ಮೇರಿ ಕೋಮ್‌ಳ ಹಾದಿಯಲ್ಲಿ: ಗಿರಿಜಾಶಾಸ್ತ್ರಿ, ಮುಂಬಯಿ

ಹೆಣ್ಣುಮಕ್ಕಳು ತಮ್ಮ ಪರ್ಸುಗಳಲ್ಲಿ ಪೆಪ್ಪರ್- ಸ್ಪ್ರೇ ಗಳನ್ನೋ ಖಾರದ ಪುಡಿಗಳನ್ನೋ ಸದಾ ಇಟ್ಟುಕೊಂಡು ಓಡಾಡಬೇಕು ಎಂದು ಮಹಾರಾಷ್ಟ್ರದ ಮಂತ್ರಿಯೊಬ್ಬರು ಸಲಹೆಯಿತ್ತಿದ್ದರು. ಗಾಂಧೀಜಿಯವರೂ ಕೂಡ ರಾಷ್ಟ್ರೀಯ ಆಂದೋಳನದ ಸಮಯದಲ್ಲಿ ಹೆಣ್ಣುಮಕ್ಕಳನ್ನು ಉದ್ದೇಶಿಸಿ, ನಿಮಗೆ ದೇವರು ಹಲ್ಲು ಮತ್ತು ಉಗುರುಗಳನ್ನು ಕೊಟ್ಟಿಲ್ಲವೇ? ನಿಮ್ಮ ಮರ್ಯಾದೆಗೆ ಸಂಚಕಾರ ಒದಗಿ ಬರುವ ಸಂದರ್ಭದಲ್ಲಿ ನೀವು ಅಹಿಂಸಾ ತತ್ವವನ್ನು ಪಾಲಿಸಬೇಕಾದ ಅಗತ್ಯವಿಲ್ಲ ಎಂದು ಖಡಾಖಂಡಿತವಾಗಿ ಅಭಿಪ್ರಾಯಪಟ್ಟಿದ್ದರು. ಇತ್ತೀಚೆಗೆ ಮರಾಠಿಗರಲ್ಲಿ ಬಹಳ ಜನಪ್ರಿಯರಾದ, ಕನ್ನಡದ ಬಹುದೊಡ್ಡ ಕಾದಂಬರಿಕಾರರೊಬ್ಬರು, ಮುಂಬಯಿ ವಿಶ್ವವಿದ್ಯಾಲಯ ಆಯೋಜಿಸಿದ ವಿಚಾರ ಸಂಕಿರಣವೊಂದರಲ್ಲಿ ’ಗಂಡಸು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಫ್ರೆಂಡ್ ರಿಕ್ವೆಸ್ಟ್: ಹೃದಯಶಿವ

ಫೇಸ್ ಬುಕ್ಕಿನಲ್ಲಿ ಅವಳು ಕಳಿಸಿದ್ದ ಫ್ರೆಂಡ್ ರಿಕ್ವೆಸ್ಟ್ ಕಂಡೊಡನೆ ಇವನೊಳಗೆ ಅಚ್ಚರಿ ಹಾಗೂ ಆತಂಕದ ಭಾವನೆಗಳು ಒಟ್ಟೊಟ್ಟಿಗೇ ಉದ್ಭವಿಸಿದವು. ಮೂರು ವರ್ಷಗಳ ಸುದೀರ್ಘ ಅಂತರದ ಬಳಿಕ ಆಕೆ ಮತ್ತೆ ಹತ್ತಿರವಾಗುತ್ತಿದ್ದಾಳೆ. ಕನ್ಫ಼ರ್ಮ್ ಬಟನ್ ಒತ್ತಿಬಿಡ್ಲಾ? ಹಲವು ಜಿಜ್ಞಾಸೆಗಳಿಗೆ ಉತ್ತರ ಕಂಡುಕೊಳ್ಳಬೇಕಾದ ಸಂಭವ ಎದುರಾಗಬಹುದು. ತಾನಿಲ್ಲದ ಜಗತ್ತಿನಾಚೆ ಬರೋಬ್ಬರಿ ಮೂರು ವರ್ಷ ಬದುಕಿ, ಮುನಿಸು, ಕೋಪ, ಹಠ ಇತ್ಯಾದಿಗಳನ್ನು ಮರೆತು ಬರುತ್ತಿದ್ದಾಳೆ. ಆಕೆಯನ್ನು ಹೇಗೆ ಸ್ವೀಕರಿಸಲಿ? ಗೊಂದಲದಿಂದಲೇ ಕನ್ಫ಼ರ್ಮ್ ಬಟನ್ ಒತ್ತಿದ. ಒಂದು ತಣ್ಣನೆ ಸಂಜೆ ಆನ್ ಲೈನಿನಲ್ಲಿದ್ದಾಗ ವಿಸ್ಮಯವೆಂಬಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಡುಕಾಟ: ಅನಿತಾ ನರೇಶ್ ಮಂಚಿ ಅಂಕಣ

ನೈಲ್ ಕಟ್ಟರ್ ಎಲ್ಲಿದೇ ..ಎಂದು  ಮೂರನೇ ಸಾರಿ ನಮ್ಮ ಮನೆಯ ಲಾಯರ್ ಸಾಹೇಬ್ರ ಕಂಠ ಮೊಳಗಿತು. ಈ ಸಲವೂ ಹುಡುಕಿ ಕೊಡದಿದ್ರೆ ಹೊಂಬಣ್ಣದ ಮೈಯ ನವಿಲು ಬಣ್ಣದ ಬಾರ್ಡರಿನ ಸೀರೆಯ ಅಹವಾಲು ಡಿಸ್ ಮಿಸ್ ಆಗುವ ಭಯದಲ್ಲಿ ನಿಲ್ಲೀ ಹುಡುಕಿ ಕೊಡ್ತೀನಿ ಅಂದೆ.. ಸತ್ಯ ಹರಿಶ್ಚಂದ್ರನ ಆಣೆಯಾಗಿಯೂ ಅದು ಎಲ್ಲಿದೆ ಅಂತ ನನಗೆ ತಿಳಿದಿರಲಿಲ್ಲ. ನಮ್ಮ ಮನೆಯಲ್ಲಿರುವ ಸ್ಥಿರ ವಸ್ತುಗಳಿಗೂ ಕೈ ಕಾಲು ಬಂದು ಅವು ಚರ ವಸ್ತುಗಳಾಗಿ ಸಿಕ್ಕ ಸಿಕ್ಕ ಕಡೆ ಹೋಗಿ ಸಿಗಬೇಕಾದಾಗ ಸಿಗದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಾಂಧೀ ಬಾಂಧವ್ಯ: ಎಸ್. ಜಿ. ಸೀತಾರಾಮ್, ಮೈಸೂರು.

