ನಾಟಕ “ಪುಲಪೇಡಿ”: ನಾಗಸಿಂಹ ಜಿ ರಾವ್

ಸಿಂಹಾವಲೋಕನ ೨ ‘ಪುಲಪೇಡಿ’ ನಾಟಕವು ಕೇವಲ ಒಂದು ರಂಗ ಪ್ರದರ್ಶನವಾಗಿರದೆ, ಕೇರಳದ ಒಂದು ಕಾಲದ ಅನಿಷ್ಟ ಸಾಮಾಜಿಕ ಪದ್ಧತಿಯಾದ ‘ಪುಲಪೇಡಿ’ಯನ್ನು ತೆರೆದಿಡುವ ಸಾಮಾಜಿಕ ಕನ್ನಡಿಯಾಗಿದೆ. ಈ ನಾಟಕವು ಶೋಷಿತ ವರ್ಗದ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ಖಂಡಿಸುವ ಜೊತೆಗೆ, ಸಾಮಾಜಿಕ ಅಸಮಾನತೆಯ ವಿರುದ್ಧ ಧ್ವನಿಯಾಗಿ ಎದ್ದು ಕಾಣುತ್ತದೆ. ಲಿಂಗದೇವರು ಹಳೆಮನೆಯವರ ರಚನೆಯಾದ ಈ ಕೃತಿಯನ್ನು ರಮೇಶ್‌ರವರ ನಿರ್ದೇಶನದಲ್ಲಿ ರಂಗದ ಮೇಲೆ ತರುವಾಗ, ನಾನು ಶೋಷಿತ ವರ್ಗದ ಯುವಕನ ಪಾತ್ರವನ್ನು ನಿರ್ವಹಿಸಿದ ಅನುಭವವು ನನ್ನ ಜೀವನದಲ್ಲಿ ಮರೆಯಲಾಗದ ಕ್ಷಣವಾಗಿ ಉಳಿದಿದೆ. … Read more

ಹಾಸ್ಟೆಲಿನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ದೆವ್ವ!: ಲಿಂಗರಾಜು ಕೆ ಮಧುಗಿರಿ

ಹನುಮಂತಪುರ ಡಿಗ್ರಿ ಹಾಸ್ಟೆಲ್ ಡಾಕ್ಯುಮೆಂಟರಿ 2 ಹಾಸ್ಟೆಲ್ ನಲ್ಲಿ ನನ್ನಂತಹ ಜ್ಯೂನಿಯರ್ಸ್ಗಳನ್ನು ತಮ್ಮ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಲೋಸುಗವೋ ಅಥವಾ ಮಾಮೂಲಿಯಂತೆ ಆಗಿನ ಕಾಲದಲ್ಲಿ ಚಾಲ್ತಿಯಲ್ಲಿದ್ದಂತೆ SC/ST ಹಾಸ್ಟೆಲ್ ಗಳಲ್ಲಿ ದೆವ್ವಗಳಿವೆ ಎಂಬ ಮೂಢನಂಬಿಕೆಯಂತೆಯೋ ಏನೋ ಅಂತೂ ಹಾಸ್ಟೆಲ್ನಲ್ಲಿ ದೆವ್ವಗಳಿವೆ ಎಂಬುದನ್ನು ನಮ್ಮ ಸೀನಿಯರ್ಸ್ಗಳು, ಆಗಾಗ ನಮ್ಮ ಕಿವಿಗೆ ರಸವತ್ತಾಗಿ, ಭಯಂಕರವಾಗಿ ತುಂಬುತ್ತಿದ್ದರು; ಉದಾ (ನಾನು ಹಿಂದೆ ಹೈಸ್ಕೂಲ್ ಓದುವಾಗ ಇದ್ದ ಮಧುಗಿರಿಯ ‘ಗುಟ್ಟೆ ಹಾಸ್ಟೆಲ್’ PU, ಹಾಸ್ಟೆಲ್ ನಲ್ಲೂ ದೆವ್ವದ ಕಥೆಗಳು ಚಾಲ್ತಿಯಲ್ಲಿದ್ದವು; ಮೊದಲು ಇಲ್ಲಿ ಸತ್ತ ಹೆಣಗಳನ್ನು … Read more

