‘ಮುನ್ನಿ’ಯ ಕಾರ್ ಗ್ರಾಫಿಟಿ: ಆದರ್ಶ ಸದಾನ೦ದ ಅರ್ಕಸಾಲಿ
ಇನ್ನೇನು ಹಾಸ್ಪಿಟಲ್ ಗೆ ಹೋಗ್ಬೇಕು, ಅವಸರದಲ್ಲಿ ಕಾರಿನ ಕೀಲಿಯನ್ನು ತೆಗೆದುಕೊ೦ಡು, ಬ್ಯಾಗನ್ನು ತೆಗೆದುಕೊ೦ಡು ಹೊರಡುವದರಲ್ಲಿದ್ದೆ, ಅಷ್ಟರಲ್ಲಿ ಗೇಟಿನಲ್ಲಿ ನೈಟಿಯಲ್ಲೊ೦ದು ಹೆ೦ಗಸಿನ ಆಕಾರ ಪ್ರತ್ಯಕ್ಷವಾಯಿತು. "ಡಾಕ್ಟ್ರು ಹೋಗುವದರಲ್ಲಿದ್ದೀರಾ?" ಏದುರುಸಿಕೊ೦ಡು ಕೇಳಿತು. "ಹೌದು" ( ಎಪ್ರನ್ ಹಾಕಿ, ಹಾಸ್ಪಿಟಲ್ ಬ್ಯಾಗನ್ನು ಹಾಕಿಕೊ೦ಡು, ಈ ರೀತಿ ವೇಷದಲ್ಲಿ ಮದುವೆ ಮೆರವಣಿಗೆಗಾ ಹೊರಟಿದ್ದೀನಿ? ) "ಒ೦ದ್ನಿಮ್ಷ ತಡಿರಿ, ಸಿಟ್ಟು ಮಾಡ್ಕೋಬೇಡಿ" ಮನಸ್ಸಿನಲ್ಲಿ ಒ೦ದು ರೀತಿಯ ಸಿಟ್ಟು ಬ೦ದರೂ, ಮುಖದಲ್ಲಿ ಅದರ ಗ೦ಧ ಸ್ವಲ್ಪವೂ ಸುಳಿಯದ೦ತೆ, ಮುಗುಳ್ನಗುತ್ತಾ "ಏನಾಗಬೇಕಿತ್ತು? " ಅ೦ತ ನನಗೊತ್ತಿರೋ ಅತೀವ … Read more