ಪ್ರೀತಿಯ ಪರಿಧಿ: ಪ್ರವೀಣ ನಾಯಕ, ದಾಂಡೇಲಿ

ಪ್ರೀತಿ ಇದ್ದಲ್ಲಿ ಭೀತಿ ಇರದು. ಅದು ಭೀತಿಯನ್ನು ದೂರಕ್ಕೆಸೆಯುತ್ತದೆ. ಇದು ಏಸುಕ್ರೀಸ್ತನ ವಾಣಿ. ಮಾನವಕುಲವನ್ನು ಮೇಲಕ್ಕೆತ್ತುವ ಸ್ಪೂರ್ತಿಯನ್ನು ನೀಡುವುದೇ ಪ್ರೀತಿ. ಆಯುರಾಗೋಗ್ಯ, ಶಾಂತಿಯನ್ನು ನೀಡಬಲ್ಲದ್ದು ಪ್ರೀತಿ. ಕಷ್ಟದ ಆಳದಿಂದಲೂ ವ್ಯಕ್ತಿಯ ನೋವನ್ನು ನಿವಾರಿಸಬಲ್ಲದ್ದು ಪ್ರೀತಿ. ಆದರೆ ಇಂದಿನ ಕಾಲದಲ್ಲಿ ಈ ಪ್ರೀತಿಯ ಅಭಾವ ಕಂಡುಬರುತ್ತಿದೆ. ಬಾಲ್ಯವಸ್ಥೆಯಲ್ಲಿ ತಂದೆತಾಯಿಯರ ಪ್ರೀತಿ ಕಂಡರಿಯದ ಮಕ್ಕಳು ದುಷ್ಟರು ಭ್ರಷ್ಟರು ಕ್ರೂರಿಗಳು ಆಗುತ್ತಾರೆಂದು ಪ್ರಾಜ್ಞರು ಹೇಳಿರುವುದನ್ನು ನಾವು ಕೇಳಿದ್ದೇವೆ. ಮಕ್ಕಳನ್ನು ತಂದೆ ತಾಯಿಯರು ಯಾವಾಗಲೂ ಭಯದಲ್ಲಿರಿಸಬಾರದು. ಅಲ್ಲಿ ಸೇಡಿನ ಮನೋಭಾವ ಹಿಂಸಾಪ್ರವೃತ್ತಿ, ಹೃದಯಹೀನತೆಯು … Read more

ಗೆಳೆಯಾ..: ನಂದಾದೀಪ, ಮಂಡ್ಯ

ಹಗಲು ರಾತ್ರಿಗಳನ್ನು ಒಂದುಗೂಡಿಸುವ ಒಂದು ಎಳೆಯೆಂದರೆ ಮುಸ್ಸಂಜೆ..! ಅಂತಹ ಮುಸ್ಸಂಜೆಯ ತಂಪಿನಲಿ ಕಡಲ ಮರಳಿನ ಮಡಿಲಿನಲಿ ಕುಳಿತು ಬೆರಳು ನಿನ್ನ ಹೆಸರನು ಗೀಚುವಾಗ ಆ ಅಲೆಗಳಿಗೂ ಅದೇನು ಸಂಕಟವೋ ಓಡೋಡಿ ಬಂದು ಅಳಿಸಲೆತ್ನಿಸುತ್ತವೆ..ಅಲೆಗಳು ಅಳಿಸಿದಷ್ಟು ನಿನ್ಪ ಹೆಸರನ್ನು ಮತ್ತಷ್ಟು ನನ್ನೆದೆಯಲ್ಲಿ ಗಟ್ಟಿಯಾಗಿ ಅಚ್ಚೊತ್ತುಕೊಳ್ಳಬೇಕೆಂಬ ಭಾವಗಳು ಮೂಡಿ, ಅಮೂಲ್ಯವಾದ ಕನಸುಗಳನ್ನು ಹುಟ್ಟು ಹಾಕಿಬಿಡುತ್ತದೆ.. ಇಂತಹ ಭಾವನೆಗಳು ಮನಸನ್ನು ಅರಳಿಸುವುದಕ್ಕಿಂತ ಎಲ್ಲಿ ನೀ ಸಿಗದೆ ನರಳಿಸಿಬಿಡುತ್ತದೊ ಎಂಬ ಭಯವೊಂದು ಕಾಡದೆ ಇರಲಾರದು.. ಆದರೆ ಒಲವೆನ್ನುವುದೆ ಹಾಗೆ ಅಲ್ಲವೆ ಒಂಟಿ ಹೆಜ್ಜೆಗಳ … Read more

