ಪ್ರೌಢಶಾಲಾ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕಾರ್ಯಾಗಾರ: ಶ್ರೀಮತಿ. ಶಾರದ. ಎಚ್.ಎಸ್

ದಿನಾಂಕ 13.06.2015ರಂದು ಸರ್ಕಾರಿ ಪ್ರೌಢಶಾಲೆ, ಕುಕ್ಕರಹಳ್ಳಿಯಲ್ಲಿ ಮೈಸೂರು ದಕ್ಷಿಣ ವಲಯ ಮತ್ತು ಮೈಸೂರು ತಾಲ್ಲೂಕಿನ ಆಯ್ದ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಬೋಧಿಸುವ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕುರಿತಂತೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ, ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಆರ್.ಪೂರ್ಣಿಮ ಅವರು ಇಡೀ ಕಾರ್ಯಾಗಾರವನ್ನು ನಡೆಸಿಕೊಡುವ ಜವಾಬ್ದಾರಿಯನ್ನು ಹೊತ್ತಿದ್ದರು. ಸುಪ್ರಸಿದ್ಧ ನಾಟಕಕಾರ ಶೇಕ್ಸ್‍ಪಿಯರ್‍ನ ಜನಪ್ರಿಯ ಉಕ್ತಿ  “ಜೀವನವೆಂಬೀ ನಾಟಕರಂಗದಿ  ಪಾತ್ರಧಾರಿಗಳು ಗಂಡು ಹೆಣ್ಣುಗಳು, … Read more

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-2015' ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 31.  ವಿ.ಸೂ; ಯಾವುದೇ … Read more

ವರದಕ್ಷಿಣೆ ಎಂಬ ಉರುಳು: ಲಾವಣ್ಯ ಆರ್.

ಹೀಗೆ ವಾರದ ಹಿಂದೆ ನಡೆದ ಘಟನೆ ನನ್ನ ಹೊಸ ಸೀರೆಗೆ ರವಿಕೆ ಹೊಲೆಸಲು ಬೋಟಿಕ್ ಗೆ ಹೋಗಿದ್ದೆ. ಅಲ್ಲಿಗೆ ಒಂದು ನಡುವಯಸ್ಸಿನ ಹುಡುಗಿ ಮತ್ತು ಆಕೆಯ ತಾಯಿ ಬಂದರು. ಆ ಹುಡುಗಿಯ ನಿಶ್ಚಿತಾರ್ಥಕ್ಕೆ ರವಿಕೆ ಹೊಲಿಸಲು ಬಂದವರು ಸುಮಾರು ತರಹದ ಡಿಸೈನ್ಗಳನ್ನೂ ನೋಡಿ ಅವನ್ನು ಆಕೆ ಮದುವೆಯಾಗುವ ಹುಡುಗನಿಗೆ ವಾಟ್ಸ್ ಆಪ್ನಲ್ಲಿ ಫೋಟೋ ಕಳುಹಿಸಿ ಸೆಲೆಕ್ಟ್ ಮಾಡಲು ಹೇಳಿದಳು.  ನಾನೆಂದುಕೊಂಡೆ ಇಬ್ಬರದು ಲವ್ ಮ್ಯಾರೇಜ್ ಇರಬಹುದು ಅದಕ್ಕಾಗಿಯೆಂದು. ಆದರೆ ನಂತರ ಆತ ಅವರಮ್ಮನ ನಂಬರ್ ಕೊಟ್ಟು ಕೇಳಲು ಹೇಳಿದ. ಆಗಲು ನಾನು ಸಾಮಾನ್ಯವಾಗಿ … Read more

ಕಿರು ಲೇಖನಗಳು: ಅಮರ್ ನಾಥ್ ಪಿ.ಸಿ., ಗಣೇಶ್ ಭಟ್

ಎಂದೆಂದೂ ನಿನ್ನವನು………… ಕಣ್ಣು ಬಿಟ್ಟರೂ ನೀನೆ ಕಣ್ಣು ಮುಚ್ಚಿದರೂ ನೀನೆ! ಯಾಕೇ ಹೀಗೆ ಕಾಡ್ತಿದಿಯಾ..? ಅದ್ಯಾವ ಘಳಿಗೇಲಿ ನಿನ್ನ ನೋಡಿದ್ನೋ ನಿನ್ ರೂಪ ನನ್ ಕಣ್ಣಲ್ಲಿ ಹಾಗೆ ತುಂಬಿಕೊಂಡು ಬಿಟ್ಟಿದೆ. ಆಚೆ ಈಚೆ ಸುಳಿತಾನು ಇಲ್ಲ ಕಣೇ. ಒಂಥರಾ ಸನ್ಯಾಸಿ, ಹೆಚ್ಚೆಚ್ಚು ವನವಾಸಿಯಾಗಿದ್ದೆ ನಾನು. ಕಣ್ಣುಗಳಿಗೂ ಕನಸುಗಳಿಗೂ ಎಣ್ಣೆ ಸೀಗೆಕಾಯಿ ಸಂಬಂಧ ಇತ್ತು. ಎದೆ ಗೂಡು ಹಳೆ ಕಾಲದ ಪಾಳು ಮನೆಯಂತಾಗಿತ್ತು. ಮನಸಂತೂ ಬೆಳಕೇ ಬೀಳದಿರೊ ಕಗ್ಗತ್ತಲ ಕಾಡಾಗಿತ್ತು. ಎಲ್ಲೆಂದರಲ್ಲಿ ಅಲೀತಾ, ಕಾರಣಗಳಿಲ್ಲದ ಕೆಲಸ ಮಾಡ್ತಾ, ಕನಸುಗಳ … Read more

