ಡಾ. ಶಾಂತಲಕ್ಷ್ಮಿಯವರ ಕಾವ್ಯ ಚಿಂತನೆ: ಸಂತೋಷ್ ಟಿ

ಅಭಿಜಾತ ಕನ್ನಡ ಲಲಿತಾಕಲಾ ಲೋಕದ ಕಾವ್ಯನ್ವೇಷಣೆಯಲ್ಲಿ ಹೊಸಚಿಂತನೆಗಳ ಬೆರಗು ಮೂಡಿಸಿದ ಕವಯತ್ರಿ ಡಾ. ಶಾಂತಲಕ್ಷ್ಮಿ. ಭಾವನೂಭೂತಿಯ ಅಭೀಪ್ಸೆಯ ಉತ್ಸುಕತೆಯಿಂದ ಸ್ರಜನಶೀಲ ಅಭಿವ್ಯಕ್ತಿ ಮಾಧ್ಯಮ ಕಾವ್ಯದಲ್ಲಿ ತಮ್ಮ ಧ್ವನಿಯನ್ನು ಅನುಸಂಧಾನ ಮಾಡುತ್ತಿರುವ ಮಹಿಳಾ ಸಾಧಕರಲ್ಲಿ ಈ ಕವಯತ್ರಿಯ ಕಾವ್ಯ ನವಿರಾದ ಭಾವಗಳಿಂದ ಜೀವತುಂಬಿ ಹರಿಯುವಂತದ್ದು. ವಾಸ್ತವದ ಬದುಕಿನ ನುಂಟು ಉಂಟು ಮಾಡಿದ ಸಹನೀಯತೆˌ ಕರುಳು ಮಿಡಿಯುವ ಭಾವಧಾರೆˌಪ್ರಕ್ರತಿಯ ಜೀವ ವೈವಿಧ್ಯ ದ್ರವ್ಯˌಬದುಕಿನ ಮೌಲ್ಯಗಳುˌ ಜಾಗತಿಕವಾಗಿ ಬದಲಾದ ಸನ್ನಿವೇಶಗಳುˌ ಕೃತಕತೆಯ ಮೋಡಿ ನಿಯೋನ್ ಸನ್ನೆಗಳು, ಸ್ವಾರ್ಥ ಪರಿಸ್ಥಿತಿಯ ಬಿಕ್ಕಟುಗಳ ಲಾಲಸೆಗಳು … Read more

ಸಂವಿಧಾನದ ಮಹತ್ವವನ್ನು ಸಾರುವ ಮನೋಜ್ಞ ಸಿನಿಮಾ – 19.20.21: ಚಂದ್ರಪ್ರಭ ಕಠಾರಿ

ಹರಿವು, ನಾತಿಚರಾಮಿ, ಆಕ್ಟ್ 1978 ಸಿನಿಮಾಗಳಿಂದ ಸಂವೇದನಾಶೀಲ ನಿರ್ದೇಶಕರೆಂದು ಗುರುತಿಸಲ್ಪಟ್ಟಿರುವ  ಮಂಸೋರೆಯವರ ಹೊಸ ಸಿನಿಮಾ-19.20.21. ಟೈಟಲ್ ಸೇರಿದಂತೆ ಹಲವು ಕುತೂಹಲಗಳೊಂದಿಗೆ ಅವರು ಸಿನಿಮಾವನ್ನು ತೆರೆಗೆ ತಂದಿದ್ದಾರೆ. ಹಾಗೆ ತರುವಾಗ ಹಲವು ಸವಾಲುಗಳನ್ನು ತಮ್ಮ ಸಿನಿಮಾ ತಯಾರಿಕೆಯ ಅನುಭವದಿಂದ, ಪ್ರತಿಭಾವಂತಿಕೆಯಿಂದ ನಿಭಾಯಿಸಿದ್ದಾರೆ.   ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಲ್ಲಿರುವ ಕುತ್ಲೂರು ಗ್ರಾಮದಲ್ಲಿ ಶತಮಾನಗಳಿಂದ ಬದುಕಿರುವ ಆದಿವಾಸಿ ಬುಡಕಟ್ಟು ಜನಾಂಗವಾದ ಮಲೆಕುಡಿಯರನ್ನು, ಸರ್ಕಾರ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಯೋಜನೆಯನ್ನು ಜಾರಿ ಮಾಡಿ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ, ಆಳುವ ಪ್ರಭುತ್ವದಿಂದ ನಡೆದ ದೌರ್ಜನ್ಯಗಳ … Read more

ತೇರ ಹಳ್ಳಿಯ ಸಿನಿಮಾ ತೇರು: ಎಂ ನಾಗರಾಜ ಶೆಟ್ಟಿ

ʼಸಿನ್ಮಾ ಚೆನ್ನಾಗಿತ್ತು, ದರ್ಶನ್ ಸಿನ್ಮಾನೂ ತೋರ್ಸ್‌ಬೇಕಿತ್ತು” ಆರು ವರ್ಷದ ಪೋರ ಹೇಳಿದ ಮಾತು. ಈ ಮಾತಲ್ಲಿ ಸತ್ಯವಿದೆ. ಆರೇನು, ಅರವತ್ತರ ವಯಸ್ಸಿನವರೂ ಒಂದೇ ಬಗೆಯ, ರಂಜನೆಯ ಸಿನಿಮಾಗಳನ್ನು ನೋಡುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಇದಕ್ಕಿಂತ ಭಿನ್ನವಾದ, ಸಾಮಾಜಿಕ ಅರಿವು ಮೂಡಿಸುವ, ಬುದ್ದಿಯನ್ನು ಕೆಣಕುವ, ಕಟು ವಾಸ್ತವವನ್ನು ತಿಳಿಸುವ ಚಿತ್ರಗಳ ಬಗ್ಗೆ ಅರಿವು ಮೂಡಿಸಬೇಕು. ನಮ್ಮ ಪಠ್ಯಕ್ರಮದಲ್ಲಿ ಅದಕ್ಕೆ ಅವಕಾಶವಿಲ್ಲ. ಸಿನಿಮಾ ಹಬ್ಬಗಳು, ಸಿನಿಮೋತ್ಸವಗಳು ಸ್ವಲ್ಪ ಮಟ್ಟಿಗೆ ಈ ಕೊರತೆಯನ್ನು ನೀಗಿಸುತ್ತವೆ. ಅವು ಸಿನಿಮಾ ನೋಡುವ, ಅರ್ಥ ಮಾಡಿಕೊಳ್ಳುವ, ವಿಶ್ಲೇಷಿಸುವ … Read more

ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪನವರ ಕಾವ್ಯ ಒಂದು ಅಧ್ಯಯನ: ಸಂತೋಷ್ ಟಿ

