ಪಂಜು ಕಾವ್ಯಧಾರೆ

ಗಜಲ್ ಕಣ್ಣು ಬೇರಸಿ ಬಿಡು ಏಕಾಂತದ ಸುಖ ಸಿಗಲಿ ಸಖ ಮನಸಿನ ಸಂಭ್ರಮಕೆ ಸುಖ ತುಂಬಿ ಬರಲಿ ಸಖ ಯಾರ ಸಲುವಾಗಿ ಬದುಕು ನೊಂದಿತ್ತು ಅವರೆ ಆನಂದಿಸಲಿ ಇಬ್ಬರು ಕಳೆದ ಕತ್ತಲೆಗೆ ನೆನಪುಗಳ ಬೆಳಕು ಬರಲಿ ಸಖ ಗಿಡ ಮರ ಬಳ್ಳಿಗಳು ಹೂವ ಚೆಲ್ಲಿ ನಿಂತಿವೆ ನಮ್ಮೊಲವಿನ ಮಾತು ಸವಿಯಲು ಮೌನ ಮುರಿದು ಹೂವಿನ ಹಾಸಿಗೆ ಮೇಲೆ ನಡೆದು ಹೋಗಲಿ ಸಖ ಕಾಡಿ ಜೀವ ಹಿಂಡಿ ಜಾತಿಯ ಕೆಂಬಣ್ಣ ಹಚ್ಚಿ ಅಡ್ಡಗೋಡೆ ಕಟ್ಟಿದರು ವೈಭವದ ಮೆರವಣಿಗೆಯಲಿ ಬಂದು … Read more

ಪಂಜು ಕಾವ್ಯಧಾರೆ

ಪ್ರಶ್ನೆ ನಾನು ಸತ್ತಿರುವೆನೆಂದು ಏಕೆ ಅಳುತ್ತಿರುವಿರಿ..? ನಿಮ್ಮ ರೋಧನ ನನಗೆ ಕೇಳುತ್ತಿದೆ ನಿಮ್ಮ ಮನದ ನೋವು ನನಗೆ ಅರ್ಥವಾಗುತ್ತಿದೆ ನಿಮ್ಮ ಕಣ್ಣೀರ ಹನಿಗಳನ್ನು ನಾನು ಬಾಚಿ ತಬ್ಬಿಕೊಳ್ಳುತ್ತಿರುವೆ ನಾನು ಸತ್ತಿರುವೆನೆಂದು ಏಕೆ ಅಳುತ್ತಿರುವಿರಿ..? ಗೋಡೆಗೆ ಭಾರವಾಗಿರುವ ಭಾವಚಿತ್ರದಲ್ಲಿ ನಾನಿರುವೆನೇನು? ಅಥವಾ ಆಗಸದೆತ್ತರದ ಕಲ್ಲು ಮನುಷ್ಯನೊಳಗೆ ಅಡಗಿ ಕುಳಿತಿರುವೆನೇನು ನಾನು..? ಅಥವಾ ನೀವೆ ಕಟ್ಟಿದ ಭಾರವಾದ ಸಮಾಧಿಯೊಳಗೆ ಕಣ್ಮುಚ್ಚಿ ಮಲಗಿರುವೆನೇನು ನಾನು..? ನಾನು ಸತ್ತಿರುವೆನೆಂದು ಏಕೆ ಅಳುತ್ತಿರುವಿರಿ..? ನನ್ನ ದೇಹದ ಕಣ ಕಣದ ಉಸಿರು ನಿರ್ಮಲ ವಾತಾವರಣ ಸೇರಿದೆ … Read more

ಕೊರೋನ ಕವಿತೆಗಳು

ಮನೆಯಲ್ಲೇ ಇರಿ ಬಂಧಿಯಾಗಿಬಿಡಿ.. ಚಂದದಿ, ಇಪ್ಪತ್ತೊಂದು ದಿನ ವ್ರತದಂದದಿ.. ಮನೆಯೊಳಗೆ ಮನಸೊಳಗೆ…. ನಿಮಗಾಗಿ, ನಮಗಾಗಿ, ಭಾರತಕ್ಕಾಗಿ ಮನೆಯಲ್ಲೇ ಇರಿ, ಮುದದಿ… ಇದ್ದು ಮಹಾನ್ ಆಗಿರಿ.. ಭಾರತೀಯರೇ ಅಂದು ಗಾಂಧಿ ಕರೆಗೆ ಬ್ರಿಟಿಷರ ಅಟ್ಟಲು ಮನೆ ಬಿಟ್ಟಿರಿ… ಇಂದು ಮಾರಿ ಕರೊನಾ ಅಟ್ಟಲು ದಯಮಾಡಿ ಮನೆಯಲ್ಲೇ ಇರಿ… ಇದ್ದು ಬಿಡಿ ಮನೆಯಲ್ಲೇ ವಿನಂತಿಸುವೆ… ವಿಷಕ್ರಿಮಿಯ ಮೆಟ್ಟಲು. ತುಸುದಿನ ನಿಮ್ಮ ಮನೆಗಳಲ್ಲಿ ನೀವೇ ರಾಜರಾಗಿರಿ, ಆಳಿರಿ, ಆಡಿರಿ, ಓದಿರಿ‌.. ತೊಳೆಯಿರಿ, ತೆರೆಯಿರಿ ಮನವ ಹೊಸ ಆಲೋಚನೆಗೆ…. ಆವಿಷ್ಕಾರಕೆ, ಸಾತ್ವಿಕ ಸಂಯಮಕೆ… … Read more

ಪಂಜು ಕಾವ್ಯಧಾರೆ

“ಬುನಾದಿ ಇಲ್ಲದ ಬದುಕು “ ಕೂಡಿಟ್ಟ ಕನಸುಗಳ ಜೊತೆ ಪಾದಯಾತ್ರೆ ಮಾಡುತ್ತಿರುವೆ. ಅರಮನೆಗಲ್ಲ, ಹೊತ್ತಿನ ಅಂಬಲಿಗಾಗಿ! ಕಟ್ಟಿಕೊಂಡ ಆಸೆಗಳನ್ನ ಒಟ್ಟುಗೂಡಿಸಿ ಸಮಾಧಿ ಮಾಡಿರುವೆ. ಚಂದದ ಬಟ್ಟೆಗಲ್ಲ, ಹಸಿದ ಹೊಟ್ಟೆಗಾಗಿ! ನನ್ನೊಳಗಿನ ಖುಷಿಯನ್ನ ಮಾಯಾ ಬಜಾರಿನಲ್ಲಿ ಮಾರಿಕೊಂಡಿರುವೆ. ದುಡ್ಡಿಗಲ್ಲ, ಮನದ ದುಃಖಕ್ಕಾಗಿ! ಬುನಾದಿಯೇ ಇಲ್ಲದ ಬದುಕನ್ನ ನಡು ಬೀದಿಯಲ್ಲೆ ಕಳೆದುಕೊಂಡಿರುವೆ. ನನ್ನ ಸೋಲಿಗಲ್ಲ, ಗೆದ್ದ ಬಡತನಕ್ಕಾಗಿ! –ಹರೀಶ್ ಹಾದಿಮನಿ (ಹಾಹರೀ) ಸದಾ ಕಾಡುವೆ ಏಕೆ? ನೀ ಅಗಲಿದ ಕ್ಷಣವ ಮರೆಯಲಾಗದು ಎಂದಿಗೂ, ನಿನ್ನ ನೆನಪಿನ ಬುತ್ತಿ ಹೊತ್ತು ಸಾಗುತ್ತಿರುವ … Read more

