ಕಾಲದ ಚಕ್ರವು ತಿರುಗುವುದೊ ಜ್ವಾಕಿ,, ಮುಪ್ಪೆಂಬ ಶೈಶವ ಬರುವುದೊ ನಕ್ಕಿ: ಸುಮನ್ ದೇಸಾಯಿ
ರವಿವಾರ ಸಂಜಿಮುಂದ ವಾಕಿಂಗ್ಗೆಂತ ಪಾರ್ಕಿಗೆ ಹೋಗಿದ್ದೆ. ಅಲ್ಲೆ ಒಂದ ಬೆಂಚಿನ ಮ್ಯಾಲೆ ವಯಸ್ಸಾದ ಇಬ್ಬರು ಅಜ್ಜಾ-ಅಜ್ಜಿ ಕೂತಿದ್ರು. ದಿನಾ ನೋಡತಿದ್ದೆ ಅವರನ್ನ. ಅವರನ್ನ ನೋಡಿ ಒಂಥರಾ ಖುಷಿನು ಆಗತಿತ್ತು. ಇಳಿವಯಸ್ಸಿನ್ಯಾಗ ಒಬ್ಬರಿಗೊಬ್ಬರು ಜೊಡಿಯಾಗಿ ದಿನಾ ಈ ಹೊತ್ತಿನ್ಯಾಗ ಆ ಪಾರ್ಕಿಗೆ ಬರತಿದ್ರು. ಅವತ್ತ ಅವರನ್ನ ಮಾತಾಡ್ಸಬೇಕನಿಸಿ ಹತ್ರ ಹೋಗಿ ಮಾತಾಡಿಸಿದೆ. ನಾ ಹಂಗ ಅವರ ಹತ್ರ ಹೋಗಿ ಮಾತಾಡ್ಸಿದ್ದು ಆ ದಂಪತಿಗಳಿಗೆ ಭಾಳ ಖುಷಿ ಆತು. ಹತ್ರ ಕೂಡಿಸಿಕೊಂಡು ಭಾಳ ಅಂತಃಕರಣದಿಂದ ಮಾತಾಡ್ಸಿದ್ರು. ಅವರ … Read more
ಹೆಂಡತಿಯೊಬ್ಬಳು ಮನೆಯೊಳಗಿಲ್ಲದಿದ್ದರೆ: ಅಮರ್ ದೀಪ್ ಪಿ.ಎಸ್.
ಆಗಾಗ ಹೆಂಡತಿಯಾದವಳು ತವರಿಗೆ ಹೋಗಿ ಬರುತ್ತಿರಬೇಕು. ಮನೆಯ ದಿನನಿತ್ಯ ನಡೆಯುವ ಚಟುವಟಿಕೆಗಳಿಗೆ ಗಂಡನಾದವನು ಕಣ್ತೆರೆದಂತಾಗುತ್ತೆ. ಅಡುಗೆ ಕಸ, ಮುಸುರೆ, ದೇವರ ಪೂಜೆ, ಸಂಜೆ ಮುಂದೆ ದೀಪ ಹಚ್ಚುವುದು ಎಲ್ಲಾ ಕಡೆ ಗಮನ ಹರಿಸಿದಂತಾಗುತ್ತದೆ. ಹೆಂಡತಿ ಹೋದ ಮೊದ ಮೊದಲ ದಿನಗಳಲ್ಲಿ ಹುಮ್ಮಸ್ಸಿನ ಸ್ನಾನ, ಸ್ನಾನದ ಮಧ್ಯೆ ಹಳೇ ಹಳೇ ನೆನಪುಗಳ ಹಾಡುಗಳು. ಹಳೆಯ ಹುಡುಗಿಯು ಹಲ್ಲು ಕಾಣದಂತೆ ನಕ್ಕ ನಗೆಯ ಪುಳಕ. ಹೊರ ಬರುತ್ತಿದ್ದಂತೆಯೇ ರಜೆಯನ್ನು ಎಲ್ಲಿ ಹೇಗೆ ಆಚರಿಸುವುದು? ಯಾರು ಜೊತೆಯಿರಬೇಕು? ಯಾರಿಗೆ ಫೋನು ಮಾಡಬೇಕು? … Read more
ಎಂದೆಂದಿಗೂ ಬೆಳಗುತಿರಲಿ ನನ್ನೊಡಲ ಮಿಹಿರ: ಸಂಗೀತ ರವಿರಾಜ್
ನನ್ನ ಒಲವೆ ಹೇಳೇ ಚೆಲುವೆ ಪ್ರೀತಿಯೊಂದೆ ಗೆಲ್ಲದೇ ನಾನು ನೀನು ಕೂಡಿ ಕಳೆದ ಬದುಕೆ ನಮ್ಮ ಕಾಯದೇ ಕೊಡಲು ಕೊಳ್ಳಲು ಒಲವು ಬಿಟ್ಟು ಬೇರೆ ಉಂಟೆ ಬಾಳಲಿ ಕೊಟ್ಟದೆಷ್ಟೋ ಪಡೆದದೆಷ್ಟೋ ನಮ್ಮ ನಂಟೆ ಹೇಳಲಿ ಜಯತೀರ್ಥ ಎಂಬುವರ ಕವಿವಾಣಿಯನ್ನು ನಾನು ಡೈರಿಯಲ್ಲಿ ಬರೆದಂದಿನಿಂದ ಅದೆಷ್ಟು ಬಾರಿ ಓದುತ್ತಿರುತ್ತೇನೋ ನನಗೆ ತಿಳಿಯದು. ಬೆಟ್ಟದಷ್ಟು ಇಷ್ಟಪಟ್ಟ ಈ ಸಾಲುಗಳಿಂದ ನನ್ನ ಹೃದಯಕ್ಕೆ ಏನೋ ಅರಿವಾಗದ ಆಪ್ತತೆ ಮತ್ತು ಕಕ್ಕುಲತೆ. ಇದಕ್ಕೊಂದು ಬಲವಾದ ಕಾರಣವಿದೆ. ನನ್ನ ಮದುವೆಯ ಆಮಂತ್ರಣ ಪತ್ರಿಕೆಗೆ ಪತ್ರಕರ್ತ … Read more
ಹೊಟ್ಟೆ ಪಾಡು !!: ಸಂತೋಷ್ ಗುರುರಾಜ್
