ಕೀರ್ತಿಶೇಷರಾಗಲು ದಾರಿ: ರಾಘವೇಂದ್ರ ಈ. ಹೊರಬೈಲು

ಭಾರತವು ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ದೇಶ. ಇವುಗಳಿಂದಾಗಿಯೇ ಪ್ರಪಂಚದಲ್ಲಿ ಒಂದು ವಿಭಿನ್ನ, ವಿಶಿಷ್ಟ ದೇಶವಾಗಿ ಗುರುತಿಸಿಕೊಂಡಿದೆ. ಆಚರಣೆ-ಸಂಪ್ರದಾಯಗಳ ಹೆಸರಿನಲ್ಲಿ ಕೆಲವೇ ಕೆಲವು ಹೀನ ಮತ್ತು ಅಸಹ್ಯಕರವಾದ ಮೂಢನಂಬಿಕೆಗಳಿವೆ. ಉದಾಹರಣೆಗೆ ಯಾರೋ ತಿಂದು ಬಿಟ್ಟಿರುವ ಎಂಜಲು ಎಲೆಗಳ ಮೇಲೆ ಉರುಳು ಸೇವೆ ಮಾಡಿದರೆ ರೋಗ-ರುಜಿನಗಳು ಕಡಿಮೆಯಾಗುತ್ತವೆ ಎಂಬ ನಂಬಿಕೆ ಇರುವ ‘ಮಡೆ ಸ್ನಾನ’ ಮುಂತಾದವು. ಅವುಗಳನ್ನು ಹೊರತುಪಡಿಸಿ ನೋಡಿದರೆ ನಮ್ಮ ದೇಶದ್ದು ಮಹಾನ್ ಶ್ರೀಮಂತ ಸಂಸ್ಕೃತಿ. ಇಂಥ ಸಂಸ್ಕೃತಿಯ ಜೊತೆಗೆ “ಸತ್ತ ಮೇಲೆ ಅಂಗಾಂಗಗಳ ದಾನ” ಎಂಬುದು … Read more

ಪಿತೃ ಪೂಜೆಯ ಊಟ: ಸಾವಿತ್ರಿ ವಿ. ಹಟ್ಟಿ

ನಾನು, ಅಕ್ಕ ಮತ್ತು ಅವ್ವ ಆಬಾಲಿ ಹೂವು ಹೆಣ್ಕೊಂತ ಕುಂತಿದ್ವಿ. ಅಕ್ಕ ಮತ್ತು ಅವ್ವ ಮನೆತನಕ್ಕ ಸಂಬಂಧ್ಸೀದ ವಿಷಯ ಮಾತಾಡ್ಕೊಂತ ಇದ್ರು. ಮಧ್ಯೆ ಮಧ್ಯೆ ನಾನು ಅವರ ಮಾಲೀಗೂ ನನ್ನ ಮಾಲೀಗೂ ಹೋಲಿಸಿ ನೋಡಿ ಜಾಸ್ತಿ ನಾನೇ ಕಟ್ಟಿದ್ದು ಅಂತ ಧಿಮಾಕಿನಿಂದ ಹೂವು ಹೆಣೆಯಾಕ್ಹ್ಹತ್ತಿದ್ದೆ.  ಆ ಹೊತ್ಗೆ ಹೊರಬಾಗಿಲ ಹತ್ರ ಯಾರದಾ ನೆಳ್ಳು ಬಿದ್ದಂಗಾತು. ಬಾಗಿಲ ತೋಳು ಹಿಡಿದು ಹಣಕಿ ಹಾಕಿದಂಗಾತು. ಎದ್ದು ಹೋಗಿ ನೋಡಿದೆ. ಯಾರೂ ಇರಲಿಲ್ಲ. ಯಾವಾ ಸಣ್ಣ ಹುಡುಗ್ರು ಆಟ ಆಡ್ಕೊಂತ ಬಂದು … Read more

ಸಂಸಾರ ಸಾಗರದಿ ಅನುಮಾನದ ಅಲೆಗಳು: ಹೊರಾ.ಪರಮೇಶ್ ಹೊಡೇನೂರು

 "ಸಂಸಾರ" ಎಂಬುದು ಅನಾದಿ ಕಾಲದಿಂದಲೂ ಗಂಡು ಮತ್ತು ಹೆಣ್ಣುಗಳ ನಡುವೆ ಸೃಷ್ಟಿಸಿಕೊಳ್ಳುವ ಅಪೂರ್ವ ಅನುಬಂಧವಾಗಿದ್ದು ಅವರ ನಡುವಿನ ದೈಹಿಕ ಮತ್ತು ಮಾನಸಿಕ ಸಮ್ಮಿಲನದ ಫಲವಾಗಿ ಪಡೆಯುವ ಮಕ್ಕಳಿಂದಾಗಿ ಪೀಳಿಗೆಗಾಗಿ ಸರಣಿ ಹರಿದುಕೊಂಡು ಬಂದಿವೆ. "ಮದುವೆ" ಎಂಬ ಸಾಮಾಜಿಕ ಒಪ್ಪಂದದ ಪರವಾನಗಿ ಪಡೆದು ಜೀವನ ಸಂಗಾತಿಗಳಾಗಿ, ಪರಸ್ಪರ ನಿಷ್ಠರಾಗಿ ಬಾಳುವ ದಂಪತಿಗಳ ಬೇಕು ಬೇಡಗಳು, ಕಷ್ಟ-ಸುಖಗಳು, ಇಷ್ಟ-ಅನಿಷ್ಟಗಳು, ನೀತಿ-ನಿರ್ಧಾರಗಳು ಬಹುತೇಕ ಇಬ್ಬರೂ ಕೂಡಿ ಚರ್ಚಿಸುವ ಮೂಲಕ ಕೈಗೊಂಡರೂ, ಹೆಚ್ಚಾಗಿ ಜೀವನೋಪಾಯಕ್ಕಾಗಿ ದುಡಿಯುವ ಪುರುಷನೇ(ಪತಿ) ಮನೆಯ ಯಜಮಾನಿಕೆ ವಹಿಸಿದರೆ, ಮಹಿಳೆಯು(ಸತಿ) … Read more

ಅನನ್ಯ ವ್ಯಕ್ತಿಚಿತ್ರಕ, ಸುಹೃದ ವಿಶಾರದ: ಎಸ್. ಜಿ. ಸೀತಾರಾಮ್, ಮೈಸೂರು.

