ಮನಸು ಜಿಜ್ಞಾಸೆಗಳ ಹುತ್ತ: ಹೃದಯಶಿವ

'ಈ ಹಾಡನ್ನು ಬೇರೆ ಯಾರಿಂದಲಾದರೂ ಬರೆಸಿಬಿಡಿ ಪ್ಲೀಸ್, ನನ್ನಿಂದ ಸಾಧ್ಯವಾಗುತ್ತಿಲ್ಲ' ಎಂದು ಶ್ರೀನಗರ ಕಿಟ್ಟಿ ಅಭಿನಯಿಸುತ್ತಿರುವ ಚಿತ್ರವೊಂದರ ಸಂಗೀತ ನಿರ್ದೇಶಕರೊಬ್ಬರಿಗೆ ನಾನು ತಿಳಿಸಿದಾಗ ನಿನ್ನೆ ಸಂಜೆಯ ಗಡಿ ದಾಟಿ ರಾತ್ರಿ ಆವರಿಸಿತ್ತು. ಇಷ್ಟಕ್ಕೂ ಇತ್ತೀಚಿಗೆ ನನ್ನ ಆರೋಗ್ಯ ಆಗಾಗ ಕೈ ಕೊಡುತ್ತಿರುತ್ತದೆ. ನಾನು ಲವಲವಿಕೆಯಿಂದಿರಲು ಎಷ್ಟೇ ಪ್ರಯತ್ನಿಸಿದರೂ ಜ್ವರ, ಶೀತ, ಕೆಮ್ಮು, ಮೈ ನೋವು ಅಡ್ಡಿಯುಂಟುಮಾಡುತ್ತವೆ. ಅಲ್ಲದೆ ಕಳೆದ ವಾರ ಪೂರ್ತಿ ಬಿಡುವಿಲ್ಲದೆ ಬರೆದಿದ್ದೆ. ಸಮಯಕ್ಕೆ ಸರಿಯಾಗಿ ಊಟ, ನಿದ್ರೆ, ವಿಶ್ರಾಂತಿ ಇರಲಿಲ್ಲ. ಅದು ನೆಪವಾದರೂ ಸದಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಲ್ಲೋ ಹುಡುಕಿದೆ ಇಲ್ಲದ ದೇವರ: ಹನುಮಂತ ಹಾಲಿಗೇರಿ ಬರೆದ ಕತೆ

ಊರಾಗ ಸಿಕ್ಕಾಪಟ್ಟಿ ಮಳೆಯಾಗಿ ಎಲ್ಲ ಮನೆ ಬಿದ್ದಾವು. ನಮ್ಮ ಮನಿನೂ ಸೊರಾಕ ಹತೈತಿ. ಈ ಸಲ ಊರಿಗೆ ಬಂದು ಹೋಗಪಾ ಎಂದು ಅವ್ವ ಹೇಳಿದ್ದು ನೆನಪಾಗಿ ಈ ಸಲ ಹಬ್ಬದ ಸೂಟಿ ಉಪಯೋಗ ಮಾಡಿಕೊಳ್ಳುವುದಕ್ಕೋಸ್ಕರವಾದರೂ ಊರಿಗೆ ಹೋಗಲೇ ಬೇಕೆನಿಸಿದ್ದರಿಂದ ರಾತ್ರಿ ಕೆಲಸ ಮುಗಿದ ಮೇಲೆ ನೇರವಾಗಿ ರೂಮಿಗೆ ಹೋಗಿ ಒಂದೆರಡು ಪ್ಯಾಂಟು-ಶರಟುಗಳನ್ನು ಬ್ಯಾಗಿಗೆ ತುರುಕಿಕೊಂಡು ಬಸ್ಸು ಹತ್ತಿದೆ.  ಬೆಳಗ್ಗೆ ಬಸ್ ಇಳಿದಾಗ ಬಸ್ ನಿಲ್ದಾಣದ ಛಾವಣಿಯೊಳಗ ಮತ್ತು ರಡ್ಡೆರ ಕಾಂಪ್ಲೆಕ್ಸ್‌ನೊಳಗ ಊರ ಜನ ಅನ್ನ ಬೇಯಿಸಿಕೊಳ್ಳುತ್ತಿದ್ದುದು ಕಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂಕಪ್ರೇಮ:ಅನಿತಾ ನರೇಶ್ ಮಂಚಿ ಅಂಕಣ

ಮನುಷ್ಯ ಕೂಡಾ ಪ್ರಾಣಿಗಳ ಕೆಟಗರಿಗೆ ಸೇರುತ್ತಾನಾದರೂ ತಾನು ಅವರಿಂದ ಮೇಲೆ ಎಂಬ ಗರಿಯನ್ನು ತಲೆಯ ಮೇಲೆ ಇಟ್ಟುಕೊಂಡೇ ಹುಟ್ಟಿ ಬರುತ್ತಾನೆ. ತಾನು ಎಲ್ಲಾ ಪ್ರಾಣಿಗಳನ್ನು ನನ್ನ ತಾಳಕ್ಕೆ ಕುಣಿಸಬಲ್ಲೆ ಎಂಬ ಹಮ್ಮು ಅವನದ್ದು. ಹಲವು ಬಾರಿ ಇದು ಸತ್ಯ ಎನ್ನಿಸಿದರೂ ಅವುಗಳೂ ಕೂಡಾ  ಬುದ್ಧಿವಂತಿಕೆಯಲ್ಲಿ ನಮ್ಮಿಂದ ಕಡಿಮೆಯಿಲ್ಲ ಎಂಬುದೇ ಪರಮಸತ್ಯ. ಇದಕ್ಕೆ ಹಲವು ನಿದರ್ಶನಗಳು ಅವುಗಳ ಒಡನಾಟವನ್ನಿಟ್ಟುಕೊಂಡವರ ನಿತ್ಯದ ಬದುಕಿನಲ್ಲಿ ಸಿಕ್ಕೇ ಸಿಗುತ್ತವೆ. ಇದರಲ್ಲಿ ಕೆಲವೊಂದು ನಗು ತರಿಸಿದರೆ ಇನ್ನು ಕೆಲವು ಪೇಚಿಗೆ ಸಿಕ್ಕಿಸುತ್ತವೆ.  ನಮ್ಮ ಮನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾಜಿಕ ಕ್ರಾಂತಿಯ ಹರಿಕಾರ ಶ್ರೀ ನಾರಾಯಣ ಗುರು:ಅಶೋಕ್ ಕುಮಾರ್ ವಳದೂರು