ಸುಮಾರು ವರ್ಷಗಳಿಂದಲೂ, ಎಂದರೆ ಭಾರತಕ್ಕೆ ಸ್ವತಂತ್ರ ಪೂರ್ವದಿಂದಲೂ ಮತ್ತು ಸ್ವತಂತ್ರ ಬಂದ ಮೇಲೆಯೂ ಸಹ ಆಗಿನ ಬಹುತೇಕ ಜನರು ತಮ್ಮ ಹೊಟ್ಟೆ ಪಾಡಿಗಾಗಿ ಪರೆದಾಡುವ ಪರಿಸ್ಥಿತಿ ಇತ್ತು ಎಂದು ನಾವು ಓದಿದ ಅಥವಾ ಕೇಳಿದ ಚರಿತ್ರೆ ಇಂದ ತಿಳಿಯುತ್ತದೆ. ಆದರೆ ಇಂದಿನ ಹೊಟ್ಟೆ ಪಾಡಿಗೂ ಮತ್ತು ಅಂದಿನ ಹೊಟ್ಟೆ ಪಾಡಿಗೂ ಬಹಳಷ್ಟು ವ್ಯತ್ಯಾಸವಿದೆ. ಆಗಿನ ಕಾಲದಲ್ಲಿ ಜನ ತಮ್ಮ ಹೊಟ್ಟೆಗೆ ಎರಡು ಹೊತ್ತು ಗಂಜಿ ಸಿಕ್ಕರೆ ಸಾಕು ಎನ್ನುವ ಹೊಟ್ಟೆಪಾಡು ಆದರೆ ಈಗಿನ ಜನ ಹೊಟ್ಟೆಯ ಸುತ್ತು … Read more
ಹಬ್ಬದ ದಿನದ ತಳಮಳ: ಪದ್ಮಾ ಭಟ್
ಹಬ್ಬಕ್ಕೆ ಬತ್ತಿಲ್ಯ? ಬಾರೇ.. ಎರಡು ದಿನಾ ಆದ್ರೂ ಬಂದು ಹೋಗು ಎಂದು ಅಮ್ಮ ಫೋನ್ ಮಾಡಿ ಹೇಳಿದಾಗ, ಇಲ್ಲವೆನ್ನಲು ಮನಸ್ಸು ಒಪ್ಪದಿದ್ದರೂ, ಅನಿವಾರ್ಯವಾಗಿ ಮನಸ್ಸನ್ನು ಒಪ್ಪಿಸಲೇಬೇಕಾಗಿತ್ತು.. ಇಲ್ಯೆ.. ಈಗ ಬತ್ನಿಲ್ಲೆ, ಮುಂದಿನ ತಿಂಗಳು ಬತ್ತೆ .. ಎಂದು ಹೇಳಿ ಫೋನ್ ಇಟ್ಟಿದ್ದೆ.. ಹಬ್ಬಕ್ಕೂ ಊರಿಗೂ ಅದ್ಯಾವ ನಂಟೋ ಕಾಣೆ.. ಹಬ್ಬದ ದಿನ ಊರನ್ನು ಬಿಟ್ಟು ಬೇರೆಲ್ಲಿಯೇ ಇದ್ದರೂ, ಪರಿಪೂರ್ಣವೆಂದೆನಿಸುವುದೇ ಇಲ್ಲ..ಏನಾದರೂ ಪುಸ್ತಕ ಓದೋಣವೆಂದು ಕುಳಿತೆನಾದರೂ, … Read more
ಕನ್ನಡವೇ ನಿತ್ಯ: ಸ್ಮಿತಾ ಅಮೃತರಾಜ್
ನಾವು ಎಲಿಮೆಂಟರಿ ಶಾಲೆಗೆ ಹೋಗುವ ಹೊತ್ತಿಗೆ ಅಲ್ಲೊಂದು ಇಲ್ಲೊಂದರಂತೆ ಅಕ್ಕಪಕ್ಕದ ಊರುಗಳಲ್ಲಿ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಗಳು ಹಣಕಿ ಹಾಕುತ್ತಿದ್ದವಷ್ಟೆ. ಉಳ್ಳವರು ಹಾಗು ತಮ್ಮ ಮಕ್ಕಳನ್ನು ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಗೆ ಸೇರಿಸಬೇಕೆಂಬ ಮಹಾತ್ಕಾಂಕ್ಷೆ ಹೊತ್ತ ಹೆತ್ತವರ ಮಕ್ಕಳಿಗೆ ಮಾತ್ರ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ನೊಳಕ್ಕೆ ಹೊಕ್ಕು ಲಯ ಬದ್ಧವಾಗಿ ಇಂಗ್ಲೀಷ್ ಪ್ರಾರ್ಥನೆಯನ್ನು ಉಸುರುವ ಭಾಗ್ಯ. ನಾವೆಲ್ಲಾ ಬರೇ ಕಾಲಿನಲ್ಲಿ. ಹೆಚ್ಚೆಂದರೆ ಹವಾಯಿ ಚಪ್ಪಲನ್ನು ತೊಟ್ಟು ಬಲು ದೂರದಿಂದ ನಡೆದು ಕೊಂಡೇ ಬರುವಾಗ, ಅವರುಗಳೆಲ್ಲಾ ಗರಿ ಗರಿ … Read more
ಮಾರ್ಚ್ ತಿಂಗಳು, ವಿಶ್ವ ಅರಣ್ಯ ಮತ್ತು ಜಲ ದಿನ: ಅಖಿಲೇಶ್ ಚಿಪ್ಪಳಿ
