ಹೆಣ್ಣುಮಕ್ಕಳು ನಿರ್ಭಯರಾಗಿ ಓಡಾಡುವ ಕಾಲ ಮುಗಿದೇ ಹೋಯಿತೇ?: ಕೆ. ಉಷಾ ಪಿ. ರೈ

ನಿರ್ಭಯಳ ಭೀಕರ ಬಲತ್ಕಾರ ನಡೆದ ನಂತರ ’ಬಲಾತ್ಕಾರ’ ಎನ್ನುವ ಪದ ಅಂಕೆ ಸಂಖ್ಯೆಗಳ ಮಿತಿಯನ್ನೂ ಮೀರಿ ಯಾವುದೇ ಸಂಕೋಚವಿಲ್ಲದೆ ಅದೂ ಒಂದು ದಿನ ನಿತ್ಯದ ಬಳಕೆಯ ಶಬ್ಧದಂತೆ ಕಿವಿಗೆ ಬೀಳುತ್ತಲೇ ಇರುತ್ತದೆ. ಇದೇನೂ ಚರಿತ್ರೆಯಲ್ಲೇ ಮೊದಲ ’ಬಲತ್ಕಾರ’ದ ಕೇಸ್ ಅಲ್ಲ. ಆದರೆ ಇಡೀ ದೇಶದ ಜನರು ಒಗ್ಗಟ್ಟಾಗಿ ಪ್ರತಿಭಟಿಸಿದ್ದು ಈ ಘಟನೆಯನ್ನು. ಹಾಗಾಗಿ ಈ ಕೇಸಿಗೆ ಬಲ ಬಂದಿತ್ತು. ಇಡೀ ದೇಶದ ಜನರ ಪ್ರತಿಭಟನೆಯ ನಂತರವೂ ಬಲತ್ಕಾರಗಳು ನಿಲ್ಲಲಿಲ್ಲ. ಅದರ ನಂತರ ಮುಂಬಯಿಯಲ್ಲಿ ನಡೆದ ಶಕ್ತಿಮಿಲ್ ಬಲಾತ್ಕಾರದ … Read more

ಗಾಂಧಿ: ನಾ.ಧನಪಾಲ

ಮೂಲ: ತೆಲುಗು ಕತೆ ಲೇಖಕರು: ಸಲೀಂ, ಕನ್ನಡಕ್ಕೆ: ನಾ. ಧನಪಾಲ ಪ್ರಮುಖ ಸಾಪ್ತಾಹಿಕದಲ್ಲಿ ಗಾಂಧಿ ಬರೆದ ಲೇಖನವನ್ನು ಓದಿ ಮುಗಿಸಿದೊಡನೆ ಕಣ್ಣುಗಳು ಒದ್ದೆಯಾದವು.  ಅರಣ್ಯವನ್ನು ನಂಬಿಕೊಂಡು ಬದುಕುತ್ತಿರುವ ಬುಡಕಟ್ಟಿನವರ ಏಳು ಬೀಳುಗಳನ್ನು ಎಷ್ಟು ಚೆನ್ನಾಗಿ ಬರೆದಿದ್ದನೋ ?  ಬಹಳ ಹೃದ್ಯವಾಗಿ. . . !  ಮನಸ್ಸನ್ನು ಕಲಕುವಂತಿದೆ. ಹಾಗೆ ಬರೆಯಲು ಗಾಂಧಿಯಂತಹ ಮಾನವತಾವಾದಿಗೆ ಮಾತ್ರವೇ ಸಾಧ್ಯ.  ಗಾಂಧಿ ತಾನು ನಂಬಿರುವ ತನ್ನ ಸಿದ್ಧಾಂತಗಳಿಗಾಗಿ ಪ್ರಾಣಾರ್ಪಣೆಗಾದರೂ ಸಿದ್ಧನಿರುವ ಧೀಮಂತ ವ್ಯಕ್ತಿ.  ಕರ್ನಾಟಕದಲ್ಲಿ ಆತನಿಗೆ ಬಹಳ ಅಭಿಮಾನಿಗಳಿದ್ದಾರೆ.   ಮಾನವತೆಯನ್ನು … Read more

ಮಕ್ಕಳು, ಲೈಂಗಿಕ ದೌರ್ಜನ್ಯ ಮತ್ತು ಕಾನೂನು: ಅಂಜಲಿ ರಾಮಣ್ಣ

ಅಂತರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ದೇಶವು ಸಹಿ ಹಾಕಿ ದಶಕಗಳೇ ಸಂದಿವೆ. ಆದರ ಪ್ರಕಾರ ಮತ್ತು ನಮ್ಮ ಸಂವಿಧಾನದ ಮೂಲ ಆಶಯದಂತೆ ಮಕ್ಕಳ ಸಂರಕ್ಷಣೆ ನಮ್ಮ ಮೂಲಭೂತ ಕರ್ತವ್ಯವೇ ಆಗಿದೆ. ಅದಕ್ಕಾಗಿ ಸರ್ಕಾರಗಳು ಹಲವಾರು ವಿಶೇಷ ಕಾನೂನುಗಳನ್ನು ರಚಿಸಿರುವುದು ಮಾತ್ರವಲ್ಲ ಹಲವಾರು ಯೋಜನೆಗಳನ್ನೂ ರೂಪಿಸಿ ಜಾರಿಗೆ ತಂದಿವೆ. “ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ” ಎಂಬ  ದೂರದೃಷ್ಟಿಯಿಂದ  ಇಲಾಖೆಯ ನೀತಿ, ಯೋಜನೆಗಳು ಮತ್ತು ಕಾರ್ಯಕ್ರಮಗಳು ಮಕ್ಕಳ ಪರಿಪೂರ್ಣ ಅಬಿವೃದ್ಧಿಗಾಗಿ ಹೆಚ್ಚು ಒತ್ತು ನೀಡುತ್ತಿದ್ದು, ಇದರಲ್ಲಿ ಮಕ್ಕಳ … Read more

