ಕನ್ನಡಾಭಿಮಾನಿಗಳ ನಾಡಗೀತೆಗಳು: ಎಸ್. ರೋಹಿಣಿ ಶರ್ಮಾ

ಸರಿ ಸುಮಾರು ಎರಡೂವರೆ ಸಾವಿರ ವರ್ಷಗಳ ಸಾಂಸ್ಕೃತಿಕ ಇತಿಹಾಸ ಹೊಂದಿರುವ ಈ ಕನ್ನಡ ನಾಡು ಸಾಹಿತ್ಯ-ಸಂಸ್ಕೃತಿ-ಸಂಗೀತ- ವೇಷಭೂಷಣ-ಭೌಗೋಳಿಕ ಹಿನ್ನೆಲೆ ಮುಂತಾದ ವಿಶೇಷಗಳಿಂದ ಕೂಡಿವೆ. ಶಾತವಾಹನ, ಗಂಗ, ಕದಂಬ, ಚಾಲುಕ್ಯ, ಹೊಯ್ಸಳ ಮೊದಲಾದ ರಾಜವಂಶದವರು ಸಮರ್ಥವಾಗಿ ಆಳಿದ್ದಲ್ಲದೆ ತಮ್ಮ ಕೀರ್ತಿಪತಾಕೆಯನ್ನು ಸುವರ್ಣಾಕ್ಷರಗಳಿಂದ ದಾಖಲಿಸಿದ್ದಾರೆ. ಪಂಪ, ರನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸ ಮೊದಲಾದವರು ಕನ್ನಡ ನಾಡಿನಲ್ಲಿ ಅಕ್ಷರಕ್ರಾಂತಿಯನ್ನು ಹರಡಿದವರು. ಬೇಲೂರು, ಹಳೇಬೀಡು, ಪಟ್ಟದಕಲ್ಲು, ಹಂಪಿ, ಬಾದಾಮಿ, ಐಹೊಳೆ ಮುಂತಾದ ಶಿಲ್ಪಕಲೆಗಳು ಇಂದಿಗೂ ತಮ್ಮ ಗತವೈಭವಕ್ಕೆ ಸಾಕ್ಷಿಗಳಾಗಿವೆ. ಇವೆಲ್ಲಕ್ಕಿಂತಲೂ ನಮ್ಮ ಪ್ರಾಚೀನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವನಗಳು: ಇಂದು ಶ್ರೀನಿವಾಸ್

ಸಣ್ಣ ಭರವಸೆಗಳು ಸಾಕಲ್ಲವೇ ಬದುಕಿಗೆ… ..1..ಕೆಟ್ಟ ಆಲೋಚನೆಗಳೆಲ್ಲ ಜರ್ರನೆವಿಷದಂತೆದೇಹವೇರಿ ಕುಸಿದು ಬೀಳುವ ಮುನ್ನ..ಸಣ್ಣ ದೊಂದು ಪ್ರೀತಿಯ ಮಾತಿನ ಚಿಕಿತ್ಸೆ ದೊರೆತರೆ ಸಾಕಲ್ಲವೇ.?ಮರುಹುಟ್ಟಿಗೆ !!2..ಚಂಡಮಾರುತ ಬಿರುಗಾಳಿಯೆದ್ದುಹಡುಗು ಮುಳುಗಿಯೇ ಬಿಟ್ಟಿತು ಎನ್ನುವಾಗ.ಸಣ್ಣದೊಂದು ತುಂಡಿನ ಆಸರೆ ಸಾಕಲ್ಲವೇ.?ಮರುಜನ್ಮಕ್ಕೆ..!!3..ಜರಿವ ಮಾತುಗಳ ಇರಿವ ಕಣ್ಣೋಟಗಳ ಧಾಳಿಗೆ ಸೋತ ಅಬಲೆಯೊಂದು ಕರುಳುಬಳ್ಳಿಗಳ ಸಮೇತ ಕೆರೆಯಬದಿಗೆ ಬಂದು ನಿಂತಾಗ.!ಸಣ್ಣ ಭರವಸೆಯ ಮನಸೊಂದುಸಿಕ್ಕರೆ ಸಾಕಲ್ಲವೇ..?ಮರುಬದುಕಿಗೆ.!!4..ಸಣ್ಣ ಸಣ್ಣ ಭರವಸೆಗಳೇ ಸಾಕುಬಿಡಿ ಬದುಕ ನಗಿಸಲು.ಬದುಕಿನಖಾಡದಲ್ಲಿ ಸೋತ ಜಗಜಟ್ಟಿಗೂಸಣ್ಣ ಗೆಲುವೊಂದು ಸಾಕುಮತ್ತೆ ಮೀಸೆ ತಿರುವಲು.!!5..ಹೀಗೆ ಸಣ್ಣ ಪ್ರೀತಿ, ಆಸರೆ ಭರವಸೆಗಳೆ ತರುತ್ತವೆಜೀವನದಲ್ಲಿ ಹೊಸ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡ ನಾಡು ನುಡಿ ಸಂಸ್ಕೃತಿಯ ಬೆಳವಣಿಗೆಗೆ ಕನ್ನಡಿಗರಾಗಿ ಕೈಗೊಳ್ಳಬೇಕಾದ ಹತ್ತು ಮಹತ್ವದ ನಿರ್ಧಾರಗಳು: ಶಿವಮೂರ್ತಿ ಹೆಚ್.

ಹೀಗೆ ಪ್ರತಿಯೊಬ್ಬರು ಕನ್ನಡ ನಾಡು ನುಡಿಗಾಗಿ ದೃಢಸಂಕಲ್ಪ ಮಾಡಿದರೆ ಕನ್ನಡ ಭಾಷೆಯ ಪರಿಮಳವು ಜಗತ್ತಿನಾದ್ಯಂತ ಪಸರಿಸಲು ಸಾಧ್ಯ. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ.ಕನ್ನಡವೇ ಸತ್ಯ, ಕನ್ನಡವೇ ನಿತ್ಯ.ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಸಾರ್ವಭೌಮರು. –ಶಿವಮೂರ್ತಿ ಹೆಚ್. ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ದಸರಾ ರಜೆಯ ಮಜದ ಸಮೃಧ್ಧಿ ಪ್ರವಾಸ: ಚಂದ್ರು ಪಿ ಹಾಸನ್

ಮಕ್ಕಳಿಗೆ ರಜೆ ಅಂದ್ರೆ ತುಂಬಾ ಖುಷಿ. ಯಾವ ಮಕ್ಕಳನ್ನು ಕೇಳಿದರೂ ರಜೆ ಬಂದ್ರೆ ಮಜಾ ಮಾಡಬಹುದು, ಎಂಜಾಯ್ ಮಾಡಬಹುದು ಅನ್ನುವ ಉತ್ತರ ಆಗಾಗ ನನ್ನ ಕಿವಿಗೆ ಬೀಳುತ್ತಿತ್ತು.‌‌ ಆದರೆ ಅವರ ದೃಷ್ಠಿಯಲ್ಲಿ ಮಜಾ ಅನ್ನೋದು ಅಂದ್ರೆ ಏನು ಎಂಬ ಪ್ರಶ್ನೆ ನನಗೆ ಆಗಾಗ ಕಾಡುತ್ತಿತ್ತು. ತಿಳಿದುಕೊಳ್ಳಬೇಕೆಂಬ ಕುತೂಹಲದಲ್ಲಿದ್ದಾಗ ದಾರಿಯಲ್ಲಿ ಒಂದೆರಡು ಮಕ್ಕಳು ಹೋಗುತ್ತಿರುವುದನ್ನು ಕಂಡೆ. ಹಾಗೆ ಅವರನ್ನು ಮಾತನಾಡಿಸುತ್ತಾ ಮತ್ತು ಅವರ ವಿದ್ಯಾಭ್ಯಾಸದ ಬಗ್ಗೆ ವಿಚಾರಿಸುತ್ತಾ ತಮ್ಮ ರಜಾ ಅವಧಿಯ ಬಗ್ಗೆ ವಿಚಾರಿಸಿದೆ. ಆಗ ಅವರು ಹೇಳ್ತಾರೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯೇಸುಸ್ವಾಮಿ ಬೆಳ್ಳಗಿದ್ರಾ?: ಎಫ್.ಎಂ.ನಂದಗಾವ

