ನಾಯಿ ಪಾಡು: ಗುಂಡುರಾವ್ ದೇಸಾಯಿ

ವಾರದಿಂದ ತಲೆ ಸಿಡದು ಹೋದಂಗಾಗಕತಿತು. ಕ್ಷಣ ಕ್ಷಣಕ್ಕೂ ಭಯ ಆತಂಕ ಸುರುವಾಗಕತಿತು, ಶಾಲೆಯಲ್ಲಿ ಪಾಠ ಮಾಡುವಾಗಲು ಮನೆ ವಾತಾವರಣ ನೆನಸಿಕೊಂಡ ಕೂಡಲೆ ಸ್ಥಬ್ಧನಾಗಿ ನಿಂತುಬಿಡುತ್ತಿದ್ದೆ.  ಮಕ್ಕಳು ’ಸಾರ್, ಮುಂದು ಹೇಳ್ರೀ ಯಾಕ ಹಾಂಗ ನಿಂತ್ರಿ’ ಎಂದು ಎಚ್ಚರಿಸಿದಾಗಲೇ ವಾಸ್ತವಕ್ಕೆ ಬರೋದು. ಸಹುದ್ಯೋಗಿಗಳು ’ಯಾಕ ಹಿಂಗಾಗ್ಯಾರ? ಏನು ತಾಪತ್ರಯನೋ ಏನೋ? ಅಥವಾ ಮನೆಯಲ್ಲಿ ಮನೆಯವರ ಜೊತೆಗೆ ಮನಸ್ತಾಪನೋ?’ ಎಂದು ಹಲವು ಬಾರಿ ಕೆದುಕಲೆತ್ನಿಸಿದರು ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ನಿಮಗೂ ಏನೇನೋ ಕಲ್ಪನೆಗಳು ನನ್ನ ಬಗ್ಗೆ ಮೂಡಿರಬೇಕಲ್ಲ. ಅದು ಹೇಳುವ ವಿಷಯವೇನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಮಿಲಿ ಎಂಬ ಅಮಲು: ಮಹೇಂದ್ರ ಎಂ. ನವೋದಯ

೧೯ನೇ ಶತಮಾನದ ಇಂಗ್ಲೀಷ್ ಸಾಹಿತ್ಯದಲ್ಲಿನ ಮಹಿಳಾ ಲೇಖಕಿಯರಲ್ಲಿ ಅತ್ಯುನ್ನತ ಸ್ಥಾನ ಅಲಂಕರಿಸಿದವರಲ್ಲಿ ಎಮಿಲಿ ಬ್ರಾಂಟೆ ಕೂಡ ಒಬ್ಬರು. ಜುಲೈ ೩೦, ೧೮೧೮ ರಂದು ಜನಿಸಿ, ತೀರಾ ಸಂಕ್ಷಿಪ್ತವಾಗಿ ೩೦ ವರ್ಷಗಳ ಕಾಲ ಬದುಕಿದರೂ ಅವರ ಸಾಹಿತ್ಯ ಕೊಡುಗೆ ಅನನ್ಯ ಮತ್ತು ಅಜರಾಮರ. ಎಮಿಲಿ ಬೆಳೆದದ್ದು ದೂರದ ಇಂಗ್ಲೆಂಡ್, ಬರೆದದ್ದು ಇಂಗ್ಲೀಷ್ ನಲ್ಲಿ, ಎಮಿಲಿ ಚಿಕ್ಕ ವಯಸ್ಸಿನಲ್ಲಿ ತಾಯಿಯನ್ನು ಕಳೆದುಕೊಂಡು, ಕಠಿಣ ಸ್ವಭಾವದ ನೆಂಟನಬ್ಬೊಳ ಮನೆಯಲ್ಲಿ ಬೆಳೆದಳು. ಹೆಚ್ಚು ಔಪಚಾರಿಕ ಶಿಕ್ಷಣವನ್ನು ಪಡೆಯಲಿಲ್ಲ. ಆಕೆ ಯಾರೊಂದಿಗೂ ಬೆರೆತವಳಲ್ಲ, ಒಂಟಿತನವೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೌನವೊಂದು ಸಾಗುತಿಹುದು ಬದುಕು ಬಿಟ್ಟು: ಸಚೇತನ

  ವಿಶಾಲ ಮರುಭೂಮಿಯ ಮರಳಿನ ಮೇಲೆ ಬಿಸಿಲು ಚೆಲ್ಲುತ್ತ ನಿಂತ ನೀಲ ಆಕಾಶಕ್ಕೆ ಒಂದೇ ಬಣ್ಣ, ಕಪ್ಪು, ಬಿಳಿ, ಕಡು ನೀಲ, ಕಡುಗಪ್ಪು, ಬಂಗಾರ, ಹಳದಿ ಯಾವುದೇ ಬಣ್ಣಗಳಿಲ್ಲದ ಮೋಡಗಳ ಅಡಿಯಲ್ಲಿರುವವರ ಬದುಕು ಕೂಡ, ಬಣ್ಣಗಳಿಲ್ಲದ ಬದುಕು. ಈ ನೀಲ ಆಕಾಶದ ಕೆಳಗೆ  ಇರಾಕ್ ಮತ್ತು ಟರ್ಕಿ ನಡುವಿನ ಮರುಭೂಮಿಯಂತ ಪ್ರದೇಶದಲ್ಲಿ ಕುರ್ದಿಶ್ ಎನ್ನುವ ನಿರಾಶ್ರಿತರ ಕ್ಯಾಂಪ್ ಇದೆ. ಇರಾಕ್ ಮತ್ತು ಅಮೇರಿಕಾದ ಯುದ್ಧೋನ್ಮಾದದ ಹರಿತ ಧೂಳು ಎಲ್ಲೆಲ್ಲು ತುಂಬಿದೆ. ಯುದ್ಧವೆಂದರೆ ಸೈನಿಕರ ಬಡಿದಾಟವಲ್ಲ, ಬಂದೂಕುಗಳ ಶಬ್ದಗಳಲ್ಲ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಕತೆಗಳು: ನವೀನ್ ಮಧುಗಿರಿ, ಮುಕುಂದ್ ಎಸ್.