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಸಾಧ್ಯವೇ ? ಸಾಧುವೇ ?: ರಜನಿ ಆಚಾರ್ಯ

"Every soul is born divine" ಎನ್ನುತ್ತಾರೆ ವಿವೇಕಾನಂದರು. ಈ ಜಗತ್ತಿನಲ್ಲಿ ಹುಟ್ಟುವ ಪ್ರತಿ ಜೀವಿಯೂ ದೈವೀಕತೆಯ ಅಡಕಮುದ್ರೆಯೇ. ಆದರೆ ಆ ದೈವೀಕತೆಯ ರಾಗ ಸುಶ್ರಾವ್ಯವಾಗಿ ಹೊರಹೊಮ್ಮಿಸಲು ಪ್ರತಿ ಜೀವಿಯೂ ಅದಮ್ಯ ಆತ್ಮವಿಶ್ವಾಸದೊಂದಿಗೆ ಶೃತಿ ಸೇರಿಸಲೇಬೇಕು. ಅದಕ್ಕೆ ಮೊದಲ ಮೆಟ್ಟಿಲೇ ಬಾಲ್ಯ. ಪ್ರತಿ ಮಗುವಿನ ಮನಸ್ಸು ಬಾಲ್ಯದಲ್ಲೇ ಸರ್ವಾಂಗೀಣ ಅಭಿವೃದ್ಧಿ ಹೊಂದಿದರೆ ಮಾತ್ರ ಆ ಮಗು ಮುಂದೆ ಒಂದು ಆರೋಗ್ಯಕರ ಮನಸ್ಸನ್ನು ಹೊಂದಿ ದೈವೀಕತೆಯನ್ನು ಸಾಧಿಸುವೆಡೆ  ಎಡೆಯಿಡಬಲ್ಲದೇನೊ ಹಾಗೂ ಪ್ರಸ್ತುತ ಸಮಾಜದ ಸರ್ವತೋಮುಖ ಬೆಳವಣಿಗೆಯ ಕಣ್ಣುಗಳಾಗಿ ರಾಷ್ಟ್ರದ … Read more

ಮಾನಸಿಕ ಆರೋಗ್ಯಕ್ಕೆ ಬೇಕು ಮಕ್ಕಳ ಹಕ್ಕುಗಳು: ಡಾ. ವಿನಯ ಎ.ಎಸ್.

ಮಕ್ಕಳ ಶೋಷಣೆ ಹಿಂಸೆ ಮತ್ತು ದಬ್ಬಾಳಿಕೆಗೆ ಮುಖ್ಯ ಕಾರಣವೆಂದರೆ ಅವರುಗಳನ್ನು  ವ್ಯಕ್ತಿಗಳೆಂದು ಗುರುತಿಸಿ  ಅವರಿಗೂ ತಮ್ಮದೇ ಅದ ಭಾವನೆಗಳಿರುತ್ತವೆಂದು ಅರಿಯದೆ ಇರುವುದು. ತಾಯಿ ತಂದೆಯರೂ ಸೇರಿದಂತೆ ಬಹಳ ಕಡೆ ಏಟು ಸಿಟ್ಟು ಹಿಂಸೆ ಮಾನಸಿಕ ಒತ್ತಡಕ್ಕೆ ಒಳಗಾಗುವ ಅದರಿಂದ ತಮ್ಮ ಮಾನಸಿಕ ಸಮತೋಲನ ಕಳೆದುಕೊಂಡ ಮಕ್ಕಳು ಒರಟಾಗಿ ಬಿಟ್ಟೂ ಅಗೌರವದಿ೦ದ, ಬದುಕಿನೆಡೆಗೆ ನಿರ್ಭಿಡೆಯಿಂದ ವರ್ತಿಸತೊಡಗುತ್ತಾರೆ. ಈ ಪರಿಸ್ಥಿಗೆ ಸಮಾಜದ ನಾವೆಲ್ಲಾ ಹೊಣೆಗಾರರು. ಮಕ್ಕಳನ್ನು ಪ್ರೀತಿ ಅನುಕಂಪ ಗೌರವದಿ೦ದ ಕಾಣುವುದು ನಮ್ಮ ಕರ್ತವ್ಯ. ಹಾಗೆಯೇ ಅವರಿಗೆ ಹಕ್ಕುಗಳ ಬಗ್ಗೆ … Read more