ಅಪ್ಪಾ ಅಪ್ಪಾ, ಯೇಸುಸ್ವಾಮಿ ಮತ್ತ ಅವರ ಅಪ್ಪಾ ಜೋಸೆಫ್ ಮತ್ತು ತಾಯಿ ಮರಿಯಾಮಾತೆ ಬೆಳ್ಳಗಿದ್ರಾ?’’ ಮೂರನೇ ಕ್ಲಾಸಿನಲ್ಲಿ ಓದುತ್ತಿದ್ದ ಮಗ, ಮನೆಗೆ ಬಂದ ಕೂಡಲೇ ಅಪ್ಪನ ಮುಂದೆ ಈ ಪ್ರಶ್ನೆ ಇಟ್ಟಿದ್ದ. ಅಪ್ಪ ಮಾಸ್ಟರ್ ಇನ್ನಾಸಪ್ಪ, ಮುಸಿಪಾಲಟಿಯ ಒಂಬತ್ತನೇ ವಾರ್ಡಿನ ಶಾಲೆಯ ಒಂಬತ್ತನೇ ತರಗತಿಯ ಕೊನೆಯ ಪಿರಿಯಡ್ ನಲ್ಲಿ ಅಬ್ರಹಾಂ ಲಿಂಕನ್ನರ ಬಗ್ಗೆ ಪಾಠ ಮಾಡಿ ಬಂದಿದ್ದ. ಸುಮಾರು ಮೂರು ಶತಮಾನಗಳ ಹಿಂದೆ ಬ್ರಿಟಿಷರ ಆಡಳಿತದಿಂದ ಮುಕ್ತಗೊಂಡ, ಉತ್ತರ ಅಮೆರಿಕದ ವಿವಿಧ ರಾಜ್ಯ (ಸಂಸ್ಥಾನ)ಗಳ ದೇಶ `ಅಮೆರಿಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮಾಯಕ ರಾಮು: ಅಜಯ್ ಕುಮಾರ್ ಎಂ ಗುಂಬಳ್ಳಿ

ರಾಮು ಚೇಷ್ಟೆ ಹುಡುಗನಲ್ಲ. ಹೆದರಿಕೆ ಜಾಸ್ತಿ ಇದ್ದವನು. ತರಗತಿಯಲ್ಲಿ ಯಾರು? ಗಲಾಟೆ ಮಾಡಿದರು ಸುಮ್ಮನಿದ್ದುಬಿಡುವ ಸ್ವಭಾವ. ಅವನೊಟ್ಟಿಗೆ ಯಾವಾಗಲೂ ಕೂರುತ್ತಿದ್ದ ಡೋಲು ಕೆಂಪಣ್ಣನ ಮಗ ಡೂಕ ಪೆದ್ದುತನದ ಹೈದ. ತಾನೇ ಏನಾದರೂ ಮಾಡಿ ಸುಮ್ಮನೆ ಹಲ್ಲು ಕಿರಿಯುತ್ತ ಅವರಿವರ ಹತ್ತಿರ ಬೈಸಿಕೊಳ್ಳುತ್ತಿದ್ದ. ಮೇಷ್ಟರುಗಳಿಂದ ‘ಇವನು ಸ್ಕೂಲಿಗೆ ಬರೋದೆ ದಂಡ’ ಎನಿಸಿಕೊಂಡರೂ ಬರುತ್ತಿದ್ದ. ನೇರವಾಗಿ ‘ನಿಮ್ಮ ಮಗನನ್ನು ಇಸ್ಕೂಲಿಗೆ ಕಳಿಸಬೇಡಿ’ ಎಂದು ಹೇಳುವ ಹಾಗಿರಲಿಲ್ಲ. ಒಂದನೇ ತರಗತಿಯನ್ನು ಎರಡು ಸಲ ಓದಿ ಈಗ ತನಗಿಂತ ಎರಡು ವರ್ಷ ಕಿರಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಕನ್ನಡ ರಾಜ್ಯೋತ್ಸವ” ಕನ್ನಡಿಗರ ಹೃದಯೋತ್ಸವ: ಕಾಡಜ್ಜಿ ಮಂಜುನಾಥ

ಭಾರತದ ಸ್ವಾತಂತ್ರ್ಯದ ನಂತರ ಸಂವಿಧಾನ ರಚನೆಯಾಗಿ ಭಾಷೆಗಳ ಆಧಾರದ ಮೇಲೆ ಅಲ್ಲಲ್ಲಿ ಚದುರಿ ಹೋಗಿದ್ದ ಕನ್ನಡ ನೆಲ, ಜಲ, ಜನರನ್ನು ಒಟ್ಟುಗೂಡಿಸಿ ರಚಿಸಿದ ಸುವರ್ಣ ಘಳಿಗೆ ಪ್ರತಿವರ್ಷ ನವೆಂಬರ್ ೧ ರಂದು ಕರ್ನಾಟಕ ಅಥವಾ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ೧೯೫೬ ರ ನವೆಂಬರ್ ೧ ರಂದು ಮೈಸೂರು ರಾಜ್ಯ ಉದಯವಾದ ಮರೆಯಲಾಗದ ದಿನವಾಗಿದೆ. ಕನ್ನಡಿಗರ ಅಸ್ಮಿತೆಗಾಗಿ ಅನೇಕ ಮಹನೀಯರು ಹೋರಾಟ ಮಾಡುವ ಮೂಲಕ ಕನ್ನಡ ನುಡಿಗೆ ಶಕ್ತಿ ತುಂಬುವ ಕೆಲಸ ಮಾಡುವ ಮೂಲಕ ಕರ್ನಾಟಕದ ಏಕೀಕರಣಕ್ಕೆ ಶ್ರಮಿಸಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾವಾಂತರಂಗದ ಓಲೆ…: ಮಾಂತೇಶ ಗೂಳಪ್ಪ ಅಕ್ಕೂರ

