ಗಾಂಧೀ ಬಾಂಧವ್ಯ: ಎಸ್. ಜಿ. ಸೀತಾರಾಮ್, ಮೈಸೂರು.

ಗಾಂಧೀ ಎಂದೊಡನೆ ಜನರು ಗಾಂಧೀಜೀಯವರನ್ನು ನೆನೆದು ಸುಮ್ಮನಾಗುವರೇ ಹೊರತು, ಅವರ ಗಾಂಧೀ ನಾಮಧಾರಿ ಬಂಧುಗಳನ್ನಾಗಲೀ ಅಥವಾ ಗಾಂಧೀ ನಾಮದ ಮೂಲವನ್ನಾಗಲೀ ಸಾಮಾನ್ಯವಾಗಿ ಹುಡುಕಲೆತ್ನಿಸುವುದಿಲ್ಲ. ಹಾಗೆ ಹುಡುಕಲು ಹೊರಟಲ್ಲಿ, ಗಾಂಧೀ ಎಂಬುವ ಪದ ಗಂಧ ಎಂಬ ಶಬ್ದದಿಂದ ಬಂದಿದ್ದು, ಗಂಧದ ವ್ಯಾಪಾರಿಗಳನ್ನು ಹೀಗೆ ಕರೆಯುತ್ತಿದ್ದರೆಂಬುದನ್ನು ತಿಳಿದು ಶುರುವಿನಲ್ಲೇ ಅಚ್ಚರಿಯಾಗುತ್ತದೆ. ಹಾಗೆಯೇ ಮುಂದುವರಿದರೆ, ಗಾಂಧೀಜೀಯವರಿಗೆ ಮುಂಚೆಯೇ ಇನ್ನೊಬ್ಬ ವಿಶ್ವವಿಖ್ಯಾತ ಗಾಂಧೀ ಇದ್ದರೆಂದು ತಿಳಿದು ಕುತೂಹಲ ಮತ್ತಷ್ಟು ಕೆರಳುತ್ತದೆ. ಇವರೇ ಬ್ಯಾರಿಸ್ಟರ್ ಮತ್ತು ಬಹುಧರ್ಮ ವಿದ್ವಾಂಸ ವೀರ್‌ಚಂದ್ ರಾಘವ್‌ಜೀ ಗಾಂಧೀ (೧೮೬೪-೧೯೦೧). … Read more

ಜನಪದ ಸಾಹಿತ್ಯದ ಸ್ಥಿತಿಗತಿ. ಏನು..? ಎತ್ತ..?: ರಕ್ಷಿತ್ ಶೆಟ್ಟಿ

 ಜನಪದ ಎಂಬುವುದು ಕೇವಲ ಒಂದೆರಡು ಪ್ರಕಾರಗಳಿಗೆ ಸೀಮಿತವಾದುದಲ್ಲ ಜನಜೀವನದ ಪ್ರತಿಯೊಂದು ಮಜಲಿನಲ್ಲಿಯೂ ಹಾಸುಹೊಕ್ಕಾಗಿ ನಿಂತಿರುವಂತದ್ದು. ಪ್ರತೀ ಪ್ರದೇಶದ ಪರಿಧಿಯೊಳಗೂ ತನ್ನದೇ ಆದ ವಿವಿದ ರೀತಿಯ ಜಾನಪದ ಚಿತ್ರಣ ಇದ್ದೇ ಇರುತ್ತದೆ. ಅನಕ್ಷರಸ್ಥ ಸಮಾಜದಲ್ಲಿ ಕೇವಲ ಮೌಖಿಕವಾಗಿ ಹರಿದು ಬಂದ ಸಾಹಿತ್ಯ ಪ್ರಕಾರಗಳಿಗೆ ಜಾತಿ, ಧರ್ಮ, ಮತ, ಪಂಥಗಳ ಹಿಡಿತವಿಲ್ಲ. ನಂಬಿಕೆ ಪುರಾಣ ನಡವಳಿಕೆ ಸಮಾಜದ ಆಗುಹೋಗುಗಳೇ ಒಳಗೊಂಡಿರುವುದು ಸರ್ವೇಸಾಮಾನ್ಯ. ಈ ರೀತಿಯಲ್ಲಿ ಕಂಠಸ್ಥ ಸಂಪ್ರದಾಯದ ಮೂಲಕ ತಲೆಮಾರಿನಿಂದ ತಲೆಮಾರಿಗೆ ಹರಿದು ಬಂದ ಕಲಾಪ್ರಕಾರಗಳು ನಿರಂತರವಾಗಿ ಹೊಸ ರೀತಿ … Read more

