“%”: ಪ್ರಶಸ್ತಿ ಪಿ.

ಈ ವಾರ ಯಾವ ವಿಷಯದ ಬಗ್ಗೆ ಬರೆಯೋದಪ್ಪ ಅಂತ ಯೋಚ್ನೆ ಮಾಡ್ದಾಗೆಲ್ಲಾ ಐಡಿಯಾಗಳ ಚೌಚೌಭಾತ್ ಮನಸಲ್ಲಿ. ಅದೋ , ಇದೋ ಅಥವಾ ಮತ್ತೊಂದೋ ಅಂತ ಒಂದಿಷ್ಟು ಬಿಡಿಬಿಡಿ ಎಳೆಗಳು ಹೊಳೆದಿರುತ್ತೆ. ಈ ಸಲ ೧೦೦% ಇದ್ರ ಬಗ್ಗೆನೇ ಬರಿಬೇಕು ಅಂತ ಧೃಢ ನಿರ್ಧಾರ ಮೂಡೋವರೆಗೆ ಈ ಬಿಡಿ ಬಿಡಿ ಐಡಿಯಾಗಳು ಮನದ ಒಂದಿಷ್ಟು ಪ್ರತಿಶತ ಭಾಗ ಆಕ್ರಮಿಸಿಕೊಂಡಿರುತ್ತೆ. ಸ್ವಸ್ತಿಕ್ಕು, ಸೂಪರ್ರು, ಎ,ಐ,ಝೆಡ್ ಹೀಗೆ ಚಿಹ್ನೆಗಳು ಅಕ್ಷರಗಳೆಲ್ಲಾ ಸಿನಿಮಾ ಆಗೋದು ನೋಡಿದ್ವಿ, ಇದೇನಿದು ಪ್ರತಿಶತದ ಚಿಹ್ನೆ(%) ಅಂದ್ಕೊಂಡ್ರಾ ? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಗ್ನಿ: ಬೆಳ್ಳಾಲ ಗೋಪಿನಾಥ ರಾವ್

       ೧. ಬಲಿ   ಚಂದ್ರ ಹಾಸ ಮತ್ತೊಮ್ಮೆ ತಲೆ ಕೆರೆದುಕೊಂಡ.   ಎರಡಸ್ಥಂತಿನ  ಭದ್ರ ಬುನಾದಿ ಎಬ್ಬಿಸಿ ಕಟ್ಟಿಸಿದ ಈ ಕಟ್ಟೋಣ    ಅಲುಗಾಡುವದೆಂದರೇನು?  ಅರ್ಥವಾಗಲಿಲ್ಲ.     ಚೈತ್ರಂಗೆ ಹೇಳೋಣವೆಂದುಕೊಂಡ ಮತ್ತೆ ನಕ್ಕಾಳು.  ನಿನ್ನೆ ಹಲ್ಲಿನ ವೈದ್ಯರು ಕೊಟ್ಟ  ಮಾತ್ರೆಯದ್ದೇನಾದರೂ ಸೈಡ್ ಎಫೆಕ್ಟ್ ಆಗಿರಬಹುದಾ.   ಸ್ವಲ್ಪ ಮತ್ತಿನಲ್ಲಿದ್ದವರ ಹಾಗಿದ್ದೀರಾ ಚೈತ್ರನ ರಾತ್ರೆಯ ಮಾತು ನೆನಪಾಯ್ತು.  ಕಣ್ಣೂ ನಿಚ್ಚಳವಾಗಿ ಕಾಣ್ತಾ ಇದೆ.  ಚಿವುಟಿಕೊಂಡ.   ಇಲ್ಲ ಸರಿಯಾಗಿ ನೋವಾಗ್ತಾ ಇದೆ.  ಮತ್ತೆ,,?  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಸಾಬಯ್ಯ ಕಲಾಲ್, ನಾಗರಾಜ ವಿ.ಟಿ., ಕಾವ್ಯಪ್ರಿಯ

ಗೋವಿನ ನೋವು ನನ್ನ ಕೊಬ್ಬಿದ ಮಾಂಸವನು ತಿಂದು ತೇಗುವ ನಿನಗೆ.. ಚೀಪಿದ ಮೂಳೆಯನ್ನಾದರು ಸಮಾಧಿ ಮಾಡಿದ್ದರೆ.. ನನ್ನೊಳಗಿರುವ ಮುಕ್ಕೋಟಿ ದೇವರ ಆತ್ಮಕ್ಕಾದರು ಶಾಂತಿ ದೊರಕುತ್ತಿತ್ತು..|| ಹರೆಯದಲ್ಲಿ ಹಾಲು ಕರೆದು ಹಾಲುಣಿಸಿದ ತಾಯಿಗೆ ದ್ರೋಹ ಬಗೆದು ಮುದಿತನದಲ್ಲಿ ಕಟುಕನಿಗೆ ಕೊಡುವ ಬದಲು ನೀನೆ ಜೀವಂತ ಸಮಾಧಿ ಮಾಡಿದ್ದರೆ ಹಾಲುಣಿಸಿದ ಋಣವಾದರು ತೀರುತ್ತಿತ್ತು..|| ನಿನಗಾಗಿ ಹಗಲಿರುಳು ದುಡಿದು ಬಸವಳಿದ ನನಗೆ ಕಸಾಯಿಖಾನೆಗೆ ಕಳಿಸುವ ಬದಲು ದವಾಖಾನೆಗೆ ನನ್ನ ಕಳಿಸಿದ್ದರೆ ಈ ತಾಯಿಯ ಮನದ ನೋವು ಹಗುರವಾಗುತ್ತಿತ್ತು..|| ತಾಯಿಯೆಂದು ಪೂಜಿಸಿದ ನಿನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೫): ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಸುಸ್ಥಿರ ಅಭಿವೃದ್ಧಿ-ಚಿಂತನಾಯುಕ್ತ ಸಂರಕ್ಷಣೆ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಕೇದ್ ತಾಲ್ಲೂಕಿನಲ್ಲಿ ಮಹಾರಾಷ್ಟ್ರ ಕೈಗಾರಿಕ ಅಭಿವೃದ್ದಿ ನಿಗಮವಿದೆ. ಇಲ್ಲಿ ಭರಪೂರ ರಾಸಾಯನಿಕ ಕೈಗಾರಿಕೆಗಳಿವೆ. ನೆರೋಲ್ಯಾಕ್, ಹಿಂದೂಸ್ತಾನ್ ಲಿವರ್, ರತ್ನಗಿರಿ ಕೆಮಿಕಲ್ಸ್ ಹೀಗೆ ಹತ್ತು ಹಲವು ವಿಷಕಕ್ಕುವ ಕಾರ್ಖಾನೆಗಳಿವೆ. ಈ ತರಹದ ಕಾರ್ಖಾನೆಗಳಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಿರಲೆಂದು ಅಲ್ಲಿನ ಸರ್ಕಾರ ೨೦೦೬ರಲ್ಲಿ ಲೋಟೆ ಅಭ್ಯಾಸ್ ಗಾತ್ ಎಂಬ ಕಾರ್ಖಾನೆಗಳ ಮೇಲ್ವಿಚಾರಣೆ ಅಧ್ಯಯನ ತಂಡವನ್ನು ರಚಿಸಿತು. ಈ ಸಮಿತಿಯು ಕಾಲ-ಕಾಲಕ್ಕೆ ತನ್ನ ವರದಿಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆ ಬೆಳದಿಂಗಳ ರಾತ್ರಿಯಲಿ ಒಂಟಿತನ: ಪದ್ಮಾ ಭಟ್