ಒಲವ ಹೊರೆ ಹೊರಿಸಿದವಳೇ..: ವಿಭಾ ವಿಶ್ವನಾಥ್

ನೀನ್ಯಾಕಿಷ್ಟು ಚೆಂದವೇ ಹುಡುಗಿ? ನನ್ನ ಮನಸೂರೆಗೊಂಡು ಕನಸಲ್ಲೂ ಲಗ್ಗೆ ಇಡುವಷ್ಟು..? ಸುಂದರತೆ ಎಂದರೆ ಬರೀ ಬಾಹ್ಯ ಸೌಂದರ್ಯ ಮಾತ್ರ ಎಂದುಕೊಂಡವನ ಮನ ಬದಲಿಸಿದ್ದು ನೀನಲ್ಲದೆ ಮತ್ಯಾರು ಎಂದುಕೊಂಡೆ..?  ನೀನ್ಯಾಕಿಷ್ಟು ಒಳ್ಳೆಯವಳು ಹೇಳು..? ಒಳ್ಳೆಯತನ ಬೂಟಾಟಿಕೆ ಎಂದುಕೊಂಡಿದ್ದವನ ಮನವನ್ನು ಬದಲಿಸುವಷ್ಟು ಒಳ್ಳೆತನ ನಿನ್ನಲ್ಲಿಲ್ಲದೇ ಹೋಗಿದ್ದರೆ ಅದೆಷ್ಟು ಕೆಟ್ಟವನಾಗಿರುತ್ತಿದ್ದೆ ನಾನು.. ಆದರೂ ಸುಂದರವಾದದ್ದು, ಒಳ್ಳೆಯದ್ದು ದೂರದಲ್ಲೇ ಇರಬೇಕು ಅಲ್ಲವೇ..? ಅದಕ್ಕೆ ಇರಬೇಕು ನಿನ್ನಂತಹವರು ಗಗನ ಕುಸುಮಗಳಂತೆ ಭಾಸವಾಗುವುದು. ಪಾರಿಜಾತದಂತಹವಳು ನೀನು.. ಅದರ ಬಿಳುಪು, ಬಣ್ಣದ ಬಗ್ಗೆ ಹೇಳುತ್ತಿಲ್ಲ ನಾನು. ಅದು … Read more

ಪ್ರೇಮವೆ ಬಾಳಿನ ಬೆಳಕು: ವರದೇಂದ್ರ ಕೆ

“ಪ್ರೇಮಿಸಬೇಕು ಪ್ರೇಮಿಗಳುಮನಸನ್ನು, ಅರಿಯಬೇಕುಕನಸಿನಂತಿಲ್ಲ ಬದುಕೆಂಬುದನು.ಎದುರಿಸಬೇಕುಮದುವೆಗೆ ಮುನ್ನ ಬರುವ ಕಷ್ಟಗಳನ್ನು,ಸಹಿಸಬೇಕು ಮದುವೆನಂತರಬರುವ ಕ್ಲಿಷ್ಟಗಳನ್ನು” ಪ್ರೇಮಿಗಳು, ಮದುವೆಗೆ ಮುನ್ನ ಹೃದಯದೊಳಗೆ ಹುಟ್ಟಿದ ಪ್ರೇಮದ ಚಿಗುರಿಗೆ ತಮ್ಮನ್ನು ತಾವು ಅರ್ಪಿಸಿಕೊಂಡವರು. ಮದುವೆ ಬಳಿಕ ಸಂಸಾರದ ಜಂಜಾಟವನ್ನು ಗೆದ್ದು ಪ್ರೇಮವನ್ನು ಉಳಿಸಿ, ಬೆಳೆಸಿ, ಹೆಚ್ಚಿಸಿಕೊಂಡವರು ನಿಜವಾದ ಪ್ರೇಮಿಗಳು. ಪ್ರೇಮ, ಒಂದು ಮಧುರವಾದ ಯಾತನೆ. ಈ ಮಧುರವಾದ ಮಾನಸಿಕ ಯಾತನೆಗೆ ಸೋಲದವರಿಲ್ಲ. ಈ ಯಾತನೆಯನ್ನು ಬೇಡವೆಂದವರೂ, ಬೇಡ ಎನ್ನುವವರೂ ಇಲ್ಲ. ಪ್ರೇಮವಿಲ್ಲದೆ  ಬದುಕಲು ಸಾಧ್ಯವಿಲ್ಲ ಧರೆಯಲ್ಲಿ. ಧರೆಯ ಪ್ರೇಮದ ಫಲವೇ ನಮ್ಮ ಆಹಾರ. ಎಲ್ಲಕ್ಕೂ ಮೂಲವಾದ ಈ … Read more

ನೀ ಕೊಂಡುಕೊಂಡ ಮುಖವಾಡದ ಅಂಗಡಿಯಲ್ಲಿ ನನಗೊಂದನ್ನು ಕೊಡಿಸು: ಮಹಾಂತೇಶ್. ಯರಗಟ್ಟಿ

ನಿನ್ನ ಬಗ್ಗೆ ಬರೆಯಲು ಈಗ ಏನೂ ಉಳಿದಿಲ್ಲ ಆದರೂ ಬರೇಯುತ್ತೇನೆ. ನಿನ್ನ ಹೆಸರಿನಲ್ಲಿ ಬರೆದಿಟ್ಟ ಒಂದಿಷ್ಟು ಪತ್ರಗಳ ಬಗ್ಗೆ ಕೆಣುಕಿ ಕಾಡಿ ನನ್ನನ್ನ ಈ ಪ್ರೀತಿಗಾಳಕ್ಕೆ ಸಿಲುಕಿಸಿ ನೀನು ಮಾತ್ರ ಗೆದ್ದವರ ಸಾಲಿನಲ್ಲಿ ನಿಂತು ನಗುತ್ತಿ, ಆದರೂ ಬೇಜಾರಿಲ್ಲ. ನಾನು ಯಾವಾಗಲೊ ನಿನಗೆ ಸೋತಿದ್ದೇನೆ. ಗೆದ್ದ ನಿನ್ನ ಹಸಿವು ತೀರಿತು ಆದರೆ ಸೋತವನ ಹಂಬಲ ಮಾತ್ರ ನೀ ಬಿಟ್ಟು ಹೋದ ಗಳಿಗೆಯಿಂದ ವಿಲ ವಿಲ. ನಾನಾಗಿ ನಿನಗೆ ಬರೆದ ಅದೆಷ್ಟೋ ಪತ್ರಗಳಲ್ಲಿ ನಿನ್ನನ್ನ ಒಂದು ಮಾತು ತೆಗಳಲಿಲ್ಲ … Read more

