ಚಳಿಗೆ ಮುರುಟಿದ ಮನಕ್ಕೊಂದು ಹೊದಿಕೆ ಹೊಚ್ಚುತ್ತಾ: ಪ್ರಶಸ್ತಿ

ಚಳಿಯೆಂದ್ರೆ ವಿಪರೀತ ಚಳಿ ಕಣೋ ಬೆಂಗ್ಳೂರಲ್ಲಿ ಅಂದ್ರೆ ದೆಲ್ಲೀಲಿ ಕೂತ ಫ್ರೆಂಡು ನಗ್ತಾ ಇದ್ದ. ಅಲ್ಲಿ ಅಬ್ಬಬ್ಬಾ ಅಂದ್ರೆ ಹದಿನೆಂಟೂ ಇಪ್ಪತ್ತೋ ಆಗಿರಬಹುದಷ್ಟೆ. ಅಷ್ಟಕ್ಕೇ ಚಳಿಯೆನ್ನೋ ನೀನು ಇಲ್ಲಿನ ಮೈನಸ್ಸುಗಳಿಗೆ ಬಂದ್ರೆ ಸತ್ತೇ ಹೋಗಬಹುದೇನೋ ಅಂದ. ಅರೆ ಹೌದಲ್ವಾ ಅನಿಸ್ತು. ಊರಲ್ಲಿ ಎರಡು ಕಂಬಳಿ, ಮೂರು ಕಂಬಳಿ ಚಳಿಯಂತ ಹೇಳುತ್ತಿದ್ದ, ಸ್ವೆಟರಿಲ್ಲದೆ ಹೊರಗಲ್ಲ ಮನೆಯೊಳಗೂ ಕೂರಲಾಗದಿದ್ದ ನಮ್ಮೂರೆಲ್ಲಿ ಬೆಳಗ್ಗೆ ಎಂಟಕ್ಕೇ ಆಫೀಸಿಗೆ ಬರೋ ಪರಿಸ್ಥಿತಿಯಿದ್ರೂ ಸ್ವೆಟರುಗಳೆಲ್ಲಾ  ಧೂಳು ಹೊಡೆಯುತ್ತಿರುವ ಬೆಂಗಳೂರೆಲ್ಲಿ ಅಂತನೂ ಒಮ್ಮೆ ಅನಿಸಿದ್ದು ಸುಳ್ಳಲ್ಲ.ಇಷ್ಟರ ಮಧ್ಯೆವೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ರಘುನಂದನ ಹೆಗಡೆ, ಬಿ. ಸಿ. ಪ್ರಮೋದ, ಗಿರಿ

ನೀನಿಲ್ಲದ ಗೋಕುಲದ ಬೇಸರ ನಿನ್ನ ತುಟಿಯಂಚಿನ ಕೊಳಲಾಗುವೆ ಬಿಸಿಯುಸಿರ ಪುಳಕದಿ ರಾಗವಾಗುವೆ ಅನುರಾಗದ ರವಳಿಯ ತೇಲಿ ಬಿಡು ಶ್ಯಾಮ ಯಮುನಾ ತೀರದಿ ಹಾಡಾಗಿ ಹರಿಯಲಿ ಪ್ರೇಮ ನನ್ನೆದೆಯ ರಾಗ ಕೇಳು ಸಾಕು ಮಾಡೊ ವಿರಹಿ ಬಾಳು ನಿಂತೆ ಇದೆ ಜೀವ ಗೋಕುಲದಲ್ಲಿ ಜೀವಾಮೃತವಿದೆ ಎದೆಯಲ್ಲಿ ದ್ವಾರಕೆ, ಮಧುರೆಗಳು ಸಾಕು ಬಾ ನನ್ನೊಲವ ಬೃಂದಾವನಕೆ ಗೋಧೂಳಿ ದೀಪ ಮನದಲ್ಲಿ ಒಮ್ಮೆ ಹರಿವ ಯಮುನೆ ಕಣ್ಣಲ್ಲಿ ಇನ್ನೊಮ್ಮೆ ಗಿರಿಯ ಭಾರ ಎದೆಯಲ್ಲಿ  ಕಾಯುತ್ತ ನಿಂತೆ ಇದೆ ಜೋಕಾಲಿ ಯಾರಿಗೆ ಹೇಳಲೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೊಸ ವರುಷದಿ ಹೊಸ ಮನಸು: ಪದ್ಮಾ ಭಟ್

                   ಹೊಸ ವರುಷವು ಪ್ರತೀ ವರುಷವೂ ಬರುತ್ತದೆ.. ಕಳೆದು ಹೋದ ಹಳೆಯ ವರುಷದ ನೆನಪಿನಲಿ ನವ ವರುಷವನ್ನು ಸ್ವಾಗತಿಸುತ್ತ, ಹೊಸ ಕನಸುಗಳನು ಬಿಚ್ಚಿಡಲು ಶುರು ಮಾಡಿರುತ್ತೇವೆ.. ಪ್ರತೀ ಸಲದಂತೆ ಈ ಸಲವೂ ಏನಾದರೂ ಹೊಸದಾದ ಪ್ಲ್ಯಾನ್ ಮಾಡಬೇಕು.. ಹೊಸ ಯೋಜನೆಗಳು ಹೊಸ ವರುಷದಿಂದಲೆ ಜಾರಿಗೆ ಬರಲೆಂಬ ಕಟುವಾದ ನಿರ್ಧಾರವನ್ನೂ ತೆಗೆದುಕೊಂಡು ಬಿಟ್ಟಿರುತ್ತೇವೆ.. ಅದೇ ಹಳೆಯ ಕೆಟ್ಟ ಚಟಗಳನ್ನು ಬಿಡಬೇಕು ಎಂತಲೋ, ಹೊಸದಾದ ಕೆಲಸವನ್ನು ಶುರು ಮಾಡಿಕೊಳ್ಳಬೇಕೆಂತೋ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಿಯ ಪದಗಳು: ಹನಿಯೂರು ಚಂದ್ರೇಗೌಡ