ಗಾಂಧೀ ಎಂದೊಡನೆ ಜನರು ಗಾಂಧೀಜೀಯವರನ್ನು ನೆನೆದು ಸುಮ್ಮನಾಗುವರೇ ಹೊರತು, ಅವರ ಗಾಂಧೀ ನಾಮಧಾರಿ ಬಂಧುಗಳನ್ನಾಗಲೀ ಅಥವಾ ಗಾಂಧೀ ನಾಮದ ಮೂಲವನ್ನಾಗಲೀ ಸಾಮಾನ್ಯವಾಗಿ ಹುಡುಕಲೆತ್ನಿಸುವುದಿಲ್ಲ. ಹಾಗೆ ಹುಡುಕಲು ಹೊರಟಲ್ಲಿ, ಗಾಂಧೀ ಎಂಬುವ ಪದ ಗಂಧ ಎಂಬ ಶಬ್ದದಿಂದ ಬಂದಿದ್ದು, ಗಂಧದ ವ್ಯಾಪಾರಿಗಳನ್ನು ಹೀಗೆ ಕರೆಯುತ್ತಿದ್ದರೆಂಬುದನ್ನು ತಿಳಿದು ಶುರುವಿನಲ್ಲೇ ಅಚ್ಚರಿಯಾಗುತ್ತದೆ. ಹಾಗೆಯೇ ಮುಂದುವರಿದರೆ, ಗಾಂಧೀಜೀಯವರಿಗೆ ಮುಂಚೆಯೇ ಇನ್ನೊಬ್ಬ ವಿಶ್ವವಿಖ್ಯಾತ ಗಾಂಧೀ ಇದ್ದರೆಂದು ತಿಳಿದು ಕುತೂಹಲ ಮತ್ತಷ್ಟು ಕೆರಳುತ್ತದೆ. ಇವರೇ ಬ್ಯಾರಿಸ್ಟರ್ ಮತ್ತು ಬಹುಧರ್ಮ ವಿದ್ವಾಂಸ ವೀರ್‌ಚಂದ್ ರಾಘವ್‌ಜೀ ಗಾಂಧೀ (೧೮೬೪-೧೯೦೧). … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಂಸಾರ ಸಾರ: ಮಂಜು ಹಿಚ್ಕಡ್

ಟಕ್, ಟಕ್, ಟಕ್ ಎಂದು ಕೇಳಿ ಬರುವ ಜನರ ಹೆಜ್ಜೆಗಳ ಸಪ್ಪಳ. ಗುಂಯ್, ಗುಂಯ್, ಗುಂಯ್ ಎಂದು ರಸ್ತೆಯಲ್ಲಿ ಓಡಾಡುವ ವಾಹನಗಳ ಶಬ್ಧ. ಆಗೊಮ್ಮೆ ಈಗೊಮ್ಮೆ ಕೊಂಯ್, ಕೊಂಯ್, ಕೊಂಯ್ ಎಂದು ಕೇಳಿ ಬರುತ್ತಿದ್ದ ಅಂಬ್ಯೂಲನ್ಸ್ ಸಪ್ಪಳ. ಅಲ್ಲಲ್ಲಿ ಆಗಾಗ ಕೇಳಿ ಬರುತ್ತಿದ್ದ ಜನರ ಪಿಸುಮಾತುಗಳು. ಒಮ್ಮೊಮ್ಮೆ ಅಲ್ಲೊಬ್ಬರು, ಇಲ್ಲೊಬ್ಬರು ಅಳುವ ಸಪ್ಪಳ. ಇವೆಲ್ಲಾ ಆಗಾಗ ಕೇಳಿ ಬರುತ್ತಲೇ ಇದ್ದುದರಿಂದ ಇಂದಾದರೂ ಸ್ವಲ್ಪ ಹೊತ್ತು ನಿದ್ದೆ ಮಾಡಬೇಕೆಂದುಕೊಂಡು ಮಲಗಿದ ಸುಮಾಳಿಗೆ ನಿದ್ದೇನೆ ಹತ್ತಿರ ಸುಳಿಯುತ್ತಿರಲಿಲ್ಲ. ತಾನು ಮಲಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಕುರು” ವರನ ಕರುಳು ಕರಗಿತು: ಅಮರ್ ದೀಪ್ ಅಂಕಣ

ಯಾವುದೋ ಸಿನೆಮಾ ನೋಡುತ್ತಿರುತ್ತೇವೆ, ಇನ್ಯಾವುದೋ ಕಥೆ ನೆನಪಾಗುತ್ತೆ.  ಯಾರದೋ ಜೊತೆ ಮಾತಾಡುತ್ತಿರುತ್ತೇವೆ ಇನ್ಯಾರದೋ ಮಾತಿನ ವರಸೆ ನೆನಪಾಗುತ್ತೆ.   ಯಾವುದೋ ಹಾಡು ಗುನುಗು ತ್ತಿರುತ್ತೇವೆ, ಮತ್ಯಾವುದೋ ದುಃಖ ಎದೆಗಿಳಿಯುತ್ತೆ. ಸುಖದ ಕ್ಷಣಗಳು ಕೆಲವನ್ನೇ ಮಾತ್ರ ಜ್ನಾಪಿಸುತ್ತವೆ.    ನಮ್ಮಲ್ಲೂ ಒಂದಲ್ಲ ಒಂದು ಕೊರತೆ ಇದ್ದೇ ಇರುತ್ತದೆ.   ಅದನ್ನು ಯಾವ ಹಂತದಲ್ಲಿ ಚಿವುಟಿ ದಾಟಬೇಕು ಅನ್ನುವುದರಲ್ಲಿ ನಮ್ಮ ಜಾಣತನ ಇರುತ್ತೆ.  ದುರಂತವೆಂದರೆ,  ಆ ಸಮಯಕ್ಕೆ ಅಂತ ಜಾಣತನಕ್ಕೆ ಕಿವುಡು ಮತ್ತು ಮೂಗತನ  ಆವರಿಸಿರುತ್ತದೆ.   ಆಗಲೇ ನಾವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಂಗಳಪ್ರಿಯನೊಬ್ಬನ ಮಮಕಾರದ ಮಾತುಗಳು: ಪ್ರಶಸ್ತಿ ಅಂಕಣ

