ಗೃಹ ಬಂಧನದ ಸದ್ಬಳಕೆ: ಸೂರಿ ಹಾರ್ದಳ್ಳಿ

ಕೊರೋನಾ ಮಾರಿಯಿಂದಾಗಿ ಭಾರತದಲ್ಲಿ ಲಾಕ್‍ಡೌನ್ ಅನುಭವಿಸಬೇಕಾಗಿ ಬಂದಿದೆ. ನಾಲ್ಕು ಗೋಡೆಗಳ ನಡುವೆ ಬಂಧಿಯಾಗಿರಬೇಕಾಧ ಇಂತಹ ಸಂದರ್ಭಗಳಲ್ಲಿಯೂ ನಮ್ಮ ಸಮಯವನ್ನು ಹೇಗೆ ಉಪಯೋಗಿಸಿಕೊಳ್ಳಬಹುದು ಎಂಬುದಕ್ಕೆ ಕೆಲ ಟಿಪ್ಸ್‍ಗಳು ಇಲ್ಲಿವೆ. ನಿಮ್ಮ ಸಂಬಂಧಿಕರ, ಗೆಳೆಯರ, ಶತ್ರುಗಳ ಹೆಸರಿನ ಪಟ್ಟಿ ಮಾಡಿ. ಅವರ ವಿಳಾಸಗಳು, ದೂರವಾಣಿ ಸಂಖ್ಯೆಗಳು, ಇ-ಮೈಲ್ ಐಡಿಗಳು, ಇವನ್ನೆಲ್ಲಾ ಸಂಗ್ರಹಿಸಿ ನಿಮ್ಮ ಕಂಪ್ಯೂಟರಿನಲ್ಲಿ ಅಥವಾ ಪುಸ್ತಕಗಳಲ್ಲಿ ಬರೆದಿಡಿ. ಅರೆರೆ, ಇವರ ಸಂಖ್ಯೆ ಇಷ್ಟೊಂದಿದೆಯೇ ಎಂಬ ಅಚ್ಚರಿ ನಿಮಗಾಗಿಯೇ ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಅವಶ್ಯಕ ಕೆಲಸಗಳಿಗೆ ಬೇಕಾದವರ ಹೆಸರನ್ನು … Read more

ಮಲೆನಾಡಿನ ಸ್ಥಿತಿ-ಗತಿಯೂ ಕೊರೋನ-ಮಂಗನ ಖಾಯಿಲೆಯಂತಹ ಮಹಾಮಾರಿಯೂ. . . . : ವಿಜೇತ ಎಂ. ವಿ

ಮಲೆನಾಡು ಹಚ್ಚ ಹಸಿರು ಹೊದಿಕೆಯ ಮೇಲ್ಮೈ,ದಟ್ಟ ಕಾನನದ ನಡುವೆ ಅಲ್ಲಲ್ಲಿ ಒಂದೋ ಎರಡೋ ಮನೆಗಳು ಮತ್ತೆಲ್ಲೋ ಚಿಕ್ಕ ಹಳ್ಳಿ ಊರು ಕೇರಿ ಇತ್ಯಾದಿ. ಸ್ವರ್ಗಕ್ಕೆ ಮೂರೇ ಗೇಣು ಎಂಬಂತಿರುವ ಪ್ರಕೃತಿಯ ಮಡಿಲು . ಕೆರೆ ನದಿ ಹಳ್ಳ ಕೊಳ್ಳಗಳಿಂದ ಸಮೃದ್ಧ ಗಾಳಿ ಬೀಸುತ್ತಿದೆ. ಬೇಸಿಗೆಯಲ್ಲೂ ಮರದ ನೆರಳು ರಸ್ತೆಗಳನ್ನು ಮುಚ್ಚುವಷ್ಟು ತಂಪಾಗಿರುತ್ತದೆ. ಹಲವು ಹಣ್ಣು ಹೂಗಳು ಹಾಗೇ ಪ್ರಾಣಿ ಪಕ್ಷಿಗಳು ಹೀಗೆ ವೈವಿಧ್ಯಮಯವಾಗಿದೆ ಮಲೆನಾಡು. ಮಾನವರಿಗೆ ಮಾತ್ರವಲ್ಲ ಪ್ರಾಣಿ ಪಕ್ಷಿಗಳಿಗೂ ವಿವಿಧತೆಯ ತಾಣವಾಗಿದೆ. ಇಷ್ಟೆಲ್ಲಾ ಸಕಲ ಸಮೃದ್ಧ … Read more

ಕನಸಿನ ಮಾಯಾಲೋಕಕ್ಕೆ ಡ್ರೀಮ್ ಕ್ಯಾಚರ್ ನ ಕೊಡುಗೆ..: ಚೈತ್ರಭೂಲಕ್ಷ್ಮಿ ಬೆಂಗಳೂರು

ಕೆಲವು ಸ್ಥಳೀಯ ಅಮೆರಿಕನ್ ಸಂಸ್ಕೃತಿಗಳಲ್ಲಿ, ಡ್ರೀಮ್‌ಕ್ಯಾಚರ್ ಗಳನ್ನು ಕೆಲವು ಗರಿಗಳು ಅಥವಾ ಮಣಿಗಳಂತಹ ಪವಿತ್ರ ವಸ್ತುಗಳನ್ನ ಬಳಸಿ ತಯಾರಿಸಲಾಗುತ್ತದೆ. ಸಾಂಪ್ರದಾಯಿಕವಾಗಿ ಅವುಗಳನ್ನು ಹೆಚ್ಚಾಗಿ ತೊಟ್ಟಿಲಿನ ಮೇಲೆ ರಕ್ಷಣೆಯಾಗಿ ನೇತುಹಾಕಲಾಗುತ್ತದೆ. ಇದು ಒಜಿಬ್ವೆ ಸಂಸ್ಕೃತಿಯಲ್ಲಿ ಬಹಳ ಶ್ರೇಷ್ಠವಾದ ತಾಯತರೂಪವಾಗಿದೆ. ಡ್ರೀಮ್ ಕ್ಯಾಚರ್ ರಾತ್ರಿಯ ದುಃಸ್ವಪ್ನಗಳನ್ನು ಗೊಂದಲಗೊಳಿಸುತ್ತದೆ ಮತ್ತು ಆಹ್ಲಾದಕರ ಕನಸುಗಳೊಂದಿಗೆ ಒಳ್ಳೆಯದನ್ನು ಆಕರ್ಷಿಸುತ್ತದೆ. ಒಂದು ಕಾಲದಲ್ಲಿ, ಕನಸಿನ ಕ್ಯಾಚರ್ ಅನ್ನು ಆಸಕ್ತಿ ಹೊಂದಿರುವ ಜನರ ಮನೆಗಳಲ್ಲಿ ಮಾತ್ರ ಕಾಣಬಹುದಾಗಿತ್ತು. ಇತ್ತೀಚಿನ ದಿನಗಳಲ್ಲಿ, ಸಂಪೂರ್ಣವಾಗಿ ವಿಭಿನ್ನ ಜನರು ಇದನ್ನು ಆಯ್ಕೆ … Read more

