ಕೋತಿಗಳು ಸಾರ್ ಕೋತಿಗಳು: ಎಂ. ಎಸ್. ನಾರಾಯಣ.

ಕೆಲವು ನಿಜಕ್ಕೂ ಅದ್ಭುತವಾದ ದೃಷ್ಟಾಂತಗಳಿವೆ. ಬಹುಶಃ ಇವು ಪೀಳಿಗೆಯಿಂದ ಪೀಳಿಗೆಗೆ ಮೌಖಿಕವಾಗಿ ಹಸ್ತಾಂತರಗೊಂಡಿರಬಹುದೆಂದು ಭಾವಿಸುತ್ತೇನೆ. ಮನುಕುಲದ ಒಟ್ಟಾರೆ ವಿವೇಕವನ್ನು ಒಳಗೊಂಡಿರುವ ಈ ದೃಷ್ಟಾಂತಗಳಿಗೆ ಜನರನ್ನು ಸ್ಫೂರ್ತಿಸಿಂಚನದಲ್ಲಿ ತೋಯಿಸಿ ಧನಾತ್ಮಕವಾಗಿ ಪ್ರಚೋದಿಸುವ ಅಗಾಧವಾದ ಶಕ್ತಿಯಿರುವುದು ಸುಳ್ಳಲ್ಲ. ಈ ಅಂಕಣದ ಮೂಲಕ ಅಂತಹ ಒಂದೆರಡು ದೃಷ್ಟಾಂತಗಳನ್ನು ಕನ್ನಡದ ಓದುಗರೊಂದಿಗೆ ಹಂಚಿಕೊಳ್ಳಲು ಸಂತಸವಾಗಿದೆ. ಇಲ್ಲಿ ಚರ್ಚಿಸಲಾಗಿರುವ ಪರಿಕಲ್ಪನೆಗಳು ವಿಶೇಷವಾಗಿ ನಮ್ಮ ಯುವ ಜನತೆಗೆ, ತಮ್ಮ ವೃತ್ತಿಜೀವನದ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲು ಮಾರ್ಗದರ್ಶನ ಮಾಡುವ ದಾರಿದೀಪವಾಗಬಹುದು. ಭಾರತದಲ್ಲಿ ಕೋತಿಗಳನ್ನು ಹಿಡಿಯುವ ಸ್ವಾರಸ್ಯಕರವಾದ ಪ್ರಾಚೀನ … Read more

ಹಿತಶತ್ರುಗಳು: ಶುಭಾ ಆರ್.

ಶತ್ರು  ಎಂದರೆ ಒಬ್ಬ ವ್ಯಕ್ತಿ   ನಮ್ಮ ಯಶಸ್ಸನ್ನು ನೋಡಿ ಸಹಿಸದೆ ಇರುವವನು. ಸದಾ ನಮ್ಮ ಮೇಲೆ ದ್ವೇಷ ಕಾರುವವನು. ಆತ  ಎಚ್ಚರಿಕೆ ಕರೆಗಂಟೆಯಂತಿದ್ದು  ನಾವೂ  ಸದಾ ಜಾಗೃತ ರಾಗಿರುವಂತೆ ಮಾಡುವವನು. ಸಾಮಾನ್ಯವಾಗಿ  ಒಬ್ಬ ವ್ಯಕ್ತಿಯ ಗುಣಮಟ್ಟ ಅವನ ಶತ್ರುವಿನ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಹಿತೈಷಿ ಎಂದರೆ  ಸದಾ ಇನ್ನೊಬ್ಬರ ಒಳಿತನ್ನು, ಯಶಸ್ಸನ್ನು ಬಯಸುವವನು. "ಹಿತ ಶತ್ರು" ಎಂದರೆ  ನಮ್ಮೊಳಗಿದ್ದು ನಮ್ಮವನಲ್ಲದವರು. ಜೊತೆಯಲ್ಲಿಯೇ ಇದ್ದು  ಮುಂದೆ ಬೆಣ್ಣೆಯಂತಹ  ಮಾತುಗಳನ್ನಾಡಿ ಹಿಂದೆ ಬೆನ್ನಿಗೆ ಚೂರಿ ಹಾಕುವವರು. ನಮಗೆ ಗೊತ್ತಿಲ್ಲದೇ … Read more

ಕಲಿಕೆ ಮತ್ತು ಶಿಕ್ಷಣ (ಕೊನೆಯ ಭಾಗ): ನಾರಾಯಣ ಎಂ.ಎಸ್.