ಪಂಜು ಕಾವ್ಯಧಾರೆ

ಮಾವು -ಬೇವು, ಚಿಗುರಿ, ಧವಸ-ಧಾನ್ಯ ತುಂಬಿರಲು, ವರುಷದ ಆದಿ ಯುಗಾದಿ, ಅದುವೇ ಚೈತ್ರದ ತೊಟ್ಟಿಲು..!! ಬೇವು -ಬೆಲ್ಲವ ಸವಿದು, ಹೋಳಿಗೆ ಹೂರಣ ನೈವೇದಿಸಿ; ಮನೆ -ಮನೆಗೂ ಕಟ್ಟಿದ ಹಸಿರು ತೋರಣ…! ಅದುವೇ ಚೈತ್ರದ ತೊಟ್ಟಿಲು..! ಕಹಿ-ನೆನಪು ಅಳಿದು; ಇರಲಿ ಮಧು-ಮಧುರ ನೆನಪು.. ವರುಷವೆಲ್ಲಾ ಇರಲಿ ಸಂತಸ..! ಅದುವೇ ಚೈತ್ರದ ತೊಟ್ಟಿಲು..!! ನೇಗಿಲ ಹಿಡಿವ ಸಂಭ್ರಮ; ಆಗಾಗ ಮುಂಗಾರು ಸಿಂಚನ.., ರೈತನ ಮೊಗದಲ್ಲಿ ಆಶಾ ಕಿರಣ .! ಅದುವೇ ಚೈತ್ರದ ತೊಟ್ಟಿಲು.. !! ಯುಗಾದಿ ಚಂದ್ರ ದರ್ಶನ; ಪಾಪ … Read more

ಪಂಜು ಕಾವ್ಯಧಾರೆ

ಹೈಕುಗಳು. ಅಮ್ಮನ ಪ್ರೇಮ ಎಲ್ಲೆಲ್ಲಿಯೂ ಸಿಗದ ಅಮೃತದಂತೆ. * ಏನು ಚೆಂದವೋ ಸೂರ್ಯನ ಕಿರಣವು ಪ್ರತಿ ಮುಂಜಾವು. * ಗುರು ಬಾಳಿಗೆ ದೇವತಾ ಮನುಷ್ಯನು ಜೀವನ ಶಿಲ್ಪಿ. * ಬಾಳ ಬೆಳಗೋ ಆ ಸೂರ್ಯ, ಚಂದ್ರರಿಗೆ ಕೋಟಿ ಪ್ರಣಾಮ. * ನಿರ್ಗತಿಕರ ಸೇವೆ ನೀ ಮಾಡುತಲಿ ದೇವರ ಕಾಣು. * ಸಿರಿಗನ್ನಡ ನಮ್ಮ ಕಣಕಣದಿ ಪುಟಿಯುತ್ತಿದೆ. * ದಾನ ಹಸ್ತಕ್ಕೆ ಜಾತಿ ಕಾರಣವೇಕೆ ಮಾನವ ಧರ್ಮ. * ತಾಯಿಯ ಪ್ರೇಮ ದೇವನಿಗೆ ಸಮಾನ ಮಿಕ್ಕದ್ದು ಮಿಥ್ಯ. * … Read more

ಪಂಜು ಕಾವ್ಯಧಾರೆ

ಬಾಲಲೀಲೆಗಳು ಮರಳಬೇಕೆನಿಸುತಿದೆ ಆ ಸಮೃದ್ಧಿಯ ದಿನಗಳಿಗೆ. ನುಗ್ಗಿಬರುತಿವೆ ನೆನೆಪುಗಳ ಬುಗ್ಗೆ, ಮನಸಿಗೆ ಬಂಧನವಿರದ, ಹೃದಯಕೆ ದಣಿವಾಗದಿರದ, ಆ ಮುಗ್ದ ಮುಕ್ತ ರಸವತ್ತಾದ ದಿನಗಳಿಗೆ. ಕಣ್ಣಿಗೆ ಕಟ್ಟಿದಂತಿವೆ ಆ ಆಟ ಪಾಟಗಳು… ಬೀದಿ ಬೀದಿ ಅಲೆದು ಹುಣೆಸೆ ಬೀಜ ಗುಡ್ಡೆಯಾಕಿ ಅಟಗುಣಿ ಆಡಿದ್ದು. ಹಳ ಕೊಳ್ಳಗಳ ಶೋಧಿಸಿ ಕಲ್ಲುತಂದು ಅಚ್ಚಿನಕಲ್ಲು ಆಡಿದ್ದು. ಬಳಪ ಸೀಮೆಸುಣ್ಣ ಸಿಗದೆ ಇದ್ದಲಿನಲಿ ಚೌಕಬಾರ ಬರೆದಿದ್ದು. ಕುಂಟೆಬಿಲ್ಲೆ ಆಡಿ ಕಾಲು ಉಣುಕಿಸಿಕೊಂಡಿದ್ದು. ಕಣ್ಣಾಮುಚ್ಚಾಲೆ ಹಾಡುವಾಗ ಕಣಜದಲಿ ಅಡಗಿ ನೆಲ್ಲಿನ ನವೆಗೆ ದಿನವೆಲ್ಲಾ ಮೈಕೆರೆದುಕೊಂಡಿದ್ದು. ಬರಿಗಾಲಲ್ಲಿ … Read more

ಪಂಜು ಕಾವ್ಯಧಾರೆ

ಒಂದು ಟೋಪಿಯ ಸುತ್ತ… ಊರ ಕೇರಿಯಿಂದ ಉದ್ದುದ್ದ ಹೆಜ್ಜೆಯನ್ನಿಟ್ಟು ಹೊರಟ ಊರಗೌಡ ಅಂದು ಕಂಡವರ ಕಣ್ಣಿಗೆ ಒಬ್ಬ ಬ್ರಿಟಿಷ ದಂಡನಾಯಕನಂತೆ ಕಾಣುತ್ತಿದ್ದ ಯಾವದೋ ವಸ್ತುಸಂಗ್ರಹಾಲಯದಿಂದ ಹೊತ್ತುತಂದಂತೆ ಬೆತ್ತದಿಂದ ಗೋಲಾಕಾರವಾಗಿ ಹೆಣೆದ ಹಳೆಯ ಟೋಪಿಯೊಂದು ಆತನ ತಲೆಯ ಮೇಲೆ ಕೂತು ಇಡೀ ಪ್ರಪಂಚವನ್ನೇ ಕೊಂದುಬಿಡಬೇಕೆನ್ನುವ ಅವಸರದಲ್ಲಿತ್ತು ಈಗಷ್ಟೇ ಉದಯಿಸಿದ ಆತನ ಕಣ್ಣಲ್ಲಿನ ಕೆಂಪು ಸೂರ್ಯ, ಸೆಟೆದುನಿಂತ ಮೈಮೇಲಿನ ರೋಮಗಳು, ಬಿಳಿಯ ಮೀಸೆ ಕಪ್ಪು ಬಣ್ಣಕ್ಕೆ ಪರಿವರ್ತನೆಯಾಗಿ ಆ ಮೀಸೆಯ ಬುಡದಲ್ಲಿ ಹುಟ್ಟಿಕೊಂಡ ಕೋರೆಹಲ್ಲಿನ ರಕ್ಕಸನಂತೆ ಒರಟು ಧ್ವನಿಯಲ್ಲಿ ನಕ್ಕ…. … Read more

