“ಕಾರ್ಪೋರೇಟ್ ಜಗತ್ತಿನೊಳಗೂ ನೆಲದ ಭಾಷಾ ಸೊಗಡಿನಲ್ಲಿ ಅರಳಿದ ತೂಕಬದ್ಧ ರಚನಾ ಶೈಲಿಯ ಕಥೆಗಳು”: ಎಂ. ಜವರಾಜ್

ಒಂದು ಸಾಹಿತ್ಯ ಕೃತಿ ಯಾವ ಕಾರಣಕ್ಕೆ ಓದುಗರನ್ನು ಸೆಳೆಯುತ್ತದೆ ಎಂಬುದು ಓದುಗರ ಅಭಿರುಚಿಯ ಮೇಲೆ ನಿಂತಿರುತ್ತದೆಯೇ? ಈ ‘ಅಭಿರುಚಿ’ಗೆ ನಿರ್ದಿಷ್ಟ ಕಾರಣ ಹೇಳಲಾಗದು. ಆದರೆ ಇತರ ಆಯಾಮಗಳೂ ಲೇಖಕನೊಬ್ಬನ ಕೃತಿ, ಓದುಗರನ್ನು ಭಿನ್ನ ಬಗೆಯಲ್ಲಿ ತಲುಪುತ್ತದೆ ಎಂಬುದಕ್ಕೆ ಸಾಕ್ಷ್ಯವಿದೆ. ಅತ್ಯಂತ ಮಾನವೀಯ ನೆಲೆಯಲ್ಲಿ ರಚಿತವಾದ ಅನೇಕರ ಬರಹಗಳು ಎಷ್ಟು ಜನ ಓದುಗರನ್ನು ತಲುಪಿವೆ? ಅವು ವಿಭಿನ್ನವು ಕಥನತಂತ್ರದಲ್ಲಿ ಕಲಾತ್ಮಕ ಗುಣವೂ ಆಗಿರುವ ಕೃತಿಗಳೂ ಹೌದು. ಪ್ರಕಾಶಕರು ಪ್ರಕಟಣೆ ಮಾಡುವುದಷ್ಟೆ ಮುಖ್ಯವಲ್ಲ ಒಂದು ಸಾಹಿತ್ಯ ಕೃತಿಯನ್ನು ಜನರಿಗೆ ತಲುಪಿಸುವ … Read more

ನೋವೆಂಬ ಒಲವಿನಲಿ ತೇಲುವ ನಾವೆ “ಪ್ರೇಮಾಯತನ”: ಅಶ್ಫಾಕ್ ಪೀರಜಾದೆ

ಚಿತ್ರಕಲೆ, ಸಾಹಿತ್ಯ, ಪ್ರವಾಸ, ಕರಕುಶಲ ಕಲೆ, ಓದು, ಬರಹ, ಅಂಚೆ ಚೀಟಿ, ಹಳೆ ನಾಣ್ಯ ಸಂಗ್ರಹ, ಛಾಯಾಚಿತ್ರ, ವೈದ್ಯಕೀಯ ಸೇವೆ ಹೀಗೆ ಹತ್ತು ಹಲವು ಹವ್ಯಾಸಗಳಲ್ಲಿ ಟಿಸಲೋಡೆದು ಸಮೃದ್ಧವಾದ ಕಲೆ ಮತ್ತು ಸಾಹಿತ್ಯದ ಹೆಮ್ಮರವಾಗಿ ಬೆಳೆದು ಸಮಾಜಕೆ ನೆರಳಾಗಿ ನಿಂತ ಬಹುಮುಖ ಪ್ರತಿಭೆಯ ಹೆಸರೇ ಜಬೀವುಲ್ಲಾ ಎಂ. ಅಸದ್. ನರ್ಸಿಂಗ್ ಓದಿರುವ ಇವರು ಸಧ್ಯ ಬೆಂಗಳೂರಿನ ಕರುಣಾ ಟ್ರಸ್ಟ್ ನ ಮುಖಾಂತರ ಜನರಿಗೆ ವೈದ್ಯಕೀಯ ಸೇವೆ ನೀಡುತ್ತ ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. ಕಾವ್ಯ ಮತ್ತು ಚಿತ್ರಕಲೆಯ ಕಡು … Read more

ದೇವರುಗಳ ಸುತ್ತ ಪ್ರದಕ್ಷಿಣೆ ಹಾಕುವ “ಬ್ಯಾಟೆಮರ”: ಡಾ. ನಟರಾಜು‌ ಎಸ್ ಎಂ

ದಾವಣಗೆರೆಯಲ್ಲಿ ಕಳೆದ ತಿಂಗಳು ಬೆಂಗಳೂರಿನ ಅರವಿಂದ ಬುಕ್ ಹೌಸ್ ನವರು ಒಂದು ಪುಸ್ತಕ ಹಬ್ಬ ಇಟ್ಟುಕೊಂಡಿದ್ದರು. ಬಹುಶಃ ಅವರದು ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ ಒಂದಷ್ಟು ದಿನ ಆಯ್ದ ಕನ್ನಡ ಪುಸ್ತಕಗಳನ್ನು ಮಾರುವ ಮೂಲಕ ಜನರಲ್ಲಿ ಕನ್ನಡ ಪುಸ್ತಕಗಳನ್ನು ಕೊಂಡು ಓದುವ ಅಭ್ಯಾಸ ಬೆಳೆಸುವ ಅಭಿಯಾನ ಅನಿಸುತ್ತೆ. ಆ ಪುಸ್ತಕ ಹಬ್ಬಕ್ಕೆ ಹೋಗಿದ್ದಾಗ ಅಲ್ಲಿ ಅನೇಕ ಹೊಸ ಲೇಖಕರ ಪುಸ್ತಕಗಳೂ ಸಹ ಕಣ್ಣಿಗೆ ಬಿದ್ದಿದ್ದವು. ನನಗೆ ಬೇಕೆನಿಸಿದ ಪುಸ್ತಕಗಳನ್ನು ಕೊಂಡುಕೊಂಡ ಪುಸ್ತಕಗಳಲ್ಲಿ “ಬ್ಯಾಟೆಮರ”ವೂ ಒಂದಾಗಿತ್ತು. ಪುಸ್ತಕ ಕೊಂಡು ಅನೇಕ … Read more

“ಸಿದ್ಧಾಂತಗಳ ಹೇಗೆ ಕೊಲ್ಲುವೆ..?” ಅವಲೋಕನ: ವಿಮಲಾರುಣ ಪಡ್ಡಂಬೈಲ್

ಆನ್ಲೈನ್ ಸಂಗಾತಿ ಪತ್ರಿಕೆಯ ಸಂಪಾದಕರಾದ ಕವಿ ಶ್ರೀ ಕು. ಸ. ಮಧುಸೂದನ ರಂಗೇನಹಳ್ಳಿಯವರ “ಸಿದ್ಧಾಂತಗಳ ಹೇಗೆ ಕೊಲ್ಲುವೆ..?” 50 ಕವಿತೆಗಳ ಗುಚ್ಛದಲ್ಲಿ ಸಮಾಜದ ಸೂಕ್ಷ್ಮತೆಯ ಪಿಸುಮಾತುಗಳು ಮಾರ್ದನಿಸುತ್ತವೆ. ಆಗಾಗ ಪತ್ರಿಕೆಯಲ್ಲಿ ಪ್ರಕಟವಾಗುವ ಇವರ ಕವನಗಳು ಇತರ ಕವಿಗಳ ಕವನಗಳಿಗಿಂತ ಭಿನ್ನವಾಗಿವೆ. ವಾಚ್ಯತೆ ಇದ್ದರೂ ಹರಿತ ಪದಗಳು ಕವನಗಳಲ್ಲಿ ತಿವಿದಂತೆ ಭಾಸವಾಗುತ್ತವೆ. ಬಿಡಿ ಬಿಡಿ ಕವನಗಳನ್ನು ಓದುತ್ತಿದ್ದ ನನಗೆ ಇಡಿಯಾಗಿ ಓದುವ ಅವಕಾಶಕ್ಕಾಗಿ ಸಂತೋಷ ಪಡುತ್ತೇನೆ. ನನ್ನ ಮನದ ಬಾಗಿಲನ್ನು ತಟ್ಟಿದ ಈ ಕವನ ಸಂಕಲನ ಕಾವ್ಯದ ಅರಿವನ್ನು … Read more

