ಲೇಡೀಸ್ ಬೋಗಿ: ಪ್ರೇಮಾ ಟಿ ಎಮ್ ಆರ್

ರೈಲು ಸಿಳ್ಳೆ ಹೊಡೆಯುತ್ತ ಹೊರಟಿದೆ. ಲೇಡೀಸ್ ಬೋಗಿ ತುಂಬಿ ತುಳುಕುತ್ತಿದೆ. ಮುಚ್ಚಿದ  ಕಿಟಕಿ ಗಾಜಿನಮೇಲೆ ಮಳೆನೀರು ಧಾರೆಯಾಗಿ ಹರಿಯುತ್ತಿದೆ. ಒಳಗೆ ಬದುಕಿನ ಕಥೆಗಳು  ಮಾತುಗಳಾಗಿ ಬಿಚ್ಚಿಕೊಳ್ಳುತ್ತಿವೆ. ಇನ್ನಷ್ಟು ಕಥೆಗಳು ಸರದಿಯಲ್ಲಿವೆ. ಅವಳು ಕಸ್ತೂರಿ.  ಕಾವೇರಿಯಂತೆ ತಂಪಿನ ಹುಡುಗಿ. ಅವಳ ನಗು ರೇಶಿಮೆಯಷ್ಟು ನವಿರು. ಜುಳುಗುಡುವ ನೀರ ಮೈಮೇಲೆ ಮೂಡುವ ಸುಳಿಯಂಥ ಕೆನ್ನೆಗುಳಿ. ಕಸ್ತೂರಿ ಏಳನೇ ತರಗತಿ ಮುಟ್ಟುವದರೊಳಗೆ ಅಮ್ಮ ಮತ್ತೆ ನಾಲ್ಕು ಹೆತ್ತಿದ್ದಳು. ನಿತ್ಯದ ಗಂಜಿಗೆ ಅಮ್ಮ ಅಪ್ಪನಿಗೆ ನೆರಳಾಗಿ ನಡೆಯಬೇಕು  ಹೊರಗಿನ ದುಡಿತಕ್ಕೆ. ತಮ್ಮ ತಂಗಿಯರು  … Read more

ಇಲ್ಲಿಯವರೆಗೆ ಪಂಜುವಿಗಾಗಿ ಬರೆದವರ ಪಟ್ಟಿ

ಸಹೃದಯಿಗಳೇ, ಮುಂದಿನ ಜನವರಿ ತಿಂಗಳು 21ನೇ ತಾರೀಖು ಬಂದರೆ ಪಂಜು ಶುರುವಾಗಿ ಐದು ವರ್ಷವಾಗುತ್ತದೆ. ಈ ಐದು ವರ್ಷಗಳಲ್ಲಿ ಪಂಜು ತನ್ನದೇ ಆದ ದೊಡ್ಡ ಓದುಗ ಬಳಗವನ್ನೇ ಹೊಂದಿದೆ. ಹಾಗೆಯೇ ಇಲ್ಲಿಯವರೆಗೂ 680 ಲೇಖಕರು ವಿವಿಧ ಲೇಖನಗಳನ್ನು ಪಂಜುವಿಗಾಗಿ ಬರೆದಿದ್ದಾರೆ. ಆ ಅಷ್ಟು ಲೇಖಕರ ಲಿಸ್ಟ್ ಅನ್ನು ಈ ಕೆಳಗೆ ನೀಡಲಾಗಿದೆ. ನಿಮ್ಮೆಲ್ಲರ ಪ್ರೀತಿಯಿಂದ ಪಂಜುವಿನ ಪುಟಗಳ ಹಿಟ್ಸ್ ಇಲ್ಲಿಯವರೆಗೆ 33 ಲಕ್ಷಕ್ಕೂ ಅಧಿಕವಾಗಿದೆ. ಪಂಜುವಿನ ಮೇಲಿನ ನಿಮ್ಮ ಪ್ರೀತಿ ಹೀಗೆಯೇ ಇರಲಿ.  “ಪಂಜು” ಅಂತರ್ಜಾಲ ವಾರ ಪತ್ರಿಕೆಗೆ … Read more