ಚಪ್ಪಾಳೆ ಇಡೀ ಶಾಲೆಗೇ ವರ್ಷದ ಉತ್ತಮ ಪ್ರತಿಭಾವಂತ ವಿದ್ಯಾರ್ಥಿ ಎಂದು ಮಗ ವೇದಿಕೆಯ ಮೇಲೆ ಪ್ರಶಸ್ತಿಯನ್ನು ಪಡೆವಾಗಯುವಾಗ, ಪೋಷಕರ ಸಾಲಿನಲ್ಲಿ ಕುಳಿತ ಅವನ ಕುರುಡು ತಂದೆ ಸಂತಸದಿಂದ ಎಲ್ಲರೊಟ್ಟಿಗೆ ಚಪ್ಪಾಳೆ ತಟ್ಟಿದರು. *** ನಾಯಿ ಆ ಮನೆಯಲ್ಲಿ ಅದು ಊಟದ ಸಮಯ. ಗಂಡ ಊಟಕ್ಕೆ ಕುಳಿತಿದ್ದ, ಹೆಂಡತಿ ಬಡಿಸುತ್ತಿದ್ದಳು. ಎರಡು ತುತ್ತು ತಿನ್ನುವಾಗ ಗಂಡ ತನ್ನ ಮಾಮೂಲಿ ಗೊಣಗಾಟವನ್ನ ಶುರು ಮಾಡಿದ. ಅನ್ನ ಯಾಕಿಷ್ಟು ಮೆತ್ತಗೆ ಮಾಡಿದ್ದೀಯ?  ಸಾರಿಗೆ ಉಪ್ಪು ಕಡಿಮೆ. ಪಲ್ಯ ತುಂಬಾ ಖಾರ ಖಾರ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಧ್ವನಿ ಕೇಳೋ ಆಸೆಯೂ, ರೆಕಾರ್ಡಿಂಗ್ ನೆನಪೋಲೆಯು: ಪ್ರಶಸ್ತಿ ಪಿ.

ಶಾಲಾ ದಿನಗಳಲ್ಲಿ ಆಕಾಶವಾಣಿಯಲ್ಲಿ ಶನಿವಾರ ಬರ್ತಿದ್ದ ಗಾಂಧಿ ಸ್ಮೃತಿ, ಭಾನುವಾರದ ರೇಡಿಯೋ ಸಿನಿಮಾ(ಧ್ವನಿಯಲ್ಲೇ ಸಿನಿಮಾದ ಕಲ್ಪನೆಗಳ ಕಟ್ಟೋ ಅದ್ಬುತ ಅನುಭವ ಕೇಳೇ ಸವಿಬೇಕು), ಪ್ರತಿದಿನ ಸಂಸ್ಕೃತ ವಾರ್ತೆಯ ಬಲದೇವಾನಂದ ಶರ್ಮ,  ಏಳೂ ಮೂವತ್ತೈದರ ವಾರ್ತೆ, ಎಂಟರ ಹಿಂದಿ, ಇಂಗ್ಲೀಷ್ ವಾರ್ತೆಗಳು, ನಂತರದ ರೇಡಿಯೋ ಡಾಕ್ಟರಗಳನ್ನು ಕೇಳೇ ದೊಡ್ಡವರಾದ ನಮಗೆ  ರಾತ್ರಿ ಎಂಟು ಘಂಟೆಗೆ ಬರೋ "ಯುವವಾಣಿ" ಅಚ್ಚುಮೆಚ್ಚಾಗಿತ್ತು. ಅದರಲ್ಲಿ ಬರ್ತಿದ್ದ ಕಾಲೇಜು, ಶಾಲಾ ವಿದ್ಯಾರ್ಥಿಗಳು ಮತ್ತು ಅವರು ನಡೆಸಿಕೊಡುತ್ತಿದ್ದ ಕಾರ್ಯಕ್ರಮ ಕೇಳುತ್ತಿದ್ದ ನನಗೆ ನಾನೂ ಒಮ್ಮೆ ರೇಡಿಯೋದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಿರುಗುಬಾಣ: ಬಸವರಾಜ ಎಂ.

ಆಫೀಸ್ ಗೆ ತಡವಾಗುತ್ತಿತ್ತು. ಇಸ್ತ್ರಿ ಮಾಡಿದ ಬಟ್ಟೆ  ಬೇರೆ ಇರಲಿಲ್ಲ. ಮಗನಿಗೆ ಹೇಳೋಣವೆಂದುಕೊಳ್ಳುವ ಹೊತ್ತಿಗೆ ಗಾದೆ ನೆನಪಿಗೆ ಬಂತು. "ಅಪ್ಪ ಮಾಡಿದ್ದು ಉತ್ತಮ,  ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಆಳು" ಅಂತ. ಮನೆಯಲ್ಲಿ ಆಳು ಇಡಲಂತೂ ಸಾಧ್ಯವಾಗಿಲ್ಲ ಹೋಗಲಿ ನಾನೆ ಮಾಡೋಣ ಎಂದುಕೊಂಡರೆ ನನಗೊಂದು ಜಿಜ್ಞಾಸೆ. ಅದೇನೆಂದರೆ ನನ್ನ ಅಪ್ಪನನ್ನು  ಪರಿಗಣಿಸಿದರೆ ನಾನು ಮಾಡಿದ್ದು ಮಧ್ಯಮವಾಗುತ್ತದೆ. ಮಗನಿಗೆ  ಹೇಳೋಣವೆಂದರೆ ಮತ್ತೆ ಮಧ್ಯಮದ ವಿಚಾರ ಬಂತು. ಈಗ ನನ್ನ ಕೋಪ ತಿರುಗಿದ್ದು ನನ್ನ ಅಂಗಿಯ ಇಸ್ತ್ರಿಯ ಮಾಡದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಉರ್ಬಾನ್ ಡಿಸೋಜ, ಅಕುವ, ಶಿವಕುಮಾರ ಸಿ.