ಸ್ತ್ರೀ ಮತ್ತು ದಲಿತ ಸಂವೇದನೆಯ ವೈರುಧ್ಯಗಳ ನಡುವಿನ ಮಾನವೀಯ ಮೌಲ್ಯಗಳ ಶೋಧ: ಎಂ ಜವರಾಜ್

ನಾನು ಈಚೆಗೆ ಕಣ್ಣಾಡಿಸಿದ ಒಂದು ಕೃತಿ ಕೆ.ಶ್ರೀನಾಥ್ ಅವರ ‘ಕನಸು ಸೊಗಸು’. ಇದಕ್ಕು ಮುನ್ನ ಇವರ ಕೆಲವು ಬರಹಗಳನ್ನು ಫೇಸ್ ಬುಕ್ ನಲ್ಲಿ ಗಮನಿಸಿದ್ದೆ. ಅವು ಮನುಷ್ಯನನ್ನು ಮನುಷ್ಯನನ್ನಾಗಿ ನೋಡುವ ಸ್ಪಂದಿಸುವ ಪ್ರಗತಿಪರವಾದ ಧ್ವನಿಪೂರ್ಣವಾದ ಮಾನವೀಯ ತುಡಿತದ ಬರಹಗಳು. ಆಗಾಗ ಎಫ್.ಬಿ ಲೈವ್ ಗೆ ಬರುವ ಕೆ.ಶ್ರೀನಾಥ್ – ಕಥೆ ಕವಿತೆ ವಾಚಿಸಿ ಗಮನ ಸೆಳೆದವರು. ವೀಣೆ ಮತ್ತಿತರ ವಾದ್ಯ ನುಡಿಸುವ, ವಿವರಿಸುವ ಬಹುಗುಣವುಳ್ಳವರು. ಇದಲ್ಲದೆ ಕನ್ನಡ ಕಿರುತೆರೆ, ಹಿರಿತೆರೆ ಕಲಾವಿದರೂ ಕೂಡ. ಇವರ ಬರಹಗಳನ್ನು ಗಮನಿಸಿದಂತೆ … Read more

ಚಲಿಸುವ ಪಾತ್ರಗಳ ಮಾಸ್‌ ಕತೆಗಳ “ತಿರಾಮಿಸು”: ಡಾ. ನಟರಾಜು ಎಸ್‌ ಎಂ

ಶಶಿ ತರೀಕೆರೆ ಕನ್ನಡದ ಭರವಸೆಯ ಯುವ ಕತೆಗಾರ. ಈಗಾಗಲೇ ಯುವ ಬರಹಗಾರರ ಸೃಜನಶೀಲ ಬರಹಗಳಿಗೆ ನೀಡುವ ಟೋಟೋ ಪುರಸ್ಕಾರ, ಹಾಗು ಅವರ ಚೊಚ್ಚಲ ಪುಸ್ತಕ “ಡುಮಿಂಗ”ಕ್ಕೆ ಛಂದ ಪುಸ್ತಕ ಬಹುಮಾನ ಸೇರಿದಂತೆ ಇತರ ಬಹುಮಾನಗಳು ಕೂಡ ಲಭಿಸಿದೆ. ತಮ್ಮ ಮೊದಲ ಪುಸ್ತಕ “ಡುಮಿಂಗ” ಪ್ರಕಟವಾದ ನಾಲ್ಕು ವರ್ಷಗಳ ನಂತರ ಶಶಿಯವರು ತಮ್ಮ ಎರಡನೇ ಕಥಾ ಸಂಕಲನ “ತಿರಾಮಿಸು” ವನ್ನು ಹೊರತಂದಿದ್ದಾರೆ. ತಮ್ಮ ಸಾಹಿತ್ಯ ಪಯಣದ ಜೊತೆಜೊತೆಗೆ, ತಮ್ಮ ಪ್ರಕಾಶನದ ಮೂಲಕ ಕನ್ನಡದ ಯುವ ಬರಹಗಾರರನ್ನು ಮುನ್ನೆಲೆಗೆ ತರಲು … Read more

ʼಕುಲುಮೆʼ ಬೆಳಗಿದ ಬಾಳು: ಎಂ ನಾಗರಾಜಶೆಟ್ಟಿ

ʼಕುಲುಮೆʼ ದಸ್ತಗಿರ್ ಸಾಬ್, ಕೋಡಿಕ್ಯಾಂಪ್ ತರೀಕೆರೆ ಇವರ ಜೀವನ ವೃತ್ತಾಂತ- ಬಿಕ್ಕಲಂ ರಹಮತ್ ತರೀಕೆರೆ. ಹೀಗೆಂದರೆ ಪ್ರಾಧ್ಯಾಪಕ, ವಿಮರ್ಶಕ, ಸಂಶೋಧಕ, ಪ್ರಬಂಧಕಾರ ರಹಮತ್ ತರೀಕೆರೆ ಅವರ ಬಾಳಚಿತ್ರಗಳ ʼಕುಲುಮೆʼಗೆ ಕಿಂಚಿತ್ತೂ ಊನವಾಗುವುದಿಲ್ಲ; ಬದಲು ಹೆಚ್ಚು ಅರ್ಥಪೂರ್ಣವಾಗುತ್ತದೆ. ಕಾರಣ: ರಹಮತ್ ತರೀಕೆರೆಯವರ ಆತ್ಮಕಥನ ʼಕುಲುಮೆʼಯ ಪ್ರತಿ ಅಧ್ಯಾಯದಲ್ಲೂ ದಸ್ತಗಿರ್ ಸಾಬರಿದ್ದಾರೆ. ಕುಲುಮೆ ದತ್ತಣ್ಣ ಎನ್ನುವ ಖ್ಯಾತಿಯ, ಸಾವ್ಕಾರ್ರೆ ಎಂದರೆ ಬೀಗುವ ದಸ್ತಗಿರ್ ಸಾಬ್, ಕುಲುಮೆ ಮತ್ತು ಬೇಸಾಯವನ್ನುಮೂಲ ವೃತ್ತಿ ಮಾಡಿಕೊಂಡಿದ್ದರೂ ಹೊಟ್ಟೆಪಾಡಿಗಾಗಿನೂರೆಂಟು ವೇಷ ತೊಡಲು ಹಿಂಜರಿಯದವರು. ಸರ್ಕಸ್ ಕಂಪೆನಿ … Read more

“ಅಂತರಂಗದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿ ಎಡತಾಕಿ ಕಾಡುವ ಒಂದು ಹದವಾದ ಕಥಾಕೃತಿ”: ಎಂ‌. ಜವರಾಜ್

ಮುಂಬೈನ ಭಾರತೀಯ ಸಾಹಿತ್ಯ ವಿಚಾರ ಸಂಕಿರಣವೊಂದರಲ್ಲಿ ಕಥೆಗಾರ ಯಶವಂತ ಚಿತ್ತಾಲರು “ಬರಹಗಾರ ಶ್ರೇಷ್ಟತೆಯ ವ್ಯಸನಕ್ಕೆ ತುತ್ತಾಗದೆ ಸಾಹಿತ್ಯದಲ್ಲಿ ಶಿಷ್ಟ ಕ್ಲಿಷ್ಟ ಶ್ರೇಷ್ಠ ಎಂಬಂಥ ‘ಮನೋ ಒರತೆ’ ಗೆ ಒಳಗೊಳ್ಳುವ ಒಳಸುಳಿಗಳ ರಚನೆ ಬಿಟ್ಟು ಸ್ಪಷ್ಟ, ಸರಳ, ಪ್ರಯೋಗಶೀಲ, ಸೃಜನಶೀಲ ರಚನೆಯತ್ತ ಚಿತ್ತ ಹರಿಸಿದರೆ ಅಂತಹ ಬರಹದಲ್ಲಿ ವಿಶಿಷ್ಟತೆ ಕಾಣಬಹುದು. ಇದರಿಂದ ಲೇಖಕನನ್ನು ಬರಹದ ಶ್ರೇಷ್ಟತೆಯ ವ್ಯಸನಕ್ಕೆ ತುತ್ತಾಗುವುದನ್ನು ತಪ್ಪಿಸುತ್ತದೆ. ಒಮ್ಮೆ ಈ ಶ್ರೇಷ್ಟತೆಯ ವ್ಯಸನ ಆವರಿಸಿದರೆ ಅದರಿಂದ ಹೊರ ಬರಲಾರದೆ ಆತನಿಂದ ಹೊಸತೇನನ್ನೂ ನಿರೀಕ್ಷಿಸಲಾಗದು” ಅನ್ನೊ ಅಭಿಪ್ರಾಯ … Read more

