ಮಂಗಳ ಗ್ರಹದ ಕಕ್ಷೆ ಪ್ರವೇಶಿಸಿದ ’ಮಂಗಳಯಾನ’ : ಜೈಕುಮಾರ್.ಹೆಚ್.ಎಸ್,

ಮಂಗಳ ಗ್ರಹದಲ್ಲಿ ಕೋಟ್ಯಾಂತರ ವರ್ಷಗಳ ಹಿಂದೆ ಜೀವಿಗಳು ಇದ್ದುವೇ? ಜೀವಿಗಳ ಇರುವಿಕೆಗೆ ಕಾರಣವಾಗಿರುವ ಮಿಥೇನ್ ಯಾವ ಪ್ರಮಾಣದಲ್ಲಿ ಅಲ್ಲಿದೆ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದು ಸೇರಿದಂತೆ ಭೂಮಿಯಿಂದ ಇತರೆ ಗ್ರಹಗಳಿಗೆ ಉಪಗ್ರಹ ರವಾನಿಸಲು ಅವಶ್ಯವಿರುವ ತಂತ್ರಜ್ಞಾನವನ್ನು ಸ್ವತ: ಅಭಿವೃದ್ಧಿಪಡಿಸುವುದನ್ನು ಭಾರತ ಖಾತರಿಪಡಿಸಿಕೊಳ್ಳುವುದು ಮಂಗಳಯಾನ ಉಡಾವಣೆಯ ಉದ್ದೇಶ.  ಭಾರತಕ್ಕೆ ಮೊದಲ ಯತ್ನದಲ್ಲೇ ಯಶಸ್ಸು: ಇದೀಗ ಭಾರತ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ತ್ರೋ) ತಯಾರಿಸಿದ್ದ ’ಮಂಗಳಯಾನ’ ಉಪಗ್ರಹವು ಯಶಸ್ವಿಯಾಗಿ ಮಂಗಳ ಗ್ರಹದ ಕಕ್ಷೆಯನ್ನು ಪ್ರವೇಶಿಸಿ ಎಲ್ಲೆಡೆ ಹರ್ಷ ಮೂಡಿಸಿದೆ. ಭೂಮಿಯಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಡಿನಾಡ ಕನ್ನಡ: ನಾಗೇಶ್ ಟಿ.ಕೆ.

ನನ್ನ ಹೆಸರು ನಾಗೇಶ್ ಟಿ.ಕೆ. ಮೂಲತ: ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬನ್ನಿಮರದಕೊಪ್ಪಲು ನಿವಾಸಿ. ಪ್ರಸ್ತುತ ಗೌರಿಬಿದನೂರು ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ೨೦೦೭ರಲ್ಲಿ ಶಿಕ್ಷಕನಾಗಿ ತೆಲುಗು ಪ್ರಭಾವವಿರುವ ಗಡಿನಾಡಿನ ಶಾಲೆಯಲ್ಲಿ ನಿಯೋಜನೆಗೊಂಡು ಕೆಲಸ ಪ್ರಾರಂಭಿಸಿದಾಗ ನನಗಾದ ಭಾಷಾ ಸಮಸ್ಯೆ ಹಾಗೂ ಇಲ್ಲಿನ ಜನರಿಗೆ ಕನ್ನಡ ಭಾಷೆಯ ಬಗ್ಗೆ ಆಳವಾದ ಜ್ಞಾನ ಅಥವಾ ಮಾತೃಭಾಷಾ ಅಭಿಮಾನ ಇಲ್ಲದಿರುವುದನ್ನು ನೋಡಿ ಈ ೮ ವರ್ಷದಲ್ಲಿ ನನಗಾದ ಎಲ್ಲಾ ಅನುಭವಗಳನ್ನು ಕ್ರೋಢೀಕರಿಸಿ ಈ ಲೇಖನವನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದುಕ ಕಟ್ಟಿಕೊಳ್ಳಲು ಬಂದವರು ಭಾಷೆಯನ್ನು ಕಟ್ಟಿದ್ದರು: ನಿಶಾಂತ್. ಜಿ.ಕೆ

ಯಾವ ಟಿ.ವಿ, ಚಾನೆಲ್ ಹಾಕಿದ್ರೂ ಈಗ ಸ್ವಲ್ಪ ದಿನದಿಂದ ಬರೀ ಅಮ್ಮನದೇ ಸುದ್ದಿ, ಓ ಕನ್‌ಫ್ಯೂಸ್ ಆದ್ರ ಸಾರಿ ನಾನ್ ಹೇಳಿದ್ದು ನಮ್ಮ ನೆರೆಯ ರಾಜ್ಯದ ಮಾಜಿ ಮುಖ್ಯಮಂತ್ರಿ ಕುಮಾರಿ ಜೆ. ಜಯಲಲಿತಾ ಅವರ ಬಗ್ಗೆ ಅವರ ಅವ್ಯವಹಾರ, ಅದು ಇದು ಸದ್ಯಕ್ಕೆ ಬೇಡ ಆದ್ರೆ ನಾನು ಈಗ ಹೇಳ್ಬೇಕು ಅಂತ ಹೊರಟಿರೋ ವಿಷಯ ತಮಿಳರ ಅಭಿಮಾನದ ಬಗ್ಗೆ, ಅದು ಕೇವಲ ಜಯಲಲಿತಾ ಅವರ ವಿಷಯವಾಗಿ ಅಲ್ಲ ಮುಖ್ಯವಾಗಿ ಅವರ ಭಾಷಾಬಿಮಾನ, ನಾಡಿನ ಬಗೆಗಿರುವ ಅತಿಯಾದ ಕಾಳಜಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೋವಿನ ಸಮುದ್ರದ ಮೇಲೆ ಸತ್ತ ಮನುಷ್ಯನ ನಡೆದಾಟ: ಸಚೇತನ

  ಡೆಡ್ ಮ್ಯಾನ್ ವಾಕಿಂಗ್ ನೋಡಿಬಿಡು ಪ್ರೀತಿಯ ಮುಖದಲ್ಲಿನ  ಆ ಕಣ್ಣುಗಳ ಅವಳ ಕಣ್ಣುಗಳ ದಿಟ್ಟಿಸು ಓ  ಅಲ್ಲೊಂದು ಶಾಂತಿಯಿದೆ. ಇಲ್ಲ, ಯಾವುದೂ ಸಾಯುವದಿಲ್ಲ ಈ ದಿವ್ಯ ಬೆಳಕಿನಲ್ಲಿ. ಮೂವತ್ತು ವರ್ಷದ ಜೀವನ ಕಳೆಯಲು ಕೇವಲ ಒಂದು ಘಂಟೆಯ  ಈ ಪವಿತ್ರ ಬೆಳಕು ಮಾತ್ರ  ಸಾಕು. ಕೇವಲ ಒಂದು ಘಂಟೆ ದಯವಿಟ್ಟು ಬಂದು ಹೋಗು ! ಮರಣ ಅಥವಾ ಬದುಕು ಇವೆರಡರ ಮಧ್ಯದ ಸೂಕ್ಷ್ಮತೆಗಳನ್ನು ಬಿಡಿಸಿಡುವ  ಟಿಮ್ ರಾಬಿನ್ಸನ್ ನಿರ್ದೇಶನದ  ಡೆಡ್  ಮ್ಯಾನ್ ವಾಕಿಂಗ್ ಎನ್ನುವ ಶಕ್ತಿಯುತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಸೇನಿ ಕಥೆಯಾಗಿ ಹೋದ ಕಥೆ.. (ಭಾಗ 3): ನಾರಾಯಣ ಬಾಬಾನಗರ

