. ಕುಲಕರ್ಣಿ

ಭಾರತೀಯ ಸಮಾಜದ ರೂಢ ಮೂಲ ನಂಬಿಕೆಗಳ ಮೂಲ ಸ್ವರೂಪವನ್ನು ಪ್ರಶ್ನಿಸಿದ, ಅಲುಗಾಡಿಸಿದ ತೀಕ್ಷ್ಣ ವಿಚಾರವಾದಿ, 20ನೇ ಶತಮಾನದ ಭಾರತೀಯ ಮಹಾನ್ ಚಿಂತಕ ದ್ರಾವಿಡ ನಾಡಿನ ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್ 1879 ಸೆಪ್ಟೆಂಬರ್ 17ರಂದು ಮದ್ರಾಸ್ ರಾಜ್ಯದ ಕೊಯಿಮತ್ತೂರ್ ಜಿಲ್ಲೆಯ ಈರೋಡು ಎಂಬಲ್ಲಿ ಹುಟ್ಟಿದರು, ತಮ್ಮ ವಿಚಾರಗಳಿಗೆ ಚಳುವಳಿಯ ಸ್ಪರ್ಶ ನೀಡಿದ ಅವರ ಬದುಕು ಮತ್ತು ಚಿಂತನೆಗಳು ದ್ರಾವಿಡ ಅಸ್ಮಿತೆಯೊಂದನ್ನು ಹುಟ್ಟು ಹಾಕಿ, ತಮಿಳು ನಾಡಿನಲ್ಲಷ್ಟೇ ಅಲ್ಲದೇ ದೇಶ ವಿದೇಶಗಳಲ್ಲಿಯೂ ಪಸರಿಸುವಂತೆ ಮಾಡಿದ್ದು ಇತಿಹಾಸ. ಪೆರಿಯಾರ್ ರಾಮಸ್ವಾಮಿಯವರ … Read more

ಯೂಟ್ಯೂಬ್‌ ನಲ್ಲಿ ಮೊಟ್ಟಮೊದಲ ಬಾರಿಗೆ ಕನ್ನಡ ಮಾಧ್ಯಮದಲ್ಲಿ ಬ್ಯಾಂಕ್ ಪರೀಕ್ಷೆಯ ತರಬೇತಿ

ಆತ್ಮೀಯರೆ, ನನಗೆ ಬಹಳ ಖುಷಿ ಎನಿಸುತ್ತಿದೆ. ಯಾಕೆಂದರೆ ಕನ್ನಡ ಮಾಧ್ಯಮದಲ್ಲಿ ಉಚಿತವಾಗಿ ಬ್ಯಾಂಕ್ ಪರೀಕ್ಷೆ ತರಬೇತಿಯನ್ನು ಯೂಟ್ಯೂಬ್ ಮುಖಾಂತರ ಪ್ರಾರಂಭಿಸಿದ್ದೇನೆ. ನೀವೆಲ್ಲ ಕೈಜೋಡಿಸುವಿರಿ ಎಂದು ನಿರೀಕ್ಷಿಸುತ್ತೇನೆ. ನಾನು ಭಾರತೀಯ ಸ್ಟೇಟ್ ಬ್ಯಾಂಕಿನ ಸೇವೆಗೆ ರಾಜೀನಾಮೆ ನೀಡಿ ಸ್ಪರ್ಧಾಕಾಂಕ್ಷಿಗಳಿಗೆ ಬ್ಯಾಂಕ್ ಪರೀಕ್ಷೆಯ ತರಬೇತಿಯನ್ನು ಪ್ರಾರಂಭಿಸಿದೆ. ಬೆಳಗಾವಿ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ನಮ್ಮ ಸಂಸ್ಥೆಗೆ ಬಂದು ತರಬೇತಿ ಪಡೆದು ಕೆಲವರು ಯಶಸ್ಸನ್ನೂ ಗಳಿಸಿದರು. ಆದರೆ ನಾನು ಕ್ಲಾಸರೂಮಿನಲ್ಲಿ ಕಲಿಸಲು ಸಾಧ್ಯವಾಗುತ್ತಿರುವುದು ಕೇವಲ ನಲವತ್ತು ಐವತ್ತು ಜನರಿಗೆ ಮಾತ್ರ. ಅವಶ್ಯವಿದ್ದವರಿಗೆಲ್ಲ ನನ್ನಲ್ಲಿರುವ … Read more

