ಜಾತಿ! :ಡಾ. ಗವಿ ಸ್ವಾಮಿ

  ನಾಗರಹೊಳೆ ಮತ್ತು ಬಂಡಿಪುರ ರಾಷ್ಟ್ರೀಯ ಉದ್ಯಾನವನಗಳ ನಡುವೆ ಓಂಕಾರ್ ರೇಂಜ್ ಎಂಬ ಅರಣ್ಯ ಇದೆ. ಅದರ ಸೆರಗಿನಲ್ಲಿ ಶಿವಕುಮಾರಪುರ ಎಂಬ ಗ್ರಾಮ ಇದೆ. ಆ ಗ್ರಾಮದ ಜನರಿಗೆ ನಿತ್ಯವೂ ಕಾಡುಪ್ರಾಣಿಗಳೊಂದಿಗೆ ಸಂಘರ್ಷ ನಡೆಸಬೇಕಾದ ಪರಿಸ್ಥಿತಿ . ಇಂಡೋ-ಪಾಕ್ ಗಡಿಗಿಂತ ಒಂದು ಕೈ ಹೆಚ್ಚು ಉದ್ವಿಗ್ನತೆಯನ್ನು ಇಲ್ಲಿ ಕಾಣಬಹುದು. ಕಾಡು ಪ್ರಾಣಿಗಳೇ ಇಲ್ಲಿ ರೈತರ ಪಾಲಿನ terrorist ಗಳು! ರೈತರಿಗೂ ಫಾರೆಸ್ಟಿನವರಿಗೂ ಇಲ್ಲಿ ನಿರಂತರ ತಿಕ್ಕಾಟ. ನಮ್ಮ ದನಗಳನ್ನು ಫಾರೆಸ್ಟಿನ  ಬೌಂಡರಿ ದಾಟಲು ಬಿಡುವುದಿಲ್ಲ; ಹಿಂದೆಲ್ಲಾ ಸಣ್ಣ ಪುಟ್ಟ ಕಟ್ಟಿಗೆ … Read more

ಬಿಳಿಯ ಮರ್ಸಿಡೀಸ್ ಬೆಂಝ್: ಉಪೇಂದ್ರ ಪ್ರಭು

  ’ಏನ್ ಬಾಬಾ ನೀನು, ಯಾವಾಗ ನೋಡಿದ್ರೂ ಬರೇ ಕನ್ನಡ ಕಥೆಗಳನ್ನೇ ಬರೀತೀಯಾ. ಇಂಗ್ಲಿಷ್‌ನಲ್ಲಿ ಬರೆದ್ರೆ ನಾವೂ ಓದ್‌ಬಹುದಲ್ವಾ’ ಕಂಪ್ಯೂಟರ್ ಎದುರು ಕೂತು ಟೈಪ್ ಮಾಡುವಲ್ಲಿ ಮಗ್ನನಾಗಿದ್ದ ನನ್ನನ್ನು ರೇಗಿಸುತ್ತಾಳೆ ಹದಿಹರೆಯಕ್ಕೆ ಕಾಲಿಡುತ್ತಿರುವ ದ್ವಿತೀಯ ಸುಪುತ್ರಿ ಸ್ವಾತಿ. ’ಏ ಹುಡ್ಗಿ, ಕಥೆಗಳಲ್ಲಿ ಕನ್ನಡ ಕಥೆ ಇಂಗ್ಲಿಷ್ ಕಥೆ ಎಂದೇನೂ ಇಲ್ಲ. ಕನ್ನಡ ಕಥೆಗಳನ್ನೇ ಬರೀತೀಯಾ ಅನ್ನುವ ಬದಲು ಕನ್ನಡದಲ್ಲೇ ಕಥೆಗಳನ್ನು ಬರೀತೀಯಾ ಅನ್ನೋದು ವ್ಯಾಕರಣಬದ್ಧವಾಗುತ್ತದೆ’- ನನ್ನ ಕನ್ನಡ ಪಾಂಡಿತ್ಯವನ್ನು ಕನ್ನಡ ಓದಲು ಬರೆಯಲು ಬಾರದ ನನ್ನ ಹೆಂಡತಿ … Read more

