ಮಕ್ಕಳ ಹಕ್ಕುಗಳ ರಕ್ಶಣೆಯಲ್ಲಿ ಮಾಧ್ಯಮದ ಪಾತ್ರ: ಜ್ಯೋತಿ ಇರವರ್ತೂರು

ಇತ್ತೀಚೆಗೆ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನೋಡಿದ್ರೆ ಮಕ್ಕಳಿಗೂ ಹಕ್ಕುಗಳು ಇದೆಯಾ ಅನ್ನಿಸುತ್ತೆ. ತಮ್ಮವರಿಂದ, ಸಮಾಜದಿಂದ ಹೀಗೆ ತಮ್ಮ ಹಕ್ಕುಗಳೇನೆಂದು ಅರಿವು ಮೂಡುವ ಮುನ್ನ ಕನಸುಗಳ ಬಣ್ಣ ಕಳೆದುಕೊಳ್ಳುತ್ತಾರೆ ಈ ಚಿಣ್ಣರು. ಇಂತಹ ಸಂದರ್ಭದಲ್ಲಿ ಅರಿವು ಮೂಡಿಸಿ ಅವರ ಭವಿಷ್ಯ ದಾರಿ ಅರ್ಥಪೂರ್ಣವಾಗಿಸಲು ಮಾಧ್ಯಮದ ಪಾತ್ರ ಬಹಳ ದೊಡ್ಡದು.  ಶಾಲೆಯಲ್ಲಿ ಪುಟ್ಟ ಬೆನ್ನಿಗೆ ಬೆಟ್ಟದ ಹೊರೆ, ಬದುಕಿನ ಬಣ್ಣ ಕಳೆದುಕೊಂಡ ಬಾಲಕಾರ್ಮಿಕರು ;  ಕಾಫಿ ಕುಡಿಯಲೆಂದು ಹೋಟೇಲಿಗೆ ಹೋದಾಗ ಟೇಬಲ್ ಒರೆಸುವ ಪುಟ್ಟ ಕಂದನನ್ನು ನೋಡಿ ನಿಮ್ಮ … Read more

ಪರಿಸರ ವಿನಾಶ ಮತ್ತು ಆರ್ಥಿಕ ಅಸಮಾನತೆಯಿಂದ ನಾಗರೀಕತೆಯ ಅಳಿವು: ಜೈಕುಮಾರ್.ಹೆಚ್.ಎಸ್

ಪ್ರಳಯ ಸಂಭವಿಸಿ ಇಡೀ ವಿಶ್ವವೇ ವಿನಾಶಗೊಳ್ಳುತ್ತದೆ ಎಂದು ಭವಿಷ್ಯ ಹೇಳಿದ ಸ್ವಾಮೀಜಿ-ಜ್ಯೋತಿಷಿಗಳು ಪ್ರಳಯ ಸಂಭವಿಸದೇ ಇದ್ದಾಗ ಸಬೂಬು ಹೇಳುವುದನ್ನು ಗಮನಿಸಿದ್ದೇವೆ. ವಿಶ್ವದಲ್ಲಿ ಮನುಷ್ಯ ಸಮಾಜ ಹೇಗೆ ವಿನಾಶಗೊಳ್ಳುತ್ತದೆ ಎಂಬುದಕ್ಕೆ ಹಲವು ವೈಜ್ಞಾನಿಕ ಸಂಶೋಧನೆಗಳು ನಡೆಯುತ್ತಲೇ ಇವೆ. ಮನುಷ್ಯ ಸಮಾಜವು ಒಂದೊಂದು ಅವಧಿಯಲ್ಲಿ ಸವೆಸಿರುವ ಕಾಲಘಟ್ಟವನ್ನು ನಾಗರೀಕತೆ ಎನ್ನುತ್ತೇವೆ. ಮಾನವ ಇತಿಹಾಸದ ಉದ್ದಕ್ಕೂ ಹಲವು ನಾಗರೀಕತೆಗಳು ಏಳಿಗೆ ಕಂಡು ಅವಸಾನ ಹೊಂದಿವೆ. ಮಾನವ ನಾಗರೀಕತೆಗಳು ಹೇಗೆ ಅವಸಾನ ಕಾಣುತ್ತವೆ ಎಂಬುದರ ಕುರಿತು ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆಯ ನೆರವಿನಿಂದ … Read more

ನ್ಯಾನೊ ದ್ರವ; ವಿಜ್ಞಾನಿಗಳಲ್ಲಿ ಹುಟ್ಟಿಸಿರುವ ಕೌತುಕತೆಯ ಮಾಯದ್ರವ: ಪ್ರಸನ್ನ ಗೌಡ

ನೀವು ನ್ಯಾನೊ ಕಾರ್ ಬಗ್ಗೆ ಕೇಳಿದ್ದೀರಿ, ನ್ಯಾನೊ ಸಿಮ್ ಬಗ್ಗೆ ಕೇಳಿರಬಹುದು ಆದರೆ ನ್ಯಾನೊ ದ್ರವದ ಬಗ್ಗೆ ಕೇಳಿದ್ದೀರಾ?. ಏನಿದು ನ್ಯಾನೊ ದ್ರವ (Nanofluid) ಎಂದು ನಿಮ್ಮಲ್ಲಿ ಕೌತುಕತೆ ಹುಟ್ಟುವುದು ಸಹಜ.  ನಾವು ಬಳಸುವ ದಿನನಿತ್ಯದ ಹಲವಾರು ಉಪಕರಣಗಳಾದಂತಹ ರೆಫ್ರೀಜಿರೇಟರ್, ಎಸಿ/ಏರ್‌ಕಂಡಿಷನ್, ಲ್ಯಾಪ್‌ಟಾಪ್/ಕಂಪ್ಯೂಟರ್ ಹಾಗೂ ಕಾರ್ ರೇಡಿಯೇಟರ್‌ಗಳಲ್ಲಿ ಶಾಖವರ್ಗಾವಣೆಯಾಗುವುದನ್ನು ಗಮನಿಸಿದ್ದಿರಾ?.  ಕಂಪ್ಯೂಟರ್/ಲ್ಯಾಪ್‌ಟಾಪ್‌ಗಳಲ್ಲಿ ಕೂಲಿಂಗ್ ಪ್ಯಾನ್ ಬಳಸುವುದರಿಂದ ಗಾಳಿಯಿಂದ ಶಾಖವರ್ಗಾವಣೆಯಾಗುತ್ತದೆ. ರೆಫ್ರೀಜಿರೇಟರ್‌ನಲ್ಲಿ ಸಿ.ಎಫ್.ಸಿ(ಕ್ಲೋರೊ ಪ್ಲೋರೊ ಕಾರ್ಬನ್) ಎಂಬ ರಾಸಯನಿಕ ದ್ರವವನ್ನು ಮತ್ತು ಕಾರ್ ರೇಡಿಯೇಟರ್‌ನಲ್ಲಿ ನೀರನ್ನು ಬಳಸಿ ಶಾಖವರ್ಗಾವಣೆ … Read more

ಆಯ ತಪ್ಪಿದ್ರೆ ಅಪಾಯ (ಅಳಿದುಳಿದ ಭಾಗ): ಎಂ.ಎಸ್.ನಾರಾಯಣ.