ಹುಡುಕಾಟ ನಾನು ನನ್ನ ಬದುಕನ್ನು ಹೀಗೆಯೇ ಸುಮ್ಮನೆ ನೋಡಿದೆ, ಆಗ೦ತುಕ, ಆಗ೦ತುಕನನ್ನು ಭೇಟಿಯಾದ೦ತಾಯ್ತು. ಇದು ನನ್ನ ಬದುಕೇ? ಉತ್ತರ ಹುಡುಕಾಡಿದೆ. ಒಳ್ಳೇದೇ ಮಾಡಿದೆ,  ಕೋಟಿ ದೇವರನ್ನ ಬೇಡಿದೆ, ಆದರೂ ನನ್ನ ಬದುಕನ್ನು ನಾನೇ ಅರಿಯದಾದೆ. ಇತರ ಚಿ೦ತನೆ, ಮಾತುಗಳೇ ನಾನೆ೦ದುಕೊ೦ಡೆ. ಕಡಿದವನ, ಕುಡಿದವನ, ಅತ್ಯಾಚಾರಿಯ, ಲ೦ಚವಾದಿಯ ಬದುಕು ಯಾವ ರೀತಿಯದು ಎಂದು ನೆನೆದು ನಡುಗಿದೆ. ಸತ್ತ ನ೦ತರದ ಬದುಕನ್ನು ನೆನೆದು ಈಗಿನ ಬದುಕ ಮರೆತೆ? ಹೂವನ್ನೇ ಬಯಸಿದ ಬದುಕಿನೊಳಗೆ ಹರಿತ ಚಾಕುವೇ ತಿವಿಯಿತು. ಬದುಕೇ, ನೀನು ಮತ್ತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ (ಅವಲೋಕನ-೪): ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . ಮಾಧವ ಗಾಡ್ಗಿಳ್ ವರದಿ: ಪಶ್ಚಿಮಘಟ್ಟಗಳ ಮಹತ್ವವನ್ನು ಅರಿಯಬೇಕಾದರೆ ಈ ಕೆಳಗಿನ ಕೆಲ ಅಂಕಿ-ಅಂಶಗಳನ್ನು ಗಮನಿಸಬೇಕು. ಭಾರತಾದ್ಯಂತ ಕಂಡು ಬರುವ ೪೦೦೦ ಜಾತಿಯ ಪುಷ್ಪವೈವಿಧ್ಯದಲ್ಲಿ ೧೦೮೦ ಜಾತಿಗಳು ಈ ಘಟ್ಟಪ್ರದೇಶದಲ್ಲಿವೆ. ದೇಶದಲ್ಲಿರುವ ೬೪೫ ನಿತ್ಯಹರಿಧ್ವರಣ ಜಾತಿಯ ಮರಗಳಲ್ಲಿ ೩೬೨ ಜಾತಿಯ ಮರಗಳು ಇಲ್ಲಿವೆ. ೧೦೦೦ ಜಾತಿಯ ನೆಲಮಟ್ಟದ ಪೊದೆ-ಬಳ್ಳಿಗಳ ಪ್ರಬೇಧಗಳಲ್ಲಿ ೬೮೨ ಪ್ರಭೇದಗಳು ಘಟ್ಟಗಳಲ್ಲಿವೆ ಹಾಗೂ ಇದರಲ್ಲಿ ೨೮೦ ಪ್ರಬೇಧಗಳು ಪಶ್ಚಿಮಘಟ್ಟಗಳಲ್ಲಿ ಮಾತ್ರ ಲಭ್ಯವಿದೆ. ಅಕಶೇರುಕ ಪ್ರಬೇಧಗಳ ಒಟ್ಟು ೩೫೦ರಲ್ಲಿ ೭೦ ಪ್ರಬೇಧಗಳು ಪ್ರಪಂಚದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಮಕ್ಕಳ ಸುರಕ್ಷತೆಗಿರಲಿ ಮೊದಲ ಆದ್ಯತೆ” : ಹೊರಾ.ಪರಮೇಶ್ ಹೊಡೇನೂರು

"ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಹೊಣೆ" ಎಂಬ ಸಾಮಾಜಿಕ ಕಾಳಜಿಯ ಘೋಷವಾಕ್ಯ ಇಂದಿನ ದಿನಮಾನಗಳಲ್ಲಿ ತುಂಬಾ ಚಾಲ್ತಿಯಲ್ಲಿದೆ. ಏಕೆಂದರೆ, ಭವಿಷ್ಯದ ನಾಗರೀಕರಾಗಿರುವ ಮಕ್ಕಳ ಬಾಲ್ಯವು ತುಂಬಾ ಆಯಕಟ್ಟಿನದ್ದಾಗಿದ್ದು, ತಮ್ಮ ಮನೆಯ, ಶಾಲೆಯ ಮತ್ತು ಸಮುದಾಯದ ನಡುವೆ ಸಹಜ ತುಂಟಾಟ, ತರಲೆ, ಚೇಷ್ಟೆ, ಹುಡುಗಾಟಿಕೆಗಳಿಂದ ಕೂಡಿರುತ್ತದೆ ಮತ್ತು ಈ ಸಂದರ್ಭಗಳಲ್ಲಿ ಅಕಾಸ್ಮಾತ್ ಆಗಿ ಅಚಾತುರ್ಯಗಳು ಉಂಟಾದಾಗ ಅನಾಹುತಗಳೇ  ಜರುಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಂತಹ ಕೆಲವು ಸಂದರ್ಭಗಳು, ಸಾಧ್ಯತೆಗಳ ಬಗೆಗೆ ಒಂದಿಷ್ಟು ಮೆಲುಕು ಹಾಕುತ್ತಾ, ಮಕ್ಕಳ ಸುರಕ್ಷತೆಗೆ ಹೇಗೆ ಹೊಣೆಗಾರಿಕೆ ನಿಭಾಯಿಸಬೇಕೆಂಬುದನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 62): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಯೋಜನಾ ಆಯೋಗದ ಉಪಾಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೨.    ಕುಂದರನಾಡಿನ ಕಂದ ಎಂದು ಯಾವ ಸಾಹಿತಿಯನ್ನು ಕರೆಯುತ್ತಾರೆ? ೩.    ಎಚ್.ಎಸ್.ಸಿ.ಎಲ್ (HSCL) ನ ವಿಸ್ತೃತ ರೂಪವೇನು? ೪.    ಅಖಂಡೇಶ್ವರ ಇದು ಯಾರ ಅಂಕಿತನಾಮವಾಗಿದೆ? ೫.    ಕಂಪ್ಯೂಟರ್ ಚಿಪ್ ತಯಾರಿಕೆಯಲ್ಲಿ ಬಳಸುವ ಮೂಲವಸ್ತು ಯಾವುದು? ೬.    ರಾಮಾಯಣದ ಕಾಲದಲ್ಲಿ ಚಿತ್ರದುರ್ಗವನ್ನು ಯಾವ ಹೆಸರಿನಿಂದ ಕರೆಯಲಾಗುತಿತ್ತು? ೭.    ಒಂದು ಹೆಕ್ಟೇರಿನಲ್ಲಿ ಎಷ್ಟು ಚರದ ಮೀಟರುಗಳಿವೆ? ೮.    ಕೆನಡಾದ ರಾಷ್ಟ್ರೀಯ ಪ್ರಾಣಿ ಯಾವುದು? ೯.    ಶಿವಪ್ಪ ನಾಯಕನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾವಿರದ ನೋಟು: ಗಣೇಶ್ ಖರೆ

ಬೆಂಗಳೂರಿನ ರಸ್ತೆಯ ಮೂಲೆಯಲ್ಲಿ ಡೊಂಬರಾಟದವರು ತಮ್ಮ ಕಸರತ್ತು ತೋರಿಸುವಲ್ಲಿ ನಿರತರಾಗಿದ್ದರು. ನೋಡಿದರೆ ಯಾವುದೋ ಹಳ್ಳಿಯ ಮೂಲೆಯಿಂದ ಬಂದವರಂತೆ ಅವರ ವೇಶ ಭೂಶಣವಿತ್ತು. ಹಗ್ಗದ ಮೇಲೆ ನಡೆಯುವುದು, ಗೋಲಕದೊಳಗೆ  ತಮ್ಮ ಮೈಯ್ಯನ್ನು ತೂರಿಸುವುದು, ತಲೆ ಕೆಳಗಾಗಿ ಕೈಯ್ಯ ಮೇಲೆ ನಡೆಯುವುದು ಹೀಗೆ ಕಸರತ್ತು ಸಾಗಿತ್ತು. ಸಿಗುವ ಬಿಡಿ ಕಾಸಿಗಾಗಿ ಜೀವವನ್ನು ಪಣಕ್ಕಿಟ್ಟು ಮಾಡುವ ಕಸರತ್ತು ಜನರನ್ನು ಅವರತ್ತ ಆಕರ್ಷಿಸುತ್ತಿತ್ತು. ಡೊಂಬರಾಟದ ಗುಂಪಲ್ಲಿ ಇದ್ದದ್ದು ಮೂರು ಜನ, ಎಲ್ಲರೂ ಹೆಂಗಸರೇ. ಒಬ್ಬಳಿಗೆ ಸುಮಾರು ಮೂರರಿಂದ ನಾಲ್ಕು ವಯಸ್ಸಿರರಬಹುದು, ನೋಡೊಕೆ ಮುಗ್ಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಗತ: ತ್ರಿವೇಣಿ ಟಿ.ಸಿ.

