ನಾ ಕಂಡಂತೆ: ಶೀತಲ್

ನಾನು ಈ ಮನೆಗೆ ಬಂದು ಈಗ ನಾಲ್ಕು ವರ್ಷವಾಯಿತು. ಮನೆಯೆಂದರೆ ಅಬ್ಬಾ! ಇವರ ಮನೆಯಂತೆ ಯಾವ ಮನೆಯೂ ಇಲ್ಲ ಆ ಲೇಔಟ್ ನಲ್ಲಿ ಎಂದು ಆಗಾಗ ಕೆಲಸದಾಕೆ ಸುಗುಣ ಮನೆಯೊಡತಿ ವೈದೇಹಿ ಯವರ ಬಳಿ ಹೇಳುವುದನ್ನು ಕೇಳಿದ್ದೇನೆ. ಇವರ ಮನೆಯಲ್ಲದೆ ನಾನು ಯಾವ ಮನೆಗೂ ಹೋಗುವ ಹಾಗಿಲ್ಲವಲ್ಲ ಹಾಗಾಗಿ ನನ್ನ ಸ್ವಂತ ಅಭಿಪ್ರಾಯವಲ್ಲ ಇದು. ಇವರ ಮನೆಯಿಂದ ಎದುರು ಕಾಣುವ ಎರಡು ಮನೆಗಳು, ಹಾಗೆ ಬಲಗಡೆಗೆ, ಇವರ ಮನೆಯ ಹೂದೋಟ ದಾಟಿದರೆ ಕಾಣುವ ಮನೆ ಕೂಡ ಇವರ … Read more

ನೆನಪು: ಕೆ. ನಲ್ಲತಂಬಿ

ತಮಿಳಿನಲ್ಲಿ: ವಣ್ಣನಿಲವನ್ಕನ್ನಡಕ್ಕೆ: ಕೆ. ನಲ್ಲತಂಬಿ “ಹೋಗಲಿಕ್ಕೆ ಒಂದು ಗಂಟೆ, ಬರಲಿಕ್ಕೆ ಒಂದು ಗಂಟೆ. ಅಲ್ಲಿ ಅಣ್ಣನ ಮನೆಯಲ್ಲಿ ಹತ್ತು ನಿಮಿಷ ಆಗುತ್ಯೇ? ಈಗ ಗಂಟೆ ಹತ್ತೂವರೆ ಆಗಲಿದೆ. ಎರಡು ಎರಡುವರೆಯೊಳಗೆ ಬಂದು ಬಿಡಬಹುದು. ಹೋಗಿ ಹಣ ತೆಗೆದುಕೊಂಡು ಬಾ” ಎಂದ ಸೆಲ್ಲಚ್ಚಾಮಿ. ಸರೋಜಳಿಗೆ ಏನು ಮಾಡಬೇಕೆಂದು ತಿಳಿಯಲಿಲ್ಲ. ಅಲ್ಲಿ ಕಲ್ಲಿಡೈಕುರುಚ್ಚಿ ರಾಮಸಾಮಿಯನ್ನು ನೆನಪು ಮಾಡಿಕೊಂಡರೆ ವಾಕರಿಕೆ ಬರುತ್ತದೆ.“ನಾನು ಅಂಗಡಿಯನ್ನು ನೋಡಿಕೊಳ್ಳುತ್ತೇನೆ. ನೀವು ಹೋಗಿ ಕೇಳಿ ತೆಗೆದುಕೊಂಡು ಬನ್ನಿ” ಎಂದಳು ಸರೋಜ. “ಅದು ಗೊತ್ತಿಲ್ಲವೇನು. ನಾನು ನಿನ್ನನ್ನು ಹೋಗಲು … Read more

ಗ್ರೀಸ್‍ಮನ್: ಡಾ. ಶಿವಕುಮಾರ ಡಿ.ಬಿ 

ಅಂದು ಜಯಣ್ಣ ಎಂದಿನಂತೆ ಇರಲಿಲ್ಲ. ಕೊಂಚ ವಿಷಣ್ಣನಾಗಿ ಕೂತಿದ್ದ. ಅವನ ತಲೆಯಲ್ಲಿ ಮಗಳ ಶಾಲಾ ಶುಲ್ಕ, ಮನೆಗೆ ಬೇಕಾಗಿರುವ ದಿನಸಿ ಪದಾರ್ಥಗಳಿಗೆ ಯಾರ ಬಳಿ ಹಣಕ್ಕಾಗಿ ಅಂಗಲಾಚುವುದು? ಎಂಬ ಚಿಂತೆ ಆವರಿಸಿತ್ತು. ಇತ್ತೀಚೆಗೆ ಯಾಕೋ ಮೊದಲಿನಂತೆ ಲಾರಿಗಳು ಟ್ರಕ್ ಲಾಬಿಯಲ್ಲಿ ಸರಿಯಾಗಿ ನಿಲ್ಲುತ್ತಿರಲಿಲ್ಲ. ಹೀಗಾಗಿ ಲಾರಿಗಳಿಗೆ ಗ್ರೀಸ್ ತುಂಬುವ ಕೆಲಸವು ಸರಿಯಾಗಿ ನಡೆಯದೆ ಸಂಸಾರದ ನಿರ್ವಹಣೆ ಕಷ್ಟವಾಗಿತ್ತು. ಅದರಲ್ಲೂ ಜಯಣ್ಣನ ಅಕ್ಕಪಕ್ಕದ ವೃತ್ತಿಸ್ನೇಹಿತರೇ ಅವನಿಗೆ ಪೈಪೋಟಿಯಾಗಿ ನಿಂತಿದ್ದರು. ಲಾರಿ ತಮ್ಮ ಮುಂದೆ ನಿಲ್ಲುವುದೇ ತಡ ತಾ ಮುಂದು, … Read more

ನಮ್ಮ ಶ್ರೀರಾಮಚಂದ್ರನಿಗೊಂದು ಹೆಣ್ಣು ಕೊಡಿ: ಪ್ರಶಾಂತ್ ಬೆಳತೂರು

ಹೆಗ್ಗಡದೇವನಕೋಟೆಯಿಂದ ೨೫ ಕಿ.ಮೀ. ದೂರದಲ್ಲಿರುವ ಬೆಟ್ಟದ ಕೆಳಗಿನ ಕೂಲ್ಯ‌ ಗ್ರಾಮದ ನಮ್ಮ ಈ ಶ್ರೀರಾಮಚಂದ್ರ ಓದಿದ್ದು ಎಸ್. ಎಸ್. ಎಲ್. ಸಿ.ಯವರೆಗೆ ಮಾತ್ರ.ಬಾಲ್ಯದಿಂದಲೂ ಓದಿನಲ್ಲಿ ಆಸಕ್ತಿ ಇರದ ಶ್ರೀರಾಮಚಂದ್ರನಿಗೆ ದನ-ಕುರಿಗಳೆಂದರೆ, ಹೊಲದ ಕೆಲಸಗಳನ್ನು ಮಾಡುವುದೆಂದರೆ ಎಲ್ಲಿಲ್ಲದ ಅತೀವ ಪ್ರೀತಿ.ಪರಿಣಾಮವಾಗಿ ಓದುವುದರಲ್ಲಿ ಆಸಕ್ತಿಯನ್ನು ಕಳೆದುಕೊಂಡಿದ್ದ ಇವನಿಗೆ ಶಾಲೆಯೆಂದರೆ ರುಚಿಗೆ ಒಗ್ಗದ ಕಷಾಯ.ಸದಾ ಕೊನೆಯ ಬೆಂಚಿನ ಖಾಯಂ ವಿದ್ಯಾರ್ಥಿಯಾಗಿ ಮೇಷ್ಟ್ರುಗಳ ಕೆಂಗಣ್ಣಿಗೆ ಗುರಿಯಾಗಿ ಅವರು ಆಗಾಗ ಕೊಡುತ್ತಿದ್ದ ಬೆತ್ತದೇಟಿಂದ ಇವನ ಕೈಗಳು ಜಡ್ಡುಗಟ್ಟುವುದಿರಲಿ ಮೇಷ್ಟ್ರು ಕೈಗಳೇ ಸೋತು ಸುಣ್ಣವಾಗಿದ್ದವು. ಶೇ … Read more

