ಏಳನೇ ಬಾರಿಗೆ ಕಸ ರವಾನೆ: ಸಂತೋಷ್‌ ಗುಡ್ಡಿಯಂಗಡಿ

ಇತ್ತೀಚಿಗಷ್ಟೆ ಹೆಗ್ಗಡಹಳ್ಳಿಯ ಮಕ್ಕಳ “ನಿಮ್ಮ ಕಸ ನಿಮಗೆ” ಅಭಿಯಾನಕ್ಕೆ ಪ್ರತಿಕ್ರಿಯೆ ನೀಡಿ ಇದೊಂದು ಶ್ಲಾಘನೀಯ ಕೆಲಸ, ನಿಮ್ಮ ಪರಿಸರ ಕಾಳಜಿಯನ್ನು ನಾವು ಮೆಚ್ಚಿಕೊಂಡಿದ್ದೇವೆ, ನಾವೂ ಕೂಡ ಈ ಪರಿಸರವನ್ನು ಉಳಿಸಲು ಮತ್ತು ನಮ್ಮ ಕಂಪೆನಿಯಿಂದ ಈ ಪರಿಸರಕ್ಕೆ ಆಗುವ ಹಾನಿಯನ್ನು ತಪ್ಪಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ ಬೆನ್ನಲ್ಲೆ ಮಕ್ಕಳು ಮತ್ತೆ ಹನ್ನೊಂದು ಕಂಪೆನಿಗಳಿಗೆ ಇಂದು ಕಸ ರವಾನೆ ಮಾಡಿದ್ದಾರೆ. ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢ ಶಾಲಾ ಮಕ್ಕಳು 2019ರ ಏಪ್ರಿಲೆ ತಿಂಗಳಿಂದ ನಿಮ್ಮ ಕಸ ನಿಮಗೆ ಎಂಬ ದೇಶದಲ್ಲೇ … Read more

ಮಂಗಳತ್ತೆಯ ಮಿ ಟೂ ಅಭಿಯಾನ!: ಹುಳಗೋಳ ನಾಗಪತಿ ಹೆಗಡೆ

ಇತ್ತೀಚೆಗೆ ಟಿ.ವಿ. ಚಾನೆಲ್‍ಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಪ್ರಸಾರವಾಗುತ್ತಿರುವ ‘ಮಿ ಟೂ’ ಅಭಿಯಾನ ದೇಶದೆಲ್ಲೆಡೆ ಭಾರೀ ಸಂಚಲನವನ್ನೇ ಸೃಷ್ಟಿಸಿತು. ಕೆಲವರು ರಾಜಕೀಯ ಮುಖಂಡರ ಕೈಗೆ ಕರವಸ್ತ್ರ ಕೊಡಿಸಿದರು; ಮಂತ್ರಿಗಳು ಮನೆಯ ಹಾದಿ ಹಿಡಿಯುವಂತಹ ಕಳವಳಕಾರೀ ಸನ್ನಿವೇಶÀವನ್ನೇ ಸೃಷ್ಟಿಸಿಬಿಟ್ಟರು. ಇನ್ನೂ ಕೆಲವು ಚಲನಚಿತ್ರ ರಂಗದ ಮಹಿಳೆಯರು ಹೆಸರು ಮಾಡಿದ ನಿರ್ದೇಶಕರು, ಸುಪ್ರಸಿದ್ಧ ನಾಯಕ ನಟರನ್ನು ಪಿಶಾಚಿಯಂತೆ ಬೆನ್ನತ್ತಿ ಕಾಡಿದರು. ಅವರು ಇವರ ಮೇಲೆ ಗೂಬೆ ಕೂಡ್ರಿಸಿದರು; ಇವರು ಅವರ ಮುಖಕ್ಕೆ ಮಸಿ ಬಳಿದರು. ಚಾನೆಲ್‍ಗಳಿಗಂತೂ ರೊಟ್ಟಿಯಲ್ಲ, ಹೋಳಿಗೆಯೇ ತುಪ್ಪದಲ್ಲಿ ಜಾರಿಬಿದ್ದಂತಾಗಿತ್ತು. … Read more

ಸಂಗಾತಿ ಬ್ಲಾಗ್‌ ನ ಸಂಪಾದಕರಾದ ಕು.ಸ.ಮಧುಸೂದನರವರ ಒಂದೆರಡು ನುಡಿ

‘ಸಂಗಾತಿ’ ಸಾಹಿತ್ಯದ ಬ್ಲಾಗ್ ಶುರುವಾಗಿ ಕೇವಲ ಎರಡು ತಿಂಗಳು ಮಾತ್ರ ಆಗಿರುವುದರಿಂದ ಈ ಕ್ಷೇತ್ರದಲ್ಲಿ ಹೆಚ್ಚು ಬರೆಯಲು ನಾನು ಅರ್ಹನೆಂದು ಭಾವಿಸಿಲ್ಲ.ಪತ್ರಿಕೋಧ್ಯಮ ನನ್ನ ಕಾಲೇಜು ದಿನಗಳ ಕನಸಾಗಿತ್ತು.ಆದರೆ ನನ್ನ ವೈಯುಕ್ತಿಕ ಬದುಕಿನ ಸಮಸ್ಯೆಗಳಿಂದ ಅನಿವಾರ್ಯವಾಗಿ ಸರಕಾರಿ ನೌಕರಿಗೆ ಸೇರಬೇಕಾಯಿತು. ಆಗೀಗ ಕತೆ ಕವಿತೆಗಳನ್ನು ಬರೆದು ಪತ್ರಿಕೆಗಳಿಗೆ ಕಳಿಸಿ ಕಾಯುವಷ್ಟಕ್ಕೆ ನನ್ನ ಸಾಹಿತ್ಯದ ಆಸಕ್ತಿ ಸೀಮಿತವಾಯಿತು. ನಾಲ್ಕು ವರ್ಷಗಳ ಹಿಂದೆ ಸ್ವಯಂನಿವೃತ್ತಿ ಪಡೆದ ನಂತರ ಪೂರ್ಣಪ್ರಮಾಣದಲ್ಲಿ ಬರವಣಿಗೆಯಲ್ಲಿ ತೊಡಗಿಕೊಂಡು ಒಂದು ಕವನಸಂಕಲನ ಒಂದು ಕಥಾ ಸಂಕಲನ ಎರಡು ರಾಜಕೀಯ … Read more

ಹುಟ್ಟು ಹಬ್ಬದ ಶುಭಾಶಯಗಳು ಪಂಜು: ವರದೇಂದ್ರ ಕೆ.

ಪಂಜು ಸಾಹಿತ್ಯದ ಚಿಲುಮೆ, ಅಂತರ್ಜಾಲದಲ್ಲಿ ಹೆಸರು ಮಾಡಿದಕ್ಕಿಂತಲೂ ಅಂತರಂಗದಲ್ಲಿ ಸದ್ದಿಲ್ಲದೆ ಸೇರಿಕೊಂಡ ಸಿಹಿ ಪನ್ನೀರು. ಸಾಹಿತ್ಯ ರಚಿಸಿ ಮಸ್ತಕದಿಂದ ಪುಸ್ತಕಕ್ಕೆ ಇಳಿಸಿ ಕೂತವರಿಗೆ; ಪುಸ್ತಕದಿಂದ ಓದುಗರ ಮನೆಗೆ ಮನಸಿಗೆ ತಲುಪಿಸುವಂತಹ ಪರಿಪೂರ್ಣ ಕೆಲಸ ಪಂಜುವಿನಿಂದಾಗಿದೆ. ಪಂಜು ಎಂದರೆ ಬೆಳಕು, ಕತ್ತಲಲ್ಲಿದ್ದವರಿಗೆ ಪಂಜುಹಿಡಿದು ಸಾಹಿತ್ಯ ಬೆಳೆಸುವ ದಾರಿತೋರಿಸಿದೆ ನಾಡಿಗೆ ಪರಿಚಯಿಸಿ ಸಾಹಿತ್ಯ ಲೋಕದಲ್ಲಿ ಗುರುತಿಸಿಕೊಳ್ಳಲು ಸಹಾಯವಾಗಿ ನಿಂತಿದೆ. ಯುವ, ಎಲೆ ಮರೆ ಕಾಯಿಯಂತಹ ಸಾಹಿತಿಗಳಿಗೆ ಉತ್ತಮ ವೇದಿಕೆಯಾಗಿ ನಿಂತು ೭ ವಸಂತಗಳನ್ನು ಪೂರೈಸಿದೆ. ಈ ಸಪ್ತ ವರ್ಷದಲ್ಲಿ ಸಾಕಷ್ಟು … Read more

ಒಂಟಿತನ – ಪರಿಣಾಮ – ಮುಕ್ತಿ: ಗೀತಾ ಜಿ.ಹೆಗಡೆ, ಕಲ್ಮನೆ.