ಕನ್ನಡ ಸಾರಸ್ವತ ಲೋಕದ ಕೇಂದ್ರಬಿಂದುವಾಗಿ ಸಾಹಿತ್ಯದ ವಿವಿಧ ಜ್ಞಾನಶಿಸ್ತುಗಳನ್ನು ಬೆಳಗಿಸಿದ ಹಣತೆ ಜಿ.ಎಸ್.ಶಿವರುದ್ರಪ್ಪನವರು. 1926 ಫೆಬ್ರವರಿ 7ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರಿನಲ್ಲಿ ಜನಿಸಿದರು. ತಂದೆ ಶಾಂತವೀರಪ್ಪˌತಾಯಿ ವೀರಮ್ಮ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 1949ರಲ್ಲಿ ಬಿ.ಎ ಅನರ್ಸ್ ಪದವಿˌ1953ರಲ್ಲಿ ಎಂ.ಎ ಪದವಿ ಪಡೆದರು. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸುವರ್ಣ ಪದಕಗಳನ್ನು ಪಡೆದಿರುವರು.1960ರಲ್ಲಿ ಕುವೆಂಪು ಅವರ ಮಾರ್ಗದರ್ಶನದಲ್ಲಿ ಸೌಂದರ್ಯ ಸಮೀಕ್ಷೆ ಎಂಬ ಸಂಶೋಧನಾ ಪ್ರೌಢಪ್ರಬಂಧ ಮಂಡಿಸಿ ಪಿಎಚ್ ಡಿ ಡಾಕ್ಟರೇಟ್ ಪದವಿ ಪಡೆದರು. ವ್ರತ್ತಿಜೀವನವನ್ನು 1949ರಲ್ಲಿ ಆರಂಭಿಸಿದ ಇವರು … Read more

“ಸಂಪಾದಕರಿಗೊಂದು ಪತ್ರ”: ಎಂ. ಜವರಾಜ್

-೧- ಸರ್ ನಮಸ್ಕಾರ, ಏನ್ ಸರ್ ನೀವು ಆಡಾಡ್ತ ಹತ್ತು ವರ್ಷ ತುಂಬಿಸಿ ಬಿಟ್ಟಿರಲ್ಲ. ಗ್ರೇಟ್ ಸರ್. ಹತ್ತು ವರ್ಷ ಅಂದ್ರೆ ಸಾಮಾನ್ಯನ ಸರ್. ಸಾಹಿತ್ಯ ಸಂಬಂಧಿತ ಪತ್ರಿಕೆಯನ್ನು ಮಾಡಿ ಅದರಲ್ಲು ಸಾಹಿತ್ಯಾಸಕ್ತ ಆನ್ ಲೈನ್ ಓದುಗರನ್ನು ಹಿಡಿದಿಟ್ಟುಕೊಂಡು ನಿಗಧಿತವಾಗಿ ಪತ್ರಿಕೆ ರೂಪಿಸುವುದಿದೆಯಲ್ಲ ಸುಮ್ನೆನಾ ಸರ್. ಪ್ರತಿ ಸಂಚಿಕೆಗೂ ಕಥೆ, ಕವಿತೆ, ವಿಮರ್ಶೆ, ಪ್ರಬಂಧ ತರಹದ ಭಿನ್ನ ಬರಹಗಳನ್ನು ಆಯ್ದು ಸೋಸಿ ರಂಗೋಲಿ ಚಿತ್ತಾರದಾಗೆ ತುಂಬುವುದಿದೆಯಲ್ಲ ಅದು ಸರ್. ಅದಕ್ಕೆ ನಾನ್ ಹೇಳಿದ್ದು ಗ್ರೇಟ್ ಅಂತ. ಈ … Read more

ವಿಧಿಯ ವಕಾಲತ್ತು: ಹೆಚ್ ಷೌಕತ್ ಆಲಿ, ಮದ್ದೂರು

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸದ ಹೊರೆ ಜಾಸ್ತಿ ಇರುತ್ತೆ.ಪ್ರತಿ ದಿನ ಪ್ರಯಾಣ, ಬೆಳಿಗ್ಗೆಯಿಂದ ಸಂಜೆವರೆವಿಗೂ ವೃತ್ತಿ ನಂತರ ಸಂಜೆ ರಾತ್ರಿಯಾಗಿ ಇಡೀ ದಿನದ ಆಗು ಹೋಗುಗಳ ಅರಿವೇ ಇಲ್ಲದಂತಾಗುತ್ತೆ, ಆದರೂ ನಮ್ಮ ಸುತ್ತ-ಮುತ್ತಲಿನ ವಿದ್ಯುನ್ಮಾನಗಳೆಲ್ಲ ನಾವು ತಿಳಿದುಕೊಂಡು ವಿದ್ಯಾರ್ಥಿಗಳಿಗೆ ಅವರ ಜ್ಞಾನಾರ್ಜನೆಯಲ್ಲಿ ಪ್ರಗತಿ ಕಾಣುವಂತೆ ಮಾಡಬೇಕಾಗುತ್ತೆ. ಸಮಾಜದಲ್ಲಿ ಶಿಕ್ಷಕರಿಗೆ ಅತ್ಯಂತ ಗೌರವ ದೃಷ್ಠಿಯಿಂದ ಸ್ವೀಕರಿಸಿದರೂ ಶಿಕ್ಷಕರಿಗೂ ಅಂತಃಕರಣ ವಿರುತ್ತೆ ಅವರದೇ ಆದ ಅನೇಕ ಸಮಸ್ಯೆಗಳು ಅವರೊಂದಿಗೆ ಮನದ ಮೂಲೆಯಲ್ಲಿ ಚರ್ಚಾ ಗೋಷ್ಠಿಗಳನ್ನೇ ಏರ್ಪಡಿಸಿರುತ್ತವೆ. ಇವುಗಳನ್ನು ಗೌಣವಾಗಿಟ್ಟುಕೊಂಡು ಮೇಲ್ನೋಟಕ್ಕೆ … Read more

ದೀಪವೂ ನಿನ್ನದೇ ಗಾಳಿಯು ನಿನ್ನದೇ !: ಮನು ಗುರುಸ್ವಾಮಿ

ಕನ್ನಡದ ಸಾಹಿತ್ಯದಲ್ಲಿ ಜ್ಯೋತಿ, ಹಣತೆ, ದೀಪ ಈ ಪದಗಳು ಯಾವುದೋ ಒಂದು ವಿಚಾರದ ಘನತೆ ಅಥವಾ ಹೆಮ್ಮೆಯ ಸಂಕೇತವಾಗಿ ಬಂದು ಹೋಗುತ್ತವೆ. ಸು 16ನೇ ಶತಮಾನದಲ್ಲಿ ಜೀವಿಸಿದ್ದ ಸರ್ವಜ್ಞ ಜಾತಿ ವ್ಯವಸ್ಥೆಯ ವಿರುದ್ದ ಮಾತುನಾಡುವಾಗ “ಜಾತಿ ಹೀನನ ಮನೆಯ ಜ್ಯೋತಿ ತಾ ಹೀನವೇ”‌ ಎಂದಿದ್ದಾನೆ. ಅಂದರೆ ಜಾತಿಗನ ಮನೆಯೇ ಆಗಿರಲಿ ಜಾತಿ ಹೀನನ ಮನೆಯೇ ಆಗಿರಲಿ ಹಣತೆಯ ಕೆಲಸವೇನಿದ್ದರೂ ಬೆಳಕನ್ನು ನೀಡುವುದು. ಅದು ಯಾವುದೇ ತಾರತಮ್ಯ ಮಾಡುವುದಿಲ್ಲ. ಅದಕ್ಕಾಗಿಯೇ ಚೆನ್ನವೀರ ಕಣವಿ ಅವರು “ಅರಿವೇ ಗುರು; ನುಡಿ … Read more