ನನ್ನ ಪ್ರಿಯತಮೆ ಚಿ. ಸೌ. ಕಣ್ಮಣಿ ನನ್ನ ಹಿಂದೆ ಮುಂದೆ ಹೆಜ್ಜೆ ಹಾಕಿ ಹೋದವರು ಹಲವರು, ಆದರೆ ನನ್ನ ಎದೆಯಲ್ಲಿ ಛಾಪು ಮೂಡಿಸಿದ್ದು ಮಾತ್ರ ನಿನ್ನ ಹೆಜ್ಜೆಯ ಗುರುತುಗಳೇ. ಆ ಗುರುತಿನ ಪಡಿತರ ಚೀಟಿಯನ್ನು ಹಿಡಿದು, ಪ್ರೀತಿ ನ್ಯಾಯ ಬೆಲೆ ಅಂಗಡಿಯ ಮುಂದೆ ಕ್ಯೂ ನಿಂತಿರುವೆ. ನಿನ್ನ ಒಲವು ರಿಯಾಯಿತಿ ದರದಲ್ಲಿ ಸಿಗುವ ಭರವಸೆಯೊಂದಿಗೆ.ನಿನ್ನ ಒಲವನು ತೂಗಿ ಕೊಡು ಗೆಳತಿ! ನನಗೇನು ಬೇಸರವಿಲ್ಲ ನೀ ಕೊಟ್ಟ ಅಷ್ಟೂ, ಇಷ್ಟು ಒಲವ ಕೆಲುವು ದಿನಗಳಿಗೆ ಮಾತ್ರ ಉಳಿಸಿಕೊಳ್ಳದೆ ; … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತವಾ ಪುಲಾವಿನ ತವಕ: ತೇಜಸ್‌ ಎಚ್‌ ಬಾಡಾಲ

ಮನುಷ್ಯನನ್ನು ಗೆಲ್ಲುವ ಪರಿ ಹಲವು. ಅದರಲ್ಲಿ ಪ್ರಮುಖವೂ ಸುಲಭವೂ ಆದ ಪರಿಯು ಅವನ ಉದರ. ಎಲ್ಲಾರು ಮಾಡುವುದು ಹೊಟ್ಟೆಗಾಗಿ ಎಂದು ದಾಸರು ಹೇಳಿರುವುದು ಸುಮ್ಮನೇಯೆ? ಹೊಟ್ಟೆಯ ಮೇಲೆ ಹೊಡೆಯುವುದು, ತಟ್ಟೆಗೆ ಮಣ್ಣು ಹಾಕುವುದು, ಉಪ್ಪು ತಿಂದ ಮನೆಗೆ ಎರಡು ಬಗೆಯುವುದು, ಎಷ್ಟೆಲ್ಲಾ ಗಾದೆಗಳೂ, ಗುಣಗಳೂ ಕೇವಲ ಊಟ, ನಾಲಗೆ ಇವುಗಳ ಸುತ್ತವೇ ತಿರುಗುತ್ತಿದೆ! ಹಾಗಾಗಿಯೇ ಮನುಷ್ಯನು ಹುಟ್ಟಿದ್ದು ಮೋಕ್ಷ ಸಾಧನೆಗಾಗಿ ಆದರೆ, ಅವನು ಬದುಕುತ್ತಿರುವುದು ಮಾತ್ರ ಊಟದ ಕೃಪೆಯಿಂದಾಗಿ. ಅಮ್ಮನ ಅಡುಗೆಯನ್ನು ತಿಂದು ಅದನ್ನು ಹೊಗಳುವುದೂ, ವಿಮರ್ಶಿಸುವುದೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗುಟಖಾ ಅವಾಂತರ: ನಾಗರಾಜನಾಯಕ ಡಿ ಡೊಳ್ಳಿನ

ಗುಟಖಾ . . ಗುಟಖಾ . . ಗುಟಖಾ . . ಎಲ್ಲೆಲ್ಲೂ ನೀನೆ ಎಲ್ಲೆಲ್ಲೂ ನೀನೆ ಅನ್ನುವಂಗ ಈ ಗುಟಖಾದ ಅವಾಂತರದಿಂದ ಸಾಕಾಗಿಹೋಗೇತಿ ನೋಡರಿ. ಗುಟಖಾ ಬಗ್ಗೆ ಹೆಂಗ ಪ್ರಾರಂಭಿಸಬೇಕು ಅನ್ನೋ ಮಾತೇ ಇಲ್ಲ, ಯಾಕಂದ್ರ ಗುಟಖಾ ಬೆಳಿಗ್ಗೆ ಎದ್ದು ಅಂಗಳ ಕಸ ಹೊಡೆಯುವಾಗ, ವಿಧ ವಿಧದ ವರ್ಣದ ಗುಟಖಾ ಚೀಟಗಳು ಮನೆ ಮುಂದಿನ ರಸ್ತೆಯಲ್ಲಿ ಬಿದ್ದಿರುತ್ತವೆ. ಕೆಲ ಪ್ಯಾಕೆಟುಗಳು ಕಡ್ಡಿಬಾರಿಗೆಲೆ ಎಷ್ಟು ಅಂದ್ರು ಹೋಗಲಾರದೆ ಕಿರಿಕಿರಿಮಾಡಿದಾಗ, ಕೊನೆಗೆ ಕೈಯಿಂದ ಗುಡಿಸಿ ರಸ್ತೆಯ ಒಂದು ಬದಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇದು ಕತೆಗಳ ಕಾಲವಯ್ಯಾ..: ಸಂಜಯ್ ಚಿತ್ರದುರ್ಗ

” ಬರೀ ಬರವಣಿಗೆಯಿಂದ ಬದುಕು ಕಟ್ಟಿಕೊಳ್ಳೊಕೆ ಸಾಧ್ಯವಿಲ್ಲ ” ಎಂದಿದ್ದ ಸಾಹಿತಿ ಏನಾದರೂ ಇವತ್ತು ಬದ್ಕಿದ್ರೆ ಮೂಗಿನ ಮೇಲೆ ಬೆರಳಿಟ್ಟುಕೊಂಡು ” ಹೌದೇನ್ರಿ. ಒಂದು ಕತೆಗೆ ಐವತ್ತು ಸಾವ್ರ ಬಹುಮಾನ ಕೊಡ್ತಾರಾ.. ಏನು ಲಕ್ಷ ರೂಪಾಯಿಯ ಸ್ಪರ್ಧೆ..! ಅದೂ ಬರೀ ಕಥಾ ಸ್ಪರ್ಧೆನಾ.. ಕಾಲ ಬದಲಾಗಿ ಬಿಡ್ತುಬಿಡಿ.. ನಮ್ ಕಾಲದಲ್ಲಿ ವರ್ಷಾನುಗಟ್ಟಲೆ ಅಧ್ಯಯನ ಮಾಡಿ, ಹಗಲು ರಾತ್ರಿ ಕೂತ್ಕೊಂಡು ಒಂದು ರಾಶಿ ಹಾಳೆ ತುಂಬಾ ಗೀಚಿ ಕೊನೆಗೆ ಅದ್ನ ಹಿಡ್ಕೊಂಡು ನೂರಾರು ಪ್ರಕಾಶನ ಅಲೆದು ಕೊನೆಗೂ ಯಾರೊ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ನುಡಿ ಸಿರಿ ಕನ್ನಡವೇ ಶಕ್ತಿ ಕನ್ನಡವೇ ಯುಕ್ತಿಕನ್ನಡವೇ ದೇವರಿಲ್ಲಿ ಕನ್ನಡವೇ ಭಕ್ತಿ..! ಚಂದದಾ ಚಂದನವುಕನ್ನಡಿಗರ ಮನಸು‘ಛಂದ’ದಾ ಹಂದರವುಕನ್ನಡದಲೆ ರಮಿಸು..! ಸಕ್ಕರೆಗು ಸಿಹಿ ನೀಡೋನುಡಿಯಂತೆ ನಾಡುಅಕ್ಕರೆಗು ಮುದ ನೀಡೋಅಚ್ಚರಿಯ ನೀನಾಡು..! ಸ್ವರ್ಗದಾ ಸಾಂಗತ್ಯ ,ಖುಷಿಯಿಂದ ಕುಣಿದಾಡುಬೇರೇನಿಲ್ಲ ಕನ್ನಡವನೆತೆರಿಗೆಯಾಗಿ ನೀಡು..! ತುಟಿತೆರೆದರೆ ಉಲಿದಂತೆಬಂಗಾರದ ವೀಣೆಗರಿಬಿಚ್ಚಿದ ನವಿಲಂತೆಅಕ್ಷರದ ಜೋಡಣೆ..! ಇಲ್ಲಿ ಜನಿಸಿದ್ದೆ ಪುಣ್ಯವುನನ್ನವ್ವ ನಿನ್ನಾಣೆನೆಮ್ಮದಿಗೆ, ನಿನ್ನಂತ ಉಪಮೆಯಬೇರೆಲ್ಲೂ ನಾ ಕಾಣೆ..! –ಮನು ಪುರ. ಬಾಲ್ಯ.. ಆ ದಿನಗಳೆಷ್ಟು ಚಂದನಾನಾಗಿನ್ನೂ ಮುಗ್ಧ ಕಂದನಿತ್ಯ ತುಂಬಿ ತುಳುಕುವ ಆನಂದಮರೆಯಾದ ನೆನಪು ಗಾಯದಗುರುತಿನಿಂದ.. ಜೇನಿನಂತಹ ಮಧುರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮ್ಮಾ ನಾನು ಶಾಲೆಗೆ ಹೋಗಲ್ಲ!: ಪರಮೇಶ್ವರಿ ಭಟ್