ಕತೆ – ಚಿತ್ರಕತೆ – ನಿರ್ದೇಶಕ..:ಮಹದೇವ ಹಡಪದ್

  ಒಂದು ಕೃತಿಯ ಜೀವಾಳವೆಂದರೆ ಸಾರ್ವತ್ರಿಕ ಕಾಲವನ್ನು ಹಿಡಿದಿಡುವ ಶಕ್ತಿಯನ್ನು ಹೊಂದಿರುವಂಥದ್ದು. ಆಳವಾದ ಅನುಭವ, ಜ್ಞಾನದ ಅನುಭಾವ, ಸಂತೃಪ್ತ ಭಾವಗಳು ಎಲ್ಲಿ ಮೇಳೈಸಿಕೊಂಡಿರುತ್ತವೋ ಅಲ್ಲಿ ಪ್ರದರ್ಶನಕ್ಕಿಂತ ಪರಾಮರ್ಶನಕ್ಕೆ ಹೆಚ್ಚಿನ ಆದ್ಯತೆ ಇರುತ್ತದೆ. ಕಲಾಕಾರರು ತಮ್ಮ ಅನುಭವ ಮತ್ತು ಜೀವನದ ವಿರೋಧಾವಿರೋಧಗಳನ್ನೆಲ್ಲ ಕೃತಿಯಾಗಿಸುವ ನಿಟ್ಟಿನಲ್ಲಿಯೇ ಉತ್ಸುಕರಾಗಿರುತ್ತಾರೆ. ಅಭಿವ್ಯಕ್ತಿ ಅನ್ನುವುದು ಕೂಡ ಕಲಾದೃಷ್ಟಿಯ ಅಂತಃಪಠ್ಯವಾಗಿ ಸತ್ಯಶೋಧನೆ  ಹುಡುಕಾಟದಲ್ಲಿ ತೊಡಗಿರುತ್ತದೆ. ವಾಸ್ತವವನ್ನು ಗ್ರಹಿಸುವುದೇ ಸಿನೆಮಾ ಮಾರ್ಗದಲ್ಲಿ ಮೂಲ ಪಠ್ಯವಾಗಿರುತ್ತದೆ. ಲೂಮಿಯೇರ್ ಸಹೋದರರು ತಮ್ಮ ಮೊದಲ ಚಿತ್ರಗಳನ್ನು ಇಂಥ ವಾಸ್ತವಿಕ ಅಂಶಗಳನ್ನು ಸೆರೆಹಿಡಿಯುವ … Read more

ಮದುವೆಯೆಂಬುದೊಂದು ಖಾಸಗಿ ಸಂಗತಿ (ಮೂಲ: ಚಿನುವ ಅಚಿಬೆ, ಅನುವಾದ: ಮೋಹನ್ ವಿ ಕೊಳ್ಳೇಗಾಲ)

  ಅಪರಾಹ್ನದ ಹೊತ್ತಿನಲ್ಲಿ ಲಾಗೋಸ್ ಪಟ್ಟಣದ ಕಸಂಗ ಬೀದಿಯ ತನ್ನ ಕೊಠಡಿಯಲ್ಲಿ ಪಕ್ಕ ಕುಳಿತಿದ್ದ ನಾಮೇಕಾನಿಗೆ ನೇನೆ ಕೇಳಿದಳು – ‘ನಿಮ್ಮ ತಂದೆಗೆ ಇನ್ನೂ ಪತ್ರ ಬರೆದಿಲ್ಲವೇ?’ ‘ಇಲ್ಲ, ನಾನೂ ಅದರ ಬಗ್ಗೆಯೇ ಯೋಚಿಸುತ್ತಿರುವೆ. ರಜೆಗೆಂದು ಊರಿಗೆ ಹೋದಾಗ ಹೇಳುವುದು ಸರಿ ಎನಿಸುತ್ತಿದೆ’ ‘ಯಾಕೆ? ನಿನ್ನ ರಜೆಗೆ ಇನ್ನೂ ಆರು ವಾರಗಳು ಬೇಕು. ಈ ಖುಷಿಯ ವಿಚಾರ ನಿಮ್ಮ ತಂದೆಗೆ ಬೇಗ ಗೊತ್ತಾಗಲಿ’ ಕೆಲ ಕ್ಷಣ ಮೌನವಾದ ನಾಮೇಕಾ ಪದಗಳಿಗೆ ತಡಕಾಡುವವನಂತೆ ಮಾಡಿ ಮಾತನಾಡಿದ – ‘ಈ … Read more

ಕಣ್ಣುಗಳನ್ನು ನೋಡಿದೆ ಕಣ್ಣಾಲಿಗಳಲ್ಲಿ ನೀರಾಡುತ್ತಿತ್ತು: ಡಾ. ಗವಿ ಸ್ವಾಮಿ

  ಮೊನ್ನೆ ಒಬ್ಬ ರೈತ ಎತ್ತುಗಳನ್ನು ಹೊಡೆದುಕೊಂಡು ಬಂದಿದ್ದ. ಎತ್ತುಗಳು ಕುಂಟುತ್ತಿದ್ದವು. ಕಾಲುಗಳಲ್ಲಿ ಗಾಯಗಳಾಗಿದ್ದವು. ಏನಪ್ಪಾ ಆಯ್ತು.. ಇಷ್ಟೊಂದು ಗಾಯಗಳಾಗಿವೆಯಲ್ಲ ಅಂದೆ. ''ಯಾನೇಳ್ಳಿ ಸೊಮಿ ಎಲ್ಲಾ ನಮ್ ಹಣಬರ'' ಅಂದು ಹಣೆ ಕುಟ್ಟಿಕೊಂಡ. ಅದೇನ್ ಸ್ಪಷ್ಟವಾಗಿ ಹೇಳಪ್ಪ ಅಂದೆ. '' ಓದುಡ ಓದುಡ ಅಂತ್ ಬಡ್ಕಂಡಿ… ಬಡ್ಡಿಕೂಸು ಕಿಂವಿಗೇ ಹಾಕನಿಲ್ಲ… ಎಸ್ಸೆಲ್ಸಿ ಪೈಲ್ ಮಾಡ್ಕತು. ನಿನ್ ಹಣಾಲ್ ಬರದಾಗಾಬುಡು ನಡ ಆರಂಬನ್ಯಾರು ಕಲ್ತಗ ಅಂತ ಆರಂಬ ಕಲಸ್ದಿ'' '' ಬಡ್ಡಿಕೂಸು ಇವತ್ಯಾನ್ ಮಾಡ್ತು ಅಂದ್ರ.. ಕಟ್ಟಿರ ಏರ್ನೂ … Read more

