ಇದುವೇ ಜೀವನ: ಪಾರ್ಥಸಾರಥಿ ಎನ್.

ಬೀ ಪ್ರಾಕ್ಟಿಕಲ್ ಮ್ಯಾನ್,  ನೋಡಿ ಇದಕ್ಕಿಂತ ಬೇರೆ ನಿರ್ದಾರ ತೆಗೆದುಕೊಳ್ಳುವುದು ಸಾದ್ಯವಿಲ್ಲ, ಯೋಚಿಸಿ ಡಾ!!ಜೋಷಿ ಹೇಳುತ್ತಿರುವಾಗ , ಮಧು ಗರಬಡಿದವನಂತೆ ಕುಳಿತಿದ್ದ,  ಏನಾಯಿತು ?  ತನ್ನ ಹಾಗು ಕೀರ್ತಿಯ ಕನಸುಗಳೆಲ್ಲ ಕರಗಿ ಹೀಗೆ ವಿಕಾರವಾಗುವದೆಂಬ ನಿರೀಕ್ಷೆಯು ಅವನಿಗಿರಲಿಲ್ಲ.  ಅಪ್ಪ ಅಮ್ಮ ನೋಡಿ ತಾನು ಮೆಚ್ಚಿ ಮದುವೆಯಾದ ಪ್ರೀತಿಯ ಪತ್ನಿ ಕೀರ್ತಿ. ಮದುವೆಯಾಗಿ ಆರು ವರ್ಷಗಳ ನಂತರ ತಾನು ತಂದೆಯಾಗುತ್ತಿರುವ ಸಮಾಚಾರ ತಿಳಿದಾಗ ಕುಣಿದಾಡಿಬಿಟ್ಟಿದ್ದ. ಮದುವೆಯಾದ ಮೊದಲು ಮೂರುವರ್ಷ ಮಕ್ಕಳು ಬೇಡವೆಂದು ಮುಂದೆ ಹಾಕಿದ್ದಾಗಿತ್ತು, ನಂತರ ಮೂರು ವರ್ಷ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೮): ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಈ ವರದಿಯು ಇಎಸ್‌ಝಡ್೧ರಲ್ಲಿ ಜಲವಿದ್ಯುತ್ ಯೋಜನೆಗಳಿಗೆ ಅನುಮತಿ ನೀಡುವುದನ್ನು ನಿರಾಕರಿಸುತ್ತದೆ. ಕರ್ನಾಟಕ ಪವರ್ ಕಾರ್ಪೊರೇಷನ್‌ನವರು ಗುಂಡ್ಯ ಜಲವಿದ್ಯುತ್ ಯೋಜನೆಯಲ್ಲಿ ಮುಳುಗಡೆಯಾಗಲಿರುವ ಪ್ರದೇಶದ ವ್ಯಾಪ್ತಿಯನ್ನು ೮೦% ಕಡಿಮೆ ಮಾಡುವುದಾಗಿ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ಹೊಂಗದಹಳ್ಳ ಆಣೆಕಟ್ಟು ಕಟ್ಟುವುದನ್ನು ಕೈ ಬಿಡಲಿದೆ. ಆದಾಗ್ಯೂ ಬೆಟ್ಟದ ಕುಮರಿ ಪ್ರದೇಶವೂ ಇಎಸ್‌ಝಡ್೧ರ ಅಡಿಯಲ್ಲೇ ಬರುತ್ತದೆ. ಹೀಗೆಯೇ ಅತಿರಪಳ್ಳಿ ಜಲವಿದ್ಯುತ್ ಯೋಜನೆಯ ವ್ಯಾಪ್ತಿಯೂ ಇಎಸ್‌ಝಡ್೧ರ ಅಡಿಯಲ್ಲೇ ಬರುತ್ತದೆ. ಇದರಿಂದಾಗಿ ವರದಿಯು ಕೇಂದ್ರ ಪರಿಸರ ಇಲಾಖೆಗೆ ಯಾವುದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 66): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚಿಗೆ ೨೦೧೪ರ ಸಾಲಿನ ಪಂಪ ಪ್ರಶಸ್ತಿ ಯಾರಿಗೆ ನೀಡಲಾಯಿತು? ೨.    ಕಿಮ್ಸ್ (KIMS)ನ ವಿಸ್ತೃತ ರೂಪವೇನು? ೩.    ಅಣಸಿ ನ್ಯಾಷನಲ್ ಪಾರ್ಕ್ ಇರುವ ಜಿಲ್ಲೆ ಯಾವುದು? ೪.    ಕಲಿದೇವರದೇವ ಇದು ಯಾರ ಅಂಕಿತನಾಮವಾಗಿದೆ? ೫.    ನಾಥುವಾ ಈ ನೃತ್ಯಶೈಲಿ ಯಾವ ರಾಜ್ಯಕ್ಕೆ ಸಂಬಂಧಿಸಿದಾಗಿದೆ? ೬.    ಬಹುಮನಿ ಸಾಮ್ರಾಜ್ಯದ ಸಂಸ್ಥಾಪಕನಾರು? ೭.    ಕೇಳು ಕಿಶೋರಿ ಎಂಬ ವೈದ್ಯಕೀಯ ಪುಸ್ತಕವನ್ನು ಬರೆದವರು ಯಾರು? ೮.    ಭಾರತದ ಮೊದಲ ಖಾಸಗಿ ವೈದ್ಯಕೀಯ ಕಾಲೇಜು ಯಾವುದು? ೯.    ವಿಶ್ವ ಹವಮಾನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭೌತ ವಿಜ್ಞಾನದ ಬೆನ್ನೇರಿ, ನಿಸರ್ಗದಲ್ಲೊಂದು ಸವಾರಿ: ರೋಹಿತ್ ವಿ. ಸಾಗರ್