ಬಲ್ಲವನೇ ಬಲ್ಲ ರಂಗದ ರುಚಿ: ಮಲ್ಲಮ್ಮ ಯಾಟಗಲ್, ದೇವದುರ್ಗ

    ರಂಗಭೂಮಿ ಎಂದರೆ ಬೇರೆ  ರೀತಿಯಲ್ಲಿ ಅರ್ಥೈಸಿಕೊಂಡಿರುವ  ಪಾಲಕರಿಗೆ ಮನವರಿಕೆ ಮಾಡುವವರು ಯಾರು ? ಶಾಲಾ ಕಾಲೇಜುಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ರಂಗಭೂಮಿಯ ರುಚಿಯನ್ನು ನೀಡಬೇಕೆಂದು ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಕುವೆಂಪುರವರ ಸ್ಮಶಾನ ಕುರುಕ್ಷೇತ್ರದ ನಾಟಕ ಮಾಡಿಸಿದಾಗ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ಧಾರವಾಡದಲ್ಲಿ ನಡೆದ ವಿಭಾಗೀಯ ಮಟ್ಟಕ್ಕೆ ಅಯ್ಕೆಯಾದ ಸಂದರ್ಭದಲ್ಲಿ ನನಗೇನು ರಂಗಭೂಮಿಯ ಬಗ್ಗೆ ಅಷ್ಟೊಂದು ಆಸಕ್ತಿ ಉಳಿದಿರಲಿಲ್ಲ. ಯಾಕೆಂದರೆ ಪಾಲಕರು ತಿಳಿದುಕೊಂಡ ನಾಟಕ ನಮ್ಮದಾಗಿರಲಿಲ್ಲ. ಅಂದು ಸಂಜೆ ಧಾರವಾಡದಲ್ಲಿ ಶೋ ಇತ್ತು. … Read more

ಮುಟ್ಟು ಮುಟ್ಟಬೇಡಿ: ಪ್ರೇಮಾ ಟಿ ಎಮ್ ಆರ್

ಚಿನಕುರುಳಿಯಂತೆ ಕಚಗುಳಿಯಿಡುವ ಮುಗ್ಧ ಸ್ನೇಹದ  ಹುಡುಗಿ ಅಕ್ಷತಾ ಕೃಷ್ಣಮೂರ್ತಿ ಕಳಿಸಿದ ಹೊಸ ಕವನ ಸಂಕಲನ 'ಕೋಳ್ಗಂಬ' ಕೈಯಲ್ಲಿ ಹಿಡಿದು ಕಿಟಕಿಯಲ್ಲಿ ತೂರಿಬರುವ ಮಳೆಹನಿಗಳಿಗೆ ಮುಖವೊಡ್ಡಿ ಕೂತಿದ್ದೆ. ಬಾಲ್ಯದ ಗೆಳತಿ ಸುಮಾ ಕರೆಮಾಡಿದಳು. ಕುಶಲೋಪರಿಯ ಸಾಂಪ್ರದಾಯಿಕತೆಯನ್ನೂ ಮರೆತು ನೇರವಾಗಿ ವಿಷಯಕ್ಕೆ ಬಂದಳು. ಮೀಡಿಯಾಗಳಲ್ಲೆಲ್ಲ ಮುಟ್ಟಿಗುಡುವ ಸೆನಿಟರಿ ಪ್ಯಾಡ್ ಗಳ ಮೇಲೆ ಹೇರಿದ ಜಿ ಎಸ್ ಟಿ ಯ ಕುರಿತು ಪರ ವೈರುಧ್ಯ ಅಭಿಪ್ರಾಯಗಳು ವ್ಯಕ್ತವಾಗ್ತಾ ಇದ್ಯಲ್ಲೇ ಅಂದ್ಲು. ಹೂಂ ಅಂದೆ. ಅವಳು ಮುಂದೇನೂ ಮಾತನಾಡದೇ ಮೌನ ಸಾಧಿಸಿದಳು. ಏನಿದೆ … Read more

ಕನಕದಾಸರ ಕೀರ್ತನೆಗಳಲ್ಲಿ ಭಕ್ತಿ ವೈವಿಧ್ಯತೆ: ವೈ.ಬಿ.ಕಡಕೋಳ

ಶ್ರೀ ಕನಕದಾಸರು (1509-1609) ಕರ್ನಾಟಕದಲ್ಲಿ ಜನಪ್ರೀಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ದಾಂತಗಳಿಗೆ ಕಾಣಿಕೆಯಿತ್ತವರು, ಕನಕದಾಸರು ಮತ್ತು  ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಎಂಬ ಗ್ರಾಮದಲ್ಲಿ 1509 ರಲ್ಲಿ  ಬೀರಪ್ಪ ಮತ್ತು ಬಚ್ಚಮ್ಮ ಎಂಬ ಕುರುಬ ಜಾತಿಗೆ ಸೇರಿದ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರ ಮೂಲ ಹೆಸು ತಿಮ್ಮಪ್ಪ. ತಣದೆ-ತಾಯಿ ತಿರುಪತಿ ತಿಮ್ಮಪ್ಪನಿಗೆ … Read more

ಬದುಕುವ ಹಕ್ಕಿದೆ ಎಂದು ಮತ್ತೊಬ್ಬರ ಬದುಕು ಕಿತ್ತೊಕೊಳ್ಳುವುದು ಎಷ್ಟು ಸಮಂಜಸ?: ನರಸಿಂಹಮೂರ್ತಿ ಎಂ.ಎಲ್