ಕೀರ್ತಿಶೇಷರಾಗಲು ದಾರಿ: ರಾಘವೇಂದ್ರ ಈ. ಹೊರಬೈಲು

ಭಾರತವು ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ದೇಶ. ಇವುಗಳಿಂದಾಗಿಯೇ ಪ್ರಪಂಚದಲ್ಲಿ ಒಂದು ವಿಭಿನ್ನ, ವಿಶಿಷ್ಟ ದೇಶವಾಗಿ ಗುರುತಿಸಿಕೊಂಡಿದೆ. ಆಚರಣೆ-ಸಂಪ್ರದಾಯಗಳ ಹೆಸರಿನಲ್ಲಿ ಕೆಲವೇ ಕೆಲವು ಹೀನ ಮತ್ತು ಅಸಹ್ಯಕರವಾದ ಮೂಢನಂಬಿಕೆಗಳಿವೆ. ಉದಾಹರಣೆಗೆ ಯಾರೋ ತಿಂದು ಬಿಟ್ಟಿರುವ ಎಂಜಲು ಎಲೆಗಳ ಮೇಲೆ ಉರುಳು ಸೇವೆ ಮಾಡಿದರೆ ರೋಗ-ರುಜಿನಗಳು ಕಡಿಮೆಯಾಗುತ್ತವೆ ಎಂಬ ನಂಬಿಕೆ ಇರುವ ‘ಮಡೆ ಸ್ನಾನ’ ಮುಂತಾದವು. ಅವುಗಳನ್ನು ಹೊರತುಪಡಿಸಿ ನೋಡಿದರೆ ನಮ್ಮ ದೇಶದ್ದು ಮಹಾನ್ ಶ್ರೀಮಂತ ಸಂಸ್ಕೃತಿ. ಇಂಥ ಸಂಸ್ಕೃತಿಯ ಜೊತೆಗೆ “ಸತ್ತ ಮೇಲೆ ಅಂಗಾಂಗಗಳ ದಾನ” ಎಂಬುದು … Read more

ಪಿತೃ ಪೂಜೆಯ ಊಟ: ಸಾವಿತ್ರಿ ವಿ. ಹಟ್ಟಿ

ನಾನು, ಅಕ್ಕ ಮತ್ತು ಅವ್ವ ಆಬಾಲಿ ಹೂವು ಹೆಣ್ಕೊಂತ ಕುಂತಿದ್ವಿ. ಅಕ್ಕ ಮತ್ತು ಅವ್ವ ಮನೆತನಕ್ಕ ಸಂಬಂಧ್ಸೀದ ವಿಷಯ ಮಾತಾಡ್ಕೊಂತ ಇದ್ರು. ಮಧ್ಯೆ ಮಧ್ಯೆ ನಾನು ಅವರ ಮಾಲೀಗೂ ನನ್ನ ಮಾಲೀಗೂ ಹೋಲಿಸಿ ನೋಡಿ ಜಾಸ್ತಿ ನಾನೇ ಕಟ್ಟಿದ್ದು ಅಂತ ಧಿಮಾಕಿನಿಂದ ಹೂವು ಹೆಣೆಯಾಕ್ಹ್ಹತ್ತಿದ್ದೆ.  ಆ ಹೊತ್ಗೆ ಹೊರಬಾಗಿಲ ಹತ್ರ ಯಾರದಾ ನೆಳ್ಳು ಬಿದ್ದಂಗಾತು. ಬಾಗಿಲ ತೋಳು ಹಿಡಿದು ಹಣಕಿ ಹಾಕಿದಂಗಾತು. ಎದ್ದು ಹೋಗಿ ನೋಡಿದೆ. ಯಾರೂ ಇರಲಿಲ್ಲ. ಯಾವಾ ಸಣ್ಣ ಹುಡುಗ್ರು ಆಟ ಆಡ್ಕೊಂತ ಬಂದು … Read more