ಇಲ್ಲಿಯವರೆಗೆ ಇಷ್ಟೆಲ್ಲಾ ಹೇಳಲು ಕಾರಣಗಳಿಲ್ಲದಿಲ್ಲ. ಇತ್ತೀಚೆಗೆ ಪ್ರತಿಷ್ಠಿತವೆಂದು ಭಾರೀ ಹೆಸರು ಮಾಡಿರುವ ವ್ಯವಹಾರ ನಿರ್ವಹಣಾ ಶಾಸ್ತ್ರದ ಕಾಲೇಜೊಂದರ ಸಮಾರಂಭಕ್ಕೆ ಹೋಗಿದ್ದೆ. ಅಲ್ಲಿ ನಾನು ಕೇಳಿದ ಹೆಸರಾಂತ ಶಿಕ್ಷಣ ತಜ್ಞರೊಬ್ಬರ ಅದ್ಭುತವಾದ ಭಾಷಣವೊಂದು, ಯಾವುದೇ ಸಾಮಾಜಿಕ ಹೊಣೆಗಾರಿಕೆ ಹಾಗೂ ಬದ್ಧತೆಯಿಲ್ಲದ ಅತಿ ಬುದ್ಧಿವಂತರು ಸಮಾಜದ ಸ್ವಾಸ್ಥ್ಯಕ್ಕೆ ಹೇಗೆ ಮಾರಕವಾಗಬಲ್ಲರೆಂಬುದಕ್ಕೆ ಜ್ವಲಂತ ನಿದರ್ಶನದಂತಿತ್ತು.  ಕಾಕತಾಳೀಯವೆಂಬಂತೆ ಅವರೂ ಸಹ ಈ ಮೇಲೆ ಹೇಳಿದ ಆನೆಯ ಕಥೆಯನ್ನೇ ಬಳಸುತ್ತಿದ್ದರು. ಆದರೆ ಅದರ ಹಿಂದಿನ ಉದ್ದೇಶ ಮಾತ್ರ ಒಳ್ಳಯದಿದ್ದಂತೆ ನನಗೆ ತೋರಲಿಲ್ಲ. ಅವರ ಮಾತಿನ … Read more

ಕಲಿಕೆ ಮತ್ತು ಶಿಕ್ಷಣ: ನಾರಾಯಣ ಎಂ.ಎಸ್.

      ಬೆಳಗಿನ ಕಾಫಿಯೊಂದಿಗೆ ಭಾನುವಾರದ ವೃತ್ತ ಪತ್ರಿಕೆ ಓದುವ ಮಜವೇ ಬೇರೆ ಎಂದುಕೊಳ್ಳುತ್ತಾ ಪೇಪರ್ ಕೈಗೆತ್ತಿಕೊಂಡೆ. “ಖಾಸಗೀ ಕಾಲೇಜುಗಳಲ್ಲಿನ್ನು ಸರ್ಕಾರೀ ಸೀಟುಗಳಿಲ್ಲ, ವೃತ್ತಿ ಶಿಕ್ಷಣ ವಿದ್ಯಾರ್ಥಿಗಳಿಗೆ ಬರೆ” ಎಂಬ ತಲೆಬರಹ ನೋಡಿ ಗಾಬರಿಯಾಯಿತು. ವಿದ್ಯಾರ್ಥಿಗಳಿಗೆ ಎಲ್ಲಿಯ ಬರೆ, ಬರೆಯೇನಿದ್ದರೂ ವಿದ್ಯಾರ್ಥಿಗಳ ಪೋಷಕರಿಗೆ ತಾನೆ, ಎಂದು ಕೊಳ್ಳುತ್ತಾ ಲೇಖನದ ವಿವರಗಳತ್ತ ಕಣ್ಣಾಡಿಸಿದೆ. ನಿಯಮಗಳಲ್ಲಿ ಈಗ ಮಾಡಲಾಗುತ್ತಿರುವ ಬದಲಾವಣೆಯಿಂದ ಪ್ರಸಕ್ತ ನಲವತ್ತೈದು ಸಾವಿರವಿರುವ ವಾರ್ಷಿಕ ಶುಲ್ಕ ಮುಂದಿನ ವರುಷದಿಂದ ಕನಿಷ್ಟ ಮೂರು ಪಟ್ಟು ಹೆಚ್ಚುವುದಾಗಿ ಬರೆದಿದ್ದರು. ಹಾಗಾಗಿ … Read more

ರೈಲಲ್ಲಿ ಕಂಡ ದೃಶ್ಯಗಳು: ಶರತ್ ಹೆಚ್.ಕೆ.

೧ ಅದು ಜನರಲ್ ಬೋಗಿ. ಭರ್ತಿಯಾಗಿದೆ. ಕುಂತವರು ಕುಂತೇ ಇದ್ದಾರೆ. ನಿಂತವರು ನಿಲ್ಲಲಾಗದೇ ಅತ್ತಿಂದಿತ್ತ ಇತ್ತಿಂದತ್ತ ತಿರುಗುತ್ತಿದ್ದಾರೆ. ಕೆಲ ಸೀಟುಗಳು ಖಾಲಿ ಇವೆ. ಆದರೆ ಯಾರೋ ಬರುವರೆಂಬ ನೆಪ ನಿಂತವರ ಸಹನೆಯ ಮಿತಿ ಪರೀಕ್ಷಿಸುತ್ತಿದೆ. ೨ ಬೋಗಿಯೊಳಗೆ ಹೈಟೆಕ್ ಯುವಕನ ಆಗಮನವಾಗಿದೆ. ರೈಲಿನೊಳಗೂ ಕೂಲಿಂಗ್ ಗ್ಲಾಸು ಹಾಕಿಕೊಂಡು ಹವಾ ಸೃಷ್ಟಿಸುವ ಮಟ್ಟಿಗೆ ಅವನು ಆಧುನಿಕ ತಿರುಕ. ಅವನ ಕೈಯಲ್ಲಿ ತಳ್ಳಿಕೊಂಡು ಹೋಗಬಹುದಾದ ಹೆಣ ಭಾರದ ಲಗೇಜ್ ಬ್ಯಾಗು. ಅಲ್ಲೊಂದು ಸೀಟು ಖಾಲಿ ಇರುವುದು ಅವನ ಕಣ್ಣಿಗೆ ಬಿದ್ದಿದೆ. … Read more