ಋಷಿ ವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ ಜಸುವು ಜನಜೀವನಕೆ ಎಂದು ಡಿ.ವಿ.ಜಿಯವರು ’ಮಂಕುತಿಮ್ಮನಕಗ್ಗ’ದಲ್ಲಿ ಹೇಳಿರುವಂತೆ ಯಾವ ಆಚರಣೆ, ಸಂಪ್ರದಾಯ ಮತ್ತು ತಿಳುವಳಿಕೆಗಳು ವಿಜ್ಞಾನದೊಂದಿಗೆ ಬೆಸೆಯುತ್ತವೆಯೋ ಅವುಗಳಿಂದ ಮಾತ್ರ ಮನುಕುಲದ ಉನ್ನತೀಕರಣ ಸಾಧ್ಯ. ಆದರೆ ಈ ವಿಜ್ಞಾನವನ್ನು ಜನರಿಗೆ ತಲುಪಿಸುವುದು ಪ್ರಯಾಸದ ಕೆಲಸ ಏಕೆಂದರೆ ಎಲ್ಲಾ ಜನರಿಗೂ ಇಂಗ್ಲೀಷ್ ಬರುವುದಿಲ್ಲ ; ವಿಜ್ಞಾನದ ಪದಗಳು ಕನ್ನಡದಲ್ಲಿ ಸಿಗುವುದೇ ಇಲ್ಲ ಎನ್ನುವುದು ಕೆಲವು ಜ್ಞಾನಿಗಳ ಆಂಬೋಣ. ಇಂತಹವರ ಬಗ್ಗೆ ಜಗದೀಶ್ಚಂದ್ರ ಬೋಸ್ ಹಿಂದೊಮ್ಮೆ ಹೇಳಿದ್ದರಂತೆ ನಿಮಗೆ ಬಂಗಾಳಿ ಬಾಷೆಯಲ್ಲಿ ವಿಜ್ಞಾನವನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನಪುಗಳ ಮಾತು ಮಧುರ!: ರುಕ್ಮಿಣಿ ನಾಗಣ್ಣನವರ

ಎಷ್ಟು ಹೊತ್ತಾಯಿತು ಬಸ್ಸಿನಲ್ಲಿ ಕುಳಿತು. ಯಾವಾಗ ಬಿಡುತ್ತೀರಿ? ನಮಗಿನ್ನೂ ತುಂಬ ಮುಂದೆ ಹೋಗಬೇಕಿದೆ. ನನ್ನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ತನ್ನ ಅಸಮಾಧಾನ ವ್ಯಕ್ತಪಡಿಸುತ್ತ ಕಂಡಕ್ಟರ್ನನ್ನು ದಬಾಯಿಸಿ ಕೇಳುತ್ತಿದ್ದ. ಬೇಗ ಬಿಡಿ ಸರ್ ತುಂಬ ಹೊತ್ತಾಯಿತಲ್ಲ ಎಂದು ಇನ್ನೇನು ನಾನೂ ಹೇಳಬೇಕು ಎನ್ನುವಷ್ಟರಲ್ಲಿ ಅಪ್ಪಯ್ಯನ ಕಾಲು ಬಂತು. ಹೊರಟ್ರ ಅಂತ ಕೇಳುತ್ತಿದ್ದರು. ಹೌದು. ಬಸ್ಸಿನಲ್ಲಿದ್ದೇನೆ. ಅವರಿಗೆ ರಜೆ ಸಿಕ್ಕಿಲ್ವಂತೆ ನಾಳೆ ಬರ್ತಾರೆ ಅಪ್ಪ ಅಂದೆ. ಆಯ್ತು. ಹುಷಾರಾಗಿ ಬಾ ಅಂತ ಹೇಳಿ ಕಾಲ್ ಕಟ್ ಮಾಡಿದ್ರು. ಕಿಟಕಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಗಲು ರಾತ್ರಿಗಳ ಗೊಂದಲದಲ್ಲಿ…: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ವೆಂಕಣ್ಣ ಯಾರೋ ಒದ್ದೆಬ್ಬಿಸಿದಂತೆ ನಿದ್ದೆಯಿಂದ ಎದ್ದು ಕೂತಿದ್ದ. ಅವನ ನಿದ್ರಾ ಭಂಗಕ್ಕೆ ಕಾರಣವಾಗಿದ್ದು ಗಾಳಿಕುಳಿ ಗೆ ಸಿಕ್ಕು ನಡುಗುತ್ತಿದ್ದ ವಿಮಾನವೋ ಅಥವಾ ಅದರ ಪರಿಣಾಮ ಬಿದ್ದ ಕನಸಿನಿಂದಲೋ ಅವನಿಗೆ ಅರ್ಥವಾಗದಾಯ್ತು. ಆದರೂ ಅವನು  ಕಂಡ ಆ ಕನಸು ಭಲೆ ವಿಚಿತ್ರವಾಗಿತ್ತು. ಅದರಲ್ಲಿ, ಅ ದೊಡ್ಡ ವಿಮಾನದ ತುಂಬಾ ಇವನು ಹಾಗೂ ಜರ್ಮನ್ ವಿಮಾನ ಸಖಿ ಇಬ್ಬರೇ ಇದ್ದರು. ಇವನಿಗೆ ಖುಷಿಯಾಯ್ತಾದರೂ ಆಕಾಶದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ತಮ್ಮಿಬ್ಬರ ಬಿಟ್ಟು ಉಳಿದವರೆಲ್ಲಿ ಎಂಬ ಆತಂಕದಲ್ಲಿ, ಎಲ್ರೂ ಎಲ್ಲಿಗೆ ಹೋದ್ರು? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು!: ಎಸ್.ಜಿ.ಶಿವಶಂಕರ್

   "ಹಲೋ ?" ಮಾಮೂಲಿಗಿಂತ ತುಸು ಏರಿದ ವಿಶ್ವನ ದ್ವನಿ ಟೆಲಿಫೋನಿನಲ್ಲಿ ಮೊಳಗಿತು. "ಹೇಗಿತ್ತು ಒಥೆಲೋ ನಾಟಕ" ಹಿಂದಿನ ದಿನ ನಾಟಕ ನೋಡುವುದಾಗಿ ವಿಶ್ವ ಹೇಳಿದ್ದು ನೆನಪಾಗಿ ಕೇಳಿದೆ. "ನಾಟಕದ ಮನೆ ಹಾಳಾಯಿತು! ನನ್ನ ಜೀವನ ನಾಟಕದ ದುರಂತ ದೃಶ್ಯ ನೆನ್ನೆ ನಡೆಯಿತು!" ವಿಶ್ವನ ಧ್ವನಿ ಭಾರವಾಗಿತ್ತು. ಶುದ್ಧ ವೇದಾಂತಿಯ ಮಾತಿನ ಧಾಟಿ ಕಂಡಿತು. ವಿಶ್ವನ ಮಾತಿಗೆ ವಿವರಣೆ ಬೇಕಾಗಿರಲಿಲ್ಲ. ಅವನು ಹೆಂಡತಿಯೊಂದಿಗೆ ಜಗಳವಾಡಿದ್ದಾನೆ ಎಂದು ನನಗಾಗಲೇ ತಿಳಿದುಹೋಗಿತ್ತು! ಎರಡು ದಶಕಗಳ ಸ್ನೇಹದಲ್ಲಿ ವಿಶ್ವನ ವಿಶ್ವದರ್ಶನವಾಗಿತ್ತು. ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತ್ತೆಯ ಸಂಗೀತ ಕಛೇರಿ (ಆಡಿಯೋ ಕತೆ): ಸುಮನ್ ದೇಸಾಯಿ