ಕಡಿದೊಗೆದ ಬಳ್ಳಿಯು ಕುಡಿಯೊಡೆಯುವಂತೆ: ಎಸ್. ಜಿ. ಸೀತಾರಾಮ್, ಮೈಸೂರು

“ತ್ಯಾಜ್ಯ ವಸ್ತು” ವಿಲೇವಾರಿಯ ಬಗ್ಗೆಯೇನೋ ಇಂದು ಎಲ್ಲೆಡೆ ಬಿಸಿಬಿಸಿ ಚರ್ಚೆಗಳಾಗುತ್ತಿವೆ; ಆದರೆ, ತಮ್ಮ ಕುಟುಂಬ, ಬಂಧು-ಬಳಗ, ಸಮುದಾಯ, ಯಾವುದಕ್ಕೂ ಬೇಡವಾದ “ತ್ಯಾಜ್ಯ ವ್ಯಕ್ತಿ”ಗಳ ಸ್ಥಿತಿಗತಿಯ ಬಗ್ಗೆ ‘ಕ್ಯಾರೇ?’ ಎನ್ನುವ ಮಂದಿ ಎಷ್ಟಿದ್ದಾರು? ಹಾಗೆನ್ನುವವರಲ್ಲೂ, ಈ ಪರಿಸ್ಥಿತಿಗೆ ಏನಾದರೊಂದು ಪರಿಹಾರ ಹೊಂದಿಸಬೇಕೆಂದು ನಿಜವಾಗಿ ‘ಕೇರ್’ ಮಾಡುವವರು ಅದೆಷ್ಟು ಇದ್ದಾರು? ಇಂಥ ದಾರುಣ ಅವಸ್ಥೆಯ ನಡುವೆ, ಸಮಾಜದ ಕುಪ್ಪೆಯಲ್ಲಿ ಕಾಲ ತೇಯುತ್ತ, ಬದುಕಾಟದ ಕೊಟ್ಟಕೊನೆಗೆ ಹೇಗೋ ‘ಜೋತುಬಿದ್ದಿರುವ’ ಸ್ತ್ರೀಯರಿಗೆ ಅನ್ನ, ಆರೈಕೆ, ನೆರಳು, ನೆಮ್ಮದಿ ನೀಡುವ ಸಲುವಾಗಿ, ವಿದ್ಯಾವಂತ, ದಯಾಶೀಲ, … Read more

ತಾಯಿಯ ಗರ್ಭವೆಂಬ ಪುಟ್ಟ ಪ್ರಪಂಚದಲ್ಲಿ: ಸಿಂಧು ಭಾರ್ಗವ್

ಒಂದು ಮಗುವಿನ ಜನನ ಯಾವ ತಾಯಿಯ ಗರ್ಭದಲ್ಲಿ ಆಗುತ್ತದೆ ಎಂಬುದು ಹೇಳಬರದು. ಹುಟ್ಟು ನಮ್ಮ ಕೈಯಲ್ಲಿ ಇರುವುದಿಲ್ಲ. ಜನಿಸಿದ ಮೇಲೆ ಹಡೆದ ಜನನಿಯ ಮುಖ ದರುಷನವಾಗುವುದು. ಅವಳು ನಮಗಾಗಿ ಎಷ್ಟೆಲ್ಲ ಕಷ್ಟ ಪಡುತ್ತಾಳೆ. ಅವಳ ತ್ಯಾಗ ಸಹನೆಗೆ ನಾವು ಎಂದಿಗೂ ಋಣಿಗಳಾಗಿರಬೇಕು. ಒಬ್ಬ ತಾಯಿ ತಾನು ಗರ್ಭವತಿ ಎಂದು ತಿಳಿದ ತತ್ಕ್ಷಣದಿಂದ ಮುಂದೆ ಜನಿಸುವ ಮಗುವಿನ ಬಗೆಗೆ ನೂರಾರು ಕನಸುಗಳನ್ನು ಕಟ್ಟಿಕೊಳ್ಳಲು ಶುರುಮಾಡುತ್ತಾಳೆ. ಜೊತೆಗೆ ತಂದೆಯಾಗುವವನೂ ಕೂಡ ಆ ಮಗುವಿನ ಬಗೆಗೆ ಸಾಕಷ್ಟು ಕನಸುಗಳನ್ನು ಹೆಣೆಯುತ್ತಾನೆ. ತಮ್ಮ … Read more

ಅಂಬೇಡ್ಕರ್ ಎಂಬ ಶಕ್ತಿಯೇ ನಿನ್ನೆಯ ಹೋರಾಟ ; ಇಂದಿನ ಬೆಳಕು, ನಾಳಿನ ಬಾಳ ಬುತ್ತಿ: ನಾಗರಾಜ್ ಹರಪನಹಳ್ಳಿ

