ಪಂಜು ಲೈಬ್ರರಿ

ಪಂಜು ಸಾದರ ಸ್ವೀಕಾರ ಕೃತಿ: ಜಯಂತಿಪುರದ ಕತೆಗಳುಪ್ರಕಾರ: ಕಥಾ ಸಂಕಲನಲೇಖಕರು: ಶ್ರೀಧರ ಬನವಾಸಿಪ್ರಕಾಶನ: ಪಂಚಮಿ ಮೀಡಿಯಾ ಪಬ್ಲಿಕೇಷನ್ಪುಟಗಳು: 272ಬೆಲೆ: Rs. 300/-ಪ್ರತಿಗಳಿಗಾಗಿ ಸಂಪರ್ಕಿಸಿ: 9740069123 ಕೃತಿ: ಪು ತಿ ನ ಮಲೆದೇಗುಲಪ್ರಕಾರ: ಕಾವ್ಯ ವಿಮರ್ಶೆಲೇಖಕರು: ಜ.ನಾ.ತೇಜಶ್ರೀಪ್ರಕಾಶನ: ಡಾ. ಪು ತಿ ನ ಟ್ರಸ್ಟ್ಪುಟಗಳು: 142ಬೆಲೆ: Rs. 150/-ಪ್ರತಿಗಳಿಗಾಗಿ ಸಂಪರ್ಕಿಸಿ: 9483913393 ಕೃತಿ: ನನ್ನ ಅಮೆರಿಕತೆಗಳುಪ್ರಕಾರ: ಅನುಭವ ಲೇಖನಲೇಖಕರು: ಗುರುಪ್ರಸಾದ್ ಕುರ್ತಕೋಟಿಪ್ರಕಾಶನ: ಪರಿಷ ಮಾಧ್ಯಮಪುಟಗಳು: 191ಬೆಲೆ: Rs. 200/-ಪ್ರತಿಗಳಿಗಾಗಿ ಸಂಪರ್ಕಿಸಿ: 99805 62045 ಕೃತಿ: ಕದಂಬಪ್ರಕಾರ: ಅನುವಾದಿತ ಲೇಖನಗಳುಲೇಖಕರು: … Read more

ಯುವ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ದಿಲೀಪ್ ಕುಮಾರ್ ಆರ್ ಅವರ ವಿಶೇಷ ಸಂದರ್ಶನ

ದಿಲೀಪ್ ಕುಮಾರ್ ಅವರೆ, ನಿಮ್ಮ “ಪಚ್ಚೆಯ ಜಗುಲಿ” ವಿಮರ್ಶಾ ಸಂಕಲನ ೨೦೨೫ ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಪಂಜುವಿನ ಓದುಗ ಹಾಗು ಬರಹಗಾರರ ಪರವಾಗಿ ಅನೇಕ ಅಭಿನಂದನೆಗಳು. ೧. ಮೊದಲಿಗೆ ತಮ್ಮ ಕಿರು ಪರಿಚಯ ತಿಳಿಸಿ ನನ್ನೂರು ಚಾಮರಾಜನಗರ, ಹುಟ್ಟಿದ್ದು 1991 ರ ಮಾರ್ಚಿ 16 ಮೈಸೂರಿನಲ್ಲಿ. ತಂದೆ ದಿವಂಗತ ಎ. ಎಸ್. ರಾಮರಾವ್, ತಾಯಿ ಕೆ. ರಂಗಮ್ಮ ಮತ್ತು ತಮ್ಮ ಆರ್. ಪವನ್. ನನ್ನ ತಂದೆ ಆಟೋ ಚಾಲಕರಾಗಿದ್ದರು, ಅಮ್ಮ … Read more

ಟೈಮ್ ಪಾಸ್ ಆಗ್ತಿಲ್ವ…: ಮಧುಕರ್ ಬಳ್ಕೂರು

‘ಯಾಕೋ ಬೋರು. ಹ್ಯಾಗೆ ಟೈಂ ಪಾಸ್ ಮಾಡಬೇಕೋ ಗೊತ್ತಾಗ್ತ ಇಲ್ಲ.’‘ಸುಮ್ಮನೆ ಟೈಂಪಾಸ್ ಗೆ ಅಂತ ಕೆಲಸಕ್ಕೆ ಹೋಗ್ತಿದೀನಿ. ಇದರಿಂದ ನನಗೇನು ಆಗಬೇಕಾಗಿಲ್ಲ.’‘ಯಾಕೋ ಟೈಂ ಪಾಸ್ ಆಗ್ತಿಲ್ಲ ಕಣೋ. ಅದಕ್ಕೆ ಕಾಲ್ ಮಾಡ್ದೆ. ಮತ್ತೆ ಫುಲ್ ಫ್ರೀನಾ..?’‘ಅವನು ಜೊತೆ ಇದ್ದರೆ ತಲೆ ಬಿಸಿನೇ ಇಲ್ಲ. ತಮಾಷೆ ಮಾಡೋಕೆ ಕಾಲೆಳೆಯೋಕೆ ಒಳ್ಳೆ ಟೈಂ ಪಾಸ್ ಗಿರಾಕಿ.’‘ಹಾಳಾದ್ದು ಟೈಮು, ನಿದ್ದೆ ಮಾಡಿ ಎದ್ದರೂ ಮುಂದುಕ್ಕ್ ಹೋಗಲ್ಲ ಅನ್ನುತ್ತೆ.’ಓಹೋ, ಇದ್ಯಾಕೋ ತುಂಬಾ ದೊಡ್ಡ ಪ್ರಾಬ್ಲಮ್ಮೆ ಆಯಿತು. ನಿದ್ದೆ ಮಾಡಿ ಎದ್ರುನೂ ಟೈಂ ಮುಂದಕ್ಕೆ … Read more