ಸಾಮಾಜಿಕ ಕ್ರಾಂತಿಯ ಹರಿಕಾರ ಶ್ರೀ ನಾರಾಯಣ ಗುರು:ಅಶೋಕ್ ಕುಮಾರ್ ವಳದೂರು

"ಒಂದೇ ಜಾತಿ, ಒಂದೇ ಧರ್ಮ,ಒಬ್ಬನೇ ದೇವರು" ಎಂದು ಮನುಕುಲ ಕುಟುಂಬಕ್ಕೆ ಸಾರಿ ವಿಶ್ವ ಮಾನವ ಸಂದೇಶವನ್ನು ಕೇರಳದಿಂದ ಪ್ರಾರಂಭ ಮಾಡಿ ದೇಶದೆಲ್ಲೆಡೆ ಹಬ್ಬಿಸಿದ ಮಹಾನ್ ಸಂತ ಶ್ರೀ ನಾರಾಯಣ ಸ್ವಾಮಿ. "ಯಾರನ್ನೂ ದ್ವೇಷಿಸ ಬೇಡಿ, ಸಂಘಟನೆಯಿಂದ, ಶಿಕ್ಷಣದಿಂದ, ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ದೇಶದ ಉನ್ನತಿಯನ್ನು ಸಾಧಿಸೋಣ" ಎಂದು ಒಂದು ಶತಮಾನಗಳ ಹಿಂದೆ ಈ ಜನಕ್ಕೆ ಸಾರಿದ ಗುರು ನಾರಾಯಣರ ಸಂದೇಶವು ವಾಸ್ತವದ ಅರ್ಥವನ್ನು ಪಡೆಯುವುದು ನಾವು ಕಾಣುತ್ತೇವೆ. ಹದಿನೆಂಟು ಹತ್ತೊಂಭತ್ತನೆಯ ಶತಮಾನಗಳು ಈ ನಾಡಿನಲ್ಲಿ ಐರೋಪ್ಯರು ವಸಾಹತುಗಳನ್ನು … Read more

ಆ ಆಕೃತಿ…!: ಬಸವರಾಜು ಕ್ಯಾಶವಾರ

ಸಮಯ: ರಾತ್ರಿ 9.10 ಸ್ಥಳ: ಕಸ್ತೂರಬಾ ರಸ್ತೆ, ಕಂಠೀರವ ಕ್ರೀಡಾಂಗಣದ ಹತ್ತಿರ “ಧಗ್” ಅಂತು. ಥೇಟ್ ಬಂಡೆ ಕವನದಂತೆ; ಒಂದು ಬೆಂಕಿ ಕಡ್ಡಿ ತಲೆ ಸುಟ್ಟುಕೊಂಡು ಸತ್ತಿತ್ತು, ಕತ್ತಲಿನ ಜೊತೆ. ತೆಳು ಬಿಳಿ ಬಟ್ಟೆ ಸುತ್ತಿಕೊಂಡಿದ್ದ ಅಪ್ಸರೆಗೆ ಬೆಂಕಿ ಹಚ್ಚಲಾಗಿತ್ತು. ಆ ಅಪ್ಸರೆಯ ತಲೆ ಆ ಕೆಂದುಟಿಗಳನ್ನು ನುಂಗಿ ಹಾಕಿದ್ದವು. ಆ ಎರಡು ಕಣ್ಣುಗಳು ತಣ್ಣಗೆ ರೆಪ್ಪೆ ಬಡಿಯುತ್ತಿದ್ದವು. ಕತ್ತಲಿನ ಮಧ್ಯೆ ಆ ಬಿಳಿಗುಡ್ಡೆಗಳು  ಕಬ್ಬನ್ ಪಾರ್ಕ್ ನ ಕಬ್ಬಿಣದ ಬೇಲಿಯ ಹಿಂದಿನಿಂದ ನನ್ನನ್ನೇ ನೋಡುತ್ತಿದ್ದವು. ಆ … Read more

ಗುಡುಗಿನಂಥ ಮೇಷ್ಟ್ರು, ಮಳೆಯಂಥ ಮೇಡಮ್ಮು: ಅಜ್ಜಿಮನೆ ಗಣೇಶ್

                                     ಒಳಗೆ ಆವೇಶದಲ್ಲಿ ಗುಡುಗುತ್ತಿರುವ ಮೇಷ್ಟ್ರು, ಅದರ ಪರಿಣಾಮ ಎಂಬಂತೆ ಹೊರಗೆ ಜೋರು ಮಳೆ, ಎರಡಕ್ಕೂ ಸಾಕ್ಷಿಯಾಗಿ ತಾರಸಿಯಿಂದ ಸುರಿಯುತ್ತಿದ್ದ ನೀರಿನಡಿ ನಿಂತಿದ್ದೆ..ಮಳೆಗಾಲದ ಆರಂಭವೇ ಕಾಯಿಲೆ ಹಿಡಿಸುತ್ತಾದ್ದರಿಂದ ಸುಮ್ಮಸುಮ್ಮನೆ ಮಲೆನಾಡಿನಲ್ಲಿ  ನೆನೆಯೋ ಸಾಹಸ ಯಾರು ಮಾಡುತ್ತಿರಲಿಲ್ಲ.. ಅಂತಹದ್ದರಲ್ಲಿ ಸರಿಸುಮಾರು ಅರ್ಧಗಂಟೆ ನಿಸರ್ಗದ ಷವರ್ನಡಿಯಲ್ಲಿ ಸುಮ್ಮನೆ ನಿಂತಿದ್ದೆ..ಕಾರಣ ನಿಂತಿದ್ದು ಸ್ವಇಚ್ಛೆಯಿಂದಾಗಿರದೇ ಮೇಷ್ಟ್ರು ವಿಧಿಸಿದ ಶಿಕ್ಷೆಯಿಂದಾಗಿತ್ತು.  … Read more

ಸ್ವಾತಂತ್ರ್ಯವೋ ಸ್ವಾತಂತ್ರ್ಯ! : ಎಸ್.ಜಿ.ಸೀತಾರಾಮ್, ಮೈಸೂರು.