ಆಸ್ತಿವಾರ: ರಾಜಶ್ರೀ ಟಿ. ರೈ ಪೆರ್ಲ

“ಅಪ್ಪ ಯಾಕೆ ಹಾಗೆ ಹೇಳಿದರು ಎಂದು ನನಗೆ ಗೊತ್ತಾಗಲಿಲ್ಲ. ಮೋಳಿಯ ಮನೆಯವರು ನಮ್ಮಷ್ಟು ಸಿರಿವಂತರೇನು ಅಲ್ಲ ನಿಜ, ಆದರೆ ದೂರದ ಸಂಬಂಧಿಕರು ಎಂಬ ನೆಲೆಯಲ್ಲಿ ನಾನು ಆತ್ಮೀಯವಾಗಿ ಮಾತನಾಡಿದ್ದೆ. ಮದುವೆ ಮನೆಯಲ್ಲಿಯೇ ಅಪ್ಪನ ಮುಖ ಊದಿಕೊಂಡಿತ್ತು. ಊಟದ ಹೊತ್ತಿಗೆ ಸ್ವಲ್ಪ ಅವಕಾಶ ಸಿಕ್ಕಿದ್ದೇ ನನಗೆ ಮಾತ್ರ ಕೇಳುವಂತೆ ಗಡುಸಾಗಿಯೇ ಪಿಸುಗುಟ್ಟಿದ್ದರು. “ಅವರ ಹತ್ತಿರ ಅತಿಯಾದ ಆಪ್ತತೆಯೇನು ಬೇಕಾಗಿಲ್ಲ, ಅವರು ಜನ ಅಷ್ಟು ಸರಿ ಇಲ್ಲ. ನಮಗೂ ಅವರಿಗೂ ಆಗಿ ಬರಲ್ಲ” ಅಪ್ಪನ ಪಿಸುಗುಟ್ಟುವಿಕೆಯಲ್ಲಿ ಬುಸುಗುಟ್ಟುವ ಭಾವ ತುಂಬಿತ್ತು. … Read more

ಒಳತೋಟಿ: ಆನಂದ್ ಗೋಪಾಲ್

‘ಒಂದು ಶುಕ್ರವಾರ ಸರಿ; ಪ್ರತಿ ಶುಕ್ರವಾರವೂ ಕಾಲೇಜಿಗೆ ತಡ ಎಂದರೆ ಯಾವ ಪ್ರಿನ್ಸಿಪಾಲ್ ತಾನೆ ಸುಮ್ಮನಿರುತ್ತಾರೆ?’ – ಹೀಗೆ ಯೋಚಿಸುತ್ತಲೇ ಶೀಲಶ್ರೀ ಪ್ರಿನ್ಸಿಪಾಲರ ಕಚೇರಿಯೊಳಗೆ ಕಾಲಿಟ್ಟಳು. ಅದೇ ಅಲ್ಲಿಂದ ಎಲ್ಲಿಗೋ ಹೊರಟಿದ್ದ ಅವರು ಇವಳತ್ತ ನೋಡಲೂ ಸಮಯವಿಲ್ಲದವರಂತೆ ದುಡುದುಡು ನಡದೆಬಿಟ್ಟರು. ಶೀಲಶ್ರೀಗೆ ಇದು ತುಸು ಸಮಾಧಾನ ತಂದಿತು. ಆದರೂ ‘ವಾರದ ಮೀಟಿಂಗ್’ನಲ್ಲಿ ಇದನ್ನು ಅವರು ಪ್ರಸ್ತಾಪಿಸದೆ ಬಿಡುವವರಲ್ಲ ಎಂದು ಅವಳಿಗೆ ಗೊತ್ತಿತ್ತು! ಸದ್ಯ ಇವತ್ತಿಗೆ ಮುಜುಗರ ತಪ್ಪಿತು ಎಂದು ಹಾಜರಾತಿ ವಹಿಯಲ್ಲಿ ಸಹಿ ಹಾಕಿ ಕ್ಲಾಸ್ನತ್ತ ನಡೆದಳು. … Read more

ಸುಳ್ಳ ಸಾಕ್ಷಿಗಳ ಊರಿಗೆ: ಅಶ್ಫಾಕ್ ಪೀರಜಾದೆ

1 – Balu is imprisoned for murder. come soon sms ಓದುತ್ತಿದ್ದಂತೆಯೇ ನನಗೆ ದಿಗ್ಭ್ರಮೆಯಾಯಿತು ಮತ್ತು ಕಣ್ಣು ಸುತ್ತು ಬಂದಂತಾಗಿತ್ತು. ಬಾಲು ಒಂದು ಹೆಣ್ಣಿನ ಕೊಲೆ ಮಾಡಿ ಪೋಲೀಸರ ಅತಿಥಿಯಾಗಿದ್ದಾನೆ ಎಂದು ನನ್ನ ಇನ್ನೊಬ್ಬ ಗೆಳೆಯ ಕುಮಾರ್ ಬರೆದಿದ್ದ. ಆತ ಹೆಚ್ಚಿನ ವಿವರವೇನೂ ನೀಡಿರಲಿಲ್ಲ. ನನಗೆ ಕುಮಾರ್ ತಿಳಿಸಿದ ಸುದ್ದಿಯಿಂದ ಆಘಾತವಾಗಿದ್ದರೂ ಇದೆಲ್ಲ ಸತ್ಯವಾಗಿರಲಿಕ್ಕಿಲ್ಲ ಸತ್ಯವಾಗುವುದೂ ಬೇಡವೆಂದು ಮನದಲ್ಲಿ ಪ್ರಾರ್ಥಿಸಿದೆ. ಏಕೆಂದರೆ ಬಾಲುವಿನ ನಡವಳಿಕೆ ಸ್ವಭಾವದ ಪೂರ್ಣ ಪರಿಚಯ ನನಗಿದೆ. ಅವನ ನಿರ್ಮಲವಾದ ಪ್ರಶಾಂತವಾದ … Read more