ಇಲ್ಲಿಯವರೆಗೆ ಅವನಿಗೆ ‘’ಹುಸೇನಿ’’ ಹಂಗಂತ ಕರೀತಿದ್ದದ್ದು ಮಾತ್ರ ನೆನಪು…ಅವನ ಪೂರ್ತಿ ಹೆಸರು ಈಗ ಗೊತ್ತಿಲ್ಲಂತಲ್ಲ ನಾವು ಸಣ್ಣವರಾಗಿದ್ದಾಗಲೂ ಖರೇ ಅಂದ್ರೂ ಗೊತ್ತಿರಲಿಲ್ಲ ಬಿಡ್ರಿ..ಅವನ ವಯಸ್ಸೆಷ್ಟಿದ್ದಿತ್ತು ಅಂತ ಲೆಕ್ಕಾ ಹಾಕಲಾಕ ಹೋಗಿ ನಾವು ಸೋತು ಸುಣ್ಣರಾಗಿದ್ದಕ್ಕಾಗಿ ಮುಂದ ಅವನ ವಯಸ್ಸಿನ ಬಗ್ಗೆ ತಿಳಕೊಳ್ಳಲಾಕ ಹೋಗು ಗೋಜಿಗೇ ಹೋಗಲಿಲ್ಲ.ಅಂವಾ ನಮಗ ವಿಚಿತ್ರವಾಗಿ ಕಾಣಲಾಕ ತರಹಾವರಿಯ ಕಾರಣಗಳಿದ್ದವು…ಅಂವಾ ಹುಡುಗರ ಕೂಡ ಇದ್ದಾಗ ಹುಡುಗರಂಗಿರತಿದ್ದ…ಹಿರಿಯರಗೂಡಾ ಥೇಟ್ ಹಿರಿಯರ ಹಂಗ ಇರತಿದ್ದ..ಹಿಂಗಾಗಿ ನಮಗ ಒಮ್ಮೊಮ್ಮೆ ಮಳ್ಳ ಹಿಡಿತಿತ್ತು…ಅವನ ಗೂಡಾ ಹೆಂಗಿರಬೇಕು ಅಂತ…ಅಂಥಾದರಾಗ ಅಂವಾ ತೊದಲಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಹನಿ ಕಣ್ಣೀರು: ಪಾರ್ಥಸಾರಥಿ ಎನ್

ಎಲ್ಲವೂ ಅನಿರೀಕ್ಷಿತ ಅನ್ನಿಸುವಂತೆ ಮುಗಿದುಹೋಯಿತು. ಬೆಳಗಿನ ಜಾವ ನಾಲಕ್ಕು ಗಂಟೆ ಇರಬಹುದು ರೂಮಿನಲ್ಲಿ ಮಲಗಿದ್ದ ಅಮ್ಮ ತುಂಬಾನೆ ಕೆಮ್ಮುತ್ತಿದ್ದಳು, ಇದೇನು ಎಂದು ಎದ್ದುಹೋದೆ. "ಏನಮ್ಮ ತುಂಬಾ ಕೆಮ್ಮು ಇರುವ ಹಾಗಿದೆ , ಕುಡಿಯಲು ನೀರು ಕೊಡಲಾ? " ಎಂದೆ, ದೀಪ ಹಾಕುತ್ತ. ಅವಳಿಗೆ ಉತ್ತರಿಸಲು ಆಗಲಿಲ್ಲ ಅನ್ನಿಸುತ್ತೆ, "ಕೊಡು" ಅನ್ನುವಂತೆ ತಲೆ ಆಡಿಸಿದಳು. ಹೋಗಿ ನೀರು ತಂದೆ. ಎದ್ದು ಕುಳಿತು ಕುಡಿಯಲು ಪ್ರಯತ್ನಿದಳು, ಆದರೆ ಪೂರ್ತಿ ನೀರು ಕುಡಿಯಲೇ ಇಲ್ಲ. ತಲೆ ಪಕ್ಕಕ್ಕೆ ವಾಲಿಸಿ ಹಾಗೆ ಹಿಂದಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಕವನ್ನು ನರಕ ಮಾಡುತ್ತಿರುವವರ ಹುನ್ನಾರ!?: ಅಖಿಲೇಶ್ ಚಿಪ್ಪಳಿ

ಕಳೆದೆರಡು ತಿಂಗಳಲ್ಲಿ ಭೂಮಿಯ ಆರೋಗ್ಯದ ಕುರಿತು ವಿಶ್ವ ವನ್ಯ ನಿಧಿ ಸಂಸ್ಥೆ ಮತ್ತು ಗ್ರೀನ್‌ಪೀಸ್ ಸಂಸ್ಥೆಗಳು ವಿಸೃತವಾದ ವರದಿ ನೀಡಿವೆ. ಭೂಮಾತೆಗೆ ಬಂದಿರುವ ಜ್ವರ ವಿಪರೀತ ಮಟ್ಟಕ್ಕೆ ಹೋಗಿದೆ ಎಂಬುದೇ ಎರಡೂ ವರದಿಗಳ ಸಾರಾಂಶ. ಮನುಷ್ಯ ಕೇಂದ್ರಿತ ಅಭಿವೃದ್ಧಿ, ಕಾಡುನಾಶ ಇತ್ಯಾದಿಗಳು ಕಾರಣ ಎಂದು ರೋಗದ ಮೂಲವನ್ನು ಪತ್ತೆ ಮಾಡಿದ್ದಾರೆ. ಯಾವುದೇ ಅತ್ಯುತ್ತಮ ವೈದ್ಯನ ಕೌಶಲ್ಯ ಅಭಿವ್ಯಕ್ತಗೊಳ್ಳುವುದು ಖಾಯಿಲೆಯನ್ನು ಗುರುತಿಸುವ ಬಗೆಯಲ್ಲಿರುತ್ತದೆ. ಚಿಕಿತ್ಸೆ ನೀಡುವುದು ಎರಡನೆಯ ಹಂತ. ಹಾಗೆಯೇ ಭೂಜ್ವರಕ್ಕೆ ಕಾರಣ ಗೊತ್ತಾಗಿದೆ. ವಿಪರ್ಯಾಸವೆಂದರೆ, ಕಾಯಿಲೆ ಹರಡುವವರೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬರೆಯಲೊಲ್ಲದ ಮನಕ್ಕೊಂದು ಪೆನ್ನ ಕೊಟ್ಟು: ಪ್ರಶಸ್ತಿ