ಒಂದಾನೊಂದು ಕಾಲದಲ್ಲಿ ಭಾರತದಲ್ಲಿ ಹಚ್ಚಿದ ಸ್ವಾತಂತ್ರ್ಯದ ಕಿಚ್ಚು ಈಗ ಯಾವ ಆಳ-ಅಗಲಕ್ಕೆ ಹಬ್ಬಿದೆ ಎಂಬುದನ್ನು, ಸ್ವತಂತ್ರ ಭಾರತ ಜನನದ ಮಹಾಮಹೋತ್ಸವಕ್ಕೆಂದು ಇಂದು ನಾವು ಹಚ್ಚುವ ೬೭ ಹಣತೆಗಳ ಬೆಳಕಿನಲ್ಲಿ ಒಮ್ಮೆ ನಿಟ್ಟಿಸಿ ನೋಡುವುದು ಒಳಿತು. ಅಂದು ರಾಷ್ಟ್ರಸ್ವಾತಂತ್ರ್ಯಕ್ಕೆಂದು ಎಬ್ಬಿಸಿದ್ದ ಆ ಕಿಚ್ಚು ತಡವಿಲ್ಲದೇ ರಾಜ್ಯಸ್ವಾತಂತ್ರ್ಯಗಳೆಡೆಗೆ ತಿರುಗಿ, ಎಲ್ಲ ರಾಜ್ಯಗಳೂ ತಂತಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡತೊಡಗಿದವು. ೧೯೫೬ರಲ್ಲಿ ಪುನರ್ವಿಂಗಡನೆಯ ಕಾರಣ ಕೇವಲ ಹದಿನಾಲ್ಕು ಆಗಿದ್ದ ರಾಜ್ಯಗಳ ಸಂಖ್ಯೆ ಇಂದು ಇಪ್ಪತ್ತೊಂಬತ್ತಾಗಿದೆ. ಬೋಡೋಲ್ಯಾಂಡ್, ಗೋರ್ಖಾಲ್ಯಾಂಡ್, ಪೂರ್ವಾಂಚಲ, ಬುಂದೇಲ್‌ಖಂಡ್, ವಿಂಧ್ಯದೇಶ, ವಿದರ್ಭ ಮತ್ತು … Read more

ಸಮರ್ಥ ಶಿಕ್ಷಕ, ರಾಷ್ಟ್ರ ರಕ್ಷಕ: ಹೊರಾ.ಪರಮೇಶ್

ನಮ್ಮ ಭೂಮಂಡಲದಲ್ಲಿ ಜೀವಿಗಳು ಸೃಷ್ಟಿಯಾದಾಗಿನಿಂದಲೂ 'ಚಿಂತನ-ಮಂಥನ' ಕ್ರಿಯೆಯು ನಡೆಯುತ್ತಲೇ ಬಂದಿದೆ. ಅಂದರೆ, ಹೊಸ ವಿಷಯಗಳ ಬಗ್ಗೆ ಕುತೂಹಲ, ಹುಡುಕಾಟ, ಆವಿಷ್ಕಾರಗಳು ಸಾಗುತ್ತಲೇ ಸಾಮಾನ್ಯ ಬುದ್ಧಿ ಶಕ್ತಿಯು ಅಸಾಮಾನ್ಯ ಅನ್ವೇಷಣೆಗಳಿಗೆ ನಾಂದಿ ಹಾಡಿರುವುದರಿಂದಲೇ ಇಂದು ಜಗತ್ತು ಅತ್ಯಾಧುನಿಕ ಕಾಲ ಘಟ್ಟಕ್ಕೆ ತಲುಪಿದೆ. ಒಂದು ವೇಳೆ ಮಾನವನಲ್ಲಿ ಈ "ಮಂಥನ" ಕಾರ್ಯ ಆಗದೇ ಇದ್ದಿದ್ದರೆ, ಇಂದು ವಿದ್ಯುತ್ ಸೌಲಭ್ಯವಾಗಲೀ, ಸಾರಿಗೆ-ಸಂಪರ್ಕ ಸಾಧನಗಳಾಗಲೀ, ಹರಿಯುವ ನೀರಿನ ಸದುಪಯೋಗವಾಗಲೀ, ಐಷಾರಾಮೀ ಬದುಕಿನ ಸೌಕರ್ಯಗಳಾಗಲೀ, ವೈಜ್ಞಾನಿಕ ಆವಿಷ್ಕಾರಗಳಾಗಲೀ ಯಾವುವೂ ಆಗುತ್ತಿರಲಿಲ್ಲ. ಇತಿಹಾಸದ ಪುಟಗಳು ನಮಗೆ … Read more