ಕ್ಷಮಿಸಿ ಸಂಪಾದಕರೇ. . ಕತೆ ಕಳುಹಿಸಲಾಗುತ್ತಿಲ್ಲ. . : ಸತೀಶ್ ಶೆಟ್ಟಿ ವಕ್ವಾಡಿ

“ಏನ್ರೀ ಅದು, ಅಷ್ಟು ಡೀಪಾಗಿ ಮೊಬೈಲ್ ನೋಡ್ತಾ ಇದ್ದೀರಾ, ಏನ್ ಗರ್ಲ್ ಫ್ರೆಂಡ್ ಮೆಸೇಜಾ ? ” ರಾತ್ರಿ ಊಟದ ಸಮಯದಲ್ಲಿ ಗೆಳೆಯ ಪ್ರಕಾಶ ಮೈಸೂರಿನ ಅಕ್ಕನ ಮನೆಗೆ ಹೋದವ ತಂದು ಕೊಟ್ಟ ನಾಟಿ ಕೋಳಿಯಿಂದ ಮಾಡಿದ ಚಿಕ್ಕನ್ ಸುಕ್ಕ ಮೆಲ್ಲುತ್ತಿದ್ದ ಹೆಂಡತಿ ನನ್ನ ಕಾಲೆಳೆದಿದ್ದಳು ” ಅಲ್ಲ ಕಣೆ. . ಪ್ರಪಂಚದಲ್ಲಿ ಯಾವ ಗಂಡಸಿಗಾದರೂ ಹೆಂಡತಿ ಎದುರುಗಡೆ ತನ್ನ ಗರ್ಲ್ ಫ್ರೆಂಡ್ ಮೆಸೇಜ್ ನೋಡುವ ಧೈರ್ಯ ಇರುತ್ತೆ ಹೇಳು ? ಅದು ನಮ್ಮ ನಟರಾಜ್ ಡಾಕ್ಟರ್ … Read more

ಜವಾಬ್ದಾರಿ: ಬಂಡು ಕೋಳಿ

ಗುರುಪ್ಪ ಚಿಂತಿ ಮನಿ ಹೊಕ್ಕು ಕುಂತಿದ್ದ. ಹಿಂದಿನ ದಿನ ಊರಿಂದ ಬಂದಾಗಿಂದ ಅವ್ನ ಮಾರಿ ಮ್ಯಾಲಿನ ಕಳೀನ ಉಡುಗಿತ್ತು. ಅವ್ವ ಅಂದಿದ್ದ ಮಾತು ಖರೇನ ಅವ್ನ ಆತ್ಮಕ್ಕ ಚೂಪಾದ ಬಾಣದಂಗ ನಟ್ಟಿತ್ತು. ಅದೆಷ್ಟ ಅಲಕ್ಷ ಮಾಡಾಕ ಪ್ರಯತ್ನಿಸಿದ್ರೂ ಆತ್ಮಸಾಕ್ಷಿ ಅವನನ್ನ ಅಣಕಿಸಿ ಮತ್ಮತ್ತ ಹಿಂಸಿಸಾಕ ಹತ್ತಿತ್ತು. ಮನಸ್ಸಿನ ಮೂಲ್ಯಾಗ ಒಂದ್ಕಡಿ ತಾನು ಹಡೆದಾವ್ರಿಗಿ ಮೋಸಾ ಮಾಡಾಕ ಹತ್ತೇನಿ ಅನ್ಸಾಕ ಹತ್ತಿತ್ತು. ಒಂದ್ರೀತಿ ಅಂವಗ ಎದ್ರಾಗೂ ಚೌವ್ವ ಇಲ್ದಂಗಾಗಿ ತನ್ನಷ್ಟಕ್ಕ ತಾನ ಅಪರಾಧಿ ಮನಸ್ಥಿತಿಯೊಳ್ಗ ಕುಸ್ದ ಕುಂತಿದ್ದ. ಕಾಲೇಜಿನ್ಯಾಗ … Read more

ನೆತ್ತರ ಕಲೆ ?: ಶರಣಗೌಡ ಬಿ ಪಾಟೀಲ ತಿಳಗೂಳ

ಆ ಘಟನೆ ನನ್ನ ಕಣ್ಮುಂದೆ ನಡೆದು ಹೋಯಿತು ಅದು ಇನ್ನೂ ನನ್ನ ಕಣ್ಣಿಗೆ ಕಟ್ಟಿದಂತಾಗಿದೆ ಇಂತಹ ಘಟನೆ ಇದೇ ಮೊದಲ ಸಲ ನೋಡಿದೆ ಅಂತ ಆಗ ತಾನೆ ಬಸ್ಸಿಳಿದು ಬಂದ ಫಕೀರಪ್ಪನ ಬೀಗ ಬಸಪ್ಪ ಶಂಕ್ರಾಪೂರದ ಕಟ್ಟೆಯ ಮೇಲೆ ದೇಶಾವರಿ ಮಾತಾಡುವವರ ಮುಂದೆ ಹೇಳಿದಾಗ ಅವರು ಗಾಬರಿಯಿಂದ ಕಣ್ಣು, ಕಿವಿ ಅಗಲಿಸಿದರು. ಬಾ ಬಸಪ್ಪ ಅಂಥಾದು ಏನಾಯಿತು? ಅಂತ ಪ್ರಶ್ನಿಸಿ ಅತಿಥಿ ಸತ್ಕಾರ ತೋರಿ ತಮ್ಮ ಮಧ್ಯೆ ಕೂಡಿಸಿಕೊಂಡರು. ಕಲ್ಬುರ್ಗಿ ರಿಂಗ ರಸ್ತಾ ಮೊದಲಿನಂಗ ಇಲ್ಲ ಜನರ … Read more

ಹುತ್ತದ ಅರಮನೆಯಲ್ಲಿ ವಿಷದ ಸುಂಟರಗಾಳಿಯು: ಶ್ರೀಧರ ಬನವಾಸಿ

“ಆಂಧ್ರದ ವೀರಬ್ರಹ್ಮೇಂದ್ರಸ್ವಾಮಿ ಎಂಬ ಕಾಲಜ್ಞಾನಿಗಳು ಮುನ್ನೂರು ವರ್ಷಗಳ ಹಿಂದೆನೇ ಈಶಾನ್ಯ ದಿಕ್ಕಿಂದ ಕೊರೊಂಗೊ ಅನ್ನೋ ಮಹಾಮಾರಿ ಕಾಯಿಲೆ ಇಡೀ ಜಗತ್ತನ್ನು ಆವರಿಸಿ ಜನ್ರ ನೆಮ್ದಿನಾ ಹಾಳ್ ಮಾಡುತ್ತೆ, ಜನ್ರು ಕಾಯಿಲೆಯಿಂದ ದಿನಾ ಸಾಯೋ ಹಂಗೆ ಮಾಡುತ್ತೆ ಅಂತ ಭವಿಷ್ಯವಾಣಿ ನುಡಿದಿದ್ರಂತೆ. ನೋಡ್ರಪ್ಪ ನಮ್ ದೇಶ್ದದಲ್ಲಿ ಎಂತಂಥಾ ಮಹಾನ್‌ಪುರುಷ್ರು ಈ ಹಿಂದೆನೇ ಬದುಕಿ ಬಾಳಿ ಹೋಗವ್ರೆ ಇಂತವ್ರ ಹೆಸ್ರನ್ನ ಈ ಹಾಳಾದ್ ಕೊರೊನಾ ಕಾಲ್ದಲ್ಲೇ ನಾವು ಕೇಳೊಂಗಾಯ್ತು. ಈ ಕೆಟ್ಟ ಕಾಯಿಲೆನಾ ಮುನ್ನೂರು ವರ್ಷಗಳ ಹಿಂದೇನೆ ಅವ್ರು ಹೇಳಿದ್ರು … Read more

