ಕಿರುಗತೆಗಳು: ಜಯಂತ್ ದೇಸಾಯಿ

ಬಣ್ಣದ ಬಾರಿಗೆ( ಬಣ್ಣದ ಪೊರಕೆ) ಬಾರಿಗೆಮ್ಮೋ ಬಾರಿಗೆ 30 ರೂಪಾಯಿಗೆ ಜೊತಿ ಬಾರಿಗೆ ಸ್ವಲ್ಪವೇ ಅವ ನೋಡ್ರೆಮ್ಮೋ ಅಂತ ಕೂಗುತ್ತಾ ಹಳ್ಳಿಯ ಸಂದಿಸಂದಿಯ ಒಳಗೆ ನುಗ್ಗಿ ಹೋಗುತ್ತಿದ್ದ ಶರಣಪ್ಪ ನ ದ್ವನಿ ಕೇಳಿ ನಿರ್ಮಲ ನುಡಿದಳು ಹೇ ನಿಂದ್ರಪ್ಪ ನಿಂದ್ರು ಹೆಂಗ್ ಕೊಟ್ಟಿ ಅಂದಿ, 30 ರೂಪಾಯಿಗೆ ಅಂದ್ರ ಭಾಳಾ ಫೀರೆ ಆತು ಕಡಿಮೆ ಮಾಡು, ನೋಡಿದ್ರ ನಾಕು ಕಡ್ಡಿ ಇಲ್ಲ ಇದ್ರಾಗ, ಅವ್ವ ಹಂಗನ್ನ ಬ್ಯಾಡ ಗಿರಿ ಗಿರಿ ಹಾಕಿ ಎಳೆದು ಎಳೆದು ತೀಡಿ ನೆಲಕ್ಕೆ … Read more

ಇಹಕ್ಕೂ ಮನಕ್ಕೂ ಬೆಳಕ ಸುರಿವ ದೀಪಾವಳಿ: ಗೌರಿ.ಚಂದ್ರಕೇಸರಿ, ಶಿವಮೊಗ್ಗ

ಜಗದ ಕತ್ತಲೆಯನ್ನೆಲ್ಲ ಹೊಡೆದೋಡಿಸುವ ಬೆಳಕು ಯಾರಿಗೆ ತಾನೆ ಇಷ್ಟವಿಲ್ಲ? ಝಗಮಗಿಸುವ ದೀಪಗಳ ಹಬ್ಬವಾದ ದೀಪಾವಳಿ ಎಂದರೆ ಬಾಲ್ಯದಿಂದಲೂ ಏನೋ ಒಂದು ಆಕರ್ಷಣೆ. ಕಳೆದು ಹೋದ ಅದೆಷ್ಟೋ ದೀಪಾವಳಿಗಳು ಮತ್ತೆ ಮತ್ತೆ ನೆನಪಿಗೆ ಬರುತ್ತವೆ. ಈಗಿನ ತರಾವರಿ ಬಣ್ಣದ ಬಲ್ಬುಗಳ ದೀಪಗಳು ಹಿಂದಿನ ಮಣ್ಣಿನ ಹಣತೆಗಳ ಮುಂದೆ ಮಸುಕಾಗಿ ಬಿಡುತ್ತವೆ. ದೀಪಾವಳಿ ಇನ್ನೂ ತಿಂಗಳಿರುವಾಗಲೇ ಮನೆಯಲ್ಲಿ ಸಡಗರ ಪ್ರಾರಂಭವಾಗುತ್ತಿತ್ತು. ಸೊಂಟಕ್ಕೆ ಸೆರಗನ್ನು ಸಿಕ್ಕಿಸಿ ಉದ್ದವಾದ ಕೋಲೊಂದಕ್ಕೆ ಹಳೆಯ ಬಟ್ಟೆಯನ್ನು ಕಟ್ಟಿ ಜೇಡರ ಬಲೆಗಳನ್ನೆಲ್ಲ ಅವ್ವ ತೆಗೆಯುತ್ತಿದ್ದಳು. ನಂತರ ಅದೇ … Read more