ಅಷ್ಟು ಪ್ರೀತಿ ಇಷ್ಟು ಪ್ರೀತಿ ಎಣಿಸಿ ಕಷ್ಟಬಡದಿರು: ಮನು ಗುರುಸ್ವಾಮಿ

ಎನ್ನ ಪಾಡೆನಗಿರಲಿ ಅದರ ಹಾಡನ್ನಷ್ಟೇನೀಡುವೆನು ರಸಿಕ ನಿನಗೆಕಲ್ಲು ಸಕ್ಕರೆಯಂಥ ನಿನ್ನೆದೆಯು ಕರಗಿದರೆಆ ಸವಿಯ ಹಣಿಸು ನನಗೆ ಬೇಂದ್ರೆ… ಧಾರವಾಡ ಅಜ್ಜ, ಶಬ್ದಗಾರುಡಿಗ, ಬದುಕಿನ ಅನನ್ಯತೆಯನ್ನು ಪದ್ಯಗಳಲ್ಲಿ ಹಿಡಿದಿಟ್ಟ ಮಾಂತ್ರಿಕ. ಬಡತನದ ಬೇಗೆಯಲ್ಲೂ ದಾಂಪತ್ಯವೆಂಬುದು ಹೇಗಿರಬೇಕೆಂಬುದನ್ನು ತೋರಿಸಿಕೊಟ್ಟ ಕವಿ. ಕೆ ಎಸ್ ನರಸಿಂಹಸ್ವಾಮಿ ಒಂದುಕಡೆ “ಪ್ರೇಮವೆನಲು ಹಾಸ್ಯವೆ ?” ಎಂದ ಪ್ರಶ್ನಿಸುತ್ತಾರೆ. ಆಗಿದ್ದರೆ ? ಒಲವೆಂಬುದೇನು ? ಅದು ಹುಡುಗಾಟವಲ್ಲ. “ಒಲವೆಂಬುದು ಹೊತ್ತಿಗೆ” ಎನ್ನುವುದೇ ಬೇಂದ್ರೆಯವರ ನಿಲುವು. ಪ್ರೀತಿ ಮತ್ತು ದಾಂಪತ್ಯವನ್ನು ಒಂದುಗೊಳಿಸಿ ಕಾವ್ಯವನ್ನು ಕಟ್ಟಿಕೊಡುವ ಬೇಂದ್ರೆ, ತಮ್ಮ … Read more

ಸತ್ಮೇಲೆ ಏನೈತಣ್ಣ ? ದೊಡ್ ಸೊನ್ನೆನೆ ! : ಮನು ಗುರುಸ್ವಾಮಿ

“ಯೆಂಡ, ಯೆಡ್ತಿ, ಕನ್ನಡ ಪದಗೊಳ್” ಎಂದ ತಕ್ಷಣ ನಮಗೆ ನೆನಪಾಗುವುದೇ ಕನ್ನಡದ ಪ್ರಸಿದ್ಧ ಬರಹಗಾರರಾದ ಜಿ ಪಿ ರಾಜರತ್ನಂರವರು. ಯೆಂಡ, ಹೆಂಡತಿ, ಕನ್ನಡದ ಬಗ್ಗೆ ಅಪಾರ ಒಲವಿದ್ದ ಕವಿ ತಮ್ಮ ಕವಿತೆಗಳಲ್ಲಿ ತಿಳಿಹಾಸ್ಯದ ಮೂಲಕ ಬದುಕನ್ನು, ಬದುಕುವ ರೀತಿಯನ್ನು ಬಹಳ ವಿಸ್ತಾರವಾಗಿ ಕಟ್ಟಿಕೊಟ್ಟಿದ್ದಾರೆ. ಗ್ರಾಮೀಣ ಭಾಷೆಯ ಸೊಗಡಿನಿಂದ ಕೂಡಿದ ಪದಪುಂಜಗಳು, ಪ್ರಾಸಗಳ ಸರಳ ಹೊಂದಿಕೆ, ವಾಸ್ತವಕ್ಕೆ ಹತ್ತಿರವಾದ ವಿಚಾರಗಳು ಈ ಎಲ್ಲವೂ ಒಟ್ಟಿಗೆ ಸೇರಿ ಕವಿತೆಗಳನ್ನು ಒಮ್ಮೆ ಓದಿದ ಸಹೃದಯನನ್ನು ಮತ್ತೆ ಮತ್ತೆ ತಮ್ಮತ್ತ ಆಕರ್ಷಿಸುತ್ತವೆ. ಈಗಾಗಲೇ … Read more

“ಉಪ್ಪುಚ್ಚಿ ಮುಳ್ಳು” ವಿಲಕ್ಷಣ, ವಿಕ್ಷಿಪ್ತ, ವಿಚಿತ್ರ ಎನಿಸಿದರೂ ವಿಶಿಷ್ಟ ಕೃತಿ: ಡಾ. ನಟರಾಜು ಎಸ್.‌ ಎಂ.

ಕಳೆದ ವರ್ಷ ಅನಿಸುತ್ತೆ ಸಿರಾ ಸೀಮೆಯ ರಂಗಕರ್ಮಿ ಗೋಮಾರದಹಳ್ಳಿ ಮಂಜುನಾಥ್‌ ರವರು ತಾವು ಇಷ್ಟಪಟ್ಟು ಶುರು ಮಾಡಿರುವ Native nest ಎಂಬ ಯೂ ಟ್ಯೂಬ್‌ ಚಾನೆಲ್‌ ನಲ್ಲಿ ಕವಿತೆಯೊಂದನ್ನು ವಾಚನ ಮಾಡಿದ್ದರು. ಕವಿತೆಯ ಶೀರ್ಷಿಕೆ “ಮೊಲೆ” ಎಂದಾಗಿತ್ತು. ಕವಿಯ ಹೆಸರು ದಯಾ ಗಂಗನಘಟ್ಟ (ದಾಕ್ಷಾಯಿಣಿ). “ಮೊಲೆ” ಅನ್ನುವ ಕವನವನ್ನು ಅದಕ್ಕೂ ಮೊದಲು ಆಶಾ ಜಗದೀಶ್‌ ರವರು ಫೇಸ್‌ ಬುಕ್‌ ನಲ್ಲಿ ಬರೆದಿದ್ದರು. ಎರಡೂ ಕವಿತೆಗಳನ್ನು ನೋಡಿದ್ದ ನನಗೆ ದಯಾ ಗಂಗನಘಟ್ಟ, ಆಶಾ ಜಗದೀಶ್‌ ರವರಿಂದ ಸ್ಫೂರ್ತಿ ಪಡೆದರಾ? … Read more