"ಒಂದೇ ಜಾತಿ, ಒಂದೇ ಧರ್ಮ,ಒಬ್ಬನೇ ದೇವರು" ಎಂದು ಮನುಕುಲ ಕುಟುಂಬಕ್ಕೆ ಸಾರಿ ವಿಶ್ವ ಮಾನವ ಸಂದೇಶವನ್ನು ಕೇರಳದಿಂದ ಪ್ರಾರಂಭ ಮಾಡಿ ದೇಶದೆಲ್ಲೆಡೆ ಹಬ್ಬಿಸಿದ ಮಹಾನ್ ಸಂತ ಶ್ರೀ ನಾರಾಯಣ ಸ್ವಾಮಿ. "ಯಾರನ್ನೂ ದ್ವೇಷಿಸ ಬೇಡಿ, ಸಂಘಟನೆಯಿಂದ, ಶಿಕ್ಷಣದಿಂದ, ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ದೇಶದ ಉನ್ನತಿಯನ್ನು ಸಾಧಿಸೋಣ" ಎಂದು ಒಂದು ಶತಮಾನಗಳ ಹಿಂದೆ ಈ ಜನಕ್ಕೆ ಸಾರಿದ ಗುರು ನಾರಾಯಣರ ಸಂದೇಶವು ವಾಸ್ತವದ ಅರ್ಥವನ್ನು ಪಡೆಯುವುದು ನಾವು ಕಾಣುತ್ತೇವೆ. ಹದಿನೆಂಟು ಹತ್ತೊಂಭತ್ತನೆಯ ಶತಮಾನಗಳು ಈ ನಾಡಿನಲ್ಲಿ ಐರೋಪ್ಯರು ವಸಾಹತುಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರತಿಮೆಗಳ ಮೂಲಕ ಹೊಸ ಲೋಕಕ್ಕೆ ಸವಾರಿ ಹೊರಟ ಕವಿತೆಗಳು: ಶ್ರೀದೇವಿ ಕೆರೆಮನೆ

ನಿನ್ನ ಕವನಗಳು ಓದುಗರನ್ನು ಬೆಚ್ಚಿ ಬೀಳಿಸದಿದ್ದರೆ ಅವುಗಳಿಂದೇನು ಪ್ರಯೋಜನ ಬೋದಿಲೇರ್ ಹೇಳಿದ ಮಾತುಗಳನ್ನು  ನೆನಪಿಸಲೆಂದೇ ಹೊಸದೊಂದು ಕವನ ಸಂಕಲನ ಹೊರಬಂದಿದೆ. ನಾನು ಪದೇ ಪದೇ ಬೋದಿಲೇರ್ ಎಂದೇ ಕರೆಯುವ ಗೆಳೆಯ ವಿ. ಆರ್ ಕಾರ್ಪೆಂಟರ್ ಕವನ ಸಂಕಲನ ಹೊರಬಂದಿದೆ. ಕವನ ಸಂಕಲನದ ಮೊದಲ ಓದುಗಳಾಗಿ ನಾನೀಗಾಗಲೇ ನನ್ನ ಅನುಭವವನ್ನು ದಾಖಲಿಸಿದ್ದಾಗ್ಯೂ ಕೂಡ ಕಂಪ್ಯೂಟರ್ ಪರದೆಯಲ್ಲಿ ಇಣುಕಿಣುಕಿ ಓದುವುದಕ್ಕೂ, ಕೈಯ್ಯಲ್ಲಿಯೇ ಪುಸ್ತಕ ಹಿಡಿದು ಓದುವ ಸುಖಕ್ಕೂ  ಇರುವ ವತ್ಯಾಸ ಅಗಾಧವಾದದ್ದು. ಹೀಗಾಗಿ ಈಗಿನ ಅನುಭವಗಳು ಮತ್ತೂ ಭಿನ್ನವಾಗಿಯೇ ಇದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಪ್ರವೀಣ್ ಡಿ. ಕಟೀಲ್, ರಮೇಶ್ ನೆಲ್ಲಿಸರ, ಬಸವರಾಜ ಕದಮ್

ಅಷ್ಟಕ್ಕೂ ಮಳೆಯೆಂದರೆ… ಅವಳೇಕೆ ನೆನಪಾಗುತ್ತಾಳೆ…? ಈ ಮಳೆಗೂ ಈಶಾನ್ಯಕ್ಕೂ ಸಂಬಂಧವಿದೆ, ಮೊದಲ ಈಶಾನ್ಯ ಮಾರುತಗಳೇ ಮೊದಲಮಳೆ ತರುತ್ತವೆ, ಬದುಕಲ್ಲೂ ಅಷ್ಟೇ ಮೊದಲ ಮಳೆ ತಂದವಳು ಈಶಾನ್ಯದವಳು,ಆ ಮುಂಗಾರುಮಳೆ ಇನ್ನೂ ಇದೆ, ಈ ಮೊದಲಪ್ರೇಮವೇ ಹೀಗೆಯೇ, ಎಲುಬಿಲ್ಲದ ನಾಲಗೆ ಬೇಡವೆಂದರೂ ನೋವಿದ್ದ ಹಲ್ಲಿನ ಕಡೆ ಹೊರಳುವ ಹಾಗೆ, ವರ್ಷಾನುಗಟ್ಟಲೆ ಜೊತೆಯಾಗಿದ್ದ ಪ್ರೀತಿ ಏಕಾ ಏಕಿ ಕೈಬಿಟ್ಟು ಹೋದಾಗ ನಡುದಾರಿಯಲ್ಲೇ ಆಗೋ ಆಘಾತಕ್ಕೆ ಶವದಂತಾದ ದೇಹಕ್ಕೆ ನೆತ್ತಿಯ ಮೇಲೆ ಬಿದ್ದ ಮಳೆ ಹನಿ ಮಾತ್ರ ಸಮಾಧಾನ, ಸಾಂತ್ವಾನ ನೀಡಬಲ್ಲುದು, ಪ್ರೀತಿಯೆಂದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಂಗನಿಂದ ದಾನವ:ಅಖಿಲೇಶ್ ಚಿಪ್ಪಳಿ ಅಂಕಣ