ದೇಹಾದಾಚೆಗೆ ಪ್ರೀತಿಯ ತುಡಿತ- ʼಜೋನ್ಪುರಿ ಖಯಾಲ್ʼ: ಎಂ ನಾಗರಾಜ ಶೆಟ್ಟಿ

ಕೆಲವು ಪುಸ್ತಕಗಳು ಓದಿದ ನಂತರ ಮನಸ್ಸಿನಿಂದ ಅಳಿಸಿ ಹೋಗುವುದಿಲ್ಲ. ಅವು ನಮ್ಮ ತಿಳಿವಳಿಕೆಯ/ ಸಂವೇದನೆಯ ಭಾಗವಾಗಿಯೇ ಉಳಿದುಕೊಳ್ಳುತ್ತವೆ. ಅಂತಹ, ಓದಿದ ನಂತರವೂ ಕಾಡುವ ಗುಣವುಳ್ಳ ಪುಸ್ತಕ ʼಜೋನ್ಪುರಿ ಖಯಾಲ್” ಅಕ್ಷತಾ ಈ ಪುಸ್ತಕವನ್ನು ಕಳಿಸಿದಾಗ ನಾನೇನೂ ಅಂತಹ ಆಸಕ್ತಿ ತೋರಲಿಲ್ಲ; ಅಕೈ ಪದ್ಮಸಾಲಿ, ಎ ರೇವತಿ ಆತ್ಮಕತೆಗಳನ್ನೂ ಓದಲಾಗಿರಲಿಲ್ಲ. ಇದನ್ನೂ ನಿಧಾನವಾಗಿ ಓದಿದರಾಯಿತೆಂದು, ಒಂದೆರಡು ಪುಟಗಳನ್ನು ತಿರುವಿ ಹಾಕಿದವನಿಗೆ ಕೆಳಗಿಡಲು ಸಾಧ್ಯವಾಗಲೇ ಇಲ್ಲ. ಆ ಮಟ್ಟಿಗೆ ರೂಮಿ ಹರೀಶರ ಬದುಕಿನ ಪುಟಗಳು ಆವರಿಸಿಕೊಂಡು ಬಿಟ್ಟವು. ʼಜೋನ್ಪುರಿ ಖಯಾಲ್‌ʼ … Read more

ಕಸೂತಿಯಾಗದ ದಾರದುಂಡೆ! ಪುಸ್ತಕ ವಿಮರ್ಶೆ: ಪೂರ್ಣಿಮಾ ಕಮಲಶಿಲೆ

ಉಡುಪಿ ಜಿಲ್ಲೆಯ ಕೋಟದ ರೇವತಿ ಶೆಟ್ಟಿ ಯವರ ಪ್ರಥಮ ಕಥಾಸಂಕಲನದ ಹೆಸರು *ಕಸೂತಿಯಾಗದ ದಾರದುಂಡೆ*. ಹೆಸರೇ ಅದೆಷ್ಟು ಧ್ವನಿಪೂರ್ಣ! ದಾರದುಂಡೆ ಎಂದರೆ ಬೆಸೆಯುವಿಕೆಯ ದ್ಯೋತಕ. ಅದೂ ಕಣ್ಮನ ತಣಿಸುವ ಸೂಕ್ಷ್ಮ ಕಸೂತಿಯಾಗಿ ಆ ದಾರದೆಳೆಗಳು ಅರಳಿದರೆ, ಆ ಕುಸುರಿ ಅದೆಷ್ಟು ಚೆಂದ ಅಲ್ವಾ? ಪ್ರತಿ ವಸ್ತುವಿಗೂ, ವ್ಯಕ್ತಿಗೂ ತಾನೊಂದು ಉತ್ಕೃಷ್ಟ ಪ್ರತಿಮೆಯಾಗಬೇಕು, ತನ್ನಿಂದ ಏನಾದರೊಂದು ಸಾಧನೆಯಾಗಬೇಕು ಎಂಬ ಆಸೆ ಸಹಜ. ಆದರೆ ಎಲ್ಲವೂ, ಎಲ್ಲರೂ ಆ ಗುರಿ ಮುಟ್ಟಲು ಸಾಧ್ಯವಿಲ್ಲ. ಕೆಲವರು ಅಸಾಧ್ಯವನ್ನು ಸಾಧ್ಯವಾಗಿಸಿಕೊಳ್ಳಲು ಪಟ್ಟಪಾಡು, ಮಾಡುವ … Read more

ಟ್ರಂಕು ತಟ್ಟೆಯೊಳಗೆ ಏನೇನಿದೆ? ಡಾ. ನಟರಾಜು ಎಸ್ ಎಂ

ದಲಿತ ವಿದ್ಯಾರ್ಥಿ ನಿಲಯಗಳಿಗೆ ಒಂದು ವಿಶಿಷ್ಟವಾದ ಇತಿಹಾಸವಿದೆ. ಒಂದು ಕಾಲಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟಕ್ಕೆ ಸೀಮಿತವಾಗಿದ್ದ ಸಮಾಜ ಕಲ್ಯಾಣ ಇಲಾಖೆಯ ದಲಿತರ ಹಾಸ್ಟೆಲ್ ಎಂಬ ಪರಿಕಲ್ಪನೆ ಇವತ್ತು ಅನೇಕ ಹಳ್ಳಿಗಳಿಗೂ ಪಸರಿಸಿದೆ. ಆ ಪ್ರತೀ ಹಾಸ್ಟೆಲ್ ಗಳ ಹುಟ್ಟು ಮತ್ತು ಧ್ಯೇಯ ಶಿಕ್ಷಣ ಪಡೆಯಲು ಬರುವ ವಿದ್ಯಾರ್ಥಿಗಳ ಸಲಹುವುದು ಆಗಿತ್ತಾದರೂ ಅನೇಕರು ಸಂಘಟಿತರಾಗಲು, ಹೋರಾಟದ ಮನೋಭಾವವನ್ನು ರೂಪಿಸಿಕೊಳ್ಳಲು ಸಹ ಆ ಹಾಸ್ಟೆಲ್ ಗಳು ಪ್ರತ್ಯಕ್ಷವಾಗಿ‌ ಮತ್ತು ಪರೋಕ್ಷವಾಗಿ ಸಹಕರಿಸಿವೆ ಎನ್ನಬಹುದು. ಹಾಸ್ಟೆಲ್ ಗಳ ಕಾರಣಕ್ಕೆ ವಿದ್ಯಾಭ್ಯಾಸ … Read more

