ಮದರ್ಸ್ ಡೇ: ಪಾರ್ಥಸಾರಥಿ ಎನ್

ಸರೋಜಮ್ಮನವರಿಗೆ ಏಳುವಾಗಲೆ ಎಂತದೋ ಇರುಸುಮುರುಸು. ಎದ್ದು ಮುಖ ತೊಳೆದು ಕಾಫಿ ಕುಡಿಯಬೇಕಾದವರು,  ಎದ್ದು ಹತ್ತು ನಿಮಿಶವಾದರು ಹಾಸಿಗೆ ಮೇಲೆ ಕುಳಿತಿದ್ದರು. ನಂತರ ಎದ್ದು ಮುಖತೊಳೆದು ಅಡುಗೆ ಮನೆಗೆ ಹೋಗಿ ಸೊಸೆ ಮಾಡಿಕೊಟ್ಟ ಕಾಫಿ ಪಡೆದು, ನಡುಮನೆಗೆ ಬಂದು ಸೋಪಾ ಮೇಲೆ ಕುಳಿತರು. ಕಾಫಿ ಕುಡಿಯುತ್ತಿದ್ದರೂ, ಅದೆಂತದೋ ಹಿಂಸೆ, ಬಲಗಡೆ ಪಕ್ಕೆಯಲ್ಲಿ ಸಣ್ಣ ನೋವು.  ಅಲ್ಲಿಯೆ ಮತ್ತೊಂದು ಸೋಪದಲ್ಲಿ ಅಂದಿನ ಪತ್ರಿಕೆ ಹಿಡಿದು ಅದರಲ್ಲೆ ಮುಳುಗಿದ್ದ ಮಗ ಗೋಕುಲ್ ಕಡೆ ನೋಡಿದರು. ಅವನ ಮುಖದಲ್ಲಿ ಗಂಭೀರತೆ. ಮಗನ ಕೈಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ: ಪ್ರವೀಣಕುಮಾರ್. ಗೋಣಿ, ಈರಣ್ಣ ಬೆಂಗಾಲಿ, ಸುನೀತಾ ಕುಶಾಲನಗರ, ಕು.ಸ.ಮಧುಸೂದನ ನಾಯರ್

ನಾ   ಏನನ್ನಲಿ ? ಬಿಕ್ಕಳಿಸಿ  ಹೊರಹಾಕಿದ ದುಃಖದ  ಕುರುಹೇ ಇರದಂತೆ  ಮಂದಹಾಸ ಬೀರುವ ನಿನ್ನ  ಪರಿಗೆ  ನಾ  ಏನನ್ನಲಿ ? ಹೆಡೆಬಿಚ್ಚಿ  ಕುಣಿವ ನರಳಿಕೆಯ  ಬಚ್ಚಿಟ್ಟು ಅರಳಿದಾ  ಸುಮದಂತೆ ಕಂಗೋಲಿಸುವಾ ನಿನ್ನ  ಪರಿಗೆ  ನಾ  ಏನನ್ನಲಿ ? ಅಲೆಯಾಗಿ  ಬರುವ ವೇದನೆಗಳ ಒಳಗವಿತಿಟ್ಟು ಶಾಂತ  ಸಾಗರದಂತೆ ಸಹನೆಯ ಹೆಪ್ಪಾಗಿಸಿಕೊಂಡ ನಿನ್ನ  ಪರಿಗೆ  ನಾ ಏನನ್ನಲಿ ? -ಪ್ರವೀಣಕುಮಾರ್. ಗೋಣಿ           ಜೀವ ಜಲ ನೀರು ನಮಗೆ ಜೀವನಾಧಾರ ನೀರಿಗಿಲ್ಲ ಯಾವುದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲಕ್ಷ್ಮೀ ಹಿಂಡು – ಪಂಚು ತಂಡ!: ಅಖಿಲೇಶ್ ಚಿಪ್ಪಳಿ

ರಹ! ರಹ!! ರಹ!!! ಎನ್ನುವ ಪಿಸುಧ್ವನಿಗಿಂತ ಕೊಂಚ ದೊಡ್ಡದಾದ ಧ್ವನಿ ಕೇಳಿ ನಿಂತದ್ದು ಬರೋಬ್ಬರಿ 8 ಅಡಿ ಎತ್ತರದ ಕಾಡಾನೆ ಲಕ್ಷ್ಮಿ ಮತ್ತು ಅದರ ಜೊತೆಗಿರುವ 25ಕ್ಕೂ ಹೆಚ್ಚು ಆನೆಗಳಿರುವ ಹಿಂಡು. ಧ್ವನಿಸಿದ್ದು, 5 ಅಡಿ ಎತ್ತರದ, ಶಾಶ್ವತವಾದ ನೌಕರಿಯಿಲ್ಲದ ಬರೀ 200 ರೂಪಾಯಿಗಳಿಗೆ ದಿನಗೂಲಿಗೆ ದುಡಿಯುವ ಪಂಚಾನನ್ ನಾಯಕ್ ಎಂಬ ಅರಣ್ಯ ಇಲಾಖೆಯ ವಾಚರ್!! 25ರ ಸಂಖ್ಯೆಯಲ್ಲಿರುವ ಆನೆಯ ಹಿಂಡಿಗೆ ಲಕ್ಷ್ಮೀಯೇ ನಾಯಕಿ. ಪಂಚಾನನ್ ಧ್ವನಿ ಕೇಳುತ್ತಿದ್ದಂತೆ, ಇಡೀ ಹಿಂಡು ಸ್ತಬ್ಧವಾಯಿತು. ಇಡೀ ಗುಂಪಿನ ವಯಸ್ಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತೆಯಾಗದ ಕತೆ: ಪ್ರಶಸ್ತಿ