ತಳವಾರ ತಿಮ್ಮ ಬೆಳಗಿನ ಗಂಜಿ ಕುಡಿದು, ನಾಡಕೋವಿಯನ್ನು ಹೆಗಲಿಗೆ, ಮಶಿ, ಚರೆ, ಗುಂಡುಗಳ ಚೀಲವನ್ನು ಬಗಲಿಗೆ ಹಾಕಿ ಹೊರಡುತ್ತಿದ್ದಂತೆ, ಅವನ ಹೆಸರಿಲ್ಲದ ಬೇಟೆ ನಾಯಿ ಬಾಲ ಅಲ್ಲಾಡಿಸುತ್ತಾ ತಿಮ್ಮನನ್ನು ಹಿಂಬಾಲಿಸಿತು. ಬೆಳಗಿನಿಂದ ಸಂಜೆಯವರೆಗೂ ಹತ್ತಾರು ಮೈಲು ಸುತ್ತಿ ಮಂಗನನ್ನು ಅಡಿಕೆ ತೋಟದಿಂದ ಓಡಿಸುವುದು ತಿಮ್ಮನ ವೃತ್ತಿ. ಹೀಗೆ ವರ್ಷಗಟ್ಟಲೇ ನಡೆದು-ನಡೆದು ತಿಮ್ಮನ ಅಂಗಾಲು ಗಟ್ಟಿಯಾಗಿದೆ. ಸಣ್ಣ-ಪುಟ್ಟ ಮುಳ್ಳುಗಳು ತಾಗುವುದಿಲ್ಲ. ಹಾಗಾಗಿ ತಿಮ್ಮ ಚಪ್ಪಲಿ ಮೆಟ್ಟುವುದಿಲ್ಲ. ತನ್ನ ಮನೆಯಿಂದ ತೋಟ ಕಾಯುವ ಊರಿಗೆ ಹೋಗಲು ಸುಮಾರು ಒಂದು ಮೈಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಲ್ಲ ಬರೆವವರೇ ಆದರೆ ಓದುವವರ್ಯಾರು?: ಪ್ರಶಸ್ತಿ ಪಿ. ಸಾಗರ

  ಇಂಥಾ ಗಂಭೀರ ಪ್ರಶ್ನೆಯ ಬಗ್ಗೆ ಒಂದು ಲೇಖನ ಬೇಕಿತ್ತಾ ಅಂತ ಯೋಚಿಸ್ತಾ ಇದ್ದೀರಾ ? ನೀವಷ್ಟೇ ಅಲ್ಲ. ನಾನೂ ಹಾಗೇ ಯೋಚಿಸಿದ್ದು. ನಾನೇ ಕೆಲ ಘಟನೆಗಳ ನೋಡಿ ಬೇಸತ್ತು, ರೋಸತ್ತು ಇದರ ಬಗ್ಗೆ ಬರೆಯಹೊರಟೆ ಅನ್ನುವುದರ ಬದಲು ಇತ್ತೀಚಿಗಿನ ಕೆಲ ವಿದ್ಯಮಾನಗಳು ಬೇರೆ ವಿಷಯಗಳಿಗಿಂತ ಇದಕ್ಕೇ ಹೆಚ್ಚು ಪ್ರಾಮುಖ್ಯತೆ ಕೊಟ್ಟು ಇದರ ಬಗ್ಗೆಯೇ ಈ ವಾರ ಬರೆಯುವಂತೆ ನನ್ನ ಪ್ರೇರೇಪಿಸಿದವು ಅಂದ್ರೆ ತಪ್ಪಾಗಲಾರದೇನೋ. ಅನಂತಮೂರ್ತಿಗಳ ನಿಧನದ ವೇಳೆ ಚರ್ಚೆಯಾದ ಕೃತಿಗಳಿರಬಹುದು. ಭೈರಪ್ಪನವರ ಯಾನದ ಬಗೆಗಿನ ಪರ-ವಿರೋಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಣ-ಹೆಣ್ಣು:ನಳಿನ ಡಿ.

  ಭಾನುವಾರದ ಒಂದು ನಡುಮಧ್ಯಾಹ್ನ ಐದು ಹೆಣ್ತಲೆಗಳು ಲಕ್ಕಮ್ಮ ಕಾಲೇಜಿನ ಅರ್ಧ ಕಟ್ಟಿದ್ದ ಗಿಲಾವು ಮಾತ್ರ ಕಂಡ ಸಿಮೆಂಟ್ ಕಟ್ಟಡದೊಳಗೆ ರಿಂಗಣಿಸದೆ ಸುಮ್ಮನಿದ್ದ ದೂರವಾಣಿಯ ಸುತ್ತಾ ಸಂಭಾಷಿಸುತ್ತಿದ್ದವು. ಹೋದವಾರ ಅದೇ ಜಾಗದಲ್ಲಿ ನಡೆದಿದ್ದ ಅಲ್ಲಿನ ಅಟೆಂಡರನ ನಂಟಸ್ಥಿಕೆಯ ಓಸಿ ವಿವಾಹದ ಗಬ್ಬೆಲ್ಲಾ ಮೂಟೆಯಾಗಿ ಕಾಲೇಜಿನ ಮುಂದೆ ಬಿದ್ದಿದ್ದು, ಕೊಳೆತು ಬರುತ್ತಿದ್ದ ವಾಸನೆಗೆ ಮೂಗು ಮುಚ್ಚಿಕೊಂಡೇ ಅನಿವಾರ್ಯವಾಗಿ ಅಲ್ಲಿ ನೆರೆದಿದ್ದರವರು. ಗುಲ್ಬರ್ಗಾದಿಂದ ತರಭೇತಿಗಾಗಿ ಬಂದು ಅನ್-ಏಡೆಡ್ ಆಗಿದ್ದ ಕಾಲೇಜಿಗೆ ಸೇರಿಕೊಂಡು ಸೈ ಅನ್ನಿಸಿಕೊಳ್ಳಲು ಎಣಗುತ್ತಿದ್ದ ಅರಕೇರಿ, ಮಂಗಳೂರಿನ ಬಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಾಲೆ ಬಿಡುವ ಮಕ್ಕಳಿಗೆ ಯಾರು ಹೊಣೆ?:ಕೆ.ಎಂ.ವಿಶ್ವನಾಥ