ವಿದೇಶದಲ್ಲಿ ಮಕ್ಕಳ ಹಕ್ಕುಗಳು- ಸ್ಥಿತಿಗತಿ: ಶಶಿ ರಾವ್

ಆಸ್ಟ್ರೇಲಿಯಾ ಮದುವೆಯನ್ನು ಒಂದು ಬಂಧನವೆಂದು ಅಷ್ಟಾಗಿ ಇಷ್ಟಪಡದ ದೇಶ. ಇಲ್ಲಿ ಮಗುವಿಗಾಗಿ ಮದುವೆಯೇ ಆಗಬೇಕಿಲ್ಲ, ಸಾಮಾನ್ಯವಾಗಿ ಇಲ್ಲಿನ ಜನ ಡಿಫ್ಯಾಕ್ಟೋ ಅಥವಾ ಬರಿಯ ಪಾರ್ಟನರ್ಸ್ ಆಗಿಯೇ ಬಹಳಷ್ಟು ವರ್ಷ ಜೊತೆಯಲ್ಲಿ ಕಳೆಯುತ್ತಾರೆ. ಸರಿ ಸುಮಾರು ೪/೫ ವರ್ಷಗಳ ನಂತರ ಕೂಡುಜೀವನದಲ್ಲಿ ಬೇಸರ ಬಂದೊಡನೆ ಪರಸ್ಪರ ಒಪ್ಪಂದದಿಂದಲೋ, ಕಚ್ಚಾಡುತ್ತಲೋ ಬೇರೆಯಾಗುತ್ತಾರೆ. ಈ ಮಧ್ಯೆ ಒಂದೆರಡು ಮಕ್ಕಳ ಹೆತ್ತಿರುತ್ತಾರಾದ್ದರಿಂದ ಆ ಮಕ್ಕಳನ್ನು ಒಂದು ವಸ್ತುವಿನಂತೆ ಪರಿಗಣಿಸಿ ಅವುಗಳ ಲಾಲನೆ ಪಾಲನೆ, ಬೆಳೆಯುವ ಸ್ಥಳ, ಯಾರೊಡನೆ ಬೆಳೆಯ ಬೇಕೆಂಬುದೆಲ್ಲ ಪರಸ್ಪರ ಚರ್ಚೆಯಿಂದಲೋ … Read more

ಮಕ್ಕಳ ಸಹಾಯಕ್ಕೆ ಸದಾ ಸಿದ್ದ ನಾವು ಮತ್ತು 1098: ರೂಪ ಸತೀಶ್

ಸೌಮ್ಯ : ಅಪ್ಪನ ಕುಡಿತಕ್ಕೆ, ಸಾಲಗಳಿಗೆ ಬಲಿಯಾಗಿ ನಗರದಲ್ಲಿ ಮನೆಕೆಲಸಕ್ಕಿರುವ ೮ ವರುಷದ ಬಾಲಕಿ.  ರಾಜು : ಹೆತ್ತವರ ಆರನೇ ಕುಡಿ, ವಯಸ್ಸು ೧೧! ತನ್ನೂರ ಬಿಟ್ಟು ನಗರಕ್ಕೆ ಬಂದು ಯಾವುದೋ ಟೀ ಅಂಗಡಿಯಲ್ಲಿ ಕೆಲಸಕ್ಕಿದ್ದಾನೆ.  ದೀಪ : ತಾನು ಕಲಿಯುತಿದ್ದ ಶಾಲೆಯ ಶಿಕ್ಷಕನಿಂದಲೇ ಲೈಂಗಿಕ ದೌರ್ಜ್ಯನಕ್ಕೊಳಗಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಪಡೆಯುತ್ತಿರುವ ಮುಗುದೆ.  ರವಿ : ಪರೀಕ್ಷೆಯಲ್ಲಿ ಕಡಿಮೆ ಅಂಕಗಳ ಪಡೆದ ಕಾರಣ ಅಮ್ಮ ಬೈದಳೆ೦ದು, ಸಮಾಜದ ಒತ್ತಡಕ್ಕೆ ಮಣಿದು ಆತ್ಮಹತ್ಯೆಗೆ ಶರಣಾದ ೧೪ ವರುಷದ ಬಾಲಕ.  ಚೈತ್ರ … Read more

ಮಕ್ಕಳ ಹಕ್ಕುಗಳ ಬಗ್ಗೆ ಸಾಮಾನ್ಯರ ತಿಳುವಳಿಕೆ ಏನು ?

          ಶ್ರೀಮತಿ ವೀಣಾ ಶಿವಣ್ಣ ಹೇಳುತ್ತಾರೆ, “ನನಗೆ ತಿಳಿದ ಮಟ್ಟಿಗೆ ಮಕ್ಕಳಿಗೆ ತಾವು ಬದುಕಲು ಬೇಕಾಗುವ ಒಳ್ಳೆಯ ಸೌಕರ್ಯ (ಊಟ, ಬಟ್ಟೆ, ಮಲಗಲು ಬೆಚ್ಚನೆಯ ಹಾಸಿಗೆ, ಆಟಿಕೆಗಳು), ಅವರು ಪಡೆದುಕೊಳ್ಳುವ ವಿದ್ಯಾಭಾಸ ಹಾಗೂ ಆರೋಗ್ಯ ಚೆನ್ನಾಗಿರಿಸಲು ಬೇಕಾಗುವ ವೈದ್ಯಕೀಯ ವ್ಯವಸ್ಥೆಯನ್ನು ಮಕ್ಕಳ ಹಕ್ಕುಗಳು ಎನ್ನಬಹುದು. ಹಾಗೆಯೇ ಮಕ್ಕಳು ಯಾವುದೇ ರೀತಿಯ ದೌರ್ಜನ್ಯ, ದುರುಪಯೋಗ, ಪಕ್ಷಪಾತದಿಂದ ರಕ್ಷಣೆ ಪಡೆಯುವ ಹಕ್ಕನ್ನು ಹೊಂದಿರುತ್ತಾರೆ ಎನ್ನುವುದನ್ನು ಓದಿ ತಿಳಿದುಕೊಂಡಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾಗುವ … Read more