ಬೆಳಕನು ಚೆಲ್ಲಿ ಬಂದೇ ಬಂತು ದೀಪಾವಳಿ..: ವಿನಾಯಕ ಅರಳಸುರಳಿ

ದೀಪಾವಳಿ ಮರಳಿ ಬಂದಿದೆ. ಆಫೀಸಿನ ಬಾಸಿನ ಟೇಬಲ್ ಮೇಲೀಗ ರಜೆಯ ಅರ್ಜಿಗಳೆಲ್ಲ ನಾ ಮೊದಲು, ತಾ ಮೊದಲು ಎಂದು ತಳ್ಳಾಡುತ್ತಾ ಸಾಲಾಗಿ ನಿಂತಿವೆ. ಯಾರಿಗೆ ಕೊಡುವುದು, ಯಾರಿಗೆ ಬಿಡುವುದು ಎಂದು ಯೋಚಿಸುತ್ತಿರುವಾಗಲೇ ಅವರ ಹೆಂಡತಿ ಕಾಲ್ ಮಾಡಿದ್ದಾರೆ. ‘ಹಬ್ಬಕ್ಕೆ ಊರಿಗೆ ಹೋಗಲಿಕ್ಕಿದೆ. ಟಿಕೇಟು ಬುಕ್ ಮಾಡೋದು ಮರೀಬೇಡಿ!” ಎಂದು ನೆನಪಿಸಿದ್ದಾಳೆ. ಹೀಗೆ ಬಾಸೆಂಬ ಬಾಸೇ ರಜೆ ಹಾಕಿ ಹೋದ ಆಫೀಸಿನಲ್ಲಿ ಕೆಲವರಿಗಷ್ಟೇ ರಜೆ ಮಂಜೂರಾಗಿದೆ. ಅವರೆಲ್ಲ ಸಂಭ್ರಮದಲ್ಲಿ ಊರಿನ ಬಸ್ಸು ಹತ್ತುತ್ತಿದ್ದರೆ ರಜೆ ಸಿಗದ ಹತಾಷರು ಹೊರಟವರಿಗೆ … Read more

ದೀಪಾವಳಿ ವಿಶೇಷಾಂಕಕ್ಕೆ ಲೇಖನ ಆಹ್ವಾನ

ಸಹೃದಯಿಗಳೇ, ಈ ವರ್ಷದ ದೀಪಾವಳಿ ವಿಶೇಷಾಂಕಕ್ಕಾಗಿ ನಿಮ್ಮ ಲೇಖನ, ಪ್ರಬಂಧ, ಕವಿತೆ, ಕತೆ ಇತ್ಯಾದಿ ಸಾಹಿತ್ಯದ ಬರಹಗಳನ್ನು ಪಂಜುವಿಗಾಗಿ ಕಳಿಸಿಕೊಡಿ. ನಿಮ್ಮ ಲೇಖನಗಳು ನವೆಂಬರ್ 13 ರ ಸಂಜೆಯೊಳಗೆ ತಲುಪಲಿ… ಕನ್ನಡ ರಾಜ್ಯೋತ್ಸವದ ಶುಭಾಶಯಗಳೊಂದಿಗೆ… ನಿಮ್ಮ ಲೇಖನಗಳ ನಿರೀಕ್ಷೆಯಲ್ಲಿಪಂಜು ಬಳಗhttps://panjumagazine.com/ ನಮ್ಮ ಇ ಮೇಲ್‌ ವಿಳಾಸ: editor.panju@gmail.com, smnattu@gmail.com ವಿ.ಸೂ.: ಪಂಜು ಅಪ್ರಕಟಿತ ಬರಹಗಳನ್ನಷ್ಟೇ ಸ್ವೀಕರಿಸುತ್ತದೆ. ಲೇಖಕರು ಕಳುಹಿಸುವ ಲೇಖನವು ಬ್ಲಾಗ್, ಎಫ್ ಬಿ, ಸೇರಿದಂತೆ ಬೇರೆ ಎಲ್ಲಾದರು ಪ್ರಕಟವಾಗಿದ್ದರೆ ಅಂತಹ ಬರಹವನ್ನು ಸ್ವೀಕರಿಸುವುದಿಲ್ಲ.

ಡಾರ್ಕ್‍ವೆಬ್: ಸಾಮಾನ್ಯರಿಗೆ ನಿಲುಕದ ನಕ್ಷತ್ರ: ಚಾರು ಮಂಜುರಾಜ್

ನಮಗಿಷ್ಟವಾದುದನ್ನು ಆನ್‍ಲೈನ್‍ನಲ್ಲಿ ತರಿಸಿಕೊಳ್ಳುವಾಗಲೋ ಸ್ನೇಹಿತರಿಗಾಗಿ ಉಡುಗೊರೆಗಳನ್ನು ಕೊಳ್ಳುವಾಗಲೋ ಗೂಗಲ್‍ನಲ್ಲಿ ಕಾಣುವ ಪುಟಗಳು ಸರ್‍ಫೇಸ್ ವೆಬ್. ಅಂದರೆ ನಾವು ಗೂಗಲ್‍ನಲ್ಲಿ ಜಾಲಾಡುವಾಗ ಅದರಲ್ಲಿ ತೆರೆದುಕೊಳ್ಳುವ ಪ್ರತಿಯೊಂದು ಪುಟವೂ ಇಂಥ ಸರ್‍ಫೇಸ್ ವೆಬ್ಬೇ! ದಿನನಿತ್ಯ ನಾವು ಅಂತರ್ಜಾಲದೊಂದಿಗೆ ವ್ಯವಹರಿಸುವಾಗ ಕೇವಲ ಶೇಕಡ ಒಂದರಷ್ಟು ಮಾತ್ರ ಮಾಹಿತಿಯನ್ನು ಎಕ್ಸ್‍ಪ್ಲೋರ್ ಮಾಡುತ್ತಿರುತ್ತೇವೆ. ಉಳಿದ ಶೇಕಡ 96 ರಿಂದ 99 ರಷ್ಟು ಮಾಹಿತಿಗಳು ಡೀಪ್‍ವೆಬ್ ಮತ್ತು ಡಾರ್ಕ್‍ವೆಬ್‍ಗಳಲ್ಲಿ ಅಡಗಿರುತ್ತವೆ. ಎರಡಂತಸ್ತಿನ ಕಟ್ಟಡವೊಂದರಲ್ಲಿ ಮೇಲೆ ಕಾಣುವುದೇ ನಾವು ಜಾಲಾಡುವ ತಾಣಗಳು, ಆನಂತರದ್ದು ಡೀಪ್‍ವೆಬ್. ಅದರ ಕೆಳಗಿರುವುದೇ … Read more