ಅದೆಷ್ಟೋ ಕಥೆಗಳು ಹುಟ್ಟೋ ಮೊದಲೇ ಸತ್ತಿರುತ್ತವೆ. ಒಂಚೂರು ಕಾಯೋ ತಾಳ್ಮೆಯಿಲ್ಲದ ಕತೃವಿನಿಂದ,ಖ್ಯಾತಿಯ ಹಿಂದೇ ಕಳೆದು ಹೋದ ಸ್ಪೂರ್ತಿಯಿಂದ. ಒಮ್ಮೆ ವಾವೆನಿಸಿದ್ದನ್ನೇ ಮತ್ತೆ ಮರುಸೃಷ್ಠಿಸೋ ಧಾವಂತದಲ್ಲಿ,ಹೊಸ ಪ್ರಯತ್ನ ಮತ್ತೆ ಸೋಲಿನತ್ತ ದೂಕಬಹುದೇನೋ ಎಂಬ ಆತಂಕದಲ್ಲಿ,ಬಾರದ ಬಹುಮಾನಗಳ ಕನವರಿಕೆಯಲ್ಲಿ, ಹಾರ-ತುರಾಯಿಗಳ, ಸನ್ಮಾನದ ಶಾಲುಗಳ ಮತ್ತೆ ಮತ್ತೆ ಹೊಚ್ಚಿಕೊಳ್ಳೋ ಹಪಾಹಪಿಯಲ್ಲಿ ಮುಂಚಿನ ಕತೆಗಾರ ಕಳೆದುಹೋಗಿರುತ್ತಾನೆ. ಬಹುಪರಾಕುಗಳ ಪಟಾಕಿಯ ಸದ್ದು ಕಿವಿಯ ಕಿವುಡಾಗಿಸೋ ಮುನ್ನ ಪ್ರಸಿದ್ದಿಯ ನಗರಿಯಿಂದ ಒಂದಿಷ್ಟು ದೂರ ಬಂದು ಒಂದಿಷ್ಟು ತಣ್ಣಗಿರೋ ಬೆಟ್ಟ ಹತ್ತಿ ಒಂದರೆಗಳಿಗೆ ಕೂತರೆ, ದೂರದೂರದ ದೃಶ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕೋಳಿ ಮಾರಾಟಗಾರ ನಜ಼ರುದ್ದೀನ್‌ ಒಂದು ದಿನ ನಜ಼ರುದ್ದೀನ್‌ ಪೇಟೆಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕೆಲವು ವ್ಯಾಪಾರಿಗಳು ಪುಟ್ಟಪುಟ್ಟ ಗಿಳಿಗಳನ್ನು ತಲಾ ಒಂದಕ್ಕೆ ೨೦೦ ದಿನಾರ್‌ಗಳಂತೆ ಮಾರಾಟ ಮಾಡುತ್ತಿದ್ದದ್ದನ್ನು ಗಮನಿಸಿದ. ಅವನು ಆಲೋಚಿಸಿದ: ‘ಇಷ್ಟು ಪುಟ್ಟದಾಗಿರುವ ಒಂದು ಗಿಳಿಗೆ ೨೦೦ ದಿನಾರ್‌ ಬೆಲೆ ಇದ್ದರೆ ನನ್ನ ಮನೆಯಲ್ಲಿ ಇರುವ ದೊಡ್ಡ ಕೋಳಿಯ ಬೆಲೆ ಖಂಡಿತವಾಗಿಯೂ ೨೦೦ ದಿನಾರ್‌ಗಳಿಗಿಂತ ಅನೇಕ ಪಟ್ಟು ಹೆಚ್ಚು ಇರಲೇಬೇಕು.’ ಮಾರನೆಯ ದಿನ ನಜ಼ರುದ್ದೀನ್‌ ಪೇಟೆಬೀದಿಗೆ ತನ್ನ ಕೋಳಿಯಡನೆ ಬಂದ, ದೊಡ್ಡ ಮೊತ್ತದ ಹಣಕ್ಕೆ ಅದನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೋವಿಂದಯ್ಯನವರ ಗೃಹಬಂಧನ:ಕಿರಣ್ ಕುಮಾರ್ ಕೆ. ಆರ್.

