ಪ್ರಾಣೇಶ-ಕಲ್ಲೋಳ ಹಾಸ್ಯದ್ವಯರ ಸಂಗಮ:ಗುಂಡೇನಟ್ಟಿ ಮಧುಕರ ಕುಲಕರ್ಣಿ

ಸುಮಾರು ಹತ್ತು ವರ್ಷಗಳ ಹಿಂದೆ ಹಾಸ್ಯಲೇಖಕ ಅನಂತ ಕಲ್ಲೋಳರಿಂದ ಒಂದು ಕಾಗದ ನನಗೆ ಬಂದಿತ್ತು. ನಾನೊಂದು ಕಾರ್‍ಯಕ್ರಮದಲ್ಲಿ ಯುವಕನೊಬ್ಬನ ಹಾಸ್ಯ ಭಾಷಣವನ್ನು ಕೇಳಿದೆ, ತುಂಬಾ ಚನ್ನಾಗಿ ಮಾತನಾಡುತ್ತಾರೆ. ಜನ ಬಿದ್ದು ಬಿದ್ದು ನಕ್ಕರು. ನೀವು ’ಕ್ರಿಯಾಶೀಲ ಬಳಗ’ದಿಂದ ಆ ಯುವ ಹಾಸ್ಯಭಾಷಣಕಾರನ ಕಾರ್‍ಯಕ್ರಮವನ್ನಿಟ್ಟುಕೊಳ್ಳಬೇಕು. ಬೆಳಗಾವಿ ಜನರಿಗೆ ಅವರ ಭಾಷಣವನ್ನು ಕೇಳುವ ಅವಕಾಶ ಮಾಡಿಕೊಡಿ ಎಂದು ಕಾಗದ ಬರೆದಿದ್ದರು. ಅನಂತ ಕಲ್ಲೋಳರ ಪತ್ರದಲ್ಲಿ ಬರೆದಿರುವಂತೆ ಮುಂದೆ ನಗರದ ಸಾಹಿತ್ಯ ಭವನದಲ್ಲಿ ಆ ನಗೆಭಾಷಣಕಾರನ ಭಾಷಣವನ್ನಿಟ್ಟುಕೊಂಡಿದ್ದೆವು. ಅಂದು ಸಾಹಿತ್ಯ ಭವನ … Read more

ಪುಟ್ರಾಜು ಕತೆ: ಗವಿಸ್ವಾಮಿ

ಮಧ್ಯಾಹ್ನದ ಹೊತ್ತು. ಪಕ್ಕದ ಹಳ್ಳಿಯಲ್ಲೊಂದು ಕೇಸು ಮುಗಿಸಿಕೊಂಡು ವಾಪಸ್ ಬರುತ್ತಿದ್ದೆ. ಹೈವೇ ಬದಿಯಲ್ಲಿರುವ ಪುಟ್ಟರಾಜುವಿನ ಸೂರ್ಯಕಾಂತಿ ಹೊಲದಲ್ಲಿ ಐದಾರು ಮಂದಿ ಟೂರಿಸ್ಟುಗಳು  ಫೋಟೋ  ತೆಗೆಸಿಕೊಳ್ಳುತ್ತಿದ್ದರು. ಬಂಡೀಪುರ – ಊಟಿ ಕಡೆಗೆ ಹೋಗುವ  ಟೂರಿಸ್ಟುಗಳು ದಾರಿಯಲ್ಲಿ  ಎತ್ತಿನಗಾಡಿಯನ್ನು ಕಂಡರೂ ಫೋಟೊ ತೆಗೆಸಿಕೊಳ್ಳುತ್ತಿರುತ್ತಾರೆ. ಗಾಡಿ ಮೇಲೆ ಕೂತ ರೈತನಿಗೆ ಒಂಥರಾ ಬೆರಗು! ಪಾಪ ಅವರ ಕಡೆ ಇದೆಲ್ಲಾ ನೋಡೋದಿಕ್ಕೆ ಸಿಗೋದಿಲ್ವೇನೋ ಅಂದುಕೊಂಡು ಖುಷಿಯಿಂದ ಪೋಸು ನೀಡುತ್ತಾನೆ. ಇನ್ನು ಕೆಲ ಟೂರಿಸ್ಟರು ಆಲದ ಮರದ ಬೀಳಲುಗಳನ್ನು ಹಿಡಿದು ಜೋತಾಡುವ ತಮ್ಮ ಮಕ್ಕಳನ್ನು ನೋಡುತ್ತಾ ರಿಲ್ಯಾಕ್ಸ್ ಆಗುತ್ತಿರುತ್ತಾರೆ. … Read more

ಅಪಘಾತುಕಗಳು: ಸಚಿನ್ ಎಂ. ಆರ್.

  “ಏನ್ ಜನಗಳೋ ಏನೋ? ಮನುಷ್ಯತ್ವದ ಒಂದು ತುಣುಕಾದ್ರೂ ಬೇಡವಾ? ಅವರ ಮೂತಿಗಿಷ್ಟು ಬರೇ ಹಾಕಾ.. ಅವರ ಪಿಂಡ ಏಲಿಯನ್ ನೆಕ್ಕಾ.. ನಾನೇನಾದ್ರೂ ದೇವರಾಗಿದ್ರೆ, ನನ್ನತ್ರ ಏನಾದ್ರೂ ಸೂಪರ್ ನ್ಯಾಚುರಲ್ ಪವರ್ ಇದ್ದಿದ್ರೆ ಆಗ ತೋರಿಸ್ತಿದ್ದೆ ನನ್ನ ಕೆಪ್ಯಾಸಿಟಿನ, ಈಗಲೂ ನೆನಸ್ಕೊಂಡ್ರೆ ಎಲ್ಲೆಲ್ಲೋ ಉರಿತದೆ..” ಹೀಗೆ ಎರ್ರಾಬಿರ್ರಿ ಬೈಗುಳಗಳ ಸುರಿಮಳೆ ಸುರಿಸ್ತಾ ಇದ್ದ ನಮ್ಮ ಡೊಂಕೇಶ. ನಾನೂ ನಮ್ಮ ಕ್ರಾಕ್ ಬಾಯ್ ಇಬ್ಬರೂ ಲೆಮನ್ ಟೀ ಕುಡೀವಾ ಅಂತ ಹೋದೋರು, ಅಲ್ಲಿಯೇ ಇದ್ದ ನಮ್ಮ ಡೊಂಕೇಶನ ಆರ್ಭಟ … Read more

ಕಾಬೂಲಿನ ಕಥೆ: ನಟರಾಜ್ ಕಾನುಗೋಡು

ಇದು ನಾನು ಯೂರೋಪಿನ “1tv” ಕಾಬೂಲ್ ಬ್ರಾಂಚಿನಲ್ಲಿ ಕೆಲಸ ಮಾಡುವಾಗಿನ ಘಟನೆ. ನನಗೆ ಕಾಬೂಲ್ ತುಂಬಾ ಅಮೇರಿಕಾ ಹಾಗೂ ಯುರೋಪ್ ಸೈನಿಕರು ಎಲ್ಲೆಲ್ಲೂ ಕಾಣುತ್ತಿದ್ದರು. ಅಗ ನಾನು ಕಬೂಲಿಗೆ ಬಂದ ಹೊಸತು. ನನಗೆ ಏಕೋ ತಾಲಿಬಾನ್ ಮುಖ್ಯಸ್ಥನನ್ನು ಖುದ್ಧಾಗಿ ಭೆಟ್ಟಿಯಾಗುವ ಮನಸ್ಸಾಯಿತು. ನಾನು ಕೆಲಸ ಮಾಡುತ್ತಿರುವ ಚಾನೆಲ್ ಮುಖ್ಯಸ್ಥರನ್ನು ಕೇಳಿದೆ. ನಿರಾಶಾದಾಯಕ ಉತ್ತರ ದೊರೆಯಿತು. ಮತ್ತು ನನಗೆ ಅವರನ್ನು ಭೆಟ್ಟಿ ಆಗಲು ಅವಕಾಶ ನಿರಾಕರಿಸಲಾಯಿತು. ಕಾರಣ ಒಮ್ಮೆ ಅಲ್ಲಿಗೆ ಅವರ ಸಂದರ್ಶನಕ್ಕೆಂದು ಹೋದ ಯೂರೋಪಿನ ಒಬ್ಬ ವರದಿಗಾರ … Read more

ಮದುವೆ ಮನೆಯಲ್ಲಿ ಕಾವ್ಯದ ಹೂರಣ: ಡಾ.ಪ್ರಕಾಶ ಗ.ಖಾಡೆ.