ನಮ್ಮ ಉಪಗ್ರಹ ಮಂಗಳನ ಮೇಲಿಳಿದಂದು ಮೂಡಿದ ಖುಷಿ ಮುಖಹೊತ್ತಿಗೆಯಲ್ಲಿನ್ನೂ ಇಳಿದಂತಿಲ್ಲ. ಮತ್ತೆ ಮತ್ತೆ ಮಂಗಳನದೇ ಸುದ್ದಿ, ಚರ್ಚೆಗಳಿಲ್ಲಿ. ಮಂಗಳನ ಮೇಲೆ ಮೊದಲ ಪ್ರಯತ್ನದಲ್ಲೇ ಕಾಲಿಟ್ಟ ಮೊದಲ ದೇಶ ನಮ್ಮದು ಎಂಬ ಹೆಮ್ಮೆ ಪಟ್ಟ ಜನರೆಷ್ಟೋ , ಮೂಲಭೂತ ಉದ್ದೇಶಗಳ ಸಾಕಾರವೇ ಸಂದೇಹವಿರೋ ಯೋಜನೆಗೆ ನಾನೂರೈವತ್ತು ಕೋಟಿ ಸುರಿದದ್ದು ಹುಚ್ಚಾಟದ ಪರಮಾವಧಿಯೆಂದು ಗೋಳಿಟ್ಟ ಜನರೂ ಅಷ್ಟೇ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ನಭಕ್ಕೆ ನೆಗೆವ ರಾಕೆಟ್ಟುಗಳ ನಿರ್ಮಾಣಕ್ಕೆ ನೂರಾರು ಕೋಟಿ ಸುರಿಸುವ ವಿಜ್ಞಾನಿಗಳ ವಿಚಾರಹೀನತೆಯ ಬಗ್ಗೆ ಹಿಗ್ಗಾಮುಗ್ಗಾ ಖಂಡಿಸಿದ ಬುದ್ದಿಜೀವಿಗಳು, ಆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಪರಿಗ್ರಹ: ಅಖಿಲೇಶ್ ಚಿಪ್ಪಳಿ ಅಂಕಣ

ಸೆಪ್ಟೆಂಬರ್ ತಿಂಗಳೆಂದರೆ ಮಳೆಗಾಲ ಹಿಂದಾಗಿ ಚಳಿಗಾಲ ಅಂಬೆಗಾಲಿಕ್ಕುತ್ತಾ ಬರುವ ಕಾಲ. ರೈತರಿಗೂ ಸುಗ್ಗಿಯ ಪೂರ್ವತಯಾರಿ ಮಾಡಿಕೊಳ್ಳುವ ಕಾಲ. ಸತತ ಮಳೆಯಿಂದ ನಲುಗಿ ಮಾಸಿದ ಭೂತಾಯಿ ಆಭರಣಗಳು ಮತ್ತೆ ನಳನಳಿಸುವ ಕಾಲ. ಎಳೆ ಬಿಸಿಲಿಗೆ ಮೈಯೊಡ್ಡಿ ಬೆಚ್ಚಗಿನ ಕಾಫಿ ಹೀರುವ ಮಜವೇ ಬೇರೆ. ಮಣ್ಣಿನೊಳಕ್ಕೆ ಸೇರಲಾರದ ಎರೆಹುಳುಗಳು ಕಟ್ಟಿರುವೆಗಳ ದವಡೆಗೆ ಬಲಿಯಾಗುವ ಕಾಲ.  ಸೆಪ್ಟೆಂಬರ್ ತಿಂಗಳಲ್ಲಿ ಶಿಶು ಕ್ಯಾನ್ಸರ್ ಜಾಗೃತಿ, ಗರ್ಭಕೋಶದ ಕ್ಯಾನ್ಸರ್ ಜಾಗೃತಿ ಹೀಗೆ ವಿವಿಧ ರೀತಿಯ ಕ್ಯಾನ್ಸರ್ ಕುರಿತಾದ ಜಾಗೃತಿಗೊಳಿಸುವ ತಿಂಗಳು. ಪಾಶ್ಚ್ಯಾತ್ಯ ದೇಶಗಳಲ್ಲಿ ಬೇಸಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಲ್ಕು ಕವಿತೆಗಳು: ಕಾವ್ಯ ಪ್ರಿಯ, ದಿನೇಶ್ ಚನ್ನಬಸಪ್ಪ, ಅಕ್ಷತಾ ಕೃಷ್ಣಮೂರ್ತಿ, ಸುಚಿತ್ರ ಕೆ.

ಮರೆಯಲಾಗದು !!! ಅ೦ದೇಕೊ ಘಾಸಿಗೊ೦ಡ ಮನ ಮತ್ತೆ ಚೇತರಿಸಿಕೊಳ್ಳಲಿಲ್ಲ ಪ್ರಯತ್ನಗಳು ಹಲವು ಆದವೆಲ್ಲ ವ್ಯರ್ಥವು….. ಎಲ್ಲ ದುಃಖಗಳ ಮರೆತರೂ ಅದೊ೦ದೆ ನೆನಪು ಅದೇಕೊ ತಿಳಿಯದು ಮಾಸುತಿಲ್ಲ ಆ ಗಾಯವು…. ಅಷ್ಟಿತ್ತಾ ಘಾಸಿಯ ತೀವ್ರತೆ ಅ೦ದೇಕೊ ತಿಳಿಯಲಿಲ್ಲಿ ಸಿಹಿಯ೦ತಿತ್ತು ಆ ಮರೆಯಲಾಗದ ಮಮತೆಯು… ಮರೆತೆನೆ೦ದರೆ ಸುಳ್ಳು ಮರೆಯದಿದ್ದರೆ ಅದು ಕಹಿಯಾದ ಸತ್ಯವು ಸಾಯಿಸದೇ ಸುಡುತಿಹುದು…. — ಕಾವ್ಯಪ್ರಿಯ ***** ಬೆಳಕಾಗುವ ಮೊದಲೇ ಕತ್ತಲೆಯ ಮುಸುಕು, ಶುರುವಾಗುವ ಮೊದಲೇ ಕೊನೆಯಾಗುವ ಕೊರಗು, ಅರಳುವ ಮೊದಲೇ ಬಾಡಿಹೋಗುವ ಕುರುವು, ಒಲವೇ ನೀ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 47): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ನ್ಯಾಷನಲ್ ಮ್ಯೂಸಿಯಂ ಆಫ್ ನಾಚುರಲ್ ಹಿಸ್ಟರಿ ಎಲ್ಲಿದೆ? ೨.    ಅಯೋಧ್ಯ ಯಾವ ನದಿಯ ದಡದ ಮೇಲಿದೆ? ೩.    ಹಿಂದೂ ಕಾನೂನಿನ ಮಿತಾಕ್ಷರ ಎಂಬ ಪುಸ್ತಕವನ್ನು ಬರೆದವರು ಯಾರು? ೪.    ಅಂತ್ಯೋದಯ ಅನ್ನ ಯೋಜನೆ ಜಾರಿಗೊಳಿಸಲಾದ ವರ್ಷ ಯಾವುದು? ೫.    ಗೌರ್ಮೆಂಟ್ ಬ್ರಾಹ್ಮಣ ಇದು ಯಾವ ವ್ಯಕ್ತಿಯ ಕುರಿತ ಆತ್ಮ ಕಥನವಾಗಿದೆ? ೬.    ಶಕುಂತಲೆಯ ಮಗ ಭರತನ ಮೊದಲ ಹೆಸರೇನು? ೭.    ಕೋಹಿನೂರ್ ವಜ್ರಕ್ಕೆ ಆ ಹೆಸರು ನೀಡಿದವರು ಯಾರು? ೮.    ಭಾರತದ ರಾಷ್ಟ್ರೀಯ ಕಾಂಗ್ರೆಸ್‌ಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಪಾಡಿ ಎಂದು ಕೂಗುವ ಕೂಗುಗಳ ನಿರ್ಲಕ್ಷಿಸುವ ಬದಲು..: ನಟರಾಜು ಎಸ್. ಎಂ.

