ಮಲೆನಾಡಿನ ದೀಪಾವಳಿ: ವೇದಾವತಿ ಹೆಚ್. ಎಸ್.

“ಮಲೆನಾಡು”ಎಂದರೆ ಅದೊಂದು ಸುಂದರವಾದ ವನಸಿರಿಗಳ ನಡುವೆ ಕಂಗೋಳಿಸುವ ಊರೆಂದರೆ ತಪ್ಪಾಗಲಾರದು. ಒಂದೊಂದು ಮನೆಯೂ ಅವರವರ ಜಮೀನುಗಳ ಮಧ್ಯದಲ್ಲಿ ಸುಂದರವಾಗಿ ಕಟ್ಟಿಕೊಂಡು, ಅವರಿಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಂಡು ಜೀವನ ನೆಡೆಸಿಕೊಂಡು ಬಂದಿರುತ್ತಾರೆ. ಅವರಿಗೆ ಅವರದೇ ಆದ ಸಂಪ್ರದಾಯಗಳು ಹಳೆಯ ತಲೆಮಾರಿನಿಂದಲೂ ಬಳುವಳಿಯಾಗಿ ಬಂದಿರುತ್ತದೆ. ದೀಪಾವಳಿ ಹಬ್ಬವನ್ನು ನಮ್ಮ ಮಲೆನಾಡಿನ ಜನರು ಐದು ದಿನಗಳ ಕಾಲ ಸಂಭ್ರಮದಿಂದ ಆಚರಣೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಹಿಂದಿನ ತಲೆಮಾರಿನ ಜನರು ನಡೆಸಿದಷ್ಟು ಆಚರಣೆಗಳು ಇಂದು ಕಡಿಮೆಯಾಗಿದ್ದರೂ, ಅದನ್ನು ಸ್ಪಲ್ಪ ಮಟ್ಟಿಗೆಯಾದರೂ ಇಂದಿನ ತಲೆಮಾರಿನ ಜನರು … Read more

ನನ್ನ ಪಾಲಿನ ಮತ್ತೊಂದು ಮಾತೃರೂಪ: ಎಂ.ಎಲ್.ನರಸಿಂಹಮೂರ್ತಿ

ಪ್ರತಿ ಹಬ್ಬಕ್ಕೂ ನಮ್ಮ ಹೊಸ್ತಿಲಲ್ಲಿ ಕೂತು ಅವರ ಹೊಸ್ತಿಲ ಕಡೆ ನೋಡುವುದು ರೂಢಿಯಾಗಿಬಿಟ್ಟಿತ್ತು ನಾನು ಸಹಜವಾಗಿವೇ ತೊದಲು ನುಡಿಗಳನ್ನು ಆರಂಭಿಸಿದಾಗನಿಂದ ಇಲ್ಲಿಯ ವರೆಗೆ ಸೋಮು ಒಮ್ಮೊಮ್ಮೆ ಮಾತ್ರಕ್ಕೆ ನರಸಿಂಹ ಎಂದು ತಾಯ ಪ್ರೀತಿ ಹಂಚಿ ತಾಯಿಯಷ್ಟೆ ಅಕ್ಕರೆಯಿಂದ ನೋಡುಕೊಳ್ಳುವ ಮತ್ತೊಂದು ಮಾತೃಹೃದಯ ನಮ್ಮೂರಲ್ಲಿ ಇದಾರೆ. ನನಗೆ ಎರಡು ವರ್ಷ ವಯಸ್ಸಾಗಿದ್ದಾಗ ಬಾಲ ವ್ಯಾಧಿಯಿಂದಾಗಿ ಸತ್ತು ಹೋಗುತ್ತಿದ್ದನಂತೆ. ಆಗ ನಮ್ಮ ಅಪ್ಪ ಅಮ್ಮ, ಅಜ್ಜ ಅಜ್ಜಿ ಹೇಳಿದ ಜಾಗ, ಕೇಳಿದ ವೈದ್ಯರ ಬಳಿಗೆ , ಸೂಚಿಸಿದ ಮಂತ್ರಗಾರರ ಬಳಿಗೆ … Read more

ಗಡಿಯಾರ ರಿಪೇರಿ: ಗುಂಡೇನಟ್ಟಿ ಮಧುಕರ

ನಾನು ಚಿಕ್ಕವನಿದ್ದಾಗ ಅಪ್ಪನಿಂದ ಹಣವನ್ನಿಸಿದುಕೊಂಡು ಗಡಿಯಾರ ರಿಪೇರಿಯನ್ನು ಮಾಡಿಸಿಕೊಂಡು ಬಂದ ಪ್ರಸಂಗವನ್ನು ನಿಮ್ಮ ಮುಂದೆ ಹೇಳಬೇಕಿದೆ. ನನ್ನ ಹಾಗೂ ಗಡಿಯಾರದ ನಡುವೆ ಅನ್ಯೋನ್ಯತೆ ಅದು ಹೇಗೆ ಬೆಸೆದುಕೊಂಡಿತ್ತೊ ಏನೋ, ನಾನು ಚಿಕ್ಕವನಿದ್ದಾಗ ನಮ್ಮೂರಿನಿಂದ ಸಮೀಪದ ಊರಾದ ಬೈಲೂರಿಗೆ ಬಸವಣ್ಣನ ಜಾತ್ರೆಗೆಂದು ಅಪ್ಪನ ಭುಜವನ್ನೇರಿ ಎರಡೂ ಕಾಲುಗಳನ್ನು ಜೋತು ಬಿಟ್ಟು ಅಪ್ಪನ ತಲೆಯನ್ನು ಹಿಡಿದುಕೊಂಡು ಕುಳಿತು ಜಾತ್ರೆಗೆ ಹೋಗಿದ್ದೆ. ಅಂದರೆ ಅಪ್ಪನ ಸವಾರಿ ಮಾಡಿದ್ದೆ. ಆ ಜಾತ್ರೆಗೆ ಹೋದಾಗ ಆಸೆ ಪಟ್ಟು ಅಪ್ಪನಿಂದ ಕೊಡಿಸಿಕೊಂಡದ್ದು ಪುಟ್ಟ ವಾಚನ್ನು. ಅಪ್ಪ, … Read more

ಬಿದ್ದಾಗಲೆಲ್ಲಾ ಎತ್ತಿ ಎಚ್ಚರಿಸಿದ ಅಪ್ಪನೆಂಬ ಧೀಮಂತ: ನಾಗರೇಖಾ ಗಾಂವಕರ

ನನ್ನ ಅಪ್ಪನ ಬಗ್ಗೆ ಬರೆಯಲೇನಿದೆ? ಬದುಕಿನ ಹಾಳೆಯಲ್ಲಿ ಮಕ್ಕಳ ಮುಖದಲ್ಲಿಯ ನಗುವಿಗೋಸ್ಕರ ತೇಯ್ದ ಜೀವನದ ಹಾದಿಯಲ್ಲಿ ಕಂಡುಂಡಿದ್ದು ಸಂಕಟಗಳೇ. ಅದೆಷ್ಟು ಆಪ್ತವಾಗಿತ್ತು ಕೆಲವೊಮ್ಮೆ ಅವರ ಮಾತು, ಪ್ರೀತಿ ತುಂಬಿದ ನೋಟ,ಬಾಲ್ಯದ ಬಿಂಬಗಳು ಜೀವ ರಸವೂಡುವ ಪ್ರತಿಮೆಗಳು. ತಂದೆ ತಾಯಿಯೆಂದರೆ ಭಯಮಿಶ್ರಿತ ಪ್ರೀತಿ. ಅಪ್ಪನೆದುರು ಎದೆ ಸೆಟೆಸಿ ಮಗುವಾಗಿದ್ದಾಗ ಹಠಮಾಡಿ ಕಾಡುತ್ತಿದ್ದ ಅದೇ ನಾನು ಕಿಶೋರಾವಸ್ಥೆಗೆ ಬಂದಂತೆ ಬಾಲ್ಯದ ಹುಡುಗಾಟ ಅಲ್ಪಸ್ವಲ್ಪವೇ ಕಣ್ಮರೆಯಾಗಿತ್ತು. ತಂದೆಯೆದುರು ತಲೆ ಎತ್ತಿ ಮಾತನಾಡಲು ಆಗದ ಸಂಕೋಚ ತಾನೆ ತಾನಾಗಿ ಹುಡುಗಿಯರಲ್ಲಿ ಮೂಡುತ್ತದೆ. ಅದಕ್ಕೂ … Read more

ಕನ್ನಡ ಭಾಷೆಯ ಅಳಿವು ಉಳಿವು: ಎಂ.ಎಚ್. ಮೊಕಾಶಿ. 