ನಾಲ್ಕು ವರ್ಷದ ವಿಭಾ ಶಾಲೆಯಿಂದ ಬರುವಾಗ ಸಪ್ಪಗಿದ್ದಳು. ಅವಳ ತಾಯಿ ರಮ್ಯ’ ಏನಾಯ್ತು ಪುಟ್ಟ?’ಅಂತ ಕೇಳಿದರೆ ಉತ್ತರಿಸಲಿಲ್ಲ. ಮರುದಿನ ‘ಅಮ್ಮ, ನಾನು ಶಾಲೆಗೆ ಹೋಗಲ್ಲ ‘ಅಂತ ಅಳತೊಡಗಿದಳು‌ . ಏನಾಯ್ತು ಅಂದರೆ ಸುಮ್ಮನೆ ಅಳತೊಡಗಿದಳು. ಆದರೂ ಅವಳನ್ನು ಸ್ನಾನಕ್ಕೆ ಕರಕೊಂಡು ಹೋದಾಗ ತಾಯಿಗೆ ದಿಗಿಲಾಯಿತು. ಅವಳನ್ನು ತಕ್ಷಣ ಡಾಕ್ಟರರಲ್ಲಿ ಕರಕೊಂಡು ಹೋದಳು.ಆಗ ವಿಭಾಳ‌ ಮೇಲೆ ನಡೆದ ಅತ್ಯಾಚಾರ ನಡೆದಿದೆ ಎಂದು ತಿಳಿಯಿತು. ರಮ್ಯಾಳ ರಕ್ತ ಕುದಿಯಿತು. ವಿದ್ಯಾ ದೇಗುಲದಲ್ಲಿ ನೀಚ ಕೃತ್ಯ! ಒಂದಲ್ಲಾ ಒಂದು ಶಾಲೆಯಲ್ಲಿ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದು ಕನಸು: ರಾಜೇಂದ್ರ ಬಿ. ಶೆಟ್ಟಿ.

ಹೀಗೇ ಬಿದ್ದುಕೊಂಡು ಎಷ್ಟು ದಿನಗಳದವು ಎಂದು ನೆನಪಿಲ್ಲ. ಯಾರನ್ನಾದರೂ ದಿನ ಇಲ್ಲವೇ ತಾರೀಕು ಕೇಳಿದರೆ, “ನಿಮಗೆ ಯಾವ ತಾರೀಕಾದರೇನು, ಯಾವ ದಿನವಾದರೂ ಏನು?” ಅನ್ನುವ ಉಡಾಫೆಯ ಉತ್ತರಗಳು. ಎಷ್ಟೋ ಸಲ ಹಗಲು ಯಾವುದು, ರಾತ್ರಿ ಯಾವುದು ಎಂದು ಗೊತ್ತಾಗುತ್ತಿಲ್ಲ. ಕಿಟಕಿ ಬಾಗಿಲುಗಳನ್ನು ಮುಚ್ಚಿದ್ದಾರೆ – ನನ್ನ ನರಳಾಟ ಬೇರೆಯವರಿಗೆ ಕೇಳುವುದು ಬೇಡ ಎಂದು. ಯಾರೋ ನನ್ನನ್ನು ಮೇಲಕ್ಕೆ ಎಳೆಯುತ್ತಿದ್ದಾರೆ. ಸುತ್ತಲೂ ನೀಲ ಆಕಾಶ. ಯಾರೂ ಕಾಣುತ್ತಿಲ್ಲ. ಒಂದು ರೀತಿಯ ಶಾಂತ ಪರಿಸ್ಥಿತಿ. ನಾನು ಸತ್ತಿದ್ದೇನೆಯೇ? ಒಮ್ಮೆಲೇ ಕತ್ತಲು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಮಾಜಮುಖಿ ಕಥಾ ಪುರಸ್ಕಾರ-2024 ಆಹ್ವಾನ

ಸಮಾಜಮುಖಿ ಪ್ರಕಾಶನ ಕನ್ನಡದ ಕಥಾಪರಂಪರೆಗೆ ಅರ್ಥಪೂರ್ಣ ಪ್ರಚೋದನೆ ನೀಡುವ ಉದ್ದೇಶದಿಂದ ‘ಸಮಾಜಮುಖಿ ವಾರ್ಷಿಕ ಕಥಾ ಪುರಸ್ಕಾರ-2024’ ಏರ್ಪಡಿಸಿದೆ. ಸಮಾಜಮುಖಿ ಪುರಸ್ಕಾರಕ್ಕೆ ಆಯ್ಕೆಯಾಗುವ ಐದು ಕಥೆಗಾರರಿಗೆ ತಲಾ ರೂ.5000 ನಗದು ನೀಡಿ ಗೌರವಿಸಲಾಗುವುದು. ಜೊತೆಗೆ ಆಯ್ದ ಹದಿನೈದು ಕಥೆಗಳಿಗೆ ಸಮಾಜಮುಖಿ ವಾರ್ಷಿಕ ಕಥಾ ಸಂಕಲನದಲ್ಲಿ ಅವಕಾಶ ಸಿಗಲಿದೆ. ಕಥೆಗಾರರು 2000 ಪದಮಿತಿಯ, ಯಾವ ಮಾಧ್ಯಮದಲ್ಲೂ ಪ್ರಕಟವಾಗದ, ನುಡಿ/ಯುನಿಕೋಡ್ ಲಿಪಿಯಲ್ಲಿರುವ ಕಥೆಯನ್ನು ವರ್ಡ್ ಕಡತದಲ್ಲಿ 31 ಡಿಸೆಂಬರ್ 2024ರೊಳಗೆ ಕಳುಹಿಸಬೇಕಾದ ಇಮೇಲ್ ವಿಳಾಸ: samajamukhi2017@gmail.com ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುದ್ಧ ಮತ್ತು ಮಕ್ಕಳು: ನಾಗಸಿಂಹ ಜಿ ರಾವ್