ಕಳೆದ ವಾರದ ಒಂದು ಮುಂಜಾನೆ ನನ್ನ ರೂಮಿನಿಂದ ಒಂದಷ್ಟು ದೂರದಲ್ಲಿರೋ ಪ್ಲಾಟಿನಲ್ಲಿ ಯಾರೋ ಕಿರುಚಿದ ಸದ್ದಾಯಿತು. ಆ ಸದ್ದು ನಿದ್ದೆಗಣ್ಣಿನಲ್ಲಿ ನನ್ನೊಳಗೆ ಒಂದು ಆತಂಕವನ್ನು ಸೃಷ್ಟಿಸಿದರೂ ಹೊರಗೆ ನಲ್ಲಿಯಲ್ಲಿ ಬೀಳುವ ನೀರು ಹಿಡಿಯುವ ಅಕ್ಕ ಪಕ್ಕದ ಮನೆಯ ಹೆಂಗಸರು ಆ ಪ್ಲಾಟಿನಲ್ಲಿ ಏನೂ ನಡೆದೇ ಇಲ್ಲವೇನೋ ಎಂಬುವಂತೆ ತಮ್ಮ ಬಕೆಟ್ ಗಳಿಗೆ ನೀರು ತುಂಬಿಕೊಳ್ಳುತ್ತಿರುವ ಸದ್ದು ಕೇಳಿ ನಾನು ಹಾಸಿಗೆ ಮೇಲೆ ಹಾಗೆಯೇ ಸುಮ್ಮನೆ ಕಣ್ಮುಚ್ಚಿದೆ. ಆ ಪ್ಲಾಟಿನಿಂದ ಕೇಳಿ ಬರುತ್ತಿದ್ದ ಆ ಕಿರುಚುವ ದನಿ  ಕ್ಷಣ ಕ್ಷಣಕ್ಕೂ ತಾರಕ್ಕೇರುತ್ತಿತ್ತು. ಹೊರಗೆ ಹೋಗಿ ಅಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಚ್ಚರ ಹಾಬಿ ಮತ್ತು ಕೇಜ್ರಿವಾಲ್ ಪ್ರತಿಜ್ಞೆ: ಆದರ್ಶ ಸದಾನ೦ದ ಅರ್ಕಸಾಲಿ

  'ಪಕ್ಷಿ ವೀಕ್ಷಣೆ – ಭಾಗ ೧ '  ಇದೊ೦ದು ಇತ್ತೀಚಿಗೆ ಬೆಳೆಸಿಕೊ೦ಡ ಹುಚ್ಚುತನ. ಕೆಲವರು ಈ ಹುಚ್ಚುತನದ ಅಡ್ಡಗೆಲಸಕ್ಕೆ 'ಹವ್ಯಾಸ' ವೆ೦ಬ ಸುಸ೦ಕೃತ ಪದ ಬಳಸುತ್ತಾರೆ.  ಪರಿಚಯವಾದ ಹೊಸತರಲ್ಲಿ ಗೆಳೆಯ-ಗೆಳತಿಯರು ಕೇಳುವ ಪ್ರಶ್ನೆಯಿ೦ದ ಹಿಡಿದು, ಕೆಲಸಕ್ಕೆ ಸೇರುವ ಮುನ್ನ ಅರ್ಜಿ ತು೦ಬುವ ಕಾಲಮ್ ಗಳಲ್ಲಿ , ಈ 'ಹವ್ಯಾಸ'ವೆ೦ಬ ಪದವನ್ನು ಕಾಣುತ್ತೇವೆ. ಮದುವೆಗೆ ಮು೦ಚೆ, ಹೆಣ್ಣು-ಗ೦ಡು  ನೋಡುವ೦ಥ ಸ್ವಾರಸ್ಯಕರವಾದ ಶಾಸ್ತ್ರಗಳಲ್ಲಿ, " ನಿಮ್ಮ ಹವ್ಯಾಸಗಳೇನು " ಅನ್ನುವ ಮಹತ್ತರ ಪ್ರಶ್ನೆಗಳು ತಮ್ಮದೇ ಆದ ಸೊಬಗು ಕ೦ಡುಕೊ೦ಡಿವೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಲದ ಬೆನ್ನು: ಹೃದಯಶಿವ

ಹೆಂಡತಿಯು ಹದ ಮಾಡಿಕೊಟ್ಟ ತಾಂಬೂಲ ಜಗಿಯುತ್ತಲೇ ಅವರು ರಾಜಾಜಿನಗರದ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ತನ್ನ ಮೊದಲ ಹೆಂಡತಿಯ ಬಗ್ಗೆ ಆಲೋಚಿಸುತ್ತಿದ್ದರು. ನಲವತ್ತು ವರ್ಷಗಳ ಹಿಂದೆ ಯಾರ ಜೊತೆಯಲ್ಲೋ ಸರಸವಾಡಿದ್ದಳೆಂಬ ಶಂಕೆಯಿಂದ ಹತ್ತಾರು ಜನ ಸೇರಿಸಿ ಪಂಚಾಯ್ತಿ ಮಾಡಿ ಆಕೆಯನ್ನು ಶಾಶ್ವತವಾಗಿ ಮನೆಯಿಂದ ಹೊರಹಾಕಿದ್ದ ದೃಶ್ಯ ಅವರ ಮನಸ್ಸಿನಲ್ಲಿ ಮೂಡಿಬಂತು. ನೀಳಕೇಶದ, ತಾವರೆ ಕಣ್ಣುಗಳ ಚೆಲುವೆಯಾದ ತಮ್ಮ ಪ್ರಥಮಪತ್ನಿ! ಈಗ, ತನ್ನನ್ನು ಗಂಡನೆಂದು ಆಕೆಯೇನೂ ಭಾವಿಸುವ ಅಗತ್ಯವೇನೂ ಇಲ್ಲ. ಬದುಕು ಬೇಡವೆನಿಸಿದಾಗ ಆತ್ಮದ ಅಳಲಿಗೆ ಕಿವಿಯಾದರೆ ಸಾಕು. ಬೇಕಾದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಸ್ಮಯದ ಮಾಯಾಲೋಕ!: ಗುರುಪ್ರಸಾದ ಕುರ್ತಕೋಟಿ