ಪ್ರೇಮಿಗಳ ದಿನಾಚರಣೆ: ಭಾರ್ಗವಿ ಜೋಶಿ

ಮೊಟ್ಟ ಮೊದಲು ಎಲ್ಲರಿಗು ಪ್ರೇಮಿಗಳ ದಿನಾಚರಣೆಯ ಶುಭಾಶಯಗಳು. ಭೂಮಿಮೇಲೆ ಜೀವಿಸುವ ಪ್ರತಿ ಜೀವಿಗಳು ಪ್ರೇಮಿಗಳೇ. ಈ ಜಗದಲ್ಲಿ ಗಾಳಿ, ನೀರು, ಬೆಳಕಿನ ಅಸ್ತಿತ್ವ ಎಷ್ಟು ಸತ್ಯವೋ ಹಾಗೆ ಈ ಪ್ರೀತಿ, ಪ್ರೇಮವೆಂಬ ಭಾವನೆಗಳ ಅಸ್ತಿತ್ವವು ಅಷ್ಟೇ ಸತ್ಯ ಮತ್ತು ಅವಶ್ಯಕ. ಪ್ರೀತಿ ಎಂದರೆ ತಂಗಾಳಿ, ಪ್ರೀತಿ ಎಂದರೆ ಹರಿವ ನೀರು, ಪ್ರೀತಿ ಎಂದರೆ ಬಿಸಿ ಉಸಿರು, ಪ್ರೀತಿ ಎಂದರೆ ಸಿಹಿ ಸ್ಪರ್ಶ, ಪ್ರೀತಿ ಎಂದರೆ ಹುಸಿ ಮುನಿಸು, ಪ್ರೀತಿ ಎಂಬುದು ಸದಾ ಹಸಿರು. ಪ್ರೀತಿ ಎಂಬುದು ಕಣ್ಣಿಗೆ … Read more

ಪ್ರೇಮಿಗಳ ದಿನಾಚರಣೆಯ ಸಂಭ್ರಮ ಸಲಹೆ : ಸಿಂಧು ಭಾರ್ಗವ್. ಬೆಂಗಳೂರು

ಈ ಪ್ರೀತಿಗೆ ಪರಿಧಿ ಎಂಬುದಿಲ್ಲ. ಭ್ರೂಣದಿಂದ ಮರಣದವರೆಗೂ ಪ್ರೀತಿ ವಿಸ್ತಾರವಾಗಿ ಮನಸ್ಸನ್ನು ಹರಡಿಕೊಳ್ಳುತ್ತದೆ. ಅಲ್ಲದೇ ಪ್ರೇಮಿಗಳ ದಿನವನ್ನು ಕೂಡ ಯುವಕ ಯುವತಿಯರು ಮಾತ್ರ ಆಚರಿಸಬೇಕೆಂದಿಲ್ಲ‌. ಪ್ರೀತಿಯನ್ನು ಆರಾಧಿಸುವ ಪ್ರತಿಯೊಬ್ಬನಲ್ಲೂ ಆ ಸಂಭ್ರಮ ಮನೆ‌ ಮಾಡುತ್ತದೆ‌. ತೋರಿಸಿಕೊಳ್ಳದೆ ಇರಬಹುದು. ಇಲ್ಲ ಮುಂಜಾನೆದ್ದು ಮಡದಿ ಕೆನ್ನೆಗೆ ಸಿಹಿ ಮುತ್ತನಿಟ್ಟು ಶುಭಾಶಯ ಕೋರಬಹುದು. ಮಗುವಿನ ಹಣೆಗೆ ಮುತ್ತನಿಟ್ಟು ಅಪ್ಪಿಕೊಂಡು ಮುದ್ದಾಡಬಹುದು. ವಯೋವೃದ್ದ ದಂಪತಿಗಳು ಕೂಡ ಒಂದು ಕೆಂಪು ಗುಲಾಬಿ ನೀಡಿ ಪರಸ್ಪರ ಖುಷಿಪಡಬಹುದು. ಆದರೂ ಪ್ರೇಮಿಗಳ ದಿನಾಚರಣೆ ಎಂದಾಗ ಎಲ್ಲರ ಕಣ್ಣು … Read more