ಟಿ.ವಿ. ಶೋಗಳಲ್ಲಿ ನಮ್ಮ ಮಕ್ಕಳು: ಅಸ್ತಿತ್ವ ಲೀಗಲ್ ಟ್ರಸ್ಟ್

ಒಂಭತ್ತು ವರ್ಷದ ಆ ಮಗು ಆಫೀಸಿನೊಳಗೆ ಬಂದಾಗ ವಿದ್ಯುತ್ ಸಂಚಾರವಾದಂತೆ ಪಟ ಪಟ ಮಾತಾಡುತ್ತಾ ಸುತ್ತ ತಿರುಗುತ್ತಿದ್ದಳು. ಆ ಹುಡುಗಿ ಸಿನಿಮಾ ನಟನೆಗಾಗಿ ರಾಜ್ಯಪ್ರಶಸ್ತಿ ಪಡೆದ ಪುಟಾಣಿ ಪ್ರತಿಭೆ ಅದು ‘ನಾಳೆ ಶೂಟಿಂಗ್ ಇದೆ. ನನ್ನದೇ ಮೇನ್ ರೋಲ್. ಐದು ಕಾಸ್ಟ್ಯೂಂ ಬದಲಾಯಿಸಬೇಕು. ಅಪ್ಪಾ ಸಾಕಾಗ್ಹೋಗತ್ತೆ. ಪರವಾಗಿಲ್ಲ, ಮೇನ್ ರೋಲ್ ಅಂದ್ರೆ ಇದೆಲ್ಲ ಇದ್ದೇ ಇರುತ್ತಲ್ವಾ?.. ಹೀಗೆ ಆ ಮಗು ಏನೇನೋ ಮಾತಾಡ್ತಿತ್ತು. ಆ ವಯಸ್ಸಿಗೆ ಏನನಿಸುತ್ತೆ ಮತ್ತು ಏನು ಮಾತಾಡಬೇಕು ಅನ್ನೋ ಅರಿವೂ ಇಲ್ಲದ ವಯಸ್ಸು. … Read more

ಚುಟುಕಗಳು: ಶ್ರೀನಿಧಿ ಟಿ.ಕೆ., ವಿನೋದ್ ಕುಮಾರ್

1.     'ಮತ್ತೆ ಹೆಣ್ಣು' ಏನಿದು ದನಿಯಲ್ಲಿ ಸೋಲು?       ಯಾವ ಅರ್ಥದಲ್ಲಿ ನಾ ಗ೦ಡಾಗಿದ್ದರೆ ಮೇಲು?       ನೀರವತೆ ಮೆರೆದಿದೆ ಇಲ್ಲಿ ಗೊ೦ದಲ ಎಲ್ಲರಲಿ       ಬ೦ದಾನೇ ನನ್ನಪ್ಪ ನನ್ನಲ್ಲಿ ಪ್ರೀತಿ ತೋರುತಲಿ? 2.     ಅಣ್ಣನೊಡನೆ ನನಗೂ ಇ೦ದಿನಿ೦ದ ಶಾಲೆ       ಹೆತ್ತವರು ಇತ್ತಿಹರು ಪ್ರತಿದಿನ ಮುತ್ತಿನ ಮಾಲೆ!       ಎಲ್ಲದರಲೂ ನನಗೆ ಸಿಕ್ಕಿದೆ ಅಣ್ಣನ ಸಮಪಾಲು … Read more

ಮಕ್ಕಳಲ್ಲಿ ಸಾಮಾಜಿಕ ಅರಿವು ಮೂಡಿಸುವಲ್ಲಿ ನಮ್ಮದಿರಲಿ ಜವಾಬ್ದಾರಿ !: ವಿದ್ಯಾಶಂಕರ ಹರಪನಹಳ್ಳಿ

"ಅಪ್ಪಾ! ರೆಡ್ ಸಿಗ್ನಲ್… ನೀ ಗಾಡಿ ನಿಲ್ಸ್ಲೇ ಇಲ್ಲಾ!", "ಅಪ್ಪಾ ರಸ್ತೆ ಮಧ್ಯದಲ್ಲಿ ಕ್ರಾಸ್ ಮಾಡಬೇಡ… ಝಿಬ್ರಾ ಕ್ರಾಸಿಂಗ್ ಬಳಸಬೇಕು…", "ಅಮ್ಮಾ! ಕಸ ಪಕ್ಕದ ಖಾಲಿ ಸೈಟಿಗೆ ಹಾಕಬಾರದು, ನಮ್ ಟೀಚರ್ ಹೇಳಿದ್ದಾರೆ ಡಸ್ಟ್ ಬಿನ್ನಲ್ಲಿ ಹಾಕು!", "ಟಿವಿ ನೋಡಬೇಡ ಅಂತಿರಾ, ಮತ್ತೆ ನೀವು ಮಾತ್ರ ನೋಡಬಹುದಾ?", "ಅಪ್ಪಾ ಹೆಲ್ಮೆಟ್ ಹಾಕ್ಕೋ… ಪೊಲೀಸ್ ಹಿಡಿತಾರೆ!"… ಹೀಗೆ ಮಕ್ಕಳ ಪ್ರಶ್ನೆಗಳು ಮುಗಿಯುವುದೇ ಇಲ್ಲ. ಅವರ ಬಹುತೇಕ ಪ್ರಶ್ನೆಗಳು ದೊಡ್ಡವರ, ತಂದೆತಾಯಂದಿರ ನಿರ್ಲಕ್ಷಕ್ಕೆ ಒಳಗಾಗುವುದೇ ಹೆಚ್ಚು. ವಸ್ತುಸ್ಥಿತಿ ಹೀಗಿರುವಾಗ ಮಕ್ಕಳಲ್ಲಿ … Read more