ಕಾರ್ಪೊರೇಟ್ ಜಗತ್ತಿನಲ್ಲಿ, ವರ್ಷಕ್ಕೊಮ್ಮೆಯೋ, ಎರಡು ಸರ್ತಿಯೋ ಟೀಮ್ ಔಟಿಂಗ್ (team outing) ಅಂತ ಮಾಡುತ್ತಾರೆ. ಒಂದು ದಿನದ ಮಟ್ಟಿಗೆ ಕಚೇರಿಯ ಸಹೋದ್ಯೋಗಿಗಳೆಲ್ಲರೂ ಬೆಂಗಳೂರಿನಿಂದ ಸ್ವಲ್ಪ ಹೊರ ವಲಯದಲ್ಲಿರುವ ರಿಸಾರ್ಟ ಒಂದರಲ್ಲಿ ಕಾಲ ಕಳೆದು ಬರುತ್ತಾರೆ. ಅಲ್ಲಿ ಆಟವಾಡಿಸುತ್ತಾರೆ, ಅಬ್ಬರದ ಸಂಗೀತವಿರುತ್ತೆ, ನೃತ್ಯವಿರುತ್ತೆ. ತಮ್ಮ ಒತ್ತಡದ ಕೆಲಸದ ಮಧ್ಯೆ ದಣಿದ ಜೀವಗಳಿಗೆ ಒಂದಿಷ್ಟು ವಿರಾಮ ಕೊಡಿಸುವ ಪ್ರಯತ್ನ ಅದು. ಅದರ ಘೋಷಣೆಯಾಗುತ್ತಲೇ ಎಲ್ಲರಿಗೂ ಖುಷಿ, ಇನ್ನೂ ಕೆಲವು ಆತ್ಮಗಳಂತೂ ಸಂತಸದಿಂದ ಅರಳುತ್ತವೆ. ಆ ಆತ್ಮಗಳ ನೆಲೆಯಾಗಿರುವ ದೇಹಗಳಿಗೊಂದು, ವಿಶಿಷ್ಠವಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜನಪದ ಸಾಹಿತ್ಯದ ಸ್ಥಿತಿಗತಿ. ಏನು..? ಎತ್ತ..?: ರಕ್ಷಿತ್ ಶೆಟ್ಟಿ

 ಜನಪದ ಎಂಬುವುದು ಕೇವಲ ಒಂದೆರಡು ಪ್ರಕಾರಗಳಿಗೆ ಸೀಮಿತವಾದುದಲ್ಲ ಜನಜೀವನದ ಪ್ರತಿಯೊಂದು ಮಜಲಿನಲ್ಲಿಯೂ ಹಾಸುಹೊಕ್ಕಾಗಿ ನಿಂತಿರುವಂತದ್ದು. ಪ್ರತೀ ಪ್ರದೇಶದ ಪರಿಧಿಯೊಳಗೂ ತನ್ನದೇ ಆದ ವಿವಿದ ರೀತಿಯ ಜಾನಪದ ಚಿತ್ರಣ ಇದ್ದೇ ಇರುತ್ತದೆ. ಅನಕ್ಷರಸ್ಥ ಸಮಾಜದಲ್ಲಿ ಕೇವಲ ಮೌಖಿಕವಾಗಿ ಹರಿದು ಬಂದ ಸಾಹಿತ್ಯ ಪ್ರಕಾರಗಳಿಗೆ ಜಾತಿ, ಧರ್ಮ, ಮತ, ಪಂಥಗಳ ಹಿಡಿತವಿಲ್ಲ. ನಂಬಿಕೆ ಪುರಾಣ ನಡವಳಿಕೆ ಸಮಾಜದ ಆಗುಹೋಗುಗಳೇ ಒಳಗೊಂಡಿರುವುದು ಸರ್ವೇಸಾಮಾನ್ಯ. ಈ ರೀತಿಯಲ್ಲಿ ಕಂಠಸ್ಥ ಸಂಪ್ರದಾಯದ ಮೂಲಕ ತಲೆಮಾರಿನಿಂದ ತಲೆಮಾರಿಗೆ ಹರಿದು ಬಂದ ಕಲಾಪ್ರಕಾರಗಳು ನಿರಂತರವಾಗಿ ಹೊಸ ರೀತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾವಗಳ ಮೂಟೆ ಕಟ್ಟೋ ಹಾಗಿದ್ರೆ: ಪ್ರಶಸ್ತಿ

ಈ ಗಣಕ ಅನ್ನೋದು ಅದೆಷ್ಟು ಖುಷಿ ಕೊಡುತ್ತೆ ಕೆಲೋ ಸಲ ಅಂದ್ರೆ ಅದನ್ನ ಬರಿ ಮಾತಲ್ಲಿ ಹೇಳೋಕಾಗದಷ್ಟು. ಯಾಕಂತೀರಾ ?  ಸದ್ಯಕ್ಕೆ ಸಮಯವಿಲ್ಲದಿದ್ದರೂ ಮುಂದೆಂದಾದರೂ ಬೇಕಾಗುವುದೆಂಬ ನಮಗಿಷ್ಟದ ಅದೆಷ್ಟೋ ಜೀ.ಬಿಗಟ್ಲೆ ಹಾಡುಗಳನ್ನು, ಸಿನಿಮಾಗಳನ್ನು ಸಂಗ್ರಹಿಸಿಟ್ಟು ಬೇಕಾದಾಗ ನೋಡಬಹುದಾದ ವ್ಯವಸ್ಥೆಯಿದೆಯೆಲ್ಲ ಅದೇ ಎಲ್ಲಕ್ಕಿಂತ ಹೆಚ್ಚು ಖುಷಿ ಕೊಡೋದು ನಂಗೆ ಅಂದ್ರೆ ಕೆಲವರಿಗೆ ಅಷ್ಟೇನಾ ಅನಿಸಬಹುದು. ಕೆಲವರಿಗೆ  ತಮಾಷೆಯೆನಿಸಬಹುದು . ಕೆಲವರಿಗೆ ವಿಡಂಬನೆಯಂತೂ ಭಾಸವಾಗಬಹುದು. ನಮ್ಮ ಮನಸ್ಸಿನಲ್ಲಿರೋ.. ವೈಜ್ನಾನಿಕವಾಗಿ ಹೇಳೋದಾದ್ರೆ ಮೆದುಳಿನಲ್ಲಿರೋ ಮಾಹಿತಿಯ ವಾಹಕವಾಗಿ ಸಂಗ್ರಾಹಕವಾಗಿ ಕೆಲಸ ಮಾಡೋ ನ್ಯೂರಾನುಗಳಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಂಗನಿಂದ ದಾನವ – ಭಾಗ-೨: ಅಖಿಲೇಶ್ ಚಿಪ್ಪಳಿ ಅಂಕಣ