'ನಾಳೆ ಅಪ್ಪನಿಗೆ ಟೌನಿಗೆ ಹೋಗ್ಲಿಕ್ಕೆ ಹೇಳ್ಬೇಕು.', ಎಂದುಕೊಂಡ ರಾಜಮೂರ್ತಿ. ಅಪ್ಪ ಗೋವಿಂದಯ್ಯನವರಿಗೆ ಎಂಬತ್ತರ ಆಸುಪಾಸು. ಅವರದು ಮೊದಲಿನಿಂದಲೂ ಸ್ವಲ್ಪ ದುರ್ಬಲ ಶರೀರ. ಶಾರೀರವೂ ಅಷ್ಟೆ, ದುರ್ಬಲ. ಆದರೂ ಅವರದು ಬಿಡುವಿಲ್ಲದ ಓಡಾಟ. ಒಂದೆಡೆ ಸುಮ್ಮನೆ ಕುಳಿತವರಲ್ಲ. ಎಲ್ಲೋ ಒಂದು ಮದುವೆ ಎಂದರೆ ಅಡಿಗೆಗೆ ಸಹಾಯಕ್ಕೆ, ಇನ್ನೆಲ್ಲೋ ಪೂಜೆ ಎಂದರೆ ಅಲ್ಲಿಗೆ 'ಸುಧಾರಿಸಲಿಕ್ಕೆ', ಮತ್ತೆಲ್ಲೋ ಶ್ರಾದ್ಧವೆಂದರೆ ಅಲ್ಲಿಗೂ ಕೆಲಸದಲ್ಲಿ ಕೈ ಜೋಡಿಸಲಿಕ್ಕೆ – ಒಟ್ಟಿನಲ್ಲಿ ಯಾವ ಸಮಾರಂಭವಾದರೂ ಗೋವಿಂದಯ್ಯ ಅಲ್ಲಿರುತ್ತಿದ್ದರು. ಅವರ ಜೀವನವಿಡೀ ಅವರು ಮಾಡಿದ್ದು ಇದನ್ನೇ. 'ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಾಯ.. ಪ್ರಾಯ..ಪ್ರಾಯ..: ಪ.ನಾ.ಹಳ್ಳಿ.ಹರೀಶ್ ಕುಮಾರ್

ಹರೆಯದ ಮಾತು ಬಲು ಸೊಗಸು, ಅಂದವಾಗಿರುವುದೆಲ್ಲ ನನ್ನದೆಂಬ ಭಾವನೆ, ಮೀಸೆ ಚಿಗುರುವ ವಯಸು, ನಾವೀನ್ಯತೆಗೆ ಚಡಪಡಿಸುವ ಮನಸು, ಸೊಲನ್ನೊಪ್ಪದೇ ಬರೀ ಗೆಲುವೇ ಬೇಕೆಂಬ ಹಂಬಲ, ಹದಿನೈದು ದಾಟಿ ಬಂದ ಈ ವಯಸ್ಸು ನೋಡಿದ್ದೆಲ್ಲಾ ಸುಂದರವಾಗೇ ಕಾಣಬೇಕು, ಕೇಳಿದ್ದೆಲ್ಲಾ ಸಂಗೀತವೇ ಆಗಿರಬೇಕು, ಕಷ್ಟಕಾರ್ಪಣ್ಯಗಳಿಲ್ಲದೇ ಕೇವಲ ಸುಖದಲ್ಲೇ ಒರಳಾಡಬೇಕೆಂಬ ತುಡಿತ ಈ ಹರೆಯದ್ದು. ಮನ್ಮಥನನ್ನೂ ನಾಚಿಸುವ ರಸಿಕತೆ, ಮದಕರಿಯನ್ನೂ ಮೀರಿಸುವ ಧೈರ್ಯ, ಜಗತ್ತನ್ನೇ ಗೆಲ್ಲಬಲ್ಲ ಆತ್ಮವಿಶ್ವಾಸ ಈ ಹುಚ್ಚುಕೋಡಿ ಮನಸ್ಸಿನದು. ಪರಾವಲಂಬನೆಯಿಂದ ಹೊರಬಂದು ಸ್ವಾವಲಂಬಿ ಜೀವನದತ್ತ ಮುಖಮಾಡುವ ಮಧ್ಯಂತರ ಅವಧಿಯೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಡಾಬಿಲಿಡೂಬ ಮತ್ತು ಟುಸ್ಕಿಲಿ ಪುಸ್ಕಿಲಿ: ಹರಿಪ್ರಸಾದ್ ಕೆ.ಆರ್.