ಈಗ ಏನಿದ್ದರೂ ಸಾಂದರ್ಭಿಕ ಕವಿಗೋಷ್ಠಿಗಳ ಕಾಲ. ಹಿಂದೆಲ್ಲ ಚೈತ್ರ ಕವಿಗೋಷ್ಠಿ, ಯುಗಾದಿ ಕವಿಗೋಷ್ಠಿ, ಸಮ್ಮೇಳನದ ಕವಿಗೋಷ್ಠಿಗಳು ನಡೆಯುತ್ತಿದ್ದುದು ವಾಡಿಕೆ. ಈಗ ಗೃಹ ಪ್ರವೇಶ, ಮಗುವಿನ ಹುಟ್ಟು ಹುಬ್ಬಗಳಲ್ಲದೆ ಮದುವೆ ಮನೆಗೂ ನಮ್ಮ ಕವಿಗೋಷ್ಠಿ ಪ್ರವೇಶ ಪಡೆದಿದೆ. ಇದು ಕಾವ್ಯ ಖಾಸಗಿಯಾಗುತ್ತಿರುವ ಜೊತೆಗೆ ಸಾರ್ವತ್ರೀಕತೆಯನ್ನು ಪಡೆಯುತ್ತಿರುವ ಸೂಚನೆಯಾಗಿದೆ. ಇಂದಿನ ಅವಸರದ ಜಗತ್ತಿನಲ್ಲಿ ಮೊದಲಿದ್ದ ಮದುವೆ ಸಂಭ್ರಮದ ಓಡಾಟ, ಹಾಡು, ಆಟಗಳೆಲ್ಲ ಹೇಳ ಹೆಸರಿಲ್ಲದೆ ಕಣ್ಮರೆಯಾಗುತ್ತಿರುವ ಹೊತ್ತಿನಲ್ಲಿ ಒಂದಿಷ್ಟು ಚಿಂತನೆಗೆ ತೊಡಗಿಸುವ ಕಾವ್ಯಗೋಷ್ಠಿಗಳು ಮದುವೆ ಮಂಟಪದಲ್ಲಿ ಕಾಣಸಿಗುತ್ತಿರುವದೂ ಒಳ್ಳೆಯ ಬೆಳವಣಿಗೆಯಾಗಿದೆ. … Read more

ಹೆಣ್ಣು ನಡೆದುಬಂದ ಹಾದಿ: ಗಾಯತ್ರಿ ಸಚಿನ್ ಹೆಗಡೆ

‘ಸ್ತ್ರೀ’ ಎಂದರೆ ಅಷ್ಟೇ ಸಾಕೆ?  ಎಂಬ ಕವಿವಾಕ್ಯವನ್ನು ಓದುವಾಗ ಈ ಪದ ಎಲ್ಲಿಂದ ಶುರುವಾಗಿರಬಹುದು ಎಂಬ ಯೋಚನೆ ಬಂತು. ಬಹುಶಃ ಭೂಮಿಯ ಜನನದಿಂದಲೇ ಪ್ರಾರಂಭವಾಯ್ತೇನೋ!! ಅದಕ್ಕೇ ಭೂಮಿಯನ್ನು ತಾಯಿ ಅಂತ ಕರೆದದ್ದಿರಬಹುದು. ಭೂಮಿಯನ್ನು ಸ್ತ್ರೀಯಾಗಿಸಿದ್ದು ಅಥವಾ ಸ್ತ್ರೀಯನ್ನು ಭೂಮಿಗೆ ಹೋಲಿಸಿದ್ದು ಅವರ ಕ್ಷಮಾಗುಣ ಮತ್ತು ಸಹನೆಯ ಕಾರಣದಿಂದಲೇ.. ಎಲ್ಲವನ್ನೂ ಸಹಿಸುವ ಮತ್ತು ಕ್ಷಮಿಸುವ ಗುಣ ಹೆಣ್ಣಿಂದಲ್ಲದೇ ಬೇರೆಯವರಿಂದ ಸಾಧ್ಯವೇ!? ಸಹನೆಯನ್ನು ದೌರ್ಬಲ್ಯವೆಂದು  ತುಳಿದು ಮಿತಿ ಮೀರಿದರೆ ಒಂದು ಕಂಪನ ಸಾಕು ಅವಳ ಶಕ್ತಿ ಅರಿವಾಗಲು ಇಂಥ ‘ಹೆಣ್ಣು’ … Read more

ಉಪನ್ಯಾಸಕರ ಅಮೂಲ್ಯ ಸಸ್ಯ ಸಂಪತ್ತ ವನ: ಹನಿಯೂರು ಚಂದ್ರೇಗೌಡ

ನಮ್ಮ ನಡುವೆ ಎರಡು ಮಾದರಿಯ ಜನರಿರುತ್ತಾರೆ; ಒಂದು ಮಾದರಿ, ಕೆಲಸ ಮಾಡುವುದರ ಬದಲು ಕೇವಲ ಉಪದೇಶಿಸುವವರು;  ಮತ್ತಿನ್ನೊಂದು ಮಾದರಿ, ಉಪದೇಶಿಸುವುದಷ್ಟೇ ಅಲ್ಲ ಆ ಕೆಲಸವನ್ನು ಸ್ವತಃ ಮಾಡಿ ತೋರಿಸುವವರು. ಮೊದಲನೆ ಸಾಲಿನಲ್ಲಿ ನಿಲ್ಲಬಲ್ಲವರು ಅನೇಕರು ಅನಾಯಾಸವಾಗಿ ನಮಗೆ ದೊರಕುತ್ತಾರೆ. ಆದರೆ, ಎರಡನೆಯ ಮಾದರಿಯ ಜನರು ಸಿಗುವುದು ಬಹಳ ವಿರಳವೇ.  ಅಂಥ ವಿರಳಾತಿ ವಿರಳ ವ್ಯಕ್ತಿಗಳಲ್ಲಿ ರಾಮನಗರ ಜಿಲ್ಲೆ, ಗೊಂಬೆನಗರ ಚನ್ನಪಟ್ಟಣ ತಾಲೂಕಿನ ಎಲೆಭೂಹಳ್ಳಿಯ, ವೃತ್ತಿಯಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿರುವ ಭೂಹಳ್ಳಿ ಪುಟ್ಟಸ್ವಾಮಿ ಒಬ್ಬರು.  ಇವರು ಪ್ರವೃತ್ತಿಯಲ್ಲಿ ಕವಿ, ಸಾಹಿತಿ, … Read more