ಬದುಕನ್ನು ಒಂಟಿಯಾಗಿ ಎದುರಿಸುತ್ತಿದ್ದೇವಾ? ನಿಜಕ್ಕೂ ನಮಗೆ ಏನು ಬೇಕು ಜೀವಿಸಲು? ಯಾರ ಅಗತ್ಯ ನಮಗೆ ಹೆಚ್ಚು? ಒಂಟಿತನ ಕಾಡುವುದು ಯಾವಾಗ? ಅಥವಾ ಒಂಟಿತನ ಕಾಡಿದಾಗಲೆಲ್ಲ ನಮ್ಮ ಜೊತೆಗಿರುವವರು ಯಾರು ಗಂಡನಾ, ಮಕ್ಕಳಾ, ಸ್ನೇಹಿತರಾ ಬಂಧುಗಳಾ ಅಥವಾ ನೆರೆಹೊರೆಯವರಾ? ಇದರಿಂದ ಹೇಗೆ ಮುಕ್ತಿ ಹೊಂದಬೇಕು? ಇವೆಲ್ಲ ಆಗಾಗ ಕಾಡುವ ಪ್ರಶ್ನೆ. ಇವೆಲ್ಲವೂ ಸತ್ಯವಾಗಿ ಅರಿವಾಗಬೇಕು ಅಂದರೆ ಕೆಲವು ಸಂದರ್ಭದಲ್ಲಿ ಮಾತ್ರ ಸಾಧ್ಯ. ಅದು ಕಷ್ಟ ಕಾಲದಲ್ಲೂ ಅಲ್ಲ ಅಥವಾ ಕಾಯಿಲೆ ಬಿದ್ದು ನರಳುವಾಗಲೂ ಅಲ್ಲ. ಹಾಗಾದರೆ ಇನ್ಯಾವಾಗ? ; … Read more

“ಅಪ್ಪನಿಲ್ಲದ ಈ ಮೂರು ವರ್ಷದ ನಂತರ….. . . . . .”: ಧನರಾಜ್ ಪಾತ್ರೆ

ನಾನು ನೋಡಿದ ಮೊದಲ ವೀರ. ಬಾಳು ಕಲಿಸಿದ ಸಲಹೆಗಾರ ಬೆರಗು ಮೂಡಿಸುವ ಜಾದೂಗಾರ ಅಪ್ಪ, ಹಾಡು ಕೇಳಿದಾಗೆಲ್ಲಾ.. ಅಪ್ಪ ಕಣ್ಣೆದುರು ನಿಲ್ಲುತ್ತಾರೆ. ಸಾಲುಗಳು ಮಾತ್ರ ಒಂದು ಕುಟುಂಬದಲ್ಲಿ ತಂದೆಯ ಪಾತ್ರ ಪ್ರತಿಬಿಂಬಿಸುತ್ತದೆ. ನನ್ನ ತಂದೆಗೆ “ಬಾಬಾ” ಎಂತಲೇ ಕರೀತಿದ್ದೆ ನನ್ನ ಇಬ್ಬರು ಅಣ್ಣಂದಿರು (ಜಗನ್ನಾಥ, ದಶರಥ) “ದಾದಾ” ಅಂತ ಕರೀತಿದ್ದರು. ನನ್ನ ತಂದೆ ತಾಯಿ ಹೊಟ್ಟೆ ಪಾಡಿಗಾಗಿ ಕೂಲಿ ಹುಡುಕಿಕೊಂಡು ಸತಾರಕ್ಕೆ (ಮಹಾರಷ್ಟ್ರ) ಹೋದಾಗ ಅಲ್ಲಿ ನನ್ನ ಇಬ್ಬರು ಅಣ್ಣಂದಿರು ಹುಟ್ಟಿದ್ದು ಮಾಹಾರಾಷ್ಟ್ರದಲ್ಲಿ ತಂದೆಗೆ ದಾದಾ ಅಂತಾ … Read more

ಪಂಜುಗೆ ಶುಭಹಾರೈಕೆಗಳು: ಗಿರಿಜಾ ಜ್ಞಾನಸುಂದರ್

ಅದೊಂದು ದಿನ ಒಂದು ಕಾರ್ಯಕ್ರಮದಲ್ಲಿ ಬಹಳಷ್ಟು ಗಣ್ಯರನ್ನು ಭೇಟಿಮಾಡುವ ಸದವಕಾಶ ಸಿಕ್ಕಿತ್ತು ನನಗೆ. ತಮ್ಮ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಮಾಡಿದ್ದವರು. ಅವರ ಒಡನಾಟವೇ ಒಂದು ಆನಂದ. ನನ್ನ ಗುರುಗಳಾದ ಉದಯ ಶಂಕರ್ ಪುರಾಣಿಕ್ ರವರು, ಅವರ ಸಹೃದಯೀ ಸ್ನೇಹಿತರು, ಪಂಜು ಪತ್ರಿಕೆಯ ಸಂಪಾದಕರಾದ ನಟರಾಜ್ ಸೀಗೇಕೋಟೆಯವರು ಎಲ್ಲರನ್ನು ಭೇಟಿಯಾದ ಸಮಯ. ನಟರಾಜುರವರು ಮಾತನಾಡುತ್ತ “ನೀವೇಕೆ ಬರೆಯಬಾರದು?” ಎಂದರು. ಅಲ್ಲಿಯವರೆಗೂ ಅದರ ಬಗ್ಗೆ ಯೋಚನೆಯನ್ನು ಮಾಡದ ನನಗೆ ಅದು ಒಂದು ತಮಾಷೆ ಎನ್ನಿಸಿತು. ಕೇವಲ ಸಾಹಿತ್ಯವನ್ನು ಓದಲು ತಿಳಿದಿದ್ದ ನನಗೆ … Read more