ಸಂಸಾರ ಸಾಗರದಿ ಅನುಮಾನದ ಅಲೆಗಳು: ಹೊರಾ.ಪರಮೇಶ್ ಹೊಡೇನೂರು

 "ಸಂಸಾರ" ಎಂಬುದು ಅನಾದಿ ಕಾಲದಿಂದಲೂ ಗಂಡು ಮತ್ತು ಹೆಣ್ಣುಗಳ ನಡುವೆ ಸೃಷ್ಟಿಸಿಕೊಳ್ಳುವ ಅಪೂರ್ವ ಅನುಬಂಧವಾಗಿದ್ದು ಅವರ ನಡುವಿನ ದೈಹಿಕ ಮತ್ತು ಮಾನಸಿಕ ಸಮ್ಮಿಲನದ ಫಲವಾಗಿ ಪಡೆಯುವ ಮಕ್ಕಳಿಂದಾಗಿ ಪೀಳಿಗೆಗಾಗಿ ಸರಣಿ ಹರಿದುಕೊಂಡು ಬಂದಿವೆ. "ಮದುವೆ" ಎಂಬ ಸಾಮಾಜಿಕ ಒಪ್ಪಂದದ ಪರವಾನಗಿ ಪಡೆದು ಜೀವನ ಸಂಗಾತಿಗಳಾಗಿ, ಪರಸ್ಪರ ನಿಷ್ಠರಾಗಿ ಬಾಳುವ ದಂಪತಿಗಳ ಬೇಕು ಬೇಡಗಳು, ಕಷ್ಟ-ಸುಖಗಳು, ಇಷ್ಟ-ಅನಿಷ್ಟಗಳು, ನೀತಿ-ನಿರ್ಧಾರಗಳು ಬಹುತೇಕ ಇಬ್ಬರೂ ಕೂಡಿ ಚರ್ಚಿಸುವ ಮೂಲಕ ಕೈಗೊಂಡರೂ, ಹೆಚ್ಚಾಗಿ ಜೀವನೋಪಾಯಕ್ಕಾಗಿ ದುಡಿಯುವ ಪುರುಷನೇ(ಪತಿ) ಮನೆಯ ಯಜಮಾನಿಕೆ ವಹಿಸಿದರೆ, ಮಹಿಳೆಯು(ಸತಿ) … Read more

ಅನನ್ಯ ವ್ಯಕ್ತಿಚಿತ್ರಕ, ಸುಹೃದ ವಿಶಾರದ: ಎಸ್. ಜಿ. ಸೀತಾರಾಮ್, ಮೈಸೂರು.

[ಕನ್ನಡ ಸಾಹಿತ್ಯಾಕಾಶದ ಕೃಷಿಋಷಿಮಂಡಲದಲ್ಲಿ ತಮ್ಮ ವಿದ್ವಚ್ಛಕ್ತಿಪ್ರಭೆಯಿಂದ ವಿರಾಜಮಾನರಾಗಿರುವ, ಮತ್ತು ವಾತ್ಸಲ್ಯಾದಿ ಗುಣೋಜ್ವಲತೆಗಳಿಂದ ತಮ್ಮ ಅಭಿಮಾನಿಗಳ ಹೃದಯಾಕಾಶದಲ್ಲಿಯೂ ಅಂತೆಯೇ ಶೋಭಿಸುತ್ತಿರುವ,  ಮೈಸೂರಿನ ಪ್ರೊ. ಟಿ.ವಿ. ವೆಂಕಟಾಚಲ ಶಾಸ್ತ್ರಿಯವರು ಈಗ ಸಹಸ್ರ  ಪೂರ್ಣಚಂದ್ರ ದರ್ಶನ ಪ್ರತಿಫಲನದಿಂದ ಮತ್ತಷ್ಟು ಕಾಂತಿಯುತರಾಗಿದ್ದಾರೆ.  ಮಾರ್ಚ್-೨೦೧೫ರಲ್ಲಿ ಜರುಗಿದ ಅವರ ಸಹಸ್ರ ಚಂದ್ರ ದರ್ಶನೋತ್ಸವ ಸಂದರ್ಭದಲ್ಲಿ ಅವರಿಗಿಲ್ಲೊಂದು ಬರಹಮಣಿಹ.]         ಪ್ರೊ. ಟಿ.ವಿ. ವೆಂಕಟಾಚಲ ಶಾಸ್ತ್ರಿಯವರು ಸಾಹಿತ್ಯಶಾಸ್ತ್ರಗಳಲ್ಲಿ ವೆಂಕಟಾಚಲಸದೃಶರೇ ಸರಿ. ಆ ದೊಡ್ಡಬೆಟ್ಟದ ದಾರಿಯಲ್ಲಿ ಸುಳಿಯುವ ಸಂಭವವೂ ಇಲ್ಲದ ನನಗೂ-ಅವರಿಗೂ ನಡುವೆ ಇರುವ ಒಡನಾಟವು, … Read more