ಇವ ಸುಮ್ನೇ ಗೀಚ್ತಾನೆ, ಸೀರಿಯಸ್ ಆಗ್ಬೇಡಿ…: ಎಂ. ಆರ್. ಸಚಿನ್

ಗುರುಭ್ಯೋ ನಮಃ ಅದೊಂದು ಕಾಲವಿತ್ತು. ಗುರುಗಳು ಎಂದರೆ ಸಾಕ್ಷಾತ್ ದೇವರೇ ಎಂಬ ಭಾವನೆ ಜನರಲ್ಲಿತ್ತು. ’ಹರ ಮುನಿದರೂ ಗುರು ಕಾಯ್ವನು’ ಎಂಬಾ ನಂಬುಗೆಯಿತ್ತು. ಮೇಲಾಗಿ ಗೌರವವಿತ್ತು, ಆದರವಿತ್ತು. ಆದರೆ,,, ಕಾಲ ಬದಲಾಯ್ತೋ, ಜನರೇ ಚೇಂಜ್ ಆದ್ರೋ ಗೊತ್ತಾಗ್ಲಿಲ್ಲಾ, ಗುರು ಅನ್ನೋ ಪದವೇ ಇಂದು ಏನೇನೋ ಆಗೊಗಿದೆ. "ಬಾ ಗುರು’, "ತೊಗೋ ಗುರು", "ಮಗಾ ಹೊಡಿ ಗುರು" ಮುಂತಾದ ಪದಗಳನ್ನ ನಿಮ್ಮಾ ಆಸುಪಾಸಲ್ಲಿ ಕೇಳದ ಕಿವಿಗಳಿದ್ರೆ,  ಅದಕ್ಕೆರಡು ಲೀಟರ್ ಚಿಮಣಿ ಎಣ್ಣೆ ಹಾಕಿಸಿ ಕಿಲಿನು ಮಾಡಿಸಿ, ಪುಣ್ಯ ಕಟ್ಕಳಿ. … Read more

ಮೊದಲ ಸೂರ್ಯೋದಯ: ಪ್ರಜ್ವಲ್ ಕುಮಾರ್

  ವಾರದ ಕೊನೆ ಬಂತು ಅಂದ್ರೆ ಫ್ರೆಂಡ್ಸ್ ಎಲ್ಲಾ ಒಟ್ಟಾಗಿ ಸೇರಿ ಟ್ರಿಪ್ ಹೋಗೋದು ಕಾಮನ್ ಆಗಿದೆ. ಅದೇ ರೀತಿ ನಮ್ಮ ಗುಂಪೊಂದು ರಾತ್ರಿ ಟ್ರೆಕ್ಕಿಂಗಿಗೆ ಹೊರಟು ನಿಂತ್ವಿ. ಈ ಸಲ ಹೋಗೋಣಾ ಅನ್ಕೊಂಡಿದ್ದು ಚಂದಗಿರಿ ಅನ್ನುವ ಜಾಗಕ್ಕೆ. ಹಾಸನಕ್ಕೆ ಹೋಗುವ ದಾರಿಯಲ್ಲಿರುವ ಈ ಜಾಗವನ್ನು ನಮ್ಮ ಗುಂಪಲ್ಲಿ ಒಬ್ಬನನ್ನು ಬಿಟ್ಟರೆ ಬೇರೆ ಯಾರೂ ನೋಡಿರ್ಲಿಲ್ಲ. ಚಂದಗಿರಿಯ ತುದಿಯಲ್ಲಿ ಸೂರ್ಯೋದಯ ತುಂಬಾ ಚೆನ್ನಾಗಿ ಕಾಣುತ್ತೆ ಅನ್ನೋದನ್ನ ಕೇಳಿದ್ದ ನಾವು ಈ ಸಲ ಆ ಸೂರ್ಯೋದಯಕ್ಕೆ ಸಾಕ್ಷಿಯಾಗಲಿದ್ದೆವು. ಸೂರ್ಯ … Read more

ಕಟ್ಟೆಯಲ್ಲೊ೦ದಿಷ್ಟು ಹರಟೆ: ವೆಂಕಟೇಶ್ ಪ್ರಸಾದ್

  ಬೆ೦ಗಳೂರಿನಲ್ಲಿ ಆರು ತಿ೦ಗಳ ಬಿಡುವಿಲ್ಲದ ಕೆಲಸದ ಬಳಿಕ ತುಸು ವಿಶ್ರಾ೦ತಿ ಬಯಸಿ ಊರಿಗೆ ಬ೦ದಿದ್ದೆ. ಈ ಆರು ತಿ೦ಗಳಿನಲ್ಲಿ ಓದುವುದು, ಬರೆಯುವುದು ಎರಡೂ ಉದಾಸೀನವೆ೦ಬ ಹೊದಿಕೆ ಹೊದ್ದುಕೊ೦ಡು ಮಕಾಡೆ ಮಲಗಿತ್ತು! ಈ ಬಾರಿ ಏನಾದರು ಬರೆಯೋಣವೆ೦ದು ಲ್ಯಾಪ್ ಟಾಪ್ ನೆದುರು ಫ್ಯಾನಿನ ಕೆಳಗೆ ಕುಳಿತಿದ್ದೆ, ಏನಾಯಿತೊ ಏನೋ ಧುತ್ತನೆ ಕರೆ೦ಟ್ ಹೋಯಿತು. ಬಿಸಿಲ ಬೇಗೆಗೆ ಬೆವರ ಪ್ರವಾಹ ಪ್ರಾರ೦ಭವಾಯಿತು, ತುಸು ಬಾಯಾರಿದ೦ತಾಗಿ ನೀರು ಕುಡಿಯಲು ಅಡುಗೆ ಮನೆಗೆ ಹೋದರೆ ಫಿಲ್ಟರ್ ನಲ್ಲಿ ನೀರು ಖಾಲಿಯಾಗಿತ್ತು. ಸರಿ, … Read more