ಹೀಂಗೊಂದ ಕಾಡಿನೊಳಗ ಒಂದು ಕತ್ತೆ, ಒಂದು ನರಿ ಇದ್ದುವಂತ. ಅವು ಭಾಳ ಪ್ರಾಣದ ಗೆಳೆಯರಾಗಿದ್ರಂತ. ಯಾವಾಗಿದ್ರು ಜೋಡಿ ಜೋಡಿನ ಇರ್ತಿದ್ದುವಂತ. ಯಾವಾಗ್ಲು ಕೂಡಿನ ಆಟಾ ಆಡತಿದ್ದುವಂತ. ಆಹಾರ ಹುಡಕತಿದ್ದುವಂತ.  ಹಿಂಗಿರಬೇಕಾದ್ರ ಒಂದ ದಿನ ಕತ್ತೆಗೆ ಕಲ್ಲಂಗಡಿ ಹಣ್ಣು ತಿನಬೇಕನಿಸ್ತಂತ. ಅಷ್ಟನಿಸಿದ್ದ ತಡಾ,” ದೊಸ್ತ ಇವತ್ತ ನಂಗ ಕಲ್ಲಂಗಡಿ ಹಣ್ಣು ತಿನಬೇಕನಸೇದ, ನಡಿ ಕಲ್ಲಂಗಡಿ ತೋಟಕ್ಕ ಹೋಗೊಣು” ಅಂತ ನರಿ ಗೆ ಹೇಳ್ತಂತ. ಅದಕ್ಕ ನರಿ, ಆತ ನಡಿ ಹಂಗಂದ್ರ ಅಂತ, ನರಿ ಮತ್ತ ಕತ್ತೆ ಇಬ್ಬರು ಕಲ್ಲಂಗಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎನ್ನರಸಿ, ಚೆನ್ನರಸಿ ಎಲ್ಲಿರುವೆ ? ಹೇಗಿರುವೆ ?: ನಂದೀಶ್ ಟಿ.ಜಿ.

ಕೆಲವು ವ್ಯಕ್ತಿಗಳು ನಮ್ಮ ಪಾಲಿಗೆ  ಎಂದಿಗೂ ನಿಲುಕದ ನಕ್ಷತ್ರವಾಗಿ ಉಳಿದುಬಿಡುತ್ತಾರೆ. ಮೊದಲಿಂದಲೂ ನಮ್ಮಿಂದ ಒಂದು ತೆರನಾದ ಅಂತರ ಕಾಯ್ದುಕೊಂಡು, ನಮ್ಮ ಬೇಕು ಬೇಡಗಳಿಗೆ ಸ್ಪಂದಿಸದೆ ಹಾಗೆಯೇ ಇದ್ದರೆ, ತೀರಾ ಈ ಪರಿ ನೋವು ಕಾಡುತ್ತಿರಲಿಲ್ಲ. ಒಂದು ಹೊತ್ತಲ್ಲಿ ನಮ್ಮಿರುವನ್ನೇ ಮರೆಸುವಷ್ಟು ನಮ್ಮವರಾಗಿ ಎಲ್ಲವು ಹಾಯೇನಿಸುವಂತಿರುವಾಗ ಸಂಬಂಧವನ್ನು ಕಳಚಿಕೊಂಡು  ಎದ್ದು ನಡೆದು ಬಿಡುತ್ತಾರೆ. ಒಂದಿನಿತು ಸುಳಿವು ಕೊಡದೆ, ಒಂದಿಷ್ಟು ನೊಂದುಕೊಳ್ಳದೆ ನಮ್ಮಿಂದ ನಮ್ಮವರು ದೂರ ದೂರಕ್ಕೆ ಹೆಜ್ಜೆ ಹಾಕುವಾಗ ನಮ್ಮೀ ಮನಸು ಅಕ್ಷರಶಃ  ಬೆಂಕಿಗೆ ಮೈಯೊಡ್ಡಿದ ಕಾವಲಿ.  ಮರೆತುಬಿಡಬೇಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಪ್ರತಿಯೊಂದು ಕ್ಷಣವೂ ಝೆನ್‌ ಝೆನ್‌ ವಿದ್ಯಾರ್ಥಿಗಳು ತಾವು ಇತರರಿಗೆ ಬೋಧಿಸುವ ಮುನ್ನ ತಮ್ಮ ಗುರುಗಳೊಂದಿಗೆ ಕನಿಷ್ಠ ಎರಡು ವರ್ಷ ಕಾಲ ತರಬೇತಿ ಪಡೆಯಬೇಕಿತ್ತು. ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿ ಬೋಧಕನಾಗಿದ್ದ ಟೆನ್ನೋ ಗುರು ನ್ಯಾನ್‌-ಇನ್ ಅನ್ನು ಭೇಟಿ ಮಾಡಿದ. ಆ ದಿನ ಮಳೆ ಬರುತ್ತಿತ್ತು, ಟೆನ್ನೋ ಮರದ ಚಡಾವುಗಳನ್ನು ಹಾಕಿದ್ದ ಮತ್ತು ಛತ್ರಿಯನ್ನೂ ಒಯ್ದಿದ್ದ. ಕುಶಲ ಪ್ರಶ್ನೆ ಮಾಡಿದ ನಂತರ ನ್ಯಾನ್‌-ಇನ್ ಹೇಳಿದ: “ನೀನು ನಿನ್ನ ಮರದ ಚಡಾವುಗಳನ್ನು ಮುಖಮಂಟಪದಲ್ಲಿ ಬಿಟ್ಟಿರುವೆ ಎಂಬುದಾಗಿ ಭಾವಿಸುತ್ತೇನೆ. ನಿನ್ನ ಛತ್ರಿಯು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಜಯಶ್ರೀ ದೇಶಪಾಂಡೆ, ಶ್ರೀದೇವಿ ಕೆರೆಮನೆ, ರಮೇಶ್ ನೆಲ್ಲಿಸರ

ಪ್ಯಾರಾಡೈಸ್ ಲಾಸ್ಟ್….!                                                               ಜುಳುಜುಳು ಹರಿದ ಮಳೆಯ ತಿಳಿ ನೀರಲ್ಲಿಳಿದ     ಹಳೇ ಪೇಪರಿನ ಹಡಗು, ಆ ದಂಡೆ ಈ ದಂಡೆ ವಾಲಿ ತೇಲಿ ಕೊನೆಗೆ ಹೊಡೆದ ಗೋತ, ಕಳಕೊಂಡ ಹಡಗಿನ ದ:ಖ ಮರೆಸಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸುಗಳು ನೆನಪುಳಿಯೋದು ಹೇಗೆ ?: ಪ್ರಶಸ್ತಿ ಪಿ.