ನಿನ್ನ ಬಾಳನ್ನು ಬೆಳಗೋಕ್ ಬಂದ ಹುಡುಗಿ ಇನ್ನೊಂದು ಹೆಣ್ಣಿನ ಬಾಳನ್ನು ಕತ್ತಲೆ ಮಾಡಿದ್ದು ನಿಜವಲ್ವೆ. ಕನಸುಗಳ ಬಿತ್ತಿ ನೀರು ಸುರಿಸದೆ ಸುರುಟಿದೆ ನನ್ನ ಕನಸು.  ೨೦೧೦ ರ ಒಂದು ಮಧ್ಯಾನ್ಹ ಬಂದ ಇ-ಮೇಲ್,  ೨೦೦೯ ರಲ್ಲಿ ಯಾವುದೋ ಹಳೆ ಪೇಮೆಂಟ್ ಕೊಟ್ ಬಿಡಿ ಅಂತ ಮೆಸ್ಸೇಜು…  ಅವತ್ತಿಗೆ ರಿಪ್ಲೈ ಆಯ್ತು, ಕೊಡೋಣ ತಡ್ಕೊಳಪ್ಪ ……  ಮತ್ತೆ ಮೂರನೇ ದಿವಸಕ್ಕೆ ಒಂದು ರಿಮೈನ್ಡರ್  ಕೊಡ್ತೀರೋ ಇಲ್ಲವೋ.. ಫೋನೆತ್ತಿ ಮಾತಾಡಿ ತಡೆದುಕೊಳ್ ಪುಣ್ಯಾತ್ಮ ನಿನ್ನ ಚೆಕ್ಕುಗೆ ರೆಕ್ವಿಸಿಶನ್ ಹಾಕಿದೀನಿ ಡೆಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಕಲಾಂಗರಿಗೆ ಆಸರೆಯಾಗುತ್ತಿರುವ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಿ.ಡಿ.ತಟ್ಟಿ ಸಂಸ್ಥೆ: ದಿಗಂಬರ ಎಂ.ಪೂಜಾರ

  ಲಕ್ಷ್ಮೇಶ್ವರ-ದಲ್ಲಿ ಕಿವುಡು ಮಕ್ಕಳ ಬಗ್ಗೆ. ನಮಗೆ ತಿಳಿದ ಹಾಗೆ ಸಮಾಜದಲ್ಲಿ ವಿಕಲಚೇತನರಿಗೆ ಸಮಾನತೆ ಹಾಗು ಸೌಲಭ್ಯಗಳ ಕಾನೂನಿನ ಮೂಲಕ ಸಿಕ್ಕಿರಬಹುದು. ಆದರೆ ನಿಜವಾಗಿಯೂ ಅವು ನಿಜವಾದ ಫಲಾನುಭವಿಗಳಿಗೆ ಸಿಗದೇ ಬೇರೆಯವರ ಪಾಲಾಗುತ್ತಿವೆ. ಇಂತಹ ದಿನಮಾನಗಳಲ್ಲಿಯೂ ತಮ್ಮ ಬೆನ್ನು ಮೂಳೆ ಮುರಿಯುವಂತೆ ಕೆಲಸ ಮಾಡುತ್ತಿರುವುದು ಕೆಲವು ಸಂಸ್ಥೆಗಳು ಮಾತ್ರ. ಅಂತಹ ಸಂಸ್ಥೆಗಳ ಸಾಲಿಗೆ ಸೇರುವ ಸಂಸ್ಥೆಗಳಲ್ಲಿ ಗದಗ ಜಿಲ್ಲೆಯ ಐತಿಹಾಸಿಕ ನಗರವಾಗಿರುವ  ಲಕ್ಷ್ಮೇಶ್ವರದಲ್ಲಿರುವ ಬಿ.ಡಿ. ತಟ್ಟಿ(ಅಣ್ಣಾವರು) ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ ಕೂಡಾ ಒಂದು.  ಸುಮಾರು ೧೮ ವರ್ಷಗಳಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಾತಾಳದೆಡೆಗೆ!: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ವೆಂಕಣ್ಣ ಪರಿವಾರ ಸಮೇತ ಬೆಂಗಳೂರಿನ ವಿಮಾನಾಲಯದ ಪ್ರವೇಶದ್ವಾರಕ್ಕೆ ಪಾದಸ್ಪರ್ಶ ಮಾಡಿದಾಗ ಗಂಟೆ ರಾತ್ರಿ ಹನ್ನೊಂದಾಗಿತ್ತು. ಮುಂಜಾನೆ ಎರಡು ಗಂಟೆಗೆ ಪ್ಲೇನು ಹೊರಡುವದಿತ್ತಾದರೂ ಆದಕ್ಕಿಂತ ನಾಲ್ಕು ತಾಸು ಮೊದಲೇ ಅಲ್ಲಿರಬೇಕಿತ್ತು. ಎಲ್ಲ ಔಪಚಾರಿಕತೆಗಳನ್ನು ಮುಗಿಸಬೇಕಲ್ಲ. ಅಮೆರಿಕಾಕ್ಕೆ ಹೋಗುವುದೆಂದರೆ ಅಷ್ಟು ಸುಲಭವೇ? ಬೆಂಗಳೂರಿನಿಂದ ಜರ್ಮನ್ ದೇಶಕ್ಕೆ ಮೊದಲ ಫ್ಲೈಟು. ಅಲ್ಲಿಂದ ಅಮೇರಿಕಾದ ಚಿಕ್ಯಾಗೊ ನಗರಕ್ಕೆ ಇನ್ನೊಂದು ಫ಼್ಲೈಟು. ಕೊನೆಗೆ ಇವನು ಹೋಗಬೇಕಾಗಿದ್ದ ಊರಾದ ಸ್ಯಾಂಡಿ ಗೆ ಮತ್ತೊಂದು! ಒಂದೇ ಫ್ಲೈಟಿನಲ್ಲಿ ಅಷ್ಟು ದೂರ ಕ್ರಮಿಸುವುದು ಕಷ್ಟ. ಆ ದೇಶಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಣೆಯಾದ ಕತೆಯ ಹಿಂದೆ: ಪ್ರಶಸ್ತಿ