  ನಮ್ಮ ಕಣ್ಣ ಮುಂದಿನ ಬೆಳಕು ಅಂಬೇಡ್ಕರ್. ಅವರು ಭಾರತದ ಅಂತಃಶಕ್ತಿ ಹೆಚ್ಚಿಸಿದ ಮಹಾ ಮನವತಾವಾದಿ. ಅಂಬೇಡ್ಕರ್ ಪ್ರಜಾಪ್ರಭುತ್ವವಾದಿ. ಮಹಿಳಾವಾದಿ, ಕಾರ್ಮಿಕರ ಬಂಧು. ಮನುಷ್ಯತ್ವದ ಪ್ರತಿಪಾದಕ. ಶೋಷಿತರಿಗೆ ಪ್ರೀತಿ ಅಂತಃಕರಣದ ನದಿಯನ್ನೇ ಹರಿಸಿದ ಮನುಷ್ಯ, ಅಂಬೇಡ್ಕರ್ 1891ರಲ್ಲಿ ಜನಸಿದ್ದು. ಅವರ 128ನೇ ಜನ್ಮದಿನಕ್ಕೆ ನಾವಿಂದು ಅವರನ್ನು ಸ್ಮರಿಸಿಕೊಳ್ಳುತ್ತಿದ್ದೇವೆ. ಬಾಬಾ ಸಾಹೇಬ್ ನಮ್ಮಿಂದ ಭೌತಿಕವಾಗಿ ದೂರವಾಗಿ 63 ವರ್ಷ ಕಳೆದಿದ್ದರೂ, ಅವರನ್ನು ದೇಶ ಪ್ರತಿ ದಿನ, ಪ್ರತಿಕ್ಷಣ ನೆನಪಿಸಿಕೊಳ್ಳುವ ಭಾರತದ ಬಹುಮುಖ ಪ್ರತಿಭೆ. ಅವರು ನೀಡಿದ ಸಂವಿಧಾನದ ಮಹಾಧರ್ಮದಲ್ಲಿ … Read more

ಗೆಲ್ಲಿಸುವ ದಾರಿಯಲ್ಲಿ – ಕೌಶಲ್ಯದ ಪರಿಚಯ: ರಘುನಂದನ ಕೆ. ಹೆಗಡೆ

SKILL, SPEED, SCORE ಕೌಶಲ್ಯ ವೇಗ ಗೆಲುವು ಕೌಶಲ್ಯ (Skill) ಎಂದ ತಕ್ಷಣ ನಮ್ಮ ಯೋಚನೆಯೆಲ್ಲ ವೃತ್ತಿ ಜೀವನಕ್ಕೆ ಹೊರಟು ಬಿಡುತ್ತೆ, ಇಲ್ಲಾ ಇದೆಲ್ಲಾ ಕಲಿಕೆಯ ಕೊನೆ ಹಂತದಲ್ಲಿರೋ ವಿದ್ಯಾರ್ಥಿಗಳಿಗೆ ಬೇಕಾಗಿರೋದು ಅನ್ಕೋತೇವೆ. ಹಾಗಾದರೆ ವೃತ್ತಿಯನ್ನ ಬಿಟ್ಟು, ಜೀವನಕ್ಕೆ ಕೌಶಲ್ಯ ಬೇಕಿಲ್ವಾ? ಹೆಂಗೆಂಗೋ ಬದುಕೋರಿಗೆ ಕೌಶಲ್ಯ ಬೇಕಿಲ್ಲ, ಕೌಶಲ್ಯ ಇದ್ದೋರಿಗೆ ಸ್ಕೂಲ್ ಶಿಕ್ಷಣ ಇಲ್ದೇ ಇದ್ರು ಗೆಲುವು ಸಿಗುತ್ತೆ. ನಂಬಿಕೆ ಆಗ್ತಿಲ್ವಾ, ಥಾಮಸ್ ಅಲ್ವಾ ಎಡಿಸನ್ ಗೊತ್ತಲ್ಲಾ, ಬಲ್ಬನ್ನು ಕಂಡು ಹಿಡಿದು ಬೆಳಕು ಕೊಟ್ಟ ವಿಜ್ಞಾನಿ, ಅವರು … Read more

ಅನಕೃ ಮಹಾನ್ ಮೇರು ಕಾದಂಬರಿ ಸಾರ್ವಭೌಮರು: ಹೊರಾ.ಪರಮೇಶ್ ಹೊಡೇನೂರು

ಸಂಗೀತ, ನಾಡು ನುಡಿಗೆ ಅನಕೃ ಕೊಡುಗೆ “ಅನಕೃ”ಎಂಬ ಹೃಸ್ವ ಪದಪುಂಜದಲ್ಲಿಯೇ ಅಗಾಧವಾದ ಸಾಹಿತ್ಯ ಅನಾವರಣಗೊಳ್ಳುತ್ತದೆ. ಕನ್ನಡ ಸಾಹಿತ್ಯದ ಕೃಷಿಯ ಜೊತೆಗೆ ಕನ್ನಡ ಭಾಷೆಯ ಬಳಕೆ-ಉಳಿಕೆಗೆ ಅಕ್ಷರಶಃ ಶ್ರಮಿಸಿದ ಅಪೂರ್ವ ಸಾಹಿತಿ ಅ.ನ.ಕೃಷ್ಣರಾಯರು. ಹುಟ್ಟಿದ್ದು ಕೋಲಾರವೇ ಆದರೂ ತಂದೆ ನರಸಿಂಗರಾಯರು-ತಾಯಿ ಅನ್ನಪೂರ್ಣಮ್ಮನವರು ಮೂಲತಃ ಅರಕಲಗೂಡಿನವರಾದುದರಿಂದ ಅನಕೃ ಅವರು ಅರಕಲಗೂಡಿನವರೇ ಎಂಬುದಾಗಿ ಪರಿಭಾವಿಸಲ್ಪಟ್ಟಿದ್ದಾರೆ. ಬಳ್ಳಿಯು ಎಷ್ಟೇ ಬೃಹದಾಕಾರವಾಗಿ ಬೆಳೆದರೂ ಅದರ ಹುಟ್ಟಿದ ಜಾಗವೇ ಅಸ್ತಿತ್ವವನ್ನು ಹೇಳುವಂತೆ ಅನಕೃ ಅರಕಲಗೂಡು ಭಾಗದವರೇ ಎಂಬುದಾಗಿ ಪರಿಗಣಿತವಾಗಿದ್ದಾರೆ. 190೮ ರ ಮೇ 9 ರಂದು … Read more