(ಇಲ್ಲಿಯವರೆಗೆ…) ಕೆಲವರಿಗೆ ಇದೆಲ್ಲಾ ವಿವರಣೆ, ಸ್ಪಷ್ಟೀಕರಣಗಳು ರೇಜಿಗೆಯೆನಿಸಬಹುದು. ಹೀಗೆ ದ್ವಂದ್ವ, ಗೊಂದಲ ಹಾಗೂ ಸಂಕೀರ್ಣತೆಗಳಿಂದ ಕೂಡಿದ ಹಲವಾರು ಸಿದ್ಧಾಂತಗಳೇಕೆ ಬೇಕು? ಸರಳವಾದ ಒಂದು ಸಿದ್ಧಾಂತ ಸಾಲದೇ? ಎಂದೂ ಪ್ರಶ್ನಿಸಬಹುದು. ಆದರೆ, ಸತ್ಯದ ಸಮಗ್ರ ವಿವರಣೆಯು ಸತ್ಯದ ಎಲ್ಲ ಮಗ್ಗುಲುಗಳನ್ನೂ ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಅಲ್ಲದೆ, ಅಂತಹ ಅತಿ ಸರಳೀಕರಣಗಳಿಂದ ಆಗಬಹುದಾದ ಅಪಾಯಗಳನ್ನೂ ನಿರ್ಲಕ್ಷಿಸಲಾಗುವುದಿಲ್ಲ. ಈಗ ಉದಾಹರಣೆಗೆ ಬರೀ ಕರ್ಮವಾದವನ್ನು ಅಳವಡಿಸಿಕೊಂಡೆವೆಂದುಕೊಳ್ಳಿ. ಆಗ ಎಲ್ಲ ಹೊಣೆಗಾರಿಕೆಯೂ ನಮ್ಮದೇ ಎಂದಾಗುತ್ತದೆ. ಹಾಗಾದೊಡನೆ, ‘ಎಲ್ಲವೂ ನನ್ನಿಂದಲೇ,  ನಾನಿಲ್ಲದಿದ್ದರೇನೂ ಇಲ್ಲ, ನಾನೇ ಸರ್ವಸ್ವ’, ಎಂದು … Read more

ಲಿಂಗೇರಿ ವಿಜಿಯ ಗುಟ್ಟು: ವಾಸುಕಿ ರಾಘವನ್

ತನ್ನ ಅಜ್ಜನ ಭಾವಚಿತ್ರದ ಮುಂದೆ ನಿಂತಿದ್ದ ವಿಜಿಯ ಮುಖದಲ್ಲಿ ತೃಪ್ತಿಯ ಮಂದಹಾಸವಿತ್ತು. "ಅಜ್ಜ, ನಿನ್ನ ಮಾತು ನಿಜ ಆಯ್ತು  ನೋಡು. ನೀನು ಹೇಳ್ತಿದ್ದ ಆ ದಿನ ಇವತ್ತು ಬಂತು" ಅಂದವನ ಕಣ್ಣಂಚು ಸ್ವಲ್ಪ ತೇವಗೊಂಡಿತ್ತು. ಅಜ್ಜ ಪಟ್ಟ ಕಷ್ಟಕ್ಕೆ, ಅನುಭವಿಸಿದ ನಿರಾಶೆ, ಅವಮಾನ, ಮೂದಲಿಕೆ ಇವೆಲ್ಲದಕ್ಕೂ ಒಂದು ಚಿಕ್ಕ ಸಮಾಧಾನ ಅನ್ನುವಂತೆ ಇತ್ತು ಆ ದಿನ. ವಿಜಿಯ ದೆಸೆಯಿಂದ ಲಿಂಗೇರಿ ಅನ್ನುವ ಆ ಪುಟ್ಟ ಹಳ್ಳಿಯ ಹೆಸರು ಜಗತ್ತಿನಾದ್ಯಂತ ಹರಡಿತ್ತು. ಯಾವುದೋ ಟಿವಿ ಚಾನಲ್ಲಿನವರು "ವಸ್ತ್ರ ಜಾದೂಗಾರ … Read more

ಮರೆಯುವುದನ್ನು ಮರೆಯುವ ಬಗೆ ಹೇಗೆ?: ಹೊರಾ.ಪರಮೇಶ್

"ಮರೆವು" ಎಂಬುದು ಜ್ಞಾನಾಸಕ್ತರಿಗೆ ಅದರಲ್ಲೂ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಶತ್ರುವಂತೆ ಕಾಡುತ್ತದೆ.ಪ್ರತಿಯೊಬ್ಬರಿಗೂ ಜೀವನದ ಒಂದಲ್ಲ ಒಂದು ಸಂದರ್ಭದಲ್ಲಿ ಈ "ಮರೆವು" ಉಂಟಾಗಿ ಕೆಲವೊಮ್ಮೆ ಅವಮಾನ, ಮತ್ತೆ ಕೆಲವೂಮ್ಮೆ ಅಪಘಾತ ಇನ್ನೂ ಕೆಲವು ಸಾರಿ ಆನಂದವನ್ನೇ ಉಂಟು ಮಾಡುತ್ತದೆ.ಅದಕ್ಕೆ ಮನೋವಿಜ್ಞಾನಿಗಳು "ಮರೆವು ಮನುಷ್ಯನಿಗೆ ವರವೂ ಹೌದು ಶಾಪವೂ ಹೌದು" ಎಂದಿದ್ದಾರೆ.             ನಿಜ ನಮ್ಮ ಮೆದುಳಿನಲ್ಲಿ ನಮ್ಮ ಪಂಚೇ೦ದ್ರಿಯಗಳಿಂದ ಪಡೆದ ಅನುಭವಗಳೆಲ್ಲವನ್ನು ದಾಖಲಿಸುವ ಸಾಮರ್ಥ್ಯ ಇರುತ್ತದೆ.ಆದರೆ ಆ ಧಾರಣ ಸಾಮರ್ಥ್ಯವು … Read more

ನೂರರ ಕಸಾಪ ತೊಡಬೇಕಾಗಿರುವ ರೂಪ: ಪ್ರದೀಪ್ ಮಾಲ್ಗುಡಿ

ಕನ್ನಡ ಸಾಹಿತ್ಯ ಪರಿಷತ್ತು ಶತಮಾನದ ಸಂಭ್ರಮಾಚರಣೆಯ ಹೊಸ್ತಿಲಲ್ಲಿದೆ. ಮೈಸೂರಿನ ಅಂದಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸಾಹಿತ್ಯ, ಸಂಗೀತ, ವಾಸ್ತುಶಿಲ್ಪಗಳ ಅಭಿವೃದ್ಧಿಯ ಉದ್ದೇಶದಿಂದ ೦೫/೦೫/೧೯೧೫ರಂದು  ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು. ಇಂದಿಗೆ ಕಸಾಪಗೆ ೯೯ ವರ್ಷಗಳು ತುಂಬಲಿವೆ. ಅಂದಿನ ಉದ್ದೇಶಗಳೆಲ್ಲ ಇಂದಿಗಾದರೂ ಈಡೇರಿದೆಯೇ? ಎಂಬ ಪ್ರಶ್ನೆಯನ್ನು ಕೇಳಿದರೆ ಸಮಾಧಾನಕರ ಉತ್ತರ ಸಿಗುವುದಿಲ್ಲ. ಈ ಸಮಯದಲ್ಲಿ ೨೩ ಅಧ್ಯಕ್ಷರ ಅವಧಿ ಮುಗಿದು, ೨೪ನೆಯವರು ಅಧ್ಯಕ್ಷರಾಗಿ ಕಾರ್‍ಯನಿರ್ವಹಿಸುತ್ತಿದ್ದಾರೆ. ಪುಸ್ತಕ ಪ್ರಕಟಣೆ, ಸಾಹಿತ್ಯ ಸಮ್ಮೇಳನಗಳ ಆಯೋಜನೆಯನ್ನು ಹೊರತು ಪಡಿಸಿದರೆ … Read more