ಮಾರ್ಚ್ ತಿಂಗಳೆಂದರೆ ಹಣಕಾಸಿನ ವರ್ಷ ಮುಗಿಯುವ ತಿಂಗಳು. ಭೂಮಿಯ ಮೇಲೆ ಬದುಕುವ ಎಲ್ಲಾ ಜನರು ಹಣದ ಮೇಲೆ ಅವಲಂಬಿತರಾಗಿದ್ದಾರೆ. ಯಾವ ಬ್ಯಾಂಕಿಗೆ ಹೋದರು ಎಲ್ಲರೂ ಬ್ಯುಸಿ ಮತ್ತು ಬಿಸಿ. ಲೆಕ್ಕಪರಿಶೋಧಕರಿಗೆ ಕೈತುಂಬಾ ಕೆಲಸ. ಸರ್ಕಾರದ ಛಪ್ಪನ್ನಾರು ಇಲಾಖೆಗಳು ಮಾರ್ಚ್ ಕೊನೆಯ ಹಂತದಲ್ಲಿ ಬ್ಯುಸಿ ತನ್ಮಧ್ಯೆ ಚುನಾವಣೆಯ ಕಾವು ವಾತಾವರಣದ ಕಾವು ಸೇರಿ ಜನಜೀವನ ಅಸ್ತ್ಯವಸ್ತವಾಗಿದೆ. ಮಾರ್ಚ್ ತಿಂಗಳಲ್ಲೇ ಕುಡಿಯುವ ನೀರಿನ ಸಮಸ್ಯೆ ದುತ್ತೆಂದು ಉದ್ಬವಿಸಿದೆ. ಮಾರ್ಚ್ ತಿಂಗಳ 21ನೇ ತಾರೀಖು ವಿಶ್ವ ಅರಣ್ಯ ದಿನ. ಈ ತಿಂಗಳಲ್ಲಿ … Read more
ಮೊದಲ ಸಲಾ: ಅನಿತಾ ನರೇಶ್ ಮಂಚಿ
ಏನೇ ಹೇಳಿ.. ಜೀವನದಲ್ಲಿ ಮೊದಲ ಸಲ ಎನ್ನುವುದು ಪ್ರತಿಯೊಬ್ಬನ ಮನಸ್ಸಿನಲ್ಲಿಯೂ ವಿಶೇಷವಾಗಿಯೇ ನೆನಪಿರುತ್ತದೆ. ಮೊದಲ ಸಲ ಶಾಲೆಯ ಮೆಟ್ಟಿಲು ಹತ್ತಿದ್ದು, ಮೊದಲ ಸಲ ತಪ್ಪು ಮಾಡಿ ಶಿಕ್ಷೆ ಅನುಭವಿಸಿದ್ದು, ಮೊದಲ ಸಲ ಯಾರಿಗೂ ಕಾಣದಂತೆ ಅಮ್ಮನ ಸೀರೆ ಉಟ್ಟದ್ದು, ಹುಡುಗರಾದರೆ ಸೊಂಟದಿಂದ ಜಾರುವ ಭಯವಿದ್ದರೂ ಅಪ್ಪನ ಪಂಚೆಯನ್ನುಟ್ಟು ದೊಡ್ಡವನಾದಂತೆ ಮೆರೆದದ್ದು, ಇಷ್ಟೇ ಏಕೆ ಮೊದಲ ಸಲ ಯಾರೊಡನೆಯೋ ಕಣ್ಣೋಟ ಕೂಡಿದ್ದು, ಕನಸಾಗಿ ಕಾಡಿದ್ದು.. ಯಾವುದನ್ನೇ ಹೇಳಲಿ ಮೊದಲ ಸಲ ಎನ್ನುವುದು ನಮಗೆ ನೆನಪಾದಂತೆ ಮನಸ್ಸಿಗೆ ಮುದ ನೀಡುವುದಂತೂ … Read more
ರಸ್ತೆ ಅಪಘಾತವೂ ಪರಿಹಾರದ “ಮಾರ್ಗ” ವೂ: ಅಮರ್ ದೀಪ್ ಪಿ.ಎಸ್.
ಆಗತಾನೇ ರಾಜಣ್ಣ ಹಳೇ ಹಗರಿಬೊಮ್ಮನಹಳ್ಳಿ ದಾಟಿ ರಸ್ತೆಯ ಎಡಕ್ಕಿರುವ ಧಾಭಾದಲ್ಲಿ ಏಕಾಂತದ ಮೇಜಿನ ಮೇಲೆ ಗ್ಲಾಸಿನಿಂದ ಬ್ಲೆಂಡರ್ ಸ್ಪ್ರೈಡ್ ಕೊನೆಯ ಸಿಪ್ಪು ಗುಟುಕರಿಸಿ ಕೆಳಗಿಟ್ಟು ಇನ್ನೇನು ಎದ್ದೇಳಬೇಕು, ಆಗ ರಾಜಣ್ಣನ ಫೋನು ರಿಂಗಣಿಸಿತು. ದೇವಾ ಕರೆ ಮಾಡಿದ್ದ. ಆಗ ಸಮಯ ರಾತ್ರಿ ಹನ್ನೊಂದುವರೆ ಆಗಿತ್ತು. ದ್ವನಿಯಲ್ಲಿ ಗಾಬರಿ ಇತ್ತು. "ಅಣ್ಣಾ, ನನ್ನ ಡ್ರೈವಿಂಗ್ ಲೈಸೆನ್ಸ್ ಇದ್ದ ವಾಲೆಟ್ ಕಳೆದು ಹೋಗಿದೆ." ಅಂದ. ನಿಶೆಯಲ್ಲಿ ರಾಜಣ್ಣ ಧಾಭಾದ ಹೊರಗೆ ಬರುತ್ತಾ "ಈಗೇನ್ ಹೊಸಾದು ಕೊಡುಸ್ಲೆನಲೇ" ಎಂದು ಗದರಿ … Read more
ಅಲ್ಲೂರಿಯ ಒಡಲುರಿ ಇನ್ನೂ ಆರಿಲ್ಲ…!: ಅಜ್ಜಿಮನೆ ಗಣೇಶ್
ನಮಗೆ ನೀರು ಬೇಡ, ರಸ್ತೆ ಬೇಡ, ಮನೆಯೂ ಬೇಡ, ಸ್ವಾತಂತ್ರ್ಯದ ಗುರುತಿನ ಒಂದೇ ಒಂದು ಪತ್ರ ಬೇಡ. ನಿಮ್ಮ ಸವಲತ್ತುಗಳು ನಿಮಗೆ ಇರಲಿ. ನಮ್ಮನ್ನ ಬದುಕಲು ಬಿಡಿ. ಕಾಡು ಕಾಯುವವರು ನಾವು ನಮಗೆ ಸಾಮಾಜಿಕ ನ್ಯಾಯ ಕೊಡಿ. ಹಸಿರುಟ್ಟ ಹಾಡಿಯಲ್ಲಿ, ನೆಮ್ಮದಿಯ ಬದುಕಿಗಾಗಿ ಹಾತೊರೆಯುತ್ತಿರುವ ಆದಿವಾಸಿಗಳ ಅಹವಾಲಿದು..ಬದಕಲು ಬಿಡಿ ಅಂತ ಅಂಗಲಾಚುತ್ತಿರುವ ಪರಿಯಿದು…ದೊಡ್ಡ ಗೌಡರ ಬಾಗಿಲಿಗೆ ನಮ್ಮ ಎಲುಬಿನ ತ್ವಾರಣಾ. ಶೋಷಣೆ ವಿರುದ್ಧದ ಈ ಹಾಡು ಮಲೆನಾಡ ಮಡಿಲೊಳಗೆ ಹರಡಿದ ಕಾಡು ದರಲೆ ಮೇಲೆ ನೆತ್ತರ ಹರಿಸಿದ್ದು, … Read more