ಜನಪದರ ಕಾಯಕಶಕ್ತಿಯೇ ಜಾನಪದ ಸಾಹಿತ್ಯಸೃಷ್ಟಿಗೆ ಮೂಲಕಾರಣವಾದುದು. ಕಾಯಕದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿರುವ ಕಾರಣದಿಂದಲೇ ಜಾನಪದ ಸಾಹಿತ್ಯ ಹೆಚ್ಚೆಚ್ಚು ಬೆಳೆಯುತ್ತಾ ಬಂದು, ಅದೀಗ ಸಂಪೂರ್ಣವಾಗಿ ಏಕಕಾಲದಲ್ಲಿ ಯಾರೊಬ್ಬನು ಮುಟ್ಟಲಾಗದ ಬೃಹದ್ ರಾಶಿಯಾಗಿದೆ. ಇಂತಹ ಜಾನಪದ ರಾಶಿಯಲ್ಲಿ ಕೃಷಿಹಾಡು, ಹಸೆಹಾಡು, ಸೋಬಾನೆಹಾಡು, ದೇವರಮೇಲಿನಹಾಡು, ಮಳೆಹಾಡು, ಕಳೆಕೀಳುವಾಗಿನಹಾಡು, ಮಗುಹುಟ್ಟಿದಹಾಡು, ಯಾರೋ ಸತ್ತರೆಹಾಡು, ಹಬ್ಬಕ್ಕೊಂದುಹಾಡು, ಹರುಷಕ್ಕೊಂದುಹಾಡು, ದುಃಖಕ್ಕೊಂದುಹಾಡು, ಸರಸಕ್ಕೊಂದುಹಾಡು, ವಿರಸಕ್ಕೊಂದುಹಾಡು, ಕೀಟಲೆಗೊಂದುಹಾಡು, ಕಿಚಾಯಿಸಲೊಂದುಹಾಡು, ಚುಡಾಯಿಸಲೊಂದುಹಾಡು, ರೇಗಿಸಲೊಂದುಹಾಡು, ಪ್ರಸ್ತಕ್ಕೊಂದುಹಾಡು, ಹೆಣ್ಣು,ಗಂಡನ ಮನೆಗೆ ಹೋಗುವಾಗೊಂದುಹಾಡು, ತವರುಮನೆಗೆ ಬರುವಾಗೊಂದುಹಾಡು, ಮಡಿಲುತುಂಬುವಾಗೊಂದುಹಾಡು, ಬಾಣಂತಿಗೊಂದುಹಾಡು, ಗರ್ಭಿಣಿಗೊಂದುಹಾಡು, ಮದುವಣಗಿತ್ತಿಯನ್ನು ಕರೆದೊಯ್ಯುವಾಗೊಂದುಹಾಡು, ಮನೆತುಂಬಿಸಿಕೊಳ್ಳವಾಗೊಂದುಹಾಡು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಶ್ಚಿಮ ಘಟ್ಟಗಳ ಸ್ಥಿತಿ-ಗತಿ – ಅವಲೋಕನ-೨: ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ ಫ್ರೊ:ಮಾಧವ ಗಾಡ್ಗಿಳ್ ನೇತೃತ್ವದ ಸಮಿತಿಯು ಕೇಂದ್ರ ಸರ್ಕಾರ ವಹಿಸಿದ ಮಹತ್ವದ ಈ ಮಹಾಕಾರ್ಯವನ್ನು ಪ್ರಚಂಡ ಉತ್ಸಾಹದೊಂದಿಗೆ ಪ್ರಾರಂಬಿಸಿತು. ದೀರ್ಘಕಾಲದಿಂದ ಚರ್ಚೆಗೊಳಪಟ್ಟ, ಗೊಂದಲಗಳ ಗೂಡಾದ ಪಶ್ಚಿಮಘಟ್ಟಗಳ ಉಳಿವಿಗೆ ಸಂಬಂಧಿಸಿದಂತೆ ಬಹುಮುಖ್ಯ ಕಾರ್ಯತಂತ್ರದ ಭಾಗವಾಗಿ ಬಹು ಮುಖ್ಯವಾಗಿ ಮೂರು ಹಂತಗಳನ್ನು ಗುರುತಿಸಿಕೊಂಡಿತು. ೧. ಈಗಾಗಲೇ ಪಶ್ಚಿಮಘಟ್ಟಗಳಿಗೆ ಸಂಭಂದಿಸಿದಂತೆ ಲಭ್ಯವಿರುವ ಎಲ್ಲಾ ಮಾಹಿತಿಗಳನ್ನು ಕ್ರೂಡಿಕರಿಸುವುದು. ೨. ಪಶ್ಚಿಮಘಟ್ಟಗಳ ಭೌಗೋಳಿಕ ವಿಸ್ತಾರದಲ್ಲಿ ಪರಿಸರ ಸೂಕ್ಷ್ಮಪ್ರದೇಶಗಳನ್ನು ನಿಖರವಾಗಿ ಗುರುತಿಸಿ ಅದನ್ನು ವ್ಯವಸ್ಥಿತವಾಗಿ ಗಣಕೀಕೃತಗೊಳಿಸುವುದು. ೩.ಮುಖ್ಯ ಕೈಗಾರಿಕೋದ್ಯಮಿಗಳ, ಸಂಘ-ಸಂಸ್ಥೆಗಳ, ಜನಸಾಮಾನ್ಯರ, ಜನಪ್ರತಿನಿಧಿಗಳಿಂದ ಸಮಗ್ರವಾಗಿ ಮಾಹಿತಿಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಳಿಗಾಲ…ಆರೋಗ್ಯ ಜೋಪಾನ: ಗಣೇಶ್.ಹೆಚ್.ಪಿ.

ಮೊನ್ನೆ ಆಕಸ್ಮಿಕವಾಗಿ ಗೆಳೆಯನೊಬ್ಬನನ್ನು ಭೇಟಿಯಾದೆ. ಹೇಗಿದೆ ಶಾಲೆ ? ಕ್ಲಾಸಸ್ ಎಲ್ಲಾ ಚೆನ್ನಾಗಿ ನಡೀತಿದೆಯೋ ಎಂದು ವಿಚಾರಿಸಿದೆ. ಅವನು ಸಪ್ಪೆ ಮುಖದಿಂದ ಇಲ್ಲಾ ಕಣೋ ಎರಡು ದಿನದಿಂದ ಜ್ವರ, ಶೀತ ಆಗಿ ಶಾಲೆಗೆ ಹೋಗಿಲ್ಲ ಎಂದು ಹೇಳಿದ. ನಾನು ಅವನಿಗೆ ಆರೋಗ್ಯದ ಮೇಲೆ ನಿಗಾ ಇಡು, ಹಾಗೇ ಶಾಲೆಯನ್ನು ತಪ್ಪಿಸಬೇಡ ಎಂದು ಬುದ್ಧಿ ಹೇಳಿದೆ. ಮೈ ಕೊರೆಯುವ ಚಳಿ :  ಈ ಕಾಲದಲ್ಲಂತೂ ಕಳೆಗುಂದಿದ ವಾತಾವರಣ, ಹೊರಗೆ ಕಾಲಿಟ್ಟರೆ ಸಾಕು ಮೈ ಕೊರೆಯುವ ಚಳಿ, ಬೆಳಿಗ್ಗೆ ಹಾಸಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಮ್ಮ ಗಮನಕ್ಕೆ