ಪಂಜು ಕಾವ್ಯಧಾರೆ

ಹೊತ್ತೊಯ್ಯುವ ಮುಂಚೆ… ಕೋಳಿ ಪಿಳ್ಳಿಗಳ ಜತೆ ಓಡಾಟ ಹಸುಕರುಗಳೊಡನೆ ಕುಣಿದಾಟ ಗೆಳೆಯರೊಟ್ಟಿಗೆ ಕೆಸರಿನಾಟ ಅಪ್ಪ ಸಾಕಿದ್ದ ಕಂದು ಬಣ್ಣದ ಮೇಕೆಯ ತುಂಟಾಟ, ನಮಗೆಲ್ಲ ಅದರೊಂದಿಗೆ ಆಡುವದು ಇಷ್ಟ ಅಪ್ಪನಿಗೂ ಮೇಕೆಯಂದ್ರೆ ಪ್ರೀತಿ ಗಾಂಧಿತಾತನಂತೆ ಮೇಕೆ ಹಾಲು ಅವನ ಪಾಲಿಗೆ ಪಂಚಾಮೃತ ಅಪ್ಪ ಕೇಳಿದಾಗಲೆಲ್ಲ ಅವ್ವ ಮಾಡಿಕೊಡಲೇಬೇಕು ಚಹಾ ಹಾಲಿಗಿದೆಯಲ್ಲ ಮೊಗೆದಷ್ಟು ತುಂಬಿಕೊಡುವ ಕಾಮಧೇನು ಒಂದು ದಿನ ಅದೇನೋ ತಿಂದ ಮೇಕೆಗೆ ಹೊಟ್ಟೆಯುಬ್ಬರದ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದು, ಜೀವದಂತಿದ್ದ ಮೇಕೆ ಪ್ರಾಣ ಉಳಿಸದ ಪಶುವೈದ್ಯ ಕಟುಕನಂತೆ ಕಂಡು … Read more

ಪಂಜು ಕಾವ್ಯಧಾರೆ

ಸಾಧನಕೇರಿಯ ಬೇಂದ್ರೆ ಅಜ್ಜ ಕನ್ನಡ ನುಡಿಸೇವೆ ನಿನ್ನ ಕಜ್ಜ. ಪದ್ಯ ಕಟ್ಟಿ ಹಾಡಿದ್ಯಂದ್ರೆ ಕೇಳೋ ಕಿವಿಗಳಿಗೆ ಇಲ್ಲ ತೊಂದ್ರೆ… ಅಜ್ಜ ನಿನ್ನ ಬರೆಯೋ ಕೋಲ್ಗೆ ಎಂಥ ಶಕ್ತಿ ಇತ್ತು. ಅದ್ನೆ ನೀನು ಎತ್ತಿ ಹಿಡಿದೆ ನಿನ್ನ ಕೈ ಕಲ್ಪವೃಕ್ಷವಾಯ್ತು… ನಗ್ ನಗ್ತ್ ಹೇಳ್ದೀ ಬುದ್ಧಿಮಾತು ನಿನ್ ದುಃಖ ನೀನ್ ನುಂಗಿ. ಅಜ್ಜ ಅಂದ್ರ ನೆನಪಿಗ್ ಬರ್ತದ ತಲೆಗೆ ಪಟಗ ನಿಲುವಂಗಿ.. ಅಜ್ಜ ನಿನ್ ಪದಗಳಂತು ಸಜ್ಜಿತೆನಿ ತೊನೆದ್ಹಾಂಗ. ಕೇಳ್ತಾ ಕೇಳ್ತಾ ತಲೆದೂಗ್ತಾವಾ ಹಸುಕಂದಮ್ಗಳು ಹಾಂಗಾ.. ಬಾಳ್ಗೆ ನಾಕು … Read more

ಮಕ್ಕಳ ಕವನ: ವೆಂಕಟೇಶ್ ಚಾಗಿ, ದೀಪು

ನನ್ನ ತಂಗಿ ಪುಟ್ಟ ಪುಟ್ಟ ಹೆಜ್ಜೆ ಇಡುತಾ ನನ್ನ ತಂಗಿ ಬರುವಳು ಅಣ್ಣಾ ಎಂದು ತೊದಲುನುಡಿದು ನನ್ನ ಮನವ ಸೆಳೆವಳು || ತಿನ್ನಲು ಒಂದು ಹಣ್ಣು ಕೊಡಲು ನನ್ನ ಬಳಿಗೆ ಬರುವಳು ಅಲ್ಪಸ್ವಲ್ಪ ಹಣ್ಣು ತಿಂದು ಮನೆಯ ತುಂಬಾ ಎಸೆವಳು || ಕಣ್ಣೇ ಮುಚ್ಚೆ ಕಾಡೆಗೂಡೆ ಆಟ ಆಡು ಎನುವಳು ಅಮ್ಮನಿಂದ ಅಡಗಿ ಕುಳಿತು ನಕ್ಕು ನನ್ನ ಕರೆಯುವಳು || ನನ್ನ ಕಾರು ನನ್ನ ಗೊಂಬೆ ತನಗೂ ಬೇಕು ಎನುವಳು ಕೊಡುವ ತನಕ ಹಠವಮಾಡೇ ಅಪ್ಪ ಅಮ್ಮ … Read more