ಬೊಮ್ಮವಾರದ ಶಾಸನ: ಸಂತೋಷ್ ಟಿ

ಕಾಲ: ಶಕವರ್ಷ ೧೨೭೭ಕ್ರಿ.ಶ ೧೩೫೪ರಾಜವಂಶ:ವಿಜಯನಗರ ಸಾಮ್ರಾಜ್ಯರಾಜ: ಹರಿಯಪ್ಪ ಓಡೆಯರು ಶಾಸನ ಪಾಠ ಈ ಕೆಳಕಂಡತೆ ೧. ಶ್ರೀ ಮತು ಸಕ ವರುಷ ೧೨೭೭ಜ೨. ಯ ಸಂವತ್ಸರದ (ಕಾ) ಸು ೧೫ ಶ್ರೀ ಮನು೩. ಮಹಾ ಮಂಡಳೇಶ್ವರಂ ಅರಿರಾಯ ವಿಭಾಡ೪. ಭಾಷೆಗೆ ತಪ್ಪುವ ರಾಯರ ಗಂಡ ಚತುಸಮು೫. ದ್ರಾಧಿಪತಿ ಶ್ರೀ ವೀರ ಹೇ೬. ರಿಯಪ್ಪ ಒಡೆಯರು ಪುತಿ೭. ವಿ ರಾಜ್ಯವಂ ಶ್ರೀ ಮನು ಮಹಾ೮. ಎಲಹಕ್ಕನಾಡ ಪ್ರಭುಗಳು ಸೊಣಪ.. ದೇ೯. ಣನ.. ಸರುರ ಬಯಿರಿದೇವ.. ವಾಗಟ೧೦. ದ ಮಾರದೇವಯ … Read more

ಮರ ಗಿಡು ಬಳ್ಳಿ – ಬಸವಣ್ಣನ ದೃಷ್ಟಿಯಲ್ಲಿ ಜೀವಜಾಲದ ಮಹತ್ವ: ರೋಹಿತ್ ಜಿರೋಬೆ

ಇಂದು ಮಾನವನು ತನ್ನ ಸ್ವಾರ್ಥಕ್ಕಾಗಿ ಪ್ರಕೃತಿಯನ್ನು ನಾಶಮಾಡುತ್ತಾ ಹೋಗುತ್ತಿರುವುದು ಹೊಸದೇನಲ್ಲ. ಮರ ಕಡಿತ, ಗಿಡಗಳ ತುಳಿವು, ಧಾನ್ಯಗಳ ಹತೋಟಿ – ಇವೆಲ್ಲವೂ ನಾವು ಸಾಧಾರಣವಾಗಿ ಗಮನಿಸದ ಪ್ರಪಂಚದ ದೈನಂದಿನ ಕ್ರಿಯೆಗಳು. ಆದರೆ, ಸಾವಿರ ವರ್ಷಗಳ ಹಿಂದೆಯೇ ಬಸವಣ್ಣನವರು ಸಸ್ಯಜಗತ್ತಿಗೆ ಜೀವವಿದೆ ಎಂಬುದನ್ನು ತಮ್ಮ ತತ್ತ್ವದಿಂದಲೇ ಸಾರಿದ್ದರು. ಅವರು ತಮ್ಮ ಈ ವಿಖ್ಯಾತ ವಚನದಲ್ಲಿ ಹೇಳುತ್ತಾರೆ: “ಮರ ಗಿಡು ಬಳ್ಳಿ ಧಾನ್ಯಂಗಳ ಬೆಳಸೆಲ್ಲವ ತರಿತರಿದುಪ್ರಾಣವ ಕೊಂದುಂಡು, ಶರೀರವ ಹೊರೆವ ದೋಷಕ್ಕೆಇನ್ನಾವುದು ವಿಧಿಯಯ್ಯಾಒಂದಿಂದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದಜೀವಜಾಲದಲ್ಲಿದೆ ಚರಾಚರವೆಲ್ಲ.ಅದು ಕಾರಣ,ಕೂಡಲಸಂಗನ … Read more

‘ಫಣಿಯಮ್ಮ’ ಕಾದಂಬರಿ ಮತ್ತು ಸಿನಿಮಾ : ಒಂದು ಕಥೆ ಎರಡು ದೃಷ್ಟಿ: ಡಾ. ಸುಶ್ಮಿತಾ ವೈ.