ಅದೊಂದು ಸುಂದರ ಬೆಳದಿಂಗಳ ರಾತ್ರಿ.. ತಂಪು ತಂಗಾಳಿ ಎದೆಗೆ ಸೋಕಿರಲು ಕನಸುಗಳ ಪದಗುಚ್ಚವುಕವಲೊಡೆದು ಬಂದಿತು.ನಕ್ಷತ್ರಗಳನ್ನು ಎಣಿಸುತ್ತಾ ಎಣಿಸುತ್ತ ಚಂದಿರನ ನಗೆಯನು ನೋಡುತ್ತಿದ್ದೆ. ಭಾವನೆಗಳ ಹೊಸ್ತಿಲು ನೆಲಕೆ ತಾಕದಂತೇ ಹಾರುತಿರಲು ಮನಸಿಗೆ ಮುದ ನೀಡುವ ಬಚ್ಚಿಟ್ಟ ನವಿಲುಗರಿ. ಆಗಲೇ ಕಾಡುವಒಂಟಿತನ. ಕೆಲವೊಂದು ಸಮಯಕ್ಕೆ, ಯೋಚನೆಗಳಿಗೆ ಆಸ್ಪದ ನೀಡುವ ಒಂಟಿತನ. ಆ ಒಂಟಿತನವು ಕೆಲವು ಬಾರಿಅತ್ಯಂತ ಖುಷಿಯನ್ನುಕೊಡುತ್ತದೆ.ಕನಸುಗಳ ಲೋಕಕ್ಕೆ ಒಬ್ಬಂಟಿಯಾಗಿರುವಾಗ ಮಾತ್ರ ಹೋಗಲು ಸಾಧ್ಯ. ಕನಸೇ ಬದುಕನ್ನು ನನಸೆಂದು ಮಾಡುವೆ ಎಂದು ಕೇಳಿಕೊಳ್ಳಲು ಅವಕಾಶ ನೀಡುವುದು. ಬೇಕಾದ ಹಾಗೆ ತಿರುಗಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 63): ಮಹಾಂತೇಶ್ ಯರಗಟ್ಟಿ

    ಪ್ರಶ್ನೆಗಳು: ೧.    ವಿಶ್ವಸಂಸ್ಥೆಯ ಶಿಕ್ಷಣ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಮುಖ್ಯ ಕಛೇರಿ ಎಲ್ಲಿದೆ? ೨.    ಯುನಿಸೆಫ್ (UNICEF) ವಿಸ್ತೃತ ರೂಪವೇನು? ೩.    ವೀಚಿ ಇದು ಯಾರ ಕಾವ್ಯನಾಮವಾಗಿದೆ? ೪.    ೧೯೧೮ರಲ್ಲಿ ಆರಂಭವಾದ ಪ್ರಬುದ್ಧ ಕರ್ನಾಟಕ ಪತ್ರಿಕೆಯ ಮೊದಲ ಸಂಪಾದಕರು ಯಾರಾಗಿದ್ದರು? ೫.    ಸಲ್ಮಾನ್ ಖಾನ್ ಮೇಣದ ಪ್ರತಿಮೆ ಲಂಡನ್ನಿನ ಯಾವ ಮ್ಯೂಸಿಯಂನಲ್ಲಿದೆ? ೬.    ದೇಶದ ಮೊಟ್ಟ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕಿರಣ ಬೇಡಿಯವರು ಇತ್ತೀಚೆಗೆ ಯಾವ ಪಕ್ಷ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಯದ ಬೆನ್ನೇರಿ ಬಂತು: ಅನಿತಾ ನರೇಶ್ ಮಂಚಿ

’ಹತ್ತು ಗಂಟೆಗೆ ರೆಡಿಯಾಗಬೇಕು ದಾರಿಯಲ್ಲಿ ಹೋಗ್ತಾ ಕೇಶು ಮಾಮಾನನ್ನು ಕರೆದುಕೊಂಡು  ಮದುವೆ ಮನೆಗೆ ಹೋಗೋದು.. ನೀನಿನ್ನು ನಿಧಾನ ಮಾಡ್ಬೇಡ’ ಅನ್ನುವ ಮಾತನ್ನು ನೂರು ಸಲ ಕೇಳಿ ಆಗಿತ್ತು ಇವರ  ಬಾಯಲ್ಲಿ. ಸರಿ ಇನ್ನು ನನ್ನಿಂದ ತಡ ಆಯ್ತು ಅನ್ನೋದು ಬೇಡ ಅನ್ನುವ ಸಿಟ್ಟಿನಲ್ಲಿ ಸ್ವಲ್ಪ ಬೇಗವೇ ಹೊರಟು ಬಿಟ್ಟಿದ್ದೆ.  ’ಹೇಗೂ ಹೊರಟಾಗಿದೆಯಲ್ಲ.. ಇನ್ನು ಮನೆಯೊಳಗೆ ಕೂತೇನು ಮಾಡುವುದು. ಹೋಗಿ ಕೇಶು ಮಾಮ ಬರ್ತೇನೆ ಅಂತ ಹೇಳಿದ ಜಾಗದಲ್ಲೊ ಕಾಯೋಣ’ ಅಂದರಿವರು. ನನಗೂ ಅದೇ ಸರಿ ಅನ್ನಿಸಿ ಕಾರೇರಿದೆ.  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಯಿ ಪಾಡು: ಗುಂಡುರಾವ್ ದೇಸಾಯಿ

