ಪರಿವರ್ತನೆಗೊಂದು ಅವಕಾಶಕೊಟ್ಟಾಗ: ಎಂ. ಡಿ. ಚಂದ್ರೇಗೌಡ ನಾರಮ್ನಳ್ಳಿ
ಬದುಕನ್ನು ರೂಪಿಸಿಕೊಳ್ಳಲು ಒಂದು ಕೆಲಸ ಬೇಕು. ಕೆಲವರು ವೈಟ್ ಕಾಲರ್ ವೃತ್ತಿಯನ್ನೆ ಹುಡುಕುತ್ತಾರೆ. ಕೆಲವರು ಕಮಾಯಿ ಅಧಿಕವಿರುವುದನ್ನು ಅಪೇಕ್ಷಿಸುತ್ತಾರೆ. ಮತ್ತೆ ಕೆಲವರು ಆದರ್ಶಗಳ ಬೆನ್ನು ಹತ್ತುತ್ತಾರೆ. ದೇಶ ಪ್ರೇಮದ ತುಡಿತವುಳ್ಳವರು ಸೈನಿಕರಾಗುತ್ತಾರೆ. ಅರ್ಪಣಾ ಮನೋಭಾವ ಇರುವವರು ಶಿಕ್ಷಕರಾಗುತ್ತಾರೆ. ಕೆಲವು ವಿದ್ಯಾರ್ಥಿಗಳು ‘ತಮ್ಮ ಗುರುಗಳನ್ನು ಅನುಕರಿಸಿ ಶಿಕ್ಷಕರಾಗಬೇಕೆಂದು’ ಹೊರಡುತ್ತಾರೆ . ಕೆಲವರು ಸ್ವ- ಉದ್ಯೋಗದ ದಾರಿ ಹಿಡಿದು ಬದುಕು ಕಟ್ಟಿಕೊಳ್ಳುತ್ತಾರೆ. ಎಷ್ಟೋ ದಿನಗಳ ನಂತರ, ಎದುರು ಸಿಕ್ಕಾಗಲೋ, ಪೋನ್ ಕರೆ ಮಾಡಿದಾಗಲೋ, ನೆನಪುಗಳಿಗೆ ಮತ್ತಷ್ಟು ಹಸಿರು ಬಣ್ಣ ಬಳಿಯುತ್ತಾರೆ. … Read more