ರಾಮಂದ್ರ: ಹರಿ ಪ್ರಸಾದ್

ರಾಮಮಂದಿರ ಅಂದರೆ ಏನೇನೋ ಚಿತ್ರಗಳು ಮೂಡುವ ಈ ಕಾಲದಲ್ಲಿ, ನನಗಂತೂ ನಮ್ಮ ಸೋದರತ್ತ್ತೆ  ಊರಿನ ಮಧ್ಯದಲ್ಲಿದ್ದ ರಾಮಮಂದಿರವೇ ಕಣ್ಮುಂದೆ ಬರುತ್ತದೆ. ಸುಮಾರು ನೂರೈವತ್ತು ಮನೆಗಳ ಪುಟ್ಟ ಊರದು. ನನ್ನ ಬಾಲ್ಯ ಬಹುಪಾಲು ಕಳೆದಿದ್ದು ಆ ಊರಿನಲ್ಲೆ. ನನ್ನ ಬಾಲ್ಯದ ಅನೇಕ ಚಟುವಟಿಕೆಗಳು ಅದರ ಸುತ್ತಮುತ್ತ ಹರಡಿಹೋಗಿವೆ. ಆದ್ದರಿಂದ ಆ ಚಿತ್ರ ಮನಸಿನಿಂದ ಹೋಗಲೊಲ್ಲದು. ಕೆಮ್ಮಣ್ಣು ಗೋಡೆಯ ಅದರ ಒಳಭಾಗದಲ್ಲಿ ಇಪ್ಪತ್ತು ಜನ ಕೂರುವಷ್ಟು ಜಾಗ. ಈಚೆ ಪಡಸಾಲೆಯಲ್ಲಿ ಒಳಕ್ಕಿಂತ ತುಸು ಚಿಕ್ಕದಾದ ಜಾಗ. ಬೀದಿಭಾಗಕ್ಕೆ ಮರ ಮತ್ತು … Read more

ಹೀಗೊ೦ದು ವಧು ಪರೀಕ್ಷೆ: ಶ್ರೀವಲ್ಲಭ ಆರ್ ಕುಲಕರ್ಣಿ

ಇತ್ತಿತ್ಲಾಗ ಗ೦ಡಿಗೆ ಹೆಣ್ಣು ಹುಡುಕೋದು ಕಷ್ಟ ಆಗೇದ. ಹ೦ತಾದ್ರಾಗ ಗ೦ಡು ಸಾದಾ ಕೆಲಸದಾಗ ಇದ್ರ೦ತೂ ಯಾವ ಕಪಿ (ಕನ್ಯಾ ಪಿತೃ)ಗಳೂ ತಿರುಗಿ ಸುದ್ದಾ ನೊಡ೦ಗಿಲ್ಲ. ಮೊದ್ಲಿನ್ ಕಾಲದಾಗ ಗ೦ಡಿನ ಕಡೆಯ ಜ್ವಾಳದ ಚೀಲಾ ಎಣಿಸಿ ಅವರಿಗೆ ಬಾಳೆ ಮಾಡೋ ಶಕ್ತಿ ಎಷ್ಟರಮಟ್ಟಿಗೆ ಅದ ಅ೦ತ ಲೆಕ್ಕಾ ಹಾಕಿ ಹೆಣ್ಣು ಕೊಡ್ತಿದ್ರ೦ತ. ಗ೦ಡಿನ ಕಡೆಯವರು ರ೦ಗೋಲಿ ಕೆಳಗ ಹೋಗೊ ಮ೦ದಿ, ಅಕ್ಕ ಪಕ್ಕದವರ ಮನ್ಯಾಗಿನ ಜ್ವಾಳದ ಚೀಲಾ ಗುಳೇ ಹಾಕಿ ಮದುವಿ ಮಾಡ್ಕೋತಿದ್ರ೦ತ. ಕಪಿಗಳದೂ ಏನೂ ತಪ್ಪಿಲ್ಲಾ ಬಿಡ್ರಿ … Read more