ಎಂ.ಕೆ. ಇಂದಿರಾ ಅವರ ‘ಫಣಿಯಮ್ಮ’ ಕಾದಂಬರಿಯನ್ನು ಆಧರಿಸಿ ರಚನೆಯಾದ ‘ಫಣಿಯಮ್ಮ’ ಸಿನಿಮಾ ೧೯೮೩ರಲ್ಲಿ ಬಿಡುಗಡೆಯಾಗಿದೆ. ಫಣಿಯಮ್ಮ ಸಿನಿಮಾದ ಯಶಸ್ಸಿಗೆ ಮುಖ್ಯವಾಗಿ ಕಾದಂಬರಿಯ ಕಥೆ ಹಾಗೂ ವಸ್ತುವೇ ಕಾರಣವಾದರೂ ಪ್ರೇಮಾ ಕಾರಂತರ ಚಿತ್ರಕತೆ ರಚನೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಸಿನಿಮಾ ಕಾದಂಬರಿಯ ಅರ್ಥ ವಿಸ್ತಾರತೆಯನ್ನು ಸಾಧಿಸಿತು. ಸಿನಿಮಾ ಅನಕ್ಷರಸ್ಥರನ್ನೂ ತಲುಪಿ ಸಂಚಲನವನ್ನುಂಟು ಮಾಡಿತು. ಇಲ್ಲಿ ನಿರ್ದೇಶಕಿಯ ಮುಖ್ಯ ಗಮನವಿರುವುದು ಫಣಿಯಮ್ಮನ ಜೀವನದ ಕಥೆಯ ಜೊತೆಗೆ ಬ್ರಾಹ್ಮಣ ಸಮುದಾಯವು ಮಹಿಳೆಯರನ್ನು, ಅದರಲ್ಲೂ ವಿಧವೆಯರನ್ನು ವ್ಯವಸ್ಥಿತವಾಗಿ ಶತಮಾನಗಳಿಂದ ಶೋಷಿಸುತ್ತ ಬಂದಿದ್ದನ್ನು ಹೇಳುವುದು … Read more

ಪುರಾಣ ಪರಿಕರಗಳು ಮತ್ತು ಚರಿತ್ರೆಯ ನಿರಚನೆ: ಸಂಗನಗೌಡ ಹಿರೇಗೌಡ

[ಎಚ್.ಎಸ್.ಶಿವಪ್ರಕಾಶರ ಮಹಾಚೈತ್ರ, ಮಂಟೆಸ್ವಾಮಿ, ಮಾದಾರಿ ಮಾದಯ್ಯ ನಾಟಕಗಳನ್ನು ಅನುಲಕ್ಷಿಸಿ] ಹನ್ನೆರಡನೇ ಶತಮಾನದಲ್ಲಿ ಶರಣರು ಸನಾತನದ ಒಂದಷ್ಟು ಎಳೆಗಳಿಂದ ಬಿಡಿಸಿಕೊಂಡು ವಿನೂತನದೆಡೆಗೆ ಹೊರಳಿದ್ದು ಈಗಾಗಲೇ ಚರಿತ್ರೆಯಲ್ಲಿ ದಾಖಲಾಗಿದೆ. ಅಂಥ ವಿನೂತನಕ್ಕೆ ಬರಗುಗೊಂಡ ಹರಿಹರ, ಚಾಮರಸ, ಪಾಲ್ಕುರಿಕೆ ಸೋಮನಾತ, ಬೀಮ ಕವಿಯನ್ನೂ ಒಳಗೊಂಡು ನವೋದಯ, ಪ್ರಗತಿಶೀಲ, ನವ್ಯ, ದಲಿತ ಬಂಡಾಯ ಸಾಹಿತ್ಯದ ಮೇಲೆ ದಟ್ಟ ಪ್ರಭಾವವಾದ್ದರಿಂದ ಕನ್ನಡ ಸೃಜನಶೀಲ ಬರೆಹಗಾರರು ಮತ್ತೆ ಮತ್ತೆ ಆ ಕಾಲಕ್ಕೆ ತಿರುಗಿ ನೋಡುವಂತಾಯಿತು. ಹಾಗಾಗಿಯೇ ಕನ್ನಡ ಸಾಹಿತ್ಯದಲ್ಲಿ ಅನೇಕ ನಾಟಕಗಳು ಹಾಗೂ ಕಾದಂಬರಿಗಳು, ಕವಿತೆಗಳು … Read more

