ನಾಯಿ ಪಾಡು: ಗುಂಡುರಾವ್ ದೇಸಾಯಿ
ವಾರದಿಂದ ತಲೆ ಸಿಡದು ಹೋದಂಗಾಗಕತಿತು. ಕ್ಷಣ ಕ್ಷಣಕ್ಕೂ ಭಯ ಆತಂಕ ಸುರುವಾಗಕತಿತು, ಶಾಲೆಯಲ್ಲಿ ಪಾಠ ಮಾಡುವಾಗಲು ಮನೆ ವಾತಾವರಣ ನೆನಸಿಕೊಂಡ ಕೂಡಲೆ ಸ್ಥಬ್ಧನಾಗಿ ನಿಂತುಬಿಡುತ್ತಿದ್ದೆ. ಮಕ್ಕಳು ’ಸಾರ್, ಮುಂದು ಹೇಳ್ರೀ ಯಾಕ ಹಾಂಗ ನಿಂತ್ರಿ’ ಎಂದು ಎಚ್ಚರಿಸಿದಾಗಲೇ ವಾಸ್ತವಕ್ಕೆ ಬರೋದು. ಸಹುದ್ಯೋಗಿಗಳು ’ಯಾಕ ಹಿಂಗಾಗ್ಯಾರ? ಏನು ತಾಪತ್ರಯನೋ ಏನೋ? ಅಥವಾ ಮನೆಯಲ್ಲಿ ಮನೆಯವರ ಜೊತೆಗೆ ಮನಸ್ತಾಪನೋ?’ ಎಂದು ಹಲವು ಬಾರಿ ಕೆದುಕಲೆತ್ನಿಸಿದರು ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ನಿಮಗೂ ಏನೇನೋ ಕಲ್ಪನೆಗಳು ನನ್ನ ಬಗ್ಗೆ ಮೂಡಿರಬೇಕಲ್ಲ. ಅದು ಹೇಳುವ ವಿಷಯವೇನು … Read more