ಪಂಜು ಕಾವ್ಯಧಾರೆ

ಅಪ್ಪ ಅಂದರೆ…… ಏನೇ ಕೇಳಿದರೂ ಏನೇ ಹೇಳಿದರೂ ಕೋರ್ಟ್ ಲ್ಲಿ ದಾವೆ ಹೂಡಿದಂತೆ ಚೌಕಾಸಿ ಮೇಲೆ ಚೌಕಾಸಿ ಪರ ವಿರೋಧದ ತೀರ್ಪಿನ ಮೇಲೆ ನೂರಾರು ಕರಾರಿನ ಅಪ್ಪನ ಮೊಹರು….. ಹೆಜ್ಜೆ ಹೊಸ್ತಿಲ ಹೊರಗಿಟ್ಟರೂ ಒಳಗಿಟ್ಟರೂ ತೀವ್ರ ಹದ್ದಿನ ಕಣ್ಣು ಇಟ್ಟಂತೆ ಶೋಧ ಪ್ರತಿಶೋಧಗಳ ಕಾರ್ಯಾಚರಣೆ ತಪ್ಪೊಪ್ಪುಗಳ ಸರ್ಪಗಾವಲಿನಲ್ಲಿ ಖುಲಾಸೆಯೇ ಸಿಗದ ಅಪ್ಪನ ಕಾಯ್ದೆ …… ಎಲ್ಲೇ ಇದ್ದರೂ ಹೇಗೆ ಇದ್ದರೂ ಕುದುರೆಗೆ ಲಗಾಮು ಹಾಕಿಟ್ಟಂತೆ ಸಾಗುವ ಪಥದಿ ತಿರುವು ಏನೇ ಬಂದರು ಸ್ಥಿರ ಸಿದ್ದಾಂತಗಳ ಗಡಿ ಮೀರಲು … Read more

ಪಂಜು ಕಾವ್ಯಧಾರೆ

ಬದುಕ ನೇಯ್ದ ಅವ್ವ…!! ಕಾವ್ಯ ಪುರಾಣ ವೇದ ಉಪನಿಷತ್ತು ಕಟ್ಟಿ ತಿಳಿಸಿ ಓದಿದವಳಲ್ಲ ಹೊಲ ಗದ್ದೆ ಪೈರು ಮನೆಯನ್ನ ಜೇಡರ ಬಲೆಯಂತೆ ನೇಯ್ದು ಬಂಡೆಯಲ್ಲಿ ಮೊಳಕೆಯೊಡೆದು ಸೂರಿಗೆ ಚಂದ್ರನಾಗಿ ತಂಪ ನೀಡಿದವಳು ಕೋಳಿ ಕೂಗೋ ಮುಂಚೆ ಎದ್ದು ದನ ಕರು ಕಟ್ಟಿ, ಕಸ ಸುರಿದು ಬಂದು ಮಬ್ಬ ನೆಲದಾಗಸವ ಶುಚಿಗೊಳಿಸಿ ನೀರ-ನಿಡಿ ಹಿಡಿದು ಕಾಯಿಸಿ ಹಜಾರದಲ್ಲಿ ಮಕ್ಕಳಿಗೆ ಮಜ್ಜನ ಮಾಡಿಸಿ ಕೊಳಕಿಲ್ಲದ ಶ್ವೇತವಸ್ತ್ರ ತೊಡಿಸಿ ಲೋಕದ ಮಾನ ಮುಚ್ಚಿ ಬಾಚಣಿಗೆಯಲ್ಲೆ ವಿಶ್ವಪರ್ಯಟಿಸಿ ಚಿಂದಿ ಮನಗೂಡಿಸಿ ಸಮತೆ ಸಾರಿ … Read more

ಪಂಜು ಕಾವ್ಯಧಾರೆ

ನಗ್ನ ರಾತ್ರಿಗಳು ನನ್ನ ಆಸೆಗಳು ಮತ್ತು ನಿನ್ನ ಯೌವ್ವನ ನಿನ್ನ ದೇಹ ನನ್ನ ಸ್ಪರ್ಷ ಎಷ್ಟು ಹೊತ್ತಿ೦ದ ಅನ್ನುವುದನ್ನು ಡಿಮ್ ಲೈಟಿನ ನಾಲ್ಕು ಗೋ‌ಡೆಯ ಮದ್ಯ ಮರೆತಿರುವುದು ಒ೦ದು ಹುಚ್ಚುತನ ಅ೦ತ ನನಗನಿಸಲಿಲ್ಲ, ನಿನಗೂ ಕೂಡ! ನಿನ್ನ ಕೈ ಬೆರಳಿನ ಉಗುರಿನ ಗಾಯ ನನ್ನ ಬೆತ್ತಲೆಯ ಬೆನ್ನಿನ ಮೇಲೆ ತೇವಗೊ೦ಡಿರುವುದು ನಿನ್ನ ಸ್ತನದ ತೊಟ್ಟು ನನ್ನ ತುಟಿಯ ಚು೦ಬನದಲಿ ನರಳುತ್ತಿರುವುದು ನೋವು ನಲಿವಿನ ಸ್ವರ್ಗಸುಖದಲಿ ಯಾವುದೂ ಅರಿವಿಲ್ಲದೆಯೆ ತಿರುಗುವ ಸೀಲಿ೦ಗ್ ಫ್ಯಾನಿನ ಕೆಳಗೆ ನಾವಿಬ್ಬರು ಹೀಗೆ ಎಷ್ಟು … Read more

ಪಂಜು ಕಾವ್ಯಧಾರೆ

ಈ ಜಗದಾಗೆ ದೊಡ್ಡೋರು ಯಾರಿಲ್ಲ ಚಿಕ್ಕೋರು ಯಾರಿಲ್ಲ ಎಲ್ಲಾರೂ ಒಂದೇನೆ ಈ ಜಗದಾಗೆ ದೇವ್ರಾಟ ಆಡ್ಕೋತ ಬದುಕನ್ನ ಬೇಯಿಸ್ಕೊತ ಕಡೆಗೆಲ್ಲಾ ಮಣ್ಣು ಈ ಜಗದಾಗೆ || ಲೋಕಾನೆ ಗೆಲ್ಬೇಕು ಅಂದ್ಕೊಂಡು ಬಂದವ್ರು ಬರಿಗೈಲಿ ಹೋದ್ರಂತೆ ಇತಿಹಾಸ್ದಾಗೆ ಅಂತಸ್ತು ಬಿದ್ದೋಯ್ತು ನೆಲವೆಲ್ಲಾ ಮುಳುಗೋಯ್ತು ಗೊತ್ತಿಲ್ಲಾ ಬರ್ದದ್ದು ಹಣೆಬರ್ದಾಗೆ || ಕಷ್ಟಾನೂ ಬರ್ತಾದೆ ಸುಖಾನೂ ಬರ್ತಾದೆ ಬಂದದ್ದು ತಗೋಬೇಕು ಜೀವಂದಾಗೆ ಕಷ್ಟದಲಿ ಕುಗ್ಗದಂಗೆ ಸುಖದಲ್ಲಿ ಹಿಗ್ಗದಂಗೆ ದೇವ್ರೌನೆ ಅಂದ್ಕೊಂಡ್ರೆ ನೆಮ್ಮದಿತಾನೆ || ಗೆದ್ದದ್ದು ಗೆಲುವಲ್ಲ ಸೋತದ್ದು ಸೋಲಲ್ಲ ಜಿದ್ದಾಜಿದ್ದಿಯ ಕಾಣೆ … Read more