ದೋರುಗಾಯಿ ಹಣ್ಣಾದ ಹೊತ್ತು ಗೊತ್ತು!: ಡಾ. ಹೆಚ್‌ ಎನ್‌ ಮಂಜುರಾಜ್‌

‘ತುಂಬ ಸಿಹಿಯೂ ಅಲ್ಲದ, ತೀರ ಒಗರೂ ಅಲ್ಲದ ಪನ್ನೇರಳೆ ಹಣ್ಣಿನ ಗುಣ ಲಲಿತ ಪ್ರಬಂಧದ ಗುಣಕ್ಕೆ ಹತ್ತಿರ. ಲಲಿತ ಪ್ರಬಂಧಗಳಲ್ಲಿ ನಗು, ಅಳು, ಚಿಂತನೆ ಎಲ್ಲವೂ ಮೇಳೈಸಿರುತ್ತವೆ. ಅಲ್ಲದೆ ಪನ್ನೇರಳೆ ಗುಂಪು ಗುಂಪಾಗಿದ್ದು ಕೂಡಿ ಬಾಳುವ ಆಶಯವನ್ನು ಸಮರ್ಪಕವಾಗಿ ಸಂಕೇತಿಸುತ್ತದೆ. ಈ ಎಲ್ಲ ಕಾರಣಗಳಿಂದ ಪನ್ನೇರಳೆ ಎಂಬ ಹೆಸರು ಇಲ್ಲಿ ಸೂಕ್ತವಾಗಿ ಕಂಡಿದೆ’ ಎಂಬುದು ಪ್ರಬಂಧಕಾರರ ಮಾತು. ಇಲ್ಲಿಯ ಎಲ್ಲವನೂ ಓದಿದ ಮೇಲೆ ಅರ್ಥವಾಗುವಂಥದು. ಇದರಲ್ಲಿರುವ ಹನ್ನೆರಡು ಪ್ರಬಂಧಗಳಲ್ಲೂ ಇಂಥ ಸಹಬಾಳ್ವೆ ಮತ್ತು ಸಾಮರಸ್ಯಗಳ ಚಿತ್ರಣ ಹೃದ್ಯವಾಗಿ … Read more

ಅಮೆರಿಕವೆಂಬ ಮಾಯಾಲೋಕ: ಡಾ. ಹೆಚ್ ಎನ್ ಮಂಜುರಾಜ್

ಅಮೆರಿಕದ ಅರಿಜ಼ೊನಾ ರಾಜ್ಯದ ಒಂದು ನಗರದಲ್ಲಿರುವ ತಮ್ಮ ಮಗ ಮತ್ತು ಸೊಸೆಯನ್ನು ನೋಡಿ ಬರಲೆಂದು ಹೋದ ಲೇಖಕಿ ಅಲ್ಲಿಯ ಜನಜೀವನ ಮತ್ತು ಸಮಾಜೋ ಸಾಂಸ್ಕೃತಿಕ ಪಲ್ಲಟಗಳನ್ನು ತಮ್ಮದೇ ಆದ ವಿಶಿಷ್ಟ ರೀತಿಯಲಿ ಗುರುತಿಸಿ ಹಾಸ್ಯಮಯ ಶೈಲಿಯಲಿ ಲಲಿತ ಪ್ರಬಂಧಗಳನ್ನಾಗಿಸಿದ್ದಾರೆ. ಇಂಥ ಒಟ್ಟು ನಲವತ್ತೊಂದು ಬರೆಹಗಳು ವಿಧ ವಿಧವಾದ ವಸ್ತುವೈವಿಧ್ಯ ಮತ್ತು ಆಡುಮಾತಿನ ಲಯದಲ್ಲಿ ಅಭಿವ್ಯಕ್ತಗೊಂಡಿವೆ. ವಾಸ್ತವವಾಗಿ ಇದನ್ನು ಅವರು ಪ್ರವಾಸ ಕಥನ ಎಂದೇ ಕರೆಯಬಹುದಾಗಿತ್ತು. ಈ ಮಾತನ್ನು ಮುನ್ನುಡಿಕಾರರೂ ಹೇಳಿದ್ದಾರೆ. ಒಂದೆರಡು ಬರೆಹಗಳು ಅವರು ಅಮೆರಿಕಕ್ಕೆ ಹೋಗುವ … Read more

ನಿಂದನೆಗೆ ವಂದನ ; ಜೀವನ ಪಾವನ: ಡಾ. ಹೆಚ್ ಎನ್ ಮಂಜುರಾಜ್

ಪುಸ್ತಕದ ಹೆಸರು : ವನಸುಮ(ಸಮಾಜ ಸೇವಕ ಶ್ರೀ ಕೆ ಆರ್ ಲಕ್ಕೇಗೌಡರ ಜೀವನ ಕಥನ)ಸಂಪಾದಕರು: ಡಾ. ದೀಪುಪ್ರಕಾಶಕರು: ಶ್ರೀ ಸಾಯಿ ಸಾಹಿತ್ಯ, ಬೆಂಗಳೂರುಮೊದಲ ಮುದ್ರಣ: 2023ಒಟ್ಟು ಪುಟಗಳು: 196, ಬೆಲೆ: ರೂ. 200 ಇದೊಂದು ವಿಶಿಷ್ಟ ಕಥನ. ಕೆ ಆರ್ ನಗರ ತಾಲೂಕಿನ ಕಾಟ್ನಾಳು ಗ್ರಾಮದ ಶ್ರೀ ಕೆ ಆರ್ ಲಕ್ಕೇಗೌಡರು ರೈತಾಪಿ ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು. ಶ್ರಮ ಪಟ್ಟು ವಾರಾನ್ನ ಮಾಡಿ ವಿದ್ಯಾರ್ಜನೆಯಿಂದ ಮೇಲೆ ಬಂದು ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ … Read more

ಜೀವನಾನುಭವದ ಕಂದೀಲು”ಬಾಳನೌಕೆಗೆ ಬೆಳಕಿನ ದೀಪ”: ಜ್ಯೋತಿ ಕುಮಾರ್. ಎಂ(ಜೆ. ಕೆ.)

ಹಡಗಿನಲ್ಲಿ ಪಯಣಿಸುವವರಿಗೆ ಬೇಕು ದಿಕ್ಸೂಚಿ. ದಡದ ಕಡೆ ಬರುವವರಿಗೆ ಬೇಕು ಲೈಟ್ ಹೌಸ್. ಜೀವನದಲ್ಲಿ ಸರಿ ದಾರಿಯಲ್ಲಿ ಹೋಗುವವರಿಗೆ ಬೇಕು ಹಿರಿಯರ ಅನುಭವ ಮತ್ತು ಅನುಭಾವದ ಹಿತ ನುಡಿಗಳು. ಕತ್ತಲೆಯನ್ನು ಓಡಿಸಲು ಬೇಕು ಕಂದೀಲು. ಅಂದರೆ ಕಂದೀಲು ಇರುವೆಡೆ ಕತ್ತಲು ಇರದು. ಆದರೆ ಜೀವನದಲ್ಲಿಯೇ ಕತ್ತಲು ಬಂದು ಬದುಕು ಪೂರ್ತಿ ಕತ್ತಲೆಯಲ್ಲಿ ಸವೆಸುವಂತಾದರೆ ಕೈ ಹಿಡಿದು ನಡೆಸುವವರು ಯಾರು? ದಾರಿ ತೋರಿಸುವವರು ಯಾರು? ದೀಪದ ಬುಡದಲ್ಲಿಯೇ ಕತ್ತಲು ಇದ್ದರೆ ಜ್ಯೋತಿ ತನ್ನನ್ನು ತಾನು ಸುಟ್ಟು ಕೊಂಡು ಜಗವನ್ನು … Read more

ಅರ್ಧ ಬಿಸಿಲು, ಅರ್ಧ ಮಳೆ, ಪೂರ್ಣ ಖುಷಿ, ಪೂರ್ಣ ಪೈಸಾ ವಸೂಲ್: ಜ್ಯೋತಿ ಕುಮಾರ್. ಎಂ(ಜೆ. ಕೆ.).