ಹೆಬ್ಬಲಸು : ಅಪರೂಪದ ಕಾಡುಹಣ್ಣು: ಚರಣಕುಮಾರ್ ಮತ್ತು ಡಾ. ಶ್ರೀಕಾಂತ್ ಗುಣಗಾ

ಹೆಬ್ಬಲಸು : ಅಪರೂಪದ ಕಾಡುಹಣ್ಣುArtocarpus hirsutus Lam.ಕುಟುಂಬ: ಮೊರೇಸಿ ವಿತರಣೆ: ಭಾರತೀಯ ಮೂಲದ ಬೃಹದ್ಧಾಕಾರದ ವೃಕ್ಷ ಪಶ್ಚಿಮ ಘಟ್ಟದ ನಿತ್ಯಹರಿಧ್ವರ್ಣ ಮತ್ತು ಅರೆ-ನಿತ್ಯಹರಿಧ್ವರ್ಣ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಪರಿಚಯ: ನೇರವಾಗಿ ಬೆಳೆಯುವ ಎತ್ತರದ ಮರ. ಕಂದು ಬಣ್ಣದ ತೊಗಟೆ. ತೊಗಟೆಯ ಮೇಲೆ ಸಣ್ಣ ವಾತರಂದ್ರಗಳು. ಗಾಯವಾದ ತೊಗಟೆಯಿಂದ ಹೊರಸೂಸುವ ಹಾಲಿನಂತ ಅಂಟು ಸೊನೆ. ಅಗಲವಾದ ಹುರುಬುರುಕಿನ ಎಲೆಗಳು ಕಡು ಹಸಿರಿನಿಂದ ಕೂಡಿವೆ. ಎಲೆಗಳ ಮೇಲೆ ಅಚ್ಚಾಗಿ ಮೂಡಿರುವ ನರಗಳಿವೆ. ಗಂಡು ಮತ್ತು ಹೆಣ್ಣು ಹೂವುಗಳು ಬೇರೆ ಬೇರೆಯಾಗಿರುತ್ತವೆ. … Read more

ಸಂಗೀತ ಲೋಕದ ಬೆರಗು ಎಸ್‍ಪಿಬಿ: ಡಾ. ಹೆಚ್ ಎನ್ ಮಂಜುರಾಜ್

‘ಮಲೆಗಳಲುಲಿಯುವ ಓ ಕೋಗಿಲೆಯೇಬಲು ಚೆಲ್ವಿದೆ ನಿನ್ನೀ ಗಾನಇಂಗ್ಲಿಷಿಗೆ ತರ್ಜುಮೆ ಮಾಡಿದರೆದೊರೆವುದು ನೊಬೆಲ್ ಬಹುಮಾನ’ ಕುವೆಂಪು ಅವರ ಕವಿತೆಯೊಂದರ ಸಾಲುಗಳಿವು. ಇದನ್ನು ಪ್ರಸ್ತಾಪಿಸುತ್ತಾ ಡಾ. ಹಾ ಮಾ ನಾಯಕರು, ‘ಕೋಗಿಲೆಯ ಹಾಡನ್ನು ಇಂಗ್ಲಿಷಿಗೆ ತರ್ಜುಮೆ ಮಾಡುವವರು ಯಾರು?’ ಎಂದು ಕೇಳುತ್ತಾ, ಪರೋಕ್ಷವಾಗಿ ಕುವೆಂಪು ಅವರ ಪ್ರತಿಭೆಗೆ ನೊಬೆಲ್ ಬಹುಮಾನ ಲಭಿಸುವುದು ಯಾವಾಗ? ಎಂಬ ದನಿಯಲ್ಲಿ ಬರೆದಿದ್ದರು. ಏಕೆ ಈಗ ಈ ಮಾತು ನೆನಪಾಯಿತೆಂದರೆ, ಇಂಥ ಸವಾಲನ್ನೂ ಸಾಹಸವನ್ನೂ ಅಪೂರ್ವ ರೀತಿಯಲ್ಲಿ ತಮ್ಮ ಬದುಕಿನುದ್ದಕ್ಕೂ ಕೈಗೊಂಡು ಗಾಯನ ರಸಯಾತ್ರೆಯಲ್ಲಿ ಸಹೃದಯರನ್ನು … Read more