ರಕ್ತ ಸಂಬಂಧ: ಮಾಲತಿ ಮುದಕವಿ

ಅಂದು ಬೆಳಿಗ್ಗೆಯಿಂದಲೇ ನನ್ನ ತಲೆ ಚಿಂತೆಯ ಗೂಡಾಗಿತ್ತು. ಮಗ ಹಾಗೂ ಸೊಸೆ ಇಬ್ಬರೂ ಕೆಲಸಕ್ಕೆ ಹೋಗಿದ್ದರು. ಅವರು ಬರುವುದು ಇನ್ನು ಸಂಜೆಯೇ. ಅಲ್ಲದೆ ಸೊಸೆಯ ಎದುರು ಮಗಳನ್ನು ಬೈಯಲಾದೀತೆ? ಅವಳೆದುರು ಮಗಳ ಕಿಮ್ಮತ್ತು ಕಡಿಮೆಯಾಗಲಿಕ್ಕಿಲ್ಲವೇ? ಇನ್ನು ನನ್ನ ಗಂಡ ರವಿಯೋ ಈ ಅರುವತ್ತರ ಸಮೀಪದಲ್ಲಿಯೂ ಬಿಜಿನೆಸ್ ಎಂದು ಯಾವಾಗಲೂ ಟೂರಿನ ಮೇಲೆಯೇ ಇರುತ್ತಾರೆ. ನಾನು, ಇತ್ತೀಚೆಗೆ ಶ್ರೀವತ್ಸ ಹಾಗೂ ಅವನ ಹೆಂಡತಿ ಎಂದರೆ ನನ್ನ ಸೊಸೆ ನಂದಿನಿ ಕೂಡ “ನೀವು ಇದುವರೆಗೂ ದುಡಿದದ್ದು ಸಾಕು. . ಈಗ … Read more

ಮುಗ್ಧ ಮಾಂಗಲ್ಯ: ಸಿದ್ರಾಮ ತಳವಾರ

ಕೇರಿಯ ಮುಂಭಾಗದಲ್ಲೇ ಶತಮಾನಗಳಷ್ಟು ಹಳೆಯದಾದ ಹುಣಸೀಮರದ ಬುಡದಲ್ಲಿ ತಲೆ ಮೇಲೆ ಕೈ ಹೊತ್ತು ಪೇಚು ಮಾರಿ ಹಾಕಿಕೊಂಡು ಕೂತ ಕರವೀರನನ್ನು ಸಮಾಧಾನ ಮಾಡಲು ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಅಷ್ಟಕ್ಕೂ ಅಲ್ಲೇನಾಗಿದೆ ಅನ್ನೋ ಕುತೂಹಲವಂತೂ ಇತ್ತು. ಹೀಗಾಗಿ ಎಲ್ಲರ ಮುಖದಲ್ಲೂ ಒಂಥರದ ಭಯ, ಸಂಶಯ, ಕುತೂಹಲ ಮನೆ ಮಾಡಿದಂತಿತ್ತು. ಆಗಷ್ಟೇ ಹೊರಗಡೆಯಿಂದ ಬಂದ ಮಂಜನಿಗೆ ಆ ಬಗ್ಗೆ ಸ್ಪಷ್ಟತೆ ಏನೂ ಇರದಿದ್ದರೂ ಅಲ್ಲಿ ಒಂದು ದುರ್ಘಟನೆ ನಡೆದಿದೆ ಅನ್ನೋ ಗುಮಾನಿ ಮಂಜನ ತಲೆಯಲ್ಲಿ ಓಡುತ್ತಿತ್ತು. “ನನ್ ಮಗಳು ಅಂಥಾದ್ದೇನ … Read more

ಸಂದ್ಯಾಕಾಲ (ಮಿನಿಕಥೆ): ವೆಂಕಟೇಶ ಪಿ. ಗುಡೆಪ್ಪನವರ

ವಿದೇಶದಲ್ಲಿದ್ದ ಮಗ ಶೆಟ್ಟರ ಅಂಗಡಿಗೆ ಪೋನ್ ಮಾಡಿದ್ದನು. ‘ನಾನು ಊರಿಗೆ ಬರುವದಿಲ್ಲ, ನಾನು ಮದುವೆಯಾಗಿದ್ದೇನೆ, ನೀವು ಬೇಕಾದರೆ ಇಲ್ಲಿಗೆ ಬನ್ನಿ” ಇಳಿವಯಸ್ಸಿನ ಜೀವಗಳು ಎಷ್ಟು ಪರಿಪರಿಯಾಗಿ ಬೇಡಿದರು ಮಗ ಮರಳಿ ದೇಶಕ್ಕೆ ಬರುವುದೇ ಇಲ್ಲ. ಬಂಜೆ ಎನಿಸಿಕೊಂಡ ಜೀವಕ್ಕೆ ಈ ಮಗು ಯಾಕಾಗಿ ಬಂತೋ ಏನೋ ಎಂದು ಅನಿಸಿಕೊಂಡು ಅಡಿಕೆ ತೋಟದ ನೀರಿನ ಹೊಂಡದ ಹತ್ತಿರ ಕುಳಿತ ಇಳಿ ವಯಸ್ಸಿನ ಜೀವಗಳು ಕಣ್ಣೀರು ಹಾಕಿದಾಗ ನೆನೆಪು ಹಿಂದೆ ಹೋಯಿತು. ತೋಟದಲ್ಲಿ ಅಡಿಕೆ ಇಳಿಸಿದ ನಡುವಯಸ್ಸಿನ ಜೋಡಿ ಜೀವಗಳು … Read more

ಕಪ್ಪಣ್ಣನ ಟೀ ಅಂಗಡಿ: ವೃಶ್ಚಿಕ ಮುನಿ.

ಒಂದು ಕಪ್ ಚಹಾ ಒಂದು ಬನ್… ಹೇ….. ಮಂಜು…. ಒಂದು ಕಪ್ ಚಹಾ… ಒಂದು ಬನ್…. ಹೇ…. ಮಂಜು… ಬೇಗ್ ಗಿರಾಕಿ ನಿಂತಾರ…. ತಗೂಡ್.. ಬಾರೋ ಲೇ…… ಗಿರಾಕಿಗಳಿಂದ ತುಂಬಿ ತುಳುಕುತ್ತಿತ್ತು. ಇಂತಹ ಮಾತುಗಳು ಕುಪ್ಪಣ್ಣ ಚಹಾ ಅಂಗಡಿಯಲ್ಲಿ ನಿತ್ಯವು ಕೇಳುವ ಮಾತುಗಳಿವು. ಗದ್ದಲ ಗಲಾಟೆ ಸಾಮಾನ್ಯ ಆದರೂ ಜನರು ನಿಂತು ಚಾ ಕುಡಿದೆ ಹೋಗುತ್ತಿದ್ದರು. ಕಪ್ಪಣ್ಣ ಚಹಾ ಇಟ್ಟಿದ್ದರ ಹಿಂದೆ ಒಂದು ದೊಡ್ಡ ಕತೆ ಇದೆ. ಅದು ತೇಟು ಮಹಾಭಾರತ ಆಗಿರಬಹುದು, ಇಲ್ಲವೇ ರಾಮಾಯಣ ಆಗಿರಬಹುದು … Read more