ಹಗಲುಗನಸು, ರಾತ್ರಿಯ ಸೊಗಸಾದ ಕನಸು, ಬೆಚ್ಚಿಬೀಳಿಸೋ ಕನಸು, ಬೆಳಗು ಯಾವಾಗಾಗತ್ತೋ ಎಂದು ಕನವರಿಸುವಂತೆ ಮಾಡೋ ಸಾಧನೆಯ ಕನಸು..ಹೀಗೆ ಕನಸಲ್ಲೂ ಎಷ್ಟು ವಿಧ ಅಲ್ವಾ ?  ಆಫೀಸಲ್ಲೇ ಕೂತು ತೂಕಡಿಸಿ ತೂಕಡಿಸಿ ಬೀಳೋ ತಿಮ್ಮನಿಗೆ ಬೀಳಬಹುದಾದ ಹಗಲುಗನಸ ಬಗ್ಗೆಯಲ್ಲ ನಾ ಹೇಳಹೊರಟಿರುವುದು ಈಗ. ರಾತ್ರಿಯ ಸೊಗಸಾದ ಪರಿಸರದಲ್ಲಿ, ಕರ್ಲಾನೋ, ಕಂಬಳಿಯೋ, ಚಾಪೆಯೋ,ಜಡ್ಡಿಯೋ, ಜಮಖಾನವೋ,  ಕೊನೆಗೆ ಬರಿನೆಲದ ಮೇಲೇ ಮಲಗಿ ನಿರ್ದಿಸುತ್ತಿರುವಾಗ ನಮಗೆ ಬೀಳೋ ಸಹಜಗನಸುಗಳ ಬಗ್ಗೆ ನಾ ಹೇಳಹೊರಟಿದ್ದು. ಕನಸೆಂದರೇನು ?  ಈ ಕನಸೆಂಬುದು ನಾವು ನಿತ್ಯಜೀವನದಲ್ಲಿ ಕಂಡುಕೇಳಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೭): ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಉದ್ದೇಶಿತ ಜನವಸತಿ ಪಾರಿಸಾರಿಕ ಸೂಕ್ಷ್ಮ ಪ್ರದೇಶಗಳ ಪ್ರಸ್ತಾವನೆ: ತಮಿಳುನಾಡು: ವಾಲ್‌ಪರಿ, ಕೊಡೈಕೆನಾಲ್ ಮತ್ತು ನೀಲಗಿರಿ ಜಿಲ್ಲೆ ಕೇರಳ: ಮಂಡಕೋಲ್, ಪನತಾಡಿ, ಪೈತಾಲ್‌ಮಾಲ, ಬ್ರಹ್ಮಗಿರಿ-ತಿರುನೇಲಿ, ವಯನಾಡ್, ಬನಸುರ-ಕುಟ್ಟಿಯಾಡಿ, ನೀಲಂಬರ್-ಮೇಪಾಡಿ, ಸೈಲೆಂಟ್‌ವ್ಯಾಲಿ, ಅಮರಂಬಲಂ, ಸಿರುವಾಣಿ, ನೀಲಂಪತೈ, ಅತ್ರಿಪಳ್ಳಿ, ಕಾರ್ಡ್‌ಮಮ್ ಹಿಲ್ಸ್, ಪೆರಿಯಾರ್, ಅಗಸ್ತ್ಯಮಾಲ. ಆರು ರಾಜ್ಯಗಳ ವಿವಿಧ ಜಿಲ್ಲೆಗಳ ತಾಲ್ಲೂಕುವಾರು ಪ್ರಸ್ತಾವಿತ ಸೂಕ್ಷ್ಮಪ್ರದೇಶಗಳ ಪಟ್ಟಿ ರಾಜ್ಯ ಜಿಲ್ಲೆ ತಾಲ್ಲೂಕು ಇಎಸ್‌ಝಡ್1 ತಾಲ್ಲೂಕು ಇಎಸ್‌ಝಡ್2 ತಾಲ್ಲೂಕು ಇಎಸ್‌ಝಡ್3 ಗುಜರಾತ್ 3 1 1 … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನ ಮೊದಲ ಲೇಖನ: ಶೀತಲ್

ಮೊದಲ ಬಾರಿಗೆ ಬ್ಯಾಟ್ ಹಿಡಿದು, ಮೊದಲ  ಬಾಲ್ ನಲ್ಲೇ ಸಿಕ್ಸರ್ ಹೊಡೆದ ಖಿಲಾಡಿಗಳು ಬಹುಶಃ ಯಾರೂ ಇಲ್ಲವೇನೋ, ಹಾಗೆಯೇ ಮೊದಲ ಬಾರಿಗೆ ಪತ್ರಿಕೆಯಲ್ಲೊಂದು ಲೇಖನ ಎಲ್ಲಾ ಸಣ್ಣ-ಪುಟ್ಟ ಬರಹಗಾರರಂತೆ ನನ್ನದೂ ಒಂದು ಕನಸಾಗಿದೆ. ಹೇಗೆ ಸಿಕ್ಸರ್ ಹೊಡೆಯಲು ಆ ಮೊದಲ ಬಾರಿ ಬ್ಯಾಟ್ ಹಿಡಿದ ಖಿಲಾಡಿಗೆ ಆಗಲಿಲ್ಲವೋ ಹಾಗೆಯೇ ನನ್ನ ಲೇಖನವೂ  ಪ್ರಕಟವಾಗಲಿಲ್ಲ … ಸಿಕ್ಸರ್ ಹೊಡೆಯಲಾಗಲಿಲ್ಲ ಎಂದ ಮಾತ್ರಕ್ಕೆ ಪ್ರಯತ್ನವನ್ನು ಬಿಡಲು ಸಾಧ್ಯವೇ? ಖಂಡಿತಾ ಇಲ್ಲ …. ಬರೆಯುತ್ತಲೇ ಇದ್ದೇನೆ ಆದರೆ ಯಾವ ಬಾಲ್ ಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವರವರ ಭಾವಕ್ಕೆ: ಅಭಿಲಾಷ್ ಟಿ ಬಿ