ಚೈತ್ರದ ಯುಗಾದಿ ಸಂಭ್ರಮ: ಸುಮನ್ ದೇಸಾಯಿ
ಮಾಸಗಳೊಳಗ ಮೊದಲನೆ ಮಾಸ ಚೈತ್ರ ಮಾಸ, ಅದರೊಳಗ ಬರೊ ಸಂವತ್ಸರದ ಮೊದಲನೆ ಹಬ್ಬ ಯುಗಾದಿ. ಯುಗಾದಿ ಅಂದಕೂಡಲೆ ನೆನಪಾಗೊದು, ಬೇವು ಬೆಲ್ಲ. ಈ ಬೇವು ಬೆಲ್ಲದ ಸಂಪ್ರದಾಯ ಯಾವಾಗ ಶುರು ಆತೊ ಗೊತ್ತಿಲ್ಲಾ, ಆದ್ರ ಭಾಳ ಅರ್ಥಪೂರ್ಣ ಪದ್ಧತಿ ಅದ. ಜೀವನದಾಗ ಬರೋ ಸುಖ-ದುಖಃ ಸಮಾನಾಗಿ ತಗೊಂಡು, ಧೈರ್ಯಾದಿಂದ ಎನಬಂದ್ರುನು ಎದರಸಬೇಕು ಅನ್ನೊ ಸಂದೇಶವನ್ನ ಸಾರತದ. ಚೈತ್ರ ಮಾಸ ಅಂದ್ರ ಫಕ್ಕನ ನೆನಪಾಗೊದು ಹಸಿರು, ಯಾಕಂದ್ರ ಚಳಿಗಾಲದಾಗ ಬರಡಾಗಿ ನಿಂತ್ತಿದ್ದ ಗಿಡಾ, ಮರಾ, ಬಳ್ಳಿಗೊಳು ಚಿಗುರೊ ಕಾಲಾ. ನಂಗಿನ್ನು … Read more
ಚುಟುಕಗಳು: ವಾಸುಕಿ ರಾಘವನ್
1 ರಾಯಲ್ ಫ್ಯಾಮಿಲಿಯಲ್ಲಿ ಹುಟ್ಟಿತು ಕಂದಮ್ಮ ಇಟ್ಟರು ಮುದ್ದಾದ ಹೆಸರು ಸೀಮಾ ಅಂತ ನೆಲೆಸಿದ್ದರೇನಂತೆ ತೆಲಂಗಾಣದಲ್ಲಿ ಪ್ರಸಿದ್ಧಿಯಾಗಿದ್ದಾಳೆ ಇಂದು ರಾಯಲ್-ಸೀಮಾ ಅಂತ! 2 ಗಂಡ ಹೆಂಡತಿ ಇಬ್ಬರೇ ಖುಷಿಯಾಗಿದ್ರೆ ನಮ್ಮ ಸಮಾಜಕ್ಕೇನು ಯೂಸು? ಅದಿಕ್ಕೆ ಮೂಗು ತೂರಿಸ್ಕೊಂಡ್ ಬರ್ತಾರೆ ಯಾವಾಗ ಹ್ಯಾಪಿ ನ್ಯೂಸು? 3 ಅದೆಷ್ಟು ತಾರತಮ್ಯ ಹೆಂಗಸರೆಡೆಗೆ ನಮ್ಮ ಈ ಸಮಾಜದಲ್ಲಿ ಅಡುಗೆಯವರೆಲ್ಲ ಕೂಗುತ್ತಿದ್ದರು "ಸಾರ್ ಗೆ ಅನ್ನ? ಸಾರ್ ಗೆ ಅನ್ನ?" ಕೇಳುವುದಕೆ ಒಬ್ಬನೂ ಇರಲಿಲ್ಲ ನಿಮಗೇನು ಬಡಿಸಲಿ ಮೇಡಮ್ ಅಂತ! 4 ನಾನು … Read more
ಮೂಢನಂಬಿಕೆ: ಕೆ.ಟಿ.ರಘು
ಈ ಪ್ರಶ್ನೆಗೆ ಉತ್ತರ ನೀಡುವುದು ತುಸು ಶ್ರಮದಾಯಕ ಎನ್ನಿಸುವ ನಿಜ. ಮೂಢನಂಬಿಕೆ ಎನ್ನುವುದು ಮನುಷ್ಯನ ಹುಟ್ಟಿನೊಂದಿಗೆ ಬೆಳೆದು ಬಂದಿದೆ. ಇದು ಕಾಲದಿಂದ ಕಾಲಕ್ಕೆ ಬದಲಾಗುತ್ತಾ ತನ್ನ ಸ್ವರೂಪವನ್ನು ಬದಲಿಸುತ್ತಾ ಸಾಗುತ್ತಿದೆ. ಒಂದು ಕಾಲದ ನಂಬಿಕೆಗಳು ಇನ್ನೊಂದು ಕಾಲಕ್ಕೆ ಸುಳ್ಳೆಂಬುದು ಈ ವೈಜ್ಞಾನಿಕ ಯುಗದ ಜಗತ್ತು ಸಾಬೀತುಪಡಿಸಿದೆ. ಇಂದಿನ ಯುಗದಲ್ಲಿಯೂ ಸಹ ಹಿಂದಿನ ಕಾಲದ ಕೆಲವು ನಂಬಿಕೆಗಳನ್ನು ಅನುಸರಿಸುವುದನ್ನು ಮೂಢನಂಬಿಕೆ ಎನ್ನಬಹುದು. ಮೂಢನಂಬಿಕೆಗಳು ಸಾಮಾಜಿಕವಾಗಿ ಬೆಳೆದುಬಂದ ಅನಿಷ್ಟ ಪಿಡುಗುಗಳು. ದೇವರ ಮೇಲೆ ನಂಬಿಕೆ ಇಟ್ಟುಕೊಳ್ಳಿ, ಅವನ ಮುಂದೆ ಎಲ್ಲರೂ … Read more
ಹೆಸರಿಡದ ಕತೆಯೊಂದು (ಭಾಗ 3): ಪ್ರಶಸ್ತಿ ಪಿ.