ಕನ್ನಡಿಗರೆಲ್ಲರೂ ಒಂದು ಭೌಗೋಳಿಕ ವ್ಯಾಪ್ತಿಗೆ ಒಳಪಟ್ಟ ಸಂದರ್ಭಕ್ಕೆ ಈಗ 64 ವರ್ಷಗಳ ಸಂಭ್ರಮ. ಅಲ್ಲಲ್ಲಿ ಚದುರಿ ಹೋಗಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುದಿನ. ಒಂದು ಭಾಷೆ ಸಮಾಜ ಮುಕ್ತವಾಗಿ ಅರಳಬೇಕು. ಪ್ರತಿಯೊಂದು ಜನರ ಅಭಿವೃದ್ದಿಯೇ 1956 ರಲ್ಲಾದ ಭಾಷಾವಾರು ಪ್ರಾಂತದ ರಚನೆಯೇ ಮೂಲ ಉದ್ದೇಶವಾಗಿತ್ತು. ಇಂದು ಹೊಸ ಬದುಕಿಗೆ ಕಾಲಿಡುತ್ತಿರುವ ನಾವು ಈ 64 ವರ್ಷಗಳಲ್ಲಿ ಸಾಧಿಸಿದ್ದೇನು? ಸಾಧಿಸಬೇಕಾದದ್ದೇನು? ಎಂದು ತಿಳಿಯಲು ಇದು ಸಕಾಲವಾಗಿದೆ. 64 ವರ್ಷಗಳ ಹೊಸ್ತಿಲಲ್ಲಿ ನಿಂತು … Read more

ಗೋವಿನ ಹಾಡು: ಆಶಾ ಜಗದೀಶ್..

ಪಕ್ಕದ ಮನೆಯ ಹಸು ಉಸ್ಸು ಬುಸ್ಸು ಎಂದು ನಿಟ್ಟುಸಿರಿಡುತ್ತಾ ಅಲ್ಲಿಯವರೆಗೂ ಮೇಯ್ದದ್ದನ್ನು ಕೂತು ಮೆಲುಕು ಹಾಕುತ್ತಿತ್ತು. ಅತ್ತಲಿಂದ ಬಂದ ಹಸೀನ, ಇಮ್ತಿಯಾಜ಼್ ಆಂಟಿಗೆ ಹಸುವನ್ನು ತೋರಿಸುತ್ತಾ “ಪಾಪ ನೋವು ತಿಂತಾ ಇದೆ… ನಾವು ಮನುಷ್ಯರಾದ್ರೆ ಇಷ್ಟೊತ್ತಿಗೆ ಆಸ್ಪತ್ರೆ ಆ್ಯಂಬುಲೆನ್ಸು ಅಂತ ಓಡ್ತಿದ್ವಿ… ಆದ್ರೆ ಪಾಪ ಮೂಕ ಪ್ರಾಣಿಗಳಿಗೆ ಅದೆಲ್ಲ ಏನೂ ಇಲ್ಲ…” ಅಂದಳು. ಅಲ್ಲಿಯವರೆಗೂ ದಿನನಿತ್ಯ ನೋಡುತ್ತಿದ್ದ ಆ ಹಸು ಗಬ್ಬಾಗಿದೆ ಎಂದು ನನಗೆ ತಿಳಿದಿರಲೇ ಇಲ್ಲ! ಸೋ ಕಾಲ್ಡ್ ನಗರಗಳಲ್ಲಿ ಹುಟ್ಟಿ ಬೆಳೆದ ನಮ್ಮಂಥವರಿಗೆ ಇಂತವೆಲ್ಲ … Read more

ಜೀವನವೊಂದು ಮುರಳಿ- ಸುಖ ಸಂತೋಷ ತರಲಿ: ಎಂ.ಎನ್.ಸುಂದರ ರಾಜ್

ದೀಪಾವಳಿ ಅಂದರೆ ಸಾಕು, ಮಕ್ಕಳು ಪುಳಕಿತಗೊಳ್ಳುತ್ತಾರೆ, ಹಿರಿಯರು ಸಂಭ್ರಮಿಸುತ್ತಾರೆ. ಏಕೆಂದರೆ, ಇದೊಂದು ಬೆಳಕಿನ ಹಬ್ಬ, ಅಜ್ಞಾನವೆಂಬ ಕತ್ತಲನ್ನು ಪರಿಹರಿಸಿ, ಜ್ಞಾನದ ಬೆಳಕನ್ನು ನೀಡುವ ದಿವ್ಯ ಸಂದೇಶವೇ ದೀಪಾವಳಿ. ಈ ಹಬ್ಬದ ವಿಶೇಷತೆಯೇನು ಎಂಬುದನ್ನು ತಿಳಿಯುವುದು ಅವಶ್ಯಕ. ಶ್ರೀ ರಾಂಜಿ ಜೈನ್ ಎಂಬ ಆಧ್ಯಾತ್ಮಿಕ ಗುರುಗಳು ದೀಪಾವಲಿಯ ಸಂದರ್ಭದಲ್ಲಿ ಒಂದೆಡೆ ಮಾತನಾಡುತ್ತಾ ನಮ್ಮ ಜೀವನ ಹೇಗಿರಬೇಕು ಎಂಬುದನ್ನು ಅತ್ಯಂತ ಸೊಗಸಾಗಿ ವಿವರಿಸಿದ್ದಾರೆ. ಜೀವನ ಹೂವಿನ ಹಾಸಿಗೆಯಲ್ಲ, ಅದೊಂದು ಸಮಸ್ಯೆಯ ಗೂಡು ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ ಜೀವನದ ಎಲ್ಲ … Read more

ನಮ್ಮೆಲ್ಲರ ಸಿಪಿಕೆ- ಎಂಬತ್ತರ ಮೊಹಬತ್ತು!: ಡಾ. ಹೆಚ್ ಎನ್ ಮಂಜುರಾಜ್

ಸಿಪಿಕೆ ಮತ್ತು ಅವರ ಕಾವ್ಯ ಕುರಿತ ಬರಹ ಅಪ್ರತಿಮ ವಿದ್ವತ್ತು; ಮಾತೋ ವಿದ್ಯುತ್ತು ! ಸಿಪಿಕೆಯವರನ್ನು ಬಲ್ಲ ಯಾರಿಗೂ ಅನಿಸುವ ಸತ್ಯವಿದು. ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದ ಸಿ ಪಿ ಕೃಷ್ಣಕುಮಾರ್ ಅವರು ಕನ್ನಡ ಸಾಹಿತ್ಯದ ಹೆಮ್ಮೆಯ ಆಸ್ತಿ. ಹಳೆಯ ಮೈಸೂರು ಪ್ರಾಂತ್ಯದ ಸತ್ತ್ವ ಮತ್ತು ಸ್ವತ್ವ. ಇವರು ತಮ್ಮೆಲ್ಲ ಚೈತನ್ಯವನ್ನು ಸಾಹಿತ್ಯ ಕೃಷಿಗೆ ಮುಡಿಪಿಟ್ಟವರು. ಕನ್ನಡ ಸಾಹಿತ್ಯ ಸೇವೆಯೇ ಅವರ ಮತ್ತೊಂದು ಹೆಸರು; ಬರೆವಣಿಗೆ ಅವರ ಉಸಿರು. ಕನ್ನಡ, ಇಂಗ್ಲಿಷ್ … Read more

ಕನ್ನಡದ ಕಣ್ಮಣಿ !: ಕೆ ಟಿ ಸೋಮಶೇಖರ ಹೊಳಲ್ಕೆರೆ.