  ಈ ವಾರ ಬರೆಯೆಂದರೂ ಬರೆಯಲೇನೋ ಬೇಸರ. ವಿಷಯವಿಲ್ಲವೆಂದಲ್ಲವೀ  ಕಸಿವಿಸಿ. ಆದರೆ ಇರೋ ದುಃಖಗಳಲ್ಲಿ ಯಾವುದರ ತೋಡಿಕೊಳ್ಳಲೆಂಬುದರ ತೊಳಲಾಟ. ತೀರ್ಥಹಳ್ಳಿಯಲ್ಲೊಂದು ಹೂವ ಅರಳೋ ಮೊದಲೇ ಕೊಂದ ಖದೀಮರ ಬಗ್ಗೆ ಬರೆಯಲಾ ? ಬೆಂಗಳೂರಲ್ಲಾದ ದೌರ್ಜನ್ಯಗಳ ಬಗ್ಗೆ ಬರೆಯಲಾ ? ಸ್ವಚ್ಛ ಭಾರತವೆಂದ ತೆಂಡೂಲ್ಕರನಿಗೇ ಬೇಸರವೆನಿಸುವಷ್ಟು ಆ ಜಾಗದಲ್ಲಿ ಮಾರನೆಯ ದಿನವೇ ಕಸ ಹಾಕಲು ಹೋದ ಬೇಜವಬ್ದಾರಿ ಭಾರತೀಯರ ಬಗ್ಗೆ ಬರೆಯಲಾ ? ಗಡಿಯಲ್ಲಿ ಅತ್ತ ಪಾಕಿಗಳು ಗುಂಡಿನ ಮಳೆಗಯ್ಯುತ್ತಿದ್ದರೆ ಮತ್ತೊಂದೆಡೆ ಚೀನಾದವ್ರು ನಮ್ಮ ನೆಲದಲ್ಲಿ ರಸ್ತೆ ಮಾಡೋಕೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 52): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚಿಗೆ ಬಿಡುಗಡೆಯಾದ ಸಚಿನ್ ತೆಂಡೂಲ್ಕರ್ ರವರ ಆತ್ಮಚರಿತ್ರೆಯ ಪುಸ್ತಕದ ಹೆಸರೇನು? ೨.    ಇತ್ತೀಚಿಗೆ ಎಲ್.ಜಿ.ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪುರಸ್ಕಾರಕ್ಕೆ ಆಯ್ಕೆಯಾದ ಭಾರತೀಯ ಏಕೈಕ ಕ್ರಿಕೆಟ್ ಆಟಗಾರ ಯಾರು? ೩.    ಸೋಮಣ್ಣ ಕೆ.ಎಂ. ಅವರ ಯಾವ ಕ್ರೀಡೆಗೆ ೨೦೧೩ರ ಏಕಲವ್ಯ ಪ್ರಶಸ್ತಿಯನ್ನು ನೀಡಲಾಯಿತು? ೪.    ಐಬಿಡಬ್ಲ್ಯೂಎಲ್ (IBWL) ನ ವಿಸ್ತೃತ ರೂಪವೇನು? ೫.    ಬಾರ್ಡೋಲಿ ಸತ್ಯಗ್ರಹದ ನೇತಾರ ಯಾರು? ೬.    ಭಾರತೀಯ ರಿಸರ್ವ್ ಬ್ಯಾಂಕಿನ ಲಾಂಛನದಲ್ಲಿ ಯಾವ ಪ್ರಾಣಿ ಅಂಕಿತವಾಗಿದೆ? ೭.    ಮೋಳಿಗೆ ಮಾರಯ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಕ್ಕಳ ದಿನದ ಮಹತ್ವ: ಹೊರಾ.ಪರಮೇಶ್ ಹೊಡೇನೂರು

    ಅಪ್ಪ ತನ್ನ ಅಂಗಿ ಜೇಬಿನಲ್ಲಿ ಸದಾ ಎರಡು ಪೆನ್ನುಗಳನ್ನು ಇಟ್ಟುಕೊಳ್ಳುತ್ತಿದ್ದ ಶಿಸ್ತುಬದ್ಧ ಜೀವನದ ವಕೀಲರು. ಮಗನಿಗೆ ಮಾತ್ರ ಆ ಎರಡು ಪೆನ್ನುಗಳ ಅಗತ್ಯವೇನು ಎಂಬ ತರ್ಕ. ಒಮ್ಮೆ ಅಪ್ಪನಿಗೆ ಹೇಳದೆ ಆ ಎರಡು ಪೆನ್ನುಗಳಲ್ಲಿ ಒಂದನ್ನು ಮಗ ಎಗರಿಸಿಬಿಟ್ಟ ಇದನ್ನು ಗಮನಿಸಿದ ಅಪ್ಪ ಹೆಂಡತಿ ಮಗನನ್ನು ಗದರಿಸಿ ಕೇಳಿದಾಗ ಮಗನು ತಾನು ತೆಗೆದುಕೊಂಡಿದುದಾಗಿ ಹೇಳಿದನು. ಇದನ್ನು ಕೇಳಿದ ಅಪ್ಪನು ಹೇಳದೇ ಕೇಳದೇ ಪೆನ್ನು ತೆಗದುಕೊಂಡಿದ್ದು ತಪ್ಪೆಂದು ತಿಳಿಸಿ ಬೈಯ್ದು ಬುದ್ಧಿ ಹೇಳಿದರು. ಈ ಪ್ರಸಂಗದಿಂದಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಮ್ಮ ಗಮನಕ್ಕೆ