ಬದಲಾಗಿದೆ ಭಾರತದ ಬೌಲಿಂಗ್ ಹವಾಮಾನ!: ವಿನಾಯಕ‌ ಅರಳಸುರಳಿ,

ಮೊನ್ನೆ ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ಗಳ ನಡುವೆ ಮ್ಯಾಚ್ ಇರುವುದು ಗೊತ್ತಿರಲಿಲ್ಲ. ಗೊತ್ತಾಗಿ ನೋಡುವಷ್ಟರಲ್ಲಿ ಪ್ರಸಿದ್ ಕೃಷ್ಣ ಎನ್ನುವ ಹೊಸ ಬೌಲರ್ ಪಾದಾರ್ಪಣೆ ಮಾಡಿ, ಅವರಿಗೆ ಆಂಗ್ಲರು ಮೂರು ಓವರ್ ಗೆ ಮೊವ್ವತ್ತೇಳು ರನ್ ಚಚ್ಚಿರುವುದು ಕಾಣಿಸಿತು. ಏನು ನಡೆಯುತ್ತಿದೆ ಇಲ್ಲಿ? ವರ್ಲ್ಡ್ ಕಪ್ ಗೆ ಕೆಲವೇ ತಿಂಗಳು ಇರುವಾಗ ಹೀಗೇಕೆ ಹೊಸ ಹೊಸ ಪ್ರಯೋಗ ಮಾಡ್ತಿದ್ದಾರೆ? ಇರುವವರಿಗೇ ಮತ್ತಷ್ಟು ಆಡುವ ಅವಕಾಶ ಕೊಟ್ಟು ಇಂತಿಂತವನು ಇಂತಿಂತಲ್ಲಿ ಎಂದು ಫಿಕ್ಸ್ ಮಾಡಬಾರದಾ ಎಂದುಕೊಳ್ಳುವಷ್ಟರಲ್ಲಿ ಅದೇ ಪ್ರಸಿದ್ … Read more

ಮಾತೆಂಬ ಜ್ಯೋತಿ ಮನವ ಬೆಳಗಲಿ: ಸುಂದರಿ ಡಿ.

ಜೀವಜಗತ್ತು ಹಲವು ವಿಸ್ಮಯಗಳ ಆಗರ. ಇಲ್ಲಿ ನಾವು ಕಂಡು ಅಚ್ಚರಿಯಿಂದ ಹುಬ್ಬೇರಿಸಿದ ಹಲವು ಸಂಗತಿಗಳು ನಮ್ಮ ಅರಿವಿಗೆ ಬಾರದೆಯೂ ಇರಬಹುದು. ನಮ್ಮ ಅರಿವಿಗೆ ಬಂದರೆ ಕುತ್ತಾಗಬಹುದೆಂಬ ಭಯಕ್ಕೆ ಜೀವಜಗತ್ತು ಹೊಸ ಪಾಠವನ್ನೇ ಈ ವೇಳೆಗೆ ಕಲಿತಿರಲೂಬಹುದು ಅಥವಾ ಅದೆಷ್ಟೋ ವಿಸ್ಮಯಗಳನು ಅರಿವಾಗುವ ಮೊದಲೇ ನಾವು ನಮ್ಮ ಪಾಪಕೂಪಗಳಿಂದ ಇಲ್ಲವಾಗಿಸಿರಲೂಬಹುದು. ಅದೇನೇ ಇರಲಿ ಮನುಷ್ಯ ತನ್ನ ಅರಿವಿಗನುಗುಣವಾಗಿ ಮತ್ತು ವಾಸಪ್ರಪಂಚದ ಕೆಲವು ವಿಸ್ಮಯಗಳನ್ನಷ್ಟೇ ಅರಿತಿರಲು ಸಾಧ್ಯ. ಏಕೆಂದರೆ ಆ ಪ್ರಮಾಣದ ವಿಸ್ಮಯಗಳ ಹೊದ್ದು ನಿಂತಿದೇ ಈ ಜಗತ್ತು. ಕವಿಗಳ … Read more

ಭಾವಪೂರ್ಣ, ಲಾಲಿತ್ಯಮಯ ಕಾವ್ಯಗಳ ಒಡತಿ- ಸರೋಜಿನಿ ನಾಯ್ಡು: ನಾಗರೇಖಾ ಗಾಂವಕರ

“Lightly, O lightly we bear her alongShe sways like a flower in the mind of our songShe skims like a bird in the foam of a streamShe floats like a laugh from the lips of a dream” ಇದು ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ “Palanquin-bearers” ಕವನದ ಆರಂಭದ ಸಾಲುಗಳು. ಬೋವಿಗಳು [ಪಲ್ಲಕ್ಕಿ ಹೊರುವವರು] ಮದುಮಗಳನ್ನು ಪಲ್ಲಕ್ಕಿಯಲ್ಲಿ ಹೊತ್ತು ನಿಧಾನವಾಗಿ ಸಾಗುತ್ತಿದ್ದಾರೆ. … Read more