ಗ್ರಹಣ: ಡಾ. ವೃಂದಾ ಸಂಗಮ್

ಗ್ರಹಣ ಎಂದರೇನು? ಅಂತ ಐದನೇ ಕ್ಲಾಸಿನೊಳಗ ವಿಜ್ಞಾನದ ವಿಷಯದೊಳಗ ಒಂದು ಪ್ರಶ್ನೆ ಇತ್ತು. ಒಂದು ಆಕಾಶಕಾಯ ಇನ್ನೊಂದು ಆಕಾಶ ಕಾಯದ ನೆರಳಿನಿಂದ ಆಂಶಿಕವಾಗಿ ಇಲ್ಲವೇ ಪೂರ್ಣವಾಗಿ ಅಸ್ಫುಟವಾಗುವಿಕೆಯನ್ನು ಗ್ರಹಣ ಎನ್ನುವರು ಅಂತ ಬಾಯಿಪಾಠಾನೂ ಮಾಡಿಸಿದ್ದಳು, ನಮ್ಮವ್ವ. ಹಿಂದ ನಾವು ಬಾಯಿಪಾಠ ಕಲಿತಿದ್ದು ಈಗಲೂ ನೆನಪಿರತದ, ಮೂರು ವರುಷದ ುದ್ಧಿ ನೂರು ವರುಷದ ತನಕಾಂತ. ಆದರ, ಈಗ ಗ್ರಹಣ ಎಂದರೇನು? ಪ್ರಶ್ನೆ ಮುಂದ ನಿಮ್ಮ ಮಾತಿನಲ್ಲಿ ಬರೆಯಿರಿ ಅಂತ ಇತ್ತು, ನಾನೂ ಹಿಂದ ಮುಂದ ನೋಡಲಿಲ್ಲ, ನಮ್ಮವ್ವ ಬಾಯಿಪಾಠ … Read more

ಕುಗ್ಗಿದಾಗಲೆಲ್ಲಾ ಕಗ್ಗ ಓದಬೇಕು !: ಮನು ಗುರುಸ್ವಾಮಿ

ಹೌದು.. ಮನುಷ್ಯ ಕುಗ್ಗಿದಾಗಲೆಲ್ಲಾ ಮಂಕುತಿಮ್ಮನ ಕಗ್ಗ ಓದಬೇಕು. ಬಹುತೇಕ ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ, ಇರುವಷ್ಟು ಕಾಲ ಸೂರ್ಯನಂತೆ ಬೆಳಗಿ ಮರೆಯಾಗಬೇಕೆಂಬ ಸಂದೇಶವನ್ನು ಸಾರುವಲ್ಲಿ, ಬದುಕಿನ ಅಪರಿಮಿತ ಹೋರಾಟ, ಅನಿರೀಕ್ಷಿತ ಸವಾಲುಗಳನ್ನು ಹೇಗೆ ಎದುರುಗೊಳ್ಳಬೇಕೆಂಬ ವಿಚಾರವನ್ನು ಮನದಟ್ಟು ಮಾಡುವಲ್ಲಿ ಈ ಕೃತಿ ಮಹತ್ವದ ಪಾತ್ರವಹಿಸಿದೆ. ನಾನು, ನನ್ನದೆಂಬ ಭ್ರಮೆಯಲ್ಲಿ ಜೀವನವಿಡೀ ನಡೆದು, ಕೊನೆಗೆ ಎಲ್ಲವನ್ನು ಬಿಟ್ಟು ಮಣ್ಣು ಸೇರುವ ಮನುಷ್ಯನ ನಶ್ವರ ಬದುಕಿನ ಬಗ್ಗೆ ಇಲ್ಲಿನ ಚೌಪದಿಗಳು ಎಳೆ ಎಳೆಯಾಗಿ ತಿಳಿಸಿಕೊಡುತ್ತವೆ. ನಾಲ್ಕು ಸಾಲಿನ ಸಣ್ಣ ಸಣ್ಣ ಪದ್ಯಗಳಿಂದ … Read more

ಕಲ್ಲು ದೇವರು ದೇವರಲ್ಲ: ಮನು ಗುರುಸ್ವಾಮಿ

ವಿಗ್ರಹಾರಾಧನೆ ಎಂಬುದು ಬಹುತೇಕ ಮೂರ್ತಿ ಪೂಜೆ ಎಂಬ ಅರ್ಥವನ್ನೇ ನೀಡುವಂತದ್ದು. ಜನಪದರಿಂದ ಹಿಡಿದು ಶಿಷ್ಟಪದದವರೆಗೂ ಮೂರ್ತಿ ಪೂಜೆ ಅಸ್ತಿತ್ವದಲ್ಲಿರುವುದನ್ನು ನಾವು ಗಮನಿಸಬಹುದು. ಕೆಲವರು ಕಲ್ಲು, ಮಣ್ಣು, ಮರ, ಲೋಹ ಇತ್ಯಾದಿಗಳನ್ನು ಬಳಸಿ ನಿರ್ಮಿಸಲ್ಪಟ್ಟ ಒಂದು ಆಕೃತಿಗೆ ದೇವರೆಂಬ ಸ್ಥಾನಕೊಟ್ಟು ಆರಾಧಿಸುತ್ತಾ ಬಂದಿದ್ದಾರೆ. ಇನ್ನೂ ಕೆಲವರು ಕಲ್ಲು, ಮಣ್ಣು, ಮರ ಮೊದಲಾದ ಭೌತಿಕ ವಸ್ತುಗಳನ್ನು ದೇವರೆಂದು ಪೂಜಿಸಿತ್ತಾ ಬಂದಿದ್ದಾರೆ. ಭೌತಿಕ ವಸ್ತುಗಳು ಮಾನವನ ನಿತ್ಯ ಜೀವನದಲ್ಲಿ ಅವಶ್ಯಕವಾಗಿರುವುದರಿಂದ ಜನಪದರು ಅದನ್ನೇ ದೇವರೆಂದು ನಂಬಿ ಪೂಜಿಸುತ್ತಾ ಬಂದಿದ್ದಾರೆ ಎಂಬ ಮಾತು … Read more

ಹಿಂದಿ ಚಿತ್ರಕಥಾ ಸಂವಾದದಲ್ಲಿ ಮಾಹಿರರಾಗಿದ್ದ ಕಾದರ್ ಖಾನ್ !: ಎಚ್ಚಾರೆಲ್

ಕಾದರ್ ಖಾನ್ : (೨೨, ಅಕ್ಟೋಬರ್ ೧೯೩೭-೩೧, ಡಿಸೆಂಬರ್, ೨೦೧೮) ನಿಧನರಾದಾಗ ಅವರ ವಯಸ್ಸು : ೮೧ ವರ್ಷವಾಲಿದ್ ಹೆಸರು, : ಅಬ್ದುಲ್ ರೆಹ್ ಮಾನ್ ಖಾನ್,ವಾಲಿದಾರ ಹೆಸರು, ಇಕ್ಬಾಲ್ ಬೇಗಂಹೆಂಡತಿಯ ಹೆಸರು : ಅಜ್ರಾ ಖಾನ್ಪಸ್ಟೂನ್ ಟ್ರೈಬ್, ಸುನ್ನಿ ಜಾತಿಗೆ ಸೇರಿದವರು.ಓದಿದ ಕಾಲೇಜ್ : ಇಸ್ಮೇಲ್ ಯೂಸುಫ್ ಕಾಲೇಜ್, ಬೊಂಬಾಯಿ.ಆಗಿನ ಕಾಲದ ಸಿವಿಲ್ ಇಂಜಿನಿಯರಿಂಗ್ ಶಾಖೆಯಲ್ಲಿ ಸ್ನಾತಕೋತ್ತರ ಪದವೀಧರ ಬೊಂಬಾಯಿನ ಸಾಬು ಸಿದ್ದಿಕಿ, ಇಂಜಿನಿಯರಿಂದ ಕಾಲೇಜ್, ಸಿವಿಲ್ ಇಂಜಿನಿಯರಿಂಗ ಶಾಖೆಯಲ್ಲಿ ಪ್ರೊಫೆಸರ್, (೧೯೭೦-೭೫ ರವರೆಗೆ)ಹಫೀಜ್-ಎ-ಖುರಾನ್ ಎಂದು … Read more