"ಮಾನವ ಮೊದಲಿನಿ೦ದಲೂ ನಿಸರ್ಗದ ಜೊತೆಯಲ್ಲಿ ಅವಿನಾಭಾವ ಸ೦ಬ೦ಧವನ್ನು ಬೆಳೆಸಿಕೊ೦ಡಿದ್ದಾನೆ. ಜಗದ್ಗುರು ಶ೦ಕರಚಾರ್ಯರು ಆನ೦ದಲಹರಿಯಲ್ಲಿ "ಶಿವಾ ಶಕ್ತ್ಯಾ" ಎ೦ದು ಉಲ್ಲೇಖಿಸಿದ ಹಾಗೆ ಪ್ರಕೃತಿ ಪುರುಷ ಮತ್ತು ಶಕ್ತಿಯ ಸಮಾಗಮ. ಈ ವಿಚಾರಗಳು ನಮ್ಮ ಗ್ರಾಮೀಣ ಜನರಲ್ಲಿ ಹೇಗೆ ಮೂಡಿಬ೦ದಿದೆ ಎ೦ಬುದನ್ನು ನಾನು ಇಲ್ಲಿ ಸ೦ಕ್ಷಿಪ್ತವಾಗಿ ಚಿತ್ರಿಸಲು ಪ್ರಯ್ನತಿಸಿದ್ದೇನೆ" -ಅಭಿಲಾಷ್ ಟಿ ಬಿ                  ಎಲ್ಲೋ ದೂರದಲ್ಲಿ ಅರ ಬಡೆಯುವ ಶಬ್ದ ಕೇಳುತಿತ್ತು. ಬರುಬರುತ್ತಾ ಕ್ಷೀಣ ದನಿ ಏರುತ್ತಾ ಹೋಯಿತು.  ಸಿಟಿಯಿ೦ದ ಬ೦ದಿದ್ದ ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲಾಸ್ಟ್ ಬೇಂಚ್: ಪದ್ಮಾ ಭಟ್

ಲೇ ಮಚ್ಚ ಇವತ್ತಾದ್ರೂ ಬೇಗ ಕ್ಲಾಸಿಗೆ ಹೋಗೋಣ  ಇಲ್ಲಾಂದ್ರೆ ಹಿಂದಿನ ಬೇಂಚಿನಲ್ಲಿ ಯಾರಾದ್ರೂ ಕೂತ್ಕೊಂಡ್ ಬಿಡ್ತಾರೆ.. ಆಮೇಲೆ ದಿನವಿಡೀ ಮುಂದಿನ ಬೇಂಚೆ ಗತಿ.. ಎಂದು ಆತ ಹೇಳುತ್ತಿದ್ದ.. ಅರೇ! ಹಿಂದಿನ ಬೇಂಚಿಗೆ ಇಷ್ಟೆಲ್ಲಾ ಕಾಂಫೀಟೇಶನ್ನಾ? ಎಂದು ಅಂದ್ಕೋಬೇಡಿ ಕಾಲೇಜಿನಲ್ಲಿ ಯಾವಾಗಲೂ ಮುಂದಿನ ಬೇಂಚಿಗಿಂತ ಹಿಂದಿನ ಬೇಂಚಿಗೆ, ಕಾಂಫೀಟೇಶನ್ ಜಾಸ್ತಿ.. ಇಷ್ಟವಿಲ್ಲದ ಪ್ರೊಫೆಸರ್ ಪಾಠವನ್ನು ಮುಂದಿನ ಬೇಂಚಿನಲ್ಲಿ ಕೂತರೆ ಕಷ್ಟಪಟ್ಟು ಕೇಳಲೇಬೇಕಾಗುತ್ತದೆ. ಆದರೆ ಹಿಂದಿನ ಬೇಂಚು ಎನ್ನುವುದು ಒಂಥರಾ ಮನೆ ಇದ್ದಂಗೆ, ಡೆಸ್ಕಿನ ಒಳಗೆ ಪತ್ತೇದಾರಿ ಕಾದಂಬರಿಯನ್ನು ಓದಬಹುದು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 65): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗ ಯಾರು? ೨.    ಕೆ.ಎಸ್.ಎಸ್.ಐ.ಡಿಸಿ (KSSIDC)ನ ವಿಸ್ತೃತ ರೂಪವೇನು? ೩.    ಕಬುಕಿ ನೃತ್ಯ ಶೈಲಿ ಯಾವ ದೇಶದ್ದಾಗಿದೆ? ೪.    ಜೀತ ಪದ್ಧತಿಯ ನಿರ್ಮೂಲನಕ್ಕಾಗಿ ೧೯೭೬ರಲ್ಲಿ ಜಾರಿಗೊಳಿಸಲಾದ ಶಾಸನ ಯಾವುದು? ೫.    ಕನ್ನಡ ಕವಯತ್ರಿ ಸಂಚಿ ಹೊನ್ನಮ್ಮ ಯಾರ ಆಸ್ಥಾನದಲ್ಲಿದ್ದಳು? ೬.    ಭಾರತದ ಮೊಟ್ಟಮೊದಲ ಮೀನುಗಾರಿಕೆಯ ಕಾಲೇಜನ್ನು ಕರ್ನಾಟಕದಲ್ಲಿ ಎಲ್ಲಿ ಸ್ಥಾಪಿಸಲಾಯಿತು? ೭.    ಆರ್ಯುವೇದದ ಪಿತಾಮಹ ಯಾರು? ೮.    ವಿಜಯನಗರದ ವಾಟರ್ ಲೂ ಎಂದು ಕರೆಯಲ್ಪಡುವ ಸ್ಥಳ ಯಾವುದು? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮತಿಭ್ರಮಣೆ: ಶಿವಕುಮಾರ ಚನ್ನಪ್ಪನವರ

ಪೆಣ್ಣು, ಪೆಣ್ಣೆಂದೇಕೆ ಬೀಳುಗಳೆವರು ಕಣ್ಣು ಕಾಣದ ಗಾವಿಲರು  -ಸಂಚಿ ಹೊನ್ನಮ್ಮ ತಾನು ಸೋಮುವಿಗೆ ಹೀಗೆನ್ನಬಾರದಿತ್ತು. ಪಾಪ ಎಷ್ಟು ನೊಂದುಕೊಂಡನೋ ಏನೋ……? ತಾನೇ ಸಾಕಿ ಬೆಳೆಸಿದ ಕೂಸು ಆದರೂ ಅವನು ಹದ್ದುಮೀರಿ ಮಾತಾಡಿದ್ದ. ಬೇಡವೆಂದರೂ ಕೇಳದೇ ಹೆಂಡತಿಯ ಭ್ರೂಣಪತ್ತೆಯ ಕೆಲಸಕ್ಕೆ ಕೈ ಹಾಕಿದ್ದಿರಬಹುದು, ತಮ್ಮ ತಾಯಿಗೆ ಗಂಡು ಮಗುವೇ ಬೇಕೆಂದು, ತನಗೂ ಅದೇ ಇಷ್ಟವಿದೆಯೆಂದು, ಹಟ ಹಿಡಿದು ಈ ಸಲ ಹೆಣ್ಣಾದರೆ ಆಪರೇಷನ್ ಮಾಡಿಸದೇ ಮುಂದಿನದಕ್ಕೆ ಬಿಡಬೇಕೆಂದು ಹಟ ಹಿಡಿದದ್ದು ತಪ್ಪಲ್ಲವೇ……?, ಡಾಕ್ಟರು ಇದು ಎರಡನೇ ಬಾರಿ ಸಿಜೇರಿಯನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆಳೆತನದ ಸುವಿಶಾಲ ಆಲದಡಿ..:ಅನಿತಾ ನರೇಶ್ ಮಂಚಿ.

