ಮಾರ್ಚ್ ತಿಂಗಳು, ವಿಶ್ವ ಅರಣ್ಯ ಮತ್ತು ಜಲ ದಿನ: ಅಖಿಲೇಶ್ ಚಿಪ್ಪಳಿ

ಮಾರ್ಚ್ ತಿಂಗಳೆಂದರೆ ಹಣಕಾಸಿನ ವರ್ಷ ಮುಗಿಯುವ ತಿಂಗಳು. ಭೂಮಿಯ ಮೇಲೆ ಬದುಕುವ ಎಲ್ಲಾ ಜನರು ಹಣದ ಮೇಲೆ ಅವಲಂಬಿತರಾಗಿದ್ದಾರೆ. ಯಾವ ಬ್ಯಾಂಕಿಗೆ ಹೋದರು ಎಲ್ಲರೂ ಬ್ಯುಸಿ ಮತ್ತು ಬಿಸಿ. ಲೆಕ್ಕಪರಿಶೋಧಕರಿಗೆ ಕೈತುಂಬಾ ಕೆಲಸ. ಸರ್ಕಾರದ ಛಪ್ಪನ್ನಾರು ಇಲಾಖೆಗಳು ಮಾರ್ಚ್ ಕೊನೆಯ ಹಂತದಲ್ಲಿ ಬ್ಯುಸಿ ತನ್ಮಧ್ಯೆ ಚುನಾವಣೆಯ ಕಾವು ವಾತಾವರಣದ ಕಾವು ಸೇರಿ ಜನಜೀವನ ಅಸ್ತ್ಯವಸ್ತವಾಗಿದೆ. ಮಾರ್ಚ್ ತಿಂಗಳಲ್ಲೇ ಕುಡಿಯುವ ನೀರಿನ ಸಮಸ್ಯೆ ದುತ್ತೆಂದು ಉದ್ಬವಿಸಿದೆ. ಮಾರ್ಚ್ ತಿಂಗಳ 21ನೇ ತಾರೀಖು ವಿಶ್ವ ಅರಣ್ಯ ದಿನ. ಈ ತಿಂಗಳಲ್ಲಿ … Read more

ಐ!!! ಇರುವೆ: ಅಖಿಲೇಶ್ ಚಿಪ್ಪಳಿ

ಎಲ್ಲಾ ಕಾಲದಲ್ಲೂ ಇರುವೆಗಳು ಮನುಷ್ಯನಿಗೆ ಉಪದ್ರವಕಾರಿಗಳೇ ಸೈ ಎಂದು ಸಾಮಾನ್ಯ ತಿಳುವಳಿಕೆ. ಸಂಜೆ ದೇವರ ಮುಂದೆ ಹಚ್ಚಿರುವ ದೀಪದ ಹಣತೆ (ಹಿತ್ತಾಳೆಯದ್ದು) ಬೆಳಿಗ್ಗೆ ನೋಡಿದರೆ ಬಣ್ಣ ಬದಲಾಯಿಸಿ ಕಪ್ಪಾಗಿದೆ, ದೀಪ ನಂದಿಹೋಗಿದೆ. ಹಣತೆಯ ಮೇಲೆ ಅಗಣಿತ ಸಂಖೈಯ ಇರುವೆಗಳು. ಬೆಳಿಗ್ಗೆ ಮತ್ತೆ ದೀಪ ಹಚ್ಚುವ ಮುಂಚೆ ಇರುವೆಗಳನ್ನೆಲ್ಲಾ ದೂರ ಓಡಿಸಬೇಕು. ಹಣತೆಯ ಒಳಗೆ ಎಣ್ಣೆಯಲ್ಲಿ ಬಿದ್ದು ಸತ್ತ ಮತ್ತಷ್ಟು ಅಸಂಖ್ಯ ಇರುವೆಗಳು. ಕೈ-ಕಾಲಿಗೆ ಕಚ್ಚುವ ಜೀವಂತ ಇರುವೆಗಳು ಇಷ್ಟಕ್ಕೇ ಮುಗಿಯಲಿಲ್ಲ, ಅಕ್ಕಿ ಡಬ್ಬದ ಬಾಯಿ ತೆಗೆದರೆ ಅಕ್ಕಿಯಲ್ಲೂ … Read more

ಹೋಳಿ ಹಬ್ಬ: ಅಖಿಲೇಶ್ ಚಿಪ್ಪಳಿ

ಹೋಳಿ ಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸುವ ಖುಷಿ ಯುವಕ-ಯುವತಿಯರಲ್ಲಿ ಕಂಡು ಬರುತ್ತಿದೆ. ಕಾಮಣ್ಣನನ್ನು ಸುಡಲು ತಯಾರಿಯಾಗಿದೆ. ಬಣ್ಣಗಳನ್ನು ತಟ್ಟೆಗಳಲ್ಲಿ ಪೇರಿಸಿಟ್ಟಾಗಿದೆ. ಹೋಳಿ ಹಬ್ಬದ ಧಾರ್ಮಿಕ ಆಯಾಮವೇನೇ ಇರಲಿ, ಸಾಂಸ್ಕ್ರತಿಕ ವೈವಿಧ್ಯವೂ ಬದಿಗಿರಲಿ. ಹೋಳಿ ಹಬ್ಬದಿಂದ ಪರಿಸರಕ್ಕೇನು ಪೆಟ್ಟು ಎಂಬುದನ್ನು ನೋಡುವುದಕ್ಕೂ ಮೊದಲು ನಕಾರಾತ್ಮಕ ಭಾವನೆಯನ್ನು ತೋರ್ಪಡಿಸುವಾಗ, ಅಹಂಕಾರವನ್ನು ಸೊಕ್ಕನ್ನು ಮುರಿಯುವ ಮನೋಗತವನ್ನು ವ್ಯಕ್ತಪಡಿಸುವಾಗ ನಾಳೆ ಇದೆ ಹೋಳಿ ಹಬ್ಬ ಎನ್ನುವುದು ರೂಡಿಯಲ್ಲಿದೆ. ಕೆಟ್ಟದ್ದನ್ನು ವೈಭವೀಕರಿಸುವ ಮನೋಭಾವವೂ ಈ ಮಾತಿನಲ್ಲಿದೆ. ಸರ್ಕಾರಗಳಿಗೆ ಭರಪೂರ ಹಣ ಬೇಕು. ಬಲ್ಲಿದರಿಂದ ಹಣ … Read more

ಮಾವು-ಹಲಸಿನ ಮರ ಉಳಿಸಿದ ಕತೆ: ಅಖಿಲೇಶ್ ಚಿಪ್ಪಳಿ

ಲೋಕಸಭೆಗೆ ಚುನಾವಣೆ ಘೋಷಣೆಯಾಗುವ ಸರಿಯಾಗಿ ೧೨ ದಿನ ಮೊದಲು ಹಾಗೂ ಕೇಂದ್ರ ತೈಲ ಮತ್ತು ಪರಿಸರ ಮಂತ್ರಿ ಅಭಿವೃದ್ಧಿಯ ನೆಪದಲ್ಲಿ ಕಾರುಗಳ ಮೇಲೆ ವಿಧಿಸುವ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ೫ ದಿನಗಳ ನಂತರ ಅಂದರೆ ದಿನಾಂಕ:೨೨-೦೩-೨೦೧೪ರಂದು ಬೆಳಗ್ಗೆ ೯.೩೦ಕ್ಕೆ ಅಪ್ಪಟ ಪೃಥ್ವಿ ಮಿತ್ರರೊಬ್ಬರು ನಿಸ್ತಂತು ದೂರವಾಣಿಗೆ ಕರೆ ಮಾಡಿ ಸಾಗರದಿಂದ ಸಿಗಂದೂರಿಗೆ ಹೋಗುವ ಮಾರ್ಗದಲ್ಲಿರುವ ೨ ಮರಗಳನ್ನು ಅರಣ್ಯ ಇಲಾಖೆಯ ಪರವಾನಿಗೆ ಪಡೆದು ಕಡಿಯುತ್ತಿದ್ದಾರೆ ಬೇಗ ಬನ್ನಿ ಎಂದು ಹೇಳಿದರು. ಬೆಳಗಿನ ಹೊತ್ತು ನಮ್ಮ ಹೊಟ್ಟೆಪಾಡಿನ … Read more