ಕರ್ನಾಟಕ ರಾಜ್ಯದ ಶಿಕ್ಷಣದಲ್ಲಿ ಗುಣಾತ್ಮಕತೆ ತರಲು, ಗಣನೀಯವಾಗಿ ಶ್ರಮಿಸಲಾಗುತ್ತಿದೆ . ಶಿಕ್ಷಣ ಎಲ್ಲರ ಸೊತ್ತಾಗಬೇಕು. ಪ್ರತಿಯೊಂದು ಮಗು ಶಾಲೆಯ ಆಸರೆಯಲ್ಲಿ ತನ್ನ ಮುಗ್ಧ ಬಾಲ್ಯವನ್ನು ಕಳೆಯಬೇಕು. ಎನ್ನುವ ನಿಟ್ಟಿನಲ್ಲಿ ಹಲವಾರು ಯೋಜನೆಗಳು ಹೊರತರಲಾಗುತ್ತಿದೆ. ಪ್ರತಿಯೊಂದು ಯೋಜನೆಯೂ ಉತ್ತಮ ಅನುಪಾಲನೆ ಮಾಡಿದಾಗ ಮಾತ್ರ, ಶಿಕ್ಷಣದಲ್ಲಿ ಗುಣಾತ್ಮಕತೆ ತರಲು ಸಾಧ್ಯವಾಗುತ್ತದೆ. ಈಗಾಗಲೇ ನಮ್ಮ ರಾಜ್ಯ, ಶಾಲೆ ಬಿಟ್ಟ ಮಕ್ಕಳಲ್ಲಿ ಮೊದಲನೆ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ನೂರು ಯೋಜನೆಗಳು ಹೊರತಂದ ರಾಜ್ಯ ಸರಕಾರ, ಪ್ರತಿ ಹಂತದಲ್ಲಿ ಯೋಜನೆಯ ಸೂಕ್ತ ಪರಿಶೀಲನೆಯನ್ನು ಮರೆಮಾಚುತ್ತಿದೆ.  ರಾಜ್ಯದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 45): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧.    ಬಿರ್‍ಲಾ ಟೆಕ್ನಾಲಾಜಿಕಲ್ ಹಾಗೂ ಇಂಡಸ್ಟ್ರೀಯಲ್ ಮ್ಯೂಸಿಯಂ ಎಲ್ಲಿದೆ? ೨.    ಕೆಂಪು ತ್ರಿಕೋನ ಇದು ಯಾವುದರ ಸಂಕೇತವಾಗಿದೆ? ೩.    ಬಿಹಾರದ  ಗಾಂಧಿ ಎಂದು ಕರೆಯಲ್ಪಡುವ ವ್ಯಕ್ತಿ ಯಾರು? ೪.    ಪಂಡರಾಪುರ ಪ್ರಸಿದ್ಧ ಯಾತ್ರಾ ಸ್ಥಳ ಯಾವ ರಾಜ್ಯದಲ್ಲಿದೆ? ೫.    ಶಂಕರದೇವ ಪ್ರಶಸ್ತಿಯನ್ನು ಭಾರತದ ಯಾವ ರಾಜ್ಯ ಸರ್ಕಾರ ಪ್ರತಿಷ್ಟಾಪಿಸಿರುವ ಪ್ರಶಸ್ತಿಯಾಗಿದೆ? ೬.    ಭೂ ಮೇಲ್ಮೈನ ಅತ್ಯಂತ ಕೆಳ ಬಿಂದು ಯಾವುದು? ೭.    ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆ ಮಾಡಿದವರು ಯಾರು? ೮.    ಕಕ್ಷೆಯಲ್ಲಿ ಬಂದ ಮೊದಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬುಂಡೆದಾಸನೆಂಬ ಹುಚ್ಚಯ್ಯ: ಹೃದಯಶಿವ

  ನಾನು ಹದಿನಾರನೇ ವಯಸ್ಸಿಗೆ ಹಳ್ಳಿಗಳನ್ನು ಬಿಟ್ಟಿದ್ದರೂ ಹಳೆಯ ಪರಿಚಿತರು ಮದುವೆ, ಗೃಹಪ್ರವೇಶ, ನಾಮಕರಣ, ಶಾಲಾಕಾಲೇಜುಗಳ ಸಮಾರಂಭ ಅಥವಾ ಯಾರಾದರು ಸತ್ತರೆ ಕರೆಯುತ್ತಾರೆ; ನನ್ನ ಬೇರುಗಳು ಎಂದಿಗೂ ಹಳ್ಳಿಗಳಲ್ಲಿಯೇ ಇರುವುದರಿಂದ ಇದೆಲ್ಲಾ ಸರ್ವೇ ಸಾಮಾನ್ಯ. ನನಗೆ ಸಾವಿನ ಮನೆಗಳ ಬಗ್ಗೆ ಬೇಜಾರು. ಏಕೆಂದರೆ ನನಗದು ನಾಟಕದ ವಾತಾವರಣದ ನೆನಪು ತರುತ್ತದೆ. ಜೀವಂತವಾಗಿದ್ದಾಗ ಎಷ್ಟೋ ಸಲ ಮಕ್ಕಳ, ಸೊಸೆಯಂದಿರ ಕಾಲು ಕಸವಾಗಿ ಬದುಕಿದ ವೃದ್ಧರ ಹೆಣದ ಮುಂದೆ ಅವರ ಬಂಧುಗಳೆನಿಸಿಕೊಂಡವರೆಲ್ಲಾ ಕೂತು ಗೊಳೋ ಅಂತ ಅಳುವ ಪ್ರೊಫೆಶನಲ್ ಪಾತ್ರಧಾರಿಗಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ಮುನ್ನಿ’ಯ ಕಾರ್ ಗ್ರಾಫಿಟಿ: ಆದರ್ಶ ಸದಾನ೦ದ ಅರ್ಕಸಾಲಿ