(ಇಲ್ಲಿಯವರೆಗೆ) ಕಾಲೇಜು ದಿನಗಳಿಂದ್ಲೂ ಭಾಷಣ, ಚರ್ಚೆ ಅಂತೆಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದ ಶಾರುಗೆ ತನ್ನ ಡಿಗ್ರಿ ಮುಗಿದ ಮೇಲೆ ತಾನೂ ಒಂದು ಕೆಲಸ ಮಾಡ್ಬೇಕಾ ಅನ್ನೋ ಕಲ್ಪನೆಯೇ ಬೇಸರ ತರಿಸುತ್ತಿತ್ತು. ಕಾಲೇಜಲ್ಲಿ ಪ್ಲೇಸ್ಮೆಂಟಂತ ಬಂದು ತನ್ನ ಗೆಳತಿಯರೆಲ್ಲಾ ಒಬ್ಬೊಬ್ಬರಾಗಿ ಆಯ್ಕೆಯಾಗೋಕೆ ಶುರುವಾದಾಗ ತಾನೂ ಆಯ್ಕೆಯಾಗಿದ್ರೆ ಅನ್ನಿಸೋಕೆ ಶುರುವಾಗಿತ್ತು. ಆದ್ರೆ ಅನಿಸಿದ್ದೇ ಬಂತು. ಆ ಸೀಸನ್ನೇ ಮುಗಿದೋದ್ರೂ ಕೆಲಸ ಅನ್ನೋದು ಸಿಕ್ಕಿರಲಿಲ್ಲ. ಯಾಕಾದ್ರೂ ಕೆಲ್ಸ ಕೆಲ್ಸ ಅಂತ ಹುಡುಕ್ತಾರೋ , ತಾನೆಂತೂ ಆರಾಮಾಗಿದ್ದುಬಿಟ್ತೀನಿ ಅಂತ ಹಿಂದಿನ ವರ್ಷ ಅಂದುಕೊಂಡಿದ್ದ ನಿರ್ಣಯಗಳೆಲ್ಲಾ … Read more
ಓಯಸಿಸ್: ನಿನಾದ (ಭಾಗ 4)
ಅಷ್ಟು ಹೊತ್ತಿಗೆ ನಿಶಾಂತ್ ಕರೆ ಮಾಡಿ ಹೇಳಿದ ತಡೆ ಹಿಡಿದ ವೇತನ ಬಿಡುಗಡೆ ಆಗಿದೆ. ಯಾವ್ ಯಾವ್ದಕ್ಕೆ ಎಷ್ಟು ಎಂದು ವಿಲೇವಾರಿ ಹೇಳು. ಮೊದಲು ಆ ಜೈನ್ ಗೆ ಫೋನ್ ಮಾಡಿ ಹೇಳು, ಹೇಳಿದ್ರೆ ಆವಾ ನಂಬೋಲ್ಲ ನಿನ್ನೆ ಅಕೌಂಟ್ ಗೆ ಹಾಕಿದ ಹಣ ವಾಪಸು ಮಾಡಬೇಕು. ಸರಿ ಈಗಲೇ ಹೇಳುವೆ ನೀ ವಾಪಾಸು ಮಾಡಿ ಬಿಡು. ಎಂದು ನಿಶಾಂತ್ ಹೇಳಿ ಕರೆಯನ್ನು ಮುಗಿಸಿದ. ಅಲ್ಲಿಗೆ ಒಂದು ವಿಲೇವಾರಿ ಆಯಿತು. ಅಂತೂ ಚಿಂತೆಯ ಮೂಟೆ ಹೊತ್ತು ಬಂದು ಎಲ್ಲ … Read more
ಸಾಮಾನ್ಯ ಜ್ಞಾನ (ವಾರ 21): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ೨೦೧೪ ಮಾರ್ಚ್ನಲ್ಲಿ ವಿಶ್ವಸಂಸ್ಥೆಯು ವಿಶ್ವದ ಯಾವ ಭಾಗವನ್ನು ಪೋಲಿಯೋ ಮುಕ್ತವೆಂದು ಅಧೀಕೃತವಾಗಿ ಘೋಷಿಸಿತು? ೨. ಭಾರತದ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ ಮೊದಲ ಕನ್ನಡಿಗ ಯಾರು? ೩. ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿದೆ? ೪. ಚಂದ್ರನ ಮೇಲೆ ಹಾರಿಸಿದ ಮೊದಲ ರಾಕೆಟ್ ಯಾವುದು? ೫. ಬೆಳಗಾವಿಯಲ್ಲಿ ಮೊದಲ ಕರ್ನಾಟಕ ಏಕೀಕರಣ ಸಭಾದ ಪ್ರಥಮ ಅಧ್ಯಕ್ಷತೆ ವಹಿಸಿದವರು ಯಾರು? ೬. ಹೆಚ್.ಐ.ವಿ ಪೀಡಿತ ಗರ್ಭಿಣಿಗೆ ಆರೋಗ್ಯವಂತ ಮಗು ಹುಟ್ಟಬೇಕಾದರೆ ಆಕೆಗೆ ಯಾವ ಔಷಧ … Read more
ವಿಶ್ವ ಕವಿತಾ ದಿನದ ವಿಶೇಷ ಕಾವ್ಯಧಾರೆ
ಕನ್ನಡಿಯಲ್ಲಿ ಕಂಡದ್ದು ಕಾಲ ತದೇಕ ಚಿತ್ತದಿ ಕನ್ನಡಿಯನ್ನೆ ಯಾಕೋ ಮೈಮರೆತು ದಿಟ್ಟಿಸಿದ ಕ್ಷಣ ಕಂಡೊಂದು ನೆರಿಗೆಗೆ ಪಿಚ್ಚೆನಿಸಿತು ಬುನಾದಿ! ನಾನು ಸುಳ್ಳೋ ಕನ್ನಡಿ ಸುಳ್ಳೋ ಕಾಯದ ಕಾಲಕ್ಕೆ ಒಡಂಬಡಿಕೆ ಪತ್ರ ಬಿಂಬಿಸುವೆ … ಅರ್ಧ ತೆರೆದ ಬಾಗಿಲ ಸಂಧಿಯಲಿ ಇಣುಕಿ ನಕ್ಕ ಬಾಲ್ಯ ಈಗ ತಾಳೆ ಹಾಕಿ ಗುಣಿಸಿದರೂ, ಗುನುಗಿದರೂ ಉತ್ತರವಿಲ್ಲದ ಲೆಕ್ಕಾಚಾರಕ್ಕೆ ನನ್ನ ನೋಡಿ ನಗುತ್ತದೆ ಕಂದ ಸವೆಸಿದ ಮಜಲುಗಳ ಮುಖದಲಿ ಬಿದ್ದರೆ ಮಾತ್ರನೇ ಚೂರಾಗುವ ಕನ್ನಡಿಯಲಿ ಕಾಣುವ ನೂರಾರು ಮುಖಗಳು! ಕಂಡ ಒಂದೇ ಒಂದು … Read more
ಕಾ೦ಗರುಗಳ ನಾಡಲ್ಲೊ೦ದು ಕಾ೦ಗರೂ ಐಲ್ಯಾ೦ಡ್: ಅರ್ಪಿತ ಮೇಗರವಳ್ಳಿ.