ವಿಜ್ಞಾನ ದಿನ: ಅಖಿಲೇಶ್ ಚಿಪ್ಪಳಿ

ಪ್ರತಿವರ್ಷ ಫೆಬ್ರವರಿ ೧೪ರಂದು ಪ್ರೇಮಿಗಳ ದಿನಾಚರಣೆಯನ್ನು ವಿಶ್ವದೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಾರೆ. ಪ್ರೇಮಿಗಳ ದಿನಾಚರಣೆಯನ್ನು ನಿಷೇಧಿಸಬೇಕೆಂಬ ಕೂಗು ಇದೆ. ಪ್ರೇಮಿಗಳ ದಿನಾಚರಣೆಯಿಂದ ಸರಿಯಾಗಿ ೧೪ ದಿನಗಳ ನಂತರ ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತಾರೆ. ದಿ.ಚಂದ್ರಶೇಖರ ವೆಂಕಟ ರಾಮನ್ ಎಂಬ ಭಾರತದ ವಿಜ್ಞಾನಿ ೧೯೨೮ರಲ್ಲಿ ಸಂಶೋಧಿಸಿದ ಬೆಳಕಿನ ?? ಕ್ಕೆ ೧೯೩೦ರಲ್ಲಿ ನೋಬೆಲ್ ಪ್ರಶಸ್ತಿ ಸಿಕ್ಕಿತು. ಭೌತಶಾಸ್ತ್ರದ ಈ ಅಮೋಘ ಸಾಧನೆ ಇವತ್ತಿಗೂ ವಿಜ್ಞಾನ ಕ್ಷೇತ್ರದಲ್ಲೊಂದು ಮೈಲಿಗಲ್ಲು ಎಂದು ದಾಖಲಾಗಿದೆ. ಈ ಮಹಾನ್ ವಿಜ್ಞಾನಿಯ ನೆನಪಿಗಾಗಿ ಭಾರತ ಸರ್ಕಾರ … Read more

ಬಂಗಾರಮ್ ಎಂಬ ಹುಲಿಯೂ-ಸಾಗರದ ಮಾರಿಜಾತ್ರೆಯೂ: ಅಖಿಲೇಶ್ ಚಿಪ್ಪಳಿ

ಪಶ್ಚಿಮ ಬಂಗಾಳದ ದಾಬಾ ಅರಣ್ಯ ಪ್ರದೇಶದಲ್ಲಿ ೨೦೦೯ರಲ್ಲಿ ಹುಲಿಮರಿಯೊಂದು ಅನಾಥವಾಗಿ ಅರಣ್ಯಾಧಿಕಾರಿಗಳ ಕಣ್ಣಿಗೆ ಬಿತ್ತು. ಮುದ್ದಾದ ಪುಟ್ಟ ಹುಲಿ ಮರಿ ತಾಯಿಯಿಂದ ಬೇರ್ಪಟ್ಟು ಅಸಹಾಯಕವಾಗಿ ಅನಾಥವಾಗಿತ್ತು. ಅರಣ್ಯಾಧಿಕಾರಿಗಳು ತಾಯಿ ಬರುವುದೆಂದು ಕಾದು ನೋಡಿದರು. ತಾಯಿ ಬರಲಿಲ್ಲ. ಮರಿಯನ್ನು ತಂದು ಬೋರ್ ವನ್ಯಜೀವಿ ಉದ್ಯಾನವನಕ್ಕೆ ತಂದು ಬೆಳೆಸಿದರು. ಹುಲಿ ಮರಿ ಬೆಳದ ಮೇಲೆ ಮತ್ತೆ ಅರಣ್ಯಕ್ಕೆ ಬಿಡುವ ಯೋಜನೆ ಅರಣ್ಯ ಇಲಾಖೆಯದಾಗಿತ್ತು. ಎಲ್ಲಾ ಮೃಗಾಲಯ ಮತ್ತು ಸಂರಕ್ಷಿತ ಉದ್ಯಾನವನಗಳಲ್ಲಿ ಹಿಂಸ್ರ ಪ್ರಾಣಿಗಳಿಗೆ ಆಹಾರವಾಗಿ ಸಾಮಾನ್ಯವಾಗಿ ದನದ ಮಾಂಸವನ್ನು ನೀಡುತ್ತಾರೆ. … Read more

ಮನರಂಜನಾ ಮಾಲಿನ್ಯ: ಅಖಿಲೇಶ್ ಚಿಪ್ಪಳಿ

ಎಲ್ಲಾ ನಕ್ಕ ಮೇಲೆ ದಡ್ಡ ನಕ್ಕನಂತೆ. ಈ ಭುವಿಯ ಮೇಲೆ ಲಕ್ಷಾಂತರ ಸಸ್ಯ-ಪ್ರಾಣಿ-ಪಕ್ಷಿ ಪ್ರಭೇದಗಳಿವೆ. ಆಧುನಿಕ ಮಾನವನ ಅತಿಲಾಲಸೆ, ದುರಾಸೆ, ಅಭಿವೃದ್ಧಿಯ ಹಪಾಹಪಿ, ತಂತ್ರಜ್ಞಾನದ ಅವಲಂಬನೆ, ಸುಖಲೋಲುಪತೆ, ಕೂಡಿಡುವ ಪ್ರವೃತ್ತಿ, ಸೋಮಾರಿತನ, ಶೊಂಬೇರಿತನ, ಹುಂಬತನ, ಮೋಜು-ಮಸ್ತಿ, ಕ್ರೌರ್ಯ ಇತ್ಯಾದಿಗಳಿಂದಾಗಿ ಹಲವು ಪ್ರಭೇದಗಳು ನಾಶವಾಗಿವೆ. ನಾಶವಾಗುವ ಹೊಸ್ತಿಲಿನಲ್ಲಿ ಮತ್ತಷ್ಟಿವೆ. ಅಷ್ಟೇಕೆ ಖುದ್ದು ಭೂಮಿಯೇ ಅಳಿವಿನಂಚಿನಲ್ಲಿ ಬಂದು ನಿಂತಿದೆ. ಪರಿಸರ ಪ್ರಾಜ್ಞರು, ಪರಿಸರ-ವಿಜ್ಞಾನಿಗಳು, ಭೂಪುತ್ರರು ಸೇರಿ ಭೂಮಿಯನ್ನುಳಿಸುವ ಪ್ರಯತ್ನ ಮಾಡುತ್ತಾರೆ. ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬ ಗಾದೆಯಂತೆ, ಭೂಮಿಯ … Read more

ಲಕ್ಷ್ಮಣ ರೇಖೆ: ಅಖಿಲೇಶ್ ಚಿಪ್ಪಳಿ

ಜಗತ್ತಿನ ಶ್ರೇಷ್ಠ ಗ್ರಂಥಗಳಲ್ಲಿ ರಾಮಾಯಣವು ಒಂದು. ರಾಮಾಯಣ-ಮಹಾಭಾರತವು ಸಮಕಾಲೀನ ರಾಜಕಾರಣಕ್ಕೆ ಹೊಂದಿಕೊಳ್ಳುವಂತೆ ರಚಿತವಾಗಿದೆ. ಆಗೆಲ್ಲಾ ಮಂತ್ರ-ತಂತ್ರಗಳಿಂದ ತಯಾರಿಸಲಾದ ಬಾಣ-ಬಿಲ್ಲುಗಳನ್ನು ಕವಿ ತನ್ನ ಕಲ್ಪನೆಗೆ ರೆಕ್ಕೆ ಕಟ್ಟಿ ಹಾರಿ ಬಿಟ್ಟು ಏನೇನೋ ಅಸಾಧ್ಯವಾದುದನ್ನು ಸೃಷ್ಟಿಸಿ ರಂಜಿಸಿದ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಒಬ್ಬ ವ್ಯಕ್ತಿ ಹೇಗಿರಬಾರದು ಎಂಬ ಸಂದೇಶವನ್ನು ಬೀರುವ ಹಲವು ಘಟನೆಗಳಿವೆ. ರಾವಣನಂತಹ ಪರಮ ದೈವಭಕ್ತ ಯ:ಕಶ್ಚಿತ್ ಸೀತೆಗಾಗಿ ತನ್ನ ರಾಜ್ಯ, ಮಕ್ಕಳು, ಬಂಧುಗಳು ಕಡೆಗೆ ತನ್ನ ಪ್ರಾಣವನ್ನು ಕಳೆದುಕೊಂಡ. ರಾಮ ವಾಲಿಯನ್ನು ಕೊಂದ ಬಗೆಯನ್ನು ವಿದ್ವಾಂಸರು ಹೇಗೆ … Read more