ತಂದೆ ತಾಯಿಗೆ ತಮ್ಮ ಮಗ ಇಂಗ್ಲೀಷ್ ಮಾಧ್ಯಮದಲ್ಲಿ ಓದಿ ಇಂಗ್ಲೀಷ್ ಮಾತನಾಡುತ್ತಾ ದೊಡ್ಡ ಅಧಿಕಾರಿಯಾಗಿ ದೊಡ್ಡ ಪಟ್ಟಣದಲ್ಲಿ ದೊಡ್ಡ ಭಂಗಲೆಯಲ್ಲಿದ್ದು ಎಲ್ಲರ ಹತ್ತಿರ ಸೆಲ್ಯೂಟ್ ಹೊಡೆಸಿಕೊಳ್ಳುತ್ತಾ ಕಾರಲ್ಲಿ ಓಡಾಡಬೇಕಂತ ಕನಸು. ನನಸು ಮಾಡಿಕೊಳ್ಳಲು ಹಳ್ಳಿಯ ಕನ್ನಡ ಶಾಲೆ ಬಿಡಿಸಿ ಪೇಟೆ ಕಾನ್ವೆಂಟ್ ಶಾಲೆಗೆ ಸೇರಿಸುತ್ತಾರೆ. ಅವನಿಗೂ ಪೇಟೆ ಬಣ್ಣಬಣ್ಣದ ತಳುಕುಬಳುಕಿನ ಬದುಕು ಖುಷಿ! ಹೊಸ ಶಾಲೆ, ದೊಡ್ಡ ಸುಂದರ ಆಕರ್ಷಕ ಕಟ್ಟಡ , ಮನಸ್ಸೆಳೆಯುವ ವಾತಾವರಣ, ಶಿಸ್ತಾಗಿ ಬೆಳೆಸಿದ ಕೈತೋಟ, ಸ್ಮಾರ್ಟ್ ಕ್ಲಾಸ್ ಗಳು, ಸೈನ್ಸ್ ಲ್ಯಾಬು, … Read more

ಕಲೆಗೋಸ್ಕರ ಜೀವನವನ್ನೆ ಮುಡಿಪಾಗಿಟ್ಟ ಅಮಟೂರ ದಂಪತಿಗಳು: ಅಶ್ಫಾಕ್ ಪೀರಜಾದೆ, ಧಾರವಾಡ

ಧಾರವಾಡ ಜಿಲ್ಲೆ ಮತ್ತು ತಾಲೂಕೀನ ಹಾರೋಬೆಳಡಿ ಗ್ರಾಮದ ವಾಸಿಗಳಾದ ವೀರಬಸಪ್ಪ ಅಮಟೂರ ಇವರು ವೃತ್ತಿಯಿಂದ ರೈತರಾದರು ದೊಡ್ಡಾಟ ಕಲಾವಿದರು. ಸರಳ ಸಜ್ಜನಿಕೆಯ ವ್ಯಕ್ತಿಯಾದ ವೀರಬಸಪ್ಪನ್ನವರು ದೋಡ್ಡಾಟದಲ್ಲಿ ಸ್ತ್ರೀ ಪಾತ್ರ ಮಾಡುವದರಲ್ಲಿ ನಿಷ್ಣಾತರು. ಅವರ ಅಭಿನಯಕ್ಕೆ ಮನಸೋಲದ ಕಲಾಸಕ್ತರೇ ಇಲ್ಲ ಎಂದರೆ ಅತಿಶಯೋಕ್ತಿಯಲ್ಲ. ಅವರು ಮುಖಕ್ಕೆ ಬಣ್ಣಬಳಿದುಕೊಂಡು ಸ್ತ್ರೀಪಾತ್ರದಲ್ಲಿ ಅಭಿನಯಸಲು ನಿಂತರೆಂದರೆ ಸಾಕು ಪ್ರೇಕ್ಷಕರಿಂದ ಸಿಳ್ಳೆ ಚಪ್ಪಾಳೆಗಳ ಸುರಿಮಳೆ ಆಗುತ್ತದೆ. ಅವರ ಭಾವಾಭಿನಯವಂತೂ ಕಣ್ಣಲ್ಲಿ ನೀರು ಬರಿಸುವಂಥದ್ದು. ಸ್ಪುರದ್ರೂಪಿಯಾದ ವೀರಬಸಪ್ಪಗೆ ಅವರ ಶರೀರ ಮತ್ತು ಶಾರೀರಗಳೇ ಸಂಪತ್ತು. ತಮ್ಮ … Read more

ಬರೆಯುವುದು ಹೇಗೆ?: ಡಾ. ಹೆಚ್ ಎನ್ ಮಂಜುರಾಜ್, ಮೈಸೂರು

ಇತ್ತೀಚೆಗೆ ನನ್ನ ಪರಿಚಿತರೊಬ್ಬರು ‘ಬರೆಯುವುದು ಹೇಗೆ?’ ಎಂದು ಕೇಳಿಬಿಟ್ಟರು. ಇದುವರೆಗೂ ಇಂಥ ಪ್ರಶ್ನೆಯೊಂದನು ನಾನು ಕೇಳಿರಲೂ ಇಲ್ಲ; ಕೇಳಿಕೊಂಡಿರಲೂ ಇಲ್ಲ. ಅಚ್ಚರಿಯೆಂದರೆ ಏನೂ ಮಾತಾಡದೆ ಸುಮ್ಮನೆ ನಕ್ಕುಬಿಟ್ಟೆ. ಆಮೇಲನಿಸಿತು, ಗಂಭೀರನಾದೆ. ಇದು ಬರೆಹವೊಂದು ಉದಿಸುವ ಮುಹೂರ್ತ. ಅದನೇ ಬರೆದು ಬಿಡೋಣ ಎಂದು ಕುಳಿತು ಬರೆಯುತ್ತ ಹೋದೆ. ಈ ಬರೆಹ ಜನಿಸಿತು. ಅಂದರೆ ಬರೆಹದ ಪ್ರಾಥಮಿಕ ಲಕ್ಷಣವೇ ಕುಳಿತು ಬರೆಯುತ ಹೋಗುವುದು ಅಷ್ಟೇ. ಪರೀಕ್ಷೆಯಲ್ಲಿ ಮೂರು ಗಂಟೆಗಳ ಕಾಲ ಬರೆಯುತ್ತೇವೆ. ಹೇಗದು ಸಾಧ್ಯವಾಯಿತು? ಏಕಾಗ್ರತೆ, ಉದ್ದೇಶ, ಮನೋಭಾವ ಮತ್ತು … Read more