ಜ್ಞಾನದ ಹರಿವಿನ ಸ್ಥಿತಿಗತಿ. ಏನು? ಎತ್ತ?: ರಕ್ಷಿತ್ ಶೆಟ್ಟಿ

ಒಂದು ಕಾಲವಿತ್ತು. ಬರಹಗಾರರು ಹಗಲಿರುಳೆನ್ನದೇ ಬರೆದು ತಮ್ಮ ಕೃತಿಗಳನ್ನು ಮುದ್ರಿಸಿ ಉರಿ ಮಳೆ ಚಳಿಯಲ್ಲಿಯೂ ಅಲೆದು ಪ್ರತಿಯನ್ನು ಮಾರುತ್ತಿದ್ದರು. ನಾಡು ನುಡಿಗಾಗಿ ಭಾಷೆಯ ಹಲವು ಮಗ್ಗುಲಲ್ಲಿ ಸಾಹಿತ್ಯ ಕೃಷಿ ಮಾಡಿ ಓದುಗರೊಡನೆ ಭಾವನೆಗಳನ್ನು ಬೆಸೆದುಕೊಳ್ಳುತ್ತಿದ್ದ ಸಮಯವದು. ಇಂಗ್ಲೀಷಿನ ಬರಹಗಾರರಿಗೆ ವಿಶೇಷ ಸ್ಕೋಪ್ ಸಿಗುತ್ತಿದ್ದರೂ ಸ್ವಭಾಷೆಯನ್ನು ಕೃತಿಗಳಲ್ಲಿ ಮೈತಾಳಿಸಿಕೊಂಡು ಭಾಷಾ ಸೇವೆ ಮಾಡಿರವುದು ಕೇವಲ ಕನ್ನಡಕ್ಕಷ್ಟೇ ಸೀಮಿತವಲ್ಲದ್ದು. ಅಂದಿನ ಓದು :- ಕೃತಿಯೊಂದನ್ನು ಮನೆಯವರೆಲ್ಲರೂ ಕಿತ್ತಾಡಿಕೊಂಡು ಆದಷ್ಟು ಬೇಗ ಓದುತ್ತಿದ್ದ ಕಾಲವಿತ್ತು. ಕಾಲ ಸಂದರ್ಭವೂ ಪೂರಕವಾಗಿದ್ದುದು ಬೇರೆ ಮಾತು. ವರ್ಷದಲ್ಲಿ ದುಡಿಯೋದನ್ನ ತಿಂಗಳಲ್ಲಿ ದುಡಿಯೋ ಧಾವಂತ ಆಗಿರಲಿಲ್ಲ. ಅನಕ್ಷರತೆಯಿಂದ ಅಕ್ಷರಸ್ಥತೆಯೆಡೆಗೆ … Read more

ಸ್ನೇಹ ಎಂಬ ನಂದಾದೀಪ: ಮಂಜು ಎಂ. ದೊಡ್ಡಮನಿ

  ಅಲ್ಲಿ ಎಲ್ಲಿಯೂ ಎಳ್ಳಷ್ಟು ನಿಮ್ಮ ತಪ್ಪು ಇರುವುದಿಲ್ಲ, ಇದ್ದರೂ ನೀವು ಬೇಕೆಂದು ತಪ್ಪು ಮಾಡಿರುವುದಿಲ್ಲ ನಿಮ್ಮ ಗಮನಕ್ಕೆ ಬಾರದೆ ಆದ ಸಣ್ಣದೊಂದು ತಪ್ಪನ್ನು ಅವರು ದೊಡ್ಡದಾಗಿಸಿ ನಿಮ್ಮದೇ ತಪ್ಪು ಎನ್ನುವಂತೆ ತಮ್ಮನ್ನು ತಾವು  ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ನಿಮ್ಮೆದುರು ನಿಂತು ಪ್ರತಿಪಾದಿತ್ತಾರೆ, ಇಲ್ಲ ಸಲ್ಲದ ಆರೋಪಗಳನ್ನು ನಿಮ್ಮ ಮೇಲೆ ಹೊರಿಸುತ್ತಾರೆ, ಕಿಂಚಿಂತು ಬೆಲೆ ಕೊಡದೆ ಫುಲ್ ಸ್ಟಾಪ್ ಇಲ್ಲದೆ ಬಡ ಬಡ ಮಾತಾಡಿ, ಬಾಯಿಗೆ ಬಂದಂತೆ ಉವಾಚಿಸುತ್ತಾರೆ, ನೀವು ಎಷ್ಟೇ ಕಾರಣಕೊಟ್ಟರು ಏನೇ ಹೇಳಿದರು ಕೊನೆಗೆ ಸ್ವಾಭಿಮಾನ ಮರೆತು ಮಾಡದ ತಪ್ಪಿಗೆ ಕ್ಷಮೆ ಕೇಳಿದರೂ  ಅವರು ನಿಮ್ಮ  ಯಾವುದೇ justification ಅಥವಾ reason … Read more

ಹೀಗೊಂದು ಪ್ರಸಂಗ: ಗವಿಸ್ವಾಮಿ

ಮೊನ್ನೆ ಬೈಕಿನಲ್ಲಿ ಪಕ್ಕದ ಹಳ್ಳಿಗೆ ಹೊರಟಿದ್ದೆ. ಹೊರಡುವಾಗಲೇ ಸೂಜಿಗಾತ್ರದ ಹನಿಗಳು  ಗಾಳಿಯಲ್ಲಿ ಚದುರಿಕೊಂಡು ಉದುರುತ್ತಿದ್ದವು.  ಜನರ ಓಡಾಟ ಮಾಮೂಲಿನಂತೆಯೇ ಇತ್ತು.ಒಂದು ಮೈಲಿಯಷ್ಟು ಮುಂದೆ ಹೋಗುವಷ್ಟರಲ್ಲಿ  ಸೂಜಿ ಗಾತ್ರದ ಹನಿಗಳು  ದಬ್ಬಳದ ಗಾತ್ರಕ್ಕೆ ತಿರುಗಿದ್ದವು. ಎದುರುಗಾಳಿ ಬೀಸುತ್ತಿದ್ದರಿಂದ  ಹನಿಗಳು ಮುಖವನ್ನು ಅಡ್ಡಾದಿಡ್ಡಿ ಪಂಕ್ಚರ್ ಮಾಡತೊಡಗಿದವು. ಅಲ್ಲೇ ರಸ್ತೆ ಬದಿಯಲ್ಲಿದ್ದ ಹುಣಸೆಮರದಡಿಯಲ್ಲಿ ಗಾಡಿ ನಿಲ್ಲಿಸಿ ಫೇಸ್ ಬುಕ್ ಓಪನ್ ಮಾಡಿದೆ. ನೋಟಿಫಿಕೇಶನ್ ಐಕಾನ್ ಖಾಲಿ ಹೊಡೆಯುತ್ತಿತ್ತು. ಒಂದು ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಸಡನ್ನಾಗಿ ಓಕೆ ಕೊಡುವುದು ಬೇಡ, ನಿಧಾನಕ್ಕೆ ಕನ್ಫರ್ಮ್ ಮಾಡಿದರಾಯಿತು ಎಂದುಕೊಂಡು … Read more

ಕುವೆಂಪುರವರ ಕ್ರಾಂತಿ ಗೀತೆ: ದಿವ್ಯ ಆಂಜನಪ್ಪ

ಏನಾದರೂ ಆಗು, ನೀ ಬಯಸಿದಂತಾಗು, ಏನಾದರೂ ಸರಿಯೇ ಮೊದಲು ಮಾನವನಾಗು – ಎಂಬ ಮಾತಿನಿಂದ ಮಾನವನ ಮಾನವೀಯತೆಯನ್ನು ಕವಿ ಜಾಗೃತಗೊಳಿಸುವ ಪ್ರಯತ್ನವನ್ನು ನಡೆಸಿದ್ದಾರೆ. ಮನುಷ್ಯತ್ವವನ್ನೇ ಮರೆತಂತಹ ರಾಕ್ಷಸ ಕೃತ್ಯಗಳು ತಾಂಡವವಾಡುತ್ತಿರುವ ಕಾಲದಲ್ಲಿ ಇಂತಹ ಕವಿವಾಣಿಗಳು ಆಗಿಂದಾಗ್ಗೆ ಮನುಷ್ಯನ ಕಿವಿ ಮೇಲೆ ಬೀಳುತ್ತಿದ್ದಲ್ಲಿ ಸುಧಾರಣೆ ಕಾರ್ಯ ಸಾಧ್ಯವಾಗುವುದೆನೋ? ಎಂದೆನಿಸುತ್ತದೆ. ಇಂತಹದೇ ಸಂದೇಶ ಹೊತ್ತ ಮನುಜ ಮತಕ್ಕೆ ಒತ್ತನ್ನು ನೀಡಿದ ಅವರ ಕ್ರಾಂತಿಕಾರಿ ಗೀತೆಗಳ "ಅನಿಕೇತನ" ಕವನ ಸಂಕಲನದ "ಗುಡಿ, ಚರ್ಚು ಮಸಜೀದಿಗಳ ಬಿಟ್ಟು ಹೊರ ಬನ್ನಿ….ಎಂಬ ಕ್ರಾಂತಿ ಗೀತೆ. ಕವಿ ತಮ್ಮ ಈ ಗೀತೆಯಲ್ಲಿ ಸರ್ವ ಧರ್ಮ … Read more