ಇಲ್ಲಿ ಮೈಲಿಗೆಯಾದ ಮಂತ್ರಿ ಅಲ್ಲಿ ಕಾರ್ಪೊರೇಟ್‌ಗಳ ಕಣ್ಮಣಿ: ಅಖಿಲೇಶ್ ಚಿಪ್ಪಳಿ ಅಂಕಣ

ಲೋಕಸಭೆ ಚುನಾವಣೆ ಹತ್ತಿರ ಬಂದೇ ಬಿಟ್ಟಿದೆ. ಕಾರ್ಪೋರೇಟ್ ಲಾಬಿಗೆ ಮಣಿಯುವ ಸರ್ಕಾರಗಳು ಲಾಬಿಗೆ ಅನುಕೂಲ ಮಾಡಿಕೊಡುವಲ್ಲಿ ತಮ್ಮ ಅತಿಸಹಕಾರವನ್ನು ನೀಡುತ್ತವೆ. ಪರಿಸರದ ಬಗ್ಗೆ ವೈಯಕ್ತಿಕವಾಗಿ ಸ್ವಲ್ಪ ಬದ್ಧತೆ ತೋರಿದ್ದ ಜೈರಾಂ ರಮೇಶ್‌ರನ್ನು ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಕಿತ್ತು ಹಾಕಿ ಜಯಂತಿ ನಟರಾಜ್‌ರನ್ನು ತಂದು ಕೂರಿಸಿದರು. ಪಕ್ಷ ಸಂಘಟಿಸುವ ನೆವದಲ್ಲಿ ಜಯಂತಿ ನಟರಾಜ್‌ರಿಂದ ರಾಜಿನಾಮೆ ಕೊಡಿಸಿ ಇಂಧನ ಮಂತ್ರಿಯಾದ ವೀರಪ್ಪ ಮೊಯ್ಲಿಗೆ ಹೆಚ್ಚುವರಿ ಖಾತೆಯಾಗಿ ಅರಣ್ಯ ಮತ್ತು ಪರಿಸರ ಇಲಾಖೆಯ ಜವಾಬ್ದಾರಿಯನ್ನು ನೀಡಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ … Read more

ಸವಾಲುಗಳಿವೆ – ಪರಿಹಾರವೂ ಇದೆ: ಅಖಿಲೇಶ್ ಚಿಪ್ಪಳಿ ಅಂಕಣ

ಬೇಸಿಗೆ ಶುರುವಾಗುತ್ತಿದೆ. ಸೆಕೆ, ಬಾಯಾರಿಕೆ ಹೆಚ್ಚಾಗುತ್ತದೆ. ಸೆಕೆ ತಡೆಯಲು ಫ್ಯಾನ್ ಮತ್ತು ಏರ್‌ಕಂಡೀಷನ್‌ಗಳು ಬೇಕು. ಬಾಯಾರಿಕೆ ತಣಿಸಲು ತಂಪು ಪಾನೀಯಗಳ ಹಿಂಡು-ಹಿಂಡು ಅಂತಾರಾಷ್ಟ್ರೀಯ ಕಂಪನಿಗಳು ನಿಂತಿವೆ. ಟಿ.ವಿ.ಗಳಲ್ಲಿ ತುಂಡುಡುಗೆಯ ತರುಣಿಯರು ಮಾದಕವಾಗಿ ಓಲಾಡುತ್ತಾ ನೀವು ನಮ್ಮ ಕಂಪನಿಯ ಪಾನೀಯವನ್ನೇ ಸೇವಿಸಿ ಎಂದು ಜಬರ್‌ದಸ್ತು ಮಾಡುತ್ತಾರೆ. ಮನುಷ್ಯನ ಶಕ್ತಿಯ ಹಸಿವಿಗೆ ಇಡೀ ಭೂಮಂಡಲ ತಲ್ಲಣಿಸುತ್ತಿದೆ. ಪ್ರತ್ಯಕ್ಷವಾಗಿ-ಪರೋಕ್ಷವಾಗಿ ನೂರಾರು ಪ್ರಬೇಧಗಳು ಅಳಿವಿನಂಚಿಗೆ ಬಂದು ನಿಂತಿವೆ. ಅಮೇರಿಕಾದಲ್ಲಿ ಚಳಿಯಿಂದ ಜನ ಅತೀವ ತೊಂದರೆಗೊಳಗಾದರೆ, ಪ್ರಾಣಿ-ಪಕ್ಷಿಗಳು ಪುತು-ಪುತುನೆ ಉದುರಿ ಸಾಯುತ್ತಿವೆ. ಹವಾಮಾನ ವೈಪರೀತ್ಯವೇ … Read more

ಆಮೆಗತಿಯ ನ್ಯಾಯಪುರಾಣ: ಅಖಿಲೇಶ್ ಚಿಪ್ಪಳಿ ಅಂಕಣ

ಭಾರತದ ಪ್ರಜಾಪ್ರಭುತ್ವ ಸಂವಿಧಾನ ವಿಶೇಷವಾದದು. ಇಲ್ಲಿನ ಕಾನೂನಿನಲ್ಲಿ ಸಮಾಜದ ಕಟ್ಟಕಡೆ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ಇಚ್ಚೆಯಿದೆ. ದೌರ್ಜನ್ಯವನ್ನು ತಡೆಯಲು, ಅಶಕ್ತರಿಗೆ, ಮಹಿಳೆಯರಿಗೆ ಹೀಗೆ ಎಲ್ಲರಿಗೂ ಸಮಾನ ನ್ಯಾಯ ಸಿಗುವಂತೆ ಆಗಬೇಕು ಎನ್ನುವ ಆಶಯವಿದೆ. ನ್ಯಾಯ ಕೊಡಲು ನ್ಯಾಯದೇವರಿದ್ದಾರೆ. ಪರ-ವಿರೋಧ ವಾದಿಸಲು ನ್ಯಾಯವಾದಿಗಳಿದ್ದಾರೆ. ಆದರೂ ನ್ಯಾಯ ಸಿಗುವುದು ವಿಳಂಬವಾಗುತ್ತಿದೆ ಎಂಬ ಗಂಭೀರ ಆರೋಪವಿದೆ. ಚಿಕ್ಕ-ಪುಟ್ಟ ವ್ಯಾಜ್ಯಗಳನ್ನು ಪರಿಹರಿಸಲು ತ್ವರಿತ ನ್ಯಾಯಾಲಯಗಳಿವೆ. ಒಂದೊಂದು ಘಟನೆಗಳಿಗೆ ಸಂಬಂಧಿಸಿದಂತೆ ವಾದಿಸಲು ನುರಿತ ವಕೀಲರ ಪಡೆಯಿದೆ. ಹಿಡಿದ ಪೋಲಿಸರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಬಲ್ಲ ನಿಷ್ಣಾತರು … Read more