ಐಪಿಎಲ್‌ನ ಕೊಬ್ಬಿದ ಕಾಡುದನಗಳು ಮತ್ತು ಹೆನ್ರಿ ಒಲಾಂಗೋ:ವಿ.ಆರ್.ಕಾರ್ಪೆಂಟರ್

ಸುಮಾರು ಹತ್ತು ವರ್ಷಗಳ ಮಾತು. ಶಾರ್ಜಾದಲ್ಲಿ ನಡೆದ ಭಾರತ ಮತ್ತು ಜಿಂಬಾಬ್ವೆ ನಡುವಿನ ಪಂದ್ಯದಲ್ಲಿ ಭಾರತದ ದೇವಮಾನವ ಬ್ಯಾಟ್ಸ್‌ಮನ್ ಸಚಿನ್‌ನ ಯಾವ ತಂತ್ರಕ್ಕೂ ದಾರಿ ಮಾಡಿಕೊಡದೆ ಬೇಲ್ಸ್ ಎಗರಿಸಿದ, ದ್ರಾವಿಡ್‌ನ ಗೋಡೆಗೆ ತೂತು ಹೊಡೆದ, ಬಾಲಂಗೋಚಿಗಳ ತಲೆ ಸವರಿಹಾಕಿದ ಒಲಾಂಗೋನನ್ನು ಹುಡುಕಲು ಅಲ್ಲಿನ ಸರ್ವಾಧಿಕಾರಿ ಸರ್ಕಾರ ಏಳುವರ್ಷಗಳ ಹಿಂದೆಯೇ ಗುಪ್ತಚರ ಸಂಸ್ಥೆಯೊಂದಕ್ಕೆ ಸುಪಾರಿ ನೀಡಿತ್ತು! ಈ ಒಲಾಂಗೋ ಕಗ್ಗತ್ತಲ ಖಂಡ ಆಫ್ರಿಕಾದ ಕಾಡಿನ ಜಿಂಬಾಬ್ವೆಯ ಕುಗ್ರಾಮದವನು. ಬಡತನದ ದಿನಗಳಲ್ಲೇ ಹಾಡುಗಾರನಾಗಿ ರೂಪುಗೊಂಡು ರೋಡ್‌ಶೋಗಳನ್ನು ಕೊಡುತ್ತಲೇ, ನೀಗ್ರೋ ಜಾನಪದೀಯ … Read more

ಹೀಗೊಂದು ಕನಸು: ಶ್ರೀಧರ

  ಅಂದೊಂದು ಸುಡುಬಿಸಿಲಿನ ಮಧ್ಯಾಹ್ನ, ಭಾರವಾದ ಹೆಜ್ಜೆ ಹಾಕುತ್ತಾ, ಹೆಗಲಲ್ಲೊಂದು ಬ್ಯಾಗು, ಮೈತುಂಬಾ ಬೆವರು, ಸುಸ್ತೊ ಸುಸ್ತು. ಸಾಕು ಸಾಕಾಗಿ ಹೋಗಿತ್ತು. ಫುಟ್ ಪಾತ್ ಮೇಲೂ ಮೈಮೆಲೇ ಬೀಳುವ ದ್ವಿಚಕ್ರ ವಾಹನಗಳಿಂದ ಹೇಗೊ ತಪ್ಪಿಸಿಕೊಂಡು, ಅವರಿಗೊಂದಿಷ್ಟು ಹಿಡಿ ಶಾಪ ಹಾಕಿ ಅಂತು ಬಂದು ಸೇರಿದೆ ಬಿಎಂಟಿಸಿ ಬಸ್ ಸ್ಟಾಪು. ಆಗೊಮ್ಮೆ ಈಗೊಮ್ಮೆ ಬರುವ ಬಸ್, ಬಂದರೂ ಜನ್ನರನ್ನು ಹೊತ್ತಿ ತುಂಬಿ ತುಳುಕುತ್ತಿತ್ತು. ಕಾದು ಕಾದು ಕೈಗೆತ್ತಿಕೊಂಡೆ ಒಂದು ಸಿಗರೇಟು. ನೆತ್ತಿಯ ಮೇಲಿಂದ ಜಾರಿ ಮೈಯಲ್ಲೆಲ್ಲಾ ಕಚಗುಳಿ ಇಡುತ್ತಾ … Read more