ಪ್ರೀತಿ-ಮರ ಮತ್ತು ಬಳ್ಳಿ: ಕು.ಸ.ಮಧುಸೂದನ ರಂಗೇನಹಳ್ಳಿ

ಅದೊಂದು ಹಳೆಯ ಮರ! ಹಸಿರಿನ ಯಾವ ಕುರಹೂ ಇರದ ಬೋಳು ಮರ. ಅದರ ರೆಂಬೆ-ಕೊಂಬೆಗಳೆಲ್ಲ ಒಣಗಿವೆ. ಮರದ ಬೇರುಗಳಿನ್ನೂ ಸತ್ತಿಲ್ಲವಾದರೂ ನೆಲದ ಕಸುವ ಹೀರಿ ಕಾಂಡ ರೆಂಬೆ ಕೊಂಬೆಗಳಿಗೆ ಜೀವರಸ ತುಂಬಿ ಮತ್ತೆ ಹಸಿರೊಡೆಸುವ ಶಕ್ತಿ ಕ್ಷೀಣವಾಗಿದೆ. ಅದು ಮುಂಚೆ ಹೀಗಿರಲಿಲ್ಲ. ಎಂತಾ ಬಿರು ಬೇಸಿಗೆಯಲ್ಲೂ ಮೈಯೆಲ್ಲಾ ಹಸಿರಾಗಿ ಕೈ ಇಟ್ಟಲ್ಲೆಲ್ಲಾ ಸಮೃದ್ದ ಹಣ್ಣುಗಳ ಖಜಾನೆ. ಅದರ ನೆರಳಲ್ಲಿ ದಣಿವಾರಿಸಿ ಕೊಂಡವರ, ಹಸಿವು ನೀಗಿಸಿಕೊಂಡವರ ಲೆಕ್ಕ ಸ್ವತ: ಅದಕ್ಕೂ ಸಿಕ್ಕಿಲ್ಲ. ಸದಾ ಹಕ್ಕಿಗಳ ಚಿಲಿಪಿಲಿಯಿಂದ ತುಂಬಿರುತ್ತಿದ್ದ ಮರವಿಂದು … Read more

ಪ್ರೀತಿ ಎಂದರೆ

ಪ್ರೀತಿ ಎಂದರೇನು?? ಪ್ರೀತಿ ಎಂಬ ಪದವೇ ಅಮೋಘ. ಆ ಶಬ್ದ ಕಿವಿಗೆ ಬೀಳುತ್ತಲೆ ನಮಗರಿವಿಲ್ಲದೆ ಅದೇಷ್ಟೋ ಭಾವಗಳು ಎದೆಯೊಳಗೆ ಒಮ್ಮೆ ಸುಳಿದಾಡಿಬಿಡುತ್ತವೆ. ಪ್ರೀತಿಯ ಮಧುರತೆಯೆ ಹಾಗೇ. ಅದರಲ್ಲಿ ಯಾವುದೇ ಸ್ವಾರ್ಥವಿಲ್ಲ ಪ್ರೀತಿಸುವ ಹೃದಯ ಸದಾ ಜೊತೆಯಿರಬೇಕು ಎಂಬುದೇ ಅದರ ಬಯಕೆ. ಇಲ್ಲಿ ಸಿರಿವಂತ-ಬಡವ, ಮೇಲು-ಕೀಳು ಎಂಬ ಮಾತೆ ಬರಲ್ಲ. ಯಾಕೆಂದರೆ ಪ್ರೀತಿಗೆ ಯಾವುದೇ ಅಡೆತಡೆಗಳಿಲ್ಲ. ಜಾತಿ, ಧರ್ಮ, ಅಂದ-ಚಂದ, ಮೇಲು-ಕೀಳು ದೊಡ್ಡಸ್ತಿಕೆ ಅದೆಲ್ಲವನ್ನು ಮೆಟ್ಟಿ ಏರಿರುವುದು ಪ್ರೀತಿ. ಪ್ರೇಮದಲ್ಲಿರುವುದು ಹೃದಯಗಳ ಪಿಸುಮಾತುಗಳು, ಭಾವನೆಗಳ ಸಮಾಗಮ, ಮೌನಕವಿತೆ. ಪ್ರೀತಿಯಲ್ಲಿ … Read more

ಪುಲ್ವಾಮದಲ್ಲಿ ಬೆಂದ ಪ್ರೇಮದ ಹೂವು…. : ಲೋಕೇಶ್ ಪೂಜಾರಿ

ಅಂದು ಡಿಸೆಂಬರ್ 18 , ನಾನು 4-5 ತಿಂಗಳ ನಂತರ ಊರಿಗೆ ಹೊರಟಿದ್ದೆ. ಅವತ್ತು ಅವಳ ಜೊತೆ ಕಳೆದ ಕ್ಷಣಗಳು ನಮ್ಮ ಕೊನೆಯ ಕ್ಷಣಗಳು ಆಗಬಹುದು ಅನ್ನುವುದು ನನಗೆ ತಿಳಿದಿರಲಿಲ್ಲ. ಕಲ್ಪನೆಗಳಿಗೆ ಸಿಗದ ಆ ಸಂದರ್ಭ ಗಳನ್ನು ನೆನೆಯುತ ಮನಸ್ಸುಗಳು ಅಳದೇ ಇರಬಹುದೇ…… ನನ್ನ ಅವಳ ಪರಿಚಯ ಕಾಲೇಜು ದಿನಗಳಿಂದಲೇ ಹಸಿರು ಹುಲ್ಲಿನ ಮೇಲೆ ಪ್ರೀತಿಯ ಹೆಜ್ಜೆಗುರುತನ್ನು ಸಹಿ ಮಾಡಿತ್ತು. ಆ ಸಹಿ, ನಮ್ಮಿಬ್ಬರನ್ನು ಪ್ರೇಮದ ಬಂಧನದಲ್ಲಿ ಸಿಲುಕಿಸಿ ನಿತ್ಯವೂ ಖುಷಿ ಖುಷಿಯ ನೂತನ ಊಟವನ್ನು ಮನಸಿಗೆ … Read more