ಕನಸುಗಳಿಗೆ ರೆಕ್ಕೆ ಬಂದಾಗ: ನಿಂಗಪ್ಪ ಹುತಗಣ್ಣವರ

ಹಿಡಿಯಷ್ಟು ಕನಸುಗಳನ್ನು ಎದೆಗಪ್ಪಿಕೊಂಡು ಧಾರಾಳವಾಗಿ ಜಗತ್ತಿನ ಬಗ್ಗೆ ಒಂದಷ್ಟು ಕಾಳಜಿಯಿಲ್ಲದೆ ಬದುಕಿಬಿಡುತ್ತೇವಲ್ಲ ಅದಕ್ಕಿಂತಲೂ ನಾಚಿಕೆಗೇಡಿನ ಸಂಗತಿ ಬೇರೊಂದಿಲ್ಲ. ಬದುಕಿನ ಅಸ್ತಿತ್ವಕ್ಕಾಗಿ ಯಾವುದೇ ಸಿದ್ಧಾಂತದೊಂದಿಗೆ ಮುಲಾಜಿಲ್ಲದೆ ರಾಜಿಯಾಗುವ ನಮ್ಮ ಮನಸ್ಥಿತಿಯ ಬಗ್ಗೆಯೂ ಒಂದಷ್ಟು ತಕರಾರಿದೆ. ಏನೇ ಇರಲಿ ನೇರವಾಗಿ ವಿಷಯಕ್ಕೆ ಬಂದುಬಿಡೋಣ. ಮಕ್ಕಳ ಬಾಲ್ಯವನ್ನು ಕಸಿಯಲಾಗುತ್ತಿದೆ ಮತ್ತು ಅವರ ವರ್ತಮಾನದ ಜೀವನದೊಂದಿಗೆ ಚೆಲ್ಲಾಟವಾಡಿ, ಭವಿಷ್ಯದ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ ಭಾಸವಾಗುತ್ತದೆ. ನಾವು ಚೆನ್ನಾಗಿ ನಟಿಸುತ್ತಿದ್ದೇವೆ ಶಿಕ್ಷಣ ಮಗುವಿನ ಮೂಲಭೂತ ಹಕ್ಕು ಎಂಬುದನ್ನು ಮರೆತು. ಇದನ್ನು ನಾನು ಹೇಳುವುದಕ್ಕೂ … Read more

ಗಣಿತದ ಸುಲಭ ಅಧ್ಯಯನಕ್ಕೆ ವೇದ ಗಣಿತ: ಶ್ರೇಯ ಕೆ.ಎಂ.

ಮೊದಲಿನಿಂದಲೂ ನನಗೆ ಗಣಿತ ಎಂದರೆ ಅಚ್ಚುಮೆಚ್ಚು, ಎಷ್ಟೇ ಕ್ಲಿಷ್ಟ ಸಮಸ್ಯೆ ಇದ್ದರು ಲೀಲಾಜಾಲವಾಗಿ ಬಿಡಿಸುವುದು ನನ್ನ ಹವ್ಯಾಸಗಳಲ್ಲಿ ಒಂದು ಹಾಗಾಗಿ ನಾ ಆಯ್ದುಕೊಂಡ ವೃತ್ತಿ ಗಣಿತದ ಶಿಕ್ಷಕಿ. ಗಣಿತ ಎಂದರೆ ಮಾರು ದೂರ ಹೋಗುವವರೇ ಹೆಚ್ಚು, ಗಣಿತ ಅಂದರೆ ಕಬ್ಬಿಣದ ಕಡಲೆ ಅಂತ ತುಂಬಾ ಜನ ಹೇಳೋದು ಕೇಳಿದ್ದೇನೆ, ಆದರೆ ಗಣಿತ ಅನ್ನುವುದು ಕಬ್ಬಿಣದ ಕಡಲೆಯಲ್ಲ ಅದನ್ನ ನಾವು ಆಸಕ್ತಿ ಹಾಗೂ ಶ್ರಮವಹಿಸಿ ಕಲಿತಾಗ ಎಂಥಹ ಕ್ಲಿಷ್ಟ ಸಮಸ್ಯೆಯನ್ನು ಕೂಡ ಸುಲಭವಾಗಿಸಬಹುದು. ಗಣಿತವು ನಮ್ಮ ದೈನಂದಿನ ಜೀವನದಲ್ಲಿ … Read more

ಅಂತ್ಯಸಂಸ್ಕಾರ: ಪ್ರಭುರಾಜ್‌ ಹೂಗಾರ್

ಮಗು ಹುಟ್ಟಿದ ನಂತರ ಎಲ್ಲರೂ ಒಳ್ಳೆಯ ಪಾಲನೆ, ಪೋಷಣೆ, ಶಿಕ್ಷಣ ಕೊಡುವ ಕುರಿತು ಯೋಚಿಸುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಒಳ್ಳೆಯ ಸಂಸ್ಕಾರಗಳನ್ನು ನೀಡುವುದು ಪಾಲಕರ ಕರ್ತವ್ಯ/ಜವಾಬ್ದಾರಿ. ಈಗ ನಾನು ಪ್ರಸ್ತಾಪಿಸಬೇಕೆಂದಿರುವುದು ಮರಣೋತ್ತರ ಸಂಸ್ಕಾರದ ಬಗ್ಗೆ, ಅಂತ್ಯಸಂಸ್ಕಾರದ ಆಸುಪಾಸಿನ ಕೆಲ ಸನ್ನಿವೇಶಗಳ ಬಗ್ಗೆ. ಕೆಲವು ವಿಷಯಗಳಲ್ಲಿ ನಂಬಿಕೆ ಇಲ್ಲದಿದ್ದಲ್ಲಿ ಧಾರ್ಮಿಕವಾಗಿ ನೋಡದೆ ಮಾನವೀಯ ದೃಷ್ಟಿಯಿಂದ ನೋಡೋಣ, ಮನಸಿದ್ದಲ್ಲಿ ಭಾವನೆಗಳು ಇರಲೇಬೇಕಲ್ಲವೇ. ದಿನಕ್ಕೆ ನೂರು ರೂಪಾಯಿ ಸಂಪಾದಿಸುವ ಒಬ್ಬ ದಿನಗೂಲಿ ನೌಕರ ದೇವಸ್ಥಾನಕ್ಕೆ ಹೋದಾಗಲೆಲ್ಲ ಹತ್ತು ರೂಪಾಯಿ ದಾನ ಮಾಡುತ್ತಿದ್ದ, ಅವನಂತೆ … Read more

ಮಗು ಮತ್ತು ಶಿಕ್ಷಣ: ಗಾಯತ್ರಿ ನಾರಾಯಣ ಅಡಿಗ

‘ವಿದ್ಯೆ ಇಲ್ಲದವನ ಮುಖ ಹಾಳೂರ ಹದ್ದಿನಂತಿಕ್ಕು ಸರ್ವಜ್ಞ’ ಎಂಬ ಸರ್ವಜ್ಞನ ನುಡಿಗಳು ವಿದ್ಯೆಯ ಮಹತ್ವವನ್ನು ತಿಳಿಸುತ್ತದೆ. ಮುಂದುವರಿದ ಈ ಯುಗದಲ್ಲಿ ಶಿಕ್ಷಣವು ತನ್ನದೇ ಆದ ವಿಶಿಷ್ಟತೆಯನ್ನು ಪಡೆದಿದೆ. ಮಗು ಇಡೀ ಶಿಕ್ಷಣ ಪ್ರಕ್ರಿಯೆಯಲ್ಲಿ ಕೇಂದ್ರಬಿಂದು. ಮಗುವಿನ ಆಸಕ್ತಿ, ಅಭಿರುಚಿಯನ್ನು ಗ್ರಹಿಸುತ್ತಾ, ಮನ್ನಣೆ ನೀಡುತ್ತಾ ಸಂಪೂರ್ಣ ಸ್ವಾತಂತ್ರ್ಯ ನೀಡಿ ಸರ್ವತೋಮುಖ ಬೆಳವಣಿಗೆಗೆ ಅನುವು ಮಾಡಿಕೊಡುವುದೇ “ಮಗು ಕೇಂದ್ರಿತ ಶಿಕ್ಷಣ ಪದ್ಧತಿ. “ “ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು”. ಪ್ರಥಮತವಾಗಿ ಮಗು ತನ್ನ ಮನೆಯಿಂದಲೇ ಶಿಕ್ಷಣ ಪಡೆಯಲು … Read more