ರೈತ ಬೇಸಾಯ ಮಾಡಬೇಕು ಅಂದ್ರೆ, ಮುಂಗಾರಾ?, ಹಿಂಗಾರಾ?ಯಾವ ಬೆಳೆ ಬೆಳೆಯುವುದು, ಯಾವ ಮಣ್ಣಿಗೆ ಯಾವ ತಳಿ ಸೂಕ್ತ. ಮಣ್ಣಿನ ಪರೀಕ್ಷೆ ಮಾಡಿಸಬೇಕಾ? ಯಾವ ಯಾವ ಬೆಳೆಗಳಿಗೆ ಮತ್ತೆ ಯಾವ ಯಾವ ಮಣ್ಣಿನ ವಿಧಕ್ಕೆ ಯಾವ ಯಾವ ಗೊಬ್ಬರ ಸೂಕ್ತ, ಕೊಟ್ಟಿಗೆನೋ? ಸರ್ಕಾರಿ ಗೊಬ್ಬರನೋ?ವಿವಿಧ ರೀತಿಯ ಕಳೆ ಹಾಗೂ ಕೀಟಗಳ ನಿರ್ವಹಣೆ ಹೇಗೆ? ಇಷ್ಟೆಲ್ಲಾ ತಿಳಿದು ಮಾಡಿದ ಬೇಸಾಯಕ್ಕೆ ಉತ್ತಮ ಫಲ ಬಂದೆ ಬರುತ್ತೇ ಅನ್ನೋ ಗ್ಯಾರಂಟಿ ಇರುವುದಿಲ್ಲ. ಅಷ್ಟಿಲ್ಲದೇ ಹೇಳುತ್ತಾರೆಯೆ, “ಬೇಸಾಯ ನೀ ಸಾಯ, ನಿನ್ನ ಮನೆಯವರೆಲ್ಲ … Read more

ಮುಗುಳ್ನಗು ಒಂದನ್ನು ಎದೆಯಲ್ಲಿ ಬೆಳೆಯಲಿಕ್ಕೆ ಹಂಬಲಿಸುವವರ ಕಥೆಗಳ ಗುಚ್ಛ “ಮರ ಹತ್ತದ ಮೀನು”: ಡಾ. ನಟರಾಜು ಎಸ್.‌ ಎಂ.

ವಿನಾಯಕ ಅರಳಸುರಳಿಯವರು ಲೇಖಕರಾಗಿ ಕಳೆದ ಏಳೆಂಟು ವರ್ಷಗಳಿಂದ ಪರಿಚಿತರು. ಮೊದಲಿಗೆ ಕವಿತೆಗಳನ್ನು ಬರೆಯುತ್ತಿದ್ದವರು, ತದನಂತರ ಪ್ರಬಂಧ ಬರೆಯಲು ಶುರು ಮಾಡಿದರು. ನಂತರದ ದಿನಗಳಲ್ಲಿ ಕತೆಗಳನ್ನು ಸಹ ಬರೆಯುತ್ತಾ ಈಗ ತಮ್ಮ ಹತ್ತು ಕತೆಗಳಿರುವ “ಮರ ಹತ್ತದ ಮೀನು” ಕಥಾಸಂಕಲನವನ್ನು ಹೊರತಂದಿದ್ದಾರೆ. “ಮರ ಹತ್ತದ ಮೀನು” ಕೃತಿಯು 2023ನೇ ಸಾಲಿನ ಈ ಹೊತ್ತಿಗೆ ಪ್ರಶಸ್ತಿ ಪಡೆದ ಕೃತಿಯಾಗಿದ್ದು ಓದುಗರಿಂದ ಉತ್ತಮ ಪ್ರತಿಕ್ರಿಯೆಯನ್ನು ಸಹ ಪಡೆಯುತ್ತಿದೆ. ಈ ಪುಸ್ತಕಕ್ಕೆ ಲೇಖಕರಾದ ಮಣಿಕಾಂತ್‌ ಎ. ಆರ್.‌ ಮುನ್ನುಡಿ ಬರೆದಿದ್ದು, ಈ ಹೊತ್ತಿಗೆ … Read more

ಚನ್ನಕೇಶವ ಜಿ ಲಾಳನಕಟ್ಟೆ ಕವಿತೆಗಳು

ಅಂದದ ನಾರಿಗೆ ಚೆಂದದ ಸೀರೆಯುಸುಂದರವಾಗಿ ಕಾಣುತಿದೆ ಬಿಂದಿಯು ಹಣೆಯಲಿ ತಂದಿದೆ ಚೆಲುವನುಬಂಧಿತನಾದೆ ಪ್ರೀತಿಯಲಿ ಕೆಂದನೆ ತುಟಿಯಲಿ ಕುಂದದ ಸೊಬಗಿದೆಅಂದುಗೆ ಸದ್ದು ಮಾಡುತಿವೆ ಚೆಂದಿರ ವದನೆಯ ಚೆಂದದ ಚೆಲುವೆಗೆಮುಂದಣ ಕೈಯ ಹಿಡಿಯುವೆನು ತಂದಳು ಹರುಷವ ಕುಂದದ ಚೆಲುವಲಿಬಂಧುವೆ ಆಗಿ ನಿಂತಿಹಳು ಬಂದಳು ಹೃದಯಕೆ ಬಂಧಿಸಿ ನನ್ನನುನಂದಿನಿ ಧೇನು ಸೊಬಗಿವಳು ವಂದಿಸಿ ಹೊಸಿಲಿಗೆ ಗಂಧವ ಹಚ್ಚುತತಂದಳು ಸಿರಿಯ ನನ್ನವಳು ಹಾಲಿನ ರೂಪದಿನೀಲಿಯ ಬಾನಲಿಬಾಲಕ ಚಂದಿರ ನಗುತಿಹನುತೇಲುತಲಿರುವನು‌ಗಾಳಿಯು ಬೀಸಲುಸೀಳುತ ಮೋಡವ ಮೂಡುವನು ಇಳೆಯನು ಸುತ್ತುತಹೊಳೆಯುತಲಿರುವನುಬೆಳಕನು ನೀಡುತಲಿರುಳೆಲ್ಲಸೆಳೆಯುತ ಮಕ್ಕಳತಿಳಿ ಬೆಳಕಿಳಿಸುತಹೊಳೆಯೊಳು ಬಿಂಬವನಿಳಿಸುತ್ತ ಧರೆಗಿವ … Read more

ತವಕ ತಲ್ಲಣಗಳ ತಾಜಾಭಿವ್ಯಕ್ತಿ ; ಮೊಗೆದ ಬಾನಿಯ ತುಂಬ ತಿಳಿನೀರ ಬಿಂಬ: ಡಾ. ಹೆಚ್ ಎನ್ ಮಂಜುರಾಜ್

ಛದ್ಮವೇಷ- ಕವನ ಸಂಕಲನಕವಯಿತ್ರಿ- ಎಂ ಕುಸುಮ, ಹಾಸನಪ್ರಕಾಶಕರು: ರಚನ ಪ್ರಕಾಶನ, ಮೈಸೂರುಮೊದಲ ಮುದ್ರಣ: 2012ಬೆಲೆ: 80 ರೂಗಳು, ಒಟ್ಟು ಪುಟ: 128 ಈ ಕವನ ಸಂಕಲನವನ್ನು ಕವಯಿತ್ರಿಯಾದ ಶ್ರೀಮತಿ ಎಂ ಕುಸುಮ ಅವರು ಹೃದಯ ಶ್ರೀಮಂತಿಕೆಯುಳ್ಳ ಎಲ್ಲ ಮನುಜರಿಗೆ ಅರ್ಪಿಸಿದ್ದಾರೆ. ಶುದ್ಧ ಮಾನವತಾವಾದದಲ್ಲಿ ನಂಬುಗೆಯಿಟ್ಟ ಇವರ ಧ್ಯೇಯ ಮತ್ತು ಧೋರಣೆಗಳು ಇದರಿಂದಲೇ ಮನವರಿಕೆಯಾಗುತ್ತವೆ. ಇದು ಇವರ ಎರಡನೆಯ ಕವನ ಸಂಕಲನ. ಮೂಲತಃ ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಕನ್ನಡದಲ್ಲಿ ತಮ್ಮ ಸೃಜನಾತ್ಮಕವನ್ನು … Read more

ಮನುಷ್ಯರು ಪ್ರಕೃತಿಯನ್ನು ಮೀರಬಲ್ಲರೆ?: ಡಾ. ಶಿವಕುಮಾರ್ ಆರ್.