ಮೆಲ್ಬೋರ್ನ್ನಲ್ಲಿ ಪ್ರತಿವರ್ಷ ನವೆ೦ಬರ್ ತಿ೦ಗಳ ಮೊದಲ ಮ೦ಗಳವಾರ ’ಮೆಲ್ಬೋರ್ನ್ ಕಪ್ ಡೆ’ ಇರುತ್ತದೆ. ಆಸ್ಟ್ರೇಲಿಯಾದ ಪ್ರತಿಷ್ಠಿತ ಕುದುರೆ ರೇಸ್ ನೆಡೆಯುವ ಈ ದಿನದ೦ದು ಮೆಲ್ಬೋರ್ನ್ನಲ್ಲಿ ಸಾರ್ವಜನಿಕ ರಜೆ ಇರುತ್ತದೆ. ಹೀಗಾಗಿ ಸೋಮವಾರ ರಜೆ ತೆಗೆದುಕೊ೦ಡು ನಾಲ್ಕು ದಿನ ದಕ್ಷಿಣ ಆಸ್ಟ್ರೇಲಿಯಾದ ಕಡೆ ಪ್ರವಾಸ ಹೋಗಿಬರಲು ಯೋಜನೆ ರೂಪಿಸಿದೆವು. ಮೆಲ್ಬೋರ್ನ್ನಿ೦ದ ಸುಮಾರು ೭೨೫ ಕಿ.ಮಿ. ದೂರವಿರುವ ದಕ್ಷಿಣ ಆಸ್ಟ್ರೇಲಿಯಾದ ರಾಜಧಾನಿ ಆಡಿಲೇಡಿಗೆ ಆರು ಜನ ಕನ್ನಡಿಗರ ತ೦ಡದೊ೦ದಿಗೆ ಡ್ರೈವ್ ಮಾಡಿಕೊ೦ಡು ಹೊರಟೆವು. ದಕ್ಷಿಣ ಆಸ್ಟ್ರೇಲಿಯಾದಲ್ಲಿ ಇರುವ ನಾಲ್ಕು ದಿನದಲ್ಲಿ … Read more
ಚೈತ್ರಳೆಂಬ ಚಿಗುರೆ ಮರಿ ಚಿಗುರಿದ ಹೊತ್ತು: ಷಡಕ್ಷರಿ ತರಬೇನಹಳ್ಳಿ
ಕಳೆದ ಕೆಲವು ತಿಂಗಳುಗಳಿಂದ ನಮ್ಮ ಮನೆಯಲ್ಲಿ ಯಾರು ಮಾತನಾಡಿದರೂ ಅವಳು ಗರ್ಭದರಿಸಿದ ಬಗ್ಗೆಯೇ ಚರ್ಚೆ. ಅವಳು ನಮ್ಮ ಮನೆಗೆ ಬಂದು ಎಷ್ಟು ತಿಂಗಳುಗಳಾದವು? ಆದರೂ ಯಾಕೆ ಅವಳು ಇನ್ನೂ ಮರಿ ಹಾಕಲಿಲ್ಲ? ಎಂಬೆಲ್ಲ ಅನೇಕರ ತೀರದ ಕುತೂಹಲಗಳಿಗೆ ಉತ್ತರವೆಂಬಂತೆ ಅವಳು ಗರ್ಭದರಿಸಿದ ಸೂಚನೆ ನೀಡಿ ನಮ್ಮೆಲ್ಲರ ಪ್ರಶ್ನೆಗಳಿಗೆ ಉತ್ತರಿಸಿದ್ದಳು. ಅವಳು ನಮ್ಮ ಮನೆಗೆ ಬಂದ ಮೊದಲ ದಿನಗಳ ನೆನಪು ಇನ್ನೂ ಹಸಿರಾಗಿದೆ. ಇವಳ ಅಕ್ಕ ನನ್ನವಳ ತವರೂರಿನಿಂದ ಬಂದ ಶ್ವೇತ ನಮ್ಮ ತೋಟದಲ್ಲಿ ಅಂಡಲೆದು ಹಸಿರುಕ್ಕುವ ಸೊಪ್ಪು … Read more
ಯಾರಪ್ಪನ ಮನೆ ಗಂಟು ಏನ್ ಹೋಗ್ಬೇಕಾಗೈತಿ: ಅಮರ್ ದೀಪ್ ಪಿ.ಎಸ್.