ಸಾಂಪ್ರದಾಯಿಕ ಹಾವಸೆಯನ್ನು ಕಿತ್ತೆಸೆದ -ಸ್ತ್ರೀ ವಾದಿ -ಕಮಲಾದಾಸ: ನಾಗರೇಖಾ ಗಾಂವಕರ

“You turn me into a bird of stoneA granite dove,You build round me a shabby drawing roomAnd stroke my face absentmindedly while you read” ಇದು ಕಮಲಾದಾಸರ ‘The Stone age’ ಕವಿತೆಯಲ್ಲಿನ ಸಾಲುಗಳು. ಈ ಕವಿತೆಗೂ ಪಾಕಿಸ್ತಾನಿ ಕವಯತ್ರಿ Kishwar Naheed’ರ ‘ Iam not that Woman’ ಕವಿತೆಗೂ ಸಾಮ್ಯತೆ ಇದೆ.ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಸ್ತ್ರೀಯ ಘನವ್ಯಕ್ತಿತ್ವ ನಲುಗುವ ಪರಿಯನ್ನು ಬಣ್ಣಿಸುವ ಕಮಲಾದಾಸ ಪುರುಷನ ದೌರ್ಜನ್ಯವನ್ನು … Read more

ಮನಸ್ಸುಗಳು ಅನಾಥವಾಗದಿರಲಿ: ಪೂಜಾ ಗುಜರನ್. ಮಂಗಳೂರು.

ಈ ಭೂಮಿ ಮೇಲೆ ಬದುಕುವುದಕ್ಕೆ ಬೇಕಾಗಿರುವುದು ಏನೂ? ಯಾರೋ ಹೇಳಿದರೂ ಗಾಳಿ, ಬೇಕು ನೀರು, ಬೇಕು ಆಹಾರ, ಬೇಕು.. ಸರಿ ಇದೆಲ್ಲ ಈ ಭೂಮಿ ಮೇಲೆ ಸಿಗುತ್ತದೆ. ಉಸಿರಾಡುವುದಕ್ಕೆ ಗಾಳಿ, ಈ ಪ್ರಕೃತಿಯ ಮಡಿಲಿನಲ್ಲಿ ಯಥೇಚ್ಛವಾಗಿ ಸಿಗುತ್ತದೆ. ಅದಕ್ಕಾಗಿ ಯಾರ ಅಪ್ಪಣೆಯು ಬೇಕಾಗಿಲ್ಲ. ಆದರೆ ನೀರು ಆಹಾರ.? ಇದು ಅಪ್ಪಣೆಯಿಲ್ಲದೆ ದೊರೆಯುವುದೇ? ಹರಿದು ಹೋಗುವ ನೀರಿಗೂ ಬೇಲಿ ಹಾಕುವವರು ಇರುವಾಗ ಇದು ಕಷ್ಟವೇ. ಇರಲಿ ಇದು ದೊರೆಯುತ್ತದೆ ಅಂತಿಟ್ಟುಕೊಳ್ಳೋಣ.. ಇನ್ನು ಏನಾದರೂ ಬೇಕಿದೆಯಾ.? ಹೌದು ನೆಮ್ಮದಿ ಬೇಕು … Read more

ಚೈನ್ ಲಿಂಕ್ ಚತುರರು: ವಿನಾಯಕ ಅರಳಸುರಳಿ

ನೀವು ಬೆಂಗಳೂರಿಗೆ ಕೆಲವೇ ದಿನಗಳ ಕೆಳಗೆ ಹೊಸದಾಗಿ ಬಂದು ಸೇರಿಕೊಂಡಿದ್ದೀರ. ಈಗಷ್ಟೇ ಒಂದು ಕೆಲಸ ಸಿಕ್ಕಿದೆ. ಅಲ್ಲಿ ಯಾವುದೋ ರೋಡಿನ ಎಷ್ಟನೆಯದೋ ಕ್ರಾಸಿನಲ್ಲಿರುವ ನಿಮ್ಮ ರೂಮಿನಿಂದ ಆಫೀಸಿಗೆ ದಿನಾ ಬಸ್ಸಿನಲ್ಲಿ ಓಡಾಡುತ್ತಿದ್ದೀರ‌. ಭಾರತದ ಜ್ವಲಂತ ಸಮಸ್ಯೆಯಾದ ಜನಸಂಖ್ಯಾ ಸ್ಪೋಟದ ನೇರ ಪರಿಣಾಮದಿಂದ ಹಿಗ್ಗಮಗ್ಗಾ ರಶ್ ಆಗಿರುವ ಬಸ್ಸಿನಲ್ಲಿ ಸೊಂಟ ಬಳುಕಿದ ತೆಂಗಿನ ಮರದಂತೆ ನಿಂತು ದಿನವೂ ಪ್ರಯಾಣಿಸುತ್ತಿದ್ದ ನಿಮಗೆ ಈ ದಿನ ಇದ್ದಕ್ಕಿದ್ದಂತೆ ಸೀಟೊಂದು ಸಿಕ್ಕಿದೆ. ಬಸ್ಸಿನಲ್ಲಿ ನಿಂತಿರುವ ಉಳಿದ ಅಸಂಖ್ಯಾತ ಪ್ರಯಾಣಿಕರ ನಡುವೆ ನಿಮಗೆ ಮಾತ್ರ … Read more