ಡಿಜಿಟಲ್ ಕನ್ನಡ: ಡಾ. ಹೆಚ್ಚೆನ್ ಮಂಜುರಾಜ್

ಹರಿತವಾದ ಆಯುಧದಿಂದ ಹಣ್ಣನ್ನೂ ಕೊಯ್ಯಬಹುದು; ಜೀವವನ್ನೂ ತೆಗೆಯಬಹುದು ಎಂಬ ಮಾತು ಕ್ಲೀಷೆಯೆನಿಸಿದರೂ ಆಧುನಿಕ ಡಿಜಿಟಲ್ ಮಾಧ್ಯಮಗಳಿಗೆ ಇದಕ್ಕಿಂತ ಸೂಕ್ತವಾದ ವ್ಯಾಖ್ಯಾನ ಬೇರೊಂದಿರಲಾರದು! ನಮ್ಮೆಲ್ಲರ ಕೈಯಲ್ಲೂ ಮೊಬೈಲು; ಮನೆಯಲ್ಲಿ ಕಂಪ್ಯೂಟರು ಇರುವಾಗ ಯಾರಾದರೂ ಹೀಗೆ ಹೇಳಲೇಬೇಕು. ಅದರಲ್ಲೂ ಇಂಥವನ್ನು ಬಳಸಿಕೊಂಡು ಯುವಜನತೆ ದಾರಿ ತಪ್ಪುವುದಿರಲಿ ದಿಕ್ಕೇ ತಪ್ಪುತ್ತಿದೆ ಎಂದು ಬೈಯ್ಯುವವರ ಕೈಯಲ್ಲೂ ಇವೇ ಇವೆ! ಆದರೆ ಇವನ್ನು ಸದ್ಬಳಕೆ ಮಾಡಿಕೊಂಡು ಬದುಕಿನ ಸಂವೇದನೆಯನ್ನು ಇನ್ನಷ್ಟು ನೇರ್ಪುಗೊಳಿಸಿಕೊಳ್ಳಬಹುದು; ದೈವತ್ವವನ್ನು ಧರಿಸಬಹುದು ಅಥವಾ ಅದರತ್ತ ಚಲಿಸಬಹುದು ಎಂದು ಆಲೋಚಿಸುವವರು ವಿರಳ. ಕವಿ … Read more

ಮೆಂಟಲ್ ಎಬಿಲಿಟಿ ಕೋಡಿಂಗ್ ಭಾಗ – 1: ಪ್ರವೀಣ್‌ ಕೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೋಡಿಂಗ್‌ ಕುರಿತ ಪ್ರಶ್ನೆಗಳನ್ನು ಉತ್ತರಿಸಲು ಈ ವಿಡಿಯೋ ನಿಮಗೆ ತುಂಬಾ ಸಹಕಾರಿ… ಕೋಡಿಂಗ್ ಭಾಗ – 1:    

20ನೇ ಶತಮಾನ ಕಂಡ ಸಂತ ಶ್ರೇಷ್ಠ- ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್: ಶ್ರೀವಲ್ಲಭ ರಾ. ಕುಲಕರ್ಣಿ

ಭಾರತೀಯ ಸಮಾಜದ ರೂಢ ಮೂಲ ನಂಬಿಕೆಗಳ ಮೂಲ ಸ್ವರೂಪವನ್ನು ಪ್ರಶ್ನಿಸಿದ, ಅಲುಗಾಡಿಸಿದ ತೀಕ್ಷ್ಣ ವಿಚಾರವಾದಿ, 20ನೇ ಶತಮಾನದ ಭಾರತೀಯ ಮಹಾನ್ ಚಿಂತಕ ದ್ರಾವಿಡ ನಾಡಿನ ಈರೋಡು ವೆಂಕಟ ರಾಮಸ್ವಾಮಿ ನಾಯ್ಕರ್ 1879 ಸೆಪ್ಟೆಂಬರ್ 17ರಂದು ಮದ್ರಾಸ್ ರಾಜ್ಯದ ಕೊಯಿಮತ್ತೂರ್ ಜಿಲ್ಲೆಯ ಈರೋಡು ಎಂಬಲ್ಲಿ ಹುಟ್ಟಿದರು, ತಮ್ಮ ವಿಚಾರಗಳಿಗೆ ಚಳುವಳಿಯ ಸ್ಪರ್ಶ ನೀಡಿದ ಅವರ ಬದುಕು ಮತ್ತು ಚಿಂತನೆಗಳು ದ್ರಾವಿಡ ಅಸ್ಮಿತೆಯೊಂದನ್ನು ಹುಟ್ಟು ಹಾಕಿ, ತಮಿಳು ನಾಡಿನಲ್ಲಷ್ಟೇ ಅಲ್ಲದೇ ದೇಶ ವಿದೇಶಗಳಲ್ಲಿಯೂ ಪಸರಿಸುವಂತೆ ಮಾಡಿದ್ದು ಇತಿಹಾಸ. ಪೆರಿಯಾರ್ ರಾಮಸ್ವಾಮಿಯವರ … Read more