ಇಂದಿನ ಮಾನವನ ಪ್ರಕೃತಿಯ ಮೇಲಿನ ದಾಳಿಯನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದು ಒಂದು ರೀತಿಯ ಆಘಾತದ ಸಂಗತಿ. ಹಲವು ಬಗೆಯ ವರದಿಗಳು ಹಲವು ಸಲ ನಾವು ವಾಸಿಸುತ್ತಿರುವ ಪರಿಸರದಲ್ಲಿ ಮಾಲಿನ್ಯತೆಯ ಪ್ರಮಾಣದ ಬಗ್ಗೆ ಎಚ್ಚರಿಸುತ್ತಲೇ ಇವೆ.  ಇತ್ತೀಚೆಗೆ ವಾಯು ಮಾಲಿನ್ಯತೆಯ ಪ್ರಭಾವದಿಂದಾಗಿ ದೇಶ ರಾಜಧಾನಿ ದೆಹಲಿಯಲ್ಲಿ ಕೆಲ ದಿನಗಳು ಶಾಲೆಗಳಿಗೆ ರಜೆಗಳನ್ನು ಘೋಷಿಸಲಾಗಿತ್ತು. ಇನ್ನು ನಮ್ಮ ಬೆಂಗಳೂರು ಇದಕ್ಕೆ ಹೊರತಾಗಿಲ್ಲ, ಅಷ್ಟು ಪ್ರಮಾಣ ಇಲ್ಲದಿದ್ದರೂ ಅದರ ಸಮೀಪದಲ್ಲಿದೆ. ಇದಕ್ಕೆಲ್ಲ ಕಾರಣಗಳು ನಮಗೆ ತಿಳಿದಿವೆ. ಹೆಚ್ಚಾದ ವಾಹನಗಳ ಸಂಖ್ಯೆ, ನಿಯಂತ್ರಣದಲ್ಲಿಲ್ಲದ ಕಾರ್ಖಾನೆಗಳ … Read more

ಅಪ್ಪ: ರಾಜುಗೌಡ ನಾಗಮಂಗಲ

ಅಪ್ಪಂದಿರ ದಿನ ಮುಗಿದೇ ಹೋಯ್ತು. ಇನ್ನೂ ಮುಂದಿನ ವರ್ಷವೇ ಅಪ್ಪನನ್ನ ಹಗಲಿಂದ ಇರುಳಿಬ್ಬಾಗವಾಗುವವರೆಗೂ ತಮ್ತಮ್ಮ ಹೆಗಲಿಗೆ ಕಟ್ಟಿಕೊಂಡು ಹೊಗಳುವುದು, ಹಾಡುವುದು ಕವಿತೆ ಬರೆಯುವುದು ಅಲ್ಲೋ ಇಲ್ಲೋ ಓದಿದ ಆದರ್ಶ ಅಪ್ಪಂದಿರ ಬಗ್ಗೆ ಬರೆಯುವುದು ಎಲ್ಲವೂ ಒಂದಷ್ಟು ಈ ವರ್ಷ ಮುಗಿಯಿತು. ಬರೆಯುವುದೇನು ತಪ್ಪಿಲ್ಲ ಓದಿದವ ತನ್ನ ನೆನಪುಗಳನ್ನು ಮೆಲುಕು ಹಾಕುತ್ತಾನೆ, ಅಷ್ಟಕ್ಕೂ ಅಪ್ಪನೆಂದರೆ ದ್ವೇಷವೇನು ಇಲ್ಲಾ. ಜಗತ್ತಿಗೆ ನನ್ನಪ್ಪನನ್ನ ತೋರಿಸುವ ಉಮೇದುವಾರಿಕೇನು ಇಲ್ಲಾ, ನನಗಂತೂ ಅಪ್ಪನೆಂದರೆ ಚಿಪ್ಪೊಡೆಯದ ಮುತ್ತು, ನಾನಾಗ ಚಿಗುರುಗಣ್ಣಿನ ಹುಡುಗ. ಎಸ್. ಎಸ್. ಎಲ್ಸಿ … Read more

ಅನುವಾದಕ್ಕೊಂದು ತಂತ್ರಜ್ಞಾನ:  ಉದಯ ಶಂಕರ ಪುರಾಣಿಕ

ಬೇರೆ ರಾಜ್ಯ ಅಥವಾ ಬೇರೆ ದೇಶಗಳಲ್ಲಿ ಪ್ರವಾಸ ಮಾಡುವಾಗ, ಸಾಮಾನ್ಯವಾಗಿ ಭಾಷೆಯ ಸಮಸ್ಯೆಯನ್ನು ಎದುರಿಸುತ್ತೇವೆ. ನಮಗೆ ಗೊತ್ತಿರುವ ಭಾಷೆಯಲ್ಲಿ ಮತ್ತೊಬ್ಬರ ಜೊತೆ ಸಂಭಾಷಣೆ ನೆಡೆಸುವುದು ವಿಫಲವಾದಾಗ, ಕೈ, ಬಾಯಿ ಸನ್ನೆಗಳು ಮತ್ತು ನಮ್ಮ ಹಾವ ಭಾವಗಳ ಮೂಲಕ ಸಂಭಾಷಣೆ ನೆಡೆಸುವ ಪ್ರಯತ್ನ ಮಾಡುತ್ತೇವೆ. ಕೆಲವೊಮ್ಮೆ ಇದೂ ವಿಫಲವಾಗುವುದುಂಟು. ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದೆ, ಆದರೆ ಭಾಷೆಯ ಸಮಸ್ಯೆಗೆ ಪರಿಹಾರ ನೀಡಲು ಸಾಧ್ಯವಿಲ್ಲವೇಕೆ ಎನ್ನುವ ಪ್ರಶ್ನೆ ಆಗ ನಮಗೆ ಎದುರಾಗುವುದುಂಟು. ಜಪಾನಿನ ಲಾಗ್‍ಬಾರ್ ಹೆಸರಿನ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಈ … Read more