ಇನ್ನೇನು ಹಾಸ್ಪಿಟಲ್ ಗೆ ಹೋಗ್ಬೇಕು, ಅವಸರದಲ್ಲಿ ಕಾರಿನ ಕೀಲಿಯನ್ನು ತೆಗೆದುಕೊ೦ಡು, ಬ್ಯಾಗನ್ನು ತೆಗೆದುಕೊ೦ಡು ಹೊರಡುವದರಲ್ಲಿದ್ದೆ, ಅಷ್ಟರಲ್ಲಿ ಗೇಟಿನಲ್ಲಿ ನೈಟಿಯಲ್ಲೊ೦ದು ಹೆ೦ಗಸಿನ ಆಕಾರ ಪ್ರತ್ಯಕ್ಷವಾಯಿತು. "ಡಾಕ್ಟ್ರು ಹೋಗುವದರಲ್ಲಿದ್ದೀರಾ?" ಏದುರುಸಿಕೊ೦ಡು ಕೇಳಿತು. "ಹೌದು" ( ಎಪ್ರನ್ ಹಾಕಿ, ಹಾಸ್ಪಿಟಲ್ ಬ್ಯಾಗನ್ನು ಹಾಕಿಕೊ೦ಡು, ಈ ರೀತಿ ವೇಷದಲ್ಲಿ ಮದುವೆ ಮೆರವಣಿಗೆಗಾ ಹೊರಟಿದ್ದೀನಿ? ) "ಒ೦ದ್ನಿಮ್ಷ ತಡಿರಿ, ಸಿಟ್ಟು ಮಾಡ್ಕೋಬೇಡಿ" ಮನಸ್ಸಿನಲ್ಲಿ ಒ೦ದು ರೀತಿಯ ಸಿಟ್ಟು ಬ೦ದರೂ, ಮುಖದಲ್ಲಿ ಅದರ ಗ೦ಧ ಸ್ವಲ್ಪವೂ ಸುಳಿಯದ೦ತೆ, ಮುಗುಳ್ನಗುತ್ತಾ "ಏನಾಗಬೇಕಿತ್ತು? " ಅ೦ತ ನನಗೊತ್ತಿರೋ ಅತೀವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆ ಆಕೃತಿ…!: ಬಸವರಾಜು ಕ್ಯಾಶವಾರ

ಸಮಯ: ರಾತ್ರಿ 9.10 ಸ್ಥಳ: ಕಸ್ತೂರಬಾ ರಸ್ತೆ, ಕಂಠೀರವ ಕ್ರೀಡಾಂಗಣದ ಹತ್ತಿರ “ಧಗ್” ಅಂತು. ಥೇಟ್ ಬಂಡೆ ಕವನದಂತೆ; ಒಂದು ಬೆಂಕಿ ಕಡ್ಡಿ ತಲೆ ಸುಟ್ಟುಕೊಂಡು ಸತ್ತಿತ್ತು, ಕತ್ತಲಿನ ಜೊತೆ. ತೆಳು ಬಿಳಿ ಬಟ್ಟೆ ಸುತ್ತಿಕೊಂಡಿದ್ದ ಅಪ್ಸರೆಗೆ ಬೆಂಕಿ ಹಚ್ಚಲಾಗಿತ್ತು. ಆ ಅಪ್ಸರೆಯ ತಲೆ ಆ ಕೆಂದುಟಿಗಳನ್ನು ನುಂಗಿ ಹಾಕಿದ್ದವು. ಆ ಎರಡು ಕಣ್ಣುಗಳು ತಣ್ಣಗೆ ರೆಪ್ಪೆ ಬಡಿಯುತ್ತಿದ್ದವು. ಕತ್ತಲಿನ ಮಧ್ಯೆ ಆ ಬಿಳಿಗುಡ್ಡೆಗಳು  ಕಬ್ಬನ್ ಪಾರ್ಕ್ ನ ಕಬ್ಬಿಣದ ಬೇಲಿಯ ಹಿಂದಿನಿಂದ ನನ್ನನ್ನೇ ನೋಡುತ್ತಿದ್ದವು. ಆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಂಬಿಡದ ಭೂತ: ಗುರುಪ್ರಸಾದ ಕುರ್ತಕೋಟಿ

(ಅತೀಂದ್ರಿಯ ಅನುಭವದ ಕಥೆಗಳು – ಭಾಗ ೬) ಈ ಕಥೆ ನನ್ನ ಸಹೋದ್ಯೋಗಿ ರಮೇಶ ನಾಯಕ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದದ್ದು — ನಾನು ಹುಟ್ಟಿ ಬೆಳೆದು ದೊಡ್ಡವನಾಗಿದ್ದು ಭಟ್ಕಳದಲ್ಲಿ. ನಮ್ಮ ಮನೆಯಿಂದ ಎಡವಿ ಬಿದ್ದರೆ ಸಮುದ್ರ! ಅಂದರೆ ಅದು ಅಷ್ಟು ಹತ್ತಿರದಲ್ಲಿದೆ ಅಂತ ಅರ್ಥ. ಅದು ಬೇರೆಯವರಿಗೆ ಕೇಳೋಕೆ ಚಂದ. ಪರ ಊರಿನಿಂದ ಒಂದೆರಡು ದಿನಕ್ಕೆ ಅಂತ ನಮ್ಮೂರಿಗೆ ಬಂದವರಿಗೆ ಸಮುದ್ರಕ್ಕೆ ಹೋಗಿ  ಸ್ನಾನ ಮಾಡಲು ಅಡ್ಡಿ ಇಲ್ಲ. ಅಲ್ಲೇ ಇರೋವ್ರಿಗೆ ಕಷ್ಟ. ಅದರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಟನ್ನು ಭಾರದ ಖುಷಿ ಹೊರುವಂತಿರಬೇ​ಕು ಟ್ರಿಪ್ಪು: ಅಮರ್ ದೀಪ್ ಪಿ.ಎಸ್.