[ಕನ್ನಡ ಸಾಹಿತ್ಯಾಕಾಶದ ಕೃಷಿಋಷಿಮಂಡಲದಲ್ಲಿ ತಮ್ಮ ವಿದ್ವಚ್ಛಕ್ತಿಪ್ರಭೆಯಿಂದ ವಿರಾಜಮಾನರಾಗಿರುವ, ಮತ್ತು ವಾತ್ಸಲ್ಯಾದಿ ಗುಣೋಜ್ವಲತೆಗಳಿಂದ ತಮ್ಮ ಅಭಿಮಾನಿಗಳ ಹೃದಯಾಕಾಶದಲ್ಲಿಯೂ ಅಂತೆಯೇ ಶೋಭಿಸುತ್ತಿರುವ,  ಮೈಸೂರಿನ ಪ್ರೊ. ಟಿ.ವಿ. ವೆಂಕಟಾಚಲ ಶಾಸ್ತ್ರಿಯವರು ಈಗ ಸಹಸ್ರ  ಪೂರ್ಣಚಂದ್ರ ದರ್ಶನ ಪ್ರತಿಫಲನದಿಂದ ಮತ್ತಷ್ಟು ಕಾಂತಿಯುತರಾಗಿದ್ದಾರೆ.  ಮಾರ್ಚ್-೨೦೧೫ರಲ್ಲಿ ಜರುಗಿದ ಅವರ ಸಹಸ್ರ ಚಂದ್ರ ದರ್ಶನೋತ್ಸವ ಸಂದರ್ಭದಲ್ಲಿ ಅವರಿಗಿಲ್ಲೊಂದು ಬರಹಮಣಿಹ.]         ಪ್ರೊ. ಟಿ.ವಿ. ವೆಂಕಟಾಚಲ ಶಾಸ್ತ್ರಿಯವರು ಸಾಹಿತ್ಯಶಾಸ್ತ್ರಗಳಲ್ಲಿ ವೆಂಕಟಾಚಲಸದೃಶರೇ ಸರಿ. ಆ ದೊಡ್ಡಬೆಟ್ಟದ ದಾರಿಯಲ್ಲಿ ಸುಳಿಯುವ ಸಂಭವವೂ ಇಲ್ಲದ ನನಗೂ-ಅವರಿಗೂ ನಡುವೆ ಇರುವ ಒಡನಾಟವು, … Read more

ಅವಳೊಡನೆ ಕೊನೇ ಹೋಳಿ…: ಸಖ್ಯಮೇಧ

ಅವಳ ಕೆನ್ನೆಯ ಗುಳಿ ತುಂಬಾ ಬಣ್ಣ ಬಳಿದ ಆ ಕೊನೇ ಹೋಳಿ ನೆನೆದರೇ ಮನದಲ್ಲಿ ವಿಷಾದದ ಗಾಳಿ ಏಳುತ್ತದೆ. ಏಕೆಂದರೆ ಅದೇ ಕೊನೆ, ಬಣ್ಣದ ಹೋಳಿಯೂ ಅವಳೊಡನೆ ದೂರಾಯಿತು….ಹೋಳಿಯ ತಲೆಬುಡ ತಿಳಿದಿರದಿದ್ದರೂ ಅದೊಂದು ನಿರೀಕ್ಷೆಯ ಹಬ್ಬ. ಬಟ್ಟಲುಕಂಗಳ ಆ ಹುಡುಗಿಯ ನುಂಪು ಕೆನ್ನೆಗಳಿಗೆ ಮೃದುವಾಗಿ ಬಣ್ಣ ಸವರಿ ಕಂಗಳಲ್ಲಿ ಮೂಡುವ ಬೆಳಕು ಕಾಣಲೆಂದು ಕಾತರಿಸಿದ ಹಬ್ಬ. ಜೊತೆಗೆ ಓರಗೆಯವರ ಜತೆಗೂಡಿ ಬಣ್ಣದ ಲೋಕದಲ್ಲಾಡುತ್ತಾ ಕಳೆದು ಹೋಗುವ ಸಂತಸ … ಅಪ್ಪನ ಕಿಸೆಯಿಂದ ಎಗರಿಸುವುದಲ್ಲದೇ ಶಾಲೆಗೆ ನಡೆದುಕೊಂಡೇ ಹೋಗಿ … Read more

ಸಾಧಕರ ಶ್ವಾಸ, ಆತ್ಮವಿಶ್ವಾಸ: ಹೊರಾ.ಪರಮೇಶ್ ಹೊಡೇನೂರು

          ವಿದ್ಯಾರ್ಥಿ ಜೀವನದಲ್ಲಿ ಕಲಿಕಾ ಫಲವನ್ನು ಯಶಸ್ವಿಯಾಗಿ ಪಡೆಯಲು ಅಗತ್ಯವಾಗಿ ಬೇಕಾದ ಅಂಶಗಳಲ್ಲಿ ಪ್ರಮುಖವಾದದ್ದು 'ಆತ್ಮವಿಶ್ವಾಸ'. ಎಷ್ಟೇ ಬುದ್ಧಿ ಶಕ್ತಿ, ತಾರ್ಕಿಕ ಸಾಮರ್ಥ್ಯ, ಸೃಜನಶೀಲ ಸ್ವಭಾವ ಹೊಂದಿದ್ದರೂ ಆತ್ಮವಿಶ್ವಾಸ ಇಲ್ಲದಿದ್ದರೆ ಪ್ರಯೋಜನವಾಗುವುದಿಲ್ಲ. "ಮೇಕೆದಾಟು"ವಿನ ಬಗ್ಗೆ ಗೊತ್ತಲ್ವ. ಹಿಂದೊಮ್ಮೆ ಅಲ್ಲಿ ಮೇಕೆಗಳನ್ನು ಮೇಯಿಸುತ್ತಿರುವಾಗ, ಒಂದು ಮೇಕೆಯು ಕಾಲುವೆಯ ಆಚೆ ಬದಿಯಲ್ಲಿ ಇದ್ದ ಹಸಿರು ಸೊಪ್ಪನ್ನು ತಿನ್ನುವ ಆಸೆ ಉಂಟಾಗಿ, ಅಗಲವಾದ ಆ ಕಾಲುವೆಯನ್ನು ಅಗಾಧವಾದ ಆತ್ಮವಿಶ್ವಾಸದಿಂದ ಒಂದೇ ನೆಗೆತಕ್ಕೆ ಜಿಗಿದು ದಾಟಿ ತನ್ನ … Read more

ಹೀಗೊಂದು ಕ(ವ್ಯ)ಥೆ: ಲಿಯೋ ರೆಬೆಲ್ಲೋ

"ಅಮ್ಮ.. ಚಾರ್ಲಿ ಮಾಮ ಬಂದಿದ್ದಾರೆ" ಅಕ್ಕನ ಮಗ ಸುಕೇಶ್ ಅಡಿಗೆಮನೆಯಲ್ಲಿದ್ದ ಅಮ್ಮನಿಗೆ ಕೂಗಿ ಹೇಳಿದ್ದು ಕಿವಿ ಮೇಲೆ ಬಿದ್ದಾಗ ಅವನ ಹ್ರದಯದಲ್ಲಿ ಕಸಿವಿಸಿಯಿಂದ ಆಗಲೇ ಸುನಾಮಿ ಅಲೆಗಳು ಆರಂಭಗೊಂಡಿದ್ದವು. ಮಕ್ಕಳ ಜೊತೆಜೊತೆಗೆ ಮೊಮ್ಮಕ್ಕಳೂ ತಾಯಿಗೆ ಅಮ್ಮ ಎಂದು ಕರೆಯುವುದು ಆ ಕುಟುಂಬದ ಅಭ್ಯಾಸ. ಬಾಬೂ… ಚಾರ್ಲಿ ಬಂದಿದ್ದಾರೆ ಹೊರಡು, ಸಮಯವಾಗಿದೆ ಎಂದು ಅಮ್ಮ ಕೂಗೊಟ್ಟಾಗ ಕೋಣೆಯ ಮಂಚದ ಮೇಲೆ ಕುಳಿತವನ ಕಾಲುಗಳಿಗೆ ಬಲವಿಲ್ಲದಂತಾಗಿ ಮೇಲೇಳಲು ಸಾಧ್ಯವಾಗಲಿಲ್ಲ, ಕೆಲಕ್ಷಣಗಳ ನಂತರ ಸುಧಾರಿಸಿಕೊಂಡು ಹೊರಡುವ ವೇಳೆ ಕೈಯನು ಅದುಮಿಡಿದ ಅವಳು … Read more