ಅವಳೊಡನೆ ಕೊನೇ ಹೋಳಿ…: ಸಖ್ಯಮೇಧ

ಅವಳ ಕೆನ್ನೆಯ ಗುಳಿ ತುಂಬಾ ಬಣ್ಣ ಬಳಿದ ಆ ಕೊನೇ ಹೋಳಿ ನೆನೆದರೇ ಮನದಲ್ಲಿ ವಿಷಾದದ ಗಾಳಿ ಏಳುತ್ತದೆ. ಏಕೆಂದರೆ ಅದೇ ಕೊನೆ, ಬಣ್ಣದ ಹೋಳಿಯೂ ಅವಳೊಡನೆ ದೂರಾಯಿತು….ಹೋಳಿಯ ತಲೆಬುಡ ತಿಳಿದಿರದಿದ್ದರೂ ಅದೊಂದು ನಿರೀಕ್ಷೆಯ ಹಬ್ಬ. ಬಟ್ಟಲುಕಂಗಳ ಆ ಹುಡುಗಿಯ ನುಂಪು ಕೆನ್ನೆಗಳಿಗೆ ಮೃದುವಾಗಿ ಬಣ್ಣ ಸವರಿ ಕಂಗಳಲ್ಲಿ ಮೂಡುವ ಬೆಳಕು ಕಾಣಲೆಂದು ಕಾತರಿಸಿದ ಹಬ್ಬ. ಜೊತೆಗೆ ಓರಗೆಯವರ ಜತೆಗೂಡಿ ಬಣ್ಣದ ಲೋಕದಲ್ಲಾಡುತ್ತಾ ಕಳೆದು ಹೋಗುವ ಸಂತಸ … ಅಪ್ಪನ ಕಿಸೆಯಿಂದ ಎಗರಿಸುವುದಲ್ಲದೇ ಶಾಲೆಗೆ ನಡೆದುಕೊಂಡೇ ಹೋಗಿ … Read more

ಸಾಧಕರ ಶ್ವಾಸ, ಆತ್ಮವಿಶ್ವಾಸ: ಹೊರಾ.ಪರಮೇಶ್ ಹೊಡೇನೂರು

          ವಿದ್ಯಾರ್ಥಿ ಜೀವನದಲ್ಲಿ ಕಲಿಕಾ ಫಲವನ್ನು ಯಶಸ್ವಿಯಾಗಿ ಪಡೆಯಲು ಅಗತ್ಯವಾಗಿ ಬೇಕಾದ ಅಂಶಗಳಲ್ಲಿ ಪ್ರಮುಖವಾದದ್ದು 'ಆತ್ಮವಿಶ್ವಾಸ'. ಎಷ್ಟೇ ಬುದ್ಧಿ ಶಕ್ತಿ, ತಾರ್ಕಿಕ ಸಾಮರ್ಥ್ಯ, ಸೃಜನಶೀಲ ಸ್ವಭಾವ ಹೊಂದಿದ್ದರೂ ಆತ್ಮವಿಶ್ವಾಸ ಇಲ್ಲದಿದ್ದರೆ ಪ್ರಯೋಜನವಾಗುವುದಿಲ್ಲ. "ಮೇಕೆದಾಟು"ವಿನ ಬಗ್ಗೆ ಗೊತ್ತಲ್ವ. ಹಿಂದೊಮ್ಮೆ ಅಲ್ಲಿ ಮೇಕೆಗಳನ್ನು ಮೇಯಿಸುತ್ತಿರುವಾಗ, ಒಂದು ಮೇಕೆಯು ಕಾಲುವೆಯ ಆಚೆ ಬದಿಯಲ್ಲಿ ಇದ್ದ ಹಸಿರು ಸೊಪ್ಪನ್ನು ತಿನ್ನುವ ಆಸೆ ಉಂಟಾಗಿ, ಅಗಲವಾದ ಆ ಕಾಲುವೆಯನ್ನು ಅಗಾಧವಾದ ಆತ್ಮವಿಶ್ವಾಸದಿಂದ ಒಂದೇ ನೆಗೆತಕ್ಕೆ ಜಿಗಿದು ದಾಟಿ ತನ್ನ … Read more