ಯೂಟ್ಯೂಬ್‌ ನಲ್ಲಿ ಮೊಟ್ಟಮೊದಲ ಬಾರಿಗೆ ಕನ್ನಡ ಮಾಧ್ಯಮದಲ್ಲಿ ಬ್ಯಾಂಕ್ ಪರೀಕ್ಷೆಯ ತರಬೇತಿ

ಆತ್ಮೀಯರೆ, ನನಗೆ ಬಹಳ ಖುಷಿ ಎನಿಸುತ್ತಿದೆ. ಯಾಕೆಂದರೆ ಕನ್ನಡ ಮಾಧ್ಯಮದಲ್ಲಿ ಉಚಿತವಾಗಿ ಬ್ಯಾಂಕ್ ಪರೀಕ್ಷೆ ತರಬೇತಿಯನ್ನು ಯೂಟ್ಯೂಬ್ ಮುಖಾಂತರ ಪ್ರಾರಂಭಿಸಿದ್ದೇನೆ. ನೀವೆಲ್ಲ ಕೈಜೋಡಿಸುವಿರಿ ಎಂದು ನಿರೀಕ್ಷಿಸುತ್ತೇನೆ. ನಾನು ಭಾರತೀಯ ಸ್ಟೇಟ್ ಬ್ಯಾಂಕಿನ ಸೇವೆಗೆ ರಾಜೀನಾಮೆ ನೀಡಿ ಸ್ಪರ್ಧಾಕಾಂಕ್ಷಿಗಳಿಗೆ ಬ್ಯಾಂಕ್ ಪರೀಕ್ಷೆಯ ತರಬೇತಿಯನ್ನು ಪ್ರಾರಂಭಿಸಿದೆ. ಬೆಳಗಾವಿ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ನಮ್ಮ ಸಂಸ್ಥೆಗೆ ಬಂದು ತರಬೇತಿ ಪಡೆದು ಕೆಲವರು ಯಶಸ್ಸನ್ನೂ ಗಳಿಸಿದರು. ಆದರೆ ನಾನು ಕ್ಲಾಸರೂಮಿನಲ್ಲಿ ಕಲಿಸಲು ಸಾಧ್ಯವಾಗುತ್ತಿರುವುದು ಕೇವಲ ನಲವತ್ತು ಐವತ್ತು ಜನರಿಗೆ ಮಾತ್ರ. ಅವಶ್ಯವಿದ್ದವರಿಗೆಲ್ಲ ನನ್ನಲ್ಲಿರುವ … Read more

ಕಡಿದೊಗೆದ ಬಳ್ಳಿಯು ಕುಡಿಯೊಡೆಯುವಂತೆ: ಎಸ್. ಜಿ. ಸೀತಾರಾಮ್, ಮೈಸೂರು

“ತ್ಯಾಜ್ಯ ವಸ್ತು” ವಿಲೇವಾರಿಯ ಬಗ್ಗೆಯೇನೋ ಇಂದು ಎಲ್ಲೆಡೆ ಬಿಸಿಬಿಸಿ ಚರ್ಚೆಗಳಾಗುತ್ತಿವೆ; ಆದರೆ, ತಮ್ಮ ಕುಟುಂಬ, ಬಂಧು-ಬಳಗ, ಸಮುದಾಯ, ಯಾವುದಕ್ಕೂ ಬೇಡವಾದ “ತ್ಯಾಜ್ಯ ವ್ಯಕ್ತಿ”ಗಳ ಸ್ಥಿತಿಗತಿಯ ಬಗ್ಗೆ ‘ಕ್ಯಾರೇ?’ ಎನ್ನುವ ಮಂದಿ ಎಷ್ಟಿದ್ದಾರು? ಹಾಗೆನ್ನುವವರಲ್ಲೂ, ಈ ಪರಿಸ್ಥಿತಿಗೆ ಏನಾದರೊಂದು ಪರಿಹಾರ ಹೊಂದಿಸಬೇಕೆಂದು ನಿಜವಾಗಿ ‘ಕೇರ್’ ಮಾಡುವವರು ಅದೆಷ್ಟು ಇದ್ದಾರು? ಇಂಥ ದಾರುಣ ಅವಸ್ಥೆಯ ನಡುವೆ, ಸಮಾಜದ ಕುಪ್ಪೆಯಲ್ಲಿ ಕಾಲ ತೇಯುತ್ತ, ಬದುಕಾಟದ ಕೊಟ್ಟಕೊನೆಗೆ ಹೇಗೋ ‘ಜೋತುಬಿದ್ದಿರುವ’ ಸ್ತ್ರೀಯರಿಗೆ ಅನ್ನ, ಆರೈಕೆ, ನೆರಳು, ನೆಮ್ಮದಿ ನೀಡುವ ಸಲುವಾಗಿ, ವಿದ್ಯಾವಂತ, ದಯಾಶೀಲ, … Read more