ದಿನಾಂಕ 30 ಡಿಸೆಂಬರ್ 2014 ರಿಂದ 3 ಜನವರಿ 2015ರ ವರೆಗೆ ಮೈಸೂರಿನ ನಿರಂತನ ಫೌಂಡೇಷನ್ ವತಿಯಿಂದ ರಾಷ್ಟ್ರೀಯ ರಂಗ ಉತ್ಸವವನ್ನು ಆಯೋಜಿಸಲಾಗಿದೆ. ಈ ನಿಮಿತ್ತ ರಂಗಾಸಕ್ತರಿಗೆ ನಿರಂತರ ಫೌಂಡೇಷನ್ ಆಹ್ವಾನ ಕೋರಿದೆ.  ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: ನಿರಂತರ ಫೌಂಡೇಷನ್ ಕಾಂತರಾಜ ರಸ್ತೆ ಸರಸ್ವತಿ ಪುರಂ ಮೈಸೂರು ದೂರವಾಣಿ: 0821-2544990 **** ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 59): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಇತ್ತೀಚಿಗೆ ಭಾರತ ರತ್ನ ಪುರಸ್ಕಾರಕ್ಕೆ ಯಾರನ್ನು ಆಯ್ಕೆ ಮಾಡಲಾಯಿತು? ೨.    ಜಿಎಮ್‌ಟಿ (GMT)ಯ ವಿಸ್ತೃತ ರೂಪವೇನು? ೩.    ಅಡಿಗೆಉಪ್ಪಿನ ರಾಸಾಯನಿಕ ಹೆಸರೇನು? ೪.    ಆಹಾರ ಶಕ್ತಿಯನ್ನು ಯಾವ ಮಾನದಿಂದ ಅಳೆಯುತ್ತಾರೆ? ೫.    ಅಶ್ವಿನಿ ಇದು ಯಾರ ಕಾವ್ಯ ನಾಮವಾಗಿದೆ? ೬.    ಪ್ರಸಿದ್ಧ ಶಿರಹಟ್ಟಿಯ ಫಕಿರೇಶ್ವರ ಮಠ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೭.    ರಾಷ್ಟ್ರೀಯ ಕೂಲಿಗಾಗಿ ಕಾಳು ಕಾರ್ಯಕ್ರಮವನ್ನು ಜಾರಿಗೊಳಿಸಲಾದ ವರ್ಷ ಯಾವುದು? ೮.    ಡೆನ್ಮಾರ್ಕ್ ವಿಶಿಷ್ಟವಾಗಿ ಯಾವ ಪ್ರಾಣಿಗಳಿಗೆ ಪ್ರಸಿದ್ಧಿ ಪಡೆದಿದೆ? ೯.    ಕನ್ನಡದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜುವಿನ ಕನ್ನಡ ಪದಗಳ ಮೆರವಣಿಗೆಗೆ ನೂರರ ಸಂಭ್ರಮ: ನಟರಾಜು ಎಸ್. ಎಂ.

ಡಿಸೆಂಬರ್ 3, 2014 ರಂದು ವಿಶ್ವ ವಿಕಲ ಚೇತನರ ದಿನದ ಸಲುವಾಗಿ ಎನ್ ಜಿ ಓ ಒಂದರ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಅವತ್ತೇ ಪಶ್ಚಿಮ ಬಂಗಾಳದ ಸಿಎಂ ನಾನಿರುವ ಪುಟ್ಟ ಊರಾದ ಜಲ್ಪಾಯ್ಗುರಿಗೆ ಆಗಮಿಸಿದ್ದರು. ಆ ಕಾರಣಕ್ಕೆ ಇಡೀ ಊರಿನ ತುಂಬಾ ಬಂದೋಬಸ್ತಿನ ವಾತಾವರಣವಿತ್ತು. ಆ ಎನ್ ಜಿ ಓ ಆಫೀಸಿನ ಹತ್ತಿರದ ಪ್ರವಾಸಿ ಮಂದಿರದಲ್ಲಿ ಸಿಎಂ ತಂಗಿದ್ದ ಕಾರಣ ಆ ಎನ್ ಜಿ ಓ ಗೆ ಮಧ್ಯಾಹ್ನದವರೆಗೂ ತನ್ನ ಕಾರ್ಯಕ್ರಮಗಳನ್ನು ಶುರು ಮಾಡಲು ಒಂಚೂರು ತೊಂದರೆಯೇ ಆಗಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅರುಣ್ ಅಂತರಾಳದ ಮಾತು: ಅರುಣ್ ನಂದಗಿರಿ

ನಿನ್ನ ಭವಿಷ್ಯಕ್ಕೆ ನೀನೇ ಶಿಲ್ಪಿ ಇದು ಸ್ವಾಮಿ ವಿವೇಕಾನಂದರ ಮಾತು, ಈ ಸುಭಾಷಿತವನ್ನು ದಿನಪತ್ರಿಕೆಯೊಂದರಲ್ಲಿ ನೋಡಿದ್ದೆ. ಆಗ ನಾನಿನ್ನು ೮ ವರ್ಷದ ಬಾಲಕನಾಗಿದ್ದೆ. ಆದರೂ ಈ ಮಾತನ್ನು ಅರ್ಥಮಾಡಿಕೊಂಡಿದೆ! ಭವಿಷ್ಯದಲ್ಲಿ ನಾನೇನಾಗಬೇಕೋ ಅದನ್ನು ನಾನೇ ನಿರ್ಧರಿಸಬೇಕು. ಗುರಿ ಈಡೇರುವವರೆಗೂ ಛಲ ಬಿಡಬಾರದೆಂದು. ಆಗ ನಾವೆಲ್ಲ ಬೆಂಗಳೂರಿನಲ್ಲಿದ್ದೆವು. ಸುಮಾರು ೨೨ ವರ್ಷದಷ್ಟು ಹಳೆಯ ಬೆಂಗಳೂರದು. ಡಾ| ಲಕ್ಷ್ಮಿ ಡೇ ನಮ್ಮ ಮನೆಯ ಹತ್ತಿರವೇ ತಮ್ಮ ಕ್ಲಿನಿಕ್ ಇಟ್ಟಿದ್ದರು. ’ಆರೋಗ್ಯ ಧಾಮ’ ಅಂತ ಅದರ ಹೆಸರು ಅದರ ಒಂದು ಭಾಗದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಮಾಜದ ಚೇತರಿಕೆಗೆ ಊರುಗೋಲಾಗ ಬಯಸಿದ “ಚೇತನ”: ಬೀರಪ್ಪ ಅಂಡಗಿ ಚಿಲವಾಡಗಿ

ಅಂಗವಿಕಲತೆ ಎಂಬುದನ್ನು ಯಾವ ವ್ಯಕ್ತಿಯು ಪಡೆದುಕೊಂಡು ಬಂದುದಲ್ಲ. ಅದು ಆಕಸ್ಮಿತವಾಗಿ ಬರುವಂತದ್ದಾಗಿದೆ. ಅಂಗವಿಕಲತೆಯನ್ನು ಹೊಂದಿರುವ ವ್ಯಕ್ತಿಯು ತನ್ನ ವಿಕಲತೆಯ ಕಡೆಗೆ ಗಮನವನ್ನು ಹರಿಸದೇ ಸಾಧನೆಯನ್ನು ಮಾಡಿ ತೋರಿಸುವುದರ ಕಡೆಗೆ ಗಮನವನ್ನು ಹರಿಸುವರು. ಅಂಗವಿಕಲತೆಗೆ  ಒಳಗಾದ ವ್ಯಕ್ತಿಯು ಸಾಧಾರಣ ವ್ಯಕ್ತಿಗಳಿಗಿಂತ ವಿಶೇಷವಾದ ಶಕ್ತಿಯನ್ನು ಹೊಂದಿರುತ್ತಾರೆ. ಅದಕ್ಕೆ ಉದಾಹರಣೆಯೆಂದರೆ ನಾನೇ. ನಾನು ಐದನೇ ವಯಸ್ಸಿನಲ್ಲಿ ಇರುವಾಗ ಪೋಲಿಯೋ ಲಸಿಕೆಯನ್ನು ಹಾಕಿಸಿಯೂ ಅಥವಾ ಹಾಕಿಸದೆಯೋ ನನ್ನ ಎಡಗಾಲು ಶಕ್ತಿಯನ್ನು ಕಳೆದುಕೊಂಡೆ. ಪ್ರಾಥಮಿಕ ಶಿಕ್ಷಣವನ್ನು ನನ್ನ ಸ್ವ ಗ್ರಾಮವಾದ ಕೊಪ್ಪಳ ತಾಲೂಕಿನ ಚಿಲವಾಡಗಿಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ಎಲ್ಲಾ ನ್ಯೂನತೆಗಳಾಚೆ ಮನಸ್ಸು ಜೀವಿಸಲಿ’: ದಿವ್ಯ ಆಂಜನಪ್ಪ