ಹೊಸವರ್ಷದ ಮಾರನೇ ದಿನ!: ಫ್ಲಾಪೀಬಾಯ್

ನೆನ್ನೆ ಸಾಯಂಕಾಲ ಫ್ರೆಂಡ್ ಕ್ರಾಕ್ ಬಾಯ್ ಫೋನ್ ಮಾಡಿದ್ದ.  ಫ್ಲಾಪೀ ಇವತ್ತು ಹೇಗಿದ್ರೂ ವರ್ಷದ ಕೊನೆ ದಿನ. ರಾತ್ರಿ ಹನ್ನೊಂದು ಇಪ್ಪತ್ತಕ್ಕೆಲ್ಲಾ ನಮ್ಮ ಅಡ್ಡದ ಹತ್ರ ಬಂದು ಬಿಡು. ಎಲ್ಲಾ ಹುಡ್ರೂ ಬರ್‍ತಾ ಇದಾರೆ. ಫುಲ್ಲು ಕುಡಿದು, ಕುಣಿದು ಕ್ರಾಂತಿ ಮಾಡೋಣ. ಹೊಸ ವರ್ಷದಲ್ಲಿ ಭಾರೀ ಬದಲಾವಣೆ ತರೋಣ. ೨೦೧೪ರ ನ್ಯೂ ಇಯರ್ ಸೆಲಬ್ರೇಷನ್ ಗ್ರಾಂಡ್ ಆಗಿ ಮಾಡೋಣ. ಖರ್ಚು ಎಷ್ಟಾದ್ರೂ ಪರವಾಗಿಲ್ಲ. ಪಾರ್ಟಿ ಎಲ್ಲಾ ನಂದೆ, ಲೇಟ್ ಮಾಡದೇ ಬೇಗ ಬಾ ಅಂತ ಹೇಳೀ ನನ್ನ … Read more

ಮಾತಿಗೊಂದು ಗಾದೆ, ಗಾದೆಗೊಂದು ಬೋಧೆ: ವಿಶ್ವನಾಥ ಸುಂಕಸಾಳ

’ವೇದ ಸುಳ್ಳಾದರೂ ಗಾದೆ ಸುಳ್ಳಾಗದು’ ಎನ್ನುವಂತೆ ಹಿರಿಯರ ಅನುಭವ ವೇದಾಂತವಾದ ಗಾದೆ ಮಾತುಗಳು ಕನ್ನಡದ ಸುಭಾಷಿತಗಳಿದ್ದಂತೆ. ”ಆಡು ಮುಟ್ಟದ ಸೊಪ್ಪಿಲ್ಲ’ ಎಂಬಂತೆ ಗಾದೆ ತಲುಪದ ಕ್ಷೇತ್ರವಿಲ್ಲ. ಗಾದೆ ಮಾತುಗಳು ನಮ್ಮ ಅರಿವನ್ನು ವಿಸ್ತರಿಸುತ್ತವೆ. ’ಆರಕ್ಕೇರಿಲ್ಲ ಮೂರಕ್ಕೆ ಇಳೀಲಿಲ್ಲ” ಎಂಬಂಥ ಜೀವನದಲ್ಲಿ ಗಾದೆಗಳು ಜೀವನೋತ್ಸಾಹವನ್ನು ತುಂಬಿ ಮಾರ್ಗದರ್ಶನವನ್ನು ಮಾಡಬಲ್ಲವು. ’ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು” ಎಂಬಂತೆ ಒಂದೇ ವಾಕ್ಯದಲ್ಲಿ ಚುಟುಕಾಗಿ ಜೀವನ ಸಂದೇಶವನ್ನು ಬಿತ್ತರಿಸಬಲ್ಲವು. ನಮ್ಮ ಹಿರಿಯರು ಬಾಯಿ ತೆರೆದರೆ ಒಂದು ಗಾದೆ ಮಾತು ಹೇಳುತ್ತಿದ್ದರು. ಅಷ್ಟೇ ಅಲ್ಲ. … Read more