ವಾರೆಂಟ್…!: ಶರಣಗೌಡ ಬಿ ಪಾಟೀಲ ತಿಳಗೂಳ

ಅಕ್ಟೋಬರ್ ನಾಲ್ಕರ ರಾತ್ರಿ ಹತ್ತು ಗಂಟೆ ಸುಮಾರಿಗೆ ವೆಂಕಟೆಮ್ಮ ಟಿ.ವಿ ಚಾಲು ಮಾಡಿದಾಗ ವಾರೆಂಟ ಅನ್ನುವ ಕಾರ್ಯಕ್ರಮ ಮೂಡಿ ಬರುತಿತ್ತು. ಅದನ್ನು ನೋಡಿ ಮುಗಿಸುತಿದ್ದಂತೆ ಇವಳ ಮೈ ಜುಮ್ ಎಂದು ಮುಖ ಸಂಪೂರ್ಣ ಬೆವರಿ ಹೋಯಿತು. ಕೈಕಾಲು ಶಕ್ತಿ ಹೀನವಾದವು. ಗಂಟಲು ಒಣಗಿ ಹೋಯಿತು. ಇಳಿ ವಯಸ್ಸಿನವಳಾದ ಇವಳ ಮೇಲೆ ದುಷ್ಪರಿಣಾಮ ಬೀರಿತು. ಮಾನಸಿಕ ನೆಮ್ಮದಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಅಂದು ಮನೆಯಲ್ಲಿ ಯಾರೂ ಇಲ್ಲದ ಕಾರಣ ಬೇಸರ ಕಳೆಯಲು ಟಿವಿ ಚಾಲು ಮಾಡಿದ್ದಳು. ಟಿವಿಯಲ್ಲಿನ … Read more

ದೇವರ ಹುಂಡಿಯೂ ಮತ್ತು ರಾಚಪ್ಪನೂ…: ಶ್ರೀ ಕೊಯ.

ಈ ಬಾರಿಯ ಜಾತ್ರೆಯಲ್ಲಿ ಆ ದೇವರ ಹುಂಡಿಗೆ ಹೇರಳವಾಗಿ ಧನ, ಕನಕಗಳು ಬಂದು ಹುಂಡಿ ತುಂಬಿತ್ತು. ಇದು ದೇವಿಯ ಸನ್ನಿಧಾನಕ್ಕೆ ವರುಷದ ಕಾಣಿಕೆಯಾಗಿ ಬರುವ ಹುಂಡಿ ಆದಾಯ. ಇದಲ್ಲದೆ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹರಿದು ಬರುವ ಹಣ ಹೇರಳವಾಗಿ ಶೇಖರಣೆ ಆಗುತ್ತದೆ. ಇಲ್ಲಿಯ ಜನ, ದೇವರ ಕೈಂಕರ್ಯ ಕೈಗೊಂಡು ಪುಣ್ಯ ಪಡೆಯಲು ದೇವರ ಕಾಣಿಕೆಯನ್ನು ಎಣಿಸುವ ಮತ್ತು ವಿಂಗಡಿಸುವ ಕಾರ್ಯವನ್ನು ಮಾಡಲು ಕಾತರಿಸುತ್ತಾರೆ. ಆಡಳಿತ ಮಂಡಳಿ ಕಳೆದ ಬಾರಿ ಹುಂಡಿಯ ಎಲ್ಲಾ ಹಣವನ್ನು ಎಣಿಕೆ ಮಾಡಿ, ಒಟ್ಟು ಒಂದೂವರೆ … Read more

ನ್ಯಾನೋ ಕತೆಗಳು: ಸ್ನೇಹಲತಾ ದಿವಾಕರ್, ಕುಂಬ್ಳೆ.

­­­­­­­­­­­­­­­­­­­­­­­­ ಅನುಭವವೇ ಗುರಿ ಪ್ರೀತಿ                                                                       ಮಗುವನ್ನು ಜಿಗುಟಿದ ಕೈಗಳು ತೊಟ್ಟಿಲನ್ನೂ ತೂಗಿದವು. ನೋಡುವ ಕಂಗಳಿಗೆ ಕಾಣಿಸಿದ್ದು ತೂಗುವತೋಳುಗಳ ಕಾಳಜಿ ಮಾತ್ರ. ಜಿಗುಟಿದ ಉಗುರುಗಳ ಕ್ರೌರ್ಯ ಯಾರ ಕಣ್ಣಿಗೂ ಬೀಳಲಿಲ್ಲ  ಹೊಂದಾಣಿಕೆ ಅವರಿಬ್ಬರದ್ದು ತುಂಬಾ ಹೊಂದಾಣಿಕೆಯ ಸಂಸಾರ. ಅವನು ಪ್ರತೀ ಬಾರಿ ಅದೇ ತಪ್ಪನ್ನು ಮಾಡುತ್ತಾ ಇದ್ದ. ಮತ್ತು ಅವಳು ಎಲ್ಲಾ ಸಲವೂ  ಅದಕ್ಕಾಗಿ ಕ್ಷಮೆ ಕೇಳುತ್ತಲೇ ಹೋದಳು. ಬೆಸ್ಟ್ ಆಕ್ಟರ್ ಮದುವೆಯಾಗಿದ್ದರೂ ಇನ್ನೂ ಸಿನಿಮಾ ರಂಗದಲ್ಲಿ  ಶೋಭಿಸುತ್ತಿರುವ ಅವಳಿಗೆ ಗಂಡ ನೀಡುತ್ತಿರುವ ಪ್ರೋತ್ಸಾಹ ಮತ್ತು ಸ್ವಾತಂತ್ರ್ಯ … Read more

ಹರಿದ ಮುಗಿಲು: ರಾಯಸಾಬ ಎನ್. ದರ್ಗಾದವರ

ಆಗತಾನೇ ಪಶ್ಚಿಮದಲ್ಲಿ ದಿನನಿತ್ಯದ ಕೆಲಸ ಮುಗಿಸಿ ಧಗಧಗ ಉರಿಯುತ್ತಿದ್ದ ಸೂರ್ಯ ಊರು ಮುಂದಿನ ಎರಡು ಗುಡ್ಡಗಳ ಮಧ್ಯ ಅವುಗಳನ್ನು ತಿಕ್ಕಿಕೊಂಡು ಹೋಗುತ್ತಿರುವದಕ್ಕೋ, ಇಲ್ಲವೇ ಅವನದೇ ಶಾಖದಿಂದಲೋ ಕೆಂಪಾದಂತೆ ಕಂಡು ಮುಳಗಲು ತಯಾರಾಗಿದ್ದನು. ನೋಡಲು ಹೆಣ್ಣಿನ ಹಣೆಯ ಮೇಲಿರುವ ಕುಂಕುಮದಂತೆ ನೋಡುಗರಿಗೆ ಭಾಸವಾಗುತ್ತಿತ್ತು. ಬಿಸಿಲನ್ನು ಇಷ್ಟೋತನ ಸಹಿಸಿ ಬಿಸಿಯನ್ನು ಬೆಂಕಿ ಅಂತೆ ಬೀಸುತ್ತಿದ್ದ ಗಾಳಿಯು ತನ್ನ ವರೆಸಿಯನ್ನು ಬದಲಿಸಿ ತುಸು ತಂಪನ್ನು ತಣಿದ ಮೈಗೆ ಹಿತವೇನಿಸುವಷ್ಟು ಮುದವನ್ನು ನೀಡುತ್ತಿತ್ತು. ಹೊತ್ತಿನ ತುತ್ತಿಗಾಗಿ ತೆರಳಿದ್ದ ಹಕ್ಕಿಗಳು ಗೂಡು ಸೇರಿ ಸುತ್ತಲಿನ … Read more