ಒಂದೇ ಕಡೆ ಅದೇ ಕೆಲಸ, ಅದೇ ರಸ್ತೆ, ಓಡಾಟ, ಮನೆ, ಮಂದಿ, ಮಾತು, ಜೀವನ ಕ್ರಮ ಒಮ್ಮೊಮ್ಮೆ ಬೋರಾಗುತ್ತೆ.   ಆಗಾಗ ಒಂದೆರಡು ದಿನಗಳ ಮಟ್ಟಿಗಾದರೂ ಹೊರಗಡೆ ತಿರುಗಾಡಿ ಬರಬೇಕು. ಹೋಗಿ ಬಂದೆವೆಂದರೆ, ಮನಸ್ಸು ದಿಗ್ಗನೇ ಎದ್ದು "ನಾನ್ ಫ್ರೆಶ್ ಆದ್ನೆಪ್ಪಾ" ಅಂತೇನೂ ಹೇಳುವುದಿಲ್ಲ.  ಆದರೆ, ಗೆಳೆಯರು ಸೇರಿ ರುಟೀನು ತಪ್ಪಿಸಿಕೊಂಡ ಖುಷಿಗೋ ಅಥವಾ ಹೊಸ ಜಾಗ,  ಸಧ್ಯಕ್ಕೆ ಹತ್ತಿರವಿಲ್ಲದ ಕೆಲಸ, ದುಡಿಮೆ, ಟೆನ್ಶನ್ ಎಲ್ಲಾನು ಮರೆತು ಖುಷ್ ಖುಷಿಯಾಗಿ  ಪರಿಸರ, ನದಿ ತೀರ, ಐತಿಹಾಸಿಕ ಸ್ಥಳ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಲಿಯೋ, ಸುಂದರಾಂಗಿಯೋ?: ಜೆ.ವಿ.ಕಾರ್ಲೊ

ಹುಲಿಯೋ, ಸುಂದರಾಂಗಿಯೋ? ಮೂಲ: ಫ್ರ್ಯಾಂಕ್ ಸ್ಟೊಕ್ಟನ್ ಅನುವಾದ: ಜೆ.ವಿ.ಕಾರ್ಲೊ ಬಹಳ ಬಹಳ ವರ್ಷಗಳ ಹಿಂದೆ ಒಬ್ಬ ರಾಜ ರಾಜ್ಯವನ್ನಾಳುತ್ತಿದ್ದ. ತನ್ನ ನೆರೆಯ ಲ್ಯಾಟಿನ್ ಸಾಮ್ರಾಜ್ಯದ ಪ್ರಭಾವದಿಂದಾಗಿ ಅವನು ತೋರಿಕೆಗೆ ನಾಗರಿಕನಾಗಿ ಕಾಣುತ್ತಿದ್ದನಾದರೂ, ಮೂಲತಃ ತುಂಬಾ ಕ್ರೂರಿಯಾಗಿದ್ದ, ಚಂಚಲ ಸ್ವಭಾವದವನಾಗಿದ್ದ. ಯಾವ ಗಳಿಗೆಯಲ್ಲಿ ಅವನ ಯೋಚನೆಗಳು ಹೇಗೆ ತಿರುಗುತ್ತವೆಂದು ಊಹಿಸಲು ಯಾರಿಗೂ ಸಾಧ್ಯವಿರಲಿಲ್ಲ. ಅವನೇ ಅವನ ಆಪ್ತ ಸಲಹಾಕಾರನಾಗಿದ್ದ ಮತ್ತು ಆ ಗಳಿಗೆಯಲ್ಲೇ ತೀರ್ಮಾನಿಸಿ ಜಾರಿಗೊಳಿಸುತ್ತಿದ್ದ. ಅವನ ರಾಜ್ಯಭಾರ ಯಾವುದೇ ಅಡ್ಡಿ ಆತಂಕಗಳಿಲ್ಲದೆ ಸರಾಗವಾಗಿ ನಡೆಯುತ್ತಿದ್ದರೆ ಅವನು ತುಂಬಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕ್ರಾಂತಿಯೆಂಬ ಭ್ರಾಂತಿ: ಅಖಿಲೇಶ್ ಚಿಪ್ಪಳಿ

ರೈತನಿಗೆ ಮಣ್ಣಿನ ಮಗ ಎನ್ನುತ್ತಾರೆ. ರೈತ ದೇಶದ ಬೆನ್ನೆಲುಬು ಎಂದು ಹೊಗಳಿದ್ದಾರೆ. ಈ ದೇಶದಲ್ಲಿರುವ ೧೨೦ ಕೋಟಿ ಜನಸಂಖ್ಯೆಯ ಸಿಂಹಪಾಲು ಮಂದಿ ರೈತಾಪಿ ವೃತ್ತಿಯನ್ನೇ ಅವಲಂಬಿಸಿಕೊಂಡು ಬದುಕುತ್ತಿದ್ದಾರೆ. ಆದರೆ ಅನ್ನದಾತನ ಬದುಕು ಹೇಗಿದೆ? ಗ್ರಾಮೀಣ ಭಾರತದ ರೈತ ಹೇಗಿದ್ದಾನೆ? ಪ್ರಪಂಚದ ಎಲ್ಲಾ ಸಾಂಪ್ರಾದಾಯಿಕ ರೈತರ ಬದುಕು ವಾತಾವರಣವನ್ನು ಅವಲಂಭಿಸಿದೆ. ಭಾರತದ ಕೃಷಿ ಪ್ರದೇಶದ ೭೦% ಪ್ರದೇಶ ಮಳೆಯಾಧಾರಿತವಾಗಿದೆ. ಕಾಲ-ಕಾಲಕ್ಕೆ ಮಳೆಯಾದರೆ ಮಾತ್ರ ರೈತನ ಬದುಕು ತುಸು ಹಸನಾಗುತ್ತದೆ. ಬೀಜ ಬಿತ್ತುವಾಗ ಬರಗಾಲ, ಕೊಯ್ಲಿನ ಸಂದರ್ಭದಲ್ಲಿ ಅತಿವೃಷ್ಟಿಯಾದಲ್ಲಿ ರೈತನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಚೆನ್ನ ಬಸವರಾಜ್, ನವೀನ್ ಪವಾರ್, ವಾಮನ ಕುಲಕರ್ಣಿ