ಯುದ್ಧ, ನೈಸರ್ಗಿಕ ವಿಕೋಪ, ಶೋಷಣೆ, ದೌರ್ಜನ್ಯಗಳಿಂದ ಮಕ್ಕಳಿಗೆ ರಕ್ಷಣೆ ಕೊಡಬೇಕೆಂದು ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ ತಿಳಿಸಿದೆ. ವಿಶ್ವಸಂಸ್ಥೆಯ ಈ ಆದೇಶವನ್ನು ಒಪ್ಪಿಕೊಂಡು ಒಡಂಬಡಿಕೆಗೆ ಸಹಿ ಮಾಡಿ ಯುದ್ಧದಲ್ಲಿ ತೊಡಗಿರುವ ರಾಷ್ಟ್ರಗಳ ಮಕ್ಕಳ ಪರಿಸ್ಥಿತಿ ನಿಜಕ್ಕೂ ಶೋಚನೀಯ. ಯುದ್ಧ ಮಾನವನ ಎಲ್ಲಾ ಹಕ್ಕುಗಳನ್ನು ಉಲ್ಲಂಘನೆ ಮಾಡಿ ಮಾನವನ ಘನತೆ ಮತ್ತು ಗೌರವವನ್ನು ಮಣ್ಣುಪಾಲು ಮಾಡುತ್ತದೆ. ಯುದ್ಧದಲ್ಲಿ ಗೆದ್ದೆವು ಎಂದು ಭ್ರಮೆಗೆ ಒಳಗಾಗುವ ರಾಷ್ಟ್ರಗಳು ಹಾಗೂ ಸೋತೆವು ಎಂದು ಪರಿತಪಿಸುವ ರಾಷ್ಟ್ರಗಳು ಚೇತರಿಸಿಕೊಳ್ಳಲು ಹಲವಾರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕ್ಷಮಾ ಕೊನೆಗೂ ನಕ್ಕಳು . . . . . !!!!!: ನಾಗಸಿಂಹ ಜಿ. ರಾವ್

“ಗುರುಗಳೇ. . ಮುಂದಿನ ವಾರದಿಂದ ನಮ್ಮ ಸಂಸ್ಥೆಗೆ ಕಥೆ ಹೇಳೋಕೆ ಬರಬೇಕು. . ಇಲ್ಲಾ ಅನ್ನಬೇಡಿ” ಅಂತ ಫಾದರ್ ಜಾನ್ ಹೇಳಿದಾಗ ಬಹಳ ಖುಷಿಯಾಯ್ತು .“ಮಕ್ಕಳಿಗೆ ಕಥೆ ಹೇಳೋ ಚಾನ್ಸ್ ಬಿಡೋಕೆ ಆಗುತ್ತಾ ಫಾದರ್ ಖಂಡಿತ ಬರ್ತೀನಿ, ಪ್ರತಿದಿನ ಸಂಜೆ ೪-೬ ಸಮಯ ಕೇವಲ ಎರಡು ವಾರ ಓಕೆನಾ? ಅಂದೆ, ಫಾದರ್ ಬಹಳ ಸಂತೋಷದಿಂದ ಒಪ್ಪಿಕೊಂಡರು.ಫಾದರ್ ಜಾನ್ “ಆಸರೆ” ಅನ್ನೂ ಮಕ್ಕಳ ಸಂರಕ್ಷಣಾ ಗೃಹವನ್ನ ಸುಮಾರು ವರುಷಗಳಿಂದ ನಡೆಸಿಕೊಂಡು ಬರ್ತಿದಾರೆ. ಅವರ ಸಂಸ್ಥೆಗೆ ಮಕ್ಕಳ ರಕ್ಷಣಾ ನೀತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾತಿನ ಮಾತು: ಡಾ. ಮಸಿಯಣ್ಣ ಆರನಕಟ್ಟೆ.

“ನೀಲಕುರಿಂಜಿ” ಅರೇ, ಅದೆಂತಹ ಮುದ್ದಾದ ಹೆಸರು. ಒಂದು ಕ್ಷಣ ಮನಸ್ಸಿನ ಮಾದಕತೆಯಲ್ಲಿ ಕರಗುವುದಂತೂ ಖಂಡಿತ. ಈ ನೀಲಕುರಿಂಜಿ ಅನ್ನುವ ಹೆಸರನ್ನು ಕೇಳಿದ್ದು ಕಾಲೇಜಿನಲ್ಲಿ ಜನಾರ್ಧನ್ ಮೇಷ್ಟ್ರು ಜೀವಶಾಸ್ತ್ರ ಪಾಠ ಮಾಡುತ್ತಿರಬೇಕಾದ್ರೆ ಅನ್ನೋ ನೆನಪು ಬ್ಯಾಕ್ ಆಫ್ ಮೈಂಡ್ ಅಲ್ಲಿ ಇದೆ. ‘ಸ್ಟ್ರಾಬಲೆಂತಸ್ ಕುಂತಿಯಾನ ‘ ಇದು ಒಂದು ಹೂ ಪಶ್ಚಿಮ ಘಟ್ಟಗಳಲ್ಲಿ ಬೆಳೆಯುತ್ತೆ; ವಿಶೇಷ ಏನಂದ್ರೆ ೧೨ ವರ್ಷಕ್ಕೆ ಒಮ್ಮೆ ಅರಳುತ್ತೆ ಜೊತೆಗೆ ಬಿದಿರಿನ ವಿಶೇಷತೆ ಬಗ್ಗೆಯೂ ಒಂದಷ್ಟು ತರಗತಿಯಲ್ಲಿ ಹೇಳಿದ್ದರು. ನನಗೇಕೆ ಈಗ ನೆನಪಾಗಿದೆ ಅಂದ್ರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಲ್ಲೆಲ್ಲೋ ಓಡುವ ಮನಸೇ….: ಶೀತಲ್ ವನ್ಸರಾಜ್