ಬ್ಲೂ ವೇವ್ಸ್ : ನಿಕ್ಷೇಪ- 2014 : ಯುವ ಬರಹಗಾರರಿಂದ ಕನ್ನಡ ಬರಹಗಳಿಗೆ ಆಹ್ವಾನ ಕನ್ನಡ ಯುವ ಬರಹಗಾರರ ಸಾಮಾಜಿಕ ಜಾಲತಾಣದ ಸಾಹಿತ್ಯ ವೇದಿಕೆ ಬ್ಲೂ ವೇವ್ಸ್ (ನೀಲಿ ಅಲೆಗಳು) ಫೇಸ್ಬುಕ್ ಪೇಜ್ ಬಳಗದ ವತಿಯಿಂದ ಕನ್ನಡದ ಯುವ ಬರಹಗಾರರನ್ನು ಗುರುತಿಸುವ ಮತ್ತು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಿಕ್ಷೇಪ – 2014 (ನವ ಚಿಂತನೆಗಳ ಅಗೆತ) ಎಂಬ ಸ್ಪರ್ಧೆಯಡಿ ಏಳು ಪ್ರಸಕ್ತ ವಿದ್ಯಮಾನಗಳ ಕುರಿತು ಲೇಖನಗಳನ್ನು ಆಹ್ವಾನಿಸಲಾಗಿದೆ. ಪ್ರಜ್ಞಾವಂತ ಸೃಜನಶೀಲ ಯುವ ಬರಹಗಾರರು ಇದರಲ್ಲಿ ಪಾಲ್ಗೊಳ್ಳಬಹುದು.  ವಿಷಯಗಳು ಇಂತಿವೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪತ್ರ: ಗಣೇಶ್ ಖರೆ

ಕಳೆದ ಕೆಲ ವರ್ಷಗಳಿಂದ ನಾನಾಯಿತು ನನ್ನ ಕೆಲಸವಾಯಿತು. ಇನ್ನೇನು ಕೆಲಸ ಕೆಲ ವರ್ಷದ್ದಷ್ಟೇ..  ಈಗಂತೂ ಟಿವಿ, ಕಂಪ್ಯೂಟರ್ ಅಂತ ಸಮಯ ಕಳೆದದ್ದೂ ತಿಳಿಯುವುದಿಲ್ಲ. ಇಂದಿನ ಆಧುನಿಕ ಯುಗದಲ್ಲಿ ಪತ್ರ ವ್ಯವಹಾರ ಮುಗಿದೇ ಹೋಗಿದೆ. ಆದರೆ ತುಂಬಾ ದಿನದ ಮೇಲೆ ಮನೆಗೊಂದು ಪತ್ರ ಬಂದಿತ್ತು… ಹಲ್ಲೋ ಸರ್… ನಾನು ಶರತ್ ಅಂತ. ಜರ್ನಲಿಸಮ್ ಮಾಡ್ತಾ ಇದ್ದೇನೆ. ಕೆಲ ಹಳೆಯ ಬರಹಗಾರರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅದರಲ್ಲಿ ನಿಮ್ಮದೂ ಹೆಸರಿದೆ. ಸ್ವಲ್ಪ ಮಾಹಿತಿ ಸಂಗ್ರಹಿಸಿದಾಗ ನಿಮ್ಮ ಬಗ್ಗೆ ಕೆಲ ವಿಷಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನಗೂ ನಿನಗೂ ಅಂಟಿದ ನಂಟಿನ: ಪ್ರವೀಣ

ಆತ ಮರೆತುಹೋದಾಗಲೆಲ್ಲ ಆಕೆ ನೆನಪು ಮಾಡಿಕೊಡುತ್ತಾಳೆ.  ಅದು ಬಾನು, ಇದು ಭುವಿ, ಅವ ಚಂದ್ರ, ಇವ ರವಿ, ಇದು ಇರುವೆ ಸಾಲು, ಅದು ಕುಡಿಯುವ ಹಾಲು. ಆ ದಿನ ರೈಲಿನಲ್ಲಿ ಅವಳು ಎಲ್ಲೋ ಪ್ರಯಾಣಿಸುವಾಗ ಆತ ಮೊದಲ ಬಾರಿಗೆ ಕಂಡಿದ್ದ.  ಕೊಳಕು ಅರಿವೆ, ಜಿಡ್ಡುಗಟ್ಟಿದ ಕೂದಲು, ಮಹಾ ದುರ್ಗಂಧ ಸೂಸುತ್ತ ಬಾಗಿಲ ಬಳಿ ಮುದುಡಿ ಕುಳಿತಿದ್ದ.  ಆತ ನೇರವಾಗಿ ಕಣ್ಣಲ್ಲಿ ಕಣ್ಣಿಟ್ಟು ನೋಡಿದ್ದರಿಂದ ಅವಳು ಬೆದರಿ, ಬೇರೆಡೆ ದೃಷ್ಟಿ ತಿರುಗಿಸಿ ಬಾತರೂಮು ಹೊಕ್ಕು ಹೊರಬಂದಳು.  ವಾಪಸು ಬರುವಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬುಲ್-ಬುಲ್ ಮಾತಾಡಕಿಲ್ವಾ!?: ಆದರ್ಶ ಸದಾನ೦ದ ಅರ್ಕಸಾಲಿ

ಇಲ್ಲಿಯವರೆಗೆ      ಪಕ್ಷಿವೀಕ್ಷಣೆ ಭಾಗ-೪ "ಯಾಕ್ ಲೆ, ಬೆಳಿಗ್ಗೆ ಬೆಳಿಗ್ಗೆ ಫೋನ್ ಮಾಡಿಯಲ್ಲಾ !?" "ಇವತ್ತ್ ಅಮವಾಸ್ಯ, ನೀನು ಸ್ನಾನ ಮಾಡಿ ಪ್ರೆಶ್ ಇರ್ತಿ ಅ೦ತ ಫೋನ್ ಮಾಡ್ದೆ!" "ನಾವು ನಿನ್ನಗ೦ಲ್ಲ ಲೇ, ದಿನಾಲೂ ಜಳ್ಕಾ (ಸ್ನಾನ) ಮಾಡ್ತೀವಿ" " ಗೊತ್ತೈತಿ ಬಿಡು, ಹಾಸ್ಟೆಲಿನ್ಯಾಗ ನೀ ಬರಿ ಹುಣ್ಣುಮೆ-ಅಮವಾಸ್ಯೆ ಲೆಕ್ಕಾಚಾರ ಹಾಕಿ ಸ್ನಾನ ಮಾಡವ !! ಆದ್ರೂ ..ಅದೇನು ಮಾರಾಯ, ಯಾವಗ್ ನೋಡಿದ್ರೂ ಪ್ರೇಶ್ ಇರ್ತಿದ್ದೆ . ಅದೇನ್ ಸೆಕ್ರೆಟ್ ಅ೦ತ ನಮ್ಗೂ ಹೇಳಲಾ? " … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಕ್ಕಳೆದುರಿ​ಗೆ ಮತ್ತು ಮಕ್ಕಳಾಗುವ ಮುನ್ನ: ಅಮರ್ ದೀಪ್ ಪಿ.ಎಸ್.