ಜೇನು-ಸವಿಜೇನು: ಅಖಿಲೇಶ್ ಚಿಪ್ಪಳಿ ಅಂಕಣ

ಹಿರಿಯ ಪರ್ತಕರ್ತ ಸ್ನೇಹಿತರಾದ ಅ.ರಾ.ಶ್ರೀನಿವಾಸ್ ಫೋನ್ ಮಾಡಿದ್ದರು. ಸಮಸ್ಯೆಯೆಂದರೆ ಅವರ ಪುಟ್ಟ ತೋಟದಲ್ಲಿರುವ ಹೈಬ್ರೀಡ್ ನೆಲ್ಲಿ ಮರದಲ್ಲಿ ಹೂವಿದ್ದರೂ ಕಾಯಿಗಟ್ಟುತ್ತಿರಲಿಲ್ಲ. ಜೇನಿನ ಅಭಾವವೇ ಈ ಸಮಸ್ಯೆಗೆ ಕಾರಣವೆಂದು ಮನಗಂಡು, ತಮ್ಮಲ್ಲಿರುವ ಹಳೇ ಜೇನುಪೆಟ್ಟಿಗೆಯಲ್ಲಿ ಜೇನು ಸಾಕಬೇಕೆಂಬ ತೀರ್ಮಾನ ಮಾಡಿದ್ದರು. ಅದಕ್ಕಾಗಿ ಜೇನು ತುಂಬಿ ಕೊಡಲು ಸಾಧ್ಯವೆ? ಎಂದು ಕೇಳಿದರು. ವಿನೋಬ ನಗರದಲ್ಲಿ ದೊಡ್ಡದೊಂದು ದೂರವಾಣಿ ಕೇಬಲ್ ಸುತ್ತಿಡುವ ಪ್ಲೈವುಡ್‌ನಿಂದ ತಯಾರಿಸಿದ ಉರುಟಾದ ಗಾಲಿಯೊಂದಿತ್ತು. ಅದರ ಮಧ್ಯಭಾಗದಲ್ಲಿ ೬ ಇಂಚು ಅಗಲದ ದುಂಡನೆಯ ರಂಧ್ರ. ಒಮ್ಮೆ ಅತ್ತ ಗಮನ … Read more

ಹೊಸ ವರುಷ ಹರುಷವೇ!?: ಅಖಿಲೇಶ್ ಚಿಪ್ಪಳಿ ಅಂಕಣ

ಪ್ರಪಂಚದ ಬಹುತೇಕ ದೇಶಗಳಲ್ಲಿ ಹೊಸವರ್ಷ ಪ್ರಾರಂಭವಾಗಿದೆ. ಜನವರಿ ೨೦೧೪. ಕಾಲಚಕ್ರದಡಿಯಲ್ಲಿ ಸುತ್ತಿ ಮತ್ತೊಮ್ಮೆ ಹೊಸವರುಷದ ಹರುಷದಲ್ಲಿ ಮಿಂದೆದ್ದು, ಹೊಸ ಸವಾಲುಗಳಿಗೆ, ಹೊಸ ಸಾಧನೆಗಳಿಗೆ ನಿಧಾನವಾಗಿ ಜಗತ್ತು ತೆರೆದುಕೊಳ್ಳುತ್ತಿದೆ. ಪ್ರತಿದೇಶವೂ ತಾನು ಮುಂದುವರೆದ ರಾಷ್ಟ್ರವಾಗಬೇಕು ಎಂದು ಹಂಬಲಿಸುತ್ತದೆ. ಈ ಹಂಬಲಿಕೆಯನ್ನು ಸಾಕಾರಗೊಳಿಸಲು ಯೋಜನೆಗಳನ್ನು ರೂಪಿಸಿಕೊಂಡು, ಕಾರ್ಯರೂಪಕ್ಕಿಳಿಸುವ ಪ್ರಯತ್ನ ಮಾಡುತ್ತವೆ. ಹಿಂದಿನ ವರ್ಷದ ವೈಫಲ್ಯಗಳೇನು ಎಂಬುದನ್ನು ಪಟ್ಟಿ ಮಾಡಿ ಪ್ರಚುರಪಡಿಸಲು ವಿವಿಧ ಕ್ಷೇತ್ರಗಳಲ್ಲಿ ತಜ್ಞರ ಪಡೆಯೇ ಇದೆ. ವಿಜ್ಞಾನ-ತಂತ್ರಜ್ಞಾನದಲ್ಲಿ ಪ್ರಗತಿಯನ್ನು ಸಾಧಿಸಲು ಆಯಾ ಕ್ಷೇತ್ರದ ವಿಜ್ಞಾನಿಗಳು ತಮ್ಮ ಶ್ರಮವನ್ನು ಧಾರೆಯರೆಯುತ್ತಾರೆ. … Read more

ಭೂತಪ್ಪನ ಲೇವಾದೇವಿ: ಅಖಿಲೇಶ್ ಚಿಪ್ಪಳಿ ಅಂಕಣ

ಸಾಗರದಿಂದ ವರದಾಮೂಲಕ್ಕೆ ಹೋಗುವ ದಾರಿಯಲ್ಲಿ ಮಧ್ಯೆ ಓತಿಗೋಡು-ಶೆಡ್ತಿಕೆರೆ ಹೋಗುವ ಒಂದು ದಾರಿಯಿದೆ. ಇಷ್ಟು ವರ್ಷ ಮಣ್ಣು ದಾರಿಯಾಗಿತ್ತು, ಅಭಿವೃದ್ಧಿಯಾಗಿ ಅಲ್ಲಿ ಈಗ ಕಿತ್ತುಹೋದ ಟಾರು ರಸ್ತೆಯ ಅವಶೇಷಗಳನ್ನು ಕಾಣಬಹುದು. ಅಲ್ಲಿದ್ದ ಸುಮಾರು ಮುನ್ನೂರು ಎಕರೆಯಷ್ಟು ಜಾಗಕ್ಕೆ ಧೂಪದ ಸಾಲು ಎನ್ನುವ ಹೆಸರಿದೆ. ನೈಸರ್ಗಿಕವಾಗಿ ವಿಂಗಡನೆಗೊಂಡ ಸಾಲುಧೂಪದ ಮರಗಳು ಎಣಿಕೆಗೆ ನಿಲುಕದಷ್ಟು ಇದ್ದವು. ಈಗೊಂದು ೨೦ ವರ್ಷಗಳ ಹಿಂದೆ ಸರ್ಕಾರದವರು ಪೇಪರ್ ಮಿಲ್‌ಗಳಿಗೆ ಸರಬರಾಜು ಮಾಡಲು ದಟ್ಟವಾದ ನಿತ್ಯಹರಿದ್ವರಣ ಮರಗಳ ನೈಸರ್ಗಿಕ ತೋಪನ್ನು ಹಿಟಾಚಿ-ಬುಲ್ಡೋಜರ್ ಹಚ್ಚಿ ನೆಲಸಮ ಮಾಡಿ … Read more

ಪೂಗ ಪುರಾಣ: ಅಖಿಲೇಶ್ ಚಿಪ್ಪಳಿ ಅಂಕಣ

ಅಡಕೆಯಿಂದ ಹೋದ ಮಾನ ಆನೆ ಕೊಟ್ಟರೂ ಬರದು ಎಂಬುದೊಂದು ಮಾತಿದೆ. ಅಂದರೆ ಒಂದು ಅಡಕೆಯನ್ನು ಕದ್ದೊಯ್ದರೆ ತಿರುಗಿ ಆನೆಯನ್ನೇ ವಾಪಾಸು ಕೊಟ್ಟರೂ ಹೋದ ಮಾನ ವಾಪಾಸು ಬರುವುದಿಲ್ಲ. ದಿನೇ ದಿನೇ ಸಾಮಾನ್ಯ ಜನರ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಬಿಗಡಾಯಿಸುವಿಕೆಗೆ ಕಾರಣ ಬೆಲೆಯೇರಿಕೆ, ಬಿಸಿಯೇರಿಕೆ, ಸರ್ಕಾರದ ನೀತಿ ಇತ್ಯಾದಿಗಳು. ಅತ್ಯಂತ ಸಂಪದ್ಭರಿತ ನಾಡು ಮಲೆನಾಡು. ಪಶ್ಚಿಮಘಟ್ಟಗಳ ಸೊಬಗು ಎಂತವರನ್ನೂ ಆಕರ್ಷಿಸುತ್ತದೆ. ಜೀವಿವೈವಿಧ್ಯದ ತವರೂರು ಈ ಮಲೆನಾಡು. ಪ್ರಕೃತಿದತ್ತವಾಗಿ ಅತ್ಯಂತ ಸುರಕ್ಷಿತ ಪ್ರದೇಶವೂ ಹೌದು. ಸುನಾಮಿಯ ಭಯವಿಲ್ಲ. ಚಂಡಮಾರುತವಿಲ್ಲ. ಜ್ವಾಲಾಮುಖಿಗಳಿಲ್ಲ. … Read more