ಮೊನ್ನೆ ಆಫೀಸಿಗೆ ಹೋಗಲು ಕ್ಯಾಬ್ ಬುಕ್ ಮಾಡ್ತಾ ಇದ್ದೆ. ಯಾಕೋ ಯಾವ ವಾಹನವೂ ಸಿಗುತ್ತಿರಲಿಲ್ಲ. ನಮಗೆಲ್ಲಾ ಗೊತ್ತಿರುವ ವಿಚಾರವೇ, ನಮ್ಮ ರಾಜಧಾನಿಯ ಟ್ರಾಫಿಕ್ ಗೋಳು. ಇಲ್ಲಿ ಅರ್ಧ ಜೀವನ ರೋಡಿನಲ್ಲಿ ಇನ್ನರ್ಧ ವಾಹನಕ್ಕಾಗಿ ಕಾಯುವುದರಲ್ಲಿ ಮುಗಿದು ಹೋಗುತ್ತದೆ ಎಂಬುವುದು. ನಮ್ಮೂರಿನ ಎಲ್ಲಾ ಸಾಮಾನ್ಯರಿಗೂ ಸಾಮಾನ್ಯವಾಗಿ ಹೋಗಿದೆ, ರೋಡಿನಲ್ಲಿ ವ್ಯಯ ಮಾಡಿದ ಸಮಯವನ್ನು ನಿರ್ಲಕ್ಷಿಸುವುದು. ಹೋಗಲಿ ಬಿಡಿ ಈಗ ನೇರ ವಿಚಾರಕ್ಕೆ ಬರುವೆ. ಅಂದು ಕೊನೆಗೂ ನನಗೊಂದು ಕ್ಯಾಬ್ ಸಿಕ್ಕಿತು. ಮರುಭೂಮಿಯಲ್ಲಿ ಸಣ್ಣ ಒರತೆ ಸಿಕ್ಕ ಸಂತೋಷ ನನಗೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇವರ ಜಪವೆನ್ನುವ ಜಿಪಿಎಸ್: ರೂಪ ಮಂಜುನಾಥ, ಹೊಳೆನರಸೀಪುರ.

ಸಜ್ಜನರ ಸಹವಾಸ ಯಾವಾಗಲೂ ನಮ್ಮನ್ನ ಉಚ್ಚ ವಿಚಾರಗಳನ್ನು ಯೋಚನೆ ಮಾಡಲು ಪ್ರೇರೇಪಿಸುತ್ತವೆ. ಹಾಗೇ ಹೆಚ್ಚೆಚ್ಚು ಜ್ಞಾನ ಸಂಪಾದನೆಯ ಉಪಾಯಕ್ಕೆ ಹಚ್ಚುತ್ತವೆ ಎನ್ನುವುದು ಬಹಳ ಜನರ ಅನುಭವಕ್ಕೆ ಬಂದಿರುತ್ತದೆ. ಇದೇ ರೀತಿ, ಯಾವ ಜನ್ಮದ ಪುಣ್ಯವೋ ಎನುವಂತೆ ನನಗೂ ಹಲವಾರು ಸಜ್ಜನರು, ಸುಜ್ಞಾನಿಗಳು ಹಾಗೂ ಹಿತ ಕೋರುವವರು, ನನ್ನ ತಿಳುವಳಿಕೆಯನ್ನು ಸದುಪಯೋಗ ಪಡಿಸಿಕೊಳ್ಳಬಹುದಾದ ಯುಕ್ತಿಗಳನ್ನು ತಿಳಿಸುವ ಗುರುಗಳ ಸ್ಥಾನದಲ್ಲಿರುವ ಸನ್ಮಿತ್ರರ ಪರಿಚಯ ಆಗಿದೆ. ಅದು ನನ್ನ ಸೌಭಾಗ್ಯವೇ ಸರಿ. ನಮ್ಮದೇ ಊರಿನ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಪ್ರೊಫೆಸರ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಲ್ಕು ಕವಿತೆಗಳು: ವಾಣಿ ಭಂಡಾರಿ

ಗಾಳಿ ಮಾತು ಭೂತ ವರ್ತಮಾನವನ್ನುಒಮ್ಮೆ ಬಾಚಿ ಆಲಂಗಿಸಿದರೆ,,,ಅಳುವಿನ ಸಾಗರವೇ ಬಾಳುಎನಿಸದೆ ಇರದು!.ಭಾವನೆಗಳೇ ಸತ್ತ ಮೇಲೆಬದುಕು ಬಯಲೇ ತಾನೆ? ಚಿಗುರೊಡೆಯಲು ಅಲ್ಲೇನುಇದ್ದಂತಿರಲಿಲ್ಲ,,,ಸಪಾಸಪಾಟದ ಒಡಲತುಂಬಾ ಕಲ್ಲು ಮುಳ್ಳುಗಳೇ,,ಚುಚ್ಚಿದ್ದೊ ಎಷ್ಟೊ ,,ಕಣ್ಣೀರು ಕೋಡಿ ಹರಿದಿದ್ದು ಎಷ್ಟೊ ಬಲ್ಲವರಾರು!ಒಳಗೊಳಗೆ ಹರಿದ ಕಂಬನಿಗೆಇಂತದ್ದೆ ಕಾರಣ ಬೇಕಿರಲಿಲ್ಲ!!. ಒಳಗೆ ಕುದ್ದ ಭಾವ ಕಾವಿನಲಿಆವಿಯಾಗಿ ಕಣ್ಣ ಹನಿಯಂತೆಆಗಾಗ ಹೊರಬರುತ್ತಿತ್ತಷ್ಟೆ.ಎಷ್ಟಾದರೂ ಭೂಮಿ ಬಿಸಿಯಾಗಿತಂಪಾಗುವುದು ನಿಸರ್ಗನಿಯಮ ಎಂಬುದೊಂದುತಾತ್ಸಾರ ಮಾತಿದೆ ಎಲ್ಲರಲಿ!. ಹೌದೌದು!,,ಕೆತ್ತುವುದು ಚುಚ್ಚುವುದುಜಪ್ಪುವುದು ಗುಂಡಿ ತೋಡಿಅವರಿಷ್ಟ ಬಂದ ಕಡೆಯೆಲ್ಲ,,,,ಅವರದೆ ಜೊಲ್ಲು ಸುರಿಸಿಕಾಮನಹುಣ್ಣಿಮೆ ಆಚರಿಸುವುದುಅವರೇ ಮಾಡಿಟ್ಟುಕೊಂಡ ಪದ್ದತಿ.ಶತ ಶತಮಾನಗಳಿಂದಲೂನಡೆಯುತ್ತಲೇ ಇದೆ ದರ್ಬಾರು!.ಕೇಳುವವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕವಿತೆ ಸ್ಪರ್ಧೆ

ಪಂಜು ಅಂತರ್ಜಾಲ ಪತ್ರಿಕೆ ವತಿಯಿಂದ ಕವಿತೆ ಸ್ಪರ್ಧೆಗೆ ನಿಮ್ಮ ಕವಿತೆಯನ್ನು ಆಹ್ವಾನಿಸಲಾಗಿದೆ. ಸೂಚನೆಗಳು:-ಕವಿತೆ ಸ್ವಂತ ರಚನೆಯಾಗಿರಬೇಕು.-ಕವಿತೆ ಯೂನಿಕೋಡ್ ನಲ್ಲಿ ಇದ್ದರೆ ಒಳ್ಳೆಯದು.-ಸ್ಪರ್ಧೆಗೆ ಅಪ್ರಕಟಿತ ಕವಿತೆಯನ್ನು ಮಾತ್ರ ಕಳುಹಿಸಬೇಕು. ಕವಿತೆಯು, ಎಫ್ ಬಿ, ಸೇರಿದಂತೆ ಬೇರೆ ಎಲ್ಲಾದರು ಪ್ರಕಟವಾಗಿದ್ದರೆ ಅಂತಹ ಕವಿತೆಯನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ.-ಬೇರೆಯವರ ಕದ್ದ ಕವಿತೆಯನ್ನು ಕಳುಹಿಸಿದರೆ ಅಂತಹ ಲೇಖಕರನ್ನು ಪಂಜುವಿನ ಬ್ಲಾಕ್ ಲಿಸ್ಟ್ ಗೆ ಹಾಕಲಾಗುವುದು. ಕವಿತೆಯನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಕವಿತೆ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ದೊಡ್ಡಬಸಪ್ಪ ನಾ ಚಳಗೇರಿ