     ಒಂದಾನೊಂದು ಕಾಡು. ಆ ಕಾಡಿನಲ್ಲಿ ಒಂದು ಸಿಂಹ ವಾಸವಾಗಿತ್ತು. ಆ ಸಿಂಹದ ಹೆಸರು ಡಾಬಿಲಿಡೂಬ. ಒಂದುದಿನ ಡಾಬಿಲಿಡೂಬಾಗೆ ತುಂಬಾ ಹಸಿವೆಯಾಯಿತು. ಅದು ಆಹಾರ ಹುಡುಕಿಕೊಂಡು ಹೊರಟಿತು. ಎಷ್ಟೇ ಅಲೆದರೂ ಅದಕ್ಕೆ ಆಹಾರ ಸಿಗಲಿಲ್ಲ. ಹುಡುಕಿ ಹುಡುಕಿ ಅದಕ್ಕೆ ಸುಸ್ತಾಗತೊಡಗಿತು. ಸುಸ್ತಿನಿಂದ ಅದಕ್ಕೆ ಸಿಟ್ಟು ಬರತೊಡಗಿತು.   ಅದೇ ಸಮಯಕ್ಕೆ ಕಿಚಕಿಚ ಅಂತ ಶಬ್ದ ಕೇಳಿತು. ಶಬ್ದ ಕೇಳಿ ಸಿಂಹ ತಿರುಗಿ ನೋಡಿತು. ನೋಡಿದರೆ ಒಂದು ಪುಟ್ಟ ಇಲಿ. ಸಿಂಹಕ್ಕೆ ಇಲಿ ನೋಡಿ ಸಂತೋಷವಾಯಿತು. ಗಬಕ್ಕನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಲೆ: ಪ್ರಸಾದ್ ಕೆ.

ಅವನು ಮಾತಿಲ್ಲದೆ ಒಳಬಂದ. ನನ್ನಷ್ಟಕ್ಕೆ ನಾನು ರೇಜರ್ ಬ್ಲೇಡನ್ನು ಹಿಂದಕ್ಕೂ ಮುಂದಕ್ಕೂ ಉಜ್ಜುತ್ತಾ ಹರಿತಗೊಳಿಸುತ್ತಿದ್ದೆ. ಅವನ ಗುರುತು ಹಿಡಿದಾಕ್ಷಣ ನಾನು ನನಗರಿವಿಲ್ಲದಂತೆಯೇ ಸಣ್ಣಗೆ ನಡುಗಿದೆ. ನನ್ನ ಪುಣ್ಯಕ್ಕೆ ಅದನ್ನವನು ಗಮನಿಸಲಿಲ್ಲ. ನಾನು ನನ್ನ ಭಯವನ್ನು ತೋರಗೊಡದೆ ಬ್ಲೇಡನ್ನು ಹರಿತಗೊಳಿಸುವುದನ್ನು ಮುಂದುವರಿಸಿದೆ. ರೇಜರ್ ಬ್ಲೇಡನ್ನು ಹೆಬ್ಬೆರಳಿಗೆ ಕೊಂಚ ಒತ್ತಿ ಹಿಡಿದು, ಬೆಳಕಿಗೂ ಹಿಡಿದು ಪರೀಕ್ಷಿಸುತ್ತಾ ಸಾಕಷ್ಟು ಹರಿತವಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಂಡೆ. ಅತ್ತ ಅವನೂ ಮಾತನಾಡುವ ಗೋಜಿಗೆ ಹೋಗದೆ ತನ್ನ ಸೊಂಟಕ್ಕೆ ಬಿಗಿದುಕೊಂಡಿದ್ದ, ಬಂದೂಕಿನ ಬುಲೆಟ್ಟುಗಳನ್ನು ಉದ್ದಕ್ಕೂ ಜೋಡಿಸಿದ್ದ ಬೆಲ್ಟ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶತ್ರುಗಳು ಯಾರೆಂಬುದು ತಿಳಿಯಿತು! ಅದು ನಾವೇ!!!: ಅಖಿಲೇಶ್ ಚಿಪ್ಪಳಿ