  ರೈಟ್ ಕ್ಲಿಕ್ ಮಾಡಲೂ ಸಾಧ್ಯವಿಲ್ಲದಂತೆ ತುಂಬಿಹೋಗಿತ್ತು ಡೆಸ್ಕಟಾಪು. ಡೆಸ್ಕಟಾಪಿನ ಮೇಲೆ, ಸಿ ಡ್ರೈವಲ್ಲಿ ಜಾಸ್ತಿ ಏನು ಇಡಬೇಡಿ, ಕಂಪ್ಯೂಟ್ರು ನಿಧಾನವಾಗತ್ತೆ ಅಂತಿದ್ದವ್ನೇ ಈ ತರ ಕಸ ತುಂಬಿಸ್ಕೊಂಡಿರೋದಾ ಅನಿಸ್ಬಿಡ್ತು ಒಮ್ಮೆ. ಕಸ ಅನ್ನೋಕೆ ಮನಸ್ಸು ಬಾರದ ಕಸ ಅದು. ಬೆಳಕ ಕಂಡು ವಾರವಾಗಬೇಕಿದ್ದ ಕನಸುಗಳು ನೋಟಪ್ಯಾಡಿನ ಗೀಚುಗಳೇ ಆಗುಳಿದು ಪರದೆಯ ತುಂಬೆಲ್ಲಾ ಮಲಗಿಬಿಟ್ಟಿದ್ವು. ದಿನದೆಂಟು ಘಂಟೆಗಳು ಹೊಟ್ಟೆಪಾಡಿಗೆ , ಅದಾದ ನಂತರ ಎಂಟು ಘಂಟೆ ನಿದ್ರೆ ಅಂದ್ರೂ ಇನ್ನೆಂಟು ಘಂಟೆ ಏನ್ಮಾಡ್ತೀಯೋ ? ಒಂದೆಂರಡು ಘಂಟೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಅಕ್ಷಯ ಕಾಂತಬೈಲು, ಸಿಂಧು ಹೆಗ್ಡೆ, ಸ್ಫೂರ್ತಿ ಗಿರೀಶ್

ಪ್ರಶ್ನೆಯ ಮೇಲೆ ಪ್ರಶ್ನೆ                 ಬಂಧುವೋ ಬಳಗವೋ ಯಾರೊಡೆ ಆನಂದವೋ ಸಂಸಾರದ ಬೇಲಿಯೊಳಗೆ ಮೇಯಿವ, ಬೇಯುವ ಮನಸಿನೊಳು ಎಲ್ಲವೂ ಶೂನ್ಯವು ಮುಂದೆ ಏನೋ ಹಿಂದೆ ಸವೆಸಿದ ಹಾದಿಯೋ ಬೆಟ್ಟ ತಪ್ಪಲು ಕಲ್ಲು ಚಪ್ಪಡಿ ಮೇಲೆ ಗಟ್ಟಿ ಮೆಟ್ಟದ ಪಾದವು ಬರೀ ಚಲಿಸುವ ಕಾಯವು ಹಬ್ಬಿದ ಉರಿ ಧಗೆಗೆ  ಬಸವಳಿದು ಬೆಂಡಾದ  ಸ್ಥಿತಿಯೋ ನದಿ ಮೂಲವ ತಿಳಿಯ ಹೊರಟ  ಜೀವವೇ ಆವಿಯು ಎಂತು ಕಟ್ಟಿತು ಮೋಡವು ಹೋರಾಟದ ಬದುಕೋ? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಿತ್ರ ಶ್ರೇಣಿಯೊಳ್ ವಾಣಿ: ಪಿ.ಎಂ.ಸುಬ್ರಮಣ್ಯ, ಬ.ಹಳ್ಳಿ

ಕಾಲದೊಳಗೆ  ವಸಂತ ವಿದ್ಯಾ ಜಾಲದೊಳಗೆ ಕವಿತ್ವ ಗಜವೈ ಹಾಳಿಯಲಿ ದೇವೆಂದ್ರ ಮಿತ್ರಶ್ರೇಣಿಯೊಳು ವಾಣಿ ಭಾಳನೇತ್ರನು ದೈವದಲಿ ಬಿ ಲ್ಲಾಳಿನಲಿ ಮನ್ಮಥನು ಧನದಲಿ ಹೇಳಲೇನಭಿಮಾನವೇ ಧನವೆಂದನಾ ವಿದುರ   (ಕುಮಾರವ್ಯಾಸ ಭಾರತ) ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎನ್ನುವ ಗಾದೆಮಾತು ಪ್ರಸ್ತುತ ಸನ್ನಿವೇಶದಲ್ಲಿ ಅರ್ಧಸತ್ಯವಾಗ್ತಿದೆ.  ಏಕೆಂದರೆ ಈ ಗಾದೆಯ ಮೊದಲ ಅರ್ಧ ಸರಿ ಎನಿಸಿದರೂ ಉಳಿದರ್ದ ಏಕೋ ಸರಿ ಕಾಣ್ತಿಲ್ಲವೇನೋ ಎನಿಸುತ್ತೆ.  ಒಲೆ  ಎನ್ನೋ ಮಾತೇ ಮರೆತು ಹೋಗಿದೆ.  ಜನಸಂಪದ ಗ್ಯಾಸ್‌ಸ್ಟವ್, ಎಲೆಕ್ಟ್ರಿಕಲ್‌ಸ್ಟವ್, ಎಲೆಕ್ಟ್ರಾನಿಕ್ ಓವೆನ್, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಮ್ಮ ಗಮನಕ್ಕೆ

ಬದುಕಿನ ಮೊದಲ ಹನ್ನೆರಡು ವರ್ಷಗಳನ್ನು ಹಾಸನದಲ್ಲಿ ಕಳೆದಿರುವ ಸಿಂಧು ಪದವಿಯವರೆಗೆ ಓದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ. ಕರ್ನಾಟಕ ವಿಶ್ವ ವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕೆ.ಡಿ.ಸಿ.ಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಪತಿ ಚಂದ್ರಶೇಖರ ಮತ್ತು ಮಗಳು ಸಿಂಚನಳೊಂದಿಗೆ ಶಿರಸಿಯಲ್ಲಿ ವಾಸವಾಗಿದ್ದಾರೆ.   ಇವರ ನಗುತ್ತೇನೆ ಮರೆಯಲ್ಲಿ ಕವನ ಸಂಕಲನ ೨೦೧೦ರಲ್ಲಿ ಹಾಗೂ ಕನಸಿನ ಕಾಡಿಗೆ ಕಥಾಸಂಕಲನ ೨೦೧೪ರಲ್ಲಿ ಪ್ರಕಟಗೊಂಡಿದೆ. ಇವರ ಮತ್ತೊಂದು ಕವನ ಸಂಕಲನ "ರಸ್ತೆಯಲ್ಲಿ ಮೇ ಫ್ಲವರ್" ಈ ತಿಂಗಳು ಬಿಡುಗಡೆಯಾಗುತ್ತಿದೆ. ಪುಸ್ತಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಿರಸ್ಕಾರ (ಭಾಗ 6): ಜೆ.ವಿ.ಕಾರ್ಲೊ, ಹಾಸನ