ನನ್ನ ಮೊದಲ ಲೇಖನ: ಶೀತಲ್

ಮೊದಲ ಬಾರಿಗೆ ಬ್ಯಾಟ್ ಹಿಡಿದು, ಮೊದಲ  ಬಾಲ್ ನಲ್ಲೇ ಸಿಕ್ಸರ್ ಹೊಡೆದ ಖಿಲಾಡಿಗಳು ಬಹುಶಃ ಯಾರೂ ಇಲ್ಲವೇನೋ, ಹಾಗೆಯೇ ಮೊದಲ ಬಾರಿಗೆ ಪತ್ರಿಕೆಯಲ್ಲೊಂದು ಲೇಖನ ಎಲ್ಲಾ ಸಣ್ಣ-ಪುಟ್ಟ ಬರಹಗಾರರಂತೆ ನನ್ನದೂ ಒಂದು ಕನಸಾಗಿದೆ. ಹೇಗೆ ಸಿಕ್ಸರ್ ಹೊಡೆಯಲು ಆ ಮೊದಲ ಬಾರಿ ಬ್ಯಾಟ್ ಹಿಡಿದ ಖಿಲಾಡಿಗೆ ಆಗಲಿಲ್ಲವೋ ಹಾಗೆಯೇ ನನ್ನ ಲೇಖನವೂ  ಪ್ರಕಟವಾಗಲಿಲ್ಲ … ಸಿಕ್ಸರ್ ಹೊಡೆಯಲಾಗಲಿಲ್ಲ ಎಂದ ಮಾತ್ರಕ್ಕೆ ಪ್ರಯತ್ನವನ್ನು ಬಿಡಲು ಸಾಧ್ಯವೇ? ಖಂಡಿತಾ ಇಲ್ಲ …. ಬರೆಯುತ್ತಲೇ ಇದ್ದೇನೆ ಆದರೆ ಯಾವ ಬಾಲ್ ಗೆ … Read more

ಅವರವರ ಭಾವಕ್ಕೆ: ಅಭಿಲಾಷ್ ಟಿ ಬಿ

"ಮಾನವ ಮೊದಲಿನಿ೦ದಲೂ ನಿಸರ್ಗದ ಜೊತೆಯಲ್ಲಿ ಅವಿನಾಭಾವ ಸ೦ಬ೦ಧವನ್ನು ಬೆಳೆಸಿಕೊ೦ಡಿದ್ದಾನೆ. ಜಗದ್ಗುರು ಶ೦ಕರಚಾರ್ಯರು ಆನ೦ದಲಹರಿಯಲ್ಲಿ "ಶಿವಾ ಶಕ್ತ್ಯಾ" ಎ೦ದು ಉಲ್ಲೇಖಿಸಿದ ಹಾಗೆ ಪ್ರಕೃತಿ ಪುರುಷ ಮತ್ತು ಶಕ್ತಿಯ ಸಮಾಗಮ. ಈ ವಿಚಾರಗಳು ನಮ್ಮ ಗ್ರಾಮೀಣ ಜನರಲ್ಲಿ ಹೇಗೆ ಮೂಡಿಬ೦ದಿದೆ ಎ೦ಬುದನ್ನು ನಾನು ಇಲ್ಲಿ ಸ೦ಕ್ಷಿಪ್ತವಾಗಿ ಚಿತ್ರಿಸಲು ಪ್ರಯ್ನತಿಸಿದ್ದೇನೆ" -ಅಭಿಲಾಷ್ ಟಿ ಬಿ                  ಎಲ್ಲೋ ದೂರದಲ್ಲಿ ಅರ ಬಡೆಯುವ ಶಬ್ದ ಕೇಳುತಿತ್ತು. ಬರುಬರುತ್ತಾ ಕ್ಷೀಣ ದನಿ ಏರುತ್ತಾ ಹೋಯಿತು.  ಸಿಟಿಯಿ೦ದ ಬ೦ದಿದ್ದ ನನ್ನ … Read more

ಫ಼ೈಂಡಿಂಗ್ ಫ಼ಾನ್ನಿ ಮತ್ತು ನಮ್ಮೊಳಗಿನ ಮುಗಿಯದ ಹುಡುಕಾಟ: ಪ್ರಶಾಂತ್ ಭಟ್

ಈಗ ನನ್ನ ಬಹಳ ಕಾಡಿದ ಒಂದು ಸಿನಿಮಾ ಬಗ್ಗೆ ಬರೆಯಬೇಕು.  ಅದರಲ್ಲಿ ಬರುವ ಒಂದು ಡೈಲಾಗ್ ಬಗ್ಗೆ 'ನಮ್ಮ ರಾಜ್ಯಕ್ಕೆ ಅಪಮಾನವಾಯಿತು' ಅಂತ ಬೊಬ್ಬಿರಿದ ನನ್ನ ರಾಜ್ಯದ ಕೆಲವರ ಬಗ್ಗೆ ನಿಜಕ್ಕೂ ಕನಿಕರವಿದೆ. ಹೌದು. ಇದು ಅದೇ ಸಿನಿಮಾ. 'ಫ಼ೈಂಡಿಂಗ್ ಫ಼ಾನ್ನಿ' ಹೋಮಿ ಅಡಜನಿಯ ನಿರ್ದೇಶನವಿರುವ  (ಇವನ ಬೀಯಿಂಗ್ ಸೈರಸ್ ಕೂಡ ಒಳ್ಳೆಯ ಪ್ರಯತ್ನ) ಕೆಲವು ಕಡೆ 'ಲೆಟ್ಟರ್ಸ್ ಟು ಜೂಲಿಯಟ್' ಅನ್ನು ಹೋಲುತ್ತದೆ. ಅರ್ಜುನ್ ಕಪೂರ್, ದೀಪಿಕಾ ಪಡುಕೋಣೆ (ಇವಳ ಸ್ಕರ್ಟ್ ನ ಅಂದವನ್ನು ಬಣ್ಣಿಸಲೇ?) … Read more