ವಿಶ್ವ ಭೂದಿನದಂದು ಇಡೀ ಭೂಮಿಯನ್ನು ಕಾಪಾಡಲು ಕಾಡು ಬೇಕು. ಆದ್ದರಿಂದ ಮಾರ್ಚ್ 22ರಂದು ವಿಶ್ವದ ಎಲ್ಲಾ ದೇಶಗಳಲ್ಲೂ ಆದಷ್ಟು “ಗಿಡ ನೆಡಿ” ಎಂಬ ಘೋಷವಾಕ್ಯಕ್ಕೆ ಒತ್ತು ಕೊಟ್ಟಿದ್ದರು. ದೇಶದ ಪ್ರಧಾನಿಯಿಂದ ಹಿಡಿದು ಹೆಚ್ಚೂ-ಕಡಿಮೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭೂದಿನದ ಅಂಗವಾಗಿ ಆಕರ್ಷಕವಾದ ಹೇಳಿಕೆಗಳನ್ನು ನೀಡಿದರು. ನಮ್ಮಲ್ಲಿಯ ಮಾಧ್ಯಮಗಳು ಭೂದಿನವನ್ನು ವಿಶೇಷವಾಗಿ ಪರಿಗಣಿಸಲಿಲ್ಲವೆಂಬುದು ಇಲ್ಲಿ ಗಮನಾರ್ಹ. ಸಾಮಾನ್ಯವಾಗಿ ಭೂಮಿ ಗುಂಡಗಿದೆ ಎನ್ನುತ್ತೇವೆ. ನಿಜವಾಗಲೂ ಭೂಮಿ ಗುಂಡಗಿದೆಯೇ? ದಿನದ 24 ತಾಸುಗಳಲ್ಲಿ ರಾತ್ರಿಯೆಷ್ಟು? ಹಗಲೆಷ್ಟು? ಖಂಡಗಳು ಚಲಿಸುತ್ತವೆಯೇ? ಹೀಗೊಂದಿಷ್ಟು ನಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಸಾರ್ಥಕತೆ! ನಗರ ವೃತ್ತ ಬದಿಯಲೊಂದು ವೃಕ್ಷ ಒಡಲಲ್ಲಿ ಹೊತ್ತಿತ್ತು ಹೊರಲಾರದ ಹೊರೆ ! ಎಸ್‍ಟಿಡಿ ಬೋರ್ಡು ಪಾರ್ಲರ್ ಕಾರ್ಡು ಜೆರಕ್ಸ್ ಅಂಗಡಿ ಬಾಣ ನೆರಳಲ್ಲೇ ಅಂಗಡಿ ಹೂಡಿದ ಪಾಷಾನ ಪಂಕ್ಚರು ಹತಾರೆ ಟ್ಯೂಬು ಟಯರುಗಳು ಸಿನೀಮಾ ಪೋಸ್ಟರುಗಳು ಮೈತುಂಬಾ ಉಡುಗೆ ಬಣ್ಣಬಣ್ಣದ ತೊಡಿಗೆ! ಮೊಳೆ ಚುಚ್ಚಿದ್ದರು ಹಗ್ಗ ಬಿಗಿದಿದ್ದರು ರೆಂಬೆ ಮುರಿದಿದ್ದರು ನೆತ್ತಿ ತರಿದಿದ್ದರು ಸುಣ್ಣ ಬಳಿದು ಚರ್ಮ ಸುಲಿದು ಕ್ರೌರ್ಯ ಉಣಿಸಿದ್ದರು! ದಟ್ಟ ನೆರಳು ನೀಡಿ ನೂರಾರು ಶುಕಪಿಕಗಳಿಗೆ ನೆಮ್ಮದಿಯ ಗೂಡಾಗಿ ಹಚ್ಚ ಹಸಿರಾಗಿ  ತನ್ನದೆಲ್ಲವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುರುಡುಮಲೆ ಪ್ರವಾಸ: ಪ್ರಶಸ್ತಿ

ಸ್ಥಳವೊಂದರ ಹೆಸರು ಕಾಲಕಾಲಕ್ಕೆ ಹೇಗೆ ಬದಲಾಗುತ್ತಾ ಸಾಗುತ್ತೆ ಅನ್ನೋದಕ್ಕೆ ಕೋಲಾರ ಮತ್ತು ಕುರುಡುಮಲೆ ಒಳ್ಳೆಯ ಉದಾಹರಣೆ ಅನಿಸುತ್ತೆ. ಮೂರನೆಯ ಶತಮಾನದಲ್ಲಿ ಗಂಗರ ಅಧೀನದಲ್ಲಿದ್ದ ಒಂದು ನಗರಿ ಕೂವಲಾಲಪುರ. ಅದು ನಂತರ ಚೋಳ,ಹೊಯ್ಸಳ, ವಿಜಯನಗರ ಅರಸರಿಂದ ಆಳಲ್ಪಡುತ್ತಾ ಕೋಲಾರಮ್ಮನ ದೇವಸ್ಥಾನವನ್ನು ಹೊಂದಿ ಕೋಲಾರವಾಯಿತಂತೆ. ಅದೇ ರೀತಿ ಬ್ರಹ್ಮ, ವಿಷ್ಣು, ಮಹೇಶ್ವರರು ಧರೆಗಿಳಿದು ಬಂದು ಕೂಡಿ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದ್ದರಿಂದ ಕೋಲಾರದ ಹತ್ತಿರದ ಸ್ಥಳವೊಂದಕ್ಕೆ ಕೂಟುಮಲೆಯೆಂದು ಹೆಸರಾಯಿತಂತೆ. ಕೂಟುಮಲೆ, ಕೂಡುಮಲೆ ಜನರ ಬಾಯಲ್ಲಿ ಕುರುಡುಮಲೆಯಾಗಿದೆಯೀಗ. ಹೋಗುವುದು ಹೇಗೆ ?  ಕೋಲಾರದಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮುಂಬೈ ಮುಂಗಾರು ಮಳೆ: ಅಪರ್ಣಾ ರಾವ್