ಪಂಜು ಕಾವ್ಯಧಾರೆ

ಬೇಸರದ ಬಾವಲಿಗಳಿಗೆ ಕಣ್ಣಿಲ್ಲ. ಬೀಸುವ ಗಾಳಿಗೆ ಎದೆಯ ಕಾಗುಣಿತ ಅಪಥ್ಯ. ಇದ್ದಲ್ಲೇ ನುರಿಯುವ ಈ ನಿರುದ್ದೇಶಿ ಕುರ್ಚಿಗೆ ಕಾಲುಗಳು, ನೆಪಕ್ಕೆ ಮಾತ್ರ ಪೋಣಿಸಿದ್ದಾನೆ-ಬಡಗಿ, ಇದು ಹಳೆಯ ಗುಟ್ಟು. ಒಪ್ಪಿಕೊಂಡು ಎಷ್ಟೋ ಕಾಲವಾಗಿದೆ. ಕೆಲವು ಕಾರಾಗೃಹಗಳಿಗೆ ಗೋಡೆಗಳಿರುವುದಿಲ್ಲ. ಕೆಲವು ಮಾತುಗಳಿಗೆ ಪದಗಳೂ.. ನಿಟ್ಟುಸಿರಿಗೆ ಮಾತ್ರ ಬಣ್ಣಗಳು – ಬಿನ್ನ ಬಿನ್ನ. ಯಾರದೋ ಒಬ್ಬಂಟಿತನದ ಬೇಟೆಗೆ ಮರಳ ಮಯ್ಯ ಮೇಲೆ ಬರೆದ ಚಿತ್ರಗಳಂತೆ ಬದುಕು. ಆದಿ ಅಂತ್ಯಗಳ ವಿಧಿ ಲಿಖಿತಗಳ ಗೊಡವೆ ಮರೆವೆಗೆ ಕೊಟ್ಟು, ಅಲೆ ಕೊಚ್ಚಿಕೊಂಡು ಹೋಗಲೆಂದೇ ಕಾಯುತ್ತಾ … Read more

ಪಂಜು ಕಾವ್ಯಧಾರೆ

ಎನಿತು ಇನಿದು… ಎನಿತು ಇನಿದು ಅಕ್ಷಿನೋಟ; ಇಕ್ಷು ಮಧು! ಸ್ಪರ್ಶಿಸಿದ ರೇಶಿಮೆ ಮೈ ಎಷ್ಟು ಮೆದು!! ಮಧುರ ದನಿ ಅಧರ ಗಿಣಿ ಬರುವವೀ ಜಾತಿ ಧರ್ಮ; ಘನಪದರು ಎದುರ ದಾಟಬೇಕು ಸೀಳಿ; ಕೊಡದೆ ಸದರ ಏಕೆ? ಅಂಜುವೆ; ಎದೆಗುಂದುವೆ ಬಂದಿಹ ನಾ ವ್ಯಾಧನೆ? ನಾ; ಕಾಯುವ ಯೋಧ! ನಾವು ಆವು ಜೊತೆಗಿಹರು ಹಾವು ನಿತ್ಯ ಕಾಣುವುದು ಸಾವು-ನೋವು ಈ ಬಾಳೇ; ಸಿಹಿ-ಕಹಿ-ಬೇವು! -ಅಯ್ಯಪ್ಪಕಂಬಾರ         ಕೇಳು ನನ್ನೊಲವೇ …! ಒಲವೇ – ! … Read more

ಪಂಜು ಕಾವ್ಯಧಾರೆ

ಗಜಲ್ ಕೊನೆಯುಸಿರವರೆಗೂ ನಿನ್ನದೇ ಹಾಡು ಹಾಡಬೇಕೆಂದಿರುವೆ ಮುಗಿಸಿಬಿಡು ಈ ಜಗದ ಲೆಕ್ಕ ನೆನ್ನೆಗೇ ವಿದಾಯ ಹೇಳಿ ನನ್ನೆಲ್ಲ ತಪ್ಪುಗಳ ಚೀಟಿ ಬರೆದಿಟ್ಟಿರುವೆ ಮುಗಿಸಿಬಿಡು ಈ ಜಗದ ಲೆಕ್ಕ ಪ್ರೀತಿಯ ಯುಗಾದಿ ಮೊಹರಂಗಳು ಈ ಜಗತ್ತಿನಲಿ ಎಲ್ಲಿಯವರೆಗೆ ಒಂದಾಗಲಾರವೋ ಸಾವು ಮೆರೆಯುವುದು ಗಲ್ಲಿಯಲಿ ಸದ್ದಿಲ್ಲದಂತೆ ಬೇವು ಬೆಲ್ಲ ಕೊಟ್ಟಿರುವೆ ಮುಗಿಸಿಬಿಡು ಈ ಜಗದ ಲೆಕ್ಕ ಅಪ್ಪ ಕಣ್ಣು ಅಮ್ಮ ಹೃದಯ ರಕ್ತ ಚರಿತ್ರೆಯಲಿ ದಾಖಲಾಗಿ ಕಣ್ಣೀರಿಗೆ ಬದಲು ರಕ್ತ ಸೋರಿಹುದು ಅಟ್ಟಹಾಸದ ಬೆಂಕಿಗೆ ಆಹುತಿಯಾದ ಆತ್ಮಗಳ ಕ್ಷೇಮ ಕೋರಿರುವೆ … Read more

ಪಂಜು ಕಾವ್ಯಧಾರೆ ೧

ನಾನು ಕವಿತೆ ಬರೆಯುವುದಿಲ್ಲ… ನಾನು ಕವಿತೆ ಬರೆಯುವುದಿಲ್ಲ… ನನ್ನೊಳಗಿನ ಬನಿಗೆ ದನಿಯಾಗಬೇಕೆಂಬ ಇರಾದೆ ನನಗಿಲ್ಲ. ಕೇವಲ ನನ್ನೊಳಗಿನ ಮಿಸುಗನ್ನು ನಸುಗುನ್ನಿಯನ್ನು ಅಕ್ಷರವಾಗಿಸುತ್ತೇನೆ. ಒಮ್ಮೊಮ್ಮೆ ಅಕ್ಷರಗಳು ಮಾತಾಡುತ್ತವೆ, ಕೆಲವೊಮ್ಮೆ ಹಾಡುತ್ತವೆ, ಮತ್ತೊಮ್ಮೆ-ಮಗದೊಮ್ಮೆ ಕಾಡುತ್ತವೆ. ದುಂಬಾಲು ಬಿದ್ದು ಮುದ್ದು ಮಾಡಿಸಿಕೊಳ್ಳುತ್ತದೆ. ಆಗ್ಗಾಗೆ ಮುಗಿಬಿದ್ದು ಮರುಬರೆಸಿಕೊಳ್ಳುತ್ತದೆ. ಬರೆವಾಗ ತನ್ಮಯಗೊಳಿಸಿ ಮೈಮರೆಸುತ್ತದೆ. ಲಲ್ಲೆಗರೆಯುತ್ತವೆ. ಚೆಲ್ಲುಬಡಿಯುತ್ತವೆ ಎಲ್ಲೆಂದರಲ್ಲಿ ನನ್ನೊಳಗೆ ರಾರಾಜಿಸುತ್ತದೆ. ನನ್ನ ಸೊಂಟಕ್ಕೆ ತುಂಟಮಗುವಾಗಿ, ಪಂಟುಹೊಡೆಯುವ ಲಂಪಟನಾಗಿ, ಉಪಟಳಿಸುವ ಸುಂಟರಗಾಳಿಯಂತೆ ನನ್ನ ಸುತ್ತಲೆ ತಿರುಗುತ್ತವೆ ! ಕನಸಲ್ಲಿ ಕಾಡುತ್ತವೆ ಥೇಟ್ ನನ್ನ ಪ್ರೇಮಿಯಂತೆ ! … Read more