ಅಯ್ಯೋ ಅವ್ರು ಏನ್ ಅಂದ್ಕೊತಾರೋ !!: ಸಂತೋಷ್ ಗುರುರಾಜ್

ಇದು ನಮ್ಮ ನಿಮ್ಮೆಲ್ಲರ  ಅತೀ ದೊಡ್ಡ  ಕಾಡುವ ಪ್ರಶ್ನೆ ? ಇದೊಂದೇ ಡೈಲಾಗ್ ಇಂದ ಕೆಲವರು ತಮ್ಮ ಜೀವನದ ಗುರಿ ಮುಟ್ಟಲು ಆಗುವುದಿಲ್ಲ. ಇದನ್ನು ಯಾರೋ ನಮಗೆ ಆಗದೇ ಇರುವವರು ಮಾಡುವುದಲ್ಲ ನಮಗೆ ನಾವೇ ಮಾಡಿಕೊಳ್ಳುವುದು. ಇದು ಒಂತರಾ ಮಾನಸಿಕ ರೋಗ. ಇದು ಪ್ರತಿಯೊಬ್ಬನ ಜೀವನದಲ್ಲಿ ನಡೆಯುವ ನೆಗೆಟಿವ್ ಕಮಾಂಡ್. ಅದು ಎಷ್ಟರ ಮಟ್ಟಿಗೆ ಅಂದ್ರೆ ಆ ಕಮಾಂಡ್ ಇಂದ ನಾವು ತಪ್ಪಿಸಿಕೊಳ್ಳಲು ಸಾಕಷ್ಟು ಸಮಯ ಬೇಕಾಗುತ್ತದೆ, ಅಷ್ಟರಲ್ಲಿ ವಯಸ್ಸು ಮುಗಿದಿರುತ್ತದೆ. ಈ ಕಮಾಂಡ್ ದಾಟಿ ದೈರ್ಯದಿಂದ … Read more

ತಿರುಗುಬಾಣ: ಬಸವರಾಜ ಎಂ.

ಆಫೀಸ್ ಗೆ ತಡವಾಗುತ್ತಿತ್ತು. ಇಸ್ತ್ರಿ ಮಾಡಿದ ಬಟ್ಟೆ  ಬೇರೆ ಇರಲಿಲ್ಲ. ಮಗನಿಗೆ ಹೇಳೋಣವೆಂದುಕೊಳ್ಳುವ ಹೊತ್ತಿಗೆ ಗಾದೆ ನೆನಪಿಗೆ ಬಂತು. "ಅಪ್ಪ ಮಾಡಿದ್ದು ಉತ್ತಮ,  ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಆಳು" ಅಂತ. ಮನೆಯಲ್ಲಿ ಆಳು ಇಡಲಂತೂ ಸಾಧ್ಯವಾಗಿಲ್ಲ ಹೋಗಲಿ ನಾನೆ ಮಾಡೋಣ ಎಂದುಕೊಂಡರೆ ನನಗೊಂದು ಜಿಜ್ಞಾಸೆ. ಅದೇನೆಂದರೆ ನನ್ನ ಅಪ್ಪನನ್ನು  ಪರಿಗಣಿಸಿದರೆ ನಾನು ಮಾಡಿದ್ದು ಮಧ್ಯಮವಾಗುತ್ತದೆ. ಮಗನಿಗೆ  ಹೇಳೋಣವೆಂದರೆ ಮತ್ತೆ ಮಧ್ಯಮದ ವಿಚಾರ ಬಂತು. ಈಗ ನನ್ನ ಕೋಪ ತಿರುಗಿದ್ದು ನನ್ನ ಅಂಗಿಯ ಇಸ್ತ್ರಿಯ ಮಾಡದ … Read more

“ಮಕ್ಕಳ ಸುರಕ್ಷತೆಗಿರಲಿ ಮೊದಲ ಆದ್ಯತೆ” : ಹೊರಾ.ಪರಮೇಶ್ ಹೊಡೇನೂರು

"ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಹೊಣೆ" ಎಂಬ ಸಾಮಾಜಿಕ ಕಾಳಜಿಯ ಘೋಷವಾಕ್ಯ ಇಂದಿನ ದಿನಮಾನಗಳಲ್ಲಿ ತುಂಬಾ ಚಾಲ್ತಿಯಲ್ಲಿದೆ. ಏಕೆಂದರೆ, ಭವಿಷ್ಯದ ನಾಗರೀಕರಾಗಿರುವ ಮಕ್ಕಳ ಬಾಲ್ಯವು ತುಂಬಾ ಆಯಕಟ್ಟಿನದ್ದಾಗಿದ್ದು, ತಮ್ಮ ಮನೆಯ, ಶಾಲೆಯ ಮತ್ತು ಸಮುದಾಯದ ನಡುವೆ ಸಹಜ ತುಂಟಾಟ, ತರಲೆ, ಚೇಷ್ಟೆ, ಹುಡುಗಾಟಿಕೆಗಳಿಂದ ಕೂಡಿರುತ್ತದೆ ಮತ್ತು ಈ ಸಂದರ್ಭಗಳಲ್ಲಿ ಅಕಾಸ್ಮಾತ್ ಆಗಿ ಅಚಾತುರ್ಯಗಳು ಉಂಟಾದಾಗ ಅನಾಹುತಗಳೇ  ಜರುಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಂತಹ ಕೆಲವು ಸಂದರ್ಭಗಳು, ಸಾಧ್ಯತೆಗಳ ಬಗೆಗೆ ಒಂದಿಷ್ಟು ಮೆಲುಕು ಹಾಕುತ್ತಾ, ಮಕ್ಕಳ ಸುರಕ್ಷತೆಗೆ ಹೇಗೆ ಹೊಣೆಗಾರಿಕೆ ನಿಭಾಯಿಸಬೇಕೆಂಬುದನ್ನು … Read more

ಸ್ವಗತ: ತ್ರಿವೇಣಿ ಟಿ.ಸಿ.

ನಿನ್ನ ಬಾಳನ್ನು ಬೆಳಗೋಕ್ ಬಂದ ಹುಡುಗಿ ಇನ್ನೊಂದು ಹೆಣ್ಣಿನ ಬಾಳನ್ನು ಕತ್ತಲೆ ಮಾಡಿದ್ದು ನಿಜವಲ್ವೆ. ಕನಸುಗಳ ಬಿತ್ತಿ ನೀರು ಸುರಿಸದೆ ಸುರುಟಿದೆ ನನ್ನ ಕನಸು.  ೨೦೧೦ ರ ಒಂದು ಮಧ್ಯಾನ್ಹ ಬಂದ ಇ-ಮೇಲ್,  ೨೦೦೯ ರಲ್ಲಿ ಯಾವುದೋ ಹಳೆ ಪೇಮೆಂಟ್ ಕೊಟ್ ಬಿಡಿ ಅಂತ ಮೆಸ್ಸೇಜು…  ಅವತ್ತಿಗೆ ರಿಪ್ಲೈ ಆಯ್ತು, ಕೊಡೋಣ ತಡ್ಕೊಳಪ್ಪ ……  ಮತ್ತೆ ಮೂರನೇ ದಿವಸಕ್ಕೆ ಒಂದು ರಿಮೈನ್ಡರ್  ಕೊಡ್ತೀರೋ ಇಲ್ಲವೋ.. ಫೋನೆತ್ತಿ ಮಾತಾಡಿ ತಡೆದುಕೊಳ್ ಪುಣ್ಯಾತ್ಮ ನಿನ್ನ ಚೆಕ್ಕುಗೆ ರೆಕ್ವಿಸಿಶನ್ ಹಾಕಿದೀನಿ ಡೆಲ್ಲಿ … Read more