ನೀನು ಇನ್ನೇನು ಎರಡು ದಿನದಲ್ಲಿ ಬರ್ತೀಯ ಅಂತ ಗುಲ್ಲು ಹಬ್ಬಿತ್ತು.  ಎಲ್ಲಾ ಕಡೆ ನಿಂದೇ ಜಪ. ನನಗೂ ನೀನು ಬರೋ ನಿರೀಕ್ಷೆ  ಬೆಟ್ಟದಷ್ಟು..  ಆದ್ರೆ  ಯಾರ ಹತ್ರಾನೂ  ಹೇಳ್ಕೊಲ್ಲಿಲ್ಲ. ನಿನ್ನ ನೆನಪಾದಾಗಲೆಲ್ಲಾ ಒಂದು ದೀರ್ಘ ಬಿಸಿ ಉಸಿರು ಬಿಟ್ಟಿದ್ದಷ್ಟೇ. ನನಗೆ  ಸಿಟ್ಟೂ ಕೂಡ ನಿನ್ಮೇಲೆ.. ಅದೆಷ್ಟು ಜನರಿಗೆ ನೀನು ಪ್ರಿಯತಮ.? ನೀನು ನನಗಿಂತಾ ಹೆಚ್ಚು ಆ ಊರ್ಮಿಳೆ  ಇಳೆ ಜೊತೆ ಸರಸ ಆಡೋ ವಿಷ್ಯ ನನಗೇನು ಗೊತ್ತಿಲ್ವಾ? ನೀನು ಅವಳು ದೂರದಲ್ಲೆಲ್ಲೋ ಸೇರೋದನ್ನ ವಾಸನೆಯಲ್ಲೇ ಕಂಡು ಹಿಡಿತೀನಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕವಿತೆಯ ಜಾಡು ಹಿಡಿದು: ಸ್ಮಿತಾ ಅಮೃತರಾಜ್. ಸಂಪಾಜೆ.

ಈ ಕವಿತೆ ಒಮ್ಮೊಮ್ಮೆ ಅದೆಷ್ಟು ಜಿಗುಟು ಮತ್ತುಅಂಟಂಟು ಅಂದ್ರೆ ಹಲಸಿನ ಹಣ್ಣಿನ ಮೇಣದ ತರ. ಮತ್ತೆ ಮತ್ತೆ  ತಿಕ್ಕಿದಷ್ಟೂ ಅಂಟಿಕೊಳ್ಳುತ್ತಾ, ಬಿಡದೇ ಕಾಡುತ್ತಾ , ಸತಾಯಿಸುತ್ತಾ, ಹಿಂದೆ ಮುಂದೆ ಸುತ್ತಿ ಸುಳಿದು ಯಾವುದೋ ಭಾವನಾ ತೀರಕ್ಕೆ ಲಗ್ಗೆಯಿಡುತ್ತಾ ತನ್ನನ್ನು ತಾನು ಮರೆವಿಗೆ ನೂಕಿಬಿಡುತ್ತದೆ. ಅರೆ ಕ್ಷಣವೂ  ಬಿಟ್ಟೂ ಬಿಡದ ಆತ್ಮಸಂಗಾತಿಯಂತೆ ಪಕ್ಕಕ್ಕಿರುತ್ತದೆ. ಕವಿತೆ ಯಾವೊತ್ತೂ ನನ್ನ ಕೈ ಬಿಡಲಾರದು ಎಂಬ ಗುಂಗಿನಲ್ಲೇ, ತುಸು ಹೆಚ್ಚೇ ಹಚ್ಚಿಕೊಂಡು, ಯಾವುದಕ್ಕೂ ವಿನಾಕಾರಣ ತಲೆ ಕೆಡಿಸಿಕೊಳ್ಳದೇ, ಕವಿತೆಯನ್ನು ನನ್ನ ತೆಕ್ಕೆಯೊಳಗಿಟ್ಟೋ. . … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಗಿಸಲು ಪ್ರಯತ್ನಿಸಿದ ನಗೆ ನಾಟಕೋತ್ಸವ: ಹಿಪ್ಪರಗಿ ಸಿದ್ಧರಾಮ