ಸುಷ್ಮಾ: ಕುಸುಮ ಆಯರಹಳ್ಳಿ

ಸುಮಾರು ಹನ್ನೆರಡು ವರ್ಷಗಳೇ ಕಳೆದಿರಬೇಕು. ಅದರೂ ಈ ಘಟನೆ ಮಾತ್ರ ನನ್ನ ಮನಸಿನಲ್ಲಿ ಇಂದಿಗೂ ಹಸಿ ಹಸಿಯಾಗಿದೆ. ಹತ್ತನೇ ಕ್ಲಾಸಿನವರೆಗೂ ಚಾಮರಾಜನಗರದ ಅಜ್ಜಿಮನೆಯಲ್ಲಿ ಬೆಳೆದ ನಾನು ಆಗಷ್ಟೇ ಅಪ್ಪ,ಅಮ್ಮನನ್ನೂ, ಸ್ವಂತ ಹಳ್ಳಿಯನ್ನೂ, ಪಿಯುಸಿಯನ್ನೂ ಸೇರಿದ್ದೆ. ಸುತ್ತಮುತ್ತಲ ಹಳ್ಳಿಗಳಿಗೆ ಇದ್ದದ್ದು ಅದೊಂದೇ ದೇವಲಾಪುರದ ಪಿಯು ಕಾಲೇಜು. ಬುದ್ದಿವಂತರೂ, ಒಂದಷ್ಟು ಸಾಹಿತ್ಯಾಸಕ್ತಿಯೂ ಇದ್ದ ಸುತ್ತಲ ಹಳ್ಳಿ ಹುಡುಗ-ಹುಡುಗಿಯರಲ್ಲಿ ತುಂಬ ಜನ ಇದೇ ಬ್ಯಾಚಲ್ಲಿದ್ದರು. ಹೆಚ್ಚೆಂದರೆ 100 ಜನ ವಿಧ್ಯಾರ್ಥಿಗಳಿದ್ದ, ಎರಡೇ ಕ್ಲಾಸಿನ ಆ ಕಾಲೇಜಿನಲ್ಲಿ ನಾವು ಚರ್ಚಾಸ್ಪರ್ಧೆ ಮುಂತಾದವಕ್ಕೆ ದೀಪ … Read more

ಬಸವಣ್ಣನಿಂದ ಭಗೀರಥನವರೆಗೆ: ಕೆ. ಆರ್. ಹರಿಪ್ರಸಾದ್

ಈ ಶೀರ್ಷಿಕೆ ಓದಿ ಇದೇನಿದು ವಿಚಿತ್ರವಾಗಿದೆ? ಅಂತ ನಿಮಗೆ ಅನ್ನಿಸಿದರೆ, ನಿಮ್ಮ ಅನಿಸಿಕೆ ಸರಿಯಾಗೇ ಇದೆ. ಒಬ್ಬ ಚಾರಿತ್ರಿಕ ಮನುಷ್ಯ, ಮತ್ತೊಬ್ಬ ಪುರಾಣಪುರುಷ. ಇವರಿಗೆ ಹೇಗೆ ಸಂಬಂಧ ಅನ್ನುವ ನಿಮ್ಮ ಪ್ರಶ್ನೆಗೆ ಉತ್ತರವನ್ನು ಒಂದು ಸಾಲಿನಲ್ಲಿ ಹೇಳಲು ಕಷ್ಟ. ಅರ್ಥಾತ್ ನೀವು ಮುಂದೆ ಓದಲೇಬೇಕು. ನಮ್ಮದೊಂದು ಗೆಳೆಯರ ಬಳಗವಿದೆ. ನಾವು ಅದರ ಮೂಲಕ ನಾಟಕ, ಪ್ರತಿಭಟನೆ, ಜಾಥಾ, ಪ್ರಕಟಣೆ ಇತ್ಯಾದಿ ಏನೇನೋ ಮಾಡುತ್ತಿರುತ್ತೇವೆ. ಈ ಏನೇನೋ ಮಾಡುವ ನಮಗೆ ರಂಗಭೂಮಿ ಪ್ರಧಾನ ಮಾಧ್ಯಮ. ಒಮ್ಮೆ ನಾವು ಬಸವಣ್ಣನ … Read more

ರಸವೇ ಜನನ, ವಿರಸವೇ ಮರಣ, ಸಮರಸವೇ ಜೀವನ: ವಿಶ್ವನಾಥ ಕಂಬಾಗಿ

ಬಹುಶಃ ಮನುಷ್ಯನಿಗೆ ಇನ್ನೊಂದೆರಡು ಮೆದುಳುಗಳೇನಾದರು ಇದ್ದಿದ್ದರೆ ಇಡೀ ಪೃಥ್ವಿ  ಎರಡಂತಸ್ತಿನ ಜಗತ್ತಾಗುತ್ತಿತ್ತು. ಯಾವ ಒಂದು  'ಅರಿವು' ಇರದೇ ಇರುವಾಗಿನ ಮನುಷ್ಯ ಪ್ರಾಣಿಯನ್ನು ಊಹಿಸಿಕೊಂಡಾಗ ಕಾಲ, ಸ್ಥಳ ಎರಡೂ ನಿಜಕ್ಕೂ ಶುಭ್ರವಾಗಿದ್ದವೆನೋ? ಎಂದೆನಿಸುತ್ತದೆ. ಆಗ ಮನುಷ್ಯ ಕೂಡ ಇತರೆ ಪ್ರಾಣಿಯಂತೆ ತಾನೂ ಒಂದು ಪ್ರಾಣಿ. ಎಲ್ಲರೊಳೊಂದಾಗಿ ಬದುಕಿದ ಆತ ಎಲ್ಲರಂತೆಯೇ ಬೆಳೆಯುತ್ತಿದ್ದ. ಎಲ್ಲದರ ಮಧ್ಯ ಎಲ್ಲವೂ ಆಗಿದ್ದ ಈ ಪ್ರಾಣಿಯ ಮೆದುಳು ಗಡ್ಡೆಯಲ್ಲಿ ಅದೆಂತಹ ನರಗಳು ಕವಲೊಡೆದು ಬೆಳೆದವೋ! ಆತನ ಇರುವಿಕೆಗೂ ಇತರೇ ಪ್ರಾಣಿಗಳ ಇರುವಿಕೆಯ ಮಧ್ಯ ಒಂದು … Read more

ಆಧುನಿಕ ಮಹಿಳೆಯರು ಶಿಲುಬೆಗೇರುವ ಪರಿ: ಶ್ರೀದೇವಿ ಕೆರೆಮನೆ

ನಾನು ಸೀತೆಯಷ್ಟು ಸಹಿಷ್ಣು, ಸರ್ವ ಸಹನೆಯವಳಲ್ಲ. ಅವಶ್ಯಕತೆ ಉಂಟಾದಲ್ಲಿ ನಾನು ವಿಪ್ಲವ ಮಾಡ ಬಲ್ಲೆ… ಪ್ರತಿ ಹಿಂಸೆಯನ್ನೂ ಮಾಡಬಲ್ಲೆ. ಕಳೆದ ಎರಡು ತಿಂಗಳಿಂದ ಡಾ. ಪ್ರತಿಭಾ ದೇವಿಯವರು ಬರೆದ, ಮೂತಿದೇವಿ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ’ಯಾಜ್ಞಸೇನಿ’ ಕೃತಿಯನ್ನು ಗೌತಮ ಗಾಂವಕರರು ನನ್ನ ಕೈಗಿಟ್ಟಾಗಿನಿಂದ ಕನಿಷ್ಟ ಸಾವಿರ ಸಲ ಈ ವಾಕ್ಯವನ್ನು ಓದಿದ್ದೇನೆ. ಆಸ್ವಾದಿಸಿದ್ದೇನೆ. ಒಳಗೊಳಗೇ ಈ ವಾಕ್ಯವನ್ನು ಮಥಿಸಿದ್ದೇನೆ, ಈ ವಾಕ್ಯವನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನವನ್ನೂ ಮಾಡಿದ್ದೇನೆ. ಬಹುಶಃ ಮಹಿಳಾ ವಾರಾಚರಣೆಯ ಈ ಸಂದರ್ಭದಲ್ಲಿ ಈ ಮಾತು ಕೇವಲ … Read more