ಅಸ್ಪೃಶ್ಯತೆಯ ಅನಾವರಣ- ಮುಲ್ಕ ರಾಜ ಆನಂದರ-Untouchable: ನಾಗರೇಖಾ ಗಾಂವಕರ

ಆತ ಭಾಕಾ. ಹದಿನೆಂಟರ ದಲಿತ ಯುವಕ. ಆತನ ಬಹುದಿನದ ಆಸೆ ಹಾಕಿ ಆಡುವುದು. ಅದಕ್ಕಾಗಿ ಹಾಕಿ ಕೋಲು ಅನಿವಾರ್ಯ. ಬಡವ ಭಾಕಾನಿಗೆ ಅದು ಕಷ್ಟಸಾಧ್ಯ. ಆದರೆ ಅದನ್ನು ಕರುಣಿಸುವ ಹವಾಲ್ದಾರ ಚರತ್‍ಸಿಂಗ್ ಆತನಿಗೆ ದೇವರಂತೆ ಕಾಣುತ್ತಾನೆ. ಸಾವಿರಾರು ವರ್ಷಗಳ ಕೋಟಲೆಗಳು ಕ್ಷಣಮಾತ್ರದಲ್ಲಿ ಕಣ್ಮರೆಯಾಗುತ್ತದೆ. ಬುಲಂದಶಹರನ ಹೊರವಲಯದಲ್ಲಿರುವ ಬಾವಿ. ಸವರ್ಣಿಯರಿಗೆ ಮಾತ್ರ ನೀರು ಸೇದುವ ಹಕ್ಕು. ಕೆಳಜಾತಿ ದಲಿತ ಹೆಣ್ಣುಮಕ್ಕಳು ಅವರು ನೀಡುವ ನೀರಿಗಾಗಿ ದಿನಗಟ್ಟಲೆ ಕಾಯಬೇಕು.ಸೋಹಿನಿ ಆಗಷ್ಟೇ ಪ್ರಾಯಕ್ಕೆ ಬಂದ ತರುಣಿ. ಭಾಕಾನ ಮುದ್ದಿನ ತಂಗಿ. ತನ್ನ … Read more

ಚಿಮಮಾಂದ ಅಧಿಚೀಯ Americanah: ನಾಗರೇಖಾ ಗಾಂವಕರ

“A white boy and a black girl who grow up in the same working class town in England can get together and race is secondary, but in America even if the white boy and black girl grow up in the same neighbourhood , race would be primary” ಇದು ಆಫ್ರಿಕಾದ ಸಮಕಾಲೀನ ಸಾಹಿತ್ಯ ಲೋಕದ ಶ್ರೇಷ್ಠ ಪ್ರತಿಭೆ ಚಿಮಮಾಂದ … Read more

ಡಿಸೆಂಬರ್ ಎಂದರೆ ಪ್ರವಾಸಗಳ ನೆನಪು..: ವಿನಾಯಕ ಅರಳಸುರಳಿ

ಶಾಲಾ ಪ್ರವಾಸವೆನ್ನುವುದು ಬದುಕಿನ ಮತ್ತೆಲ್ಲ ಪ್ರವಾಸಗಳನ್ನೂ ಮೀರಿಸುವಂಥಹಾ ಸವಿನೆನಪು. ಅರ್ಧವಾರ್ಷಿಕ ಪರೀಕ್ಷೆಗಳೆಲ್ಲಾ ಮುಗಿದು ಛಳಿಗಾಲದ ಪ್ರವೇಶವಾಗುವ ಹೊತ್ತಿಗೆ ಶೈಕ್ಷಣಿಕ ಪ್ರವಾಸದ ಘೋಷಣೆಯನ್ನು ಸ್ವತಃ ಹೆಡ್ ಮಾಷ್ಟರೇ ಮಾಡುತ್ತಿದ್ದರು. ಬರುವ ಆಸೆ ಎಲ್ಲರಲ್ಲೂ ಇರುತ್ತಿತ್ತಾದರೂ ನೂರಿನ್ನೂರು ರೂಪಾಯಿಗಳ ಪ್ರವಾಸ ಶುಲ್ಕವನ್ನು ಹೊಂದಿಸುವುದು ಎಲ್ಲರಿಗೂ ಸಾಧ್ಯವಿರುವ ವಿಷಯವಾಗಿರಲಿಲ್ಲ. ಕೆಲವರಿಗೆ ಸುಲಭವಾಗಿ ಸಿಗುತ್ತಿದ್ದ ಈ ಹಣ ಇನ್ನು ಕೆಲವರಿಗೆ ಅಪ್ಪ-ಅಮ್ಮನಿಂದ ಬೆನ್ನಿನ ಮೇಲೆ ನಾಲ್ಕು ಗುದ್ದಿಸಿಕೊಂಡ ಬಳಿಕವೇ ಸಿಗುತ್ತಿತ್ತು. ಇನ್ನೂ ಕೆಲವರು ತಾವು ಅಲ್ಲಿಲ್ಲಿ ಅಡಿಕೆ ಸುಲಿದು, ಗೇರುಬೀಜ ಹೆಕ್ಕಿ ಸಂಪಾದಿಸಿದ್ದ … Read more