ಹೈಸ್ಕೂಲ್ ದಿನಗಳಲ್ಲಿ ನಮ್ಮ ಮೇಷ್ಟ್ರು ಒಬ್ಬರಿದ್ದರು. ಬಿಡಿ, ಒಬ್ಬರಲ್ಲ ಬಹಳ ಮಂದಿ ಗುರುಗಳಿದ್ದಾರೆ. ಅವರಲ್ಲಿ ಒಬ್ಬರು ಸಂಕಪ್ಪ ಅಂತಿದ್ದರು. ಈಗ ನಿವೃತ್ತಿಯಾಗಿ ನಮ್ಮೂರಲ್ಲೇ ಇದ್ದಾರೋ ಅವರ ಸ್ವಗ್ರಾಮ ಹಡಗಲಿ ತಾಲೂಕಿನ ಉತ್ತಂಗಿಯಲ್ಲಿದ್ದಾರೋ ಗೊತ್ತಿಲ್ಲ. ಅವರು ನಮ್ಗೆ ಗಣಿತ ವಿಷಯ ತಗಳ್ಳೋರು. ಆದರೆ ಅವರ ಇಂಗ್ಲೀಷು ಚೆನ್ನಾಗಿತ್ತು. ಎತ್ತರದ, ಸ್ಥೂಲ ದೇಹವನ್ನು ಹೊತ್ತು ಕ್ಲಾಸ್ ರೂಮಿಗೆ "ಎ ಸ್ಕ್ವೇರ್ ಪ್ಲಸ್ ಬಿ ಸ್ಕ್ವೇರ್ ಇಸ್ ಇಕ್ವಲ್ ಟು ………. " ಹೇಳುತ್ತಲೇ ಎಂಟ್ರಿ ಕೊಡುತ್ತಿದ್ರು. ಸುಮ್ನೆ ಕುಳಿತೆವೋ … Read more
ಸೀರೆಯ ಪರಿ: ಪದ್ಮಾ ಭಟ್॒
ಅರೆ! ನಾನು ಸೀರೆಯನ್ನು ಉಟ್ಟುಕೊಳ್ಳುವಷ್ಟು ದೊಡ್ಡವಳಾಗಿಬಿಟ್ಟೆನಾ? ಹೀಗಂತ ಮೊನ್ನೆ ಕಾಲೇಜಿನಲ್ಲಿ ನಡೆದ ನ್ಯಾಶನಲ್ ಸೆಮಿನರ್ ಗೆ ಎಲ್ಲರೂ ಕಂಪಲ್ಸರಿ ಸೀರೆಯನ್ನು ಉಡಲೇಬೇಕೆಂಬ ವಿಚಾರಕ್ಕೆ ಅನಿಸಿತ್ತು.. ಛೇ ನಾ ಸೀರೆ ಉಡಲ್ಲ ನಂಗೆ ಚನ್ನಾಗಿ ಕಾಣೋಲ್ಲ ಅಂತ ಎಷ್ಟೋ ಬಾರಿ sಕನ್ವಿನ್ಸ್ ಮಾಡಲು ಪ್ರಯತ್ನಿಸಿದ್ದೇನಾದ್ದರೂ ಫಲ ಕಂಡಿರಲಿಲ್ಲ. ಆದರೂ ಮನಸ್ಸಿನಲ್ಲಿ ಒಂದು ರೀತಿಯ ಸಂಭ್ರಮ ನನಗಂತ … Read more
ಹಳ್ಳಿಮೇಷ್ಟ್ರು: ಪತ್ರೇಶ್. ಹಿರೇಮಠ್
ಹಳ್ಳಿಮೇಷ್ಟ್ರು ಎಂದಾಕ್ಷಣ ಖ್ಯಾತ ನಟ ರವಿಚಂದ್ರನ್ ಚಲನಚಿತ್ರ ಕಥೆಯೆಂದು ಭಾವಿಸಿದರೆ ತಪ್ಪಾದೀತು. ಇದು ನಮ್ಮ ಇಡೀ ಊರಿಗೇ ಊರೇ ಬಾಗಿ ಗೌರವಿಸುತ್ತಿದ್ದ ಹಳೆಯ ಪ್ರೀತಿಯ ಮೇಷ್ಟ್ರುಗಳ ವಿಷಯವಿದು. ಶಿಕ್ಷಕರಿಗೆ ದೇಗುಲ ನಿರ್ಮಿಸಿದ ನಾಡ ವಿದ್ಯಾವಂತರು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಹಳ್ಳಿಯ ಹಳೆಯ ಮೇಷ್ಟ್ರುಗಳ ಬದುಕಿನ ಕಥಾ ಸರಮಾಲೆಯಿದು. ಈಗ ಶಿಕ್ಷಕ ವೃತ್ತಿಯೆಂದರೆ ಬೆಳಿಗ್ಗೆ ಹತ್ತಕ್ಕೆ ಶಾಲೆಗೆ ಹೊರಡುವುದು, ಪ್ರಾರ್ಥನೆ,ಪಾಠ, ಮಾಡುವುದು ಪುನಃ ಸಂಜೆ ಐದಕ್ಕೆ ಮನೆಗೆ ಮರಳುವುದು. ಇದು ಇಂದಿನ ಬಹುತೇಕ ಶಿಕ್ಷಕರ ದಿನಚರಿ. ಈಗಿನ … Read more
ಐ!!! ಇರುವೆ: ಅಖಿಲೇಶ್ ಚಿಪ್ಪಳಿ
ಎಲ್ಲಾ ಕಾಲದಲ್ಲೂ ಇರುವೆಗಳು ಮನುಷ್ಯನಿಗೆ ಉಪದ್ರವಕಾರಿಗಳೇ ಸೈ ಎಂದು ಸಾಮಾನ್ಯ ತಿಳುವಳಿಕೆ. ಸಂಜೆ ದೇವರ ಮುಂದೆ ಹಚ್ಚಿರುವ ದೀಪದ ಹಣತೆ (ಹಿತ್ತಾಳೆಯದ್ದು) ಬೆಳಿಗ್ಗೆ ನೋಡಿದರೆ ಬಣ್ಣ ಬದಲಾಯಿಸಿ ಕಪ್ಪಾಗಿದೆ, ದೀಪ ನಂದಿಹೋಗಿದೆ. ಹಣತೆಯ ಮೇಲೆ ಅಗಣಿತ ಸಂಖೈಯ ಇರುವೆಗಳು. ಬೆಳಿಗ್ಗೆ ಮತ್ತೆ ದೀಪ ಹಚ್ಚುವ ಮುಂಚೆ ಇರುವೆಗಳನ್ನೆಲ್ಲಾ ದೂರ ಓಡಿಸಬೇಕು. ಹಣತೆಯ ಒಳಗೆ ಎಣ್ಣೆಯಲ್ಲಿ ಬಿದ್ದು ಸತ್ತ ಮತ್ತಷ್ಟು ಅಸಂಖ್ಯ ಇರುವೆಗಳು. ಕೈ-ಕಾಲಿಗೆ ಕಚ್ಚುವ ಜೀವಂತ ಇರುವೆಗಳು ಇಷ್ಟಕ್ಕೇ ಮುಗಿಯಲಿಲ್ಲ, ಅಕ್ಕಿ ಡಬ್ಬದ ಬಾಯಿ ತೆಗೆದರೆ ಅಕ್ಕಿಯಲ್ಲೂ … Read more