ಮಿತ್ರ ಶ್ರೇಣಿಯೊಳ್ ವಾಣಿ: ಪಿ.ಎಂ.ಸುಬ್ರಮಣ್ಯ, ಬ.ಹಳ್ಳಿ

ಕಾಲದೊಳಗೆ  ವಸಂತ ವಿದ್ಯಾ ಜಾಲದೊಳಗೆ ಕವಿತ್ವ ಗಜವೈ ಹಾಳಿಯಲಿ ದೇವೆಂದ್ರ ಮಿತ್ರಶ್ರೇಣಿಯೊಳು ವಾಣಿ ಭಾಳನೇತ್ರನು ದೈವದಲಿ ಬಿ ಲ್ಲಾಳಿನಲಿ ಮನ್ಮಥನು ಧನದಲಿ ಹೇಳಲೇನಭಿಮಾನವೇ ಧನವೆಂದನಾ ವಿದುರ   (ಕುಮಾರವ್ಯಾಸ ಭಾರತ) ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎನ್ನುವ ಗಾದೆಮಾತು ಪ್ರಸ್ತುತ ಸನ್ನಿವೇಶದಲ್ಲಿ ಅರ್ಧಸತ್ಯವಾಗ್ತಿದೆ.  ಏಕೆಂದರೆ ಈ ಗಾದೆಯ ಮೊದಲ ಅರ್ಧ ಸರಿ ಎನಿಸಿದರೂ ಉಳಿದರ್ದ ಏಕೋ ಸರಿ ಕಾಣ್ತಿಲ್ಲವೇನೋ ಎನಿಸುತ್ತೆ.  ಒಲೆ  ಎನ್ನೋ ಮಾತೇ ಮರೆತು ಹೋಗಿದೆ.  ಜನಸಂಪದ ಗ್ಯಾಸ್‌ಸ್ಟವ್, ಎಲೆಕ್ಟ್ರಿಕಲ್‌ಸ್ಟವ್, ಎಲೆಕ್ಟ್ರಾನಿಕ್ ಓವೆನ್, … Read more

ನಿಮ್ಮ ಗಮನಕ್ಕೆ

ಬದುಕಿನ ಮೊದಲ ಹನ್ನೆರಡು ವರ್ಷಗಳನ್ನು ಹಾಸನದಲ್ಲಿ ಕಳೆದಿರುವ ಸಿಂಧು ಪದವಿಯವರೆಗೆ ಓದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ. ಕರ್ನಾಟಕ ವಿಶ್ವ ವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕೆ.ಡಿ.ಸಿ.ಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಪತಿ ಚಂದ್ರಶೇಖರ ಮತ್ತು ಮಗಳು ಸಿಂಚನಳೊಂದಿಗೆ ಶಿರಸಿಯಲ್ಲಿ ವಾಸವಾಗಿದ್ದಾರೆ.   ಇವರ ನಗುತ್ತೇನೆ ಮರೆಯಲ್ಲಿ ಕವನ ಸಂಕಲನ ೨೦೧೦ರಲ್ಲಿ ಹಾಗೂ ಕನಸಿನ ಕಾಡಿಗೆ ಕಥಾಸಂಕಲನ ೨೦೧೪ರಲ್ಲಿ ಪ್ರಕಟಗೊಂಡಿದೆ. ಇವರ ಮತ್ತೊಂದು ಕವನ ಸಂಕಲನ "ರಸ್ತೆಯಲ್ಲಿ ಮೇ ಫ್ಲವರ್" ಈ ತಿಂಗಳು ಬಿಡುಗಡೆಯಾಗುತ್ತಿದೆ. ಪುಸ್ತಕ … Read more

ಚಿಂತೆಗೆ ಕೊನೆಯುಂಟೆ?: ಮಂಜು ಹಿಚ್ಕಡ್

ಒಮ್ಮೆ ಮೆದುಳಿಗೆ ಹೊಕ್ಕ ಚಿಂತೆಗಳಿಗೆ ಹೊಸತು ಹಳತು ಎನ್ನುವ ಭೇದಬಾವವಿಲ್ಲ. ಕುಳಿತಲ್ಲಿ, ನಿಂತಲ್ಲಿ, ಹೋದಲ್ಲಿ, ಬಂದಲ್ಲಿ ಮನಸ್ಸನ್ನು ಹೊಕ್ಕ ಚಿಂತೆಗಳು ಆಗಾಗ ಜಾಗ್ರತಗೊಂದು ಕಾಡುತ್ತಿರುತ್ತವೆ. ಇರಲಿ ಎಂದು ಹಾಗೆ ಸುಮ್ಮನೆ ಬಿಡುವಂತಿಲ್ಲ. ಹಾಗೇನಾದರೂ ಬಿಟ್ಟು ಬಿಟ್ಟರೆ ಅದು ಬೆಳೆಯುತ್ತಾ ಹೋಗಿ ಹೆಮ್ಮರವಾಗಿ ಬಿಡುತ್ತದೆ. ಆ ಚಿಂತೆಗಳಿಗೆ ಅದೆಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೋ ಅಷ್ಟು ಒಳ್ಳೆಯದು. ಇದು ಸೋಮನಿಗೂ ಕೂಡ ತಿಳಿದ ವಿಷಯ. ಸೋಮ ಜಾಸ್ತಿ ಓದಿದವನಲ್ಲದಿದ್ದರೂ ತನ್ನ ಅರವತ್ತು ವರ್ಷದ ಅನುಭವದಿಂದಾಗಿ ಅವನಿಗೆ ಅದೆಲ್ಲವೂ ತಿಳಿದ ವಿಚಾರವಾರವೇ. … Read more

ಮನಸಿದ್ದರೆ ಮಾರ್ಗ: ಸುರೇಶ್ ಮಡಿಕೇರಿ

  ಮನುಷ್ಯ ಅಂದ ಮೇಲೆ ಅವನಿಗೆ ಹವ್ಯಾಸ ಎನ್ನುವುದು ಇದ್ದೇ ಇರುತ್ತದೆ. ಹವ್ಯಾಸ ಅಂದ ಮೇಲೆ ಸಾಧಾರಣವಾಗಿ ಅದು ಒಳ್ಳೆಯ ಹವ್ಯಾಸವಾಗಿರುತ್ತದೆ. ಆ ಹವ್ಯಾಸಗಳು ಜೀವನಕ್ಕೆ ಹೊಸ ಚೇತನವನ್ನು, ಜೀವನೋಲ್ಲಾಸವನ್ನು ತಂದು ಕೊಡುತ್ತದೆ. ಆದರೆ ನಮ್ಮಲ್ಲಿ  ಕೆಲವು ಚಟಗಳಿರುತ್ತವೆ. ಈ ಚಟ ಅನ್ನೋದು ಹೆಚ್ಚಾಗಿ ಬಹಳ ಕೆಟ್ಟದ್ದೇ ಆಗಿರುತ್ತದೆ. ಸುಖಿ ಮಾನವ ಫ್ಯಾಶನ್‌ಗಾಗಿ ಆರಂಭಿಸುವ ಈ ಚಟಗಳು ಮುಂದೆ ಅವನನ್ನೇ ದಾಸನನ್ನಾಗಿ ಮಾಡಿಬಿಡುತ್ತವೆ. ಆತನ ಜೀವನದ ಉತ್ಸಾಹ, ಉಲ್ಲಾಸಗಳು ಅವನಿಂದ ದೂರವಾಗುತ್ತವೆ. ಅದು ಮಧ್ಯಪಾನ ಸೇವನೆಯಾಗಿರಬಹುದು, ಧೂಮಪಾನವಾಗಿರಬಹುದು, … Read more