ಮಹಾ ಶರಣ ಹರಳಯ್ಯ: ಜಯಶ್ರೀ ಭ ಭಂಡಾರಿ

ಮಹಾ ಶರಣ ಹರಳಯ್ಯ ಪಾರಪಯ್ಯ ಹೊನ್ನಮ್ಮ ದಂಪತಿಗೆ ದವಣದ ಹುಣ್ಣಿಮೆಯೆಂದು ಬಿಜಾಪೂರ ಜಿಲ್ಲೆಯ ಕಲಿಗೂಡು ಎಂಬಲ್ಲಿ ಜನಿಸಿದರು. ಆ ಮನೆತನ ಇಂದಿಗೂ ಹರಳಯ್ಯನ ಮಠ ಎಂದು ಗುರುತಿಸಲ್ಪಡುತ್ತದೆ. ಹರಳಯ್ಯನವರು ಬಾಲ್ಯದಲ್ಲಿಯೇ ಅನೇಕ ಪವಾಡಗಳನ್ನು ಮಾಡಿದ್ದಾರೆ. ಬಾಯಿಂದ ಬಂದ ಮಾತು ದಿಟವಾಗುವಂತ ಮಹಾನ ಚೇತನಶಕ್ತಿ ಹರಳಯ್ಯನದಾಗಿತ್ತು. ಬಸವಕಲ್ಯಾಣ ಸೇರುವ ಪೂರ್ವದಲ್ಲಿಯೇ ಹರಳಯ್ಯ ಸಾತ್ವಿಕ ಶರಣರಾಗಿದ್ದರು. ಇಡೀ ಬಡಾವಣೆಗೆ ಬೆಂಕಿ ಹತ್ತಿ ಉರಿಯುತ್ತಿರುವಾಗ ಮಳೆ ತರಿಸಿದ್ದರು, ತನ್ನ ಪ್ರದೇಶದ ರಾಜನಿಗೆ ಹಾವು ಕಚ್ಚಿದಾಗ ತಮ್ಮ ಶಕ್ತಿಯಿಂದ ಬದುಕುಳಿಯುವಂತೆ ಮಾಡಿದ್ದರು ಎಂಬ … Read more

ಮನುಷ್ಯನಿಗಿರಲಿ ಮಾನವೀಯತೆ: ತುಳಸಿ ನವೀನ್. ಬೆಂಗಳೂರು

ಮಾನವೀಯತೆಯು ಹುಟ್ಟಿನಿಂದಲೇ ಬರುವಂತದ ಗುಣ. ಆದರೆ ನಾವು ಬೆಳೆಯುವ ಪರಿಸರ,ವ್ಯವಹರಿಸುವ ಜನರು, ಅವರ ಮನಸ್ಥಿತಿಯಿಂದ ಬದಲಾಗುತ್ತಾ ಹೋಗುತ್ತದೆ. ಮುಗ್ಧತೆ ಮಾಯವಾಗಿ ಕುಕೃತ್ಯಕ್ಕೆ ತಿರುಗುತ್ತದೆ. ಮತ್ಸರ,ದ್ವೇಷ ಮನಸ್ಸಿನಲ್ಲಿ ಮನೆಮಾಡುತ್ತದೆ. ಆಸೆ-ದುರಾಸೆ ಲಾಲಸೀತನ ಮೈದಳೆಯುತ್ತದೆ. ನೀವು ಗಮನಿಸಬಹುದು, ಶಾಲಾ-ಕಾಲೇಜಿನಲ್ಲಿ ಪುಟ್ಟಪುಟ್ಟ ಮನಸ್ಸುಗಳು, ಮುಗ್ಧ ಮನಸ್ಸುಗಳೆಲ್ಲವೂ ಯಾವುದೇ ಜಾತಿ ಧರ್ಮದ ಹಂಗಿಲ್ಲದೇ ಸ್ವಚ್ಛಂದವಾಗಿ ಸ್ನೇಹಲೋಕದಲ್ಲಿ ವಿಹರಿಸುತ್ತಾ ಇರುತ್ತಾರೆ. ಪರಸ್ಪರ ಪ್ರೀತಿ, ಸ್ನೇಹ, ಸಹಾಯ ಮಾಡಿಕೊಂಡು ಸಂತೋಷದಿಂದ ಜೀವನ ಕಳೆಯುತ್ತಾ ಇರುತ್ತಾರೆ. ಆ ಮನಸ್ಸುಗಳಲ್ಲಿ ಯಾವುದೇ ಬೇಧಭಾವದ ಕಪ್ಪುಚುಕ್ಕೆಗಳಿರುವುದಿಲ್ಲ. ಅದೇ ಕಾಲೇಜು ಜೀವನದಿಂದ … Read more

ಟ್ರಿಣ್ ಟ್ರಿಣ್ . . . . . . . ದಾರಿಬಿಡಿ: ಸಂಗೀತ ರವಿರಾಜ್

ಸೈಕಲ್ ತುಳಿಯುತ್ತ, ಚಕ್ರ ತಿರುಗಿದ ಕಾಲಗತಿಯಲ್ಲಿ ಕಾಲಚಕ್ರವು ಸದ್ದಿಲ್ಲದೆ ಉರುಳುತ್ತಾ, ಈಗ ನನಗೆ ನಾನೆ ಹುಬ್ಬೇರುವಂತೆ ಎರಡು ಮಕ್ಕಳ ತಾಯಿಯಾಗಿ, ಮೂರು ಕತ್ತೆ ವಯಸ್ಸಾಗಿ, ಬಳುಕದ ಬಳ್ಳಿಯಾಗಿ ಬಾಳುತ್ತಿದ್ದರು ಸೈಕಲ್ ಕಂಡಾಗಲೊಮ್ಮೆ ತುಳಿಯಬೇಕೆಂಬ ಮನದ ಹುಚ್ಚು ವಾಂಛೆ ಈ ಕ್ಷಣಕ್ಕು ಹೋಗಿಲ್ಲ ಎಂದರೆ ಯಾರು ನಂಬಲಾರರು. ಬಾಲ್ಯದ ಬಾಗಿಲಲ್ಲಿಯೆ ಕಲಿತ ಸೈಕಲ್ ಸವಾರಿ, ಈಗಲು ನನ್ನ ಕಾಲತುದಿಯಲ್ಲಿ ಅದೇ ಆಸಕ್ತಿಯಿಂದ ಕುಳಿತಿದೆ ಅಂದರೆ ನನಗೆ ನಾನೆ ಪರಮಾಶ್ಚರ್ಯಗೊಳ್ಳುತ್ತೇನೆ. ಮನೆಗೆ ಯಾರಾದರೂ ಸೈಕಲಲ್ಲಿ ಬಂದರೆ, ಅಥವ ನಾವು ಹೋದ … Read more

ಕಗ್ಗದ ಅರ್ಥ ವಿವರಣೆ: ಜಗದೀಶ್ ಅಚ್ಚುತರಾವ್

ಧರೆಯ ಬದುಕೇನದರ ಗುರಿಯೇನು ಫಲವೇನು? । ಬರಿ ಬಳಸು ಬಡಿದಾಟ ಬರಿ ಪರಿಭ್ರಮಣೆ ॥ ತಿರುತಿರುಗಿ ಹೊಟ್ಟೆ ಹೊರಕೊಳುವ ಮೃಗಖಗಕಿಂತ ನರನು ಸಾಧಿಪುದೇನು? – ಮಂಕುತಿಮ್ಮ ॥ ೨೭ ॥ ಈ ಕಗ್ಗದಲ್ಲಿ ಡಿ.ವಿ.ಜಿ. ಬದುಕಿನ ಗುರಿ ಏನು ನಾವು ಬದುಕುವ ದಿನದ ಬದುಕಿಗೆ ಏನಾದರೂ ಅರ್ಥವಿದೆಯೇ ಎಂಬುದಾಗಿ ಪ್ರಶ್ನಿಸುತ್ತಾರೆ. ಮಾನವನ ಬದುಕಿಗೆ ಗುರಿಯಿರದೆ ಬಹಳಷ್ಟು ಜನ ಬದುಕಿರುತ್ತ ಇರುತ್ತಾರೆ. ದೇವರು ನಮಗೆ ಮಾನವ ಜನ್ಮ ಕೊಟ್ಟಿರುವುದು ವ್ಯರ್ಥ ಮಾಡುವುದಕ್ಕೆ ಅಲ್ಲ. ಎಲ್ಲ ಜನ್ಮಗಳಲ್ಲಿ ಮಾನವ ಜನ್ಮ … Read more