ಸೀರೆ ಎಕ್ಸ್‌ಚೇಂಜ್: ರಶ್ಮಿ.ಆರ್. ಕುಲಕರ್ಣಿ

ಮಹಿಳೆಯರು ಒಂದು ಕಡೆ ಸೇರಿದರೆ ಅವರಲ್ಲಿ ಚರ್ಚಿಸುವ ಮುಖ್ಯವಾದ ವಿಷಯಗಳೆಂದರೆ, ಸೀರೆ ಮತ್ತು ಚಿನ್ನದ ವಡವೆಗಳು,ಚಿನ್ನದ ಬೆಲೆ ಗಗನಕ್ಕೇರಿದ ಮೇಲೆ ಸೀರೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು  ಕೊಡುತ್ತಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಸೀರೆಗೆ ವಿಶಿಷ್ಟವಾದ ಸ್ಥಾನ ನೀಡಲಾಗಿದೆ. ಹಿಂದಿನ ಕಾಲದಲ್ಲಿ ಒಂಭತ್ತು ವಾರಿ ಸೀರೆಗಳಿದ್ದವು,  ಮುಂದೆ ಆರು ವಾರಿ ಸೀರೆಗಳು ಬಂದವು. ಈಗೀಗ ರೆಡಿ ಸೀರೆಗಳು ಮಾರುಕಟ್ಟೆಗೆ ಬಂದಿವೆ. ಸಲ್ವಾರ ಕಮೀಜ,ಸೀರೆ ಜೊತೆಗೆ ಪೈಪೋಟಿಗಿಳಿದರೂ ಕೂಡ ಸೀರೆ ತನ್ನದೇ ಆದ  ಸ್ಥಾನ ಉಳಸಿಕೊಂಡಿದೆ ಎನ್ನುವದಕ್ಕೆ ನಮ್ಮ ಮಹಿಳೆಯರೇ ಸಾಕ್ಷಿ.   … Read more

ಸಾಲದ ವಿಷಯ (ಭಾಗ 1): ಸೂರಿ ಹಾರ್ದಳ್ಳಿ

ಕೆಲವರಿದ್ದಾರೆ, ಅವರಿಗೆ ಒಣ ಪ್ರತಿಷ್ಠೆ. ಯಾವುದೇ ಕಿವಿ ಸಿಕ್ಕರೂ, ಅದು ಮರದ್ದೇ ಆಗಿರಬಹುದು, ಮಣ್ಣಿನದ್ದೇ ಆಗಿರಬಹುದು, ಬೊಗಳೆ ಬಿಡುತ್ತಾರೆ: ತಾನು ಯಾವ ಸಾಲವನ್ನೂ ಮಾಡಿಲ್ಲ, ಹಾಲಪ್ಪನಿಂದ ಕೂಡಾ. ಹಾಗಾಗಿ ಸಾಲ ಕೊಟ್ಟವರು ಯಾರೂ ತನ್ನ ಮನೆಯ ಬಾಗಿಲನ್ನು ತಟ್ಟುವಂತಿಲ್ಲ, ಎಂದು, ಎದೆ ತಟ್ಟಿಕೊಂಡು, ತಲೆ ಎತ್ತಿಕೊಂಡು! ಆದರೆ ಹಾಗೆ ಯಾರೂ ಹೇಳುವಂತಿಲ್ಲ. ಯಾಕೆಂದರೆ ಸಿನೆಮಾ ಹಾಡೊಂದು ಹೇಳುತ್ತದೆ, ‘ಹಿಂದಿನ ಸಾಲ ತೀರಿಸಲೆಂದು ಬಂದಿಹೆವಯ್ಯಾ ಜನ್ಮವ ತಳೆದು…’ ಎಂದು. ಸಾಲ ತೀರಿದ ನಂತರವೇ ಮರುಜನ್ಮದ ಸರಣಿಯಿಂದ ಬಿಡುಗಡೆ ಎಂಬುದು … Read more