ಶಾಲೆಯಲ್ಲಿನ ಶಿಕ್ಷೆಯೂ ದೌರ್ಜನ್ಯವೇ: ಡಾ. ಚೈತ್ರ ಕೆ.ಎಸ್.

ಎಂಟು ವರ್ಷದ ವರುಣ್‍ಗೆ ಎರಡು ದಿನದಿಂದ ಕೈ ಬೆರಳು ಊದಿ ಕೆಂಪಾಗಿದೆ. ಬರೆಯಲು, ತಿನ್ನಲು ಬೆರಳು ಮಡಚಲಾಗದ ಸ್ಥಿತಿ. ಕಾರಣ, ಹೋಂ ವರ್ಕ್ ಮಾಡಿಲ್ಲ ಎಂದು ಡಸ್ಟರ್‍ನಿಂದ ಟೀಚರ್ ಹೊಡೆದಿದ್ದು. ಆರು ವರ್ಷದ ಭಾವನಾ, ಶಾಲೆ ಎಂದರೆ ನಿದ್ದೆಯಲ್ಲೂ ಬೆಚ್ಚಿ ಬೀಳುತ್ತಾಳೆ. ಎದ್ದೊಡನೆ ಗಲಾಟೆ-ಕಿರುಚಾಟ -ಹಠ. ಅವಳ ಎಲ್ಲಾ ತೊಂದರೆಗೆ ಮೂಲ ಶಾಲೆಯಲ್ಲಿ ಪದೇ ಪದೇ `ನೋಡೋಕೆ ಕರಿತಿಮ್ಮಿ, ಓದೋದ್ರಲ್ಲೂ ದಡ್ಡಿ' ಎಂದು ಹಂಗಿಸುವ ಟೀಚರ್. ಕೆಳಜಾತಿಗೆ ಸೇರಿದ ಹತ್ತು ವರ್ಷದ ರಂಗಿಗೆ ಶಾಲೆ ಬಿಟ್ಟ ನಂತರ … Read more

ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆಯ ಸಾಧ್ಯತೆಗಳು: ಡಾ.ವಾಣಿ ಕಂಟ್ಲಿ

ಮಕ್ಕಳೆಂದರೆ ಯಾರು ಅಂದುಕೊಂಡ ಕೂಡಲೇ ಮಕ್ಕಳೆಂದರೆ ದೇವರು, ಕುಸುಮಗಳು, ಉತ್ಸಾಹದ ಚಿಲುಮೆಗಳು, ಬದುಕು, ಸಮಾಜ ನೀಡಿರುವ ಹಲವಾರು ಗುಣವಿಷೇಶಣಗಳು ನೆನಪಾಗುತ್ತವೆ. ನಮಗೆಲ್ಲಾ ಮಕ್ಕಳೆ ಸರ್ವಸ್ವ, ಮಕ್ಕಳಿಗಾಗಿ ನಿನ್ನನ್ನು ಸಹಿಸುತ್ತಿದ್ದೇನೆ ಎನ್ನುವ ಜನರು ಹೆಚ್ಚಿನ ಸಂಖ್ಯೆಯಲ್ಲಿಯೇ ಸಿಗುತ್ತಾರೆ. ಮಕ್ಕಳಿಗಾಗಿ ಇತರರನ್ನು ಸುಲಿದು, ಕೊಂದು ಬಾಚಿ ತಿಂದವರೂ ಇದ್ದಾರೆ.  ಮಕ್ಕಳಿಗಾಗಿ ಕದ್ದು, ಭ್ರಷ್ಟರಾಗಿ, ವಂಚಕರಾಗಿ ಆಸ್ತಿಮಾಡಿದವರೆಷ್ಟಿಲ್ಲ. ಮಗಳ ಮದುವೆಗೆಂದು, ವರದಕ್ಷಿಣೆಗೆಂದು ಸಾಲಸೋಲಮಾಡಿ, ಮನೆಮಾಡಿ ದಿವಾಳಿಯಾದವರೆಷ್ಟಿಲ್ಲ. ಮಗಳು ಓಡಿಹೋದಳೆಂದು, ಮಗ ಸಾಕಲಿಲ್ಲವೆಂದು ಕೊರಗಿ ಸೊರಗಿದವರೆಷ್ಟಿಲ್ಲ. ಸಮಾಜದಲ್ಲಿ ಎಲ್ಲರೂ ಮಾಡುವುದು ಹೊಟ್ಟೆಗಾಗಿ ಮಾತ್ರ … Read more