  ಜೀವನದಲ್ಲಿ  ನನ್ನರಿವಿಗೆ ಬಂದಂತೆ ಮೊಟ್ಟ ಮೊದಲಿಗೆ ನನಗೊಂದು ಪ್ರಮೋಶನ್ ಸಿಕ್ಕಿತ್ತು. ಅದೂ ನಾವು ಅ ಊರಿಗೆ ಕಾಲಿಟ್ಟ ಕೆಲವೇ ಸಮಯದಲ್ಲಿ.. ಅಂಗನವಾಡಿಗೆ ಹೋಗಲಿಕ್ಕೆ ಶುರು ಮಾಡಿ ತಿಂಗಳಾಗಬೇಕಾದರೆ  ಡೈರೆಕ್ಟ್ ಆಗಿ ಒಂದನೇ ತರಗತಿಗೆ..  ಒಂದನೇ ತರಗತಿಗೆ  ವಯಸ್ಸು ಇಷ್ಟೇ ಆಗಿರಬೇಕೆಂಬ ಸರ್ಕಾರಿ ನಿಯಮವೇನೋ ಇದ್ದರೂ ಮಕ್ಕಳು ಮನೆಯಲ್ಲಿದ್ದರೆ ಅಪ್ಪ ಅಮ್ಮನಿಗೆ ಬೇಗನೇ ವಯಸ್ಸಿಗೆ ಬಂದಂತೆ ಕಾಣಿಸಲು ಶುರು ಆಗ್ತಾರಲ್ಲ ಅದಕ್ಕೇನು ಮಾಡೋದು.. ಹಾಗೆ ನಾನೂ ನನ್ನ ಅವಳಿ ಅಣ್ಣನೂ ಒಂದನೇ ತರಗತಿಯೊಳಗೆ ಉದ್ದದ ಒಂದೇ ಕೈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಲರೇ ಭೋಪಳ್ಯಾ ಟುಣಕ್-ಟುಣಕ್ (ಆಡಿಯೋ ಕತೆ): ಸುಮನ್ ದೇಸಾಯಿ

ಒಂದು ಭಯಂಕರ ದಟ್ಟ ಜಂಗಲ್ ಇತ್ತು. ಆಲ. ಹಲಸು, ಹುಣಸೆ, ಮಾವು ಸೊಗೆ, ದೊಡ್ಡ ದೊಡ್ಡ ಮರ ಇದ್ವು. ಅದೆಷ್ಟು ದಟ್ಟ ಇತ್ತಂದರ. ಮಟಾ ಮಟಾ ಮಧ್ಯಾಹ್ನದಾಗು ಸೂರ್ಯನ ಬೆಳಕಿಗೂ ಒಳಗ ಬರಲಿಕಕ್ಕೆ ಜಾಗ ಇದ್ದಿಲ್ಲ. ಆ ಕಾಡಿನ ತುಂಬ ಪ್ರಾಣಿಗಳು ಭಾಳ ಇದ್ವು. ಕಾಡಿಗೆ ಹಚ್ಚಿ ಇನ್ನೊಂದು ಕಡೆ ಸುಂದರ ಸರೋವರ ಇತ್ತು. ಸರೋವರದ ಇನ್ನೊಂದು ಕಡೆ ಒಂದು ಪುಟ್ಟ ಹಳ್ಳಿ ಇತ್ತು. ಅಲ್ಲಿಯ ಜನ ಯಾವಾಗಲೂ ಕಾಡಿನ ಭಯದಿಂದ ಜೀವ ಕೈಯ್ಯೊಳಗ ಹಿಡಕೊಂಡನ ಜೀವನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೌನ ತಳೆದ ಹುಡುಗಿ: ರುಕ್ಮಿಣಿ ನಾಗಣ್ಣವರ

ಆಗಷ್ಟೆ ಬೆಳಕಿನ ಬೆನ್ನಿಗೆ ಕತ್ತಲು ಪತ್ತಲ ಹಾಸುತ್ತಿತ್ತು. ಮಿಣಮಿಣ ಮಿನುಗುವ ತಾರೆಗಳು ಚಂದ್ರನೊಂದಿಗೆ ಕಣ್ಣಾ ಮುಚ್ಚಾಲೆ ಆಡಲು ಸಿದ್ಧವಾಗಿದ್ದವು. ಚಂದ್ರನೋ, ತಾರೆಗಳ ಬಳಗದಿಂದ ತಪ್ಪಿಸಿಕೊಂಡವನಂತೆ ರಮೇಶನ ಕೋಣೆಯನ್ನೇ ಇಣುಕಿ ಇಣುಕಿ ನೋಡುತ್ತಿದ್ದ. ದೀಪ ಹಚ್ಚದ ಕೋಣೆಯಲ್ಲಿ ಕತ್ತಲ ತೆಕ್ಕೆಯೊಳಗೆ ರಮೇಶ್ ಗಾಢ ಮೌನಕ್ಕೆ ಶರಣಾಗಿದ್ದ. ಮನದ ಮೈದಾನದಲಿ ಜಾನಕಿಯೆಡೆಗಿನ ವಿಚಾರಗಳು ಕಾಳಗದ ಹೋರಿಯಂತೆ ಕಾದಾಟ ನಡೆಸಿದ್ದವು. ಅರಳು ಹುರಿದಂತೆ ಮಾತಾಡುವ ಜಾನಕಿ ಕಳೆದ ಆರು ತಿಂಗಳಿನಿಂದ ಮೌನವಾಗಿದ್ದಳು. ಆ ದೀರ್ಘಮೌನ ರಮೇಶನನ್ನು ಭಾದಿಸುತ್ತಿತ್ತು.  ತಲೆ ಚಿಟ್ಟೆನ್ನುವ ಅಸಹನೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಯಲೇ ಬೇಕು ಎಲ್ಲರಲ್ಲಿನ ಸೀಸರ್: ಸಚೇತನ