ಕನ್ನಡವೇ ನಿತ್ಯ: ಸ್ಮಿತಾ ಅಮೃತರಾಜ್

ನಾವು ಎಲಿಮೆಂಟರಿ ಶಾಲೆಗೆ ಹೋಗುವ ಹೊತ್ತಿಗೆ ಅಲ್ಲೊಂದು ಇಲ್ಲೊಂದರಂತೆ ಅಕ್ಕಪಕ್ಕದ ಊರುಗಳಲ್ಲಿ  ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಗಳು ಹಣಕಿ ಹಾಕುತ್ತಿದ್ದವಷ್ಟೆ. ಉಳ್ಳವರು ಹಾಗು  ತಮ್ಮ ಮಕ್ಕಳನ್ನು ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಗೆ  ಸೇರಿಸಬೇಕೆಂಬ ಮಹಾತ್ಕಾಂಕ್ಷೆ ಹೊತ್ತ ಹೆತ್ತವರ ಮಕ್ಕಳಿಗೆ ಮಾತ್ರ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ನೊಳಕ್ಕೆ ಹೊಕ್ಕು ಲಯ ಬದ್ಧವಾಗಿ ಇಂಗ್ಲೀಷ್ ಪ್ರಾರ್ಥನೆಯನ್ನು  ಉಸುರುವ ಭಾಗ್ಯ. ನಾವೆಲ್ಲಾ ಬರೇ ಕಾಲಿನಲ್ಲಿ. ಹೆಚ್ಚೆಂದರೆ ಹವಾಯಿ ಚಪ್ಪಲನ್ನು ತೊಟ್ಟು ಬಲು ದೂರದಿಂದ ನಡೆದು ಕೊಂಡೇ ಬರುವಾಗ,  ಅವರುಗಳೆಲ್ಲಾ ಗರಿ ಗರಿ … Read more

ಅಲ್ಲೂರಿಯ ಒಡಲುರಿ ಇನ್ನೂ ಆರಿಲ್ಲ…!: ಅಜ್ಜಿಮನೆ ಗಣೇಶ್

ನಮಗೆ ನೀರು ಬೇಡ, ರಸ್ತೆ ಬೇಡ, ಮನೆಯೂ ಬೇಡ, ಸ್ವಾತಂತ್ರ್ಯದ ಗುರುತಿನ ಒಂದೇ ಒಂದು ಪತ್ರ ಬೇಡ. ನಿಮ್ಮ ಸವಲತ್ತುಗಳು ನಿಮಗೆ ಇರಲಿ. ನಮ್ಮನ್ನ ಬದುಕಲು ಬಿಡಿ. ಕಾಡು ಕಾಯುವವರು ನಾವು ನಮಗೆ ಸಾಮಾಜಿಕ ನ್ಯಾಯ ಕೊಡಿ. ಹಸಿರುಟ್ಟ ಹಾಡಿಯಲ್ಲಿ, ನೆಮ್ಮದಿಯ ಬದುಕಿಗಾಗಿ ಹಾತೊರೆಯುತ್ತಿರುವ ಆದಿವಾಸಿಗಳ ಅಹವಾಲಿದು..ಬದಕಲು ಬಿಡಿ ಅಂತ ಅಂಗಲಾಚುತ್ತಿರುವ ಪರಿಯಿದು…ದೊಡ್ಡ ಗೌಡರ ಬಾಗಿಲಿಗೆ ನಮ್ಮ ಎಲುಬಿನ ತ್ವಾರಣಾ. ಶೋಷಣೆ ವಿರುದ್ಧದ  ಈ ಹಾಡು ಮಲೆನಾಡ  ಮಡಿಲೊಳಗೆ ಹರಡಿದ ಕಾಡು ದರಲೆ ಮೇಲೆ ನೆತ್ತರ ಹರಿಸಿದ್ದು, … Read more

ಹಳ್ಳಿಮೇಷ್ಟ್ರು: ಪತ್ರೇಶ್. ಹಿರೇಮಠ್

ಹಳ್ಳಿಮೇಷ್ಟ್ರು ಎಂದಾಕ್ಷಣ ಖ್ಯಾತ ನಟ ರವಿಚಂದ್ರನ್ ಚಲನಚಿತ್ರ ಕಥೆಯೆಂದು ಭಾವಿಸಿದರೆ ತಪ್ಪಾದೀತು. ಇದು ನಮ್ಮ  ಇಡೀ ಊರಿಗೇ ಊರೇ ಬಾಗಿ ಗೌರವಿಸುತ್ತಿದ್ದ ಹಳೆಯ ಪ್ರೀತಿಯ ಮೇಷ್ಟ್ರುಗಳ ವಿಷಯವಿದು. ಶಿಕ್ಷಕರಿಗೆ ದೇಗುಲ ನಿರ್ಮಿಸಿದ ನಾಡ ವಿದ್ಯಾವಂತರು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಹಳ್ಳಿಯ ಹಳೆಯ ಮೇಷ್ಟ್ರುಗಳ ಬದುಕಿನ ಕಥಾ ಸರಮಾಲೆಯಿದು.   ಈಗ ಶಿಕ್ಷಕ ವೃತ್ತಿಯೆಂದರೆ ಬೆಳಿಗ್ಗೆ ಹತ್ತಕ್ಕೆ ಶಾಲೆಗೆ ಹೊರಡುವುದು, ಪ್ರಾರ್ಥನೆ,ಪಾಠ, ಮಾಡುವುದು ಪುನಃ ಸಂಜೆ ಐದಕ್ಕೆ ಮನೆಗೆ ಮರಳುವುದು. ಇದು ಇಂದಿನ ಬಹುತೇಕ ಶಿಕ್ಷಕರ ದಿನಚರಿ. ಈಗಿನ … Read more

ಮಹಿಳಾ ದಿನ’ ಅರ್ಥ ಕಳೆದುಕೊಳ್ಳುತ್ತಿರುವಾಗ: ವೀಣಾ ಅನಂತ್

ಮಾರ್ಚ್ ೮,  ಮತ್ತೊಮ್ಮೆ ವಿಶ್ವ ಮಹಿಳಾ ದಿನ ಬಂದಿದೆ. ಮತ್ತೊಮ್ಮೆ ಕನವರಿಕೆಗಳು, ಹೊಸ ಆಶಯಗಳು… ಭಾರತೀಯ ಮಹಿಳೆ ಇಂದು ಪ್ರಗತಿಯತ್ತ ದಾಪುಗಾಲು ಹಾಕುತ್ತಿದ್ದಾಳೆ… ಎಲ್ಲಾ ಕಡೆ ಮಹಿಳೆಯರದೇ ಮೇಲುಗೈ…ಇವೆಲ್ಲಾ ಕೇಳಿ ಬರುವ ಮಾತುಗಳು. ಆದರೆ ನಿಜ ಪರಿಸ್ಥಿತಿ ಬೇರೆಯೇ ಇದೆ. ಹಳೆ ಕನಸುಗಳೆಲ್ಲಾ ದುಃಸ್ವಪ್ನವಾಗಿ ಕಾಡುತ್ತಿರಲು ಹೊಸ ಕನಸುಗಳನ್ನು ಹೆಣೆಯಲು ಯಾಕೋ ಮನಸ್ಸೇ ಬರುತ್ತಿಲ್ಲ. ಇತ್ತೀಚಿಗಿನ ಘಟನೆಗಳನ್ನು ಗಮನಿಸಿದಾಗ ಯಾಕೋ ’ ಮಹಿಳಾ ದಿನ’ ಅರ್ಥ ಕಳೆದುಕೊಂಡಂತೆ ಅನಿಸುತ್ತಿದೆ. ಇತ್ತೀಚೆಗೆ ಅತ್ಯಾಚಾರ, ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಾಗಿವೆ. … Read more