ಮಕ್ಕಳು ಮತ್ತು ಯುದ್ಧ ನೀತಿಯ ಒಂದು ಪುಟ: ರುದ್ರೇಶ್ವರ ಸ್ವಾಮಿ

`ಮಕ್ಕಳು ಮತ್ತು ಯುದ್ಧ ನೀತಿ’- ಈ ಶೀರ್ಷಿಕೆಯನ್ನು ಓದುತ್ತಿದ್ದಂತೆ, ಇಲ್ಲಿ ಏನೋ ಒಂದು ಗೊಂದಲವಿದೆ ಅನ್ನಿಸುತ್ತದೆ. ಒಂದೇ ಗುಂಪಿಗೆ ಸೇರದ ಯಾವುದೋ ಒಂದು ಹೊರಗಿನದು ಇಲ್ಲಿ ಬಂದು ಈ ಗೊಂದಲ ಸೃಷ್ಟಿಸಿದಂತೆ ಕಂಡುಬರುತ್ತದೆ- ಮೊಸರಲ್ಲಿ ಕಲ್ಲು ಸಿಕ್ಕ ಹಾಗೆ. ಮಕ್ಕಳಿಗೂ ಯುದ್ಧಕ್ಕೂ ಯಾವ ಬಾದರಾಯಣ ಸಂಬಂಧ?  ಆದರೆ ಆಳದಲ್ಲಿ ಅದರ ಕಥೆ ಬೇರೆಯದೇ ಆಗಿದೆ. ಮಕ್ಕಳು ಮತ್ತು ಯುದ್ಧ (ನೀತಿ)- ಇದು ಎಂತಹ ವೈರುಧ್ಯಗಳುಳ್ಳ ಸಮಸ್ಯೆ. ಈ ವೈರುಧ್ಯವನ್ನು, ಬದುಕಿನ ಈ ಅಣಕವನ್ನು ನಾವು ಆಳಕ್ಕಿಳಿಯದೆ ಅರ್ಥಮಾಡಿಕೊಳ್ಳುವುದು … Read more

ನಮ್ಮ ಪುರಾಣಗಳಲ್ಲಿ ನಮ್ಮ ಮಕ್ಕಳು: ದತ್ತ ರಾಜ್

ಹದಿನೆಂಟು ಪುರಾಣಗಳು ಹಾಗೂ ಅವುಗಳ ಉಪಪುರಾಣಗಳು ಭಾರತೀಯ ಇತಿಹಾಸಗ್ರಂಥಗಳೇ ಆಗಿದ್ದರೂ  ಕೆಲವು ಪುರಾಣಗಳಲ್ಲಿ ಪರಸ್ಪರ ವಿರೋಧಗಳಿರುವುದರಿಂದ, ಅನೇಕ ಪ್ರಕ್ಷಿಪ್ತತೆಗಳು ಇರುವುದರಿಂದ ಅವುಗಳನ್ನು ಸಂಪೂರ್ಣವಾಗಿ ಸತ್ಯವಾದ ಇತಿಹಾಸಗಳೆಂದು ಪರಿಗಣಿಸಲಾಗುವುದಿಲ್ಲ. ಆದರೆ ರಾಮಾಯಣ ಮತ್ತು ಮಹಾಭಾರತ ಇವೆರಡನ್ನುಯಥಾರ್ಥ ಇತಿಹಾಸ ಗ್ರಂಥಗಳು ಎಂದು ಗುರುತಿಸಲಾಗಿದೆ. ಈ ಇತಿಹಾಸ ಪುರಾಣಗಳನ್ನು ಅವಲೋಕಿಸಿದಾಗ  ಪ್ರಾಚೀನ ಭಾರತದ ಜನರು ಎಂತಹ ಜೀವನ ನಡೆಸುತ್ತಿದ್ದರು.  ಸಮಾಜದ ಆರ್ಥಿಕ-ಪಾರಿವಾರಿಕ ಸ್ಥಿತಿಗತಿಗಳು ಹೇಗಿದ್ದವು ಎನ್ನುವುದು ಅರಿವಿಗೆ ಬರುತ್ತದೆ. ಪ್ರಾಚೀನ ಭಾರತದಲ್ಲಿಯೂ ಮಕ್ಕಳ ಮೇಲೆ ಇಂದಿನಂತೆ ದೌರ್ಜನ್ಯಗಳು ನಡೆಯುತ್ತಿದ್ದವಾ..?  ಆಗಿನ ಕಾಲದ … Read more