ಬಿಸಿಲು ಮಾಗಿ ಬೆಳದಿಂಗಳಾಗುವ ಸೊಗಸಿದೆ!: ಜಯಶ್ರೀ. ಜೆ. ಅಬ್ಬಿಗೇರಿ

ದಿನವೂ ದೇವರ ಮೂರ್ತಿಗಳನ್ನು ನೀರಿನಿಂದ ತೊಳೆದು, ಹಾಲಿನ ಅಭಿಷೇಕ ಮಾಡಿ,ಮೆತ್ತನೆಯ ಬಟ್ಟೆಯಲ್ಲಿ ಒರೆಸಿ, ವಿಭೂತಿ, ಅರಿಷಿಣ, ಕುಂಕುಮ, ಗಂಧ,ಅಕ್ಷತೆ,ಬಿಲ್ವಪತ್ರೆಯನ್ನು ಏರಿಸಿ ಕೈ ಮುಗಿದರೆ ಸಾಕು ಮನದಲ್ಲಿ ಅಂದುಕೊಂಡದ್ದು ನಡೆಯುತ್ತದೆ ಎನ್ನುವುದು ನಮ್ಮಲ್ಲಿಬಹುತೇಕರ ನಂಬಿಕೆ. ದೇವರ ಪೂಜೆ ಭದ್ರತಾ ಭಾವವನ್ನು ಒದಗಿಸುವುದು ಎನ್ನುವ ಭಾವ ಸುಳ್ಳೇನಲ್ಲ. ಇಷ್ಟೇ ಅಲ್ಲ ಆಶಾಭಾವ ಲವಲವಿಕೆಯ ಮನೋಭಾವನೆಯನ್ನೂ ಹೆಚ್ಚಿಸುವುದು. ಪ್ರಯತ್ನಿಸದೇ, ಬದಲಾವಣೆಯ ಗಾಳಿಗೆ ಮೈ ಒಡ್ಡದೇ, ವಾಸ್ತವವನ್ನು ಅರಿಯದೇ, ಅದೊಂದೇ ಬದುಕಿನ ಚಿತ್ರವನ್ನು ಬದಲಿಸಿಬಿಡುವುದು ಎನ್ನುವುದು ನಾವು ಸೃಷ್ಟಿಸಿಕೊಂಡ ಮಾಯದ ಬಲೆಯಲ್ಲಿ ನಾವೇ … Read more

ರಾಮಾಯಣದಲ್ಲಿ ಕಾಡುವ ಪಾತ್ರ ಉರ್ಮೀಳಾ: ಶ್ರೇಯ ಕೆ ಎಂ ಶಿವಮೊಗ್ಗ

ನಾವು ಹುಟ್ಟಿದಾಗಿನಿಂದಾನು ರಾಮಾಯಣ ಮಹಾಭಾರತಗಳೆರಡನ್ನು ನೋಡಿಕೊಂಡು ಕೇಳಿಕೊಂಡು ಓದಿಕೊಂಡು ಬೆಳೆದವರು.. ನಮ್ಮ ಅಜ್ಜಿ ದೊಡ್ಡಮ್ಮನ ಬಾಯಲ್ಲಿ ಎಲ್ಲಾ ಪಾತ್ರಗಳು ಕರತಲಾಮಲಕ ಆಗಿದ್ದವು, ಯಾವುದೇ ಸನ್ನಿವೇಶವನ್ನಾದರೂ ಲೀಲಾಜಾಲವಾಗಿ ಹೇಳುತ್ತಿದ್ದ ಪರಿ ಎಂಥವರನ್ನು ಭಾವಪರವಶ ಮಾಡುತ್ತಿತ್ತು. ಹಾಗೆಯೆ ನಾವೇನು ಇದರಿಂದ ಹೊರತಲ್ಲ, ಹೀಗೆ ಕೇಳುತ್ತ ಬೆಳೆದ ನಾವು ಅವರ ಬಾಯಲ್ಲಿ ರಾಮ ಲಕ್ಷ್ಮಣ ಸೀತೆ ಎಲ್ಲರೂ ದೇವರೇ, ಆದರೆ ಅ ಚಿಕ್ಕ ವಯಸ್ಸಲ್ಲೇ ನಂಗೆ ಕಾಡುತ್ತಿದ್ದ ಪಾತ್ರ ಊರ್ಮಿಳೆ, ದೊಡ್ಡವರು ಹೇಳುವ ಪ್ರಕಾರ ಊರ್ಮಿಳೆ ಆರಾಮಾಗಿ ರಾಜ್ಯದಲ್ಲಿ ಇದ್ದು ರಜಾ … Read more

ಕರೋನಾ ಕರ್ಫ್ಯೂ ಕಲಿಸುತ್ತಿರುವ ಪಾಠ: ಹೊ.ರಾ.ಪರಮೇಶ್ ಹೊಡೇನೂರು

ಅತ್ಯಾಧುನಿಕ ಕಾಲಘಟ್ಟದಲ್ಲಿ ಬದುಕುತ್ತಿರುವ ನಾವು ಇಂದು ವೈಜ್ಞಾನಿಕವಾಗಿ ಸಾಕಷ್ಟು ಸಾಧಿಸಿದ್ದೇವೆ, ವೈಚಾರಿಕ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ಬುದ್ಧಿವಂತರೆಂದು ಬೀಗುತ್ತಿದ್ದೇವೆ, ಉನ್ನತ ಶಿಕ್ಷಣವನ್ನು ಪಡೆದು, ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುವ ನೌಕರಿ ಹಿಡಿದುಕೊಂಡು ಐಷಾರಾಮಿ ಜೀವನವನ್ನು ನಡೆಸುತ್ತಿದ್ದೇವೆ. ತಾಂತ್ರಿಕವಾಗಿ ಮುಂದುವರೆದು ಇಡೀ ಪ್ರಪಂಚದ ಯಾವುದೇ ಮೂಲೆಯಲ್ಲಿ ಏನೇ ವಿದ್ಯಮಾನ ಘಟಿಸಿದರೂ ಕ್ಷಣಾರ್ಧದಲ್ಲಿ ವೀಕ್ಷಿಸುವ ಮಾಧ್ಯಮಗಳನ್ನು ಸೃಷ್ಟಿಸಿಕೊಂಡಿದ್ದೇವೆ. ಮಂಗಳನ ಅಂಗಳದಲ್ಲಿ ಆಟವಾಡುವಷ್ಟು ಸಾಮರ್ಥ್ಯವನ್ನು ಹೊಂದಿದ್ದೇವೆ, ಚಂದ್ರನ ಮೈಲ್ಮೈಯಲ್ಲಿ ತುಸುಹೊತ್ತು ವಿರಮಿಸುವಷ್ಟರ ಮಟ್ಟಿಗೆ ಸಂಶೋಧನಾ ಕಾರ್ಯಗಳನ್ನು ಕೈಗೊಂಡು ಯಶಸ್ಸು ಕಂಡಿದ್ದೇವೆ. ವೈದ್ಯಕೀಯ ಲೋಕದ ಅದ್ಭುತವಾದ … Read more

ಅಳಿವಿನ ಅಂಚಿನಲ್ಲಿ ಮಾನವ ಕುಲ…? !: ಶಶಿಧರ ರುಳಿ

ರಸ್ತೆಯಲ್ಲಿ ಹೋಗುವಾಗ ಗಿಡದಲ್ಲಿಯ ಹೂವೊಂದು ಕಮರಿ ಹೋಗಿದ್ದು ಕಂಡಿತು. ಮುದುಡಿದ ಆ ತಾವರೆ ಕದಡಿದ ನನ್ನ ಮನಸ್ಸಿಗೆ ಸಾಕ್ಷಿಯಾಗಿ ನಿಂತಂತೆ ತೋರುತ್ತಿತ್ತು. ರಣ ಬಿಸಿಲಿನ ಹೊಡೆತಕ್ಕೆ ಬಾಡಿಹೋದ ಅದರ ಸುಂದರ ಪಕಳೆಗಳು ಯಾವುದೋ ಒಂದು ಕಾಲದಲ್ಲಿ ವೈಭವೋಪಿತ ಕಟ್ಟಡವಾಗಿದ್ದು ಈಗ ಬಿದ್ದುಹೋದ ಗೋಡೆಗಳು ಅದರ ಪಳಿಯುಳಕೆಯಂತೆ ಕಂಡವು. ಬೆಳಗಿನ ಜಾವ ಅರಳಿ ಸಂಜೆಯಾಗುತ್ತಿದ್ದಂತೆ ನಿಸ್ತೇಜವಾದ ಹೂವಿನ ಸುಂದರ ತನು, ಜೀವನದ ಕ್ಷಣಿಕತೆಯ ನೀತಿ ಹೇಳುತ್ತಿರುವಂತೆ ಅನಿಸಿತು. ಈ ಮೂಲಕ ಬದುಕಿನ ಪಯಣ ರಭಸದ ಯಾತ್ರೆ ಎಂಬ ಸತ್ಯವನ್ನು … Read more