ಇಲ್ಲಿಯವರೆಗೆ ಮರುದಿನ ಹ್ಯಾನ್ಸ್ ಬಂದ. ಆನ್ನೆಟ್ ಅವನನ್ನು ಗಮನಿಸಿದಳಾದರೂ ಅವಳ ಕಣ್ಣುಗಳು ಸುಣ್ಣ ಬಳಿದ ಗೋಡೆಗಳಂತೆ ನಿರ್ಬಾವುಕವಾಗಿದ್ದವು. ಇಬ್ಬರೂ ಏನೂ ಮಾತನಾಡಲಿಲ್ಲ. ಹ್ಯಾನ್ಸ್ ಮುಗುಳ್ನಕ್ಕ. ’ಎದ್ದು ಹೋಗದಿದ್ದಕ್ಕಾಗಿ ಧನ್ಯವಾದಗಳು!’ ಅವನು ಹೇಳಿದ. ’ನನ್ನ ತಂದೆ-ತಾಯಿಯರಿಬ್ಬರೂ ನಿನ್ನನ್ನು ಆಹ್ವಾನಿಸಿದ್ದಾರೆ. ಅವರಿಬ್ಬರೂ ಈಗ ಮನೆಯಲ್ಲಿಲ್ಲ. ಒಳ್ಳೇದೆ ಆಯ್ತು. ನಿನ್ನೊಡನೆ ಮುಕ್ತವಾಗಿ ಮಾತನಾಡಲು ಇದೇ ಒಳ್ಳೆಯ ಸಮಯ. ಬಾ. ಕೂತುಕೊ.’ ಅವನು ಕೋಟ್ ಮತ್ತು ಹೆಲ್ಮೆಟನ್ನು ತೆಗೆದಿಟ್ಟು ಅವಳಿಗೆ ಎದುರಾಗಿ ಕುರ್ಚಿಯನ್ನು ಎಳೆದು ಕುಳಿತುಕೊಂಡ. ’ನನ್ನ ಮನೆಯವರು ನಾನು ನಿನ್ನನ್ನೇ ಮದುವೆಯಾಗಬೇಕೆಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಾಕಿಂಗ್ ಅನ್ನೋ ಸ್ನೇಹಿತೆ: ಪದ್ಮಾ ಭಟ್

                     ಹೆಲ್ದೀ ಲೈಫ್ ಅನ್ನೋದು ಈಗ ಉಳ್ಳವರ ಅಥವಾ ಪೇಟೆಯವರ ಸ್ವತ್ತಾಗಿ ಮಾತ್ರ ಉಳಿದಿಲ್ಲ.. ಬದಲಾಗಿ ಹಳ್ಳಿಯ ಮೂಲೆ ಮೂಲೆಗೂ ಅದರ ಛಾಪು ಪಸರಿಸಿದೆ..ನನ್ ಹೊಟ್ಟೆ ಸಣ್ಣಗಾಗಬೇಕು, ನನ್ ಟೆನ್ಶನ್ ಕಡಿಮೆಯಾಗಬೇಕು, ಬಳುಕುವ ಸೊಂಟ ನಂಗಿರಬೇಕು ಎಂಬ ಬೇಕುಗಳ ನಡುವೆಯೇ, ಜನರಲ್ಲಿ ಆರೋಗ್ಯಕರ ಜೀವನವನ್ನು ತಮ್ಮದಾಗಿಸಿಕೊಳ್ಳಬೇಕೆಂಬ ಅರಿವು ಮೂಡಿದೆ.  ರೋಗ ಬಂದ್ಮೇಲೆ ಕಡಿಮೆ ಮಾಡೋದಿಕ್ಕೆ ಸಾಹಸ ಪಡೋದಕ್ಕಿಂದ, ಬರದೇ ಇದ್ದ ರೀತಿ ಜೀವನಶೈಲಿ ರೂಢಿಸಿಕೊಳ್ಳಬೇಕೆಂಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ – ಅವಲೋಕನ-೩: ಅಖಿಲೇಶ್ ಚಿಪ್ಪಳಿ

ಮುಂದುವರೆದಿದೆ. . . (ಮಾಧವ ಗಾಡ್ಗಿಳ್ ವರದಿಯು ೫೭೨ ಪುಟಗಳನ್ನು ಹೊಂದಿದ್ದು, ಅದೇ ಕಸ್ತೂರಿರಂಗನ್ ವರದಿಯು ಬರೀ ೧೫೨ ಪುಟಗಳನ್ನು ಹೊಂದಿದೆಯಾದ್ದರಿಂದ, ಮಾಧವ ಗಾಡ್ಗಿಳ್ ವರದಿಯು ವಿಸೃತವಾಗಿ ವ್ಯಾಖ್ಯಾನಿಸಿದಂತೆ ತೋರಬಹುದು, ಮಾಹಿತಿಗಳ ಅಗಾಧ ವ್ಯತ್ಯಾಸವನ್ನು ಗಮನದಲ್ಲಿರಿಸಿಕೊಂಡು ಓದುಗರು ಸಹಕರಿಸಬೇಕು) ಬೆಂಗಳೂರಿನಲ್ಲಿ ೩೦ನೇ ಮಾರ್ಚ್ ೨೦೧೦ರಂದು ನಡೆದ ಸಭೆಯ ನಂತರದಲ್ಲಿ ಪ್ರೊ:ಮಾಧವ ಗಾಡ್ಗಿಳ್ ಸಮಿತಿ ರಚನೆಯಾಯಿತು. ನಂತರದಲ್ಲಿ ಈ ಸಮಿತಿಯು ೧೪ ಸಭೆಗಳನ್ನು ನಡೆಸಿ ನಿರ್ಣಾಯಕ ಸಭೆಯನ್ನು ೧೬-೧೭ ಆಗಸ್ಟ್ ೨೦೧೧ರಂದು ನಡೆಸಿತು. ಇದಕ್ಕೂ ಪೂರ್ವದಲ್ಲಿ ವಿವಿಧ ಸರ್ಕಾರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಿಂತೆಗೆ ಕೊನೆಯುಂಟೆ?: ಮಂಜು ಹಿಚ್ಕಡ್