ಮಕ್ಕಳ ಹಕ್ಕುಗಳ ರಕ್ಶಣೆಯಲ್ಲಿ ಮಾಧ್ಯಮದ ಪಾತ್ರ: ಜ್ಯೋತಿ ಇರವರ್ತೂರು

ಇತ್ತೀಚೆಗೆ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನೋಡಿದ್ರೆ ಮಕ್ಕಳಿಗೂ ಹಕ್ಕುಗಳು ಇದೆಯಾ ಅನ್ನಿಸುತ್ತೆ. ತಮ್ಮವರಿಂದ, ಸಮಾಜದಿಂದ ಹೀಗೆ ತಮ್ಮ ಹಕ್ಕುಗಳೇನೆಂದು ಅರಿವು ಮೂಡುವ ಮುನ್ನ ಕನಸುಗಳ ಬಣ್ಣ ಕಳೆದುಕೊಳ್ಳುತ್ತಾರೆ ಈ ಚಿಣ್ಣರು. ಇಂತಹ ಸಂದರ್ಭದಲ್ಲಿ ಅರಿವು ಮೂಡಿಸಿ ಅವರ ಭವಿಷ್ಯ ದಾರಿ ಅರ್ಥಪೂರ್ಣವಾಗಿಸಲು ಮಾಧ್ಯಮದ ಪಾತ್ರ ಬಹಳ ದೊಡ್ಡದು.  ಶಾಲೆಯಲ್ಲಿ ಪುಟ್ಟ ಬೆನ್ನಿಗೆ ಬೆಟ್ಟದ ಹೊರೆ, ಬದುಕಿನ ಬಣ್ಣ ಕಳೆದುಕೊಂಡ ಬಾಲಕಾರ್ಮಿಕರು ;  ಕಾಫಿ ಕುಡಿಯಲೆಂದು ಹೋಟೇಲಿಗೆ ಹೋದಾಗ ಟೇಬಲ್ ಒರೆಸುವ ಪುಟ್ಟ ಕಂದನನ್ನು ನೋಡಿ ನಿಮ್ಮ … Read more

ಪರಿಸರ ವಿನಾಶ ಮತ್ತು ಆರ್ಥಿಕ ಅಸಮಾನತೆಯಿಂದ ನಾಗರೀಕತೆಯ ಅಳಿವು: ಜೈಕುಮಾರ್.ಹೆಚ್.ಎಸ್

ಪ್ರಳಯ ಸಂಭವಿಸಿ ಇಡೀ ವಿಶ್ವವೇ ವಿನಾಶಗೊಳ್ಳುತ್ತದೆ ಎಂದು ಭವಿಷ್ಯ ಹೇಳಿದ ಸ್ವಾಮೀಜಿ-ಜ್ಯೋತಿಷಿಗಳು ಪ್ರಳಯ ಸಂಭವಿಸದೇ ಇದ್ದಾಗ ಸಬೂಬು ಹೇಳುವುದನ್ನು ಗಮನಿಸಿದ್ದೇವೆ. ವಿಶ್ವದಲ್ಲಿ ಮನುಷ್ಯ ಸಮಾಜ ಹೇಗೆ ವಿನಾಶಗೊಳ್ಳುತ್ತದೆ ಎಂಬುದಕ್ಕೆ ಹಲವು ವೈಜ್ಞಾನಿಕ ಸಂಶೋಧನೆಗಳು ನಡೆಯುತ್ತಲೇ ಇವೆ. ಮನುಷ್ಯ ಸಮಾಜವು ಒಂದೊಂದು ಅವಧಿಯಲ್ಲಿ ಸವೆಸಿರುವ ಕಾಲಘಟ್ಟವನ್ನು ನಾಗರೀಕತೆ ಎನ್ನುತ್ತೇವೆ. ಮಾನವ ಇತಿಹಾಸದ ಉದ್ದಕ್ಕೂ ಹಲವು ನಾಗರೀಕತೆಗಳು ಏಳಿಗೆ ಕಂಡು ಅವಸಾನ ಹೊಂದಿವೆ. ಮಾನವ ನಾಗರೀಕತೆಗಳು ಹೇಗೆ ಅವಸಾನ ಕಾಣುತ್ತವೆ ಎಂಬುದರ ಕುರಿತು ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆಯ ನೆರವಿನಿಂದ … Read more

ನ್ಯಾನೊ ದ್ರವ; ವಿಜ್ಞಾನಿಗಳಲ್ಲಿ ಹುಟ್ಟಿಸಿರುವ ಕೌತುಕತೆಯ ಮಾಯದ್ರವ: ಪ್ರಸನ್ನ ಗೌಡ

ನೀವು ನ್ಯಾನೊ ಕಾರ್ ಬಗ್ಗೆ ಕೇಳಿದ್ದೀರಿ, ನ್ಯಾನೊ ಸಿಮ್ ಬಗ್ಗೆ ಕೇಳಿರಬಹುದು ಆದರೆ ನ್ಯಾನೊ ದ್ರವದ ಬಗ್ಗೆ ಕೇಳಿದ್ದೀರಾ?. ಏನಿದು ನ್ಯಾನೊ ದ್ರವ (Nanofluid) ಎಂದು ನಿಮ್ಮಲ್ಲಿ ಕೌತುಕತೆ ಹುಟ್ಟುವುದು ಸಹಜ.  ನಾವು ಬಳಸುವ ದಿನನಿತ್ಯದ ಹಲವಾರು ಉಪಕರಣಗಳಾದಂತಹ ರೆಫ್ರೀಜಿರೇಟರ್, ಎಸಿ/ಏರ್‌ಕಂಡಿಷನ್, ಲ್ಯಾಪ್‌ಟಾಪ್/ಕಂಪ್ಯೂಟರ್ ಹಾಗೂ ಕಾರ್ ರೇಡಿಯೇಟರ್‌ಗಳಲ್ಲಿ ಶಾಖವರ್ಗಾವಣೆಯಾಗುವುದನ್ನು ಗಮನಿಸಿದ್ದಿರಾ?.  ಕಂಪ್ಯೂಟರ್/ಲ್ಯಾಪ್‌ಟಾಪ್‌ಗಳಲ್ಲಿ ಕೂಲಿಂಗ್ ಪ್ಯಾನ್ ಬಳಸುವುದರಿಂದ ಗಾಳಿಯಿಂದ ಶಾಖವರ್ಗಾವಣೆಯಾಗುತ್ತದೆ. ರೆಫ್ರೀಜಿರೇಟರ್‌ನಲ್ಲಿ ಸಿ.ಎಫ್.ಸಿ(ಕ್ಲೋರೊ ಪ್ಲೋರೊ ಕಾರ್ಬನ್) ಎಂಬ ರಾಸಯನಿಕ ದ್ರವವನ್ನು ಮತ್ತು ಕಾರ್ ರೇಡಿಯೇಟರ್‌ನಲ್ಲಿ ನೀರನ್ನು ಬಳಸಿ ಶಾಖವರ್ಗಾವಣೆ … Read more