ಹುಟ್ಟು ದರಿದ್ರವಾಗಿದ್ದರೆ ಏನು? ಸಾವು ಚರಿತ್ರೆ ಆಗಿರಬೇಕು: ಸಂತೋಷ್ ಗುರುರಾಜ್

          ಮೊನ್ನೆ ನನ್ನ ಫೇಸ್ ಬುಕ್ ಅಕೌಂಟ್ ನ ಗೋಡೆಯ ಮೇಲೆ ಒಂದು ಸ್ಟೇಟಸ್ ಬಂದಿತ್ತು ,ಆ ಸ್ಟೇಟಸ್ ನೋಡಿ ನನಗೂ ತಕ್ಷಣ ಮನಸ್ಸಿಗೆ ಒಂದು ತರಹದ ಕುತೂಹಲ ಉಂಟಾಯಿತು . ಮತ್ತೆ ಬೇರೆ ಯಾವುದೇ ಸ್ಟೇಟಸ್ ಸಹ ಅಷ್ಟೊಂದು ಮನಸ್ಸಿಗೆ ಹಿಡಿಸಿದ್ದಿಲ್ಲ.ಮತ್ತು ಆ ಸ್ಟೇಟಸ್ ನೋಡಿದಾಗಿನಿಂದ ನಾನು ಅದನ್ನು ಅನುಸರಿಸಬೇಕು ಎಂದು ಅನಿಸತೊಡಗಿತು ಆ ಸ್ಟೇಟಸ್ ಹೀಗಿದೆ ನೋಡಿ  "ಹುಟ್ಟು ದರಿದ್ರವಾಗಿದ್ದರೆ ಏನು? ಸಾವು ಚರಿತ್ರೆ ಆಗಿರಬೇಕು" ಇದರಲ್ಲಿ ಬಹಳಷ್ಟು … Read more

ಕಲೆಯನಲ್ಲದೆ ಶಿಲ್ಪಿ ಶಿಲಯನೇಂ ಸೃಷ್ಟಿಪನೆ?: ಡಾ. ಬಿ.ಆರ್.ಸತ್ಯನಾರಾಯಣ

          ತುಂಬಾ ಹಿಂದೆ ಒಬ್ಬ ದರೋಡೆಕಾರನಿದ್ದ. ದಾರಿಯಲ್ಲಿ ಬಂದವರನ್ನು ಅಡ್ಡಗಟ್ಟಿ ಅವರನ್ನು ಕೊಂದು ಅವರಲ್ಲಿದ್ದುದದ್ದನ್ನು ದೋಚಿ, ಅದರಲ್ಲಿಯೇ ತನ್ನ ಹೆಂಡತಿ ಮಕ್ಕಳನ್ನು ಚೆನ್ನಾಗಿ ಸಾಕಿಕೊಂಡಿದ್ದನಂತೆ! ಒಂದು ದಿನ ನಾರದನೇ ಆ ದುಷ್ಟನ ಕೈಗೆ ಸಿಕ್ಕಿಹಾಕಿಕೊಂಡುಬಿಡುತ್ತಾನೆ. ಇನ್ನೇನು ಕೊಲ್ಲಬೇಕು ಅನ್ನುವಷ್ಟರಲ್ಲಿ ನಾರದ ’ಅಯ್ಯಾ ಕೊಲ್ಲುವುದು ಹೇಗಿದ್ದರೂ ಕೊಂದುಬಿಡುತ್ತೀಯಾ. ಅದಕ್ಕೂ ಮೊದಲು ನನ್ನದೊಂದು ಪ್ರಶ್ನೆಗೆ ಉತ್ತರ ಕೊಟ್ಟುಬಿಡು. ಹೀಗೆ ಸಿಕ್ಕಸಿಕ್ಕವರನ್ನೆಲ್ಲಾ ಕೊಲ್ಲುವುದು ಪಾಪವಲ್ಲವೆ? ಈ ನಿನ್ನ ಪಾಪಕ್ಕೆ ಪಾಲುದಾರರು ಯರ್‍ಯಾರು?’ ಎಂದು ಪ್ರಶ್ನಿಸಿದ. ಆಗ … Read more

ಸ್ಮರಣಾ ಲೇಖನ: ಡಾ. ಎಚ್.ಎಸ್. ಚಂದ್ರೇಗೌಡ

“ಕನ್ನಡ ಮೇಷ್ಟ್ರುಗಳ ಮೇಷ್ಟ್ರು”-ಎಸ್.ಆರ್.ಮಳಗಿ “ಮೇಷ್ಟ್ರುಗಳ ಮೇಷ್ಟ್ರು” ಎನಿಸಿಕೊಂಡಿದ್ದ ಪ್ರೊ. ಸೇತುರಾಮ ರಾಘವೇಂದ್ರ ಮಳಗಿ ಕನ್ನಡ ಸಾಹಿತ್ಯವಲಯದಲ್ಲಿ ಎಸ್.ಆರ್.ಮಳಗಿ ಎಂದೇ ಜನಜನಿತರಾಗಿದ್ದರು. ೧೦೩ ತುಂಬು ವಸಂತಗಳನ್ನು ಪೂರೈಸಿದವರನ್ನು ತಮ್ಮೆಲ್ಲಾ ಶಿಷ್ಯರು “ಮಳಗಿ ಮೇಷ್ಟ್ರು” ಎಂದೇ ಕರೆಯುತ್ತಿದ್ದರು. ಅಂಥ ಒಂದು ವಿಶಿಷ್ಟ ಪರಂಪರೆಯ ಕೊಂಡಿಯಾಗಿದ್ದ ಮಳಗಿ ಮೇಷ್ಟ್ರು, ತಮ್ಮ ೧೦೩ ವಯಸ್ಸಿನಲ್ಲಿ ಅಂದರೆ, ಡಿಸೆಂಬರ್ ೨೪ ರಂದು ವಿಧಿವಶರಾದರು. ಕನ್ನಡದ ಗುರುಪರಂಪರೆಯಲ್ಲಿ ಮಳಗಿ ಮೇಷ್ಟ್ರ ಹೆಸರು ಅಜರಾಮರ. ತದನಿಮಿತ್ತ ಈ ಸ್ಮರಣಾ ಲೇಖನ. ಕನ್ನಡದ ಕಣ್ವ, ಆಧುನಿಕ ಕವಿಗಳ ಗುರು … Read more

ಆದದ್ದೆಲ್ಲಾ ಒಳಿತೇ ಆಯಿತು: ಎಂ. ಎಸ್. ನಾರಾಯಣ.