ಅಮ್ಮ ಅಂದ್ರೆ ಚಿಕ್ಕ ಚಿಕ್ಕ ಖುಷಿ : ಕೃಷ್ಣ ದೇವಾಂಗಮಠ

ಅಮ್ಮ ಎನ್ನುವವಳು ಜಗತ್ತಿನ ಅದಮ್ಯ ಜ್ಯೋತಿ ಚೇತನ. ಈ ಎರಡಕ್ಷರಗಳಲ್ಲಿ ಸೃಷ್ಟಿಯನ್ನೇ ಮೋಡಿಮಾಡಬಲ್ಲ ಅದೆಂಥದೋ ಶಕ್ತಿ ಇದೆ. ಆ ಶಕ್ತಿ ಅದರ ಉಚ್ಚಾರಣೆಯಿಂದ ಬಂದದ್ದೋ ಅಥವಾ ಆ ಪದದ ಹುಟ್ಟಿನಿಂದ ಬಂದದ್ದೊ ತಿಳಿಯದು ಆದರೆ ಆ ಪದಕ್ಕೆ ಶೋಭೆಯಂತಿರುವ ಆ  ಹೆಣ್ಣು ಮಾತ್ರ ಮಮತೆ, ಪ್ರೀತಿ, ಸಹನೆ, ಕರುಣೆ ಇಂಥ ಹೇಳಲು ಅಸಾಧ್ಯವಾದ ಗುಣ ಭೂಷಿತೆ. ಜಗತ್ತಿನ ಎಲ್ಲರೂ ಇದನ್ನು ಕಂಡುಂಡವರೇ ! ಇವುಗಳೇ ನಮಗೆ ಅವಳನ್ನು ದೈವ ಸ್ವರೂಪಿ ಎನ್ನಲು ಪ್ರೇರಕ ಮತ್ತು ಅಮ್ಮ ಎನ್ನುವ … Read more

ಕವಿತಾ ಲಹರಿ: ರಾಘವೇಂದ್ರ ತೆಕ್ಕಾರ್

ಬುದ್ದಿ ಭಾವಗಳ ರೂಪಿತ ವಿಸ್ಮಯವನ್ನು ಕವಿತೆ ಎನ್ನುವದೊ? ಪದಗಳ ಜೋಡಣೆಯನ್ನು ಕವಿತೆ ಎನ್ನುವದೊ?ಪರಿಶ್ರಮ, ಕಲಾ ಕೌಶಲ್ಯ, ಪ್ರತಿಭೆಯ ಅನಾವರಣದ ರೂಪಕವನ್ನು ಕವಿತೆಯೆನ್ನುವದೊ?ಕಾಣದರ ಜೊತೆಗೆ ಕಂಡಂತೆ ಮಾತಿಗೆ ನಿಲ್ಲುವ ಕ್ರಿಯೆ ಕವಿತೆಯೊ? ನಮ್ಮೊಳಗಿನ ಭಾವಗಳ ಜೊತೆಗಿನ ಸಂವಾದವೊ? ಕವಿತೆ ಎಂದರೆ ನನ್ನೊಳಗೊ??? ಹೀಗೆ ಹಲವಾರು ಪ್ರಶ್ನೆಗಳ ಸರಮಾಲೆಗೆ ಎಡತಾಕುವದೆ ಕವಿತೆಯೊ?ನನಗಂತು ಕವಿತೆ ಎಂದರೆ ಏನು ಎಂಭ ಪ್ರಶ್ನೆಗೆ ಉತ್ತರ ದೊರಕುತ್ತಿಲ್ಲ. ಬಹುಶಃ ಪ್ರತಿ ಪ್ರಶ್ನೆಗಳು ಕವಿತೆ ಎಂಬುದಕ್ಕೆ ಅರ್ಥ ಕೊಡುತ್ತಿದೆ.ಎಲ್ಲವೂ ಹೌದಾಗಿದ್ದು ಇಲ್ಲದರ ಭಾವಗಳ ಕೂಡುವಿಕೆಯ ಜೊತೆಗಿನ ಸಂವಾದದಲ್ಲಿ … Read more