ತಾಯಿಯ ಗರ್ಭವೆಂಬ ಪುಟ್ಟ ಪ್ರಪಂಚದಲ್ಲಿ: ಸಿಂಧು ಭಾರ್ಗವ್

ಒಂದು ಮಗುವಿನ ಜನನ ಯಾವ ತಾಯಿಯ ಗರ್ಭದಲ್ಲಿ ಆಗುತ್ತದೆ ಎಂಬುದು ಹೇಳಬರದು. ಹುಟ್ಟು ನಮ್ಮ ಕೈಯಲ್ಲಿ ಇರುವುದಿಲ್ಲ. ಜನಿಸಿದ ಮೇಲೆ ಹಡೆದ ಜನನಿಯ ಮುಖ ದರುಷನವಾಗುವುದು. ಅವಳು ನಮಗಾಗಿ ಎಷ್ಟೆಲ್ಲ ಕಷ್ಟ ಪಡುತ್ತಾಳೆ. ಅವಳ ತ್ಯಾಗ ಸಹನೆಗೆ ನಾವು ಎಂದಿಗೂ ಋಣಿಗಳಾಗಿರಬೇಕು. ಒಬ್ಬ ತಾಯಿ ತಾನು ಗರ್ಭವತಿ ಎಂದು ತಿಳಿದ ತತ್ಕ್ಷಣದಿಂದ ಮುಂದೆ ಜನಿಸುವ ಮಗುವಿನ ಬಗೆಗೆ ನೂರಾರು ಕನಸುಗಳನ್ನು ಕಟ್ಟಿಕೊಳ್ಳಲು ಶುರುಮಾಡುತ್ತಾಳೆ. ಜೊತೆಗೆ ತಂದೆಯಾಗುವವನೂ ಕೂಡ ಆ ಮಗುವಿನ ಬಗೆಗೆ ಸಾಕಷ್ಟು ಕನಸುಗಳನ್ನು ಹೆಣೆಯುತ್ತಾನೆ. ತಮ್ಮ … Read more

ಅಂಬೇಡ್ಕರ್ ಎಂಬ ಶಕ್ತಿಯೇ ನಿನ್ನೆಯ ಹೋರಾಟ ; ಇಂದಿನ ಬೆಳಕು, ನಾಳಿನ ಬಾಳ ಬುತ್ತಿ: ನಾಗರಾಜ್ ಹರಪನಹಳ್ಳಿ

  ನಮ್ಮ ಕಣ್ಣ ಮುಂದಿನ ಬೆಳಕು ಅಂಬೇಡ್ಕರ್. ಅವರು ಭಾರತದ ಅಂತಃಶಕ್ತಿ ಹೆಚ್ಚಿಸಿದ ಮಹಾ ಮನವತಾವಾದಿ. ಅಂಬೇಡ್ಕರ್ ಪ್ರಜಾಪ್ರಭುತ್ವವಾದಿ. ಮಹಿಳಾವಾದಿ, ಕಾರ್ಮಿಕರ ಬಂಧು. ಮನುಷ್ಯತ್ವದ ಪ್ರತಿಪಾದಕ. ಶೋಷಿತರಿಗೆ ಪ್ರೀತಿ ಅಂತಃಕರಣದ ನದಿಯನ್ನೇ ಹರಿಸಿದ ಮನುಷ್ಯ, ಅಂಬೇಡ್ಕರ್ 1891ರಲ್ಲಿ ಜನಸಿದ್ದು. ಅವರ 128ನೇ ಜನ್ಮದಿನಕ್ಕೆ ನಾವಿಂದು ಅವರನ್ನು ಸ್ಮರಿಸಿಕೊಳ್ಳುತ್ತಿದ್ದೇವೆ. ಬಾಬಾ ಸಾಹೇಬ್ ನಮ್ಮಿಂದ ಭೌತಿಕವಾಗಿ ದೂರವಾಗಿ 63 ವರ್ಷ ಕಳೆದಿದ್ದರೂ, ಅವರನ್ನು ದೇಶ ಪ್ರತಿ ದಿನ, ಪ್ರತಿಕ್ಷಣ ನೆನಪಿಸಿಕೊಳ್ಳುವ ಭಾರತದ ಬಹುಮುಖ ಪ್ರತಿಭೆ. ಅವರು ನೀಡಿದ ಸಂವಿಧಾನದ ಮಹಾಧರ್ಮದಲ್ಲಿ … Read more

ಗೆಲ್ಲಿಸುವ ದಾರಿಯಲ್ಲಿ – ಕೌಶಲ್ಯದ ಪರಿಚಯ: ರಘುನಂದನ ಕೆ. ಹೆಗಡೆ

SKILL, SPEED, SCORE ಕೌಶಲ್ಯ ವೇಗ ಗೆಲುವು ಕೌಶಲ್ಯ (Skill) ಎಂದ ತಕ್ಷಣ ನಮ್ಮ ಯೋಚನೆಯೆಲ್ಲ ವೃತ್ತಿ ಜೀವನಕ್ಕೆ ಹೊರಟು ಬಿಡುತ್ತೆ, ಇಲ್ಲಾ ಇದೆಲ್ಲಾ ಕಲಿಕೆಯ ಕೊನೆ ಹಂತದಲ್ಲಿರೋ ವಿದ್ಯಾರ್ಥಿಗಳಿಗೆ ಬೇಕಾಗಿರೋದು ಅನ್ಕೋತೇವೆ. ಹಾಗಾದರೆ ವೃತ್ತಿಯನ್ನ ಬಿಟ್ಟು, ಜೀವನಕ್ಕೆ ಕೌಶಲ್ಯ ಬೇಕಿಲ್ವಾ? ಹೆಂಗೆಂಗೋ ಬದುಕೋರಿಗೆ ಕೌಶಲ್ಯ ಬೇಕಿಲ್ಲ, ಕೌಶಲ್ಯ ಇದ್ದೋರಿಗೆ ಸ್ಕೂಲ್ ಶಿಕ್ಷಣ ಇಲ್ದೇ ಇದ್ರು ಗೆಲುವು ಸಿಗುತ್ತೆ. ನಂಬಿಕೆ ಆಗ್ತಿಲ್ವಾ, ಥಾಮಸ್ ಅಲ್ವಾ ಎಡಿಸನ್ ಗೊತ್ತಲ್ಲಾ, ಬಲ್ಬನ್ನು ಕಂಡು ಹಿಡಿದು ಬೆಳಕು ಕೊಟ್ಟ ವಿಜ್ಞಾನಿ, ಅವರು … Read more

