ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೬): ಅಖಿಲೇಶ್ ಚಿಪ್ಪಳಿ
ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಸೂಕ್ಷ್ಮ ಪ್ರದೇಶಗಳು: ಪರಿಸರ ಸಂರಕ್ಷಣಾ ಕಾಯ್ದೆ ೧೯೮೬ ಕಲಂ ೩ರಂತೆ, ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಪರಿಸರ ಸಂರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ನೀಡಿದೆ. ಈ ಕಾಯ್ದೆಯ ಪ್ರಕಾರ ಕೇಂದ್ರವು ಪರಿಸರವನ್ನು ಕಲುಷಿತಗೊಳಿಸುವ ಎಲ್ಲಾ ತರಹದ ಕಾರ್ಖಾನೆಗಳ ಸ್ಥಾಪನೆಯನ್ನು ತಡೆಯುವುದು ಮತ್ತು ಈಗಾಗಲೇ ಪ್ರಾರಂಭಿಸಲಾಗಿರುವ ಕಾರ್ಖಾನೆಗಳಿಗೆ ನಿಷೇಧ ಹೇರುವ ಅಧಿಕಾರವಿದೆ ಅಥವಾ ಕಟ್ಟುನಿಟ್ಟಾದ ಎಚ್ಚರಿಕೆ ಕ್ರಮಕೈಗೊಳ್ಳಲು ನಿರ್ದೇಶಿಸಬಹುದಾಗಿದೆ. ಕಲಂ ೫(೧)ರಂತೆ ಜೀವಿವೈವಿಧ್ಯ ನಾಶವಾಗುವಂತಹ ಕಾರ್ಖಾನೆಗಳಿಗೂ … Read more