ಆಯ ತಪ್ಪಿದ್ರೆ ಅಪಾಯ (ಅಳಿದುಳಿದ ಭಾಗ): ಎಂ.ಎಸ್.ನಾರಾಯಣ.

(ಇಲ್ಲಿಯವರೆಗೆ…) ಕೆಲವರಿಗೆ ಇದೆಲ್ಲಾ ವಿವರಣೆ, ಸ್ಪಷ್ಟೀಕರಣಗಳು ರೇಜಿಗೆಯೆನಿಸಬಹುದು. ಹೀಗೆ ದ್ವಂದ್ವ, ಗೊಂದಲ ಹಾಗೂ ಸಂಕೀರ್ಣತೆಗಳಿಂದ ಕೂಡಿದ ಹಲವಾರು ಸಿದ್ಧಾಂತಗಳೇಕೆ ಬೇಕು? ಸರಳವಾದ ಒಂದು ಸಿದ್ಧಾಂತ ಸಾಲದೇ? ಎಂದೂ ಪ್ರಶ್ನಿಸಬಹುದು. ಆದರೆ, ಸತ್ಯದ ಸಮಗ್ರ ವಿವರಣೆಯು ಸತ್ಯದ ಎಲ್ಲ ಮಗ್ಗುಲುಗಳನ್ನೂ ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಅಲ್ಲದೆ, ಅಂತಹ ಅತಿ ಸರಳೀಕರಣಗಳಿಂದ ಆಗಬಹುದಾದ ಅಪಾಯಗಳನ್ನೂ ನಿರ್ಲಕ್ಷಿಸಲಾಗುವುದಿಲ್ಲ. ಈಗ ಉದಾಹರಣೆಗೆ ಬರೀ ಕರ್ಮವಾದವನ್ನು ಅಳವಡಿಸಿಕೊಂಡೆವೆಂದುಕೊಳ್ಳಿ. ಆಗ ಎಲ್ಲ ಹೊಣೆಗಾರಿಕೆಯೂ ನಮ್ಮದೇ ಎಂದಾಗುತ್ತದೆ. ಹಾಗಾದೊಡನೆ, ‘ಎಲ್ಲವೂ ನನ್ನಿಂದಲೇ,  ನಾನಿಲ್ಲದಿದ್ದರೇನೂ ಇಲ್ಲ, ನಾನೇ ಸರ್ವಸ್ವ’, ಎಂದು … Read more

ಲಿಂಗೇರಿ ವಿಜಿಯ ಗುಟ್ಟು: ವಾಸುಕಿ ರಾಘವನ್

ತನ್ನ ಅಜ್ಜನ ಭಾವಚಿತ್ರದ ಮುಂದೆ ನಿಂತಿದ್ದ ವಿಜಿಯ ಮುಖದಲ್ಲಿ ತೃಪ್ತಿಯ ಮಂದಹಾಸವಿತ್ತು. "ಅಜ್ಜ, ನಿನ್ನ ಮಾತು ನಿಜ ಆಯ್ತು  ನೋಡು. ನೀನು ಹೇಳ್ತಿದ್ದ ಆ ದಿನ ಇವತ್ತು ಬಂತು" ಅಂದವನ ಕಣ್ಣಂಚು ಸ್ವಲ್ಪ ತೇವಗೊಂಡಿತ್ತು. ಅಜ್ಜ ಪಟ್ಟ ಕಷ್ಟಕ್ಕೆ, ಅನುಭವಿಸಿದ ನಿರಾಶೆ, ಅವಮಾನ, ಮೂದಲಿಕೆ ಇವೆಲ್ಲದಕ್ಕೂ ಒಂದು ಚಿಕ್ಕ ಸಮಾಧಾನ ಅನ್ನುವಂತೆ ಇತ್ತು ಆ ದಿನ. ವಿಜಿಯ ದೆಸೆಯಿಂದ ಲಿಂಗೇರಿ ಅನ್ನುವ ಆ ಪುಟ್ಟ ಹಳ್ಳಿಯ ಹೆಸರು ಜಗತ್ತಿನಾದ್ಯಂತ ಹರಡಿತ್ತು. ಯಾವುದೋ ಟಿವಿ ಚಾನಲ್ಲಿನವರು "ವಸ್ತ್ರ ಜಾದೂಗಾರ … Read more