ಹರಳೆಣ್ಣೆ ಡಬ್ಬಿ ಮತ್ತು ಹಳೇ ಪ್ರೇಮ ಪುರಾಣ..!: ರಶ್ಮಿ ಜಿ ಆಳ್ವ

ಪ್ರೀತಿ ಅನ್ನುವ ಎರಡಕ್ಷರವನ್ನು ದ್ವೇಷಿಸುವಂತೆ ಮಾಡಿದ್ದು ನೀನು… ಪ್ರೀತಿ ಅಂದರೆ ಅರಿಯದ ದಿನಗಳವು… ರೋಮಿಯೋ-ಜ್ಯೂಲಿಯೆಟ್, ಲೈಲಾ-ಮಜ್ನು ಪ್ರೀತಿಗಾಗಿ ಸತ್ತರು ಇಷ್ಟೇ ನನಗೆ ಗೊತ್ತಿದ್ದಿದ್ದು. ಆದರೆ ಕಾಲೇಜಿನ ದಿನಗಳಲ್ಲಿ ಲೆಕ್ಚರರೊಬ್ಬರು ತುಂಬಾ ಇಷ್ಟವಾಗಿದ್ದರು. ಅವರು ಮಾಡುತ್ತಿದ್ದ ಪಾಠವೂ ಅಷ್ಟೇ ಆಕರ್ಷಕ. ನಮ್ಮ ಗರ್ಲ್ಸ್ ಕಾಲೇಜ್ ಹೀರೋ ಅವರು. ಅವರು ಮಾಡುತ್ತಿದ್ದ ‘ಡಿಮಿನಿಶಿಂಗ್ ಮಾರ್ಜಿನಲ್ ಯುಟಿಲಿಟಿ’ಯ ಪಾಠ ಇಂದಿಗೂ ಮರೆತಿಲ್ಲ. ಕಾಲೇಜಿನ ಕೊನೆಯ ದಿನಗಳಲ್ಲಿ ಅವರು ನನ್ನ ಆಟೋಗ್ರಾಫ್‌ನಲ್ಲಿ ಬರೆದಿದ್ದು, ‘ಲವ್ಲೀ ಹ್ಯೂಮನ್‌ಬಿಯಿಂಗ್ ವಿತ್ ಮೋಸ್ಟ್ ಎಕ್ಸ್‌ಪ್ರೆಸಿಂಗ್ ಐಸ್’ ಕಣ್ಣಿಗೆ … Read more

ಇತಿ-ಮಿತಿಗಳ ನಡುವೆ ಅಂದು-ಇಂದಿನ ಮಹಿಳೆ: ತೇಜಸ್ವಿನಿ ಹೆಗ್ಡೆ

 ಪ್ರಾಚೀನ ಕಾಲದಿಂದಲೂ (ವೇದ ಕಾಲವನ್ನು ಬಿಟ್ಟು) ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಎಲ್ಲೆಡೆಯಲ್ಲೂ ಸ್ತ್ರೀಯನ್ನು ಎರಡನೆಯ ದರ್ಜೆಯ ಪ್ರಜೆಯೆಂದೇ ಪರಿಗಣಿಸಲಾಗಿದೆ. ಆಯಾ ಕಾಲದಲ್ಲಿ ರಚಿತವಾದ ಧರ್ಮಗ್ರಂಥಗಳನ್ನು ಅನುಸರಿಸಿ ಅಥವಾ ಅವುಗಳಲ್ಲಿ ಪ್ರಸ್ತಾಪಿಸಲ್ಪಟ್ಟ ನಿಯಮಾವಳಿಗಳನ್ನು ತಮಗೆ ಮನಬಂದಂತೇ ತಿರುಪಿ, ಅವುಗಳನ್ನೆಲ್ಲಾ ಹೆಣ್ಣಿನ ಮೇಲೆ ಹೇರಿ ಪಿತೃಪ್ರಧಾನ ಸಮಾಜ ಅವಳನ್ನು ಹಲವು ರೀತಿಯಲ್ಲಿ ನಿರ್ಬಂಧಿಸಿ, ದೌರ್ಜನ್ಯವೆಸಗುತ್ತಲೇ ಬಂದಿದೆ.   ಆದರೆ ಸರಿ ಸುಮಾರು ೫,೦೦೦ ವರುಷಗಳ ಹಿಂದಿನ ವೇದದ ಕಾಲದಲ್ಲಿ ಮಹಿಳೆಯರ ಸ್ಥಿತಿ ಉತ್ಕೃಷ್ಟವಾಗಿತ್ತು ಎನ್ನುವುದಕ್ಕೆ ಸಾಕಷ್ಟು ಪುರಾವೆಗಳಿವೆ. ವೇದಕಾಲದ ಪೂರ್ವಾರ್ಧದಲ್ಲಿ … Read more

ಹಿಂತಿರುಗಿ ನೋಡಿದಾಗ: ರುಕ್ಮಿಣಿಮಾಲಾ

೧೯೭೪ನೇ ಇಸವಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತನಡ್ಕದಲ್ಲಿರುವ ಸರ್ಕಾರೀ ಪ್ರಾಥಮಿಕ ಶಾಲೆಗೆ ಒಂದನೇ ತರಗತಿಗೆ ಸೇರಿದಾಗ ನನ್ನ ವಯಸ್ಸು ಐದು. ಮನೆಯಿಂದ ಶಾಲೆಗೆ ಒಂದು ಮೈಲಿ ನಡೆದೇ ಹೋಗುತ್ತಿದ್ದುದು. ನಮಗೆ ಮಹಮ್ಮದ್ ಎಂಬ ಶಿಕ್ಷಕರು ಅ ಆ ಇ.. ..  ಕನ್ನಡ ಅಕ್ಷರ ಮಾಲೆ ಕಲಿಸಿದವರು. ಅವರ ಮೇಜಿನಮೇಲೆ ನಾಗರಬೆತ್ತ ಸದಾ ಇರುತ್ತಿತ್ತು. ಒಮ್ಮೆಯೂ ನಾನು ಅದರ ಪೆಟ್ಟಿನ ರುಚಿ ಪಡೆದವಳಲ್ಲ! ಆದರೆ ಏಕೋ ಗೊತ್ತಿಲ್ಲ ಆ ಬೆತ್ತದಮೇಲೆ ನನಗೆ ಬಲು ಕೋಪವಿತ್ತು. ನಮ್ಮ ಮೇಸ್ಟರು … Read more

ಸ್ತ್ರೀ, ಸ್ವಾತ೦ತ್ರ್ಯ, ಸ್ತ್ರೀ ಸ್ವಾತ೦ತ್ರ್ಯ: ರೂಪ ಸತೀಶ್

  ಸ್ಪ್ರಿ೦ಗ್ ಟ್ರೀ ಅಪಾರ್ಟ್ಮೆ೦ಟ್ ರೆಸಿಡೆ೦ಟ್ಸ್ ಅಸೋಸಿಯೇಷನ್ನಿನ ನಿಯಮದ೦ತೆ / ಸರದಿಯ೦ತೆ ಈ ಬಾರಿಯ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು ೪೦೪ ನೇ ಫ್ಲಾಟಿನ ಶಾ೦ತ ಇನಾಮ್ದಾರ್. ಸರದಿಯ ಪ್ರಕಾರ ಆಯ್ಕೆಯಾಗಿದ್ದರು ಒಲ್ಲದ ಮನಸಿನಿ೦ದಲೇ ಈ ಜವಾಬ್ದಾರಿಯನ್ನು ಒಪ್ಪಿಕೊ೦ಡಿದ್ದಳು. ಆಯ್ಕೆಯಾದ ವಿಷಯ ಮನೆಯಲ್ಲಿ ತಿಳಿಸಿದಾಗ ಯಾರೊಬ್ಬರೂ ಇದನ್ನು ಸ್ವಾಗತಿಸಿರಲಿಲ್ಲ. ಬದಲಿಗೆ ಗೇಲಿ ಮಾಡಿ ತಮಾಷೆ ಮಾಡಿದ್ದರು.   ಮು೦ದಿನ ವಾರ ಅ೦ತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅ೦ಗವಾಗಿ ಅಸೋಸಿಯೇಷನ್ನಿನ ಸಧಸ್ಯರೆಲ್ಲರೂ ಸೇರಿ ಒ೦ದು ಕಾರ್ಯಕ್ರಮ ಆಯೋಜಿಸಿಕೊ೦ಡಿದ್ದು, ಅದಕ್ಕಾಗಿ ಶಾ೦ತ ಅಪಾರ್ಟ್ಮೆ೦ಟಿನ ಹೆ೦ಗಸಿರಿಗೆ … Read more