ಅನಕೃ ಮಹಾನ್ ಮೇರು ಕಾದಂಬರಿ ಸಾರ್ವಭೌಮರು: ಹೊರಾ.ಪರಮೇಶ್ ಹೊಡೇನೂರು

ಸಂಗೀತ, ನಾಡು ನುಡಿಗೆ ಅನಕೃ ಕೊಡುಗೆ “ಅನಕೃ”ಎಂಬ ಹೃಸ್ವ ಪದಪುಂಜದಲ್ಲಿಯೇ ಅಗಾಧವಾದ ಸಾಹಿತ್ಯ ಅನಾವರಣಗೊಳ್ಳುತ್ತದೆ. ಕನ್ನಡ ಸಾಹಿತ್ಯದ ಕೃಷಿಯ ಜೊತೆಗೆ ಕನ್ನಡ ಭಾಷೆಯ ಬಳಕೆ-ಉಳಿಕೆಗೆ ಅಕ್ಷರಶಃ ಶ್ರಮಿಸಿದ ಅಪೂರ್ವ ಸಾಹಿತಿ ಅ.ನ.ಕೃಷ್ಣರಾಯರು. ಹುಟ್ಟಿದ್ದು ಕೋಲಾರವೇ ಆದರೂ ತಂದೆ ನರಸಿಂಗರಾಯರು-ತಾಯಿ ಅನ್ನಪೂರ್ಣಮ್ಮನವರು ಮೂಲತಃ ಅರಕಲಗೂಡಿನವರಾದುದರಿಂದ ಅನಕೃ ಅವರು ಅರಕಲಗೂಡಿನವರೇ ಎಂಬುದಾಗಿ ಪರಿಭಾವಿಸಲ್ಪಟ್ಟಿದ್ದಾರೆ. ಬಳ್ಳಿಯು ಎಷ್ಟೇ ಬೃಹದಾಕಾರವಾಗಿ ಬೆಳೆದರೂ ಅದರ ಹುಟ್ಟಿದ ಜಾಗವೇ ಅಸ್ತಿತ್ವವನ್ನು ಹೇಳುವಂತೆ ಅನಕೃ ಅರಕಲಗೂಡು ಭಾಗದವರೇ ಎಂಬುದಾಗಿ ಪರಿಗಣಿತವಾಗಿದ್ದಾರೆ. 190೮ ರ ಮೇ 9 ರಂದು … Read more

ಯುವಜನರ ಹಕ್ಕುಗಳ ರಕ್ಷಣೆಗೂ ಆಯೋಗ ಬೇಕಲ್ಲವೇ?: ರುಕ್ಮಿಣಿ ನಾಗಣ್ಣವರ

ಫಕ್ಕೀರಪ್ಪ. ಹುಟ್ಟಿ-ಬೆಳೆದದ್ದು ಬೆಳಗಾವಿ ಜಿಲ್ಲೆಯ ಪುಟ್ಟ ಗ್ರಾಮದಲ್ಲಿ. ದೊಡ್ಡ ವ್ಯಕ್ತಿಯಾಗುವ ಅಥವಾ ಉನ್ನತ ಸಾಧನೆ ಮಾಡುವ ಅದಮ್ಯ ಕನಸುಗಳೇನೂ ಇರಲಿಲ್ಲ. ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಪೂರ್ಣಗೊಳಿಸಿದ ಅವರಿಗೆ ವಿಶ್ವವಿದ್ಯಾಲಯದ ಮೆಟ್ಟಿಲೇರುವ ಗುರಿ ಇರಲಿಲ್ಲ. ಅಷ್ಟೇ ಅಲ್ಲ, ಪಿಯು ಕಾಲೇಜಿಗೆ ಹೋಗುವ ಸ್ಪಷ್ಟ ಕಲ್ಪನೆಯೂ ಇರಲಿಲ್ಲ. ಆಯಾ ದಿನದ ದುಡಿಮೆಯನ್ನೇ ನಂಬಿದ್ದ ತಂದೆ, ತಾಯಿಗೂ ಮಗನಿಗೆ ಉನ್ನತ ಶಿಕ್ಷಣ ಕೊಡಿಸುವ ಶಕ್ತಿ ಇರಲಿಲ್ಲ. ಸಾಂವಿಧಾನಿಕ ಹಕ್ಕು ಇದ್ದರೂ ಆರ್ಥಿಕ ಮತ್ತು ಇನ್ನಿತರ ಸೌಲಭ್ಯದ ಕೊರತೆಯಿಂದ ಫಕ್ಕೀರಪ್ಪಗೆ ಶಾಲೆಯ … Read more