ನಿಂತಲ್ಲೇ ಎಲ್ಲವೂ ಆಗಬೇಕು: ಕೆ.ಪಿ.ಎಮ್. ಗಣೇಶಯ್ಯ,

ಎಲ್ಲಾದರೂ ಉಂಟೆ..? ನಿಂತಲ್ಲೇ ಎಲ್ಲವೂ ಆಗಬೇಕು ಅಂದ್ರೆ..? ನಿಮಗೆಲ್ಲೋ ತಲೆ ಕೆಟ್ಟಿರಬೇಕು, ಇಲ್ಲಾ ಯಾರೋ ತಲೆಗೆ ತುರುಕಿರಬೇಕು. ಏನಂತ..? ನೀನು ಈಗಿಂದೀಗ ಅದು ಆಗಬೇಕು ಅಷ್ಟೆಯಾ..! ಎಲ್ಲಿಯಾದರೂ ಉಂಟೆ..? ನೆಚ್ಚಿಕೊಂಡ ಕ್ಷೇತ್ರದ ಬಗ್ಗೆ ಮಾಹಿತಿ, ತರಬೇತಿ, ಮಾರ್ಗದರ್ಶನ, ಅಭ್ಯಾಸ ಹೀಗೆ ಏನನ್ನೂ ಪಡೆಯದೆ, ಇದ್ದಕ್ಕಿದ್ದ ಹಾಗೆ ಎಲ್ಲವೂ ನನ್ನದಾಗಬೇಕು ಅಂದರೆ ಹೇಗೆ ಸಾಧ್ಯ.? ಮುಖವಾಡದ ಮುಖಗಳನ್ನು ಹೊತ್ತ ಮುಖಗಳಿಗೆ ನಿಜವಾದ ಮುಖಗಳ ಪರಿಶ್ರಮ, ಗೊತ್ತಿದ್ದರೂ ಅವುಗಳನ್ನು ಹಿಂದಕ್ಕೆ ನೂಕಿ, ನಾನೂ ಅವನಂತೆ, ನನ್ನನ್ನು ಒಪ್ಪಿಕೊಳ್ಳಿರಿ ಎಂದು ದುಂಬಾಲು … Read more

ಕಲಬುರ್ಗಿ: ರುಕ್ಮಿಣಿ ನಾಗಣ್ಣವರ

2018 ಫೆಬ್ರುವರಿ. ಕಲಬುರ್ಗಿಗೆ ಬೇಸಿಗೆಯ ಬಿಸಿಲು ಇನ್ನೂ ಆವರಿಸಿರಲಿಲ್ಲ. ಹುಬ್ಬಳ್ಳಿ-ದಾಂಡೇಲಿ ಪ್ರವಾಸ ಮುಗಿಸಿ, ರೈಲಿನಲ್ಲಿ ಬೆಳಿಗ್ಗೇನೆ ಕಲಬುರ್ಗಿಗೆ ಬಂದಿಳಿದ ನನಗೆ ಮೊದಲು ಕಾಣಿಸಿದ್ದೇ ಪುಟಾಣಿ ಚಹಾ ಅಂಗಡಿಗಳ ಸಾಲು. ಒಂದು ಅಂಗಡಿಯ ಹೆಸರು ಕರ್ನಾಟಕ ಟೀ ಸ್ಟಾಲ್, ಮತ್ತೊಂದರದ್ದು ಗಾಣಗಾಪುರ ಟೀ ಸ್ಟಾಲ್. ಮೊದಲ ಬಾರಿಗೆ ಕಲ್ಯಾಣ ನಾಡಿನ ನೆಲ ಸ್ಪರ್ಶಿಸಿದ ನನಗೆ ಬಿಸಿ ಬಿಸಿ ಚಹಾ ಕುಡಿದೇ ಮನೆಯತ್ತ ಹೆಜ್ಜೆ ಹಾಕಲು ಮನಸ್ಸು ಹೇಳಿತು. ಆದರೆ, ಮನೆ ತಲುಪಿದರೆ ಸಾಕು ಎಂಬಂತೆ ದಣಿವು ನನ್ನನ್ನು ಆಯಾಸಗೊಳಿಸಿತ್ತು. … Read more

ನಾ ಬದಲಾಗೊ ಗಿರಾಕಿ ಅಲ್ಲಾ….: ಸಹನಾ ಪ್ರಸಾದ್

ಬಹುತೇಕ ಹೆಣ್ಣು ಮಕ್ಕಳಿಗೆ. ನಾನೂ ಸೇರಿದಂತೆ ಭಾವನೆಗಳು ಜಾಸ್ತಿ, ಬಹಳ ಬೇಗ ಬೇರೆಯವರಿಗೆ ಹತ್ತಿರವಾಗಿಬಿಡುತ್ತಾರೆ, ಅದೇ ರೀತಿ ಮುನಿಸು, ವಿರಸವೂ ಬೇಗ ಬಂದುಬಿಡುತ್ತದೆ,. ನಮ್ಮೆಜಮಾನ್ರು ನನಗೆ ಯಾವಾಗಲೂ ಹೇಳುತ್ತಿರುತ್ತಾರೆ” ನಿಂದೆಲ್ಲಾ ಯಾವಾಗಲೂ ಅತಿರೇಕದ ಪ್ರತಿಕ್ರಿಯೆಗಳು. ಹಚ್ಚಿಕೊಂಡರೆ ಅತಿಯಾಗಿ, ಅದೇ ಏನಾದರೂ ಸಣ್ಣ ವಿಷಯ ನಡೆಯಲಿ, ಕುಗ್ಗಿ ಹೋಗುತ್ತೀಯ. ಸ್ವಲ್ಪ ಸಮತೋಲನ ಇರಬೇಕು ಅಲ್ಲವಾ?” ಆಗೆಲ್ಲಾ ನನಗೆನಿಸುತ್ತದೆ ಹೌದಲ್ವಾ, ನಾನು ಸ್ವಲ್ಪ ಬದಲಾಗಬೇಕು ಎಂದು. ಆದರೆ ಆ ನಿರ್ಧಾರಗಳೆಲ್ಲ ತಾತ್ಕಾಲಿಕ. ಮೊನ್ನೆ ನಮ್ಮ ಪಕ್ಕದ ಮನೆಗೆ ನವ ದಂಪತಿಗಳು … Read more

ನೆರೆ ಹೊರೆಯ ಸಂಬಂಧದ ಸವಿನೆನಪು: ಎನ್. ಶೈಲಜಾ ಹಾಸನ

ಅಕ್ಕಪಕ್ಕದ ಮನೆಯವರೊಂದಿಗೆ ಅಂದಿನ ದಿನಗಳಲ್ಲಿ ಅಪಾರವಾದ ಬಾಂಧವ್ಯವನ್ನು ಹೊಂದಿದ್ದು,ಕಷ್ಟ ಸುಖ ಎಲ್ಲಾದರಲ್ಲೂ ಪರಸ್ಪರ ಭಾಗಿಯಾಗಿ ಸ್ಪಂದಿಸುವ ಹೃದಯಗಳನ್ನು ಅಂದು ಹೆಚ್ಚು ಹೆಚ್ಚು ಕಾಣಬಹುದಿತ್ತು.ನಾವು ನಮ್ಮ ತಂದೆಯ ಉದ್ಯೋಗ ನಿಮಿತ್ತ ಎಲ್ಲಾ ಊರುಗಳನ್ನು ಸುತ್ತಿ ಕೊನೆಗೆ ಜಿಲ್ಲಾ ಕೇಂದ್ರಕ್ಕೆ ಬಂದು ನೆಲೆ ನಿಂತೆವು. ನಾವಿದ್ದ ಮನೆ ಒಂದು ವಠಾರದಲ್ಲಿ ಇತ್ತು.ಎಂಟು ಮನೆಗಳಿರುವ ಆ ವಠಾರದಲ್ಲಿ ಇಬ್ಬರು ಒಂದೊಂದು ಸಾಲಿನ ನಾಲ್ಕು ಮನೆಗಳ ಒಡೆಯರಾಗಿದ್ದರು. ವಠಾರವಾದರೂ ಮನೆ ದೊಡ್ಡದಿತ್ತು. ಹತ್ತು ಹದಿನೈದು ಜನ ವಾಸ ಮಾಡಬಹುದಾಗಿತ್ತು.ಒಂದು ರೂಮು,ಎರಡು ದೊಡ್ಡ ಹಾಲು,ಮಹಡಿ … Read more