ಆದರ್ಶ ಶಿಕ್ಷಕ, ವಿರಳ ಯುವ ಬರಹಗಾರ ವೈ. ಬಿ. ಕಡಕೋಳ: ಡಾ. ವ್ಹಿ. ಬಿ. ಸಣ್ಣಸಕ್ಕರಗೌಡರ

ಇದೇ ಜನೇವರಿ 21 ರಂದು ಹಾರೂಗೇರಿಯ ಅಜೂರ ಪ್ರತಿಷ್ಠಾನದವರು ಕೊಡಮಾಡುವ ಜಿಲ್ಲಾ ಮಟ್ಟದ ಸಾಹಿತ್ಯ ಕೃತಿಗೆ ವೈ. ಬಿ. ಕಡಕೋಳರ ಪಯಣಿಗ ಕೃತಿ ಆಯ್ಕೆಯಾಗಿದೆ. ಅಷ್ಟೇ ಅಲ್ಲ ಸೇಡಂ ತಾಲೂಕಿನ ಮೇದಕ ಗ್ರಾಮದ ಚನ್ನಕೇಶ್ವರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ(ರಿ) ವತಿಯಿಂದ ಶ್ರೀ ಚನ್ನಕೇಶ್ವರ ಉತ್ಸವದ ಅಂಗವಾಗಿ ಪೆಬ್ರುವರಿ 1 ರಂದು ಜರಗುವ ಮಾತೋಶ್ರೀ ನಾಗಮ್ಮ ಆಶಪ್ಪ ಬೊಪ್ಪಾಲ್ ಸ್ಮರಣಾರ್ಥ ಕೊಡಮಾಡುವ ರಾಜ್ಯಮಟ್ಟದ 15ನೇ ವರ್ಷದ ಅಕ್ಷರ ಲೋಕದ ನಕ್ಷತ್ರ ಪ್ರಶಸ್ತಿಗೆ ವೈ. ಬಿ. ಕಡಕೋಳರ … Read more

ಸೃಷ್ಟಿಯೆಂದರೆ ಸ್ತ್ರೀ ತಾನೆ….: ಸಿಂಧು ಭಾರ್ಗವ್. ಬೆಂಗಳೂರು

ಹೆಣ್ಣಿನ ವಿವಿಧ ರೂಪಗಳನ್ನು ನಾವು ಕಾಣಬಹುದು. ಅದರಲ್ಲಿ ತಾಯಿಗೆ ಮೊದಲ ಸ್ಥಾನ . ಕಾರಣ ಅವಳೇ ಜನನಿ. ಹಡೆದವ್ವ. ಅವಳು ಒಂದು ಮಗುವನ್ನು ಹೆತ್ತು ಈ ಜಗತ್ತಿಗೆ ಪರಿಚಯಿಸಿದರೆ ಮಾತ್ರವೇ ನಾವು ಲೋಕ ನೋಡಬಹುದು. ನಂತರ ಅಕ್ಕ, ತಂಗಿ, ಅತ್ತೆ, ಚಿಕ್ಕಮ್ಮ, ದೊಡ್ಡಮ್ಮ, ಅಜ್ಜಿ, ಮಡದಿ, ಮಗಳು, ಗೆಳತಿ. ಆದರೆ ಹೆಣ್ಣನ್ನು ಪ್ರತಿಯೊಬ್ಬರೂ ತಾಯಿಯಾಗಿ ನೋಡುತ್ತಾರೆಯೇ? ತಮ್ಮ ಮನೆಯ ಅಕ್ಕನೋ ಇಲ್ಲವೇ ತಂಗಿಯಂತೆ ಸ್ವೀಕರಿಸುತ್ತಾರೆಯೇ? ಅವಳಿಗೆ ಗೌರವದ ಸ್ಥಾನ ನೀಡಲಾಗುತ್ತಿದೆಯೇ? ಮೋಹ, ಮೋಸ, ಕಾಮ, ಕಾಸಿನ ವ್ಯಾಮೋಹ, … Read more

ಮಹಿಳೆಯರ ಅಭ್ಯುದಯಕ್ಕಾಗಿ ದುಡಿದ ಅಕ್ಷರ ಮಾತೆ ಸಾವಿತ್ರಿ ಬಾಯಿ ಫುಲೆ: ಆದಿತ್ಯಾ ಮೈಸೂರು

ಭಾರತವು ಅಂದು ಸಾಮಾಜಿಕ ಅನಿಷ್ಟ ಪದ್ಧತಿಗಳಾದ ಅಸಮಾನತೆ, ಲಿಂಗ ತಾರತಮ್ಯ, ಸತಿ ಸಹಗಮನ, ಬಾಲ್ಯ ವಿವಾಹ ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಇನ್ನೂ ಮುಂತಾದ ಮೌಢ್ಯತೆ, ಕಂದಾಚಾರಗಳ ಬಿತ್ತುವ ಆಗರವಾಗಿತ್ತು. ಅಂದಿನ ಸಮಾಜ ಶೂದ್ರ ಅತಿಶೂದ್ರ ಮತ್ತು ಮಹಿಳೆಯರನ್ನು ನಿಕೃಷ್ಟವಾಗಿ ಕಾಣುತ್ತಿದ್ದ ಕಾಲವದು. ವರ್ಣಾಶ್ರಮದ ನೆಲೆಗಟ್ಟಿನಲ್ಲೆ ನಿಂತಿದ್ದವು. ಮೇಲ್ವರ್ಗದವರೆ ಸರ್ವಶ್ರೇಷ್ಠರೆನಿಸಿಕೊಂಡಿದ್ದರು. ಶಿಕ್ಷಣವೆಂಬುದು ಅವರಿಗೆ ಮಾತ್ರ ಸೀಮಿತವಾಗಿತ್ತು. ಶೂದ್ರರು ಅದರಿಂದ ದೂರವೇ ಉಳಿಯಬೇಕಾಗಿತ್ತು ಇದಕ್ಕೆ ಅರ್ಹರಾಗಿರಲಿಲ್ಲ. ಇನ್ನೂ ಮಹಿಳೆಯರ ಶಿಕ್ಷಣವೆಲ್ಲಿ ? ಧರ್ಮದ ಹೆಸರಿನಲ್ಲಿ ಇವರ ಶಿಕ್ಷಣವನ್ನು ಮೊಟಕುಗೊಳಿಸಲಾಗಿತ್ತು. ಮನುಸ್ಮೃತಿಯಲ್ಲಿ … Read more

ಝಕೀರ್ ನದಾಫ್ ಗೆ ರಂಗ ಪ್ರಶಸ್ತಿ: ವೈ. ಬಿ. ಕಡಕೋಳ

ಇತ್ತೀಚಿಗಷ್ಟೇ ರಂಗ ಸಾಹಿತ್ಯಕ್ಕಾಗಿ ಸವದತ್ತಿ ತಾಲೂಕಿನ ಹೂಲಿ ಶೇಖರ್ ಅವರಿಗೆ ಪ್ರಶಸ್ತಿ ಗೌರವವನ್ನು ರಾಜ್ಯೋತ್ಸವ ಸಂಭ್ರಮದಲ್ಲಿ ನೀಡಿರುವ ಬೆನ್ನಲ್ಲೇ ಹೊಸ ವರ್ಷದ ಮೊದಲ ವಾರ ಮತ್ತೊಂದು ಪ್ರತಿಭೆ ಝಕೀರ್ ನದಾಫ್ ರಿಗೆ ರಂಗ ಪ್ರಶಸ್ತಿ ಪ್ರಕಟವಾಗಿರುವುದು ಸವದತ್ತಿ ತಾಲೂಕಿನ ಹೆಮ್ಮೆ. ಏಣಗಿ ಬಾಳಪ್ಪನವರ ಮೂಲಕ ತಾಲೂಕು ತನ್ನದೇ ವಿಶೇಷತೆಯನ್ನು ರಂಗಪರಂಪರೆಯಲ್ಲಿ ಬೆಳಗಿದೆ. ಇಂತಹ ತಾಲೂಕಿನ ಹೂಲಿ ಶೇಖರ್ ಹುಟ್ಟೂರು ಹೂಲಿಯಾದರೆ ರಂಗ ಚಟುವಟಿಕೆಗಳಿಗೆ ಕರ್ಮ ಭೂಮಿಯಾಗಿದ್ದು ಉತ್ತರ ಕನ್ನಡ. ಬೆಂಗಳೂರು. ಆದರೆ ಏಣಗಿ ಬಾಳಪ್ಪನವರು ಸವದತ್ತಿ ತಾಲೂಕಿನಿಂದಲೇ … Read more