ಬಟವಾಡೆ…: ಚಂದ್ರಪ್ರಭ ಕಠಾರಿ

ಮಧ್ಯರಾತ್ರಿಯವರೆಗೂ ಪೈಲ್ ಕಾಂಕ್ರೀಟಿಂಗ್ ಸಾಗಿ, ಬೆಳಗ್ಗೆ ತಡವಾಗಿ ಎದ್ದವನು ದಡಗುಡುತ್ತ ಹೊರಟು, ಪಂಚತಾರಾ ಅಶೋಕ ಹೊಟೇಲ್ ಎದುರುಗಿರುವ ಗಾಲ್ಫ್ ಕೋರ್ಟಿನ ಮೇನ್ ಗೇಟನ್ನು ಇನ್ನು ತಲುಪಿರಲಿಲ್ಲ, ಆಗಲೇ ದಳವಾಯಿ ಕನ್ಸ್ ಟ್ರಕ್ಷನ್ ಮಾಲೀಕ ಕಮ್ ಕಂಟ್ರಾಕ್ಟರ್ ಗಂಗಾಧರ ರೆಡ್ಡಿಯಿಂದ ಫೋನು. ಲೇಬರ್ ಕಾಲೊನಿಗೆ ಹೋಗಿ ಬರಬೇಕೆಂದು. ಹೆಸರಿಗೆ ಮಾತ್ರ ತಾನು ಆಸಿಸ್ಟೆಂಟ್ ಜನರಲ್ ಮ್ಯಾನೇಜರ್! ತನ್ನ ಸಿವಿಲ್ ಎಂಜಿನಿಯರಿಂಗ್ ಕೆಲಸಗಳೇ ಸೈಟಿನಲ್ಲಿ ಮಾಡಿದಷ್ಟು ಮುಗಿಯದಿರುವಾಗ, ಕಟ್ಟಡಕಾರ್ಮಿಕರ ತರಲೆ ತಾಪತ್ರಯಗಳ ಉಸಾಬರಿ ತನ್ನ ಹಣೆಗೇಕೆ ಅಂಟಿಸುತ್ತಾರೆಂದು ಚಂದನ ಗೊಣಗಿಕೊಂಡನಷ್ಟೆ … Read more

ಹೆಜ್ಜೆ: ವಿಜಯಾಮೋಹನ್‍ ಮಧುಗಿರಿ

ಇನ್ನು ಮಸುಕರಿಯದ ಮೋಡ, ಅದು ನೆಟ್ಟಗೆ ಕಣ್ಣಿಗ್ಗಲಿಸ್‍ತ್ತಿಲ್ಲ. ಆವತ್ತು ಬೆಳಕರದ್ರೆ ಊರು ನಾಡಿಗೆ ಹೊಸ ಸಮೇವು(ಸಂದರ್ಭ) ಚೆಲ್ಲುವ. ಬೇವು ಬೆಲ್ಲ ಒಂದಾಗಿ,ಭೂಮಿ ಮ್ಯಾಲೆ ಬದುಕೀರೆ ಕಷ್ಟ ಸುಖದ ಸಮಪಾಲಾಗಿ ಹಂಚಿ ಬದುಕ ಬೇಕೆಂದು, ಮತ್ತು ಅಂಗೆ ಹಂಚಿ ಉಣ್ಣುಬೇಕೆಂದ, ಅಜ್ಜ ಮುತ್ತಜ್ಜಂದಿರೆಲ್ಲ ಹೇಳುತ್ತಿದ್ದ ಯುಗಾದಿ ಹಬ್ಬ. ಮೊಗ್ಗುಲಲ್ಲಿ ಮಲಗಿದ್ದ ಹೆಂಡತಿಯ ಗೊರಕೆ, ಅದು ಅದ್ರ ಪಾಡಿಗದು ಯಾರ ಮುಲಾಜಿಗಜಂದೆ ಏರಿಳಿತದ ಸವಾರಿ ಮಾಡುತ್ತಿತ್ತು. ಹಬ್ಬದ ದಿನಗಳೇನಾದರು ಬಂದರೆ ಯಾರಿಗ್ ಮಾಡ್‍ಬೇಕ್ ಹಬ್ಬ ಅದು ಇಂಗೆ ಮಾಡ್‍ಬೇಕ್‍ಅಂಬೋದೇನೈತೆ? ಹೆಂಡತಿಯ … Read more

ಆಸೆ: ವಿಜಯಾಮೋಹನ್

ಆಸೆಊರೆಂದರೆ ಅದು ಎಲ್ಲ ಊರುಗಳಂತ ಊರಾಗಿರಲಿಲ್ಲ, ಅದೇನೊ ಅದೊಂತರ ರೀತಿ ನೀತಿಯೆಂಬಂಗೆ ಕಾಣ್ತ್ತಿರಲಿಲ್ಲ. ಆ ಊರಿನ ಮೊಗ್ಗುಲಿಗೆ ಹೋಗಿ ನಿಂತು ನಿಗಾ ಮಾಡಿದರೆ, ಅಲ್ಲಿ ಒಂದು ಕೇರಿಯಲ್ಲ, ಅದು ಒಂದು ಬೀದಿಯು ಅಲ್ಲ, ಏನೋ ಒಂತರ ಲೆಕ್ಕ ಬುಕ್ಕಕ್ಕೆ ಕಾಣದ ಮನೆಗಳು. ಈ ತಗ್ಗಿನೊಳಗೆ ನಾಕೈದು ಮನೆಗಳು, ಆ ಎತ್ತರಕ್ಕೆ ಮೂರು ನಾಕು ಮನೆಗಳು, ಈ ಬಾಗಕ್ಕೆ ನೋಡಿದರೆ ಎರೆಡೆ ಎರಡು ಮನೆಗಳು, ಆ ಪಕ್ಕಕ್ಕೆ ನೋಡಿದರೆ ಒಂದೊ ಎರಡೊ ಮನೆಗಳು, ಇಂತ ಸಾಲು ಮೂಲೆ ಕಾಣದ … Read more

ಮನಸಿನ ರಾಜಕುಮಾರ: ಮಧುಕರ್ ಬಳ್ಕೂರ್

“ವಾವ್ಹ್..! ಯಶು ಈ ನಡುವೆ ಅದೆಷ್ಟು ಸುಂದರವಾಗಿ ಕಾಣ್ತಾಳೆ..! ಅದ್ಯಾಕೆ ನನ್ನನ್ನು ಅಷ್ಟೊಂದು ಅಟ್ರಾಕ್ಟಿವ್ ಮಾಡ್ತಿದಾಳೆ..! ಈಗ ಇದ್ದ ರೂಪವಲ್ಲವೆ ಆಗಲೂ ಇದ್ದಿದ್ದು..! ನನಗಂತೂ ಅರ್ಥ ಆಗ್ತಾ ಇಲ್ಲ. ಒಂದಂತೂ ನಿಜ. ಇಷ್ಟು ದಿನ ನಾನು ನೋಡಿರೋ ಹುಡುಗಿರಲ್ಲೆ ಯಶು ತುಂಬಾನೆ ಸ್ಪೇಷಲ್. ಅವಳಲ್ಲೆನೋ ಒಂದು ನಿಗೂಢತೆ ಇದೆ..! ಅದೇನು ಒಮ್ಮೆಲೇ ಹುಟ್ಟಿ ಸಾಯುವಂತ ಆಕರ್ಷಣೆ ಅಲ್ಲ. ಮುಗಿಲಾರದ ಸೆಳೆತವೆನೋ ಅನ್ನಿಸ್ತಾ ಇದೆ..! ಜೀವನ ಸಂಗಾತಿಯಲ್ಲಿ ನೋಡುವ ಸೆಳೆತವದು. ಸ್ಟುಪಿಡ್ ನಾನು. ಹೋಗಿ ಹೋಗಿ ಇಂತಹ ಹುಡುಗಿಯನ್ನು … Read more