ದಾರಿ ಯಾವುದಯ್ಯ: ಅಂಬಿಕ ರಾವ್

ಪ್ರಯಾಣಕ್ಕೆ ಹೊರಟಾಗ ದಾರಿಯ ಬಗ್ಗೆ ಒಮ್ಮೊಮ್ಮೆ ಗೊಂದಲ ಉಂಟಾಗುತ್ತದೆ. ಆಗ ಸಾಮಾನ್ಯವಾಗಿ ವಾಹನ ನಿಲ್ಲಿಸಿ ಸ್ಥಳೀಯ ಜನರನ್ನು ಅಂಗಡಿಯವರನ್ನು “ ದಾರಿ ಯಾವುದು?” ಎಂದು ಕೇಳುತ್ತೇವೆ. ನಮ್ಮದೇ ನಾಡಾಗಿದ್ದಲ್ಲಿ ನಮ್ಮ ಭಾಷೆಯಲ್ಲಿ ದಾರಿಯನ್ನು ಹೇಳುತ್ತಾರೆ. ಬೇರೆ ಜಾಗಕ್ಕೆ ಹೋದಾಗ ಅವರ ಭಾಷೆಯನ್ನು ಹರುಕು ಮುರುಕಾಗಿ ಉಪಯೋಗಿಸಿ ಅದರೊಂದಿಗೆ ಸಂಗಮ ಭಾಷೆಯನ್ನು ಬಳಸಿ ಕೇಳಬೇಕು. ಅವರು ಹೇಳಿದ ಮಾತು ಅರ್ಥವಾದರೆ ಪುಣ್ಯ, ಇಲ್ಲದಿದ್ದರೆ ಬಂದ ದಿಕ್ಕಿಗೆ ವಾಪಸ್ ಹೋದರು ಹೋಗಬಹುದು!! . ದಾರಿ ತೋರಿಸುವವರನ್ನು ಹಲವಾರು ವಿಧಗಳಿವೆ; ನನ್ನ … Read more

“ಪುನರ್ಜನ್ಮದಂತೆ ಪುನರ್ವಸತಿ – ಸಂಗೀತಾಳ ಸಮರ್ಥ ಕಥೆ”: ರಶ್ಮಿ ಎಂ.ಟಿ.

ಸಂಗೀತಾ ಎಂಬ 16 ವರ್ಷದ ಅಂಗವಿಕಲ ಹೆಣ್ಣು ಮಗಳು, ಇವಳಿಗೆ ಪೋಲಿಯೋದಿಂದ ಒಂದು ಕಾಲಿಗೆ ತೊಂದರೆ ಆಗಿದ್ದು ಸರಾಗವಾಗಿ ನಡೆಯಲು ಬರುತ್ತಿರಲಿಲ್ಲ. ಇವಳು ಮೂಲತಃ ತಮಿಳುನಾಡಿನವಳು. 10ನೇ ತರಗತಿಯವರೆಗೆ ಸರ್ಕಾರಿ ಶಾಲೆಯಲ್ಲಿ ಓದಿದ್ದು, ಇವಳು 9ನೇ ತರಗತಿ ಓದುವಾಗ ಒಂದೇ ವರ್ಷದಲ್ಲಿ ಆರೋಗ್ಯದ ಸಮಸ್ಯೆಯಿಂದ ತಂದೆ-ತಾಯಿ ಇಬ್ಬರು ಮರಣ ಹೊಂದಿದರು. ಇವಳಿಗೆ ಮೂರು ಜನ ಅಕ್ಕಂದಿರು, ಎಲ್ಲರಿಗೂ ಮದುವೆಯಾಗಿದ್ದು, ಒಬ್ಬರು ತಮಿಳುನಾಡಿನಲ್ಲಿ, ಒಬ್ಬರು ಬೆಂಗಳೂರಿನಲ್ಲಿ ಹಾಗೂ ಒಬ್ಬ ಅಕ್ಕ ವಿದೇಶದಲ್ಲಿ ವಾಸವಾಗಿದ್ದಾರೆ. ಸಂಗೀತಾ 10ನೇ ತರಗತಿ ಪರೀಕ್ಷೆ … Read more

ನಗುತಿರುವ ನೆನೆಪು – ಸುನಿತಾಳ ಜೊತೆ ನಾಲ್ಕು ವರ್ಷ: ರಶ್ಮಿ ಎಂ. ಟಿ.

ನಾನು ಸಮುದಾಯ ಅಭಿವೃದ್ಧಿ ಕಾರ್ಯಕರ್ತಳಾಗಿ ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ಒಂದು ಸಮುದಾಯದಲ್ಲಿ ಅಂವಿಕಲರ ಜೊತೆ ಕೆಲಸ ಮಾಡುವಾಗ ಅಂಗವಿಕಲ ವ್ಯಕ್ತಿಯ ಕುಟುಂಬದ ಮೂಲಕ ಇನ್ನೊಂದು ಅಂಗವಿಕಲ ಕುಟುಂಬದ ಪರಿಚಯವಾಯಿತು ಇದೇ ಸುನಿತಾಳ ಕುಟುಂಬ. ಈ ಸಮುದಾಯದಲ್ಲಿ ಅಂಗವಿಕಲರನ್ನು ಗುರುತಿಸಲು ನನ್ನ ಸಹ ಸಿಬ್ಬಂದಿಗಳ ಜೊತೆ ಸೇರಿ ಮನೆ ಮನೆ ಸರ್ವೆ ಮಾಡಿದ್ದೆನು. ಆ ಸಮಯದಲ್ಲಿ ಸುನಿತಾಳ ಮನೆಗೂ ಹೋಗಿ ವಿಚಾರಿಸಿದ್ದೆವು ಆದರೆ ಮನೆಯಲ್ಲಿ ಅಂಗವಿಕಲತೆಯ ವ್ಯಕ್ತಿ ಇರುವ ಯಾವುದೇ ಸುಳಿವು ಸಿಗಲಿಲ್ಲ, ಮನೆಯವರೂ ಸಹ ಅಂಗವಿಕಲ ವ್ಯಕ್ತಿಯ … Read more