ವಾರದಿಂದ ತಲೆ ಸಿಡದು ಹೋದಂಗಾಗಕತಿತು. ಕ್ಷಣ ಕ್ಷಣಕ್ಕೂ ಭಯ ಆತಂಕ ಸುರುವಾಗಕತಿತು, ಶಾಲೆಯಲ್ಲಿ ಪಾಠ ಮಾಡುವಾಗಲು ಮನೆ ವಾತಾವರಣ ನೆನಸಿಕೊಂಡ ಕೂಡಲೆ ಸ್ಥಬ್ಧನಾಗಿ ನಿಂತುಬಿಡುತ್ತಿದ್ದೆ.  ಮಕ್ಕಳು ’ಸಾರ್, ಮುಂದು ಹೇಳ್ರೀ ಯಾಕ ಹಾಂಗ ನಿಂತ್ರಿ’ ಎಂದು ಎಚ್ಚರಿಸಿದಾಗಲೇ ವಾಸ್ತವಕ್ಕೆ ಬರೋದು. ಸಹುದ್ಯೋಗಿಗಳು ’ಯಾಕ ಹಿಂಗಾಗ್ಯಾರ? ಏನು ತಾಪತ್ರಯನೋ ಏನೋ? ಅಥವಾ ಮನೆಯಲ್ಲಿ ಮನೆಯವರ ಜೊತೆಗೆ ಮನಸ್ತಾಪನೋ?’ ಎಂದು ಹಲವು ಬಾರಿ ಕೆದುಕಲೆತ್ನಿಸಿದರು ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ನಿಮಗೂ ಏನೇನೋ ಕಲ್ಪನೆಗಳು ನನ್ನ ಬಗ್ಗೆ ಮೂಡಿರಬೇಕಲ್ಲ. ಅದು ಹೇಳುವ ವಿಷಯವೇನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಮಿಲಿ ಎಂಬ ಅಮಲು: ಮಹೇಂದ್ರ ಎಂ. ನವೋದಯ

೧೯ನೇ ಶತಮಾನದ ಇಂಗ್ಲೀಷ್ ಸಾಹಿತ್ಯದಲ್ಲಿನ ಮಹಿಳಾ ಲೇಖಕಿಯರಲ್ಲಿ ಅತ್ಯುನ್ನತ ಸ್ಥಾನ ಅಲಂಕರಿಸಿದವರಲ್ಲಿ ಎಮಿಲಿ ಬ್ರಾಂಟೆ ಕೂಡ ಒಬ್ಬರು. ಜುಲೈ ೩೦, ೧೮೧೮ ರಂದು ಜನಿಸಿ, ತೀರಾ ಸಂಕ್ಷಿಪ್ತವಾಗಿ ೩೦ ವರ್ಷಗಳ ಕಾಲ ಬದುಕಿದರೂ ಅವರ ಸಾಹಿತ್ಯ ಕೊಡುಗೆ ಅನನ್ಯ ಮತ್ತು ಅಜರಾಮರ. ಎಮಿಲಿ ಬೆಳೆದದ್ದು ದೂರದ ಇಂಗ್ಲೆಂಡ್, ಬರೆದದ್ದು ಇಂಗ್ಲೀಷ್ ನಲ್ಲಿ, ಎಮಿಲಿ ಚಿಕ್ಕ ವಯಸ್ಸಿನಲ್ಲಿ ತಾಯಿಯನ್ನು ಕಳೆದುಕೊಂಡು, ಕಠಿಣ ಸ್ವಭಾವದ ನೆಂಟನಬ್ಬೊಳ ಮನೆಯಲ್ಲಿ ಬೆಳೆದಳು. ಹೆಚ್ಚು ಔಪಚಾರಿಕ ಶಿಕ್ಷಣವನ್ನು ಪಡೆಯಲಿಲ್ಲ. ಆಕೆ ಯಾರೊಂದಿಗೂ ಬೆರೆತವಳಲ್ಲ, ಒಂಟಿತನವೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೌನವೊಂದು ಸಾಗುತಿಹುದು ಬದುಕು ಬಿಟ್ಟು: ಸಚೇತನ

  ವಿಶಾಲ ಮರುಭೂಮಿಯ ಮರಳಿನ ಮೇಲೆ ಬಿಸಿಲು ಚೆಲ್ಲುತ್ತ ನಿಂತ ನೀಲ ಆಕಾಶಕ್ಕೆ ಒಂದೇ ಬಣ್ಣ, ಕಪ್ಪು, ಬಿಳಿ, ಕಡು ನೀಲ, ಕಡುಗಪ್ಪು, ಬಂಗಾರ, ಹಳದಿ ಯಾವುದೇ ಬಣ್ಣಗಳಿಲ್ಲದ ಮೋಡಗಳ ಅಡಿಯಲ್ಲಿರುವವರ ಬದುಕು ಕೂಡ, ಬಣ್ಣಗಳಿಲ್ಲದ ಬದುಕು. ಈ ನೀಲ ಆಕಾಶದ ಕೆಳಗೆ  ಇರಾಕ್ ಮತ್ತು ಟರ್ಕಿ ನಡುವಿನ ಮರುಭೂಮಿಯಂತ ಪ್ರದೇಶದಲ್ಲಿ ಕುರ್ದಿಶ್ ಎನ್ನುವ ನಿರಾಶ್ರಿತರ ಕ್ಯಾಂಪ್ ಇದೆ. ಇರಾಕ್ ಮತ್ತು ಅಮೇರಿಕಾದ ಯುದ್ಧೋನ್ಮಾದದ ಹರಿತ ಧೂಳು ಎಲ್ಲೆಲ್ಲು ತುಂಬಿದೆ. ಯುದ್ಧವೆಂದರೆ ಸೈನಿಕರ ಬಡಿದಾಟವಲ್ಲ, ಬಂದೂಕುಗಳ ಶಬ್ದಗಳಲ್ಲ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಕತೆಗಳು: ನವೀನ್ ಮಧುಗಿರಿ, ಮುಕುಂದ್ ಎಸ್.