ಯುವಜನರ ಹಕ್ಕುಗಳ ರಕ್ಷಣೆಗೂ ಆಯೋಗ ಬೇಕಲ್ಲವೇ?: ರುಕ್ಮಿಣಿ ನಾಗಣ್ಣವರ

ಫಕ್ಕೀರಪ್ಪ. ಹುಟ್ಟಿ-ಬೆಳೆದದ್ದು ಬೆಳಗಾವಿ ಜಿಲ್ಲೆಯ ಪುಟ್ಟ ಗ್ರಾಮದಲ್ಲಿ. ದೊಡ್ಡ ವ್ಯಕ್ತಿಯಾಗುವ ಅಥವಾ ಉನ್ನತ ಸಾಧನೆ ಮಾಡುವ ಅದಮ್ಯ ಕನಸುಗಳೇನೂ ಇರಲಿಲ್ಲ. ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಪೂರ್ಣಗೊಳಿಸಿದ ಅವರಿಗೆ ವಿಶ್ವವಿದ್ಯಾಲಯದ ಮೆಟ್ಟಿಲೇರುವ ಗುರಿ ಇರಲಿಲ್ಲ. ಅಷ್ಟೇ ಅಲ್ಲ, ಪಿಯು ಕಾಲೇಜಿಗೆ ಹೋಗುವ ಸ್ಪಷ್ಟ ಕಲ್ಪನೆಯೂ ಇರಲಿಲ್ಲ. ಆಯಾ ದಿನದ ದುಡಿಮೆಯನ್ನೇ ನಂಬಿದ್ದ ತಂದೆ, ತಾಯಿಗೂ ಮಗನಿಗೆ ಉನ್ನತ ಶಿಕ್ಷಣ ಕೊಡಿಸುವ ಶಕ್ತಿ ಇರಲಿಲ್ಲ. ಸಾಂವಿಧಾನಿಕ ಹಕ್ಕು ಇದ್ದರೂ ಆರ್ಥಿಕ ಮತ್ತು ಇನ್ನಿತರ ಸೌಲಭ್ಯದ ಕೊರತೆಯಿಂದ ಫಕ್ಕೀರಪ್ಪಗೆ ಶಾಲೆಯ … Read more

ಮಾನವನ ಅಗತ್ಯತೆಗೆ ಅಣುಶಕ್ತಿ: ಎಸ್.ಎಚ್.ಮೊಕಾಶಿ

ಮಾನವನು ತನ್ನ ದೈನಂದಿನ ಅಗತ್ಯತೆಗಳ ಪೂರೈಕೆಗಾಗಿ ಹಲವಾರು ವಿಜ್ಞಾನಿಗಳ ನಿರಂತರ ಪರಿಶ್ರಮದ ಫಲವಾಗಿ ಅಣುಶಕ್ತಿಯ ಸಂಶೋಧನೆಯಾಯಿತು. ಇದನ್ನು ಹಲವಾರು ರೂಪಗಳಿಗೆ ಪರಿವರ್ತಿಸಿ ವಿವಿಧ ರೀತಿಯಲ್ಲಿ ಬಳಸಲು ಯೋಜಿಸಲಾಯಿತು. ಮಾನವನ ಕೆಲವು ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಅಣುಶಕ್ತಿಯು ಕಳೆದ ಹಲವು ದಶಕಗಳಿಂದ ಒಂದು ಪರ್ಯಾಯ ಶಕ್ತಿಯಾಗಿ ಉದ್ಭವಿಸಿದೆ. ಇದು ಸೂರ್ಯನಿಂದ ಪಡೆಯದಿರುವ ಏಕಮಾತ್ರ ಶಕ್ತಿಯ ರೂಪವಾಗಿದೆ. ಪರಮಾಣು ಬೀಜಗಳಲ್ಲಿ ಅಡಗಿರುವ ಬೈಜಿಕ ಶಕ್ತಿಯನ್ನು ಉಪಯೋಗಿಸಿಕೊಳ್ಳುತ್ತಿರುವುದು ಮಾನವನ ದೊಡ್ಡ ವೈಜ್ಞಾನಿಕ ಸಾಧನೆಗಳಲ್ಲಿ ಒಂದಾಗಿದೆ.  ಅಣುಶಕ್ತಿಯು ಪರಮಾಣುವಿನ ಬೀಜವು ಪ್ರೋಟಾನ್ ಮತ್ತು ನ್ಯುಟ್ರಾನ್‍ಗಳನ್ನು … Read more