ನವರಾತ್ರಿ: ಡಾ. ವೃಂದಾ ಸಂಗಮ್ 

ನವರಾತ್ರಿ ಬರತದ ಅಂತ ಸೂಚನಾ ಹೆಂಗ ಅನ್ನೋದು ನೋಡಿದರನ ತಿಳೀತದ. ಶ್ರಾವಣ ಮಾಸ ಹಬ್ಬ- ಹುಣ್ಣವೀ ಸುರಿಮಳಿ. ದಿನಾ ಕಡಬು-ಹೋಳಿಗೆ, ಮಾಡಿ ಮತ್ತ ತಿಂದು ಎರಡೂ ಸುಸ್ತಾಗಿರತದ. ಅಷ್ಟ ಅಲ್ಲ, ಖರ್ಚಂತೂ ಕೇಳಬ್ಯಾಡರೀ, ಮುಗೀದಂಥಾದ್ದು, ಮ್ಯಾಲ ಹೊಲ ಮನೀಯವರಿಗಂತೂ ಕಳೇ-ಕಂಬಳೀ ಅಂತ ಹಗಲೂ ರಾತ್ರೀ ಕೆಲಸಾ. ಅಷ್ಟಲ್ಲದನ ಮ್ಯಾಲ ಜಿಟಿ ಜಿಟಿ ಮಳೀ. ಹಿಂತಾದರಾಗ, ಯಾರನರೇ ಕೇಳರೀ, ನಮ್ಮನಿಯೊಳಗ, ಶ್ರಾದ್ಧ, ಶ್ರಾವಣ ಮಾಸದಾಗ ಬರತಾವ ಅಂತಾರ. ಮತ್ತ ಹಿರೇರೂಂದರ ದೇವರ ಸಮಾನ ಅಂತ ಅವರೂ ತಮ್ಮದೊಂದು ನೆನಪು … Read more

ಸೋಲೆಂಬುದೇ ನಿಜ ಗೆಲುವು !: ಡಾ. ಹೆಚ್ ಎನ್ ಮಂಜುರಾಜ್

ಕಲಿಸು ಗುರುವೇ, ಸೋಲುವುದನು ! ಸೋತು ಸುಖಿಸುವುದನು……..!! ಎಂಬ ಪದ್ಯವೊಂದನು ಹಿಂದೆ ಬರೆದಿದ್ದೆ. ಅದನು ಗಮನಿಸಿದವರು ಕೇಳಿದರು: ಜಗತ್ತಿನಲ್ಲಿ ಎಲ್ಲರೂ ಗೆಲ್ಲಬೇಕೆಂದು ಹೊರಟಿದ್ದಾರೆ; ನೀವೇನಿದು: ಹೀಗೆ ಬರೆದಿದ್ದೀರಿ? ಅದಕೆ ನಾನೆಂದೆ: ಎಲ್ಲರೂ ಗೆಲ್ಲುವುದಾದರೆ ಸೋಲುವವರು ಯಾರು? ಒಬ್ಬರು ಗೆಲ್ಲಲು ಹಲವರು ಸೋಲಲೇಬೇಕಲ್ಲವೆ? ಅಂಥವರ ಪೈಕಿ ನಾನು ಎಂದೆ. ಅವರಿಗೆ ಏನನಿಸಿತೋ? ವಿಚಿತ್ರವಾಗಿ ನೋಡಿದರು. ಲೋಕದಲ್ಲಿ ಗೆಲುವಿಗಾಗಿ ಹಂಬಲಿಸುವವರೇ ಎಲ್ಲ; ಸೋಲುವವರು ಇಲ್ಲವೇ ಇಲ್ಲ! ನಮ್ಮ ಮನೆ, ಮನೆತನ, ಸಂಬಂಧಿಕರು, ಸ್ನೇಹಿತರು, ಶಾಲೆ, ಶಿಕ್ಷಣ, ವ್ಯವಸ್ಥೆ ಅಷ್ಟೇ ಅಲ್ಲ; … Read more

ಮಲೆನಾಡಿನ ಪದವೀಧರ ಯುವಕನ ಜೇನುಕೃಷಿ ಯಶೋಗಾಥೆ: ಚರಣಕುಮಾರ್

ಸಹ್ಯಾದ್ರಿಯ ಶೃಂಗದ ದಟ್ಟಡವಿಯ ಮಧ್ಯಭಾಗದಲ್ಲೊಂದು ಪುಟ್ಟ ಗ್ರಾಮ ಹಕ್ಲಮನೆ. ಉತ್ತರ ಕನ್ನಡ ಜಿಲ್ಲೆ, ಸಿದ್ದಾಪುರ ತಾಲ್ಲೂಕಿನಲ್ಲಿ ಬರುವ ಈ ಹಳ್ಳಿಯಲ್ಲೊಬ್ಬ ಪ್ರಗತಿಪರ ಮತ್ತು ಪದವಿಧರ ಜೇನುಕೃಷಿಕ ಸಂತೋಷ ಹೆಗಡೆ. ಹೆಸರಿನಲ್ಲೇ ಸಂತೋಷ ಎಂದು ಇಟ್ಟುಕೊಂಡಿರುವ ಈ ಸಂತೋಷ ಬಿ.ಕಾಂ ಪದವಿ ಪಡೆದಿದ್ದರೂ ಕೂಡ ಪೇಟೆಯ ಕಡೆ ಮುಖ ಮಾಡಲಿಲ್ಲ. ಆದರೂ ಒಮ್ಮೆ ಬಿ.ಕಾಂ ಮುಗಿದ ಮೇಲೆ ಉದ್ಯೋಗಕ್ಕಾಗಿ ಪೇಟೆಯ ಕಡೆ ಹೊರಟ ಈತನಿಗೆ, ತಾಯಿಯ ಆರೋಗ್ಯದಲ್ಲಿ ಕಾಣಿಸಿಕೊಂಡ ಏರು-ಪೇರು ಮನೆಬಿಟ್ಟು ಹೋಗಲು ಅವಕಾಶ ನೀಡಲೇಇಲ್ಲ. ಹೇಳಿ-ಕೇಳಿ ಇವರದು … Read more

ಮರ ಕಡಿಯುವುದಾಗಲಿ ಅಥವಾ ಅದನ್ನು ಘಾಸಿಗೊಳಿಸುವುದಾಗಲಿ ಮಾಡುವುದು ಬಿಷ್ಣೋಯಿ ಧರ್ಮಕ್ಕೆ ವಿರುದ್ಧವಾದುದ್ದು: ಮಿತಾಕ್ಷರ