ಬದಲಾದ ಬದುಕು: ಜ್ಯೋತಿ ಬಾಳಿಗ

ದಿನವಿಡೀ ಒಂಟಿ ಪಿಶಾಚಿಯಂತೆ ಮನೆಯಲ್ಲೇ ಇರುತ್ತಿದ್ದ ಕೀರ್ತಿಗೆ ಈ ಲಾಕ್ಡೌನ್ ಪಿರಿಯಡ್ ನಲ್ಲಿ ಗಂಡ ,ಮಕ್ಕಳು ಮನೇಲಿ ಇರೋದು ಒಂದು ರೀತಿಯ ಸಂತಸಕೂಡ ಕೊಟ್ಟಿದೆ. ಎಲ್ಲರೂ ಒಟ್ಟಿಗೆ ಬೆಳಗಿನ ತಿಂಡಿ ತಿನ್ನೋದು, ಒಟ್ಟಿಗೆ ಮಾತಾಡುತ್ತಾ ಊಟ ಮಾಡೋದು, ಒಬ್ಬರಿಗೊಬ್ಬರು ತಮಾಷೆ ಮಾಡಿಕೊಂಡು ಸಂಜೆಯ ಸಮಯ‌ ಕಳೆಯೋದು‌, ಜೀವನಕ್ಕಾಗಿ ಗಂಡನ ವರ್ಕ್ ಫ್ರಂ ಹೋಂ ಕೆಲಸ ಇವೆಲ್ಲವೂ ಎಷ್ಟೋ ವರ್ಷಗಳ ನಂತರ ಕೀರ್ತಿಗೆ ನೆಮ್ಮದಿಯ ಜೀವನ ನೀಡಿದೆ. ಇದು ಕೀರ್ತಿಯ ಕಥೆ ದಿನಾ ಬೆಳಿಗ್ಗೆ ಬೇಗ ಎದ್ದು ‌ಗಡಿಬಿಡಿಯಲ್ಲಿ … Read more

ಕನಸುಗಳ ಪೈಪೋಟಿ: ಸುನಿತಾ. ಎಸ್. ಪಾಟೀಲ

“ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡ” ಎಂಬ ಹಿತ ನುಡಿಯಂತೆ ಮನುಷ್ಯನಾದವನು ಜೀವನದಲ್ಲಿ ಹಾಗಿರಬೇಕು ಹೀಗಿರಬೇಕು ಎಂಬ ಕನಸು ಕಾಣುವುದು ಸಹಜ. ಮನುಷ್ಯನಾದವನಿಗೆ ತಿಳುವಳಿಕೆ ಬಂದಾಗಿನಿಂದ ತನ್ನ ಕನಸುಗಳನ್ನು ಪೂರೈಸಿಕೊಳ್ಳುವುದು ಒಬ್ಬ ಸಾಧಕನ ಸ್ವತ್ತು, ಹೊರತು ಸೋಮಾರಿಯ ಸ್ವತ್ತಲ್ಲ’ ಎಂಬುದನ್ನು ಮೊದಲು ಆತ ಅರಿತಿರಬೇಕು. ಅದನ್ನು ನೆರವೇರಿಸಲು ತನ್ನ ಜೀವನದಲ್ಲಿ ಹೆಣಗಾಡಬೇಕಾಗುತ್ತದೆ. ಕನಸು ಕಾಣುವುದು ತಪ್ಪಲ್ಲ! ಆದರೆ ಆ ಕನಸನ್ನು ನೆರವೇರಿಸಲು ಅವನು ಒಳ್ಳೆಯ ದಾರಿಯನ್ನು ಹಿಡಿದು ಮುಂದೆ ಸಾಗಬೇಕಾಗುತ್ತದೆ. ಒಂದೆಡೆ ಸಮೃದ್ಧಿ ಎಡೆಗೆ ಹೆಜ್ಜೆಯಿಟ್ಟರೆ ಮತ್ತೊಂದೆಡೆ ಭ್ರಷ್ಟಾಚಾರ, … Read more

ನಾ ಕಂಡಂತೆ ಹೆಣ್ಣು: ನಿಮ್ಮೊಳಗೊಬ್ಬ ನಾರಾಯಣ

ಒಂದು ಹೆಣ್ಣು ಮಗು ಹುಟ್ಟುತ್ತಾನೆ ಒಬ್ಬ ತಾಯಿ ಮತ್ತು ಮಗು ಎರಡು ಮನಸುಗಳು ಒಟ್ಟಿಗೆ ಹುಟ್ಟುತ್ತೆ. ಹೆಣ್ಣುಮಕ್ಕಳು ಮನೆಯ ಜೀವಾಳ ಒಂದು ಹೆಣ್ಣು ಮಗು ಜನಿಸಿದೆ ಎಂದರೆ. ಪ್ರತಿದಿನವೂ ಮನೆಯಲ್ಲಿ ಜೀವಂತಿಕೆ ತುಂಬಿದಂತೆ. ಪ್ರತಿ ಹಬ್ಬವು ಸಡಗರವೇ. ಪ್ರತಿ ಸಂಭ್ರಮವು ಸಡಗರವೇ. ಹೆಣ್ಣಿನ ಮನಸ್ಸು ಸುಂದರ ಮತ್ತು ಜೀವಂತ ಒಂದು ಕುಟುಂಬವನ್ನು ತನ್ನ ಹುಟ್ಟಿನಿಂದ ತನ್ನ ಜೀವಿತದ ಕೊನೆಯವರೆಗೂ ಪ್ರೀತಿಸುವ ಕಲೆ ಹೆಣ್ಣಿಗೆ ಮಾತ್ರ ಗೊತ್ತು. ಹೆಣ್ಣು ಎಂದರೆ ಆರೈಕೆ ಮತ್ತು ಒಡನಾಟ. ಅವಳ ಕಳಕಳಿ ಮತ್ತು … Read more

ಅಡುಗೆ ಮನೆ ಅವಾಂತರಗಳು: ಶ್ರೇಯ ಕೆ. ಎಂ.