ಗುರುಗಳನ್ನು ಗೌರವಿಸಿ ಗೌರವ ಹೆಚ್ಚಿಸಿಕೊಂಡವರು!: ಕೆ ಟಿ ಸೋಮಶೇಖರ ಹೊಳಲ್ಕೆರೆ

ಸೆಪ್ಟಂಬರ್ 5 ಡಾ!! ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನ. ಅದನ್ನೇ ಭಾರತದಲ್ಲಿ ಶಿಕ್ಷಕರ ದಿನ ಎಂದು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಅಕ್ಟೋಬರ್ 5 ನ್ನು ವಿಶ್ವ ಶಿಕ್ಷಕರ ದಿನ ಎಂದು ಆಚರಿಸುವರು. ನಿಜವಾಗಿಯೂ ಶಿಕ್ಷಕರ ದಿನಾಚರಣೆಯನ್ನು ಸಮಾಜ ಆಚರಿಸಬೇಕು. ಸಮಾಜದಲ್ಲಿನ ಸಂಘ – ಸಂಸ್ಥೆಗಳು ಆಚರಿಸಿದರೆ ಶಿಕ್ಷಕರಿಗೆ ಗೌರವ. ಅಷ್ಟೇ ಅಲ್ಲ ಆ ಸಂಘ ಸಂಸ್ಥೆಗಳಿಗೂ ಗೌರವ ! ಸಮಾಜ ಶಿಕ್ಷಕರ ದಿನವನ್ನು ಆಚರಿಸದಿರುವುದರಿಂದ ಶಿಕ್ಷಕರೇ ಅವರ ದಿನವನ್ನು ಅವರೇ ಆಚರಿಸಿಕೊಳ್ಳುವಂತಾಗಿರುವುದು ಅವರೇ ಅವರ ಬೆನ್ನನ್ನು … Read more

ಹವ್ಯಕರಲ್ಲಿ ಗಣೇಶ ಹಬ್ಬದ ಆಚರಣೆ: ಗೀತಾ ಜಿ.ಹೆಗಡೆ, ಕಲ್ಮನೆ.

ಸೃಷ್ಟಿ ಸೌಂದರ್ಯದ ತವರೂರಾದ ಮಲೆನಾಡಿನ ಜಿಲ್ಲೆಯಾದ್ಯಂತ ನೂರಾರು ಹವ್ಯಕ ಕುಟುಂಬಗಳು ಅಲ್ಲಲ್ಲಿ ನಾಲ್ಕು ಐದು ಮನೆಗಳಿಂದ ಸಣ್ಣ ಸಣ್ಣ ಹಳ್ಳಿಗಳಾಗಿ ಪುರಾತನ ಕಾಲದಿಂದಲೂ ನೆಲೆ ನಿಂತಿವೆ. ಒಂದೊಂದು ಹಳ್ಳಿಗೂ ಒಂದೊಂದು ಹೆಸರು. ಹಾಗೆ ಅಲ್ಲಿ ಆಚರಿಸುವ ಹಬ್ಬಗಳಲ್ಲೂ ವಿಶೇಷತೆಯಿದೆ. ಅವುಗಳಲ್ಲಿ “ಗಣೇಶ ಹಬ್ಬ”ವೂ ಒಂದು. ಹವ್ಯಕರಲ್ಲಿ ಈ ಗಣೇಶ ಹಬ್ಬಕ್ಕೆ ಚೌತಿ ಹಬ್ಬವೆಂದು ಹೇಳುವ ವಾಡಿಕೆ. ತಲೆ ತಲಾಂತರದಿಂದ ಮನೆತನದಲ್ಲಿ ನಡೆದುಕೊಂಡು ಬಂದ ಹಲವು ಪದ್ಧತಿಗಳಿದ್ದು ಅದು ಈಗಲೂ ಮುಂದುವರೆದಿದೆ. ಹಬ್ಬಕ್ಕೆ ಹದಿನೈದು ದಿನಗಳಿರುವಾಗಲೆ ಹಬ್ಬದ ತಯಾರಿ … Read more