ಗಜ಼ಲ್: ಡಾ. ಗೋವಿಂದ ಹೆಗಡೆ, ಲಕ್ಷ್ಮಿಕಾಂತ ನೇತಾಜಿ ಮಿರಜಕರ

ಗಜ಼ಲ್-೧ ಎಂಥ ಸೋಗುಗಳಲ್ಲಿ ಬದುಕಿದ್ದೇನೆ ಯಾರ ಖುಷಿಗೋ ನುಡಿಯುತ್ತ ಎಂಥ ನೋವಿನಲಿ ಮುಳುಗಿದ್ದೇನೆ ನನ್ನೊಡಲ ನಾನೇ ಬಗೆಯುತ್ತ ಬಂದ ದಾರಿಯಲಿ ಸುರಿದ ಮಂಜು ಮುಂದಕ್ಕೂ ಚಾಚಿ ಮಬ್ಬು ಯಾರಿಗೆ ದೂರು ಹೇಳಿದ್ದೇನೆ ಒಡಕು ತಮಟೆಯ ಬಡಿಯುತ್ತ ಖಚಿತ ಚಹರೆಗಳೇ ಇಲ್ಲದೆ ಹೇಗೋ ಬರೆದಿದ್ದೇನೆ ಚಿತ್ರ ಮುಖ ಮೀಸೆ ಬರಿದೆ ಮೆತ್ತಿದ್ದೇನೆ ಗೆರೆಯ ಎಳೆಯಲು ಸೋಲುತ್ತ ಎಲ್ಲದು ಅಗಣಿತ ಸಂದಣಿಯಲ್ಲಿ ಕಳೆಯಿತು ಒಂಟಿದನಿ ಬರಿದೇ ಸಂತೆ ತಿರುಗಿದ್ದೇನೆ ನನ್ನನೇ ನಾನು ಹುಡುಕುತ್ತ ಕೈ ಕೈ ಹಿಡಿದು ಒಟ್ಟಿಗೆ ನಡೆದೂ … Read more

ಪಂಜು ಕಾವ್ಯಧಾರೆ ೨

ಅಮ್ಮ ಎಂದರೆ……. ೧ ನಡೆದ ದಾರಿಯಲಿ ಎಷ್ಟೊಂದು ಹೆಜ್ಜೆಗಳು ಅಲ್ಲೆಲ್ಲೋ ದೂರದಲ್ಲಿ ಸಣ್ಣ- ದೊಡ್ಡ ಹೆಜ್ಜೆಗಳಿವೆ; ಒಂದು ನನ್ನದು ಮತ್ತೊಂದು ಈಗ ಮೃದುಪಾದವೂರುವ ನನ್ನಮ್ಮನದು! ೨ ಅಮ್ಮ ರೊಟ್ಟಿ ಬಡಿವಾಗ ಒಲೆ ಉರಿಯ ಝಳದ ಮುಂದೆ ಲೆಕ್ಕವಿಲ್ಲದಷ್ಟು ತಿನ್ನುತ್ತಿದ್ದೆವು ಈಗ ರೊಟ್ಟ ಬಡಿಲಾರದ ಅಮ್ಮನಿಗೆ ಶೆಟ್ಟರಂಗಡಿಯಿಂದ ಲೆಕ್ಕ ಮಾಡಿ ರೊಟ್ಟಿ ತಂದಿತ್ತರೆ ಮಾತಾಡದ ಅಮ್ಮ ನಗುತ್ತಿದ್ದಾಳೆ! ೩ ಉಡಿಸಿ ಉಣಿಸಿ ಖುಷಿ ಪಟ್ಟ ಅಮ್ಮ ಇದೀಗ ಕೈ ತುತ್ತಿಗೆ ಬಾಯ್ತೆರೆಯುತ್ತಿದ್ದಾಳೆ! ೪ ಕೈ ಹಿಡಿದು ನಡೆ- ನುಡಿ … Read more

ಕಥನ ಕವಿತೆ: ಫಕೀರ

    ಕಲಾಕುಂಜದ ಸಂತೆಯಲ್ಲಿ ಅಕ್ಕಪಕ್ಕ ಕಲಾಚಿತ್ರಗಳು ವರ್ಣಭಿತ್ತಿಗಳು ಎಣಿಕೆಗೆ ಸಿಗದಷ್ಟು ಹಾದಿಗುಂಟ ಮೈಲಿಗಟ್ಟಲೇ ಲಕ್ಷಲಕ್ಷ ಜನವೋ ಜನ ಸಾವಿರಾರು ಚಿತ್ರಕಲಾವಿದರು ತಮ್ಮ ತಮ್ಮ ಕಲ್ಪನೆಯ ಕನಸುಗಳೊಂದಿಗೆ ನಿಂತಿಹರು ಚಿತ್ರಪಟದ ಎದುರು -1- ಬಣ್ಣಗಳು ಅಂದು ಮಾತನಾಡುತ್ತಿವೆ ಚಿತ್ರಪಟಗಳು ಅತ್ತಿಂದತ್ತ ಓಡಾಡುತ್ತಿವೆ ಕಲಾರಸಿಕರ ಮನದೊಳಗೆ ಕಲಾವಿದನ ಕಲ್ಪನೆಯ ಚಿತ್ರಗಳು ಅಂದು ಮಾರಾಟಕ್ಕಿವೆ ಲಕ್ಷೋಪಲಕ್ಷ ಕಂಗಳ ಚಿತ್ತ ಅಕ್ಕಪಕ್ಕದಲಿ ನಿಂತ ಚಿತ್ರಪಟಗಳತ್ತ ಅರಸುತಿವೆ ಎಡಬಿಡದೆ ಕಣ್ಣುಗಳನು ಮಿಟುಕಿಸುತಿವೆ ತಮ್ಮನು ಕೊಳ್ಳುವ ರಸಿಕರತ್ತ ಆಸೆ ಕಂಗಳದಿ ಬೆರಗು ಹುಟ್ಟಿಸುವಂತೆ ಕಲಾವಿದನ … Read more