ಆ ತಾಯಿ ದಿನವೂ ತನ್ನ ಮಗುವನ್ನು ಶಾಲೆಗೆ ಕರೆದೊಯ್ಯುತ್ತಿದ್ದಳು. ಮಗುವಿಗೆ ಇನ್ನೂ ಮೂರುವರೆ ವರುಷಗಳು. ಒಂದೇ ಬಸ್ಸಿನ ಪ್ರಯಾಣಿಕಳಾಗಿ ನಾನು ಸಹ ಆಗಾಗ ಇವರನ್ನು ಗಮನಿಸುತ್ತಿದ್ದೆನು. ಮಗುವಿಗೆ ಇನ್ನೂ ಸರಿಯಾಗಿ ನಾಲಿಗೆ ಹೊರಳದು, ಕಿವಿಯೂ ತುಸು ಮಂದವೇ. ಹಾಗಾಗಿ ಆಕೆ ಒಂದು ವಿಶೇಷ ಅಗತ್ಯಯುಳ್ಳ ಶಾಲೆಗೆ ಸೇರಿಸಿದ್ದರು. ಮಗು ಮುದ್ದು ಮುದ್ದುಗಿದ್ದು ಬಸ್ಸಿನ ಎಲ್ಲರ ಗಮನವನ್ನು ಸೆಳೆದಿತ್ತು. ಹಾಗೆಯೇ ಅಕ್ಕಪಕ್ಕದವರನ್ನು ಮುಟ್ಟಿ ಮುಟ್ಟಿ ಮಾತನಾಡಿಸಿ ನಕ್ಕು ಮನ ಗೆದ್ದಿತ್ತು. ಮಗುವಿನ ಮುಗ್ಧತೆಯು ಅದರ ನ್ಯೂನತೆಯನ್ನು ನಮ್ಮೆಲ್ಲರ ಮನಗಳಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಕಲಚೇತನರಿಗಾಗಿ ಸಮನ್ವಯ ಶಿಕ್ಷಣ: ವೈ.ಬಿ.ಕಡಕೋಳ

  ಶೈಕ್ಷಣಿಕ ಮುಖ್ಯವಾಹಿನಿಯಲ್ಲಿ ಸಾಮಾನ್ಯ ಮಕ್ಕಳೊಂದಿಗೆ ವಿಶೇಷ ಅಗತ್ಯವಿರುವ ಮಕ್ಕಳನ್ನು ಸೇರಿಸಿ ನೀಡುವ ಶಿಕ್ಷಣವನ್ನು ಸಮನ್ವಯ ಶಿಕ್ಷಣ ಎನ್ನುವರು.೧೯೮೬ ರ "ರಾಷ್ಟ್ರೀಯ ಶಿಕ್ಷಣ ನೀತಿ",೧೯೯೦ ರಲ್ಲಿ ವಿಶ್ವಸಂಸ್ಥೆ ಮಂಡಿಸಿದ "ಸರ್ವರಿಗೂ ಶಿಕ್ಷಣ" ೧೯೯೫ ರ "ಅಂಗವಿಕಲ ವ್ಯಕ್ತಿಗಳ ಸಮಾನ ಹಕ್ಕುಗಳ ಸಂರಕ್ಷಣೆ ಹಾಗೂ ವಿಕಾಸ ಕಾಯೆ"ಯು ಅಂಗವಿಕಲ ಮಕ್ಕಳು ಸಾಮಾನ್ಯ ಶಾಲೆಯಲ್ಲಿ ಶಿಕ್ಷಣ ಪಡೆಯುವ ಅವಕಾಶವನ್ನು ಹೊಂದಿ ಅಂತಹ ಮಕ್ಕಳು ಕೂಡ ದೈರ್ಯ ಮತ್ತು ಆತ್ಮವಿಶ್ವಾಸದಿಂದ ಜೀವನವನ್ನು ಎದುರಿಸಬೇಕು ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯಬೇಕು ಎಂಬುದನ್ನು ತಿಳಿಸಿವೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರತಿಕ್ ರವರ ಸಂದರ್ಶನ: ಚೈತ್ರ ಭವಾನಿ

ಕಸ್ತೂರಿ ವಾಹಿನಿಯ ಕ್ರೈಂ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದವರಿಗೆ ಪ್ರತಿಕ್ ಅವರ ಧ್ವನಿ ಚಿರಪರಿಚಿತ. ಮಾಧ್ಯಮ ಕ್ಷೇತ್ರದಲ್ಲಿ ಇವರ ಹೆಸರನ್ನು ಕೇಳಿದವರು ಒಮ್ಮೆ ಹುಬ್ಬೆರಿಸೋದು ಸಾಮಾನ್ಯ. ಮಾಧ್ಯಮ ಕ್ಷೇತ್ರದಲ್ಲಿ ಪ್ರತಿಕ್ ಎಲ್ಲರಿಗಿಂತಲೂ ವಿಭಿನ್ನವಾಗಿ ನಿಲ್ಲುತ್ತಾರೆ. ಕೆಲಸ ಮಾಡಲು ದೈಹಿಕವಾಗಿ ಸಮರ್ಥರಿದ್ದರೂ ಕೆಲಸದ ಒತ್ತಡ, ಅತೃಪ್ತಿ, ಸಂಬಳದ ಕೊರತೆ ಹೀಗೆ ನಾನಾ  ಕಾರಣಗಳಿಂದ ಮಾಧ್ಯಮ ಕ್ಷೇತ್ರಕ್ಕೆ ಗುಡ್ ಬೈ ಹೇಳುತ್ತಿರುವವರ ನಡುವೆ ಹುಟ್ಟಿದಾಗಿನಿಂದಲೂ ತಮ್ಮ ಎಡಗೈ ಸ್ವಾಧೀನ ಕಳೆದುಕೊಂಡ ಪ್ರತಿಕ್  ಅದೊಂದು ಸಮಸ್ಯೆಯೇ ಅಲ್ಲವೆಂದು  ಇಂದಿಗೂ, ಮುಂದೆಯೂ ಇದೆ ಕ್ಷೇತ್ರದಲ್ಲಿ ಹೊಸ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಲ್ಸಮ್ಮನ ಕಥೆ: ಭಾರವಿ