ಮಕ್ಕಳ ಆರೈಕೆ ಹೆತ್ತವರಿಗೊಂದು ಸವಾಲೇ ಸರಿ: ಸಿಂಧು ಭಾರ್ಗವ್

ಒಂದೇ ಬಳ್ಳಿಯ ಎರಡು ಸುಮಗಳ ನೋಡಲು ಎಲ್ಲರಿಗೂ ಇಷ್ಟ. ಅಂದರೆ ದಂಪತಿಗಳಿಗೆ ಮುದ್ದು ಮುದ್ದಾದ ಎರಡು ಮಕ್ಕಳು ಮನೆ ತುಂಬಾ ಓಡಾಡಿಕೊಂಡಿದ್ದರೆ ನೋಡಲು ಬಲುಸೊಗಸು. ಕೆಲವರು ಉದ್ಯೋಗ,ಬಡ್ತಿ ಮೇಲೆ ಬಡ್ತಿ ,ಲಕ್ಷ ಲಕ್ಷ ಸಂಬಳ , ಆಸ್ತಿ ಮಾಡಿಕೊಳ್ಳುವುದು ಎಂಬ ಆಸೆಯ ಪಾಶಕ್ಕೆ ಸಿಲುಕಿ ಒಂದು ಮಗುವನ್ನು ಹೆರಲು ಕೂಡ ಮನಸ್ಸು ಮಾಡುವುದಿಲ್ಲ. ಇನ್ನೂ ಕೆಲವರು “ಅಯ್ಯೋ.. ಈಗಿನ ಖರ್ಚು ದುಬಾರಿ ಜೀವನಕ್ಕೆ ಒಂದೇ ಮಗು ಸಾಕಪ್ಪ… ಎರಡೆರಡು ಮಕ್ಕಳನ್ನು ಯಾರು ನೋಡಿಕೊಳ್ತಾರೆ…”ಎಂದು ರಾಗ ಎಳೆಯುತ್ತಾರೆ. ಒಂದು … Read more

ಜಿಪುಣಾಗ್ರೇಸರರು: ವೈ. ಬಿ. ಕಡಕೋಳ

ದೈನಂದಿನ ಬದುಕಿನಲ್ಲಿ ಜಿಪುಣತನ ಇರಕೂಡದು. ಹಾಗೆ ಇದ್ದರೆ ಅಂತಹ ವ್ಯಕ್ತಿಗಳು ಯಾರಿಗೂ ಹೊಂದಿಕೊಳ್ಳಲಾರರು. ಅಂತವರನ್ನು ಯಾರೂ ಕೂಡ ಇಷ್ಟ ಪಡಲಾರರು. ಕಾಗೆ ಒಂದಗುಳ ಕಂಡರೆ ಕರೆಯುವುದು ತನ್ನ ಬಳಗವನ್ನು ಕಾಕಾ ಎಂದು. ಎಂಬ ಮಹತ್ವವನ್ನು ಪಕ್ಷಿ ಪ್ರಾಣಿಗಳಿಂದ ಕಲಿಯುವ ನಾವು ಕನಿಷ್ಟರಾಗಿ ಬದುಕುವುದು ತರವೇ. ? ಒಂದು ಸಲ ಯೋಚಿಸಿ. ಒಂದು ಸಲ ಒಬ್ಬ ವ್ಯಕ್ತಿ ಮರಭೂಮಿಯಲ್ಲಿ ತನ್ನ ನಾಯಿಯೊಂದಿಗೆ ಪ್ರವಾಸ ಆರಂಭಿಸಿದ್ದ. ಬೇಸಿಗೆ ಕಾಲ ಬೇರೆ ಅಂತಹ ಸ್ಥಳದಲ್ಲಿ ನೀರನ ಕೊರತೆ ಇತ್ತು. ಆತ ತನ್ನ … Read more

ಕಣ್ಮರೆಯಾದ ಗೆಳತಿಯರು: ಸಿಂಧು ಭಾರ್ಗವ್.

ಕಾಲೇಜು ದಿನಗಳಲ್ಲಿ ಲವಲವಿಕೆಯಿಂದ ತುಂಟತನ ತರಲೆ ಮಾಡಿಕೊಂಡು ದಿನಕಳೆಯುತ್ತಿದ್ದ ನಾವು ಎಷ್ಟು ಸಂತೋಷದಿಂದ ಇರುತ್ತಿದ್ದೆವು. ಓದು , ಆಟದ ಜೊತೆಗೆ ಜಗಳ, ಗಲಾಟೆ, ಮುಷ್ಕರ, ಪ್ರೀತಿ-ಪ್ರೇಮ ಸಂತೆ ಎಲ್ಲವನ್ನೂ ಅಲ್ಲಿ ಇಲ್ಲಿ ನೋಡಿ, “ನಾವೆಲ್ಲ ಹಾಗಿಲ್ಲಪ್ಪ…” ನಮ್ಮದು “ಓನ್ಲೀ ಫ್ರೆಂಡ್ ಶಿಪ್ ” ಓದು, ಮನೆ… ಅಷ್ಟೇ ಎಂದು ಎಂಜಾಯ್ ಮಾಡುತ್ತಿದ್ದೆವು. ರಕ್ತ ಸಂಬಂಧಗಳ ಮೀರಿದ ಬಂಧವಿದು ಎಂದು ಹಾಡು ಹೇಳುತ್ತ ಖುಷಿ-ಖುಷಿಯಾಗಿದ್ದೆವು. ಆಮೇಲೆ? ಮುಂದೇನು? ಕಾಲೇಜು ಜೀವನದ ಕೊನೆಯ ವರುಷ ಎರಡು ಸೆಮಿಸ್ಟರ್, ಪ್ರೊಜೆಕ್ಟ್ ಮಾಡಿ … Read more

ಹೃದಯ ಸ್ಪರ್ಶಿ ಬರಹಗಳಿಂದ ಮಾತ್ರ ಸುಂದರವಾದ ಸಮತಾ ಸಮಾಜ ನಿರ್ಮಾಣ: ಈಶ್ವರ ಚ ಮಗದುಮ್ಮ

ಹೌದು! ಎಷ್ಟೋಬಾರಿ ಆತನ ಬಗ್ಗೆ ಬರೆದಿದ್ದೇನೆ. ಆದರೂ ಮತ್ತೇ ಮತ್ತೇ ಅವನ ವ್ಯಕ್ತಿತ್ವದ ಕುರಿತು ಬರೆಯಬೇಕೆನಿಸುತ್ತದೆ. ಅವನ ಬಗ್ಗೆ ಎಷ್ಟು ಬರೆದರೂ ಕಮ್ಮಿ ಅನಿಸಲು ಕಾರಣವೂ ಇದೆ. ಅವನ ಮತ್ತು ನನ್ನ ಸ್ನೇಹ-ಒಡನಾಟ ಹಾಗೇ ಇದೆ. ನಮ್ಮಿಬ್ಬರ ನಡುವೆ ಕೇವಲ ಸ್ನೇಹವಿದ್ದರೆ ಬಹುಶಃ ನಾನು ಅವನ ಕುರಿತು ಪದೆ ಪದೆ ಬರೆಯುತ್ತಿರಲಿಲ್ಲವೇನೋ? ಆದರೂ ಸ್ನೇಹಕ್ಕೂ ಮೀರಿದ ಅದ್ಯಾವುದೋ ಒಂದು ಶಕ್ತಿ ನಮ್ಮನ್ನು ಬೆಸೆದಿದೆ ಎನಿಸಿತ್ತದೆ. ಅದ್ಯಾವದೋ ಒಂದು ತಂತು ನಮ್ಮ ಮನಗಳಲ್ಲಿ ಸಮಾನವಾಗಿ ಮಿಡಿಯುತ್ತಿದೆ ಅನಿಸುತ್ತದೆ. ಅದಕ್ಕಾಗಿಯೇ … Read more

ಕೌಟುಂಬಿಕ ಮೌಲ್ಯ ಮತ್ತು ವಿಶ್ವಭ್ರಾತೃತ್ವ: ಡಿ. ಪಿ. ಭಟ್, ಪುತ್ತೂರು.