ಚಪ್ಪಾಳೆ ಇಡೀ ಶಾಲೆಗೇ ವರ್ಷದ ಉತ್ತಮ ಪ್ರತಿಭಾವಂತ ವಿದ್ಯಾರ್ಥಿ ಎಂದು ಮಗ ವೇದಿಕೆಯ ಮೇಲೆ ಪ್ರಶಸ್ತಿಯನ್ನು ಪಡೆವಾಗಯುವಾಗ, ಪೋಷಕರ ಸಾಲಿನಲ್ಲಿ ಕುಳಿತ ಅವನ ಕುರುಡು ತಂದೆ ಸಂತಸದಿಂದ ಎಲ್ಲರೊಟ್ಟಿಗೆ ಚಪ್ಪಾಳೆ ತಟ್ಟಿದರು. *** ನಾಯಿ ಆ ಮನೆಯಲ್ಲಿ ಅದು ಊಟದ ಸಮಯ. ಗಂಡ ಊಟಕ್ಕೆ ಕುಳಿತಿದ್ದ, ಹೆಂಡತಿ ಬಡಿಸುತ್ತಿದ್ದಳು. ಎರಡು ತುತ್ತು ತಿನ್ನುವಾಗ ಗಂಡ ತನ್ನ ಮಾಮೂಲಿ ಗೊಣಗಾಟವನ್ನ ಶುರು ಮಾಡಿದ. ಅನ್ನ ಯಾಕಿಷ್ಟು ಮೆತ್ತಗೆ ಮಾಡಿದ್ದೀಯ?  ಸಾರಿಗೆ ಉಪ್ಪು ಕಡಿಮೆ. ಪಲ್ಯ ತುಂಬಾ ಖಾರ ಖಾರ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಧ್ವನಿ ಕೇಳೋ ಆಸೆಯೂ, ರೆಕಾರ್ಡಿಂಗ್ ನೆನಪೋಲೆಯು: ಪ್ರಶಸ್ತಿ ಪಿ.

ಶಾಲಾ ದಿನಗಳಲ್ಲಿ ಆಕಾಶವಾಣಿಯಲ್ಲಿ ಶನಿವಾರ ಬರ್ತಿದ್ದ ಗಾಂಧಿ ಸ್ಮೃತಿ, ಭಾನುವಾರದ ರೇಡಿಯೋ ಸಿನಿಮಾ(ಧ್ವನಿಯಲ್ಲೇ ಸಿನಿಮಾದ ಕಲ್ಪನೆಗಳ ಕಟ್ಟೋ ಅದ್ಬುತ ಅನುಭವ ಕೇಳೇ ಸವಿಬೇಕು), ಪ್ರತಿದಿನ ಸಂಸ್ಕೃತ ವಾರ್ತೆಯ ಬಲದೇವಾನಂದ ಶರ್ಮ,  ಏಳೂ ಮೂವತ್ತೈದರ ವಾರ್ತೆ, ಎಂಟರ ಹಿಂದಿ, ಇಂಗ್ಲೀಷ್ ವಾರ್ತೆಗಳು, ನಂತರದ ರೇಡಿಯೋ ಡಾಕ್ಟರಗಳನ್ನು ಕೇಳೇ ದೊಡ್ಡವರಾದ ನಮಗೆ  ರಾತ್ರಿ ಎಂಟು ಘಂಟೆಗೆ ಬರೋ "ಯುವವಾಣಿ" ಅಚ್ಚುಮೆಚ್ಚಾಗಿತ್ತು. ಅದರಲ್ಲಿ ಬರ್ತಿದ್ದ ಕಾಲೇಜು, ಶಾಲಾ ವಿದ್ಯಾರ್ಥಿಗಳು ಮತ್ತು ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮ ಕೇಳುತ್ತಿದ್ದ ನನಗೆ ನಾನೂ ಒಮ್ಮೆ ರೇಡಿಯೋದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಿರುಗುಬಾಣ: ಬಸವರಾಜ ಎಂ.

ಆಫೀಸ್ ಗೆ ತಡವಾಗುತ್ತಿತ್ತು. ಇಸ್ತ್ರಿ ಮಾಡಿದ ಬಟ್ಟೆ  ಬೇರೆ ಇರಲಿಲ್ಲ. ಮಗನಿಗೆ ಹೇಳೋಣವೆಂದುಕೊಳ್ಳುವ ಹೊತ್ತಿಗೆ ಗಾದೆ ನೆನಪಿಗೆ ಬಂತು. "ಅಪ್ಪ ಮಾಡಿದ್ದು ಉತ್ತಮ,  ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಆಳು" ಅಂತ. ಮನೆಯಲ್ಲಿ ಆಳು ಇಡಲಂತೂ ಸಾಧ್ಯವಾಗಿಲ್ಲ ಹೋಗಲಿ ನಾನೆ ಮಾಡೋಣ ಎಂದುಕೊಂಡರೆ ನನಗೊಂದು ಜಿಜ್ಞಾಸೆ. ಅದೇನೆಂದರೆ ನನ್ನ ಅಪ್ಪನನ್ನು  ಪರಿಗಣಿಸಿದರೆ ನಾನು ಮಾಡಿದ್ದು ಮಧ್ಯಮವಾಗುತ್ತದೆ. ಮಗನಿಗೆ  ಹೇಳೋಣವೆಂದರೆ ಮತ್ತೆ ಮಧ್ಯಮದ ವಿಚಾರ ಬಂತು. ಈಗ ನನ್ನ ಕೋಪ ತಿರುಗಿದ್ದು ನನ್ನ ಅಂಗಿಯ ಇಸ್ತ್ರಿಯ ಮಾಡದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಉರ್ಬಾನ್ ಡಿಸೋಜ, ಅಕುವ, ಶಿವಕುಮಾರ ಸಿ.