Sean O’ Casey ನ “Juno and Paycock”-ಯುದ್ಧ ಜಗತ್ತಿನಲ್ಲಿ ಸಾಮಾಜಿಕ ಏರಿಳಿತ: ನಾಗರೇಖಾ ಗಾಂವಕರ

ಅದು Dublinನ ಎರಡು ಕೋಣೆಗಳ ಬಾಡಿಗೆ ಮನೆ. ಜೂನೋ ಆ ಮನೆಯ ಒಡತಿ. ಮಕ್ಕಳಾದ Jonny Boyle ಮತ್ತು Mary Boyle ಅಲ್ಲಿದ್ದಾರೆ. Jonny ಬೆಂಕಿ ಕಾಯಿಸಿಕೊಳ್ಳುತ್ತಿದ್ಧಾನೆ. ಮೇರಿ ದಿನಪತ್ರಿಕೆಯಲ್ಲಿಯ ಆ ದಿನ ವಿಶೇಷ ಸುದ್ದಿ ಓದುತ್ತಿದ್ದಾಳೆ. ಅವರ ನೆರೆಮನೆಯ ಹುಡುಗನೊಬ್ಬ ದುರಂತವಾಗಿ ಹತ್ಯೆಗೀಡಾಗಿದ್ದಾನೆ. ಅದೂ ಐರಿಶ್ ಸೈನಿಕರ ಕೈಯಲ್ಲಿ. ಈ ವಿಚಾರ ತಿಳಿಯುತ್ತಲೇ ಜಾನಿ ಬೆವರಿ ಹೋಗುತ್ತಾನೆ ಅಷ್ಟೊತ್ತಿಗೆ ಅಲ್ಲಿಗೆ ಬರುವ ತಾಯಿ ಜುನೋ ತಂದೆ Jonny Boyle ಕುರಿತು ವಿಚಾರಿಸುತ್ತಾಳೆ. Jonny ತಂದೆಯ ವರ್ತನೆಯ … Read more

ಕಳೆದು ಹೋಗುವ ಸುಖ (ಕೊನೆಯ ಭಾಗ): ಡಾ. ಹೆಚ್ಚೆನ್ ಮಂಜುರಾಜ್

ಇಲ್ಲಿಯವರೆಗೆ ಭಯವೇ ಭಕ್ತಿಯ ಮೂಲ; ಆದರೆ ಅದು ವ್ಯಕ್ತಿಯನ್ನು ಸಂಸ್ಕರಿಸಿ, ತನ್ನ ಜೀವಿತವನ್ನು ಸಾರ್ಥಕವಾಗಿಸಿಕೊಳ್ಳಲು ಪ್ರೇರಿಸಬೇಕು. ಪರಮಾತ್ಮನನ್ನು ಯಾವಾಗಲೂ ಶಿಕ್ಷಿಸುವ ದಂಡಾಧಿಕಾರಿಯೆಂದೇ ನೋಡಬಾರದು; ತನ್ನನ್ನು ಹೆತ್ತು, ಸಾಕಿದ ಪ್ರೇಮಮಯೀ ತಾಯಿಯಂತೆ, ಆತ್ಮೀಯವಾಗಿ ಕಂಡು, ತಪ್ಪುಗಳನ್ನು ತಿದ್ದುವ ಸ್ನೇಹಿತನಂತೆ ಕಾಣಬೇಕು. ಇವೆಲ್ಲವನ್ನೂ ಮಹಾಭಾರತದಲ್ಲಿ ಸರಳವಾಗಿ, ‘ಪರೋಪಕಾರಃ ಪುಣ್ಯಾಯ; ಪಾಪಾಯ ಪರಪೀಡನಂ’ ಎಂದು ತಿಳಿಸಲಾಗಿದೆ. ಜನಸೇವೆಯೇ ಜನಾರ್ಧನ ಸೇವೆ ಎಂಬ ಮಾತೂ ಇದೆ. ದೀನದುರ್ಬಲರ ಮತ್ತು ದರಿದ್ರರ ಸೇವೆಯಲ್ಲಿ ಪರಮಾತ್ಮನನ್ನು ಕಾಣು ಎಂದ ಸ್ವಾಮಿ ವಿವೇಕಾನಂದರ ಈ ಎಲ್ಲ ಮಾತುಗಳ … Read more