ಮರೆಯಲಾಗದ ಮದುವೆ (ಭಾಗ 10): ನಾರಾಯಣ ಎಮ್ ಎಸ್

-೧೦- ಬಹುಶಃ ಬದುಕಿನಲ್ಲಿ ಮೊದಲಬಾರಿಗೆ ಅಯ್ಯರಿಗೆ ತನಗೆ ವಯಸ್ಸಾಗುತ್ತಿರುವ ಅರಿವಾಯಿತು. ಕೊಮ್ಮರಕುಡಿಯಿಂದ ಗೂಡೂರಿಗೆ ಕಾಲ್ನಡಿಗೆಯಲ್ಲಿ ಹೊರಟಿದ್ದ ಅಯ್ಯರ್ ಒಂದೆರಡು ಮೈಲು ನಡೆಯುವಷ್ಟರಲ್ಲೇ ಹೈರಾಣಾಗಿ ಬಿಟ್ಟಿದ್ದರು. ಮೊದಲೇ ಅಯ್ಯರಿಗೆ ಒರಟು ರಸ್ತೆಯಮೇಲೆ ಚಪ್ಪಲಿಯೂ ಇಲ್ಲದೆ ಬರಿಗಾಲಲ್ಲಿ ನಡೆದು ಅಭ್ಯಾಸವಿರಲಿಲ್ಲ, ಸಾಲದ್ದಕ್ಕೆ ಏರುಬಿಸಿಲು ಬೇರೆ. ಅರೆಕ್ಷಣಕ್ಕೆ ಸುಮ್ಮನೆ ಕೊಮ್ಮರಕುಡಿ ರೈಲ್ವೇ ಸ್ಟೇಷನ್ನಿಗೆ ಮರಳಿ ಸಂಜೆ ನಾಲ್ಕೂಕಾಲಿನವರೆಗೂ ಕಾದು ವಿಜಯವಾಡಕ್ಕೆ ಹೋಗುವ ರೈಲಿನಲ್ಲಿ ನೆಲ್ಲೂರಿಗೆ ಹೋದರೆ ಹೇಗೆಂಬ ಯೋಚನೆ ಬಂತು. ಮರುಕ್ಷಣವೇ ಟಿಕೆಟ್ಟಿಗೆ ಹಣವಿಲ್ಲದ್ದು ನೆನಪಾಗಿ ಖೇದವಾಯಿತು. ಹಿಂದೆಯೇ ಆಪತ್ಕಾಲದಲ್ಲಿ ಅನಿವಾರ್ಯವಾಗಿ … Read more

ನೆಲಕಿರುಬನೆಂಬ ಜೇಡ: ಚರಣಕುಮಾರ್

ನಾವು ಚಿಕ್ಕವರಿರುವಾಗ ನಮ್ಮ ತುಂಟಾಟಗಳನ್ನು ನಿಭಾಯಿಸುವುದು ಮನೆಮಂದಿಗೆಲ್ಲಾ ಬಲು ಕಷ್ಟವಾಗಿರುತ್ತಿತ್ತು. ನಮ್ಮನ್ನು ನಿಯಂತ್ರಿಸಲು ಭೂತದ ಕಥೆ, ಹುಲಿ, ಚಿರತೆ ಮತ್ತು ಮಂಗಗಳ ಚಿತ್ರಗಳನ್ನು ತೋರಿಸಿಯೋ ಅಥವಾ ಅವುಗಳ ಹೆಸರುಗಳನ್ನು ಹೇಳಿಯೋ ಹೆದರಿಸುತ್ತಿದ್ದರು. ನನ್ನೂರಿನಲ್ಲಿ ಅಜ್ಜಿಯು, ನೀನೊಬ್ಬನೆ ಮನೆಯಿಂದ ಆಚೆ ಹೋದರೆ ನೆಲಗುಮ್ಮ ಬಂದು ನಿನ್ನನ್ನು ನುಂಗಿಬಿಡುತ್ತದೆ ಎಂದು ಒಮ್ಮೆಯಾದರೆ, ನೋಡು ಆಚೆ ಹೋದರೆ ಆ ಗೋಡೆಯ ಪಕ್ಕದಲ್ಲಿ ನೆಲಪಟ್ಟು ಅಡಗಿ ಕುಳಿತಿದೆ ನಿನ್ನನ್ನು ಕಚ್ಚಿ ತಿಂದುಬಿಡುತ್ತದೆ ಎಂದು ಮತ್ತೊಮ್ಮೆಯಾದರೆ, ನಾವು ಊಟಮಾಡದೆ ಹಠಮಾಡುತ್ತಿರುವಾಗ ಒಂದು ಕೊಳವೆಯಾಕಾರದಲ್ಲಿ ಪಿ.ವಿ.ಸಿ … Read more