ಹೀಗೊಂದು ಕ(ವ್ಯ)ಥೆ: ಲಿಯೋ ರೆಬೆಲ್ಲೋ

"ಅಮ್ಮ.. ಚಾರ್ಲಿ ಮಾಮ ಬಂದಿದ್ದಾರೆ" ಅಕ್ಕನ ಮಗ ಸುಕೇಶ್ ಅಡಿಗೆಮನೆಯಲ್ಲಿದ್ದ ಅಮ್ಮನಿಗೆ ಕೂಗಿ ಹೇಳಿದ್ದು ಕಿವಿ ಮೇಲೆ ಬಿದ್ದಾಗ ಅವನ ಹ್ರದಯದಲ್ಲಿ ಕಸಿವಿಸಿಯಿಂದ ಆಗಲೇ ಸುನಾಮಿ ಅಲೆಗಳು ಆರಂಭಗೊಂಡಿದ್ದವು. ಮಕ್ಕಳ ಜೊತೆಜೊತೆಗೆ ಮೊಮ್ಮಕ್ಕಳೂ ತಾಯಿಗೆ ಅಮ್ಮ ಎಂದು ಕರೆಯುವುದು ಆ ಕುಟುಂಬದ ಅಭ್ಯಾಸ. ಬಾಬೂ… ಚಾರ್ಲಿ ಬಂದಿದ್ದಾರೆ ಹೊರಡು, ಸಮಯವಾಗಿದೆ ಎಂದು ಅಮ್ಮ ಕೂಗೊಟ್ಟಾಗ ಕೋಣೆಯ ಮಂಚದ ಮೇಲೆ ಕುಳಿತವನ ಕಾಲುಗಳಿಗೆ ಬಲವಿಲ್ಲದಂತಾಗಿ ಮೇಲೇಳಲು ಸಾಧ್ಯವಾಗಲಿಲ್ಲ, ಕೆಲಕ್ಷಣಗಳ ನಂತರ ಸುಧಾರಿಸಿಕೊಂಡು ಹೊರಡುವ ವೇಳೆ ಕೈಯನು ಅದುಮಿಡಿದ ಅವಳು … Read more

ನನ್ನ ಮೊದಲ ಲೇಖನ: ಶೀತಲ್

ಮೊದಲ ಬಾರಿಗೆ ಬ್ಯಾಟ್ ಹಿಡಿದು, ಮೊದಲ  ಬಾಲ್ ನಲ್ಲೇ ಸಿಕ್ಸರ್ ಹೊಡೆದ ಖಿಲಾಡಿಗಳು ಬಹುಶಃ ಯಾರೂ ಇಲ್ಲವೇನೋ, ಹಾಗೆಯೇ ಮೊದಲ ಬಾರಿಗೆ ಪತ್ರಿಕೆಯಲ್ಲೊಂದು ಲೇಖನ ಎಲ್ಲಾ ಸಣ್ಣ-ಪುಟ್ಟ ಬರಹಗಾರರಂತೆ ನನ್ನದೂ ಒಂದು ಕನಸಾಗಿದೆ. ಹೇಗೆ ಸಿಕ್ಸರ್ ಹೊಡೆಯಲು ಆ ಮೊದಲ ಬಾರಿ ಬ್ಯಾಟ್ ಹಿಡಿದ ಖಿಲಾಡಿಗೆ ಆಗಲಿಲ್ಲವೋ ಹಾಗೆಯೇ ನನ್ನ ಲೇಖನವೂ  ಪ್ರಕಟವಾಗಲಿಲ್ಲ … ಸಿಕ್ಸರ್ ಹೊಡೆಯಲಾಗಲಿಲ್ಲ ಎಂದ ಮಾತ್ರಕ್ಕೆ ಪ್ರಯತ್ನವನ್ನು ಬಿಡಲು ಸಾಧ್ಯವೇ? ಖಂಡಿತಾ ಇಲ್ಲ …. ಬರೆಯುತ್ತಲೇ ಇದ್ದೇನೆ ಆದರೆ ಯಾವ ಬಾಲ್ ಗೆ … Read more

ಅವರವರ ಭಾವಕ್ಕೆ: ಅಭಿಲಾಷ್ ಟಿ ಬಿ

"ಮಾನವ ಮೊದಲಿನಿ೦ದಲೂ ನಿಸರ್ಗದ ಜೊತೆಯಲ್ಲಿ ಅವಿನಾಭಾವ ಸ೦ಬ೦ಧವನ್ನು ಬೆಳೆಸಿಕೊ೦ಡಿದ್ದಾನೆ. ಜಗದ್ಗುರು ಶ೦ಕರಚಾರ್ಯರು ಆನ೦ದಲಹರಿಯಲ್ಲಿ "ಶಿವಾ ಶಕ್ತ್ಯಾ" ಎ೦ದು ಉಲ್ಲೇಖಿಸಿದ ಹಾಗೆ ಪ್ರಕೃತಿ ಪುರುಷ ಮತ್ತು ಶಕ್ತಿಯ ಸಮಾಗಮ. ಈ ವಿಚಾರಗಳು ನಮ್ಮ ಗ್ರಾಮೀಣ ಜನರಲ್ಲಿ ಹೇಗೆ ಮೂಡಿಬ೦ದಿದೆ ಎ೦ಬುದನ್ನು ನಾನು ಇಲ್ಲಿ ಸ೦ಕ್ಷಿಪ್ತವಾಗಿ ಚಿತ್ರಿಸಲು ಪ್ರಯ್ನತಿಸಿದ್ದೇನೆ" -ಅಭಿಲಾಷ್ ಟಿ ಬಿ                  ಎಲ್ಲೋ ದೂರದಲ್ಲಿ ಅರ ಬಡೆಯುವ ಶಬ್ದ ಕೇಳುತಿತ್ತು. ಬರುಬರುತ್ತಾ ಕ್ಷೀಣ ದನಿ ಏರುತ್ತಾ ಹೋಯಿತು.  ಸಿಟಿಯಿ೦ದ ಬ೦ದಿದ್ದ ನನ್ನ … Read more