ಕೊಕ್ ಕೊಕ್ ಕೊಕ್ಕೋ….!! ಲೇ… ಕುಮುದಾ, ಜಾಹ್ನವಿ, ವೈಷ್ಣವಿ ಎದ್ದೇಳ್ರೇ… ಬೆಳಗಾಯ್ತು ; ಕೋಳಿ ಮನೆಯೊಳಗೆಲ್ಲೋ.. ಬಂದು, ಕೊಕ್ ಕೊಕ್ ಕೊಕ್ಕೋ…. ಎಂದು ಕೂಗಿದ ಸದ್ದು ಹಾಳಾದ್ದು ಅದ್ಹೇಗೆ ಮನೆ ಹೊಕ್ಕಿತೋ… ಏನೋ?  ಎಲ್ಲಾ ನನ್ನ ಪ್ರಾರಬ್ಧ ಕರ್ಮ ಇನ್ನೇನು ಕಾದಿದೆಯೋ  ಇದ ಕೇಳಿಸಿಕೊಂಡು ಅಕ್ಕಪಕ್ಕದವರು ನಗದಿರರು ನಮ್ಮ ಏನೆಂದು ತಿಳಿದಾರು, ಅನುಸೂಯಮ್ಮನ ಮೊಮ್ಮಕ್ಕಳು ಕೋಳಿ ತಿನ್ನುವರೆಂದು ಊರೆಲ್ಲಾ ಹೇಳಿ ಕೊಂಡು ತಿರುಗಾಡಿದರೆ  ಇನ್ನು ನಾ ತಲೆಯೆತ್ತಿ ಹೊರಗೆಲ್ಲೂ ಓಡಾಡುವಂತಿಲ್ಲ  ಅಯ್ಯೋ …. ಅಜ್ಜೀ… ಸುಮ್ಮನೆ ಮಲಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಳುವಿನಲ್ಲಡಗಿದೆ ಬಾಳು: ಸಂಗೀತ ರವಿರಾಜ್

ಹೀಗೊಂದು ಶುಭನುಡಿಯಿದೆ " ಒಂದೇ ಹಾಸ್ಯದ ಬಗ್ಗೆ ಮತ್ತೆ ಮತ್ತೆ ನಗುವುದಿಲ್ಲವಾದರೆ, ಒಂದೇ ಸಂಗತಿ ಬಗ್ಗೆ ಮತ್ತೆ ಮತ್ತೆ ಅಳುವುದ್ಯಾಕೆ?  ಮತ್ತೆ ಮತ್ತೆ ತೇಲಿ ಬರುವ ಅಳು ಒಂದು ರೀತಿಯಲ್ಲಿ ಅಪ್ಯಾಯಮಾನವಾದ ಸಂಗತಿ. ಅಳುವೆನ್ನುವುದು ಮನುಷ್ಯನ ಎಲ್ಲಾ ಮೂಲಭೂತ ಕ್ರಿಯೆಗಳಂತೆ ಸಹಜವೋ? ಅದೊಂದು ಕಲೆಯೋ? ಸಾಂಧರ್ಭಿಕವೋ? ತಿಳಿಯಲೊಲ್ಲುದು. ಆದರು ಬೇಸರವಾದಾಗ ಅಳುವುದು ಮಾತ್ರ ಸಹಜ. ಅಳುವ ಗಂಡಸರನ್ನು ನಂಬಬೇಡ ಎನ್ನುತ್ತದೆ ಗಾದೆ. ಈ ಗಾದೆ ಚಾಲ್ತಿಗೆ ಹೇಗೆ ಬಂತೆಂದು ಯೋಚಿಸಿದರೆ ಅಳು ಯಾವಾಗಲೂ ಹೆಣ್ಣಿಗೆ ಕಟ್ಟಿಟ್ಟ ಬುತ್ತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗುರುಭ್ಯೋ ನಮ: ಪ್ರಶಸ್ತಿ

ಬದುಕ ಪಯಣಕೆ ಬೆಳಕನಿತ್ತಿಹ ಪ್ರಣತಿ ಗುರುವರ್ಯ ಹುಡುಗು ಮುದ್ದೆಯ ಪ್ರತಿಮೆಯಾಗಿಸಿ ನಿಂತ ಆಚಾರ್ಯ ಸಕಲವಿದ್ಯೆಯ ಮಳೆಯಗಯ್ದಿಹೆ ಮುನಿಸ ಮೋಡದಲಿ ಕಷ್ಟ ಸುಡುತಿರೆ, ಜೀವವಳುತಿರೆ ಸಹಿಸಿ ಮೌನದಲಿ ನಳಿನಿ ಮೇಲಣ ಹನಿಯ ತರದಲಿ ತಪ್ಪ ಮಸ್ತಕದಿ ಸರಿಸಿ ಹರಿಸಿದೆ ಜ್ಞಾನ ಬೆಳಕನು ತೊಳೆದ ಬುದ್ದಿಯಲಿ |೧| ಅರಿವಿಗೆ ನಿಲುಕದ ಮಾತುಗಳಲ್ಲಿ ಗುರುವಿನ ನಿಲುವುಗಳೆಷ್ಟಿಹುದೋ ಕತ್ತಲ ಪಥದಲೂ ಹಾಕುವ ಹೆಜ್ಜೆಯ ತಿದ್ದಿಹ ಬುದ್ದಿಗಳೆಷ್ಟಿಹುದೊ  ಶಿಸ್ತನು ಕಲಿಸಿದೆ, ಬುದ್ದಿಯ ಬೆಳೆಸಿದೆ ಸವಾಯೀಯುತಲೆ ಜಡಮನಕೆ ತೊಲಗಿಸಿ ಮೌಢ್ಯತೆ, ಮೂಡಿಸಿ ಐಕ್ಯತೆ ನನ್ನನು ತೆರೆದಿಹೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು: ಪದ್ಮಾ ಭಟ್, ಇಡಗುಂದಿ