ಹುಡುಕಾಟ ನಾನು ನನ್ನ ಬದುಕನ್ನು ಹೀಗೆಯೇ ಸುಮ್ಮನೆ ನೋಡಿದೆ, ಆಗ೦ತುಕ, ಆಗ೦ತುಕನನ್ನು ಭೇಟಿಯಾದ೦ತಾಯ್ತು. ಇದು ನನ್ನ ಬದುಕೇ? ಉತ್ತರ ಹುಡುಕಾಡಿದೆ. ಒಳ್ಳೇದೇ ಮಾಡಿದೆ,  ಕೋಟಿ ದೇವರನ್ನ ಬೇಡಿದೆ, ಆದರೂ ನನ್ನ ಬದುಕನ್ನು ನಾನೇ ಅರಿಯದಾದೆ. ಇತರ ಚಿ೦ತನೆ, ಮಾತುಗಳೇ ನಾನೆ೦ದುಕೊ೦ಡೆ. ಕಡಿದವನ, ಕುಡಿದವನ, ಅತ್ಯಾಚಾರಿಯ, ಲ೦ಚವಾದಿಯ ಬದುಕು ಯಾವ ರೀತಿಯದು ಎಂದು ನೆನೆದು ನಡುಗಿದೆ. ಸತ್ತ ನ೦ತರದ ಬದುಕನ್ನು ನೆನೆದು ಈಗಿನ ಬದುಕ ಮರೆತೆ? ಹೂವನ್ನೇ ಬಯಸಿದ ಬದುಕಿನೊಳಗೆ ಹರಿತ ಚಾಕುವೇ ತಿವಿಯಿತು. ಬದುಕೇ, ನೀನು ಮತ್ತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೪): ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಪಶ್ಚಿಮಘಟ್ಟಗಳ ಮಹತ್ವವನ್ನು ಅರಿಯಬೇಕಾದರೆ ಈ ಕೆಳಗಿನ ಕೆಲ ಅಂಕಿ-ಅಂಶಗಳನ್ನು ಗಮನಿಸಬೇಕು. ಭಾರತಾದ್ಯಂತ ಕಂಡು ಬರುವ ೪೦೦೦ ಜಾತಿಯ ಪುಷ್ಪವೈವಿಧ್ಯದಲ್ಲಿ ೧೦೮೦ ಜಾತಿಗಳು ಈ ಘಟ್ಟಪ್ರದೇಶದಲ್ಲಿವೆ. ದೇಶದಲ್ಲಿರುವ ೬೪೫ ನಿತ್ಯಹರಿಧ್ವರಣ ಜಾತಿಯ ಮರಗಳಲ್ಲಿ ೩೬೨ ಜಾತಿಯ ಮರಗಳು ಇಲ್ಲಿವೆ. ೧೦೦೦ ಜಾತಿಯ ನೆಲಮಟ್ಟದ ಪೊದೆ-ಬಳ್ಳಿಗಳ ಪ್ರಬೇಧಗಳಲ್ಲಿ ೬೮೨ ಪ್ರಭೇದಗಳು ಘಟ್ಟಗಳಲ್ಲಿವೆ ಹಾಗೂ ಇದರಲ್ಲಿ ೨೮೦ ಪ್ರಬೇಧಗಳು ಪಶ್ಚಿಮಘಟ್ಟಗಳಲ್ಲಿ ಮಾತ್ರ ಲಭ್ಯವಿದೆ. ಅಕಶೇರುಕ ಪ್ರಬೇಧಗಳ ಒಟ್ಟು ೩೫೦ರಲ್ಲಿ ೭೦ ಪ್ರಬೇಧಗಳು ಪ್ರಪಂಚದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಮಕ್ಕಳ ಸುರಕ್ಷತೆಗಿರಲಿ ಮೊದಲ ಆದ್ಯತೆ” : ಹೊರಾ.ಪರಮೇಶ್ ಹೊಡೇನೂರು

"ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಹೊಣೆ" ಎಂಬ ಸಾಮಾಜಿಕ ಕಾಳಜಿಯ ಘೋಷವಾಕ್ಯ ಇಂದಿನ ದಿನಮಾನಗಳಲ್ಲಿ ತುಂಬಾ ಚಾಲ್ತಿಯಲ್ಲಿದೆ. ಏಕೆಂದರೆ, ಭವಿಷ್ಯದ ನಾಗರೀಕರಾಗಿರುವ ಮಕ್ಕಳ ಬಾಲ್ಯವು ತುಂಬಾ ಆಯಕಟ್ಟಿನದ್ದಾಗಿದ್ದು, ತಮ್ಮ ಮನೆಯ, ಶಾಲೆಯ ಮತ್ತು ಸಮುದಾಯದ ನಡುವೆ ಸಹಜ ತುಂಟಾಟ, ತರಲೆ, ಚೇಷ್ಟೆ, ಹುಡುಗಾಟಿಕೆಗಳಿಂದ ಕೂಡಿರುತ್ತದೆ ಮತ್ತು ಈ ಸಂದರ್ಭಗಳಲ್ಲಿ ಅಕಾಸ್ಮಾತ್ ಆಗಿ ಅಚಾತುರ್ಯಗಳು ಉಂಟಾದಾಗ ಅನಾಹುತಗಳೇ  ಜರುಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಂತಹ ಕೆಲವು ಸಂದರ್ಭಗಳು, ಸಾಧ್ಯತೆಗಳ ಬಗೆಗೆ ಒಂದಿಷ್ಟು ಮೆಲುಕು ಹಾಕುತ್ತಾ, ಮಕ್ಕಳ ಸುರಕ್ಷತೆಗೆ ಹೇಗೆ ಹೊಣೆಗಾರಿಕೆ ನಿಭಾಯಿಸಬೇಕೆಂಬುದನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 62): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಯೋಜನಾ ಆಯೋಗದ ಉಪಾಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೨.    ಕುಂದರನಾಡಿನ ಕಂದ ಎಂದು ಯಾವ ಸಾಹಿತಿಯನ್ನು ಕರೆಯುತ್ತಾರೆ? ೩.    ಎಚ್.ಎಸ್.ಸಿ.ಎಲ್ (HSCL) ನ ವಿಸ್ತೃತ ರೂಪವೇನು? ೪.    ಅಖಂಡೇಶ್ವರ ಇದು ಯಾರ ಅಂಕಿತನಾಮವಾಗಿದೆ? ೫.    ಕಂಪ್ಯೂಟರ್ ಚಿಪ್ ತಯಾರಿಕೆಯಲ್ಲಿ ಬಳಸುವ ಮೂಲವಸ್ತು ಯಾವುದು? ೬.    ರಾಮಾಯಣದ ಕಾಲದಲ್ಲಿ ಚಿತ್ರದುರ್ಗವನ್ನು ಯಾವ ಹೆಸರಿನಿಂದ ಕರೆಯಲಾಗುತಿತ್ತು? ೭.    ಒಂದು ಹೆಕ್ಟೇರಿನಲ್ಲಿ ಎಷ್ಟು ಚರದ ಮೀಟರುಗಳಿವೆ? ೮.    ಕೆನಡಾದ ರಾಷ್ಟ್ರೀಯ ಪ್ರಾಣಿ ಯಾವುದು? ೯.    ಶಿವಪ್ಪ ನಾಯಕನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾವಿರದ ನೋಟು: ಗಣೇಶ್ ಖರೆ

