ಮೂವರ ಕವಿತೆಗಳು: ಅಪಿ೯ತ ಮೇಗರವಳ್ಳಿ, ಪ್ರಭಾಕರ ತಾಮ್ರಗೌರಿ, ಗುರುನಾಥ ಬೋರಗಿ
ಶಿಕ್ಷೆ-ಬದುಕು ಹಾಸಿಗೆಯ ಸುಕ್ಕಿನಲಿ ಸಿಕ್ಕಿ ಉಕ್ಕಿ ಹರಿಯದೆ ಹರಯ ಕಳಚಿ ಬಿಳಿ ಕೂದಲು ಇಣುಕಿ ಮುಖದಲ್ಲಿ ಸುಕ್ಕು ಮೂಡುವ ಮುನ್ನ ಕಿಂಚಿತ್ತಾದರೂ ವಂಚಿಸಬೇಕೆನಿಸಿತು ವಂಚನೆಯ ಪ್ರಕರಣಕ್ಕೆ ಶಿಕ್ಷೆಯುಂಟು ಪೋಲಿಸರಿದ್ದಾರೆ ಜೈಲುವಾಸ ಗ್ಯಾರಂಟಿ ಅವಮಾನ, ತಲೆತಗ್ಗಿಸಬೇಕು ಯೋಚಿಸಲೇಬೇಡ ಸುಮ್ಮನಿದ್ದುಬಿಡು. ಜೋರಾಗಿ ಗಹಗಹಿಸಿದೆ ಶಿಕ್ಷೆ-ಪೋಲಿಸು-ಜೈಲು ಮಾನ-ಅವಮಾನ ಮತ್ತು ತಲೆತಗ್ಗಿಸಬೇಕು. ಯೋಚಿಸಲೇಬೇಡ, ಸುಮ್ಮನೆ ಇದ್ದುಬಿಡು. ಗೆರೆಯೆಳೆಯುವುದೇ ಇರಬೇಕು ಜಗತ್ತಿನ ಪುರಾತನ ಮದ್ಯ ಬರಿ ಘಾಟಿಗೇ ಅಮಲು ನಶೆಯಲ್ಲಿ ಗೀರಿದ್ದೆಲ್ಲಾ ಲಕ್ಷ್ಮಣರೇಖೆಗಳೇ ದಾಟಿದರೆ … Read more