ತಾಯಿಯ ಆಶ್ರು ಒರೆಸಿದ ಪದ್ಮಶ್ರೀ ಪುರಸ್ಕೃತ ಮಲ್ಲೇಶಂ: ಉದಯ ಪುರಾಣಿಕ

ಭಾರತ ಜ್ಯೋತಿ ಲೇಖನ ಸರಣಿ : ತೆಲಂಗಾನಾದ ಚಿಂತಕಿಂಡಿ ಮಲ್ಲೇಶಂ, ಹುಟ್ಟಿದ್ದು ತೆಲಂಗಾನಾ ರಾಜ್ಯದಲ್ಲಿರುವ ಪುಟ್ಟ ಹಳ್ಳಿ ಶಾರ್ಜಿಪೇಟೆಯ ಬಡ ನೇಕಾರ ಕುಟುಂಬವೊಂದರಲ್ಲಿ. ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ, ಶಾಲೆಯಲ್ಲಿ 6ನೆ ತರಗತಿ ಓದುವಾಗಲೇ ತನ್ನ ವಿದ್ಯಾಭ್ಯಾಸ ನಿಲ್ಲಿಸಿದ್ದರು. ಆದರೆ ಅವರು ಮಾಡಿರುವ ಸಾಧನೆಗಾಗಿ ದೊರೆತಿರುವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗೌರವಗಳನ್ನು ಒಮ್ಮೆ ನೋಡಿ. ಇವರು, ವರ್ಷ 2009ರಲ್ಲಿ ಭಾರತದ ರಾಷ್ಟ್ರಪತಿಗಳಿಂದ ಗೌರವ ಪುರಸ್ಕಾರ, ವರ್ಷ 2016ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಅಮೇಜಿಂಗ್ ಇಂಡಿಯನ್ ಗೌರವ ಪ್ರಶಸ್ತಿ, … Read more

ಯಶೋಧರ ಚರಿತದ ಸಂಕಲ್ಪಹಿಂಸೆಯ ಬಹುರೂಪಗಳು : ದೊರೇಶ ಬಿಳಿಕೆರೆ

      ಜನ್ನನ ಯಶೋಧರ ಚರಿತೆ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಿಭಿನ್ನವಾದ ಕೃತಿ. ಕಾವ್ಯದ ವಸ್ತು ಮತ್ತು ರೂಪದಲ್ಲೂ, ಅಭಿವ್ಯಕ್ತಿಯ ಸ್ವರೂಪದಲ್ಲೂ, ಕಾವ್ಯೋದ್ಧೇಶದಲ್ಲೂ ಇದೊಂದು ಭಿನ್ನ ದಾರಿಯನ್ನೇ ತುಳಿದದೆ. ಸಾಂಪ್ರದಾgಯಿಕ ಜೈನಕಾವ್ಯಗಳಿಗಿಂತಲೂ ಮಿಗಿಲಾಗಿ ಜೀವದಯೆ ಜೈನಧರ್ಮಂ ಅನ್ನುವ ಆಶಯದೊಂದಿಗೆ ಇಡೀ ಕಾವ್ಯ ಕಂದಪದ್ಯಗಳಲ್ಲಿಯೇ ರಚಿತವಾಗಿದೆ. ಬೆರಳೆಣಿಕೆಯಷ್ಟು ವೃತ್ತಗಳಿವೆ. ಸಮಕಾಲೀನ ಸಂದರ್ಭದಲ್ಲಿ ಜರುಗುತ್ತಿದ್ದ ಧಾರ್ಮಿಕ ಮತ್ತು ರಾಜಕೀಯ ಪಲ್ಲಟಗಳಿಂದಾಗಿ ಜನ್ನ ಅನುಸರಿಸಿದ ಮತ ಪ್ರತಿಪಾದನೆಯ ಮಾರ್ಗ ಆ ಕಾಲದ ಸರಿದಾರಿ ಎನಿಸಿತು. ಈ ಕೃತಿಯ ಮತಪ್ರತಿಪಾದನೆಯ ತತ್ವವನ್ನು … Read more