ಕೊನೆಗಾಲದ ಕಥೆ ಹೇಳುವ ಚರ್ಚು:ಎಚ್.ಕೆ.ಶರತ್

ಒಂದೂರಿನ ಇತಿಹಾಸದ ಅಸ್ಥಿಪಂಜರದಂತಿರುವ ಚರ್ಚು, ಬರಗಾಲದ ಬವಣೆಯ ಬಿಡಿ ಚಿತ್ರಗಳನ್ನು ಕಟ್ಟಿಕೊಡುವ ಅಣೆಕಟ್ಟೆಯ ಹಿನ್ನೀರು, ವ್ಯವಧಾನ ಮತ್ತು ಧಾವಂತಕ್ಕೆ ರೂಪಕವಾಗಿ ನಿಂತಿರುವ ಸೇತುವೆ ಮತ್ತದರ ಮೇಲೆ ಚಲಿಸುವ ವಾಹನಗಳು, ಇಡೀ ಪರಿಸರಕ್ಕೆ ಸೊಗಸಾದ ಉಡುಗೆ ತೊಡಿಸುತ್ತಿರುವ ಸೂರ್ಯ, ಇರುವ ಅತ್ಯಲ್ಪ ನೀರಲ್ಲೇ ಬದುಕು ಕಟ್ಟಿಕೊಳ್ಳಲು ಬೆವರು ಹರಿಸುತ್ತಿರುವ ಶ್ರಮ ಜೀವಿಗಳು… ಹಾಸನದಿಂದ ಇಪ್ಪತ್ತು ಕಿಲೋ ಮೀಟರ್ ದೂರದಲ್ಲಿರುವ ಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಸೇತುವೆ, ಚರ್ಚಿನ ಅಳಿದುಳಿದ ಭಾಗಗಳು ಮತ್ತು ಹೇಮಾವತಿ ಜಲಾಶಯದ ಹಿನ್ನೀರು ಸೇರಿ ನಿರ್ಮಿಸಿರುವ ಸುಂದರ … Read more

ಬದಲಾದ ಹುಬ್ಬಳ್ಳಿಯಲ್ಲಿ ಮತ್ತ ನಾಕಹೆಜ್ಜಿ: ಉಮೇಶ್ ದೇಸಾಯಿ

ಹೌದು ಅಗದಿ ಏನು ಬಹಳ ದಿನಾ ಆಗಿರಲಿಲ್ಲ ಹುಬ್ಬಳ್ಳಿಗೆ ಹೋಗಿ. ಅಲ್ಲಿ ಇಲ್ಲಿ ಫೇಸಬುಕ್ಕಿನ ಹುಬ್ಬಳ್ಳಿ ಮಂದಿ ಯಲ್ಲಿ ಅಲ್ಲಿನ ಸುದ್ದಿ ಅಪಡೇಟ್ ಆಗುತ್ತಲೇ ಇತ್ತು. ಈ ಸಲ ಟೈಮಿತ್ತು. ಹಂಗ ಒಬ್ಬಾವನ ಹುಬ್ಬಳ್ಳಿಯೊಳಗ ಸುತ್ತಾಕಿದೆ.. ಅಗದಿ ಎದ್ದುಕಾಣುವ ಬದಲಾವಣಿ  ಆಗಿದ್ದು  ಗೋಕುಲ್ ರೋಡನ್ಯಾಗ ಅಂತ (ಈಗ ಮತ್ತೆ  ಹಳೇ ಹೆಸರಿಂದ ಅದನ್ನ ಕರೀಬೇಕೋ ಬ್ಯಾಡೋ ಗೊತ್ತಾಗವಲ್ತು..).. ಅಲ್ಲಿ  ಏರಪೋರ್ಟ  ಅದ.  ಹಂಗ ಒಂದೆರಡು ಮಾಲ್  ಬಂದಾವ  ಅಂತ,  ಹಂಗ  ಕೆ ಎಫ್ ಸಿ, ಮೆಕ್ ಡೊನಾಲ್ಡು … Read more

ವಿಶ್ವದೆಲ್ಲೆಡೆ ಹರಡುತ್ತಿರುವ ಅಮೇರಿಕಾ ಬೇಹುಗಾರಿಕೆಯ ಜಾಲಬಂಧ: ಜೈಕುಮಾರ್

ಅಮೇರಿಕಾದ ಕ್ರಮ ಪ್ರಜಾಪ್ರಭುತ್ವಕ್ಕೆ ಅಪಾಯ : ಎಡ್ವರ್ಡ್ ಸ್ನೋಡೆನ್, ಮಾಜಿ ಸಿಐಎ ಉದ್ಯೋಗಿ “ನಾನು ಮತ್ತೆ ಮನೆಗೆ ತೆರಳುತ್ತೇನೆಂಬ ಭರವಸೆಯಿಲ್ಲ. ತಮ್ಮ ಹೆಸರಿನಲ್ಲಿ ಸರ್ಕಾರಗಳು ನಡೆಸುತ್ತಿರುವ ಕೃತ್ಯಗಳನ್ನು ಜನತೆಗೆ ತಿಳಿಸುವುದಷ್ಟೇ ನÀನ್ನ ಉದ್ದೇಶ. ನನಗೆ ರೂ. 1 ಕೋಟಿ ಸಂಬಳ, ಒಳ್ಳೆಯ ಗೆಳತಿ, ಹವಾಯಿ ದ್ವೀಪದಲ್ಲೊಂದು ಐಷಾರಾಮಿ ಮನೆ ಮತ್ತು ಆತ್ಮೀಯ ಬಂಧುವರ್ಗದವರೆಲ್ಲರೂ ಇದ್ದು ಆರಾಮ ಜೀವನ ನಡೆಸಬಹುದು. ಆದರೆ, ಇವೆಲ್ಲವನ್ನೂ ನಾನು ತ್ಯಾಗ ಮಾಡಲು ಸಿದ್ದನಿದ್ದೇನೆ. ಏಕೆಂದರೆ, ಅಮೇರಿಕಾ ವಿಶ್ವದಾದ್ಯಂತ ರಹಸ್ಯವಾಗಿ ನಿರ್ಮಿಸುತ್ತಿರುವ ಬೇಹುಗಾರಿಕಾ ವ್ಯವಸ್ಥೆಯು … Read more

ನಾಗಾರಾಧನೆ-ತುಳುನಾಡ ವೈಶಿಷ್ಟ್ಯ: ಕಮಲಾ ಬೆಲಗೂರ್

ನಾಗಾರಾಧನೆ  ಒಂದು ವಿಶಿಷ್ಟ ಆಚರಣೆ. ಅನಾದಿಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಋಗ್ವೇದದಲ್ಲಿಯೂ ಈ ಬಗ್ಗೆ ಪ್ರಸ್ತಾಪವುಂಟು. ಭಾರತದೆಲ್ಲೆಡೆ ನಾಗಪೂಜೆಗೆ ಮಹತ್ವ ಇರುವುದಾದರೂ ತುಳುನಾಡ ಸೀಮೆಯಲ್ಲಿ ನಾಗಮಂಡಲ ಪೂಜೆಗೆ ವಿಶೇಷ ಮಹತ್ವ. ಪುರಾಣದಲ್ಲಿ ಒಂದು ಕತೆಯಿದೆ. ಗರುಡನಿಗೂ ವಾಸುಕಿಗೂ ಬದ್ದ ಧ್ವೇಷ. ಗರುಡನಿಗೆ ಹೆದರಿ ವಾಸುಕಿ ಗುಹೆಯಲ್ಲಿ ಅಡಗಿ ಕುಳಿತು ಶಿವನನ್ನು ಕುರಿತು ತಪಸ್ಸು ಮಾಡುತ್ತಾನೆ. ಆಗ ಶಿವನು ವಾಸುಕಿಗೆ ಅಭಯ ಹಸ್ತವನ್ನಿತ್ತು ತನ್ನ ಮಗನಾದ ಸುಬ್ರಮಣ್ಯನು ದುಷ್ಟ ನಿಗ್ರಹಕ್ಕಾಗಿ ಹುಟ್ಟಿ ಬರುವನೆಂದು, ಅವನ ಒಂದಂಶ ವಾಸುಕಿಯೊಂದಿಗೆ ಸೇರಿದಾಗ … Read more

