ಸಮಾಜಮುಖಿ ಚಿಂತನೆಯ ಹುಡುಕಾಟದಲ್ಲಿ ಮೊದಲ ಜೋಡು ಕಥಾ ಸಂಕಲನ: ಶಿವಕುಮಾರ ಸರಗೂರು
ಇತ್ತೀಚಿಗೆ ಸಣ್ಣ ಕತೆಗಳು ಕನ್ನಡ ಸಾಹಿತ್ಯದಲ್ಲಿ ವೈಶಾಲ್ಯತೆಯಿಂದ ಬೆಳೆಯುತ್ತಿರುವ ಪ್ರಕಾರವಾಗಿದೆ. ಸುತ್ತಲಿನ ಅನುಭವಗಳಿಗೆ ಸ್ಪಂದಿಸುವ ಮೂಲಕ ಸರಳವಾಗಿ ಲೇಖಕನಿಗೆ ದಕ್ಕುವ ವಸ್ತು ಸಣ್ಣ ಕತೆಯ ವೈಶಿಷ್ಟವಾಗಿದೆ. ಸೂಕ್ಷ್ಮ ಸಂವೇದನೆಯುಳ್ಳ ಕಥೆಗಾರ ಆಯ್ದುಕೊಳ್ಳುವ ಏಕೈಕ ಪ್ರಕಾರವೂ ಇದೆ ಆಗಿದೆ. ಕತೆಗಾರ ಮುಧುಕರ ಮಳವಳ್ಳಿ ಅವರ ಮೊದಲ ಜೋಡು ಕಥಾಸಂಕಲನವು ದಲಿತರ ಬದುಕಿನ ಅನಂತ ಸಾಧ್ಯತೆಗಳನ್ನು ಚಿಂತನೆಗೆ ಹಚ್ಚುವಂತೆ ಮಾಡುತ್ತವೆ. ಸಾಮಾಜಿಕ ಕಟ್ಟುಪಾಡುಗಳು ಎಂದು ತಿಳಿದ ಅದೆಷ್ಟೋ ಅಂಶಗಳನ್ನು ಬಹುತ್ವದ ನೆಲೆಯಲ್ಲಿ ಮರುಶೋಧಿಸಬೇಕು ಎಂಬ ಸಂದೇಶವನ್ನು ಕತೆಗಾರರು ನೀಡ ಬಯಸುತ್ತಾರೆ. … Read more