ಷೇಕ್ಸ್ ಪಿಯರ್ ಎನ್ನುವ ಸದಾ ತುಂಬಿ ಹರಿಯುವ ನದಿಯಿಂದ ಮೊಗೆ ಮೊಗೆದು ತೆಗೆದ ಅದೆಷ್ಟೋ ಸಾವಿರ ಸಾವಿರ ಬೊಗಸೆ ನೀರು ಲೆಕ್ಕವಿಲ್ಲದಷ್ಟು  ಸಾಹಿತ್ಯದ ಬೀಜಗಳನ್ನು ಹೆಮ್ಮರವಾಗಿಸಿ ಫಲ ಕೊಡುತ್ತಿದೆ.  ಕರುಣೆ ಕ್ರೌರ್ಯ ಪ್ರೀತಿ ಹಾಸ್ಯ ಪ್ರೇಮ ಮೋಸ ಎಲ್ಲ  ಮಾನವೀ ಭಾವಗಳ ಸಮಪಾಕವನ್ನು ನಾವೆಲ್ಲರೂ ಅದೆಷ್ಟೋ ಸಲ ರುಚಿಕಟ್ಟಾಗಿ ಉಂಡಿದ್ದರೂ ಯಾವತ್ತಿಗೂ ಅವು ಸಾಕು ಎನಿಸಿಲ್ಲ. ಹರಿಯುವ ನದಿಯಿಂದ ಕೈ ಒಡ್ಡಿ ಕುಡಿದ ಸಿಹಿ ನೀರು ಮತ್ತೆ ಮತ್ತೆ ಬೇಕೆನಿಸಿದೆ. ಸೀಸರ್ ಎನ್ನುವ ದುರಂತ ನಾಯಕನ ಕತೆಯಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫೋಟೋ ಚೌಕಟ್ಟಿನ ಆಚೀಚೆ: ಅಮರ್ ದೀಪ್ ಪಿ.ಎಸ್.

ಪ್ರೈಮರಿ ಶಾಲೆಯಲ್ಲಿ ಓದುತ್ತಿದ್ದ ದಿನಗಳವು.  ವರ್ಷಕ್ಕೊಮ್ಮೆ ಗ್ರೂಪ್ ಫೋಟೋ ತೆಗೆಸಿಕೊಳ್ಳಲು ಮೇಷ್ಟ್ರು “ಎಲ್ರೂ ನಾಳೆ ನೀಟಾಗಿ ನಿಮಗಿಷ್ಟವಾದ ಡ್ರೆಸ್ ಹಾಕ್ಕೊಂಡ್ ಬನ್ನಿ” ಅನ್ನುತ್ತಿದ್ದರೆ, ನಮ್ಮ ಮುಖ ಇಷ್ಟಗಲವಾಗಿ ಅಲ್ಲೇ ಹಲ್ಕಿರಿದು ನಿಂತು ಬಿಡುತ್ತಿದ್ದೆವು.   ಮತ್ತೆ ಫೋಟೋ ತೆಗೆಯೋ ದಿನ ಮಾತ್ರ  ಅದು ನಡೆಯುತ್ತೋ, ಓಡುತ್ತೋ, ನಿಂತಲ್ಲೇ ಎಲ್ಡು ಬಾರಿ ಸರಿಯಾದ ಟೈಮು ತೋರ್ಸುತ್ತೋ, ಬಿಡುತ್ತೋ, ಒಟ್ನಲ್ಲಿ ಎಲ್ಲಿಂದಲೋ ಒಂದ ವಾಚ್ ಕಟ್ಗ್ಯಂಡು ಅದು ಫೋಟೋದಲ್ಲಿ ಕಾಣೋ ಹಂಗೆ ನಿಂತು ಫೋಸ್ ಕೊಡುತ್ತಿದ್ದೆವು.  ಫೋಟೋ ಪ್ರಿಂಟ್ ಕೈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಮುಕುಂದ್ ಎಸ್., ಮೌಲ್ಯ ಎಂ., ಅಕುವ

ಲೋ ಮಾರ್ಕು,  ನೀ ಕಟ್ಟಿದ್ ಜಗ್ಲಿ ಮ್ಯಾಕ್ ಕೂತು,  ದೊಡ್ಡ್ ದೊಡ್ಡ್ವರು ಹೇಳಿದ್ದು  ಅರ್ಥವಾಗ್ದಿದ್ರು ಬೇರೆಯವರಿಗೆ ಷೇರ್ ಗಿರ್ ಮಾಡಿಕ್ಕಂಡು, ರಾಜಕಾರಣಿ ಹಾಕೋ ಥರಾವರಿ  ಟೋಪಿಗಳ್ ನಾವ್ ನಮ್ಮ್  ಗೆಳ್ಯರಿಗು ಹಾಕಿ,  ಪರ್ ವಿರೋಧ ಬಾಯ್ ಬಡ್ಕೊಂಡು, ಫ್ರೆಂಡ್, ಅನ್ ಫ್ರೆಂಡ್ ಅಂತ್ ಆಟ್ಗಳ ಜೊತೆ ಕ್ಯಂಡಿ ಕ್ರಷುಗಳ್ ಬಗ್ಗೆ ಉರ್ಕೊಂಡು,  ನಮ್ಮ್ ನಮ್ಮ್ ಪಟ್ವ ತೆಗೆದು  ಸ್ಚಯಂವರಕ್ಕೆ ರೆಡಿ ಆಗೋ ಪರಿಯಲ್ಲಿ ತೆಗ್ಸಿ, ಲೈಕುಗಳ ಬಿಕ್ಕ್ಸೆಗೆ ಕಾಯ್ಕೊಂಡು, ಅಕ್ಕ ಪಕ್ಕ ಇರೋ ಅಣ್ಣ್ ತಮ್ಮದಿರ್ ದೂರ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಝೆನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

ಪುಷ್ಪ ವೃಷ್ಟಿ ಸುಭೂತಿ ಬುದ್ಧನ ಶಿಷ್ಯನಾಗಿದ್ದ. ಶೂನ್ಯತೆಯ ಶಕ್ತಿಯನ್ನು ತಿಳಿಯುವುದರಲ್ಲಿ ಆತ ಯಶಸ್ವಿಯಾಗಿದ್ದ. ವ್ಯಕ್ತಿನಿಷ್ಠತೆ ಮತ್ತು ವಿಷಯನಿಷ್ಠತೆಗಳೊಂದಿಗೆ ಶೂನ್ಯತೆಗೆ ಇರುವ ಸಂಬಂಧದ ಹೊರತಾಗಿ ಏನೂ ಅಸ್ಥಿತ್ವದಲ್ಲಿ ಇಲ್ಲ ಅನ್ನುವ ದೃಷ್ಟಿಕೋನ ಇದು. ಒಂದು ದಿನ ಮಹೋನ್ನತ ಶೂನ್ಯತೆಯ ಚಿತ್ತಸ್ಥಿತಿಯಲ್ಲಿ ಸುಭೂತಿ ಒಂದು ಮರದ ಕೆಳಗೆ ಕುಳಿತಿದ್ದ. ಅವನ ಸುತ್ತಲೂ ಹೂವುಗಳು ಬೀಳಲಾರಂಭಿಸಿದವು. “ಶೂನ್ಯತೆಯ ಕುರಿತಾದ ನಿನ್ನ ಪ್ರವಚನಕ್ಕಾಗಿ ನಾವು ನಿನ್ನನ್ನು ಶ್ಲಾಘಿಸುತ್ತಿದ್ದೇವೆ” ಎಂಬುದಾಗಿ ಪಿಸುಗುಟ್ಟಿದರು ದೇವತೆಗಳು. “ಶೂನ್ಯತೆಯ ಕುರಿತಾಗಿ ನಾನು ಮಾತನಾಡಿಯೇ ಇಲ್ಲ” ಪ್ರತಿಕ್ರಿಯಿಸಿದ ಸುಭೂತಿ. “ನೀನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫ಼ೈಂಡಿಂಗ್ ಫ಼ಾನ್ನಿ ಮತ್ತು ನಮ್ಮೊಳಗಿನ ಮುಗಿಯದ ಹುಡುಕಾಟ: ಪ್ರಶಾಂತ್ ಭಟ್