ಬಾಂಧವ್ಯದ ಸಂಕೇತ ರಕ್ಷಾ ಬಂಧನ: ವೆಂಕಟೇಶ ಗುಡೆಪ್ಪನವರ ಮುಧೋಳ

ರಸ್ತೆಯಲ್ಲಿ ಶಾಲಾ ಮಕ್ಕಳು ಓರ್ವ ಪ್ರಯಾಣಿಕನಿಗೆ ರಾಕಿ ಕಟ್ಟಿ, “ನಮಗೆ ಹಾಗೆ ಬೇಡ ರಾಕಿ ಕಟ್ಟುತ್ತೇವೆ ಹಣ ಕೊಡಿ” ಎಂದು ಕಡ್ಡಾಯವಾಗಿ ಪಡೆದು ಅದನ್ನು ಒಂದು ಬಿಳಿ ಪೆಟ್ಟಿಗೆದಲ್ಲಿ ಹಾಕುತ್ತಿದ್ದರು. ಸಮೀಪಕ್ಕೆ ಹೋಗಿ ನೋಡಿದರೆ, ಅದು ಕೊಡಗು ಹಾಗೂ ಕೇರಳ ಸಂತ್ರಸ್ಥರ ಪರಿಹಾರ ನಿಧಿ ಪೆಟ್ಟಿಗೆಯಾಗಿತ್ತು. ಸಹೋದರನಿಗೆ ಸಹೋದರಿ ರಕ್ಷಾಬಂಧನ ಕಟ್ಟಿ ಮಮತೆ ತೋರಿಸಿ ಅವನ ಯೋಗಹಕ್ಷೇಮಕ್ಕಾಗಿ ಪ್ರಾರ್ಥಿಸುವುದು, ಅಷ್ಟೇ ಅಲ್ಲ ಈ ಹಣ ಈ ರೀತಿಯಿಂದ ಅಪಾಯದ ಸ್ಥಿತಿಯಲ್ಲಿರುವ ಸಂತ್ರಸ್ಥರ ಬಾಳಿಗೂ ಬೆಳಕಾಗ ಬಲ್ಲದು ಎನ್ನುವುದು, … Read more

ಪಂಜು ಸಂಚಾಲಕರು

ನಲ್ಮೆಯ ಗೆಳೆಯರೇ, ಪಂಜು ಬಳಗದ ಪರವಾಗಿ ನಿಮ್ಮೆಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಪಂಜು ಈಗಾಗಲೇ ತನ್ನದೇ ಓದುಗ ಹಾಗು ಬರಹಗಾರರ ಬಳಗ ಹೊಂದಿದೆಯಾದರೂ ಪಂಜು ಇನ್ನೂ ಹೆಚ್ಚು ಓದುಗರಿಗೆ ತಲುಪಬೇಕೆನ್ನುವ ಉದ್ದೇಶದಿಂದ ಪಂಜು ಬಳಗಕ್ಕೆ ಪಂಜು ಸಂಚಾಲಕರನ್ನು ಸೇರಿಸಿಕೊಳ್ಳುವ ಆಸೆ ಇದೆ. ಆಸಕ್ತಿ ಉಳ್ಳವರು ನಿಮ್ಮ ಹೆಸರು, ವಿಳಾಸ, ಮೊಬೈಲ್ ನಂಬರ್ ಮತ್ತು ಫೋಟೋ ಕಳುಹಿಸಿಕೊಡಿ. ನಮ್ಮ ಇ ಮೇಲ್: smnattu@gmail.com, editor.panju@gmail.com ನಮ್ಮ ವಾಟ್ಸ್ ಅಪ್ ನಂಬರ್: 9844332505 ಧನ್ಯವಾದಗಳೊಂದಿಗೆ ಪಂಜು ಬಳಗ

π ಗೊಂದು ದಿನ ಮಾರ್ಚ್ 14: ಜಲಸುತ

ಗಣಿತ ಸರ್ವ ವಿಜ್ಞಾನಗಳ ಅಧಿನಾಯಕಿ – – ಖ್ಯಾತ ಜರ್ಮನ್ ಗಣಿತಜ್ಞ ಕಾರ್ಲ್ ಫ್ರೆಡ್ರಿಕ್ ಗಾಸ್. ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಯಾವುದೇ ವಿಷಯವನ್ನಾದರೂ ವಿವರಿಸಿ ಹೇಳಲು ಗಣಿತ ಬೇಕೇ ಬೇಕು. ಗಣಿತವಿಲ್ಲದೆ ವಿಜ್ಞಾನ ಇಲ್ಲ ವಿಜ್ಞಾನವನ್ನು ಒಂದು ಭಾಷೆ ಎಂದು ಪರಿಗಣಿಸಿದರೆ, ಗಣಿತ ಆ ಭಾಷೆಗೆ ಲಿಪಿಯಿದ್ದಂತೆ. ಇದು ಗಣಿತದ ಹೆಗ್ಗಳಿಕೆ. ಗಣಿತದಲ್ಲಿ ಕೆಲವೊಂದು ವಿಶೇಷ ಸಂಖ್ಯೆಗಳಿವೆ. ಇವಿಲ್ಲದೆ ವಿಜ್ಞಾನ-ತಂತ್ರಜ್ಞಾನವಿಲ್ಲ, ಕಲೆ-ವಾಸ್ತುಶಿಲ್ಪವಿಲ್ಲ. ಜಗದ ಜನರ ಮೊಗದಲಿ ಮಂದಹಾಸ ಮೂಡಲು ಯಾವುದ್ಯಾವುದು ಅಗತ್ಯವೋ ಅಲ್ಲೆಲ್ಲಾ ಈ ಸಂಖ್ಯೆಗಳು ಇರಲೇಬೇಕು. ಕೆಲವೊಮ್ಮೆ … Read more