ಇತ್ತೀಚೆಗೆ ನಾನೂ ಮತ್ತು ನನ್ನ ಮಡದಿ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ಬಿಡದಿಯ ಬಳಿ ದುರದೃಷ್ಟವಶಾತ್ ಭಾರೀ ರಸ್ತೆ ಅಪಘಾತಕ್ಕೊಳಗಾಗಿಬಿಟ್ಟೆವು. ನಮ್ಮ ಗಾಡಿಯೂ, ನಮ್ಮಿಬ್ಬರ ಬಾಡಿಗಳೂ ಚೆನ್ನಾಗಿಯೇ ಜಖಂಗೊಳಾಗಾದುವು. ನಮ್ಮಿಬ್ಬರಿಗೂ, ಮೂಲಾಧಾರವಾದ ಬೆನ್ನು ಮೂಳೆಗೇ ಪೆಟ್ಟು ಬಿದ್ದು ನನ್ನ ಹೆಂಡತಿಗೊಂದು ದೊಡ್ಡ ಶಸ್ತ್ರಚಿಕಿತ್ಸೆಯೂ ಮಾಡಿಸಬೇಕಾಗಿ ಬಂತು. ನನ್ನ ಹೆಮ್ಮೆಯ ಸ್ನೇಹವರ್ತುಲದ ಇನ್ನಿಲ್ಲದ ಸಹಕಾರ ಹಾಗೂ ಬೆಂಬಲದಿಂದ ನಾವು ಆ ಭೀಕರ ಸನ್ನಿವೇಶದಿಂದ ಬಹುಬೇಗ ಪಾರಾಗಿ ಹೊರಬರಲು ಸಾಧ್ಯವಾಯಿತೆಂಬುದನ್ನು ನಾನಿಲ್ಲಿ ಹೇಳಲೇಬೇಕು. ಈ ಸಂಧರ್ಭದಲ್ಲಿ ನಾವು ಪಟ್ಟ ಬೇಗೆ ಬವಣೆಗಳ … Read more

ದೇಶಕ್ಕೋಸ್ಕರ ಏನಾದರೂ ಮಾಡಬೇಕೆ೦ಬ ನನ್ನ ಉತ್ಸಾಹ: ಪ್ರಶಾ೦ತ ಕಡ್ಯ

“ನಿನ್ನ ಮೈ ಗಟ್ಟಿಯಾಗೇ ಇದೆ, ದುಡಿಯಲು ಏನು ಸ೦ಕಟ. ಆರಾಮದಲ್ಲಿ ತಿನ್ನುವ ಆಸೆಯೇ”, “ಮೈ ಬಗ್ಗಿಸಿ ದುಡಿ, ದೇಶಕ್ಕಾದರೂ ಪ್ರಯೋಜನ ಆಗುತ್ತದೆ”, “ನಿಮ್ಮ೦ತವರು ಇರೋದಕ್ಕಿ೦ತ ಸತ್ತರೇ ದೇಶಕ್ಕೆ ಲಾಭ” ಹೀಗೇ ನಮ್ಮನ್ನು ಕ೦ಡಾಗ ಜನರಿಗೆ ಅವರು ಹೇಗೇ ಇದ್ದರೂ ನಮ್ಮನ್ನು ಬೈಯ್ಯುವ ಎ೦ದು ಅನಿಸುತ್ತದೆ. ನಾನು, ನನ್ನ ಅಪ್ಪ ಮತ್ತು ನನ್ನ ತಮ್ಮ ಮೂವರು ನಾವಿರುವುದು. ಚಿಕ್ಕ೦ದಿನಲ್ಲೇ ಅಮ್ಮನನ್ನು ಕಳಕೊ೦ಡೆ. ಅಮ್ಮನೆ೦ದರೆ ಅವಳು ಭೂಮಿಯಲ್ಲಿರುವ ದೇವರ೦ತೆ. ಆದರೆ ನನಗೆ ದೇವರು ಎ೦ದರೆ ಏನು ಎ೦ದು ತಿಳಿಯುವ ಮೋದಲೇ … Read more