ಅನುರಣನ: ಡಾ. ಅನುಪಮಾ ದೇಶಮುಖ್

ಡಾ. ಪ್ರದೀಪ್ ಬಳ್ಳಾರಿಯ ಪ್ರಸಿದ್ಧ ವೈದ್ಯರು. ಅಕ್ಕರೆಯ ಹೆಂಡತಿ ಶಾಂತಾ ಹಾಗೂ ಮುದ್ದಾದ, ಮಿತಭಾಷಿಯಾದ ಮಗ ರಾಘವ ಅವರ ಪ್ರಪಂಚ. ಶಾಂತಾ ಅಚ್ಚುಕಟ್ಟಾಗಿ ಮನೆಯನ್ನೂ, ಮಗನನ್ನೂ ನೋಡಿಕೊಂಡು, ತಕ್ಕಮಟ್ಟಿಗೆ ಸಂಪ್ರದಾಯವನ್ನೂ ಪಾಲಿಸಿಕೊಂಡು, ಗಣ್ಯಸಮಾಜದ ರೀತಿನೀತಿಗಳಿಗೆ ಹೊಂದಿಕೊಂಡಂತಹ ಹೆಣ್ಣು. ಶಿಸ್ತು, ಕಟ್ಟುನಿಟ್ಟಿನ ಆಸಾಮಿಯಾದ ಡಾ ಪ್ರದೀಪ್ ಗೆ ಮುಂದೆ ತನ್ನ ಮಗ ಒಬ್ಬ ಒಳ್ಳೆಯ ವೈದ್ಯನೋ, ನ್ಯಾಯಮೂರ್ತಿಯೋ ಆಗಬೇಕೆಂಬ ಹಂಬಲ. ಆದ್ದರಿಂದಲೇ ಶಿಕ್ಷಣ, ಸಂಸ್ಕೃತಿಗಳಿಗೆ ಹೆಸರುವಾಸಿಯಾಗಿದ್ದ ತೋರಣಗಲ್ಲಿನ ಹತ್ತಿರದ ಪ್ರತಿಷ್ಠಿತ ವಸತಿ ಶಾಲೆಯೊಂದರಲ್ಲಿ ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣಕ್ಕಾಗಿ … Read more

ಮನಸಿನ ಹೊಯ್ದಾಟ: ನೀರಜಾ ಎಚ್. ಕೆ., ಸುಮಾ ರಾಯ್ಕರ್, ಗೀತಾ ಕೆ. ಆರ್., ಶ್ರೀದೇವಿ, ಗಾಯತ್ರಿ ಜೋಯಿಸ್, ಅರ್ಚನಾ ಕೆ. ಎನ್., ಮತ್ತು ಸುಮತಿ ಮುದ್ದೇನಹಳ್ಳಿ

ನಾವಿಬ್ಬರೂ ಸಮಾನ೦ತರ ರೇಖೆಗಳು. ಎಲ್ಲೂ ಸ೦ಧಿಸಲಾಗದ, ಒ೦ದಾಗಲಾಗದ ರೇಖೆಗಳು.  ಇದಕ್ಕೆ ಪರಿಹಾರವೇ ಇಲ್ವೆ ಆ೦ತ ಯೋಚಿಸುತ್ತಾ ಕೂತವಳಿಗೆ ಯಾವಾಗ ಝೊ೦ಪು ಹತ್ತಿ ಸಣ್ಣಗೆ ನಿದ್ರೆ ಬ೦ತೋ ಗೊತ್ತಾಗಲೇ ಇಲ್ಲ. ಬಾಗಿಲಿನ ಕರೆಗ೦ಟೆ ಶಬ್ದ ಮಾಡುತ್ತಾ ವಾಸ್ತವಕ್ಕೆ ಕರೆತ೦ದಿತು. ಕಣ್ಣುಜ್ಜಿಕೊಳ್ಳುತ್ತಾ ಹೋಗಿ ಬಾಗಿಲು ತೆರೆದವಳು, ಬಾಗಿಲುದ್ದಕ್ಕೂ ನಿ೦ತಿದ್ದ ನಗುಮುಖದ ಆಜಾನುಬಾಹುವನ್ನು ಎಲ್ಲೋ  ನೋಡಿದ್ದೇನೆ ಅ೦ತ ಆಲೋಚಿಸುತ್ತಾ ಮಾತು ಹೊರಡದೇ ನಿ೦ತಳು.  ಆ ವ್ಯಕ್ತಿ, ಪರಿಚಯ ಸಿಗಲಿಲ್ವೆ? ಅನ್ನುತ್ತಾ ಮತ್ತೊಮ್ಮೆ ನಗು ತೂರಿದನು.  ಹೌದು, ಆ ನಗು ತುಂಬಾ ಚಿರಪರಿಚಿತ, … Read more

ಆಭರಣಗಳು: ಜೆ.ವಿ.ಕಾರ್ಲೊ

ಮೂಲ: ಗೈ ಡಿ ಮೊಪಾಸಾಅನುವಾದ: ಜೆ.ವಿ.ಕಾರ್ಲೊ ಆ ದಿನ ಸಂಜೆ ಕಛೇರಿಯ ಮೇಲ್ವಿಚಾರಕರು ಇರಿಸಿದ್ದ ಔತಣಕೂಟದಲ್ಲಿ ‘ಆ’ ಹುಡುಗಿಯನ್ನು ನೋಡಿದ್ದೇ ಲ್ಯಾಂಟಿನ್ ಅವಳ ಮೋಹಪಾಶದಲ್ಲಿ ಸಿಲುಕಿ ನುಜ್ಜುಗುಜ್ಜಾಗಿಬಿಟ್ಟಿದ್ದ. ಆಕೆ ಕೆಲವೇ ವರ್ಷಗಳ ಹಿಂದೆ ಗತಿಸಿದ್ದ ತೆರಿಗೆ ಅಧಿಕಾರಿಯೊಬ್ಬರ ಮಗಳಾಗಿದ್ದಳು. ಆಗಷ್ಟೇ ಅವಳು ತನ್ನ ತಾಯಿಯೊಂದಿಗೆ ಪ್ಯಾರಿಸಿಗೆ ಬಂದಿಳಿದಿದ್ದಳು. ಅವಳ ತಾಯಿ ಮಗಳಿಗೊಬ್ಬ ಯೋಗ್ಯ ವರನನ್ನು ಹುಡುಕುವ ಉದ್ದೇಶದಿಂದ ಹಲವು ಮಧ್ಯಮ ವರ್ಗದ ಕುಟುಂಬಗಳ ಸಂಪರ್ಕಗಳನ್ನು ಬೆಳೆಸಿಕೊಳ್ಳುತ್ತಾ ಕಾರ್ಯೊನ್ಮುಖಳಾಗಿದ್ದಳು. ಬಡವರಾಗಿದ್ದರೂ ಸುಸಂಸ್ಕøತ ಮನೆತನದವರಾಗಿದ್ದರು. ಹುಡುಗಿಯಂತೂ, ಯಾವನೇ ಹುಡುಗನು ತನ್ನ … Read more

