ಬ್ಲಾಗುಗಳ ಲೋಕದಲ್ಲಿ: ಪ್ರಶಸ್ತಿ ಪಿ.
ಮುಂಚೆಯೆಲ್ಲಾ ಸಾಹಿತಿಯೆಂದ್ರೆ ಅವ ಕವಿಗೋಷ್ಠಿಗಳಲ್ಲಿ, ಸಾಹಿತ್ಯ ಸಮ್ಮೇಳನಗಳಲ್ಲಿ ತನ್ನ ಕವಿತೆಯನ್ನೋ, ಸಾಹಿತ್ಯಪ್ರಕಾರವನ್ನೂ ಪ್ರಸ್ತುತಪಡಿಸುವವನು, ಒಂದು ಖಾದಿ ಜುಬ್ಬ, ಜೋಳಿಗೆಯೊಂದಿಗೆ ತಿರುಗಾಡುವವನು ಎಂಬೆಲ್ಲಾ ಕಲ್ಪನೆಗಳಿರುತ್ತಿದ್ದವು.ಆದರೆ ಬದಲಾಗುತ್ತಿರುವ ಕಾಲದೊಂದಿಗೆ ಈ ಪರಿಕಲ್ಪನೆಯೂ ಬದಲಾಗುತ್ತಿರುವಂತೆ ಕಾಣುತ್ತಿದೆ. ಪುಸ್ತಕಗಳ ಮೂಲಕವೇ ಜನರ ಮನಗೆಲ್ಲುತ್ತಿರುವ ಹಿಂದಿನ ಜಮಾನಾದ ಸಾಹಿತಿಗಳೊಂದಿಗೆ, ಒಂದೇ ಒಂದು ಪುಸ್ತಕವನ್ನು ಬರೆಯದಿದ್ದರೂ ತಮ್ಮ ಜಮಾನಾದ ಗೆಳೆಯರ ಬಳಗದಲ್ಲಿ ಗುರುತಿಸಿಕೊಳ್ಳುತ್ತಿರುವ ಹೊಸ ಪೀಳಿಗೆಯ ಸಾಹಿತಿಗಳ ಉಗಮವಾಗುತ್ತಿರುವಂತೆ ಕಾಣುತ್ತಿದೆ. ಕವಿ, ಸಾಹಿತ್ಯ ಸಮ್ಮೇಳನಕ್ಕಾಗಿ ತಮ್ಮ ಸಮಯ ಮೀಸಲಿಡುವಷ್ಟು ಪುರುಸೊತ್ತಿನವರಲ್ಲ ಈ ಎರಡನೇ ಪೀಳಿಗೆಯವರು. ನವ್ಯ, … Read more