ಲೇಖನಗಳ ಆಹ್ವಾನ…

  ಸಹೃದಯಿಗಳೇ, ಹೊಸ ವರ್ಷ ಎರಡು ಸಾವಿರದ ಹದಿನಾಲ್ಕರ ಮೊದಲ ವಾರ ಬಂದರೆ ಪಂಜುವಿನ 50 ನೇ ಸಂಚಿಕೆ ನಿಮ್ಮ ಮಡಿಲು ಸೇರುತ್ತದೆ. 50ನೇ ಸಂಚಿಕೆ ಪ್ರಕಟಗೊಂಡ ಎರಡು ವಾರಕ್ಕೆ ಅದೇ ಜನವರಿ ತಿಂಗಳಿನಲ್ಲಿ ಪಂಜು ತನ್ನ ಪ್ರಥಮ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಳ್ಳುವ ಸಂಭ್ರಮದಲ್ಲಿದೆ. ಪಂಜುವಿನ ಈ ಎರಡು ಶುಭ ಸಾಹಿತ್ಯ ಸಂಭ್ರಮಗಳನ್ನು ನಿಮ್ಮ ಬರಹಗಳ ಮೂಲಕ ಇಡೀ ಜನವರಿ ತಿಂಗಳು ಆಚರಿಸುವ ಆಶಯ ಪಂಜುವಿನದು. ತಡವೇಕೆ ನಿಮ್ಮ ಅಪ್ರಕಟಿತ ಕತೆ, ಕವನ, ಲೇಖನ, ಪುಸ್ತಕ ವಿಮರ್ಶೆ, … Read more

ಭಾರತೀಯರಾಗಿ ನಮಗೂ ಭಯವಿದೆ .. ಆದರೆ ಎಲ್ಲದರಲ್ಲ: ಸಂತೋಷ್ ಗುರುರಾಜ್

ಸ್ನೇಹಿತರೇ ,   ಈ ಶೀರ್ಷಿಕೆ ಕೊಡಲು ಒಂದು ಮುಖ್ಯ ಉದ್ದೇಶವಿದೆ. ಭಾರತೀಯರಾದ ಮತ್ತು ದೇಶಭಕ್ತರಾದ ನಾವು ಕೆಲ ವಿಷಯಗಳಿಗೆ ಹೆದರುತ್ತೇವೆ ಮತ್ತು ಹೆದರುತ್ತಲೇ ಇರುತ್ತೇವೆ. ಆದರೆ ಅದು ಯಾರೋ ಏನೋ ಮಾಡುವರೆಂದು ಅಲ್ಲ ಅಥವಾ ಎಲ್ಲಿಂದಲೋ ಆಪತ್ತು ಬರುವುದು ಎಂದೂ ಅಲ್ಲ. ನಮ್ಮ ದೇಶದಲ್ಲಿರುವ ಕೆಲವು ಬೆಲೆಬಾಳುವ ವಸ್ತು ಅಥವಾ ಆ ಮಾಹಾನ್ ಶಕ್ತಿಗಳನ್ನು ಎಲ್ಲಿ ಕಳೆದು ಕೊಳ್ಳುತ್ತವೋ ಎನ್ನುವ ಭಯ ಅಷ್ಟೇ. ಅದನ್ನು ವಿವರವಾಗಿ ತಿಳಿಸುವುದಾದರೆ ಕೇವಲ ಒಂದು ಲೇಖನದಲ್ಲಿ ಆಗುವುದಿಲ್ಲ. ಆದರೆ ಸಾಧ್ಯವಾದಷ್ಟು … Read more

ಗಿರೀಶ ಕಾರ್ನಾಡರ ಯಯಾತಿ ನಾಟಕದಲ್ಲಿ ಪಾತ್ರಗಳ ಭಾವಗಳೇರಿಳಿತಗಳು: ದಿವ್ಯ ಆಂಜನಪ್ಪ

'ಯಯಾತಿ'- ನಾಲ್ಕಂಕದ ಸಣ್ಣ ನಾಟಕವಾಗಿ ಕಾಣುವ ನಮಗೆ ಪಾತ್ರಗಳಾರರಲ್ಲಿ ಮನುಷ್ಯನ ವಿರಾಟ ದರ್ಶನವನ್ನು ನೀಡುತ್ತದೆ.  ನಾಟಕದ ಪ್ರಾರಂಭದಲ್ಲಿ ನಟಿಯೊಡನೆ ಸೂತ್ರಧಾರ ಬರುತ್ತಾರೆ. ಪ್ರೇಕ್ಷಕರನ್ನುದ್ದೇಶಿಸಿ ಸೂತ್ರಧಾರ ನಾಟಕದ ಕುರಿತು ಒಂದು ಕುತೂಹಲಭರಿತ ಮುನ್ನುಡಿಯನ್ನು ನೀಡುತ್ತಾನೆ. ಅಂತ್ಯದಲ್ಲಿ ಅವನಾಡುವ ಮಾತು ಪ್ರಸ್ತುತ ಮತ್ತು ಸರ್ವಕಾಲಿಕ ಸತ್ಯವಾಗಿ ನಿಲ್ಲುತ್ತದೆ. " ಒಮ್ಮೊಮ್ಮೆ ದಾರಿಗುಂಟ ಹೋಗುವಾಗ ನಮ್ಮ ದಾರಿ ಒಡೆದು ಎರಡಾಗುವುದಿಲ್ಲವೇ? ನಾವು ಒಂದನ್ನು ಮಾತ್ರ ಆರಿಸಬಹುದು. ಅದರೊಡನೆ ತತ್ಪೂರ್ತ ನಮ್ಮ ಗುರಿಯೂ ಗೊತ್ತಾಗುತ್ತದೆ. ಆದರೆ ನಮ್ಮ ಹಿಂದೆ ಕಿವಿಗಳ ಸನಿಹದಲ್ಲಿ, ಕೇಳದ … Read more