ಮೈಸೂರು ಹುಸೇನಿಯವರ ಪೇಪರ್ ಕಲಾಕೃತಿಗಳು

ಕಲಾವಿದ ಎಸ್.ಎಫ್. ಹುಸೇನಿ ಅವರು ಕಲಾವಲಯದಲ್ಲಿ ಮೈಸೂರು ಹುಸೇನಿ ಎಂದೇ ಚಿರಪರಿಚಿತರು. ತಂದೆ ಸಯ್ಯದ್ ಫೀರ್, ತಾಯಿ ಜೀನಾತ್‌ವುನ್ನಿಸಾ ಬೀ ರವರ ಮಗನಾಗಿ ಮಂಡ್ಯಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರಂನಲ್ಲಿ ಜನಿಸಿದ ಇವರು ಬಾಲ್ಯದ ದಿನಗಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತರಾಗಿ ಕಲೆಯಲ್ಲಿಯೇ ಜೀವನ ರೂಪಿಸುವಂತಾಯಿತು. ಇವರು ಮೈಸೂರಿನ ವೈಜಯಂತಿ ಚಿತ್ರಕಲಾ ಶಾಲೆಯಲ್ಲಿ ಪೈನ್ ಆರ್ಟ್ ಡಿಪ್ಲೊಮ ಮತ್ತು ಆರ್ಟ್‌ಮಾಸ್ಟರ್ ಶಿಕ್ಷಣ ಪಡೆದು ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಚಿತ್ರಕಲೆಯಲ್ಲಿ ಬಿ.ಎಫ್.ಎ. ಪದವಿಯನ್ನು ಪಡೆದಿದ್ದಾರೆ.  ಅವರ ವಿಶಿಷ್ಟ ಬಗೆಯ ಕಾಗದ … Read more

ದೀಪ: ದಿವ್ಯ ಆಂಜನಪ್ಪ

ಅಂಧಕಾರವನ್ನು ತೊಲಗಿಸಿ, ಬೆಳಕನ್ನು ನೀಡಿ ದಾರಿ ತೋರುವ 'ದೀಪ'ವು ಜ್ಞಾನದ ಸಂಕೇತವಾಗಿದೆ. ಸಾಂಪ್ರದಾಯಕ ದೃಷ್ಟಿಯಿಂದಲೂ ದೀಪವು ಶ್ರೇಷ್ಟ ಸ್ಥಾನವನ್ನು ಪಡೆದಿದೆ. ಪೂಜೆ ಆಚರಣೆಗಳಲ್ಲಿ, ಆರತಿ ಬೆಳಗುವಲ್ಲಿ, ಯಾವುದೇ ಒಂದು ಕಾರ್ಯಕ್ರಮದ ಉದ್ಘಾಟನೆಯಲ್ಲಿ, ದೀಪ ಬೆಳಗಿಸುವ ಕಾರ್ಯವೇ ಮೊದಲಾಗಿದೆ. ಹೀಗೆ ನಮ್ಮ ಮನಸ್ಸು, ನಮ್ಮ ಸಂಸ್ಕೃತಿ ಮತ್ತು ನಮ್ಮ ಬುದ್ಧಿಯೂ ದೀಪವನ್ನು ಶ್ರೇಷ್ಠ ಸ್ಥಾನದಲ್ಲಿಟ್ಟು ನೋಡುತ್ತದೆ. ಭಾವನಾತ್ಮಕವಾಗಿಯೂ ಮತ್ತು ಸಾಹಿತ್ಯಾತ್ಮಕವಾಗಿಯೂ ದೀಪವು ನಮ್ಮ ಮನಗಳನ್ನು ಬೆಳಗಿಸಿವೆ ಎಂದೇ ಹೇಳಬಹುದು. ದೀಪವು ಬೆಳಕಿನ, ಜ್ಞಾನದ, ಕ್ರಾಂತಿಯ ದ್ಯೋತಕವಾಗಿ ಅನೇಕ ಕವಿತೆಗಳಾಗಿವೆ. ಕವಿಗಳಿಗೆ ಸ್ಪೂರ್ತಿಯಾಗಿ … Read more

ಪಾಕೀಟಿನ್ಮುಂದೆ ಓಸಿ ಪಾಸಿಯೆಲ್ಲ ಪುಟ್ಗೋಸಿ ಇದ್ದಂಗೆ! : ಎಚ್.ಕೆ.ಶರತ್

ಹಾಳೂರಿನ ಫುಲ್‍ಟೈಟು ಪಾರ್ಟಿಗಳಾದ ನೈಂಟಿ, ಫೋರ್‍ಟ್ವೆಂಟಿ ಮತ್ತು ಪಂಟಿ ಕರುಳ ತಳಮಳ ತಾಳಲಾರದೇ ‘ಕಿಕ್ಕೇಶ್ವರ’ ಲಿಕ್ಕರ್ ಶಾಪಿನೆಡೆಗೆ ದಾಪುಗಾಲಿಟ್ಟರು. ನೈಂಟಿ: ಸಿದ್ರಾಮಣ್ಣ ನಮ್ ಕಷ್ಟ ಅರ್ಥ ಮಾಡ್ಕಂದು ಚೀಪ್ ಅಂಡ್ ಬೆಸ್ಟು ಹೆಂಡನಾ ನಮ್ಗೆಲ್ಲ ಕುಡ್ಸೋಕೆ ಹೊಂಟಿತ್ತಪ್ಪ. ಯಾರ್ಯಾರೋ ಸೇರ್ಕಂದು ಅದ್ಕೆ ಕಲ್ಲಾಕ್ಬುಟ್ರು. ಫೋರ್‍ಟ್ವೆಂಟಿ: ಈಗಿರೋ ಸಿಸ್ಟಮ್ಮೇ ಸರ್ಯಾಗೈತೆ ಸುಮ್ಕಿರಪ್ಪ. ಈಗೆಂಗೋ ದಿನಾ ದುಡ್ಕಂದು ಸಂಜೆ ಹೊತ್ ಮಾತ್ರ ಕುಡ್ಕಂದು ನ್ಯಾಯ್ವಾಗಿ ಬದುಕ್ತಿದ್ದೀವಿ. ಚೀಪಾಗಿರೋ ಹೆಂಡನಾ ಮಾರ್ಕೆಟ್ಟಿಗೆ ಬಿಟ್ರೆ ವಾರ್ದಲ್ಲಿ ಮೂರ್ದಿನ ದುಡ್ದು ಏಳ್ದಿನಾನೂ ಕುಡ್ದು ಕಳ್ಳು … Read more

ಯಾರ್ ಮನ ಮುರ್ದ್ ಬುಟ್ಟು ಬಂದ ಬಡ್ಡೈದ ಇವತ್ತು: ಡಾ. ಗವಿ ಸ್ವಾಮಿ

ವಾರದ ಹಿಂದೆ ಒಬ್ಬ ರೈತ ಬಂದಿದ್ದ. ”ನೆನ್ನ ರಾತ್ರ ಅಸು ಈಯ್ತು.. ಇನ್ನೂ ಮ್ಯಾಲ್ಕೇ ಎದ್ದಿಲ್ಲ.. ತಲ ಇಟ್ಬುಟ್ಟದ ಒಂಚೂರ್ ಬಿರ್ರನ್  ಬನ್ನಿ ಸಾ , ಮನಲಿ ಎಮ್ಕ ಬಾಯ್  ಬಡ್ಕಂಡು ಅಳತ್ ಕೂತರ” ಅವನನ್ನು ಬೈಕಿನಲ್ಲಿ ಕೂರಿಸಿಕೊಂಡು ಅವನ ಊರಿಗೆ ಹೊರಟೆ. ಪೂರ್ತಿ ತೆಂಗಿನ ಗರಿಯಲ್ಲಿ ಕಟ್ಟಿದ ಕೊಟ್ಟಿಗೆ ಅದು. ಹಸು ತಲೆಯನ್ನು ಹೊಟ್ಟೆಯ ಮೇಲೆ ನುಲಿದುಕೊಂಡು ಮಲಗಿತ್ತು. ಮೈ ತಣ್ಣಗಿತ್ತು. ಕರು ಹಾಕಿದ ನಂತರ, ಹಸುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ  ‘ಮಿಲ್ಕ್ ಫೀವರ್’ ನ ಲಕ್ಷಣಗಳು ಕಾಣುತ್ತಿದ್ದವು … Read more