ಕದ್ದು ತಿನ್ನುವ ರುಚಿ: ಸುನೀತಾ ಕುಶಾಲನಗರ

ನಾನು ಕುಳಿತಿದ್ದ ರೈಲು ಹೊರಡಲು ಇನ್ನೂ ಸಮಯವಿತ್ತು. ಜನರು ಹತ್ತುವ ಇಳಿಯುವ ಗಜಿಬಿಜಿಯ ಗಲಾಟೆ ಕಡೆ ಕಣ್ಣಾಯಿಸಿದೆ. ಕೆಲವರು ಬೋಗಿಯೊಳಗೆ ತಮ್ಮ ಆಸನ ಹುಡುಕುತ್ತಿದ್ದಾರೆ. ಮತ್ತೆ ಕೆಲವರು ತಮ್ಮ ಲಗೇಜು ಇಡುವ ಭರದಲ್ಲಿದ್ದಾರೆ. ಕೆಲವರ ಬ್ಯಾಗುಗಳನ್ನು ಅಪ್ಪರ್ ಬರ್ತ್‍ನಲ್ಲಿಡುತ್ತಿದ್ದಾರೆ. ಇನ್ನೂ ಕೆಲವರು ಇಡೀ ಮನೆ ಖಾಲಿ ಮಾಡಿ ಬಂದಷ್ಟು ಲಗೇಜ್ ತಂದು ಇಡಲು ಸ್ಥಳವಿಲ್ಲದೆ ಪೇಚಾಡುತ್ತಿದ್ದಾರೆ. ಈ ಎಲ್ಲಾ ಗಲಾಟೆಯ ಮಧ್ಯೆಯೂ ಸೀಬೆಬುಟ್ಟಿ ಹಿಡಿದ ಹುಡುಗಿಯೊಬ್ಬಳು ತೂರಿ ಬಂದಳು. ಅವಳು ಮಾರಲು ತಂದ ಬುಟ್ಟಿಯೊಳಗೆ ಬಿಸಿಲಿಗೆ ಬಾಡಿ … Read more

  ‘ಬಿ, ಎಡ್ನಲ್ಲಿ ಒಂದು ದಿನ’: ಯಲ್ಲಪ್ಪ ಹಂದ್ರಾಳ

ನಾಳೆ "ಕುಮಾರಗಂಧರ್ವ ಹಾಲ್ ನಲ್ಲಿ (ಬೆಳಗಾವಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಶಕ್ತರು ಭಾಗವಹಿಸಬೇಕು ಮತ್ತು ಆಸಕ್ತರು ಕಾರ್ಯಕ್ರಮವನ್ನು ವೀಕ್ಷಿಸಬೇಕು. ಒಟ್ಟಿನಲ್ಲಿ ಎಲ್ಲರೂ ಅಲ್ಲಿರಬೇಕು'' ಎಂದು ಪ್ರಿನ್ಸಿಪಾಲರಾದ ಶ್ರೀ ಬಿ. ಮಲ್ಲಿಕಾರ್ಜುನ ಸರ್ ಅವರು ಗಂಭೀರವಾಗಿ ಹೇಳಿದಾಗ ರೋಮಾಂಚನವಾಯಿತು. ಏಕೆಂದರೆ ಬಿ. ಎಡ್ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಅಂದ್ರೆ ಮರುಭೂಮಿಯಲ್ಲಿ ಸಿಗುವ ಓಯಾಸಿಸ್ ಇದ್ದಹಾಗೆ. ಅದೂ ಕೆ. ಡಿ ದೇಶಪಾಂಡೆ ಮತ್ತು ಆನಂದ ಅಪ್ಪುಗೋಳ್(ಧರ್ಮದೇವತೆ, ನಂತರ ಸಂಗೊಳ್ಳಿರಾಯಣ್ಣ ಸಿನೆಮಾ ಖ್ಯಾತಿಯ)ಅವರುಗಳು ನಡೆಸುವ ಕಾರ್ಯಕ್ರಮ. ಸರಿ, … Read more

unsung hero: ವಿಶ್ವಾಸ್ ವಾಜಪೇಯಿ

ಅಪ್ಪ, ತಂದೆ, ಬಾಬಾ.. ಈ ಎರಡಕ್ಷರದ ಮಹತ್ವ. ಈ ಸಂಬಂಧದ ಅರ್ಥ ತಿಳಿದುಕೊಳ್ಳೋದು ಎಷ್ಟೋ ಜನರಿಂದ ಬಹುಷಃ ಆಗಂಗೇ ಇಲ್ಲಾ.. ಅಂಥವರಾಗ ನಾನೂ ಒಬ್ಬ ಎಷ್ಟಾದ್ರೂ ಹಿರಿ ಮಗ ನೋಡ್ರಿ, ಅವ್ವನ ಮ್ಯಾಲೇ ಪ್ರೀತಿ ಜಾಸ್ತಿ ಎಲ್ಲಾರೂ ಅಂತಾರ ತಾಯಿಯಾದಮೇಲೆ ಹೆಣ್ಣೆಗೆ ಎರಡನೇ ಜೀವ ಸಿಗ್ತದ ಅಂತ, ಮತ್ತ ಅಪ್ಪಗ? ಅವನ ಬಗ್ಗೆ ಯಾರೂ ಜಾಸ್ತೀ ಮಾತಾಡಲೇ ಇಲ್ಲ ಯಾಕಂದ್ರ ಅವರ ಜೀವನದಾಗ ಅಪ್ಪನ ‘ರೋಲ್’ ಯಾವತ್ತೂ, ಯಾರಿಗೂ ಕ್ಲಿಯರ್ ಆಗ್ಲೇ ಇಲ್ಲ ಎಲ್ಲರ ಜೀವನದ ಕಥಿಯೊಳಗೂ … Read more