ಈಗ ನನ್ನ ಬಹಳ ಕಾಡಿದ ಒಂದು ಸಿನಿಮಾ ಬಗ್ಗೆ ಬರೆಯಬೇಕು.  ಅದರಲ್ಲಿ ಬರುವ ಒಂದು ಡೈಲಾಗ್ ಬಗ್ಗೆ 'ನಮ್ಮ ರಾಜ್ಯಕ್ಕೆ ಅಪಮಾನವಾಯಿತು' ಅಂತ ಬೊಬ್ಬಿರಿದ ನನ್ನ ರಾಜ್ಯದ ಕೆಲವರ ಬಗ್ಗೆ ನಿಜಕ್ಕೂ ಕನಿಕರವಿದೆ. ಹೌದು. ಇದು ಅದೇ ಸಿನಿಮಾ. 'ಫ಼ೈಂಡಿಂಗ್ ಫ಼ಾನ್ನಿ' ಹೋಮಿ ಅಡಜನಿಯ ನಿರ್ದೇಶನವಿರುವ  (ಇವನ ಬೀಯಿಂಗ್ ಸೈರಸ್ ಕೂಡ ಒಳ್ಳೆಯ ಪ್ರಯತ್ನ) ಕೆಲವು ಕಡೆ 'ಲೆಟ್ಟರ್ಸ್ ಟು ಜೂಲಿಯಟ್' ಅನ್ನು ಹೋಲುತ್ತದೆ. ಅರ್ಜುನ್ ಕಪೂರ್, ದೀಪಿಕಾ ಪಡುಕೋಣೆ (ಇವಳ ಸ್ಕರ್ಟ್ ನ ಅಂದವನ್ನು ಬಣ್ಣಿಸಲೇ?) … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತ್ತಲ ಕೊಳ್ಳದಾಚೆಗೆ: ಪ್ರಶಸ್ತಿ ಪಿ.

  ಬೈಕಲ್ಲಿ ಹೋಗ್ಬೇಡ, ಒಂದಷ್ಟು ಲೇಟಾದ್ರೂ ಪರ್ವಾಗಿಲ್ಲ. ಬಸ್ಸಿಗೆ ಹೋಗೋ ಅಂತ ಅಮ್ಮ ಹೇಳಿದ ಮಾತ್ನ ಕೇಳ್ಬೇಕಾಗಿತ್ತು ಅಂತ ಬಾಳೇಬರೆ ಘಾಟೀಲಿ ಕತ್ತಲ ರಾತ್ರೇಲಿ ಕೆಟ್ಟ ಬೈಕಿಗೊಂದು ಮೆಕ್ಯಾನಿಕ್ನ ಹುಡುಕೋಕೋದಾಗ್ಲೇ ಅನಿಸಿದ್ದು. ಫ್ರೆಂಡ್ ಮನೆ ಕಾರ್ಯಕ್ರಮಕ್ಕೆ ಮಧ್ಯಾಹ್ನವೇ ಹೊರಟು ಬಿಡ್ಬೇಕಿತ್ತು. ಆದ್ರೆ ಬೈಕಿದ್ಯಲ್ಲ, ಬಸ್ಸು ಹೋದ್ರೆ ಹೆಂಗಾದ್ರೂ ರಾತ್ರೆಗೆ ಮುಟ್ಕೋಬೋದು ಅನ್ನೋ ಧೈರ್ಯವೇ ನಿರ್ಲಕ್ಷ್ಯಕ್ಕೆ ಕಾರಣವಾಗಿ ಊರಲ್ಲೇ ಸಂಜೆಯಾಗೋಗಿತ್ತು. ನಾಳೆ ಹೋಗೋಣ ಅಂದ್ರೆ ಕಾರ್ಯಕ್ರಮವಿದ್ದಿದ್ದೇ ಇವತ್ತು ರಾತ್ರೆ. ಹೋಗ್ಲೇಬೇಕೆನ್ನೊ ಹಟಕ್ಕೆ ಮನೆಯವ್ರು ಅರೆಮನಸ್ಸಿಂದ್ಲೇ ಒಪ್ಪಿದ್ರು. ಜೊತೆಗಿನ್ನಿಬ್ರು ಗೆಳೆಯಂದ್ರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಯ್ಯೋ ಅವ್ರು ಏನ್ ಅಂದ್ಕೊತಾರೋ !!: ಸಂತೋಷ್ ಗುರುರಾಜ್

ಇದು ನಮ್ಮ ನಿಮ್ಮೆಲ್ಲರ  ಅತೀ ದೊಡ್ಡ  ಕಾಡುವ ಪ್ರಶ್ನೆ ? ಇದೊಂದೇ ಡೈಲಾಗ್ ಇಂದ ಕೆಲವರು ತಮ್ಮ ಜೀವನದ ಗುರಿ ಮುಟ್ಟಲು ಆಗುವುದಿಲ್ಲ. ಇದನ್ನು ಯಾರೋ ನಮಗೆ ಆಗದೇ ಇರುವವರು ಮಾಡುವುದಲ್ಲ ನಮಗೆ ನಾವೇ ಮಾಡಿಕೊಳ್ಳುವುದು. ಇದು ಒಂತರಾ ಮಾನಸಿಕ ರೋಗ. ಇದು ಪ್ರತಿಯೊಬ್ಬನ ಜೀವನದಲ್ಲಿ ನಡೆಯುವ ನೆಗೆಟಿವ್ ಕಮಾಂಡ್. ಅದು ಎಷ್ಟರ ಮಟ್ಟಿಗೆ ಅಂದ್ರೆ ಆ ಕಮಾಂಡ್ ಇಂದ ನಾವು ತಪ್ಪಿಸಿಕೊಳ್ಳಲು ಸಾಕಷ್ಟು ಸಮಯ ಬೇಕಾಗುತ್ತದೆ, ಅಷ್ಟರಲ್ಲಿ ವಯಸ್ಸು ಮುಗಿದಿರುತ್ತದೆ. ಈ ಕಮಾಂಡ್ ದಾಟಿ ದೈರ್ಯದಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