ಟೆನಿಸನ್‍ನ ಎರಡು ಕವಿತೆಗಳು: ನಾಗರೇಖಾ ಗಾಂವಕರ

ಗ್ರೀಕ ಮಹಾಕವಿ ಹೋಮರನ ಒಡೆಸ್ಸಿಯಲ್ಲಿ ಬರುವ ದಿ ಗ್ರೇಟ್ ಗ್ರೀಕ್ ಹೀರೋ Ithacaದ ರಾಜ ಒಡಿಸೆಸ್ ಅಥವಾ ಯೂಲಿಸಿಸ್‍ನ ಸಮುದ್ರಯಾನದ ರೋಚಕ ಅನುಭವದ ಕಥೆಯನ್ನೆ ಹಾಡುವ ಟೆನಿಸನ್‍ನ “ದಿ ಲೋಟಸ್ ಇಟರ್” ಕವಿತೆ ಮೊದಲು ಪ್ರಕಟವಾದದ್ದು 1832ರಲ್ಲಿ. ಟ್ರೋಜನ್ ಯುದ್ಧದ ನಂತರ ಯೂಲಿಸಿಸ್ ತನ್ನ ಗ್ರೀಕ್ ಸೈನಿಕರೊಂದಿಗೆ ಮರಳಿ ನಾಡಿಗೆ ವಾಪಸಾಗುತ್ತಿದ್ದ ದಾರಿಯಲ್ಲಿ ಮಾರ್ಗಮಧ್ಯೆ ಭೀಕರ ಬಿರುಗಾಳಿಗೆ ಸಿಕ್ಕು ತತ್ತರಿಸತೊಡಗಿದರು. ಜಲಮಾರ್ಗದ ಉದ್ದಗಲಕ್ಕೂ ಅಲೆದಾಡಿದರು. ಒಂಬತ್ತು ದಿನಗಳು ಹಾಗೂ ಹೀಗೂ ಸುತ್ತಿ ಸುಳಿದು ಹತ್ತನೇಯ ದಿನ ನಡುಗಡ್ಡೆಯೊಂದು … Read more

ಸಮರ್ಥ ಜೀವನ ನಿರ್ವಹಣೆಗೆ ಬೇಕು ಜೀವನ ಕೌಶಲ್ಯಗಳು: ತೇಜಾವತಿ ಹುಳಿಯಾರ್

ಜೀವನವೆನ್ನುವುದು ಮನುಷ್ಯನ ಜನನದಿಂದ ಮರಣದವರೆಗಿನ ನಿರಂತರ ಪಯಣ. ನಮ್ಮ ಜೀವನವನ್ನು ನಾವೇ ಸುಂದರಗೊಳಿಸಿಕೊಳ್ಳದ ಹೊರತು ಮತ್ಯಾರೂ ಸುಂದರಗೊಳಿಸಲು ಸಾಧ್ಯವಿಲ್ಲ. ಸಾಗುವ ಮಾರ್ಗದಲ್ಲಿ ಹಲವು ಏರು -ತಗ್ಗುಗಳನ್ನು, ತಿರುವುಗಳನ್ನು ಕಾಣುತ್ತೇವೆ. ಇಂದಿನ ಯಾಂತ್ರಿಕ ಯುಗದಲ್ಲಿ ಜೀವನ ನಿರ್ವಹಣೆಯು ಕೂಡ ಒಂದು ಕಲೆಯೇ ಹೌದು. ಬರುಬರುತ್ತಾ ಮಾನವರ ಭಾವನೆಗಳು ಕೂಡ ಸನ್ನಿವೇಶಕ್ಕೆ ತಕ್ಕಂತೆ ಕೃತಕವಾಗಿ ಜನ್ಮ ತಳೆಯುತ್ತಿರುವ ಈ ಸಂದರ್ಭದಲ್ಲಿ ಅವುಗಳ ತೀವ್ರತೆಯೂ ಕಡಿಮೆಯೇ. ಹಿಂದಿನಂತೆ ಗಟ್ಟಿ ಬೇರುಗಳು ಪಳಗುವ ಕೈಗಳು ತೀರಾ ವಿರಳ. ಜನರು ಕ್ಷಣಿಕ ಲಾಲಸೆಗಳಿಗೆ ಒಳಗಾಗಿ … Read more

ಜಾನ್ ಕೀಟ್ಸ್- ಪ್ರೇಮ ಮತ್ತು ಸಾವು: ನಾಗರೇಖಾ ಗಾಂವಕರ

“If I die, said I to myself, I have left no immortal work behind me, nothing to make my friends proud of my memory- but I have loved the principles of beauty in all things, and if I had time I would have made myself remembered” ಇದು ಕೀಟ್ಸ್ ಫ್ಯಾನಿಗೆ ಬರೆದ ಪತ್ರದ ಸಾಲುಗಳು. ಮನುಷ್ಯನ ಬದುಕು ಕ್ಷಣಿಕ. … Read more