ಅನೇಕ ತೀರ್ಥ ಕ್ಷೇತ್ರಗಳನ್ನು, ಹಲವು ಪರಿಶುದ್ಧ ಪಾವಿತ್ರ್ಯತೆಯಿಂದ ಕೂಡಿದ ಕಲ್ಯಾಣಿಗಳನ್ನು, ಮಠ ಮಂದಿರಗಳನ್ನು, ವಿದ್ಯಾ ದೇಗುಲಗಳನ್ನು ಸೇರಿದಂತೆ ಹಿಮಾಲಯದಿಂದ ಕನ್ಯಾಕುಮಾರಿಯವರೆಗೆ ಒಳಗೊಂಡಿರುವ ಹಲವು ಪ್ರಕೃತಿ ವಿಸ್ಮಯಾತ್ಮಕ ರಮಣೀಯ ಸ್ಥಳಗಳ ಮೂಲಕ ಪ್ರವಹಿಸುತ್ತಿರುವ ಆಧ್ಯಾತ್ಮಿಕತೆಯ ಅಭಿವ್ಯಕ್ತಿಯಿಂದ ನಮ್ಮ ಭಾರತವು ಕಂಗೊಳಿಸುತ್ತಿದೆ. ಪರಮೋತ್ಕಟ ಭಕ್ತಿಭಾವೋನ್ಮಾದಸ್ನಾತರಾದ ರಾಮ, ಸೀತಾ, ಕೃಷ್ಣ,  ಶಂಕರರು, ರಾಮಾನುಜರು, ಮಾಧ್ವರು, ಶೀರಾಮಕೃಷ್ಣರು, ಶ್ರೀಮಾತೆ ಶಾರದಾದೇವಿ, ಸ್ವಾಮೀ ವಿವೇಕಾನಂದರಂತಹ ಭಗವದ್ ಸತ್ಪುರುಷರು, ಸಂತರು, ಶರಣರು, ದಾರ್ಶನಿಕರು ಓಡಾಡಿದ ದೇಶವಿದು. ಆಧ್ಯಾತ್ಮಿಕ ಶಕ್ತಿಯ ಪ್ರಬಲತೆಯಿಂದ ಕೂಡಿದ ಭರತ ಭೂಮಿಯಲ್ಲಿಂದು ಕೊಲೆ, … Read more

ಮರೆಯಾಗದಿರಲಿ ನೋವು ಮರೆಸುವ ನಗು!: ಜಯಶ್ರೀ.ಜೆ. ಅಬ್ಬಿಗೇರಿ

ಬಹುತೇಕ ನಮ್ಮೆಲ್ಲರ ಇತ್ತೀಚಿನ ದೈನಂದಿನ ಜೀವನ ಒತ್ತಡದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದೆ. ಒತ್ತಡ ಹಾಗೂ ಬದ್ಧತೆಗಳ ಆರ್ಭಟಕ್ಕೆ ಮಣದಿರುವ ನಾವು ಅಕ್ಷರಶಃ ನಗುವುದನ್ನೇ ಮರೆತಿದ್ದೇವೆ. ಅಲ್ಲೊಮ್ಮೆ ಇಲ್ಲೊಮ್ಮೆ ಆಗೊಮ್ಮೆ ಈಗೊಮ್ಮೆ ನಕ್ಕರೂ ಅದು ಗೊಂಬೆ ನಗುವಿನಂತಿರುತ್ತದೆ. ಹೃದಯ ತುಂಬಿದ ನಗು ಅದೆಲ್ಲಿ ಮಾಯವಾಗಿದೆಯೋ ಹುಡುಕ ಬೇಕಿದೆ. ಕಿವಿಯಿಂದ ಕಿವಿಯವರೆಗಿನ ನಗು ಮರೆತು ಅದೆಷ್ಟೋ ವರ್ಷಗಳು ಕಳೆದವು ಅನಿಸುತ್ತಿದೆ ಅಲ್ಲವೇ? ನಗು ಮಾನವನ ಸಹಜ ಪ್ರಕ್ರಿಯೆ ಅದನ್ನೇ ಮರೆತು ಬಾಳುತ್ತಿರುವುದು ನಿಜಕ್ಕೂ ಖೇದಕರ ಸಂಗತಿಯೇ ಸರಿ. ಒಂದು ಅಧ್ಯಯನದ … Read more

ಇತಿ ತಮ್ಮ ವಿಶ್ವಾಸಿ: ಪ್ರಣವ್ ಜೋಗಿ

ಬಹುಶಃ ಶಾಲೆಯ ದಿನಗಳು ಇರಬೇಕು. ಯಾವುದೋ ಒಂದು ಪರೀಕ್ಷೆಯಲ್ಲಿ ಬರೆದ ಪತ್ರ. ಅದೇ ಕೊನೆಯ ಪತ್ರವಾಗಲಿದೆ ಎಂಬ ಸುಳಿವು ಆಗಲೇ ದೊರೆತ್ತಿದ್ದಿದ್ದರೆ, ಇನ್ನೂ ಒಂದಷ್ಟು ಸಾಲುಗಳನ್ನು ಬರೆದು ಬಿಡುತ್ತಿದ್ದೆ. ಆ ನಂತರ ಎಂದೂ ಪತ್ರ ಬರೆಯಲೇ ಇಲ್ಲ. ಕ್ಷಣ ಮಾತ್ರದಲ್ಲಿ ಸಂದೇಶ ತಲುಪುವ ತಂತ್ರಜ್ಞಾನ ಇರುವಾಗ, ಪತ್ರವೇಕೆ ಬರೆಯಬೇಕು ಎಂಬ ಆಲೋಚನೆ ಇದರ ರೂವಾರಿ. ದುರಂತರವೆಂದರೆ, ಮುಂಚೆ ಬರೆದ ಪತ್ರಗಳೂ ಕೂಡ ಪರೀಕ್ಷೆಗಳಲ್ಲೇ. ನಿಜ ಜೀವನದಲ್ಲಿ, ದೂರದ ಸಂಬಂಧಿಕರೊಬ್ಬರಿಗೆ ಒಂದೆರಡು ಬಾರಿ ಪತ್ರ ಬರೆದಿರಬಹುದಷ್ಟೇ. ಇಂದಿನ ಕಾಲದಲ್ಲಿ … Read more

ಸಂ-ಜನ: ಹೆಚ್. ಷೌಕತ್ ಆಲಿ, ಮದ್ದೂರು

ಒಂದು ತಾಲ್ಲೋಕಿನಿಂದ ಮತ್ತೊಂದು ತಾಲ್ಲೋಕಿನ ಒಂದು ಕಾಲೇಜಿನಲ್ಲಿ ನಾನು ಉಪನ್ಯಾಸಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನಾ ಕೆ ಎಸ್ ಆರ್ ಟಿ ಸಿ ಬಸ್ನಲ್ಲಿ ಹೋಗಿ ಬರುವುದು ಮಾಮೂಲಿಯಾಗಿತ್ತು. ಸಮಯಕ್ಕೆ ಅರ್ಧಘಂಟೆ ಮುಂಚೆ ನಾನು ಬಸ್ಸ್ಟ್ಯಾಂಡ್ ನಿಂದ ಇಳಿದು ಕಾಲೇಜಿಗೆ ನಡೆದುಕೊಂಡೆ ಹೋಗುತ್ತಿದ್ದೆ. ನನ್ನ ಕೈಯಲ್ಲಿ ಟೀಫಿನ್ ಬಾಕ್ಸ್, ವಾಟರ್ ಬಾಟಲ್ ಅವುಗಳನ್ನು ಹೊತ್ತಿರೋ ಒಂದು ಬ್ಯಾಗ್ ಆ ಬ್ಯಾಗ್ ನನ್ನ ಕೈಯಲ್ಲಿ. ಆ ಬ್ಯಾಗ್ ಹಿಡಿದುಕೊಂಡು ನಾನು ಕಾಲೇಜಿಗೆ ಬರುವಾಗ, ಹೋಗುವಾಗ ನನ್ನ ವಾಕಿಂಗ್ ಸ್ಟೈಲ್ … Read more