ಛಾಯಾಗ್ರಹಣ: ರಜನಿ ನಿಟ್ಟೆ

ನಾನು ಬೆಂಗಳೂರಿನ ತಂತಜ್ಞಾನ ಸಂಸ್ಥೆಯಲ್ಲಿ ಉದ್ಯೋಗಿ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪುಟ್ಟ ಹಳ್ಳಿ ನಿಟ್ಟೆ ನನ್ನೂರು. ನನಗೂ ಎಲ್ಲರಂತೆ ಬಿಡುವಿನ ವೇಳೆ ಕಳೆಯಲು ಕೆಲವು ಹವ್ಯಾಸಗಳು. ಸುಮಾರು ಐದಾರು ವರ್ಷಗಳಿಂದ ತುಂಬಾ ಆಸಕ್ತಿಯಿಂದ ಬೆಳೆಸಿಕೊಂಡು ಬಂದಿರುವ ಒಂದು ಮುಖ್ಯ ಹವ್ಯಾಸ ಛಾಯಾಗ್ರಹಣ. ಹಾಗೆಂದು ನಾನು ವ್ರತ್ತಿಪರ ಛಾಯಾಗ್ರಾಹಕಿಯೆಂದಾಗಲೀ ಅಥವಾ ಪರಿಣಿತೆ ಎಂದಾಗಲಿ ಅಂದುಕೊಳ್ಳಬೇಡಿ. ಮನಸ್ಸಿಗೆ ಇಷ್ಟವಾದದ್ದನ್ನು ನನಗೆ ತಿಳಿದಂತೆ ಸೆರೆಹಿಡಿಯುವುದಷ್ಟೇ ನನಗೆ ತಿಳಿದಿರುವುದು.    ಛಾಯಾಗ್ರಾಹಕಿಯಾಗಿ ಪ್ರಕೃತಿ ಮತ್ತು ಜನಜೀವನದ ಚಿತ್ರಗಳನ್ನು ಸೆರೆಹಿಡಿಯುವುದು ನನಗೆ ತುಂಬಾ … Read more

ಕೊಡಗಿನಲ್ಲಿ ಪ್ರವಾಸೋಧ್ಯಮ ಮತ್ತು ಮಹಿಳೆ: ಸವಿತಾ ಮಡಿಕೇರಿ

ಪುರಾಣ ಕಾಲದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನವಿತ್ತು. ಒಳ್ಳೆಯ ಗೌರವ ಹಾಗೂ ಬೆಲೆ ಇತ್ತು. ಕ್ರಮೇಣ ಕಾಲ ಬದಲಾದಂತೆ ಮಹಿಳೆಯನ್ನು ಅಡಿಗೆ ಮನೆಗೆ ಸೀಮಿತವಾಗಿಡಲಾಯಿತು. ಮಹಿಳೆ ಎಷ್ಟೇ ಬುದ್ಧಿವಂತಳಾದರೂ ಬೇರೆ ವ್ಯವಹಾರಗಳಲ್ಲಿ ಅವಳಿಗೆ ಪ್ರವೇಶವಿರಲಿಲ್ಲ. ಅವಳಿಗೆ ಹೆಚ್ಚಿನ ವಿದ್ಯಾಭ್ಯಾಸ ದೊರೆಯುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ಮಹಿಳೆಯರು ಅಡಿಗೆ ಮನೆಗೆ ಸೀಮಿತರಾಗಿಲ್ಲ. ಮಹಿಳೆ  ಹೊರಜಗತ್ತಿನಲ್ಲಿ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದಾಳೆ. ಜೊತೆಗೆ ಮನೆ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿದ್ದಾಳೆ. ಪುರುಷರಿಗಿಂತ ಒಂದು ಹೆಜ್ಜೆ ಮುಂದೆಯೇ ಇದ್ದಾಳೆ ಎನ್ನಬಹುದು.ಪ್ರತಿವರ್ಷ ಪರೀಕ್ಷೆಯ ಫಲಿತಾಂಶ ಬಂದಾಗ … Read more

ಯೋಗ ಸಂಜೀವಿನಿ: ಪೂರ್ಣಿಮಾ ಗಿರೀಶ್

ಯೋಗ ಅನ್ನುವುದು ಎಲ್ಲರಿಗೂ ಎಟುಕುವ ವಿದ್ಯೆ. ನಿರಂತರ ಅಭ್ಯಾಸದಿಂದ ಯೋಗವನ್ನು ಕರಗತ ಮಾಡಿಕೊಳ್ಳಲು ಸಾಧ್ಯ. ದಿನದ ೨೪ ಘಂಟೆಗಳಲ್ಲಿ ನಮ್ಮ ದೇಹ ಮತ್ತು ಮನಸ್ಸು ವಿವಿಧ ಕೆಲಸಗಳಲ್ಲಿ, ಯೋಚನೆಗಳಲ್ಲಿ ಲೀನವಾಗಿರುತ್ತದೆ. ಅಗತ್ಯವಾಗಿರುವ ವಿಶ್ರಾಂತಿ ದೊರೆಯದಿದ್ದಾಗ ನಾವು ಮಾಡುವ ಕೆಲಸಗಳು ಪರಿಪೂರ್ಣವಾಗಿರುವುದಿಲ್ಲ ಮತ್ತು ದೇಹ ಅನಾರೋಗ್ಯಕ್ಕೀಡಾಗುವ ಸಾಧ್ಯತೆಗಳು ಬಹಳ. ಯೋಗಭ್ಯಾಸದಲ್ಲಿ ದೀರ್ಘ ಉಸಿರಾಟಕ್ಕೆ ಬಹಳ ಪ್ರಮುಖವಾದ ಸ್ಥಾನವಿದೆ. ದೀರ್ಘ ಉಸಿರಾಟದೊಡನೆ ಮಾಡುವ ಆಸನಗಳಿಂದ ಚಿತ್ತಕ್ಕೆ ಶಾಂತಿ ಮತ್ತು ಸಂಯಮ ದೊರಕಿ ನಮ್ಮ ದಿನನಿತ್ಯದ ಕೆಲಸ ಕಾರ್ಯಗಳನ್ನು ಉತ್ಸಾಹದಿಂದ ಮಾಡಬಹುದಾಗಿದೆ. … Read more

ಸರ್…. ಡ್ರಾಪ್ ಪ್ಲೀಸ್!!: ಸಂತೋಷ್ ಕುಮಾರ್ ಎಲ್. ಎಮ್.