ಕಲ್ಲರಳಿ… ಹೂವಾಗಿ…: ಪ್ರಸನ್ನ ಆಡುವಳ್ಳಿ

“ಕಲ್ಲರಳಿ ಹೂವಾಗಿ, ಎಲ್ಲರಿ ಗೂ ಬೇಕಾಗಿ, ಮಲ್ಲಿಕಾರ್ಜುನನ ಶಿಖರಕ್ಕೆ ಬೆಳಕಾಗಿ ಬಲ್ಲವರು ಹೇಳಿ ಸರ್ವಜ್ಞ” ಸರ್ವಜ್ಞನಿಂದ ಹಂಸಲೇಖಾವರೆಗೂ ಕಲ್ಲರಳಿ ಹೂವಾಗುವ ರೂಪಕ ಕನ್ನಡದ ಕವಿಗಳನ್ನು ಸದಾ ಕಾಡಿದಂತಿದೆ. ಸುಣ್ಣದ ಕಲ್ಲುಗಳು ನೀರಿನೊಂದಿಗೆ ಬೆರೆತು ಅರಳುವುದು ಸರ್ವಜ್ಞನಿಗೆ ಕಲ್ಲರಳಿ ಹೂವಾಗುವ ಹಾಗೆ ಕಂಡಿತು. ಕಾಡಿನ ಬಂಡೆಗಳ ಮೇಲೆ ಬೆಳೆಯುವ ಈ ಚಿತ್ರದಲ್ಲಿರುವ ಕಲ್ಲು ಹೂವಿನ ಗಿಡಗಳು ಸರ್ವಜ್ಞನ ಸಾಲುಗಳಿಗೆ ಸರಿಹೊಂದುವಂತಿವೆ. ಹಿಮಾಲಯದ ತಪ್ಪಲಿನಲ್ಲಿ, ಪೂರ್ವಾಂಚಲದ ಕಾಡುಗಳಲ್ಲಿ ಬೆಳೆಯುವ ಈ ಬಗೆಯ ಸಸ್ಯಗಳಿಗೆ ಕೆಲವೆಡೆ “ಪಥ್ಥರ್ ಪೋಡಿ” ಎನ್ನುತ್ತಾರೆ. ಸಂಸ್ಕೃತದಲ್ಲಿ … Read more

ಬೇಯದಿರು ಬೆಂಗಳೂರೇ..: ವಿನಾಯಕ ಅರಳಸುರಳಿ,

ಇದೆಂಥಹಾ ದಿನಗಳು ಬಂದುಬಿಟ್ಟವು? ಎಲ್ಲವೂ ಸರಿಯಾಗಿದ್ದರೆ ಅದೆಷ್ಟೋ ಲಕ್ಷ ಜನರೀಗ ಬೆಂಗಳೂರಿನಲ್ಲಿರುತ್ತಿದ್ದರು. ಬೀದಿ ಬದಿಯ ತಳ್ಳುಗಾಡಿಯಿಂದ ಹಿಡಿದು ಬಹುರಾಷ್ಟ್ರೀಯ ಕಂಪನಿಯ ತನಕ ನೂರಾರು ವಿಧದಲ್ಲಿ ಅಲ್ಲಿ ಜೀವನೋಪಾಯ ಸಾಗುತ್ತಿತ್ತು. ಅಲ್ಲಿ ಗಳಿಸಿದ ಸಂಬಳ ಕೇರಳದ ಆಳದಿಂದ ಹಿಡಿದು ಬಿಹಾರದ ತುದಿಯವರೆಗಿನ ಅದೆಷ್ಟೋ ಜನರ ಬದುಕ ಸಲಹುತ್ತಿತ್ತು. ಚಲನೆಯೇ ಬದುಕೆಂಬ ಮೂಲ ಮಂತ್ರವ ಜಪಿಸುತ್ತಾ ಕೋಟಿ ಜನಸಂಖ್ಯೆಯ ಆ ಪಟ್ಟಣ ಜಗತ್ತಿನ ಖ್ಯಾತ ನಗರಿಗಳ ಪಟ್ಟಿಯಲ್ಲಿ ತಾನೂ ಒಂದಾಗಿ ಮುನ್ನಡೆಯುತ್ತಿತ್ತು. ಬೆಂಗಳೂರೆಂದರೆ ಬರೀ ಕಾಯಕದ ಪಟ್ಟಣವೊಂದೇ ಆಗಿರಲಿಲ್ಲ. ಯಾಂತ್ರಿಕತೆಯ … Read more