ಶಿವಕುಮಾರ್ ದಂಡಿನ ಅವರು ಸಾಮಾಜಿಕ ಕಳಕಳಿಯುಳ್ಳ ಅಭೂತಪೂರ್ವ ಯುವ ಸಾಹಿತ್ಯ ಪ್ರತಿಭೆ. ಇವರು ಬರೆದದ್ದು ನಲವತ್ತೆಂದು ಕವಿತೆಗಳ “ಮೋಹದ ಪಥವೋ ಇಹಲೋಕದ ರಿಣವೋ” ಎಂಬ ಒಂದು ಕವನ ಸಂಕಲನ. ಅವರ ಎಲ್ಲ ಕವಿತೆಗಳಲ್ಲಿ ಸಾಮಾಜಿಕ ಕಳಕಳಿ ಕಂಡು ಬಂದರೂ ಕೆಲವು ಕವಿತೆಗಳು ಪ್ರಕೃತಿ ಪರವಾಗಿ ಹೆಚ್ಚಾಗಿ ಚಿಂತಿಸಿವೆ. ಅವರ ಪ್ರಕೃತಿಯ ಮುನಿಸು, ಹನಿ, ಪ್ರಕೃತಿಯ ಒಡಲೂ ಸಮಾನತೆಯ ಪಾಠವೂ ಎಂಬ ಕವಿತೆಗಳು ನಿಸರ್ಗತತ್ತ್ವವನ್ನು ಹೇಳುತ್ತವೆ. ಮನುಷ್ಯರು ಮೂಲತಃ ಅರಣ್ಯವಾಸಿಗಳು ಎಂಬುದು ನಮಗೆಲ್ಲ ತಿಳಿದಿರುವ ವಿಚಾರ. ಅವರಿಗೆ ಆರಂಭದಲ್ಲಿ … Read more

ಡಾ.ಜಿ.ಎನ್.ಉಪಾಧ್ಯರ ಸಮೀಕ್ಷೆಯಲ್ಲರಳಿದ ಡಾ.ಜನಾರ್ದನ ಭಟ್ ಅವರ “ವಾಙ್ಞಯ ವಿವೇಕ”: ಅನುಸೂಯ ಯತೀಶ್

ಡಾ. ಜನಾರ್ದನ ಭಟ್ ನಮ್ಮೊಳಗಿನ ಸಂವೇದನಾಶೀಲ ಲೇಖಕರು. ಇವರು ಯಾವುದೇ ಸಾಹಿತ್ಯ ಪ್ರಕಾರಗಳಿಗೆ ಅಂಟಿಕೊಳ್ಳದೆ ಸೃಜನ ಮತ್ತು ಸೃಜನೇತರ ಎರಡು ಪ್ರಕಾರಗಳಲ್ಲೂ ತಮ್ಮನ್ನು ಅವಿರತ ತೊಡಗಿಸಿಕೊಂಡು ಧಣಿವರಿಯದೆ ಸಾಹಿತ್ಯಾರಾಧನೆಯಲ್ಲಿ ತೊಡಗಿರುವ ಬಹುಶ್ರುತ ವಿದ್ವಾಂಸರು. ಬಹುಭಾಷಾ ಪ್ರವೀಣರಾದ ಇವರು ಕಥೆ, ಕಾದಂಬರಿ, ವೈಚಾರಿಕ ಕೃತಿಗಳು, ಅಂಕಣಗಳು, ವಿಮರ್ಶೆ, ಮಕ್ಕಳ ಸಾಹಿತ್ಯ, ಇಂಗ್ಲೀಷ್ ಸಾಹಿತ್ಯ ರಚನೆಯ ಜೊತೆಗೆ ಹಲವಾರು ಕೃತಿಗಳ ಸಂಪಾದನೆ ಕೂಡ ಮಾಡಿ ಆಡು ಮುಟ್ಟದ ಸೊಪ್ಪಿಲ್ಲ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಸುಮಾರು ನಾಲ್ಕು ದಶಕಗಳಿಂದ ಕನ್ನಡ ಸಾಹಿತ್ಯದ … Read more

“ದೇವರ ಹೊಲ”ದಲ್ಲಿ ಭರ್ಜರಿ ಫಸಲು: ಡಾ. ನಟರಾಜು ಎಸ್‌ ಎಂ

ಮಂಜಯ್ಯ ದೇವರಮನಿ ಅವರ “ದೇವರ ಹೊಲ” ಪುಸ್ತಕ ನನ್ನ ಕೈ ಸೇರಿ ಒಂದು ತಿಂಗಳ ಮೇಲೆ ಒಂದು ವಾರವಾಗಿತ್ತು. ಸುಮಾರು ದಿನಗಳ‌ ಹಿಂದೆ ನೂರಾ ಐವತ್ತಕ್ಕೂ ಹೆಚ್ಚು ಜನರಿಗೆ ಕೃತಜ್ಙತೆ ಅರ್ಪಿಸಿರುವ ಮಂಜಯ್ಯ ಅವರ‌ ಮೊದಲ ಮಾತುಗಳನ್ನು ಅವರ ಈ ಪುಸ್ತಕದಲ್ಲಿ ಓದಿದ್ದೇನಾದರೂ ಇಡೀ ಪುಸ್ತಕವನ್ನು ಓದಲು ಯಾಕೋ ಸಾಧ್ಯವಾಗಿರಲಿಲ್ಲ. ನಿನ್ನೆ ಭಾನುವಾರ ಬಿಡುವು‌ ಮಾಡಿಕೊಂಡು ಇಡೀ ದಿನ ಒಂದೊಂದೇ ಕತೆಗಳನ್ನು ಓದುತ್ತಾ ಓದುತ್ತಾ ಮಂಜಯ್ಯ ಅವರ ಕಥನ ಕಲೆಗೆ ಬೆರಗಾಗಿ ಹೋದೆ. “ದೇವರ ಹೊಲ” ಪುಸ್ತಕವು … Read more

ಭಾರತದ ಸ್ವಾತಂತ್ಯ್ರ ಹುತಾತ್ಮ ಕವಿ ಅಶ್ಫಾಖ್‌ ಉಲ್ಲಾಖಾನ್‌ ಪುಸ್ತಕದ ಆಯ್ದ ಭಾಗ: ಜೆ ಕಲೀಂ ಬಾಷ

ಹಿಂದಿ ಮೂಲ: ಎಂ ಐ ರಾಜಸ್ವಿ ಕನ್ನಡಕ್ಕೆ: ಜೆ ಕಲೀಂ ಬಾಷ ಕಾಕೋರಿ ಕಾಂಡ ಸಣ್ನ ಸಣ್ಣ ಪ್ರಯತ್ನಗಳಿಂದಾದ ಅಸಫಲತೆಗಳಿಂದ ರಾಂ ಪ್ರಸಾದ್ ಬಿಸ್ಮಿಲ್ ಹಾಗೂ ಅವರ ಮಿತ್ರರ ಮನಸ್ಸು, ಈ ತರಹದ ವಿಧಿ ವಿಧಾನಗಳಿಂದ ಬೇಸರಗೊಂಡಿತ್ತು. ಆದರೂ ಸಹ ಅವರ ಮನದಲ್ಲಿನ್ನೂ ದೇಶ ಭಕ್ತಿಯ ಸಾಗರದ ಅಲೆಗಳು ಹೊಯ್ದಾಡುತ್ತಿದ್ದವು. ದಬ್ಬಾಳಿಕೆಯ ಬ್ರಿಟಿಷ್ ಸರ್ಕಾರದ ಸವಾಲನ್ನು ಎದುರಿಸುವಲ್ಲಿ ದೇಶಭಕ್ತರ ಕೊರತೆ ಇಲ್ಲ ಎಂಬುದನ್ನು ಸಾಬೀತು ಪಡಿಸಲು ಕ್ರಾಂತಿಕಾರಿಗಳು ಸಿದ್ಧರಿದ್ದರು. ಆದ್ದರಿಂದ ಕ್ರಾಂತಿಕಾರಿಗಳು ತಮ್ಮ ದಳವನ್ನು ಸಂಘಟಿಸುವಲ್ಲಿ ನಿರತರಾದರು. … Read more

ಸಲೀಮ ಭಾರತಿ ಅವರ “ಕಾರ್ಲ್ ಮಾರ್ಕ್ಸ್ ಜೀವನ ಪರಿಚಯ” ಒಂದು ಮರು ಓದು.: ಅಶ್ಫಾಕ್ ಪೀರಜಾದೆ.