ಅಡುಗೆ ಮನೆ ಎಂದರೆ ಹೆಣ್ಣುಮಕ್ಕಳ ಆವಾಸ ಸ್ಥಾನ ಅಂತಾನೆ ಹಿಂದಿನಿಂದಲೂ ಬಂದಂತಹ ನುಡಿ, ಎಷ್ಟೇ ಉದ್ಯೋಗಸ್ಥ ಮಹಿಳೆಯಾದರೂ ಅಡುಗೆ ಮನೆ ಅನ್ನುವುದು ಅವಳ ಇನ್ನೊಬ್ಬ ಸ್ನೇಹಿತೆ. ಮಹಿಳೆ ಎಷ್ಟೇ ಉನ್ನತ ಹಂತದಲ್ಲಿ ಇದ್ದರೂ ಆಕಾಶದೆತ್ತರಕ್ಕೆ ಹಾರಾಡುತ್ತಿದ್ದರೂ ಅಡುಗೆ ಮನೆ ಎಂಬ ಮಾಯೆಗೆ ಅವಳು ಬರಲೇ ಬೇಕು, ಇಂತಹ ಅಡುಗೆ ಮನೆಯಲ್ಲಿ ನಡೆಯುವ ಅವಾಂತರಗಳ ಬಗ್ಗೆ ನೋಡೋಣ ಬನ್ನಿ. ನಾನು ಈ ಹೆಸರಿನ ಬದಲಾಗಿ ಅಡುಗೆ ಮನೆಯ ಕಲರವ ಅಂತ ಹೇಳುತ್ತೇನೆ … ಯಾಕೆಂದರೆ ನಮ್ಮ ಅಡುಗೆ ಮನೆಯಲ್ಲಿ … Read more

ನೆನಪಿನ ಗೂಡಿನಿಂದ: ದೀಪು

ಅವತ್ತು ಸ್ಕೂಲ್ ನಿಂದ ಬರತಿದ್ದಹಾಗೆ ಬ್ಯಾಗ್, ಶೂ, ಎಲ್ಲ ಎಸೆದು ಇನ್ನೇನು ಆಟ ಆಡೋಕೆ ಹೋಗ್ಬೇಕು, ಅಷ್ಟರೊಳಗೆ ಒಣ ಹುಲ್ಲು-ಕಡ್ಡಿ ಮನೆ ಮುಂದಿನ ಅಂಗಳದ ಹತ್ತಿರ ಬಿದ್ದಿದ್ದು ಗಮನಿಸಿದೆ… ಅಮ್ಮನ ಸಾಯಂಕಾಲದ ಕಸ ಗುಡಿಸಿ ನೀರು ಹಾಕಿ, ದೇವರ ಮುಂದೆ ದೀಪ ಹಚ್ಚುವ ಕಾರ್ಯಕ್ರಮ ಶುರುವಾಗಿತ್ತು ಹಾಗೆ ಆ ಹುಲ್ಲು-ಕಡ್ಡಿ ಕೂಡ ಕಸ ಸೇರಿತ್ತು. ನಾನು ಆಟ ಮುಗಿಸಿ ಮನೆಗೆ ಬಂದಾಗ ಮತ್ತಷ್ಟು ಹುಲ್ಲು-ಕಡ್ಡಿ ಜೊತೆಗೆ ಪಕ್ಷಿಯ ಒಂದೆರಡು ಪುಕ್ಕಗಳು ಕೂಡ! ನಾಜೂಕಾದ ಪುಕ್ಕಗಳನ್ನ ಹಾಗೆ ಎತ್ತಿಕೊಂಡು … Read more

ಏಪ್ರಿಲ್ ಫೂಲ್ ಅಲ್ಲ ಏಪ್ರಿಲ್ ಕೂಲ್: ಎಂ.ಎಚ್.ಮೊಕಾಶಿ

ಏಪ್ರಿಲ್ ಒಂದು ಮೂರ್ಖರ ದಿನ ಈ ಮೂರ್ಖತನದ ಲೆಕ್ಕ ಒಂದು ದಿನಕ್ಕೆ ಮುಗಿದು ಹೋಗುವ ಹಾಗಿದ್ದರೆ ಎಷ್ಟೊಂದು ಚೆನ್ನಾಗಿರುತ್ತಿತು. ಆದರೆ ಹಾಗಿಲ್ಲ ಅದು ನಿತ್ಯೋತ್ಸವ. ಅದನ್ನು ನಿದರ್ಶಿಸಲು ಮತ್ತು ನಮ್ಮನ್ನು ಆತ್ಮವಿಮರ್ಶೆಗೆ ಒಡ್ಡಿಕೊಳ್ಳಲು ಮೂರ್ಖರ ದಿನದಂದು ಆರಂಭವಾಗುವ ಈ ತಿಂಗಳು ಸಕಾಲ ಎನ್ನಬಹುದು. ಇಡೀ ತಿಂಗಳು ನಾವು ಮೂರ್ಖರಾಗುವ ನಾನಾ ರೀತಿಗಳ ಬಗ್ಗೆ ಅರ್ಥಮಾಡಿಕೊಳ್ಳುವ ಸಮಯ. ಏಪ್ರಿಲ್ ಒಂದರಂದು ಕೆಲವರ ಕಾಲೆಳೆದು ಮೂರ್ಖರನ್ನಾಗಿ ಮಾಡಲು, ಕಾಲೆಳೆಸಿಕೊಂಡು ಮೂರ್ಖರಾದ ದಿನ. ನೀವೂ ಕೂಡ ಎಷ್ಟೋ ದಿನದಿಂದ ಯಾರನ್ನೋ ಬಕ್ರಾ … Read more

ಮಲೆನಾಡಿನ ಅಡಿಕೆ ವ್ಯವಸಾಯ ಮತ್ತು ಪರಿಸ್ಥಿತಿ: ಗೀತಾ ಜಿ.ಹೆಗಡೆ, ಕಲ್ಮನೆ.

ಈ ಯುಗಾದಿ ಹಬ್ಬದ ಆಸು ಪಾಸು ನಮ್ಮ ಮಲೆನಾಡಿನ ಹಳ್ಳಿಗಳಲ್ಲಿ ಅಡಿಕೆ ಕೊಯ್ಲು ಬಲು ಜೋರು. ಎಲ್ಲರ ಮನೆ ಅಂಗಳದಲ್ಲಿ ದೊಡ್ಡ ದೊಡ್ಡ ಅಟ್ಟ ನಿರ್ಮಿಸಿ ಅದರ ತುಂಬಾ ಅಡಿಕೆಯ ಹರವು ಕಂಡರೆ ಇನ್ನು ಮನೆ ಒಳಗೆ, ಹೆಂಚಿನ ಮಾಡಿನ ಮೇಲೆ ಎಲ್ಲೆಂದರಲ್ಲಿ ಅಡಿಕೆಯದೇ ದರ್ಬಾರು. ಒಣಗಿಸಲು ಹಾಕಿದ ಗೋಟು ಬಿಸಿಲಿಗೆ ಬಾಡಿ ಮುತ್ತಜ್ಜಿ ಮುಖವಾದರೆ ಇತ್ತ ಹಸಿ ಅಡಿಕೆ ಸೊಲಿದು ಬೇಯಿಸಿ ಒಣಗಿಸಿ ತೊಗರು ಬಣ್ಣದಲ್ಲಿ ಮಿರಿ ಮಿರಿ ಮಿಂಚುತ್ತಾ ಕೆಂಪಡಿಕೆಯೆಂಬ ಹೆಸರು ಪಡೆಯುತ್ತದೆ. ಒಂದು … Read more

ಖುಷಿಗಳನ್ನ ಕಂಪೇರ್ ಮಾಡಬಾರದು: ಭಾರ್ಗವಿ ಜೋಶಿ

ಏನು ಮಾಡೋದು ಬದುಕಿನಲ್ಲಿ ಖುಷಿಗಿಂತ ಜಾಸ್ತಿ ನೋವು, ಕಷ್ಟಗಳೇ ಇವೆ. ಯಾರಾದ್ರೂ ಒಬ್ಬರಾದ್ರೂ ಪೂರ್ತಿ ಖುಷಿ ಇಂದ ಇರೋ ವ್ಯಕ್ತಿ ಇದ್ದಾರಾ? ಅನ್ನೋ ಪ್ರಶ್ನೆ ನಮ್ನನ್ನು ಕಾಡತ್ತೆ, ಆದ್ರೂ ಜಗತ್ತಲ್ಲಿ ಇರೋ ಎಲ್ರಿಗಿಂತಲೂ ಹೆಚ್ಚಿನ ಕಷ್ಟ ನಮಗೆ ಅಂತ ನಾವೆಲ್ಲ ಅಂದುಕೊಳ್ತೀವಿ. ಯಾಕೆಂದರೆ ನಮ್ಮ ಮುಂದೆ ಇರೋ ಖುಶಿಗಳನ್ನು ಅನುಭವಿಸೋ ಕಲೆ ನಮಗೆ ಗೊತ್ತಿರೋದಿಲ್ಲ. ಅದೇ ಸಮಸ್ಯೆ. ಆ ಕ್ಷಣವನ್ನು ಹಾಗೆ ಅನುಭವಿಸಿ ಬಿಡಬೇಕು. ಕಳೆದುಹೋದ ದಿನಗಳನ್ನು ಮೆಲುಕು ಹಾಕಬೇಕು, ಆದ್ರೆ ಕಂಪೇರೆ ಮಾಡಬಾರದು. ಚಿಕ್ಕವರಿದ್ದಾಗ ಎಷ್ಟು … Read more