ಆಕ್ರಮಣ (ಭಾಗ 2): ಜೆ.ವಿ. ಕಾರ್ಲೊ

ಇಲ್ಲಿಯವರೆಗೆ ತಾನೊಬ್ಬ ಮಹಾನ್ ಬುದ್ಧಿವಂತ ಎಂದು ತಿಳಿದುಕೊಂಡಿರುವ ಮನುಷ್ಯನಿಗೆ ಒಂದು ಯಕಃಶ್ಚಿತ್ ಇರುವೆ ಯೋಚಿಸಲು ಶಕ್ತವಾಗಿರುವುದಷ್ಟೇ ಅಲ್ಲದೆ ಯೋಜನೆಯನ್ನೂ ರೂಪಿಸಲೂ ಶಕ್ತವಾಗಿರುತ್ತದೆ ಎಂದರೆ ನಂಬುವುದು ಕಷ್ಟವೇ. ಲೆನಿಂಜೆನ್ನನ ಐರೋಪ್ಯ ಬುದ್ಧಿವಂತಿಕೆ ಮತ್ತು ಬ್ರೆಜಿಲಿನ್ನಿಯರರ ದೇಶಿ ಬುದ್ಧಿವಂತಿಕೆ ಈ ಇರುವೆಗಳ ಬುದ್ದಿವಂತಿಕೆಗೆ ಸರಿಸಾಟಿಯಾಗಬಲ್ಲುದೇ? ನಿಜ. ಲೆನಿಂಜೆನ್, ಇರುವೆಗಳು ಒಳಗೆ ಬರದಂತೆ ನೀರಿನ ಕಾಲುವೆಯನ್ನೇನೋ ನಿರ್ಮಿಸಿದ್ದ. ಲೆನಿಂಜೆನ್ನನ ಯೋಜನೆ ಏನೇ ಇರಲಿ.. ಅದನ್ನು ಹಾಳುಗೆಡುವುದೇ ಇರುವೆಗಳ ಪ್ರತಿಯೋಜನೆಯಾಗಿತ್ತು. ಸಂಜೆ ನಾಲ್ಕರಷ್ಟೊತ್ತಿಗೆ ಇರುವೆಗಳ ಆಕ್ರಮಣದ ಅಂತಿಮ ರೂಪುರೇಷೆಗಳು ತಯಾರಾದಂತೆ ಕಾಣಿಸಿತು. ಕಾಲುವೆಯೊಂದೇ … Read more

ಜೀವನದ ಆಸೆ ಆಕಾಂಕ್ಷೆಗಳು ಹಾಗೂ…..?: ಶೀಲಾ ಎಸ್.‌ ಕೆ.

ಒಂದು ಲೋಟ ಕಾಫಿ ಕೊಡ್ತಿಯಾ ಪದ್ಮ ಎಂದು ಹಜಾರಕ್ಕೆ ಬಂದು ಕುಳಿತರು ನಂಜುಂಡಪ್ಪ. ಕೈಯಲ್ಲಿ ಕಾಫಿ ಲೋಟ ಹಿಡಿದು ಬಂದ ಪದ್ಮ ತುಂಬ ಸುಸ್ತಾದವರಂತೆ ಕಾಣುತಿದ್ದಿರಿ ಎಂದು ಕೇಳಿದರು, ಆಗ ತಾನೇ ಕೆಲಸ ಮುಗಿಸಿ ಬಂದಿದ್ದ ತನ್ನ ಗಂಡನನ್ನ. ಸ್ವಲ್ಪ ಕೆಲಸ ಜಾಸ್ತಿ ಈಗ ಮೊದಲಿನಂತೆ ಅಲ್ಲ ಎಲ್ಲ ಹೊಸ ಹೊಸ ಪ್ರಯೋಗಗಳು, ಹೊಸ ಬಗೆಯ ಕೋಚಿಂಗ್ ಅಂತಾರೆ, ಈಗ ಅದನ್ನು ಕಲಿಯಲು ಅಥವಾ ಅಳವಡಿಸಿಕೊಳ್ಳಲು ಸ್ವಲ್ಪ ಸಮಯ ಹಾಗು ಶ್ರಮವಾಗುತ್ತಿದೆ ಅಷ್ಟೆ ಎಂದರು. ಸರಿ ಬೇಗ … Read more