ಇತಿಹಾಸದಲ್ಲಿ ನಡೆದ ಅತಿ ಘೋರ ಘಟನೆ ಅದು ನಡೆದದ್ದು ರಾಜಸ್ಥಾನದ ಜೋಧಪುರದಲ್ಲಿ ಅಲ್ಲಿನ ರಾಜ ಅಜಿತ ಸಿಂಹ ತನ್ನ ಅರಮನೆಯ ಸೌಂದರ್ಯ ಹೆಚ್ಚಿಸಲು ತನ್ನ ರಾಜ್ಯದ ಬಿಷ್ಣೋಯಿ ಸಮಾಜದವರೆ ಹೆಚ್ಚಾಗಿದ್ದ ಜೆಹ್ನಾದ್‌ನ ಗ್ರಾಮದಲ್ಲಿ ಸಮೃದ್ಧವಾಗಿ ಬೆಳೆದ ಖೇಜ್ರಿ ವೃಕ್ಷಗಳನ್ನು ಕತ್ತರಿಸಿ ತರುವಂತೆ ಮಂತ್ರಿ ಗಿರಿಧರ ಭಂಡಾರಿಗೆ ಆಜ್ಞೆಪಿಸಿದ. ಸೈನಿಕರೊಡನೆ ಹೊರಟ ಮಂತ್ರಿ ಗ್ರಾಮದಲ್ಲಿ ಮರ ಕಡಿಯಲು ಮುಂದಾದ. ಸುದ್ದಿ ತಿಳಿದು ಮರಗಳನ್ನು ಮಕ್ಕಳಂತೆ ಪೋಷಿಸಿ ಬೆಳೆಸುವ ಅಲ್ಲಿನ ಬಿಷ್ಣೋಯಿ ಸಮಾಜದ ಅಮೃತಾದೇವಿ ಬಿಷ್ಣೋಯಿ ತಕ್ಷಣ ಮರಗಳ ರಕ್ಷಣೆಗೆ … Read more

ಬೆರಗು ಹುಟ್ಟಿಸುವ ಬೇತಾಳ: ರಾಜಶ್ರೀ. ಟಿ. ರೈ. ಪೆರ್ಲ

ಊರ ದೇವರ ಜಾತ್ರೆ ಬಂತು ಎಂದರೆ ಒಂಥರಾ ತನು ಮನದಲ್ಲಿ ಹೊಸ ಹುರುಪು ಹುಟ್ಟಿಕೊಳ್ಳುತ್ತದೆ. ಹಳೇಯ ನೆನಪುಗಳು, ಊರಿಗೆ ಬರುವ ಅಥಿತಿಗಳ ಸ್ವಾಗತದ ತಯಾರಿ. ಅದರಲ್ಲೂ ಧಕ್ಷಿಣ ಕನ್ನಡ ಕಾಸರಗೋಡು ಈ ಭಾಗದಲ್ಲಿ ದೇವಸ್ಥಾನದ ಜಾತ್ರೆಯೆಂದರೆ ಒಂದು ಬಗೆಯ ಸಾಂಸ್ಕøತಿಕ ಉತ್ಸವವೇ ಸರಿ.ಅಲ್ಲಿ ಎಲ್ಲವೂ ಉಂಟು ಎನ್ನುವ ಹಾಗೆ. ಪ್ರತೀ ದಿನ ನಿಗದಿತ ಹೊತ್ತಿಗೆ ನಡೆಯುವ ಪೂಜೆ ಮತ್ತು ಇತರ ನಿತ್ಯ ನೈಮಿತ್ತಿಕ ಕ್ರಿಯೆ ವಿಧಿಯನ್ನು ಬಿಟ್ಟರೆ ಕೆಲವು ಹಬ್ಬದ ಸಮಯಕ್ಕೆ ಸಣ್ಣ ಸಂಭ್ರಮ. ಆದರೆ ಜಾತ್ರೆ … Read more

ಸೋಲಿಗರ ಜೊತೆ ಒಂದು ದಿನ: ಶೈಲಜೇಷ ಎಸ್.

ಮಳೆಗಾಲದ ಕಾಡು ಹೇಗೆ ಇರುತ್ತದೆ ಎಂದು ನಾನು ಹೇಳ ಬೇಕಿಲ್ಲ ಅಲ್ಲವೇ, ಅಂತ ಒಂದು ಸ್ಥಳ ಚಾಮರಾಜ ಜಿಲ್ಲೆಯ ಬಿಳಿಗಿರಿ ರಂಗನ ಬೆಟ್ಟ. ಸಾಮಾನ್ಯವಾಗಿ ಎಲ್ಲರೂ ಬಾಲ್ಯದಲ್ಲಿ ಪ್ರಯಾಣ ಅಂತ ಹೋಗುತ್ತಿದ್ದದ್ದೆ ವರುಷಕ್ಕೆ ಒಮ್ಮೆಯೋ ಅಥವಾ ಎರಡು ಬಾರಿಯೊ ಅಷ್ಟೆ, ಈಗ ಹಾಗಿಲ್ಲ ಪ್ರತಿವಾರದ ಕೊನೆಯ (weekend) ದಿನಗಳನ್ನು ಪ್ರಯಾಣದ ದಿನಗಳೆಂದೆ ಘೋಷಿಸಬಹುದು ಅಷ್ಟರ ಮಟ್ಟಿಗೆ ಎಲ್ಲರೂ ಪ್ರಯಾಣದಲ್ಲಿ ಇರುವವರೆ. ಕಾಡು, ಮೇಡು, ಚಾರಣ, ತೀರ್ಥಕ್ಷೇತ್ರ, ಪ್ರೇಕ್ಷಣೀಯ ಸ್ಥಳಗಳ, ರೆಸಾರ್ಟ್, ಹೋಮ್ ಸ್ಟೇಗಳು ಹೀಗೆ ಎಲ್ಲೆಲ್ಲೂ ಜನರಿಂದ … Read more

ಉಪ್ಪಿನ ಸತ್ಯಾಗ್ರಹ, ಅಸಹಕಾರ ಚಳುವಳಿಯ ಕೇಂದ್ರವಾಗಿದ್ದ ಬಸ್ರೂರು: ರಾಘವೇಂದ್ರ ಅಡಿಗ ಎಚ್ಚೆನ್.

ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳು ಸಂದಿದೆ. ಈ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರು ತಮ್ಮ ಜೀವನ, ಜೀವಗಳನ್ನು ತ್ಯಾಗ ಮಾಡಿ ಭಾರತಮಾತೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಅದೇ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಈ ಸಮಯದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿ ಕರ್ನಾಟಕ ಅದರಲ್ಲಿಯೂ ಬಸ್ರೂರು, ಸುತ್ತಮುತ್ತಲಿನ ಜನರ ಕೊಡುಗೆಗಳ ಬಗ್ಗೆ ಚಿಕ್ಕ ಪರಿಚಯ ನೀಡುವ ಉದ್ದೇಶ ಇಲ್ಲಿಯದು. ಇಂದಿನ ಬಸ್ರೂರು ಹಿಂದೆಲ್ಲಾ ವಸುಪುರ ಎಂದು ಕರೆಯಲ್ಪಡುತ್ತಿತ್ತು ಇದು ಕರಾವಳಿಯ ವಾರಾಹಿ ನದಿ ದಂಡೆಯ ಮೇಲಿರುವ … Read more

ಗೀತ ಸಂತ ಸುಬ್ಬಣ್ಣ: ಡಾ. ಹೆಚ್ ಎನ್ ಮಂಜುರಾಜ್

ಮಾನವನೆದೆಯಲಿ ಆರದೆ ಉರಿಯುತಿದ್ದ ಪ್ರಜ್ವಲಿಪ ಗೀತಜ್ಯೋತಿ ಶಿವಮೊಗ್ಗ ಸುಬ್ಬಣ್ಣ ಎಂಬ ಸುಗಮ ಸಂಗೀತದರಸ ಮೊನ್ನೆ ಶಾಂತವಾದರು. ಕನ್ನಡ ಸುಗಮ ಸಂಗೀತವನು ಜನಪ್ರಿಯಗೊಳಿಸಿದವರು ಅವರು. ಸಿ ಅಶ್ವತ್ಥ್ ಅವರ ಹೆಸರಿನೊಂದಿಗೆ ಬೆಸೆದಿದ್ದ ತಂತು. ತಮ್ಮ ಎಂಬತ್ನಾಲ್ಕರ ವಯೋಮಾನದಲಿ ಅಸ್ತಂಗತರಾದ ಹಾಡು ಪಾಡಿನ ನೇಸರನೀತ. ಇವರ ನಿಜ ನಾಮಧೇಯ ಜಿ ಸುಬ್ರಹ್ಮಣ್ಯಂ. ತಂದೆ ಗಣೇಶರಾವ್, ತಾಯಿ ರಂಗನಾಯಕಮ್ಮ. ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲಿ 1938 ರಲಿ ಜನಿಸಿದರು. ಪ್ರತಿದಿನವೂ ಪೂಜೆ ಪುರಸ್ಕಾರ ನಡೆಯುತಿದ್ದ ಮನೆತನ. ತಾತನವರಾದ ಶಾಮಣ್ಣನವರು ಸಂಗೀತ ಕೋವಿದರು. … Read more

ನಿನ್ನ ಇಚ್ಛೆಯಂತೆ ನಡೆವೆ: ಮನು ಗುರುಸ್ವಾಮಿ

ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಾಣಸಿಗುವ ವಿಭಿನ್ನ ವ್ಯಕ್ತಿತ್ವದ ಬರಹಗಾರರು. ತಮ್ಮನ್ನು ಜರಿದವರಿಗೆ ತಮ್ಮ ಕವಿತೆಗಳ ಮೂಲಕವೇ ಉತ್ತರ ಕೊಟ್ಟು, ಓದಿದರೆ ಕೆ ಎಸ್ ನರಸಿಂಹಸ್ವಾಮಿ ಅವರ ಕವಿತೆಗಳನ್ನೇ ಓದಬೇಕು ಎನ್ನುವಷ್ಟರ ಮಟ್ಟಿಗೆ ಒಂದು ಕಾಲದಲ್ಲಿ ಜನಪ್ರಿಯರಾಗಿದ್ದ ಕವಿ. ‘ಮೈಸೂರು ಮಲ್ಲಿಗೆ’ ಕವನ ಸಂಕಲನದ ಮೂಲಕ ಕನ್ನಡಿಗರ ಮನಮನೆಯಲ್ಲಿ ಮಾತಾದ ಪ್ರೇಮಕವಿ; ಅಲ್ಲಲ್ಲ ದಾಂಪತ್ಯ ಕವಿ. ನವೋದಯ, ರೋಮ್ಯಾಂಟಿಕ್ ಚಳವಳಿಯ ಕಾಲಘಟ್ಟದಲ್ಲಿ ಹೆಚ್ಚಾಗಿ ಗುರುತಿಸಿಕೊಳ್ಳುವ ಕೆ ಎಸ್ ನ “ನಾನು ಬರೆದ ಕವಿತೆಗಳು ಪ್ರೇಮಕವಿತೆಗಳಲ್ಲ, … Read more

ಜೀವ ವೀಣೆಯ ಭಾವ ಲಹರಿ: ಡಾ. ಹೆಚ್ ಎನ್ ಮಂಜುರಾಜ್

ಹಿಂದೆ ಆಹಾರವೇ ಔಷಧವಾಗಿತ್ತು; ಈಗ ಔಷಧವೇ ಆಹಾರವಾಗಿದೆ ಎಂಬುದನ್ನು ಬಹಳ ಮಂದಿ ಹೇಳುತ್ತಿರುತ್ತಾರೆ. ಇದು ನಿಜವೇ. ಏಕೆಂದರೆ ಅಡುಗೆ ಮನೆಯು ಕೇವಲ ಆಹಾರ ಬೇಯಿಸುವ ಪಾಕಶಾಲೆಯಾಗಿರಲಿಲ್ಲ. ವೈದ್ಯಶಾಲೆಯೂ ಆಗಿತ್ತು. ನಮ್ಮ ಆಯುರ್ವೇದದ ಬಹಳಷ್ಟು ಮನೆಮದ್ದುಗಳು ರುಚಿಕರ ಆಹಾರವಾಗಿಯೇ ನಮ್ಮನ್ನು ಕಾಪಾಡುತ್ತಿದ್ದವು. ನಮಗೇ ಗೊತ್ತಿಲ್ಲದಂತೆ ಆಯಾ ಕಾಲಮಾನಕ್ಕೆ ತಕ್ಕುದಾಗಿ ಶರೀರಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಪೂರೈಸುತಿದ್ದವು. ನಮ್ಮ ಅಡುಗೆಯಲ್ಲಿ ಯಥೇಚ್ಛವಾಗಿ ಬಳಸುತ್ತಿದ್ದ ಕರಿಬೇವು, ನಿಂಬೆ, ಕೊತ್ತಂಬರಿ, ಮೆಣಸು, ಜೀರಿಗೆ, ಇಂಗು, ಸಾಸುವೆ, ಮೆಂತ್ಯ ಮೊದಲಾದ ಪದಾರ್ಥಗಳು ಏಕಕಾಲಕ್ಕೆ ಆಹಾರಕ್ಕೆ … Read more