ಫ಼ೈಂಡಿಂಗ್ ಫ಼ಾನ್ನಿ ಮತ್ತು ನಮ್ಮೊಳಗಿನ ಮುಗಿಯದ ಹುಡುಕಾಟ: ಪ್ರಶಾಂತ್ ಭಟ್

ಈಗ ನನ್ನ ಬಹಳ ಕಾಡಿದ ಒಂದು ಸಿನಿಮಾ ಬಗ್ಗೆ ಬರೆಯಬೇಕು.  ಅದರಲ್ಲಿ ಬರುವ ಒಂದು ಡೈಲಾಗ್ ಬಗ್ಗೆ 'ನಮ್ಮ ರಾಜ್ಯಕ್ಕೆ ಅಪಮಾನವಾಯಿತು' ಅಂತ ಬೊಬ್ಬಿರಿದ ನನ್ನ ರಾಜ್ಯದ ಕೆಲವರ ಬಗ್ಗೆ ನಿಜಕ್ಕೂ ಕನಿಕರವಿದೆ. ಹೌದು. ಇದು ಅದೇ ಸಿನಿಮಾ. 'ಫ಼ೈಂಡಿಂಗ್ ಫ಼ಾನ್ನಿ' ಹೋಮಿ ಅಡಜನಿಯ ನಿರ್ದೇಶನವಿರುವ  (ಇವನ ಬೀಯಿಂಗ್ ಸೈರಸ್ ಕೂಡ ಒಳ್ಳೆಯ ಪ್ರಯತ್ನ) ಕೆಲವು ಕಡೆ 'ಲೆಟ್ಟರ್ಸ್ ಟು ಜೂಲಿಯಟ್' ಅನ್ನು ಹೋಲುತ್ತದೆ. ಅರ್ಜುನ್ ಕಪೂರ್, ದೀಪಿಕಾ ಪಡುಕೋಣೆ (ಇವಳ ಸ್ಕರ್ಟ್ ನ ಅಂದವನ್ನು ಬಣ್ಣಿಸಲೇ?) … Read more

ಅಯ್ಯೋ ಅವ್ರು ಏನ್ ಅಂದ್ಕೊತಾರೋ !!: ಸಂತೋಷ್ ಗುರುರಾಜ್

ಇದು ನಮ್ಮ ನಿಮ್ಮೆಲ್ಲರ  ಅತೀ ದೊಡ್ಡ  ಕಾಡುವ ಪ್ರಶ್ನೆ ? ಇದೊಂದೇ ಡೈಲಾಗ್ ಇಂದ ಕೆಲವರು ತಮ್ಮ ಜೀವನದ ಗುರಿ ಮುಟ್ಟಲು ಆಗುವುದಿಲ್ಲ. ಇದನ್ನು ಯಾರೋ ನಮಗೆ ಆಗದೇ ಇರುವವರು ಮಾಡುವುದಲ್ಲ ನಮಗೆ ನಾವೇ ಮಾಡಿಕೊಳ್ಳುವುದು. ಇದು ಒಂತರಾ ಮಾನಸಿಕ ರೋಗ. ಇದು ಪ್ರತಿಯೊಬ್ಬನ ಜೀವನದಲ್ಲಿ ನಡೆಯುವ ನೆಗೆಟಿವ್ ಕಮಾಂಡ್. ಅದು ಎಷ್ಟರ ಮಟ್ಟಿಗೆ ಅಂದ್ರೆ ಆ ಕಮಾಂಡ್ ಇಂದ ನಾವು ತಪ್ಪಿಸಿಕೊಳ್ಳಲು ಸಾಕಷ್ಟು ಸಮಯ ಬೇಕಾಗುತ್ತದೆ, ಅಷ್ಟರಲ್ಲಿ ವಯಸ್ಸು ಮುಗಿದಿರುತ್ತದೆ. ಈ ಕಮಾಂಡ್ ದಾಟಿ ದೈರ್ಯದಿಂದ … Read more

ತಿರುಗುಬಾಣ: ಬಸವರಾಜ ಎಂ.