ಹೋರಾಟದ ಹೆಜ್ಜೆ ಮೂಡಿಸಿ ಮರೆಯಾದ ಮಿತ್ರ ಈಶ್ವರ ಮಗದುಮ್: ಅಶ್ಫಾಕ್ ಪೀರಜಾದೆ

ಈಗ ಬರೆಯುತ್ತಿರುವ ಒಂದೊಂದು ಅಕ್ಷರಕೂಡ ನೇರವಾಗಿ ನನ್ನ ಹೃದಯದಿಂದ ತೊಟ್ಟಿಕುತ್ತಿರುವಂತೆ ಭಾಸವಾಗುತ್ತಲಿದೆ. ಅಂತಿಮವಾಗಿ ಅವನ ಮುಖದರ್ಶನ ಮಾಡಿಕೊಂಡು ಬಂದಾಗಿನಿಂದಲೂ ಮನಸ್ಸಿಗೆ ಸೊಗಸೇ ಇಲ್ಲದಂತಾಗಿದೆ. ಏನೋ ಕಳೆದುಕೊಂಡಿದ್ದು ಅಲ್ಲ ಎಲ್ಲವನ್ನು ಕಳೆದುಕೊಂಡಂತೆ ಹೃದಯ ತಬ್ಬಲಿಯಾಗಿ ಆಕ್ರಂದಿಸುತ್ತಲಿದೆ. ಜೀವ ಸಮಾಧನವಿಲ್ಲದೆ ಒದ್ದಾಡುತ್ತಿದೆ. ನನ್ನೊಳಗಿನ ತಬ್ಬಲಿತನದ ಭಾವನೆ ಶಬ್ಧಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ ಅನಿಸುತ್ತಲಿದೆ. ಅಣ್ಣ ಸಯಿದ ಮತ್ತು ಸ್ನೇಹಿತ ವಿಠ್ಠಲ ಕರೆ ಮಾಡಿ ನಮ್ಮ ಈಶ್ವರ ಇನಿಲ್ಲವೆಂದಾಗ ಒಂದು ಕ್ಷಣ ನನ್ನ ಕಾಲ ಕೆಳಗಿನ ಭೂಮಿಯೇ ಬಾಯ್ದೆರೆದು ನುಂಗಿದಂತೆ ಭಾಸವಾಯಿತು ನನಗೆ. … Read more

ನಡುವೆ ಬಂದವರು: ಸಿಂಧು ಭಾರ್ಗವ್

ರೋಶನಿ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿ. ವಯಸ್ಸು 35 ವರ್ಷವಿರಬಹುದು. ಮದುವೆಯಾಗಿ ಒಂದು ಮಗು ಇರುವ ಸಂಸಾರಸ್ಥೆ. ಹೀಗಿರುವಾಗ ರೋಹಿತ್ ಎಂಬ ಹೊಸ ಸಹೋದ್ಯೋಗಿಯ ಪರಿಚಯವಾಗಿ ಸ್ನೇಹ ಬೆಳೆದು ಪ್ರೀತಿಯ ನಾಮಕರಣ ಮಾಡಿದ್ದಳು. ಅವನೋ ಇನ್ನೂ ಯುವಕ. 23 ವರ್ಷ ವಯಸ್ಸಿರಬಹುದು. ನೋಡಲು ಸುರದ್ರೂಪಿ. ಉತ್ಸಾಹಿ ಕೆಲಸಗಾರ. ಅನುದಿನವೂ ಅವಳ ಜೊತೆ ಹರಟುವುದು, ಅವಳ ಸೌಂದರ್ಯವನ್ನು ಹೊಗಳುವುದು, ವೃತ್ತಿ ನಿಷ್ಠೆಯನ್ನು ಹೊಗಳುವುದು ಅವನ ದಿನಚರಿಯಾಗಿತ್ತು. ಹೆಣ್ಮಕ್ಕಳಿಗೆ ಸ್ವಲ್ಪ ಹೊಗಳಿದರೂ ಕರಗಿ ಹೋಗುವುದು ಅವರ ಮನೋ ದೌರ್ಬಲ್ಯ … Read more

ಇಹದ ದುರ್ಗಂಧ- ಪರದ ಪರಿಮಳ: ಡಾ. ಹೆಚ್ ಎನ್ ಮಂಜುರಾಜ್

(ಹರಿದಾಸ ಪ್ರಸಿದ್ಧ ಶ್ರೀಪಾದರಾಜರ ಎರಡು ಕೀರ್ತನ ರಚನೆಗಳ ವಿಶ್ಲೇಷಣೆ) ರಚನೆ : ಶ್ರೀ ಶ್ರೀಪಾದರಾಜರು ಮರುದಂಶರ ಮತ ಪಿಡಿಯದೆ ಇಹ -ಪರದಲ್ಲಿ ಸುಖವಿಲ್ಲವಂತೆ || ಪ || ಅರಿತು ವಿವೇಕದಿ ಮರೆಯದೆ ನಮ್ಮಗುರುರಾಯರ ನಂಬಿ ಬದುಕಿರೋ || ಅ.ಪ.|| ಕ್ಷೀರವ ಕರೆದಿಟ್ಟ ಮಾತ್ರದಿ ಸಂಸ್ಕಾರವಿಲ್ಲದೆ ಘೃತವಾಗದಂತೆ ಸೂರಿಜನರ ಸಂಗವಿಲ್ಲದೆ ಸಾರವೈರಾಗ್ಯ ಭಾಗ್ಯ ಪುಟ್ಟದಂತೆ || ೧ || ಉಪದೇಶವಿಲ್ಲದ ಮಂತ್ರ ಏಸುಜಪಿಸಲು ಫಲಗಳ ಕೊಡದಂತೆ ಉಪವಾಸ ವ್ರತಗಳಿಲ್ಲದೆ ಜೀವತಪಸಿಯೆನಿಸಿಕೊಳ್ಳಲರಿಯನಂತೆ || ೨ || ಸಾರಮಧ್ವಶಾಸ್ತ್ರವೋದದೆ ಗುರುತಾರತಮ್ಯ ಜ್ಞಾನ … Read more

ಪರಿಸರದ ಮೇಲೆ ಮಾನವ ಹಲ್ಲೆ ನಿಲ್ಲುವುದು ಯಾವಾಗ?: ನರಸಿಂಹ ಮೂರ್ತಿ ಎಂ. ಎಲ್.