ಪಂಜು ಕಾವ್ಯಧಾರೆ

ಹೆಣ್ಣೊಂದು ತಾಯ್ತನದ ಕಣ್ಣು ಬಾಲ್ಯದಲಿ ಅಂಕುರ ಬೆಳೆಯುತ್ತ ಹೂವು ಸುಮಧುರ ಅಮ್ಮನಿಗೆ ಸಹೋದರಿ ಅಪ್ಪನಿಗೆ ಭಾಗ್ಯದ ಗರಿ ಮನೆ ಬೆಳಗುವ ಜ್ಯೋತಿ ನೀನಿಲ್ಲದ ಜಗವೊಂದು ಭೀತಿ ಹೆಣ್ಣೊಂದು ಅಗಾಧ ಶಕ್ತಿ ಪವಾಡದಂತೆ, ಇದೊಂದು ಸೃಷ್ಟಿ ಒಲಿದರೆ ನಾರಿ ಮುನಿದರೆ ಮಾರಿ ಈ ಗಾಧೆಗೆ ಸರಿ ಸಾಟಿ ಬರೋಬರಿ ಸಂಗೀತ ಸಾಹಿತ್ಯ ದೇವತೆ ಸುಂದರ, ನಯನ ಮನೋಹರ ನೀನಿಲ್ಲದ ಯುಗವೇ ಅವನತಿ ಹೆಣ್ಣೊಂದು ಭಕ್ತಿ, ಕೈ ಮುಗಿಯಲು ಜನ್ಮ ದಾತೆಯ ರೂಪ ಸದಾ ಮಿಗಿಲು ಒಡಲ ಪ್ರೀತಿಯ ಸಾರುವ … Read more

ಪಂಜು ಕಾವ್ಯಧಾರೆ

ಅಜ್ಜ ಬರುವುದ ಇನ್ನೂ ಬಿಟ್ಟಿಲ್ಲ..!! ಅಗೋ..! ನೋಡು ಅಲ್ಲಿ..? ಗೋಡೆನೆತ್ತಿಯ ಮೊಳೆಯಲ್ಲಿ ಅಹಿಂಸಾ ಮೂರುತಿಯ ಬಂಧಿಸಿ ಕಟ್ಟಿ ಹಾಕಿದಂತೆ ನೇತು ಹಾಕಿದೆ ಬಿಟ್ಟ ಕಣ್ಣು ಬಿಟ್ಟ ಹಾಗೆ ಹುಬ್ಬುಗಂಟಿಕ್ಕದೆ ಒಮ್ಮೆ ನಸು ನಗುತ್ತಾ ಜೀಸಸ್ ಕ್ರಿಸ್ತನಂತೆ ಕಾಣುತ್ತಿದ್ದಾನೆ..!! ನನ್ನ ತಾತ ಕೋಲು ಹಿಡಿದು ಸುಕ್ಕುಗಟ್ಟಿದ ಮೈಯ್ಯಲ್ಲಿ ತುಂಡು ಬಟ್ಟೆ ತೊಟ್ಟು ಮೇಲೆ ಹೊದಿಕೆ ಹೊದ್ದು ಕಾಲ್ನಡಿಗೆಯಲ್ಲೇ ಯಾರನ್ನೋ ? ಯಾವುದನ್ನೋ ! ಅರಸುತ್ತಾ , ನಡೆಯುತ್ತಾ ಹೊರಟಂತಿದೆ…!! ಕಪ್ಪು ಜನಾಂಗೀಯ ನಿಂದನೆ ದಹಿಸಿ ಅಹಿಂಸೆಯಿಂದ ಹಿಂಸೆ ಜಯಿಸಿ … Read more

ಪಂಜು ಕಾವ್ಯಧಾರೆ

ನಿನ್ನ ಅಕ್ಷರ ಪ್ರೀತಿ ಅಮರವಾಗಲಿ (ಜಿಎಸ್‍ಎಸ್ ನೆನಪು) ಕನ್ನಡ ಸಾಹಿತ್ಯದ ಕಿರೀಟವಾದೆ ಕನ್ನಡಿಗರ ಮನದ ಮುಕುಟವಾದೆ ಪ್ರೀತಿ ಇಲ್ಲದ ಮೇಲೆ ಎಂದು ಎಲ್ಲರಿಗೂ ಪ್ರೀತಿಯ ಅರ್ಥ ತಿಳಿಸಿದೆ ಕಾಣದ ಊರಿಗೆ ನಿನ್ನ ಪಯಣ ಸದಾ ತುಂಬಿರುವೆ ಜನಮನ ಕನ್ನಡ ಭೂಮಿಯಲ್ಲಿರುವ ಒಂದೊಂದು ಕಣಕಣ ಹಾಡಿ ಹೊಗಳಿದೆ ನಿನ್ನ ಗುಣಗಾನ ಕನ್ನಡಾಂಬೆಯ ಪುತ್ರ ನೀ ಕನ್ನಡಿಗರೆಲ್ಲರ ಮಿತ್ರ ನೀ ದೇಹದಿ ಆತ್ಮ ಅಗಲಿದರೇನು ಭಾವದಿ, ಜೀವದಿ ನಿನ್ನ ನೆನಪು ಅಳಿಯುವುದೇನು? ನಾನು ನೊಂದೆ, ಒಮ್ಮೆ ನಿನ್ನ ನೋಡಬೇಕೆಂಬ ಆಸೆ … Read more

ಪಂಜು ಕಾವ್ಯಧಾರೆ

ಅದೆಷ್ಟು ಕಷ್ಟ ಬುದ್ಧನಾಗುವುದೆಂದರೆ…! ಅದೆಷ್ಟು ಕಷ್ಟ ಈಗ ಬುದ್ಧನಾಗುವುದೆಂದರೆ ಆಸೆಯ ಬಿಡುವ ಯುದ್ಧ ಒಂದೆಡೆಯಾದರೆ ಸಕಲವ ತ್ಯಜಿಸಿ ಎದ್ದು ಬಿಡುವುದು ಇನ್ನೊಂದು! ಕಲ್ಲೆಸೆದವರ ಎದೆಯಲ್ಲಿ ಪ್ರೀತಿ ತುಂಬಿ ಬೆರಳ ಹಾರ ಮಾಡಿದವರ ಕೊರಳಲ್ಲಿ ಶಾಂತಿ ಧ್ವನಿ ನುಡಿಸಿ ರೋಗಕ್ಕೆ ಹೆದರಿ, ಸಾವಿಗೆ ಬೆದರಿ ಮಧ್ಯರಾತ್ರಿ ದಿಗ್ಗನೆ ಎದ್ದು ನಡೆದುಬಿಡುವುದೆಂದರೆ ಉದ್ದುದ್ದ, ಮಾರುದ್ದದ ಬೋಧನೆ ನೀಡದೇ ಸದ್ದು ಮಾಡದೆ ಭೋಧಿಯಡಿಯಲ್ಲಿ ಸಿದ್ಧಿ ಪಡೆದು ಸಿದ್ದಾರ್ಥನ ನಿರ್ವಾಣ ಮಾಡಿ ಗೌತಮನ ನಿರ್ಮಾಣ ಹೊಂದುವುದೆಂದರೆ ಕಡು ಕಷ್ಟವೇ ಅದು!! ಬುದ್ಧನಾಗುವುದೆಂದರೆ ಬರೀ … Read more