ಆಫೀಸ್ ಗೆ ತಡವಾಗುತ್ತಿತ್ತು. ಇಸ್ತ್ರಿ ಮಾಡಿದ ಬಟ್ಟೆ  ಬೇರೆ ಇರಲಿಲ್ಲ. ಮಗನಿಗೆ ಹೇಳೋಣವೆಂದುಕೊಳ್ಳುವ ಹೊತ್ತಿಗೆ ಗಾದೆ ನೆನಪಿಗೆ ಬಂತು. "ಅಪ್ಪ ಮಾಡಿದ್ದು ಉತ್ತಮ,  ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಆಳು" ಅಂತ. ಮನೆಯಲ್ಲಿ ಆಳು ಇಡಲಂತೂ ಸಾಧ್ಯವಾಗಿಲ್ಲ ಹೋಗಲಿ ನಾನೆ ಮಾಡೋಣ ಎಂದುಕೊಂಡರೆ ನನಗೊಂದು ಜಿಜ್ಞಾಸೆ. ಅದೇನೆಂದರೆ ನನ್ನ ಅಪ್ಪನನ್ನು  ಪರಿಗಣಿಸಿದರೆ ನಾನು ಮಾಡಿದ್ದು ಮಧ್ಯಮವಾಗುತ್ತದೆ. ಮಗನಿಗೆ  ಹೇಳೋಣವೆಂದರೆ ಮತ್ತೆ ಮಧ್ಯಮದ ವಿಚಾರ ಬಂತು. ಈಗ ನನ್ನ ಕೋಪ ತಿರುಗಿದ್ದು ನನ್ನ ಅಂಗಿಯ ಇಸ್ತ್ರಿಯ ಮಾಡದ … Read more

“ಮಕ್ಕಳ ಸುರಕ್ಷತೆಗಿರಲಿ ಮೊದಲ ಆದ್ಯತೆ” : ಹೊರಾ.ಪರಮೇಶ್ ಹೊಡೇನೂರು

"ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಹೊಣೆ" ಎಂಬ ಸಾಮಾಜಿಕ ಕಾಳಜಿಯ ಘೋಷವಾಕ್ಯ ಇಂದಿನ ದಿನಮಾನಗಳಲ್ಲಿ ತುಂಬಾ ಚಾಲ್ತಿಯಲ್ಲಿದೆ. ಏಕೆಂದರೆ, ಭವಿಷ್ಯದ ನಾಗರೀಕರಾಗಿರುವ ಮಕ್ಕಳ ಬಾಲ್ಯವು ತುಂಬಾ ಆಯಕಟ್ಟಿನದ್ದಾಗಿದ್ದು, ತಮ್ಮ ಮನೆಯ, ಶಾಲೆಯ ಮತ್ತು ಸಮುದಾಯದ ನಡುವೆ ಸಹಜ ತುಂಟಾಟ, ತರಲೆ, ಚೇಷ್ಟೆ, ಹುಡುಗಾಟಿಕೆಗಳಿಂದ ಕೂಡಿರುತ್ತದೆ ಮತ್ತು ಈ ಸಂದರ್ಭಗಳಲ್ಲಿ ಅಕಾಸ್ಮಾತ್ ಆಗಿ ಅಚಾತುರ್ಯಗಳು ಉಂಟಾದಾಗ ಅನಾಹುತಗಳೇ  ಜರುಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಂತಹ ಕೆಲವು ಸಂದರ್ಭಗಳು, ಸಾಧ್ಯತೆಗಳ ಬಗೆಗೆ ಒಂದಿಷ್ಟು ಮೆಲುಕು ಹಾಕುತ್ತಾ, ಮಕ್ಕಳ ಸುರಕ್ಷತೆಗೆ ಹೇಗೆ ಹೊಣೆಗಾರಿಕೆ ನಿಭಾಯಿಸಬೇಕೆಂಬುದನ್ನು … Read more

ಸ್ವಗತ: ತ್ರಿವೇಣಿ ಟಿ.ಸಿ.