ಮಹಿಳೆ, ಮಗು , ಕಾನೂನು..: ಮಮತಾ ದೇವ

ಮಹಿಳೆಯರಿಂದು ಎಲ್ಲ ರಂಗಗಳಲ್ಲಿ ಮುಂಚೂಣಿಯಲ್ಲಿದ್ದರೂ ಹೆಣ್ಣು ಮಕ್ಕಳ ಸ್ಥಿತಿ ಗತಿ ಸಮಾಜದ ಎಲ್ಲಾ ವರ್ಗದಲ್ಲೂ, ಎಲ್ಲಾ ದೇಶಗಳಲ್ಲೂ ಸುಧಾರಣೆಯನ್ನು ಕಂಡಿಲ್ಲ.ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಪುಟ್ಟ ಹೆಣ್ಣು ಮಕ್ಕಳ ಮೇಲೂ ದೌರ್ಜನ್ಯ ಹೆಚ್ಚುತ್ತಿರುವುದು  ಅಪಾಯಕಾರಿಯೆನಿಸುತ್ತಿದೆ. ಮಹಿಳೆ ಇನ್ನೂ ಎರಡನೇ ದರ್ಜೆ ಪ್ರಜೆಯಾಗಿಯೇ ಉಳಿದಿದ್ದಾಳೆ. ತನ್ನ ಜವಾಬ್ದಾರಿ ನಿರ್ವಹಿಸುವಲ್ಲಿ ಪುರುಷನಿಗೆ ಸಮಾನಳಾಗಿದ್ದರೂ, ಮಹಿಳೆಗೆ ಸುರಕ್ಷತೆಯ ವಾತಾವರಣ ಎಲ್ಲೆಲ್ಲೂ ಇಲ್ಲ.ಇಂದಿನ 21ನೇ ಶತಮಾನದಲ್ಲೂ ಹೆಣ್ಣು ಮಕ್ಕಳು ಭದ್ರತೆ, ಸುರಕ್ಷತೆಗಳಿಂದ ವಂಚಿತರಾಗುತ್ತಿದ್ದಾರೆ.ಕಾನೂನು ಎಲ್ಲ ದೇಶದಲ್ಲೂ ಒಂದೇ ಆಗಿಲ್ಲ. ಕೆಲವು ದೇಶಗಳಲ್ಲಿ  ಮಹಿಳೆಯರಿಗೆ … Read more

ಬಾಡಿಗೆ ಮನೆಗಾಗಿ ಬಾಡಿದ ಮನಗಳು….: ಸಂತೋಷ ಗುಡ್ಡಿಯಂಗಡಿ

೧೯೧೮ರಲ್ಲಿ ನಾನು ಭಾರತಕ್ಕೆ ಮರಳಿ ಬಂದೆ. ನಾನು ಬರೋಡಾ ರಾಜ್ಯದ ಹಣಕಾಸಿನ ಸಹಾಯದಿಂದ ಉಚ್ಛ ಶಿಕ್ಷಣ ಪಡೆದವನಾದ್ದರಿಂದ ಒಪ್ಪಂದಕ್ಕೆ ಅನುಗುಣವಾಗಿ ಆ ರಾಜ್ಯಕ್ಕೆ ನನ್ನ ಸೇವೆಯನ್ನು ಸಲ್ಲಿಸಬೇಕಾಗಿತ್ತು. ಹೀಗಾಗಿ ಭಾರತಕ್ಕೆ ಮರಳಿದ ಕೂಡಲೇ ನೇರವಾಗಿ ಬರೋಡಾಕ್ಕೆ ಬಂದೆ. ಯುರೋಪ್ ಮತ್ತು ಅಮೆರಿಕೆಯಲ್ಲಿನ ಐದು ವರುಷಗಳ ವಾಸ್ತವ್ಯವು ನಾನು ಅಸ್ಪೃಶ್ಯನೆಂಬ ಪ್ರಜ್ಞೆಯನ್ನು ಸಂಪೂರ್ಣವಾಗಿ ಅಳಿಸಿಹಾಕಿತ್ತು. ಬರೋಡಾದಲ್ಲಿ ’ವಿಶಿ’ ಎಂದು ಕರೆದುಕೊಳ್ಳುವ ಹಿಂದೂ ಹೋಟೆಲ್ಲುಗಳು ಇದ್ದದ್ದು ನನಗೆ ತಿಳಿದಿದ್ದವು. ಅವು ನನಗೆ ಪ್ರವೇಶ ನೀಡಲಾರವು. ಅವುಗಳಲ್ಲಿ ಪ್ರವೇಶಿಸಲು ಇದ್ದ ಒಂದೇ … Read more