                    ನಾನು ಬಡವಿ ಆತ ಬಡವ  ಒಲವೆ ನಮ್ಮ ಬದುಕು ಬಳಸಿಕೊಂಡೆವದನೆ ನಾವು ಅದಕು ಇದಕು ಎದಕು.. ದ.ರಾ ಬೇಂದ್ರೆಯವರ ಈ ಹಾಡಿನ ಸಾಲು ಪದೇ ಪದೇ ನೆನಪಾಗತೊಡಗಿತ್ತು.. ಗೆಳೆಯಾ ಬಹುಶಃ ಪ್ರೀತಿ ಎಂಬ ಪದಕ್ಕೆ ಎಷ್ಟು ಆಪ್ತವಾದ ಸಾಲುಗಳು ಇವು ಅಲ್ವಾ? ಬದುಕಿನಲ್ಲಿ ಎಲ್ಲವೂ ಇದ್ದು ಪ್ರೀತಿಯೇ ಇಲ್ಲದಿದ್ದರೆ ಏನು ಚಂದ ಹೇಳು, ಆದರೆ ಬಡತನದಲ್ಲಿಯೂ ಪ್ರೀತಿಯಿದ್ದರೆ, ಅದನ್ನೇ ಎಲ್ಲಾದಕ್ಕೂ ಬಳಸಿಕೊಳ್ಳಬಹುದು..ಪ್ರೀತಿಯಿಂದ ಹೊಟ್ಟೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಣದ ಅಪ್ಪನಿಗೆ: ಲಾವಣ್ಯ ಆರ್.

ಅಪ್ಪ, ಚಿಕ್ಕಂದಿನಲ್ಲಿ ಈ ಎರಡು ಅಕ್ಷರಗಳು ನನ್ನ ಮನಸ್ಸಿನಲ್ಲಿ ನೆಲೆಯೂರುವಂತೆ ನೀನು ಮಾಡಲಿಲ್ಲ, ನಾ ತೊದಲು ನುಡಿವಾಗ ನೀ ಬಂದು ಮುದ್ದಾಡಲಿಲ್ಲ, ನಡಿಗೆ ಕಲಿವ ಬರದಲ್ಲಿ ಬಿದ್ದಾಗ ನೀ ಬಂದು ನನ್ನ ಎತ್ತಿ ಸಂತೈಸಲಿಲ್ಲ, ಅಮ್ಮ ನನ್ನ ಹೊಡೆವಾಗ ನೀ ಬಂದು ಬಿಡಿಸಲು ಇಲ್ಲ, ಹಾಗೆಂದು ನಾನೆಂದಿಗೂ ನೀನು ಬೇಕೆಂದು ಬಯಸಲಿಲ್ಲ, ಒಂದುವೇಳೆ ಮನಸ್ಸು ನಿನ್ನ ಬಯಸಿದರು ಅದರ ಆಸೆಯನ್ನು ಶಮನಗೊಳಿಸುವಲ್ಲಿ ನಾನು ಯಶಸ್ವಿಯಾದೆ.  ಆದರೂ ಅಪ್ಪ ನಿನ್ನಿಂದ ಅನುಭವಿಸಿದ ನೋವುಗಳಿಗೆ ಲೆಕ್ಕವಿಲ್ಲ, ಹೇಗೆಂದು ಕೇಳುವೆಯ? ಪುಟ್ಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 44): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಏಷ್ಯಾ ಖಂಡದಲ್ಲಿಯೇ ಅತ್ಯಂತ ದೊಡ್ಡ ರೈಲು ಸಂಪರ್ಕ ಹೊಂದಿರುವ ದೇಶ ಯಾವುದು? ೨.    ಪುತಿನ ಇದು ಯಾರ ಕಾವ್ಯ ನಾಮ? ೩.    ವೆಸ್ಟ್ ಕೊಸ್ಟ್ ಪೇಪರ್ ಮಿಲ್ ಕಾರ್ಖಾನೆ ಕರ್ನಾಟಕದಲ್ಲಿ ಎಲ್ಲಿದೆ? ೪.    ಮನುಶ್ರೀ ಪ್ರಶಸ್ತಿ ಪಡೆದ ಪ್ರಥಮ ಮಹಿಳಾ ಸಾಹಿತಿ ಯಾರು? ೫.    ಮಲಯಾಳಂನ ಸಾಹಿತಿ ತಕಳಿ ಶಿವಶಂಕರ ಪಿಳ್ಳೈಯವರ ಯಾವ ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರತಿದೆ? ೬.    ಬೆಂಗಳೂರಿನಲ್ಲಿ ಹೈಕೋರ್ಟ್ ಸ್ಥಾಪನೆಯಾದ ವರ್ಷ ಯಾವುದು? ೭.    ವಾಯುಭಾರ ಮಾಪಕ ಕಂಡು ಹಿಡಿದವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೇಗಿದ್ದ ಹೇಗಾದ ಗೊತ್ತಾ: ನಟರಾಜು ಎಸ್. ಎಂ.

ಮೊನ್ನೆ ಶನಿವಾರ ಯೂ ಟ್ಯೂಬ್ ನಲ್ಲಿ ಒಂದಷ್ಟು ಹಿಂದಿ ಕಾಮಿಡಿ ಶೋ ಗಳನ್ನು ನೋಡುತ್ತಾ ಕುಳಿತ್ತಿದ್ದೆ. ಹಿಂದಿಯ ರಿಯಾಲಿಟಿ ಶೋ ಗಳಲ್ಲಿ ತಮ್ಮ ಕಾಮಿಡಿಗಳಿಂದಲೇ ಮಿಂಚಿದ ರಾಜು ಶ್ರೀವತ್ಸವ್, ಕಪಿಲ್ ಶರ್ಮ, ಸುನಿಲ್ ಪಾಲ್ ಹೀಗೆ ಹಲವರ ವಿಡೀಯೋಗಳು ನೋಡಲು ಸಿಕ್ಕಿದ್ದವು. ಒಂದು ರಿಯಾಲಿಟಿ ಶೋ ನ ವಿಡೀಯೋದಲ್ಲಿ ಕಾಮಿಡಿಯನ್ ಜೋಕ್ ಹೇಳಿ ಮುಗಿಸುವ ಮುಂಚೆಯೇ ದೊಡ್ಡದಾಗಿ ಸುಮ್ಮ ಸುಮ್ಮನೆ ನಗುವ ನವಜ್ಯೋತ್ ಸಿದ್ದುವಿನ ಅಬ್ಬರದ ನಗುವನು ನೋಡಿ "ಈ ಯಪ್ಪಾ ಜೋಕ್ ಅಲ್ಲದಿದ್ದರೂ ಸುಮ್ಮ ಸುಮ್ಮನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