ಸಂಸ್ಕೃತಿ: ನೇಮಿನಾಥ ತಪಕೀರೆ

ಪುರಾತನ ಇತಿಹಾಸ, ಅನನ್ಯವಾದ ಭೌಗೋಳಿಕ ರಚನೆ, ವೈವಿಧ್ಯಮಯವಾದ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು, ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆಯ ರಾಷ್ಟ್ರಗಳ ಪ್ರಭಾವಗಳು ಇವೆಲ್ಲ ಒಟ್ಟುಗೂಡೆ ಭಾರತೀಯ ಸಂಸ್ಕೃತಿಯನ್ನು ಅನನ್ಯವಾಗಿಸಿವೆ. ಸಿಂಧು ಕಣಿವೆಯ ನಾಗರಿಕತೆ ಅಥವಾ ಅದಕ್ಕೂ ಪೂರ್ವದಲ್ಲಿಯೇ ಆರಂಭಗೊಂಡ ಭಾರತೀಯ ಭವ್ಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಶಾಧಾರಣ ವಿಕಸನವನ್ನು ಕಂಡಿತು. ಸದನಂತರದಲ್ಲಿ ಬೌದ್ಧ, ಜೈನಧರ್ಮಗಳ ಉನ್ನತಿ ಮತ್ತು ಅವನತಿ, ಮುಸ್ಲಿಂ ಆಳ್ವಿಕೆ, ಯುರೋಪಿಯನ್ನರ ವಸಾಹತು ಆಳ್ವಿಕೆ ಈ ಸಂಸ್ಕೃತಿಯ ವಿಕಸನಕ್ಕೆ ಇನ್ನಷ್ಟು ಇಂಬು ನೀಡಿತು. ವೈವಿಧ್ಯಮಯವಾಗಿಸಿತು. … Read more

ಶಿಕ್ಷಕರಿಗೊಂದು ಸೆಲ್ಯೂಟ್: ಪ್ರಜ್ವಲ್ ಕುಮಾರ್

                ಶಿಕ್ಷಕರು ಅಂದ್ರೆ ದೇವರಿದ್ದಂತೆ, ಶಿಕ್ಷಕರು ಎಷ್ಟು ಒಳ್ಳೆಯವರಾಗಿರ್ತಾರೋ ಅವರ ವಿದ್ಯಾರ್ಥಿಗಳೂ ಅಷ್ಟೇ ಒಳ್ಳೆಯವರಾಗಿರ್ತಾರೆ ಅಂತೆಲ್ಲಾ ಕೊರೀತಾ ಕೂತ್ರೆ ಒಂದು ನಕ್ಷತ್ರ ಹುಟ್ಟಿ ಅದು ಕಪ್ಪು ರಂಧ್ರ ಸ್ಥಿತಿ ತಲುಪುವವರೆಗೂ ಕೊರೀಬಹುದು. ಇಂಥವೆಲ್ಲಾ ಬಿಟ್ಟು ಬೇರೆ ಏನಾದ್ರೂ ಹೇಳೋಣಾ ಅಂದ್ರೆ ಅವರನ್ನು ಬಯ್ಯೋದೋ, ಹೊಗಳೋದೋ ಅಥವಾ ಹೀಗೇ ನೆನಪು ಮಾಡ್ಕೊಳ್ತಾ ಇರೋದೋ ಗೊತ್ತಾಗ್ತಿಲ್ಲ.   ಒಂದು ಕಡೆಯಿಂದ ಶುರು ಮಾಡುವುದಾದರೆ ನಾವೆಲ್ಲಾ ಅಂಗನವಾಡಿ ಅಥವಾ ಶಿಶುವಾರಕ್ಕೆ ಹೋಗುವಾಗ … Read more