ನಿಮ್ಮ ಗಮನಕ್ಕೆ

ದಿನಾಂಕ 30 ಡಿಸೆಂಬರ್ 2014 ರಿಂದ 3 ಜನವರಿ 2015ರ ವರೆಗೆ ಮೈಸೂರಿನ ನಿರಂತನ ಫೌಂಡೇಷನ್ ವತಿಯಿಂದ ರಾಷ್ಟ್ರೀಯ ರಂಗ ಉತ್ಸವವನ್ನು ಆಯೋಜಿಸಲಾಗಿದೆ. ಈ ನಿಮಿತ್ತ ರಂಗಾಸಕ್ತರಿಗೆ ನಿರಂತರ ಫೌಂಡೇಷನ್ ಆಹ್ವಾನ ಕೋರಿದೆ.  ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: ನಿರಂತರ ಫೌಂಡೇಷನ್ ಕಾಂತರಾಜ ರಸ್ತೆ ಸರಸ್ವತಿ ಪುರಂ ಮೈಸೂರು ದೂರವಾಣಿ: 0821-2544990 ****

ನಿಮ್ಮ ಗಮನಕ್ಕೆ

ಪ್ರಕಟಣೆ 1 ಜ್ಞಾನಡಮರು ಪ್ರಕಾಶನವು ದ್ವಿತೀಯ  ವರ್ಷ ಪೂರೈಸಿದ ಸವಿನೆನಪಿಗಾಗಿ ಸಹಕಾರ ತತ್ವದಡಿಯಲ್ಲಿ ರಾಜ್ಯಮಟ್ಟದ ಚೌಪದಿಗಳ ಅಪೂರ್ವ ಸಂಕಲನ ಹೊರತರಲು ಚಿಂತನೆ ನಡೆಸಿದ್ದು, ಆಸಕ್ತ  ಹಿರಿಯ-ಕಿರಿಯ ಕವಿಗಳು ಸ್ವರಚಿತ  ೬ ಚೌಪದಿಗಳನ್ನು ಮೊಗೇರಿ ಶೇಖರ ದೇವಾಡಿಗ ಸಂಪಾದಕರು ಜ್ಞಾನಡಮರು ಪ್ರಕಾಶನ, ಮೊಗೇರಿ ಕೆರ್ಗಾಲ್ (ಅಂಚೆ) ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ-೫೭೬೨೧೯ ಮೊ: ೯೯೧೬೧೮೦೪೯೫ ಈ ವಿಳಾಸಕ್ಕೆ ಮಾರ್ಚ್ ೨೮ ೨೦೧೫ ರೊಳಗೆ ೨ ಸ್ವವಿಳಾಸ ಬರೆದ ಅಂಚೆ ಲಕೋಟೆಯನ್ನು ಲಗತ್ತಿಸಿ ಕಳುಹಿಸಲು ಕೋರಲಾಗಿದೆ. ಇ-ಅಂಚೆ ಮೂಲಕ  ಕಳುಹಿಸುವವರು … Read more

ಅಮರವಾಗಲಿ ನಮ್ಮ ಚೆಲುವ ಕನ್ನಡ ನುಡಿಯು: ಹೊರಾ.ಪರಮೇಶ್ ಹೊಡೇನೂರು

"ಜೇನಿನ ಹೊಳೆಯೋ ಹಾಲಿನ ಮಳೆಯೋ  ಸುಧೆಯೋ ಕನ್ನಡ ಸವಿ ನುಡಿಯೋ….  ವಾಣಿಯ ವೀಣೆಯೊ ಸ್ವರ ಮಾಧುರ್ಯವೋ  ಸುಮಧುರ ಸುಂದರ ನುಡಿಯೋ….ಆಹಾ!"         ಎಂಬ ಗೀತೆಯು ನಮ್ಮ ಕರುನಾಡಿನ ಕನ್ನಡಿಗರ ಎದೆಯಾಳದಲ್ಲಿ ಸದಾ ರಿಂಗಣಿಸುತ್ತಲೇ ಇರುತ್ತದೆ. ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ರವರ ಅಮೃತ ಕಂಠಸಿರಿಯಲ್ಲಿ ಅಜರಾಮರವಾಗಿರುವ ಈ ಗೀತೆಯು ಚಲನಚಿತ್ರಕ್ಕಾಗಿ ರಚಿಸಲ್ಪಟ್ಟರೂ ನಮ್ಮ "ಸವಿಗನ್ನಡ"ದ ಹಿರಿಮೆ-ಗರಿಮೆಗಳನ್ನು ಬಿಂಬಿಸುವಲ್ಲಿ ಯಶಸ್ವಿಯಾಗಿ ಕನ್ನಡ ಭಾಷಾ ಚಳುವಳಿಯಲ್ಲಿ ಪ್ರಮುಖವಾದ ಕನ್ನಡಪರ ಕಾಳಜಿಯ ಸಂದೇಶಗೀತೆಯಾಗಿದ್ದು ಇತಿಹಾಸದ ಪುಟ … Read more

ಬದುಕ್ ಸಾಯ್ರಿ: ಪ್ರವೀಣ್ ಎಸ್ ಕುಲಕರ್ಣಿ

    ಥತ್ತೇರಿಕೆ…!ಮತ್ತೆ ಫೇಲಾಗ್ ಬಿಟ್ನಾ. . ಚೆನ್ನಾಗೆ ಬರೆದಿದ್ನಲ್ಲ. . ಯಾಕೋ ಈ ದೇವರದು ಅತಿಯಾಯ್ತು. . ನನ್ನ ಸುಖವಾಗಿ ಬದುಕಲು ಬಿಡಲೇಬಾರದು ಅಂತ ಇದ್ರೆ ಯಾಕ್ ಹುಟ್ಟಿಸಿದ್ನೋ, ಮನೆಗೆ ಹೋಗಿ ಏನು ಮುಖ ತೋರಿಸೋದು. . . ಏನು. . . ?ಮತ್ತೆ ಲಾಸಾ. . . ಸರ್ಯಾಗ್ ನೋಡಿ ಹೇಳೋ, ಈ ಸಲಾ ಹೆಚ್ಚು ಕಮ್ಮಿ ಆದ್ರೆ ನಾನಷ್ಟೇ ಅಲ್ಲಾ ಅಪ್ಪ ಅಮ್ಮ ಹೆಂಡ್ತಿ ಮಕ್ಕಳು ಎಲ್ರೂ ಸೇರಿ ನೇಣು ಹಾಕ್ಕೋಬೇಕಾಗುತ್ತೆ. . … Read more