ಪ್ರಥಮ ಆಂಗ್ಲೋ ಇಂಡಿಯನ್ ಕವಯತ್ರಿ-ತೋರು ದತ್ತ: ನಾಗರೇಖಾ ಗಾಂವಕರ

ತೋರು ದತ್ತ ಆಂಗ್ಲ ಹಾಗೂ ಪ್ರೇಂಚ ಭಾಷೆಯಲ್ಲಿ ಬರೆದ ಭಾರತೀಯ ಕವಯತ್ರಿ. ಆಕೆಗೆ ಕಾವ್ಯ ರಚನೆ ಜನ್ಮತಃ ಸಿದ್ಧಿಸಿದ ಕಲೆ. ಹಾಗಾಗೆ ಅತೀ ಅಲ್ಪಾಯುಷಿಯಾದ ಬರೀ 21 ವರ್ಷಕ್ಕೆ ಇಹಲೋಕ ತ್ಯಜಿಸಿದ ತೋರು ದತ್ತ ಅವಿಸ್ಮರಣೀಯವೆನಿಸುವ ಕೃತಿಗಳನ್ನು ರಚಿಸಿ ಇಂಗ್ಲೀಷ ಸಾಹಿತ್ಯ ಲೋಕದಲ್ಲಿ ತನ್ನದೇ ಛಾಪು ಒತ್ತಿದ್ದಾಳೆ. ರಾಮ ಬಾಗನ್ ದತ್ತ ಕುಟುಂಬದಲ್ಲಿ 1856 ಮಾರ್ಚ 4ರಂದು ಜನಿಸಿದ ತೋರು ದತ್ತರ ತಂದೆ ಗೋವಿನ್ ಚಂದರ ದತ್ತ. 1862ರಲ್ಲಿ ಕುಟುಂಬ ಕ್ರೈಸ್ತಧರ್ಮಕ್ಕೆ ಮತಾಂತರಗೊಂಡಿತು. ತೋರುವಿನ ಸಹೋದರ ಅಬ್ಜು,ಅಕ್ಕ … Read more

ತೆರೆಯ ಮರೆಗೆ ಸರಿದ ಧೋನಿಯ ಮರೆಯುವ ಮುನ್ನ: ಸತೀಶ್ ಶೆಟ್ಟಿ ವಕ್ವಾಡಿ

ಪ್ರತಿಯೊಂದಕ್ಕೂ ಅಂತ್ಯವಿರಲೆ ಬೇಕು ಮತ್ತು ಆ ಅಂತ್ಯದ ಆರಂಭದ ಮೊದಲೆ ಅಂತ್ಯವಾದರೆ ಆ ಅಂತ್ಯಕ್ಕೊಂದು ಅಂತ್ಯವಿಲ್ಲದ ಇತಿಹಾಸವಿರುತ್ತದೆ. ಹೌದು ಸ್ವಲ್ಪ ಕಷ್ಟವಾದರೂ ಜೀರ್ಣಿಸಿಕೊಳ್ಳಲು ಸಾಧ್ಯವಾಗುವ ಸಾಲಿದು ಮತ್ತು ಕ್ರೀಡಾಪಟುಗಳಿಗೆ ಅನಂತ ಸಂತೃಪ್ತಿ ನೀಡುವ ಸಾಲಿದು. ಪ್ರತಿಯೊಬ್ಬ ಕ್ರೀಡಾಪಟುವಿಗೂ ತನ್ನ ವೃತ್ತಿ ಜೀವನದ ಅಂತ್ಯದ ಆರಂಭ ಜಗತ್ತಿಗೆ ತಿಳಿಯುವ ಮೊದಲೆ ಗೋಚರಿಸುತ್ತೆ . ಆದರೆ ಅದನ್ನು ಅವನು ಯಾವ ರೀತಿ ನಿರ್ವಹಿಸುತ್ತಾನೆ ಅನ್ನೊದರ ಮೇಲೆ ಅವನ ವೃತ್ತಿಯೋತ್ತರ ಜೀವನ ರೂಪಿತವಾಗುತ್ತೆ. ಎಷ್ಟೋ ಕ್ರೀಡಾಳುಗಳು ಜಗತ್ತು ನಿಬ್ಬೆರಗಾಗುವಂತೆ ತಮ್ಮ ವೃತ್ತಿ … Read more

ಹುಲಿ ಬಂತು ಹುಲಿ: ನಂದಾದೀಪ, ಮಂಡ್ಯ

ಹುಲಿ ಬಂತು ಹುಲಿ ಎಂದು ಅಜ್ಜಿ ಕತೆ ಶುರು ಮಾಡಿ ಹುಲಿ ಜಿಂಕೆನಾ ತಿಂದು ಬಿಡ್ತು ಎಂದು ಕತೆ ಮುಗಿಸುವಾಗ ನಮ್ಮೆಲ್ಲರ ಮನಸಲ್ಲಿ ಹುಲಿ ಎಂದರೆ ಏನೋ ಒಂದು ಅವ್ಯಕ್ತ ಭಯ ಆವರಿಸುತ್ತದೆ..! ಭಯದ ಜೊತೆಗೆ ಹುಲಿಯನ್ನು ನೋಡಬೇಕೆಂಬ ಕುತೂಹಲವು ಹೆಚ್ಚಾಗುತ್ತದೆ..! ಮೃಗಾಲಯದಲ್ಲಿ ದೂರದಿಂದಲೇ ಹುಲಿಯನ್ನು ಬೆರಗುಗಣ್ಣಿಂದಲೇ ತುಂಬಿಕೊಂಡಿದ್ದು ಉಂಟು..! ಹುಲಿಯ ಮೇಲಿನ ಕುತೂಹಲ ಹೆಚ್ಚಿದಂತೆ ಅದರ ಬಗ್ಗೆ ತಿಳಿಯಲು ಒಂದಷ್ಟು ವಿಷಯಗಳನ್ನು ತಿಳಿಯಲು ಹೊರಟಾಗ ಅದು ಭಯ ಹುಟ್ಟಿಸುವ ಜೀವಿ ಅನ್ನೋದಕ್ಕಿಂತ ಸ್ವಾಭಿಮಾನಿ ಜೀವಿ ಎನ್ನುವುದು … Read more