ಖಾಸಗಿ ಕಂಪನಿಗಳ ಗೋಳು: ಮಂಜುನಾಥ್. ಚಿನಕುಂಟಿ

ಮಿಡಲ್ ಕ್ಲಾಸ್ ಕುಟುಂಬದ ಹುಡುಗರು ಅಥವಾ ಹುಡುಗಿಯರ ಬದುಕು ಹೊಂದಾಣಿಕೆಯೊಂದಿಗೆಯೇ ಸರಿದೂಗಿಸುವ ಪರಿಸ್ಥಿತಿಗೆ ಬಂದು ನಿಂತಿದೆ. ಅದೂ ಸಂಸಾರ, ಜೀವನವೆಂಬ ಪಾಠದಲ್ಲಲ್ಲ ಕೆಲಸ ಎನ್ನುವ ದುಡಿಮೆಯಲ್ಲಿ. ಈ ಮಿಡಲ್ ಕ್ಲಾಸ್ ಕುಟುಂಬದ ತಂದೆ ತಾಯಿಯ ಆಲೋಚನೆಗಳು ಎಲ್ಲಿಗೆ ಸೀಮಿತವಾಗಿರುತ್ತವೆ ಎಂದರೆ, ನನ್ನ ಮಕ್ಕಳಿಗೆ ಒಂದೊಳ್ಳೆ ಶಿಕ್ಷಣ ಕೊಡಿಸಿದ್ದೇನೆ ಯಾವುದೋ ಖಾಸಗಿ ಕಂಪನಿಯಲ್ಲಿ ಕೆಲಸ ಸಿಕ್ಕರೆ ಸಾಕು ತಿಂಗಳಿಗೆ ಮನೆಗೆ ಹಾಗೂ ಸಾಲಕ್ಕೆ ತೀರಿಸುವ ಮೊತ್ತ ಕಳುಹಿಸಿದರೆ ಸಾಕು ಜೀವನವೆಂಬದುನ್ನು ಸಾಯುವವರೆಗೂ ಸರಿದೂಗಿಸಕೊಂಡು ಹೋಗಬಹುದು ಎಂಬ ನಂಬಿಕೆ. ಅದು … Read more

ಹೊತ್ತಿಗೆಯ ಹೊತ್ತು: ರಜನಿ ಜಿ‌ ಆರ್

ಪುಸ್ತಕವೆಂಬುದು ಜ್ಞಾನ ಪ್ರಸರಣದ ಮುಖ್ಯ ಮಾಧ್ಯಮ/ವಾಹಿನಿಯಾಗಿದೆ. ಪುರಾತನ ಕಾಲದಿಂದಲೂ ಪುಸ್ತಕಗಳ ಮಹತ್ವ ಅತ್ಯಂತ ಪ್ರಮುಖ ಸ್ಥಾನದಲ್ಲಿರುವುದು ಶ್ಲಾಘನೀಯ. ಭರತ ಖಂಡದಲ್ಲಿ ಉಪಯುಕ್ತವಾದ ಮಾಹಿತಿಗಳು, ತಾಳೆಗರಿ ಗಳಲ್ಲಿ ಬರೆದಿರುವ ಉದಾಹರಣೆಗಳೂ ಈಗಲೂ ಲಭ್ಯವಿದೆ. ಯಾವುದೇ ವಿಷಯವನ್ನು/ ಮಾಹಿತಿಯನ್ನು ಅಕ್ಷರ ರೂಪಕ್ಕಿಳಿಸಿ ಮುದ್ರಣದ ಮೂಲಕ ಓದುಗರನ್ನು ತಲುಪುವಂತೆ ಮಾಡುವುದೇ ಪುಸ್ತಕ. ಮಧ್ಯಕಾಲೀನ ಯುರೋಪಿನ ಪುನರುತ್ಥಾನದ ಕಾಲಘಟ್ಟದಲ್ಲಿ ಜಾನ್ ಗ್ಯುಟೆನ್ ಬರ್ಗ್ ರವರು ಅನ್ವೇಷಿಸಿದ ಮೊದಲಿಗೆ ಪುಸ್ತಕ ಮುದ್ರಣ ವ್ಯವಸ್ಥೆಯು ಬೆಳಕಿಗೆ ಬಂತು. ಅನಂತರ ಜ್ಞಾನ ಪ್ರಸರಣದ ಕಾರ್ಯ ವು ತೀವ್ರಗತಿಯಲ್ಲಿ … Read more

ಚಂದ್ರಶೇಖರ ಕಂಬಾರರ “ಕರಿಮಾಯಿ “ಮತ್ತು ಇತರೆ ಕಾದಂಬರಿಗಳು: ರಾಘವೇಂದ್ರ ಅಡಿಗ ಎಚ್ಚೆನ್.