ಧನದಾಹಕ್ಕೆ ದಿಕ್ಕೆಟ್ಟ ಬದುಕು ಆರ್ ಕೆ. ನಾರಾಯಣ್ ರ – The Financial Expert ನ ಮಾರ್ಗಯ್ಯ: ನಾಗರೇಖಾ ಗಾಂವಕರ

ಅದೊಂದು ಮುಂಜಾನೆ ಮಾರ್ಗಯ್ಯ ತನ್ನ ಕೆಂಪು ಬಣ್ಣದ ಅಕೌಂಟ್ ಪುಸ್ತಕದಲ್ಲಿ ಪೂರ್ಣ ತಲ್ಲೀನ. ತಂದೆ ತಾನು ಕೇಳಿದ ಆನೆ ಆಟಿಕೆ ಕೊಡಿಸಲಿಲ್ಲವೆಂದು ಕೋಪಗೊಂಡ ಬಾಲು ಕಾಲಿಂದ ಶಾಯಿ ಬಾಟಲಿಯ ಜೋರಾಗಿ ತೂರಿದ ರಭಸಕ್ಕೆ ಪುಸ್ತಕ ಬಣ್ಣಮಯವಾಗುತ್ತದೆ. ಸಿಟ್ಟಿಗೆದ್ದ ಮಾರ್ಗಯ್ಯ ಮಗನನ್ನು ದರದರ ಎಳೆದು ಕೋಣೆಯೊಳಗೆ ಕೂಡಿಹಾಕಲು ಯತ್ನಿಸುತ್ತಲೇ ತಪ್ಪಿಸಿಕೊಂಡ ಬಾಲು ಬಣ್ಣಮೆತ್ತಿದ ಪುಸ್ತಕ ಎತ್ತಿಕೊಂಡು ಹೊರಗೋಡಿ ತಟ್ಟನೆ ಗಟಾರಕ್ಕೆ ಚೆಲ್ಲಿ ಬಿಡುತ್ತಾನೆ. ಮಾರ್ಗಯ್ಯ ಹಣಕಾಸಿನ ಭಂಡಾರವೇ ಕೈತಪ್ಪಿದಂತೆ ಕಂಗಾಲಾಗುತ್ತಾನೆ. ಅದೇ ಬಾಲು ಪ್ರಾಯಕ್ಕೆ ಬರುತ್ತಲೂ ಇನ್ನಷ್ಟು ಅವಿವೇಕಿ … Read more

ಮುಜಂಟಿ ಜೇನು ಸಾಕಿ : ನಿಮ್ಮ ತೋಟದಲ್ಲಿಯೇ ಮಾತ್ರ ಪರಾಗಸ್ಪರ್ಷ ಮಾಡಿಸಿ: ಚರಣಕುಮಾರ್

ಅದು ಅರಣ್ಯಶಾಸ್ತ್ರ ಪದವಿ ಮುಗಿಸಿ ಜೇನುನೊಣಗಳ ಹೆಚ್ಚಿನ ಸಂಶೋಧನೆಗಾಗಿ ಕಾಡುಮೇಡು ಅಲೆಯುವ ಸಮಯ. ಒಮ್ಮೆ ಸ್ಥಳಾಂತರ ಜೇನುಕೃಷಿಕರನ್ನು ಭೇಟಿಮಾಡಿ ಸಂದರ್ಶನ ಮಾಡಬೇಕೆನಿಸಿತು. ಒಮ್ಮೆ ಸ್ಥಳಾಂತರ ಜೇನುಕೃಷಿ ಮಾಡುವ ರೈತನನ್ನು ಭೇಟಿ ಮಾಡಿದೆ. ಇನ್ನೂ ವಿದ್ಯಾರ್ಥಿ ಕಲಿಕೆಯ ಗುಂಗಿನಲ್ಲಿದ್ದ ನನಗೆ ಅಲ್ಲಿ ಒಂದು ಅಚ್ಚರಿಯ ಸಂಗತಿ. ಅದೇನೆಂದರೆ, ಸ್ಥಳಾಂತರ ಜೇನುಕೃಷಿ ಮಾಡುವವರಿಗೆ ಎರಡೆರಡು ಲಾಭ. ಹೇಗೆಂದರೆ, ಜೇನುತುಪ್ಪ, ಜೇನುಕುಟುಂಬಗಳ ಮಾರಾಟ ಮತ್ತು ಇತರೆ ಜೇನು ಉತ್ಪನ್ನಗಳು ಆದಾಯದ ಒಂದು ಮೂಲವಾದರೆ, ಸ್ಥಳಾಂತರ ಜೇನುಕೃಷಿ ಮಾಡುವಾಗ ತೋಟದ ಅಥವಾ ಹೊಲ … Read more