ಸ್ಪಾಟಾಗಿದ್ದರೆ : ಡಾ. ಗವಿಸ್ವಾಮಿ

ಸಂಜೆ ಐದಾಗಿತ್ತು. ಬೈಕಿನಲ್ಲಿ ಊರಿಗೆ ಹೋಗುತ್ತಿದ್ದೆ. ಐವತ್ತರವತ್ತು ಮೀಟರಿನಷ್ಟು ಮುಂದೆ ಗೌರ್ಮೆಂಟ್ ಬಸ್ ಹೋಗುತ್ತಿತ್ತು. ಬಿರುಗಾಳಿ ವೇಗದಲ್ಲಿ ನನ್ನ ಸನಿಹಕ್ಕೇ ಬಂದು ಸೈಡು ಹೊಡೆದು  ಹೋಯ್ತು ಒಂದು ಬೈಕು. ಒಂದು ಕ್ಷಣ ಎದೆ ಝಲ್ಲೆಂದಿತು. ಬಸ್ಸನ್ನೂ ಸೈಡು ಹೊಡೆಯಲು  ಯತ್ನಿಸಿದ ಬೈಕ್ ಸವಾರ. ಎದುರಿಗೆ ಲಾರಿ ಬಂದು ಬಿಡ್ತು. ಸಿಕ್ಕಿಕೊಂಡು ಬಿಟ್ಟಿದ್ದರೆ ಅಲ್ಲೇ ಕತೆಯಾಗಿರುತ್ತಿದ್ದ . ಸಣ್ಣ ಗ್ಯಾಪಿನಲ್ಲಿ ನುಸುಳಿಬಿಟ್ಟ. ಆದರೆ ಅದೇ ಸ್ಪೀಡಿನಲ್ಲಿ ಹೋಗಿ  ಎದುರಿಗಿದ್ದ ಮೈಲಿಗಲ್ಲಿಗೆ ಗುದ್ದಿಸಿಬಿಟ್ಟ! ಕೇವಲ ಐದಾರು ಸೆಕೆಂಡುಗಳಲ್ಲಿ  ಇಷ್ಟೆಲ್ಲಾ  ನಡೆದುಹೋಯ್ತು. … Read more

ಹಳ್ಳಿಯಾವ ಕಳಿಸಿಕೊಟ್ಟ ಪಾಠ: ಶ್ರೀಕಾಂತ್ ಮಂಜುನಾಥ್

ನಾಗರೀಕ ಸಮಾಜ ಎಂದು ಬೀಗುವ ಪಟ್ಟಣದಲ್ಲಿ ಸಂಸ್ಕೃತಿ ಮರೆತು ಹೇಗೆ ಆಡುತ್ತೇವೆ ಅನ್ನುವ ಭಾವ ಇರುವ ಒಂದು ಕಿರು ಲೇಖನ. ಗುಡ್ಡ-ಗಾಡುಗಳನ್ನು ಸುತ್ತಿ ಬಸವಳಿದಿದ್ದ ಒಂದು ಗುಂಪು, ತುಂಬಾ ದಿನಗಳಾದ ಮೇಲೆ, ಒಂದೇ ಛಾವಣಿಯಡಿಯಲ್ಲಿ ಸೇರಿದ್ದವು. ಹೊರಗಡೆ ಬಿಸಿಲು ಚೆನ್ನಾಗಿ ಕಾದಿತ್ತು, ಒಳಗೆ ಹೊಟ್ಟೆ ಹಸಿವಿನಿಂದ ಕುದಿಯುತ್ತಿತ್ತು. ಏನು ಸಿಕ್ಕಿದರು ತಿಂದು ತೇಗಿಬಿಡುವ ಧಾವಂತದಲ್ಲಿದ್ದರು. ಸುಮಾರು ಎಂಟು ಮಂದಿಯಿದ್ದ ಗುಂಪಾದ್ದರಿಂದ ಹೋಟೆಲ್ನಲ್ಲಿ ಒಂದೇ ಟೇಬಲ್ ನಲ್ಲಿ ಜಾಗ ಸಿಗುವುದು ಕಷ್ಟವಾಗಿತ್ತು. ಅಲ್ಲಿದ್ದ ಮೇಲ್ವಿಚಾರಕರು "ಸರ್ ಸ್ವಲ್ಪ ಹೊತ್ತು … Read more

ಅಲೆಮಾರಿ ಏಕಲವ್ಯ ಮುನಿತಿಮ್ಮಯ್ಯ – ಡಾ. ರಾಜರಿಂದ ಪ್ರೇರಣೆ: ಪ್ರಮೋದ್ ಶೇಟ್ ಗುಂಡಬಾಳ

ಯೋಗಾ ಇದು ಭಾರತ ದೇಶದ ಪಾರಂಪರಿಕ ವಿದ್ಯೆ. ಇದರಿಂದ ಆಕರ್ಷಿತರಾದವರಿಗೇನು ಕಡಿಮೆ ಇಲ್ಲ. ಇದರ ಬಗ್ಗೆ ಒಬ್ಬೊಬ್ಬರು ಒಂದೊದು ರೀತಿಯಲ್ಲಿ ಆಕರ್ಷಿತರಾಗುತ್ತಾರೆ, ಅಂತವರಲ್ಲಿ ಶ್ರೀ ಮುನಿತಿಮ್ಮಯ್ಯ ಕೂಡ ಒಬ್ಬರು. ಇವರು ಒಬ್ಬ ಏಕಲವ್ಯನಿದ್ದಂತೆ. ಇವರಿಗೆ ಪ್ರೇರಣೆ ಕನ್ನಡದ ಮೇರು ನಟ ಡಾ. ರಾಜಕುಮಾರವರು. ೮೦ರ ದಶಕದಲ್ಲಿದ್ದಂತಹ ಪ್ರಜಾಮತ ಪತ್ರಿಕೆಯಲ್ಲಿ ಡಾ. ರಾಜ್ ರವರ ಯೋಗಾಸನದ ಕುರಿತು ವಿವಿದ ಭಂಗಿಯ ಚಿತ್ರಗಳ ಸಹಿತ ಲೇಖನ ಪ್ರಕಟವಾಗುತಿತ್ತು. ಅದನ್ನು ನೋಡಿ ಪ್ರೇರಿತರಾದವರು ಶ್ರೀ ಮುನಿತಿಮ್ಮಯ್ಯನವರು. ಬೆಂಗಳೂರಿನ ಹೆಬ್ಬಾಳದ ನಿವಾಸಿಯಾದ ಇವರು … Read more