ಒಂದು  ಸುಮಾರು 15 ವರ್ಷಗಳ ಹಿಂದೆ ಮೈಸೂರಿನಲ್ಲಿ PUC ಓದುತ್ತಿದ್ದ ಸಂದರ್ಭ. ಅಪ್ಪ ನನಗೆ ಕೊಡಿಸಿದ ಸೆಕೆಂಡ್ ಹ್ಯಾಂಡ್ ಬೈಸಿಕಲ್ಲು ಮುರಿದು ಮೂಲೆ ಸೇರಿತ್ತು. ಅದರ ರಿಪೇರಿಗೂ ನೂರು ರೂಪಾಯಿ ಇಲ್ಲದ ಪರಿಸ್ಥಿತಿ. ಕಾಲೇಜು ಶುರುವಾಗುತ್ತಿದ್ದುದೇ ಒಂಭತ್ತು ಗಂಟೆಗೆ. ಮೊದಲ ಪಿರಿಯಡ್ ಮುಂಗೋಪಿ ಮತ್ತು ಮಹಾಸಿಡುಕ ಪ್ರೊಫೆಸರ್ ಸಾಂಬಶಿವಯ್ಯನವರದ್ದು. ಆದ್ದರಿಂದ ಅವರು ಕ್ಲಾಸಿಗೆ ಪ್ರವೇಶವಾಗುವ ಮೊದಲೇ ಎಲ್ಲರೂ ಒಳಗಿರಬೇಕಿತ್ತು. ಲೇಟಾಗಿ ಬಂದವರಿಗೆ ಮರದ ಸ್ಕೇಲಿನ ಬಿಸಿಯೇಟು. ಬರದೆ ಹೋದವರ ಮನೆಗೆ absence report. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ … Read more

ಭೀಷ್ಮ ಪ್ರತಿಜ್ಞೆ: ಡಾ . ಸಿ.ಎಂ.ಗೋವಿಂದರೆಡ್ಡಿ

ಶ್ರೀ ವ್ಯಾಸಮಹರ್ಷಿಗಳು ತಮ್ಮ ಶಿಷ್ಯರಿಗೆ ಹೇಳಿದ ಮಹಾಭಾರತ ಕಥೆಯನ್ನು, ಅರ್ಜುನತನಯನಾದ ಅಭಿಮನ್ಯುವಿನ ಪುತ್ರ ಪರೀಕ್ಷಿತನ ಮಗನಾದ ಜನಮೇಜಯನು ಸರ್ಪಯಾಗ ಮಾಡುವ ಕಾಲದಲ್ಲಿ ವೈಶಂಪಾಯನನಿಂದ ಕೇಳಿ ತಿಳಿದನು : ಮಹರ್ಷಿ ವಿಶ್ವಾಮಿತ್ರ ಮೇನಕೆಯರ ಮಗಳೂ ಕಣ್ವಮಹರ್ಷಿಗಳ ಸಾಕುಮಗಳೂ ಆದ ಶಕುಂತಲೆಯನ್ನು ವರಿಸಿದವನು ಚಂದ್ರವಂಶದ ರಾಜನಾದ ದುಷ್ಯಂತ. ಈ ದುಷ್ಯಂತ ಶಕುಂತಲೆಯರ ಮಗನೇ ಭರತ. ಭರತನಿಂದಲೇ ಭಾರತವಂಶವಾಯಿತು. ಭರತನ ಮಗ ಸುಹೋತ್ರ ; ಸುಹೋತ್ರನ ಮಗ ಹಸ್ತಿ. ಇವನಿಂದಲೇ ರಾಜಧಾನಿಗೆ ಹಸ್ತಿನಾಪುರವೆಂಬ ಹೆಸರು ಬಂದದ್ದು. ಹಸ್ತಿಯ ಮಗ ಸಂವರಣ ; … Read more

ಚೈಲ್ಡ್ ಲೇಬರ್: ಕ್ರಾಕ್ ಬಾಯ್

        ನವೆಂಬರ್ ತಿಂಗಳ ಚುಮು ಚುಮಿ ಚಳಿಯಲ್ಲಿ ಮಲೆನಾಡಿನಿಂದ ತಂದ ಕೊಟ್ಟೆ ಕಂಬಳಿಯ ಒಳಗೆ ಬೆಚ್ಚಗೆ ಮಲಗಿ ಸುಖ ನಿದ್ರೆಯಲ್ಲಿ ತೇಲುತ್ತಿದ್ದೆ, ಮಲಗಿದ್ದವನನ್ನು ಬಡಿದೆಬ್ಬಿಸುವಂತೆ ಒಂದೇ ಸಮನೆ ನನ್ನ ಮೊಬೈಲ್ ಕೂಗಿಕೊಳ್ಳತೊಡಗಿತು, ಈ ಹಾಳ್ ಮೊಬೈಲು ನನ್ ನಿದ್ದೆ ಹಾಳ್ ಮಾಡಕ್ಕೇ ಇರದೇನೋ ಅನ್ನೋವಷ್ಟು ಸಿಟ್ಟು ಬಂದಿತ್ತು ಆ ಮೊಬೈಲ್ ಮೇಲೆ, ಕೋಪದಿಂದ ಅದರ ಕಡೆಗೆ ತೀಕ್ಷ್ಣ ದೃಷ್ಠಿಯನ್ನು ಬೀರಿ ಅದನ್ನು ಕೈಗೆತ್ತಿಕೊಂಡು, ಬಡ್ಕೋತಿದ್ದ ಅಲಾರಾಂ ಅನ್ನು ಆಫ್ ಮಾಡಿಟ್ಟೆ,  ಟೈಂ ಆಗ್ಲೇ … Read more

ನಾಡ ಹಬ್ಬ ಉಡುಪಿ ಪರ್ಯಾಯ: ವೆಂಕಟೇಶ್ ಪ್ರಸಾದ್

ದೇವಾಲಯಗಳ ನಾಡು , ಅನ್ನಬ್ರಹ್ಮನ ಬೀಡು ಉಡುಪಿಯಲ್ಲಿ ದೀಪಾವಳಿ ತಿ೦ಗಳ ನ೦ತರ ಶ್ರೀ ಕೃಷ್ಣನಿಗೆ ನಿತ್ಯ ಉತ್ಸವಗಳ ಸ೦ಭ್ರಮ.  ಶ್ರೀ ಕೃಷ್ಣ ಮುಖ್ಯಪ್ರಾಣರ ಉತ್ಸವ ಮೂರ್ತಿಗಳು ಅಲ೦ಕೃತ ತೇರುಗಳಲ್ಲಿ ವಿರಾಜಮಾನರಾದರೆ ಭಜಕರು ರಥಬೀದಿಯ ಸುತ್ತ ತೇರನ್ನೆಳೆದು ಕೃತಾರ್ಥರಾಗುತ್ತಾರೆ. ಈ ಉತ್ಸವಗಳಲ್ಲಿ ಮುಖ್ಯವಾದುದು ಜನವರಿ ತಿ೦ಗಳಲ್ಲಿ ಬರುವ ಮಕರಸ೦ಕ್ರಾ೦ತಿ ಉತ್ಸವ ಅ೦ದು ಏಕ ಕಾಲಕ್ಕೆ ಮೂರು ತೇರುಗಳನ್ನೆಳೆದು ಉಡುಪಿಗೆ ಉಡುಪಿಯೇ ಸ೦ಭ್ರಮಿಸುತ್ತದೆ. ಮರುದಿನ ಹಗಲು ಹೊತ್ತಿನಲ್ಲಿ ನಡೆಯುವ ಚೂರ್ಣೋತ್ಸವ ಅಥವಾ ಸುವರ್ಣೊತ್ಸವಕ್ಕೂ ಅಷ್ಟೇ ಸ೦ಖ್ಯೆ ಯಲ್ಲಿ ಜನ ಸೇರುತ್ತಾರೆ. … Read more