ನರಭಕ್ಷಕ ವ್ಯಾಘ್ರ ವರ್ಸಸ್ ವ್ಯಾಘ್ರಭಕ್ಷಕ ನರ: ಅಖಿಲೇಶ್ ಚಿಪ್ಪಳಿ ಅಂಕಣ

ದಿನಾಂಕ:02/12/2013ರ ಒಂದು ರಾಜ್ಯಮಟ್ಟದ ಕನ್ನಡ ದಿನಪತ್ರಿಕೆ ಮುಖಪುಟದಲ್ಲಿ “ನರಭಕ್ಷಕ ವ್ಯಾಘ್ರಕ್ಕೆ ಗುಂಡಿಕ್ಕಿ: ಉಲ್ಲಾಸ ಕಾರಂತ” ಹೇಳಿಕೆಯಿತ್ತು. ವನ್ಯಜೀವಿ ಮತ್ತು ಹುಲಿಸಂರಕ್ಷಣೆಯ ಕ್ಷೇತ್ರದಲ್ಲಿ ಉಲ್ಲಾಸರದ್ದು ದೊಡ್ಡ ಹೆಸರು. ಕಡಲತೀರದ ಭಾರ್ಗವ ದಿ.ಶಿವರಾಮ ಕಾರಂತರ ಪುತ್ರರೂ ಆದ ಉಲ್ಲಾಸ ಕಾರಂತರ ಈ ಹೇಳಿಕೆ ಒಂದು ಕ್ಷಣ ದಿಗ್ಭ್ರಮೆ ಮೂಡಿಸಿತು. ಗಾಯಗೊಂಡ ಅಥವಾ ವಯಸ್ಸಾದ ಹುಲಿಗಳು ಸಾಮಾನ್ಯವಾಗಿ ನರಭಕ್ಷರವಾಗಿ ರೂಪುಗೊಳ್ಳುವುದು ಸಹಜ. ಇಡೀ ಘಟನೆಯನ್ನು ಮಾನವ ಹಕ್ಕು ಮತ್ತು ಪ್ರಾಣಿಗಳ ಹಕ್ಕು ಎಂಬಡಿಯಲ್ಲಿ ನೋಡಿದಾಗ, ಕಾರಂತರ ಗುಂಡಿಕ್ಕಿ ಹೇಳಿಕೆ ಮಾನವ ಪಕ್ಷಪಾತಿಯಾಗಿ … Read more

ಕಂಬಳಿಹುಳದ ಕತೆ: ಅಖಿಲೇಶ್ ಚಿಪ್ಪಳಿ ಅಂಕಣ

  ಚಿಕ್ಕವನಿದ್ದಾಗ ಎಂದು ಹೇಳಬಹುದು. ಹಲವು ಘಟನೆಗಳು ಕಾಲಾನುಕ್ರಮದಲ್ಲಿ ಮರೆತು ಹೋಗುತ್ತವೆ. ಕೆಲವು ಘಟನೆಗಳು ಮರೆತು ಬಿಡಬೇಕೆಂದರು ಮರೆಯಲಾಗುವುದಿಲ್ಲ. ನಮ್ಮದು ಆವಾಗ ಜೋಡು ಕುಟುಂಬ. ೧೮ ಅಂಕಣದ ಸೋಗೆ ಮನೆಯಲ್ಲಿ ಎಲ್ಲಾ ಒಟ್ಟು ಸೇರಿ ಹತ್ತಾರು ತಿನ್ನುವ ಬಾಯಿಗಳು. ಪ್ರತಿವರ್ಷ ಇಡೀ ಮನೆಯ ಸೋಗೆಯನ್ನು ಬದಲಾಯಿಸಿ ಹೊಸದನ್ನು ಹೊದಿಸಬೇಕು. ಅದೊಂದು ವಾರದ ಕಾರ್ಯಕ್ರಮ. ಹತ್ತಾರು ಆಳು-ಕಾಳುಗಳು ಅವರಿಗೆ ಊಟ-ತಿಂಡಿ, ಬೆಲ್ಲದ ಕಾಫಿ ಇತ್ಯಾದಿಗಳು. ಅದಿರಲಿ ಈಗ ಹೇಳ ಹೊರಟಿರುವ ಕತೆಗೆ ಹಿಂದಿನ ವಾಕ್ಯಗಳು ಪೂರಕವಷ್ಟೆ. ವರ್ಷದಲ್ಲೊಂದು ಬಾರಿ … Read more

ಆಲ್ ನ್ಯಾಚುರಲ್ ಎಂಬ ಮರಾಮೋಸ:ಅಖಿಲೇಶ್ ಚಿಪ್ಪಳಿ ಅಂಕಣ

  ಮನುಷ್ಯನ ಬುದ್ಧಿ ಒಂದೊಂದು ಬಾರಿ ಪೂರ್ವಜನುಮದ ಸ್ಮರಣೆಗೆ ಹೋಗುತ್ತದೆ. ಕೋತಿ ಬುದ್ಧಿ. ಮೊನ್ನೆ ನಮ್ಮ ಹಿರಿಯ ಸ್ನೇಹಿತರೊಬ್ಬರು ಬೆಂಗಳೂರಿಗೆ ಹೋಗಿದ್ದರು. ಈಶಾನ್ಯ ಭಾಗದಿಂದ ಬಂದ ಒಂದಿಷ್ಟು ಜನ ಬಿದಿರಿನಿಂದ ಮಾಡಿದ ಅಲಂಕಾರಿಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಇದೇನು ಹೊಸ ವಿಷಯವಲ್ಲ. ಗುಡಿ ಕೈಗಾರಿಕೆಗಳಲ್ಲಿ ತಯಾರಿಸಿದ ವಸ್ತುಗಳನ್ನು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಮಾರಾಟ ಮಾಡುತ್ತಾರೆ. ರಸ್ತೆ ಬದಿಗಳಲ್ಲಿ ಗಿಡಮೂಲಿಕೆ ಔಷಧಗಳನ್ನು ಮೈಕಿನಲ್ಲಿ ಕೂಗುತ್ತಾ ಮಾರಾಟ ಮಾಡುವ ಜನ ಆಗಾಗ ಕಾಣ ಸಿಗುತ್ತಾರೆ. ಇವರು ಕೊಡುವ ಮೂಲಿಕೆಗಳಿಂದ ಎಲ್ಲಾ … Read more

ಬಾಲ್ಯ ವಿವಾಹವೆಂಬ ಪಿಡುಗು:ಅಖಿಲೇಶ್ ಚಿಪ್ಪಳಿ ಅಂಕಣ

 [ನವಂಬರ್ ೧೪ ಮಕ್ಕಳ ದಿನಾಚರಣೆ. ಸ್ವತಂತ್ರ ಲಭಿಸಿ ೬೬ ವರ್ಷಗಳು ಸಂದರೂ ಭಾರತದಲ್ಲಿ ಹಾಗೂ ವಿಶ್ವದಲ್ಲಿ ಅವಧಿಪೂರ್ವ ವಿವಾಹಗಳು ನಡೆಯುತ್ತವೆ. ಮಕ್ಕಳನ್ನು ಮಧುಮಕ್ಕಳನ್ನಾಗಿ ಮಾಡಿ ಅವರ ಜೀವನವನ್ನು ದುರ್ಭರ ಮಾಡುವ ಪದ್ಧತಿಯಿದೆ. ಸರ್ವರಿಗೂ ಸಮಾನ ಶಿಕ್ಷಣ ಲಭಿಸಿದಾಗ ಈ ಅನಿಷ್ಟ ಪದ್ಧತಿ ನಿಲ್ಲಬಹುದು ಎಂಬ ಆಶಾಭಾವನೆಯೊಂದಿಗೆ ಮಕ್ಕಳ ದಿನಾಚರಣೆ ನಿಮಿತ್ತ ಈ ಲೇಖನ]       ಬಾಲ್ಯ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಸುಂದರವಾದ, ಮಧುರವಾದ ಕ್ಷಣಗಳು. ಬಾಲ್ಯವೆಂಬುದು ಪ್ರಕೃತಿಯ ಪ್ರತಿಯೊಂದನ್ನು ಅಚ್ಚರಿಯಿಂದ ಗಮನಿಸುವ ಹಂತ, … Read more