1937 ಜನವರಿ 2 ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ ಜನಿಸಿದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಡಾ. ಚಂದ್ರಶೇಖರ ಕಂಬಾರರು ಹಲವು ಕ್ಷೇತ್ರಗಳಲ್ಲಿ ಪರಿಣತರು. ಅಸಂಖ್ಯಾತ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡವರು. ಸಾಹಿತ್ಯ, ಸಂಗೀತ, ರಂಗಭೂಮಿ,ಸಿನಿಮಾ ಎಲ್ಲವೂ ಅವರ ತೆಕ್ಕೆಗೆ ಸಿಕ್ಕಿ ಹೆಜ್ಜೆ ಗುರುತನ್ನು ಮೂಡಿಸಿಕೊಂಡವು. ಧಾರವಾಡದಲ್ಲಿ ಎಂ.ಎ ಮತ್ತು ಪಿ.ಎಚ್.ಡಿ ಪದವಿಗಳನ್ನು ಪಡೆದು ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ (1968-69), ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (1971-91) ಅಧ್ಯಾಪಕರಾಗಿ, ಪ್ರವಾಚಕರಾಗಿ ಸೇವೆ ಸಲ್ಲಿಸಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೊಟ್ಟ … Read more

ಸಾರ್. ಪ್ಲೀಸ್ ಸಹಾಯ ಮಾಡಿ … !!!!!!!!!: ನಾಗಸಿಂಹ ಜಿ ರಾವ್

( ಈ ಘಟನೆಯನ್ನು ಘಟನೆಯ ಪ್ರಮುಖ ವ್ಯಕ್ತಿಯ ಅನುಮತಿ ಪಡೆದು ಬರೆಯಲಾಗಿದೆ.. ಗೋಪ್ಯತೆಯ ಉದ್ದೇಶದಿಂದ ಹೆಸರುಗಳನ್ನು ಬದಲಿಸಿ ಬರೆದಿದ್ದೇನೆ ) ಸಾಮಾನ್ಯವಾಗಿ ನಾನು ಹೆಸರಿಲ್ಲದೆ ಬರಿ ನಂಬರ್ ಬರುವ ಕರೆಗಳನ್ನ ಬೇಗ ತೆಗೆಯೊಲ್ಲ. ನನ್ನ ಮೊಬೈಲ್ ನಂಬರ್ ಪದೇ ಪದೇ ಪತ್ರಿಕೆಗಳಲ್ಲಿ, ಟಿವಿ ನಲ್ಲಿ ಬಂದು ಸುಮ್ಮನೆ ಕರೆ ಮಾಡುವವರ ಸಂಖ್ಯೆ ಜಾಸ್ತಿ. ಇದು ಏನು ? ಯಾಕೆ ಸಹಾಯ ಮಾಡ್ತೀರಾ ? ಅನ್ನೂ ಪ್ರಶ್ನೆಗಳೇ.. ಅದಕ್ಕೆ ನಾನು ಹೆಸರಿಲ್ಲದೆ ಬರುವ ಕರೆ ಸ್ವೀಕಾರ ಮಾಡಲ್ಲ. ಆದ್ರೆ … Read more