ಒಮ್ಮೆ ಮೆದುಳಿಗೆ ಹೊಕ್ಕ ಚಿಂತೆಗಳಿಗೆ ಹೊಸತು ಹಳತು ಎನ್ನುವ ಭೇದಬಾವವಿಲ್ಲ. ಕುಳಿತಲ್ಲಿ, ನಿಂತಲ್ಲಿ, ಹೋದಲ್ಲಿ, ಬಂದಲ್ಲಿ ಮನಸ್ಸನ್ನು ಹೊಕ್ಕ ಚಿಂತೆಗಳು ಆಗಾಗ ಜಾಗ್ರತಗೊಂದು ಕಾಡುತ್ತಿರುತ್ತವೆ. ಇರಲಿ ಎಂದು ಹಾಗೆ ಸುಮ್ಮನೆ ಬಿಡುವಂತಿಲ್ಲ. ಹಾಗೇನಾದರೂ ಬಿಟ್ಟು ಬಿಟ್ಟರೆ ಅದು ಬೆಳೆಯುತ್ತಾ ಹೋಗಿ ಹೆಮ್ಮರವಾಗಿ ಬಿಡುತ್ತದೆ. ಆ ಚಿಂತೆಗಳಿಗೆ ಅದೆಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೋ ಅಷ್ಟು ಒಳ್ಳೆಯದು. ಇದು ಸೋಮನಿಗೂ ಕೂಡ ತಿಳಿದ ವಿಷಯ. ಸೋಮ ಜಾಸ್ತಿ ಓದಿದವನಲ್ಲದಿದ್ದರೂ ತನ್ನ ಅರವತ್ತು ವರ್ಷದ ಅನುಭವದಿಂದಾಗಿ ಅವನಿಗೆ ಅದೆಲ್ಲವೂ ತಿಳಿದ ವಿಚಾರವಾರವೇ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 61): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ರವೀಂದ್ರನಾಥ ಠಾಗೂರರ ಪ್ರಥಮ ಕವನ ಸಂಕಲನ ಯಾವುದು? ೨.    ಎಪಿಎಮ್‌ಸಿ (APMC) ನ ವಿಸ್ತೃತ ರೂಪವೇನು? ೩.    ನ್ಯಾಷನಲ್ ಏರೋನಾಟಿಕಲ್ ಲ್ಯಾಬೋರೇಟರಿ (NAL) ಕರ್ನಾಟಕದಲ್ಲಿ ಎಲ್ಲಿದೆ? ೪.    ಹಂಸ ಪಕ್ಷಿಯನ್ನು ತನ್ನ ವಾಹನವನ್ನಾಗಿ ಹೊಂದಿರುವ ದೇವತೆ ಯಾರು? ೫.    ಉತ್ತರ ಕನ್ನಡ ಜಿಲ್ಲೆಯ ಯಾವ ತಾಲ್ಲೂಕನ್ನು ಗಾಂಧಿನೆಲೆ ಎಂದು ಕರೆಯುತ್ತಾರೆ? ೬.    ದೊಡ್ಡ ಟೈಡಲ್ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಿದ ಮೊದಲ ದೇಶ ಯಾವುದು? ೭.    ಯುರೇನಿಯಂ ಖನಿಜವನ್ನು ಅಧಿಕ ಪ್ರಮಾಣದಲ್ಲಿ ಹೊಂದಿರುವ ರಾಜ್ಯ ಯಾವುದು? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾರ್ಟೂನ್ ಕಾರ್ನರ್: ನಾಮದೇವ ಕಾಗದಕಾರ, ರಂಗನಾಥ್ ಸಿದ್ಧಾಪುರ, ಅರುಣ್ ನಂದಗಿರಿ, ಶರಣು ಚಟ್ಟಿ, ದಿನೇಶ್ ಸಿ. ಹೊಳ್ಳ

        ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೈಸ್ ರೋಡ್ ಮತ್ತು ಹೈವೇ ಕಳ್ಳರು: ವೀರ್ ಸಂತೋಷ್

ಸುಮಾರು ವರ್ಷಗಳ ಹಿಂದಿನ ಮಾತು. ಹೈವೇಗಳೆಂದರೆ ಏನೋ ಕುತೂಹಲ. ರೈಲೆಂದರೂ ಅಷ್ಟೇ. ಹೊಳೆನರಸೀಪುರದಿಂದ ಮೈಸೂರಿಗೆ ಬಸ್ಸಿನಲ್ಲಿ ಬರುವಾಗ ಮಾರ್ಗ ಮಧ್ಯೆ ಹಳ್ಳಿಯೊಂದರಲ್ಲಿ SH88 ಎಂದು ದಪ್ಪಕ್ಷರಗಳಲ್ಲಿ ಬರೆದಿದ್ದ ಮೈಲಿಗಲ್ಲೊಂದನ್ನು ನೋಡಿ ಪುಳಕಗೊಂಡಿದ್ದೆ. ಮತ್ತೊಮ್ಮೆ ಹಾಸನದಿಂದ ಧರ್ಮಸ್ಥಳಕ್ಕೆ ಹೋಗುವಾಗ ಸಕಲೇಶಪುರದ ಬಾಳ್ಳುಪೇಟೆ ಬಳಿ NH48 ಎಂಬ ಬೋರ್ಡೊಂದನ್ನು ನೋಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ಸಂಭ್ರಮಾಚರಣೆ ಮಾಡಿದ್ದೆ.  ಮಾನವನ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತಿರುವ ಅಗಣಿತ ಹರಿಕಾರರಲ್ಲಿ ಹೆದ್ದಾರಿಗಳ ಪಾತ್ರ ದೊಡ್ಡದು. ವಿಮಾನ, ಕಾರು ಜನಸಾಮಾನ್ಯರ ಮನಸ್ಸಿಗೆ ಮತ್ತು ಜೇಬಿಗೆ ಹತ್ತಿರವಾಗುವವರೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದ ಪ್ಲೇನ್-ಫೀಲ್ಡ್ ಕಿಲ್ಲರ್”: ಪ್ರಸಾದ್ ಕೆ.