ಇಲ್ಲಿಯವರೆಗೆ… ಪ್ರಪಂಚದಲ್ಲಿ ಏನೇ ಆದರೂ, ಹಗಲು-ರಾತ್ರಿ ಆಗುವುದು ತಪ್ಪದು. ಕಾಲ ಯಾರಿಗೂ ಕಾಯುವುದಿಲ್ಲ. ಮೂಡಣದಲ್ಲಿ ಸೂರ್ಯನ ನಸುಬೆಳಕು ಮೂಡುತ್ತಿದ್ದಂತೆ ಮೊದಲು ಎಚ್ಚರಗೊಂಡು ಕೂಗುವುದು ಕಾಜಾಣ. ಹಿಂದೆಯೇ ಕರಿಕುಂಡೆಕುಸ್ಕದ ಸೀಟಿ ಶುರು. ಪ್ರಾಣಿ-ಪಕ್ಷಿಗಳಿಗೆ ಹೋಲಿಸಿದರೆ, ಮಾನವನಿಗೆ ಬೆಳಗಾಗುವುದು ತುಸು ತಡ. ವಯಸ್ಸಾದ ಕಾರಣಕ್ಕೆ ಹೆಚ್ಚು ನಿದ್ದೆ ಮಾಡದ ದ್ಯಾವರ ಭಟ್ಟರು ಬೇಗ ಏಳುತ್ತಾರೆ. ಹೆಂಡತಿ ತೀರಿಕೊಂಡ ಮೇಲೆ ಬೆಳಗಿನ ಕಾಫಿ ಕುಡಿಯುವ ಅಭ್ಯಾಸ ತಪ್ಪಿ ಹೋಗಿದೆ. ಬರುವ ಛಪ್ಪನ್ನಾರು ಧಾರಾವಾಹಿಗಳನ್ನು ನೋಡಿ ಸೊಸೆ-ಮಗ ಮಲಗುವುದು ರಾತ್ರಿ ೧೧.೩೦ ಆಗುತ್ತದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಲಗೆ ಮೇಲಿನ ಮಚ್ಚೆಯ ರಾಚ: ಅಮರ್ ದೀಪ್ ಪಿ.ಎಸ್.

ಊರಲ್ಲಿ ನೋಡಿದ್ರೆ ಜನ ರಾಚನ ಮನೆ ಮುಂದೆ ಜಮಾಯ್ಸಿದಾರೆ.  ರಾಚ ಮಾತ್ರ ತನಗೇನು ಗೊತ್ತೇ ಇಲ್ಲ ದಂತೆ ಊರ ಉಸಾಬರಿ ಮಾಡದೇ ತಾನಾಯ್ತು ತನ್ನ ಹೊಲ,  ದೊಡ್ಡಿ ದನಗಳ ಮೇವು, ಮುಸುರಿ, ಸಗಣಿ ಕೆಲಸದ ಜೊತೆ ಬಿಜಿನೋ ಬಿಜಿ.  ಜನ, ಅವನ ಹೆಂಡ್ತೀನ ಕೇಳ್ತಾ ಇದ್ರು. ಅವನ ಹೆಂಡ್ತಿ ಕೂಡ "ಇವ್ನ ಹೆಣದ್ ಜೊತೆ ಅವ್ರೀಸು ಮಂದೀದು ಎತ್ಲಿ" ಅಂದು ಬಾಯ್ತುಂಬ ಶಪಿಸಿದಳು.  ಸಧ್ಯಕ್ಕೆ ಒಲೆಗೆ ಇಡೋಕೆ ಸೌದೆ ಇಲ್ದೇ  ಮನೆ ಮುಂದೆ ಬಂದ ಜನಗಳ ಕೈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಂಬುಲೆನ್ಸ್ ಗೂ ಮೊದಲೇ ಪಿಜ್ಜಾ ಡೆಲಿವರಿ : ಸಂತೋಷ್ ಗುರುರಾಜ್

ಗೆಳೆಯರೇ ಈ ನಮ್ಮ ದೇಶದ ವ್ಯವಸ್ಥೆಯೇ ಹೀಗಾ ಅನಿಸ್ಸುವಷ್ಟು ಮತ್ತು ಇದನ್ನು ಬದಲಾಯಿಸಲು ಆಗುವುದೇ ಇಲ್ಲವಾ ಎನ್ನುವ ಅನುಮಾನ ಬರುವುದಂತೂ ಖಂಡಿತ, ಯಾಕೇ ಈ ರೀತಿಯ ಹೀನಾಯ ಪರಿಸ್ಥಿತಿ ಎನ್ನುವ ಅನುಮಾನ ನನ್ನನ್ನು ಕಾಡುತ್ತಿದೆ, ಯಾಕೆ ಈ ಸರಕಾರಗಳಿಗೆ ಇಷ್ಟೊಂದು ನಿರ್ಲಕ್ಷ್ಯ ದೋರಣೆ, ಸರಕಾರದ ಕೆಲಸ ದೇವರ ಕೆಲಸ ಎಂದು ಮಾಡಬೇಕಾಗಿರುವ ಇವರು ತಮ್ಮ ತಮ್ಮ ಅದಿಕಾರಕ್ಕೆ ಹೊಡೆದಾಡುತ್ತ, ತಮ್ಮ ತಮ್ಮ ಖಜಾನೆಗಳನ್ನು ತುಂಬಿಸಿ ಕೊಳ್ಳುವುದರಲ್ಲಿ ನಿರತರಾಗಿರುತ್ತಾರೆ. (ಎಲ್ಲರೂ ಹೀಗೆ ಇರುತ್ತಾರೆಂದು ಹೇಳಲಾಗುವುದಿಲ್ಲ, ನಿಷ್ಟಾವಂತರು ಇದ್ದಾರೆ ಆದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮ್ಮನೆಂಬ ಅನುಬಂಧದ ಸುತ್ತ: ಪದ್ಮಾ ಭಟ್