ಮುಕ್ತನಾದವ: ಶ್ರೀಪತಿ ಮಂಜನಬೈಲು

 “ಪ್ರತಿ ಸುಖದ ಹಿಂದೆ ಅನಿವಾರ್ಯವಾಗಿ ದುಃಖ ಬೆಂಬತ್ತುವುದೇ ಆದಲ್ಲಿ, ಆಗ ದುಃಖದಿಂದಲ್ಲ – ಸುಖದಿಂದಲೇ ಮುಕ್ತನಾಗುವ ಸ್ಪಷ್ಟತೆ ನಿನ್ನ ಜೀವನದಲ್ಲಿ ಫಲಿತವಾಗಬೇಕು.” (ಓಶೋ)   — ನಾನಾಗ ಬೆಳಗಾವಿಯವನಾಗಿದ್ದೆ. ನಾನು ನನ್ನ ಸಂಸಾರದೊಂದಿಗೆ ವಾಸಿಸುತ್ತಿದ್ದ ಬಾಡಿಗೆ ಮನೆ ಬೆಳಗಾವಿ ದಂಡು ಪ್ರದೇಶದಲ್ಲಿತ್ತು.  1999 ರ ಡಿಸೆಂಬರ ತಿಂಗಳ ಮೊದಲ ರವಿವಾರದ ದಿನ ಮುಂಜಾನೆಯ ಸಮಯ. ಮನೆಯ ಬಾಗಿಲ ಚಿಲಕ ಕಟಕಟ ಬಡಿದ ಶಬ್ಧ. ಬಾಗಿಲು ತೆಗೆದೆ, ಅವನು ನಿಂತಿದ್ದ. ಬಾರೋ ಒಳಗೆ ಅಂದೆ. ಬಂದ, ಕೈಲಿದ್ದ ಆವತ್ತಿನ … Read more

ಭಾಷಾ ಮೋಡಿಗಾರ: ಜಯಲಕ್ಷ್ಮೀ ಪಾಟೀಲ್

ಗೋಪಾಲ್ ವಾಜಪೇಯಿ ಅನ್ನುವ ಹೆಸರು ಕೇಳಿದ ತಕ್ಷಣ ಸಿನಿಮಾದ ಹಾಡುಗಳ ಬಗ್ಗೆ ಗೊತ್ತಿರುವವರಿಗೆ ‘ಈ ಹಸಿರು ಸಿರಿಯಲಿ, ಮನಸು ನಲಿಯಲಿ ನವಿಲೇ’ ಮತ್ತು ‘ಕಂಬದಾ ಮ್ಯಾಲಿನ ಗೊಂಬೆಯೆ, ನಂಬಲೇನ ನಿನ್ನ ನಗೆಯನ್ನ’ ಹಾಡುಗಳಾದರೆ, ರಂಗಭೂಮಿಯ ಜನರಿಗೆ ‘ಅದ ಗ್ವಾಡಿ, ಅದ ಸೂರು ದಿನವೆಲ್ಲ ಬೇಜಾರು/ ತಿದಿಯೊತ್ತಿ ನಿಟ್ಟುಸಿರು ಎದಿಯಾಗ ಚುರುಚುರು..’, ‘ಯಾವ ದೇಸದ ರಮಣ ಬಂದು, ಏನ ಮೋಸವ ಮಾಡಿದಾ…’ ಇತ್ಯಾದಿ ಹಾಡುಗಳು ನೆನಪಿಗೆ ಬರುತ್ತವೆ. ಇತ್ತೀಚಿಗಷ್ಟೆ ಬಿಡುಗಡೆಯಾದ ಶಿವರಾಜಕುಮಾರ್ ನಟಿಸಿದ ‘ಸಂತೆಯಲ್ಲಿ ನಿಂತ ಕಬೀರ’ ಸಿನಿಮಾ … Read more

ಇಷ್ಟು ಗಡಿಬಿಡಿ ಮಾಡ್ಕೊಂಡ್ ಯಾಕ ಹೋದ್ರಿ?: ಗುರುಪ್ರಸಾದ ಕುರ್ತಕೋಟಿ

ಅವತ್ತು ಎಪ್ರಿಲ್ ೨೧ ನೆ ತಾರೀಖು, ಮದ್ಯಾಹ್ನದ ಹೊತ್ತು. ಫೇಸ್ ಬುಕ್ ಮೆಸ್ಸೆಂಜರ್ ನಲ್ಲಿ ಬಂದ “ಎಂತದ್ರೋ” ಅನ್ನೋ ಮೆಸ್ಸಜು ನನ್ನ ಕಣ್ಣು ಹಿಗ್ಗಿಸಿತ್ತು. ಯಾವ ಹಿರಿಯರು ಆನ್ಲೈನ್ ಇದ್ದಾರೆ ಅಂತ ಗೊತ್ತಿದ್ರೂ, ಅವರು ನನಗೆ ಎಷ್ಟು ಚೆನ್ನಾಗಿ ಪರಿಚಯ ಇದ್ರೂ, ಅವರನ್ನ  ಮಾತಾಡಿಸಬೇಕು ಅಂತ ಆಸೆ ಆದರೂ ಪಿಂಗ್ ಮಾಡೋಕೆ ಹೆದರತಿದ್ನೋ, ಅವರೇ ನನಗೆ “ಎಂತದ್ರೋ” ಅನ್ನೋ ಮೆಸ್ಸೇಜ್ ಕಳಸಿದ್ರೆ ನನಗೆ ಎಷ್ಟು ಖುಷಿ ಆಗಬೇಡಾ? ಅವತ್ತಿನ ದಿನ ನಾನು ಅಮೇರಿಕದಲ್ಲಿ ಇದ್ದೆ, ಅವ್ರು ಬೆಂಗಳೂರಿನಲ್ಲಿ. … Read more