ಅಂಬರದ ಬಯಲೊಳಗೆ ಅಂಬರದ ಬಯಲೊಳಗೆ ಅರಳಿದ್ದ ಮಲ್ಲಿಗೆಯಸತಿ ಮುಡಿಗೆ ನಾನೊಮ್ಮೆ ಮುಡಿಸಲೆಂದುಇರುಳೇಣಿ ಏರೇರಿ ಇರುಳೂರು ನಾ ಸುತ್ತಿತಾರೆಗಳ ಮಲ್ಲಿಗೆಯ ಬನ ಸೇರಿದೆ ಇಳಿಬಿದ್ದ ಮಲ್ಲಿಗೆಯ ಹೂಬಳ್ಳಿ ತುಂಬಿತ್ತುದುಂಡು ಆ ದುಂಡಗಿನ ಮೊಗ್ಗರಳಿಸಿಹಾಲ್ಬಣ್ಣ ಹೂಮಾಲೆ ಇನಿಯಳಿಗೆ ಕಟ್ಟಿಸಲುಚುಕ್ಕಿಗಾಗಿರುಳಲ್ಲಿ ಕೈ ಚಾಚಿದೆ ಶಶಿ ಬೆಳ್ಳಿ ಬುಟ್ಟಿಯಲಿ ಹರಿದಾಕಿ ಹೊತ್ತಂದುಹೂಗಾರ ಮನೆಯೊಳಗ ನಾನಿಳಿಸಿದೆನಗೆಮೊಗದ ಮುತ್ತೈದೆಯ ಮದರಂಗಿ ಕೈಯೊಳಗಸೊಗಸಾಗಿ ಹೆಣೆಸಿದ್ದೆ ಒಂದಾರದಿ ಮುಂಜಾವು ನೀ ಹೆಣೆದು ಇಳಿಬಿಟ್ಟ ಜಡೆಮೇಲೆಮುಡಿ ಮಾಡಿ ಹೋಗೆಂದೆ ರವಿಕಿರಣಕೆಇನಿದಾದ ಮಾತೊಳಗ ಬಳಿ ಬಂದು ಮಾಡೋದಮುಡಿಯೊಳಗ ಮುಡಿಸಿದ್ದೆ ಹೂ ಮಾಲೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಕನಸಿನೊಳಗೊಂದು ಕಣಸು ನಿನ್ನೆ ತಮ್ಮ ಮತ್ತೆಕನಸಿನ ಮನೆಗೆ ಬಂದಿದ್ದನುಹೆಂಡತಿ, ಮಕ್ಕಳನ್ನು ಕರೆದು ತಂದಿದ್ದನುಅವ್ವ, ಕಣ್ಣ ತುಂಬಾ ನೀರು ತುಂಬಿಕೊಂಡು ವಯ್ದು ಕೊಟ್ಟಳು ನಾನು, ಯಾಕೋ ಇಷ್ಟು ದಿನ ಎಲ್ಲಿ ಹೋಗಿದ್ದೆ?ಏನೇನೋ ಪ್ರಶ್ನೆಗಳನ್ನು ಕೇಳುತ್ತಲೇ ಇದ್ದೆಅವನು, ಮುಗಿಲಿಗೆ ಮುಖ ತೋರಿಏನೇನೋ ಉತ್ತರಿಸುತ್ತಿದ್ದಒಂದೂ ಅರ್ಥವಾಗುತ್ತಿರಲಿಲ್ಲ!ಈ ನಡುವೆ ಅವ್ವ,ನನ್ನ ಪ್ರಶ್ನೆಗಳ ನಡವನ್ನೇ ತುಂಡರಿಸಲು ಯತ್ನಿಸುತ್ತಿದ್ದಳುಇರಲಿ ಬಾ, ಒಳಗೆವಾತ್ಸಲ್ಯ ಗುಡ್ಡವೇ ಕರಗಿ ತಮ್ಮನನ್ನು ಒಳಗೆಆಹ್ವಾನಿಸುತ್ತಿದ್ದಳು ತಮ್ಮನ ಕಿರಿ ಮಗನನ್ನು ಎತ್ತಿಕೊಂಡೆನನ್ನ ನೋಡಿ ಒಂದೇ ಸಮನೆ ಆಳುತ್ತಿದ್ದನುಎಲ್ಲೋ ಬಿದ್ದು ಹಣೆ ಒಡೆದುಕೊಂಡಿದ್ದನುಹಿರಿಯ ಮಗನನ್ನು ತೊಡೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಂದಾದೀಪ ಅವರ “ಕಾವ್ಯದರ್ಶಿನಿ”ಯ ಭಾವನಾತ್ಮಕ ದರ್ಶನ: ದೇವೇಂದ್ರ ಕಟ್ಟಿಮನಿ

ಆಕಾಶಕ್ಕೆ ಅಣಕಿಸುವಷ್ಟು ಅನುಭವ ನನಗಿಲ್ಲ.ನಕ್ಷತ್ರಗಳ ತಪ್ಪು ಎಣಿಕೆಯ ತೊದಲು ಪ್ರಯತ್ನ ನಿಂತಿಲ್ಲ.ಇಂದಲ್ಲ ನಾಳೆ, ನಿನ್ನದೆಲ್ಲ ನನ್ನದು ನನ್ನದೆಲ್ಲ ನಿನ್ನದು,ಆಳವಿಲ್ಲದ ಬಾವಿಯಂತೆ ಬರಿ ಮಾತು ನನ್ನದು.ಓದುಗರ ಮಡಿಲಲ್ಲಿ ಓದಿಗಾಗಿ ಮಿಡಿಯುತ್ತಿರುವ ಕವಿಯಿತ್ರಿ ನಂದಾದೀಪ ಅವರ “ಕಾವ್ಯದರ್ಶಿನಿ” ಇದೊಂದು ಬದುಕಿನ ಪ್ರತಿಕ್ಷಣವೂ ಕಾವ್ಯದ ಕಣ್ಣಿನಿಂದ ದಿಟ್ಟಿಸಿ ಸೆರೆಹಿಡಿದ ಭಾವಗಳ ಸಂಗಮವಾಗಿದೆ. ಶ್ರೀ ಯಲ್ಲಪ್ಪ. ಎಂ. ಮರ್ಚೇಡ್ ಇವರ ಸಾರಥ್ಯದ ಶ್ರೀ ಗೌರಿ ಪ್ರಕಾಶನ ರಾಯಚೂರು ಇವರು ಪ್ರಕಟಿಸಿದ ಈ ಕೃತಿ ಸಾಹಿತ್ಯದ ಹಸಿವಿದ್ದವರಿಗೆ ಕಾವ್ಯಗಳ ರಸದೂಟ, ಮೈ ಮನಗಳಿಗೆ ಹೊಸ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಾಮಿ ಆಲದ ಮರದಪ್ಪ: ಎಫ್. ಎಂ. ನಂದಗಾವ