ಹಳ್ಳಿಗಳಲ್ಲಿ ಹಿಂದೆ ವೈದ್ಯರಿಗಿಂತ ಅನುಭವಸ್ಥರಾಗಿ ಸೂಲಗಿತ್ತಿಯರು ಗರ್ಭಿಣಿ ಹೆಂಗಸರಿಗೆ ಮನೆಯಲ್ಲೇ ನಾರ್ಮಲ್ ಹೆರಿಗೆ ಮಾಡಿಸಿ ಕೂಸು ಬಾಣಂತಿಯನ್ನು ಎರೆದು ನೀರು ಹಾಕಲು ಬರುತ್ತಿದ್ದರು.    ಹೊರಗೆ ಗಂಡ, ಉಳಿದವರು ಕಾತರದಿಂದ ಕಾಯುತ್ತಿದ್ದರೆ, ಒಳಗೆ ಗರ್ಭಿಣಿ ಹೆಂಗಸು ನೋವು ತಿನ್ನುತ್ತಿರುತ್ತಾಳೆ.   ಒಂದು ಕ್ಷಣ ನೋವು ತಿನ್ನುವ ಸದ್ದು ನಿಂತಿತೋ? ಮತ್ತೊಂದು ಕೂಗು ಕೇಳುತ್ತದೆ.  ಈಗ ಹುಟ್ಟಿದ್ದು ಹೆಣ್ಣೋ? ಗಂಡೋ? ಎನ್ನುವ ಕಾತರ.   ಹೊರಗಡೆ ಬಂದ ಮೊದಲ ಹೆಂಗಸು ಮಗು ಯಾವುದೆಂದು ತಿಳಿಸಿ ಮತ್ತೆ ಒಳ ನಡೆಯುತ್ತಾಳೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸು: ದಿವ್ಯ ಆಂಜನಪ್ಪ

'ಕನಸು', ಕೇಳಲೆಷ್ಟು ಸುಮಧುರ!. ಕನಸೆಂಬುದು ಯಾರಿಗಿಲ್ಲ? ಎಲ್ಲರಿಗೂ ಒಂದಲ್ಲ ಒಂದು ರೀತಿಯ ಕನಸು ಹುಟ್ಟುತ್ತಾ ಕಾಡುತ್ತಲೇ ಇರುವುದು. ಕನಸು ಕಾಣದ ಮನಸ್ಸು ಸಾಧ್ಯವೇ? ಇಲ್ಲವೇ ಇಲ್ಲ. ಹಾಗೇನಾದರೂ ಇದ್ದಿದ್ದರೆ ಬದುಕಲಿ ಸೊಗಸೇ ಇರುತ್ತಿರಲಿಲ್ಲ. ಬದುಕು ಎಂದಾಗ ಅದರೊಳಗಿನ ಸೋಲು ಗೆಲುವುಗಳು ನಮ್ಮೆದುರು ಬಂದು ನಿಲ್ಲುತ್ತವೆ. ಈ ಸೋಲು ಗೆಲುವುಗಳು ಎಂಬ ಅಂಶಗಳು ಹುಟ್ಟಿಕೊಳ್ಳಲೂ ಮತ್ತೂ ಈ ಕನಸುಗಳೇ ಕಾರಣ. ಆದರೂ ಎಲ್ಲರೂ ಕನಸಿನ ದಾಸರೇ. ''ಬೆಳಕೇ ಇಲ್ಲದ ದಾರಿಯಲಿ ನಾನು ನಡೆಯಬಲ್ಲೆ; ಕನಸೇ ಇಲ್ಲದ ದಾರಿಯಲಿ ಹೇಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಕಡಲ ಬೇಟೆಗಾರ, ರಮೇಶ್ ನೆಲ್ಲಿಸರ, ದಿನೇಶ್ ಚನ್ನಬಸಪ್ಪ

ಅವಳೆಂದರೆ,,, ಅದ್ಯಾವುದೋ ಒಂದು ಹೊತ್ತಿನ ಮೌನ, ಮತ್ತೆಲ್ಲಿಂದಲೋ ತೂರಿ ಬಂದ ನಿಲ್ಲದ ಮಾತು,, ಮಚ್ಚೆಯ ಜೊತೆಜೊತೆಗೆ ಚೆಲುವಿನ ಗುಳಿಕೆನ್ನೆ, ಮರೆತಾಗ ಹೆಚ್ಚಾಗೇ ನೆನಪಾಗೊ ಏನೋ ಒಂದು ಗುರುತು. ಅವಳೆಂದರೆ,,, ಹಾಳಾದ ಸಂಜೆಯನೇ ರಂಗೇರಿಸೊ ಬೆಳಕು, ಮತ್ತನ್ನೆ ಬಗಲಲ್ಲೇ ಎತ್ತಿಟ್ಟುಕೊಂಡು ಬೀಸೋ ತಂಗಾಳಿ,, ನಿಧಾನ ಗತಿಯಲಿ ಏರಿಇಳಿಯೊ ರಂಗು, ಕಡಲಿನೆದೆಮೇಲೆ ಪ್ರತಿಫಲಿಸೋ ಅರೆನೀಲಿಮೋಡದ ಸಂದಿಗೊಂದಿಯ ಬಿಳಿ. ಅವಳೆಂದರೆ,,, ತುಂತುರು ಮತ್ತೆ ಚಳಿ ಹಿಡಿಸೊ ಆಷಾಡದ ಮಳೆ,, ನೆನೆವಾಗ ಕಾರಣವಿರದೇ ಮನಸೊಳಗೆ ಮೂಡೋ ಸಂಭ್ರಮ, ಜ್ವರದಮೂಲಕ ಕಾಡುವ ಹೊಸ ರಗಳೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾತ್ರಿ ಜೊತಿಗಿನ ನೆನಪಿನ ಬುತ್ತಿ (ಭಾಗ 2): ನಾರಾಯಣ ಬಾಬಾನಗರ

ಇಲ್ಲಿಯವರೆಗೆ ರೊಕ್ಕಾ ಕಳಕೊಂಡ ಸುದ್ದಿ ಓದಾಕ ರೆಡಿಯಾಗಿ ಬಂದು ನೀವು ಕುಂತದ್ದ ರೀತಿ ನೋಡಿದರ…ನನ್ನ ಮ್ಯಾಲೆ ಎಷ್ಟು ಕನಿಕರ ನಿಮಗೈತಿ ಅನ್ನೂದು ತೋರಿಸಿಕೊಡತೈತಿ…ಹೋಗಲಿ ಬಿಡ್ರಿ…ಈ ಸಲ ‘’ಖರೇ ಖರೋ’’(ಈ ಶಬ್ದದ ಅರ್ಥ ದಯವಿಟ್ಟು ಡಿಕ್ಸನರಿಯೊಳಗ ಹುಡುಕಬ್ಯಾಡ್ರಿ,ನಿಮಗ ತಿಳದರ ಸಾಕು-ಅರ್ಥ ಹುಡುಕಿ ಅನರ್ಥ ಆಗುದು ಬ್ಯಾಡಂತ ನನ್ನ ಆಶೆ)ನನ್ನ ರೊಕ್ಕ ಹೆಂಗ ಹೋತು ಅನ್ನೂದು ಹೇಳೇ ಹೇಳತೀನಿ ನನ್ನನ್ನ ದಯವಿಟ್ಟು ನಂಬ್ರಲ್ಯಾ…. ಹಂಗ ನಮ್ಮ ಪಟಾಲಮ್ ಆ ಇಬ್ಬರೊಳಗಿನ ಹುಡುಗರೊಳಗ ಒಬ್ಬನ ಮುಂದ ಹೋಗಿ ನಿಂತಿವಿ.ಆ ಹುಡುಗ ಶುರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೌನ ಕ್ಯಾನ್ವಾಸಿನಲ್ಲೊಂದು ಕುಸುರಿ – ಬಾರನ್: ಸಚೇತನ ಭಟ್