ಹೆಣ್ಣುಮಕ್ಕಳು ನಿರ್ಭಯರಾಗಿ ಓಡಾಡುವ ಕಾಲ ಮುಗಿದೇ ಹೋಯಿತೇ?: ಕೆ. ಉಷಾ ಪಿ. ರೈ

ನಿರ್ಭಯಳ ಭೀಕರ ಬಲತ್ಕಾರ ನಡೆದ ನಂತರ ’ಬಲಾತ್ಕಾರ’ ಎನ್ನುವ ಪದ ಅಂಕೆ ಸಂಖ್ಯೆಗಳ ಮಿತಿಯನ್ನೂ ಮೀರಿ ಯಾವುದೇ ಸಂಕೋಚವಿಲ್ಲದೆ ಅದೂ ಒಂದು ದಿನ ನಿತ್ಯದ ಬಳಕೆಯ ಶಬ್ಧದಂತೆ ಕಿವಿಗೆ ಬೀಳುತ್ತಲೇ ಇರುತ್ತದೆ. ಇದೇನೂ ಚರಿತ್ರೆಯಲ್ಲೇ ಮೊದಲ ’ಬಲತ್ಕಾರ’ದ ಕೇಸ್ ಅಲ್ಲ. ಆದರೆ ಇಡೀ ದೇಶದ ಜನರು ಒಗ್ಗಟ್ಟಾಗಿ ಪ್ರತಿಭಟಿಸಿದ್ದು ಈ ಘಟನೆಯನ್ನು. ಹಾಗಾಗಿ ಈ ಕೇಸಿಗೆ ಬಲ ಬಂದಿತ್ತು. ಇಡೀ ದೇಶದ ಜನರ ಪ್ರತಿಭಟನೆಯ ನಂತರವೂ ಬಲತ್ಕಾರಗಳು ನಿಲ್ಲಲಿಲ್ಲ. ಅದರ ನಂತರ ಮುಂಬಯಿಯಲ್ಲಿ ನಡೆದ ಶಕ್ತಿಮಿಲ್ ಬಲಾತ್ಕಾರದ … Read more

ಗಾಂಧಿ: ನಾ.ಧನಪಾಲ

ಮೂಲ: ತೆಲುಗು ಕತೆ ಲೇಖಕರು: ಸಲೀಂ, ಕನ್ನಡಕ್ಕೆ: ನಾ. ಧನಪಾಲ ಪ್ರಮುಖ ಸಾಪ್ತಾಹಿಕದಲ್ಲಿ ಗಾಂಧಿ ಬರೆದ ಲೇಖನವನ್ನು ಓದಿ ಮುಗಿಸಿದೊಡನೆ ಕಣ್ಣುಗಳು ಒದ್ದೆಯಾದವು.  ಅರಣ್ಯವನ್ನು ನಂಬಿಕೊಂಡು ಬದುಕುತ್ತಿರುವ ಬುಡಕಟ್ಟಿನವರ ಏಳು ಬೀಳುಗಳನ್ನು ಎಷ್ಟು ಚೆನ್ನಾಗಿ ಬರೆದಿದ್ದನೋ ?  ಬಹಳ ಹೃದ್ಯವಾಗಿ. . . !  ಮನಸ್ಸನ್ನು ಕಲಕುವಂತಿದೆ. ಹಾಗೆ ಬರೆಯಲು ಗಾಂಧಿಯಂತಹ ಮಾನವತಾವಾದಿಗೆ ಮಾತ್ರವೇ ಸಾಧ್ಯ.  ಗಾಂಧಿ ತಾನು ನಂಬಿರುವ ತನ್ನ ಸಿದ್ಧಾಂತಗಳಿಗಾಗಿ ಪ್ರಾಣಾರ್ಪಣೆಗಾದರೂ ಸಿದ್ಧನಿರುವ ಧೀಮಂತ ವ್ಯಕ್ತಿ.  ಕರ್ನಾಟಕದಲ್ಲಿ ಆತನಿಗೆ ಬಹಳ ಅಭಿಮಾನಿಗಳಿದ್ದಾರೆ.   ಮಾನವತೆಯನ್ನು … Read more

ಮಕ್ಕಳು, ಲೈಂಗಿಕ ದೌರ್ಜನ್ಯ ಮತ್ತು ಕಾನೂನು: ಅಂಜಲಿ ರಾಮಣ್ಣ

ಅಂತರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ದೇಶವು ಸಹಿ ಹಾಕಿ ದಶಕಗಳೇ ಸಂದಿವೆ. ಆದರ ಪ್ರಕಾರ ಮತ್ತು ನಮ್ಮ ಸಂವಿಧಾನದ ಮೂಲ ಆಶಯದಂತೆ ಮಕ್ಕಳ ಸಂರಕ್ಷಣೆ ನಮ್ಮ ಮೂಲಭೂತ ಕರ್ತವ್ಯವೇ ಆಗಿದೆ. ಅದಕ್ಕಾಗಿ ಸರ್ಕಾರಗಳು ಹಲವಾರು ವಿಶೇಷ ಕಾನೂನುಗಳನ್ನು ರಚಿಸಿರುವುದು ಮಾತ್ರವಲ್ಲ ಹಲವಾರು ಯೋಜನೆಗಳನ್ನೂ ರೂಪಿಸಿ ಜಾರಿಗೆ ತಂದಿವೆ. “ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ” ಎಂಬ  ದೂರದೃಷ್ಟಿಯಿಂದ  ಇಲಾಖೆಯ ನೀತಿ, ಯೋಜನೆಗಳು ಮತ್ತು ಕಾರ್ಯಕ್ರಮಗಳು ಮಕ್ಕಳ ಪರಿಪೂರ್ಣ ಅಬಿವೃದ್ಧಿಗಾಗಿ ಹೆಚ್ಚು ಒತ್ತು ನೀಡುತ್ತಿದ್ದು, ಇದರಲ್ಲಿ ಮಕ್ಕಳ … Read more

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಸಾಧ್ಯವೇ ? ಸಾಧುವೇ ?: ರಜನಿ ಆಚಾರ್ಯ