ವ್ಯವಸಾಯ ಎಂದರೆ: ಚೇತನ್ ಹೊನ್ನವಿಲೆ

ಕುಂಟೆಯ ಮೇಲೆ ಕೂತು, ಎತ್ತಿನ ಬಾಲ ಮುರಿದು, ' ಹೋಯ್ ' ಎಂದು ಅಬ್ಬರಿಸುವಾಗ, ಕುಂಟೆಯ ಅಲುಗಿಗೆ ತಗಲುವ ಮಣ್ಣಿನ ಎಂಟೆಗಳನು ಒಡೆದು ಪುಡಿ ಮಾಡುತ್ತಾ ಓಟ ಕೀಳುವ..' ಎತ್ತುಗಳ ಸ್ಟೇರಿಂಗು ಹಿಡಿದರೆ… ಅದೊಂತರ ರೋಲರ್ ಕೋಸ್ಟರ್ ರೈಡಿನ ಅನುಭವ. ದೂರದ ಊರಿನಲ್ಲಿ ಆದ ಬಸ್ಸಿನ ಹಾರನ್ನು ಕೇಳಿ, ಊಟದ ನೆನಪಾಗಿ, ಬಾಳೆಎಲೆ-ಅಡಿಕೆಆಳೆ ಕುಯ್ದು, ಸಣ್ಣಗೆ ಹರಿಯುವ ಕಾಲುವೆಯ ಪಕ್ಕದಲ್ಲಿಯೇ ಕುಳಿತು, ಸಾರು ಚೆಲ್ಲಿರುವ ಡಬ್ಬಿಯನ್ನು ಉಗುರಿನ ಕೈಯಲ್ಲಿ ತೆಗೆದು, ಒಂದಕ್ಕೊಂದು ಅಂಟಿಕೊಂಡು ಚಪ್ಪಟೆಯಮ್ತಾಗಿರುವ ಮುದ್ದೆಯನ ಬಿಡಿಸಿ … Read more

ತುರುಬಿಗೆ ತರುಬಿದ ಮನಸು: ನಾಗರಾಜ ಅಂಗಡಿ

ನಾನು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಕನ್ನಡ ಪಾಠ ಮಾಡುತ್ತಿದ್ದೆ. ಅದು ಚಂದ್ರಶೇಖರ ಕಂಬಾರವರ ಆಹ್ವಾನವೆಂಬ ಪದ್ಯವನ್ನು  ವಿಶ್ಲೇಷಿಸುತ್ತಿರುವಾಗ ಆ ಪದ್ಯದಲ್ಲಿಯ ಒಂದು ಸಾಲು  ಹಳೆಯ ಪ್ರಕೃತಿಯ ತುರುಬು ಜಗ್ಗಿ ಆಚೆಗೆ ನೂಕಿ ಎಂಬುದು ಗಕ್ಕನೆ ನನ್ನ ಮನಸ್ಸು ತರುಣಿಯ ತುರುಬಿಗೆ ವಾಲಿಸಿತು. ಪಾಠವನ್ನು ಮುಗಿಸಿ ಬಂದ ಮೇಲೆ ತುರುಬಿನ ಬಗ್ಗೆಯೇ ಚಿಂತೆಯೇ ಶುರುವಾಯಿತು. ಹಾಗೆ ನೋಡಿದರೆ ಪಂಪನಿಂದ ಹಿಡಿದು ಕುವೆಂಪುವರೆಗೆ ಕೂದಲಿನ ಬಗ್ಗೆ ಬರೆಯದವರೇ ಇಲ್ಲವೆಂದು ಹೇಳಬೇಕು. ನಾರಿಗೆ ಗುಣವೇ ಶೃಂಗಾರವೆಂಬಂತೆ ನಾರಿಗೆ ಕೇಶವೇ ಶೃಂಗಾರವೆಂದು ಹೇಳಬಹುದು. ನಾರಿಗೆ … Read more