ನಾವು ಪ್ರತಿದಿನ ಪತ್ರಿಕೆಗಳಲ್ಲಿ ಓದುವಾಗ ದೇಶ ರಾಜಧಾನಿಯು ವಾಯುಮಾಲಿನ್ಯದ ಹೊಡೆತಕ್ಕೆ ತತ್ತರಿಸುತ್ತಿರುವ ಬಗೆಯನ್ನು ಗಮನಿಸುತ್ತಿರಬಹುದು. ಶುದ್ಧಗಾಳಿಯನ್ನು ಖರೀದಿಸಿ ಉಸಿರಾಡುವ ಪರಿಸ್ಥಿತಿಗೆ ಈ ದೇಶವು ಬಂದು ತಲುಪಿದೆ ಎಂದರೆ ಮುಂದಿನ ದಿನಗಳಲ್ಲಿ ಜೀವ ಜಗತ್ತಿನ ಉಳಿವಿನ ಬಗ್ಗೆಯೇ ಸಂಶಯ ಮೂಡುತ್ತದೆ. ತಾಲ್ಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಡಪ್ಪಲ್ಲಿ, ಹೊನ್ನಂಪಲ್ಲಿ, ಮದಕವಾರಪಲ್ಲಿ ಸೇರಿದಂತೆ ಹತ್ತಾರು ಹಳ್ಳಿಗಳಿಗೆ ಆಶ್ರಯ ತಾಣವಾಗಿದ್ದ ಕೊರ್ಲಗುಡ್ಡಂ ಬೆಟ್ಟವನ್ನು ಅಕ್ರಮ ಕಲ್ಲು ಗಣಿಗಾರುಕೆಯವರು ನಾಶ ಮಾಡುತ್ತಿದ್ದಾರೆ. ಇದರ ಪರಿಣಾಮ ಬೃಹತ್ ಕಲ್ಲುಬಂಡೆಗಳು ರೈತರ ಜಮೀನುಗಳಿಗೆ ಉರುಳುತ್ತಿವೆ. … Read more

ಕಲೆಗೆ ರಾಜಕೀಯ ರಂಗು, ರಾಜಕೀಯಕ್ಕೆ ಕಲಾವಿದರ ಪ್ರವೇಶ ಸರಿಯೇ. . .?: ಕೆ.ಪಿ.ಎಮ್. ಗಣೇಶಯ್ಯ

ಚುನಾವಣಾ ಸಂದರ್ಭ ಕಲಾವಿದರ ಕಲೆಯ ಮಾನ ಮಾರಣ ಹೋಮ. ಇದು ಇತ್ತೀಚೆಗೆ ಚಿಂತನೆಗೀಡು ಮಾಡಿದ ವಿಷಯ. ಕಲಾವಿದ ಎಂದು ಗುರುತಿಸಿಕೊಂಡ ಮೇಲೆ ರಾಜಕೀಯಕ್ಕೆ ಬರಬಾರದು. ಇದು ನನ್ನ ಅಪೇಕ್ಷೆ. ಕಾರಣ ಇಷ್ಟೆ, ಹಲವಾರು ರಾಜಕೀಯ ಪಕ್ಷಗಳು ಭಿನ್ನ ವಿಭಿನ್ನವಾದ ಆಶೋತ್ತರಗಳನ್ನು ಇಟ್ಟುಕೊಂಡು ಗುಂಪುಗಾರಿಕೆಯ ಚಟುವಟಿಕೆ, ಹೀಯ್ಯಾಳಿಕೆ, ಕಾಲೆಳೆಯುವುದು, ತಮ್ಮತನವನ್ನು ತಾವು ಹೊಗಳಿಕೊಳ್ಳುವುದು, ಇತರರನ್ನು ತೆಗಳುವುದು. ಒಳಗಿಂದೊಳಗೆ ಆಮಿಷಕ್ಕೊಳಗಾಗುವುದು ಹೀಗೆ ರಾಜಕೀಯದಲ್ಲಿ ಎಲ್ಲವೂ ಸರಿ. ರಾಜಕೀಯ ಅಂದ್ರೆ ಹೀಗೇನೆ, ಒಪ್ಪೋಣ ಆದರೆ ರಾಜಕೀಯಕ್ಕೆ ಕಲಾವಿದರ ಪ್ರವೇಶ ಎಷ್ಟರ ಮಟ್ಟಿಗೆ … Read more

ಕನ್ನಡ ಉಳಿಯಲಿ, ಕನ್ನಡ ಸಾಹಿತ್ಯ ಬೆಳಗಲಿ, ಬೆಳೆಯಲಿ: ಚಂದ್ರಿಕಾ ಆರ್ ಬಾಯಿರಿ

“ಹಾಯ್! ಸುಶೀಲಾ ‘ಹವ್ ಆರ್ ಯೂ’?. ಎಲ್ಲಿಗೆ ಹೋಗ್ತಾ ಇದೀಯಾ?” “ಹಾಯ್! ಸಹನಾ ಟ್ಯೂಷನ್ ಕ್ಲಾಸ್ ಗೆ ಹೋಗ್ತಾ ಇದೀನಿ.” “ಟ್ಯೂಷನ್ ಕ್ಲಾಸ್ ಗೆ ಹೋಗ್ತಾ ಇದೀಯಾ. ಯಾಕೆ? ಯಾರಿಗೆ ಟ್ಯೂಷನ್?” “ಅಯ್ಯೋ! ನನ್ನ ಮಗನಿಗೆ ಇನ್ನೂ ಕನ್ನಡ ಓದೋದಕ್ಕೆ ಬರೆಯೋದಕ್ಕೆ  ಸರಿಯಾಗಿ ಬರಲ್ಲ ಕಣೇ. ಅದಕ್ಕೆ ಟ್ಯೂಷನ್ ಗೆ ಹಾಕೋಣ ಅಂತ.” “ಏನು? ಟ್ಯೂಷನ್ ಗೆ ಹಾಕ್ತೀಯಾ. ನಿನ್ನ ಮದರ್ ಟಂಗ್ ಯಾವುದು ಸುಶೀಲಾ?” “ಕನ್ನಡ” “ಮತ್ತೆ ನೀನೇ ಹೇಳಿ ಕೊಡಬಹುದಿತ್ತಲ್ವ.” “ಇಲ್ಲ ಕಣೇ. ನಾನು … Read more

ಒಳಿತು, ಕೆಡುಕು ಹಾಗು ಮನಸ್ಥಿತಿ: ಸಹನಾ ಪ್ರಸಾದ್

ಎಲ್ಲರಂತೆ ನನ್ನ ಬೆಳಗ್ಗಿನ ಕಾಫಿಗೆ ಜತೆಗೂಡುವುದು ಅಂದಿನ ಪತ್ರಿಕೆ. ಎದ್ದ ತಕ್ಷಣ ಅದರ ಮೇಲೆ ಕಣ್ಣಾಡಿಸಿಯೇ ಬ್ರಶ್ ಮಾಡಲು ಹೋಗುವುದು. ಅದರಲ್ಲಿಯ ಸುದ್ದಿಗಳಿಗೆ ಮನ ಬಹಳ ಬೇಗ ಅಂಟಿಕೊಂಡು ಅದರ ಬಗ್ಗೆಯೇ ಯೊಚಿಸಿ, ಚಿಂತನೆಗೆ ಶುರು ಆಗುತ್ತದೆ. ಅಚ್ಚಾಗಿರುವ ವಿವರಗಳ ಮೇಲೆ ಅಂದಿನ ಮನಸ್ಥಿತಿ ರೂಪಗೊಳ್ಳುವುದು. ಅದೇ ರೀತಿ ಒಳ್ಳೆ ಹಾಡು ಕೇಳಿದರೆ, ಏನಾದರು ಖುಶಿಯಾಗಿರುವುದನ್ನು ನೋಡಿದರೆ/ ಓದಿದರೆ ಮನಸ್ಸು ಪ್ರಫ಼ುಲ್ಲವಾಗುವುದು. ಆದುದರಿಂದ ನನ್ನ ಬೆಳಗ್ಗಿನ ” ಆಹಾರ” ನನಗೆ ಬಹಳ ಮುಖ್ಯ. ಅದೊಂದೇ ಅಲ್ಲ, ದಿನವಿಡೀ … Read more

ವಿಭಿನ್ನ ಕಲೆಯ ಪ್ರವೃತ್ತಿಯನ್ನು ವೃತ್ತಿ ಯನ್ನಾಗಿಸಿ ಯಶಸ್ಸು ಕಂಡ ಭರತ್ ಕುಲಾಲ್: ಹರ್ಷಿತಾ ಹರೀಶ ಕುಲಾಲ್