ಬೆಂಗಳೂರಿನ ರಸ್ತೆಯ ಮೂಲೆಯಲ್ಲಿ ಡೊಂಬರಾಟದವರು ತಮ್ಮ ಕಸರತ್ತು ತೋರಿಸುವಲ್ಲಿ ನಿರತರಾಗಿದ್ದರು. ನೋಡಿದರೆ ಯಾವುದೋ ಹಳ್ಳಿಯ ಮೂಲೆಯಿಂದ ಬಂದವರಂತೆ ಅವರ ವೇಶ ಭೂಶಣವಿತ್ತು. ಹಗ್ಗದ ಮೇಲೆ ನಡೆಯುವುದು, ಗೋಲಕದೊಳಗೆ  ತಮ್ಮ ಮೈಯ್ಯನ್ನು ತೂರಿಸುವುದು, ತಲೆ ಕೆಳಗಾಗಿ ಕೈಯ್ಯ ಮೇಲೆ ನಡೆಯುವುದು ಹೀಗೆ ಕಸರತ್ತು ಸಾಗಿತ್ತು. ಸಿಗುವ ಬಿಡಿ ಕಾಸಿಗಾಗಿ ಜೀವವನ್ನು ಪಣಕ್ಕಿಟ್ಟು ಮಾಡುವ ಕಸರತ್ತು ಜನರನ್ನು ಅವರತ್ತ ಆಕರ್ಷಿಸುತ್ತಿತ್ತು. ಡೊಂಬರಾಟದ ಗುಂಪಲ್ಲಿ ಇದ್ದದ್ದು ಮೂರು ಜನ, ಎಲ್ಲರೂ ಹೆಂಗಸರೇ. ಒಬ್ಬಳಿಗೆ ಸುಮಾರು ಮೂರರಿಂದ ನಾಲ್ಕು ವಯಸ್ಸಿರರಬಹುದು, ನೋಡೊಕೆ ಮುಗ್ಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಗತ: ತ್ರಿವೇಣಿ ಟಿ.ಸಿ.

ನಿನ್ನ ಬಾಳನ್ನು ಬೆಳಗೋಕ್ ಬಂದ ಹುಡುಗಿ ಇನ್ನೊಂದು ಹೆಣ್ಣಿನ ಬಾಳನ್ನು ಕತ್ತಲೆ ಮಾಡಿದ್ದು ನಿಜವಲ್ವೆ. ಕನಸುಗಳ ಬಿತ್ತಿ ನೀರು ಸುರಿಸದೆ ಸುರುಟಿದೆ ನನ್ನ ಕನಸು.  ೨೦೧೦ ರ ಒಂದು ಮಧ್ಯಾನ್ಹ ಬಂದ ಇ-ಮೇಲ್,  ೨೦೦೯ ರಲ್ಲಿ ಯಾವುದೋ ಹಳೆ ಪೇಮೆಂಟ್ ಕೊಟ್ ಬಿಡಿ ಅಂತ ಮೆಸ್ಸೇಜು…  ಅವತ್ತಿಗೆ ರಿಪ್ಲೈ ಆಯ್ತು, ಕೊಡೋಣ ತಡ್ಕೊಳಪ್ಪ ……  ಮತ್ತೆ ಮೂರನೇ ದಿವಸಕ್ಕೆ ಒಂದು ರಿಮೈನ್ಡರ್  ಕೊಡ್ತೀರೋ ಇಲ್ಲವೋ.. ಫೋನೆತ್ತಿ ಮಾತಾಡಿ ತಡೆದುಕೊಳ್ ಪುಣ್ಯಾತ್ಮ ನಿನ್ನ ಚೆಕ್ಕುಗೆ ರೆಕ್ವಿಸಿಶನ್ ಹಾಕಿದೀನಿ ಡೆಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಕಲಾಂಗರಿಗೆ ಆಸರೆಯಾಗುತ್ತಿರುವ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಿ.ಡಿ.ತಟ್ಟಿ ಸಂಸ್ಥೆ: ದಿಗಂಬರ ಎಂ.ಪೂಜಾರ

  ಲಕ್ಷ್ಮೇಶ್ವರ-ದಲ್ಲಿ ಕಿವುಡು ಮಕ್ಕಳ ಬಗ್ಗೆ. ನಮಗೆ ತಿಳಿದ ಹಾಗೆ ಸಮಾಜದಲ್ಲಿ ವಿಕಲಚೇತನರಿಗೆ ಸಮಾನತೆ ಹಾಗು ಸೌಲಭ್ಯಗಳ ಕಾನೂನಿನ ಮೂಲಕ ಸಿಕ್ಕಿರಬಹುದು. ಆದರೆ ನಿಜವಾಗಿಯೂ ಅವು ನಿಜವಾದ ಫಲಾನುಭವಿಗಳಿಗೆ ಸಿಗದೇ ಬೇರೆಯವರ ಪಾಲಾಗುತ್ತಿವೆ. ಇಂತಹ ದಿನಮಾನಗಳಲ್ಲಿಯೂ ತಮ್ಮ ಬೆನ್ನು ಮೂಳೆ ಮುರಿಯುವಂತೆ ಕೆಲಸ ಮಾಡುತ್ತಿರುವುದು ಕೆಲವು ಸಂಸ್ಥೆಗಳು ಮಾತ್ರ. ಅಂತಹ ಸಂಸ್ಥೆಗಳ ಸಾಲಿಗೆ ಸೇರುವ ಸಂಸ್ಥೆಗಳಲ್ಲಿ ಗದಗ ಜಿಲ್ಲೆಯ ಐತಿಹಾಸಿಕ ನಗರವಾಗಿರುವ  ಲಕ್ಷ್ಮೇಶ್ವರದಲ್ಲಿರುವ ಬಿ.ಡಿ. ತಟ್ಟಿ(ಅಣ್ಣಾವರು) ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ ಕೂಡಾ ಒಂದು.  ಸುಮಾರು ೧೮ ವರ್ಷಗಳಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಾತಾಳದೆಡೆಗೆ!: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ವೆಂಕಣ್ಣ ಪರಿವಾರ ಸಮೇತ ಬೆಂಗಳೂರಿನ ವಿಮಾನಾಲಯದ ಪ್ರವೇಶದ್ವಾರಕ್ಕೆ ಪಾದಸ್ಪರ್ಶ ಮಾಡಿದಾಗ ಗಂಟೆ ರಾತ್ರಿ ಹನ್ನೊಂದಾಗಿತ್ತು. ಮುಂಜಾನೆ ಎರಡು ಗಂಟೆಗೆ ಪ್ಲೇನು ಹೊರಡುವದಿತ್ತಾದರೂ ಆದಕ್ಕಿಂತ ನಾಲ್ಕು ತಾಸು ಮೊದಲೇ ಅಲ್ಲಿರಬೇಕಿತ್ತು. ಎಲ್ಲ ಔಪಚಾರಿಕತೆಗಳನ್ನು ಮುಗಿಸಬೇಕಲ್ಲ. ಅಮೆರಿಕಾಕ್ಕೆ ಹೋಗುವುದೆಂದರೆ ಅಷ್ಟು ಸುಲಭವೇ? ಬೆಂಗಳೂರಿನಿಂದ ಜರ್ಮನ್ ದೇಶಕ್ಕೆ ಮೊದಲ ಫ್ಲೈಟು. ಅಲ್ಲಿಂದ ಅಮೇರಿಕಾದ ಚಿಕ್ಯಾಗೊ ನಗರಕ್ಕೆ ಇನ್ನೊಂದು ಫ಼್ಲೈಟು. ಕೊನೆಗೆ ಇವನು ಹೋಗಬೇಕಾಗಿದ್ದ ಊರಾದ ಸ್ಯಾಂಡಿ ಗೆ ಮತ್ತೊಂದು! ಒಂದೇ ಫ್ಲೈಟಿನಲ್ಲಿ ಅಷ್ಟು ದೂರ ಕ್ರಮಿಸುವುದು ಕಷ್ಟ. ಆ ದೇಶಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಣೆಯಾದ ಕತೆಯ ಹಿಂದೆ: ಪ್ರಶಸ್ತಿ