ಕರೋನ ವಿರುದ್ಧ ಗೆದ್ದು ಮತ್ತೊಮ್ಮೆ ಚಪ್ಪಾಳೆ ತಟ್ಟೋಣ: ವೆಂಕಟೇಶ ಚಾಗಿ

ಇತ್ತೀಚಿನ ದಿನಗಳಲ್ಲಿ ಎಲ್ಲೆಡೆಯೂ ವ್ಯಾಪಕವಾಗಿ ಕೇಳಿಬರುತ್ತಿರುವ ವಿಷಯ ಕರೋನ ಕುರಿತು. ಕರೋನ ನಿಜವಾಗಿಯೂ ಒಂದು ಸಾಂಕ್ರಾಮಿಕ ಸೋಂಕಾಗಿ ಜಗತ್ತಿನ ತುಂಬಾ ಪಸರಿಸುತ್ತಿದೆ. ಚೀನಾದ ವುಹಾನ್ ನಲ್ಲಿ ಮೊಟ್ಟ ಮೊದಲು ಕಾಣಿಸಿಕೊಂಡ ಈ ವೈರಸ್, ತುಂಬಾ ಅಪಾಯಕಾರಿಯಾಗಿ ಕಂಡದ್ದು ರೋಗಕ್ಕೆ ತುತ್ತಾಗಿ ಸಾವಿಗೀಡಾಗಿರುವ ಜನರ ಸಂಖ್ಯೆಯಿಂದಲೇ. ಜಾಗತಿಕವಾಗಿ ಹಿಂದೆ ಅನೇಕ ವೈರಸ್ಗಳನ್ನು ಕಂಡಿದ್ದ ಚೀನಾ ಕರೋನಾದ ವಿಷಯದಲ್ಲಿ ಜಾಗೃತಿ ಹಾಗೂ ಅದರ ತೀವ್ರತೆಯ ಬಗ್ಗೆ ಜಗತ್ತಿಗೆ ಮನವರಿಕೆ ಮಾಡಲು ವಿಳಂಬ ಧೋರಣೆ ಅನುಸರಿಸಿದೆ ಎಂಬುದು ಸ್ಪಷ್ಟ. ಚೀನಾದಲ್ಲಿ ಸಾವಿನ … Read more

ಮಾನಸಿಕವಾಗಿ ಸಿದ್ದರಾಗಿ: ಸಿಂಧು ಭಾರ್ಗವ್ ಬೆಂಗಳೂರು

ಸನ್ನಿವೇಶ ೧: ಮಾಲತಿ ಮದುವೆಯಾಗಿ ಮೂರು ತಿಂಗಳೊಳಗೆ ಹೆತ್ತವರಿಗೆ ಸಿಹಿಸುದ್ದಿ ತಲುಪಿಸುವ ಬದಲು ತವರು ಮನೆಯವರು ಮದುವೆ ದಿನ ನೀಡಿದ ಬಳುವಳಿಯ ಸೂಟ್ ಕೇಸ್ ಅನ್ನು ಹಿಡಿದುಕೊಂಡು ತಾಯಿ ಎದುರು ನಿಂತಿದ್ದಳು‌. ದಿಗ್ಭ್ರಮೆಗೊಂಡ ತಾಯಿ, ಅವಳನ್ನು ಕೂರಿಸಿ ನಿಧಾನವಾಗಿ ವಿಚಾರಿಸಿ ಕೇಳಿದಾಗ, ಮಾಲತಿ ತನ್ನ ನೋವಿನ ಕಥೆಯನ್ನು ಒಂದೊಂದಾಗಿ ಬಿಡಿಸಿ ಹೇಳತೊಡಗಿದಳು‌ .ಮರುಗಟ್ಟಿದ್ದ ನೋವನ್ನೆಲ್ಲ ಜೋರಾಗಿ ಅತ್ತು ಕಣ್ಣೀರು ಸುರಿಸಿ ಮನಸ್ಸಿನ ಭಾರವನ್ನು ಕಡಿಮೆ ಮಾಡಿಕೊಂಡಳು. ಸಿಟ್ ಔಟ್ ನಲ್ಲಿ ಕೂತಿದ್ದ ತಂದೆಗೆ ತಲೆಯ ಮೇಲೆ ಬಂಡೆಕಲ್ಲು‌ … Read more

ಉತ್ತರ-ಅನುತ್ತರ-ನಿರುತ್ತರಗಳ ಜೊತೆಗೊಂದು ಪ್ರತ್ಯುತ್ತರ: ಹೆಚ್ ಎನ್ ಮಂಜುರಾಜ್, ಮೈಸೂರು

ಎಲ್ಲ ಪ್ರಶ್ನೆಗಳಿಗೂ ಉತ್ತರವಿಲ್ಲವೆಂಬುದು ಗೊತ್ತಿದ್ದರೂ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ. ನನ್ನ ಮಟ್ಟಿಗೆ ಪ್ರಶ್ನೆಗಳನ್ನು ಇನ್ನೊಬ್ಬರಿಗೆ ಕೇಳುವುದಲ್ಲ; ನಮ್ಮಲ್ಲಿಯೇ ಕೇಳಿಕೊಳ್ಳುವುದು ಹೆಚ್ಚು ಸರಿ. ಆಗ ಪ್ರಶ್ನೋತ್ತರಗಳೆರಡೂ ನಮ್ಮವೇ ಆಗಿರುತ್ತವೆ. ಇದರಿಂದ ಮೊದಲಿಗಿಂತ ಹೆಚ್ಚು ‘ಎಚ್ಚರ’ದ ಸ್ಥಿತಿಯನ್ನು ಹೊಂದಬಹುದು. ಇರಲಿ. ಆಚಾರ್ಯ ರಜನೀಶರು ಚಾಂಗ್ ತ್ಸು ಕುರಿತು ಕೊಟ್ಟ ಡಿಸ್‍ಕೋರ್ಸ್- ಪುಸ್ತಕದ ಹೆಸರು ಶೂನ್ಯ ನಾವೆ-ಇದರಲ್ಲೊಂದು ಪ್ರಸಂಗ ಉಲ್ಲೇಖಿತವಾಗಿದೆ: ನಾವೆಯೊಂದರಲ್ಲಿ ಕುಳಿತು ಒಬ್ಬರೇ ವಿಹರಿಸುತ್ತಿರುವಾಗ, ಹಿಂದಿನಿಂದ ಇನ್ನೊಂದು ನಾವೆ ಏಕ್‍ದಂ ಡಿಕ್ಕಿ ಹೊಡೆದಾಗ ಮನದಲ್ಲುದಿಸುವ ಭಾವ: ವ್ಯಗ್ರತೆ ಮತ್ತು ಅಸಹನೆ. … Read more