ಗೌರೀ ಹುಣ್ಣಿವೆ: ಡಾ. ವೃಂದಾ ಸಂಗಮ್

ಬಾಲ್ಯದೊಳಗಿನ ಸುಂದರ ನೆನೆಪುಗಳನ್ನು ಹೆಕ್ಕಿ, ನಕ್ಕು ನಲಿಯದ ಜನರೇ ಇಲ್ಲ ಅಥವಾ ಅಂತಹ ಬಾಲ್ಯದ ಅನುಭವದ ಶ್ರೀಮಂತಿಕೆ ಇಲ್ಲದ ವ್ಯಕ್ತಿ ಬದುಕು ಪೂರ್ಣವಾಗಿರುವುದಿಲ್ಲ ಎಂದೇ ಹೇಳಬೇಕು. ಬಾಲ್ಯದಲ್ಲಿನ ಯಾವುದೋ ಒಂದು ಚಿಕ್ಕ ಚಿತ್ರವೂ ನಮಗೆ ರವಿವರ್ಮನ ಚಿತ್ರಕ್ಕಿಂತಲೂ ಹೆಚ್ಚು ಬೆಲೆಯುಳ್ಳದ್ದಾಗಿರುತ್ತಿತ್ತು. ಯಾರೋ ಹಾಡಿದ ಒಂದು ಹಾಡನ್ನು ಮೂರು ನಾಲ್ಕು ಬಾರಿ ಹಾಡಿ, ಕಲಿತು ಬಿಡುತ್ತಿದ್ದ ದಿನಗಳು. ಯಾವುದೊಂದು ನಾಟಕ, ಹಾಡು, ಡ್ಯಾನ್ಸು ಏನೇ ನೋಡಿದರೂ, ಅದನ್ನು ಕಲಿತು ಬಿಡುತ್ತಿದ್ದೆವು. ಅದರ ಅನುಕರಣೆಯಲ್ಲಿಯೂ ನಮ್ಮದೊಂದು ಅನುಭವದ ಸ್ವಂತಿಕೆಯನ್ನು ಸೇರಿಸುತ್ತಿದ್ದ … Read more

ಶಿವಣ್ಣ ಐ ಲವ್ ಯೂ: ಜಯರಾಮಾಚಾರಿ

ನಾಗರಾಜು ಶಿವ ಪುಟ್ಟಸ್ವಾಮಿ – ಸಿನಿಮಾಗಾಗಿ ಶಿವರಾಜ್ ಕುಮಾರ್ ಆದದ್ದು ಹಳೆಯದು. ಶಿವರಾಜ್ ಕುಮಾರ್ ಸಿನಿಮಾದ ಮೂಲಕ , ತಮ್ಮ ಬಿಂದಾಜ್ ನಡೆಯಿಂದ, ಬಾ ಮಾ , ಏನಮ್ಮ ಅಂತ ಮಾತಾಡಿಸುತ್ತಲೇ ಸುಮಾರು 36 ವರುಷಗಳಿಂದ ಸಿನಿಮಾ ಮಾಡುತ್ತ ಅರವತ್ತು ವರುಷವಾದರೂ ಯುವಕರಂತೆ ಹೆಜ್ಜೆ ಹಾಕುತ್ತ, ಮಗುವಿನಂತೆ ಸದಾ ಉತ್ಸಾಹ ತುಂಬಿರುವ ಶಿವರಾಜ್ ಕುಮಾರ್ ಈಗ ನಮ್ಮೆಲ್ಲರ ಶಿವಣ್ಣ . ಶಿವಣ್ಣ ಅಲ್ಲೊಂದು ನಗು ಅಲ್ಲೊಂದು ಎನರ್ಜಿ. ಆನಂದ್ ಸಿನಿಮಾದಿಂದ ಇತ್ತೀಚಿನ ಬೈರಾಗಿವರೆಗೂ. ಶಿವಣ್ಣ ನಮ್ಮ ಪ್ರೀತಿಯ … Read more

ಧನಕ್ಕಿಂತ ದೊಡ್ಡದು ಇಂ’ಧನ’ ಸಂಪತ್ತು: ಹೊ.ರಾ.ಪರಮೇಶ್ ಹೊಡೇನೂರು

“ಲೋ ರಾಕೇಶ… ಮಾರ್ಕೆಟ್ ಗೆ ಹೋಗಿ ಒಂದು ಕಟ್ಟು ಕೊತ್ತಂಬರಿ ಸೊಪ್ಪು ತಗೊಂಡು ಬೇಗ ಬಾರೋ….” ಹೀಗಂತ ಅಮ್ಮಾ ಹೇಳಿದ್ದೇ ತಡ, ಮಗ ರಾಕೇಶ್ ಪಕ್ಕದ ರಸ್ತೆಯ ಕೂಗಳತೆ ದೂರದಲ್ಲಿದ್ದ ಮಾರ್ಕೆಟ್ ಗೆ ತನ್ನ ರಾಯಲ್ ಎನ್ ಫೀಲ್ಡ್ ಬೈಕಿನಲ್ಲಿ ಫುಲ್ ಜೋಶ್ ಆಗಿ ಹೋಗಿ ಕೊತ್ತಂಬರಿ ಸೊಪ್ಪು ತಂದ. ಖುಷಿಪಟ್ಟ ಅಮ್ಮ “ತಿಂಡಿ ಮಾಡೋದು ಸ್ವಲ್ಪ ತಡ ಆಗುತ್ತೆ, ಸರ್ಕಲ್ ನಲ್ಲಿ ಇರೋ ಬೇಕರಿಯಲ್ಲಿ ಒಂದು ಪೌಂಡ್ ಬನ್ ತಗೊಂಡು ಬಾರೋ ರಾಕೇಶ” ಎಂದ ತಕ್ಷಣ … Read more

ಮಂಗಳಮುಖಿಯ ಮುಖದಲ್ಲಿ ಕಂಡ ತಾಯಿಯ ಒಲುಮೆ: ಪ್ರಜ್ವಲ್‌ ಎಸ್.ಜಿ., ಸೀಗೆಕೋಟೆ

ಸೃಷ್ಟಿಯಲ್ಲಿ ಕೋಟ್ಯಾಂತರ ಜೀವರಾಶಿಗಳು ಉಂಟು. ಪ್ರತಿಯೊಂದು ಜೀವಿಗೂ ಅದರದೇ ಆದ ದೇಹರಚನೆ, ಆಹಾರಪದ್ದತಿ, ಬಣ್ಣ, ವರ್ತನೆ ಹೀಗೆ ಹಲವಾರು ವಿಭಿನ್ನವಾದ ವ್ಯತ್ಯಾಸಗಳನ್ನು ನೋಡಬಹುದು. ಈ ಸೃಷ್ಟಿಯನ್ನು ಬುದ್ದಿವಂತ ಜೀವಿಯಾದ ಮಾನವನು ವಿವಿಧ ರೀತಿಯಲ್ಲಿ ಅಧ್ಯಯನ ಮಾಡುತ್ತಾನೆ ಮತ್ತು ವ್ಯಾಖ್ಯಾನಿಸುತ್ತಾನೆ. ಕೆಲವರು ವೈಜ್ಞಾನಿಕ ದೃಷ್ಟಿಯಿಂದ, ಕೆಲವರು ಜೋತಿಷ್ಯ ಮತ್ತು ಖಗೋಳ ವೈಜ್ಞಾನಿಕ ದೃಷ್ಟಿಯಿಂದ ಅವರವರ ಮನಸ್ಥಿಗೆ ತಕ್ಕಂತೆ ಸೃಷ್ಟಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ಪ್ರತಿಯೊಂದು ಜಾತಿಯ ಪ್ರಾಣಿಗಳು, ಪಕ್ಷಿಗಳು, ಜೀವಜಂತುಗಳು ಪ್ರಕೃತಿಯ ಭಾಗಗಳಾಗಿ ಭೂಮಿಯಲ್ಲಿ ಮತ್ತು ನೀರಿನಲ್ಲಿ ವಾಸಿಸುತ್ತವೆ. … Read more