ನಾವು… ನಮ್ಮದು: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ನಮ್ಮ ಜೀವನದ ಗತಿಯನ್ನು, ನಮ್ಮ ಯೋಚನಾ ಲಹರಿಯನ್ನು ಬದಲಿಸಬಲ್ಲ ತಾಕತ್ತು ಇರುವುದು ಪುಸ್ತಕಗಳಲ್ಲಿ ಮಾತ್ರ ಎಂದು ಬಲವಾಗಿ ನಂಬಿರುವವನು ನಾನು. ನಮ್ಮ ಮನೆಯಲ್ಲಿದ್ದ ಪುಸ್ತಕಗಳು, ವಾರಕ್ಕೊಮ್ಮೆ ಬರುತ್ತಿದ್ದ ತರಂಗ, ಸುಧಾ ಗಳಂತಹ ಪತ್ರಿಕೆಗಳು ನಮ್ಮ ಓದಿನ ಹುಚ್ಚು ಹೆಚ್ಚಿಸಿದ್ದಲ್ಲದೆ ನಮ್ಮ ಯೋಚನಾ ಕ್ರಮವನ್ನೇ ಬದಲಿಸಿದ್ದವು. ಅವುಗಳು ಈಗಿನ ಗೂಗಲ್ ಗಿಂತ ಹೆಚ್ಚಿನ ಮಾಹಿತಿಗಳನ್ನು ಕೊಡುತ್ತಿದ್ದವು. ಈಗಿನ ಅಂತರ್ಜಾಲ ಒಂದು ಸಾಗರ. ಅದರಲ್ಲಿ ನಮಗೆ ಬೇಕಾದ ನಿಖರ ಮಾಹಿತಿ ತೊಗೊಳ್ಳೋದು ಅಂದರೆ ಒಳ್ಳೆಯ ಬಲೆಯಲ್ಲಿ ಮೀನು ಹಿಡಿದಂತೆ. … Read more

Online Hydroponics ತರಬೇತಿ (ಕನ್ನಡದಲ್ಲಿ)

ಮಣ್ಣನ್ನು ಬಳಸದೆ, ಅವಶ್ಯಕ ಲವಣಾಂಶ ಭರಿತ ನೀರಿನಲ್ಲಿ ನಿಮ್ಮ ಮನೆಯಲ್ಲಿಯೇ ಹಣ್ಣು ತರಕಾರಿ ಬೆಳೆಯುವ ವಿಧಾನದ ಬಗ್ಗೆ ಕೇಳಿದ್ದೀರಾ? ಅದಕ್ಕೆ hydroponics ಅನ್ನುತ್ತಾರೆ. ಅದನ್ನು ನೀವೂ ಕಲಿಯಬೇಕೆ? ಇಲ್ಲಿದೆ ಅವಕಾಶ! ಬೆಳೆಸಿರಿ ಸಂಸ್ಥೆ ಕನ್ನಡಿಗರಿಗಾಗಿ, ಕನ್ನಡದಲ್ಲಿಯೇ ವಿಶೇಷವಾಗಿ ತಯಾರಿಸಿದ ತರಬೇತಿ ಶಿಬಿರ, online ನಲ್ಲಿ… ಅದೂ ವಿಶೇಷ ರಿಯಾಯಿತಿಯೊಂದಿಗೆ !! ಒಬ್ಬರಿಗೆ ಕೇವಲ 999 ಮಾತ್ರ (ಮೂಲ ಬೆಲೆ 1999)! *ಕೆಲವೇ ಸೀಟುಗಳು ಲಭ್ಯ. ಮೊದಲು ಬಂದವರಿಗೆ ಆದ್ಯತೆ. ದಿನಾಂಕ: ಜೂನ್ 21, 2020 – ಭಾನುವಾರ … Read more