"Every soul is born divine" ಎನ್ನುತ್ತಾರೆ ವಿವೇಕಾನಂದರು. ಈ ಜಗತ್ತಿನಲ್ಲಿ ಹುಟ್ಟುವ ಪ್ರತಿ ಜೀವಿಯೂ ದೈವೀಕತೆಯ ಅಡಕಮುದ್ರೆಯೇ. ಆದರೆ ಆ ದೈವೀಕತೆಯ ರಾಗ ಸುಶ್ರಾವ್ಯವಾಗಿ ಹೊರಹೊಮ್ಮಿಸಲು ಪ್ರತಿ ಜೀವಿಯೂ ಅದಮ್ಯ ಆತ್ಮವಿಶ್ವಾಸದೊಂದಿಗೆ ಶೃತಿ ಸೇರಿಸಲೇಬೇಕು. ಅದಕ್ಕೆ ಮೊದಲ ಮೆಟ್ಟಿಲೇ ಬಾಲ್ಯ. ಪ್ರತಿ ಮಗುವಿನ ಮನಸ್ಸು ಬಾಲ್ಯದಲ್ಲೇ ಸರ್ವಾಂಗೀಣ ಅಭಿವೃದ್ಧಿ ಹೊಂದಿದರೆ ಮಾತ್ರ ಆ ಮಗು ಮುಂದೆ ಒಂದು ಆರೋಗ್ಯಕರ ಮನಸ್ಸನ್ನು ಹೊಂದಿ ದೈವೀಕತೆಯನ್ನು ಸಾಧಿಸುವೆಡೆ  ಎಡೆಯಿಡಬಲ್ಲದೇನೊ ಹಾಗೂ ಪ್ರಸ್ತುತ ಸಮಾಜದ ಸರ್ವತೋಮುಖ ಬೆಳವಣಿಗೆಯ ಕಣ್ಣುಗಳಾಗಿ ರಾಷ್ಟ್ರದ … Read more

ಮಾನಸಿಕ ಆರೋಗ್ಯಕ್ಕೆ ಬೇಕು ಮಕ್ಕಳ ಹಕ್ಕುಗಳು: ಡಾ. ವಿನಯ ಎ.ಎಸ್.

ಮಕ್ಕಳ ಶೋಷಣೆ ಹಿಂಸೆ ಮತ್ತು ದಬ್ಬಾಳಿಕೆಗೆ ಮುಖ್ಯ ಕಾರಣವೆಂದರೆ ಅವರುಗಳನ್ನು  ವ್ಯಕ್ತಿಗಳೆಂದು ಗುರುತಿಸಿ  ಅವರಿಗೂ ತಮ್ಮದೇ ಅದ ಭಾವನೆಗಳಿರುತ್ತವೆಂದು ಅರಿಯದೆ ಇರುವುದು. ತಾಯಿ ತಂದೆಯರೂ ಸೇರಿದಂತೆ ಬಹಳ ಕಡೆ ಏಟು ಸಿಟ್ಟು ಹಿಂಸೆ ಮಾನಸಿಕ ಒತ್ತಡಕ್ಕೆ ಒಳಗಾಗುವ ಅದರಿಂದ ತಮ್ಮ ಮಾನಸಿಕ ಸಮತೋಲನ ಕಳೆದುಕೊಂಡ ಮಕ್ಕಳು ಒರಟಾಗಿ ಬಿಟ್ಟೂ ಅಗೌರವದಿ೦ದ, ಬದುಕಿನೆಡೆಗೆ ನಿರ್ಭಿಡೆಯಿಂದ ವರ್ತಿಸತೊಡಗುತ್ತಾರೆ. ಈ ಪರಿಸ್ಥಿಗೆ ಸಮಾಜದ ನಾವೆಲ್ಲಾ ಹೊಣೆಗಾರರು. ಮಕ್ಕಳನ್ನು ಪ್ರೀತಿ ಅನುಕಂಪ ಗೌರವದಿ೦ದ ಕಾಣುವುದು ನಮ್ಮ ಕರ್ತವ್ಯ. ಹಾಗೆಯೇ ಅವರಿಗೆ ಹಕ್ಕುಗಳ ಬಗ್ಗೆ … Read more

ವಿದೇಶದಲ್ಲಿ ಮಕ್ಕಳ ಹಕ್ಕುಗಳು- ಸ್ಥಿತಿಗತಿ: ಶಶಿ ರಾವ್

ಆಸ್ಟ್ರೇಲಿಯಾ ಮದುವೆಯನ್ನು ಒಂದು ಬಂಧನವೆಂದು ಅಷ್ಟಾಗಿ ಇಷ್ಟಪಡದ ದೇಶ. ಇಲ್ಲಿ ಮಗುವಿಗಾಗಿ ಮದುವೆಯೇ ಆಗಬೇಕಿಲ್ಲ, ಸಾಮಾನ್ಯವಾಗಿ ಇಲ್ಲಿನ ಜನ ಡಿಫ್ಯಾಕ್ಟೋ ಅಥವಾ ಬರಿಯ ಪಾರ್ಟನರ್ಸ್ ಆಗಿಯೇ ಬಹಳಷ್ಟು ವರ್ಷ ಜೊತೆಯಲ್ಲಿ ಕಳೆಯುತ್ತಾರೆ. ಸರಿ ಸುಮಾರು ೪/೫ ವರ್ಷಗಳ ನಂತರ ಕೂಡುಜೀವನದಲ್ಲಿ ಬೇಸರ ಬಂದೊಡನೆ ಪರಸ್ಪರ ಒಪ್ಪಂದದಿಂದಲೋ, ಕಚ್ಚಾಡುತ್ತಲೋ ಬೇರೆಯಾಗುತ್ತಾರೆ. ಈ ಮಧ್ಯೆ ಒಂದೆರಡು ಮಕ್ಕಳ ಹೆತ್ತಿರುತ್ತಾರಾದ್ದರಿಂದ ಆ ಮಕ್ಕಳನ್ನು ಒಂದು ವಸ್ತುವಿನಂತೆ ಪರಿಗಣಿಸಿ ಅವುಗಳ ಲಾಲನೆ ಪಾಲನೆ, ಬೆಳೆಯುವ ಸ್ಥಳ, ಯಾರೊಡನೆ ಬೆಳೆಯ ಬೇಕೆಂಬುದೆಲ್ಲ ಪರಸ್ಪರ ಚರ್ಚೆಯಿಂದಲೋ … Read more