ಕಮ್ಯೂನಿಸಂ : ಎಲ್ಲ ಸ್ವತ್ತೂ ಸಮುದಾಯಕ್ಕೆ ಸೇರಿದುದೆಂದೂ ಪ್ರತಿಯೊಬ್ಬ ವ್ಯಕ್ತಿಯೂ ಶಕ್ತ್ಯನುಸಾರವಾಗಿ ದುಡಿದು ಆವಶ್ಯಕತೆಗೆ ಅನುಸಾರವಾಗಿ ಪ್ರತಿಫಲ ಪಡೆಯಬೇಕೆಂದೂ ಪ್ರತಿಪಾದಿಸುವ ತತ್ತ್ವ (ಸಾಮ್ಯವಾದ).ಮಾರ್ಕ್ಸ್ ಮತ್ತು ಎಂಗೆಲ್ಸ್‌ ರಿಂದ ಪ್ರಪ್ರಥಮವಾಗಿ ಶಾಸ್ತ್ರೀಯವಾಗಿ ಪ್ರತಿಪಾದಿತವಾದ ಈ ತತ್ತ್ವಕ್ಕೆ ವೈಜ್ಞಾನಿಕ ಸಮಾಜವಾದವೆಂದೂ ಹೆಸರಿದೆ. (ವಿಕಿಪಿಡಿಯಾ) ಕಾಲ ಎಂಬುದು ಎಂದಿಗೂ ನಿಂತ ನೀರಲ್ಲ. ಸದಾ ಹರಿಯುತ್ತಲೇ ಇರುವ ಮಹಾ ಪ್ರವಾಹ. ಹಲವಾರು ತಿರುವು, ಹಲವಾರು ಘಟ್ಟಗಳು ಮತ್ತು ಪಲ್ಲಟಗಳು ಸಂಭವಿಸುತ್ತಲೇ ಹೊಸ ಹೊಸ ಸಾಮಾಜಿಕ, ರಾಜಕೀಯ, ಸಾಹಿತ್ಯಿಕ ಸಿದ್ಧಾಂತಗಳು, ಆಯಾಮಗಳು ಕೊನೆಗೆ ಒಂದು … Read more

ಇಡಿ ಕಿಡಿ ಕವಿತೆಗಳು: ಅನುಸೂಯ ಯತೀಶ್

ಮಂತ್ರಮುಗ್ಧಗೊಳಿಸುವಅಕ್ಷರ ಮಾಂತ್ರಿಕನ ಕಾವ್ಯ ಚಮತ್ಕಾರಿಕೆಯಲ್ಲರಳಿದಇಡಿ ಕಿಡಿ ಕವಿತೆಗಳು. ಹನಿಗವಿತೆಗಳ ಚಕ್ರವರ್ತಿ, ಚುಟುಕುಗಳು ರಾಜ, ಶಬ್ದ ಗಾರುಡಿಗ, ಹರಟೆಯ ಕವಿ, ಕಾವ್ಯ ಲೋಕದ ವಿದೂಷಕ, ಹಾಸ್ಯ ಲೇಖಕ, ನಗು ಬಿಗುವಿನ ಕವಿ, ಸಾಮಾಜಿಕ ಪ್ರಜ್ಞೆಯ ಬರಹಗಾರ ಮುಂತಾದ ನಾಮಾಂಕಿತಗಳಿಗೆ ಭಾಜನರಾದ ನಮ್ಮ ನಾಡಿನ ಹೆಮ್ಮೆಯ ಕವಿಯನ್ನು ಕನ್ನಡದ ಹಿರಿಯ ಹಾಗೂ ಶ್ರೇಷ್ಠ ಸಾಹಿತಿಗಳಾದ ಅ.ರಾ.ಮಿತ್ರರವರು “ಇಡಿ ಕಿಡಿ ಕವನಗಳು” ಕೃತಿಯ ಮುನ್ನುಡಿಯಲ್ಲಿ ಓದುಗರಿಗೆ ಪರಿಚಯಿಸಿರುವ ಪರಿಯಿದು. “ಚೇಷ್ಟೆಯ ಬುದ್ಧಿಯ ತುಂಟತನ ಇವಗುಂಟುಶಬ್ದಗಳ ವಕ್ರ ಸಂಚಾರವೂ ಉಂಟುಮೂಲೆ ಮೂಲೆಗಳಲ್ಲಿ ಬಾಯಾಡಿಸುವ … Read more

ಶಾಲಾ ಮಕ್ಕಳ ತರಲೆ ಕತೆಗಳ ವರ್ತಮಾನದ ಗಂಭೀರ ಕತಾ ಸಂಕಲನ “ಮಕ್ಕಳೇನು ಸಣ್ಣವರಲ್ಲ”: ರವಿರಾಜ್ ಸಾಗರ್

ಬಾಲಕನಾದರೂ ಬಾಲಕನು ಬಿಡುವ ಬಾಣವೇನೂ ಬಾಲಕನಲ್ಲ ಎನ್ನುವಂತೆ ಮಕ್ಕಳು ಸಣ್ಣವರಾದರೂ ಅವರ ಮಾತುಗಳು, ಪ್ರಶ್ನೆಗಳು ,ಕುತೂಹಲಗಳು, ಅವರ ತರಲೆಗಳು, ಅವರು ಸೃಷ್ಟಿಸುವ ಅವಾಂತರಗಳು ದೊಡ್ಡವು. ಶಿಕ್ಷಕರಾಗಿ ಎರಡು ದಶಕಗಳಿಂದ ಮಕ್ಕಳ ಜೊತೆ ಒಡನಾಟ ಇಟ್ಟು ಕೊಂಡು ಸಂವೇದನಶೀಲರಾಗಿರುವ ಗುಂಡುರಾವ್ ದೇಸಾಯಿಯವರು ಮಕ್ಕಳ ಮನೋವಿಜ್ಞಾನವನ್ನು ಚೆನ್ನಾಗಿ ಬಲ್ಲರು. ಅವರ ಸಾಹಿತ್ಯ ಕೃಷಿಯ ಅನುಭವ, ಮಕ್ಕಳ ಕಾಳಜಿ ಅವರ ಮಕ್ಕಳ ಕಥೆಗಳ ಸಂಕಲನ “ಮಕ್ಕಳೇನು ಸಣ್ಣವರಲ್ಲ” ಕೃತಿಯಲ್ಲಿ ವ್ಯಕ್ತವಾಗಿದೆ. ಮಕ್ಕಳ ಕಥೆಗಳು ಎಂದರೆ ಮಕ್ಕಳ ಮನೋರಂಜನೆ, ಮಕ್ಕಳಿಗೆ ನೀತಿ ಬೋಧನೆಯೇ … Read more