ತಿರಂಗಾ ಧ್ವಜದ ರೂವಾರಿ ಪಿಂಗಳಿ ವೆಂಕಯ್ಯ: ನಾರಾಯಣ ಬಾಬಾನಗರ

ಏರುತಿಹುದು. . ಹಾರುತಿಹುದು ನೋಡು ನಮ್ಮ ಬಾವುಟಾ!! ಪುಟಾಣಿಗಳೇ, ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ನೀವು ಉಂಡಿರಬಹುದು. ಝೇಂಡಾ ಊಂಚಾ ರಹೇ ಹಮಾರಾ…ದಂತಹ ಹಾಡುಗಳನ್ನು ಹಾಡಿ, ಹೆಮ್ಮೆ ಗೌರವದಿಂದ ತಲೆ ಎತ್ತಿ, ನಮ್ಮ ದೇಶದ ಬಾವುಟಕ್ಕೆ ವಂದನೆ ಸಲ್ಲಿಸುತ್ತೀರಿ. ಬಾನಂಗಳದಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ಧ್ವಜ ಪಟ. . ಪಟನೆ ಹಾರಾಡುತ್ತಿದ್ದರೆ ನಮ್ಮ ಕಣ್ಣಿಗೆ ಹಬ್ಬ. ನಮ್ಮ ಭಾರತದ ಬಾವುಟ ನಮಗೆಷ್ಟು ಆಪ್ತವಾದದ್ದು, ಆಪ್ಯಾಯಮಾನವಾದದ್ದು ಎಂದನಿಸುತ್ತದಲ್ಲವೇ? ಬಾವುಟದ ಚಿತ್ರ ಬಿಡಿಸಿ ಹೆಮ್ಮೆಯಿಂದ ನೀವು ಬೀಗಿರಲೂ ಸಾಕು. ನೀವು … Read more

ವೆಂಕ್ಟಣ್ಣ ಟೈಯರ್ ಅಂಗಡಿ: ದಯಾನಂದ ರಂಗದಾಮಪ್ಪ

ಸತತವಾಗಿ ಹತ್ತು ವರ್ಷ ಯಾವುದೋ ಖಾಸಗಿ ವಿದೇಶಿ ಕಂಪನಿಗೆ ಜೀತದಾಳಾಗಿ ದುಡಿದ ಮೇಲೆ ಯಾಕೋ ಬೇಸರ, ಒಂಟಿತನ, ಜಿಗುಪ್ಸೆ ನಿತ್ಯ ನೋಡೋ ಮಾನಿಟರ್ ಗಿಂತ ಹತ್ತಿರವಾಗಿ ಕಾಣುತ್ತಿತ್ತು. ಟ್ರಾಫಿಕ್ ಜಾಮ್ ನಲ್ಲಿ ನಿಂತಾಗ ನಮ್ಮೂರು ಜಾತ್ರೇಲಿ ನಿಂತ ನೆನಪು, ಯಾರದೋ ಬೈಕ್ ಹಿಂದಿನಿಂದ ಹಾರ್ನ್ ಮಾಡಿದಾಗ ನಮ್ಮೂರ ಗಣೇಶ ಹಬ್ಬ ದಲ್ಲಿ ಹೊಡೆದ ತಮಟೆ ಸದ್ದಿನ ಹಾಗೆ ಭಾಸವಾಗುತ್ತಿತ್ತು. ಆರಂಭದ ದಿನಗಳಲ್ಲಿ ಇಷ್ಟವಾಗುತಿದ್ದ ಮಾಲ್ಗಳು ಹೀಗೇ ಮಾಮೂಲಿಯಾಗಿ ಕಾಣುತ್ತಿವೆ. ಬೆಂಗಳೂರಿನ ದೆವ್ವಗಳೆಲ್ಲ ಒಂದು ಕಡೆ ಸೇರಿ ಜೋರಾಗಿ … Read more

ನವರಾತ್ರಿಯ ಸಂಭ್ರಮ: ಪೂಜಾ ಗುಜರನ್ ಮಂಗಳೂರು.

ಭೂಮಿ ಮೇಲೆ ರಾಕ್ಷಸರ ಅಟ್ಟಹಾಸವು ಮಿತಿಮೀರಿದಾಗ. ಎಲ್ಲೆಲ್ಲೂ ಅನ್ಯಾಯ ವಿಜೃಂಭಿಸಿ ಅಧರ್ಮವೇ ತಾಂಡವಾಡುವಾಗ ದುಷ್ಟರನ್ನು ಸಂಹರಿಸಿ ಶಿಷ್ಟರನ್ನು, ರಕ್ಷಿಸಲು ಧರೆಗಿಳಿದು ಬಂದವಳೇ ದುರ್ಗಾಮಾತೆ. ತನ್ನ ಬಳಿಗೆ ನೊಂದು ಬರುವ ಭಕ್ತರಿಗೆ ದೇವಿಯೂ ಅನುಗ್ರಹವನ್ನು ಮಾಡಿ ತಮ್ಮ ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಿ ಹರಸುತ್ತಾಳೆ ಅನ್ನುವ ಅಚಲವಾದ ನಂಬಿಕೆ ಭಕ್ತರಿಗಿದೆ. ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವಾರು ಕಥೆಗಳಿವೆ. ದುರ್ಗಾದೇವಿಯೂ ಮಹಿಷಾಸುರನೊಂದಿಗೆ ಪಾಡ್ಯದಿಂದ ನವಮಿವರೆಗೆ ಯುದ್ಧ ಮಾಡಿ ನವಮಿಯಂದು ಅಸುರನನ್ನು ಕೊಂದಳು. ಅದುದರಿಂದ ದೇವಿಗೆ ಮಹಿಷಾಮರ್ಧಿನಿ ಎಂದು ಕರೆಯುತ್ತಾರೆ. ಪುರಾಣದ … Read more

ನನ್ನ ಆನಂದ: ಹೆಚ್. ಷೌಕತ್ ಆಲಿ, ಮದ್ದೂರು

ಖಾಸಗಿ ಶಾಲೆಗಳಲ್ಲಿ ಪ್ರತಿಷ್ಠಿತ ವಿದ್ಯಾರ್ಥಿಗಳೇ ಹೆಚ್ಚು, ಪೋಷಕರಿಗೂ ತಮ್ಮ ಮಕ್ಕಳ ಶಾಲೆಗಳ ಬಗ್ಗೆ, ಶಿಕ್ಷಕರ ಬಗ್ಗೆ, ಆಡಳಿತಾಧಿಕಾರಿ, ಕಾರ್ಯಕಾರಿ ಮಂಡಳಿಯ ಬಗ್ಗೆ ಇತರರೊಂದಿಗೆ ಹೇಳಿಕೊಳ್ಳೋದೆ ಒಂದು ಶ್ರೀಮಂತಿಕೆ ಎನ್ನಬಹುದು ಒಂದು ನಗರದ ಹೃದಯ ಭಾಗದಲ್ಲಿದ್ದ ಒಂದು ಪ್ರಸಿದ್ಧ ಶಾಲೆಯಲ್ಲಿ ನಾನು ಶಿಕ್ಷಕನಾಗಿ ಸೇರಿದ್ದ ಮೊದಲ ವರ್ಷದಲ್ಲಿ ……………. . ! ಎಂಟನೆಯ ತರಗತಿಗೆ ಪ್ರವೇಶ ಮಾಡುವ ಕೆಲ ವಿದ್ಯಾರ್ಥಿಗಳಿಗೆ ನಾನು ಕೆಲವು ಪ್ರಶ್ನೆಗಳನ್ನು ಅವರ ಮೆಂಟಲ್ ಎಬಿಲಿಟಿ, ಮೆಮೋರಿ, ರೀಡಿಂಗ್, ರೈಟಿಂಗ್, ಜಿ. ಕೆ. ಸ್ಕಿಲ್ಸ್ ಬಗ್ಗೆ … Read more