ಸಾವಿನ ವ್ಯಾಖ್ಯಾನ: ಅಜ್ಜಿಮನೆ ಗಣೇಶ್

ಅಪರೂಪಕ್ಕೆ ಎಂಬಂತೆ ಈ ವರ್ಷ ಶರಾವತಿ ಲಿಂಗನಮಕ್ಕಿ ಅಣೆಕಟ್ಟೆಯನ್ನ ದಾಟಿ ಹರಿಯುತ್ತಿದ್ದಾಳೆ. ಬೇಸಿಗೆಯಲ್ಲಿ ತನ್ನ ಪಾಲಿನ ಹದಿನೈದು ಪರ್ಸೆಂಟ್ ವಿದ್ಯುತ್ ನ್ನ ಶರಾವತಿ ಖಂಡಿತಾ ಕೊಡುತ್ತಾಳೆ. ಇದಕ್ಕೆ ಪೂರಕವಾಗಿ ಕಣಿವೆ ಪ್ರದೇಶದ ವಿದ್ಯುತ್ ತಯಾರಿಕಾ ಯಂತ್ರಗಳು ಸಹ ಕೆಲಸ ಶುರುವಿಟ್ಟುಕೊಡಿದೆ. ನಾಡು ಸಂತೋಷದಲ್ಲಿದೆ, ಸರ್ಕಾರ ತೃಪ್ತಿಯಾಗಿದೆ. ಆದರೆ ಶರಾವತಿಯ ಮಡಿಲಲ್ಲಿ ನಡೆದ ಘಟನೆಯೊಂದು ಮಾತ್ರ ನನ್ನನ್ನ, ಕಳೆದೊಂದು ತಿಂಗಳಿನಿಂದಲೂ, ಬಿಡದೆ ಕಾಡುತ್ತಿದೆ.ಅಲ್ಲಿ ನಡೆದ ಸಾವಿನ ಘಟನೆಯೊಂದು, ನನ್ನನ್ನ ಮರಣ ಚಿಂತನೆಯಲ್ಲಿ ತೊಡಗಿಸಿದೆ.  ಮನಸ್ಸಿನ ಗೂಗಲ್ ನಲ್ಲಿ ಮೃತ್ಯು … Read more

ಹೀಗೊಂದು ಮಾತು: ಶ್ರೀವತ್ಸ ಕಂಚೀಮನೆ

ಕಳೆದ ಮಹಿಳಾ ದಿನಾಚರಣೆಗಾಗಿ ಒಂದು ಲೇಖನ ಬರೆದಿದ್ದೆ. ಬರೆದ ವಿಷಯ ಸತ್ಯವೇ. ತುಂಬಾ ಜನ ಮೆಚ್ಚಿಕೊಂಡರು ಕೂಡ. ಆದರೆ ನನಗೇ ಯಾಕೋ ಸಂತೃಪ್ತ ಅನ್ನಿಸಿಲ್ಲ. ಬರೆದ ಬರಹದಲ್ಲಿ ದೇಹ ಸದೃಢವಾಗೇ ಇದ್ದರೂ ಯಾಕೋ ಆತ್ಮ ಇಲ್ಲ ಅನ್ನಿಸ್ತಾ ಇತ್ತು. ಕಾರಣ ಇಷ್ಟೇ ನನ್ನ ಮನಸು ಪುರುಷ ಪ್ರಧಾನ ಮತ್ತು ಸ್ತ್ರೀ ಪ್ರಧಾನ ಎಂಬ ಎರಡೂ ವಾದಗಳನ್ನು ಒಪ್ಪಲಾರದು. ನಾನೆನ್ನುತ್ತೇನೆ ನಮ್ಮನೆಲ್ಲ ಸಷ್ಟಿಸಿದ ಪ್ರಕೃತಿ ಮಾತ್ರ ಪ್ರಧಾನ. ಅದರ ಪ್ರಾಧಾನ್ಯತೆಯನ್ನು ಒಪ್ಪಿಕೊಳ್ಳದ ನಾವು, ಅದು ನೀಡಿದ ಮಿತಿಗಳನ್ನು ಮೀರಲು … Read more

ಶಾಲೆಯಲ್ಲಿ ಮಕ್ಕಳಿದ್ದಾರೆ ಹುಷಾರ್: ಕೆ.ಎಂ.ವಿಶ್ವನಾಥ (ಮಂಕವಿ) ಮರತೂರ.

ಮೇಲಿನ ಮಾತಿನಿಂದ ಯಾರಿಗೆ ಹೆದರಿಸುತ್ತಿದ್ದಾರೆ? ಅಂದುಕೊಂಡಿರಾ. ಹೌದು ಇದು ಎಲ್ಲರಿಗೂ ಎಚ್ಚರಿಕೆ ಕೊಡುವ ಮಾತು ನಾವೆಲ್ಲಾ ತುಂಬಾ ತಿಳಿದು ಇಲ್ಲಿಯವರೆಗೂ ತುಂಬಾ ತಪ್ಪುಗಳನ್ನು ಮಾಡಿದ್ದೇವೆ. ಆದರೆ ಇನ್ನು ಮುಂದೆ ಹಾಗೆ ಆಗಲು ಬಿಡುವುದು ಅಪಾಯಕಾರಿ. ಏಕೆಂದರೆ ನಾವೆಲ್ಲಾ ಈಗ ಮಕ್ಕಳ ಶಿಕ್ಷಣ ಹಕ್ಕು ಕಾಯಿದೆಯ ಅಡಿಯಲ್ಲಿ ಇದ್ದೇವೆ.  ಮರೆಯದಿರಿ ನಮ್ಮ ಮಕ್ಕಳ ಮುಂದೆ ಮಾತಾಡುವ ಸಮಯದಲ್ಲಿ ಹುಷಾರಾಗಿರಿ ಈಗ ನಮ್ಮ ಮಕ್ಕಳಿಗೂ ಒಂದು ಕಾನೂನು ಇದ್ದು ಅದು ಎಲ್ಲರ ಗಮನ ಸೆಳೆದಿದೆ. ಅದರ ಹಿನ್ನಲೆಯಲ್ಲಿ ನಾವೆಲ್ಲ ವಿಚಾರಿಸಬೇಕಾದ … Read more