ನಮ್ಮಲ್ಲಿರುವ ಮೌಢ್ಯತೆ: ಷೌಕತ್‌ ಅಲಿ, ಮದ್ದೂರು

ವಿಜ್ಞಾನಯುಗ, ಕಂಪ್ಯೂಟರ್‍ಯುಗ, ಹೊಸ ಹೊಸ ಆವಿಷ್ಕಾರಗಳ ಹೊಸ ಮಾಧ್ಯಮಗಳ ಪರಿಚಯ, ದಿನ ನಿತ್ಯ ಅನೇಕ ಸುದ್ದಿಗಳು ನಮ್ಮನ್ನು ನಮ್ಮ ಬುದ್ಧಿಶಕ್ತಿಯನ್ನು ಸೇರಿ, ಮಾನವ, ಯಂತ್ರ ಮಾನವನ್ನಾಗಿಸಿದ್ದೇವೆ. ನಾವು 21ನೇ ಶತಮಾನಕ್ಕೆ ಸಮೀಪಿಸುತ್ತಿದ್ದು ಈ ಯುಗ ಯುಗಾಂತರದಲ್ಲಿ ನಾವು ನಮ್ಮೊಡನೆ ಒಂದು ಗಂಟು ಉಳಿಸಿಕೊಂಡೇ ಬಂದಿದ್ದೇವೆ. ಆ ಗಂಟು ಬೇರೇನಲ್ಲ ನಮ್ಮಲ್ಲಿರುವ ಮೌಢ್ಯತೆ, ಮೂಢನಂಬಿಕೆಗಳಿಂದ ನಮ್ಮ ಬದುಕಿನ ಆಚಾರ ವಿಚಾರ ಅಳತೆ ಮಾಡುವುದು, ಭಯದ ವಾತಾವರಣ ಸೃಷ್ಟಿಕೊಳ್ಳುವುದು. ಬದುಕಿನ ವಿನಾಶಗೊಳಿಸುವುದು ಈ ಎಲ್ಲಾ ಅಂಶಗಳು ನಮ್ಮ ಕಲ್ಪನೆಯಿಂದ ಬಂದದ್ದು … Read more

ಜಗವನ್ನೆ ಒಂದು ತುರ್ತು ನಿಗಾ ಘಟಕವನ್ನಾಗಿಸಿದ ಧನದಾಹಿಗಳು: ಎಂ.ಎಲ್‌.ನರಸಿಂಹಮೂರ್ತಿ

ಪರಿಸರದ ಎಚ್ಚರಿಕೆ ಮಳೆಗಾಲದಲ್ಲಿ ಪ್ರವಾಹಗಳು, ಬೆಟ್ಟಗುಡ್ಡ ಕುಸಿತಗಳ ಮೂಲಕ ನೀಡಿತ್ತು. ಆ ಸಂದರ್ಭದಲ್ಲಿ ನಾವೆಲ್ಲ ಮಾನವೀಯತೆಯ ಮಹಾ ಸಾಗರವನ್ನೆ ಹರಿಸಿದೆವು. ನೆರೆ ಸಂತ್ರಸ್ತರಿಗೆ ಆಹಾರ,ಬಟ್ಟೆ, ವಸತಿ ಕೊಡಿಸುವಲ್ಲಿ ಕೈಯಲ್ಲಾದ ಮಟ್ಟಿಗೆ ಜೊತೆಯಾದೆವು. ಆದರೆ ಬುದ್ದಿ ಕಲಿಯದ ನಾವು ಮತ್ತೆ ಮತ್ತೆ ಅದೆ ಕೃತ್ಯಗಳನ್ನು ಮುಂದುವರೆಸುತ್ತಾ ಪರಿಸರದ ಮೇಲಿನ ಹಲ್ಲೆ ಮಾತ್ರ ನಿಲ್ಲಿಸಲಿಲ್ಲ. ಈಗ ಚಳಿಯಿಂದ ಬೇಸಿಗೆ‌ ಕಾಲಕ್ಕೆ ಬಂದೆವು. ಕೊರೋನಾದಂತಹ‌ ಮಾರಕ ಸೋಂಕುಗಳು ಬಂದಾಗಲೂ ಪರಿಸರದ ಬಗ್ಗೆ ಯಾವೊಬ್ಬನೂ‌ ಚಕಾರ ಎತ್ತುತ್ತಿಲ್ಲ. ಬದಲಾಗಿ ಕೈ ತೊಳಿ, ಬಾಯಿ … Read more

ಹೋಲಿಕೆಗಳು ಮಕ್ಕಳನ್ನೇ ಆಗಲಿ ಮನಸ್ಸುಗಳನ್ನೇ ಆಗಲಿ ಸೋಲಿಸಿ ಬಿಡುತ್ತವೆ.: ನಿಮ್ಮೊಳಗೊಬ್ಬ ನಾರಾಯಣ

ನೋಡು ಅವರು ಹೇಗಿದ್ದಾರೆ ಈ ಮಾತು ಉದಾಹರಣೆಗೆ ಆದರೆ ಸ್ವಲ್ಪ ಮಟ್ಟಿಗೆ ಸರಿ ಆದರೆ ಪದೇಪದೇ ಇದೆ ಒಂದು ಆಯುಧವಾದರೆ. ನಾವು ನಮ್ಮಲ್ಲಿರುವ ಬಲವನ್ನು ಗುರುತಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರತಿಯೊಂದು ಕಲ್ಲಿನಲ್ಲಿ ಒಂದು ವೈಶಿಷ್ಟ್ಯ ಇರುತ್ತದೆ. ಅದನ್ನು ಗುರುತಿಸುವ ಜಾಣ್ಮೆ ನಮಗಿರಬೇಕು. ಶಾಲೆಯಲ್ಲಿ ಓದಿ ಉತ್ತಮ ಅಂಕಗಳನ್ನು ಗಳಿಸುವುದು ಮಕ್ಕಳ ಕರ್ತವ್ಯ. ಹಾಗೆಯೇ ಕೆಲಸದಲ್ಲಿ ಉನ್ನತ ಮಟ್ಟ ತಲುಪಿ ಉತ್ತಮ ಸಂಪಾದನೆ ಮಾಡುವುದು ನಮ್ಮ ಕರ್ತವ್ಯ. ಆದರೆ ಆ ಕ್ಷೇತ್ರಗಳಲ್ಲಿ ಉತ್ತಮ ಮಟ್ಟ ತಲುಪಬೇಕೆಂಬ ನಿರೀಕ್ಷೆ ನಮ್ಮ ಒತ್ತಡಗಳಿಂದಾಗಿ … Read more

ಹಿರಿಯರು ಹೇಳಿಕೊಟ್ಟ ನಾವು ಬಿಟ್ಟ ಆಚರಣೆಗಳು: ಶೀಲಾ. ಎಸ್. ಕೆ.

ಅಜ್ಜಿ ಹೇಳಿಕೊಟ್ಟ ಮಾತದು, ನಾವು ಕಲಿಯಲಿಲ್ಲ. ನಮ್ಮ ಹಿರಿಯರ ಮಾತಿನಲ್ಲಿ ಉದ್ದೇಶ, ಪ್ರಯೋಜನ ಹುಡಿಕಿದ ನಾವು, ಹಿಂದೆ ಮುಂದೆ ನೋಡದೆ ಉದ್ದೇಶ, ಪ್ರಯೋಜನ ಕೇಳದೆ, ತಿಳಿಯದೆ ಹೊರಗಡೆ ಅಂತರ್ರಾಷ್ಟ್ರೀಯ ಆಚರಣೆಗಳನ್ನು ಅಪ್ಪಿಕೊಂಡೆವು . ನಿಜ, ನಮ್ಮ ಹಿರಿಯರು ಅವರ ಆಚರಣೆಗೆ ಪ್ರಯೋಜನ, ಉದ್ದೇಶಗಳನ್ನು ಬರೆದಿಡಲು ಅಥವಾ ಮುಂದಿನ ಪೀಳಿಗೆಗೆ ಹೇಳಲು ಸೋತರು ಆದ್ರೆ ತಪ್ಪಾಗಿರಲಿಲ್ಲ. ಈಗ ಕೊರೋನ ಎಂಬ ವೈರಸ್‌ ಪ್ರಪಂಚ ನುಂಗಲಾರಂಭಿಸಿದೆ. ಪ್ರಪಂಚ ನಮ್ಮ ಹಿರಿಯರ ಆಚರಣೆ, ಅನುಸರಣೆಗಳನ್ನು ಅಪ್ಪುತ್ತಿವೆ. ಈಗ ಬೇರೆಯವರು ಹಿಂದಿನ ಆಚರಣೆಗಳತ್ತ … Read more