ಆಹಾರವೇ ವಿಷವಾಗಿ, ವಿಷವೇ ಆಹಾರವಾಗಿರುವ ಈ ಕಾಲಘಟ್ಟದಲ್ಲಿ…: ಚಂಸು ಪಾಟೀಲ

ಮನುಷ್ಯ ಆಕಾಶದಲ್ಲಿ ಹಕ್ಕಿಯಂತೆ ಹಾರಬಲ್ಲ, ನೀರಿನಲ್ಲಿ ಮೀನಿನಂತೆ ಈಜಬಲ್ಲ; ಆದರೆ, ಮನುಷ್ಯ ಮನುಷ್ಯನಂತೆ ಭೂಮಿಯ ಮೇಲೆ ಬದುಕುವುದನ್ನು ಕಲಿಯಲಿಲ್ಲ. ಎಂದುಡಾ. ರಾಧಾಕೃಷ್ಣನ್ ರು ಹೇಳಿದ ಮಾತು ನನಗಿಲ್ಲಿ ನೆನಪಾಗ್ತಾ ಇದೆ. ನಮ್ಮ ಹಿರಿಯರು ಎಷ್ಟು ಗಟ್ಟಿಮುಟ್ಟಾಗಿದ್ದರು, ದೀರ್ಘಾಯುಷಿಗಳಾಗಿದ್ದರು. ಬೇಸಿಗೆಯಿಂದ ಹಿಡಿದು ಮಾಗಿಯವರೆಗೂ ನಿರಂತರ ಎಷ್ಟೊಂದು ಕೃಷಿ ಚಟುವಟಿಕೆಗಳನ್ನು ನಿಭಾಯಿಸುತ್ತಿದ್ದರು. ನೀರಾವರಿ ಇಲ್ಲದ ಕಾಲದಲ್ಲಿ ಕೇವಲ ಮಳೆಯನ್ನೇ ನೆಚ್ಚಿ ಬೆಳೆದರು.ಟ್ರ್ಯಾಕ್ಟರ್ಗಳಿಲ್ಲದಾಗ ಬರಿ ಎತ್ತುಗಳನ್ನು ಹೂಡಿಯೆ ಹೊಲ ಉಳುಮೆ ಮಾಡಿದರು. ಒಕ್ಕುವ ಯಂತ್ರಗಳೇ ಇಲ್ಲದ ಸಂದರ್ಭದಲ್ಲಿ ಖಣದಲ್ಲಿ ತಿಂಗಳುಗಟ್ಟಲೇ ತೂರಿ, … Read more

ಪುರುಷರಿಗೂ ಇದೆ ಆಚರಿಸುವ ಒಂದು ಅಂತರ ರಾಷ್ಟ್ರೀಯ ಪುರುಷ ದಿನ: ಚಂದ್ರು ಪಿ ಹಾಸನ್

ಈ ಭೂಮಿಯ ಮೇಲೆ ಜೀವ ರಾಶಿಗಳು ಉದಯವಾಗಬೇಕೆಂದರೆ ಅಲ್ಲಿ ಒಂದು ಗಂಡು ಕುಲ ಮತ್ತೊಂದು ಹೆಣ್ಣು ಕುಲವೆಂಬ ಎರಡು ಸಮಾನ ಗುಂಪುಗಳನ್ನು ಕಾಣಬಹುದಾಗಿದೆ. ಅಲ್ಲಿ ಮುಂದಿನ ಪೀಳಿಗೆಯ ಸೃಷ್ಟಿ ಇವೆರಡರ ಸಮ್ಮಿಲನದಿಂದ ಎಂಬುದು ತಿಳಿದಿರುವ ವಿಷಯವಾಗಿದೆ. ಇಲ್ಲಿ ಸ್ತ್ರೀ ಕುಲವು ಮುಂದಿನ ಪೀಳಿಗೆಯನ್ನು ತನ್ನ ಮಡಿಲಲ್ಲಿ ಸಾಕಿ ಸಲಹಿ ಪ್ರಪಂಚಕ್ಕೆ ಪರಿಚಯಿಸುವ ಒಂದು ಮಹತ್ವವಾದ ನಿಯಮವನ್ನು ಪಾಲಿಸುತ್ತಾ ಈ ಭೂಮಿಯಲ್ಲಿ ಹೊಸ ಹೊಸ ಜೀವಿಗಳ ಉಗಮಕ್ಕೆ ಕಾರಣವಾಗಿದೆ ಎಂಬುದನ್ನು ನಾವು ಪುಸ್ತಕಗಳಲ್ಲಿ ಓದುತ್ತಾ, ಪ್ರಕೃತಿಯನ್ನು ಗಮನಿಸುತ್ತಾ, ತಮ್ಮ … Read more

“ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿಯೇ ಆಗಬೇಕು ಎಂಬುದರ ವೈಚಾರಿಕ ಚಿಂತನೆ”: ರವಿತೇಜ.ಎಂ.ಎನ್

ನಮ್ಮ ಸುತ್ತಮುತ್ತಲಿನವರೊಡನೆ ವ್ಯವಹರಿಸುವುದಕ್ಕೆ ಹಾಗೂ ವಿಚಾರ ವಿನಿಮಯ ಮಾಡುವುದಕ್ಕೆ ಭಾಷೆ ಒಂದು ಅಮೂಲ್ಯ ಸಾಧನ ಮತ್ತು ಸಂವಹನ ಮಾಧ್ಯಮ. ಇದು ಮಾತು,ಬರಹ ಮತ್ತು ಭಾವಾಭಿವ್ಯಕ್ತತೆ ರೂಪದಲ್ಲಿ ಅಭಿವ್ಯಕ್ತಿಗೊಳ್ಳುತ್ತದೆ.ಭಾಷೆಗೆ ರೂಪ, ಆಕಾರ, ಭೌತಿಕ ಅಥವಾ ರಚನಾತ್ಮಕ ಗುಣಗಳೇನೂ ಇಲ್ಲ. ಇದು ಪ್ರಾದೇಶಿಕವಾಗಿ ಜನಜೀವನದ ನಿತ್ಯ ವ್ಯವಹಾರದ ಸನ್ನಿವೇಶವನ್ನು ಅರ್ಥೈಸುವ ಹೊಂದಾಣಿಕೆ ಕೆಲಸವನ್ನು ಪ್ರಾತಿನಿಧಿಕವಾಗಿ ನಿರ್ವಹಿಸುವ ಮಾಧ್ಯಮವಾಗಿರುತ್ತದೆ. ಮಾನವನಗಿರುವ ಚಿಂತಿಸುವ, ಪರಿಭಾವಿಸುವ , ಸದಾ ಚೈತನ್ಯದಾಯಕದಿಂದ ಮೌಖಿಕವಾಗಿ ಸ್ಪಂದಿಸುವ , ಪ್ರತಿಕ್ರಿಯಿಸುವ ಬೌದ್ಧಿಕ ಶಕ್ತಿಯೇ ಭಾಷೆಗೆ ಮೂಲ ಹಿನ್ನೆಲೆಯಾಗಿದೆ.ಈ ಪ್ರಕ್ರಿಯೆಯ … Read more