 "ಇನ್ನೊಂದ್ ಹೆಜ್ಜೆ ಮುಂದಿಟ್ರೆ ತಲೆ ಒಡಿತೀನಿ" ದೊಣ್ಣೆ ಹಿಡಿದ ವಲ್ಸಮ್ಮನ ಎಚ್ಚರಿಕೆ ನಾಲ್ಕು ಗೋಡೆಗಳ ಒಳಗಿಂದ ಹೊರಗೆ ಕೇಳಿಸುತ್ತಿದೆ. ಗಂಡನೆನೆಸಿಕೊಂಡವ ಇನ್ನೂ ಗುರುಗುಟ್ಟುತ್ತಲೇ ಇದ್ದಾನೆ. ಕುಡಿದ ಬಾಯಿಂದ ಅಸ್ಪಷ್ಟವಾಗಿ ಕೆಟ್ಟ ಪದಗಳು ವಾಸನೆಯೊಂದಿಗೆ ಉರುಳುತ್ತಿವೆ. 6 ವರ್ಷದ ಮಗ ವಿನಿತ್ ಮೂಲೆಯಲ್ಲಿ ನಿಂತುಕೊಂಡು ಅಪ್ಪನನ್ನು ದುರುಗುಟ್ಟಿಕೊಂಡು ನೋಡುತ್ತಿದ್ದಾನೆ. ಆದರೆ ವರ್ಗೀಸ್ ಗೆ ಇದ್ಯಾವುದರ ಪರಿವೆಯೂ ಇಲ್ಲ. ಅವನಿಗೆ ಒಂದು ಬಾರಿ ಹೆಂಡತಿಯ ಮೇಲೆ ಕೈ ಮಾಡುವ ಆಸೆ. ಆದರೆ ಅವಳನ್ನು ಸಮೀಪಿಸಲು ಹೆದರಿಕೆ. ಎಲ್ಲಿ ದೊಣ್ಣೆಯ ಹೊಡೆತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆದ್ದು ಬಂದಳು ಸೀತೆ ..: ಅನಿತಾ ನರೇಶ್ ಮಂಚಿ

 ಶಾಲೆಯಿಂದ ಬರುವ ದಾರಿಯಲ್ಲೇ ಇದ್ದ ಅಪ್ಪನ ಕ್ಲಿನಿಕ್ಕಿನ ಪಕ್ಕದ  ಖಾಲಿ ಕೋಣೆ ನನ್ನ  ಕಣ್ಣಿಗೆ ನಿತ್ಯವೂ ಬೀಳುತ್ತಿತ್ತು.  ಎಲ್ಲಾ ಅಂಗಡಿಯ ಬಾಗಿಲುಗಳಂತೆ ಇದಕ್ಕೂ ಮರದ ಉದ್ದುದ್ದ ಹಲಗೆಗಳೇ ಬಾಗಿಲು. ಒಂದರ ಪಕ್ಕದಲ್ಲಿ ಒಂದರಂತೆ ಜೋಡಿಸಿ ಇಡುತ್ತಿದ್ದ ಇದನ್ನು ಹಾಕುವುದು ಮತ್ತು ತೆರೆಯುವುದೂ ಕೂಡಾ ನಾಜೂಕಿನ ಕೆಲಸವೇ. ಯಾಕೆಂದರೆ ಆಯಾಯ ಜಾಗ ತಪ್ಪಿ ಹಲಗೆಗಳನ್ನು ಜೋಡಿಸಿದರೆ ಅಂಗಡಿಯ ಬಾಗಿಲು ಹಾಕಲೇ ಸಾಧ್ಯವಾಗುತ್ತಿರಲಿಲ್ಲ. ಅದಕ್ಕಾಗಿಯೇ ಹೆಚ್ಚಿನೆಲ್ಲಾ ಬಾಗಿಲಿನ ಹಲಗೆಗಳ ಮೇಲೆ ಒಂದು, ಎರಡು, ಮೂರು …  ಎಂದು ಸಂಖ್ಯೆಗಳನ್ನು ಬರೆದಿಡುತ್ತಿದ್ದರು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತ್ತಲಡಗಿಸಲು ಹಣತೆಯೊಂದು ಸಾಕು: ಸಚೇತನ

ಕ್ಲಾಸಿನಲ್ಲಿ ಪಾಠ ಓದಲು  ಎದ್ದು ನಿಂತ ಪುಟ್ಟ ಕಂದಮ್ಮ  ಭಯಗೊಂಡಿದ್ದಾನೆ, ಸಣ್ಣನೆಯ ನಡುಕ ಮೈ ತುಂಬಾ ಹರಡಿ ತುಟಿಯ ತುದಿಯಲ್ಲಿ ಕುಳಿತಿದೆ, ತೊದಲಿದರೆ ಎನ್ನುವ ಆತಂಕ ಆ ಚಿಕ್ಕ ಕಣ್ಣುಗಳನ್ನು ದಾಟಿ ಹೊರ ಬರುತ್ತಿದೆ,   ಕೈಯಲ್ಲಿ ಅಂಗಿಯ ತುದಿಯನ್ನು ಹಿಡಿದು ಎಳೆಯುತ್ತಿದ್ದಾನೆ, ಶಕ್ತಿಮೀರಿ ಹೊರಡಿಸಿದ ಮಾತು ಬೆಚ್ಚನೆಯ ಗೂಡಿನಿಂದ ಕೆಳಬಿದ್ದ ನಡುಗುವ ಗುಬ್ಬಚ್ಚಿಯಂತೆ,ಮುದ್ದಾಗಬೇಕಿದ್ದ ಮಾತು ಮೊದ್ದಾಗಿದೆ, ತೊದಲು. ಕಂದಮ್ಮನ ಕಣ್ಣಿನಿಂದ ಮಾತು ಹೊರಬರುತ್ತಿಲ್ಲ ಶಬ್ದಗಳು ಹನಿಗಳಾಗಿವೆ.  ಇಲ್ಲಿಯೂ ಹಾಗೆ ಕಥೆಯ ನಾಯಕ ಅಂತಿಥವನಲ್ಲ, ಅವನು ಬ್ರಿಟಿಷರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತನ್ನಂತೆ ಪರರ ಬಗೆದೊಡೆ ಕೈಲಾಸ: ಆರಿದ್ರಿಕಾ ಭಾರತಿ

ಅಪ್ಪಾ ಹೆಣ್ಣು ಮಗುವಿಗಾಗಿ ಕಾಯುತ್ತಾ ಕಾಯುತ್ತಾ, ೭ನೇ ಮಗು ಜನಿಸಿದ ಮೇಲೆ ಭೂಮಿಗೆ ಇಳಿಯುತ್ತಾಳೆ 'ಲತಾ, ಮುದ್ದು ಮುಖ, ಬೆಳ್ಳಿ ಗುಂಡಿಗೆ ಟೋಪಿ ಹಾಕಿದಂತೆ ದಟ್ಟ ಕರಿ ಕೂದಲು, ಉದ್ದ ಮೂಗಿನ ಸುಂದರ ಗೊಂಬೆ, ಊರಣ್ಣ, ನಿನ್ ಮಗಳು ಸ್ಪುರದ್ರೂಪಿ, ಕೈ ತೊಳೆದು ಮುಟ್ಬೇಕು. ಎಂದರೆ ತಂದೆಗೊಂದು ಗರಿ. ಉಳಿದ ಯಾವುದೇ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸದ ಊರಣ್ಣ ನಿಗೆ 'ಏ ನನ್ ವಂಶಕ್ಕೆ ಪೋಲಿಯೋ, ಮಣ್ಣು ಮಸಿ ಬರಲ್ಲ, ಎಂಬ ಧೋರಣೆ. ಲತಾ ಗೆ ೩ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವನದ ಕೆಲವು ಪುಟಗಳಿಂದ