ಒಂದ್ ರೂಪಾಯ್ ಕೊಡವ್ವ ಸೇಂದಿ ಕುಡಿಯಾಕೆ: ಡಾ. ಗವಿ ಸ್ವಾಮಿ

  ನಾನು ಕಂಡ ಕೆಲವು ವ್ಯಕ್ತಿಗಳ ಬಗ್ಗೆ ಬರೆಯಬೇಕೆನಿಸುತ್ತಿದೆ. ನನಗೆ ಇಂಥವರೇ ನೆನಪಿನಲ್ಲುಳಿಯುತ್ತಾರೆ. ಇವರನ್ನು ನೆನೆವಾಗ ನನ್ನ ನೆಚ್ಚಿನ ಲೇಖಕ ಆಂಟನ್ ಚೆಕೊವ್ ನೆನಪಾಗುತ್ತಾನೆ. ಆತ ಮಾತೃ ಹೃದಯದ ಬರಹಗಾರ.ತನ್ನ ಪಾತ್ರಗಳನ್ನು ತಾಯಿಯಂತೆ ಮುದ್ದು ಮಾಡುತ್ತಾನೆ. ಚೆಕೊವ್ ಬಳ್ಳಿಯಲ್ಲಿ ನಳನಳಿಸುತ್ತಿರುವ ಕುಸುಮಗಳನ್ನು ಮುಟ್ಟುವುದಿಲ್ಲ. ನೆಲದ ಮೇಲೆ ಬಿದ್ದಿರುವ, ದಾರಿಹೋಕರ ಪಾದಗಳಿಗೆ ಸಿಲುಕಿ ನಲುಗುತ್ತಿರುವ ಹೂಗಳನ್ನು ಆಯ್ದು ಅಪ್ಪಿಕೊಳ್ಳುತ್ತಾನೆ . ಕ್ಷಮಿಸಿ, ಚೆಕೊವ್ ನ ನೆನಪಾದಗಲೆಲ್ಲಾ I tend to get carried away.   ನಾನು ಬರೆಯಬೇಕೆಂದಿರುವವರ … Read more

ಮರಣ ಬಾವಿಯೊಳಗೆ ಬದುಕು ಕಟ್ಟಿಕೊಂಡವನ ಕಥೆ: ಶರತ್ ಹೆಚ್. ಕೆ.

  ಬಾವಿ ಆಕಾರದ ಮೃತ್ಯುಕೂಪ. ಅದರೊಳಗೆ ಶರವೇಗದಲ್ಲಿ ಚಲಿಸುವ ಬೈಕು-ಕಾರುಗಳು. ಜೀವ ಪಣಕ್ಕಿಟ್ಟು ಬೈಕು-ಕಾರಿನ ಮೇಲೆ ಕಸರತ್ತು ಮಾಡುತ್ತ ನೋಡುವ ಕಣ್ಣುಗಳಿಗೆ ಬೆರಗಿನ ಗುಳಿಗೆ ಉಣಿಸುವ ಹುಡುಗರು. ಮೃತ್ಯುಕೂಪದ ಮೇಲ್ತುದಿಯಲ್ಲಿ ನಿಂತು ನೋಡುತ್ತಿರುವ ಯಾವನೋ ಕೈಯಲ್ಲಿ ನೋಟು ಹಿಡಿದರೆ, ಕಸರತ್ತು ಮಾಡುತ್ತಲೇ ನೋಟು ಕಸಿದು ಬಾಯಿಗಿಟ್ಟುಕೊಳ್ಳುವ ಆ ಪರಿ… ಅರೆ ಕ್ಷಣ ಎಚ್ಚರ ತಪ್ಪಿದರೂ ಬದುಕಿಗೆ ಪೂರ್ಣವಿರಾಮ ಇಟ್ಟುಕೊಂಡಂತೆ. ಮರಣ ಬಾವಿಯೊಳಗೆ ಬೈಕು ಚಲಾಯಿಸುವ ಹುಡುಗನೊಂದಿಗೆ ಆ ದಿನ ಮಧ್ಯಾಹ್ನವಷ್ಟೇ ಮಾತುಕತೆ ನಡೆಸಿದ್ದೆವು. ಅವನ ಹೆಸರು ಮಹಮ್ಮದ್ … Read more

ಏನೆಂದು ಬರೆಯಲಿ, ಬಾರದ ಅಕ್ಷರ ಎದೆ ಗಾಳಕ್ಕೆ ಸಿಕ್ಕಿ ಮೇಲೆ ಬರದ “ಮೀನು”: ಸ್ಫೂರ್ತಿ ಗೌಡ

ಹೆಣ್ಣು ಒಂದು ಅಕ್ಷರ ಬರೆದರೆ ಅದರ ಹಿಂದೆ ಅದೆಂತದೋ ಇತಿಹಾಸ ಕಂಪನ.. ಪಾಂಡವರು ಮಾಡಿದ ರಾಜಸೂಯದಂತಹ ತನ್ಮಯತೆ…ಹೆಣ್ಣೆಂದರೆ ದೇಹವಲ್ಲ, ನಿನ್ನ ಚೆಲ್ಲಾಟಕ್ಕೆ ಕಿಬ್ಬೊಟ್ಟೆ ಕೊಟ್ಟು ಕರಗಿಸುವವಳಲ್ಲ, ನಿನ್ನ ಅಂತಃಕರಣಕ್ಕೆ ಕುಣಿದು ತಣಿಸುವ ರಮಣಿಯಲ್ಲ, ನಿನ್ನ ದುಖಃಕ್ಕೆ ಎದೆ ಒಡ್ಡಿ ತಲೆ ಸವರುವ ಮುದ್ದಲ್ಲ, ಹೆಣ್ಣು… ತಾಳಿಕಟ್ಟಿದ ಗಂಡಿನ ಬಂಧ ಬಿಟ್ಟು ಚೆನ್ನಮಲ್ಲಿಕಾರ್ಜುನೇ ಗಂಡನೆಂದು ಪೂಜಿಸಿದ ಮಹಾದೇವಿ, ಕಾಣದ ಗೋಕುಲ ನಂದನನಿಗೆ ಹಾತೊರೆದು ತನ್ನ ತನವೆಲ್ಲಾ ಸಮರ್ಪಿಸಿದ ಮೀರಾ, ಭೋಗ ಸುಖವ ಬಿಟ್ಟು ಓಡಿ ಬಂದು ಲಿಂಗಕ್ಕೆ ಶರಣು … Read more