ಪಂಜು ಕಾವ್ಯಧಾರೆ

ಒಡೆದ ನೆನಪಿನ ಚೂರುಗಳು…!! ಆ ತೋರು ಬೆರಳು ಸಹ ಕಣ್ಣ ಮಿಟಿಗಿಸುತ್ತ ಮೊಬೈಲ್ನ ಮೂರು ಗಳಿಗೆಯೂ ಬ್ಲಾಕ್ ಮಾಡಿರುವ ವಾಟ್ಸಾಪ್ ನಂಬರ್, ಫೇಸ್ಬುಕ್ನ ಐಡಿ ನೋಡುವುದ ಬಿಡೋದಿಲ್ಲ ಅದಕ್ಕೂ ತಿಳಿದಿರಬೇಕು ನಾವು ದೂರವಾಗಿರುವ ವಿಷಯವು ಪದೇ ಪದೇ ನಿನ್ನ ನೆನಪಿಸುತ್ತಿದೆ !! ನೋಡು ನಮ್ಮನಗಲಿಕೆಯ ಕಂಡು ಆ ಬಸ್ಸು – ಲಾರಿ, ಕಾರು- ಸ್ಕೂಟರುಗಳು ಒಂದೇ ಸಮನೇ ಜೋರು ಸದ್ದು ಮಾಡಿ ರಸ್ತೆಗುಂಟ ಕೇಕೆ ಹಾಕುತ್ತ ಹೊಟ್ಟೆ ಉರಿಸುತ್ತಿವೆ…!! ಒಡೆದ ಕನ್ನಡಿಯೂ ಹೇಳುತ್ತಿತ್ತು ಛಿದ್ರ -ಛಿದ್ರವಾದ ಚೂರುಗಳಲ್ಲಿಯೂ … Read more

ಪಂಜು ಕಾವ್ಯಧಾರೆ

**ಮಾರಿಬಲೆಯಾ ** ಬಲೆಯೆತ್ತಿ ಹೊರಟಿಹರು ಬೆಸ್ತರು ಸಡಗರದಿ ಜಡಿಮಳೇಲಿ ಕಡಲ ತಡಿಗೆ I ಇಂದು ಸಿಕ್ಕಾವೋ? ಭೂತಾಯಿ ಕೊಡವಾಯಿ ಕಂಡಿಕಿ ಜಾರಿ ನನ್ನ ಬಲಿಗೆ I ಬಂದಿಹುದು ಮಳೆಗಾಲ ಬೀಸುವುದೇ ಬಲೆ ಈಗ! ಸಿಕ್ಕೇ ಸಿಕ್ಕಾವು ಎಸುಡಿ ಸಿಗಡಿ I ಮರವಂತೆ ಕಡೆಹೋಪ ಬರುವುದು ಬಾರಿ ಬೆಲೆ ಸಿಕ್ಕರೆ ಭೂತಾಯಿ ಕಂಡಿಕಿ I ಬೋರ್ಗರೆವ ಕಡಲೆಡೆಗೆ ಬಂದಾನೋ ಮೊಗವೀರ ಬೀಸಿದಾ *ಮಾರಿ**ಬಲೆಯಾ I ನನ್ನಯ ಮನೆಯಿಂದ ದೂರಾದ ಮೈಲುವರೆಗೂ ಇಂದು ನನ್ನದೇ ಬಲೆಯೂ I ಬಲೆ ಬಿಡುವುದು … Read more

ಪಂಜು ಕಾವ್ಯಧಾರೆ

೧. *ಒಲವಿನ ಕನಸು * ಕಂಡಿರದ ಮೊಗದ ಮೂರ್ತಿಯನು ಕೆತ್ತಿ… ತನ್ನಿಷ್ಟದ ಭಾವಗಳ ಅದರೆದೆಗೆ ಮೆತ್ತಿ… ಕಣ್ಣಕಾಂತಿಯಲಿ ಸವಿದು ಒಲವ ಸೊಬಗನು… ನೆನಪು-ಕನಸುಗಳ ಜಂಟಿ ಓಲಗದಿ… ಸಾಕ್ಷ್ಯ ಬರೆದಿತ್ತು ಚಂದ್ರಮನ ಕಾಂತಿ… ೨. *ತೆರೆದ ಪುಸ್ತಕದಂತ ಬದುಕು* ತೆರೆದ ಪುಸ್ತಕದಂತ ಬದುಕು ಓದುಗರು ಹಲವರು ಹಲವು ತೆರನವರು ತೆಗಳುವವರು, ಹೊಗಳುವವರು ಓದಿಯು ಓದದಂತಿರುವವರು ಓದದೆಯು ಜರೆಯುವವರು ಓದದೆಯು ಹೊಗಳುವವರು ಎಲ್ಲರ ಬಾಯಿಗೆ ಆಹಾರವಾಗೋ ಬಾಳು ತೆರೆದ ಪುಸ್ತಕದಂತ ಬಾಳು ಎನ್ನ ನೋವುಗಳ ಜ್ವಾಲೆಯಲ್ಲಿ ಚಳಿ ಕಾಯಿಸಿಕೊಂಡವರೆಷ್ಟೋ ಎನ್ನ … Read more

ಪಂಜು ಕಾವ್ಯಧಾರೆ

ಇನ್ನಾದರೂ ತುಸು ಹೊತ್ತು ಖುಷಿಯಿಂದ ಉಳಿದುಬಿಡುತ್ತೇನೆ ಬದುಕಿಗೆ ಬೇಸರ ಬರುವಷ್ಟು .. ಈ ಬದುಕು ಸುರುವಿದ ಅಸಂಖ್ಯ ಅವಕಾಶಗಳ ಎಣಿಸುತ್ತಾ ಕೂತು ಕಳೆದಿದ್ದೇನೆ ಹೀಗೆ ಬಳಸಿಕೊಳ್ಳೋದ ಮರೆತು ಪ್ರತಿ ಖುಷಿಯ ಹಿಂದೊಂದು ಮುಗಿಯದ ಖಾಲಿತನವನ್ನು ಸುಮ್ಮನೇ ಉಳಿಸಿಕೊಂಡಿದ್ದೇನೆ ನನ್ನಂಥ ಕಡುಮೌನಿಯೂ ನಿನ್ನ ಮಾತಿಗೆ ಹಪಹಪಿಸಲು ಶುರುವಿಡುವ ಈ ಹೊತ್ತು ಇಲ್ಲೇ ಸ್ತಬ್ಧವಾಗಲಿ ಬಿಡು ಮಾತು ಮೀರಿದ ಘಳಿಗೆ ಎದುರಿಗಿದ್ದಾಗ … ಬೆರಳ್ಹಿಡಿದು ನಡೆಸಿದ ಕಾಲುಹಾದಿಯ ಬದುಕು ಜಾರಿಸಲು ಶುರುವಿಟ್ಟು ನಗುತಾ ನಿಂತ ಸಮಯ ಬೇಕೆನಿಸಿದೆ ನಿನ್ನ ಸಾಂಗತ್ಯ … Read more