  ರೈಟ್ ಕ್ಲಿಕ್ ಮಾಡಲೂ ಸಾಧ್ಯವಿಲ್ಲದಂತೆ ತುಂಬಿಹೋಗಿತ್ತು ಡೆಸ್ಕಟಾಪು. ಡೆಸ್ಕಟಾಪಿನ ಮೇಲೆ, ಸಿ ಡ್ರೈವಲ್ಲಿ ಜಾಸ್ತಿ ಏನು ಇಡಬೇಡಿ, ಕಂಪ್ಯೂಟ್ರು ನಿಧಾನವಾಗತ್ತೆ ಅಂತಿದ್ದವ್ನೇ ಈ ತರ ಕಸ ತುಂಬಿಸ್ಕೊಂಡಿರೋದಾ ಅನಿಸ್ಬಿಡ್ತು ಒಮ್ಮೆ. ಕಸ ಅನ್ನೋಕೆ ಮನಸ್ಸು ಬಾರದ ಕಸ ಅದು. ಬೆಳಕ ಕಂಡು ವಾರವಾಗಬೇಕಿದ್ದ ಕನಸುಗಳು ನೋಟಪ್ಯಾಡಿನ ಗೀಚುಗಳೇ ಆಗುಳಿದು ಪರದೆಯ ತುಂಬೆಲ್ಲಾ ಮಲಗಿಬಿಟ್ಟಿದ್ವು. ದಿನದೆಂಟು ಘಂಟೆಗಳು ಹೊಟ್ಟೆಪಾಡಿಗೆ , ಅದಾದ ನಂತರ ಎಂಟು ಘಂಟೆ ನಿದ್ರೆ ಅಂದ್ರೂ ಇನ್ನೆಂಟು ಘಂಟೆ ಏನ್ಮಾಡ್ತೀಯೋ ? ಒಂದೆಂರಡು ಘಂಟೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಅಕ್ಷಯ ಕಾಂತಬೈಲು, ಸಿಂಧು ಹೆಗ್ಡೆ, ಸ್ಫೂರ್ತಿ ಗಿರೀಶ್

ಪ್ರಶ್ನೆಯ ಮೇಲೆ ಪ್ರಶ್ನೆ                 ಬಂಧುವೋ ಬಳಗವೋ ಯಾರೊಡೆ ಆನಂದವೋ ಸಂಸಾರದ ಬೇಲಿಯೊಳಗೆ ಮೇಯಿವ, ಬೇಯುವ ಮನಸಿನೊಳು ಎಲ್ಲವೂ ಶೂನ್ಯವು ಮುಂದೆ ಏನೋ ಹಿಂದೆ ಸವೆಸಿದ ಹಾದಿಯೋ ಬೆಟ್ಟ ತಪ್ಪಲು ಕಲ್ಲು ಚಪ್ಪಡಿ ಮೇಲೆ ಗಟ್ಟಿ ಮೆಟ್ಟದ ಪಾದವು ಬರೀ ಚಲಿಸುವ ಕಾಯವು ಹಬ್ಬಿದ ಉರಿ ಧಗೆಗೆ  ಬಸವಳಿದು ಬೆಂಡಾದ  ಸ್ಥಿತಿಯೋ ನದಿ ಮೂಲವ ತಿಳಿಯ ಹೊರಟ  ಜೀವವೇ ಆವಿಯು ಎಂತು ಕಟ್ಟಿತು ಮೋಡವು ಹೋರಾಟದ ಬದುಕೋ? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಿತ್ರ ಶ್ರೇಣಿಯೊಳ್ ವಾಣಿ: ಪಿ.ಎಂ.ಸುಬ್ರಮಣ್ಯ, ಬ.ಹಳ್ಳಿ

ಕಾಲದೊಳಗೆ  ವಸಂತ ವಿದ್ಯಾ ಜಾಲದೊಳಗೆ ಕವಿತ್ವ ಗಜವೈ ಹಾಳಿಯಲಿ ದೇವೆಂದ್ರ ಮಿತ್ರಶ್ರೇಣಿಯೊಳು ವಾಣಿ ಭಾಳನೇತ್ರನು ದೈವದಲಿ ಬಿ ಲ್ಲಾಳಿನಲಿ ಮನ್ಮಥನು ಧನದಲಿ ಹೇಳಲೇನಭಿಮಾನವೇ ಧನವೆಂದನಾ ವಿದುರ   (ಕುಮಾರವ್ಯಾಸ ಭಾರತ) ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎನ್ನುವ ಗಾದೆಮಾತು ಪ್ರಸ್ತುತ ಸನ್ನಿವೇಶದಲ್ಲಿ ಅರ್ಧಸತ್ಯವಾಗ್ತಿದೆ.  ಏಕೆಂದರೆ ಈ ಗಾದೆಯ ಮೊದಲ ಅರ್ಧ ಸರಿ ಎನಿಸಿದರೂ ಉಳಿದರ್ದ ಏಕೋ ಸರಿ ಕಾಣ್ತಿಲ್ಲವೇನೋ ಎನಿಸುತ್ತೆ.  ಒಲೆ  ಎನ್ನೋ ಮಾತೇ ಮರೆತು ಹೋಗಿದೆ.  ಜನಸಂಪದ ಗ್ಯಾಸ್‌ಸ್ಟವ್, ಎಲೆಕ್ಟ್ರಿಕಲ್‌ಸ್ಟವ್, ಎಲೆಕ್ಟ್ರಾನಿಕ್ ಓವೆನ್, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಮ್ಮ ಗಮನಕ್ಕೆ