ಡ್ರೀಮ್ ಲೈಫ್ ನ ಡ್ರಿಲ್ ಪಾಸಿಟಿವ್ ಆಗಿರಲಿ: ವೀಣಾ ಭಟ್ ಯಲ್ಲಾಪುರ

ಕಾಲ ಬದಲಾಗಿದೆ. ನಿಜವೇ? ಹೌದೆ? ಬದಲಾದದ್ದು ಕಾಲವೇ? ನಮ್ಮಗಡಿಯಾರವೇ? ಅಥವಾ ನಮ್ಮ ಮನಸ್ಸೇ? ನೋಡುವ ದ್ರಷ್ಟಿಕೋನವೇ ? ವೈಚಾರಿಕತೆಯ ಪರಿಯೇ? ಯಾವುದು ಹಾಗಾದರೆ??! ಕನಸುಗಳೂ ಬದಲಾಗುತ್ತಿರುತ್ತವೆ ಕಾಮನಬಿಲ್ಲಿನಂತೆ. ಹೇಗೆ ಕಾಮನಬಿಲ್ಲು ಮೋಡ, ಮಳೆ, ಸೂರ್ಯಕಿರಣ, ಗಾಳಿಯ ಚಾರಣಗಳಿಗನುಗುಣವಾಗಿ ಆಗಸದಲ್ಲಿ ಕಮಾನು ಕಟ್ಟುವುದೋ ಹಾಗೆ ನಮ್ಮ ಆಧ್ಯತೆ, ಅವಶ್ಯಕತೆಗಳಿಗನುಸಾರವಾಗಿ ಕನಸುಗಳನ್ನು ಕಾಣುತ್ತೇವೆ. ಕಿರಿಯರ ಮನಸ್ಸಂತೂ ಚಂಚಲ. ಟೀನೇಜ್ ಮಧುರ ಯಾತನೆಯ ಮರ್ಕಟ. ಮದ್ಯವಯಸ್ಸು ಸಂಸಾರ-ಸಂತೃಪ್ತಿ ಹೊಂದಿಸಲು ಜಂಜಾಟ. ಲಿಟ್ಲ್ ಪಾಂಡವಾಸ್, ಲಿಟ್ಲ್ ಕೌರವಾಸ್ ಗಳ ಚಕಮಕಿಯ ಚೆಲ್ಲಾಟ, ಸುತ್ತಮುತ್ತ ಭಾಷಣ-ಕೂಟಗಳು, ಫ್ಲೆಕ್ಸ್ , ಬಂಟಿಂಗ್ಸ್ , ಬ್ಯಾನರ್ , … Read more

ಹೀಗೋರ್ವ ಹಸಿರು ಸ್ವಾಮೀಜಿ:ಪ್ರಸಾದ್ ಎಸ್

  ಒಂದು ಸಮೃದ್ದವಾದ ಅರಣ್ಯವನ್ನು ನಾಶ ಮಾಡಲು ಮಾನವನಿಗೆ ಕೇವಲ ಕೆಲವು ಸಮಯ ಸಾಕು. ಆದರೆ ಒಂದು ಸಮೃದ್ದವಾದ ಅರಣ್ಯ ಬೆಳೆಸುವುದು ಒಂದು ಸಾಧನೆಯೇ ಸರಿ, ಅದಕ್ಕೆ ದಶಕಗಳೇ ಬೇಕು. ಅರಣ್ಯವನ್ನು ಬೆಳೆಸುವುದು ಸುಲಭದ ಮಾತಲ್ಲ. ಅದಕ್ಕೆ ಅಗಾಧವಾದ ಪರಿಶ್ರಮ ಬೇಕು, ಸುಮ್ಮನೆ ಒಂದಷ್ಟು ಜಾಗದಲ್ಲಿ ಒಂದಷ್ಟು ಗಿಡಗಳನ್ನು ನೆಟ್ಟು ಬಂದರೆ ಅರಣ್ಯ ಬೆಳೆಯುವುದಿಲ್ಲ.ಅದನ್ನು ಸರಿಯಾಗಿ ಪೋಷಿಸುವುದು ಅತ್ಯಂತ ಮಹತ್ವದ್ದಾಗಿರುತ್ತದೆ .ಈ ಕೆಲಸವನ್ನು ನಮ್ಮ ಸ್ವಾಮೀಜಿ ಅತ್ಯಂತ ಶೃದ್ದೆಯಿಂದ ಮಾಡಿದ್ದಾರೆ. ಆದ್ದರಿಂದಲೇ ಇಂದು ಶಿವನಹಳ್ಳಿಯಲ್ಲಿ ಸಮೃದ್ದವಾದ ನೂರಾರು … Read more

ಗಿಫ್ಟ್ ಶಾಪ್ ನಲ್ಲೊಂದು ದಿನ: ಸಂತೋಷ್ ಕುಮಾರ್ ಎಲ್.ಎಮ್.