ಅಡುಗೆಯ ಅವಾಂತರಗಳು: ಸ್ಮಿತಾ ಅಮೃತರಾಜ್

ಅಡುಗೆ ಮಾಡುವುದರಲ್ಲಿ ನಮ್ಮ ಗೃಹಿಣಿಯರು ಎಷ್ಟೇ ಪಳಗಿದರೂ, ಪರಿಣಿತಿಯನ್ನು ಪಡೆದುಕೊಂಡರೂ ಕೆಲವೊಮ್ಮೆ ಗಡಿಬಿಡಿಯಲ್ಲಿ ಅಡುಗೆ ತಯಾರು ಮಾಡುವಾಗ ಎಡವಟ್ಟಾಗಿ ಪಾಕವೇ ಬದಲಾಗಿ ಹೊಸ ರುಚಿಯೇ ಉದ್ಭವಗೊಳ್ಳುವಂತಹ ಪರಿಸ್ಥಿತಿಗಳು ಬಂದೊದಗಿ ಬಿಡುತ್ತದೆ. ಬಹುಷ; ಇದಕ್ಕೆ ಯಾವ ಮನೆಯಾಕೆಯೂ ಹೊರತಾಗಿಲ್ಲ ಅನ್ನಿಸುತ್ತೆ.  ಮೊದ ಮೊದಲೆಲ್ಲಾ ತೀರಾ ಸಾಂಪ್ರದಾಯಿಕ ಅಡುಗೆಗಳು. ಹಾಗಾಗಿ ಇಂತಿಂತ ಖಾದ್ಯಕ್ಕೆ ಇಂತಿಂತದೇ ರುಚಿ ದಕ್ಕುತ್ತದೆ ಅಂತ ಕರಾರುವಕ್ಕಾಗಿ ಹೇಳಿ ಬಿಡಬಹುದಾಗಿತ್ತು. ಅಡುಗೆ ಮಾಡುವಾಗ ಸಾಕಷ್ಟು ಏಕಾಗ್ರತೆಯನ್ನು ಮೈಗೂಡಿಸಿ ಕೊಳ್ಳಬೇಕಾಗಿತ್ತು. ಮನಸ್ಸು ಕೊಂಚ ವಿಚಲಿತವಾಗಿ ಹಾಕುವ ಸಾಮಾಗ್ರಿ ತುಸು … Read more

ಡೆಸರ್ಟ್ ಫ್ಲವರ್’ ಇಂಗ್ಲಿಷ್ ಚಲನಚಿತ್ರ ಪ್ರದರ್ಶನ ಮತ್ತು ಉಪನ್ಯಾಸ

ಸಹಮತ ಫಿಲಮ್ ಸೊಸಯಟಿ ಮಂಗಳೂರು ಮತ್ತು ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನವಂಬರ್ 30ರ ಭಾನುವಾರ ಮಧ್ಯಾಹ್ನ 2.00 ಗಂಟೆಯಿಂದ 6.00 ಗಂಟೆ ತನಕ ಮಂಗಳೂರು ಉರ್ವಸ್ಟೋರ್ ನಲ್ಲಿರುವ ಸಾಹಿತ್ಯ ಸದನದಲ್ಲಿ ಸೋಮಾಲಿಯನ್ ರೂಪದರ್ಶಿ ವಾರೀಸ್ ಡೇರಿಯ ಆತ್ಮಕತೆಯಾಧಾರಿತ .' ಡೆಸರ್ಟ್ ಫ್ಲವರ್' ಇಂಗ್ಲಿಷ್ ಚಲನಚಿತ್ರ ಪ್ರದರ್ಶನ ಮತ್ತು ಉಪನ್ಯಾಸ ಏರ್ಪಡಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕವಿ ಡಾ. ಅನುಪಮ ಎಚ್ ಎಸ್ .ಮತ್ತು ಮಂಗಳೂರಿನ ಚಿಂತಕ ಡಾ.ಬಿ.ಎಸ್ ಕಕ್ಕಿಲ್ಲಾಯ ಚಲನಚಿತ್ರದ … Read more

ಭಯದ ಆ ರಾತ್ರಿ: ನಾಗರಾಜ್ ಹರಪನಹಳ್ಳಿ.

ಹಳವಂಡ ಕನಸು. ಅದ್ಹೇನೋ ಸಮಾರಂಭ. ಹೋದಲೆಲ್ಲಾ ಚಿವುಟಿದಂತೆ; ದೇಹದ ಎದೆ ಹಾಗೂ ಕಿಬ್ಬೊಟ್ಟೆ ಭಾಗಕ್ಕೆ ಯಾರೋ ತಿವಿದಂತೆ. ತಿವಿಯುವ ಕೈ ಮತ್ತು ಮುಖ ಮಾತ್ರ ಅಸ್ಪಷ್ಟ. ಕಿರುಕುಳ ಮುಂದುವರಿದಂತೆ, ಅದರಿಂದ ತಪ್ಪಿಸಿಕೊಂಡ ಆತ ತನ್ನನ್ನು ತಾನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದಂತೆ ಅದೆಂಥದೋ ಭಾರ ಎನಿಸುವ ಕನಸು. ಯಾರೋ ವೆಹಿಕಲ್  ಪಾರ್ಕಿಂಗ್ ಗೇಟ್ ತೆರದಂತೆ ಸದ್ದು. ಇದ್ದಕ್ಕಿದ್ದಂತೆ ಎಚ್ಚರವಾಯ್ತು. ಎದೆಯ ಮೇಲೆ ಕೈಯಿಟ್ಟು ಮಲಗಿದ್ದಕ್ಕೋ ಏನೋ…ಇರಬೇಕು. ಕೆಟ್ಟ ಕನಸು. ಬೆಡ್ ರೂಂ ಲೈಟ್ ಹಾಕಿದ. ಕೋಣೆಯಲ್ಲಿ ಆತನ ಜೊತೆ ಇರುವುದು … Read more

ಮಕ್ಕಳ ದಿನದ ಮಹತ್ವ: ಹೊರಾ.ಪರಮೇಶ್ ಹೊಡೇನೂರು

    ಅಪ್ಪ ತನ್ನ ಅಂಗಿ ಜೇಬಿನಲ್ಲಿ ಸದಾ ಎರಡು ಪೆನ್ನುಗಳನ್ನು ಇಟ್ಟುಕೊಳ್ಳುತ್ತಿದ್ದ ಶಿಸ್ತುಬದ್ಧ ಜೀವನದ ವಕೀಲರು. ಮಗನಿಗೆ ಮಾತ್ರ ಆ ಎರಡು ಪೆನ್ನುಗಳ ಅಗತ್ಯವೇನು ಎಂಬ ತರ್ಕ. ಒಮ್ಮೆ ಅಪ್ಪನಿಗೆ ಹೇಳದೆ ಆ ಎರಡು ಪೆನ್ನುಗಳಲ್ಲಿ ಒಂದನ್ನು ಮಗ ಎಗರಿಸಿಬಿಟ್ಟ ಇದನ್ನು ಗಮನಿಸಿದ ಅಪ್ಪ ಹೆಂಡತಿ ಮಗನನ್ನು ಗದರಿಸಿ ಕೇಳಿದಾಗ ಮಗನು ತಾನು ತೆಗೆದುಕೊಂಡಿದುದಾಗಿ ಹೇಳಿದನು. ಇದನ್ನು ಕೇಳಿದ ಅಪ್ಪನು ಹೇಳದೇ ಕೇಳದೇ ಪೆನ್ನು ತೆಗದುಕೊಂಡಿದ್ದು ತಪ್ಪೆಂದು ತಿಳಿಸಿ ಬೈಯ್ದು ಬುದ್ಧಿ ಹೇಳಿದರು. ಈ ಪ್ರಸಂಗದಿಂದಲೇ … Read more