ಮಧ್ಯ ಪ್ರಾಚ್ಯದ ವಿಶಿಷ್ಟ ದೇಶ ಇರಾನ್, ಸಿನಿಮಾ ಜಗತ್ತಿನಲ್ಲಿ ತನ್ನದೇ ಆದ ಮಹತ್ವದ ಸ್ಥಾನ ಪಡೆದಿದೆ. ಇರಾನಿನ ಭಾಷೆಯಾದ ಪರ್ಷಿಯಾ ಭಾಷೆಯಲ್ಲಿ ತಯಾರಾಗುವ ಸಿನಿಮಾಗಳಿಗೆ, ಅಲ್ಲಿನ ಪ್ರಸಿದ್ಧ ಜಮಖಾನದ ಸೂಕ್ಷ್ಮ ಕುಸುರಿ ಕೆಲಸದ ಪ್ರಭಾವವಿದೆ. ಜಗತ್ತಿನ ೩೦ ಪ್ರತಿಶತ ಜಮಾಖಾನಗಳು ಇರಾನಿ ಜನರ ಪಳಗಿದ ಕುಸುರಿಯಲ್ಲಿ ನೇಯಲ್ಪಡುತ್ತವೆ ಹಾಗೂ ಜಮಖಾನದೆಡೆಯಲ್ಲೆ ಬೆಳೆದ ಇರಾನಿನ ಸಿನಿಮಾ ಜಗತ್ತು,  ಜಮಖಾನದ ಕುಸುರಿಯಷ್ಟೇ ಅದ್ಭುತವಾದ ಚೆಂದನೆಯ ಆಪ್ತವಾದ ಮೆತ್ತಗಿನ ಮೋಹಕವಾದ ಸರಳವಾದ ಕಲಾಕೃತಿಯನ್ನು  ಪರದೆಯಲ್ಲಿ ಮೂಡಿಸಿಬಿಡುತ್ತದೆ.  ಇರಾನಿ ಸಿನಿಮಾಗಳ ಜೀವಾಳವೆಂದರೆ ಸರಳತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಚ್ಛ ಭಾರತ ಮತ್ತು ನಾವು : ಪ್ರಶಸ್ತಿ

ಎರಡು ವಾರದ ಹಿಂದೆ. ಆಫೀಸಿಂದ ಮನೆಗೆ ನಡ್ಕೊಂಡು ಬರ್ತಾ ಇದ್ದೆ. ಐಟಿಪಿಎಲ್ಲಿನ್ ಗ್ರಾಫೈಟ್ ಸಿಗ್ನಲ್ಲಿಂದ ಕುಂದಲಹಳ್ಳಿ ಗೇಟಿಗೆ ಬರೋ ರಸ್ತೆ. ಎಡಭಾಗದ ಫುಟ್ಪಾತಲ್ಲಿ ಬರ್ತಿದ್ದೋನಿಗೆ ಏನೋ ಚಿತ್ತಾರ ಬರೆದ ಹಾಗೆ ಕಾಣ್ತು ಗೋಡೆ ಮೇಲೆ. ಹೌದು. ಸಖತ್ತಾದ ಚಿತ್ರ(ಚಿತ್ರ ೧). ಅಕ್ಟೋಬರ್ ಎರಡನೇ ತಾರೀಖಿಂದ ಶುರುವಾದ ಸ್ವಚ್ಛ ಭಾರತ ಅಭಿಯಾನದ ಪ್ರಭಾವವಾ ಇದು ಅನಿಸ್ತು. ಹ್. ಒಂದೆರಡು ದಿನ ಚೆನ್ನಾಗಿ ಇಟ್ಟಿರ್ತಾರೆ. ಒಂದ್ನಾಲ್ಕು ದಿನ ಆಗ್ಲಿ.ಮತ್ತೆ ಇದೇ ತರ ಆಗಿರತ್ತೆ. ಬದಲಾಗಬೇಕಿದ್ದುದು ಜನರ ಮನೋಭಾವ. ಒಬ್ರಿಬ್ರು ಹಿಂಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟ್ಯೋತ್ಪತ್ತಿ: ಕೆ.ಪಿ.ಎಂ.ಗಣೇಶಯ್ಯ

ಭವದ್ಭಿಃ ಶುಚಿಭಿರ್ಭೂತ್ವಾ ತಥಾವಹಿತಮಾನಸೈಃ|  ಶ್ರೂಯತಾಂ ನಾಟ್ಯವೇದಸ್ಯ ಸಂಭವೋ ಬ್ರಹ್ಮನಿರ್ಮಿತಃ| -ನಾಟ್ಯಶಾಸ್ತ್ರ  ನಾಟ್ಯದ ಉತ್ಪತ್ತಿ ಎಂಬುದು ಹೇಗಾಯ್ತು? ನಾಟ್ಯ ವಿಶಾರದ ಭರತಮುನಿಯನ್ನು ಆತ್ರೇಯ ಮೊದಲಾದ ಋಷಿಗಳು ಪ್ರಶ್ನಿಸಿದರು. ಪೂರ್ವದಲ್ಲಿ ಸ್ವಾಯಂಭುವ ಮನ್ವಂತರದಲ್ಲಿ ಕೃತಯುಗ ಮುಗಿದು ವೈವಸ್ವತ ಮನ್ವಂತರದ ತ್ರೇತಾಯುಗ ಆರಂಭವಾಗುವ ಮಧ್ಯಂತರದಲ್ಲಿ ಜನರು ಕಾಮಲೋಭಗಳಲ್ಲಿ ಅಸಭ್ಯರಾಗಿ ವರ್ತಿಸುತ್ತಿದ್ದರು. ಇಂದ್ರನನ್ನು ಮುಂದೆ ಮಾಡಿಕೊಂಡ ದೇವತೆಗಳು ಬ್ರಹ್ಮನಲ್ಲಿಗೆ ಬಂದು ವೇದಗಳು ಶೂದ್ರಜಾತಿಗಳಿಗೆ ನಿಷಿದ್ಧವಾದುದರಿಂದ ಎಲ್ಲ ಜಾತಿ (ವರ್ಣ)ಗಳಿಗೆ ಲಭ್ಯವಾಗುವಂತಹ ಐದನೆಯ ವೇದವನ್ನು ರಚಿಸುವಂತೆ ಭಿನ್ನವಿಸಿದರು. ಅದರಂತೆ ಬ್ರಹ್ಮನು ಋಗ್ವೇದದಿಂದ ಸಂಭಾಷಣೆಗಳಿಂದ ಕೂಡಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಜ್ಜಿಯ ಕತೆ: ಪದ್ಮಾ ಭಟ್, ಇಡಗುಂದಿ.