ಅಜ್ಞಾತ ಶಿಲ್ಪಿಗಳಿಗೆ ಕೃತಜ್ಞತೆ: ಎಸ್.ಪಿ. ಜಯಣ್ಣಾಚಾರ್ ಶಿಲ್ಪಿ

          ಕನ್ನಡ ನುಡಿನಾಡಿಗಾಗಿ ನೀರುನೆಲಗಳೆಲ್ಲಕಾಗಿ ದುಡಿದು ಮಡಿದ ಎನಿತೊಜನರ ಸರತಿ ನಿಂತ ಸಾಲಿನಲ್ಲಿ ಕಾಡಿನ ಕಗ್ಗಲ್ಲಿನಲ್ಲಿ ಶಿಲ್ಪಕಲೆಯ ಸೌಧಕಟ್ಟಿ ಆಳಿದ ಅರಸು ಕುಲದ ಹೆಸರ ಅನುಗಾಲವು ಸ್ಮರಿಸುವಂತೆ ಗುಡಿಗೋಪುರಗಳ ಎಮಗೆ ಇತ್ತು ತೆರೆಯ ಮರೆಗೆ ಸರಿದು ಹೋದ ಮಹಾಮಹಿಮ ಶಿಲ್ಪಿ ಜನರ ಕೊಡುಗೆ ಏನು ಅಲ್ಪವೇ? ಕವಿ ಸೌರ್ವಭೌಮರಿಗೂ ಎದಿರು ಸ್ಪರ್ಧೆ ನೀಡುವಂತ ಶಿಲ್ಪಕಲಾ ಪ್ರತಿಭೆ ಇದ್ದೂ ಇತಿಹಾಸದಿ ಮೆರೆಯಲಿಲ್ಲ ವೀಣೆವಾದ್ಯದೆದುರು ವೇಣು ಮಿಗಿಲಿದ್ದರೂ ಮಿಂಚದಲ್ಲ ಇಂದಿನ ಶೋದನೆಯೊಳಲ್ಲು ಜಕಣ ಡಕಣರಾರು … Read more

ವಿಸ್ಮಯಭರಿತ ವಿರಾಟ ವಿಶ್ವ (ಕೊನೆಯ ಭಾಗ): ನಾರಾಯಣ ಎಂ.ಎಸ್.

ಇಲ್ಲಿಯವರೆಗೆ ಸಿನಿಮಾ ಎಂದಾಗ ನೆನಪಾಯ್ತು. ನೀವು ‘ಅನಿಮಲ್ಸ್ ಆರ್ ಬ್ಯೂಟಿಫ಼ುಲ್ ಪೀಪಲ್’ ಅನ್ನೋ ಚಿತ್ರ ನೋಡಿದ್ದೀರಾ? ನೋಡಿಲ್ಲದಿದ್ದರೆ ಖಂಡಿತಾ ನೋಡಿ. ಎಲ್ಲರೂ ನೋಡಲೇಬೇಕಾದ ಚಿತ್ರವದು. ಆ ಚಿತ್ರದಲ್ಲಿ, ಆಫ್ರಿಕಾದ ಕಾಡುಗಳಲ್ಲಿ ವಾಸಿಸುವ ಹನಿ ಗೈಡ್ ಹಕ್ಕಿ ಮತ್ತು ಹನಿ ಬ್ಯಾಡ್ಜರ್ ಅಥವಾ ರಾಟೆಲ್ ಎನ್ನುವ ಪ್ರಾಣಿಯ ಜೊತೆಗಿನ ಸಿಂಬಯೋಸಿಸ್ಸಿನ ಸಂಬಂಧವನ್ನು ಅತ್ಯಂತ ಪರಿಣಾಮಕಾರಿಯಾಗಿ ತೋರಿಸಲಾಗಿದೆ. ಈ ಹನಿ ಗೈಡ್ ಹಕ್ಕಿಗೆ ಜೇನುತುಪ್ಪ ಮತ್ತು ರಸವತ್ತಾದ ಜೇನುಮೇಣವೆಂದರೆ ಎಲ್ಲಿಲ್ಲದ ಆಸೆ. ಜೇನು ಹುಳುಗಳು ರಹಸ್ಯವಾಗಿ ಸಂದಿಗೊಂದಿಗಳಲ್ಲಿ ಕಟ್ಟಿರುವ ಜೇನುಗೂಡುಗಳನ್ನು … Read more

ವಿಸ್ಮಯಭರಿತ ವಿರಾಟ ವಿಶ್ವ (ಭಾಗ 1): ನಾರಾಯಣ ಎಂ.ಎಸ್.

ನಿಮಗೆ ನೆನಪಿರಬಹುದೇನೋ? ಇಲ್ಲ, ಖಂಡಿತವಾಗಿಯೂ ನೆನಪಿದ್ದೇ ಇರುತ್ತದೆ. ಏಕೆಂದರೆ, ಬಾಲ್ಯದ ಉತ್ಕಟ ಅನುಭವಗಳ ನೆನಪು ಎಲ್ಲಕ್ಕಿಂತ ಸ್ಪಷ್ಟ ಮತ್ತು ನಿಚ್ಚಳವಾಗಿರುತ್ತದಂತೆ. ನಮ್ಮ ಕೈ ಸೋಕಿದೊಡನೆ ನಾಚಿ ಮುದುಡುವ ಆ ಮುಟ್ಟಿದರೆ ಮುನಿ ಗಿಡ, ಕತ್ತಲಲ್ಲಿ ಮಿಂಚುವ ಆ ಮಿಣಿಕೆ ಹುಳ, ಆ ಬಣ್ಣದ ಚಿತ್ತಾರದ ಪಾತರಗಿತ್ತಿ, ಪರಿಸರಕ್ಕೆ ತಕ್ಕಂತೆ ಬಣ್ಣ ಬದಲಿಸುವ ಆ ಊಸರವಳ್ಳಿ, ಕಾರ್ಮುಗಿಲಿನಲ್ಲಿ ಕಂಡ ಆ ಬೆಳ್ಳಿ ಮಿಂಚು ಮತ್ತು ಆಗಸದಲ್ಲಿನ ರಂಗು ರಂಗಾದ ಮಳೆಬಿಲ್ಲು ಇತ್ಯಾದಿಗಳನ್ನು ನಾವು ನಮ್ಮ ಬೆರಗು ಕಣ್ಗಳಿಂದ ಮನದಣಿಯೆ … Read more

ಬಾಲ ಕಾರ್ಮಿಕ: ಫ್ಲಾಪೀಬಾಯ್

ಅಣ್ಣಾ, ಅಣ್ಣಾ ಏನಾದ್ರೂ ಕೊಡಣ್ಣಾ.. ಅಂತ ದೈನ್ಯತೆಯ ದ್ವನಿಯೊಂದು ಅವನ ಹಿಂದಿನಿಂದ ಕೇಳಿ ಬಂತು. ಹಿಂತಿರುಗಿ ನೋಡಿದಾಗ ಕಾಣಿಸಿದ್ದು, ಎಣ್ಣೆಯೇ ಕಾಣದಿದ್ದ ಕೆದರಿದ ಕೂದಲು, ಕಳೆಗುಂದಿದ್ದ ಬೆಂಗಳೂರಿನ ಡಾಂಬರು ರಸ್ತೆಯಂತಾಗಿದ್ದ ಕಣ್ಣು, ಹೊರಗೆ ಮಾಸಿದ ಹರಕಲು ಬಟೆ, ಬಟ್ಟೆಯೊಳಗೆ ಹೊರಗಿಂದಲೇ ಗೋಚರಿಸುವ ಹಸಿದ ಹೊಟ್ಟೆ. ಆ ಹೊಟ್ಟೆಯ ಒಡೆಯ ಸುಮಾರು ೧೦-೧೧ ಪ್ರಾಯದ ಒಬ್ಬ ಹುಡುಗ. ಅವನನ್ನು ನೋಡುತ್ತಲೇ ಈತ ತನ್ನ ಫ್ಲಾಶ್‌ಬ್ಯಾಕ್‌ಗೆ ಜಾರಿದ..! ಬಹಳ ವರ್ಷಗಳ ಹಿಂದೆ ಈತ ಕೊಳ್ಳೆಗಾಲದಿಂದ ಬೆಂಗಳೂರಿಗೆ ಬಂದಾಗ ಈತನಿಗೂ ಹತ್ತು … Read more