          ಮೊನ್ನೆ ಮೊಬೈಲ್ ಗೆ ಬಂದ ಮೆಸೇಜು ಒಂದುಕ್ಷಣ ಮೂಕಳನ್ನಾಗಿ ಮಾಡಿಸಿತ್ತು ಅದೇನೆಂದರೆ ೫ ನೇ ಕ್ಲಾಸಿನ ಪರೀಕ್ಷೆಯಲ್ಲಿ ಅಮ್ಮನ ಬಗ್ಗೆ ಬರೆಯಿರಿ ಎಂಬ ಒಂದು ಪ್ರಬಂಧವಿತ್ತಂತೆ.. ಆ ಪುಟ್ಟ ಹುಡುಗನೊಬ್ಬ ಬರೆದಿದ್ದೇನೆಂದರೆ ನನ್ನ ಅಮ್ಮನ ಬಗ್ಗೆ ಬರೆಯಲು ಇಂಗ್ಲೀಷಿನಲ್ಲಿರುವ ಯಾವ ಅಕ್ಷರವೂ ಸಮನಾಗಲಾರದು..ಯಾವುದೇ ಭಾಷೆಯ ಅಕ್ಷರಗಳೂ ಸಾಕಾಗದು ..ಸಮಯದ ಮಿತಿಯೂ ಇಲ್ಲ ಎಂಬುದು.. ಹೌದಲ್ವಾ? ಅಮ್ಮನೆಂದರೆ ಸಾವಿರ ಜನರ ನಡುವೆಯಿದ್ದರೂ ಆತ್ಮೀಯವಾಗಿ ಕಾಣುವ ಜೀವಿ. ಹುಟ್ಟುವ ಮೊದಲೇ ನಮ್ಮ ಬಗ್ಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 46): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ವಿಶ್ವದಲ್ಲಿ ಉದ್ಭವಿಸಬಹುದಾದ ವಾಣಿಜ್ಯ ವಿವಾದಗಳನ್ನು ನಿವಾರಿಸಲು ಸ್ಥಾಪಕವಾದ ಸಂಸ್ಥೆ ಯಾವುದು? ೨.    ಮೋಹಿನಿಯಟ್ಟಂ ಇದು ಯಾವ ರಾಜ್ಯಕ್ಕೆ ಸಂಬಂಧಿಸಿದ ನೃತ್ಯ ಶೈಲಿಯಾಗಿದೆ? ೩.    ನಳ ಸರೋವರ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ? ೪.    ನೇಪಾಳದ ಕಠ್ಮಂಡು ನಗರದಲ್ಲಿರುವ ಹಿಂದುಗಳ ಪ್ರಸಿದ್ಧ ದೇವಾಲಯ ಯಾವುದು? ೫.    ಭಾರತದ ರಾಷ್ಟ್ರ ಧ್ವಜಕ್ಕೆ ಬಳಸುವ ಬಟ್ಟೆ ಯಾವುದು? ೬.    ನಾಯಿಕೆಮ್ಮು ರೋಗಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ ಯಾವುದು? ೭.    ಚಿಕ್ಕಮಗಳೂರು ಮಂಗಳೂರು ನಡುವೆ ಬರುವ ಕಣಿವೆ ಮಾರ್ಗ ಯಾವುದು? ೮.    ಭಾರತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನಸು ಜಿಜ್ಞಾಸೆಗಳ ಹುತ್ತ: ಹೃದಯಶಿವ

'ಈ ಹಾಡನ್ನು ಬೇರೆ ಯಾರಿಂದಲಾದರೂ ಬರೆಸಿಬಿಡಿ ಪ್ಲೀಸ್, ನನ್ನಿಂದ ಸಾಧ್ಯವಾಗುತ್ತಿಲ್ಲ' ಎಂದು ಶ್ರೀನಗರ ಕಿಟ್ಟಿ ಅಭಿನಯಿಸುತ್ತಿರುವ ಚಿತ್ರವೊಂದರ ಸಂಗೀತ ನಿರ್ದೇಶಕರೊಬ್ಬರಿಗೆ ನಾನು ತಿಳಿಸಿದಾಗ ನಿನ್ನೆ ಸಂಜೆಯ ಗಡಿ ದಾಟಿ ರಾತ್ರಿ ಆವರಿಸಿತ್ತು. ಇಷ್ಟಕ್ಕೂ ಇತ್ತೀಚಿಗೆ ನನ್ನ ಆರೋಗ್ಯ ಆಗಾಗ ಕೈ ಕೊಡುತ್ತಿರುತ್ತದೆ. ನಾನು ಲವಲವಿಕೆಯಿಂದಿರಲು ಎಷ್ಟೇ ಪ್ರಯತ್ನಿಸಿದರೂ ಜ್ವರ, ಶೀತ, ಕೆಮ್ಮು, ಮೈ ನೋವು ಅಡ್ಡಿಯುಂಟುಮಾಡುತ್ತವೆ. ಅಲ್ಲದೆ ಕಳೆದ ವಾರ ಪೂರ್ತಿ ಬಿಡುವಿಲ್ಲದೆ ಬರೆದಿದ್ದೆ. ಸಮಯಕ್ಕೆ ಸರಿಯಾಗಿ ಊಟ, ನಿದ್ರೆ, ವಿಶ್ರಾಂತಿ ಇರಲಿಲ್ಲ. ಅದು ನೆಪವಾದರೂ ಸದಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಲ್ಲೋ ಹುಡುಕಿದೆ ಇಲ್ಲದ ದೇವರ: ಹನುಮಂತ ಹಾಲಿಗೇರಿ ಬರೆದ ಕತೆ

ಊರಾಗ ಸಿಕ್ಕಾಪಟ್ಟಿ ಮಳೆಯಾಗಿ ಎಲ್ಲ ಮನೆ ಬಿದ್ದಾವು. ನಮ್ಮ ಮನಿನೂ ಸೊರಾಕ ಹತೈತಿ. ಈ ಸಲ ಊರಿಗೆ ಬಂದು ಹೋಗಪಾ ಎಂದು ಅವ್ವ ಹೇಳಿದ್ದು ನೆನಪಾಗಿ ಈ ಸಲ ಹಬ್ಬದ ಸೂಟಿ ಉಪಯೋಗ ಮಾಡಿಕೊಳ್ಳುವುದಕ್ಕೋಸ್ಕರವಾದರೂ ಊರಿಗೆ ಹೋಗಲೇ ಬೇಕೆನಿಸಿದ್ದರಿಂದ ರಾತ್ರಿ ಕೆಲಸ ಮುಗಿದ ಮೇಲೆ ನೇರವಾಗಿ ರೂಮಿಗೆ ಹೋಗಿ ಒಂದೆರಡು ಪ್ಯಾಂಟು-ಶರಟುಗಳನ್ನು ಬ್ಯಾಗಿಗೆ ತುರುಕಿಕೊಂಡು ಬಸ್ಸು ಹತ್ತಿದೆ.  ಬೆಳಗ್ಗೆ ಬಸ್ ಇಳಿದಾಗ ಬಸ್ ನಿಲ್ದಾಣದ ಛಾವಣಿಯೊಳಗ ಮತ್ತು ರಡ್ಡೆರ ಕಾಂಪ್ಲೆಕ್ಸ್‌ನೊಳಗ ಊರ ಜನ ಅನ್ನ ಬೇಯಿಸಿಕೊಳ್ಳುತ್ತಿದ್ದುದು ಕಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂಕಪ್ರೇಮ:ಅನಿತಾ ನರೇಶ್ ಮಂಚಿ ಅಂಕಣ