ನಿಮ್ಮ ಗಮನಕ್ಕೆ

ಬ್ಲೂ ವೇವ್ಸ್ : ನಿಕ್ಷೇಪ- 2014 : ಯುವ ಬರಹಗಾರರಿಂದ ಕನ್ನಡ ಬರಹಗಳಿಗೆ ಆಹ್ವಾನ ಕನ್ನಡ ಯುವ ಬರಹಗಾರರ ಸಾಮಾಜಿಕ ಜಾಲತಾಣದ ಸಾಹಿತ್ಯ ವೇದಿಕೆ ಬ್ಲೂ ವೇವ್ಸ್ (ನೀಲಿ ಅಲೆಗಳು) ಫೇಸ್ಬುಕ್ ಪೇಜ್ ಬಳಗದ ವತಿಯಿಂದ ಕನ್ನಡದ ಯುವ ಬರಹಗಾರರನ್ನು ಗುರುತಿಸುವ ಮತ್ತು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಿಕ್ಷೇಪ – 2014 (ನವ ಚಿಂತನೆಗಳ ಅಗೆತ) ಎಂಬ ಸ್ಪರ್ಧೆಯಡಿ ಏಳು ಪ್ರಸಕ್ತ ವಿದ್ಯಮಾನಗಳ ಕುರಿತು ಲೇಖನಗಳನ್ನು ಆಹ್ವಾನಿಸಲಾಗಿದೆ. ಪ್ರಜ್ಞಾವಂತ ಸೃಜನಶೀಲ ಯುವ ಬರಹಗಾರರು ಇದರಲ್ಲಿ ಪಾಲ್ಗೊಳ್ಳಬಹುದು.  ವಿಷಯಗಳು ಇಂತಿವೆ. … Read more

ಕನಸು: ದಿವ್ಯ ಆಂಜನಪ್ಪ

'ಕನಸು', ಕೇಳಲೆಷ್ಟು ಸುಮಧುರ!. ಕನಸೆಂಬುದು ಯಾರಿಗಿಲ್ಲ? ಎಲ್ಲರಿಗೂ ಒಂದಲ್ಲ ಒಂದು ರೀತಿಯ ಕನಸು ಹುಟ್ಟುತ್ತಾ ಕಾಡುತ್ತಲೇ ಇರುವುದು. ಕನಸು ಕಾಣದ ಮನಸ್ಸು ಸಾಧ್ಯವೇ? ಇಲ್ಲವೇ ಇಲ್ಲ. ಹಾಗೇನಾದರೂ ಇದ್ದಿದ್ದರೆ ಬದುಕಲಿ ಸೊಗಸೇ ಇರುತ್ತಿರಲಿಲ್ಲ. ಬದುಕು ಎಂದಾಗ ಅದರೊಳಗಿನ ಸೋಲು ಗೆಲುವುಗಳು ನಮ್ಮೆದುರು ಬಂದು ನಿಲ್ಲುತ್ತವೆ. ಈ ಸೋಲು ಗೆಲುವುಗಳು ಎಂಬ ಅಂಶಗಳು ಹುಟ್ಟಿಕೊಳ್ಳಲೂ ಮತ್ತೂ ಈ ಕನಸುಗಳೇ ಕಾರಣ. ಆದರೂ ಎಲ್ಲರೂ ಕನಸಿನ ದಾಸರೇ. ''ಬೆಳಕೇ ಇಲ್ಲದ ದಾರಿಯಲಿ ನಾನು ನಡೆಯಬಲ್ಲೆ; ಕನಸೇ ಇಲ್ಲದ ದಾರಿಯಲಿ ಹೇಗೆ … Read more

ನಿಮ್ಮ ಗಮನಕ್ಕೆ…

ಅದ್ವೈತ ಪ್ರಕಾಶನ, ಬೆಂಗಳೂರು ಇವರು ಪ್ರಥಮ ಬಾರಿಗೆ ಕನ್ನಡ ಕವಿತೆಗಳ ಆಂಡ್ರಾಯ್ಡ್ ಆ್ಯಪ್ ಒಂದನ್ನು ಅಭಿವೃದ್ದಿ ಮಾಡಿದ್ದಾರೆ. ಈ ಆಂಡ್ರಾಯ್ದ್ ಆ್ಯಪ್ ಅನ್ನು ಗೂಗಲ್ ಸ್ಟೋರ್ಸ್ ನಲ್ಲಿ ಉಚಿತವಾಗಿ ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಆ್ಯಪ್ ನಲ್ಲಿ 25 ಕನ್ನಡ ಕವಿಗಳ ಸುಮಾರು 75 ಕವಿತೆಗಳು ಓದಲು ಸಿಗುತ್ತವೆ. ಈ ಕವಿತೆಗಳಿಗೆ ಪೂರಕವಾಗುವಂತೆ ಉತ್ತಮ ರೇಖಾಚಿತ್ರಗಳು ಸಹ ಈ ಆ್ಯಪ್ ನಲ್ಲಿ ನೋಡಲು ಲಭ್ಯವಿವೆ.  ವಿದ್ಯಾಶಂಕರ್ ಹರಪನಹಳ್ಳಿಯವರ ನೇತೃತ್ವದಲ್ಲಿ ಮೂಡಿಬಂದಿರುವ ಈ ಪ್ರಾಜೆಕ್ಟ್ ಗೆ ಸಂಬಂಧಿಸಿದಂತೆ ಮಾಹಿತಿ … Read more

ಆಸ್ಪತ್ರೆಯಲ್ಲಿ ಕಂಡ ದೃಶ್ಯಗಳು: ಶರತ್ ಹೆಚ್.ಕೆ.

ಆಸ್ಪತ್ರೆಯಲ್ಲಿ ಕಂಡ ದೃಶ್ಯಗಳು ಆಸ್ಪತ್ರೆ ಎಂಬ ಜಗದೊಳಗಿನ ಮರಿಜಗತ್ತಿಗೆ ಇರುವ ಮುಖಗಳು ಹತ್ತು ಹಲವು. ನೋವು-ನಲಿವು, ಮಾನವೀಯ-ಅಮಾನವೀಯ ಬಣ್ಣಗಳು ಅಲ್ಲಿನ ಗೋಡೆಯ ತುಂಬ ಆವರಿಸಿಕೊಂಡಿವೆ. ಆಸ್ಪತ್ರೆಯ ಅಂಗಳದಲ್ಲಿ ನನ್ನ ಕಣ್ಣು ಚಿತ್ರಿಸಿಕೊಂಡ ಕೆಲ ಕಪ್ಪು ಬಿಳುಪಿನ ದೃಶ್ಯಗಳು ಇಲ್ಲಿವೆ. ದೃಶ್ಯ ೧: ಜಗತ್ತಿಗೆ ಹೊಸ ಜೀವವೊಂದರ ಆಗಮನವಾಗಿದೆ. ಅದ ಕಂಡು ಅಲ್ಲಿರುವವರ ಮನದಿಂದ ಹರ್ಷದ ಹೊನಲು ಹೊಮ್ಮುತ್ತಿದೆ. ಅಲ್ಲೇ ಸನಿಹದಲ್ಲಿ ಹಿಂದೆಂದೋ ಜಗತ್ತಿಗೆ ಬಂದು, ಹಲವರ ಮನದಲ್ಲಿ ಸಂಭ್ರಮದ ತೇರು ಎಳೆದಿದ್ದ ಜೀವ ಜಗದ ವ್ಯವಹಾರ ಮುಗಿಸಿ, … Read more