ಅಕ್ಷಯ ತೃತೀಯದಲ್ಲಿ ಚಿನ್ನ ಕೊಳ್ಳುವುದು ಅಂದರೆ…:ವಿ.ಆರ್.ಕಾರ್ಪೆಂಟರ್

ನನ್ನ ಸ್ನೇಹಿತನೊಬ್ಬ ಸೇನೆಯಲ್ಲಿದ್ದಾನೆ. ಕಳೆದ ವಾರವಷ್ಟೇ ರಜೆಯ ಮೇಲೆ ಊರಿಗೆ ಬಂದಿದ್ದಾನೆ. ಅವನಿಗೆ ಅವನ ತಂಗಿಯ ಕಡೆಯವರು ಅವನ ಮದುವೆಯ ವಾರ್ಷಿಕೋತ್ಸವ ಸಮಾರಂಭಕ್ಕೆಂದು ಸ್ವಲ್ಪ ದುಬಾರಿ ಉಂಗುರವನ್ನು ಉಡುಗೊರೆಯಾಗಿ ನೀಡಿದ್ದನ್ನು ಹೆಚ್ಚಿಗೆ ಅನ್ನಿಸುವಷ್ಟು ಉಬ್ಬಿಕೊಂಡು ನನ್ನ ಬಳಿ ಹೇಳಿಕೊಂಡ. ಇಂದು ತನಗೆ ಸಿಕ್ಕ ಈ ಅನಿರೀಕ್ಷಿತ ಉಡುಗೊರೆಯ ಹಿನ್ನೆಲೆಯನ್ನು ಹೇಳಿಕೊಂಡ. ಅದು ಮುಂದಿನಂತಿದೆ. ಕಳೆದ ಎರಡು ವಾರದ ಯಾವುದೋ ದಿನ ಅಕ್ಷಯ ತೃತೀಯವಂತೆ. ಅಂದು ಅವನ ಹೆಂಡತಿ ’ರೀ ಇವತ್ತು ಅಕ್ಷಯ ತೃತೀಯ ಜಾಸ್ತೀ ಅಲ್ಲದಿದ್ದರೂ ಚೂರು … Read more

ಒಂದು ಕದ್ದಾಲಿಕೆ: ಹರಿಪ್ರಸಾದ್

ನನಗೆ ನಾಲಿಗೆ ಬಗ್ಗೆ ಒಲವು ಇಲ್ಲದಿದ್ದರೂ ಕಿವಿಯ ಬಗ್ಗೆ ಅಪಾರ ಪ್ರೀತಿ. ಈ ಕಿವಿಗಳಾದರೋ ಎಲ್ಲೇ ಹೋದರೂ ಸುಮ್ಮನಿರುವುದಿಲ್ಲ. ಏನಾದರೂ ಕೇಳಿಸಿಕೊಳ್ಳುತ್ತಲೇ ಇರುತ್ತವೆ. ಕೇಳಿಸಿಕೊಂಡು ಅವು ಸುಮ್ಮನಿರುವುದಿಲ್ಲ. ನನ್ನನ್ನು ವಿನಾಕಾರಣ ಪೀಡಿಸುತ್ತಿರುತ್ತವೆ. ಒಂದಿನ ಟೀ ಅಂಗಡೀಲಿ ಯಾರೋ ಮಾತಾಡಿದ್ದು ಕೇಳಿಸಿಕೊಂಡು ಬಂದಿದ್ದವು. ರಾತ್ರಿ ನಿದ್ದೆ ಮಾಡಲು ಬಿಡದೆ ಪೀಡಿಸಿದವು. ಆ ಪೀಡನೆಯೇ ಸಾರಾಂಶವೇ ಈ ಬರಹ. ಅವನು ಏನೋ ಮದುವೆ ಆಕ್ಕುಲ್ವ? ಇವನು ಆಯ್ತಿನಿ ಅವನು ಅಂಗಾರೆ ಉಡ್ಗಿ ನೋಡ್ಕಂಡಿದೀಯ, ಯಾವ ಕ್ಯಾಷ್ಟು ಇವನು ನಿಂಗೆ ನನ್ … Read more

ಬಸ್ ಸ್ಟ್ಯಾಂಡ್ ಬದುಕು:ಗವಿಸ್ವಾಮಿ

ಸಂಜೆ ಏಳಾಗಿತ್ತು. ಮಳೆ ಬೀಳುವ ಎಲ್ಲಾ ಮುನ್ಸೂಚನೆಗಳೂ ಕಾಣುತ್ತಿದ್ದವು. ಆದರೂ, ಒಂದು chance ತೆಗೆದುಕೊಂಡು ಊರಿನತ್ತ ಬೈಕ್ ಸ್ಟಾರ್ಟ್ ಮಾಡಿದೆ. ಎರಡು ಮೂರು ಕಿಮೀ ಮುಂದೆ ಹೋಗುವಷ್ಟರಲ್ಲಿ ಟಪ್ ಟಪ್ ಟಪ್ ಟಪ್ ಅಂತ ಚುಚ್ಚತೊಡಗಿದವು ದಪ್ಪ ದಪ್ಪ ಹನಿಗಳು. ಮುಂದೆ ಹೋದಂತೆ ಮಳೆಯ ರಭಸ ಇನ್ನೂ ಹೆಚ್ಚಾಯಿತು. ಹೇಗೋ ಸಹಿಸಿಕೊಂಡು ಒಂದು ಮೈಲಿಯಷ್ಟು ಮುಂದೆ ಹೋಗಿ ಹಳ್ಳಿಯೊಂದರ  ಬಸ್ ಸ್ಟ್ಯಾಂಡ್ ತಲುಪಿಕೊಂಡೆ. ಅಲ್ಲಾಗಲೇ ಐದಾರು ಬೈಕುಗಳು ನೆನೆಯುತ್ತ ನಿಂತಿದ್ದವು.  ಬಸ್ ಸ್ಟ್ಯಾಂಡ್ ಅಕ್ಷರಷಃ ಹೌಸ್ಫುಲ್ಲಾಗಿತ್ತು. ಆಗ ತಾನೆ … Read more

ಡಿಪೋ ಅಕ್ಕಿ: ಹನಿಯೂರು ಚಂದ್ರೇಗೌಡ

  "ನ್ಯಾಯಬೆಲೆ ಅಂಗಡಿ" ಎಂಬೀ ಮೂರಕ್ಷರದ ಬೋರ್ಡಿನತ್ತ ಗಮನವಹಿಸಿದರೆ, ನನ್ನ ಮನವು ಪುಲಕಿತಗೊಳ್ಳುತ್ತದೆ. ಚನ್ನಪಟ್ಟಣ ತಾಲೂಕು ಬಹುತೇಕವಾಗಿ ಮಳೆಯನ್ನಾಶ್ರಯಿಸಿದ, ಅಲ್ಲಲ್ಲಿ ಕೊಂಚ ಪಂಪ್ ಸೆಟ್ಟನ್ನಾಶ್ರಯಿಸಿದ ಬೇಸಾಯ ಪದ್ದತಿಯನ್ನು ಹೊಂದಿದೆ. ಇಂಥ ತಾಲೂಕಿನ ನಮ್ಮನ್ನೂ ಸೇರಿಸಿ ಎಷ್ಟೋ ಜನರಿಗೆ ಅನ್ನದ ಆಸರೆಯಾಗಿದ್ದು ಮಾತ್ರ ಈ ಸೊಸೈಟಿಯ ಅಕ್ಕಿಯೇ. ನಾನು ಚಿಕ್ಕವನಾಗಿದ್ದಾಗ ನನ್ನ ಅಪ್ಪ-ಅವ್ವನ ಜತೆಯಲ್ಲಿ ತಿಂಗಳಿಗೊಂದಾವರ್ತಿ ಬರುತ್ತಿದ್ದ ಈ ಅಕ್ಕಿಯನ್ನು ತರಲು ಡಿಪೋ ಅಥವಾ ಸೊಸೈಟಿಗೆ ಹೋಗುತ್ತಿದ್ದದ್ದು, ಅದನ್ನು ನಾನೇ ಬಹಳ ಉತ್ಸಾಹದಿಂದ ಹೊತ್ತು ತರುತ್ತಿದ್ದದ್ದು ಈಗಲೂ ಪುಳಕಗೊಳಿಸುವ … Read more