ಮಕ್ಕಳ ಸಹಾಯಕ್ಕೆ ಸದಾ ಸಿದ್ದ ನಾವು ಮತ್ತು 1098: ರೂಪ ಸತೀಶ್

ಸೌಮ್ಯ : ಅಪ್ಪನ ಕುಡಿತಕ್ಕೆ, ಸಾಲಗಳಿಗೆ ಬಲಿಯಾಗಿ ನಗರದಲ್ಲಿ ಮನೆಕೆಲಸಕ್ಕಿರುವ ೮ ವರುಷದ ಬಾಲಕಿ.  ರಾಜು : ಹೆತ್ತವರ ಆರನೇ ಕುಡಿ, ವಯಸ್ಸು ೧೧! ತನ್ನೂರ ಬಿಟ್ಟು ನಗರಕ್ಕೆ ಬಂದು ಯಾವುದೋ ಟೀ ಅಂಗಡಿಯಲ್ಲಿ ಕೆಲಸಕ್ಕಿದ್ದಾನೆ.  ದೀಪ : ತಾನು ಕಲಿಯುತಿದ್ದ ಶಾಲೆಯ ಶಿಕ್ಷಕನಿಂದಲೇ ಲೈಂಗಿಕ ದೌರ್ಜ್ಯನಕ್ಕೊಳಗಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಪಡೆಯುತ್ತಿರುವ ಮುಗುದೆ.  ರವಿ : ಪರೀಕ್ಷೆಯಲ್ಲಿ ಕಡಿಮೆ ಅಂಕಗಳ ಪಡೆದ ಕಾರಣ ಅಮ್ಮ ಬೈದಳೆ೦ದು, ಸಮಾಜದ ಒತ್ತಡಕ್ಕೆ ಮಣಿದು ಆತ್ಮಹತ್ಯೆಗೆ ಶರಣಾದ ೧೪ ವರುಷದ ಬಾಲಕ.  ಚೈತ್ರ … Read more

ಮಕ್ಕಳ ಹಕ್ಕುಗಳ ಬಗ್ಗೆ ಸಾಮಾನ್ಯರ ತಿಳುವಳಿಕೆ ಏನು ?

          ಶ್ರೀಮತಿ ವೀಣಾ ಶಿವಣ್ಣ ಹೇಳುತ್ತಾರೆ, “ನನಗೆ ತಿಳಿದ ಮಟ್ಟಿಗೆ ಮಕ್ಕಳಿಗೆ ತಾವು ಬದುಕಲು ಬೇಕಾಗುವ ಒಳ್ಳೆಯ ಸೌಕರ್ಯ (ಊಟ, ಬಟ್ಟೆ, ಮಲಗಲು ಬೆಚ್ಚನೆಯ ಹಾಸಿಗೆ, ಆಟಿಕೆಗಳು), ಅವರು ಪಡೆದುಕೊಳ್ಳುವ ವಿದ್ಯಾಭಾಸ ಹಾಗೂ ಆರೋಗ್ಯ ಚೆನ್ನಾಗಿರಿಸಲು ಬೇಕಾಗುವ ವೈದ್ಯಕೀಯ ವ್ಯವಸ್ಥೆಯನ್ನು ಮಕ್ಕಳ ಹಕ್ಕುಗಳು ಎನ್ನಬಹುದು. ಹಾಗೆಯೇ ಮಕ್ಕಳು ಯಾವುದೇ ರೀತಿಯ ದೌರ್ಜನ್ಯ, ದುರುಪಯೋಗ, ಪಕ್ಷಪಾತದಿಂದ ರಕ್ಷಣೆ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ ಎನ್ನುವುದನ್ನು ಓದಿ ತಿಳಿದುಕೊಂಡಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾಗುವ … Read more