ಚಿಕ್ಕ ಸ್ವಾಮ್ಯಾರು ರಾಯಪ್ಪ ಅವರು ಜ್ವರ ಹಿಡಿದು ಮಲಗಿದ್ದರು. `ನಿನ್ನೆ ರಾತ್ರಿಯವರೆಗೂ ಚೆನ್ನಾಗಿಯೇ ಇದ್ದ ಚಿಕ್ಕ ಸ್ವಾಮ್ಯಾರು ರಾಯಪ್ಪರಿಗೆ ಇಂದು ಬೆಳಿಗ್ಗೆ ಆಗುವಷ್ಟರಲ್ಲಿ ಏನಾಯಿತು?’ ಅಡುಗೆ ಆಳು ಸಿಲ್ವಿಯಾ ಚಿಂತಿಸತೊಡಗಿದ್ದಳು. ಗಂಡ ಉಪದೇಶಿ ಆರೋಗ್ಯಪ್ಪ ಗುಡಿಯಲ್ಲಿ ಪೂಜೆಗೆ ಸಿದ್ಧತೆ ಮಾಡಲು ಹೋದಾಗ, ಅವನ ಹೆಂಡತಿ ಅಡುಗೆ ಆಳು ಸಿಲ್ವಿಯಾ ಕೊಟ್ಟಿಗೆಯನ್ನು ಸ್ವಚ್ಛ ಮಾಡಿ ದನಕರುಗಳಿಗೆ ಹುಲ್ಲು ಹಾಕಿ ಗುರುಗಳ ಮನೆಗೆ ಬಂದಿದ್ದಳು. ಹೊಸದಾಗಿ ತಾಯಿ ಸಂತ ಥೆರೇಸಮ್ಮರ ಗುಡಿ ಮತ್ತು ಪಕ್ಕದಲ್ಲಿ ಗುರುಗಳ ಮನೆಯನ್ನು ಕಟ್ಟಿದಾಗ, ಹಿಂದೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓದ್ರೋ ಮಕ್ಕಳ .. ಓದ್ರೋ…: ನಾಗಸಿಂಹ ಜಿ. ರಾವ್

ಓದ್ರೋ ಮಕ್ಕಳ.. ಓದ್ರೋ… ಅಂತ ಮಕ್ಕಳಿಗೆ ಹೇಳ್ತಿರೋದು ಪಠ್ಯ ಪುಸ್ತಕ ಓದಿ ಅಂತಲ್ಲ, ಕಥೆ, ಕಾದಂಬರಿ, ಜೀವನಚರಿತ್ರೆಗಳನ್ನ ಓದಿ ಅಂತ ಹೇಳ್ತಿರೋದು, ಪಠ್ಯಪುಸ್ತಕ ಬಿಟ್ಟು ಬೇರೆ ಪುಸ್ತಕ ಓದುವ ಅಭ್ಯಾಸ ಮಕ್ಕಳಿಂದ ದೂರ ಆಗ್ತಿದೆ, ಪುಸ್ತಕಗಳು ಮಾನವನ ಗೆಳೆಯರು, ಕಲ್ಪನೆಯ ಬಾಗಿಲು ಹಾಗೆ ಹೀಗೆ ಅಂತ ಹೇಳ್ತಾ ಇದ್ವಿ, ಈಗ ಈ ವಾಕ್ಯಗಳಿಗೆ ಅರ್ಥವೇ ಇಲ್ಲ ಅನ್ನಿಸೋ ತರ ಆಗಿಹೋಗಿದೆ. ಸದಾ ಮೊಬೈಲು, ರೀಲ್ಸ್ ಇದರಲ್ಲಿಯೇ ಮುಳುಗಿಹೋಗ್ತಿದಾರೆ ನಮ್ಮ ಮಕ್ಕಳು. ಮಕ್ಕಳಲ್ಲಿ ಪದ ಸಂಪತ್ತು ಕಡಿಮೆಯಾಗ್ತಿದೆ.. ಎರಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪತ್ರ ರಹಸ್ಯ: ನಾಗಸಿಂಹ ಜಿ. ರಾವ್

, ನಮಸ್ಕಾರ ಮಕ್ಕಳೇ, ನೀವು ಈ ಕಥೆ ಓದೋದಕ್ಕೆ ಶುರು ಮಾಡಿದ್ದೀರಾ ಅಂದ್ರೆ ಮಕ್ಕಳ ಹಕ್ಕುಗಳ ಲೋಕವನ್ನ ಪ್ರವೇಶ ಮಾಡೋಕೆ ಸಿದ್ಧರಾಗಿದೀರಾ ಅಂತ ಅರ್ಥ. ಈ ಕಥೆ ಓದಿದ ಮೇಲೆ ನಿಮ್ಮ ಗೆಳಯರಿಗೆ ಈ ಕಥೆ ಬಗ್ಗೆ ಹೇಳಬೇಕು, ಸರಿನಾ?ಒಂದು ಊರಲ್ಲಿ ಒಂದು ಮಕ್ಕಳ ಸಂರಕ್ಷಣಾ ಗೃಹ ಇತ್ತು. ಏನಪ್ಪಾ ಇದು ಅಂದುಕೊಂಡ್ರಾ? ಮೊದಲು ಅನಾಥಾಲಯ ಅಂತ ಕರೀತಿದ್ವಲ್ಲ ಅದರ ಬದಲಾಗಿ ಮಕ್ಕಳ ಸಂರಕ್ಷಣಾ ಗೃಹ ಅಂತ ಕರಿಬೇಕು, ಅನಾಥ ಮಕ್ಕಳು ಅನ್ನುವ ಬದಲಾಗಿ ರಕ್ಷಣೆ ಪೋಷಣೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೈಗ್ರೇನ್ ಮಾತು !: ಡಾ. ಹೆಚ್ ಎನ್ ಮಂಜುರಾಜ್

‘ಏನೇನೋ ಕುರಿತು ಬರೆಯುತ್ತೀರಿ? ನಿಮ್ಮ ತಲೆನೋವನ್ನು ಕುರಿತು ಬರೆಯಿರಿ!’ ಎಂದರು ನನ್ನ ಸಹೋದ್ಯೋಗಿಯೊಬ್ಬರು. ಸ್ವಲ್ಪ ಹೊತ್ತು ಸುಮ್ಮನಿದ್ದು ಆಮೇಲೆ ಹೇಳಿದೆ: ‘ಏಳೆಂಟು ಅಧ್ಯಾಯಗಳಿರುವ ಇನ್ನೂರು ಪುಟಗಳ ಪುಸ್ತಕವನ್ನೇ ಬರೆದೆ. ಆಮೇಲೆ ನೋವನ್ನು ಹಂಚುವುದು ಸಾಹಿತ್ಯದ ಕೆಲಸವಾಗಬಾರದು ಎಂದು ಹರಿದೆಸೆದೆ!’ ಎಂದೆ. ‘ಹೌದೇ!?’ ಎಂದಚ್ಚರಿಪಟ್ಟರು. ಆಗ ಕವಿ ಬೇಂದ್ರೆ ನೆನಪಾದರು: ‘ಎನ್ನ ಪಾಡೆನಗಿರಲಿ, ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ; ಕಲ್ಲುಸಕ್ಕರೆಯಂಥ ನಿನ್ನೆದೆಯು ಕರಗಿದರೆ ಆ ಸವಿಯ ಹನಿಸು ನನಗೆ’ ಎಂದವರು. ‘ಬೆಂದರೆ ಬೇಂದ್ರೆ ಆದಾರು, ಯಾರು ಬೇಕಾದರೂ’ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