ಜೀವದ ಪ್ರಾಮುಖ್ಯತೆ: ಗಿರಿಜಾ ಜ್ಞಾನಸುಂದರ್

ಅಹ್! ದೇಹ ಹಗುರವಾಗುತ್ತಿರುವ ಅನುಭವ! ಏನಾಯಿತು ಅಷ್ಟೊಂದು ನೋವಾಗುತ್ತಿದ್ದ ದೇಹಕ್ಕೆ? ಪ್ರಸಾದ್ ಯೋಚಿಸುತಿದ್ದಂತೆ ತಿಳಿಯಿತು ಅವನ ಆತ್ಮ ದೇಹದಿಂದ ಹೊರಗೆ ಬಂದಿದೆ!! ಹಾಗಾಗಿ ನೋವು ಮರೆಯಾಗಿದೆ…. ತಾನು ಮನನೊಂದು ಆತ್ಮಹತ್ಯೆ ಮಾಡಿಕೊಂಡದ್ದು ನೆನಪಿಗೆ ಬಂತು….. ಕಷ್ಟಪಟ್ಟು ಓದಿ ಶಾಲೆಯಲ್ಲಿ ಮೊದಲನೆಯವನಾಗಿದ್ದ ಪ್ರಸಾದ್. ಎಲ್ಲದರಲ್ಲೂ ಮೊದಲು. ಆಟ ಪಾಠ, ವಿದ್ಯೆ, ಪರಿಶ್ರಮ, ಸಹನೆ, ಸ್ನೇಹ ಎಲ್ಲದರಲ್ಲೂ. ಅತ್ಯಂತ ಶ್ರದ್ಧೆಯಿಂದ ಓದಿ ಡಾಕ್ಟರ್ ಆಗಿದ್ದು ಆಯಿತು. ಉತ್ತಮ ರಾಂಕ್ ಗಳಿಸಿದ್ದಕ್ಕಾಗಿ ಸರ್ಕಾರಿ ಉದ್ಯೋಗವು ಆಯಿತು. ಡಾಕ್ಟರ್ ಆಗಿ ತನ್ನ ಕರ್ತವ್ಯ … Read more

ಪ್ರಾಮಾಣಿಕತೆ ಎಂಬ ಪ್ರತಿಬಿಂಬ: ಎಂ.ಎಚ್. ಮೊಕಾಶಿ ವಿಜಯಪುರ

ಯಾವುದೇ ಸಂಸ್ಕೃತಿಯಾದರೂ ಕೆಲವು ಮೌಲ್ಯಗಳನ್ನು ಹೊಂದಿರುತ್ತದೆ. ಅದರಲ್ಲಿ ಪ್ರಾಮಾಣಿಕತೆ ಎಂಬುದು ಮಹಾಮೌಲ್ಯವಾಗಿದೆ ಎಂದು ಜಗತ್ತಿನ ಎಲ್ಲ ಸಂಸ್ಕೃತಿಗಳ ನಂಬಿಕೆ. ಪ್ರಾಮಾಣಿಕತೆ ಎನ್ನುವುದು ವ್ಯಕ್ತಿಯ ನಡತೆಯ ಅಂಶವನ್ನು ಸೂಚಿಸುವುದಾಗಿದೆ. ಪ್ರಾಮಾಣಿಕತೆಯಲ್ಲಿ ನಿಷ್ಠೆ, ನಿಷ್ಪಕ್ಷಪಾತ, ವಿಶ್ವಾಸರ್ಹ ಮೊದಲಾದ ಗುಣಗಳು ಸೇರಿವೆ. ಇಂದಿಗೂ ನಮ್ಮಲ್ಲಿ ಸತ್ಯ, ನಿಷ್ಟೆ, ಪ್ರಾಮಾಣಿಕತೆಯಂತಹ ಹಲವಾರು ಸದ್ಗುಣಗಳಿವೆ. ಆದರೆ ಅದನ್ನು ಗುರುತಿಸುವ ಒಳಗಣ್ಣು ಬೇಕಾಗಿದೆ. “ನಾನು ಸರಿ, ಉಳಿದವರು ಸರಿಯಿಲ್ಲ” ಎಂಬ ಭಾವನೆಗಳು ಪ್ರಸ್ತುತ ಹೆಚ್ಚಾಗುತ್ತಿವೆ. ನಾವು ಸತ್ಯ ನಿಷ್ಟರೇ? ಎಂಬುದನ್ನು ಮೊದಲು ಪರಾಮರ್ಶಿಸಿಕೊಳ್ಳಬೇಕು. ಪ್ರಾಮಾಣಿಕತೆಯ ಬಗ್ಗೆ … Read more

ಪರಿವರ್ತನೆಗೊಂದು ಅವಕಾಶಕೊಟ್ಟಾಗ: ಎಂ. ಡಿ. ಚಂದ್ರೇಗೌಡ ನಾರಮ್ನಳ್ಳಿ

ಬದುಕನ್ನು ರೂಪಿಸಿಕೊಳ್ಳಲು ಒಂದು ಕೆಲಸ ಬೇಕು. ಕೆಲವರು ವೈಟ್ ಕಾಲರ್ ವೃತ್ತಿಯನ್ನೆ ಹುಡುಕುತ್ತಾರೆ. ಕೆಲವರು ಕಮಾಯಿ ಅಧಿಕವಿರುವುದನ್ನು ಅಪೇಕ್ಷಿಸುತ್ತಾರೆ. ಮತ್ತೆ ಕೆಲವರು ಆದರ್ಶಗಳ ಬೆನ್ನು ಹತ್ತುತ್ತಾರೆ. ದೇಶ ಪ್ರೇಮದ ತುಡಿತವುಳ್ಳವರು ಸೈನಿಕರಾಗುತ್ತಾರೆ. ಅರ್ಪಣಾ ಮನೋಭಾವ ಇರುವವರು ಶಿಕ್ಷಕರಾಗುತ್ತಾರೆ. ಕೆಲವು ವಿದ್ಯಾರ್ಥಿಗಳು ‘ತಮ್ಮ ಗುರುಗಳನ್ನು ಅನುಕರಿಸಿ ಶಿಕ್ಷಕರಾಗಬೇಕೆಂದು’ ಹೊರಡುತ್ತಾರೆ . ಕೆಲವರು ಸ್ವ- ಉದ್ಯೋಗದ ದಾರಿ ಹಿಡಿದು ಬದುಕು ಕಟ್ಟಿಕೊಳ್ಳುತ್ತಾರೆ. ಎಷ್ಟೋ ದಿನಗಳ ನಂತರ, ಎದುರು ಸಿಕ್ಕಾಗಲೋ, ಪೋನ್ ಕರೆ ಮಾಡಿದಾಗಲೋ, ನೆನಪುಗಳಿಗೆ ಮತ್ತಷ್ಟು ಹಸಿರು ಬಣ್ಣ ಬಳಿಯುತ್ತಾರೆ. … Read more