೧೯೫೭ ರ ನವೆಂಬರ್ ೧೭ ರ ಒಂದು ಕರಾಳ ದಿನ. ಅಮೇರಿಕಾದ ವಿಲ್ಕಿನ್ಸನ್ ಸ್ಟೇಟ್ ನ ಪ್ಲೇನ್ ಫೀಲ್ಡ್ ಎಂಬ ಪುಟ್ಟ ಹಳ್ಳಿಯತ್ತ ಇಡೀ ಜಗತ್ತೇ ತಿರುಗಿ ನೋಡಿತು. ಮನೆಯೊಂದರ ಮೇಲೆ ನಡೆದ ಪೋಲೀಸರ ದಾಳಿಯಿಂದ ಪ್ಲೇನ್ ಫೀಲ್ಡ್ ಎಂಬ ಹೆಸರೇ ಗೊತ್ತಿರದ ಪುಟ್ಟ ಸ್ಥಳವೊಂದು ಏಕಾಏಕಿ ಕುಖ್ಯಾತಿಯನ್ನು ಪಡೆದು ಸುದ್ದಿ ಮಾಡಿತು. ಮನುಷ್ಯನ ಮೂಳೆಗಳು, ಮಾನವ ಚರ್ಮದಿಂದ ಮಾಡಲಾದ ಕಸದ ಬುಟ್ಟಿ, ಲ್ಯಾಂಪ್ ಶೇಡ್‌ಗಳು, ತಲೆಬುರುಡೆಯನ್ನು ಉಪಯೋಗಿಸಿ ಮಾಡಲಾದ ಬೌಲ್ ಗಳು, ಉಗುರುಗಳು, ನಾಲ್ಕು ಮೂಗುಗಳು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಲೆ: ಅನಿತಾ ನರೇಶ್ ಮಂಚಿ

ಇಲ್ಲಾ ಸಾರ್ ಅಲ್ಲಿಂದ್ಲೇ  ಕೇಳಿದ್ದು ಹೆಣ್ಣು ಮಗಳ  ಕಿರುಚಾಟ..  ಬೇಗ ಹೋಗೋಣ ನಡೀರಿ ಸಾರ್..  ಸರಿಯಾಗಿ ಕೇಳಿಸಿಕೊಂಡ್ರೇನ್ರೀ? ದಿನ ಬೆಳಗಾದ್ರೆ ಕೇಳ್ಸೋ ಗಂಡ ಹೆಂಡ್ತಿ ಜಗಳ ಅಲ್ಲ ತಾನೇ?  ಸಾರ್.. ಇದು ನಾನು ಯಾವತ್ತೂ ಕೆಲ್ಸ ಮುಗ್ಸಿ ಮನೆ ಕಡೆ ಹೋಗೋ ಶಾರ್‍ಟ್ ಕಟ್. ಯಾವತ್ತೂ ಇಂತಹ ಕಿರುಚಾಟ ಕೇಳೇ ಇಲ್ಲ ಸಾರ್.. ಅದೂ ಅಲ್ಲದೇ ಇದು ತುಂಬಾ ಪಾಶ್ ಅಪಾರ್ಟ್ ಮೆಂಟ್..ಇನ್ನೂ ಹೆಚ್ಚು ಫ್ಯಾಮಿಲಿ ಬಂದಿಲ್ಲಾ ಸಾರ್ ಇಲ್ಲಿ.. ಹೊಸಾದು.  ಇಲ್ಲಿ ಮಾತಾಡೋದೇ ಕೇಳ್ಸಲ್ಲ ಅಂದ್ಮೇಲೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಂಕಣ ಅಭಿಯಾನ: ಶೋಭಾ ಕೆ.ಎಸ್. ರಾವ್

ನಾಡು ನುಡಿಗಾಗಿ ಕಂಕಣತೊಟ್ಟ ಯುವ ಮನಸುಗಳ ಬಳಗವೇ ಕಂಕಣ.ಇದರ ರೂವಾರಿ ಚಿತ್ರ ಸಾಹಿತಿ ಕವಿರಾಜ್. ಜಯನಗರದ ಖಾದಿಮ್ಸ್ ನಲ್ಲಿ ಪಾದರಕ್ಷೆಗಳನ್ನು ಕೊಳ್ಳಲು ಹೋದಾಗ ಅಲ್ಲಿಯ ಸಿಬ್ಬಂದಿಗಳ ಅನ್ಯ ಭಾಷೆಯ ವ್ಯವಹಾರ ಮತ್ತು ಕನ್ನಡದ ಬಗೆಗಿನ ನಿರ್ಲಕ್ಷ್ಯ ಅವರನ್ನು ಕೇವಲ ರೊಚ್ಚಿಗೇಳಿಸಲಿಲ್ಲ, ಚಿಂತನೆಗೂ ಹಚ್ಚಿತು. ತನ್ನ ನೆಲದಲ್ಲಿಯೇ ಕನ್ನಡ ನಿಧಾನವಾಗಿ ಕಡಿಮೆಯಾಗುತ್ತಿರುವುದಕ್ಕೆ ಕಾರಣಗಳು ಹಲವಾರಾದರು ಮುಖ್ಯ ಕಾರಣ ಕನ್ನಡಿಗರ ಹಿಂಜರಿಕೆ ಹಾಗೂ ಆತ್ಮವಿಶ್ವಾಸದ ಕೊರತೆ ಎಂಬುದನ್ನು ಮನಗಂಡ ಅವರು ಸಮಾನ ಮನಸ್ಕರಿಗೆ ಕರೆ ನೀಡಿ ಚರ್ಚಿಸಿ ರೂಪುಗೊಂಡಿದ್ದೆ "ಕಂಕಣ". … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅರ್ಥವೆಂಬ ಭ್ರಮೆಯ ಚೌಕಟ್ಟು: ಸಚೇತನ

ಹಿಂದಿನ ವಾರ ಇದೇ ಅಂಕಣದಲ್ಲಿ, ನೀಯೊರಿಯಲಿಸ್ಟಿಕ್ ಸಿನಿಮಾಗಳ ಬಗ್ಗೆ ಚರ್ಚಿಸಿದ್ದೆವು. ನೈಜತೆಗೆ ಅತೀ ಹತ್ತಿರವಾಗಿರುವ ಈಸಿನಿಮಾ ಪ್ರಕಾರಗಳ ಬಗ್ಗೆ ಇರುವ ದೊಡ್ಡ ಆರೋಪವೆಂದರೆ ನೀಯೊರಿಯಲಿಸ್ಟಿಕ್, ರಿಯಲಿಸ್ಟಿಕ್  ಅಥವಾ ಆರ್ಟ್ ಸಿನಿಮ ಎನ್ನುವ ವಿಭಾಗದ ಸಿನಿಮಾಗಳು ಅರ್ಥವಾಗಲಾರವು ಎಂದು.  ಬರಹದಲ್ಲಿ ರಿಯಲಿಸ್ಟಿಕ್ ಎನ್ನುವದನ್ನ ವೈಭವೀಕರಣ ಇಲ್ಲದ ಎಲ್ಲ ಸಿನಿಮಾಕ್ಕೆ ಪರ್ಯಾಯ ಪದವಾಗಿ  ಬಳಸಲಾಗುವದು.    ಸಿನಿಮಾ ಎನ್ನುವದು ಪಾತ್ರ ಮತ್ತು ಅದರೊಟ್ಟಿಗಿನ ಇತರ ಅನೇಕ ಪಾತ್ರಗಳ ನಡುವಿನ ಕಾರ್ಯ, ಮಾತು, ಘಟನೆ, ಭಾವನೆ ಇವುಗಳ ಸರಮಾಲೆ.  ಸರಪಳಿಯ ಕೊಂಡಿಗಳಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