ಬರವಣಿಗೆ: ಭಾರ್ಗವಿ ಜೋಶಿ

ಕಲ್ಪನೆ,  ವಾಸ್ತವ ಯಾವುದೇ ಇರಲಿ ಅದಕ್ಕೆ ಅಕ್ಷರ ರೂಪ ಕೊಡುವುದೇ ಬರಹ. ಮನದ ಗೂಡಲ್ಲಿ ಒಡಮೂಡಿ,  ರೆಕ್ಕೆ ಕಟ್ಟಿ ಹಾರ ಬಯಸುವ ಪ್ರತಿ ಭಾವನೆಗಳು ಒಂದು ಬರಹವೇ.  ಹಾಗಾದರೆ ಯಾರು ಏನಾದರು ಗೀಚಿದರು ಅದು ಬರಹ ಆಗುತ್ತದಾ ಅನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತದೆ.  ನನ್ನ ಅನಿಸಿಕೆ  ಖಂಡಿತವಾಗಿಯೂ ಹೌದು.  ಯಾಕೆಂದರೆ ಬರಹಗಾರರ ಪ್ರೀತಿ,  ಶ್ರದ್ಧೆ ಅಲ್ಲಿ ಅಡಕವಾಗಿರುತ್ತದೆ.  ಎಲ್ಲರು ಒಮ್ಮೆಲೆ ಉತ್ತಮ ಬರಹಗಾರರು,  ಪ್ರಶಸ್ತಿ ವಿಜೇತರು ಆಗಲು ಸಾಧ್ಯವಿಲ್ಲ.  ಎಲ್ಲವು ಅ, ಆ, ಇ, ಈ ಇಂದಲೇ ಆರಂಭವಾಗಬೇಕು.  ಬರಹ … Read more

ವಾಹನದ ವೇಗ ಮತ್ತು ಮಿತಿ: ಗಾಯತ್ರಿ ನಾರಾಯಣ ಅಡಿಗ

‘ಅವಸರವೇ ಅಪಾಯಕ್ಕೆ ಕಾರಣ ‘ ಎಂಬ ಮಾತೊಂದಿದೆ. ಪ್ರತಿಯೊಂದು ವಿಷಯದಲ್ಲಿಯೂ ಈ ಮಾತು ನೂರಕ್ಕೆ ನೂರು ಸತ್ಯ. ಈ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಕನಿಷ್ಠ ಒಂದಾದರೂ ವಾಹನವನ್ನು ಹೊಂದಿರುತ್ತಾರೆ. ಒಂದೆಡೆ ವಾಹನಗಳಿಂದ ನಮಗೆ ಎಷ್ಟು ಅನುಕೂಲಗಳಿವೆಯೋ  ಇನ್ನೊಂದೆಡೆ ಆಷ್ಟೇ ಅನನುಕೂಲಗಳಿವೆ. ಅತಿಯಾದರೆ ಅಮೃತವೂ ವಿಷ ಎಂಬ ಮಾತೊಂದು ಇಲ್ಲಿ ನೆನಪಿಗೆ ಬರುತ್ತದೆ. ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ನಮ್ಮ ವಾಹನದ ವೇಗಕ್ಕೆ ಮಿತಿ ಇಲ್ಲದ ಕಾರಣ ಅಪಘಾತಗಳು ಹೆಚ್ಚು ಸಂಭವಿಸುತ್ತದೆ. ಇಂದಿನ ಯುವಕರಿಗಂತೂ ಇರುವ … Read more

ಆಧ್ಯಾತ್ಮಿಕತೆಯ ಆಧುನಿಕ ನೆಲೆ……: ಪ್ರವೀಣ್.ಪಿ

ಆಧುನಿಕತೆಯ ಸುಳಿಯಲ್ಲಿ ಸಿಲುಕಿರುವ ಇಂದಿನ ಸಮಾಜ ವಿಭಿನ್ನತೆಯೊಂದಿಗೆ ಹೊಸ ಬದುಕಿಗೆ ತೆರದುಕೊಳ್ಳಲು ಹವಣಿಸುತ್ತಿದೆ. ಬದಲಾದ ಸಾಮಾಜಿಕ ವ್ಯವಸ್ಥೆಯಲ್ಲಿ ಹೊಸತನದ ಅಲೆಯೊಂದು ಜನರನ್ನ ಬೇರೆ ದಿಕ್ಕಿಗೆ ಸೆಳೆಯುತ್ತಿದೆ. ಮಾರ್ಡನಿಟಿಗೆ ಮಾರುಹೋದ ಜನರು ತಮ್ಮ ಆಲೋಚನೆ ಹಾಗೂ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಲು ಆರಂಭಿಸಿದ್ದಾರೆ. ಪ್ರೀತಿಯು ಆಧುನಿಕತೆಯ ನೆಲೆಯಲ್ಲಿ ನಡೆಯುತ್ತಿದೆ. ಇದರಲ್ಲಿ ಆಧ್ಯಾತ್ಮಿಕ ಕ್ಷೇತ್ರವು ಹೊರತಾಗಿಲ್ಲ. ಆಧ್ಯಾತ್ಮವು ಇಂದು ಉದ್ಯಮಶೀಲತೆಯ ತಳಹದಿಯಲ್ಲಿ ಸಾಗುತ್ತಿದೆ. ಆಚಾರ, ಸಂಪ್ರದಾಯ, ಪೂಜೆ, ಪುನಸ್ಕಾರ, ಸಂಸ್ಕೃತಿ ಎಲ್ಲವೂ ಆಧುನೀಕರಣದೊಂದಿಗೆ ಬೆರೆತು ಹೋಗಿದೆ. ಇದರ ಪರಿಣಾಮ ಹುಡುಗರಲ್ಲಿ ಬೇರೊಂದು … Read more

ನೆನಪಿನಂಗಳದಲ್ಲಿ ಒಂದು ಪುಟ್ಟ ವಾಕ್: ಭಾರ್ಗವಿ ಜೋಶಿ

ಜೀವನದಲ್ಲಿ ನೆನಪುಗಳು ಅಂದರೇನೇ ಸುಂದರ. ಆ ಕ್ಷಣಕ್ಕೆ ಅತಿಯಾದ ನೋವು ಕೊಟ್ಟ ವಿಷಯಗಳು ಸಹ ಇವತ್ತಿಗೆ ನಗು ತರಿಸುತ್ತವೆ. ಅದಕ್ಕೆ ನೆನಪುಗಳು ಅನ್ನೋದು. ಈ ರೀತಿಯ ನೆನಪುಗಳ ಆಗರವೇ ನಮ್ಮ ಬಾಲ್ಯ. ಆ ಬಾಲ್ಯದ ನೆನಪುಗಳೇ ನಮ್ಮ ಇಂದಿನ ಈ ಬಡಿದಾಟದ ಬದುಕಿಗೆ ಆಕ್ಸಿಜನ್ ಅಂದ್ರೆ ತಪ್ಪಾಗಲಾರದು. ಅಂತಹ ಬಾಲ್ಯದ ನೆನಪಿನಂಗಳದಲ್ಲಿ ಒಂದು ಪುಟ್ಟ ವಾಕ್ ಹೋಗೋಣ.. ಕಳೆದು ಹೋದ ದಿನವೇ ಬಾಲ್ಯ ಮರಳಿ ಬರದ ಬದುಕೇ ಬಾಲ್ಯ ಬಿದ್ದ ಗಾಯವು ಕಲೆಯಾಗಿ ನೋವುಗಳೆಲ್ಲ ನಲಿವಾಗಿ ಮಾಸದ … Read more