ಪ್ರಪಂಚ ಓಡುತ್ತಿದೆ ಅನ್ನುವ ಭ್ರಮೆಯಲ್ಲಿ ನಾವು! ಪ್ರಪಂಚವೇನೂ ಓಡುತ್ತಿಲ್ಲ, ಅದು ಇದ್ದಲ್ಲೇ ಇದೆ. ಆದರೆ ಮನುಷ್ಯನೆಂಬೋ ಈ ಮನುಷ್ಯ ಮಾಮೂಲಿ ಜೀವನವನ್ನು ಸುಖಾಸುಮ್ಮನೆ ಓಡಿಸುತ್ತಿದ್ದಾನೆ ಎನ್ನುವುದು ತಿಳಿದವರ ಮಾತು. ಅದೇನೇ ಇರಲಿ ಈ ಓಡುತ್ತಿರುವ ಜೀವನದ ಮಧ್ಯೆ ಅದೆಷ್ಟೋ ಮುಗ್ಧರು, ಬಡವರು, ಅಸಹಾಯಕ ಪುಟಾಣಿಗಳು ನಮ್ಮ ಕಾಲಿಗೆ ಎಡವಿದರೂ ನಮಗೆ ಗೊತ್ತೇ ಇಲ್ಲದವರಂತೆ ಮುಂದೆ ಹೋಗುತ್ತಿರುತ್ತೇವೆ. ನಮ್ಮ ಪಕ್ಕದಲ್ಲೇ ರಸ್ತೆಯಲ್ಲಿ ಅಪಘಾತವಾಗಿ ನಮ್ಮ ಅಪ್ಪನ ವಯಸ್ಸಿನ ವ್ಯಕ್ತಿಯೊಬ್ಬ ಬಿದ್ದು ಹೊರಳಾಡುತ್ತಿದ್ದರೆ ಆತನ ಕಡೆಗೆ ಕಣ್ಣಾಯಿಸಿಯೂ ನೋಡದೆ ಆಫೀಸಿನತ್ತ … Read more

ಮಹಿಳೆ ಮತ್ತು ಸಂಗೀತ: ಅನುರಾಧ ಸಾಮಗ

  ಗೇಯತೆಗೊಳಪಡುವ ಕವನವೊಂದು ಗೀತೆಯಾಗುತ್ತದೆ. ಗೇಯತೆ ಆ ರಚನೆ ಬಿಂಬಿಸುವ ಭಾವವನ್ನು ತೀವ್ರಗೊಳಿಸುತ್ತದೆ. ಆ ಗೀತೆ ಸ್ವರ-ಲಯ, ರಾಗ-ತಾಳಗಳೆಂಬ ನಿರ್ದಿಷ್ಟತೆಗೊಳಪಟ್ಟಾಗ ಅದು ಸಂಗೀತವಾಗುತ್ತದೆ. ಇದು ಭಾವ ಬಿಂಬಿಸುವುದರೊಂದಿಗೆ, ಕೆಲವು ಕಟ್ಟುನಿಟ್ಟಿನ ನಿಯಮಗಳಿಗೊಳಪಡುವ ಶಿಸ್ತಿನೊಡನೆ ಪಾಂಡಿತ್ಯಪೂರ್ಣವೆನಿಸುತ್ತದೆ. ಮನುಷ್ಯ ಹುಟ್ಟಿನಿಂದಲೇ ಭಾವಜೀವಿ.  ಆದಿಮಾನವನ ಕಾಲದಿಂದಲೂ ಮಾತು ಎನ್ನುವುದು ಸಂಜ್ಞೆಗಳ ಮುಂದುವರಿಕೆಯಾಗಿ ಹುಟ್ಟಿದರೆ, ಹಾಡು ಅದೇ ಮಾತಿನ ಮುಂದುವರಿಕೆಯಾಗಿ ಆಂಗಿಕಸಂಜ್ಞೆಗಳು ಕುಣಿತವಾದಾಗ ಅದಕ್ಕೆ ಪೂರಕವಾಗಿ ಹುಟ್ಟಿರುವುದಾಗಿದೆ. ಬಹುಶಃ ಹಾಡು ಮತ್ತು ಕುಣಿತ ದಿನದ ಬೇಟೆಯೇ ಮೊದಲಾದ ಜೀವನೋಪಾಯದ ಕೆಲಸಗಳ ದಣಿವನ್ನು ಕಡಿಮೆಯಾಗಿಸುವ … Read more