ಬದುಕಿನ ಮೊದಲ ಹನ್ನೆರಡು ವರ್ಷಗಳನ್ನು ಹಾಸನದಲ್ಲಿ ಕಳೆದಿರುವ ಸಿಂಧು ಪದವಿಯವರೆಗೆ ಓದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ. ಕರ್ನಾಟಕ ವಿಶ್ವ ವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕೆ.ಡಿ.ಸಿ.ಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಪತಿ ಚಂದ್ರಶೇಖರ ಮತ್ತು ಮಗಳು ಸಿಂಚನಳೊಂದಿಗೆ ಶಿರಸಿಯಲ್ಲಿ ವಾಸವಾಗಿದ್ದಾರೆ.   ಇವರ ನಗುತ್ತೇನೆ ಮರೆಯಲ್ಲಿ ಕವನ ಸಂಕಲನ ೨೦೧೦ರಲ್ಲಿ ಹಾಗೂ ಕನಸಿನ ಕಾಡಿಗೆ ಕಥಾಸಂಕಲನ ೨೦೧೪ರಲ್ಲಿ ಪ್ರಕಟಗೊಂಡಿದೆ. ಇವರ ಮತ್ತೊಂದು ಕವನ ಸಂಕಲನ "ರಸ್ತೆಯಲ್ಲಿ ಮೇ ಫ್ಲವರ್" ಈ ತಿಂಗಳು ಬಿಡುಗಡೆಯಾಗುತ್ತಿದೆ. ಪುಸ್ತಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಿರಸ್ಕಾರ (ಭಾಗ 6): ಜೆ.ವಿ.ಕಾರ್ಲೊ, ಹಾಸನ

ಇಲ್ಲಿಯವರೆಗೆ ಮರುದಿನ ಹ್ಯಾನ್ಸ್ ಬಂದ. ಆನ್ನೆಟ್ ಅವನನ್ನು ಗಮನಿಸಿದಳಾದರೂ ಅವಳ ಕಣ್ಣುಗಳು ಸುಣ್ಣ ಬಳಿದ ಗೋಡೆಗಳಂತೆ ನಿರ್ಬಾವುಕವಾಗಿದ್ದವು. ಇಬ್ಬರೂ ಏನೂ ಮಾತನಾಡಲಿಲ್ಲ. ಹ್ಯಾನ್ಸ್ ಮುಗುಳ್ನಕ್ಕ. ’ಎದ್ದು ಹೋಗದಿದ್ದಕ್ಕಾಗಿ ಧನ್ಯವಾದಗಳು!’ ಅವನು ಹೇಳಿದ. ’ನನ್ನ ತಂದೆ-ತಾಯಿಯರಿಬ್ಬರೂ ನಿನ್ನನ್ನು ಆಹ್ವಾನಿಸಿದ್ದಾರೆ. ಅವರಿಬ್ಬರೂ ಈಗ ಮನೆಯಲ್ಲಿಲ್ಲ. ಒಳ್ಳೇದೆ ಆಯ್ತು. ನಿನ್ನೊಡನೆ ಮುಕ್ತವಾಗಿ ಮಾತನಾಡಲು ಇದೇ ಒಳ್ಳೆಯ ಸಮಯ. ಬಾ. ಕೂತುಕೊ.’ ಅವನು ಕೋಟ್ ಮತ್ತು ಹೆಲ್ಮೆಟನ್ನು ತೆಗೆದಿಟ್ಟು ಅವಳಿಗೆ ಎದುರಾಗಿ ಕುರ್ಚಿಯನ್ನು ಎಳೆದು ಕುಳಿತುಕೊಂಡ. ’ನನ್ನ ಮನೆಯವರು ನಾನು ನಿನ್ನನ್ನೇ ಮದುವೆಯಾಗಬೇಕೆಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಾಕಿಂಗ್ ಅನ್ನೋ ಸ್ನೇಹಿತೆ: ಪದ್ಮಾ ಭಟ್

                     ಹೆಲ್ದೀ ಲೈಫ್ ಅನ್ನೋದು ಈಗ ಉಳ್ಳವರ ಅಥವಾ ಪೇಟೆಯವರ ಸ್ವತ್ತಾಗಿ ಮಾತ್ರ ಉಳಿದಿಲ್ಲ.. ಬದಲಾಗಿ ಹಳ್ಳಿಯ ಮೂಲೆ ಮೂಲೆಗೂ ಅದರ ಛಾಪು ಪಸರಿಸಿದೆ..ನನ್ ಹೊಟ್ಟೆ ಸಣ್ಣಗಾಗಬೇಕು, ನನ್ ಟೆನ್ಶನ್ ಕಡಿಮೆಯಾಗಬೇಕು, ಬಳುಕುವ ಸೊಂಟ ನಂಗಿರಬೇಕು ಎಂಬ ಬೇಕುಗಳ ನಡುವೆಯೇ, ಜನರಲ್ಲಿ ಆರೋಗ್ಯಕರ ಜೀವನವನ್ನು ತಮ್ಮದಾಗಿಸಿಕೊಳ್ಳಬೇಕೆಂಬ ಅರಿವು ಮೂಡಿದೆ.  ರೋಗ ಬಂದ್ಮೇಲೆ ಕಡಿಮೆ ಮಾಡೋದಿಕ್ಕೆ ಸಾಹಸ ಪಡೋದಕ್ಕಿಂದ, ಬರದೇ ಇದ್ದ ರೀತಿ ಜೀವನಶೈಲಿ ರೂಢಿಸಿಕೊಳ್ಳಬೇಕೆಂಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