ಮನುಷ್ಯ ಕೂಡಾ ಪ್ರಾಣಿಗಳ ಕೆಟಗರಿಗೆ ಸೇರುತ್ತಾನಾದರೂ ತಾನು ಅವರಿಂದ ಮೇಲೆ ಎಂಬ ಗರಿಯನ್ನು ತಲೆಯ ಮೇಲೆ ಇಟ್ಟುಕೊಂಡೇ ಹುಟ್ಟಿ ಬರುತ್ತಾನೆ. ತಾನು ಎಲ್ಲಾ ಪ್ರಾಣಿಗಳನ್ನು ನನ್ನ ತಾಳಕ್ಕೆ ಕುಣಿಸಬಲ್ಲೆ ಎಂಬ ಹಮ್ಮು ಅವನದ್ದು. ಹಲವು ಬಾರಿ ಇದು ಸತ್ಯ ಎನ್ನಿಸಿದರೂ ಅವುಗಳೂ ಕೂಡಾ  ಬುದ್ಧಿವಂತಿಕೆಯಲ್ಲಿ ನಮ್ಮಿಂದ ಕಡಿಮೆಯಿಲ್ಲ ಎಂಬುದೇ ಪರಮಸತ್ಯ. ಇದಕ್ಕೆ ಹಲವು ನಿದರ್ಶನಗಳು ಅವುಗಳ ಒಡನಾಟವನ್ನಿಟ್ಟುಕೊಂಡವರ ನಿತ್ಯದ ಬದುಕಿನಲ್ಲಿ ಸಿಕ್ಕೇ ಸಿಗುತ್ತವೆ. ಇದರಲ್ಲಿ ಕೆಲವೊಂದು ನಗು ತರಿಸಿದರೆ ಇನ್ನು ಕೆಲವು ಪೇಚಿಗೆ ಸಿಕ್ಕಿಸುತ್ತವೆ.  ನಮ್ಮ ಮನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾಜಿಕ ಕ್ರಾಂತಿಯ ಹರಿಕಾರ ಶ್ರೀ ನಾರಾಯಣ ಗುರು:ಅಶೋಕ್ ಕುಮಾರ್ ವಳದೂರು

"ಒಂದೇ ಜಾತಿ, ಒಂದೇ ಧರ್ಮ,ಒಬ್ಬನೇ ದೇವರು" ಎಂದು ಮನುಕುಲ ಕುಟುಂಬಕ್ಕೆ ಸಾರಿ ವಿಶ್ವ ಮಾನವ ಸಂದೇಶವನ್ನು ಕೇರಳದಿಂದ ಪ್ರಾರಂಭ ಮಾಡಿ ದೇಶದೆಲ್ಲೆಡೆ ಹಬ್ಬಿಸಿದ ಮಹಾನ್ ಸಂತ ಶ್ರೀ ನಾರಾಯಣ ಸ್ವಾಮಿ. "ಯಾರನ್ನೂ ದ್ವೇಷಿಸ ಬೇಡಿ, ಸಂಘಟನೆಯಿಂದ, ಶಿಕ್ಷಣದಿಂದ, ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ದೇಶದ ಉನ್ನತಿಯನ್ನು ಸಾಧಿಸೋಣ" ಎಂದು ಒಂದು ಶತಮಾನಗಳ ಹಿಂದೆ ಈ ಜನಕ್ಕೆ ಸಾರಿದ ಗುರು ನಾರಾಯಣರ ಸಂದೇಶವು ವಾಸ್ತವದ ಅರ್ಥವನ್ನು ಪಡೆಯುವುದು ನಾವು ಕಾಣುತ್ತೇವೆ. ಹದಿನೆಂಟು ಹತ್ತೊಂಭತ್ತನೆಯ ಶತಮಾನಗಳು ಈ ನಾಡಿನಲ್ಲಿ ಐರೋಪ್ಯರು ವಸಾಹತುಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರತಿಮೆಗಳ ಮೂಲಕ ಹೊಸ ಲೋಕಕ್ಕೆ ಸವಾರಿ ಹೊರಟ ಕವಿತೆಗಳು: ಶ್ರೀದೇವಿ ಕೆರೆಮನೆ

ನಿನ್ನ ಕವನಗಳು ಓದುಗರನ್ನು ಬೆಚ್ಚಿ ಬೀಳಿಸದಿದ್ದರೆ ಅವುಗಳಿಂದೇನು ಪ್ರಯೋಜನ ಬೋದಿಲೇರ್ ಹೇಳಿದ ಮಾತುಗಳನ್ನು  ನೆನಪಿಸಲೆಂದೇ ಹೊಸದೊಂದು ಕವನ ಸಂಕಲನ ಹೊರಬಂದಿದೆ. ನಾನು ಪದೇ ಪದೇ ಬೋದಿಲೇರ್ ಎಂದೇ ಕರೆಯುವ ಗೆಳೆಯ ವಿ. ಆರ್ ಕಾರ್ಪೆಂಟರ್ ಕವನ ಸಂಕಲನ ಹೊರಬಂದಿದೆ. ಕವನ ಸಂಕಲನದ ಮೊದಲ ಓದುಗಳಾಗಿ ನಾನೀಗಾಗಲೇ ನನ್ನ ಅನುಭವವನ್ನು ದಾಖಲಿಸಿದ್ದಾಗ್ಯೂ ಕೂಡ ಕಂಪ್ಯೂಟರ್ ಪರದೆಯಲ್ಲಿ ಇಣುಕಿಣುಕಿ ಓದುವುದಕ್ಕೂ, ಕೈಯ್ಯಲ್ಲಿಯೇ ಪುಸ್ತಕ ಹಿಡಿದು ಓದುವ ಸುಖಕ್ಕೂ  ಇರುವ ವತ್ಯಾಸ ಅಗಾಧವಾದದ್ದು. ಹೀಗಾಗಿ ಈಗಿನ ಅನುಭವಗಳು ಮತ್ತೂ ಭಿನ್ನವಾಗಿಯೇ ಇದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