ಸದಭಿರುಚಿಯ ನಾಟಕಕಾರ ಹುಬ್ಬಳ್ಳಿಯ ಡಾ.ಗೋವಿಂದ ಮಣ್ಣೂರ ಅವರು ಹಿಂದೊಂದು ಕಾಲದ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ಪುಟ್ಟಣ್ಣ ಕಣಗಾಲ ನಿರ್ದೇಶನದ ಕನ್ನಡ ಚಿತ್ರ ‘ಉಪಾಸನೆ’ಯಲ್ಲಿ ನಾಯಕಿ ಆರತಿಗೆ ಸಮಸಮನಾಗಿ ನಾಯಕ ಪಾತ್ರದಲ್ಲಿ ನಟಿಸಿ, ಹೆಸರಾದವರು. ಮುಂದೆ ಏನಾಯಿತೋ ಗೊತ್ತಿಲ್ಲ, ಚಿತ್ರರಂಗದ ಸಹವಾಸ ಬಿಟ್ಟು, ಹುಬ್ಬಳ್ಳಿಯಲ್ಲಿ ಸೈಲೆಂಟಾಗಿ ತಮ್ಮ ವೃತ್ತಿಯೊಂದಿಗೆ ಆಗಾಗ ಧಾರವಾಡ ಆಕಾಶವಾಣಿಗೆ ಸದಭಿರುಚಿಯ ಹಾಸ್ಯ ನಾಟಕಗಳನ್ನು ರಚಿಸಿ ಕೊಡುವುದು, ಕಲಾವಿದರನ್ನು ಪ್ರೋತ್ಸಾಹಸಿ, ಸಂಘಟಿಸುವುದು, ಪತ್ರಿಕೆಗಳಿಗೆ ಕಾಲಮ್ ಬರೆಯುತ್ತಾ ತಮ್ಮಲ್ಲಿರುವ ಸೃಜನಶೀಲತೆಯನ್ನು ಇಂದಿಗೂ ಕಾಪಿಟ್ಟುಕೊಂಡು ಸಕ್ರೀಯರಾಗಿದ್ದಾರೆ. ಇಂತಹ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಲ್ತಪ್ಪವೂ ಒಂದಗುಳು ಅನ್ನವೂ: ಕೃಷ್ಣವೇಣಿ ಕಿದೂರ್

 ನಮ್ಮದು   ಕೇರಳ, ಕರ್ನಾಟಕದ  ಗಡಿಭಾಗದಲ್ಲಿ ಮನೆ. ಮನೆಯ ಎದುರಿಗೆ  ಅಂಗಳ ದಾಟಿದರೆ ವಿಸ್ತಾರವಾದ ಅಡಿಕೆ, ಬಾಳೆ, ಕೊಕ್ಕೋ ಮತ್ತುತೆಂಗಿನ ತೋಟ. ಪ್ರಾಥಮಿಕ  ಶಾಲೆ ಕೇರಳದಲ್ಲಿ. ಮನೆಯಿಂದ ಅರ್ಧ ಗಂಟೆಯ ಕಾಲ್ನಡಿಗೆಯ ಹಾದಿ. ಮಧ್ಯಾಹ್ನ ಶಾಲೆಯಲ್ಲಿ ಈಗಿನ ಹಾಗೆ ಬಿಸಿಯೂಟ ಇಲ್ಲ. ಮನೆಯಲ್ಲಿ ಬೆಳಗ್ಗೆ ಮಾಡಿದ ಗಂಜಿಗೆ ಇಷ್ಟು ಮಜ್ಜಿಗೆ ಸುರಿದು ಅದರ ಮೇಲೆ ಒಂದು ಮಾವಿನ ಮಿಡಿ ಉಪ್ಪಿನಕಾಯಿಯ ಮಿಡಿ ಹಾಕಿ ಲೆಫ್ಟ್, ರೈಟ್ ಮಾಡುತ್ತ ನಡೆದರೆ  ಎರಡು ರಾಜ್ಯಗಳಾಲ್ಲಿ ನಮ್ಮ ಸಂಚಾರ.  ಗಡಿ, ಬೇರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾ ಗೆಳೆಯಾ ಹಾರಿಸೋಣ ಗಾಳಿಪಟ: ಮಲ್ಲೇಶ ಮುಕ್ಕಣ್ಣವರ