ನಮ್ಮಪ್ಪನೇ ಈಗ ಸೊಸೈಟಿಯ ಅಧ್ಯಕ್ಷ: ಡಾ. ಗವಿ ಸ್ವಾಮಿ

  ನಮ್ಮ ಸಂಪಾದಕರ  ಟೈಮ್ ಲೈನನ್ನು ಜಾಲಾಡುತ್ತಿದ್ದೆ. ಅರೆ, ಡಿಪೋ ಅಕ್ಕಿಯ ಬಗ್ಗೆ ಲೇಖನ ಕಳಿಸಬೇಕಂತೆ ಪಂಜು ವಿಶೇಷ ಸಂಚಿಕೆಗಾಗಿ! ಛೇ ನಾನು ಇದನ್ನು ಮೊದಲೇ ಗಮನಿಸಬಾರದಿತ್ತಾ. ಇನ್ನೊಂದೇ ದಿನ ಬಾಕಿ ಇದೆ. 18ಕ್ಕೆ ಡೆಡ್ ಲೈನ್. ಬರೆಯಲೇಬೇಕು.  ಏನಾದರೂ ಬರೆಯಲೇಬೇಕು. ಆ ಹಕ್ಕು ನನಗಿದೆ. ಬಹುಶಃ ಡಿಪೋ ಅಕ್ಕಿಯ ಬಗ್ಗೆ  ಅಧಿಕಾರಯುತವಾಗಿ ಮಾತನಾಡುವ ಹಾಗು ಬರೆಯುವ ಹಕ್ಕು ಇರುವುದು ಅದರ ರುಚಿ ನೋಡಿದವರಿಗೆ ಮಾತ್ರ! ಅವರಲ್ಲಿ ನಾನೂ ಒಬ್ಬ . ಅದಕ್ಕೇ ಹೇಳಿದ್ದು ನನಗೆ ಹಕ್ಕಿದೆ … Read more

ಜಾತಿ! :ಡಾ. ಗವಿ ಸ್ವಾಮಿ

  ನಾಗರಹೊಳೆ ಮತ್ತು ಬಂಡಿಪುರ ರಾಷ್ಟ್ರೀಯ ಉದ್ಯಾನವನಗಳ ನಡುವೆ ಓಂಕಾರ್ ರೇಂಜ್ ಎಂಬ ಅರಣ್ಯ ಇದೆ. ಅದರ ಸೆರಗಿನಲ್ಲಿ ಶಿವಕುಮಾರಪುರ ಎಂಬ ಗ್ರಾಮ ಇದೆ. ಆ ಗ್ರಾಮದ ಜನರಿಗೆ ನಿತ್ಯವೂ ಕಾಡುಪ್ರಾಣಿಗಳೊಂದಿಗೆ ಸಂಘರ್ಷ ನಡೆಸಬೇಕಾದ ಪರಿಸ್ಥಿತಿ . ಇಂಡೋ-ಪಾಕ್ ಗಡಿಗಿಂತ ಒಂದು ಕೈ ಹೆಚ್ಚು ಉದ್ವಿಗ್ನತೆಯನ್ನು ಇಲ್ಲಿ ಕಾಣಬಹುದು. ಕಾಡು ಪ್ರಾಣಿಗಳೇ ಇಲ್ಲಿ ರೈತರ ಪಾಲಿನ terrorist ಗಳು! ರೈತರಿಗೂ ಫಾರೆಸ್ಟಿನವರಿಗೂ ಇಲ್ಲಿ ನಿರಂತರ ತಿಕ್ಕಾಟ. ನಮ್ಮ ದನಗಳನ್ನು ಫಾರೆಸ್ಟಿನ  ಬೌಂಡರಿ ದಾಟಲು ಬಿಡುವುದಿಲ್ಲ; ಹಿಂದೆಲ್ಲಾ ಸಣ್ಣ ಪುಟ್ಟ ಕಟ್ಟಿಗೆ … Read more

ಬಿಳಿಯ ಮರ್ಸಿಡೀಸ್ ಬೆಂಝ್: ಉಪೇಂದ್ರ ಪ್ರಭು

  ’ಏನ್ ಬಾಬಾ ನೀನು, ಯಾವಾಗ ನೋಡಿದ್ರೂ ಬರೇ ಕನ್ನಡ ಕಥೆಗಳನ್ನೇ ಬರೀತೀಯಾ. ಇಂಗ್ಲಿಷ್‌ನಲ್ಲಿ ಬರೆದ್ರೆ ನಾವೂ ಓದ್‌ಬಹುದಲ್ವಾ’ ಕಂಪ್ಯೂಟರ್ ಎದುರು ಕೂತು ಟೈಪ್ ಮಾಡುವಲ್ಲಿ ಮಗ್ನನಾಗಿದ್ದ ನನ್ನನ್ನು ರೇಗಿಸುತ್ತಾಳೆ ಹದಿಹರೆಯಕ್ಕೆ ಕಾಲಿಡುತ್ತಿರುವ ದ್ವಿತೀಯ ಸುಪುತ್ರಿ ಸ್ವಾತಿ. ’ಏ ಹುಡ್ಗಿ, ಕಥೆಗಳಲ್ಲಿ ಕನ್ನಡ ಕಥೆ ಇಂಗ್ಲಿಷ್ ಕಥೆ ಎಂದೇನೂ ಇಲ್ಲ. ಕನ್ನಡ ಕಥೆಗಳನ್ನೇ ಬರೀತೀಯಾ ಅನ್ನುವ ಬದಲು ಕನ್ನಡದಲ್ಲೇ ಕಥೆಗಳನ್ನು ಬರೀತೀಯಾ ಅನ್ನೋದು ವ್ಯಾಕರಣಬದ್ಧವಾಗುತ್ತದೆ’- ನನ್ನ ಕನ್ನಡ ಪಾಂಡಿತ್ಯವನ್ನು ಕನ್ನಡ ಓದಲು ಬರೆಯಲು ಬಾರದ ನನ್ನ ಹೆಂಡತಿ … Read more

ಕತೆ – ಚಿತ್ರಕತೆ – ನಿರ್ದೇಶಕ..:ಮಹದೇವ ಹಡಪದ್

  ಒಂದು ಕೃತಿಯ ಜೀವಾಳವೆಂದರೆ ಸಾರ್ವತ್ರಿಕ ಕಾಲವನ್ನು ಹಿಡಿದಿಡುವ ಶಕ್ತಿಯನ್ನು ಹೊಂದಿರುವಂಥದ್ದು. ಆಳವಾದ ಅನುಭವ, ಜ್ಞಾನದ ಅನುಭಾವ, ಸಂತೃಪ್ತ ಭಾವಗಳು ಎಲ್ಲಿ ಮೇಳೈಸಿಕೊಂಡಿರುತ್ತವೋ ಅಲ್ಲಿ ಪ್ರದರ್ಶನಕ್ಕಿಂತ ಪರಾಮರ್ಶನಕ್ಕೆ ಹೆಚ್ಚಿನ ಆದ್ಯತೆ ಇರುತ್ತದೆ. ಕಲಾಕಾರರು ತಮ್ಮ ಅನುಭವ ಮತ್ತು ಜೀವನದ ವಿರೋಧಾವಿರೋಧಗಳನ್ನೆಲ್ಲ ಕೃತಿಯಾಗಿಸುವ ನಿಟ್ಟಿನಲ್ಲಿಯೇ ಉತ್ಸುಕರಾಗಿರುತ್ತಾರೆ. ಅಭಿವ್ಯಕ್ತಿ ಅನ್ನುವುದು ಕೂಡ ಕಲಾದೃಷ್ಟಿಯ ಅಂತಃಪಠ್ಯವಾಗಿ ಸತ್ಯಶೋಧನೆ  ಹುಡುಕಾಟದಲ್ಲಿ ತೊಡಗಿರುತ್ತದೆ. ವಾಸ್ತವವನ್ನು ಗ್ರಹಿಸುವುದೇ ಸಿನೆಮಾ ಮಾರ್ಗದಲ್ಲಿ ಮೂಲ ಪಠ್ಯವಾಗಿರುತ್ತದೆ. ಲೂಮಿಯೇರ್ ಸಹೋದರರು ತಮ್ಮ ಮೊದಲ ಚಿತ್ರಗಳನ್ನು ಇಂಥ ವಾಸ್ತವಿಕ ಅಂಶಗಳನ್ನು ಸೆರೆಹಿಡಿಯುವ … Read more