ಬದಲಾವಣೆಯ ಆರಂಭ ನಮ್ಮಿಂದಲೇ ಸಾಧ್ಯ: ಪ್ರೀತಿ ಕಾಮತ್

ಮೊನ್ನೆ ನಾನು ಮತ್ತು ನನ್ನ ಫ್ರೆಂಡ್ಸ ಸೇರಿ ನಡುರಾತ್ರಿ ವಿಡಿಯೋಕಾಲ್‍ನಲ್ಲೇ ಒಂದು ಸಣ್ಣ ಚರ್ಚಾಕೂಟ ಏರ್ಪಡಿಸಿದ್ದೆವು. ಹೆಣ್ಮಕ್ಳು ಅಂದ್ರೆ ಮತ್ತೆ ಕೇಳಬೇಕಾ? ಮಾತನಾಡಲು ಅವಕಾಶ ಸಿಕ್ಕರೆ ಸಾಕು. ಆದರೆ ಸದಾ ವಟಗುಡುವ ಗೆಳತಿ ಮಾತ್ರ ಬಾಯಿಗೆ ಬೀಗ ಹಾಕಿ ಕೂತಿದ್ದು ನನಗೆ ಸಹಿಸಲಾಗಲಿಲ್ಲ. ಕಾರಣ ಕೇಳಿದಾಗ ಹುಡುಗಿಯರು ಇಲ್ಲಿ ಮಾತನಾಡುವುದಷ್ಟೇ ಬಂತು ಸಮಯ ಬಂದಾಗ ನಾವು ಬಾಯಿ ಬಿಡಲಾರೆವು ಅಲ್ವಾ? ಅಂದಳು. ಲೇ ಎಲ್ಲಾದರೂ ಭೋಧೀ ವೃಕ್ಷದ ಕೆಳಗೆ ಕೂತಿದ್ದಿಯಾ? ಯಾಕೋ ತತ್ವಜ್ಞಾನಿಯಂತೆ ಮಾತಾಡುತ್ತಿದ್ದಿ, ಏನ್ ಮ್ಯಾಟರ್ … Read more

ಕುರಿಯ ಹಾಲಿನ ಐಸ್ ಕ್ರೀಮು (ಭಾಗ ೨): ಗುರುಪ್ರಸಾದ‌ ಕುರ್ತಕೋಟಿ

ಇಲ್ಲಿಯವರೆಗೆ ನಾವು ಅಮೆರಿಕೆಯ, ನೆಬ್ರಾಸ್ಕಾ ರಾಜ್ಯದ ಒಮಾಹಾದಲ್ಲಿ ಧರೆಗೆ ಬಂದು ಇಳಿದಿದ್ದು ಸೆಪ್ಟೆಂಬರದಲ್ಲಿ. ಆಗ ಅಲ್ಲಿ ಜಿಟಿ ಜಿಟಿ ಮಳೆ ಶುರು ಆಗಿತ್ತು. ಆದರೆ ಕಿಚಿ ಪಿಚಿ ಕೆಸರು ಇರಲಿಲ್ಲ! ಮಹಾ ನಿರ್ದಯಿ ಚಳಿಗಾಲಕ್ಕಿಂತ ಸ್ವಲ್ಪ ಮೊದಲು. ಹೀಗಾಗಿ ಮಳೆಯ ಜೊತೆಗೆ ಸ್ವಲ್ಪ ಚುಮು ಚುಮು ಚಳಿಯೂ ಇತ್ತು. ನಾವು ಹೋದ ಆ ಸಮಯ ಮುಂಬರುವ ಚಳಿಯ ಪರಿಚಯ ಮಾಡಿಕೊಳ್ಳಲು ತುಂಬಾ ಸಹಾಯ ಮಾಡಿತು. ಒಂದು ವೇಳೆ ಚಳಿಗಾಲದ ಹೊತ್ತಿನಲ್ಲಿ ಅಲ್ಲಿಗೆ ಹೋಗಿದ್ದರೆ ಹೊಂದಿಕೊಳ್ಳಲು ತುಂಬಾ ಕಷ್ಟ ಪಡುತ್ತಿದ್ದೆವೇನೋ ಅನಿಸಿತು. ಆದರೆ … Read more

ಅಹಮಿಲ್ಲದ ಮಹಮದರ ಬದುಕೇ ಕವಿತಾಸಾರ: ಡಾ. ಹೆಚ್ಚೆನ್ ಮಂಜುರಾಜ್

ಎಲ್ಲ ಮರೆತಿರುವಾಗ ಇಲ್ಲ ಸಲ್ಲದ ನೆವವ ಹೂಡಿ ಬರದಿರು ಮತ್ತೆ ಹಳೆಯ ನೆನಪೇ ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ ರಾಡಿಗೊಳಿಸುವೆ ಏಕೆ, ಮಧುರ ನೆನಪೇ? ಬಹಳ ಒಳ್ಳೆಯ ಕವಿ ಹಾಗೂ ಅದಕಿಂತಲೂ ಒಳ್ಳೆಯ ಮನುಷ್ಯರಾದ ನಿಸಾರ್ ಅಹಮದ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ‘ಕನ್ನಡವೆಂದರೆ ಬರಿ ನುಡಿಯಲ್ಲ. ………’ ಎಂದು ತಿಳಿಸಿ ಕೊಟ್ಟವರಿವರು. ಮನಸು ಗಾಂಧಿಬಜಾರು ಎಂದವರು. ಕನ್ನಡ ನಾಡು ನುಡಿಗಳ ನಿತ್ಯೋತ್ಸವವನ್ನು ಸತ್ಯವಾಗಿಸಿದವರು. ಕುರಿಗಳು ಸಾರ್ ಕುರಿಗಳು ಎಂದು ವಿಡಂಬಿಸಿದವರು. ಮೂಲತಃ ಭೂಗರ್ಭ ವಿಜ್ಞಾನಿಯಾದರೂ ನವೋಲ್ಲಾಸದ ಕವಿಗಳಾಗಿಯೇ … Read more