ವೇಣು ಜಾಲಿಬೆಂಚಿ ಅವರ ಕೃತಿ “ತಿಳಿಯದೇ ಹೋದೆ”: ಮಹಾದೇವ ಎಸ್, ಪಾಟೀಲ

ಕನ್ನಡ ಸಾಹಿತ್ಯ ಪರಂಪರೆ ದಿನದಿನೆ ಹುಲುಸಾಗಿ ಬೆಳೆಯುತ್ತ ಸಾಗಿದೆ. ಅದೊಂದು ಕಾಲದಲ್ಲಿ ಸಾಹಿತ್ಯ, ಬರಹವೆಂದರೆ ಪ್ರಾಧ್ಯಾಪಕರು,ಪಂಡಿತರಿಗೆ ಮಾತ್ರ ಸಿಮೀತ ವಾಗಿತ್ತು. ಆ ದಿನದ ಸಾಹಿತ್ಯವು ತನ್ನದೇ ಆದ ಛಂದೋಬದ್ಧ ಚೌಕಟ್ಟಿನಲ್ಲಿತ್ತು. ಆಧುನಿಕ ಸಾಹಿತ್ಯದ ಕಾಲದ ಈ ದಿನಮಾನದಲ್ಲಿ ‘ಮುಕ್ತಛಂದ’ದ ಮೂಲಕ ಎಲ್ಲವೂ ಮುಕ್ತವಾಗಿ ಅನಾವರವರಣಗೊಳ್ಳುತ್ತಿದೆ. ಇಂದಿನ ತಂತ್ರಜ್ಞಾನದ ಯುಗದಲ್ಲಿ ವಾಟ್ಸಪ್,ಫೇಸ್ ಬುಕ್ಕ್, ಇಂಟರ್ನೆಟ್ ಗಳ ಸಂಪರ್ಕ ಹಾಗೂ ಸಂವಹನದ ಮೂಲಕ ವೇದಿಕೆಯನ್ನು ಹಂಚಿಕೊಳ್ಳುವದರೊಂದಿಗೆ ಸಾಹಿತ್ಯ ಸಮೃದ್ಧವಾಗಿ ಬೆಳೆಯುತ್ತಿದೆ. ಇಂತಹ ಕಾಲಘಟ್ಟದಲ್ಲಿ ರಾಯಚೂರಿನ ಸೃಜನಶೀಲ ಬರಹಗಾರ ಕವಿ,ಕಥೆಗಾರರಾದ ಶ್ರೀ … Read more

ಧರ್ಮದ ಆಚರಣೆ ಆಸ್ತಿಕವೂ ಅಲ್ಲ.. ನಾಸ್ತಿಕವೂ ಅಲ್ಲ.. ಎನ್ನುವ ವಿಭಿನ್ನ ಕೃತಿ “ಯಡ್ಡಿ ಮಾಮ ಬರಲಿಲ್ಲ”: ಡಾ. ನಟರಾಜು ಎಸ್‌ ಎಂ

ಇಡೀ ವಾರ ನಾಲ್ಕೈದು ಪುಸ್ತಕಗಳ ಮೇಲೆ ಕಣ್ಣಾಡಿಸಿದ್ದೇನಾದರೂ ಪೂರ್ತಿಯಾಗಿ ಯಾವ ಪುಸ್ತಕವನ್ನು ಓದಲಾಗಿರಲಿಲ್ಲ. ಇತ್ತೀಚೆಗೆ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರಿಗೆ ಪ್ರಾಶಸ್ತ್ಯ ಕೊಡಲಿಲ್ಲ ಎನ್ನುವ ದನಿಗಳು, ಪರ್ಯಾಯ ಸಮ್ಮೇಳನ ಎಂಬಂತೆ ಬೆಂಗಳೂರಿನಲ್ಲಿ ಸಾಹಿತ್ಯ ಸಮ್ಮೇಳನವೊಂದನ್ನು ಹಮ್ಮಿಕೊಂಡಿದ್ದರು. ಎರಡೂ ಸಮ್ಮೇಳನಗಳ ಆಹ್ವಾನ ಪತ್ರಿಕೆಗಳ ಮೇಲೆ ಕುತೂಹಲಕ್ಕೆ ಕಣ್ಣಾಡಿಸಿದಾಗ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಒಬ್ಬೇ ಒಬ್ಬ ಮುಸ್ಲಿಂ ಕವಿಯ ಹೆಸರಿತ್ತು. ಆ ಕವಿಯೂ ಕೂಡ ಸಮ್ಮೇಳನದಿಂದ ಹಿಂದೆ ಸರಿದಿದ್ದು ಎಲ್ಲರಿಗೂ ತಿಳಿದ ವಿಚಾರವೇ … Read more

ತಮ್ಮ ಶ್ರೇಷ್ಟತೆಯನ್ನು ಬೇರೆಯವರ ನಿಮ್ನತೆಯಲ್ಲಿ ಕಾಣುವವರ ಮೂಲಗುಣಗಳ ಅನಾವರಣ ಮಾಡುವ “ಸ್ನೇಕ್‌ ಟ್ಯಾಟೂ”: ಡಾ. ನಟರಾಜು ಎಸ್‌ ಎಂ

ಬೆಳ್ಕೆ ಮಹಾದೇವ ಗಿರಿರಾಜರವರು ಕಳೆದ ಒಂದು ದಶಕದಿಂದ ಎಫ್‌ ಬಿ ಗೆಳೆಯರು. ಸಿನಿಮಾ ನಟರಾಗಿ, ನಿರ್ದೇಶಕರಾಗಿ, ನಾಟಕಕಾರರಾಗಿ ಹೆಸರು ಮಾಡಿದವರು. ಈಗ “ಕಥೆಗೆ ಸಾವಿಲ್ಲ” ಪುಸ್ತಕದ ಮೂಲಕ ಕಾದಂಬರಿಕಾರರಾಗಿದ್ದಾರೆ. ಜೊತೆಗೆ “ಸ್ನೇಕ್‌ ಟ್ಯಾಟೂ” ಎಂಬ ಹೊಸ ಕಥಾಸಂಕಲನದ ಮೂಲಕ ಕಥೆಗಾರರಾಗಿದ್ದಾರೆ. ಬಿ ಎಂ ಗಿರಿರಾಜರವರ “ನವಿಲಾದವರು” ಚಿತ್ರವನ್ನು ಯೂ ಟ್ಯೂಬ್‌ ನಲ್ಲಿ ನೋಡಿದ್ದೆ. ಆ ಚಿತ್ರದಲ್ಲಿನ ಅವರ ನಟನೆ ನನಗೆ ತುಂಬಾ ಇಷ್ಟವಾಗಿತ್ತು. ಒಬ್ಬ ಆತಂಕವಾದಿಯ ಪಾತ್ರವನ್ನು ತುಂಬಾ ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ನಂತರ ಬಂದ ಅವರ ಚಿತ್ರಗಳನ್ನು … Read more

“ಮಿಠಾಯಿ ಮಾಮ ಕವಿತೆ ಸವಿಯೋಣ ಬಾ ತಮ್ಮ”: ಯಲ್ಲಪ್ಪ ಎಮ್ ಮರ್ಚೇಡ್, ರಾಯಚೂರು

ಮಕ್ಕಳ ಸಾಹಿತ್ಯ ಎಂದರೆ ಮಕ್ಕಳ ಮನಸ್ಸನ್ನು ತಣಿಸಿ, ಕುಣಿಸಿ, ಅವರ ಕುತೂಹಲವನ್ನು ಕೇರಳಿಸಿ ಅರಳಿಸಿ, ಅವರ ಭಾವನೆಗಳಿಗೆ ರೆಕ್ಕೆ ಕಟ್ಟಿ, ಗಾಳಿಯಲ್ಲಿ ತೇಲಾಡುವಂತೆ, ಅವರ ಮನಸ್ಸು ಸಂತುಷ್ಟಗೊಳಿಸುವುದಲ್ಲದೇ, ಅವರನ್ನು ಮಾನಸಿಕವಾಗಿ ದೈಹಿಕವಾಗಿ ಸಂಪೂರ್ಣವಾಗಿ ತೊಡಗಿಸಿಕೊಂಡು ಹೋಗುವಂತೆ ಇರುವ ಸಾಹಿತ್ಯ. ಕನ್ನಡ ಸಾಹಿತ್ಯ ಲೋಕದೊಳಗೆ ಹಲವಾರು ಹಿರಿಯ ಸಾಹಿತಿಗಳು ಮಕ್ಕಳಿಗಾಗಿ ಬರೆದಿರುವಂತಹ ಕವಿಗಳನ್ನು ಸಹ ಕಾಣಬಹುದು. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಸೋಂಪುರದವರದಾ ಶಿಕ್ಷಕರು, ಕವಿಗಳು, ವಚನಕಾರರು, ಮಕ್ಕಳ ಸಾಹಿತಿಯು ಆಗಿರುವ ಶ್ರೀ ವೀರೇಶ ಬ ಕುರಿ ಸೋಂಪುರ … Read more