ಆಕೆ ಜಾರಿ ಬಿದ್ದಾಗೆಲ್ಲಾ ಆಕೆಗಿಂತ ಹೆಚ್ಚು ನೋವಾಗುವುದು ನನಗೆ. ಆಕೆ ನಸು ನಗುತ್ತಾಳೆ. ನಾನು ಪೆಚ್ಚು ಪೆಚ್ಚಾಗಿ ನಗುತ್ತೇನೆ. ಮದುವೆಯಾದ ಮೊದಲು – ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ. ಕತ್ತಲಾಗಿತ್ತು. ಅದು ಹಳ್ಳಿ. ಹೊಸ ಮದು ಮಗ ಮದುಮಗಳು ಕೈ ಕೈ ಹಿಡಿದುಕೊಂಡು ಹೋಗುವಾಗ, ಯಾರೋ ತಮಾಶೆ ಮಾಡಿದರು. ಆಕೆ ಕೈ ಕೊಸರಿಕೊಂಡು ನಡೆದಳು. ಅದು ಒಂದು ಕ್ಷಣ ಮಾತ್ರ. ಬಿದ್ದ ಸದ್ದು. ಹಿಂದೆ ನೋಡಿದರೆ ಆಕೆ ಬಿದ್ದಿದ್ದಾಳೆ. ಇಂದಿಗೂ ಆ ಘಟನೆ ನೆನೆದಾಗ, ಆಕೆಯ ಅಸಾಹಯಕತೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಪ್ತ ರಕ್ಷಕ!: ಗುರುಪ್ರಸಾದ ಕುರ್ತಕೋಟಿ

ಅವತ್ತು  ಕೆಲಸ ಮುಗಿಸಿ ನಾನು ಮನೆಗೆ ಬಂದಾಗ ರಾತ್ರಿ ಹನ್ನೊಂದು ಗಂಟೆ. ಕೆಲಸದ ಸುಸ್ತು, ತಲೆ ಬೇರೆ ಸಣ್ಣಗೆ ನೋಯುತ್ತಿತ್ತು. ನಮ್ಮ ಅಪಾರ್ಟಮೆಂಟಿನ ಹೊರಗೆ ಕಾರು ನಿಲ್ಲಿಸಿಕೊಂಡು "ಅವನು" ಗೇಟು ತೆಗೆಯಲೆಂದು ಕಾಯುತ್ತಿದ್ದೆ…  ಅವನ ಹೆಸರು ನಂದೀಶ. ಅವನನ್ನು ಏನಂತ ಪರಿಚಯಿಸಬೇಕೆಂದು ಗೊತ್ತಾಗುತ್ತಿಲ್ಲ. ಸೆಕ್ಯುರಿಟಿ ಅನ್ನಲೇ? ಊಹುಂ, ಅವನು ಅದಕ್ಕಿಂತ ಜಾಸ್ತಿ. ವಾಚ್ ಮನ್ ಅನ್ನಲೂ  ಮನಸ್ಸಿಲ್ಲ, ಏಕೆಂದರೆ ವಾಚ್ ಮ್ಯಾನ್ ಗಳು ಬರೀ ವಾಚ್ ಮಾಡುತ್ತಾರೆ ಅಷ್ಟೆ!  ಅವನನ್ನು  ನಮ್ಮ "ಆಪ್ತ ರಕ್ಷಕ" ಅಂತ ಕರೆಯುವುದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಟಿಸಂ ಅನ್ನೋ ಸಂಕೀರ್ಣ ಮನೋ ಅವಸ್ಥೆ: ಪ್ರಶಸ್ತಿ

ದೈಹಿಕ ಅಂಗವೈಕಲ್ಯ ಅನ್ನೋದು ಮೇಲುನೋಟಕ್ಕೆ ಕಂಡುಬರುತ್ತೆ. ಆದ್ರೆ ಮಾನಸಿಕ ಅಂಗವೈಕಲ್ಯ ? ಕಣ್ಣೆದ್ರೇ ಇದ್ರೂ ಗೊತ್ತಾಗಲ್ಲ.  ಏ ಅವನ್ಯಾಕೆ ಅಷ್ಟು ದೊಡ್ಡದಾಗಿ , ಎಳೆದೆಳೆದು ಮಾತಾಡ್ತಾನೆ, ದೇಹ ನೋಡಿದ್ರೆ ಅಷ್ಟು ವಯಸ್ಸಾದಂತಿದೆ ಆದ್ರೆ ಬುದ್ದಿ ಮಾತ್ರ ಇನ್ನೂ ಬೆಳೆದಿಲ್ಲವಾ ಅನ್ನುವಂತಹಾ ಸಿಲ್ಲಿ ಪ್ರಶ್ನೆಗಳನ್ನು ಕೇಳುತ್ತಾನೆ.  ಇದ್ದಕ್ಕಿದ್ದಂಗೆ ಜಗಳಕ್ಕೆ ಬಂದು ಬಿಡ್ತಾನೆ ಮಾರಾಯ ಅವ. ಸ್ವಲ್ಪ ಹುಷಾರಾಗಿರು ಅಂತಿದ್ದ ಹೊಸದಾಗಿ ಪೀಜಿಗೆ ಬಂದವನ ಬಗ್ಗೆ ಗೆಳೆಯ. ಹೂಂ. ಅವನು ಆಟಿಸಂ ಇಂದ ಒದ್ದಾಡ್ತಾ ಇದಾನೆ . ನಿನ್ನೆ ಸಿಕ್ಕಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನಸ್ಸಿದೆ! ಕನಸಿದೆ! ಅನುಕಂಪ ಬೇಡ, ಅವಕಾಶ ಕೊಡಿ: ಪಾ.ಮು. ಸುಬ್ರಮಣ್ಯ, ಬ.ಹಳ್ಳಿ.

   ನಾವು ಯಾರಿಗೇನೂ ಕಮ್ಮಿ ಇಲ್ಲ.  ಯಾರ ಹಂಗೂ ನಮಗಿಲ್ಲ.  ನಮಗೂ ಒಂದು ಮನಸ್ಸಿದೆ. ಕನಸಿದೆ. ಬದುಕಿದೆ. ಅಸಹಾಯಕತೆಯ ಅನುಕಂಪದಲೆಯಲ್ಲಿ ಮುಳುಗಿಸಿ, ಕಾರುಣ್ಯಧಾರೆಯಲ್ಲಿ ತೇಲಿಸುವ ಅಗತ್ಯವಿಲ್ಲ.  ನಮಗೆ ಅವಕಾಶ ಕೊಡಿ.  ’ಆಗುವುದಿಲ್ಲ’ ಎಂಬುದನ್ನೆಲ್ಲಾ ’ಆಗಿಸಿ’ ಬಿಡುತ್ತೇವೆ.  ಪ್ರತಿಯೊಬ್ಬ ವಿಕಲಚೇತನರಲ್ಲಿ ಕಂಡು ಕೇಳಿ ಬರುವ ದೃಢ ವಿಶ್ವಾಸದ ನುಡಿಗಳಿವು.   ವಿಕಲಚೇತನರೆಂದರೆ ಸಮಾಜದಲ್ಲಿ ಅವಗಣನೆಗೆ ಒಳಗಾಗಿ ಅವರಿಗೆ ತಮ್ಮದೇ ಆದ ಸ್ವಂತಿಕೆ ಇಲ್ಲದಂತಹ ಸ್ಥಿತಿಗೆ ತಂದು ಬಿಟ್ಟಿದ್ದೇವೆ.   ಯಾರೀ ವಿಕಲಚೇತನರು?  ’ಅಂಗವಿಕಲ’ ಎಂಬ ಪದಕ್ಕೆ ಪರ್ಯಾಯವಾಗಿ ಇಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಶೇಷ ಮಕ್ಕಳ ಪೋಷಣೆಯೂ ಘಾಸಿಗೊಳಿಸುವ ಮತಾಂಧತೆಯೂ: ಅಮರ್ ದೀಪ್ ಪಿ.ಎಸ್.

