ಎರಡು ಕವಿತೆಗಳು:ವಿಲ್ಸನ್ ಕಟೀಲ್, ಸಿ.ಮ.ಗುರುಬಸವರಾಜ್ ಇಟ್ಟಿಗಿ
ಮೂರ್ತಿಗಳಿಗೆ ಉಚ್ಚೆ ಉಯ್ಯಬೇಡಿ ಮೂರ್ತಿಗಳಿಗೆ ಉಚ್ಚೆ ಹುಯ್ಯಬೇಡಿ ವಿಚಾರವಾದಿಗಳೆ! ಮೂರ್ತಿಗಳಿಗೆ ಉಚ್ಚೆ ಹುಯ್ಯಬೇಡಿ ಹಸಿದ, ಬಾಯಾರಿದ ಕೋಟಿ ಜನರ ಕಂಬನಿಯನ್ನೂ ಒರೆಸದ ಶುಷ್ಕ ಕೈಗಳಿಂದ ಮಾಡಿಸಿದ ಹಾಲು, ತುಪ್ಪ, ಎಳನೀರಿನ ಅಭಿಶೇಕವೇ ಸಾಕವುಗಳಿಗೆ! ಮೂರ್ತಿಗಳಿಗೆ ಉಚ್ಚೆ ಹುಯ್ಯಬೇಡಿ!! * ಮೂರ್ತಿಗಳಿಗೆ ನೀವು ಬಯ್ಯಬೇಡಿ ವಿಚಾರವಾದಿಗಳೆ! ಮೂರ್ತಿಗಳಿಗೆ ನೀವು ಬಯ್ಯಬೇಡಿ ಕಂದಪದ್ಯದಲ್ಲೂ ಹೊಳೆದ ಹೊಸ ವಿಚಾರವನ್ನು ಓದಿ ಅರ್ಥೈಸಲಾಗದ ಮಂತ್ರ ಪಂಡಿತರ ಬಾಯ್ಗಳಿಂದ ಹೊರಟ ಒಣ ಪಠಣಗಳ ಕಿರಿಕಿರಿಯೇ ಸಾಕವುಗಳಿಗೆ! ಮೂರ್ತಿಗಳಿಗೆ ನೀವು ಬಯ್ಯಬೇಡಿ!! * ಸಾಧ್ಯವಾದರೆ ನಾವೆಲ್ಲಾ … Read more