ಬಿಸಿಲು ಬಸಪ್ಪ ಮತ್ತು ಉನ್ನಾವ್ ಕೋಟೆ: ಅಖಿಲೇಶ್ ಚಿಪ್ಪಳಿ ಅಂಕಣ

  ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಐತಿಹಾಸಿಕ ಸ್ಥಳಗಳು ಸಾಕಷ್ಟಿವೆ. ಇಕ್ಕೇರಿ, ಕೆಳದಿ, ಕಲಸಿ, ಹಳೆಇಕ್ಕೇರಿಯ ಕೋಟೆ ಇತ್ಯಾದಿ ಇತ್ಯಾದಿ. ನಮ್ಮ ಊರಿನಲ್ಲಿ ಇರುವುದೊಂದೇ ವೀರಶೈವರ ಮನೆ ಮತ್ತು ಅವರಿಗೊಂದು ವೀರಭದ್ರ ದೇವಸ್ಥಾನ. ದೇವಸ್ಥಾನದಿಂದ ಕೊಂಚ ದೂರದಲ್ಲಿ ಒಂದು ಬಸವಣ್ಣ. ಅದರ ಹೆಸರು ಬಿಸಿಲು ಬಸಪ್ಪ. ಪ್ರತಿವರ್ಷ ಆಯ್ದ ದಿನಗಳಲ್ಲಿ ಅದಕ್ಕೆ ಪೂಜೆ. ವಿಶೇಷವಾಗಿ ತುಳಸಿಪೂಜೆ, ದೀಪಾವಳಿಗಳಂದು ವರ್ಷವಿಡೀ ಬಿಸಿಲಿನಲ್ಲೇ ಮಲಗಿದ ಬಸಪ್ಪನಿಗೆ ಪೂಜೆ. ಬಿಸಿಲು-ಮಳೆಗಳಿಂದ ರಕ್ಷಿಸಲು ಆ ಬಸಪ್ಪನಿಗೆ ಕಟ್ಟಡವಿರಲ್ಲಿಲ್ಲ. ಬಿಸಿಲಿನಲ್ಲೇ ಇರುವುದರಿಂದಾಗಿ ಬಿಸಿಲು ಎಂಬುದು … Read more

ಸಸ್ಯಾಹಾರ ವರ್ಸಸ್ ಮಾಂಸಾಹಾರ: ಅಖಿಲೇಶ್ ಚಿಪ್ಪಳಿ ಅಂಕಣ

  ಮೊನ್ನೆ ಪರಿಚಿತರೊಬ್ಬರು ಸಿಕ್ಕಿದ್ದರು. ಮಾತು ದೇಶ-ವಿದೇಶಗಳನ್ನು ಸುತ್ತಿ, ಕಡೆಗೆ ನಾವು ಸೇವಿಸುವ ಆಹಾರದ ಬಗ್ಗೆ ಹೊರಳಿತು. ತಟ್ಟನೆ ಆ ಪರಿಚಿತರು ಪ್ರತಿಕ್ರಯಿಸಿದರು. ಮಾರಾಯ ಈಗಿನ ಪೀಡೆನಾಶಕದ ಹಾವಳಿಯಲ್ಲಿ ತರಕಾರಿಗಿಂತ ಕೋಳಿ ತಿನ್ನೋದೆ ಸ್ವಲ್ಪ ಮಟ್ಟಿಗೆ ಒಳ್ಳೆದು ಅಂತ ಕಾಣ್ತದೆ ಎಂದರು. ಯಾಕೆ ಎಂದೆ. ನೋಡು ತರಕಾರಿಗಳಿಗೆ ಇಂತದೇ ವಿಷ ಹಾಕ್ತಾರೆ ಅಂತ ಹೇಳೊಕಾಗಲ್ಲ. ಪಾದರಸದಿಂದ ಹಿಡಿದು ಎಂಡೋಸಲ್ಪಾನ್‍ವರೆಗೂ ಎಲ್ಲಾ ತರಹದ ಔಷಧ ಹೊಡಿತಾರೆ. ಯಾವುದೇ ನಿಯಮಗಳನ್ನೂ ಪಾಲಿಸೋದಿಲ್ಲ. ಕೋಳಿಯಾದ್ರೆ ಜೀವಂತ ಪ್ರಾಣಿ ಹಾಗಾಗಿ ಅದಕ್ಕೆ ಯದ್ವಾತದ್ವಾ … Read more

ಕುಂಡೆಕುಸ್ಕ ಬಂತು: ಅಖಿಲೇಶ್ ಚಿಪ್ಪಳಿ

ಹವಾಮಾನ ಬದಲಾವಣೆಯ ಪರಿಣಾಮವೋ ಏನೋ ಮಲೆನಾಡಿನಲ್ಲಿ ಇನ್ನೂ ಮಳೆ ಬಿಟ್ಟಿಲ್ಲ. ಮೇಲಿಂದ ಮೇಲೆ ಚಂಡಮಾರುತಗಳು ರುಧ್ರನರ್ತನಗೈಯುತ್ತಿವೆ. ಪ್ರಕೃತಿವಿಕೋಪಕ್ಕೆ ಸಿಕ್ಕ ಮಾನವನ ಬದುಕು ಮೂರಾಬಟ್ಟೆಯಾಗಿದೆ. ಸ್ವಯಂಕೃತಾಪರಾಧವೆನ್ನಬಹುದೆ? ಮಳೆಗಾಲ ಕ್ಷೀಣವಾಗಿ ನಿಧಾನವಾಗಿ ಚಳಿ ಹೆಜ್ಜೆಯ ಮೇಲೆ ಹೆಜ್ಜೆಯಿಡುತಾ ಬರುವಾಗಿನ ಸಂಭ್ರಮ ಮತ್ತು ಅದರ ಮಜ ಬೇರೆ. ತೆಳ್ಳಗಿನ ಇಬ್ಬನಿ ಎಲೆಗಳ ಮೇಲೆ ಹುಲ್ಲಿನ ಮೇಲೆ, ಜೇಡದ ಬಲೆಯಲ್ಲಿ ಮುತ್ತು ಪೋಣಿಸಿದಂತೆ ಅತ್ಯಾಕರ್ಷಕವಾಗಿ ತೋರುತ್ತದೆ. ಚಳಿಗಾಲದ ಮುಂಜಾವಿನ ಸೊಗಸನ್ನು ಅನುಭವಿಸಿದವನೇ ಧನ್ಯ. ಸೂರ್ಯವಂಶಿಗಳಿಗೆ ಈ ಭಾಗ್ಯವಿಲ್ಲ. ಇವರೆದ್ದು ವಾತಾವರಣದ ಸಂಪರ್ಕಕ್ಕೆ ಬರುವ … Read more

ವನ್ಯಾಪಘಾತಗಳು ಮತ್ತು ಪರಿಹಾರ: ಅಖಿಲೇಶ್ ಚಿಪ್ಪಳಿ ಅಂಕಣ

ಮೊನ್ನೆ ಕೇರಳದ ಮುಖ್ಯಮಂತ್ರಿ ಚಾಂಡಿ ಬಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಒಂದು ಮನವಿಯನ್ನು ಸಲ್ಲಿಸಿದರು. ಕರ್ನಾಟಕ-ಕೇರಳದ ಮಧ್ಯೆ ಸಂರಕ್ಷಿತ ವನ್ಯಪ್ರದೇಶದಲ್ಲಿ ಹಾದು ಹೋಗುವ ಹೈವೇಯಲ್ಲಿ ರಾತ್ರಿ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕು ಎಂಬುದು ಮನವಿಯ ಸಾರಾಂಶ. ಕರ್ನಾಟಕದ ಮುಖ್ಯಮಂತ್ರಿಗಳು ಸಧ್ಯಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕರ್ನಾಟಕದ ಮುಖ್ಯಮಂತ್ರಿಗಳ ಈ ನಿಲುವು ಸಂತೋಷದ ವಿಚಾರವೇ ಸೈ. ಜನಸಂಖ್ಯೆ ಬೆಳೆದ ಹಾಗೆ ಪಟ್ಟಣಗಳು ನಗರಗಳಾಗುತ್ತವೆ. ಹಳ್ಳಿಗಳು ಪೇಟೆಯ ಸ್ವರೂಪ … Read more