ಮಕ್ಕಳು ದೇವರ ಸಮಾನ ಅಂತಾರೆ.   ಅಂಥ ಮಕ್ಕಳು ಹುಟ್ಟಿದ ಸಮಯದಿಂದ ಹಿಡಿದು ಬೆಳೆದು ನಾಲ್ಕು ಹೆಜ್ಜೆ ಇಟ್ಟು ನಾಲ್ಕು ತೊದಲು ಮಾತಾಡುವಂತಾಗುವಷ್ಟರಲ್ಲಿ ತಂದೆ ತಾಯಿಯರು ಅದೆಷ್ಟೇ ಮೊಂಡರು, ಸಿಡುಕರು, ದುಡುಕರು, ಗತ್ತು ಗೈರತ್ತಿನವರಿದ್ದರೂ ಮಕ್ಕಳ ಮುಂದೆ ಮೊಳಕಾಲೂರಿ “ಬಾಲೇ ಕಂದಾ, ಬಾರೇ ಬಂಗಾರಿ, ಹೌದಾ ಚಿನ್ನು, ನನ್ ಸೋನು, ಮೈ ಸ್ವೀಟಿ ಅಂತೆಲ್ಲಾ ಕರೆದು ಮುದ್ದು ಮಾಡದೇ ಬೇರೆ ಕಾರಣವೇ ಇಲ್ಲದಂತೆ ರಿಲೇಟ್ ಆಗಿಬಿಡುತ್ತಾರೆ.  ಅದು ದೊಡ್ಡವರನ್ನು ಬೆಂಡ್ ಮಾಡಲು ಮಕ್ಕಳಿಗಿರುವ ಶಕ್ತಿಯೂ ಹೌದು ಮತ್ತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಸಾಧ್ಯವೆಂಬುದು ಇಲ್ಲ: ಮಾಲಾ

ಮನುಜ ಮನಸ್ಸು ಮಾಡಿದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದಕ್ಕೆ ನಿದರ್ಶನ ಶಿಲ್ಪಿ ಬಡೆಕ್ಕಿಲ ಶಾಮಸುಂದರ ಭಟ್. ಬಡೆಕ್ಕಿಲ ಕೃಷ್ಣ ಭಟ್ ಹಾಗೂ ಸರಸ್ವತೀ ದಂಪತಿಗಳ ಮೂರನೇ ಮಗನಾಗಿ ಜನಿಸಿದ ಶಾಮಸುಂದರ ಎರಡು ವರ್ಷ ಆಗಿದ್ದಾಗಲೇ ಪೋಲಿಯೋ ರೋಗಕ್ಕೆ ತುತ್ತಾದ. ಒಂದು ಕಾಲು ದುರ್ಬಲವಾಗಿ ಕೃಶವಾಯಿತು. ಇದರಿಂದ ವಿದ್ಯಾಭ್ಯಾಸವೂ ಕುಂಠಿತವಾಯಿತು. ಮನೆಯಲ್ಲೇ ಅಕ್ಷರಾಭ್ಯಾಸದಲ್ಲಿ ತೊಡಗಿದ. ತಂದೆ ವೈದ್ಯರು. ಮೊದಲಿಗೆ ದ.ಕ. ಜಿಲ್ಲೆಯ ವಿಟ್ಲದಲ್ಲಿ, ತದನಂತರ ಪುತ್ತೂರಿನಲ್ಲಿ ವಾಸ. ಅಲ್ಲಿ ಶಾಮಸುಂದರ (೧೯೬೯-೭೫) ಮಣ್ಣಿನಲ್ಲಿ ಮೂರ್ತಿಗಳನ್ನು ಮಾಡಲು ತೊಡಗಿದ. ಯಾರಿಂದಲೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದುಕ ಪ್ರೀತಿಗೆ…ಅದರ ರೀತಿಗೆ…: ಭಾಗ್ಯ ಭಟ್

  ಅದೊಂದು ಸಂಜೆ ಮನೆಯೆದುರು ಶಟಲ್ ಆಡ್ತಾ ಇದ್ದೆ.ಅಲ್ಲೊಂದು ಜೋಡಿ ಕಂಗಳು ಒಂದು ವಾರದಿಂದ ನಾವು ಆಟ ಆಡೋದನ್ನ ನೋಡ್ತಾ ನಗುತಿತ್ತು.ನಾನೋ ಎಲ್ಲರನ್ನೂ ಮಾತಾಡಿಸಬೇಕನ್ನೋ, ಅಕ್ಕ ಪಕ್ಕದವರನ್ನೆಲ್ಲಾ ಫ್ರೆಂಡ್ಸ್ ಮಾಡ್ಕೋಬೇಕು ಅಂತನ್ನೋ catagory ಅವ್ಳು.  ಆ ಮುಗ್ಧ ಕಂಗಳ ಜೊತೆ ಮಾತಿಗೆ ಕೂರಲೇ ಬೇಕಂತ ನಿರ್ಧರಿಸಿ ಸುಮ್ಮನೆ ಎದುರು ಮನೆಯ ಗೇಟ್ ದಾಟಿ ಒಳಗಡೆ ಹೋದೆ  ಬರ್ತೀಯಾ ಪುಟ್ಟಾ ಆಟ ಆಡೋಣ ಅಂತ ಕೇಳಿಕೊಂಡು .ಅವ ಸುಮ್ಮನೆ ನಕ್ಕು ನೀವು ಆಟ ಆಡೋದನ್ನ ನೋಡೋದೆ ಖುಷಿ ನಂಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಐರನ್ ಬಾಕ್ಸ್: ಪ್ರಜ್ವಲ್ ಕುಮಾರ್