                 ಒಂದಾನೊಂದು ಕಾಲದಲ್ಲಿ ಒಂದೂರಲ್ಲಿ.. ಎಂದೇ ಆರಂಭವಾಗುತ್ತಿದ್ದ ಅಜ್ಜಿಯ ಕತೆಯು ಯಾವುದೋ ನೀತಿ ಪಾಠದೊಂದಿಗೋ ಜೀವನ ಮೌಲ್ಯಗಳೊಂದಿಗೋ ಮುಗಿಯುತ್ತಿದ್ದವು. ದಿನದ ಎಲ್ಲಾ ಚಟುವಟಿಕೆಗಳಲ್ಲಿ ಕತೆಯೂ ಸಹ ಒಂದಾಗಿತ್ತು. ರಾಮಾಯಣ ಮಹಾಭಾರತದಂತಹ ಪಾತ್ರಗಳು ಮಕ್ಕಳ ಪಾಲಿನ ಹೀರೋಗಳಾಗಿರುತ್ತಿದ್ದವು. ಅಜ್ಜಿ ಅಜ್ಜಿ ಕತೆ ಹೇಳಜ್ಜಿ ಎಂದ ಕೂಡಲೇ ಒಂದು ಚೂರೂ ಬೇಸರ ಮಾಡಿಕೊಳ್ಳದೆ ಹೇಳುತ್ತಿದ್ದಳು. ಇಡೀ ದಿನವೂ ಯಾವುದೋ ಕೆಲಸಗಳಿಂದಲೋ ಅಥವಾ ಇನ್ಯಾವುದರಿಂದಲೋ ಬ್ಯೂಸಿಯಾಗಿರುತ್ತಿದ್ದ ಅಜ್ಜಿಗೂ ಮೊಮ್ಮಕ್ಕಳಿಗೆ ಕತೆ ಹೇಳುವುದೆಂದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂಟಿ ಬದುಕಿನ ದುರಂತ: ಅಖಿಲೇಶ್ ಚಿಪ್ಪಳಿ

ಆಂಡ್ಯಾಯ್ಡ್, ಲ್ಯಾಪ್‍ಟಾಪ್, ವೈಫೈ ಇವತ್ತು ಏನೆಲ್ಲಾ ಇವೆ. ಪ್ರಪಂಚವೇ ಅಂಗೈಲಿದೆ. ಕುಳಿತಲ್ಲೇ ಏನೂ ಬೇಕಾದರೂ ಮಾಡಬಹುದಾದ ಕಾಲ. ಆನ್‍ಲೈನ್‍ಲ್ಲೇ ಆರ್ಡರ್ ಮಾಡಿ ಬೇಕಾದ್ದನ್ನು ಪಡೆಯುವ ಕಾಲ. ನೆಂಟರಿಷ್ಟರಿಲ್ಲದೆ, ಬಂಧು-ಬಳಗವಿಲ್ಲದೆ, ಸ್ನೇಹಿತರ ಹಂಗಿಲ್ಲದೆ ಬದುಕಿಬಾಳಬಹುದಾದ ಕಾಲ. ಇಂತಹ ಸನ್ನಿವೇಶದಲ್ಲೇ ನಿಗೂಢ ರೀತಿಯಲ್ಲಿ ಸಾವಿಗೀಡಾಗಿ, 6 ವರ್ಷಗಳವರೆಗೂ ಯಾರ ಗಮನಕ್ಕೂ ಬಾರದೆ ಅಜ್ಞಾತವಾಗಿ ಕೊಳೆತು ಹೋದ ಒಂದು ಹೆಂಗಸಿನ ಕತೆಯಿದು. ಪಿಯಾ ಫಾರೆನ್‍ಕೋಫ್, 45 ವರ್ಷದ ಈ ಮಹಿಳೆ ಕುಟುಂಬದಿಂದ ಪರಿತ್ಯಕ್ತ ವiಹಿಳೆಯಾಗಿದ್ದಳು,  ತಂದೆ-ತಾಯಿಯಿಂದ ಬೇರೆಯಾಗಿದ್ದ ಪಿಯಾಳಿಗೆ ಮದುವೆಯಾಗಿರಲಿಲ್ಲ. ಅದೊಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 51): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಕರ್ನಾಟಕದ ಗತವೈಭವ ಕೃತಿಯ ಕರ್ತೃ ಯಾರು? 2.    ಕರ್ನಾಟಕದಲ್ಲಿ ಪ್ರಥಮ ಏಕೀಕರಣ ಸಮ್ಮೇಳನ ನಡೆದ ಸ್ಥಳ ಯಾವುದು? 3.    ಕರ್ನಾಟಕ ಏಕೀಕರಣ ಮಹಾಸಮಿತಿಯ ಪ್ರಥಮ ಅಧ್ಯಕ್ಷರು ಯಾರು? 4.    ಅಂಕೋಲಾ ಉಪ್ಪಿನ ಸತ್ಯಾಗ್ರಹದ ಪ್ರಮುಖ ಪಾತ್ರದಾರಿ ಯಾರು? 5.    ಅರ್ಕೇಶ್ವರ ಲಿಂಗ ಇದು ಯಾರ ಅಂಕಿತನಾಮವಾಗಿದೆ? 6.    ವಿಂಗ್ಸ್ ಆಫ್ ಫೇರ್ ಕೃತಿಯ ಕರ್ತೃ ಯಾರು? 7.    ಭೌಗೋಳಿಕವಾಗಿ ವಿಶ್ವದಲ್ಲಿ ಹೆಚ್ಚು ಭೂ ಪ್ರದೇಶವನ್ನು ಹೊಂದಿರುವ ಭೂ ಖಂಡ ಯಾವುದು? 8.    ಮೌರ್ಯ ಸಾಮ್ರಾಜ್ಯದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇಹವೆಂಬೋ ಮೋಟುಗೋಡೆಯ ಮೀರಿ..: ಮೌಲ್ಯ ಎಂ.