ಗುರುವೆಂದರೆ..ಇವರೇ..!!: ಉಮೇಶ ದೇಸಾಯಿ

   ಇತ್ತೀಚೆಗೆ ಸಂಧ್ಯಾರಾಣಿ ತಾವು ಗೋಪಾಲ ವಾಜಪೇಯಿಯವರನ್ನು ಮೊದಲಬಾರಿ ಭೇಟಿಯಾದಾಗಿನ ಸನ್ನಿವೇಶ ಹೇಳುತ್ತಿದ್ದರು. ಅವರು ಮುಂದುವರೆಸುತ್ತ ಹೇಗೆ ಒಬ್ಬ ಕವಿ ತಾನೇ ಗೀತೆಗಳ ರಚಿಸಿದರೂ ಅದರ ಹಕ್ಕನ್ನು ಅನುಭವಿಸಲಾಗದ ಸಂಕಟವನ್ನು ಹೇಗೆ ಅನುಭವಿಸಿರಬಹುದು ಎಂದು ಹೇಳುತ್ತಿದ್ದರು. ಅದ್ಭುತ ಅನ್ನುವ ಸಾಹಿತ್ಯ ಹಾಡುಗಳ ಬರೆದರೂ ಇದು ನನ್ನದು ಅಂತ ಹೇಳಿಕೊಳ್ಳಲಾಗದ ವಿಚಿತ್ರ ಪರಿಸ್ಥಿತಿ ಗುರುಗಳಾದ ಗೋಪಾಲ ವಾಜಪೇಯಿ ಅನುಭವಿಸಿದರು. ಅದು ಆಗಿದ್ದು ನಾಗಮಂಡಲ ನಾಟಕ/ಸಿನೇಮಾಗೆ ಸಂಬಂಧಿತವಾಗಿ. ಶಾಮರಾಯರ ಕಣ್ಣು/ಕಿವಿ ತಪ್ಪಿಸಿ ಬರೆಯುವ ಪರಿಸ್ಥಿತಿ..ಇಂದಿಗೂ ನಾಗಮಂಡಲದ ಹಾಧು ಬರೆದವರು "ಗೋಪಾಲ … Read more

ನನ್ನ ಶಿಷ್ಯ ಗೋಪಾಲ!: ಶಶಿಕಾಂತ ಕುರ್ತಕೋಟಿ

ನನ್ನ ಮಗ ಗುರುಪ್ರಸಾದ ಅದೊಂದು ದಿನ ಬೆಳಿಗ್ಗೆ “ಅಪ್ಪ, ಗೋಪಾಲ ವಾಜಪೇಯಿಯವರ ಪುಸ್ತಕ ಬಿಡುಗಡೆ ಸಮಾರಂಭವಿದೆ ಬರುತ್ತೀಯಾ? ಅವರು ನಿನ್ನನ್ನು ಕರೆದುಕೊಂಡು ಬರಲು ಹೇಳಿದ್ದಾರೆ.” ಅಂತ ಕೇಳಿದ. ನಾನು ಕೂಡಲೇ ಹೂಂ ಅಂತ ಒಪ್ಪಿಕೊಂಡೆ. ಆ ಹೆಸರು ನನಗೆ ೪೩ ವರ್ಷ ಹಿಂದೆ ಕರೆದೊಯ್ದಿತು. ನಮ್ಮಿಬ್ಬರದು ಗುರು-ಶಿಷ್ಯ ಸಂಬಂಧ. ಆ ಸಮಾರಂಭಕ್ಕೆ ಜಾತಕ ಪಕ್ಷಿಯಂತೆ ಕಾಯತೊಡಗಿದೆ. ಅಷ್ಟು ವರ್ಷಗಳ ನಂತರ ನನ್ನ ಆತ್ಮೀಯ ಗೋಪಾಲನನ್ನು ನೋಡುವ ಅವಕಾಶ ಅದಾಗಿತ್ತು.  ನನ್ನ ಮಗನಿಗೆ ಚಿಕ್ಕಂದಿನಿಂದಲೂ ಸಾಹಿತ್ಯ, ನಾಟಕ ರಂಗದ … Read more