ಕನ್ನಡ ನಾಡಿನ ಸಾಹಿತ್ಯ ಲೋಕದ ಅದ್ವಿತೀಯ ಧ್ರುವತಾರೆ- ಡಿವಿಜಿ: ಹನಿಯೂರು ಚಂದ್ರೇಗೌಡ

  ಕನ್ನಡ ನಾಡಿನ ಸಾಹಿತ್ಯ ಲೋಕದ ಅದ್ವಿತೀಯ ಧ್ರುವತಾರೆ ಡಿವಿಜಿ.ಇವರ ಅನೇಕ ಅನನ್ಯ  ಸಾಧನೆಗಳ  ನಡುವೆ ನಮಗೆ ಶ್ರೇಷ್ಠವೆನಿಸಿರುವುದು  ತತ್ವಾಧಾರಿತವಾದ ಅವರ ಕಾವ್ಯಗಳಾದ "ಮಂಕುತಿಮ್ಮನ ಕಗ್ಗ" ಮತ್ತು "ಮರುಳ ಮುನಿಯನ ಕಗ್ಗ" ಗಳೇ  ಎನ್ನುವುದು ಸರ್ವವಿದಿತ. ಪತ್ರಿಕೋದ್ಯಮವೇ ಸರ್ವಸ್ವವೆಂದು ತಿಳಿದಿದ್ದ ಡಿವಿಜಿ ಸಾಹಿತ್ಯ ಲೋಕಕ್ಕೆ ಪಾದವಿರಿಸಿದ್ದು ಮಾತ್ರ ಅನಿರೀಕ್ಷಿತವೇ.ಆದರೂ ಅವರೊಬ್ಬ ದಾರ್ಶನಿಕ ಬರಹಗಾರ. 1887 ರ ಮಾರ್ಚ್ 17 ಜನಿಸಿದ  ಇವರಿಗೆ ಇಂದಿಗೆ  (ಮಾರ್ಚ್ 17, 2013ಕ್ಕೆ ) 126 ವಸಂತದ ಸಂಭ್ರಮ. ಈ ನೆಪದಲ್ಲೊಂದು ಅವರ … Read more

ಕುವೆಂಪುರವರ ಸೂರ್ಯಗೀತೆ; ಆನಂದಮಯ ಈ ಜಗಹೃದಯ: ದಿವ್ಯ ಆಂಜನಪ್ಪ

ಆನಂದಮಯ ಈ ಜಗಹೃದಯ……… ಕುವೆಂಪುರವರ ಸೂರ್ಯಗೀತೆಗಳಲ್ಲಿ ಪ್ರಸಿದ್ಧವಾದ ಈ ಗೀತೆಯೂ ಒಂದು. ಕವಿಗಳು ಈ ಜಗತ್ತಿನ ಎಲ್ಲಾ ಆಗೂ-ಹೋಗುಗಳ ಮೂಲವು 'ಶಿವ'ನೆಂದು ಭಾವಿಸುತ್ತಾರೆ. ಹಸುರಿನಿಂದ ನಳನಳಿಸುವ ಸಹ್ಯಾದ್ರಿಯಂತಹ ಬೆಟ್ಟಗಳು-ಅರಣ್ಯಗಳು. ಭೋರ್ಗರೆವ ಸಾಗರ, ನೀಲಿ ಆಕಾಶ, ಧುಮ್ಮಿಕ್ಕುವ ಜಲಧಾರೆ, ಸೋನೆ ಮಳೆ, ಹಕ್ಕಿಗಳ ಚಿಲಿಪಿಲಿ, ಮೋಡಗಳ ಘರ್ಜನೆ, ಹಾಡುವ ಕೋಗಿಲೆಗಳ ಕಂಠ ಸಿರಿ- ಹೀಗೆ ಪ್ರಕೃತಿಯ ಪ್ರತೀ ಸೌಂದರ್ಯದಲ್ಲೂ ಶಿವನ ಹೃದಯವು ವಿಸ್ತರಿಸಿದೆ ಎಂದು ಕವಿ ಉನ್ಮತ್ತರಾಗಿ ಹಾಡಿದ್ದಾರೆ. ಪ್ರಕೃತಿಯಲ್ಲಿ ಸಾಧಾರಣವಾಗಿ ಸಂಭವಿಸುವ ಸೂರ್ಯೋದಯ ಚಂದ್ರೋದಯವೂ ದೇವನ ದಯೆ … Read more

ವಾರಕೊಮ್ಮೆ ಯಶವಂತಪುರ ಸಂತೆ: ಶಿವು ಕೆ.

                   ಇತ್ತೀಚೆಗೆ ತೇಜಸ್ವಿಯವರ "ಸಂತೆ" ಕಥೆ ಓದಿದಾಗ ನನಗೂ ಸಂತೆಗೆ ಹೋಗಬೇಕೆನಿಸಿತ್ತು.  ನನ್ನ ಮಡದಿ ಪ್ರತಿ ಭಾನುವಾರ  ಸಂಜೆ  ಯಶವಂತಪುರ ಸಂತೆಗೆ ತರಕಾರಿ ಹಣ್ಣು ಹೂಗಳನ್ನು ತರಲು ಹೋಗುತ್ತಿದ್ದಳು.  ಹೋಗುವ ಮೊದಲು ನಾನು ಜೊತೆಯಲ್ಲಿ ಬರಬೇಕೆಂದು ತಾಕೀತು ಮಾಡುತ್ತಿದ್ದಳು.  ಮೊದಮೊದಲು ಅವಳು ಕರೆದಾಗ ನಾನು ಉತ್ಸಾಹದಿಂದ ಹೋಗುತ್ತಿದ್ದೆನಾದರೂ ಅಲ್ಲಿ ಆಗಾಗ ಆಗುವ ಕೆಲವು ಬೇಸರದ ಅನುಭವಗಳು ನೆನಪಾಗಿ,  ನನಗೆ ಬ್ಲಾಗು, ಫೋಟೊಗ್ರಫಿ ಇತ್ಯಾದಿ ಕೆಲಸಗಳಿದೆಯೆಂದು ತಪ್ಪಿಸಿಕೊಳ್ಳುತ್ತಿದೆ. … Read more