ಹಂಸಭಾವಿಯ ಹಸಿ ಸುಳ್ಳು ..!: ಶರಣಗೌಡ ಬಿ ಪಾಟೀಲ ತಿಳಗೂಳ

ಊರ ಜನಾ ಹಸಿ ಸುಳ್ಳು ಹೇಳತಿದ್ದಾರೆ ನಾನು ಹೇಳುವ ಮಾತು ಖರೇ ಅಂತ ಯಾರೂ ನಂಬತಿಲ್ಲ ಯಾಕಂದ್ರೆ ನಾನೊಬ್ಬ ಹುಚ್ಚ ಅಂತ ಹರಿದ ಅಂಗಿ, ಗೇಣುದ್ದ ಗಡ್ಡ ಅಸ್ತವ್ಯಸ್ತ ಮುಖದ ಹುಚ್ಚನೊಬ್ಬ ಹಂಸ ಬಾವಿ ಕಟ್ಟೆಗೆ ಕುಳಿತು ತನ್ನಷ್ಟಕ್ಕೆ ತಾನೇ ವಟಗುಟ್ಟಿದ. ಜನರ ಮಾತು ಸುಳ್ಳು ಅಂತಾನೆ ನೋಡ್ರೋ ಎಂಥಾ ಹುಚ್ಚನಿವನು ಅಂತ ಆತನ ಮಾತು ಕೇಳಿಸಿಕೊಂಡ ಕೆಲವರು ಗಹಿಗಹಿಸಿ ನಗತೊಡಗಿದರು. ನಗರೋ ನಗರಿ ಯಾರ ಬ್ಯಾಡ ಅಂತಾರೆ ಮುಂದೊಂದಿನ ಸುಳ್ಯಾವದು ಖರೇ ಯಾವುದು ಅಂತ ಸಮಯ … Read more

ಹೆಣದ ಗಾಡಿ: ಜಯರಾಮಚಾರಿ

ಅಲ್ಲೊಂದು ಸಾವಾಗಿದೆ. ಸತ್ತವನ ದೇಹ ಮನೆಯ ಹೊರಗೆ ಇದೆ, ಸತ್ತವನು ಕೆಲವು ವರ್ಷಗಳಿಂದ ಯಾವ ಕೆಲಸವೂ ಮಾಡದೇ ಕುಡಿಯುತ್ತಾ, ಮನೆಯವರನ್ನು ಪೀಡಿಸುತ್ತಾ, ತನ್ನ ಕುಡಿತದ ಚೇಷ್ಟೇಗಳಿಂದ ಪರರನ್ನು ನಗಿಸುತ್ತ ಬದುಕಿದ್ದಾಗಲೇ ಸತ್ತಿದ್ದ. ಈ ಸಂಜೆ ಮತ್ತೆ ಸತ್ತ. ಸತ್ತವನನ್ನು ಮಂಚದ ಮೇಲೆ ಮಲಗಿಸಲಾಗಿದೆ, ಅವನ ದೇಹವನ್ನು ಹಳೇ ಕಂಬಳಿಯಿಂದ ಮುಚ್ಚಲಾಗಿದೆ, ಆ ಕಂಬಳಿಗೆ ಸುಮಾರು ಆರರಿಂದ ಏಳು ತೂತುಗಳಿವೆ. ಅವನ ದೇಹದ ಕೆಳಗೆ ಮಾಸಲಾದ ಬೆಡ್ ಶೀಟ್ ಅದರ ಕೆಳಗೆ ಉಪಯೋಗಿಸದೇ ಇದ್ದ ಹಳೆಯ ಚಾಪೆಯಿದೆ. ಅವನ … Read more

ಆಸೆಗಳು ನೂರಾರು: ಕೃಷ್ಣವೇಣಿ ಕಿದೂರ್.

”ನನ್ನಲ್ಲಿ ಕೇಳದೆ ನೀವು ಅದು ಹ್ಯಾಗೆ ಬರಲು ಹೇಳಿದ್ರಿ? ನನಗೆ ಒಪ್ಪಿಗೆ ಇಲ್ಲ. ಜುಜುಬಿ ಇಂಜನಿಯರು ಆತ. ಬೇಡವೇ ಬೇಡ. ಹೈಲಿ ಕ್ವಾಲಿಫೈಡ್ ಆದವರು ನಿಮ್ಮ ಕಣ್ಣಿಗೆ ಬೀಳುವುದೇ ಇಲ್ವಾ? ಬಿ. ಇ. ಮುಗಿಸಿದವನನ್ನು ನಾನು ಒಪ್ತೇನೆ ಎಂದು ಹೇಗೆ ಅಂದ್ಕೊಂಡ್ರಿ?ಹೋಗಲಿ, ಎಂ. ಟೆಕ್ ಆದ್ರೂ ಒಪ್ಪಬಹುದು. ಡಾಕ್ಟರು, ಅದರಲ್ಲೂ ಎಂ. ಡಿ. ಆದ ಡಾಕ್ಟರ್ಸ್, ಅಮೆರಿಕಾದಲ್ಲೇ ಕೆಲಸ ಮಾಡ್ತಿರುವ ಇಂಜನಿಯರ್ಸ್ ಅಂಥವರ ಸಂಬಂಧ ಬೇಡಾ ಅಂತ ನಾನು ಹೇಳಲ್ಲ. ನಿಮ್ಮ ಹಳೆ ಸ್ನೇಹಿತನ ಮಗ ಬೇಡವೇ … Read more

ಮೇವು: ವಿಜಯಾ ಮೋಹನ್, ಮಧುಗಿರಿ

ಗೊಂತಿಗೆಯಲ್ಲಿ ಬಸ ಬಸನೆ ಉಸಿರು ಉಗುಳುತ್ತಿರುವ ಜೀವದನಗಳು. ಒಳಗೆ ಅಡುಗೆ ಮನೇಲಿ ಊದುರ (ಹೊಗೆ) ಸುತ್ತಿಕೊಂಡು, ಪಾಡು ಪಡುತ್ತ ಹೊಲೆ ಉರಿಸುತ್ತಿರುವ ಹೆಂಡತಿ ಅಮ್ಮಾಜಿ. ಅವಳ ಕಡೆಗೊಂದು ಕಣ್ಣು, ಅಲ್ಲೇ ಎದುಸಿರು ಬಿಡುತ್ತಿರುವ ಜೀವದನಗಳ ಕಡೆಗೊಂದು ಕಣ್ಣು, ಅಂಗೆ ನಡುಮನೆಯ ಗೋಡೆಗೆ ಕುಂತುಕೊಂಡು ನಿಗಾ ಮಾಡುತ್ತಿರುವ ಮಲ್ಲಣ್ಣನ ಮನಸ್ಸು ಎತ್ತಕಡೆಯಿಂದಾನೊ? ಯಾಕೊ ಯಾವುದು ಸರಿಯಾಗುತಿಲ್ಲವೆಂದು ತಿವಿಯಂಗಾಗುತಿತ್ತು. ಒಳಗೆ ಹೊತ್ತಿಗೆ ಸರಿಯಾಗಿ ಅಂಟಿಕೊಳ್ಳದ, ಬಂಗದ ಹೊಲೆಯನ್ನ ಉರುಬಿ ಉರುಬಿ, ಬಾದೆ ಬೀಳುವ ಹೆಂಡತಿ ಅಮ್ಮಾಜಮ್ಮಳನ್ನು ಸುಖವಾಗಿ ನೋಡಿಕೊಳ್ಳಲಾಗುತಿಲ್ಲ. ಇಲ್ಲಿ … Read more