ನಿನ್ನ ಬಾಳನ್ನು ಬೆಳಗೋಕ್ ಬಂದ ಹುಡುಗಿ ಇನ್ನೊಂದು ಹೆಣ್ಣಿನ ಬಾಳನ್ನು ಕತ್ತಲೆ ಮಾಡಿದ್ದು ನಿಜವಲ್ವೆ. ಕನಸುಗಳ ಬಿತ್ತಿ ನೀರು ಸುರಿಸದೆ ಸುರುಟಿದೆ ನನ್ನ ಕನಸು.  ೨೦೧೦ ರ ಒಂದು ಮಧ್ಯಾನ್ಹ ಬಂದ ಇ-ಮೇಲ್,  ೨೦೦೯ ರಲ್ಲಿ ಯಾವುದೋ ಹಳೆ ಪೇಮೆಂಟ್ ಕೊಟ್ ಬಿಡಿ ಅಂತ ಮೆಸ್ಸೇಜು…  ಅವತ್ತಿಗೆ ರಿಪ್ಲೈ ಆಯ್ತು, ಕೊಡೋಣ ತಡ್ಕೊಳಪ್ಪ ……  ಮತ್ತೆ ಮೂರನೇ ದಿವಸಕ್ಕೆ ಒಂದು ರಿಮೈನ್ಡರ್  ಕೊಡ್ತೀರೋ ಇಲ್ಲವೋ.. ಫೋನೆತ್ತಿ ಮಾತಾಡಿ ತಡೆದುಕೊಳ್ ಪುಣ್ಯಾತ್ಮ ನಿನ್ನ ಚೆಕ್ಕುಗೆ ರೆಕ್ವಿಸಿಶನ್ ಹಾಕಿದೀನಿ ಡೆಲ್ಲಿ … Read more

ಮಿತ್ರ ಶ್ರೇಣಿಯೊಳ್ ವಾಣಿ: ಪಿ.ಎಂ.ಸುಬ್ರಮಣ್ಯ, ಬ.ಹಳ್ಳಿ

ಕಾಲದೊಳಗೆ  ವಸಂತ ವಿದ್ಯಾ ಜಾಲದೊಳಗೆ ಕವಿತ್ವ ಗಜವೈ ಹಾಳಿಯಲಿ ದೇವೆಂದ್ರ ಮಿತ್ರಶ್ರೇಣಿಯೊಳು ವಾಣಿ ಭಾಳನೇತ್ರನು ದೈವದಲಿ ಬಿ ಲ್ಲಾಳಿನಲಿ ಮನ್ಮಥನು ಧನದಲಿ ಹೇಳಲೇನಭಿಮಾನವೇ ಧನವೆಂದನಾ ವಿದುರ   (ಕುಮಾರವ್ಯಾಸ ಭಾರತ) ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎನ್ನುವ ಗಾದೆಮಾತು ಪ್ರಸ್ತುತ ಸನ್ನಿವೇಶದಲ್ಲಿ ಅರ್ಧಸತ್ಯವಾಗ್ತಿದೆ.  ಏಕೆಂದರೆ ಈ ಗಾದೆಯ ಮೊದಲ ಅರ್ಧ ಸರಿ ಎನಿಸಿದರೂ ಉಳಿದರ್ದ ಏಕೋ ಸರಿ ಕಾಣ್ತಿಲ್ಲವೇನೋ ಎನಿಸುತ್ತೆ.  ಒಲೆ  ಎನ್ನೋ ಮಾತೇ ಮರೆತು ಹೋಗಿದೆ.  ಜನಸಂಪದ ಗ್ಯಾಸ್‌ಸ್ಟವ್, ಎಲೆಕ್ಟ್ರಿಕಲ್‌ಸ್ಟವ್, ಎಲೆಕ್ಟ್ರಾನಿಕ್ ಓವೆನ್, … Read more

ನಿಮ್ಮ ಗಮನಕ್ಕೆ

ಬದುಕಿನ ಮೊದಲ ಹನ್ನೆರಡು ವರ್ಷಗಳನ್ನು ಹಾಸನದಲ್ಲಿ ಕಳೆದಿರುವ ಸಿಂಧು ಪದವಿಯವರೆಗೆ ಓದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ. ಕರ್ನಾಟಕ ವಿಶ್ವ ವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕೆ.ಡಿ.ಸಿ.ಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಪತಿ ಚಂದ್ರಶೇಖರ ಮತ್ತು ಮಗಳು ಸಿಂಚನಳೊಂದಿಗೆ ಶಿರಸಿಯಲ್ಲಿ ವಾಸವಾಗಿದ್ದಾರೆ.   ಇವರ ನಗುತ್ತೇನೆ ಮರೆಯಲ್ಲಿ ಕವನ ಸಂಕಲನ ೨೦೧೦ರಲ್ಲಿ ಹಾಗೂ ಕನಸಿನ ಕಾಡಿಗೆ ಕಥಾಸಂಕಲನ ೨೦೧೪ರಲ್ಲಿ ಪ್ರಕಟಗೊಂಡಿದೆ. ಇವರ ಮತ್ತೊಂದು ಕವನ ಸಂಕಲನ "ರಸ್ತೆಯಲ್ಲಿ ಮೇ ಫ್ಲವರ್" ಈ ತಿಂಗಳು ಬಿಡುಗಡೆಯಾಗುತ್ತಿದೆ. ಪುಸ್ತಕ … Read more