ಮನೆಯೆ ಮೊದಲ ಪಾಠಶಾಲೆ: ಸುಮನ್ ದೇಸಾಯಿ
ಮೊನ್ನೆ ಗದಗ ಜಿಲ್ಲೆಯ ೬ನೇ ಸಾಹಿತ್ಯ ಸಮ್ಮೆಳನಕ್ಕ ಹೋಗಿದ್ದೆ. ಅಲ್ಲೆ ಮಕ್ಕಳ ಕಾವ್ಯವಿಹಾರ ಅನ್ನೊ ಒಂದು ಮಕ್ಕಳ ಕವಿಗೊಷ್ಠಿ ಎರ್ಪಡಿಸಿದ್ರು. ಮಕ್ಕಳು ಏನ ಕವಿತೆ ಬರಿಬಹುದು ಅಂತ ಕೂತುಹಲದಿಂದ ನೋಡ್ಲಿಕತ್ತಿದ್ದೆ. ವೇದಿಕೆ ಮ್ಯಾಲೆ ಒಂದ ಹತ್ತು ಮಕ್ಕಳಿದ್ರು. ಕವಿಗೊಷ್ಠಿ ಶುರುವಾದ ಮ್ಯಾಲೆ ಅ ಮಕ್ಕಳ ಪ್ರತಿಭೆ ನೋಡಿ ಆಶ್ಚರ್ಯ ಅನಿಸ್ತು. ಒಬ್ಬರಕಿಂತಾ ಒಬ್ಬರು ಸುಂದರವಾದ ಕವನಗಳನ್ನ ರಚಿಸಿದ್ರು. ಆ ಕವನಗಳಳೊಗ ಬೆರಗು, ಸೊಗಸು, ಮತ್ತ ಪ್ರಸ್ತುತ ಸಮಾಜದಲ್ಲಿಯ ಸಮಸ್ಯೆಗಳ ನೆರಳಿತ್ತು. ಮಕ್ಕಳ ಈ ಸೂಷ್ಮ ಗ್ರಹಣ ಶಕ್ತಿ … Read more
ಹೆಸರಿಡದ ಕಥೆಯೊಂದು (ಭಾಗ 2): ಪ್ರಶಸ್ತಿ ಪಿ.
ಇಲ್ಲಿಯವರೆಗೆ ಕೈಯಲ್ಲಿದ್ದ ಕರಗಿದ ಐಸ್ ಕ್ಯಾಂಡಿ ಪಟ್ಟಣಕ್ಕೆ ಬಂದು ಕಳೆದೇ ಹೋಗುತ್ತಿರುವ ಕಾಲದ ಬಗ್ಗೆ, ಇನ್ನೂ ದೊರಕದ ಭದ್ರ ಕೆಲಸದ ನೆನಪ ಹೊತ್ತು ತಂತು. ಬಂದೊಂದು ತಿಂಗಳಿನಲ್ಲೇ ಒಂದು ದಿನವೂ ಬಿಡದೆ ಇಂಟರ್ವ್ಯೂಗಳಿಗೆಂದು ಅಲೆದಿದ್ದರೆ ಏನಾದ್ರೂ ಕೆಲಸ ದಕ್ಕುತ್ತಿತ್ತೇನೋ. ಆದ್ರೆ ದಿನಾ ಅಲೆಯಲು ದುಡ್ಡೆಲ್ಲಿ ? ಕೆಲಸ ಹುಡುಕ್ತಿದಾನೆ ಬೇಕಾಗತ್ತೆ ಅಂತ ಅಪ್ಪ ತಿಳಿದು ಕೊಟ್ಟರೆ ತಾನೆ ಇವನಿಗೆ ದುಡ್ಡು ? ಸ್ನೇಹಿತರತ್ರ ಎಷ್ಟಂತ ಕೇಳೋದು ? ಕಂಡರೆ ಸಾಲ ಕೇಳ್ಬೋದು ಅಂತ ಇವನ ಕಾಲೇಜು ಗೆಳೆಯರೆಲ್ಲಾ … Read more
ಸಾಮಾನ್ಯ ಜ್ಞಾನ (ವಾರ 20): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ೦೩.೦೨.೨೦೧೩ರಂದು ಬಿಡುಗಡೆಯಾದ ಖುಷ್ವಂತನಾಮ ದಿ ಲೆಸೆನ್ಸ್ ಆಫ್ ಮೈ ಲೈಫ್ ಈ ಕೃತಿಯ ಕರ್ತೃ ಯಾರು? ೨. ವಾರಣಾಸಿ ಯಾವ ನದಿ ದಡದ ಮೇಲಿದೆ? ೩. ಪ್ರಕೃತಿ ಚಿಕಿತ್ಸೆ ಕುರಿತು ಪುಸ್ತಕ ಬರೆದ ಭಾರತದ ಪ್ರಧಾನಿ ಯಾರು? ೪. ಟೆನ್ನಿಸ್ನಲ್ಲಿ ಗ್ರಾಂಡ್ ಸ್ಲ್ಯಾಮ್ ಟೆನಿಸ್ ಪ್ರಶಸ್ತಿ ಪಡೆದ ಪ್ರಥಮ ಭಾರತೀಯ ಯಾರು? ೫. ಕಿತ್ತೂರು ಚೆನ್ನಮ್ಮ ಚಿತ್ರದ ನಿರ್ದೇಶಕರು ಯಾರು? ೬. ೭೪ನೇ ಸಂವಿಧಾನ ತಿದ್ದುಪಡಿಯ ಕಾಯ್ದೆ ಯಾವುದಕ್ಕೆ ಸಂಬಂಧಿಸಿದೆ? ೭. ೨೦೧೨ ಡಿಸೆಂಬರ್ … Read more