(ಕಾಲ್ಪನಿಕ) ರಾತ್ರಿ ಒಂದು ಘಂಟೆ. ಶನಿವಾರವಾದ್ದರಿಂದ ಲ್ಯಾಪ್-ಟಾಪ್ ನಲ್ಲಿ ಯಾವುದೋ ಫಿಲಂ ನೋಡಿಕೊಂಡು ಮಲಗಿ ಒಂದರ್ಧ ಘಂಟೆ ಆಗಿ ನಿದ್ರೆ ಕಣ್ಣಿಗೆ ಹತ್ತುತ್ತಿತ್ತಷ್ಟೆ. ಪಕ್ಕದ ಕೋಣೆಯಿಂದ 'ಢಬ್' ಅಂತ ಏನೋ ಬಿದ್ದ ಸದ್ದು. ನಾವಿದ್ದ ಮನೆ 1ಬಿ.ಹೆಚ್.ಕೆ. ಅಂದ್ರೆ ಒಂದು ಕೋಣೆ, ಇನ್ನೊಂದು ಹಾಲ್, ಅದಕ್ಕೆ ಅಂಟಿಕೊಂಡಿರುವ ಅಡುಗೆಮನೆ ಮತ್ತು ಬಾತ್ರೂಮ್. ಆ ಮನೇಲಿ ನಾನು, ಮತ್ತೆ ನನ್ನ ಫ್ರೆಂಡು ಮುರಳಿ ಅಂತ ಇಬ್ರೂ ಒಟ್ಟಿಗೆ ಇರ್ತಾ ಒಂದು ವರ್ಷದ ಮೇಲಾಗಿತ್ತು. ರಾತ್ರಿ ನಾನು ಹಾಲ್ ನಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಾರಲಾರದ ಹಾಡುವ ಹಕ್ಕಿ: ಗುಂಡೇನಟ್ಟಿ ಮಧುಕರ

ಮನುಷ್ಯನಿಗೆ  ಯಾವುದಾದರೊಂದು ಅವಯವಗಳಿಲ್ಲದಿದ್ದರೂ ನಡೆಯುವುದಿಲ್ಲ. ಕಣ್ಣು, ಕಿವಿ, ಮೂಗು, ಕಾಲು, ಕೈ ಹೀಗೆ ಎಲ್ಲ ಅವಯವಗಳೂ ಬೇಕೇ ಬೇಕು ಆದರೆ ಯಾವುದೋ ಒಂದು ಕಾರಣದಿಂದ ಇವುಗಳಲ್ಲಿಯವುಗಳಿಂದ ವಂಚಿತನಾದ ವ್ಯಕ್ತಿ ಜೀವನದಲ್ಲಿ ಉತ್ಸಾಹವನ್ನು ಕಳೆದುಕೊಳ್ಳುತ್ತಾನೆ. ಸಮಾಜದಲ್ಲಿ ಕೀಳರಿಮೆ ಮನೋಭಾವವನ್ನು ಬೆಳೆಸಿಕೊಳ್ಳುವವರೇ ಹೆಚ್ಚು. ಆದರೆ ಎರಡೂ ಕಾಲಿಲ್ಲದೆಯೇ ಸುಮಾರು ನಾಲ್ಕು ದಶಕಗಳನ್ನು ಕಳೆದಿರುವ ವಿನಾಯಕ ಮುತಾಲಿಕ ದೇಸಾಯಿಯವರು ಇಂಥವರಿಗೆ ಹೇಳುವ ಕಿವಿಮಾತೇನೆಂದರೆ. ಜೀವನದಲ್ಲಿ ಉತ್ಸಾಹವೆನ್ನುವುದು ಅತಿ ಮಹತ್ವದ ವಸ್ತು. ಜೀವನೋತ್ಸಾಹವನ್ನು  ಕಳೆದುಕೊಂಡಿರುವವ  ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಹುಟ್ಟಿದ ತಪ್ಪಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫ್ರೀಡಾ ಕಾಹ್ಲೋ: ಬದುಕು, ಬವಣೆ ಮತ್ತು ಬಣ್ಣಗಳು: ಪ್ರಸಾದ್ ಕೆ.

"ಇಲ್ಲಿಂದ ಹೊರಬಿದ್ದವಳೇ ಮೂರು ಕೆಲಸಗಳನ್ನು ಮಾಡಬೇಕಿದೆ ನನಗೆ. ಪೈಂಟಿಂಗ್, ಪೈಂಟಿಂಗ್ ಮತ್ತು ಪೈಂಟಿಂಗ್"  ಮೂವತ್ತಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳನ್ನು ಮಾಡಿಸಿಕೊಂಡು, ನೋವನ್ನೆಲ್ಲಾ ದೇಹದ ಮೂಲೆಮೂಲೆಯಲ್ಲೂ ಆವರಿಸಿಕೊಂಡು ಮೆಕ್ಸಿಕೋದ ಆಸ್ಪತ್ರೆಯ ವಾರ್ಡೊಂದರಲ್ಲಿ ಮಲಗಿದ್ದ ಹೆಣ್ಣೊಬ್ಬಳು ಹೇಳಿದ ಮಾತಿದು. ಈ ಚಿತ್ರಕಲಾವಿದೆಯ ಹೆಸರು ಫ್ರೀಡಾ ಕಾಹ್ಲೋ. ಪಿಕಾಸೋ ಮತ್ತಿತರ ದಿಗ್ಗಜರ ಸಮಕಾಲೀನಳಾದಳೂ ಕೂಡ ತನ್ನ ಜನ್ಮಭೂಮಿ ಮೆಕ್ಸಿಕೋದಲ್ಲಷ್ಟೇ ಅಲ್ಲದೆ ವಿಶ್ವದಾದ್ಯಂತ ತನ್ನದೇ ಆದ ಛಾಪನ್ನು ಕಲಾಲೋಕದಲ್ಲಿ ಮೂಡಿಸಿದವರು ಫ್ರೀಡಾ. ತನ್ನ ದೇಹವನ್ನು ಮತ್ತು ಮನಸ್ಸಿನಲ್ಲಾ ಮಡುಗಟ್ಟಿ ಆವರಿಸಿದ್ದ ನೋವುಗಳೊಂದಿಗೆ ಜೀವನದುದ್ದಕ್ಕೂ ಹಟಬಿಡದೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೃದಯ ಗೆದ್ದವರು: ಸಂದೇಶ್ ಎಲ್. ಎಮ್.

    ನನ್ನದು ಹೇಳಿ ಕೇಳಿ ಬಹುರಾಷ್ಟ್ರೀಯ ಕಂಪನಿ. ಏನೇನೋ ಸವಲತ್ತುಗಳು, ಎಲ್ಲ ಕಂಪನಿಗಳು ಸಾರ್ವಜನಿಕ ರಜೆಗಳು, ಹಬ್ಬ-ಹರಿದಿನಗಳಿಗೆ ರಜೆಮೀಸಲಿಟ್ಟರೆ  ನಮ್ಮ ಕಂಪನಿ ಪ್ರತಿಯೊಬ್ಬ ಉದ್ಯೋಗಿಗಳಿಗೂ ಒಂದು ದಿನದ ರಜೆಯನ್ನು "Valentine day" ಗೆ ಮೀಸಲಿಡುತ್ತದೆ, ಆ ರಜೆಯನ್ನು ವರ್ಷದಲ್ಲಿ ಉದ್ಯೋಗಿಯು ಯಾವಾಗ ಬೇಕಾದರೂ ಉಪಯೋಗಿಸಿಕೊಳ್ಳಬಹುದು!!!!  ನಂಬ್ತೀರಾ..?? ನಂಬಲೇಬೇಕು ಆದ್ರೆ ಸ್ವಲ್ಪ ಸ್ಪೆಲ್ಲಿಂಗ್ ಮಿಸ್ಟೇಕ್ ಅಷ್ಟೆ ಅದು "Valentine day"  ಅಲ್ಲ "Volunteer day".    My day is dedicated to "Diya" ಅನ್ನೋ ಒಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