ಹುಟ್ಟಿದ ಪ್ರತಿಯೊಂದು ವ್ಯಕ್ತಿ ಯಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಅದಕ್ಕಾಗಿ ಸೂಕ್ತ ವೇದಿಕೆ ಸಿಕ್ಕಾಗ ಪ್ರದರ್ಶನ ಮಾಡುತ್ತಾರೆ. ಇನ್ನೂ ಕೆಲವರು ಎಲ್ಲ ಕಲೆ ಗೊತ್ತಿದ್ದು ವೇದಿಕೆ ಸಿಗದೆ ವಂಚಿತರಾಗಿರುತ್ತಾರೆ. ಹಾಗೆಯೇ ಹಲವು ಕನಸುಗಳನ್ನು ಹೊತ್ತ ಯುವಕ ತಾನು ವೇದಿಕೆಯಲ್ಲಿ ಪ್ರದರ್ಶನ ನೀಡಿ ಅದರ ಅನುಭವದ ರುಚಿಯಿಂದ ಮುಂದುವರಿದ ಪ್ರತಿಭೆ ಬಾತು ಕುಲಾಲ್.. ಇವರು ಶ್ರೀ ನಾರಾಯಣ ಹಾಗೂ ಶ್ರೀಮತಿ ಸುಂದರಿ ಯವರ ತೃತೀಯ ಪುತ್ರನಾಗಿ. ನಿರಂಜನ್ ಕುಲಾಲ್ ಹಾಗೂ ಯಶವಂತ್ ಕುಲಾಲ್ ಅವರ ಪ್ರೀತಿಯ ತಮ್ಮನಾಗಿ … Read more

ಬಾಲಕಿ ನೀಡಿದ ಆ ೫೭ ಸೆಂಟ್‌ಗಳು: ಎಂ.ಎನ್.ಸುಂದರ ರಾಜ್

ಅದೊಂದು ಚರ್ಚ್. ಚರ್ಚಿನಲ್ಲೊಬ್ಬ ಉದಾರವಾದಿ ಪಾದ್ರಿ. ಕೇವಲ ಧರ್ಮಪ್ರಚಾರವಷ್ಟೇ ತನ್ನ ಜೀವನದ ಉದ್ದೇಶವೆಂದು ಭಾವಿಸದವನು. ತನ್ನ ಚರ್ಚಿನ ಸುತ್ತ ಮುತ್ತ ಇದ್ದ ಬಡ ಕೂಲಿ ಕಾರ್ಮಿಕರ ಮನೆಮನೆಗೆ ಹೋಗಿ ಅವರ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕೆಂದು ಪ್ರಚಾರ ಮಾಡುತ್ತಿದ್ದ. ಅಂತಹ ಬಡ ವಿದ್ಯಾರ್ಥಿಗಳಿಗಾಗಿ ಒಂದು ಶಾಲೆಯನ್ನೂ ಸಹ ಚರ್ಚ್ನ ಕೆಳಭಾಗದ ಒಂದು ಪುಟ್ಟ ಕೊಠಡಿಯಲ್ಲಿ ನಡೆಸುತ್ತಿದ್ದ. ಅಲ್ಲಿ ತನ್ನ ಬಿಡುವಿನ ವೇಳೆಯಲ್ಲಿ ಅತ್ಯಂತ ಶ್ರದ್ಧೆ ಮತ್ತು ಪ್ರೀತಿಯಿಂದ ಕಲಿಸುತ್ತಿದ್ದ. ಅವರಿಗೆ ಲಘು ಉಪಹಾರ, ಪುಸ್ತಕ, ಬಟ್ಟೆ ಎಲ್ಲವನ್ನೂ ನೀಡಿ, … Read more

ಕರಾವಳಿಯ ಸೆಖೆಯೂ ಕುಚ್ಚಲು ಗಂಜಿಯೂಟವೂ: ಕೃಷ್ಣವೇಣಿ ಕಿದೂರ್

ಈ ವರ್ಷ ಕಾಡುಮಾವಿನಮರಗಳ ತುಂಬ ಜೋತಾಡುವ ಗೊಂಚಲು ಗೊಂಚಲು ಹಣ್ಣುಗಳು ಬಾಯಲ್ಲಿ ನೀರೂರಿಸುತ್ತವೆ. ಮನೆಯಂಗಳದಲ್ಲಿ ನಿಂತು ಸುತ್ತ ತಿರುಗಿದಾಗ ಆಕಾಶ ಮುಟ್ಟುವ ಹಾಗೆ ಬೆಳೆದ ಕಾಡುಮಾವಿನ ಮರದ ತುಂಬ ಗಾಳಿಗೆ ತೊನೆಯುವ ಅರೆಹಣ್ಣು, ಕಾಯಿಗಳು . ಬಲವಾಗಿ ಬೀಸುವ ಗಾಳಿ ಉದುರಿಸುವ ಹಣ್ಣು ಹೆಕ್ಕಲು ಮಕ್ಕಳ ಸ್ಪರ್ಧೆ.ಈ ದುರ್ಮುಖ ಸಂವತ್ಸರವನ್ನೇ ಅಪರಾಧಿ ಮಾಡಬೇಕೋ ಅಲ್ಲ ವರುಷ ವರುಷಕ್ಕೂ ಬರಡಾಗುವ ಪ್ರಕೃತಿಗೆ ವಿಷಾದಿಸಬೇಕೋ ಅರಿಯದು. ಹೇಳಿ ಕೇಳಿ ನಮ್ಮದು ಅರಬ್ಬಿ ಸಮುದ್ರದ ಪಕ್ಕದ ಊರು. ಕೇರ ನಾಡಿನ ತುಂಬ … Read more

ದೈವತ್ವದ ಪರಿಕಲ್ಪನೆ: ಡಾ. ಹೆಚ್ ಎನ್ ಮಂಜುರಾಜ್, ಮೈಸೂರು

ಬಸವಣ್ಣನವರ ವಚನವೊಂದರ ಸಾಲುಗಳು ಹೀಗಿವೆ: ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನನೆಯೊಳಗಣ ಪರಿಮಳದಂತಿದ್ದಿತ್ತು…… ನೀರೊಳಗೆ ಬೆಂಕಿಯಿದೆ, ಅದರಿಂದಲೇ ವಿದ್ಯುತ್ತು ಹೊರಬರುವುದು. ಆಮೇಲೂ ಆ ನೀರು ನೀರಾಗಿಯೇ ಉಳಿವುದು. ಒಂದರಿಂದ ಇನ್ನೊಂದು ಹೊರಬಂದ ಮೇಲೂ ಅದು ಅದಾಗಿಯೇ ಇರುವ ಚೋದ್ಯವಿದು. ಮುಂದೆ ಬಿಡಲಿರುವ ಹಣ್ಣಿನ ರುಚಿ ಈಗಾಗಲೇ ಚಿಗುರುತ್ತಿರುವ ಸಸಿಯೊಳಗೆ ಹುದುಗಿದೆ. ಮೊಗ್ಗು ಅರಳುವ ಮುಂಚೆಯೇ ಅದರೊಳಗೆ ಪರಿಮಳ ಅಡಗಿರುತ್ತದೆ. ತಾಯಗರ್ಭದೊಳಗೆ ಬೆಳೆಯುತ್ತಿರುವ ಭ್ರೂಣದಲ್ಲೇ ಅದರೆಲ್ಲ ಬೆಳವಣಿಗೆಗೆ ಬೇಕಾದ ಅವಯವಗಳು ಹುದುಗಿರುವಂತೆ, ನವಿಲಿನ ಮೊಟ್ಟೆಯೊಳಗೆ … Read more