ಪುಸ್ತಕ ಕೊಳ್ಳಿರಿ: ಮುಖವಾಡದ ಮಾಫಿಯಾದಲ್ಲಿ

ಶಿವಕುಮಾರ ಚನ್ನಪ್ಪನವರ ಇವರು ಬರೆದ ಮುಖವಾಡದ ಮಾಫಿಯಾದಲ್ಲಿ ಕಥಾಸಂಕಲನವನ್ನು ಕೊಳ್ಳಲು ಈ ಕೆಳಗಿನ ಲಿಂಕ್ ಒತ್ತಿರಿ.. https://www.instamojo.com/panjuprakashana/mukhavadada-mafiyadalli/  

ರಾಜಹಂಸ ನಿರ್ದೆಶನದ ಕಿರುಚಿತ್ರ

ನನ್ನ ಹೆಸರು ರಾಜಹಂಸ. ಮೂಲತಃ ಬೀದರ್ ದವನು. ಪ್ರಸ್ತುತ ಚಿಕ್ಕಬಳ್ಳಾಪುರದಲ್ಲಿ ನೆಲೆಸಿದ್ದೇನೆ. ಓರ್ವ ಕವಿ ಕೂಡ. ಈಗಾಗಲೇ ನಾಲ್ಕು ಕವನ ಸಂಕಲನಗಳನ್ನು ಪ್ರಕಟಿಸಿದ್ದೇನೆ. ಸಿನಿಮಾ ನಿರ್ದೇಶಕನಾಗಬೇಕೆಂಬುದು ನನ್ನ ಜೀವಮಾನದ ಕನಸು. ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಿಂದ ಪ್ರಯತ್ನಿಸುತ್ತಿದ್ದೇನೆ. ಈಗ “ನೋಡ್ ಬೇಡ” ಎಂಬ ಶೀರ್ಷಿಕೆಯ ಕಿರುಚಿತ್ರವೊಂದಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದೇನೆ. ಜೊತೆಗೆ ನಾಯಕನಟನಾಗಿ ಅಭಿನಯಿಸಿದ್ದೇನೆ. ಇದು ನನ್ನ ಮೊದಲ ಪುಟ್ಟಪ್ರಯತ್ನ. ದಯವಿಟ್ಟು ಒಮ್ಮೆ ನೋಡಿ ಮತ್ತು ಸಾಧ್ಯವಾದರೆ ಈ ಕಿರುಚಿತ್ರದ ಕುರಿತು ಸರಿ ತಪ್ಪುಗಳ … Read more

ದಯೆಯೇ ಧರ್ಮದ ಮೂಲ (ಕೊನೆಯ ಭಾಗ): ಸುನಂದಾ ಎಸ್ ಭರಮನಾಯ್ಕರ

ಇಲ್ಲಿಯವರೆಗೆ ಕರುಣೆ ಇರುವುದು ಕೊಡುವುದರಲ್ಲಿ ಇಲ್ಲ:- ನಾವು ಬೇರೆಯವರಿಗೆ ತೋರಿಸುವ ಕರುಣೆ ಅವರನ್ನು ಆಶಕ್ತರನ್ನಾಗಿ, ಬಲಹೀನರನ್ನಾಗಿ ಮಾಡಬಾರದು ಅಷ್ಟೇ ಅಲ್ಲ, ನಮ್ಮ ದಯೆ ಅವರಲ್ಲಿ ದುಷ್ಟ ಆಲೋಚನೆಗಳನ್ನು ಹುಟ್ಟುಹಾಕಬಾರದು, ಹಾಗಾದಲ್ಲಿ ಅದಕ್ಕೆ ಸೂಕ್ತ ದಂಡನೆಯನ್ನು ನಾವೇ ಅನುಭವಿಸುತ್ತೇವೆ. ಅದಕ್ಕೊಂದು ಉತ್ತಮ ಉದಾಹರಣೆ ಇಲ್ಲಿದೆ. ಅರ್ಹತೆಯಿಲ್ಲದೆ ಏನನ್ನು ಪಡೆಯಬಾರದು ಹಾಗೇ ಅರ್ಹತೆಯಿಲ್ಲದವನಿಗೆ ಏನನ್ನು ಕೊಡಲೂಬಾರದು. ಸಾಧುವೊಬ್ಬ ಒಂದು ಗುಹೆಯಲ್ಲಿ ಕುಳಿತುಕೊಂಡು ಬಹಳ ಕಠಿಣವಾದ ತಪಸ್ಸನ್ನಾಚರಿಸುತ್ತಿದ್ದ ಆತ ಸಾಧನೆಯಲ್ಲಿ ಏಕಾಗ್ರತೆಯಿಂದ ತೊಡಗಿಸಿಕೊಂಡಿದ್ದನು. ಒಂದು ದಿನ ಅರಣ್ಯದಲ್ಲಿ ಬೇಟೆಯಾಡುತ್ತಾ ಬಂದ ರಾಜನೊಬ್ಬ … Read more

