ಕನ್ನಡಿಗಂಟದ ಬಿಂದಿ: ಡಾ.ಅಜಿತ್ ಹರೀಶಿ
ಜೇಡ ತನ್ನೊಳಗಿನಿಂದ ತಾನು ಅಂಟನ್ನು ಸ್ರವಿಸುತ್ತಾ ಬಲೆ ನೇಯುತ್ತಲೇ ಇತ್ತು. ಸೂರ್ಯನ ಕಿರಣಗಳು ಬಲೆಯ ಮೇಲೆ ಬಿದ್ದಾಗ ಕಣ್ಣಿಗೆ ಬಣ್ಣದೋಕುಳಿಯಾಗುತ್ತಿತ್ತು. ದಿನವೂ ಅದೊಂದು ಚಿತ್ತಾಪಹಾರಿಯಾದ ದೃಶ್ಯವಾಗಿತ್ತು. ಆದರೆ ಇಂದೇಕೋ ಕಿರಿಕಿರಿ ಉಂಟುಮಾಡುತ್ತಿದೆ ಎಂದು ಅನ್ನಿಸಿತು. ಕೆಲಸದ ರಾಜಮ್ಮ ಅದಾಗಲೇ ನನ್ನ ರೂಮಿಗೆ ಬಂದು ನೆಲ ಗುಡಿಸುತ್ತಿದ್ದಳು. ರಾಜಮ್ಮ, ಮೇಲೆಲ್ಲಾ ನೋಡು, ಕಸ ಹೊಡೆಯೋದೇ ಇಲ್ಲ. ಹೇಳದೇ ಯಾವ ಕೆಲಸವನ್ನೂ ಇತ್ತೀಚೆಗೆ ನೀನು ಮಾಡಲ್ಲ’ ತುಸು ಗಡಸು ಧ್ವನಿಯಲ್ಲಿ ಜೇಡರ ಬಲೆ ತೋರಿಸುತ್ತಾ ಹೇಳಿದೆ. ಅಯ್ಯೋ, ಇದೊಳ್ಳೆ ಆಯ್ತಲ್ಲಾ … Read more