ಟೋನಿ ಮಾರ್ಕಿಸ್‌ಯೆಂಬ ಪರಮ ಘಾತುಕ: ಅಖಿಲೇಶ್ ಚಿಪ್ಪಳಿ ಅಂಕಣ

  ಇತರೆ ಪ್ರಾಣಿಗಳಿಗೆ ಹೋಲಿಸಿದರೆ ಶಾರೀರಿಕವಾಗಿ ಬಲಿಷ್ಟನಲ್ಲದ ಮಾನವ ಇವತ್ತು ಜಗತ್ತನ್ನು ಆಳುತ್ತಿದ್ದಾನೆ ಎಂದರೆ ಅದಕ್ಕೆ ಕಾರಣ ಇವನಿಗಿರುವ ಆಲೋಚನಾ ಶಕ್ತಿ, ಬುದ್ಧಿಮತ್ತೆ ಇತ್ಯಾದಿಗಳು. ಮನುಷ್ಯನ ವಿದ್ಯೆ-ಬುದ್ಧಿಗಳು ಜಗತ್ತಿನ ಒಳಿತಿಗೆ ಪೂರಕವಾದಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆ. ಇದನ್ನೇ ದುಷ್ಕಾರ್ಯಗಳಿಗೆ ಬಳಸಿದರೆ ಸಿಗುವುದು ಹಿಂಸೆ-ಅಶಾಂತಿ ಇತ್ಯಾದಿಗಳು. ಎಲ್ಲಾ ಪ್ರಾಣಿಗಳಿಗೂ ಹೊಟ್ಟೆ ತುಂಬಿದ ಮೇಲೆ ಮನೋರಂಜನೆ ಬೇಕು. ಬೆಕ್ಕು ಚಿನ್ನಾಟವಾಡುವ ಹಾಗೆ, ಆಟಗಳು ದೈಹಿಕವಾಗಿ ಬಲಿಷ್ಟವಾಗಿರಲು ಮತ್ತು ಮನಸ್ಸಿನ ನೆಮ್ಮದಿ-ಆರೋಗ್ಯಕ್ಕೆ ಪೂರಕ. ಆಧುನಿಕ ಮನುಷ್ಯ ರೂಡಿಸಿಕೊಂಡ ಆಟಗಳು ಸಾವಿರಾರು. ಇದರಲ್ಲಿ ಹೆಚ್ಚಿನವು … Read more

ಗಾಂಧಿಯನ್ನು ಕೊಂದವರ್‍ಯಾರು?:ಅಖಿಲೇಶ್ ಚಿಪ್ಪಳಿ ಅಂಕಣ

ಭೌತಿಕವಾದ ಗಾಂಧಿಯನ್ನು ಕೊಂದಿದ್ದು ನಾಥುರಾಮ್ ಗೋಡ್ಸೆ. ಗಾಂಧಿಯನ್ನು ಕೊಂದ ತಾನು ನೇಣಿಗೇರಿ ಸತ್ತ. 600 ಚಿಲ್ಲರೆ ರಾಜರನ್ನು ಹೊಂದಿದ ಪುರಾತನ ಭಾರತವನ್ನು ಒಡೆದಾಳಿ, ಗುಲಾಮಗಿರಿಗೆ ತಳ್ಳಿ ಮೆರೆದಿದ್ದು ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಕರೆಯಲಾಗುವ ಬ್ರೀಟಿಷರ ಹೆಗ್ಗಳಿಕೆ. ದೇಶಾಭಿಮಾನ ಮತ್ತು ಸ್ವಾಭಿಮಾನ ಮೇಳೈಸಿ, ಗುಲಾಮತನಕ್ಕೆ ಒಗ್ಗಿಹೋಗಿದ್ದ ಲಕ್ಷಾಂತರ ಭಾರತೀಯರಿಗೆ ಸ್ವದೇಶಿ, ಸ್ವಾಭಿಮಾನ, ಸ್ವಾತಂತ್ರ್ಯವೆಂಬ ಊರುಗೋಲುಗಳನ್ನು ನೀಡಿ ಎಬ್ಬಿಸಿ ನಿಲ್ಲಿಸಿದವರಲ್ಲಿ ಗಾಂಧಿ ಪ್ರಮುಖರು. ಇದಕ್ಕಾಗಿಯೇ ಗಾಂಧಿಯನ್ನು ಇಡೀ ದೇಶ ರಾಷ್ಟ್ರಪಿತನೆಂದು ಒಪ್ಪಿಕೊಂಡಿದೆ. ಸ್ವಾತಂತ್ರ್ಯ ಪಡೆದ ನಂತರದಲ್ಲಿ ರಚಿತವಾದ ಸರ್ಕಾರಗಳ ಧೋರಣೆಗಳು … Read more

ಮುಂದಿನ ಪೀಳಿಗೆಗೊಂದು ಪುಟ್ಟ ಪತ್ರ: ಅಖಿಲೇಶ್ ಚಿಪ್ಪಳಿ ಅಂಕಣ

ಭವಿಷ್ಯದ ಪುಟಾಣಿಗಳೆ, ಈ ಭೂಮಿ ಹುಟ್ಟಿ ೪೬೦ ಕೋಟಿ ಅಗಾಧ ವರ್ಷಗಳಾದವು. ನವಮಾಸಗಳು ಹೊತ್ತು-ಹೆತ್ತು ಇವತ್ತು ಜಗತ್ತಿಗೆ ಬಂದು ಕಣ್ಬಿಡುವ ಹೆಚ್ಚಿನ ನೀವುಗಳು ಖಾಸಗಿ-ಸರ್ಕಾರಿ ಆಸ್ಪತ್ರೆಗಳ ಫಿನೈಲ್-ಡೆಟಾಲ್‌ಗಳ ವಾಸನೆಗಳನ್ನೇ ಸೇವಿಸಿ ವಿಸ್ಮಿತರಾಗಿ ಹೊರಜಗತ್ತನ್ನು ಗಮನಿಸುತ್ತೀರಿ. ಕಲುಷಿತ ವಾತಾವರಣ ನಿಮಗೆ ಥಂಡಿ-ಜ್ವರ-ಕಫಗಳನ್ನು ಧಾರಾಳವಾಗಿ ಧಾರೆಯೆರೆಯುತ್ತದೆ. ಗಾಬರಿಗೊಂಡ ತಂದೆ-ತಾಯಿ, ಅಜ್ಜ-ಅಜ್ಜಿಯರನ್ನು ಸಮಾಧಾನ ಮಾಡಲು ಜೊತೆಗೆ ನಿಮಗಾದ ಜಡ್ಡನ್ನು ಹೋಗಲಾಡಿಸಲು ಹಲವಾರು ಮದ್ದುಗಳಿವೆ, ಚುಚ್ಚುಮದ್ದುಗಳಿವೆ, ಸಿರಫ್‌ಗಳಿವೆ ಇತ್ಯಾದಿ ಸಾವಿರಗಳಿವೆ. ಇವುಗಳನ್ನು ಪೂರೈಸಿ ತಮ್ಮ ಹಣದ ಥೈಲಿಯನ್ನು ತುಂಬಿಸಿಕೊಳ್ಳಲು ಅಂತಾರಾಷ್ಟ್ರೀಯ ಕಂಪನಿಗಳು ತುದಿಗಾಲಲ್ಲಿ … Read more