”ಸಂಬಂಧಗಳು ನಮಗೆಷ್ಟು ಮುಖ್ಯ?”: ಪೂಜ ಗುಜಾರನ್‌

ಸಂಬಂಧಗಳು ನಮಗೆಷ್ಟು ಮುಖ್ಯ? ಯಾವ ಸಂಬಂಧಗಳು ನಮ್ಮನ್ನು ತುಂಬಾ ಭಾವನಾತ್ಮಕವಾಗಿ ಕಾಡುತ್ತದೆ.? ಯಾವ ಸಂಬಂಧಗಳನ್ನು ನಾವು ಯಾವತ್ತು ಬಿಟ್ಟು ಹೋಗುವುದಿಲ್ಲ.?ಯಾರು ನಮ್ಮನ್ನು ಅತಿಯಾಗಿ ಕಾಡುತ್ತಾರೆ.? ಇಲ್ಲಿ ಸಂಬಂಧಗಳನ್ನು ಬೆಳೆಸಲು ಯಾವ ಮಾನದಂಡಗಳ ಅಗತ್ಯವಿದೆ.? ಪ್ರಶ್ನೆಗಳು ಮುಗಿಯಲಾರದಷ್ಟಿವೆ.. ಉತ್ತರಗಳನ್ನು ನಾವು ಹುಡುಕಬೇಕಷ್ಟೆ.. ನಮ್ಮ ಬದುಕಿನಲ್ಲಿ ಬರುವ ಸಂಬಂಧಗಳು ಅರಿತೋ ಅರಿಯದೆನೋ ನಮ್ಮನ್ನು ಗಾಢವಾಗಿ ತನ್ನ ಬಾಹುಗಳಲ್ಲಿ ಬಂಧಿಸಿರುತ್ತದೆ. ಮಾನವ ಸಂಬಂಧಗಳೆ ಹೀಗೆ ಹುಟ್ಟಿದ ಕೂಡಲೇ ಸಂಬಂಧಗಳ ಸಂಕೋಲೆಯೊಳಗೆ ಬಂಧಿಯಾಗಿರುತ್ತಾನೆ. ತನ್ನ ತಾಯಿ ಜೊತೆ ಶುರುವಾದ ಈ ಸಂಬಂಧ ಇನ್ನಷ್ಟು … Read more

ನೆನಪುಗಳ ಮಾಲೀಕ………: ರಘು ಕ.ಲ.,

ಶಿಕ್ಷಣ ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿ ಪಡೆದರೆ ಬಹಳ ಉತ್ತಮ ಎಂಬುದು ಅನೇಕರ ಅಭಿಪ್ರಾಯ. ಏಕೆಂದರೆ ವಿಜ್ಞಾನ, ತಂತ್ರಜ್ಞಾನ, ಸೃಜನಶೀಲತೆ, ನೃತ್ಯ, ಸಂಗೀತ …… ಹೀಗೆ ಇನ್ನೂ ಹತ್ತಾರು ವಿಚಾರಗಳಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳ ಹತ್ತಿರವಾದದ್ದು, ಅನುಕೂಲವಾದದ್ದು ನಗರ ಪ್ರದೇಶ ಎಂಬ ಹಂಬಲದಲ್ಲಿಯೋ, ಬೆಂಬಲದಲ್ಲಿಯೋ ಏನೋ ಗ್ರಾಮೀಣ ಪ್ರದೇಶದ ಕೆಲವರು ನಗರದೆಡೆಗೆ ಮೊರೆ ಹೋಗುತ್ತಿದ್ದಾರೆ. ಎಲ್ಲವೂ ಸಿಗುತ್ತದೆಂಬುದು ಅವರ ಕಲ್ಪನೆಯಷ್ಟೇ ಸರಿ. ಸರಿಯೋ? ತಪ್ಪೋ? ಎಂದು ನಿರ್ದಿಷ್ಟವಾಗಿ ಹೇಳಲಾಗುವುದಿಲ್ಲ. ಅವರವರ ಮನಸ್ಸಿನಂತೆ ಅವರವರ … Read more

ಕೊಠಡಿ ಮೇಲ್ವಿಚಾರಣೆ ಎಂಬ ಗುಮ್ಮ…!: ಶೀಲಾ. ಗೌಡರ. ಬದಾಮಿ.

ಶೈಕ್ಷಣಿಕ ವರ್ಷ ಪ್ರಾರಂಭವಾದೊಡನೆ ಮೊದಲ ಸಭೆಯಲ್ಲೇ ಮುಖ್ಯಸ್ಥರು,”ಕಳೆದ ವರ್ಷ ಆದದ್ದಾಯ್ತು. ಈ ವರ್ಷ ಮಾತ್ರ ನಾವು 100/ ರಿಸಲ್ಟ ಮಾಡಬೇಕು.ಅದಕ್ಕಾಗಿ ಪರೀಕ್ಷೆ ಬಂದಾಗ ಗಡಿಬಿಡಿ ಮಾಡುವುದಕ್ಕಿಂತ ಈಗಿನಿಂದಲೇ ಗುರಿ ಸಾಧನೆಗೆ ಕಂಕಣಬದ್ದರಾಗಬೇಕು. “ ಎಂದು ಎಚ್ಚರಿಸುತ್ತಾರೆ. ಆಗಿನಿಂದಲೇ ಎಲ್ಲ ಶಿಕ್ಷಕರ, ಉಪನ್ಯಾಸಕರ ಎದೆ ಢವ….ಢವ…..ವಾರ್ಷಿಕ ಅಂದಾಜು,ಕ್ರಿಯಾಯೋಜನೆ ಸಿದ್ದಪಡಿಸಿ, ಡಿಸೆಂಬರ್ ಅಂತ್ಯಕ್ಕೆ ಸಿಲ್ಯಾಬಸ್ ಮುಗಿಸಿ, ಎರಡು ತಿಂಗಳು ರಿವಿಜನ್ ಮಾಡಬೇಕು ಎಂದು ಜೂನ್ ಒಂದರಿಂದಲೇ ಆನ್ ಯುವರ್ ಮಾರ್ಕ, ಗೆಟ್ ಸೆಟ್,ಗೋ……ಎಂದು ನಮ್ಮನ್ನು ರೇಸಿಗೆ ಬಿಟ್ಟು ಬಿಡುತ್ತಾರೆ. ಅದು … Read more

ಅಂತರ ರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರಕಾರ ಮಹೇಶ್: ಎಂ.ಎನ್.ಸುಂದರ ರಾಜ್

ಪ್ರಕೃತಿ ಛಾಯಾಚಿತ್ರಗಳು ಕೇವಲ ಬಣ್ಣಬಣ್ಣದ ಚಿತ್ರಗಳಲ್ಲ, ಪ್ರಕೃತಿಯಲ್ಲಿ ಮೂಡಿಬಂದ ಸುಂದರ ಕಲಾಕೃತಿಗಳು. ಅವುಗಳನ್ನು ಕೆಮರಾದಲ್ಲಿ ಸೆರೆಹಿಡಿದು ಕಣ್ಮನಗಳಿಗೆ ಮುದನೀಡುವಂತೆ ಸಮಾಜಕ್ಕೆ ನೀಡಿರುವುದರ ಹಿಂದೆ, ಅಪಾರ ಪರಿಶ್ರಮ ಮತ್ತು ತನ್ಮಯತೆಯಿದೆ. ಅದೊಂದು ತಪಸ್ಸು. ನಾವು ಆ ಚಿತ್ರಗಳನ್ನು ನೋಡಿ ಚೆನ್ನಾಗಿದೆ ಎಂದು ಒಂದೇ ಮಾತಿನಲ್ಲಿ ಹೇಳುತ್ತೇವೆ. ಆದರೆ ಅಂತಹ ಫೋಟೋ ತೆಗೆಯಲು ಪಟ್ಟ ಪಾಡು, ತಿರುಗಿದ ಕಾಡು ಮೇಡುಗಳು, ಜೀವದ ಹಂಗು ತೊರೆದು ವನ್ಯ ಜೀವಿಗಳ ಅಪಾಯವನ್ನೂ ಲೆಕ್ಕಿಸದೆ ಒಂದು ಉತ್ತಮ ಚಿತ್ರಕ್ಕೆ ದಿನಗಟ್ಟಲೆ ಆಹಾರ ನಿದ್ರೆಯಿಲ್ಲದೆ ಕಾದು … Read more