                                                       ಕವಿತೆ ಆತ್ಮದ ನಾದ. ಅದ್ಯಾಕೆ ದೇಹದ ಮೇಲೆಯೇ ಉರುಳಿಸುತ್ತಾರೋ.? ಅಂಗಾಂಗಕ್ಕೂ, ಅಂತರಂಗಕ್ಕೂ ಪರದೆ ತೀರ ಕಲಸಿ ಹೋಗುವಷ್ಟು ತೆಳುವಾ..? ಯಾಕೆ ಈವತ್ತಿನ ಪದ್ಯಗಳು ಕೇವಲ Anotomical description ಗಳಾಗುತ್ತಿವೆ? ಲಜ್ಜೆ ಈವತ್ತಿನ ದಿನಮಾನಕೆ ಒಂದು ಅನಗತ್ಯ ಸಂಗತಿಯೇ? ಅಥವಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಂಕರ್ ನಾಗ್ ಇನ್ನು ಬದುಕ್ಕಿದ್ದಾರೆ: ಮುಕುಂದ್ ಎಸ್..

"ನಲಿವ ಗುಲಾಬಿ ಹೂವೇ…" ಎಂದು ಪಕ್ಕದಲ್ಲಿದ್ದ ಗೆಳೆಯ ಒಂದೇ ಸಾಲನ್ನು ಮಂತ್ರದಂತೆ ಪಠಿಸುತ್ತಿದ್ದ. ನಾನು ಅವನನ್ನು ಎಚ್ಚರಿಸಿ, "ಕೇಳಿಸಿಕೊಳ್ಳೋ, ಶಂಕರಣ್ಣನ ಹೆಂಡ್ತಿ ಮಾತಾಡ್ತಿದ್ದಾರೆ" ಎಂದೆ. ಅವನಿಗೆ ನನ್ನ ಮಾತು, ಅರುಂಧತಿನಾಗ್ ರವರ ಮಾತು ಎರಡೂ ಬೇಡವಾಗಿತ್ತು. ಅವನಿಗೆ ಶಂಕರ್ ನಾಗ್ ನೆನಪು ಆ ಸಂಜೆಗೆ ಸಾಕಾಗಿತ್ತು. ಅಂತಹ ಸುಂದರ ಸಂಜೆಯಲ್ಲಿ ಡಿವಿಸ್ ಕಾಲೇಜಿನಲ್ಲಿ ಹುಡುಗ-ಹುಡುಗಿಯರನ್ನು ಉದ್ದೇಶಿಸಿ, "ಆ ಹುಡುಗನ ಹೆಸರಲ್ಲಿ ಒಂದು ರಂಗಮಂದಿರವನ್ನು ಕಟ್ಟಬೇಕು. ನನ್ನ ಹತ್ತಿರ ಯೋಜನೆ ತಯಾರಾದ ಮೇಲೆ ಮತ್ತೆ ನಿಮ್ಮ ಮುಂದೆ ಬಂದು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೋಳಿಗೆಯೂ … ಹಳೇ ಪೇಪರ್ರೂ ..: ಅನಿತಾ ನರೇಶ್ ಮಂಚಿ

ಚಿಕ್ಕಮ್ಮ ಬಂದು ಗುಟ್ಟಿನಲ್ಲಿ ಎಂಬಂತೆ ನನ್ನನ್ನು ಕರೆದು ಹೋಳಿಗೆ ಕಟ್ಟು ಕಟ್ಟಿಡ್ತೀಯಾ.. ಎಂದಳು. ಚಿಕ್ಕಪ್ಪನ ಕಡೆಗೆ ನೋಡಿದೆ. ಐವತ್ತು, ಮತ್ತೊಂದು ಹತ್ತು  ಎಂಬಂತೆ ಸನ್ನೆ ಮಾಡಿದರು.  ಸರಿ .. ನಮ್ಮ ಬಳಗ ಸಿದ್ದವಾಯ್ತು. ಈ ರಹಸ್ಯ ಕಾರ್ಯಕ್ಕೆಂದೇ ಒಂದು ಪುಟ್ಟ ಕೋಣೆಯಿತ್ತು. ನಾವಲ್ಲಿಗೆ ಸೇರಿ  ಕಾಲು ಚಾಚಿ ಕುಳಿತುಕೊಂಡೆವು.  ಅಲ್ಲೇ ಇದ್ದ ಚಿಕ್ಕಪ್ಪನ ಮಗ ನಮ್ಮ ಸಹಾಯಕ್ಕೆ ಸಿದ್ಧನಾದ.  ಪೇಪರ್ , ಪ್ಲಾಸ್ಟಿಕ್ ಕವರ್, ಹೋಳಿಗೆಯ ಗೆರಸೆ ತಂದಿಡು ಎಂದೆವು.  ಎಲ್ಲವೂ ಒಂದೊಂದಾಗಿ ನಮ್ಮೆದುರು ಪ್ರತ್ಯಕ್ಷವಾಯಿತು.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೊಬೆಲ್ ಪ್ರಶಸ್ತಿ – ೨೦೧೪: ಜೈಕುಮಾರ್. ಹೆಚ್. ಎಸ್.

ಭೌತವಿಜ್ಞಾನ: ನೀಲಿ ವರ್ಣದ ಬೆಳಕು ಆವಿಷ್ಕಾರ ಮಾಡಿದ ವಿಜ್ಞಾನಿಗಳಿಗೆ ಕಡಿಮೆ ವಿದ್ಯುತ್‌ನಿಂದ ಹೆಚ್ಚಿನ ಬೆಳಕು ನೀಡುವ ದೀಪಗಳಿಗಾಗಿ ಶೋಧನೆ ನಿರಂತರವಾಗಿ ನಡೆಯುತ್ತಲೇ ಇದೆ. ೨೦ ನೇ ಶತಮಾನದಲ್ಲಿ ಇನ್‌ಕ್ಯಾಂಡಿಸೆಂಟ್ ಎಂದು ಕರೆಯಲಾಗುವ ಬಲ್ಬ್ ಗಳದೇ ಪಾರುಪತ್ಯ. ಇಂದಿಗೂ ನಮ್ಮ ಬಹುತೇಕ ಮನೆಗಳಿಂದ ಇವು ಕಣ್ಮರೆಯಾಗಿಲ್ಲ. ಇದರಲ್ಲಿ ಟಂಗಸ್ಟನ್ ಫಿಲಮೆಂಟ್ ಇದ್ದು, ಫಿಲಮೆಂಟ್ ಕಾದ ನಂತರ ಬೆಳಕನ್ನು ನೀಡಲಾರಂಭಿಸುತ್ತವೆ. ಆಮೇಲೆ ಟ್ಯೂಬ್‌ಲೈಟ್ (ಪ್ಲೋರೋಸೆಂಟ್) ದೀಪಗಳು ಬಂದವು. ಇದರಲ್ಲಿ ಪಾದರಸದ ಅನಿಲದ ಬಾಷ್ಪಗಳು ವಿದ್ಯುತ್ ಸರಬರಾಜಿನಿಂದ ಕಾದು ರಂಜಕದ ಕೋಟಿಂಗ್‌ನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