ನಮ್ಮ ಕನ್ನಡದ ನೋವು ನಲಿವು !: ಕೆ ಟಿ ಸೋಮಶೇಖರ್ ಹೊಳಲ್ಕೆರೆ

ಮಾತುಗಳ ಮೂಲಕ ಭಾವನೆಗಳನ್ನು ಹೊರ ಹಾಕುವ ಸಾಮರ್ಥ್ಯ ಮಾನವನಿಗೆ ಮಾತ್ರ ಇದೆ. ಇದು ಪ್ರಕೃತಿ ಮಾನವನಿಗೆ ಕೊಟ್ಟಿರುವ ವರ! ಭಾಷೆಯ ಸೃಷ್ಟಿ ಮಾನವನ ಸೃಜನೆಗಳಲ್ಲಿ ಅಧ್ಬುತವಾದುದು. ಕೊಡಲು ಕೊಳ್ಳಲು, ಸಂವಹನ ಮಾಡಲು, ಭಾವನೆಗಳನ್ನು ಅಭಿವ್ಯಕ್ತಿಸಲು, ವ್ಯವಹರಿಸಲು ಭಾಷೆ ಅತಿ ಅವಶ್ಯಕ. ಹುಟ್ಟಿದ ಮನೆಯಲ್ಲಿ ನಡೆಯಂತೆ ನುಡಿಯನ್ನೂ ಕಲಿತಿರುತ್ತೇವೆ ಅದೇ ಆಗುವುದು ಮಾತೃಭಾಷೆ. ಎಲ್ಲರ ಮಾತೃಭಾಷೆಯಲ್ಲಿ ಎಲ್ಲಿ ಜ್ಞಾನ ಇರುವುದಿಲ್ಲ. ಹಾಗೆ ಅಲ್ಲಿ ಇಲ್ಲದ ಜ್ಞಾನವನ್ನು ಅನ್ಯ ಭಾಷೆಯಲ್ಲಿ ಕಲಿಯಬೇಕಾಗುತ್ತದೆ. ವಿಜ್ಞಾನ, ತಂತ್ರಜ್ಞಾನ, ಜೀವವಿಜ್ಞಾನ, ವೈದ್ಯವಿಜ್ಞಾನ ಮುಂತಾದವು ನಮ್ಮ … Read more

ಕನ್ನಡವೆಂದರೆ ಬರಿನುಡಿಯಲ್ಲ: ಸಂತೋಷ್‌ ಟಿ.

ಕನ್ನಡವೆಂದರೆ ಬರಿನುಡಿಯಲ್ಲ ಹಿರಿದಿದೆ ಅದರರ್ಥ ಎಂದು ನಲ್ಮೆಯ ಕವಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಆದ ಪ್ರೊ. ಕೆ.ಎಸ್. ನಿಸಾರ್ ಅಹಮ್ಮದ್ ಅವರ ನವೋಲ್ಲಾಸ ಕೃತಿಯ ಒಂದು ಕವಿತೆಯ ಉವಾಚ. ಕನ್ನಡವೆಂದರೆ ಬರಿ ನುಡಿಯಲ್ಲ ಅದರ ಅರ್ಥ ಬಹಳ ಹಿರಿದು ಎಂಬ ಕವಿಯ ಪರಿಕಲ್ಪನೆ ಮಹೋನ್ನತವಾದ ಧ್ಯೇಯ ಮತ್ತು ಅಧ್ಯಯನದಿಂದ ಕೂಡಿದೆ. ಕನ್ನಡ ಅಥವಾ ಕರ್ನಾಟಕವೆಂದರೆ ಭಾರತದಲ್ಲಿ ಮಹತ್ವದ ಸ್ಥಾನವಾಗಿದೆ. ಭೌಗೋಳಿಕ, ಭಾಷಿಕ, ಸಾಹಿತ್ಯಿಕ, ಸಾಂಸ್ಕೃತಿಕ ರಾಜಕೀಯ ಎಲ್ಲಾ ರೀತಿಯಿಂದಲೂ ಅದು ಉನ್ನತವಾದ ಚರಿತ್ರೆಯನ್ನು ತನ್ನ ಇತಿಹಾಸದ ಪುಟಗಳ … Read more