ಶಾಲಾ ಶೈಕ್ಷಣಿಕ ಯೋಜನೆ: ವೈ. ಬಿ. ಕಡಕೋಳ

ಸ್ವಂತ ಜ್ವಾಲೆಯಿಂದ ಉರಿಯುವ ದೀಪ ಮತ್ತೊಂದು ದೀಪವನ್ನು ಹೇಗೆ ಹೊತ್ತಿಸಲಾರದೋ ಹಾಗೆಯೇ ಸ್ವತಃ ಕಲಿಯದೇ ಇದ್ದ ಶಿಕ್ಷಕನು ಸಮರ್ಥವಾಗಿ ಬೋಧಿಸಲಾರ -ರವೀಂದ್ರನಾಥ ಠಾಗೂರ್ ಜೂನ್ ತಿಂಗಳು ಬಂತೆಂದರೆ ಶಾಲೆಗಳ ಪ್ರಾರಂಭ. ಇಲ್ಲಿ ಪಾಲಕರು. ಮಕ್ಕಳು ಶಿಕ್ಷಕರು ತಮ್ಮದೇ ಆದ ತಯಾರಿ ಮಾಡಿಕೊಳ್ಳುವ ಮೂಲಕ ಕಲಿಕಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಿದ್ದರಾಗುವ ಸಮಯ. 2018-19 ಶೃಕ್ಷಣಿಕ ವರ್ಷ ಪ್ರಾರಂಭವಾಯಿತು. ಶಾಲೆ ಪ್ರಾರಂಭವಾಗುವ ಮೊದಲು ವೇಳಾಪತ್ರಿಕೆ, ವರ್ಗದ ಶೈಕ್ಷಣಿಕ ರೂಪರೇಷೆಗಳ ಅಂದಾಜು ಪತ್ರಿಕೆ,ಅಭ್ಯಾಸ ಪತ್ರಿಕೆ, ದಿನಚರಿ ಹೀಗೆ ಒಂದಲ್ಲಾ ಹಲವು ದಾಖಲೆಗಳ … Read more

ದಯೆಯೇ ಧರ್ಮದ ಮೂಲ (ಭಾಗ 1): ಸುನಂದಾ ಎಸ್ ಭರಮನಾಯ್ಕರ

ಇಂದು ಮಾನವ ಕಟುಕನಾಗಿದ್ದಾನೆ, ಕರುಣೆ, ಕನಿಕರ ಎಲ್ಲವೂ ಅವನಿಂದ ಮಾಯವಾಗಿದೆ ಎನ್ನುವುದು ಸತ್ಯ. ಅತೀ ಶ್ರೇಷ್ಠ ಎನಿಸಿಕೊಂಡ ಮಾನವ ಜೀವಿ ಕರುಣಾ ಮೂರ್ತಿ, ಸಹನಾಮಯಿ, ಸಂಘಜೀವಿ ಎಂದೆಲ್ಲಾ ಬಿರುದು ಪಡೆದಿರುವ ಮನುಷ್ಯ ಇಂದು ತನ್ನೆಲ್ಲ ಮೌಲ್ಯಯುತ ಗುಣಗಳನ್ನು ತೊರೆದು ರಾಕ್ಷಸ ಪ್ರವೃತ್ತಿಗೆ ಇಳಿದಿರುವುದು, ಹೇಯಕರ ಸಂಗತಿ. ನಮ್ಮ ಧರ್ಮಗಳು, ಪರಸ್ಪರ ಮಾನವರು ಮಾತ್ರವಲ್ಲ ಇಡೀ ಪ್ರಕೃತಿಯನ್ನೇ ಪ್ರೀತಿಸುವದಕ್ಕೆ ಹೆಚ್ಚು ಒತ್ತು ಕೊಟ್ಟಿವೆ. ಪ್ರಳಯ ಎದುರುಗೊಂಡರೂ ಕೈಯಲ್ಲಿರುವ ಸಸಿಯನ್ನು ನಾಟಿ ಮಾಡಿರೆಂದು ಹೇಳುತ್ತವೆ. ನಾವು ಬೆಳೆದ ಕೃಷಿಯನ್ನು ಮಾನವರು … Read more