ಅಲ್ಲಿ ಫುಕೋಕಾ-ಇಲ್ಲಿ ಚೇರ್ಕಾಡಿ: ಅಖಿಲೇಶ್ ಚಿಪ್ಪಳಿ ಅಂಕಣ

ಬೀಳು ಭೂಮಿಯ ಭೀಷ್ಮ-ಕರ್ನಾಟಕದ ಹೆಮ್ಮೆಯ ಕೃಷಿ ಋಷಿ – ಚೆರ್ಕಾಡಿ ರಾಮಚಂದ್ರರಾವ್ ಭವ್ಯ ಭಾರತದ ಹೆಮ್ಮೆಯ ಕರ್ನಾಟಕದ ಕರಾವಳಿ ತೀರದಲ್ಲಿ ಬರೀ ಎರಡೂಕಾಲು ಎಕರೆ ಜಾಗದಲ್ಲಿ ಕೃಷಿ ಮಾಡುತ್ತಾ ನೆಮ್ಮದಿಯ ಜೀವನವನ್ನು ಸಾಗಿಸಿದ, ದೇಶಕ್ಕೇ ಮಾದರಿಯಾಗಬಲ್ಲ, ಯಾವುದೇ ಕೃಷಿ-ತೋಟಗಾರಿಕಾ ವಿಶ್ವವಿದ್ಯಾನಿಲಯಗಳು ಮಾಡದ ಸಾಧನೆಯನ್ನು ಮಾಡಿ ಸ್ವಾವಲಂಬಿ ಬದುಕನ್ನು ಬದುಕಿದ ವ್ಯಕ್ತಿ ಆಗಿ ಹೋಗಿದ್ದಾರೆ. ಸರ್ಕಾರದ ಭಿಕ್ಷೆಯಾದ ಸಬ್ಸಿಡಿಯನ್ನು ಧಿಕ್ಕರಿಸಿ, ಲೌಕಿಕ ಜಗತ್ತಿನ ಯಾವ ಆಧುನಿಕ ಉಪಕರಣಗಳನ್ನೂ ಬಳಸದೆ, ವಿದ್ಯುತ್ ಇಲ್ಲದೇ ಕೃಷಿಯಿಲ್ಲ, ರಾಸಾಯನಿಕಗಳಿಲ್ಲದೆ ಕೃಷಿ ಅಸಾಧ್ಯ ಎಂಬ … Read more

ಸುರಿಯುವ ಫುಕೊಶಿಮ-ಎರವಾಗಲಿರುವ ಕೊಡಂಕುಳಂ: ಅಖಿಲೇಶ್ ಚಿಪ್ಪಳಿ ಅಂಕಣ

ಫುಕೊಶಿಮ ಅಣು ದುರಂತದ ಬೆನ್ನಲ್ಲೆ ಬಹಳಷ್ಟು ಅವಘಡಗಳು ಅಲ್ಲಿ ಸಂಭವಿಸುತ್ತಿವೆ. ಇದೀಗ ಹೊಸದಾಗಿ ಸೇರ್ಪಡೆಯೆಂದರೆ, ಅಣು ರಿಯಾಕ್ಟರ್‍ಗಳ ಬಿಸಿಯನ್ನು ತಣ್ಣಗಾಗಿಸುವ ನೀರಿನ ಭದ್ರವಾದ ಟ್ಯಾಂಕ್‍ಗಳ ಸೋರಿಕೆ. ಬಳಕೆಯಾದ ವಿಕಿರಣಯುಕ್ತ ನೀರಿನ ಟ್ಯಾಂಕ್ ಸೋರಿಕೆಗೊಂಡು ಪೆಸಿಫಿಕ್ ಸಮುದ್ರಕ್ಕೆ ಸೇರಿದೆ. 2011ರ ಬೀಕರ ಸುನಾಮಿ ಮತ್ತು ಭೂಕಂಪ ಜಪಾನಿನ ಪುಕೊಶಿಮಾದ ಅಣು ಸ್ಥಾವರಗಳನ್ನು ಹಾಳುಗೆಡವಿ ಅಂತಾರಾಷ್ಟ್ರೀಯ ಬಿಕ್ಕಟ್ಟನ್ನುಂಟುಮಾಡಿತ್ತು. ಈಗಾಗಲೇ 8 ಟ್ಯಾಂಕಿನಿಂದ ಸುಮಾರು 300 ಟನ್‍ಗಳಷ್ಟು ವಿಕಿರಣಯುಕ್ತ ನೀರು ಸೋರಿಕೆಯಾಗಿದೆ ಎಂದು ಬಿಬಿಸಿ ವರದಿ ಮಾಡಿದೆ. ಸೋರಿಕೆಯಾದ ಜಾಗದಿಂದ 50 … Read more

ಬಂಗಾರದಕ್ಕಿ ಮತ್ತು ಇತರೆಗಳು:ಅಖಿಲೇಶ್ ಚಿಪ್ಪಳಿ ಅಂಕಣ

 ವಿಟಮಿನ್ ಎ ಕೊರತೆಯಿಂದ ಪ್ರಪಂಚದಲ್ಲಿ ಪ್ರತಿವರ್ಷ ೨೦ ಲಕ್ಷ ಜನ ಸಾಯುತ್ತಾರೆ ಮತ್ತು ೫ ಲಕ್ಷ ಮಕ್ಕಳು ಕುರುಡರಾಗುತ್ತಿದ್ದಾರೆ ಎಂಬುದೊಂದು ಅಂಕಿ-ಅಂಶ. ವಿಟಮಿನ್ ಎ ಮನುಷ್ಯ ದೇಹಕ್ಕೆ ಅಗತ್ಯವಾಗಿ ಬೇಕಾಗುವ ಜೀವಸತ್ವ. ವಿಟಮಿನ್ ಎ ಕೊರತೆಯು ಮುಖ್ಯವಾಗಿ ಕಣ್ಣಿನ ಮೇಲಾಗುತ್ತದೆ ಎಂಬುದು ಆರೋಗ್ಯ ವಿಜ್ಞಾನ ಕಂಡುಕೊಂಡಿರುವ ಸತ್ಯ. ಏರುತ್ತಿರುವ ಜನಸಂಖ್ಯೆ, ಬಡತನ ಇತ್ಯಾದಿ ಕಾರಣಗಳಿಂದಾಗಿ ಬಡವರ ಮಕ್ಕಳಿಗೆ ವಿಟಮಿನ್ ಎ ಕೊರತೆಯಾಗಿ ಕಾಡುತ್ತದೆ ಮತ್ತು ಇದರಿಂದಾಗಿ ಪ್ರಪಂಚದ ಮೇಲೆ ತೀವ್ರವಾದ ಪರಿಣಾಮವಾಗುತ್ತದೆ. ಹೆಚ್ಚಿನ ಬಡ ಮಕ್ಕಳು ದೃಷ್ಟಿಮಾಂದ್ಯರಾದರೆ … Read more

ಅತ್ಯಾಚಾರ ತಡೆಯುವ ಬಗೆ: ಅಖಿಲೇಶ್ ಚಿಪ್ಪಳಿ ಅಂಕಣ

ಅದೊಂದು ೬ನೇ ಕ್ಲಾಸಿನಲ್ಲಿ ಓದುತ್ತಿರುವ ಚುರುಕಾದ ಹೆಣ್ಣುಮಗು. ಆ ದಿನ ಶನಿವಾರ ಗೆಳತಿಯರಿಗೆ ಬೈ ಸೋಮವಾರ ಸಿಗ್ತೀನಿ ಎಂದು ಹೇಳಿ ಮನೆಕಡೆ ನಡಕೊಂಡು ಹೊರಟಿತು. ಹೈವೇಯಿಂದ ಸುಮಾರು ಅರ್ಧ ಕಿ.ಮಿ. ಆಸುಪಾಸಿನಲ್ಲಿ ಮನೆ. ಆ ವಯಸ್ಸಿನ ಮಕ್ಕಳಲ್ಲಿ ವಯೋಸಹಜ ಆಟವಾಡುವ ವಾಂಛೆಯಿರುತ್ತದೆ. ಇಲ್ಲಿ ನೋಡಿದರೆ ಕಣ್ಣುಹಾಯಿಸುವಷ್ಟು ದೂರ ೪೦ ಅಡಿ ಅಗಲದಲ್ಲಿ ಕಪ್ಪನೆಯ ಹೆದ್ದಾರಿ ಮಲಗಿದೆ. ಅದರ ಮೇಲೆ ವೇಗವಾಗಿ ಸಾಗುವ ಕಾರುಗಳು, ದೈತ್ಯ ಲಾರಿಗಳು. ಮಣ್ಣಾಡಲು ರಸ್ತೆಯಲ್ಲಿ ಮಣ್ಣೇ ಇಲ್ಲ. ಇಲ್ಲೊಂದು ಒಳದಾರಿಯಿದೆ, ಮನೆಗೆ ಹತ್ತಿರ … Read more