ಹಾಯ್ ಫ್ರೆಂಡ್ … ಈಗೆಲ್ಲಿರುವಿರೋ? ಏನು ಮಾಡುತ್ತಿರುವಿರೋ? ಗೊತ್ತಿಲ್ಲ. ಆದರೆ ನಿನ್ನ ನೋಡಬೇಕು ಅಂತ ನನ್ನ ಮನಸ್ಸು ಪರಿ ಪರಿಯಾಗಿ ಹಂಬಲಿಸುತ್ತಿದೆ. ನಿನಗೆ ನೆನಪಿದೆಯಾ? ಆಗ ನನಗೆ ನಿನೇ ಜಗತ್ತು. ಊಟ, ಆಟ, ಪಾಠ ಎನೇ ಇದ್ದರೂ ಅದರಲ್ಲಿ ನಮ್ಮಿಬ್ಬರದ್ದು ಸಮಪಾಲು ಸಮಬಾಳು. ಕಿತ್ತು ತಿನ್ನುವ ಬಡತನವಿದ್ದರು ನನಗೆ ಅದ್ಯಾವುದರ ಅರಿವು ಬರದಂತೆ ನೋಡಿಕೊಂಡವನು ನೀನು. ಹಬ್ಬ ಬರಲಿ ಜಾತ್ರೆ ಇರಲಿ ಮನೇಲಿ ಗಲಾಟೆ ಮಾಡಿ ನಿನ್ನಂತ ಬಟ್ಟೆನ ನಂಗೂ ಕೊಡಿಸುವರೆಗೂ ಬಿಡತಾನೇಯಿರಲಿಲ್ಲಾ. ನನ್ನ ಮೇಲೆ ಸಿಟ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಜ಼ರುದ್ದೀನ್‌ನ ಚೆರಿಹಣ್ಣಿನ ತರ್ಕ ಪೇಟೆಯಲ್ಲಿ ಮಾರುವ ಉದ್ದೇಶದಿಂದ ಒಂದು ಚೀಲ ತುಂಬ ಚೆರಿಹಣ್ಣನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ನಜರುದ್ದೀನ್ ಪಟ್ಟಣಕ್ಕೆ ಹೋಗುತ್ತಿದ್ದ. ದಾರಿಯಲ್ಲಿ ಒಂದು ಡಜನ್‌ ಮಕ್ಕಳು ಅವನನ್ನೂ ಅವನು ಒಯ್ಯುತ್ತಿದ್ದ ಚೆರಿಹಣ್ಣುಗಳನ್ನೂ ನೋಡಿದರು. ಕೆಲವು ಚೆರಿಹಣ್ಣುಗಳು ತಿನ್ನಲು ಸಿಕ್ಕುತ್ತವೆಂಬ ಸಂತೋಷದಿಂದ ಅವರು ನಜ಼ರುದ್ದೀನ್‌ನ ಸುತ್ತಲೂ ಹಾಡುತ್ತಾ ಕುಣಿಯತೊಡಗಿದರು. ಅವರು ಕೇಳಿದರು, “ಮುಲ್ಲಾ, ನಮಗೆ ಕೆಲವು ಹಣ್ಣುಗಳನ್ನು ಕೊಡು.” ನಜ಼ರುದ್ದೀನ್‌ ಇಕ್ಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ. ಅವನಿಗೆ ಮಕ್ಕಳ ಮೇಲೆ ಬಲು ಪ್ರೀತಿ ಇತ್ತು, ಎಂದೇ ಅವರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರಳುಗಾಡನ್ನೇ ತಡೆದ ಮಹಾಗೋಡೆ ಯಾಕುಬಾ: ಅಖಿಲೇಶ್ ಚಿಪ್ಪಳಿ

ಈ ಪ್ರಪಂಚದ ಬಹುತೇಕ ಜನಸಂಖ್ಯೆ ಕಾಡು ಇರುವುದು ಕಡಿಯಲಿಕ್ಕೆ, ಪ್ರಾಣಿಗಳು ಇರುವುದು ತಿನ್ನಲಿಕ್ಕೆ ಎಂಬು ಭಾವಿಸಿಕೊಂಡಂತಿದೆ. ಈ ಮನೋಭಾವದಿಂದಾಗಿಯೇ ಜಗತ್ತಿನ ಬಹಳಷ್ಟು ಕಾಡು ಹಾಗೂ ವನ್ಯಸಂಪತ್ತು ನಶಿಸಿಹೋಗುತ್ತಿದೆ. ಕಾಡು ಇಲ್ಲದೆ ಮಳೆಯಿಲ್ಲ, ಮಳೆಯಿಲ್ಲದೆ ನೀರಿಲ್ಲ, ನೀರಿಲ್ಲದೆ ಮನುಷ್ಯನ ಜೀವನವಿಲ್ಲ ಎಂಬ ಸತ್ಯ ಇದೀಗ ನಿಧಾನವಾಗಿ ಅರಿವಿನ ಹಂತಕ್ಕೆ ಬರುತ್ತಿದೆ. ಅದರಲ್ಲೂ ನೀರಿಗಾಗಿ, ಕಾಡಿಗಾಗಿ ಜೀವಮಾನವನ್ನೇ ತೇಯ್ದ ಹಲವರು ನಮ್ಮ ಮುಂದಿದ್ದಾರೆ. ಇವರ ನಿಸ್ವಾರ್ಥ ಸೇವೆ ಜಗತ್ತಿನ ಧುರೀಣರಿಗೆ ಮಾದರಿಯಾಗಬೇಕು ಅಂತದೊಂದು ಸಾಹಸಗಾಥೆಯನ್ನು  ಅನಾವರಣಗೊಳಿಸುವ ಮೊದಲು ನಮ್ಮ ಕಾಲಬುಡದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