ಟಿ.ವಿ. ಶೋಗಳಲ್ಲಿ ನಮ್ಮ ಮಕ್ಕಳು: ಅಸ್ತಿತ್ವ ಲೀಗಲ್ ಟ್ರಸ್ಟ್

ಒಂಭತ್ತು ವರ್ಷದ ಆ ಮಗು ಆಫೀಸಿನೊಳಗೆ ಬಂದಾಗ ವಿದ್ಯುತ್ ಸಂಚಾರವಾದಂತೆ ಪಟ ಪಟ ಮಾತಾಡುತ್ತಾ ಸುತ್ತ ತಿರುಗುತ್ತಿದ್ದಳು. ಆ ಹುಡುಗಿ ಸಿನಿಮಾ ನಟನೆಗಾಗಿ ರಾಜ್ಯಪ್ರಶಸ್ತಿ ಪಡೆದ ಪುಟಾಣಿ ಪ್ರತಿಭೆ ಅದು ‘ನಾಳೆ ಶೂಟಿಂಗ್ ಇದೆ. ನನ್ನದೇ ಮೇನ್ ರೋಲ್. ಐದು ಕಾಸ್ಟ್ಯೂಂ ಬದಲಾಯಿಸಬೇಕು. ಅಪ್ಪಾ ಸಾಕಾಗ್ಹೋಗತ್ತೆ. ಪರವಾಗಿಲ್ಲ, ಮೇನ್ ರೋಲ್ ಅಂದ್ರೆ ಇದೆಲ್ಲ ಇದ್ದೇ ಇರುತ್ತಲ್ವಾ?.. ಹೀಗೆ ಆ ಮಗು ಏನೇನೋ ಮಾತಾಡ್ತಿತ್ತು. ಆ ವಯಸ್ಸಿಗೆ ಏನನಿಸುತ್ತೆ ಮತ್ತು ಏನು ಮಾತಾಡಬೇಕು ಅನ್ನೋ ಅರಿವೂ ಇಲ್ಲದ ವಯಸ್ಸು. … Read more

ಚುಟುಕಗಳು: ಶ್ರೀನಿಧಿ ಟಿ.ಕೆ., ವಿನೋದ್ ಕುಮಾರ್

1.     'ಮತ್ತೆ ಹೆಣ್ಣು' ಏನಿದು ದನಿಯಲ್ಲಿ ಸೋಲು?       ಯಾವ ಅರ್ಥದಲ್ಲಿ ನಾ ಗ೦ಡಾಗಿದ್ದರೆ ಮೇಲು?       ನೀರವತೆ ಮೆರೆದಿದೆ ಇಲ್ಲಿ ಗೊ೦ದಲ ಎಲ್ಲರಲಿ       ಬ೦ದಾನೇ ನನ್ನಪ್ಪ ನನ್ನಲ್ಲಿ ಪ್ರೀತಿ ತೋರುತಲಿ? 2.     ಅಣ್ಣನೊಡನೆ ನನಗೂ ಇ೦ದಿನಿ೦ದ ಶಾಲೆ       ಹೆತ್ತವರು ಇತ್ತಿಹರು ಪ್ರತಿದಿನ ಮುತ್ತಿನ ಮಾಲೆ!       ಎಲ್ಲದರಲೂ ನನಗೆ ಸಿಕ್ಕಿದೆ ಅಣ್ಣನ ಸಮಪಾಲು … Read more

ಮಕ್ಕಳಲ್ಲಿ ಸಾಮಾಜಿಕ ಅರಿವು ಮೂಡಿಸುವಲ್ಲಿ ನಮ್ಮದಿರಲಿ ಜವಾಬ್ದಾರಿ !: ವಿದ್ಯಾಶಂಕರ ಹರಪನಹಳ್ಳಿ

"ಅಪ್ಪಾ! ರೆಡ್ ಸಿಗ್ನಲ್… ನೀ ಗಾಡಿ ನಿಲ್ಸ್ಲೇ ಇಲ್ಲಾ!", "ಅಪ್ಪಾ ರಸ್ತೆ ಮಧ್ಯದಲ್ಲಿ ಕ್ರಾಸ್ ಮಾಡಬೇಡ… ಝಿಬ್ರಾ ಕ್ರಾಸಿಂಗ್ ಬಳಸಬೇಕು…", "ಅಮ್ಮಾ! ಕಸ ಪಕ್ಕದ ಖಾಲಿ ಸೈಟಿಗೆ ಹಾಕಬಾರದು, ನಮ್ ಟೀಚರ್ ಹೇಳಿದ್ದಾರೆ ಡಸ್ಟ್ ಬಿನ್ನಲ್ಲಿ ಹಾಕು!", "ಟಿವಿ ನೋಡಬೇಡ ಅಂತಿರಾ, ಮತ್ತೆ ನೀವು ಮಾತ್ರ ನೋಡಬಹುದಾ?", "ಅಪ್ಪಾ ಹೆಲ್ಮೆಟ್ ಹಾಕ್ಕೋ… ಪೊಲೀಸ್ ಹಿಡಿತಾರೆ!"… ಹೀಗೆ ಮಕ್ಕಳ ಪ್ರಶ್ನೆಗಳು ಮುಗಿಯುವುದೇ ಇಲ್ಲ. ಅವರ ಬಹುತೇಕ ಪ್ರಶ್ನೆಗಳು ದೊಡ್ಡವರ, ತಂದೆತಾಯಂದಿರ ನಿರ್ಲಕ್ಷಕ್ಕೆ ಒಳಗಾಗುವುದೇ ಹೆಚ್ಚು. ವಸ್ತುಸ್ಥಿತಿ ಹೀಗಿರುವಾಗ ಮಕ್ಕಳಲ್ಲಿ … Read more